New York franchise in Major League Cricket, Mumbai Indians Cricket League : ಮೇಜರ್​ ಲೀಗ್​ ಕ್ರಿಕೆಟ್​ನಲ್ಲಿ ನ್ಯೂಯಾರ್ಕ್ ಫ್ರಾಂಚೈಸಿ ತನ್ನದಾಗಿಸಿಕೊಂಡ ಮುಂಬಯಿ ಇಂಡಿಯನ್ಸ್​ - Vistara News

ಕ್ರಿಕೆಟ್

Cricket League : ಮೇಜರ್​ ಲೀಗ್​ ಕ್ರಿಕೆಟ್​ನಲ್ಲಿ ನ್ಯೂಯಾರ್ಕ್ ಫ್ರಾಂಚೈಸಿ ತನ್ನದಾಗಿಸಿಕೊಂಡ ಮುಂಬಯಿ ಇಂಡಿಯನ್ಸ್​

ಮುಂಬಯಿ ಇಂಡಿಯನ್ಸ್​ ಫ್ರಾಂಚೈಸಿ ಜಾಗತಿಕವಾಗಿ ಒಟ್ಟು ಐದು(Cricket League) ತಂಡಗಳನ್ನು ತನ್ನದಾಗಿಸಿಕೊಂಡಿದೆ.

VISTARANEWS.COM


on

New York franchise in Major League Cricket, Mumbai Indians
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ರಿಲಯನ್ಸ್ ಇಂಡಸ್ಟ್ರೀಸ್​ ಲಿಮಿಟೆಡ್​ ಒಡೆತನದ ಮುಂಬಯಿ ಇಂಡಿಯನ್ಸ್, ತನ್ನ ಐದನೇ ಕ್ರಿಕೆಟ್​ ಫ್ರಾಂಚೈಸಿಯಾಗಿ ‘ಎಂಐ ನ್ಯೂಯಾರ್ಕ್​’ ತಂಡವನ್ನು ತನ್ನದಾಗಿಸಿಕೊಂಡಿದೆ. ನ್ಯೂಯಾರ್ಕ್​ ಮೂಲದ ಈ ತಂಡದಿಂದ ಎಮ್​ಐ ಕ್ರಿಕೆಟ್​ನ ವ್ಯಾಪ್ತಿ ವಿಸ್ತಾರಗೊಂಡಿದೆ. ಇದರೊಂದಿಗೆ ಮುಂಬಯಿ ಇಂಡಿಯನ್ಸ್​ ತಂಡ ಈಗ ಮೂರು ಖಂಡಗಳು, ನಾಲ್ಕು ದೇಶಗಳು, ಐದು ಕ್ರಿಕೆಟ್ ಲೀಗ್​ಗಳಲ್ಲಿ (Cricket League) ಕ್ರಿಕೆಟ್​ ತಂಡಗಳ ಒಡೆತನವನ್ನು ಹೊಂದಿದೆ. ‘ಹೊಸ ತಂಡವು ಚೊಚ್ಚಲ ಆವೃತ್ತಿಯ ಮೇಜರ್​ ಲೀಗ್ ಕ್ರಿಕೆಟ್​ನಲ್ಲಿ​ (ಎಂಎಲ್​ಸಿ) ಆಡಲಿದೆ.

ಬೆಳೆಯುತ್ತಿರುವ ಎಂಐ ಕುಟುಂಬಕ್ಕೆ ನ್ಯೂಯಾರ್ಕ್​ ಫ್ರಾಂಚೈಸಿಯನ್ನು ಸ್ವಾಗತಿಸಲು ನಾನು ಉತ್ಸುಕಳಾಗಿದ್ದೇನೆ. ಅಮೆರಿಕದ ಕ್ರಿಕೆಟ್​ ಲೀಗ್​ಗೆ ಇದೇ ಮೊದಲ ಬಾರಿಗೆ ಪ್ರವೇಶ ಪಡೆಯುತ್ತಿದ್ದೇವೆ. ಕ್ರಿಕೆಟ್​ ಆಟದ ಜಾಗತಿಕ ಬ್ರ್ಯಾಂಡ್​ ಆಗಿ ಮುಂಬಯಿ ಇಂಡಿಯನ್ಸ್​ ಅನ್ನು ರೂಪಿಸುವ ಭರವಸೆ ನನ್ನದು. ಎಂಐಗೆ ಇದು ಇನ್ನೊಂದು ಹೊಸ ಆರಂಭ. ನಾನು ಮುಂದಿನ ಉತ್ಸಾಹಿ ಪ್ರಯಾಣವನ್ನು ಎದುರು ನೋಡುತ್ತಿದ್ದೇನೆ ಎಂದು ನೀತಾ ಎಂ. ಅಂಬಾನಿ ಅವರು ಹೇಳಿದ್ದಾರೆ.

ರಿಲಯನ್ಸ್​ ಕಂಪನಿಯು ಐಪಿಎಲ್​ನಲ್ಲಿ ಮುಂಬಯಿ ಇಂಡಿಯನ್ಸ್ ), ಎಂಐ ಕೇಪ್​ಟೌನ್​ (ಎಸ್​ಎ20), ಎಂಐ ಎಮಿರೇಟ್ಸ್​ (ಐಎಲ್​ಟಿ20)ಮತ್ತು ಮುಂಬಯಿ ಇಂಡಿಯನ್ಸ್ (ಡಬ್ಲ್ಯುಪಿಎಲ್​) ತಂಡವನ್ನು ಹೊಂದಿದೆ. ‘ಎಂಐ ನ್ಯೂಯಾರ್ಕ್’​ 5ನೇ ಫ್ರಾಂಚೈಸಿಯಾಗಿದೆ.

‘ಮೇಜರ್​ ಲೀಗ್​ ಕ್ರಿಕೆಟ್​’ ಅಮೆರಿಕದಲ್ಲಿ ಆಡಲಾಗುವ ಮೊದಲ ವೃತ್ತಿಪರ ಟಿ20 ಕ್ರಿಕೆಟ್​ ಚಾಂಪಿಯನ್​ಷಿಪ್​ ಆಗಿರುತ್ತದೆ. 2023ರ ಬೇಸಗೆ ಋತುವಿನಲ್ಲಿ ಚೊಚ್ಚಲ ಆವೃತ್ತಿಯ ಮೇಜರ್​ ಲೀಗ್​ ಕ್ರಿಕೆಟ್​ ಟೂರ್ನಿಯು ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಭೇಟಿ ನೀಡಿ: www.majorleaguecricket.com

ವಿಶ್ವದ ಎಲ್ಲೆಡೆ ಸುಮಾರು 50 ದಶಲಕ್ಷ ಡಿಜಿಟಲ್​ ಅಭಿಮಾನಿಗಳನ್ನು ಹೊಂದಿರುವ ಮುಂಬೈ ಇಂಡಿಯನ್ಸ್, ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಜಾಗತಿಕ ಕ್ರಿಕೆಟ್​ ಬ್ರ್ಯಾಂಡ್​ ಎನಿಸಿದೆ. ವಿಶ್ವ ಪ್ರಮುಖ ಫ್ರಾಂಚೈಸಿ ಲೀಗ್​ಗಳಲ್ಲಿ ವರ್ಷದಲ್ಲಿ ಸರಿಸುಮಾರು 6 ತಿಂಗಳ ಕಾಲ ಕ್ರಿಕೆಟ್​ ಆಡುವ ಎಂಐ ತಂಡಗಳನ್ನು ಅಭಿಮಾನಿಗಳು ಸತತವಾಗಿ ಬೆಂಬಲಿಸುತ್ತಿದ್ದಾರೆ. 2009ರಿಂದ ಮುಂಬಯಿ ಇಂಡಿಯನ್ಸ್ ಶೇ. 99ರಷ್ಟು ಬ್ರ್ಯಾಂಡ್​ ಮೌಲ್ಯದ (ಬ್ರ್ಯಾಂಡ್​ ಫೈನಾನ್ಸ್​) ಪ್ರಗತಿ ಕಂಡಿದೆ.

ಇದನ್ನೂ ಓದಿ : IPL 2023 : ಮುಂಬಯಿ ಇಂಡಿಯನ್ಸ್​ ತಂಡಕ್ಕೆ ಮತ್ತೊಂದು ಆಘಾತ, ವೇಗದ ಬೌಲರ್​ ಅಲಭ್ಯ

ಐಪಿಎಲ್​ನಲ್ಲಿ ಮುಂಬಯ ಇಂಡಿಯನ್ಸ್ ತಂಡ ಅತಿ ಹೆಚ್ಚು ಯಶಸ್ಸು ಗಳಿಸಿದ ತಂಡವಾಗಿದೆ. ರೋಹಿತ್ ಶರ್ಮ ನೇತೃತ್ವದಲ್ಲಿ ಮುಂಬಯಿ ಇಂಡಿಯನ್ಸ್​ ಬಳಗ ಐದು ಟ್ರೋಫಿಗಳನ್ನು ಗೆದ್ದು ದಾಖಲೆ ನಿರ್ಮಿಸಿದೆ. ಪ್ರಸ್ತುತ ನಡೆಯುತ್ತಿರುವ ಮಹಿಳೆಯ ಪ್ರೀಮಿಯರ್​ ಲೀಗ್​ನಲ್ಲೂ ಮುಂಬಯಿ ಇಂಡಿಯನ್ಸ್​ ತಂಡ ಹರ್ಮನ್​ಪ್ರೀತ್ ಕೌರ್ ನೇತೃತ್ವದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs SL 3rd ODI: 3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು; ಏಕದಿನ ಸರಣಿ ಶ್ರೀಲಂಕಾ ಮಡಿಲಿಗೆ

IND vs SL 3rd ODI: ಮೊದಲ ಪಂದ್ಯ ರೋಚಕ ಟೈ ಆದರೆ, ಎರಡನೇ ಪಂದ್ಯದಲ್ಲಿ ಭಾರತವು 32 ರನ್‌ಗಳಿಂದ ಸೋಲನುಭವಿಸಿತ್ತು. ಈಗ ಮೂರನೇ ಪಂದ್ಯವನ್ನೂ ಸೋಲುವ ಮೂಲಕ ಭಾರತ ತಂಡವು ಏಕದಿನ ಸರಣಿಯನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟಿದೆ. ಶ್ರೀಲಂಕಾ ತಂಡವು ಭಾರತದ ವಿರುದ್ಧ 27 ವರ್ಷಗಳ ಬಳಿಕ ಮೊದಲ ಬಾರಿಗೆ ಏಕದಿನ ಸರಣಿ ಗೆದ್ದ ದಾಖಲೆ ಬರೆಯಿತು.

VISTARANEWS.COM


on

IND vs SL 3rd ODI
Koo

ಕೊಲೊಂಬೊ: ಟಿ-20 ವಿಶ್ವಕಪ್‌, ಶ್ರೀಲಂಕಾ ವಿರುದ್ಧದ ಟಿ-20 ಸರಣಿ ಗೆಲುವಿನ ಅತ್ಯುತ್ಸಾಹದಲ್ಲಿದ್ದ ಭಾರತ ತಂಡಕ್ಕೆ ಶ್ರೀಲಂಕಾ ತಂಡವು ಏಕದಿನ ಸರಣಿಯಲ್ಲಿ (IND vs SL 3rd ODI) ಆಘಾತ ನೀಡಿದೆ. ಕೊಲೊಂಬೊದ ಆರ್‌. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ರೋಹಿತ್‌ ಶರ್ಮಾ (Rohit Sharma) ಬಳಗವನ್ನು 110 ರನ್‌ಗಳಿಂದ ಮಣಿಸುವ ಮೂಲಕ ಶ್ರೀಲಂಕಾ 27 ವರ್ಷಗಳ ಬಳಿಕ ಭಾರತದ ವಿರುದ್ಧ ಏಕದಿನ ಸರಣಿ ಗೆದ್ದ ದಾಖಲೆ ಬರೆಯಿತು.

ಶ್ರೀಲಂಕಾ ನೀಡಿದ 249 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಭಾರತ ತಂಡವು 26.1 ಓವರ್‌ಗಳಲ್ಲಿ 138 ರನ್‌ಗಳಿಸಿ ಆಲೌಟ್‌ ಆಗುವ ಮೂಲಕ 110 ರನ್‌ಗಳಿಂದ ಸೋಲನುಭವಿಸಿತು. ಭಾರತದ ಪರ ರೋಹಿತ್‌ ಶರ್ಮಾ (35) ರನ್‌ ಗಳಿಸಿದ್ದು ಬಿಟ್ಟರೆ, ಉಳಿದ ಯಾವೊಬ್ಬ ಆಟಗಾರನೂ ನೆಲಕಚ್ಚಿ ಆಡಲಿಲ್ಲ. ವಿರಾಟ್‌ ಕೊಹ್ಲಿ ಮತ್ತೆ ನಿರಾಸೆ ಮೂಡಿಸಿದರು. ರಿಷಭ್‌ ಪಂತ್‌, ಶ್ರೇಯಸ್‌ ಅಯ್ಯರ್‌ ಕೂಡ ಭಾರತ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಲಿಲ್ಲ. ಶುಭಮನ್‌ ಗಿಲ್‌ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. ಇದರಿಂದಾಗಿ ಭಾರತ ಮೂರನೇ ಪಂದ್ಯವನ್ನು ಸೋತು, ಸರಣಿ ಬಿಟ್ಟುಕೊಡಬೇಕಾಯಿತು.

ಆವಿಷ್ಕ ಫರ್ನಾಂಡೋ ಭರ್ಜರಿ ಬ್ಯಾಟಿಂಗ್

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಶ್ರೀಲಂಕಾ, ಭರ್ಜರಿ ಆರಂಭ ಪಡೆಯಿತು. ಪಥುಮ್‌ ನಿಸಂಕಾ (45), ಆವಿಷ್ಕ ಫರ್ನಾಂಡೋ (96) ಹಾಗೂ ಕುಶಾಲ್‌ ಮೆಂಡಿಸ್‌ (59) ರನ್‌ಗಳ ನೆರವಿನಿಂದ ಒಂದು ಹಂತದಲ್ಲಿ ಶ್ರೀಲಂಕಾ 3 ವಿಕೆಟ್‌ಗೆ 183 ರನ್‌ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು. ಬೃಹತ್‌ ಮೊತ್ತ ಪೇರಿಸುವ ಸಾಧ್ಯತೆಯೂ ಇತ್ತು. ಆದರೆ, ನಂತರ ಬಂದ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳ ದಾಳಿಗೆ ಸಿಲುಕಿ ವಿಕೆಟ್‌ ಒಪ್ಪಿಸಿದ ಕಾರಣ ಶ್ರೀಲಂಕಾ 50 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 248 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಭಾರತದ ಪರ ರಿಯಾನ್‌ ಪರಾಗ್‌ 3 ವಿಕೆಟ್‌ ಕಬಳಿಸಿದರೆ, ಅಕ್ಷರ್‌ ಪಟೇಲ್‌, ಮೊಹಮ್ಮದ್‌ ಸಿರಾಜ್‌, ವಾಷಿಂಗ್ಟನ್‌ ಸುಂದರ್‌ ಹಾಗೂ ಕುಲದೀಪ್‌ ಯಾದವ್‌ ಅವರು ತಲಾ ಒಂದು ವಿಕೆಟ್‌ ಪಡೆದರು. ಮೊದಲ ಪಂದ್ಯ ರೋಚಕ ಟೈ ಆದರೆ, ಎರಡನೇ ಪಂದ್ಯದಲ್ಲಿ ಭಾರತವು 32 ರನ್‌ಗಳಿಂದ ಸೋಲನುಭವಿಸಿತ್ತು.

ಸಂಕ್ಷಿಪ್ತ ಸ್ಕೋರ್‌

ಶ್ರೀಲಂಕಾ 50 ಓವರ್‌ಗಳಲ್ಲಿ 248/7

(ಆವಿಷ್ಕ ಫರ್ನಾಂಡೋ 96, ಕುಶಾಲ್‌ ಮೆಂಡಿಸ್‌ 59, ರಿಯಾನ್‌ ಪರಾಗ್‌ 54/3)

ಭಾರತ ಓವರ್‌ಗಳಲ್ಲಿ 130ಕ್ಕೆ ಆಲೌಟ್‌

(ರೋಹಿತ್‌ ಶರ್ಮಾ 35, ರಿಯಾನ್‌ ಪರಾಗ್‌ 30, ದುನಿತ್‌ ವೆಲ್ಲಲಾಗೆ 27/5)

ಇದನ್ನೂ ಓದಿ: Chuttamalle Song: ‘ಮಾನಿಕೆ ಮಾಗೆ ಹಿತೆ’ ಹಾಡಿನ ಟ್ಯೂನ್‌ ಕದ್ರಾ ಅನಿರುದ್ಧ ರವಿಚಂದರ್? ಶ್ರೀಲಂಕಾ ಕಂಪೋಸರ್‌ ಹೇಳೋದೇನು?

Continue Reading

ಕ್ರೀಡೆ

IND vs SL 3rd ODI: ಇಂದು ಅಂತಿಮ ಏಕದಿನ ಪಂದ್ಯ; ಭಾರತ ಆಡುವ ಬಳಗದಲ್ಲಿ ಮೂರು ಬದಲಾವಣೆ ಖಚಿತ

IND vs SL 3rd ODI: ಮೂಲಗಳ ಪ್ರಕಾರ ಕೆ.ಎಲ್​ ರಾಹುಲ್​, ಶಿವಂ ದುಬೆ ಮತ್ತು ಮೊಹಮ್ಮದ್​ ಸಿರಾಜ್​ ಅವರನ್ನು ಈ ಪಂದ್ಯದಿಂದ ಕೈ ಬಿಟ್ಟು ಇವರ ಸ್ಥಾನಕ್ಕೆ ರಿಷಭ್​ ಪಂತ್​, ಹರ್ಷಿತ್​ ರಾಣಾ ಮತ್ತು ರಿಯಾನ್​ ಪರಾಗ್​ ಅವರನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿದುಬಂದಿದೆ

VISTARANEWS.COM


on

IND vs SL 3rd ODI
Koo

ಕೊಲಂಬೊ: ಪ್ರವಾಸಿ ಭಾರತ ಮತ್ತು ಆತಿಥೇಯ ಶ್ರೀಲಂಕಾ(IND vs SL 3rd ODI) ವಿರುದ್ಧದ ಅಂತಿಮ ಏಕದಿನ ಪಂದ್ಯ ಇಂದು ಆರ್​.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿ ಸೋಲಿನ ಭೀತಿಯಲ್ಲಿರುವ ಭಾರತಕ್ಕೆ ಈ ಅಪಮಾನದಿಂದ ಪಾರಾಗಬೇಕಿದ್ದರೆ ಈ ಪಂದ್ಯವನ್ನು ಗೆಲ್ಲಲೇ ಬೇಕಿದೆ. ಹೀಗಾಗಿ ಈ ಪಂದ್ಯವನ್ನು ಹೈವೋಲ್ಟೇಜ್ ಪಂದ್ಯ ಎಂದು ನಿರೀಕ್ಷಿಸಲಾಗಿದೆ. ಭಾರತ ಈ ಪಂದ್ಯಕ್ಕೆ ತನ್ನ ಆಡುವ ಬಳಗದಲ್ಲಿ ಕನಿಷ್ಠ ಮೂರು ಬದಲಾವಣೆ ಮಾಡುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಕೆ.ಎಲ್​ ರಾಹುಲ್​, ಶಿವಂ ದುಬೆ ಮತ್ತು ಮೊಹಮ್ಮದ್​ ಸಿರಾಜ್​ ಅವರನ್ನು ಈ ಪಂದ್ಯದಿಂದ ಕೈ ಬಿಟ್ಟು ಇವರ ಸ್ಥಾನಕ್ಕೆ ರಿಷಭ್​ ಪಂತ್​, ಹರ್ಷಿತ್​ ರಾಣಾ ಮತ್ತು ರಿಯಾನ್​ ಪರಾಗ್​ ಅವರನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿದುಬಂದಿದೆ. ರಾಹುಲ್​ ಕಳೆದ ದ್ವಿತೀಯ ಪಂದ್ಯದಲ್ಲಿ ಶೂನ್ಯಕ್ಕೆ ನಿರ್ಗಮಿಸಿದ್ದರು. ಮೊದಲ ಪಂದ್ಯದಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿದ್ದರು. ಇದೀಗ ಸರಣಿ ಸೋಲಿನ ಭೀತಿಯಲ್ಲಿರುವ ಭಾರತ ತಂಡ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ಎದುರಾಳಿ ಬೌಲರ್​ಗಳ ಲೆಕ್ಕಾಚಾರವನ್ನು ಬುಡಮೇಲು ಮಾಡುವಂತಹ ಪಂತ್​ ಅವರನ್ನು ಕಣಕ್ಕಿಳಿಸಲು ತಂಡ ಬಯಸಿದೆ ಎನ್ನಲಾಗಿದೆ.

ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನ ಪಿಚ್​ ಸಿನ್ನರ್​ಗಳಿಗೆ ಹೆಚ್ಚಿನ ನೆರವು ನೀಡುವ ಕಾರಣ ಶಿವಂ ದುಬೆ ಅವರನ್ನು ಈ ಪಂದ್ಯದಿಂದ ಕೈಬಿಟ್ಟು ಅವರ ಬದಲಿಗೆ ಸ್ಪಿನ್​ ಆಲ್​ರೌಂಡರ್​ ಆಗಿರುವ ರಿಯಾನ್ ಪರಾಗ್ ಸ್ಥಾನ ಪಡೆಯಬಹುದು. ಟಿ20 ಸರಣಿಯಲ್ಲಿ ಬ್ಯಾಟಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಪರಾಗ್​ ಉತ್ತಮ ಪ್ರದರ್ಶನ ತೋರಿದ್ದರು. ಹೀಗಾಗಿ ಇವರಿಗೆ ಸ್ಥಾನ ಸಿಗುವುದು ಬಹುತೇಕ ಖಚಿತ.

ಇದನ್ನೂ ಓದಿ IND vs SL ODI : ನಾಟಕೀಯ ತಿರುವು; ಲಂಕಾ ವಿರುದ್ಧದ ಮೊದಲ ಏಕ ದಿನ ಪಂದ್ಯ ಟೈ

ಪಿಚ್ ರಿಪೋರ್ಟ್

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಇದುವರೆಗೆ 150 ಏಕದಿನ ಪಂದ್ಯಗಳು ನಡೆದಿವೆ. ಇಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಹೆಚ್ಚು ಬಾರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು 80 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ಮಾಡಿದ ತಂಡ ಕೇವಲ 59 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಮೊದಲ ಪಂದ್ಯದಲ್ಲಿ ಸ್ಪಿನ್ನರ್​ಗಳು ಪ್ರಭಾವ ಬೀರಿದ್ದರು. ಹೀಗಾಗಿ ಎರಡನೇ ಏಕದಿನ ಪಂದ್ಯದಲ್ಲಿಯೂ ಸ್ಪಿನ್​ ಬೌಲರ್​ಗಳು ಪ್ರಾಬಲ್ಯ ತೋರುವ ನಿರೀಕ್ಷೆ ಇದೆ. ಪಂದ್ಯ ಸಾಗಿದಂತೆ ಈ ಪಿಚ್​ ಅತ್ಯಂತ ತಿರುವ ಪಡೆದುಕೊಳ್ಳಲಿದೆ. ಬ್ಯಾಟಿಂಗ್​ ನಡೆಸುವುದೇ ಒಂದು ಸವಾಲಾಗಿರಲಿದೆ. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ಆಯ್ದುಕೊಳ್ಳಬಹುದು.

ಸಂಭಾವ್ಯ ತಂಡಗಳು

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್​ ಪಂತ್​ (ವಿಕೀ), ರಿಯಾನ್​ ಪರಾಗ್​, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ.

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೀ), ಸದೀರ ಸಮರವಿಕ್ರಮ, ಚರಿತ್ ಅಸಲಂಕ (ನಾಯಕ), ಕಾಮಿಂದು ಮೆಂಡಿಸ್, ಜನಿತ್ ಲಿಯಾನಗೆ, ದುನಿತ್ ವೆಲ್ಲಲಾಗೆ, ಅಕಿಲ ದನಂಜಯ, ಅಸಿತ ಫೆರ್ನಾಂಡೋ, ಜೆಫ್ರಿ ವಂಡರ್ಸೆ.

Continue Reading

ಕ್ರೀಡೆ

Rohit Sharma: ಯುಪಿಎಸ್ಸಿ ಕೋಚಿಂಗ್​ನಲ್ಲಿಯೂ ರೋಹಿತ್​ ಶರ್ಮ ಹವಾ; ವೈರಲ್​ ವಿಡಿಯೊ ಇಲ್ಲಿದೆ

Rohit Sharma: ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಮಾಜಿ ನಾಯಕ ಹಾಗೂ ಆಟಗಾರ ಶಾಹೀದ್ ಅಫ್ರಿದಿ ಹೆಸರಿನಲ್ಲಿದೆ. ಅಫ್ರಿದಿ 398 ಏಕದಿನ ಪಂದ್ಯಗಳನ್ನಾಡಿ 351 ಸಿಕ್ಸರ್​ ಬಾರಿಸಿದ್ದಾರೆ.

VISTARANEWS.COM


on

Rohit Sharma
Koo

ಮುಂಬಯಿ: ಭಾರತ ಕ್ರಿಕೆಟ್​ ತಂಡದ ನಾಯಕ ರೋಹಿತ್ ಶರ್ಮ(Rohit Sharma) ಅವರ ಸಾಧನೆ ಇದೀಗ ಯುಪಿಎಸ್ಸಿ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದೆ. ಹೌದು, ಯುಪಿಎಸ್ಸಿ(UPSC ) ಕೋಚಿಂಗ್​ ಸೆಂಟರ್​ ಒಂದರಲ್ಲಿ ಶಿಕ್ಷಕರೊಬ್ಬರು(UPSC teacher) ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ರೋಹಿತ್​ ಅವರ ಬ್ಯಾಟಿಂಗ್​ ಬಗ್ಗೆ ಗುಣಗಾನ ಮಾಡಿದ್ದಾರೆ. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್(viral video) ಆಗಿದೆ.

ಪಾಠ ಮಾಡುತ್ತಿದ್ದ ಶಿಕ್ಷಕ, ರೋಹಿತ್ ಶರ್ಮ ಅವರ ಬ್ಯಾಟಿಂಗ್ ನೋಡುವಾಹ ರನ್​ ಗಳಿಸಲೆಂದೇ ಈ ಪಿಚ್​ ಮಾಡಿರುವಂತೆ ತೋರುತ್ತದೆ. ಆದರೆ, ಇತರ ಬ್ಯಾಟರ್‌ಗಳು ಕ್ರೀಸ್​ಗೆ ಬಂದಾಗ ಅದು ಕಠಿಣ ಎಂದು ಅನಿಸುತ್ತದೆ. ಅದು ಏಕೆ ಎಂಬುದು ನಿಜಕ್ಕೂ ಗೊಂದಲಮಯವಾಗಿದೆ ಎಂದು ಹೇಳುವ ಮೂಲಕ ಪರೀಕ್ಷೆ ಬರೆಯಲು ಸಜ್ಜಾಗಿ ನಿಂತಿರುವ ವಿದ್ಯಾರ್ಥಿಗಳು ರೋಹಿತ್​ ರನ್​ ಗಳಿಸಿದಂತೆ ಅಂಕ ಗಳಿಸಬೇಕು ಎನ್ನುವ ಉದಾಹರಣೆಯನ್ನು ನೀಡಿದ್ದಾರೆ. ಈ ವಿಡಿಯೊ ಕಂಡ ನೆಟ್ಟಿಗರು ಮಿಶ್ರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಕೆಲವರು ರೋಹಿತ್​ ಶೂನ್ಯಕ್ಕೆ ಔಟ್​ ಆದ ಹಲವು ನಿದರ್ಶನ ಇದೆ ಎಂದು ಹಾಸ್ಯ ಮಾಡಿದರೆ, ಇನ್ನು ಕೆಲವರು ರೋಹಿತ್​ ಏಕದಿನದಲ್ಲಿ ಮೂರು ಬಾರಿ ದ್ವಿಶತಕ ಬಾರಿಸಿದ್ದಾರೆ ಎಂದು ಕಮೆಂಟ್​ ಮಾಡಿದ್ದಾರೆ.

ಲಂಕಾ ವಿರುದ್ಧ ನಾಳೆ ನಡೆಯುವ ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್​ ಶರ್ಮ 2 ಸಿಕ್ಸರ್​ ಬಾರಿಸಿದರೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ(Most sixes in career in ODIs) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಲಿದ್ದಾರೆ. ಈ ಮೂಲಕ ಕ್ರಿಸ್​ ಗೇಲ್​ (331 ಸಿಕ್ಸರ್​) ದಾಖಲೆಯನ್ನು ಮುರಿಯಲಿದ್ದಾರೆ. ಸದ್ಯ ರೋಹಿತ್​ 330 ಸಿಕ್ಸರ್​ ಬಾರಿಸಿ ಮೂರನೇ ಸ್ಥಾನಿಯಾಗಿದ್ದಾರೆ. ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಮಾಜಿ ನಾಯಕ ಹಾಗೂ ಆಟಗಾರ ಶಾಹೀದ್ ಅಫ್ರಿದಿ ಹೆಸರಿನಲ್ಲಿದೆ. ಅಫ್ರಿದಿ 398 ಏಕದಿನ ಪಂದ್ಯಗಳನ್ನಾಡಿ 351 ಸಿಕ್ಸರ್​ ಬಾರಿಸಿದ್ದಾರೆ. ರೋಹಿತ್​ ಕನಿಷ್ಠ 2 ವರ್ಷಗಳ ಕಾಲ ಏಕದಿನ ಆಡಿದರೆ ಈ ದಾಖಲೆಯನ್ನು ಮುರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಇದನ್ನೂ ಓದಿ Rohit Sharma: ಕ್ರಿಸ್​ ಗೇಲ್​ ಸಿಕ್ಸರ್​ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​

ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading

ಕ್ರೀಡೆ

IND vs SL 3rd ODI: ನಾಳೆ ಅಂತಿಮ ಏಕದಿನ; ರೋಹಿತ್​ ಪಡೆಗೆ ಗೆಲ್ಲಲೇ ಬೇಕಾದ ಒತ್ತಡ!

IND vs SL 3rd ODI: ದ್ವಿತೀಯ ಪಂದ್ಯಕ್ಕೆ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿತ್ತು. ಆದರೆ, ಪಂದ್ಯಕ್ಕೆ ಯಾವುದೇ ಮಳೆ ಕಾಟ ಎದುರಾಗಿರಲಿಲ್ಲ. ಇದೀಗ ನಾಳೆ ನಡೆಯುವ ಮೂರನೇ ಪಂದ್ಯಕ್ಕೂ ಶೇ.77ರಷ್ಟು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

IND vs SL 3rd ODI
Koo

ಕೊಲಂಬೊ: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 0-1 ಹಿನ್ನಡೆಯಲ್ಲಿರುವ ಭಾರತ ತಂಡ ನಾಳೆ(ಬುಧವಾರ) ನಡೆಯುವ ಅಂತಿಮ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದೊಂದಿಗೆ ಕಣಕ್ಕಿಳಿಯಲಿದೆ. ದುರ್ಬಲ ಲಂಕಾ ವಿರುದ್ಧ ಸರಣಿ(IND vs SL 3rd ODI) ಸೋಲಿನ ಭೀತಿಯಲ್ಲಿರುವ ರೋಹಿತ್​ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮೊದಲ ಪಂದ್ಯ ಟೈ ಗೊಂಡಿತ್ತು.

ಭಾರತ ತಂಡಕ್ಕೆ ನಾಯಕ ರೋಹಿತ್​ ಶರ್ಮ ಬಿರುಸಿನ ಬ್ಯಾಟಿಂಗ್​ ಮೂಲಕ ಉತ್ತಮ ಆರಂಭ ಒದಗಿಸುತ್ತಿದ್ದರೂ ಕೂಡ ಮಧ್ಯಮ ಕ್ರಮಾಂಕದಲ್ಲಿ ಯಾರು ಕೂಡ ತಂಡವನ್ನು ಆಧರಿಸಿ ನಿಲ್ಲುತ್ತಿಲ್ಲ. ಬ್ಯಾಟಿಂಗ್​ ಮರೆತವರಂತೆ ಬ್ಯಾಟ್​ ಬೀಸಿ ವಿಕೆಟ್​ ಕಳೆದುಕೊಳ್ಳುತ್ತಿದ್ದಾರೆ. ಕೊಹ್ಲಿ, ರಾಹುಲ್​, ದುಬೆ, ಅಯ್ಯರ್​ ಆಡಿದ 2 ಪಂದ್ಯಗಳಲ್ಲಿಯೂ ವೈಫಲ್ಯ ಕಂಡಿದ್ದಾರೆ. ಅಕ್ಷರ್​ ಪಟೇಲ್​​ ಕೆಳ ಕ್ರಮಾಂಕದಲ್ಲಿ ಸಣ್ಣ ಮಟ್ಟಿನ ಬ್ಯಾಟಿಂಗ್​ ಹೋರಾಟ ನಡೆಸಿದರೂ ಕೂಡ ಅವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್​ ಸಿಗದ ಕಾರಣ ಪಂದ್ಯವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗುತ್ತಿಲ್ಲ. ಭಾರತದ ಸೋಲಿಗೆ ಪ್ರಮುಖ ಕಾರಣ ಮಧ್ಯಮ ಕ್ರಮಾಂಕದ ಬ್ಯಾಟಿಂಗ್​ ವೈಫಲ್ಯ. ನಿರ್ಣಾಯ ಪಂದ್ಯದಲ್ಲಾದರೂ ಜವಾಬ್ದಾರಿಯುತ ಬ್ಯಾಟಿಂಗ್​ ನಡೆಸುವ ಅನಿವಾರ್ಯತೆ ಇದೆ.

ಸರಣಿ ಆರಂಭಕ್ಕೂ ಮುನ್ನ ಲಂಕಾ ತಂಡವನ್ನು ದುರ್ಬಲ ತಂಡ, ಭಾರತಕ್ಕೆ ಸವಾಲೊಡ್ಡುವುದು ಕಷ್ಟ ಎಂದು ಊಹಿಸಲಾಗಿತ್ತು. ಜತೆಗೆ ಅನುಭವಿ ಆಟಗಾರರು ಕೂಡ ಗಾಯದಿಂದ ಅಲಭ್ಯರಾಗಿದ್ದರು. ಆದರೆ, ಸನತ್​ ಜಯಸೂರ್ಯ ಮಾರ್ಗದರ್ಶನದಲ್ಲಿ ಲಂಕಾ ತಂಡದ ಯುವ ಆಟಗಾರರು ಅಸಾಮಾನ್ಯ ಪ್ರದರ್ಶನ ತೋರುವ ಮೂಲಕ ಬಲಿಷ್ಠ ಭಾರತ ತಂಡಕ್ಕೆ ನೀರು ಕುಡಿಸಿತು. ಭಾರತ ತಂಡದ ಅತಿಯಾದ ಆತ್ಮವಿಶ್ವಾಸವೇ ಸೋಲಿಗೆ ಕಾರಣವಾಯಿತು.

ಇದನ್ನೂ ಓದಿ IND vs SL: ಮೂರನೇ ಏಕದಿನ ಪಂದ್ಯಕ್ಕೆ ರಾಹುಲ್​ ಅನುಮಾನ​; ಪಂತ್​ಗೆ ಅವಕಾಶ?

ಪಿಚ್ ರಿಪೋರ್ಟ್

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಇದುವರೆಗೆ 150 ಏಕದಿನ ಪಂದ್ಯಗಳು ನಡೆದಿವೆ. ಇಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಹೆಚ್ಚು ಬಾರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು 80 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ಮಾಡಿದ ತಂಡ ಕೇವಲ 59 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಮೊದಲ ಪಂದ್ಯದಲ್ಲಿ ಸ್ಪಿನ್ನರ್​ಗಳು ಪ್ರಭಾವ ಬೀರಿದ್ದರು. ಹೀಗಾಗಿ ಎರಡನೇ ಏಕದಿನ ಪಂದ್ಯದಲ್ಲಿಯೂ ಸ್ಪಿನ್​ ಬೌಲರ್​ಗಳು ಪ್ರಾಬಲ್ಯ ತೋರುವ ನಿರೀಕ್ಷೆ ಇದೆ. ಪಂದ್ಯ ಸಾಗಿದಂತೆ ಈ ಪಿಚ್​ ಅತ್ಯಂತ ತಿರುವ ಪಡೆದುಕೊಳ್ಳಲಿದೆ. ಬ್ಯಾಟಿಂಗ್​ ನಡೆಸುವುದೇ ಒಂದು ಸವಾಲಾಗಿರಲಿದೆ. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ಆಯ್ದುಕೊಳ್ಳಬಹುದು.

ಹವಾಮಾನ ವರದಿ


ದ್ವಿತೀಯ ಪಂದ್ಯಕ್ಕೆ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿತ್ತು. ಆದರೆ, ಪಂದ್ಯಕ್ಕೆ ಯಾವುದೇ ಮಳೆ ಕಾಟ ಎದುರಾಗಿರಲಿಲ್ಲ. ಇದೀಗ ನಾಳೆ ನಡೆಯುವ ಮೂರನೇ ಪಂದ್ಯಕ್ಕೂ ಶೇ.77ರಷ್ಟು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

ಸಂಭಾವ್ಯ ತಂಡಗಳು


ಭಾರತ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್​ ಪಂತ್​ (ವಿಕೀ), ರಿಯಾನ್​ ಪರಾಗ್​, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ.

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೀ), ಸದೀರ ಸಮರವಿಕ್ರಮ, ಚರಿತ್ ಅಸಲಂಕ (ನಾಯಕ), ಕಾಮಿಂದು ಮೆಂಡಿಸ್, ಜನಿತ್ ಲಿಯಾನಗೆ, ದುನಿತ್ ವೆಲ್ಲಲಾಗೆ, ಅಕಿಲ ದನಂಜಯ, ಅಸಿತ ಫೆರ್ನಾಂಡೋ, ಜೆಫ್ರಿ ವಂಡರ್ಸೆ.

Continue Reading
Advertisement
Vinay Rajkumar pepe preset Vinay Rajkumar Shreelesh S Nair
ಸ್ಯಾಂಡಲ್ ವುಡ್8 mins ago

Vinay Rajkumar: ʻಪೆಪೆ’ ಸಿನಿಮಾದಲ್ಲಿ ಜೇನು ಕುರುಬ ಸಾಂಗ್: ಚಿತ್ರತಂಡದ ವಿಭಿನ್ನ ಪ್ರಯತ್ನಕ್ಕೆ ಪ್ರೇಕ್ಷಕರ ಜೈಕಾರ!

Mary Kom
ಕ್ರೀಡೆ11 mins ago

Mary Kom: ಒಂದೇ ತಾಸಿನಲ್ಲಿ 2 ಕೆಜಿ ತೂಕ ಇಳಿಸಿ ಚಿನ್ನ ಗೆದ್ದಿದ್ದ ಬಾಕ್ಸರ್​ ಮೇರಿ ಕೋಮ್

Repo Rate
ವಾಣಿಜ್ಯ15 mins ago

Repo Rate: ಗೃಹಸಾಲದ ಇಎಂಐ ಭಾರ ಇಳಿಕೆ ಇಲ್ಲ; ರೆಪೋ ದರ ಯಥಾಸ್ಥಿತಿ

Naga Chaitanya Nagarjuna Called Sobhita Dhulipala Hot
ಟಾಲಿವುಡ್21 mins ago

Naga Chaitanya: ನಾನು ಹೀಗೆ ಹೇಳಬಾರದು..ಆದರೂ ಶೋಭಿತಾ ತುಂಬಾ ಹಾಟ್‌ ಎಂದಿದ್ದ ನಾಗಾರ್ಜುನ; ವಿಡಿಯೊ ವೈರಲ್‌!

Henna Jihad
ದೇಶ33 mins ago

Henna Jihad: ಹಿಂದೂ ಮಹಿಳೆಯರಿಗೆ ಮುಸ್ಲಿಮರು ಮೆಹಂದಿ ಹಚ್ಚಿದರೆ ಹುಷಾರ್‌! ಭುಗಿಲೆದ್ದ ಹೆನ್ನಾ ಜಿಹಾದ್‌ ವಿವಾದ

lalbagh flower show 2024
ಪ್ರಮುಖ ಸುದ್ದಿ37 mins ago

Lalbagh Flower Show: ಸಸ್ಯಕಾಶಿಯಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ; ಏನೇನಿದೆ, ಪಾರ್ಕಿಂಗ್‌ ಎಲ್ಲಿ, ಟಿಕೆಟ್‌ ದರ ಎಷ್ಟು?

Gold Rate Today
ಚಿನ್ನದ ದರ42 mins ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬಂಗಾರ ಇಂದು ಇಷ್ಟು ಅಗ್ಗ

ಉದ್ಯೋಗ48 mins ago

Banking Recruitment 2024: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 896 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ; ಆಯ್ಕೆ ಪ್ರಕ್ರಿಯೆ ಹೇಗೆ? Complete Details

Actor Yash journey begins Yash Gave Update On Toxic Movie
ಸ್ಯಾಂಡಲ್ ವುಡ್50 mins ago

Actor Yash:  ʻಟಾಕ್ಸಿಕ್‌ʼ ಪಯಣ ಶುರುವಾಗಿದೆ ಎಂದು ಗುಡ್‌ ನ್ಯೂಸ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌!

head master self harming
ಕ್ರೈಂ59 mins ago

Self Harming: ಇಬ್ಬರು ಇನ್‌ಸ್ಪೆಕ್ಟರ್‌ಗಳ ಬಳಿಕ ಹೆಡ್‌ಮಾಸ್ಟರ್‌ ಶಾಲೆಯಲ್ಲೇ ಆತ್ಮಹತ್ಯೆ; ಏನಾಗ್ತಿದೆ ರಾಜ್ಯದಲ್ಲಿ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ7 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ7 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ7 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌