Nitish Rana's wife molested, two arrested ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ: ಇಬ್ಬರ ಬಂಧನ - Vistara News

ಕ್ರಿಕೆಟ್

ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ: ಇಬ್ಬರ ಬಂಧನ

ತಮ್ಮ ಮೇಲೆ ದೌರ್ಜನ್ಯ ನಡೆದಿರುವ ಬಗ್ಗೆ ನಿತೀಶ್​ ರಾಣಾ ಅವರ ಪತ್ನಿ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದರು.

VISTARANEWS.COM


on

Nitish Rana's wife molested, two arrested
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಐಪಿಎಲ್ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣಾ ಅವರ ಪತ್ನಿ ಸಾಚಿ ಮಾರ್ವಾ ಅವರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರನ್ನು ಪಶ್ಚಿಮ ದೆಹಲಿಯಲ್ಲಿ ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇ 4ರಂದು ರಾತ್ರಿ ಘಟನೆ ನಡೆದಿದ್ದು, ಸಾಚಿ ಈ ಕುರಿತು ಇನ್​ಸ್ಟಾಗ್ರಾಮ್​ ಪೋಸ್ಟ್​ ಮಾಡಿದ್ದರು. ಬಳಿಕ ಕೀರ್ತಿನಗರ ಪೊಲೀಸ್ ಠಾಣೆಗೆ ಇಮೇಲ್​ ಮೂಲಕ ದೂರು ಸಲ್ಲಿದ್ದರು. ಕೇಸ್​ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

18 ವರ್ಷದವರಾದ ಚೈತನ್ಯ ಶಿವಂ ಹಾಗೂ ವಿವೇಕ್ ಬಂಧಿತ ಆರೋಪಿಗಳು. ಅವರ ಮನೆಗಳಿಂದ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾಚಿ ಅವರು ತಮ್ಮ ಚಾಲಕನೊಂದಿಗೆ ಕಾರಿನಲ್ಲಿ ಛತ್ತರ್​ಪುರದಿಂದ ಮನೆಗೆ ಮರಳುತ್ತಿದ್ದ ವೇಳೆ ಆರೋಪಿಗಳು ಬೈಕ್​ನಲ್ಲಿ ಬಂದು ಅವರ ಕಾರನ್ನು ಅಡ್ಡಗಟ್ಟಿ ಕೈ ಹಿಡಿದು ಎಳೆದಿದ್ದರು.

ಕೀರ್ತಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಮಹಿಳೆಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ), 354 ಡಿ (ಹಿಂಬಾಲಿಸುವುದು), 427 ( ಕಿಡಿಗೇಡಿತನ) ಮತ್ತು 506 (ಕ್ರಿಮಿನಲ್ ಬೆದರಿಕೆಗಾಗಿ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ಡೆಲ್ಲಿಯ ಡಿಸಿಪಿ ಘನಶ್ಯಾಮ್ ಬನ್ಸಾಲ್ ತಿಳಿಸಿದ್ದಾರೆ.

ಏನಿದು ಘಟನೆ?

ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡದ ನಾಯಕ ನಿತೀಶ್ ರಾಣಾ ಅವರ ಪತ್ನಿ ಸಾಚಿ ಮರ್ವಾ(Saachi Marwah) ಅವರ ಕಾರನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಹಿಂಬಾಲಿಸಿಕೊಂಡು ಬಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ದೆಹಲಿಯಲ್ಲಿ ನಡೆದಿದೆ. ಈ ವಿಚಾರವನ್ನು ಸಾಚಿ ಮರ್ವಾ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದರು.

ರಾಣಾ ಪತ್ನಿ ಸಾಚಿ ಮರ್ವಾ ಅವರು ಕಾರಿನಲ್ಲಿ ಮನೆಗೆ ಬರುವ ಮಾರ್ಗದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಅವರ ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಕೆಲ ದೂರ ಹಿಂಬಾಲಿಸಿಕೊಂಡು ಬಂದ ಈ ಅಪರಿಚಿತ ವ್ಯಕ್ತಿಗಳು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ತಮ್ಮ ಕಾರನ್ನು ಹಿಂಬಾಲಿಕೊಂಡು ಬಂದ ಇಬ್ಬರು ವ್ಯಕ್ತಿಗಳ ಫೋಟೊವನ್ನು ಮರ್ವಾ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯನ್ನು ಹಾಕಿಕೊಂಡಿದ್ದರು.

ಘಟನೆಯ ಬಗ್ಗೆಯೂ ಮಾಹಿತಿ ನೀಡಿರುವ ಮರ್ವಾ ಅವರು, “ಈ ಘಟನೆ ನಡೆದ ತಕ್ಷಣ ತಾನು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದೆ. ಆದರೆ ಪೊಲೀಸರು ನನಗೆ ಯಾವುದೇ ಸಹಾಯ ಮಾಡಲಿಲ್ಲ. ನೀವು ಈಗಾಗಲೇ ಮನೆಗೆ ಸುರಕ್ಷಿತವಾಗಿ ತಲುಪಿದ್ದೀರಾ ಎಂದು ಕೇಳಿ, ಮುಂದಿನ ಸಲ ಈ ರೀತಿಯ ಘಟನೆ ಸಂಭವಿಸಿದರೆ ವಾಹನದ ನಂಬರ್‌ ನೋಟ್‌ ಮಾಡಿಕೊಳ್ಳಿ” ಎಂಬುದಾಗಿ ಸಲಹೆ ನೀಡಿದ್ದರು ಎಂದು ಹೇಳಿದ್ದರು.

ಇದನ್ನೂ ಓದಿ Batsmen with the most runs in the death overs in IPL 2023: 2023ನೇ ಆವೃತ್ತಿಯ ಐಪಿಎಲ್​​ನಲ್ಲಿ ಇದುವರೆಗೆ ಡೆತ್​ ಓವರ್​ಗಳಲ್ಲಿ ಹೆಚ್ಚು ರನ್​ ಬಾರಿಸಿದ ಬ್ಯಾಟರ್​​ಗಳು

ಸಾಚಿ ಮರ್ವಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಸ್ಟ್​ ಮಾಡುತ್ತಿದ್ದಂತೆ ಹಲವು ನೆಟ್ಟಿಗರು ಟ್ವಿಟರ್​ನಲ್ಲಿ ದೆಹಲಿ ಪೊಲೀಸರ ಈ ಉದಾಸಿನದ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ರಕ್ಷಣೆಗೆ ಬಾರದ ಈ ಪೊಲೀಸ್​ ಅಧಿಕಾತರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

T20 World Cup 2024: ಎಂದಿನಂತೆ ಜೆರ್ಸಿಯು ನೀಲಿ ಬಣ್ಣದಿಂದ ಕೂಡಿದೆ. ಆದರೆ, ಕೇಸರಿಯ ರಂಗು ಹೆಚ್ಚಿದೆ. ತೋಳುಗಳು ಕೇಸರಿ ಬಣ್ಣದ್ದಾಗಿವೆ. ಭುಜದ ಮೇಲೆ ಸಾಂಪ್ರದಾಯಿಕ ಬಿಳಿ ಅಡಿಡಾಸ್ ಪಟ್ಟಿಗಳಿವೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್​​ನಲ್ಲಿ ಭಾರತದ ಜರ್ಸಿಯಲ್ಲಿ ಭುಜದ ಮೇಲೆ ತ್ರಿವರ್ಣ ಪಟ್ಟೆಗಳಿದ್ದವು.

VISTARANEWS.COM


on

T20 World Cup 2024
Koo

ಬೆಂಗಳೂರು: 2024ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಗೆ (T20 World Cup 2024) ಟೀಂ ಇಂಡಿಯಾ ತನ್ನ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಜೂನ್ 1 ರಿಂದ 29 ರವರೆಗೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ (USA) ಮತ್ತು ವೆಸ್ಟ್​ ಇಂಡೀಸ್​​ನಲ್ಲಿ ಈ ಟೂರ್ನಿ ನಡೆಯಲಿದೆ. ‘ಎ’ ಗುಂಪಿನಲ್ಲಿ ಭಾರತ, ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ, ಆತಿಥೇಯ ಅಮೆರಿಕ, ಐರ್ಲೆಂಡ್ ಮತ್ತು ಕೆನಡಾ ತಂಡಗಳಿವೆ. ಮೆನ್ ಇನ್ ಬ್ಲೂ (Men In Blue) ತಮ್ಮ ಎಲ್ಲಾ ಗುಂಪು ಪಂದ್ಯಗಳನ್ನು ಯುಎಸ್ಎಯಲ್ಲಿ ಆಡಲಿದೆ. ಅವರ ಮೊದಲ ಮೂರು ಪಂದ್ಯಗಳು ನ್ಯೂಯಾರ್ಕ್​​ನಲ್ಲಿ ನಡೆದರೆ, ಕೊನೆಯ ಗುಂಪು ಪಂದ್ಯವು ಲಾಡರ್​ಹಿಲ್​ನಲ್ಲಿ ನಡೆಯಲಿದೆ.

ಬಹುನಿರೀಕ್ಷಿತ ಟಿ 20 ವಿಶ್ವಕಪ್ 2024 ಪ್ರಾರಂಭವಾಗಲು ಒಂದು ತಿಂಗಳಿಗಿಂತ ಕಡಿಮೆ ಸಮಯ ಇರುವಾಗ ಭಾರತವು ಆಕರ್ಷಕ ಜೆರ್ಸಿಯನ್ನು ಅನಾವರಣಗೊಳಿಸಿದೆ. ಎಂದಿನಂತೆ ಜೆರ್ಸಿಯು ನೀಲಿ ಬಣ್ಣದಿಂದ ಕೂಡಿದೆ. ಆದರೆ, ಕೇಸರಿಯ ರಂಗು ಹೆಚ್ಚಿದೆ. ತೋಳುಗಳು ಕೇಸರಿ ಬಣ್ಣದ್ದಾಗಿವೆ. ಭುಜದ ಮೇಲೆ ಸಾಂಪ್ರದಾಯಿಕ ಬಿಳಿ ಅಡಿಡಾಸ್ ಪಟ್ಟಿಗಳಿವೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್​​ನಲ್ಲಿ ಭಾರತದ ಜರ್ಸಿಯಲ್ಲಿ ಭುಜದ ಮೇಲೆ ತ್ರಿವರ್ಣ ಪಟ್ಟೆಗಳಿದ್ದವು.

ಇದನ್ನೂ ಓದಿ: IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

ಭಾರತದ ಜೆರ್ಸಿಯ ಮುಂಭಾಗದಲ್ಲಿ ಪ್ರಾಯೋಜಕ ‘ಡ್ರೀಮ್ 11’ ಹೆಸರನ್ನು ಸಹ ಇರಬೇಕು. ಆದರೆ ಐಸಿಸಿ ಸ್ಪರ್ಧೆಯ ಸಮಯದಲ್ಲಿ ಜೆರ್ಸಿಯಲ್ಲಿ ಯಾವುದೇ ಪ್ರಾಯೋಜಕರ ಹೆಸರನ್ನು ಹಾಕಲು ಐಸಿಸಿ ನಿಯಮವು ತಂಡಗಳಿಗೆ ಅನುಮತಿಸುವುದಿಲ್ಲ. ಹೀಗಾಗಿ ವಿಶ್ವ ಕಪ್​ ನಲ್ಲಿ ಅದನ್ನು ತೆಗೆದು ಹಾಕಲಾಗಿದೆ.

ನಾಯಕ ರೋಹಿತ್ ಶರ್ಮಾ, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಜರ್ಸಿ ಅನಾವರಣದ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದಾರೆ. ಧರ್ಮಶಾಲಾದ ಸುಂದರವಾದ ಎಚ್​​ಪಿಸಿಎ ಕ್ರೀಡಾಂಗಣದಲ್ಲಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ.

20 ವಿಶ್ವಕಪ್ ಗಾಗಿ ಭಾರತದ ತಂಡವನ್ನು ಕಳೆದ ವಾರ ಘೋಷಿಸಲಾಗಿತ್ತು. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಹಾರ್ದಿಕ್ ಪಾಂಡ್ಯ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಭಾರತ ತಂಡ ಜೂನ್ 5ರಂದು ಐರ್ಲೆಂಡ್ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದ್ದು, ಜೂನ್ 9ರಂದು ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಜೂನ್ 12ರಂದು ಅಮೆರಿಕ ವಿರುದ್ಧ ಸೆಣಸಲಿದ್ದು, ಜೂನ್ 15ರಂದು ಕೆನಡಾ ವಿರುದ್ಧ ಸೆಣಸಲಿದೆ.

ಭಾರತ ತಂಡ ಇ ರೀತಿ ಇದೆ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅರ್ಶ್​ದೀಪ್​ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ. ಸಿರಾಜ್

Continue Reading

ಪ್ರಮುಖ ಸುದ್ದಿ

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

IPL 2024: ಸ್ಟಾರ್ ಸ್ಪೋರ್ಟ್ಸ್ ಪ್ಯಾನೆಲ್​ನ ಭಾಗವಾಗಿ, ಗ್ರೇಸ್ ಹೇಡನ್ ಮೇ 6 ರಂದು ಎಸ್​ಆರ್​ಎಚ್​​ ವಿರುದ್ಧದ ಮುಂಬೈ ಇಂಡಿಯನ್ಸ್ ತವರು ಪಂದ್ಯಕ್ಕಾಗಿ ಮುಂಬೈನ ವಾಂಖೆಡೆ ಕ್ರೀಡಾಂಗಣಕ್ಕೆ ಹೋಗಿದ್ದರು. ಸ್ಟೇಡಿಯಮ್ ಹೊರಗೆ, ಅವರು ಹಲವಾರು ಸ್ಥಳೀಯ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಮತ್ತು ರೋಹಿತ್ ಶರ್ಮಾ ಉತ್ಸಾಹಿಗಳೊಂದಿಗೆ ಸಂವಹನ ನಡೆಸಿದರು.

VISTARANEWS.COM


on

IPL 2024
Koo

ಮುಂಬಯಿ: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಅವರ ಪುತ್ರಿ ಗ್ರೇಸ್ ಹೇಡನ್ (Grace Hayden) ಮೇ 6 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಮತ್ತು ಎಸ್​ಆರ್​ಎಚ್ ಐಪಿಎಲ್ (IPL 2024) ಪಂದ್ಯಕ್ಕೆ ಮೊದಲು ಮುಂಬೈ ಇಂಡಿಯನ್ಸ್ (ಎಂಐ) ಅಭಿಮಾನಿಗಳೊಂದಿಗೆ ನಡೆಸಿದ ಸಂವಾದ ವೈರಲ್ ಆಗಿದೆ. ಅವರು ಮುಂಬಯಿ ಇಂಡಿಯನ್ಸ್​ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರನ್ನು ‘ಮುಂಬೈ ಚಾ ರಾಜಾ ರೋಹಿತ್ ಶರ್ಮಾ’ ಎಂದು ಕೂಗಿರುವುದು ಅಭಿಮಾನಿಗಳ ಉತ್ಸಾಹಕ್ಕೆ ಕಿಚ್ಚು ಹಚ್ಚಿದೆ.

ಐಪಿಎಲ್ 2024 ಋತುವಿನ ಅಧಿಕೃತ ಪ್ರಸಾರಕ ಸ್ಟಾರ್​ ಸ್ಪೋರ್ಟ್ಸ್​​ ನಿರೂಪಕರಲ್ಲಿ ಒಬ್ಬರಾದ ಗ್ರೇಸ್, ಮುಂಬೈ ಇಂಡಿಯನ್ಸ್ ದಂತಕಥೆ ರೋಹಿತ್ ಶರ್ಮಾ ಅವರನ್ನು ಹೊಗಳುವ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾದರು. ಅವರು ಮೈದಾನದ ಹೊರಗೆ ನಿಂತು ಅಭಿಮಾನಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಅಭಿಮಾನಿಗಳೇ ರೋಹಿತ್​ ಶರ್ಮಾ ಅವರನ್ನು ಹೇಗೆ ಕರೆಬೇಕು ಎಂದು ಗ್ರೇಸ್​ಗೆ ಹೇಳಿಕೊಟ್ಟರು. ಆಸ್ಟ್ರೇಲಿಯಾ ಮೂಲದ ಈ ನಿರೂಪಕಿ ಸಿಕ್ಕಿದ ಅವಕಾಶನವನ್ನು ಚೆನ್ನಾಗಿ ಬಳಸಿಕೊಂದು ಹಿಂದಿಯಲ್ಲಿ ಅವರನ್ನು ಹೊಗಳಿದರು.

ಸ್ಟಾರ್ ಸ್ಪೋರ್ಟ್ಸ್ ಪ್ಯಾನೆಲ್​ನ ಭಾಗವಾಗಿ, ಗ್ರೇಸ್ ಹೇಡನ್ ಮೇ 6 ರಂದು ಎಸ್​ಆರ್​ಎಚ್​​ ವಿರುದ್ಧದ ಮುಂಬೈ ಇಂಡಿಯನ್ಸ್ ತವರು ಪಂದ್ಯಕ್ಕಾಗಿ ಮುಂಬೈನ ವಾಂಖೆಡೆ ಕ್ರೀಡಾಂಗಣಕ್ಕೆ ಹೋಗಿದ್ದರು. ಸ್ಟೇಡಿಯಮ್ ಹೊರಗೆ, ಅವರು ಹಲವಾರು ಸ್ಥಳೀಯ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಮತ್ತು ರೋಹಿತ್ ಶರ್ಮಾ ಉತ್ಸಾಹಿಗಳೊಂದಿಗೆ ಸಂವಹನ ನಡೆಸಿದರು. ಈ ವೇಳೆ ಅವರು ರೋಹಿತ್ ಶರ್ಮಾ ಅವರನ್ನು ಅಭಿಮಾನದಿಂದ ಕೂಗಿದರು.

ಇದನ್ನೂ ಓದಿ: IPL 2024 : ಕೆಕೆಆರ್​ನಲ್ಲಿ ನಾಯಕ ಶ್ರೇಯಸ್​ ಮಾತು ಯಾರೂ ಕೇಳುತ್ತಿಲ್ಲ!

ಸ್ಟಾರ್ ಸ್ಪೋರ್ಟ್ಸ್ ಕ್ರೀಡಾಂಗಣದ ಹೊರಗೆ ಸರತಿ ಸಾಲಿನಲ್ಲಿ ಕಾಯುತ್ತಿರುವ ಅಭಿಮಾನಿಗಳೊಂದಿಗೆ ಬೆರೆಯುವ ಒಂದು ನಿಮಿಷದ ತುಣುಕನ್ನು ಸಹ ಹಂಚಿಕೊಂಡಿದೆ. ವೀಡಿಯೊದ ಒಂದು ಹಂತದಲ್ಲಿ, ಗ್ರೇಸ್ ಮುಂಬೈನ ಮಾಜಿ ನಾಯಕನ ಅಭಿಮಾನಿಗಳೊಂದಿಗೆ “ಮುಂಬೈ ಚಾ ರಾಜಾ ರೋಹಿತ್ ಶರ್ಮಾ” ಎಂಬ ಜನಪ್ರಿಯ ರೋಹಿತ್ ಪರ ಘೋಷಣೆಯನ್ನು ಕೂಗಿದ್ದಾರೆ. ಅವರ ಮಾತು ಅಭಿಮಾನಿಗಳ ಉತ್ಸಾಹವನ್ನು ಇನ್ನಷ್ಟು ಹೆಚ್ಚಿಸಿತ್ತು.

ಗ್ರೇಸ್ ಹೇಡನ್ ಕಳೆದ ಕೆಲವು ವಾರಗಳಿಂದ ಅಧಿಕೃತ ಪ್ರಸಾರಕರಿಗಾಗಿ ಐಪಿಎಲ್ 2024ರ ನಾನಾ ದೃಶ್ಯಗಳನ್ನು ಸಕ್ರಿಯವಾಗಿ ವರದಿ ಮಾಡುತ್ತಿದ್ದಾರೆ. ಅವರ ತಂದೆ ಮ್ಯಾಥ್ಯೂ ಹೇಡನ್ ಕೂಡ ಭಾರತದಲ್ಲಿದ್ದಾರೆ. ಇತ್ತೀಚೆಗೆ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​​ಕೆ ) ಆಟಗಾರರೊಂದಿಗೆ ಸಂವಹನ ನಡೆಸುತ್ತಿರುವುದು ಕಂಡುಬಂದಿದೆ.

ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗಾಗಿ ತಮ್ಮ ಅಭಿಯಾನ ಮುಂದುವರಿಸುತ್ತಿದ್ದಾರೆ. ಈ ಐಪಿಎಲ್ 2024 ಋತುವಿನಲ್ಲಿ ಇಲ್ಲಿಯವರೆಗೆ, ಡೈನಾಮಿಕ್ ಆರಂಭಿಕ ಬ್ಯಾಟರ್​ 11 ಇನ್ನಿಂಗ್ಸ್​ಗಳಿಂದ 32.60 ಸರಾಸರಿಯಲ್ಲಿ 326 ರನ್ ಗಳಿಸಿದ್ದಾರೆ. ಪಂದ್ಯಾವಳಿ ಪ್ರಾರಂಭವಾಗುವ ಕೆಲವು ತಿಂಗಳುಗಳ ಮೊದಲು ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಲಾಗಿತ್ತು. ದಶಕದ ನಾಯಕತ್ವವನ್ನು ತೆಗೆದು ಹಾಕಿರುವುದು ಅಭಿಮಾನಿಗಳಿಗೆ ಬೇಸರ ಉಂಟು ಮಾಡಿತ್ತು.

Continue Reading

ಪ್ರಮುಖ ಸುದ್ದಿ

Champions Trophy : ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲು ಬಿಡುವುದಿಲ್ಲ ? ಬಿಸಿಸಿಐ ಸ್ಫೋಟಕ ಹೇಳಿಕೆ

Champions Trophy: ಎಎನ್ಐ ಜೊತೆ ಮಾತನಾಡಿದ ಶುಕ್ಲಾ, ಬಿಸಿಸಿಐ ಭಾರತ ಸರ್ಕಾರದ ನಿರ್ಧಾರವನ್ನು ಮಾತ್ರ ಪಾಲಿಸುತ್ತದೆ. ಇದನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಅಂತಿಮವೆಂದು ಪರಿಗಣಿಸಲಾಗುವುದು ಎಂದು ಹೇಳಿದರು. “ಚಾಂಪಿಯನ್ಸ್ ಟ್ರೋಫಿಯ ವಿಷಯದಲ್ಲಿ ಭಾರತ ಸರ್ಕಾರವು ನಮಗೆ ಏನು ಹೇಳುತ್ತದೆಯೋ ಅದನ್ನು ನಾವು ಮಾಡುತ್ತೇವೆ. ಭಾರತ ಸರ್ಕಾರ ನಮಗೆ ಅನುಮತಿ ನೀಡಿದಾಗ ಮಾತ್ರ ನಾವು ನಮ್ಮ ತಂಡವನ್ನು ಕಳುಹಿಸುತ್ತೇವೆ ಎಂದು ಹೇಳಿದ್ದಾರೆ.

VISTARANEWS.COM


on

Champions Trophy
Koo

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ (Champions Trophy) ಭಾರತದ ಸಂಭಾವ್ಯ ಭಾಗವಹಿಸುವಿಕೆಯ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಪಂದ್ಯಾವಳಿಯಲ್ಲಿ ಭಾರತ ತಂಡದ ಭಾಗವಹಿಸುವಿಕೆಯು ಸರ್ಕಾರದ ಅನುಮೋದನೆಗೆ ಒಳಪಟ್ಟಿರುತ್ತದೆ ಎಂದು ಬಹಿರಂಗಪಡಿಸಿದ್ದಾರೆ. ಇದೇ ವೇಳೆ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯುವುದೇ ಡೌಟು ಎಂಬುದಾಗಿ ಹೇಳಿದ್ದಾರೆ.

ಎಎನ್ಐ ಜೊತೆ ಮಾತನಾಡಿದ ಶುಕ್ಲಾ, ಬಿಸಿಸಿಐ ಭಾರತ ಸರ್ಕಾರದ ನಿರ್ಧಾರವನ್ನು ಮಾತ್ರ ಪಾಲಿಸುತ್ತದೆ. ಇದನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಅಂತಿಮವೆಂದು ಪರಿಗಣಿಸಲಾಗುವುದು ಎಂದು ಹೇಳಿದರು. “ಚಾಂಪಿಯನ್ಸ್ ಟ್ರೋಫಿಯ ವಿಷಯದಲ್ಲಿ ಭಾರತ ಸರ್ಕಾರವು ನಮಗೆ ಏನು ಹೇಳುತ್ತದೆಯೋ ಅದನ್ನು ನಾವು ಮಾಡುತ್ತೇವೆ. ಭಾರತ ಸರ್ಕಾರ ನಮಗೆ ಅನುಮತಿ ನೀಡಿದಾಗ ಮಾತ್ರ ನಾವು ನಮ್ಮ ತಂಡವನ್ನು ಕಳುಹಿಸುತ್ತೇವೆ. ಆದ್ದರಿಂದ ನಾವು ಭಾರತ ಸರ್ಕಾರದ ನಿರ್ಧಾರದ ಪ್ರಕಾರ ಹೋಗುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: IPL 2024 : ಕೆಕೆಆರ್​ನಲ್ಲಿ ನಾಯಕ ಶ್ರೇಯಸ್​ ಮಾತು ಯಾರೂ ಕೇಳುತ್ತಿಲ್ಲ!

ವಿಶೇಷವೆಂದರೆ, 2008 ರಲ್ಲಿ ಕುಖ್ಯಾತ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಭಾಗಿಯಾಗಿದ್ದ ನಂತರ ಭಾರತವು ಪಾಕಿಸ್ತಾನದೊಂದಿಗಿನ ದ್ವಿಪಕ್ಷೀಯ ಕ್ರಿಕೆಟ್ ಸಂಬಂಧವನ್ನು ರದ್ದುಗೊಳಿಸಿತು. 2012-13ರಲ್ಲಿ ಅಲ್ಪಾವಧಿಗೆ ಪುನರಾರಂಭಗೊಂಡರೂ, ಭಾರತವು ಅಂತಿಮವಾಗಿ ಅದೇ ಕಾರಣಕ್ಕಾಗಿ ಅದನ್ನು ಮತ್ತೆ ರದ್ದುಗೊಳಿಸಿತು.

ಹೀಗಾಗಿ 2012-13ರ ಬಳಿಕ ಉಭಯ ತಂಡಗಳು ಒಂದೇ ಒಂದು ದ್ವಿಪಕ್ಷೀಯ ಸರಣಿ ಆಡಿಲ್ಲ. ಆದಾಗ್ಯೂ, 2008 ರಿಂದ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸದ ಕಾರಣ ಪಾಕಿಸ್ತಾನ ನೆಲದಲ್ಲಿ ಚಾಂಪಿಯನ್ಸ್ ಟ್ರೋಫಿ ಆಡಲು ಆಟಗಾರರಿಗೆ ಅವಕಾಶ ನೀಡದು ಎಂಬುದು ಖಾತರಿಯಾಗಿದೆ. ಇದು ನಿಜವಾಗಿಯೂ ಸಂಭವಿಸಿದರೆ ಪಿಸಿಬಿ ಹೈಬ್ರಿಡ್ ಮಾದರಿ ಪ್ರಸ್ತಾಪಿಸಬಹುದು ಮತ್ತು ಏಷ್ಯಾ ಕಪ್ 2023 ರಂತೆ ಪಂದ್ಯಾವಳಿಯನ್ನು ನಡೆಸಬಹುದು ಎಂದು ಹೇಳಿದರು.

Continue Reading

ಪ್ರಮುಖ ಸುದ್ದಿ

IPL 2024 : ಕೆಕೆಆರ್​ನಲ್ಲಿ ನಾಯಕ ಶ್ರೇಯಸ್​ ಮಾತು ಯಾರೂ ಕೇಳುತ್ತಿಲ್ಲ!

IPL 2024: ಗೌತಮ್ ಗಂಭೀರ್ ಅವರ ಮಾಜಿ ಫ್ರಾಂಚೈಸಿ ವಿರುದ್ಧ ನೈಟ್ ರೈಡರ್ಸ್ ಐಪಿಎಲ್ 2024 ಋತುವಿನಲ್ಲಿ 8 ನೇ ಗೆಲುವು ದಾಖಲಿಸಿದ ನಂತರ ಹರ್ಷಿತ್ ರಾಣಾ ಅವರ ಹೇಳಿಕೆ ಬಂದಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲು ಕೆಕೆಆರ್ ಏಕನಾ ಕ್ರೀಡಾಂಗಣಕ್ಕೆ ಪ್ರಯಾಣಿಸಿತ್ತು. ಇದಕ್ಕೂ ಮುನ್ನ ಏಪ್ರಿಲ್ 14ರಂದು ನಡೆದ ಪಂದ್ಯದಲ್ಲಿ ಈಸ್ಟ್ ಇಂಡಿಯಾ ತಂಡ 8 ವಿಕೆಟ್ ಗಳಿಂದ ಮೇಲುಗೈ ಸಾಧಿಸಿತ್ತು. ಎಲ್ಲ ಗೆಲುವುಗಳು ಗಂಭೀರ್ ಕೊಡುಗೆ ಎಂಬುದು ಹರ್ಷಿತ್​ ರಾಣಾ ಅಭಿಪ್ರಾಯವಾಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಕೋಲ್ಕತಾ ನೈಟ್ ರೈಡರ್ಸ್​ನ ಅನ್​ಕ್ಯಾಪ್ಟ್ ವೇಗದ ಬೌಲರ್ ಹರ್ಷಿತ್ ರಾಣಾ ಅವರು ತಾವು ನಾಯಕ ಶ್ರೇಯಸ್ ಮಾತು ಕೇಳುತ್ತಿಲ್ಲ ಎಂಬುದಾಗಿ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ. ಮೆಂಟರ್​ ಗೌತಮ್ ಗಂಭೀರ್ ಜಾರಿಗೆ ತರಲು ಬಯಸುವ ಆಟದ ಶೈಲಿಯನ್ನು ಮಾತ್ರ ಕಾರ್ಯಗತಗೊಳಿಸುವತ್ತ ಗಮನ ಹರಿಸಿದ್ದೇನೆ ಎಂದಿದ್ದಾರೆ. ಈ ಮೂಲಕ ಐಪಿಎಲ್​ 2024ರಲ್ಲಿ (IPL 2024) ಆ ತಂಡದಲ್ಲಿ ನಾಯಕ ಶ್ರೇಯಸ್​​ ಯೋಜನೆಗಳು ನಡೆಯುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.

ಗೌತಮ್ ಗಂಭೀರ್ ಅವರ ಮಾಜಿ ಫ್ರಾಂಚೈಸಿ ವಿರುದ್ಧ ನೈಟ್ ರೈಡರ್ಸ್ ಐಪಿಎಲ್ 2024 ಋತುವಿನಲ್ಲಿ 8 ನೇ ಗೆಲುವು ದಾಖಲಿಸಿದ ನಂತರ ಹರ್ಷಿತ್ ರಾಣಾ ಅವರ ಹೇಳಿಕೆ ಬಂದಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲು ಕೆಕೆಆರ್ ಏಕನಾ ಕ್ರೀಡಾಂಗಣಕ್ಕೆ ಪ್ರಯಾಣಿಸಿತ್ತು. ಇದಕ್ಕೂ ಮುನ್ನ ಏಪ್ರಿಲ್ 14ರಂದು ನಡೆದ ಪಂದ್ಯದಲ್ಲಿ ಈಸ್ಟ್ ಇಂಡಿಯಾ ತಂಡ 8 ವಿಕೆಟ್ ಗಳಿಂದ ಮೇಲುಗೈ ಸಾಧಿಸಿತ್ತು. ಎಲ್ಲ ಗೆಲುವುಗಳು ಗಂಭೀರ್ ಕೊಡುಗೆ ಎಂಬುದು ಹರ್ಷಿತ್​ ರಾಣಾ ಅಭಿಪ್ರಾಯವಾಗಿದೆ.

ಗೌತಮ್ ಗಂಭೀರ್ ಗೆ ಪಂದ್ಯಗಳನ್ನು ಹೇಗೆ ಗೆಲ್ಲಬೇಕು ಎಂಬುದು ತಿಳಿದಿದೆ: ಹರ್ಷಿತ್ ರಾಣಾ

ಪಂದ್ಯದ ನಂತರ ಐಪಿಎಲ್ 2024 ವೀಕ್ಷಕ ವಿವರಣೆಗಾರರೊಂದಿಗೆ ಮಾತನಾಡಿದ ಹರ್ಷಿತ್ ರಾಣಾ, ಗೌತಮ್ ಗಂಭೀರ್ ಕೆಕೆಅರ್​ ತಂಡಕ್ಕೆ ಎಷ್ಟು ಅಗತ್ಯ ಮತ್ತು ಪ್ರಭಾವಶಾಲಿ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಭಾರತದ ಮಾಜಿ ಆರಂಭಿಕ ಆಟಗಾರ ಗಂಭೀರ್ 2012 ಮತ್ತು 2014 ರಲ್ಲಿ ಆ ತಂಡ ನಾಯಕರಾಗಿದ್ದ ಅವಧಿಯಲ್ಲಿ 2 ಐಪಿಎಲ್ ಟ್ರೋಫಿಗಳನ್ನು ಗೆದ್ದಿದ್ದರು. ಹೀಗಾಗಿ ಇಲ್ಇ ಗಂಭೀರ್ ಅವರ ಪರಂಪರೆಯನ್ನು ಯಾವುದೇ ನಾಯಕನಿಗೆ ಸರಿಗಟ್ಟುವುದು ಕಷ್ಟ.

ಇದನ್ನೂ ಓದಿ: IPL 2024 : ಹಳೆ ಸೇಡು; ರಾಹುಲ್ ವಿರುದ್ಧವೇ ತಿರುಗಿಬಿದ್ದ ನವಿನ್​ ಉಲ್ ಹಕ್​

ಅಂದಿನಿಂದ, ನೈಟ್ ರೈಡರ್ಸ್ 2021 ರಲ್ಲಿ ಒಮ್ಮೆ ಮಾತ್ರ ಫೈನಲ್ ತಲುಪಿದೆ. ವಾಸ್ತವವಾಗಿ, 2022 ಮತ್ತು 2023 ರಲ್ಲಿ, ಕೋಲ್ಕತಾ ಪಾಯಿಂಟ್ಸ್ ಟೇಬಲ್​​ ಅಗ್ರ 4 ರಲ್ಲಿ ಸ್ಥಾನ ಪಡೆಯಲು ಕಷ್ಟಪಟ್ಟಿತು. ಕಳೆದ ಎರಡು ಋತುಗಳಲ್ಲಿ 7 ನೇ ಸ್ಥಾನ ಗಳಿಸಿತ್ತು. ಆದಾಗ್ಯೂ, ಗೌತಮ್ ಗಂಭೀರ್ ಎಲ್ಎಸ್ಜಿಯನ್ನು ತೊರೆದು ತಮ್ಮ ಮಾಜಿ ಫ್ರಾಂಚೈಸಿಯನ್ನು ಮಾರ್ಗದರ್ಶಕರಾಗಿ ವಹಿಸಿಕೊಂಡಾಗಿನಿಂದ ಕೆಕೆಆರ್ ವಿಭಿನ್ನ ರೀತಿಯಲ್ಲಿ ಸಾಗುತ್ತಿದೆ.

2024 ರ ಹರಾಜಿನಲ್ಲಿ ಐಪಿಎಲ್​​ನ ಅತ್ಯಂತ ದುಬಾರಿ ಆಟಗಾರ ಮಿಚೆಲ್ ಸ್ಟಾರ್ಕ್ ಅವರನ್ನು ಖರೀದಿ ಮಾಡಿದಾಗ ಕೋಲ್ಕತ್ತಾದ ನಿರ್ಭೀತ ಮತ್ತು ದಿಟ್ಟ ವಿಧಾನ ಗೋಚರಿಸಿತ್ತು.. ಆದರೆ ಸೀಸನ್ ಪ್ರಾರಂಭವಾದಾಗ, ಕೆಕೆಆರ್ ಆ ವಿಧಾನವನ್ನು ನಿಜವಾಗಿಯೂ ಉಳಿಸಿಕೊಂಡಿತು. ಹೆಚ್ಚಿನ ಕ್ರೆಡಿಟ್ ಗೌತಮ್ ಗಂಭೀರ್​ಗೆ ಸಲ್ಲುತ್ತದೆ.

ಕ್ಲಿಷ್ಟಕರ ಸಂದರ್ಭಗಳಿಂದ ಪಂದ್ಯಗಳನ್ನು ಹೇಗೆ ಪರಿವರ್ತಿಸಬಹುದು ಎಂಬ ಅರಿವನ್ನು ಗಂಭೀರ್ ತಂಡಕ್ಕೆ ಸಾಕಷ್ಟು ಬಾರಿ ನೀಡಿದ್ದಾರೆ ಎಂದು ಹರ್ಷಿತ್ ರಾಣಾ ದೃಢಪಡಿಸಿದ್ದಾರೆ. 98 ರನ್ಗಳ ಗೆಲುವಿನ ಬಗ್ಗೆ ಮಾತನಾಡಿದ ರಾಣಾ, ಗಂಭೀರ್ ಬೌಲರ್​ಗಳಿಗೆ ಚೆಂಡನ್ನು ಎಲ್ಲಿ ಪಿಚ್ ಮಾಡಬೇಕು ಎಂಬುದರ ವಿಷಯದಲ್ಲಿ ಸ್ವಾತಂತ್ರ್ಯ ನೀಡಿದ್ದಾರೆ ಎಂದು ಹೇಳಿದ್ದಾರೆ.

ಲಕ್ನೋ ಫ್ರಾಂಚೈಸಿಯನ್ನು 137 ರನ್​ಗಳಿಗೆ ಆಲೌಟ್ ಮಾಡಿದ ನಂತರ ಅವರು ಈ ಮಾತುಗಳನ್ನು ಹೇಳಿದರು. 236 ರನ್​ಗಳ ಬೃಹತ್ ಮೊತ್ತ ಬೆನ್ನಟ್ಟಿದ ಎಲ್ಎಸ್ಜಿ ತಂಡವು ರಾಣಾ ಮತ್ತು ವರುಣ್ ಚಕ್ರವರ್ತಿ ತಲಾ 3 ವಿಕೆಟ್, ಮಿಚೆಲ್ ಸ್ಟಾರ್ಕ್ ಮತ್ತು ಸುನಿಲ್ ನರೈನ್ ಅವರ 1 ವಿಕೆಟ್ ಮತ್ತು ಆಂಡ್ರೆ ರಸೆಲ್ ಅವರ 2 ವಿಕೆಟ್ ಸಾಧನೆಯಿಂದ ಗೆದ್ದಿತ್ತು.

ಬೌಲರ್​ಗಳು ಎಕಾನಾ ಕ್ರೀಡಾಂಗಣದ ತಿರುವನ್ನು ಚೆನ್ನಾಗಿ ಅರಿತಿದ್ದಾರೆ. ಎಲ್ಎಸ್ಜಿ ಬ್ಯಾಟರ್​ಗಳನ್ನು ಎಲ್ಲಿ ಗುರಿಯಾಗಿಸಬೇಕು ಎಂದು ತಿಳಿದಿತ್ತು ಎಂಬುದಾಗಿ ರಾಣಾ ಹೇಳಿದ್ದಾರೆ.

“ನಾವು ಗೌತಮ್ ಗಂಭೀರ್ ಆಡುವ ಕ್ರಿಕೆಟ್ ಶೈಲಿಯ ಮೇಲೆ ಹೆಚ್ಚು ಗಮನ ಹರಿಸುತ್ತೇವೆ. ಆಟಗಳನ್ನು ನಮ್ಮ ಪರವಾಗಿ ಹೇಗೆ ತಿರುಗಿಸಬೇಕು ಎಂಬುದರ ಬಗ್ಗೆ ಅವರಿಗೆ ಸಾಕಷ್ಟು ಜ್ಞಾನವಿದೆ. ಇಂದಿನಂತೆ ಅವರು ಪಿಚ್​ನಲ್ಲಿ ಯಾವ ಪ್ರದೇಶಗಳನ್ನು ಗುರಿಯಾಗಿಸಬೇಕು ಎಂಬುದರ ಬಗ್ಗೆ ಬೌಲರ್ಗಳಿಗೆ ಮುಕ್ತ ಅವಕಾಶವನ್ನು ನೀಡುತ್ತಾರೆ.” – ಹರ್ಷಿತ್ ರಾಣಾ ಎಲ್ಎಸ್ಜಿ ವಿರುದ್ಧ ಕೆಕೆಆರ್ ಗೆಲುವಿನ ನಂತರ ಹೇಳಿದರು.

Continue Reading
Advertisement
T20 World Cup 2024
ಕ್ರೀಡೆ1 second ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ18 mins ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ22 mins ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Champions Trophy
ಪ್ರಮುಖ ಸುದ್ದಿ46 mins ago

Champions Trophy : ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲು ಬಿಡುವುದಿಲ್ಲ ? ಬಿಸಿಸಿಐ ಸ್ಫೋಟಕ ಹೇಳಿಕೆ

Lok Sabha Election 2024
ಪ್ರಮುಖ ಸುದ್ದಿ1 hour ago

Lok Sabha Election 2024: ನಾಳೆ ರಾಜ್ಯದಲ್ಲಿ 2ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ; 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳ ಸ್ಪರ್ಧೆ

IPL 2024
ಪ್ರಮುಖ ಸುದ್ದಿ2 hours ago

IPL 2024 : ಕೆಕೆಆರ್​ನಲ್ಲಿ ನಾಯಕ ಶ್ರೇಯಸ್​ ಮಾತು ಯಾರೂ ಕೇಳುತ್ತಿಲ್ಲ!

Bomb Threat
ದೇಶ2 hours ago

ಶಾಲೆಗಳಿಗೆ ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ; ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ!

Prajwal Revanna Case Delete vulgar video and avoid legal action says SIT chief
ಹಾಸನ2 hours ago

Prajwal Revanna Case: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ, ಇಲ್ಲದಿದ್ದರೆ ಕ್ರಮ: SIT ಮುಖ್ಯಸ್ಥರ ಖಡಕ್‌ ವಾರ್ನಿಂಗ್

IPL 2024
ಕ್ರೀಡೆ2 hours ago

IPL 2024 : ಹಳೆ ಸೇಡು; ರಾಹುಲ್ ವಿರುದ್ಧವೇ ತಿರುಗಿಬಿದ್ದ ನವಿನ್​ ಉಲ್ ಹಕ್​

Prajwal Revanna Case HD Deve Gowda takes a big decision
ಕ್ರೈಂ2 hours ago

Prajwal Revanna Case: ‌ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಮಹತ್ವದ ಫರ್ಮಾನು ಹೊರಡಿಸಿದ ಎಚ್‌.ಡಿ. ದೇವೇಗೌಡ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ4 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ5 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ5 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌