IND vs AUS: 4ನೇ ಟಿ-20 ಪಂದ್ಯಕ್ಕೆ 'ಕರೆಂಟ್‌ ಬಿಲ್'‌ ಅಡ್ಡಿ; ಇಂದು ಸ್ಟೇಡಿಯಂನಲ್ಲಿ ಕರೆಂಟೇ ಇರಲ್ಲ! - Vistara News

ಕ್ರಿಕೆಟ್

IND vs AUS: 4ನೇ ಟಿ-20 ಪಂದ್ಯಕ್ಕೆ ‘ಕರೆಂಟ್‌ ಬಿಲ್’‌ ಅಡ್ಡಿ; ಇಂದು ಸ್ಟೇಡಿಯಂನಲ್ಲಿ ಕರೆಂಟೇ ಇರಲ್ಲ!

IND vs AUS: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟಿ-20 ಪಂದ್ಯವು ಛತ್ತೀಸ್‌ಗಢದ ರಾಯ್‌ಪುರದಲ್ಲಿರುವ ಸ್ಟೇಡಿಯಂನಲ್ಲಿ ನಡೆಯಬೇಕಿದೆ. ಆದರೆ, ಕೊನೇ ಕ್ಷಣದಲ್ಲಿ ವಿದ್ಯುತ್‌ ಸಮಸ್ಯೆ ಎದುರಾಗಿದೆ. ಇದಕ್ಕೆ ಕಾರಣ ಇಲ್ಲಿದೆ.

VISTARANEWS.COM


on

Cricket Stadium
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯ್‌ಪುರ: ಸಾಮಾನ್ಯವಾಗಿ ಯಾವುದೇ ಕ್ರಿಕೆಟ್‌ ಪಂದ್ಯಗಳಿಗೆ ಒಂದೋ ಮಳೆ ಕಾಡುತ್ತದೆ. ಇಲ್ಲವೆ ಮಂದ ಬೆಳಕಿನ ಕಾರಣ ಆಟವನ್ನು ರದ್ದುಗೊಳಿಸಲಾಗುತ್ತದೆ. ಆದರೆ, ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ (IND vs AUS) ನಡುವಿನ ನಾಲ್ಕನೇ ಟಿ20 ಪಂದ್ಯಕ್ಕೆ ‘ಕರೆಂಟ್‌ ಬಿಲ್’‌ ಅಡ್ಡಿಯಾಗಿದೆ. ಹೌದು, ರಾಯ್‌ಪುರದಲ್ಲಿರುವ ಶಹೀದ್‌ ವೀರ ನಾರಾಯಣ ಸಿಂಗ್‌ ಸ್ಟೇಡಿಯಂನಲ್ಲಿ (Shaheed Veer Narayan Singh Stadium) ಶುಕ್ರವಾರ (ಡಿಸೆಂಬರ್‌ 1) ಟಿ-20 ಪಂದ್ಯ ನಡೆಯಬೇಕಿದ್ದು, ಕೊನೇ ಕ್ಷಣದಲ್ಲಿ ಮೈದಾನದಲ್ಲಿ ಕರೆಂಟ್‌ ಸಮಸ್ಯೆ ಎದುರಾಗಿದೆ. ವಿದ್ಯುತ್‌ ಬಿಲ್‌ ಕಟ್ಟದಿರುವುದೇ ಇದಕ್ಕೆ ಕಾರಣವಾಗಿದೆ.

ಹೌದು, ಶಹೀದ್‌ ವೀರ ನಾರಾಯಣ ಸಿಂಗ್‌ ಸ್ಟೇಡಿಯಂಗೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಇದಕ್ಕೆ 2009ರಿಂದಲೂ ಸ್ಟೇಡಿಯಂ ಆಡಳಿತ ಮಂಡಳಿಯು ಬಾಕಿ ಉಳಿಸಿಕೊಂಡಿರುವ 3.16 ಕೋಟಿ ರೂ. ವಿದ್ಯುತ್‌ ಬಿಲ್‌ ಕಾರಣವಾಗಿದೆ. ಐದು ವರ್ಷದ ಹಿಂದೆಯೇ ಸ್ಟೇಡಿಯಂಗೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದೆ. ಈಗ ಛತ್ತೀಸ್‌ಗಢ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ಮನವಿ ಮೇರೆಗೆ ತಾತ್ಕಾಲಿಕವಾಗಿ ಸಂಪರ್ಕ ಕಲ್ಪಿಸಲಾಗಿದೆ. ಆದರೆ, ಪ್ರೇಕ್ಷಕರ ಗ್ಯಾಲರಿಗೆ ಮಾತ್ರ ವಿದ್ಯುತ್‌ ಪೂರೈಕೆಯಾಗುತ್ತದೆ. ಇದರಿಂದಾಗಿ ಜನರೇಟರ್‌ ಮೂಲಕ ಫ್ಲಡ್‌ಲೈಟ್‌ಗಳನ್ನು ಉರಿಸುವ ಅನಿವಾರ್ಯತೆ ಎದುರಾಗಿದೆ.

ರಾಯ್‌ಪುರಕ್ಕೆ ಆಗಮಿಸಿರುವ ಮೆನ್‌ ಇನ್‌ ಬ್ಲ್ಯೂ

ತಾತ್ಕಾಲಿಕವಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಿರುವುದು 200 ಕಿಲೋವ್ಯಾಟ್‌ಗೆ. ಇದನ್ನು 1,000 ಕಿಲೋವ್ಯಾಟ್‌ಗೆ ಏರಿಸಲು ಅನುಮತಿ ದೊರೆತಿದೆ. ಆದರೆ, ಇದುವರೆಗೆ ಈ ಕುರಿತ ಕೆಲಸ ಆರಂಭವಾಗಿಲ್ಲ. ಇದರಿಂದಾಗಿ ಕ್ರಿಕೆಟ್‌ ಪ್ರೇಮಿಗಳು ಅಸೋಸಿಯೇಷನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2018ರಲ್ಲಿ ಅಥ್ಲೀಟ್‌ಗಳು ಹಾಫ್‌ ಮ್ಯಾರಥಾನ್‌ನಲ್ಲಿ ಪಾಲ್ಗೊಳ್ಳುವಾಗ ವಿದ್ಯುತ್‌ ಪೂರೈಕೆ ಇಲ್ಲದಿರುವ ಕುರಿತು ದೂರು ನೀಡಿದ್ದರು. ಇದಾದ ಬಳಿಕವೇ 3.16 ಕೋಟಿ ರೂ. ವಿದ್ಯುತ್‌ ಬಿಲ್‌ ಬಾಕಿ ಇರುವ ಪ್ರಕರಣ ಬಯಲಾಗಿದೆ. ಇದರ ಬಗ್ಗೆ ಕ್ರೀಡಾ ಇಲಾಖೆ ಹಾಗೂ ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಆರೋಪ-ಪ್ರತ್ಯಾರೋಪಗಳಲ್ಲಿಯೇ ನಿರತರಾಗಿದ್ದಾರೆಯೇ ಹೊರತು ಯಾವುದೇ ಕ್ರಮ ತೆಗೆದುಕೊಂಡಿಲ್ಲ.

ಇದನ್ನೂ ಓದಿ: Ind vs Aus : ತಪ್ಪುಗಳನ್ನು ತಿದ್ದಿಕೊಂಡು ಸರಣಿ ಗೆಲ್ಲುವುದೇ ಭಾರತ?

ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಭಾರತ ಕ್ರಿಕೆಟ್‌ ತಂಡವು 2-1ರ ಮುನ್ನಡೆ ಸಾಧಿಸಿದೆ. ಭಾರತ ತಂಡವು ಮೊದಲ ಎರಡು ಪಂದ್ಯಗಳನ್ನು ಗೆದ್ದು, ಗುವಾಹಟಿಯಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಐದು ವಿಕೆಟ್‌ಗಳ ಅಂತರದಿಂದ ಸೋಲನುಭವಿಸಿದೆ. ಈಗ ನಾಲ್ಕನೇ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ. ಪಂದ್ಯದ ಸಮಯದಲ್ಲಿ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಒಳಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಮಸುಕಾದ ಸಂಜೆಯಲ್ಲಿ ತೇವಾಂಶವು 50% ರಷ್ಟು ಹೆಚ್ಚಾಗುತ್ತದೆ. ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿಲ್ಲ. ಸರಣಿಯು ಕೌತುಕ ಮೂಡಸಿರುವ ಕಾರಣ ಅಭಿಮಾನಿಗಳಿಗೆ ಇದು ಉತ್ಸಾಹದ ಸಂಗತಿಯಾಗಿದೆ. ಆದರೆ, ಈ ಪಂದ್ಯಕ್ಕೆ ವಿದ್ಯುತ್‌ ಸಮಸ್ಯೆ ಎದುರಾಗದಿರಲಿ ಎಂಬುದು ಕ್ರಿಕೆಟ್‌ ಪ್ರೇಮಿಗಳ ಪ್ರಾರ್ಥನೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

T20 World Cup 2024: ಮಿನಿ ವಿಶ್ವಕಪ್​ ಸಮರಕ್ಕೆ ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಪೂರ್ಣ; ವಿಡಿಯೊ ವೈರಲ್​

T20 World Cup 2024: ವಿಶ್ವಕಪ್ ಟೂರ್ನಿಗೆ ಅಮೆರಿಕದ ಮೂರು ಸ್ಟೇಡಿಯಂಗಳು ಆತಿಥ್ಯ ವಹಿಸಿವೆ. ಇಲ್ಲಿ 16 ಪಂದ್ಯಗಳು ನಡೆಯಲಿದೆ. ಈ ಮೈದಾನಕ್ಕೆ ಆಸ್ಟ್ರೇಲಿಯಾದಿಂದ ತರಿಸಲಾದ ಡ್ರಾಪ್ ಇನ್ ಪಿಚ್ ಬಳಸಲಾಗುತ್ತದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಇನ್ನು ಕೆವಲ 24 ದಿನಗಳು ಮಾತ್ರ ಬಾಕಿ ಉಳಿದಿದೆ. ವಿಶ್ವಕಪ್​ ಪಂದ್ಯಾವಳಿಗಳು ಜೂನ್​ 1ರಿಂದ 29ರ ತನಕ ಸಾಗಲಿದೆ. ಆಸ್ಟ್ರೇಲಿಯಾದಿಂದ ನ್ಯೂಯಾರ್ಕ್​ಗೆ ತಂದಿರುವ ಡ್ರಾಪ್ ಇನ್ ಪಿಚ್‌ಗಳ(Drop-In Pitches) ಅಳವಡಿ ಸಂಪೂರ್ಣಗೊಂಡಿದ್ದು ಇದರ ವಿಡಿಯೊ ವೈರಲ್​ ಆಗಿದೆ. ಅಮೆರಿಕದಲ್ಲಿ ಸುಸಜ್ಜಿತ ಕ್ರಿಕೆಟ್​ ಪಿಚ್ ಇಲ್ಲದ ಕಾರಣ ಆಸ್ಟ್ರೇಲಿಯಾದಿಂದ ಈ ಪಿಚ್​ಗಳನ್ನು ತರಿಸಲಾಗಿದೆ. ಇದೇ ಮೊದಲ ಬಾರಿಗೆ ಅಮೆರಿಕ ಐಸಿಸಿ ಪಂದ್ಯಾವಳಿ ಆತಿಥ್ಯ ವಹಿಸಿಕೊಂಡಿದೆ.

“ಡ್ರಾಪ್-ಇನ್ ಪಿಚ್‌ಗಳನ್ನು ಫ್ಲೋರಿಡಾದಿಂದ ನ್ಯೂಯಾರ್ಕ್‌ಗೆ ಸೆಮಿ ಟ್ರೈಲರ್ ಟ್ರಕ್‌ಗಳಲ್ಲಿ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂಗೆ ತರಲಾಗಿದ್ದು, ಇದರ ಅಳವಡಿಕೆಯ ಕಾರ್ಯ ಇನ್ನೆರಡು ದಿನಗಳಲ್ಲಿ ಆರಂಭಗೊಳ್ಳಲಿದೆ’ ಎಂದು ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಒಂದು ವಾರಗಳ ಹಿಂದೆ ಹೇಳಿತ್ತು. ಇದೀಗ ಪಿಚ್​ ಅಳವಡಿಕೆಯ ಕಾರ್ಯ ಪೂರ್ಣಗೊಂಡಿದೆ. ಡ್ರಾಪ್-ಇನ್ ಪಿಚ್​ ಫುಟ್‌ಬಾಲ್, ರಗ್ಬಿ ಮತ್ತು ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲು ಅನುವು ಮಾಡಿಕೊಡುತ್ತದೆ.

ವಿಶ್ವಕಪ್ ಟೂರ್ನಿಗೆ ಅಮೆರಿಕದ ಮೂರು ಸ್ಟೇಡಿಯಂಗಳು ಆತಿಥ್ಯ ವಹಿಸಿವೆ. ಇಲ್ಲಿ 16 ಪಂದ್ಯಗಳು ನಡೆಯಲಿದೆ. ಈ ಮೈದಾನಕ್ಕೆ ಆಸ್ಟ್ರೇಲಿಯಾದಿಂದ ತರಿಸಲಾದ ಡ್ರಾಪ್ ಇನ್ ಪಿಚ್ ಬಳಸಲಾಗುತ್ತದೆ. ಪಿಚ್ ಸಂಪೂರ್ಣವಾಗಿ ಅಡಿಲೇಡ್‌ನಲ್ಲಿ ತಯಾರಿಸಲಾಗಿದ್ದು, ಅದನ್ನು ಹಡಗಿನಲ್ಲೇ 22,500 ಕಿಲೋಮೀಟರ್ ದೂರದ ಫ್ಲೋರಿಡಾ ಮೂಲಕ ನ್ಯೂಯಾರ್ಕ್‌ಗೆ ತರಲಾಗಿದೆ. ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಇದನ್ನೂ ಓದಿ T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

ಟಿ20 ವಿಶ್ವಕಪ್​ಗಾಗಿಯೇ ನ್ಯೂಯಾರ್ಕ್​ನಲ್ಲಿ ತಾತ್ಕಾಲಿಕವಾಗಿ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium) ನಿರ್ಮಾಣ ಮಾಡಲಾಗಿದೆ.  34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಿನ ಹೈ-ವೋಲ್ಟೇಜ್ ಘರ್ಷಣೆ ಸೇರಿದಂತೆ ಭಾರತದ ಎಲ್ಲಾ ಗುಂಪು-ಹಂತದ ಪಂದ್ಯಗಳಿಗೆ ಈ ಕ್ರೀಡಾಂಗಣವು ಅಣಿಯಾಗಿದೆ.

Continue Reading

ಕ್ರೀಡೆ

IPL 2024: ಶತಕ ಬಾರಿಸಿ ಟಿ20ಯಲ್ಲಿ ದಾಖಲೆ ಬರೆದ ಸೂರ್ಯಕುಮಾರ್ ಯಾದವ್​​

IPL 2024: ಟಿ20ಯಲ್ಲಿ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಆಟಗಾರ ಎನ್ನುವ ದಾಖಲೆ ವಿರಾಟ್​ ಕೊಹ್ಲಿಯ ಹೆಸರಿನಲ್ಲಿದೆ. ವಿರಾಟ್​ 9 ಶತಕ ಬಾರಿಸಿದ್ದಾರೆ. ಇದರಲ್ಲಿ 7 ಶತಕ ಐಪಿಎಲ್​ನಿಂದ ಮೂಡಿ ಬಂದಿದೆ. ಇನ್ನೆರಡು ಶತಕ ಭಾರತ ಪರ ದಾಖಲಾಗಿದೆ.

VISTARANEWS.COM


on

IPL 2024
Koo

ಮುಂಬಯಿ: ಸೋಮವಾರ ರಾತ್ರಿ ನಡೆದ ಐಪಿಎಲ್​ನ(IPL 2024) 55ನೇ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್​(Suryakumar Yadav) ಅವರು ಶತಕ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಆಟಗಾರರ ಪೈಕಿ ಜಂಟಿ ಮೂರನೇ ಸ್ಥಾನ ಪಡೆದಿದ್ದಾರೆ. ಇದು ಸೂರ್ಯ ಅವರ 6ನೇ ಟಿ20 ಶತಕವಾಗಿದೆ.

ಟಿ20ಯಲ್ಲಿ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಆಟಗಾರ ಎನ್ನುವ ದಾಖಲೆ ವಿರಾಟ್​ ಕೊಹ್ಲಿಯ ಹೆಸರಿನಲ್ಲಿದೆ. ವಿರಾಟ್​ 9 ಶತಕ ಬಾರಿಸಿದ್ದಾರೆ. ಇದರಲ್ಲಿ 7 ಶತಕ ಐಪಿಎಲ್​ನಿಂದ ಮೂಡಿ ಬಂದಿದೆ. ಇನ್ನೆರಡು ಶತಕ ಭಾರತ ಪರ ದಾಖಲಾಗಿದೆ. 8 ಶತಕ ಬಾರಿಸಿದ ಹಿಟ್​ ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ ದ್ವಿತೀಯ ಸ್ಥಾನಿಯಾಗಿದ್ದಾರೆ. ಋತುರಾಜ್​ ಗಾಯಕ್ವಾಡ್​, ಕೆ.ಎಲ್​ ರಾಹುಲ್​ ಮತ್ತು ಸೂರ್ಯಕುಮಾರ್​ ತಲಾ 6 ಶತಕ ಬಾರಿಸಿ ಜಂಟಿ ಮೂರನೇ ಸ್ಥಾನ ಪಡೆದಿದ್ದಾರೆ.

ಅತ್ಯಧಿಕ ಶತಕ ಬಾರಿಸಿದ ಭಾರತೀಯ ಬ್ಯಾಟರ್​ಗಳು


ವಿರಾಟ್​ ಕೊಹ್ಲಿ-9 ಶತಕ

ರೋಹಿತ್​ ಶರ್ಮ-8 ಶತಕ

ಕೆ.ಎಲ್​ ರಾಹುಲ್​-6 ಶತಕ

ಋತುರಾಜ್​ ಗಾಯಕ್ವಾಡ್​-6 ಶತಕ

ಸೂರ್ಯಕುಮಾರ್​ ಯಾದವ್​-6 ಶತಕ

ಸೂರ್ಯಕುಮಾರ್ ಯಾದವ್ ಅವರು ಹೈದರಾಬಾದ್​ ವಿರುದ್ಧ 51 ಎಸೆತ ಎದುರಿಸಿ 6 ಸಿಕ್ಸರ್​ ಮತ್ತು 12 ಬೌಂಡರಿ ಬಾರಿಸಿ ಅಜೇಯ 102 ರನ್​ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ವಾಂಖೆಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್​ ಗೆದ್ದ ಮುಂಬಯಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಸನ್​ ರೈಸರ್ಸ್​ ತಂಡ ತನ್ನ ಪಾಲಿನ 20 ಓವರ್​ಗಳಲ್ಲಿ 8 ವಿಕೆಟ್​ಗೆ 173 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬೈ ತಂಡ ಆರಂಭಿಕ ಹಿನ್ನಡೆ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಅವರ ಅದ್ಭುತ್ ಇನಿಂಗ್ಸ್​ ನೆರವಿನಿಂದ ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿ ಗೆಲುವು ಸಾಧಿಸಿತು.

ಇದನ್ನೂ ಓದಿ IPL 2024 Points Table: ಕೊನೆಯ ಸ್ಥಾನದಿಂದ ಮೇಲೆದ್ದ ಮುಂಬೈ ಇಂಡಿಯನ್ಸ್​

ಮುಂಬೈ ಇಂಡಿಯನ್ಸ್(Mumbai Indians )​ ಈ ಗೆಲುವಿನಿಂದ ಅಂಕಪಟ್ಟಿಯಲ್ಲಿ(IPL 2024 Points Table) ಕೊನೆಯ ಸ್ಥಾನದಿಂದ ಮೇಲೆದ್ದು 9ನೇ ಸ್ಥಾನಿಯಾಗಿದೆ. ಹಾಲಿ ರನ್ನರ್​ ಅಪ್​ ಗುಜರಾತ್​ ಟೈಟಾನ್ಸ್​ ಕೊನೆಯ ಸ್ಥಾನಕ್ಕೆ ಕುಸಿದಿದೆ. ಹೈದರಾಬಾದ್​ ಸೋಲು ಕಂಡರೂ ಈ ಹಿಂದಿನಂತೆ ನಾಲ್ಕನೇ ಸ್ಥಾನದಲ್ಲೇ ಮುಂದುವರಿದಿದೆ. ಇಂದು ನಡೆಯುವ ಪಂದ್ಯಲ್ಲಿ ರಾಜಸ್ಥಾನ್​ ರಾಯಲ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ಮುಖಾಮುಖಿಯಾಗಲಿದೆ. ಡೆಲ್ಲಿಗೆ ಪ್ಲೇ ಆಫ್​ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ರಾಜಸ್ಥಾನ್​ ಗೆದ್ದರೆ ಮೊದಲ ತಂಡವಾಗಿ ಪ್ಲೇ ಆಫ್​ಗೆ ಅಧಿಕೃತ ಎಂಟ್ರಿ ಕೊಡಲಿದೆ.

Continue Reading

ಕ್ರೀಡೆ

IPL 2024 Points Table: ಕೊನೆಯ ಸ್ಥಾನದಿಂದ ಮೇಲೆದ್ದ ಮುಂಬೈ ಇಂಡಿಯನ್ಸ್​

IPL 2024 Points Table: ಇಂದು ನಡೆಯುವ ಪಂದ್ಯಲ್ಲಿ ರಾಜಸ್ಥಾನ್​ ರಾಯಲ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ಮುಖಾಮುಖಿಯಾಗಲಿದೆ. ಡೆಲ್ಲಿಗೆ ಪ್ಲೇ ಆಫ್​ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ರಾಜಸ್ಥಾನ್​ ಗೆದ್ದರೆ ಮೊದಲ ತಂಡವಾಗಿ ಪ್ಲೇ ಆಫ್​ಗೆ ಅಧಿಕೃತ ಎಂಟ್ರಿ ಕೊಡಲಿದೆ.

VISTARANEWS.COM


on

IPL 2024 Points Table
Koo

ಮುಂಬಯಿ: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸಿದ 5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್(Mumbai Indians )​ ಅಂಕಪಟ್ಟಿಯಲ್ಲಿ(IPL 2024 Points Table) ಕೊನೆಯ ಸ್ಥಾನದಿಂದ ಮೇಲೆದ್ದು 9ನೇ ಸ್ಥಾನಿಯಾಗಿದೆ. ಹಾಲಿ ರನ್ನರ್​ ಅಪ್​ ಗುಜರಾತ್​ ಟೈಟಾನ್ಸ್​ ಕೊನೆಯ ಸ್ಥಾನಕ್ಕೆ ಕುಸಿದಿದೆ. ಹೈದರಾಬಾದ್​ ಸೋಲು ಕಂಡರೂ ಈ ಹಿಂದಿನಂತೆ ನಾಲ್ಕನೇ ಸ್ಥಾನದಲ್ಲೇ ಮುಂದುವರಿದಿದೆ.

ಇಂದು ನಡೆಯುವ ಪಂದ್ಯಲ್ಲಿ ರಾಜಸ್ಥಾನ್​ ರಾಯಲ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ಮುಖಾಮುಖಿಯಾಗಲಿದೆ. ಡೆಲ್ಲಿಗೆ ಪ್ಲೇ ಆಫ್​ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ರಾಜಸ್ಥಾನ್​ ಗೆದ್ದರೆ ಮೊದಲ ತಂಡವಾಗಿ ಪ್ಲೇ ಆಫ್​ಗೆ ಅಧಿಕೃತ ಎಂಟ್ರಿ ಕೊಡಲಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ಕೆಕೆಆರ್​118316 (+1.453)
ರಾಜಸ್ಥಾನ್​ ರಾಯಲ್ಸ್​​​108216 (+0.622)
ಚೆನ್ನೈ​​116514 (+0.700)
ಹೈದರಾಬಾದ್​116512 (-0.065)
ಲಕ್ನೋ​116512 (-0.371)
ಡೆಲ್ಲಿ115610 (-0.442)
ಆರ್​ಸಿಬಿ11478 (-0.049)
ಪಂಜಾಬ್​10468 (-0.062)
ಮುಂಬೈ12488 (-0.212)
ಗುಜರಾತ್​11478 (-1.320)

ಸೂರ್ಯಕುಮಾರ್ ಯಾದವ್ (Suryakumar Yadav) ಬಾರಿಸಿದ ಸ್ಫೋಟಕ ಶತಕ (102,51 ಎಸೆತ, 12 ಫೋರ್, 6 ಸಿಕ್ಸರ್​) ಹಾಗೂ ಬೌಲರ್​ಗಳ ಸಂಘಟಿತ ಹೋರಾಟದಿಂದ ಮಿಂಚಿದ ಮುಂಬೈ ಇಂಡಿಯನ್ಸ್​ (Mumbai Indians) ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 55ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad)​ ವಿರುದ್ಧ 7 ವಿಕೆಟ್​ ಸುಲಭ ವಿಜಯ ದಾಖಲಿಸಿದೆ. ಈ ಮೂಲಕ ಸೂರ್ಯನ ಪ್ರತಾಪಕ್ಕೆ ಸನ್​​ ಮಂಕಾಗಿ ಹೋಯಿತು. 

ಇದನ್ನೂ ಓದಿ IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

ವಾಂಖೆಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್​ ಗೆದ್ದ ಮುಂಬಯಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಸನ್​ ರೈಸರ್ಸ್​ ತಂಡ ತನ್ನ ಪಾಲಿನ 20 ಓವರ್​ಗಳಲ್ಲಿ 8 ವಿಕೆಟ್​ಗೆ 173 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬೈ ತಂಡ ಆರಂಭಿಕ ಹಿನ್ನಡೆ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಅವರ ಅದ್ಭುತ್ ಇನಿಂಗ್ಸ್​ ನೆರವಿನಿಂದ ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿ ಗೆಲುವು ಸಾಧಿಸಿತು.

Continue Reading

ಪ್ರಮುಖ ಸುದ್ದಿ

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

Rohit Sharma: ನಾಯಕತ್ವದ ಹೊರೆ ರೋಹಿತ್ ಶರ್ಮಾ ಅವರ ಹೆಗಲ ಮೇಲಿದ್ದ ಅವಧಿಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯಾಟರ್​​ ಆಗಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವ ನಿರೀಕ್ಷೆಯ ದೊಡ್ಡ ಹೊರೆಯನ್ನು ಅವರು ಹೊಂದಿದ್ದರು. ವಿಶೇಷವೆಂದರೆ, ರೋಹಿತ್ 5 ಐಪಿಎಲ್ ಚಾಂಪಿಯನ್​ಶಿಪ್​ ಗೆದ್ದಿದ್ದರಿಂದ ಮುಂಬೈ ಇಂಡಿಯನ್ಸ್ ಪರ ಅತ್ಯಂತ ಯಶಸ್ವಿ ನಾಯಕ ಕೂಡ ಔದು. ಆದರೆ ಇದೀಗ ಬ್ಯಾಟಿಂಗ್​ನಲ್ಲಿ ಅವರ ಪ್ರದರ್ಶನವು ಕಡಿಮೆಯಾಗಿದೆ.

VISTARANEWS.COM


on

Rohit Sharma
Koo

ಮುಂಬಯಿ: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ (IPL 2024) ಮತ್ತೊಮ್ಮೆ ಬ್ಯಾಟಿಂಗ್​ನಲ್ಲಿ ವಿಫಲವಾದ ನಂತರ ಮುಂಬೈ ಇಂಡಿಯನ್ಸ್ (Mumbai Indians) ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಭಾವುಕರಾದ ಘಟನೆ ನಡೆಯಿತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪ್ಯಾಟ್ ಕಮಿನ್ಸ್ (Pat Cummins) ನೇತೃತ್ವದ ಸನ್​ರೈಸರ್ಸ್​ ಹೈದರಾಬಾದ್ (SRH) ವಿರುದ್ಧದ ಪಂದ್ಯದ 55ನೇ ಪಂದ್ಯದಲ್ಲಿ ಅವರಿಗೆ ಉತ್ತಮವಾಗಿ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ. ಮುಂಬೈ ಇಂಡಿಯನ್ಸ್ (MI) ಅವರ ಬದಲಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡಲು ನಿರ್ಧರಿಸಿದ್ದರಿಂದ ರೋಹಿತ್ ಶರ್ಮಾ 2024 ರ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಉತ್ತಮ ಬ್ಯಾಟಿಂಗ್ ಮಾಡಿಲ್ಲ.

ನಾಯಕತ್ವದ ಹೊರೆ ರೋಹಿತ್ ಶರ್ಮಾ ಅವರ ಹೆಗಲ ಮೇಲಿದ್ದ ಅವಧಿಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯಾಟರ್​​ ಆಗಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವ ನಿರೀಕ್ಷೆಯ ದೊಡ್ಡ ಹೊರೆಯನ್ನು ಅವರು ಹೊಂದಿದ್ದರು. ವಿಶೇಷವೆಂದರೆ, ರೋಹಿತ್ 5 ಐಪಿಎಲ್ ಚಾಂಪಿಯನ್​ಶಿಪ್​ ಗೆದ್ದಿದ್ದರಿಂದ ಮುಂಬೈ ಇಂಡಿಯನ್ಸ್ ಪರ ಅತ್ಯಂತ ಯಶಸ್ವಿ ನಾಯಕ ಕೂಡ ಔದು. ಆದರೆ ಇದೀಗ ಬ್ಯಾಟಿಂಗ್​ನಲ್ಲಿ ಅವರ ಪ್ರದರ್ಶನವು ಕಡಿಮೆಯಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಬಾರಿಸುವ ಮೂಲಕ ಟೂರ್ನಿಯಲ್ಲಿ ಉತ್ತಮ ಆರಂಭ ಕಂಡಿದದ್ದರು. ಮುಂಬೈ ಇಂಡಿಯನ್ಸ್ ಪರ ಮೊದಲ 7 ಪಂದ್ಯಗಳಲ್ಲಿ ರೋಹಿತ್ ಶರ್ಮಾ 49.5 ಸರಾಸರಿಯಲ್ಲಿ 297 ರನ್ ಗಳಿಸಿದ್ದಾರೆ. ಆದಾಗ್ಯೂ, ಅವರ ಫಾರ್ಮ್ ಯು-ಟರ್ನ್ ತೆಗೆದುಕೊಂಡಿತು ಮತ್ತು ಮುಂದಿನ 5 ಪಂದ್ಯಗಳಲ್ಲಿ ಅವರು ದಯನೀಯವಾಗಿ ವಿಫಲರಾಗಿದ್ದಾರೆ. 6.6 ಸರಾಸರಿ ಮತ್ತು 94.3 ಸ್ಟ್ರೈಕ್ ರೇಟ್​ನಲ್ಲಿ ಕೇವಲ 33 ರನ್ ಗಳಿಸಿದರು.

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 5 ಎಸೆತಗಳಲ್ಲಿ ಕೇವಲ 4 ರನ್ ಗಳಿಸಿದ್ದರು. 4ನೇ ಓವರ್​ನ 2ನೇ ಎಸೆತದಲ್ಲಿ ಕಮಿನ್ಸ್ ಎಸೆತಕ್ಕೆ ಜೋರಾಗಿ ಬಾರಿಸಲು ಹೋಗಿ ಔಟಾದರು. ಹೆನ್ರಿಕ್ ಕ್ಲಾಸೆನ್ ಯಾವುದೇ ತಪ್ಪು ಮಾಡಲಿಲ್ಲ. ಶರ್ಮಾ ಅವರನ್ನು ಔಟ್ ಮಾಡಲು ಸರಳ ಕ್ಯಾಚ್ ಪೂರ್ಣಗೊಳಿಸಿದರು.

ಪ್ಯಾಟ್ ಕಮಿನ್ಸ್ ಟಿ 20 ಪಂದ್ಯಗಳಲ್ಲಿ ರೋಹಿತ್ ಶರ್ಮಾ ಅವರನ್ನು ಔಟ್ ಮಾಡಿದ್ದು ಇದು ನಾಲ್ಕನೇ ಬಾರಿ. ಒಟ್ಟಾರೆಯಾಗಿ, 9 ಇನ್ನಿಂಗ್ಸ್ ಗಳಲ್ಲಿ, ಅವರು ಕಮಿನ್ಸ್ ವಿರುದ್ಧ 41 ಎಸೆತಗಳಲ್ಲಿ 14.25 ಸರಾಸರಿಯಲ್ಲಿ 57 ರನ್ ಗಳಿಸಿದ್ದಾರೆ.

ಪಂದ್ಯದಲ್ಲಿ ಮುಂಬಯಿಗೆ ಭರ್ಜರಿ ವಿಜಯ

ಮುಂಬಯಿ: ಸೂರ್ಯಕುಮಾರ್ ಯಾದವ್ (Suryakumar Yadav) ಬಾರಿಸಿದ ಸ್ಫೋಟಕ ಶತಕ (102,51 ಎಸೆತ, 12 ಫೋರ್, 6 ಸಿಕ್ಸರ್​) ಹಾಗೂ ಬೌಲರ್​ಗಳ ಸಂಘಟಿತ ಹೋರಾಟದಿಂದ ಮಿಂಚಿದ ಮುಂಬೈ ಇಂಡಿಯನ್ಸ್​ (Mumbai Indians) ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 55ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad)​ ವಿರುದ್ಧ 7 ವಿಕೆಟ್​ ಸುಲಭ ವಿಜಯ ದಾಖಲಿಸಿದೆ. ಈ ಮೂಲಕ ಸೂರ್ಯನ ಪ್ರತಾಪಕ್ಕೆ ಸನ್​​ ಮಂಕಾಗಿ ಹೋಯಿತು. ಇದು ಮುಂಬಯಿ ತಂಡಕ್ಕೆ ಹಾಲಿ ಆವೃತ್ತಿಯ 12 ಪಂದ್ಯಗಳಲ್ಲಿ 4ನೇ ಗೆಲುವಾಗಿದೆ. ಇದರೊಂದಿಗೆ 10ನೇ ಸ್ಥಾನದಿಂದ ಒಂದು ಸ್ಥಾನ ಮೇಲ್ಕಕೇರಿದೆ. ಇದೇ ವೇಳೆ ಕಳೆದ ಆವೃತ್ತಿಯ ರನ್ನರ್​ ಅಪ್​ ತಂಡ ಗುಜರಾತ್​ ಕೊನೇ ಸ್ಥಾನಕ್ಕೆ ಇಳಿದಿದೆ.

ಇಲ್ಲಿನ ಐತಿಹಾಸಿಕ ವಾಂಖೆಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್​ ಗೆದ್ದ ಮುಂಬಯಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಸನ್​ ರೈಸರ್ಸ್​ ತಂಡ ತನ್ನ ಪಾಲಿನ 20 ಓವರ್​ಗಳಲ್ಲಿ 8 ವಿಕೆಟ್​ಗೆ 173 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬೈ ತಂಡ ಆರಂಭಿಕ ಹಿನ್ನಡೆ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಅವರ ಅದ್ಭುತ್ ಇನಿಂಗ್ಸ್​ ನೆರವಿನಿಂದ ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿ ಗೆಲುವು ಸಾಧಿಸಿತು.

Continue Reading
Advertisement
T20 World Cup 2024
ಕ್ರೀಡೆ15 mins ago

T20 World Cup 2024: ಮಿನಿ ವಿಶ್ವಕಪ್​ ಸಮರಕ್ಕೆ ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಪೂರ್ಣ; ವಿಡಿಯೊ ವೈರಲ್​

Ramana Avatara Movie
ಸಿನಿಮಾ18 mins ago

Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ ‘ರಾಮನ ಅವತಾರ’ ಸಿನಿಮಾ ಟಿಕೆಟ್

Narendra Modi
ದೇಶ20 mins ago

Narendra Modi: ಮತದಾನದ ಬಳಿಕ ಮಗುವನ್ನು ಎತ್ತಿ ಆಡಿಸಿದ ಪ್ರಧಾನಿ ಮೋದಿ; ವಿಡಿಯೋ ನೋಡಿ

IPL 2024
ಕ್ರೀಡೆ59 mins ago

IPL 2024: ಶತಕ ಬಾರಿಸಿ ಟಿ20ಯಲ್ಲಿ ದಾಖಲೆ ಬರೆದ ಸೂರ್ಯಕುಮಾರ್ ಯಾದವ್​​

chikkaballapur road accident
ಕ್ರೈಂ1 hour ago

Road Accident: ಕಲ್ಲು ಸಾಗಿಸುತ್ತಿದ್ದ ಕ್ಯಾಂಟರ್‌ ಪಲ್ಟಿಯಾಗಿ ಮೂವರ ಸಾವು

World Asthma Day
ಆರೋಗ್ಯ1 hour ago

World Asthma Day: ಅಸ್ತಮಾದಿಂದ ಪಾರಾಗಲು ಈ ಸಂಗತಿ ತಿಳಿದುಕೊಂಡಿರಿ

IPL 2024 Points Table
ಕ್ರೀಡೆ1 hour ago

IPL 2024 Points Table: ಕೊನೆಯ ಸ್ಥಾನದಿಂದ ಮೇಲೆದ್ದ ಮುಂಬೈ ಇಂಡಿಯನ್ಸ್​

Lok Sabha Election 2024
Lok Sabha Election 20241 hour ago

Lok Sabha Election 2024: ಮತ ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ; ಮತದಾನ ಮಾಡಲು ಕನ್ನಡದಲ್ಲೇ ಕರೆ

Google doodle
ದೇಶ1 hour ago

Lok Sabha Elections 2024: ಗೂಗಲ್‌ ಡೂಡಲ್‌ನಲ್ಲೂ ಪ್ರಜಾಪ್ರಭುತ್ವ ಹಬ್ಬದ ಸಂಭ್ರಮ

lok sabha electon 2024 voting navadurge
ಪ್ರಮುಖ ಸುದ್ದಿ2 hours ago

Lok Sabha Election 2024: ಮುಂಜಾನೆಯಿಂದಲೇ ಮತದಾನ ಬಿರುಸು, ಎಲ್ಲೆಡೆ ಶಾಂತಿಯುತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ15 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ16 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ16 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌