World Cup: ಜಡೇಜಾ, ಅಶ್ವಿನ್​ ಬಿಟ್ಟು ವಿಶ್ವಕಪ್​ಗೆ ಸ್ಪಿನ್ನರ್​ ಆಯ್ಕೆ ಮಾಡಿದ ಗಂಗೂಲಿ - Vistara News

ಕ್ರಿಕೆಟ್

World Cup: ಜಡೇಜಾ, ಅಶ್ವಿನ್​ ಬಿಟ್ಟು ವಿಶ್ವಕಪ್​ಗೆ ಸ್ಪಿನ್ನರ್​ ಆಯ್ಕೆ ಮಾಡಿದ ಗಂಗೂಲಿ

ಭಾರತೀಯ ಪರಿಸ್ಥಿತಿಗಳಲ್ಲಿ ಮಣಿಕಟ್ಟಿನ ಸ್ಪಿನ್ನರ್​ಗಳು ತಂಡದಲ್ಲಿದ್ದರೆ ಉತ್ತಮ. ಹೀಗಾಗಿ ಯುವ ಸ್ಪಿನ್ನರ್​ ರವಿ ಬಿಷ್ಣೊಯಿ, ಯಜುವೆಂದ್ರ ಚಹಲ್​ ಮತ್ತು ಕುಲ್​ದೀಪ್​ ಯಾದವ್​ ಅವರ ಮೇಲೆ ಬಿಸಿಸಿಐ ಕಣ್ಣಿಡಬೇಕು ಎಂದು ಗಂಗೂಲಿ ಹೇಳಿದ್ದಾರೆ.

VISTARANEWS.COM


on

sourav ganguly
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮುಂಬಯಿ: ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವಕಪ್ ಟೂರ್ನಿಗೆ(ICC World Cup) ತಂಡಗಳ ಸಂಯೋಜನೆ ಹೇಗಿರಬೇಕೆಂದು ಕ್ರಿಕೆಟ್​ ಪಂಡಿತರು ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಆರಂಭಿಸಿದ್ದಾರೆ. ಈ ಪಟ್ಟಿಗೆ ಟೀಮ್​ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್​ ಗಂಗೂಲಿ(Sourav Ganguly) ಕೂಡ ಸೇರಿಕೊಂಡಿದ್ದಾರೆ. ಈ ಬಾರಿಯ ವಿಶ್ವ ಕಪ್​ನಲ್ಲಿ ಬಿಸಿಸಿಐ ಯಾವ ವಿಭಾಗದಲ್ಲಿ ಹೆಚ್ಚಿನ ನಿಗಾ ವಹಿಸಿಬೇಕೆಂದು ಅತ್ಯಮೂಲ್ಯ ಸಲಹೆಯೊಂದನ್ನು ನೀಡಿದ್ದಾರೆ.

ವಿಶ್ವ ಕಪ್​ಗೆ ತಂಡದ ಆಯ್ಕೆ ಹೇಗಿರಬೇಕು, ಯಾವ ಆಟಗಾರರನ್ನು ಆಡಿಸಿದರೆ ಸೂಕ್ತ ಎಂಬ ವಿಚಾರವಾಗಿ ಮಾತನಾಡಿರುವ ಗಂಗೂಲಿ, ಭಾರತೀಯ ಪರಿಸ್ಥಿತಿಗಳಲ್ಲಿ ಮಣಿಕಟ್ಟಿನ ಸ್ಪಿನ್ನರ್​ಗಳು ತಂಡದಲ್ಲಿದ್ದರೆ ಉತ್ತಮ. ಹೀಗಾಗಿ ಯುವ ಸ್ಪಿನ್ನರ್​ ರವಿ ಬಿಷ್ಣೊಯಿ, ಯಜುವೆಂದ್ರ ಚಹಲ್​ ಮತ್ತು ಕುಲ್​ದೀಪ್​ ಯಾದವ್​ ಅವರ ಮೇಲೆ ಬಿಸಿಸಿಐ ಮತ್ತು ಆಯ್ಕೆ ಸಮಿತಿ ವಿಶೇಷ ನಿಗಾ ಇರಿಸಿಕೊಳ್ಳಬೇಕು, ಅದರಲ್ಲೂ ಚಹಲ್​ ಅನೇಕ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ಅನುಭವವಿದೆ. ಆದರೆ ಇತ್ತೀಚೆಗೆ ಅವರಿಗೆ ಹೆಚ್ಚಿನ ಅವಕಾಶಗಳು ಲಭಿಸುತ್ತಿಲ್ಲ. ನನ್ನ ಪ್ರಕಾರ ಭಾರತದಲ್ಲಿ ಅವರು ಉತ್ತಮ ಬೌಲಿಂಗ್​ ನಡೆಸುವ ಸಾಮರ್ಥ್ಯಹೊಂದಿದ್ದಾರೆ. ಹೀಗಾಗಿ ಅವರನ್ನು ಮೊದಲ ಸ್ಪಿನ್​ ಆಯ್ಕೆಯಾಗಿ ಪರಿಗಣಿಸಬೇಕು ಎಂದಿದ್ದಾರೆ. ಗಂಗೂಲಿ ಹೇಳಿಕೆ ಗಮನಿಸುವಾಗ ರವೀಂದ್ರ ಜಡೇಜಾ ಮತ್ತು ಆರ್​. ಅಶ್ವಿನ್​ ಅವರನ್ನು ವಿಶ್ವ ಕಪ್​ ತಂಡದಿಂದ ಕೈ ಬಿಡಬೇಕು ಎಂಬಂತೆ ತೋರುತ್ತಿದೆ.

“ಆಸ್ಟ್ರೇಲಿಯಾ, ಇಂಗ್ಲೆಂಡ್ ಅಥವಾ ದಕ್ಷಿಣ ಆಫ್ರಿಕಾ ವಿರುದ್ಧ ಆಡುವಾಗ ಮಣಿಕಟ್ಟಿನ ಸ್ಪಿನ್ನರ್ ಇದ್ದರೆ ತಂಡಕ್ಕೆ ಹೆಚ್ಚಿನ ಲಾಭ. ಇದಕ್ಕೆ 2011 ರಲ್ಲಿ ಪಿಯೂಷ್ ಚಾವ್ಲಾ ಅವರ ಆಯ್ಕೆಯೇ ಉತ್ತಮ ನಿದರ್ಶನ. ಅವರು ಆ ವಿಶ್ವಕಪ್​ನಲ್ಲಿ ಹರ್ಭಜನ್​ ಜತೆ ಉತ್ತಮ ಬೌಲಿಂಗ್ ಮಾಡಿದ್ದರು” ಎಂದು ಗಂಗೂಲಿ ಹೇಳಿದರು.

ಇದನ್ನೂ ಓದಿ ICC World Cup 2023: ಏಕದಿನ ವಿಶ್ವಕಪ್ ಪಂದ್ಯಗಳ ಟಿಕೆಟ್ ಮಾರಾಟಕ್ಕೆ ದಿನಾಂಕ ಫಿಕ್ಸ್​

“ನಾವು 2007 ರಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರವಾಸ ಹೋದಾಗ ವೇಗದ ಬೌಲರ್‌ಗಳ ಜತೆಗೆ ನಮ್ಮ ತಂಡ ಮಣಿಕಟ್ಟಿನ ಸ್ಪಿನ್ನರ್‌ಗಳಿಗೆ ಪ್ರಮುಖ ಆದ್ಯತೆ ನೀಡಿದ್ದೆವು. ಇದು ನಮಗೆ ಉತ್ತಮ ಫಲಿತಾಂಸ ದಾಖಲಿಸಲು ಸಾಧ್ಯವಾಯಿತು. ಹರ್ಭಜನ್​ ಸಿಂಗ್​ ಈ ಅಸರಣಿಯಲ್ಲಿ ಉತ್ತಮ ಬೌಲಿಂಗ್ ದಾಳಿ ನಡೆಸಿದ್ದರು. ಭಾರತೀಯ ಪರಿಸ್ಥಿತಿಗಳಲ್ಲಿ ಮಣಿಕಟ್ಟಿನ ಸ್ಪಿನ್ನರ್​ಗಳು ತಂಡದಲ್ಲಿದ್ದರೆ ಒಳಿತು” ಎಂದು ಗಂಗೂಲಿ ಬಿಸಿಸಿಐಗೆ ಸೂಕ್ತ ಸಲಹೆಯೊಂದನ್ನು ನೀಡಿದ್ದಾರೆ.

ಭಾರತ ತಂಡ ತನ್ನ ವಿಶ್ವ ಕಪ್​ ಅಭಿಯಾನವನ್ನು ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ. ಈ ಪಂದ್ಯ ಅಕ್ಟೋಬರ್​ 8 ರಂದು ಚೆನ್ನೈಯಲ್ಲಿ ನಡೆಯಲಿದೆ. ಸಾಂಪ್ರದಾಯಿಕ ಬದ್ದ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೆಣಸಾಟ ನಡೆಸಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಹಾರ್ದಿಕ್ ವಿರುದ್ಧ ಅಸಮಾಧಾನ: ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಸಹೋದರ ಕೃನಾಲ್ ಪಾಂಡ್ಯ.

VISTARANEWS.COM


on

ಭಾರತೀಯ ಕ್ರಿಕೆಟ್ ಲೋಕದ ಫೇಮಸ್ ‘ಪಾಂಡ್ಯ ಬ್ರದರ್ಸ್’ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವದಂತಿಗಳು ಇತ್ತೀಚಿನ ದಿನಗಳಲ್ಲಿ ಜೋರಾಗಿ ಕೇಳಿಬರುತ್ತಿವೆ. ಈ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿರುವ ದೊಡ್ಡಣ್ಣ ಕೃನಾಲ್ ಪಾಂಡ್ಯ, ಆರ್‌ಸಿಬಿ ಇನ್‌ಸೈಡರ್ ಮಿಸ್ಟರ್ ನ್ಯಾಗ್ಸ್ ಜೊತೆಗಿನ ಸಂದರ್ಶನದಲ್ಲಿ ಮಾರ್ಮಿಕವಾಗಿ ಉತ್ತರಿಸಿದ್ದಾರೆ. ತಮ್ಮ ಸಹೋದರ ಹಾರ್ದಿಕ್ ಪಾಂಡ್ಯ ಅವರೊಂದಿಗಿನ ಭಿನ್ನಾಭಿಪ್ರಾಯದ ಬಗ್ಗೆ ನೇರವಾದ ಉತ್ತರ ನೀಡದಿದ್ದರೂ, “ಕುಟುಂಬದಲ್ಲಿ ಹಲವು ಸದಸ್ಯರಿರುತ್ತಾರೆ, ಕೆಲವೊಮ್ಮೆ ಕೆಲವರನ್ನು ಮಿಸ್ ಮಾಡಿಕೊಳ್ಳಬೇಕಾಗುತ್ತದೆ” ಎಂದು ಹೇಳುವ ಮೂಲಕ ಇಬ್ಬರ ನಡುವೆ ಬಿರುಕು ಮೂಡಿರುವ ಸುಳಿವು ನೀಡಿದ್ದಾರೆ.

ಒಂದು ಕಾಲದಲ್ಲಿ ಮುಂಬೈ ಇಂಡಿಯನ್ಸ್ ಪರ ಒಟ್ಟಾಗಿ ಕಣಕ್ಕಿಳಿಯುತ್ತಿದ್ದ ಈ ಸಹೋದರರು ಈಗ ಬೇರೆ ಬೇರೆ ತಂಡಗಳಲ್ಲಿದ್ದಾರೆ. ಹಾರ್ದಿಕ್ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದರೆ, ಕೃನಾಲ್ ಬೆಂಗಳೂರು ತಂಡದ ಪರ ಆಡುತ್ತಿದ್ದಾರೆ. ಆದರೆ ಇತ್ತೀಚೆಗೆ ಹಾರ್ದಿಕ್ ಅವರು ನತಾಶಾ ಅವರಿಂದ ವಿಚ್ಛೇದನ ಪಡೆದ ಬಳಿಕ ಮಹಿಕಾ ಶರ್ಮಾ ಜೊತೆಗಿನ ಒಡನಾಟ ಬೆಳೆಸಿಕೊಂಡಿರುವುದು ಮತ್ತು ಆ ನಂತರ ಹಾರ್ದಿಕ್ ವರ್ತನೆಯಲ್ಲಿ ಬದಲಾವಣೆ ಆಗಿರುವುದು ಈ ಸಹೋದರರ ನಡುವಿನ ಕಿರಿಕ್‌ಗೆ ಮುಖ್ಯ ಕಾರಣ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಹಿಂದೆ ಮುಂಬೈ ಮತ್ತು ಆರ್‌ಸಿಬಿ ಪಂದ್ಯದಲ್ಲಿ ಹಾರ್ದಿಕ್ ವಿಕೆಟ್ ಬಿದ್ದಾಗ ಕೃನಾಲ್ ಅತಿಯಾಗಿ ಸಂಭ್ರಮಿಸಿದ್ದು ಕೂಡ ಈ ವದಂತಿಗಳಿಗೆ ಪುಷ್ಟಿ ನೀಡುವಂತಿದೆ.

ಸಂದರ್ಶನದ ವೇಳೆ ಮಿಸ್ಟರ್ ನ್ಯಾಗ್ಸ್ ಅವರು ಡಬ್ಲ್ಯೂಡಬ್ಲ್ಯೂಇ (WWE) ಖ್ಯಾತಿಯ ಕೇನ್ ಮತ್ತು ಅಂಡರ್‌ಟೇಕರ್ ಅವರ ಉದಾಹರಣೆ ನೀಡಿ, “ನಿಮ್ಮಿಬ್ಬರ ಮಧ್ಯೆ ಫೈಟ್ ನಡೆಯುತ್ತಿದೆಯೇ?” ಎಂದು ಕೇಳಿದಾಗ ಕೃನಾಲ್ “ಆಲ್ ಓಕೆ” ಎಂದು ನಗುತ್ತಲೇ ಉತ್ತರಿಸಿದ್ದಾರೆ. ಆದರೆ ಅವರ ನಗು ಮತ್ತು ಮಾತುಗಳ ಹಿಂದೆ ಅಸಮಾಧಾನದ ಛಾಯೆ ಇರುವುದು ಅಭಿಮಾನಿಗಳ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಮಾತಿಗಷ್ಟೇ ಕೃನಾಲ್ ಎಲ್ಲವೂ ಸರಿಯಿದೆ ಎಂದಿದ್ದಾರೋ ಅಥವಾ ನಿಜವಾಗಿಯೂ ಇಬ್ಬರ ನಡುವಿನ ಮನಸ್ತಾಪ ಬಗೆಹರಿದಿದೆಯೋ ಎಂಬ ಕುತೂಹಲ ಈಗ ಕ್ರಿಕೆಟ್ ವಲಯದಲ್ಲಿ ತೀವ್ರವಾಗಿದೆ.

Continue Reading

ಬೆಂಗಳೂರು

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ; ಫೈನಲ್‌ ಮ್ಯಾಚ್‌ ಗೆದ್ದ ಕೊಲ್ಕತ್ತಾ ರೀಜನ್‌ ಶಾಲೆ ಮಕ್ಕಳು

ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿದ್ಯಾಲಯ ಆರ್‌ಡಬ್ಲ್ಯೂ ಎಫ್‌ನಲ್ಲಿ 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ 2024-25ರ (KVS Sports Meet) ಮುಕ್ತಾಯಗೊಂಡಿದೆ. ಬಾಲಕರ ರೋಚಕ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಕೊಲ್ಕತ್ತಾ ರೀಜನ್‌ ಶಾಲೆ ಮಕ್ಕಳು ಮೊದಲ ಸ್ಥಾನ ಗಳಿಸಿದ್ದಾರೆ.

VISTARANEWS.COM


on

53rd KVS National Games Kolkata Region School children win final match

ಬೆಂಗಳೂರು: ಬೆಂಗಳೂರಿನ ಯಲಹಂಕ ಕೇಂದ್ರೀಯ ವಿದ್ಯಾಲಯದಲ್ಲಿ ಸೆ. 30 ರಿಂದ ಅ. 6 ರವರೆಗೆ 53ನೇ ರಾಷ್ಟ್ರೀಯ ಕ್ರೀಡಾಕೂಟ ನಡೆಸಲಾಯಿತು. ಕ್ರೀಡೆಯಲ್ಲಿ ಹಲವಾರು ಆಟಗಳಿವೆ. ಅದರಲ್ಲಿ ಕ್ರಿಕೆಟ್ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ದೇಶದ ನಾನಾ ರಾಜ್ಯಗಳಿಂದ ಅಂದರೆ ಒಟ್ಟು 18 ರಾಜ್ಯಗಳಿಂದ ಮಕ್ಕಳು ಕ್ರಿಕೆಟ್ ಆಡಲು ಕೆ .ವಿ .ಆರ್ ಡಬ್ಲ್ಯೂ ಎಫ್‌ಗೆ ಬಂದಿದ್ದರು. ಒಟ್ಟು 269 ಶಾಲೆಯ ಮಕ್ಕಳು ನಾಲ್ಕು ವಿವಿಧ ಆಟದ ಮೈದಾನದಲ್ಲಿ ತಮ್ಮ ಉತ್ತಮ ಪ್ರದರ್ಶನವನ್ನು ಪ್ರದರ್ಶಿಸಿದರು. ಅ.6 ರಂದು ಫೈನಲ್ ಮ್ಯಾಚ್‌ ನಡೆಸಲಾಯಿತು.

ಪ್ರಥಮ ಸ್ಥಾನವನ್ನು ಕೊಲ್ಕತ್ತಾ ರೀಜನ್ ಶಾಲೆ ಮಕ್ಕಳು ಮತ್ತು ದ್ವಿತೀಯ ಸ್ಥಾನವನ್ನು ಜಬಲ್ ಪುರ್ ರೀಜನ್ ಶಾಲೆ ಮಕ್ಕಳು ಗಳಿಸಿಕೊಂಡರು. ನಂತರ ಶಾಲೆ ಆವರಣದಲ್ಲಿ ಮಧ್ಯಾಹ್ನ 12 ಗಂಟೆಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ ಪಿ. ದೇವಕುಮಾರ್(ಜಂಟಿ ಆಯುಕ್ತ ಕೆ ವಿ ಎಸ್ ಪ್ರಧಾನ ಕಛೇರಿ) ಹಾಗೂ ವಿಶೇಷ ಅತಿಥಿಗಳಾಗಿ ಧರ್ಮೇಂದ್ರ ಪಟ್ಲೆ. (ಉಪ ಆಯುಕ್ತ ಕೆ ವಿ ಎಸ್ ಬೆಂಗಳೂರು), ಆರ್ ಪ್ರಮೋದ್.(ಸಹಾಯಕ ಆಯುಕ್ತ ಕೆ ವಿ ಎಸ್ ಬೆಂಗಳೂರು), ಹೇಮಾ ಕೆ( ಸಹಾಯಕ ಆಯುಕ್ತ ) ಆಗಮಿಸಿದ್ದರು.

ಅತಿಥಿಗಳಿಗೆ ಶಾಲೆಯ ವರ್ಣ ರಂಜಿತಾ NCC ಬ್ಯಾಂಡ್ ತಂಡದ ಮಕ್ಕಳು ಸ್ವಾಗತ ಕೋರಿದರು. ಗಾಯನ ತಂಡದಿಂದ ಸ್ವಾಗತ ಗಾಯನವನ್ನು ಹಾಡಿದರು ನಂತರ ಸ್ವಾಗತ ಭಾಷಣವನ್ನು ಧರ್ಮೇಂದ್ರ ಪಟ್ಲೆ ಮಾಡಿದರು. ನೃತ್ಯ ತಂಡದಿಂದ ಮಕ್ಕಳು ಸ್ವಾಗತ ನೃತ್ಯವನ್ನು ಮಾಡಿದರು.

Continue Reading

ಬೆಂಗಳೂರು

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ; ಮೈದಾನದಲ್ಲಿ ಬಾಲಕರ ರೋಚಕ ಕ್ರಿಕೆಟ್

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ಮೈದಾನದಲ್ಲಿ ಬಾಲಕರ ಕ್ರಿಕೆಟ್ ರೋಚಕವಾಗಿತ್ತು.

VISTARANEWS.COM


on

53rd KVS National Games inaugurated

ಬೆಂಗಳೂರು: 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ 2024-25ಕ್ಕೆ (KVS Sports Meet) ಸೋಮವಾರ ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿದ್ಯಾಲಯ ಆರ್‌ಡಬ್ಲ್ಯೂ ಎಫ್‌ನಲ್ಲಿ ಚಾಲನೆ ನೀಡಲಾಯಿತು. 14 ವರ್ಷದೊಳಗಿನ ಬಾಲಕರ ವಿಭಾಗದ ಕ್ರಿಕೆಟ್‌ ರೋಚಕವಾಗಿತ್ತು. ಮುಖ್ಯ ಅತಿಥಿಯಾಗಿ ಕೆವಿಎಸ್‌ ಉಪ ಆಯುಕ್ತರು ಡಾ.ಧರ್ಮೇಂದ್ರ ಪಟ್ಲೆ, ಸಹಾಯಕ ಆಯುಕ್ತ ಆರ್ ಪ್ರಮೋದ್ ಸೇರಿ ಇತರರು ಭಾಗಿಯಾಗಿದ್ದರು.

53rd KVS National Games inaugurated

ಇದೇ ವೇಳೆ ಕೆ.ವಿ.ಎಸ್ ಧ್ವಜಾರೋಹಣವನ್ನು ಮುಖ್ಯ ಅತಿಥಿಗಳು ನೆರವೇರಿಸಿದರು. ಪಾತ್ರ ಮತ್ತು ನಾಯಕತ್ವ ಎರಡನ್ನೂ ಅಭಿವೃದ್ಧಿಪಡಿಸುವಲ್ಲಿ ಕ್ರೀಡೆಯ ಮಹತ್ವವನ್ನು ಎತ್ತಿ ತೋರಿಸಿದರು. ಆಟಗಾರರನ್ನು ಹುಮ್ಮಸ್ಸಿನಿಂದ ಸ್ಪರ್ಧಿಸಲು ಪ್ರೋತ್ಸಾಹಿಸಿದರು. ಮುಂಬರುವ ದಿನಗಳಲ್ಲಿ ರೋಚಕ ಕ್ರಿಕೆಟ್ ಪಂದ್ಯಗಳನ್ನು ನೋಡುವ ನಿರೀಕ್ಷೆಯಿದೆ, ಏಕೆಂದರೆ ಭಾಗವಹಿಸುವವರು ತಮ್ಮ ಅತ್ಯುತ್ತಮ ಪ್ರದರ್ಶನವನ್ನು ಮೈದಾನಕ್ಕೆ ತರುತ್ತಾರೆ ಎಂದು ಅಭಿಪ್ರಾಯಪಟ್ಟರು.

Continue Reading

ಕ್ರೀಡೆ

Duleep Trophy: ದುಲೀಪ್​ ಟ್ರೋಫಿಯಿಂದ ಹೊರಬಿದ್ದ ಮೊಹಮ್ಮದ್ ಸಿರಾಜ್

Duleep Trophy: ವೃತ್ತಿಪರ ಕ್ರಿಕೆಟ್​ಗೆ ಮರಳುವ ನಿರೀಕ್ಷೆಯಲ್ಲಿ ಜಮ್ಮ ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್(Umran Malik) ಕೂಡ ಅನಾರೋಗ್ಯದ ಕಾರಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ.

VISTARANEWS.COM


on

Duleep Trophy

ಮುಂಬಯಿ: ದುಲೀಪ್​ ಟ್ರೋಫಿ(Duleep Trophy) ಆರಂಭಕ್ಕೂ ಮುನ್ನವೇ ಟೀಮ್​ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್(mohammed siraj) ಅನಾರೋಗ್ಯದ ಕಾರಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ನವದೀಪ್ ಸೈನಿ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಹಿರಿಯ ಆಟಗಾರ ರವೀಂದ್ರ ಜಡೇಜಾ(Ravindra Jadeja) ಅವರನ್ನು ಭಾರತ ‘ಬಿ’ ತಂಡದಿಂದ ಬಿಡುಗಡೆ ಮಾಡಲಾಗಿದೆ.

ವೃತ್ತಿಪರ ಕ್ರಿಕೆಟ್​ಗೆ ಮರಳುವ ನಿರೀಕ್ಷೆಯಲ್ಲಿ ಜಮ್ಮ ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್(Umran Malik) ಕೂಡ ಅನಾರೋಗ್ಯದ ಕಾರಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಉಮ್ರಾನ್ ಬದಲಿಗೆ ಮಧ್ಯಪ್ರದೇಶದ ಮಧ್ಯಮ ವೇಗಿ ಗೌರವ್ ಯಾದವ್ ಭಾರತ ‘ಸಿ’ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜಡೇಜಾ ಸ್ಥಾನಕ್ಕೆ ಬದಲಿ ಆಟಗಾರನನ್ನ ಹೆಸರಿಸಲಾಗಿಲ್ಲ. ಜಡೇಜಾ ದುಲೀಪ್ ಟ್ರೋಫಿಯಲ್ಲಿ ಕೇವಲ ಒಂದು ಪಂದ್ಯವನ್ನು ಆಡಿ ಬಳಿಕ ಬಾಂಗ್ಲಾದೇಶ ಟೆಸ್ಟ್​ ಸರಣಿಗೆ ಮುಂಚಿತವಾಗಿ ಭಾರತ ಶಿಬಿರಕ್ಕೆ ತೆರಳಬೇಕಿತ್ತು. ಆದರೆ ಬಿಸಿಸಿಐ ಅವರಿಗೆ ಕೊನೆಯ ಕ್ಷಣದಲ್ಲಿ ವಿಶ್ರಾಂತಿ ನೀಡಿದೆ. ಭಾರತ ‘ಎ’ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಿದರೆ, ‘ಡಿ’ತಂಡವನ್ನು ಶ್ರೇಯಸ್‌ ಅಯ್ಯರ್‌ ಮುನ್ನಡೆಸಲಿದ್ದಾರೆ.

ಭಾರತ ‘ಎ’ ತಂಡ


ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್ (ವಿಕೆಟ್‌ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.

ಭಾರತ ‘ಬಿ’ ತಂಡ


ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿ.ಕೀ), ಮುಷೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ (ಫಿಟ್‌ನೆಸ್‌ ಟೆಸ್ಟ್‌ ಅವಲಂಬನೆ), ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಆವಸ್ತಿ, ಎನ್ ಜಗದೀಸನ್ (ವಿ.ಕೀ)

ಇದನ್ನೂ ಓದಿ Natasa Stankovic: ಪಾಂಡ್ಯ ಜತೆಗಿನ ವಿಚ್ಛೇದನದ ಅಸಲಿ ಸತ್ಯ ಬಿಚ್ಚಿಟ್ಟ ನತಾಶ!

ಭಾರತ ‘ಸಿ’ ತಂಡ


ಋತುರಾಜ್ ಗಾಯಕ್ವಾಡ್​ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಗೌರವ್ ಯಾದವ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಂಡೆ, ಆರ್ಯನ್‌ ಜುಯೆಲ್‌ (ವಿ.ಕೀ), ಸಂದೀಪ್ ವಾರಿಯರ್.

ಭಾರತ ‘ಡಿ’ ತಂಡ

ಶ್ರೇಯಸ್ ಅಯ್ಯರ್​ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್‌ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ (ವಿಕೆಟ್‌ ಕೀಪರ್), ಸೌರಭ್ ಕುಮಾರ್.

Continue Reading
Advertisement
HD Revanna
Latest8 hours ago

ಸಚಿವ ಜಮೀರ್‌ರಿಂದ ಸಾಕಷ್ಟು ಅನುಭವಿಸಿದ್ದೇನೆ, ಅವರನ್ನು ಮತ್ತೆ ಜೆಡಿಎಸ್‌ಗೆ ಸೇರಿಸಿಕೊಳ್ಳಲ್ಲ; ಕುಮಾರಸ್ವಾಮಿ ಸ್ಪಷ್ಟೋಕ್ತಿ

Latest9 hours ago

ಮತದಾನಕ್ಕೆ ಕ್ಯೂನಲ್ಲಿ ನಿಂತರೂ ಕಷ್ಟ; ನಿಲ್ಲದಿದ್ದರೂ ಕಷ್ಟ: ಹಾಗಾದ್ರೆ ನಟ ಕಮಲ್‌ ಹಾಸನ್‌ ಏನು ಮಾಡಬೇಕಿತ್ತು?

Latest9 hours ago

ವಿಜಯ್ ಪಕ್ಷಕ್ಕೆ ಮತ ಚಲಾಯಿಸಲು ಸಾಧ್ಯವಾಗದೆ ಬಿಕ್ಕಿ ಬಿಕ್ಕಿ ಅತ್ತ ಯುವತಿ! ವಿಡಿಯೋ ವೈರಲ್

Latest9 hours ago

ಸಮಂತಾ ಕೇಳಿದ ಪ್ರಶ್ನೆಗೆ ದಿಗಂತ್ ಶಾಕ್! ‘ದೂದ್ ಪೇಡ’ ಅಂದ್ರೆ ಯಾರು ಎಂದಿದ್ದಕ್ಕೆ ‘ಚಾಕೊಲೇಟ್ ಹೀರೊ’ ನೀಡಿದ ರಿಯಾಕ್ಷನ್ ಹೇಗಿತ್ತು?

Latest9 hours ago

ಮಹಿಳಾ ಮೀಸಲಾತಿ: ಡಿಎಂಕೆ ಹುನ್ನಾರಕ್ಕೆ ರಾಜ್ಯ ಬಲಿ ಕೊಡುತ್ತಿರುವ ಸಿಎಂ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿ ಆರೋಪ

Latest10 hours ago

ಬೆಸ್ಕಾಂ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಚಾಲನೆ; ಹೆಚ್‌ಟಿ ಗ್ರಾಹಕರಿಗೆ ಅನುಕೂಲ

Latest10 hours ago

ಟ್ರಂಪ್ ಸೋಷಿಯಲ್ ಮೀಡಿಯಾದಲ್ಲಿ ಭಾರತಕ್ಕೆ ಅವಮಾನ: ಭಾರತ-ಚೀನಾ ‘ನರಕ’ ಎಂದ ಮೈಕೆಲ್ ಸ್ಯಾವೇಜ್ ಪೋಸ್ಟ್ ಹಂಚಿಕೊಂಡ ಅಧ್ಯಕ್ಷ

HD DeveGowda Wont celebrate 92nd birthday
Latest10 hours ago

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಬಸವ ಶ್ರೀ, ಗುರುರಾಜ ಕರ್ಜಗಿ ಅವರಿಗೆ ವಚನ ಸಾಹಿತ್ಯಶ್ರೀ ಪ್ರಶಸ್ತಿ

Latest10 hours ago

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ; ಥಳಿಸಿದ ಗ್ರಾಮಸ್ಥರು

Latest10 hours ago

ಪಂಚರಾಜ್ಯ ಚುನಾವಣೆ ನಂತರ,ಪೆಟ್ರೋಲ್‌,ಡೀಸೆಲ್‌ ದರ ಏರಿಕೆ ಇಲ್ಲ : ಕೇಂದ್ರದ ಸ್ಪಷ್ಟನೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌