Odi Cricket History: ಏಕದಿನ ಕ್ರಿಕೆಟ್​ನಲ್ಲಿ ಗೆಲುವಿನ ದಾಖಲೆ ಬರೆದ ಆಸ್ಟ್ರೇಲಿಯಾ - Vistara News

ಕ್ರಿಕೆಟ್

Odi Cricket History: ಏಕದಿನ ಕ್ರಿಕೆಟ್​ನಲ್ಲಿ ಗೆಲುವಿನ ದಾಖಲೆ ಬರೆದ ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ತಂಡ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ(Odi Cricket History) 600ನೇ ಗೆಲುವು ದಾಖಲಿಸಿದೆ. ಈ ಸಾಧನೆ ಮಾಡಿದ ವಿಶ್ವದ ಮೊದಲ ತಂಡ ಎನಿಸಿಕೊಂಡಿದೆ.

VISTARANEWS.COM


on

Mitchell Starc made the opening breakthrough
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬುಧವಾರ ನಡೆದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್​ ಆಸ್ಟ್ರೇಲಿಯಾ ತಂಡ ನೆದರ್ಲೆಂಡ್ಸ್​ ವಿರುದ್ಧ 309 ರನ್​ಗಳ ಗೆಲುವು ಸಾಧಿಸಿತು. ಈ ಗೆಲುವಿನಿಂದಿಗೆ ಆಸ್ಟ್ರೇಲಿಯಾ ತಂಡ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ(Odi Cricket History) 600ನೇ ಗೆಲುವು ದಾಖಲಿಸಿತು. ಜತೆಗೆ ಈ ಸಾಧನೆ ಮಾಡಿದ ವಿಶ್ವದ ಮೊದಲ ತಂಡ ಎನಿಸಿಕೊಂಡಿತು.

ಭಾರತಕ್ಕೆ ದ್ವಿತೀಯ ಸ್ಥಾನ

50 ವರ್ಷಗಳಿಂದ ಅಧಿಕ ಇತಿಹಾಸ ಹೊಂದಿರುವ ಏಕದಿನ ಕ್ರಿಕೆಟ್​ನಲ್ಲಿ ಈ ವರೆಗೆ 25 ದೇಶಗಳು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿವೆ. ಇವುಗಳಲ್ಲಿ ಕೇವಲ 3 ದೇಶಗಳಷ್ಟೇ 500ಕ್ಕಿಂತ ಅಧಿಕ ಗೆಲುವು ಸಾಧಿಸಿವೆ. 600 ಜಯ ಕಂಡ ಆಸ್ಟ್ರೇಲಿಯಾಕ್ಕೆ ಅಗ್ರಸ್ಥಾನ. 552 ಗೆಲುವು ಸಾಧಿಸಿದ ಭಾರತ ದ್ವಿತೀಯ ಸ್ಥಾನದಲ್ಲಿದೆ. 510 ಪಂದ್ಯಗಳನ್ನು ಗೆದ್ದಿರುವ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ ಮೂರನೇ ಸ್ಥಾನದಲ್ಲಿದೆ.

ಅತಿ ಹೆಚ್ಚು ಪಂದ್ಯವಾಡಿದ್ದು ಭಾರತ

ಏಕದಿನದಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ದಾಖಲೆ ಭಾರತದ ಹೆಸರಲ್ಲಿರುವುದು ವಿಶೇಷ. 1046 ಪಂದ್ಯಗಳನ್ನಾಡಿದೆ. ಆಸ್ಟ್ರೇಲಿಯಾ 991, ಪಾಕಿಸ್ತಾನ 966 ಪಂದ್ಯಗಳನ್ನಾಡಿವೆ. ಅತೀ ಹೆಚ್ಚು 441 ಸೋಲನುಭವಿಸಿದ್ದು ಭಾರತ ತಂಡಕ್ಕೆ ಅಂಟಿದ ಕಳಂಕವಾಗಿದೆ. ಆಸ್ಟ್ರೇಲಿಯಾ 348 ಸೋಲು, ಪಾಕಿಸ್ತಾನ 426 ಸೋಲು ಕಂಡಿದೆ.

ಭಾರತಕ್ಕೆ ಮೊದಲ ಗೆಲುವು ಸಿಕ್ಕಿದ್ದೇ ವಿಶ್ವಕಪ್​ನಲ್ಲಿ

ಭಾರತಕ್ಕೆ ಮೊದಲ ಏಕದಿನ ಗೆಲುವು ಒಲಿದದ್ದು ಲೀಡ್ಸ್‌ ಅಂಗಳದಲ್ಲಿ ಅದು 1975ರ ವಿಶ್ವಕಪ್‌ ಪಂದ್ಯಾವಳಿಯ ಪೂರ್ವ ಆಫ್ರಿಕಾ ಎದುರಿನ ಪಂದ್ಯವಾಗಿತ್ತು. ಇಲ್ಲಿ ಭಾರತ 10 ವಿಕೆಟ್‌ ಅಂತರದಿಂದ ಗೆದ್ದು ಬೀಗಿತ್ತು. ಆಗ ವೆಂಕಟರಾಘವನ್‌ ನಾಯಕರಾಗಿದ್ದರು. ಪೂರ್ವ ಆಫ್ರಿಕಾ 120ರನ್​ಗೆ ಕುಸಿದರೆ, ಗುರಿ ಬೆನ್ನಟ್ಟಿದ ಭಾರತ 29.5 ಓವರ್‌ಗಳಲ್ಲಿ ವಿಕೆಟ್​ ನಷ್ಟವಿಲ್ಲದೆ 123 ರನ್‌ ಬಾರಿಸಿತು. ಸುನಿಲ್​ ಗಾವಸ್ಕರ್‌ 65, ಫಾರುಕ್​ ಎಂಜಿನಿಯರ್‌ 54 ರನ್‌ ಹೊಡೆದಿದ್ದರು.

ಇದನ್ನೂ ಓದಿ AUS vs NED: ವಿಶ್ವಕಪ್​ನಲ್ಲಿ ತನ್ನದೇ ದಾಖಲೆಯನ್ನು ತಿದ್ದಿ ಬರೆದ ಆಸ್ಟ್ರೇಲಿಯಾ

ಭಾರತ ತನ್ನ ಏಕದಿನ ಅಭಿಯಾನವನ್ನು 1974ರ ಇಂಗ್ಲೆಂಡ್‌ ಪ್ರವಾಸದಲ್ಲಿ ಆರಂಭಿಸಿತು. ಈ ಸರಣಿ ವೇಳೆ 2 ಪಂದ್ಯಗಳನ್ನು ಆಡಲಾಗಿತ್ತು. ಭಾರತ ಎರಡರಲ್ಲೂ ಸೋಲು ಕಂಡಿತ್ತು. 1974ರ ಜುಲೈ 13ರಂದು ಲೀಡ್ಸ್‌ನಲ್ಲಿ ಏಕದಿನ ಇತಿಹಾಸದ ತನ್ನ ಮೊದಲ ಪಂದ್ಯವಾಡಿದ ಭಾರತ ಈ ಪಂದ್ಯವನ್ನು 4 ವಿಕೆಟ್‌ಗಳಿಂದ ಸೋತಿತ್ತು. ಭಾರತ 53.5 ಓವರ್‌ಗಳಲ್ಲಿ 265ಕ್ಕೆ ಆಲೌಟಾದರೆ, ಆತಿಥೇಯ ಇಂಗ್ಲೆಂಡ್‌ 51.1 ಓವರ್‌ಗಳಲ್ಲಿ 6 ವಿಕೆಟಿಗೆ 266 ರನ್‌ ಬಾರಿಸಿತ್ತು. ನಾಯಕ ಅಜಿತ್‌ ವಾಡೇಕರ್‌ (67) ಮತ್ತು ಬೃಜೇಶ್‌ ಪಟೇಲ್‌ (82) ಅರ್ಧ ಶತಕ ಬಾರಿಸಿದ್ದರು. ಸೋಮವಾರವಷ್ಟೇ ಇಹಲೋಕ ತ್ಯಜಿಸಿದ ಬಿಷನ್​ ಸಿಂಗ್​ ಬೇಡಿ 2 ವಿಕೆಟ್‌ ಉರುಳಿಸಿದ್ದರು.

ಮೊದಲ ಏಕದಿನ ಪಂದ್ಯವಾಡಿದ್ದೇ ಆಸೀಸ್ಟ್ರೇಲಿಯಾ

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ ತಂಡಗಳು ಮೆಲ್ಬರ್ನ್ ಅಂಗಳದಲ್ಲಿ ವಿಶ್ವದ ಪ್ರಪ್ರಥಮ ಏಕದಿನ ಪಂದ್ಯವನ್ನಾಡಿದ ದಾಖಲೆ ಹೊಂದಿದೆ. ಮುಂದೆ ಇದು ಕ್ರಾಂತಿಕಾರಿ ಪರಿವರ್ತನೆಗೆ ನಾಂದಿಯಾಯಿತು. ಈಗ ಆಸ್ಟ್ರೇಲಿಯಾ ದಾಖಲೆಯ 600 ಪಂದ್ಯಗಳ್ನು ಗೆದ್ದ ಸಾಧನೆ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Trent Boult: ಕೊನೆಯ ಟಿ20 ವಿಶ್ವಕಪ್​ ಆಡಲು ಸಿದ್ಧರಾದ ಟ್ರೆಂಟ್​ ಬೌಲ್ಟ್

Trent Boult: 34 ವರ್ಷದ ಎಡಗೈ ವೇಗಿ ಬೌಲ್ಟ್​ ಇದುವರೆಗೆ ನ್ಯೂಜಿಲ್ಯಾಂಡ್​ ಪರ 60 ಟಿ20 ಪಂದ್ಯಗಳನ್ನು ಆಡಿ ಒಟ್ಟು 81 ವಿಕೆಟ್​ ಕಬಳಿಸಿದ್ದಾರೆ.

VISTARANEWS.COM


on

Trent Boult
Koo

ನ್ಯೂಯಾರ್ಕ್​: ನ್ಯೂಜಿಲ್ಯಾಂಡ್​ ಕ್ರಿಕೆಟ್​ ತಂಡದ ಹಿರಿಯ ವೇಗಿ ಟ್ರೆಂಟ್​ ಬೌಲ್ಟ್(​Trent Boult) ಅವರು ತಮ್ಮ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ ವೃತ್ತಿ ಬುದುಕಿಗೆ ತೆರೆ ಎಳೆಯಲು ಸಿದ್ಧರಾಗಿದ್ದಾರೆ. ಇದು ತನ್ನ ಕೊನೆಯ ಟಿ20 ವಿಶ್ವಕಪ್​ ಟೂರ್ನಿ ಎಂದು ಹೇಳುವ ಮೂಲಕ ತಮ್ಮ ನಿವೃತ್ತಿಯನ್ನು ಖಚಿತಪಡಿಸಿದಂತಿದೆ. ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ನ್ಯೂಜಿಲ್ಯಾಂಡ್​ ತನ್ನ ಕೊನೆಯ ಲೀಗ್​ ಪಂದ್ಯವನ್ನು ಜೂನ್​ 17ರಂದು ಪಪುವಾ ನ್ಯೂಗಿನಿಯಾ ವಿರುದ್ಧ ಆಡಲಿದೆ. ಈ ಪಂದ್ಯ ಬೌಲ್ಟ್​ ಅವರಿಗೆ ಕೊನೆಯ ಪಂದ್ಯವಾಗುವ ಸಾಧ್ಯತೆ ಇದೆ.


34 ವರ್ಷದ ಎಡಗೈ ವೇಗಿ ಬೌಲ್ಟ್​ ಇದುವರೆಗೆ ನ್ಯೂಜಿಲ್ಯಾಂಡ್​ ಪರ 60 ಟಿ20 ಪಂದ್ಯಗಳನ್ನು ಆಡಿ ಒಟ್ಟು 81 ವಿಕೆಟ್​ ಕಬಳಿಸಿದ್ದಾರೆ. 13 ರನ್​ಗೆ 4 ವಿಕೆಟ್​ ಕಿತ್ತದ್ದು ವೈಯಕ್ತಿಕ ಜೀವಮಾನ ಶ್ರೇಷ್ಠ ಬೌಲಿಂಗ್​ ಸಾಧನೆಯಾಗಿದೆ. 2013ರಲ್ಲಿ ಇಂಗ್ಲೆಂಡ್​ ವಿರುದ್ಧದ ಸರಣಿಯಲ್ಲಿ ಆಡುವ ಮೂಲಕ ಬೌಲ್ಟ್​ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಐಪಿಎಲ್​ ಟೂರ್ನಿಯಲ್ಲಿ 103 ಪಂದ್ಯಗಳನ್ನಾಡಿ 121 ವಿಕೆಟ್​ ಕಿತ್ತಿದ್ದಾರೆ. ಕಿವೀಸ್​ ತಂಡದ ಪರ ಟಿ20 ಆಡದಿದ್ದರೂ ಕೂಡ ಅವರು ವಿದೇಶಿ ಟಿ20 ಲೀಗ್​ನಲ್ಲಿ ಆಟ ಮುಂದುವರಿಸಲಿದ್ದಾರೆ.


2014-2024ರ ತನಕ ಟಿ0 ವಿಶ್ವಕಪ್​ ಆಡಿರುವ ಬೌಲ್ಟ್​ ಇದುವರೆಗೆ 17 ಪಂದ್ಯಗಳಿಂದ 32 ವಿಕೆಟ್​ ಕಲೆಹಾಕಿದ್ದಾರೆ. ಇಂದು(ಶನಿವಾರ) ನಡೆದ ಉಗಾಂಡ ವಿರುದ್ಧದ ಪಂದ್ಯದಲ್ಲಿ ಬೌಲ್ಟ್​ 4 ಓವರ್​ ನಡೆಸಿ ಒಂದು ಮೇಡನ್​ ಸಹಿತ ಕೇವಲ 7 ರನ್​ಗೆ 2 ವಿಕೆಟ್​ ಕಿತ್ತು ಮಿಂಚಿದ್ದರು.

ಇದನ್ನೂ ಓದಿ T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಪಂದ್ಯ ಗೆದ್ದ ಕಿವೀಸ್​


ಟ್ರಿನಿಡಾಡ್​ನ ಬ್ರಿಯನ್​ ಲಾರ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಉಗಾಂಡ, ಟಿಮ್​ ಸೌಥಿ ಮತ್ತು ಬೌಲ್ಟ್​ ಘಾತದ ದಾಳಿಗೆ ತತ್ತರಿಸಿ ಕೇವಲ 40 ರನ್​ಗೆ ಆಲೌಟ್​ ಆಯಿತು. ಈ ಸಣ್ಣ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲ್ಯಾಂಡ್​ 5.2 ಓವರ್​ಗಳಲ್ಲಿ 1 ವಿಕೆಟ್​ಗೆ 41 ರನ್​ ಬಾರಿಸಿ 9 ವಿಕೆಟ್​ ಅಂತರದಿಂದ ಗೆಲುವು ಸಾಧಿಸಿತು. ಇದು ಕಿವೀಸ್​ಗೆ ಟೂರ್ನಿಯಲ್ಲಿ ಒಲಿದ ಮೊದಲ ಗೆಲುವು. ಇದಕ್ಕು ಮುನ್ನ ಆಡಿದ 2 ಪಂದ್ಯಗಳಲ್ಲಿಯೂ ಹೀನಾಯ ಸೋಲು ಕಂಡಿತ್ತು. ಕಿವೀಸ್​ ಪರ ಬೌಲಿಂಗ್​ನಲ್ಲಿ ಟಿಮ್​ ಸೌಥಿ 4 ಓವರ್​ ಎಸೆದು ಕೇವಲ 4 ರನ್​ಗೆ 3 ವಿಕೆಟ್​ ಕಿತ್ತು ಮಿಂಚಿದರು. ಚೇಸಿಂಗ್​ನಲ್ಲಿ ಡೆವೋನ್​ ಕಾನ್ವೆ ಅಜೇಯ 22 ರನ್​ ಬಾರಿಸಿ ತಂಡದ ಗೆಲುವು ಸಾರಿಸಿದರು.

Continue Reading

ಕ್ರಿಕೆಟ್

Pakistan Cricket Board: ಟಿ20 ವಿಶ್ವಕಪ್​ನಿಂದ ಹೊರಬಿದ್ದ ಬೆನ್ನಲ್ಲೇ ಹೊಸ ನಿಯಮ ಜಾರಿಗೆ ತಂದ ಪಾಕ್​ ಕ್ರಿಕೆಟ್​ ಮಂಡಳಿ

Pakistan Cricket Board: ಎನ್‌ಒಸಿ ನಿಯಮದ ಪ್ರಕಾರ, ವಿದೇಶಗಳಲ್ಲಿ ನಡೆಯುವ ಲೀಗ್‌ಗಳಿಗೆ ಸಂಬಂಧಿಸಿದಂತೆ ಪಾಕ್​ ಕ್ರಿಕೆಟ್​ ಮಂಡಳಿಯು ಆಟಗಾರರಿಗೆ ಎರಡು ಎನ್‌ಒಸಿಗಳನ್ನು ನೀಡುತ್ತದೆ. ಈ ನಿಯಮಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಪಿಸಿಬಿ ಸೂಚಿಸಿದೆ.

VISTARANEWS.COM


on

Pakistan Cricket Board
Koo

ಟಿ20 ವಿಶ್ವಕಪ್​ ಟೂರ್ನಿಯಿಯ ಲೀಗ್​ ಹಂತದಿಂದಲೇ ಪಾಕಿಸ್ತಾನ ತಂಡ(Pakistan Cricket Team) ಹೊರಬಿದ್ದ ಬೆನ್ನಲ್ಲೇ ಪಾಕ್​ ಕ್ರಿಕೆಟ್​ ಮಂಡಳಿ(Pakistan Cricket Board) ಮಹತ್ವದ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನಿಯಮವನ್ನು ಜಾರಿಗೆ ತಂದಿದೆ. ಈ ನಿಯಮದ ಪ್ರಕಾರ ದೇಶಿ ಕ್ರಿಕೆಟ್‌ ಹಾಗೂ ಕೇಂದ್ರೀಯ ಗುತ್ತಿಗೆಗೆ ಸಹಿ ಮಾಡಿರುವ ಎಲ್ಲ ಪಾಕ್​ ಆಟಗಾರರು ವರ್ಷವೊಂದರಲ್ಲಿ ಪಾಕಿಸ್ತಾನ ಸೂಪರ್‌ ಲೀಗ್‌ (ಪಿಎಸ್‌ಎಲ್‌) ಹೊರತುಪಡಿಸಿ, ವಿದೇಶಗಳಲ್ಲಿ ನಡೆಯುವ ಎರಡು ಟಿ20 ಲೀಗ್‌ಗಳಲ್ಲಿ ಮಾತ್ರ ಭಾಗವಹಿಸಬಹುದಾಗಿದೆ.

ಎನ್‌ಒಸಿ ನಿಯಮದ ಪ್ರಕಾರ, ವಿದೇಶಗಳಲ್ಲಿ ನಡೆಯುವ ಲೀಗ್‌ಗಳಿಗೆ ಸಂಬಂಧಿಸಿದಂತೆ ಪಾಕ್​ ಕ್ರಿಕೆಟ್​ ಮಂಡಳಿಯು ಆಟಗಾರರಿಗೆ ಎರಡು ಎನ್‌ಒಸಿಗಳನ್ನು ನೀಡುತ್ತದೆ. ಈ ನಿಯಮಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಪಿಸಿಬಿ ಸೂಚಿಸಿದೆ. ಅಚ್ಚರಿ ಎಂದರೆ ವಿಶ್ವಕಪ್‌ನಲ್ಲಿ ಪಾಲ್ಗೊಂಡ ಅಜಂ ಖಾನ್‌ ಮತ್ತು ಸೈಮ್ ಆಯೂಬ್‌ ಅವರಿಗೆ ಮಂಡಳಿ ಈವರೆಗೆ ಎನ್‌ಒಸಿ ನೀಡಿಲ್ಲ. ಆದರೂ ಇವರು ವಿಶ್ವಕಪ್​ ಆಡಿದ್ದಾರೆ.

ಇದನ್ನೂ ಓದಿ Viral Video: ಪಾಕ್​ ಕ್ರಿಕೆಟಿಗ ವಾಸಿಂ ಅಕ್ರಮ್ ಜತೆ​ ಬ್ರೇಕ್​ ಡ್ಯಾನ್ಸ್​ ಮಾಡಿದ ಸುನಿಲ್ ಗಾವಸ್ಕರ್

ಎರಡು ಎನ್‌ಒಸಿ ನಿಯಮ


ದೇಶಿ ಕ್ರಿಕೆಟ್‌ ಹಾಗೂ ಕೇಂದ್ರೀಯ ಗುತ್ತಿಗೆಗೆ ಸಹಿ ಮಾಡಿರುವ ಉಳಿದೆಲ್ಲ ಆಟಗಾರರಿಗೆ ಎರಡು ಎನ್‌ಒಸಿ ನಿಯಮ ಅನ್ವಯವಾಗುತ್ತದೆ. ಯಾವುದೇ ಆಟಗಾರ ಎನ್‌ಒಸಿಗಾಗಿ ಸಲ್ಲಿಸುವ ಮನವಿಯನ್ನು ತಡೆಹಿಡಿಯುವ ಹಕ್ಕು ಕೂಡ ಪಿಸಿಬಿಗೆ ಇದೆ ಎಂದು ಮಂಡಳಿಯ ಅಧಿಕೃತ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

ಮೂರು ಪಂದ್ಯಗಳನ್ನು ಆಡಿರುವ ಪಾಕಿಸ್ತಾನವು ಅಮೆರಿಕ ಹಾಗೂ ಭಾರತದ ವಿರುದ್ಧ ಹೀನಾಯವಾಗಿ ಸೋಲನುಭವಿಸಿದೆ. ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಕಾರಣ 2 ಪಾಯಿಂಟ್‌ಗಳನ್ನು ಪಡೆದಿದೆ. ಇನ್ನು, ನಾಲ್ಕು ಪಾಯಿಂಟ್ ಹೊಂದಿದ್ದ ಅಮೆರಿಕ ತಂಡವು ಐರ್ಲೆಂಡ್‌ ವಿರುದ್ಧ ಸೋತು, ಜೂನ್‌ 16ರಂದು ಐರ್ಲೆಂಡ್‌ ವಿರುದ್ಧ ನಡೆಯುವ ಪಂದ್ಯದಲ್ಲಿ ಬಾಬರ್‌ ಅಜಂ ಬಳಗ ಗೆದ್ದರೆ ಮಾತ್ರ ಸೂಪರ್‌ 8ಕ್ಕೆ ಅರ್ಹತೆ ಪಡೆಯುತ್ತಿತ್ತು. ಆದರೆ, ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವು ಮಳೆಯಿಂದ ರದ್ದಾದ ಕಾರಣ ಅಮೆರಿಕದ ಅಂಕಗಳು 5ಕ್ಕೆ ಏರಿಕೆಯಾದವು. ಇದರಿಂದಾಗಿ ಐರ್ಲೆಂಡ್‌ ವಿರುದ್ಧ ಪಾಕ್‌ ಗೆದ್ದರೂ ಯಾವುದೇ ಉಪಯೋಗವಿಲ್ಲದಂತಾಗಿದೆ.

ಟೂರ್ನಿಯಿಂದ ಹೊರಬಿದ್ದಿರುವ ಪಾಕ್​ ತಂಡದ ಪ್ರದರ್ಶನದ ಬಗ್ಗೆ ವಾಸಿಂ ಅಕ್ರಮ್ ಸೇರಿ ಅನೇಕ ಮಾಜಿ ಆಟಗಾರರು ಆಕ್ರೋಶ ಹೊರಹಾಕಿದ್ದಾರೆ. ಕ್ರಿಕೆಟ್​ ಅಭ್ಯಾಸ ಮಾಡುವುದನ್ನು ಬಿಟ್ಟು ಶೋಕಿಗಾಗಿ ಸೇನೆಯಲ್ಲಿ ಫಿಟ್​ನೆಸ್​ ತರಬೇತಿ ಪಡೆದು ಸಮಯ ವ್ಯರ್ಥ ಮಾಡಿದ್ದು ಈ ಸೋಲಿಗೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಟೂರ್ನಿಯಿಂದ ಹೊರಬಿದ್ದ ಪಾಕ್​ ತಂಡವನ್ನು(Pakistan Team Troll) ಸ್ವತಃ ತವರಿನ ಅಭಿಮಾನಿಗಳು ಸೇರಿ ಭಾರತೀಯ(India fans troll Pakistan cricket team) ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ. ಹಲವು ಮಿಮ್ಸ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Continue Reading

ಕ್ರಿಕೆಟ್

Chahal-Dhanashree: ನ್ಯೂಯಾರ್ಕ್​ನಲ್ಲಿ ಪತ್ನಿ ಜತೆ ಪ್ರವಾಸಿ ತಾಣ ಸುತ್ತಿ ಎಂಜಾಯ್​ ಮಾಡಿದ ಚಹಲ್​

Chahal-Dhanashree: ಚಹಲ್​ ಮತ್ತು ಧನಶ್ರೀ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಧನಶ್ರೀ ಗರ್ಭಿಣಿಯರು ಧರಿಸುವ ಉಡುಗೆ ತೊಟ್ಟು(Dhanashree Verma Maternity Dress) ತನ್ನ ಗಂಡ ಚಹಲ್ ಜತೆಗಿರುವ ಫೋಟೊವನ್ನು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಹೀಗಾಗಿ ಚಹಲ್ ತಂದೆಯಾಗುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

VISTARANEWS.COM


on

Chahal-Dhanashree
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್​ ಟೂರ್ನಿಯನ್ನಾಡಲು ನ್ಯೂಯಾರ್ಕ್​ನಲ್ಲಿರುವ ಟೀಮ್​ ಇಂಡಿಯಾದ ಸ್ಪಿನ್ನರ್​ ಯಜುವೇಂದ್ರ ಚಹಲ್(Yuzvendra Chahal)​ ಅವರು ಬಿಡುವಿನ ವೇಳೆ ತಮ್ಮ ಪತ್ನಿ ಧನಶ್ರೀ ವರ್ಮಾ(Chahal-Dhanashree) ಜತೆ ನ್ಯೂಯಾರ್ಕ್​ ಸಿಟಿ ಸುತ್ತಿದ್ದಾರೆ. ಈ ಜೋಡಿ ಇಲ್ಲಿನ ಪ್ರಸಿದ್ಧ ತಾಣಗಳಿಗೆ ಭೇಟಿ ನೀಡಿ ಎಂಜಾಯ್​ ಮಾಡಿದ ಸುಂದರ ಫೋಟೊಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಮಧ್ಯೆ ಎಲ್ಲವೂ ಸರಿಯಿಲ್ಲ ಎನ್ನುತ್ತಿದ್ದ ನೆಟ್ಟಿಗರಿಗೆ ನಾವಿಬ್ಬರು ಚೆನ್ನಾಗಿಯೇ ಇದ್ದೇವೆ ಎನ್ನುವ ಪರೋಕ್ಷ ಸಂದೇಶವೊಂದನ್ನು ನೀಡಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಚಹಲ್ ಹಾಗೂ ಧನ ಶ್ರೀ(Dhanashree Verma) ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂಬುದಾಗಿ ಸುದ್ದಿ ಹರಡಿತ್ತು. ಧನಶ್ರಿ ತಮ್ಮ ಗೆಳೆಯರೊಂದಿಗೆ ಕಾಣಿಸಿಕೊಂಡಾಗಲೆಲ್ಲವೂ ಸಾಮಾಜಿ ಜಾಲತಾಣದಲ್ಲಿ ಈ ವಿಚಾರ ಆಗಾಗ ಮುನ್ನಲೆಗೆ ಬರುತ್ತಿತ್ತು. ಆದರೆ ಈ ಜೋಡಿ ಮಾತ್ರ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಒಳ್ಳೆಯ ರೀತಿಯಲ್ಲೇ ಸಂಸಾರ ನಡೆಸುತ್ತಿದ್ದಾರೆ. ಇದೀಗ ನ್ಯೂಯಾರ್ಕ್ ಸಿಟಿಯಲ್ಲಿ ಎಂಜಾಯ್​ ಮೂಡ್​ನಲ್ಲಿರುವ ಫೋಟೊಗಳನ್ನು ಹಂಚಿಕೊಂಡು ತಮ್ಮ ಸಂಸಾರದ ಮಧ್ಯೆ ಹುಳಿ ಹಿಂಡುತ್ತಿರುವವರಿಗೆ ತಕ್ಕ ಉತ್ತರ ನೀಡಿದ್ದಾರೆ.

ತಂದೆಯಾಗಲಿದ್ದಾರಾ ಚಹಲ್​?


ಚಹಲ್​ ಮತ್ತು ಧನಶ್ರೀ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಧನಶ್ರೀ ಗರ್ಭಿಣಿಯರು ಧರಿಸುವ ಉಡುಗೆ ತೊಟ್ಟು(Dhanashree Verma Maternity Dress) ತನ್ನ ಗಂಡ ಚಹಲ್ ಜತೆಗಿರುವ ಫೋಟೊವನ್ನು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಹೀಗಾಗಿ ಚಹಲ್ ತಂದೆಯಾಗುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಆದರೆ ಈ ಜೋಡಿ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಇದು ಕೇವಲ ನೆಟ್ಟಿಗರ ಕಲ್ಪನೆಯಾಗಿದೆ. ಧನಶ್ರೀ ಡ್ಯಾನ್ಸರ್​ ಮತ್ತು ಮಾಡೆಲ್​ ಆಗಿರುವ ಕಾರಣ ಟ್ರೆಂಡ್​ಗಾಗಿ ಈ ಉಡುಗೆಯನ್ನು ತೊಟ್ಟಿರುವ ಸಾಧ್ಯತೆಯೂ ಅಧಿಕವಾಗಿದೆ. 2020ರಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು.

ಇದನ್ನೂ ಓದಿ Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ನೀಡಲಾಗಿದೆ. ಚಹಲ್​ ಸದ್ಯ ಅಮೆರಿಕಕ್ಕೆ ತೆರಳಿದ್ದಾರೆ. ಇದುವರೆಗೆ ಭಾರತ ಪರ 72 ಏಕದಿನ ಪಂದ್ಯಗಳಿಂದ 121 ವಿಕೆಟ್​, 80 ಟಿ20 ಆಡಿ 96 ವಿಕೆಟ್​ ಕಡೆವಿದ್ದಾರೆ. ಇಂದು ನಡೆಯುವ ಕೆನಾಡ ವಿರುದ್ಧದ ಪಂದ್ಯದಲ್ಲಿ ಮತ್ತು ಸೂಪರ್​-8 ಹಂತದ ಪಂದ್ಯದಲ್ಲಿ ಚಹಲ್​ಗೆ ಆಡುವ ಅವಕಾಶ ಸಿಗುವ ಸಾಧ್ಯತೆ ಅಧಿಕವಾಗಿದೆ.

ಇತ್ತೀಚೆಗೆ 150ನೇ ಐಪಿಎಲ್​ ಪಂದ್ಯವನ್ನಾಡಿದ ಚಹಲ್​ಗೆ ಪತ್ನಿ ಭಾವುಕ ವಿಡಿಯೊ ಸಂದೇಶದ ಮೂಲಕ ಹಾರೈಸಿದ್ದರು. “ಹೇ ಯುಜಿ, ನಿಮ್ಮ 150ನೇ ಐಪಿಎಲ್ ಪಂದ್ಯಕ್ಕೆ ಅಭಿನಂದನೆಗಳು. ನಿವು ಈ ಹಿಂದೆ ಆಡಿದ ತಂಡಕ್ಕೆ ಮತ್ತು ಈಗ ಆಡುತ್ತಿರುವ ರಾಜಸ್ಥಾನ್ ರಾಯಲ್ಸ್‌ಗೆ ನೀವು ಅಪಾರ ಕೊಡುಗೆ ನೀಡಿದ್ದೀರಿ. ನಿಮ್ಮ ಬಗ್ಗೆ ನನಗೆ ಯಾವತ್ತೂ ಹೆಮ್ಮೆ ಇದೆ. ನೀವು ನಿಮ್ಮ ಆಟವನ್ನು ಹೇಗೆ ಆಡುತ್ತೀರಿ ಮತ್ತು ಪ್ರತಿ ಬಾರಿ ನೀವು ಕಮ್​ಬ್ಯಾಕ್​ ಮಾಡುವ ರೀತಿ ನಿಜಕ್ಕೂ ಮೆಚ್ಚಲೇ ಬೇಕು. ಯಾವುದೇ ಪಂದ್ಯ ಒತ್ತಡದಲ್ಲಿದ್ದಾಗಲೆಲ್ಲಾ ವಿಕೆಟ್​ ತೆಗೆಯಬಲ್ಲ ಬೌಲರ್​ ನೀವಾಗಿದ್ದೀರಿ. ನಾನು ನಿಮ್ಮ ದೊಡ್ಡ ಚೀರ್‌ಲೀಡರ್ ಮತ್ತು ನಾನು ಯಾವಾಗಲೂ 100 ಪ್ರತಿಶತದಷ್ಟು ನಿಮ್ಮನ್ನು ಬೆಂಬಲಿಸುತ್ತೇನೆ” ಎಂದು ಶುಭ ಹಾರೈಸಿದ್ದರು. ವಿಡಿಯೊವನ್ನು ರಾಜಸ್ಥಾನ್​ ರಾಯಲ್ಸ್(Rajasthan Royals)​ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡಿತ್ತು.

Continue Reading

ಕ್ರಿಕೆಟ್

Viral Video: ಪಾಕ್​ ಕ್ರಿಕೆಟಿಗ ವಾಸಿಂ ಅಕ್ರಮ್ ಜತೆ​ ಬ್ರೇಕ್​ ಡ್ಯಾನ್ಸ್​ ಮಾಡಿದ ಸುನಿಲ್ ಗಾವಸ್ಕರ್

Viral Video: ಗವಾಸ್ಕರ್​ ಮತ್ತು ಅಕ್ರಮ್​ ಉತ್ತಮ ಸ್ನೇಹಿತರಾಗಿದ್ದಾರೆ. ಕಾಮೆಂಟ್ರಿ ವೇಳೆಯೂ ಆಗಾಗ ಪರಸ್ಪರ ಕಾಲೆಳೆಯುತ್ತಿರುತ್ತಾರೆ. ಅದರಲ್ಲೂ ಭಾರತ ಮತ್ತು ಪಾಕ್​ ಪಂದ್ಯ ಇರುವ ಸಂದರ್ಭದಲ್ಲಿ ಇದು ಹೆಚ್ಚಾಗಿ ಕಂಡು ಬರುತ್ತದೆ.

VISTARANEWS.COM


on

Viral Video
Koo

ನ್ಯೂಯಾರ್ಕ್​: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್(T20 World Cup)​ ಟೂರ್ನಿಯಲ್ಲಿ ಕಾಮೆಂಟ್ರಿ ಮಾಡುತ್ತಿರುವ ಮಾಜಿ ಆಟಗಾರರಾದ ಪಾಕಿಸ್ತಾನ ವಾಸಿಂ ಅಕ್ರಮ್​(Wasim Akram) ಮತ್ತು ಭಾರತದ ಸುನಿಲ್​ ಗವಾಸ್ಕರ್​(Sunil Gavaskar) ಅವರು ಜತೆಯಾಗಿ ಡ್ಯಾನ್ಸ್​ ಮಾಡಿದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ. ಈ ವಿಡಿಯೊಗೆ ನೆಟ್ಟಿಗರು ಹಲವು ಹಾಡುಗಳನ್ನು ಎಡಿಟ್​ ಮಾಡಿ ಶೇರ್​ ಮಾಡಿದ್ದಾರೆ.

ಗವಾಸ್ಕರ್​ ಮತ್ತು ಅಕ್ರಮ್​ ಉತ್ತಮ ಸ್ನೇಹಿತರಾಗಿದ್ದಾರೆ. ಕಾಮೆಂಟ್ರಿ ವೇಳೆಯೂ ಆಗಾಗ ಪರಸ್ಪರ ಕಾಲೆಳೆಯುತ್ತಿರುತ್ತಾರೆ. ಅದರಲ್ಲೂ ಭಾರತ ಮತ್ತು ಪಾಕ್​ ಪಂದ್ಯ ಇರುವ ಸಂದರ್ಭದಲ್ಲಿ ಇದು ಹೆಚ್ಚಾಗಿ ಕಂಡು ಬರುತ್ತದೆ.

ಇದನ್ನೂ ಓದಿ RSA vs NEP: ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ; ಗೆಲುವಿನ ಖಾತೆ ತೆರೆದ ಕಿವೀಸ್​

ಮೂರು ಪಂದ್ಯಗಳನ್ನು ಆಡಿರುವ ಪಾಕಿಸ್ತಾನವು ಅಮೆರಿಕ ಹಾಗೂ ಭಾರತದ ವಿರುದ್ಧ ಹೀನಾಯವಾಗಿ ಸೋಲನುಭವಿಸಿದೆ. ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಕಾರಣ 2 ಪಾಯಿಂಟ್‌ಗಳನ್ನು ಪಡೆದಿದೆ. ಇನ್ನು, ನಾಲ್ಕು ಪಾಯಿಂಟ್ ಹೊಂದಿದ್ದ ಅಮೆರಿಕ ತಂಡವು ಐರ್ಲೆಂಡ್‌ ವಿರುದ್ಧ ಸೋತು, ಜೂನ್‌ 16ರಂದು ಐರ್ಲೆಂಡ್‌ ವಿರುದ್ಧ ನಡೆಯುವ ಪಂದ್ಯದಲ್ಲಿ ಬಾಬರ್‌ ಅಜಂ ಬಳಗ ಗೆದ್ದರೆ ಮಾತ್ರ ಸೂಪರ್‌ 8ಕ್ಕೆ ಅರ್ಹತೆ ಪಡೆಯುತ್ತಿತ್ತು. ಆದರೆ, ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವು ಮಳೆಯಿಂದ ರದ್ದಾದ ಕಾರಣ ಅಮೆರಿಕದ ಅಂಕಗಳು 5ಕ್ಕೆ ಏರಿಕೆಯಾದವು. ಇದರಿಂದಾಗಿ ಐರ್ಲೆಂಡ್‌ ವಿರುದ್ಧ ಪಾಕ್‌ ಗೆದ್ದರೂ ಯಾವುದೇ ಉಪಯೋಗವಿಲ್ಲದಂತಾಗಿದೆ.

ಟೂರ್ನಿಯಿಂದ ಹೊರಬಿದ್ದಿರುವ ಪಾಕ್​ ತಂಡದ ಪ್ರದರ್ಶನದ ಬಗ್ಗೆ ವಾಸಿಂ ಅಕ್ರಮ್ ಸೇರಿ ಅನೇಕ ಮಾಜಿ ಆಟಗಾರರು ಆಕ್ರೋಶ ಹೊರಹಾಕಿದ್ದಾರೆ. ಕ್ರಿಕೆಟ್​ ಅಭ್ಯಾಸ ಮಾಡುವುದನ್ನು ಬಿಟ್ಟು ಶೋಕಿಗಾಗಿ ಸೇನೆಯಲ್ಲಿ ಫಿಟ್​ನೆಸ್​ ತರಬೇತಿ ಪಡೆದು ಸಮಯ ವ್ಯರ್ಥ ಮಾಡಿದ್ದು ಈ ಸೋಲಿಗೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಟೂರ್ನಿಯಿಂದ ಹೊರಬಿದ್ದ ಪಾಕ್​ ತಂಡವನ್ನು(Pakistan Team Troll) ಸ್ವತಃ ತವರಿನ ಅಭಿಮಾನಿಗಳು ಸೇರಿ ಭಾರತೀಯ(India fans troll Pakistan cricket team) ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ. ಹಲವು ಮಿಮ್ಸ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮತ್ತೆ ಬಾಬರ್​ ತಲೆದಂಡ?

ಕಳೆದ ವರ್ಷ(2023) ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಬಾಬರ್​ ಸಾರಥ್ಯದಲ್ಲಿ ಪಾಕಿಸ್ತಾನ ತಂಡ ನೀರಸ ಪ್ರದರ್ಶನ ತೋರಿತ್ತು. ಆಡಿದ 9 ಪಂದ್ಯಗಳ ಪೈಕಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ ಲೀಗ್​ ಹಂತದಲ್ಲೇ ಹೊರಬಿದ್ದಿತ್ತು. ಹೀಗಾಗಿ ಬಾಬರ್​ ವಿರುದ್ಧ ಪಾಕ್​ ತಂಡದ ಮಾಜಿ ಆಟಗಾರರು ಸೇರಿ ಅಂದಿನ ಪಿಬಿ ಅಧ್ಯಕ್ಷ ಭಾರೀ ಟೀಕೆ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಬಾಬರ್ ಎಲ್ಲಾ ಮೂರು ಸ್ವರೂಪಗಳ ನಾಯಕತ್ವದಿಂದ ಕೆಳಗಿಳಿದಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲಿ ಪಾಕ್​ ತಂಡ ಅತ್ಯಂತ ಕಳಪೆ ಪ್ರದರ್ಶನ ತೋರಿದ್ದಕ್ಕಾಗಿ ಮತ್ತೆ ಬಾಬರ್​ ಅವರ ತಲೆದಂಡವಾಗುವ ಸಾಧ್ಯತೆ ಅಧಿಕವಾಗಿದೆ ಎನ್ನಲಾಗಿದೆ.

Continue Reading
Advertisement
New Fashion
ಫ್ಯಾಷನ್20 mins ago

New Fashion: ಬ್ಲ್ಯಾಕ್‌ ಡೆನಿಮ್‌ ಕೋ ಆರ್ಡ್ ಸೆಟ್‌ನಲ್ಲಿ ಟ್ರೆಂಡಿಯಾದ ಜಿಪ್ಪರ್‌ ಸ್ಟೈಲ್‌

Trent Boult
ಕ್ರೀಡೆ37 mins ago

Trent Boult: ಕೊನೆಯ ಟಿ20 ವಿಶ್ವಕಪ್​ ಆಡಲು ಸಿದ್ಧರಾದ ಟ್ರೆಂಟ್​ ಬೌಲ್ಟ್

Actor Darshan pavithra gowda relationship secrete
ಸ್ಯಾಂಡಲ್ ವುಡ್38 mins ago

Actor Darshan: ದರ್ಶನ್‌ ಬಲೆಗೆ ಪವಿತ್ರಾ ಗೌಡ ಬಿದ್ದಿದ್ದು ಹೇಗೆ? ಇವರು ಹೀರೋಯಿನ್‌ ಆಗಿದ್ದು ಯಾವಾಗ?

Job Alert
ಉದ್ಯೋಗ46 mins ago

Job Alert: ಗುಡ್‌ನ್ಯೂಸ್‌: ಬ್ಯಾಂಕ್‌ ಆಫ್‌ ಬರೋಡಾದಲ್ಲಿದೆ 627 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Suresh Gopi
ದೇಶ55 mins ago

Suresh Gopi: ಇಂದಿರಾ ಗಾಂಧಿ ಭಾರತದ ಮಾತೆ ಎಂದ ಬಿಜೆಪಿ ಸಂಸದ ಸುರೇಶ್‌ ಗೋಪಿ

anekla news
ಬೆಂಗಳೂರು ಗ್ರಾಮಾಂತರ1 hour ago

Anekal News : ಯುವತಿ ಕೈ ಬಲಿ ಪಡೆದ ಅಕ್ರಮ ಡ್ರೈ ಕ್ಲೀನಿಂಗ್ ಕಾರ್ಖಾನೆ; ಚಿಕಿತ್ಸೆ ಕೊಡಿಸದೆ ಮಾಲೀಕ ಎಸ್ಕೇಪ್‌

Viral Video
Latest1 hour ago

Viral Video: ಜೀವಂತ ಹಾವನ್ನೇ ತರಕಾರಿಯಂತೆ ಕಚ್ಚಿ ತಿಂದ ಬೆಡಗಿ! ಈ ವಿಡಿಯೊ ನೋಡುವ ಮುನ್ನ ಯೋಚಿಸಿ!

Anganwadi workers and supervisors will get the new mobile in uttara Kannada district
ಉತ್ತರ ಕನ್ನಡ1 hour ago

Uttara Kannada News: ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಮೊಬೈಲ್ ಕೊಡುಗೆ

Petrol Diesel Price
ಕರ್ನಾಟಕ1 hour ago

Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

Pakistan Cricket Board
ಕ್ರಿಕೆಟ್2 hours ago

Pakistan Cricket Board: ಟಿ20 ವಿಶ್ವಕಪ್​ನಿಂದ ಹೊರಬಿದ್ದ ಬೆನ್ನಲ್ಲೇ ಹೊಸ ನಿಯಮ ಜಾರಿಗೆ ತಂದ ಪಾಕ್​ ಕ್ರಿಕೆಟ್​ ಮಂಡಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ4 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ23 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ1 day ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌