IND vs AUS: ಕೊಹ್ಲಿ ಬ್ಯಾಟಿಂಗ್​ ಕ್ರಮಾಂಕದ ಮೇಲೆ ಕಣ್ಣಿಟ್ಟ ಶ್ರೇಯಸ್​ ಅಯ್ಯರ್​ Vistara News

ಕ್ರಿಕೆಟ್

IND vs AUS: ಕೊಹ್ಲಿ ಬ್ಯಾಟಿಂಗ್​ ಕ್ರಮಾಂಕದ ಮೇಲೆ ಕಣ್ಣಿಟ್ಟ ಶ್ರೇಯಸ್​ ಅಯ್ಯರ್​

ಶ್ರೇಯಸ್​ ಅಯ್ಯರ್(Shreyas Iyer)​ ಅವರು ವಿಶ್ವಕಪ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಆಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Shreyas Iyer during India’s Asia Cup match against Nepal at Pallekele recently
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದೋರ್​: ಪದೇಪದೆ ಬೆನ್ನುನೋವಿಗೆ ತುತ್ತಾಗಿ ತಂಡದದಿಂದ ಹೊರಗುಳಿಯುತ್ತಿದ್ದ ಶ್ರೇಯಸ್​ ಅಯ್ಯರ್(Shreyas Iyer)​ ಆಸ್ಟ್ರೇಲಿಯಾ(IND vs AUS) ವಿರುದ್ಧದ ದ್ವಿತೀಯ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್​ ನಡೆಸಿ ಶತಕ ಬಾರಿಸಿ ಸಂಭ್ರಮಿಸಿದರು. ಈ ಮೂಲಕ ವಿಶ್ವಕಪ್​ಗೆ ಒಂದು ವಾರ ಬಾಕಿ ಇರುವಾಗ ಗ್ರೇಟೆಸ್ಟ್​ ಕಮ್​ಬ್ಯಾಕ್​ ಮಾಡಿದರು.

ಪಂದ್ಯದ ಬಳಿಕ ಮಾತನಾಡಿದ ಅಯ್ಯರ್​, ಬಹಳ ದಿನಗಳ ಬಳಿಕ ತೋರಿದ ಈ ಪ್ರದರ್ಶನದಿಂದ ವಿಶ್ವಕಪ್​ಗೂ ಮುನ್ನ ನನ್ನಲ್ಲಿ ಹೆಚ್ಚಿನ ಆತ್ಮವಿಶ್ವಾಸ ಮೂಡಿದೆ ಎಂದು ಹೇಳಿದರು. ಇದೇ ವೇಳೆ ವಿಶ್ವಕಪ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಆಡುವ ಇಂಗಿತವನ್ನು ವ್ಯಕ್ತಪಡಿಸಿದರು. “ನನ್ನ ಯೋಜನೆ ಕೊಹ್ಲಿ ಅವರು ಆಡುವ ಮೂರನೇ ಕ್ರಮಾಂಕ. ಆದರೆ ನನಗೆ ತಿಳಿದಿದೆ. ಈ ಸ್ಥಾನ ನನಗೆ ಸಿಗುವುದಿಲ್ಲ ಎಂದು, ಏಕೆಂದರೆ ವಿರಾಟ್ ಈ ಕ್ರಮಾಂಕದಲ್ಲಿ ಬ್ಯಾಟ್​ ಬೀಸುತ್ತಾರೆ. ಹೀಗಾಗಿ ಈ ಸ್ಥಾನವನ್ನು ಪಡೆಯಲು ಯಾವುದೇ ಅವಕಾಶವಿಲ್ಲ. ಆದ್ದರಿಂದ ನಾನು ಯಾವುದೇ ಕ್ರಮಾಂಕ ನೀಡಿದರೂ ಬ್ಯಾಟ್​ ಬೀಸಬಲ್ಲ” ಎಂದು ಹೇಳಿದರು.

ಆಸೀಸ್​ ವಿರುದ್ಧದ ಪಂದ್ಯದಲ್ಲಿ ಅಯ್ಯರ್​ 90 ಎಸೆತ ಎದುರಿಸಿ 11 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 105 ರನ್​ ಬಾರಿಸಿ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರಬಹಿಸಿದರು. ಅವರ ಈ ಪ್ರದರ್ಶನಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗಿಲ್ ಜತೆ​ ಸೇರಿಕೊಂಡು ದ್ವಿತೀಯ ವಿಕೆಟ್​ಗೆ ಭರ್ತಿ 200 ರನ್​ಗಳ ಜತೆಯಾಟನ್ನೂ ನಡೆಸಿದ್ದರು. 

ಗ್ರೇಟ್​ ಕಮ್​ಬ್ಯಾಕ್​

​ಆಸೀಸ್​ ವಿರುದ್ಧದ ಟೆಸ್ಟ್​ ಸರಣಿಯ ವೇಳೆ ಅಯ್ಯರ್​ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿ 6 ತಿಂಗಳ ಕಾಲ ಕ್ರಿಕೆಟ್​ ನಿಂದ ದೂರ ಉಳಿದಿದ್ದರು. ಇದಾದ ಬಳಿಕ ಅವರು ಐಪಿಎಲ್​ನಿಂದಲೂ ದೂರ ಉಳಿದಿದ್ದರು. ಶಸ್ತ್ರಚಿಕಿತ್ಸಗೆ ಒಳಗಾಗಿದ್ದ ಬಳಿಕ ಬೆಂಗಳೂರಿನ ರಾಷ್ಟ್ರೀಯ ಅಕಾಡೆಮಿಯಲ್ಲಿ ಪುನಶ್ಚೇತನದಲ್ಲಿ ಗುಣಮುಖರಾಗಿದ್ದರು. ಹೀಗಾಗಿ ಅವರನ್ನು ಏಷ್ಯಾ ಕಪ್​ ಜತೆಗೆ ವಿಶ್ವಕಪ್​ ತಂಡದಲ್ಲಿಯೂ ಅವಕಾಶ ನೀಡಲಾಗಿತ್ತು. ವಿಶ್ವಕಪ್​ಗೆ ಒಂದು ವಾರ ಇರುವಾಗ ಬಲಿಷ್ಠ ಆಸೀಸ್​ ವಿರುದ್ಧ ಶತಕ ಬಾರಿಸಿ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅವರ ಬ್ಯಾಟಿಂಗ್​ ಫಾರ್ಮ್​ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಹೆಚ್ಚು ನೆರವಾಗಲಿದೆ. ಅಯ್ಯರ್​ ಮಾತ್ರವಲ್ಲದೆ ವಿಶ್ವಕಪ್​ನಲ್ಲಿ ಸ್ಥಾನ ಪಡೆದ ಎಲ್ಲ ಆಟಗಾರರು ಕೂಡ ಉತ್ತಮ ಪ್ರದರ್ಶನ ತೋರುವ ಮೂಲಕ ವಿಶ್ವಕಪ್​ ಗೆಲ್ಲುವ ಬರವಸೆ ಮೂಡಿಸಿದ್ದಾರೆ.

ಇದನ್ನೂ ಓದಿ IND vs AUS: ಆಸೀಸ್​ ವಿರುದ್ಧದ ಅಂತಿಮ ಪಂದ್ಯಕ್ಕೆ ಶುಭಮನ್​ ಗಿಲ್,ಶಾರ್ದೂಲ್ ಅಲಭ್ಯ

ನಂಬಿಕೆಯ ಆಟಗಾರ

ಮಧ್ಯಮ ಕ್ರಮಾಂಕದ ಬ್ಯಾಟರ್‌ ಶ್ರೇಯಸ್​ ಅಯ್ಯರ್​ ಭರವಸೆಯ ಪ್ರತಿಭಾನ್ವಿತ ಆಟಗಾರ. ಇದುವರೆಗೆ ಟೀಮ್ ಇಂಡಿಯಾ ಪರ 10 ಟೆಸ್ಟ್, 45 ಏಕದಿನ ಮತ್ತು 49 ಟಿ20 ಪಂದ್ಯಗಳನ್ನು ಆಡಿದ್ದಾರೆ. 2017ರಲ್ಲಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 50 ಓವರ್‌ಗಳ ಸ್ವರೂಪದಲ್ಲಿ, ಅವರು 46.13 ಸರಾಸರಿಯಲ್ಲಿ 1753 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

Ind vs Aus : ಮ್ಯಾಕ್ಸ್​ವೆಲ್​ ಸ್ಫೋಟಕ ಶತಕ; 3ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು

ind vs aus : ಭಾರತ ತಂಡ ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ಕೈವಶಪಡಿಸಿಕೊಂಡು ಬೀಗಿದೆ.

VISTARANEWS.COM


on

Maxwell
Koo

ಗುವಾಹಟಿ: ಮ್ಯಾಕ್ಸ್​ವೆಲ್​ (105, 48 ಎಸೆತ, 8 ಫೋರ್​, 8 ಸಿಕ್ಸರ್​) ಬಾರಿಸಿದ ಅಬ್ಬರದ ಶತಕದ ನೆರವು ಪಡೆದ ಆಸ್ಟ್ರೇಲಿಯಾ (Ind vs Aus) ತಂಡ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ವಿರುದ್ಧ 5 ವಿಕೆಟ್​ಗಳ ವಿರೋಚಿತ ಗೆಲುವು ತನ್ನದಾಗಿಸಿಕೊಂಡಿತು. ಈ ಮೂಲಕ ಪ್ರವಾಸಿ ತಂಡವು ಸರಣಿ ಭಾರತದ ಕೈವಶವಾಗುವುದನ್ನು ತಡೆಯಿತು. ಭಾರತ ತಂಡ ಸರಣಿಯಲ್ಲಿ 2-1 ಮುನ್ನಡೆಯನ್ನು ಪಡೆದುಕೊಂಡಿದೆ. ಏತನ್ಮಧ್ಯೆ, ಭಾರತ ತಂಡದ ಋತುರಾಜ್ ಗಾಯಕ್ವಾಡ್​ ಬಾರಿಸಿದ ಟಿ20 ಚೊಚ್ಚಲ ಶತಕವು ವ್ಯರ್ಥವಾಯಿತು.

ಇಲ್ಲಿನ ಬರ್ಸಪಾರ ಕ್ರಿಕೆಟ್​ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಅಂತೆಯೇ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ ಕಳೆದುಕೊಂಡು 222 ರನ್ ಬಾರಿಸಿತು. ದೊಡ್ಡ ಗುರಿಯನ್ನು ಪಡೆದ ಆಸ್ಟ್ರೇಲಿಯಾ ತಂಡ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಕೊನೇ ಎಸೆತದಲ್ಲಿ ಫೋರ್ ಬಾರಿಸುವ ಮೂಲಕ 225 ರನ್ ಬಾರಿಸಿ ಗೆಲುವು ಸಾಧಿಸಿತು. ಆಸ್ಟ್ರೇಲಿಯಾ ತಂಡಕ್ಕೆ ಕೊನೇ ಓವರ್​ನಲ್ಲಿ 21 ರನ್ ಬೇಕಾಗಿತ್ತು. ಆದರೆ, ಬೌಲರ್ ಪ್ರಸಿದ್ಧ್​ ಕೃಷ್ಣ 23 ರನ್ ಸೋರಿಕೆ ಮಾಡಿದರು. ಮ್ಯಾಕ್ಸ್​ವೆಲ್​ ನಿರಾಯಸವಾಗಿ ಆಡಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಮ್ಯಾಕ್ಸ್​ವೆಲ್ ಶತಕ

ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಭಾರತ ಮೊದಲ ವಿಕೆಟ್​ಗೆ 47 ರನ್ ಬಾರಿಸಿತು. 66 ರನ್​ಗೆ 2 ವಿಕೆಟ್​ ಕಳೆದುಕೊಂಡಿತು. ಆದರೆ, ಆ ಬಳಿಕ ಆಡಲು ಬಂದ ಮ್ಯಾಕ್ಸ್​ವೆಲ್​ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 47 ಎಸೆತಗಳಲ್ಲಿ ಶತಕ ಬಾರಿಸಿದ ಅವರು ಭಾರತದ ವಿಜಯ ಕಸಿದುಕೊಂಡರು.

ಭಾರತದ ಉತ್ತಮ ಬ್ಯಾಟಿಂಗ್​

ಮೊದಲು ಬ್ಯಾಟ್ ಮಾಡಿದ ಭಾರತ 14 ರನ್​ಗಳಿಗೆ ಮೊದಲ ವಿಕೆಟ್​ ಕಳೆದುಕೊಂಡಿತು. ಹಿಂದಿನ ಪಂದ್ಯದಲ್ಲಿ ಅರ್ಧ ಶತಕ ಬಾರಿಸಿದ್ದ ಯಶಸ್ವಿ ಜೈಸ್ವಾಲ್​ 6 ರನ್​ಗೆ ಔಟಾದರು. ಆದರೆ, ಮತ್ತೊಂದು ಬದಿಯಲ್ಲಿ ಗಟ್ಟಿಯಾಗಿ ನಿಂತಿದ್ದ ಋತುರಾಜ್ ಇನಿಂಗ್ಸ್​ ಕಟ್ಟಲು ಮುಂದುವರಿಸಿದರು. ಕಳೆದ ಪಂದ್ಯದಲ್ಲಿ ಸ್ಫೋಟಕ ಅರ್ಧ ಶತಕ ಬಾರಿಸಿ ಮಿಂಚಿದ್ದ ಇಶಾನ್ ಕಿಶನ್ ಈ ಪಂದ್ಯದಲ್ಲಿ ಚಾಪು ಮೂಡಿಸಲು ವಿಫಲರಾದರು. ಅವರು ಶೂನ್ಯಕ್ಕೆ ಔಟಾಗುವ ಮೂಲಕ ಭಾರತಕ್ಕೆ ಆಘಾತ ಎದುರಾಯಿತು. 24 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಆ ಬಲಿಕ ಕ್ರೀಸ್​ಗೆ ಬಂದ ನಾಯಕ ಸೂರ್ಯಕುಮಾರ್ ಯಾದವ್ ಜವಾಬ್ದಾರಿಯುತವಾಗಿ ಆಡಿದರು. ಅವರು 29 ಎಸೆತಗಳಲ್ಲಿ 39 ರನ್ ಬಾರಿಸಿದರು. ಆದರೆ, 11ನೇ ಓವರ್​ನಲ್ಲಿ ಅವರು ವಿಕೆಟ್​ ಒಪ್ಪಿಸಿದಾಗ ತಂಡದ ಮೊತ್ತ 81 ಆಗಿತ್ತು. ಬಳಿಕ ಜತೆಯಾದ ತಿಲಕ್ ವರ್ಮಾ ಹಾಗೂ ಋತುರಾಜ್ ಶತಕದ ಜತೆಯಾಟವಾಡಿದರು.

ಋತುರಾಜ್​ ಚೊಚ್ಚಲ ಟಿ20 ಶತಕ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಮೂರನೇ ಹಣಾಹಣಿಯಲ್ಲಿ ಭಾರತದ ಆರಂಭಿಕ ಬ್ಯಾಟರ್​ ಋತುರಾಜ್ ಗಾಯಕ್ವಾಡ್ ಅಜೇಯ ಶತಕ ಬಾರಿಸಿದ್ದಾರೆ. ಇದು ಟಿ20 ಮಾದರಿಯಲ್ಲಿ ಅವರ ಮೊಟ್ಟ ಮೊದಲ ಶತಕವಾಗಿದೆ. ಗಾಯಕ್ವಾಡ್ ಕೇವಲ 57 ಎಸೆತಗಳಲ್ಲಿ 13 ಬೌಂಡರಿ ಮತ್ತು 7 ಸಿಕ್ಸರ್ ಸೇರಿದಂತೆ 123 ರನ್ ಗಳಿಸಿದರು. ಬಲಗೈ ಬ್ಯಾಟರ್​ 215.8 ಸ್ಟ್ರೈಕ್​ರೇಟ್​ನಲ್ಲಿ ಬ್ಯಾಟ್ ಬೀಸಿದರು. ಅವರ ಅಬ್ಬರದ ಬ್ಯಾಟಿಂಗ್​ನಿಂದಾಗಿ ಮೆನ್​ ಇನ್ ಬ್ಲೂ ನಿಗದಿತ 20 ಓವರ್​ಗಳಲ್ಲಿ 222 ರನ್ ಗಳಿಸಿತು. ಮೊದಲ 21 ಎಸೆತಗಳಿಗೆ 21 ರನ್ ಬಾರಿಸಿದ್ದ ಋತುರಾಜ್​ ಬಳಿಕ 36 ಎಸೆತಗಳಿಗೆ 102 ರನ್ ಬಾರಿಸಿ ಅಜೇಯರಾಗಿ ಉಳಿದರು.

ಭಾರತ ತಂಡದ ಪಾಲಿಗೆ ಇದು ನೆನಪಿಡಬೇಕಾದ ಇನ್ನಿಂಗ್ಸ್ ಆಗಿದೆ. ಟಿ20ಐನಲ್ಲಿ ಭಾರತ ಮೂರನೇ ಬಾರಿ 200+ ರನ್ ಗಳಿಸಿದ ಸಾಧನೆಯನ್ನೂ ಮಾಡಿದೆ. ಇದು ಭಾರತ ತಂಡ ಪಾಲಿಗೆ ವಿಶೇಷ ಸಾಧನೆಯಾಗಿದೆ.

ಮುಂದಿನ ನಾಯಕ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟಿ20 ಪಂದ್ಯದಲ್ಲಿ ಶತಕ ಬಾರಿಸಿದ ಋತುರಾಜ್ ಗಾಯಕ್ವಾಡ್ ಅವರನ್ನು ಮುಂದಿನ ನಾಯಕನನ್ನಾಗಿ ಆಯ್ಕೆ ಮಾಡಬೇಕು ಎಂದು ಅಭಿಮಾನಿಗಳು ಹೇಳಿದ್ದಾರೆ. ಆರಂಭಿಕ ಆಟಗಾರ ಎರಡನೇ ಪಂದ್ಯದಲ್ಲಿ ಅರ್ಧಶತಕವನ್ನು ಗಳಿಸಿದ್ದರು ಮತ್ತು ಈಗ ದೊಡ್ಡ ಇನಿಂಗ್ಸ್ ಮೂಲಕ ಮೂರನೇ ಪಂದ್ಯದಲ್ಲಿ ಭಾರತವನ್ನು 200 ರನ್ ಗಡಿ ದಾಟುವಂತೆ ಮಾಡಿದ್ದಾರೆ.

Ind vs Aus : ತಿಲಕ್ ವರ್ಮಾಗೆ ಇದು ಕೊನೇ ಚಾನ್ಸ್​?

ಬಲಗೈ ಆರಂಭಿಕ ಬ್ಯಾಟ್ಸ್ಮನ್ 57 ಎಸೆತಗಳಲ್ಲಿ 123 ರನ್ ಗಳಿಸುವ ಮೂಲಕ ಭಾರತವನ್ನು 10.2 ಓವರ್​ಗಳಲ್ಲಿ 3 ವಿಕೆಟ್​ಗೆ 81 ರನ್​ ಗಳಿಸಿದ್ದ ಭಾರತ ತಂಡವನ್ನು 20 ಓವರ್​ಗಳಲ್ಲಿ 3 ವಿಕೆಟ್ಗೆ 222 ರನ್​ನತ್ತ ಕೊಂಡೊಯ್ದಿದ್ದರು. ಐದನೇ ವಿಕೆಟ್ ಜೊತೆಯಾಟದಲ್ಲಿ ತಿಲಕ್ ವರ್ಮಾ ಕೇವಲ 31 ರನ್ ಗಳಿಸಿದರು. ಈ ವೇಳೆ ಋತುರಾಜ್ ಪಂದ್ಯದ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದರು. ಆರಂಭಿಕ ಆಟಗಾರ ತಂಡದ 55% ರನ್ ಗಳಿಸಿದರು. ಉಳಿದವರು ಇತರ ಸೇರಿದಂತೆ 63 ಎಸೆತಗಳಲ್ಲಿ ಕೇವಲ 99 ರನ್ ಗಳಿಸಿದರು.

Continue Reading

ಕ್ರಿಕೆಟ್

Ruturaj Gaikwad : ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ ಋತುರಾಜ್​

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಪಂದ್ಯದಲ್ಲಿ ಅರ್ಧ ಶತಕ ಬಾರಿಸಿದ್ದ ಋತುರಾಜ್ ಗಾಯಕ್ವಾಡ್​ (Ruturaj Gaikwad) ಈ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದಾರೆ.

VISTARANEWS.COM


on

Ruturaj Gaikwad
Koo

ಗುವಾಹಟಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಮೂರನೇ ಹಣಾಹಣಿಯಲ್ಲಿ ಭಾರತದ ಆರಂಭಿಕ ಬ್ಯಾಟರ್​ ಋತುರಾಜ್ ಗಾಯಕ್ವಾಡ್ ಅಜೇಯ ಶತಕ ಬಾರಿಸಿದ್ದಾರೆ. ಇದು ಟಿ20 ಮಾದರಿಯಲ್ಲಿ ಅವರ ಮೊಟ್ಟ ಮೊದಲ ಶತಕವಾಗಿದೆ. ಗಾಯಕ್ವಾಡ್ ಕೇವಲ 57 ಎಸೆತಗಳಲ್ಲಿ 13 ಬೌಂಡರಿ ಮತ್ತು 7 ಸಿಕ್ಸರ್ ಸೇರಿದಂತೆ 123 ರನ್ ಗಳಿಸಿದರು. ಬಲಗೈ ಬ್ಯಾಟರ್​ 215.8 ಸ್ಟ್ರೈಕ್​ರೇಟ್​ನಲ್ಲಿ ಬ್ಯಾಟ್ ಬೀಸಿದರು. ಅವರ ಅಬ್ಬರದ ಬ್ಯಾಟಿಂಗ್​ನಿಂದಾಗಿ ಮೆನ್​ ಇನ್ ಬ್ಲೂ ನಿಗದಿತ 20 ಓವರ್​ಗಳಲ್ಲಿ 222 ರನ್ ಗಳಿಸಿತು. ಮೊದಲ 21 ಎಸೆತಗಳಿಗೆ 21 ರನ್ ಬಾರಿಸಿದ್ದ ಋತುರಾಜ್​ ಬಳಿಕ 36 ಎಸೆತಗಳಿಗೆ 102 ರನ್ ಬಾರಿಸಿ ಅಜೇಯರಾಗಿ ಉಳಿದರು.

ಭಾರತ ತಂಡದ ಪಾಲಿಗೆ ಇದು ನೆನಪಿಡಬೇಕಾದ ಇನ್ನಿಂಗ್ಸ್ ಆಗಿದೆ. ಟಿ20ಐನಲ್ಲಿ ಭಾರತ ಮೂರನೇ ಬಾರಿ 200+ ರನ್ ಗಳಿಸಿದ ಸಾಧನೆಯನ್ನೂ ಮಾಡಿದೆ. ಇದು ಭಾರತ ತಂಡ ಪಾಲಿಗೆ ವಿಶೇಷ ಸಾಧನೆಯಾಗಿದೆ.

ಇಲ್ಲಿನ ಬರ್ಸಪಾರ ಕ್ರಿಕೆಟ್​ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಆದರೆ, 14 ರನ್​ಗಳಿಗೆ ಮೊದಲ ವಿಕೆಟ್​ ಕಳೆದುಕೊಂಡಿತು. ಹಿಂದಿನ ಪಂದ್ಯದಲ್ಲಿ ಅರ್ಧ ಶತಕ ಬಾರಿಸಿದ್ದ ಯಶಸ್ವಿ ಜೈಸ್ವಾಲ್​ 6 ರನ್​ಗೆ ಔಟಾದರು. ಆದರೆ, ಮತ್ತೊಂದು ಬದಿಯಲ್ಲಿ ಗಟ್ಟಿಯಾಗಿ ನಿಂತಿದ್ದ ಋತುರಾಜ್ ಇನಿಂಗ್ಸ್​ ಕಟ್ಟಲು ಮುಂದುವರಿಸಿದರು.

ಕಳೆದ ಪಂದ್ಯದಲ್ಲಿ ಸ್ಫೋಟಕ ಅರ್ಧ ಶತಕ ಬಾರಿಸಿ ಮಿಂಚಿದ್ದ ಇಶಾನ್ ಕಿಶನ್ ಈ ಪಂದ್ಯದಲ್ಲಿ ಚಾಪು ಮೂಡಿಸಲು ವಿಫಲರಾದರು. ಅವರು ಶೂನ್ಯಕ್ಕೆ ಔಟಾಗುವ ಮೂಲಕ ಭಾರತಕ್ಕೆ ಆಘಾತ ಎದುರಾಯಿತು. 24 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಆ ಬಲಿಕ ಕ್ರೀಸ್​ಗೆ ಬಂದ ನಾಯಕ ಸೂರ್ಯಕುಮಾರ್ ಯಾದವ್ ಜವಾಬ್ದಾರಿಯುತವಾಗಿ ಆಡಿದರು. ಅವರು 29 ಎಸೆತಗಳಲ್ಲಿ 39 ರನ್ ಬಾರಿಸಿದರು. ಆದರೆ, 11ನೇ ಓವರ್​ನಲ್ಲಿ ಅವರು ವಿಕೆಟ್​ ಒಪ್ಪಿಸಿದಾಗ ತಂಡದ ಮೊತ್ತ 81 ಆಗಿತ್ತು. ಬಳಿಕ ಜತೆಯಾದ ತಿಲಕ್ ವರ್ಮಾ ಹಾಗೂ ಋತುರಾಜ್ ಶತಕದ ಜತೆಯಾಟವಾಡಿದರು/

ಮುಂದಿನ ನಾಯಕ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟಿ20 ಪಂದ್ಯದಲ್ಲಿ ಶತಕ ಬಾರಿಸಿದ ಋತುರಾಜ್ ಗಾಯಕ್ವಾಡ್ ಅವರನ್ನು ಮುಂದಿನ ನಾಯಕನನ್ನಾಗಿ ಆಯ್ಕೆ ಮಾಡಬೇಕು ಎಂದು ಅಭಿಮಾನಿಗಳು ಹೇಳಿದ್ದಾರೆ. ಆರಂಭಿಕ ಆಟಗಾರ ಎರಡನೇ ಪಂದ್ಯದಲ್ಲಿ ಅರ್ಧಶತಕವನ್ನು ಗಳಿಸಿದ್ದರು ಮತ್ತು ಈಗ ದೊಡ್ಡ ಇನಿಂಗ್ಸ್ ಮೂಲಕ ಮೂರನೇ ಪಂದ್ಯದಲ್ಲಿ ಭಾರತವನ್ನು 200 ರನ್ ಗಡಿ ದಾಟುವಂತೆ ಮಾಡಿದ್ದಾರೆ.

ಬಲಗೈ ಆರಂಭಿಕ ಬ್ಯಾಟ್ಸ್ಮನ್ 57 ಎಸೆತಗಳಲ್ಲಿ 123 ರನ್ ಗಳಿಸುವ ಮೂಲಕ ಭಾರತವನ್ನು 10.2 ಓವರ್​ಗಳಲ್ಲಿ 3 ವಿಕೆಟ್​ಗೆ 81 ರನ್​ ಗಳಿಸಿದ್ದ ಭಾರತ ತಂಡವನ್ನು 20 ಓವರ್​ಗಳಲ್ಲಿ 3 ವಿಕೆಟ್ಗೆ 222 ರನ್​ನತ್ತ ಕೊಂಡೊಯ್ದಿದ್ದರು. ಐದನೇ ವಿಕೆಟ್ ಜೊತೆಯಾಟದಲ್ಲಿ ತಿಲಕ್ ವರ್ಮಾ ಕೇವಲ 31 ರನ್ ಗಳಿಸಿದರು. ಈ ವೇಳೆ ಋತುರಾಜ್ ಪಂದ್ಯದ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದರು. ಆರಂಭಿಕ ಆಟಗಾರ ತಂಡದ 55% ರನ್ ಗಳಿಸಿದರು. ಉಳಿದವರು ಇತರ ಸೇರಿದಂತೆ 63 ಎಸೆತಗಳಲ್ಲಿ ಕೇವಲ 99 ರನ್ ಗಳಿಸಿದರು.

Continue Reading

ಕ್ರಿಕೆಟ್

Ind vs Aus : ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತದಿಂದ ಮೊದಲು ಬ್ಯಾಟಿಂಗ್​

ind vs aus : ಐದು ಪಂದ್ಯಗಳ ಸರಣಿಯಲ್ಲಿ ಭಾರತ ಮೊದಲೆರಡು ಪಂದ್ಯಗಳನ್ನು ಗೆದ್ದು 2-0 ಮುನ್ನಡೆ ಪಡೆದುಕೊಂಡಿದೆ.

VISTARANEWS.COM


on

Suryakumar Yadav
Koo

ಗುವಾಹಟಿ: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ (Ind vs Aus) ತಂಡ ಟಾಸ್ ಸೋತಿದೆ. ಹೀಗಾಗಿ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದುಕೊಂಡಿದೆ. ಹೀಗಾಗಿ ಭಾರತ ತಂಡ ಮೊದಲು ಬ್ಯಾಟ್ ಮಾಡಿ ದೊಡ್ಡ ಮೊತ್ತವನ್ನು ಪೇರಿಸಿ ಆಸ್ಟ್ರೇಲಿಯಾ ತಂಡವನ್ನು ಕಟ್ಟಿ ಹಾಕುವ ಸವಾಲನ್ನು ಪಡೆದುಕೊಂಡಿದೆ. ಭಾರತ ತಂಡ ಐದು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆಯನ್ನು ಪಡೆದುಕೊಂಡಿರುವ ಕಾರಣ ಈ ಪಂದ್ಯದಲ್ಲಿ ಗೆದ್ದರೆ ಸರಣಿ ಕೈವಶವಾಗಲಿದೆ. ಏತನ್ಮಧ್ಯೆ ಪ್ರವಾಸಿ ಆಸ್ಟ್ರೇಲಿಯಾ ತಂಡಕ್ಕೆ ಸರಣಿಯನ್ನು ಜೀವಂತವಾಗಿಡಲು ಈ ಪಂದ್ಯವನ್ನು ಗೆಲ್ಲುವ ಅನಿವಾರ್ಯತೆ ಎದುರಾಗಿದೆ.

ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತವು ಅಜೇಯ ಮುನ್ನಡೆ ಸಾಧಿಸಲು ಕೇವಲ ಒಂದು ಗೆಲುವಿನ ದೂರದಲ್ಲಿದೆ. ಇತ್ತೀಚಿನ 2023 ರ ವಿಶ್ವಕಪ್​​ನ ಭಾಗವಾಗಿದ್ದ ಮತ್ತು 2024ರ ಮಧ್ಯದಲ್ಲಿ ಮುಂಬರುವ ಟಿ 20 ವಿಶ್ವ ಕಪ್​ಗೆ ಸಿದ್ದತೆಗಳನ್ನು ಮಾಡುತ್ತಿರುವ ಇತ್ತಂಡಗಳು ತಮ್ಮ ಪ್ರಮುಖ ಆಟಗಾರರಿಗೆ ಉಭಯ ತಂಡಗಳು ವಿಶ್ರಾಂತಿ ನೀಡಿವೆ. ಮೊದಲ ಎರಡು ಪಂದ್ಯಗಳನ್ನು ಸೋತ ನಂತರ, ಆಸ್ಟ್ರೇಲಿಯಾ ತನ್ನ ತಂಡದಲ್ಲಿ ಮತ್ತಷ್ಟು ಬದಲಾವಣೆಗಳನ್ನು ಮಾಡಿದೆ, ಸ್ಟೀವನ್ ಸ್ಮಿತ್ ಮತ್ತು ಆಡಮ್ ಜಂಪಾ ಈಗಾಗಲೇ ಆಸ್ಟ್ತೇಲಿಯಾ ವಿಮಾನವನ್ನು ಹತ್ತಿದ್ದಾರೆ. ಅವರೊಂದಿಗೆ ಗ್ಲೆನ್ ಮ್ಯಾಕ್ಸ್ವೆಲ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್ ಮತ್ತು ಸೀನ್ ಅಬಾಟ್ ಸೇರಿಕೊಳ್ಳಲಿದ್ದಾರೆ.

ಇದನ್ನೂ ಓದಿ : Ind vs Aus : ತಿಲಕ್ ವರ್ಮಾಗೆ ಇದು ಕೊನೇ ಚಾನ್ಸ್​?

ಟಾಸ್​ ಸೋತ ಸೂರ್ಯಕುಮಾರ್ ಯಾದವ್ ಮಾತನಾಡಿ ಮೊದಲು ಬ್ಯಾಟಿಂಗ್ ಮಾಡಲು ಸಂತೋಷವಾಗುತ್ತಿದೆ. ಇಬ್ಬನಿ ಬೇಗನೆ ಬಂದರೂ ಆಶ್ಚರ್ಯವಿಲ್ಲ. ನಾವು ಉತ್ತಮ ಆಟದ ಯೋಜನೆಗಳನ್ನು ಹೊಂದಿದ್ದೇವೆ. ನಮ್ಮ ತಂಡದಲ್ಲಿ ಒಂದು ಬದಲಾವಣೆ ಇದೆ. ಮುಖೇಶ್ ಬದಲಿಗೆ ಅವೇಶ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಮದುವೆಯಾಗಿ ಅವರು ತಂಡದಿಂದ ಹೊರಕ್ಕೆ ಹೋಗಿದ್ದಾರೆ. ಅವರಿಗೆ ಶುಭ ಹಾರೈಸುತ್ತೇವೆ ಎಂದು ಹೇಳಿದ್ದಾರೆ.

ಮ್ಯಾಥ್ಯೂ ವೇಡ್ ಟಾಸ್ ಗೆದ್ದ ಬಳಿಕ ಮಾತನಾಡಿ ನಾವು ಬೌಲಿಂಗ್ ಮಾಡುತ್ತೇವೆ. ಈ ನಿರ್ಧಾರ ಪ್ರಮುಖವೆಂದು ನಾನು ಭಾವಿಸುವುದಿಲ್ಲ. ಮೈದಾಣ ಈಗಾಗಲೇ ಸಾಕಷ್ಟು ಒದ್ದೆಯಾಗಿದೆ. ಟ್ರಾವಿಸ್ ಹೆಡ್, ಕೇನ್ ರಿಚರ್ಡ್ಸನ್ ಮತ್ತು ಜೇಸನ್ ಬೆಹ್ರೆನ್ಡಾರ್ಫ್ ಆಡುತ್ತಿದ್ದಾರೆ ಎಂದು ಹೇಳಿದರು.

ತಂಡಗಳು ಹೀಗಿವೆ

ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಆ್ಯರೋನ್ ಹಾರ್ಡಿ, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ಸಿ & ವಿಕೆ), ನಾಥನ್ ಎಲ್ಲಿಸ್, ಜೇಸನ್ ಬೆಹ್ರೆನ್ಡಾರ್ಫ್, ತನ್ವೀರ್ ಸಂಘಾ, ಕೇನ್ ರಿಚರ್ಡ್ಸನ್.

ಭಾರತ: ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆ), ಸೂರ್ಯಕುಮಾರ್ ಯಾದವ್ (ಸಿ), ರಿಂಕು ಸಿಂಗ್, ತಿಲಕ್ ವರ್ಮಾ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷ್ದೀಪ್ ಸಿಂಗ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ.

Continue Reading

ಕ್ರಿಕೆಟ್

IPL 2024 : ದುಡ್ಡು ಖಾಲಿಯಾಗಿದ್ದು ಆರ್​ಸಿಬಿಯದ್ದು, ಲಾಭ ಆಗುತ್ತಿರುವುದು ಮುಂಬೈಗೆ!

IPL 2024 : ಕ್ಯಾಮೆರೂನ್ ಗ್ರೀನ್ ಅವರನ್ನು ಪಡೆಯಲು ಆರ್​ಸಿಬಿ ತಂಡ 17.5 ಕೋಟಿ ರೂಪಾಯಿ ಮುಂಬಯಿ ತಂಡಕ್ಕೆ ನೀಡಿದೆ.

VISTARANEWS.COM


on

Cameron Green
Koo

ಬೆಂಗಳೂರು: ಗುಜರಾತ್ ಟೈಟಾನ್ಸ್ ತಂಡದ ಮಾಜಿ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ 2024 ರಲ್ಲಿ ಆಡಲು ಮುಂಬೈ ಇಂಡಿಯನ್ಸ್ ಸೇರಲು ನಿರ್ಧರಿಸಿದಾಗಿನಿಂದ ಐಪಿಎಲ್​ 2024ನೇ ಆವೃತ್ತಿಯು ಕಳೆಗಟ್ಟುತ್ತಿದೆ. ಹೊಸ ಫ್ರಾಂಚೈಸಿ ಗುಜರಾತ್ ಟೈಟನ್ಸ್ ್ಪರ ನಾಯಕನಾಗಿ ಮತ್ತು ಆಟಗಾರನಾಗಿ ಒಂದೆರಡು ಯಶಸ್ವಿ ವರ್ಷಗಳ ಕಳೆದ ನಂತರ ಅವರು ಮುಂಬೈಗೆ ವಾಪಸಾಗಿದ್ದಾರೆ. ಅವರೀಗ , ರೋಹಿತ್ ಶರ್ಮಾ ನೇತೃತ್ವದ ತಂಡದ ಜತೆ ಹೊಸ ಒಪ್ಪಂದ ಮಾಡಿಕೊಂಡಿದ್ದಾರೆ. ಇದರಿಂದ ಅವರು ಈ ಫ್ರಾಂಚೈಸಿಯ ಭವಿಷ್ಯದ ನಾಯಕ ಎಂದೇ ಹೇಳಲಾಗುತ್ತಿದೆ. ಆದರೆ, ಈ ಟ್ರೇಡಿಂಗ್ ಡೀಲ್ ಅತ್ಯಂತ ಕುತೂಹಲಕಾರಿಯಾಗಿತ್ತು. ಅವರಿಗೆ ನೀಡಬೇಕಾದ 15 ಕೋಟಿ ರೂಪಾಯಿ ಮೊತ್ತವನ್ನು ಸಜ್ಜುಗೊಳಿಸಲು ಮುಂಬಯಿ ಇಂಡಿಯನ್ಸ್​ ತಂಡ ಹೊಸ ಐಡಿಯಾ ಮಾಡಿತ್ತು. ತನ್ನ ತಂಡದಲ್ಲಿರುವ 17.5 ಕೋಟಿ ರೂಪಾಯಿ ಮೌಲ್ಯದ ಆಸ್ಟ್ರೇಲಿಯನ್​ ಆಲ್​ರೌಂಡರ್ ಕ್ಯಾಮೆರೂನ್ ಗ್ರೀನ್ ಅವರನ್ನು ಬೆಂಗಳೂರು ತಂಡಕ್ಕೆ ಮಾರಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಸ್ಟಾರ್ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಅವರನ್ನು ಖರೀದಿಸಲು ಆಸಕ್ತಿ ತೋರಿಸಿದಾಗ ಮುಂಬೈ ತಕ್ಷಣವೇ ಒಪ್ಪಿಕೊಂಡಿತ್ತು. ಇತ್ತ ಆರ್​ಸಿಬಿ ಗ್ರೀನ್ ಅವರನ್ನು ಪಡೆಯಲು ಕೆಲವು ಆಟಗಾರರನ್ನು ತ್ಯಾಗ ಮಾಡಿತು. ಐಪಿಎಲ್ ಇತಿಹಾಸದಲ್ಲಿ ಆಸ್ಟ್ರೇಲಿಯಾದ ಆಟಗಾರ ಅತಿ ಹೆಚ್ಚು ಸಂಭವಾನೆ ಪಡೆಯುವ ಐಪಿಎಲ್ ಆಟಗಾರ. ಆ ಹಣವನ್ನು ಹೊಂದಿಸಲು ಆರ್​ಸಿಬಿಯೂ ಸಿಕ್ಕಾಪಟ್ಟೆ ಕಸರತ್ತು ಮಾಡಿತು. ಆದರೆ, ಈ ಪ್ರಕ್ರಿಯೆಯ ಒಟ್ಟು ಲಾಭ ಮಾತ್ರ ಮುಂಬೈ ತಂಡಕ್ಕೆ ಎಂದು ಮಾಜಿ ಕ್ರಿಕೆಟಿಗರು ಅಂದಾಜು ಮಾಡಿದ್ದಾರೆ.

ಮುಂಬೈಗೆ ಉಪಕಾರ ಮಾಡಿದ ಆರ್​ಸಿಬಿ

ಈ ವಹಿವಾಟು ಪರಿಸ್ಥಿತಿಯನ್ನು ವಿಶ್ಲೇಷಿಸಿದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ, ಆರ್​ಸಿಬಿ ಈ ವಿಚಾರದಲ್ಲಿ ಮುಂಬೈಗೆ ದೊಡ್ಡ ಉಪಕಾರ ಮಾಡಿದೆ ಎಂದು ಹೇಳಿದ್ದಾರೆ. ಏಕೆಂದರೆ ಆರ್​ಸಿಬಿಯ ಬೆಂಬಲವಿಲ್ಲದೆ ಐದು ಬಾರಿಯ ಚಾಂಪಿಯನ್ಸ್ ಪಾಂಡ್ಯ ಅವರನ್ನು ವ್ಯಾಪಾರದಲ್ಲಿ ಪಡೆಯುವುದು ಆ ತಂಡಕ್ಕೆ ಸುಲಭವಿರಲಿಲ್ಲ ಎಂದು ಹೇಳಿದೆ. ಒಂದು ಕಡೆ ಆಲ್​ರೌಂಡರ್​ ಸ್ಥಾನ ಭರ್ತಿ ಮಾಡುವ ಜತೆಗೆ ಮತ್ತೊಂದು ಕಡೆಗೆ ದುಡ್ಡು ಕೂಡ ಮುಂಬೈ ಉಳಿಸಿದೆ ಎಂದು ಹೇಳಿದ್ದಾರೆ ಅವರು. ಆರ್​​ಸಿಬಿ ಹರಾಜಿನ ಮೂಲಕವೇ ಗ್ರೀನ್ ಅವರನ್ನು ಪಡೆಯಬಹುದಾಗಿತ್ತು ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಚೋಪ್ರಾ ಮುಂಬೈ ತಂಡದ ವ್ಯವಹಾರ ಚಾತುರ್ಯವನ್ನು ಮೆಚ್ಚಿದ್ದಾರೆ.

ಇದನ್ನೂ ಓದಿ : IPL 2024 : ಪಾಂಡ್ಯ- ರೋಹಿತ್​; ಮುಂಬೈ ತಂಡದ ನಾಯಕ ಯಾರಾಗಬಹುದು?

“ಅವರು (ಆರ್​ಸಿಬಿ) ಮುಂಬೈಗೆ ದೊಡ್ಡ ಉಪಕಾರ ಮಾಡಿದ್ದಾರೆ. ಏಕೆಂದರೆ ಈ ಒಪ್ಪಂದ ನಡೆಯದಿದ್ದರೆ, ಹಾರ್ದಿಕ್ ಒಪ್ಪಂದವೂ ಕಷ್ಟವಿತ್ತು ವಿಷಯಗಳು ಇದ್ದಕ್ಕಿದ್ದಂತೆ ವಿಭಿನ್ನವಾಗಿರುತ್ತಿತ್ತು. ಆರ್​ಸಿಬಿ ದೃಷ್ಟಿಕೋನದಿಂದ ನೋಡಿದರೆ ಅವರು ಮುಂಬೈ ತಂಡಕ್ಕೆ ಸಹಾಯ ಮಾಡಿದ್ದಾರೆ ಎಂದು ಚೋಪ್ರಾ ಹೇಳಿದ್ದಾರೆ.

“ಮುಂಬಯಿ ತಂಡ ಪಾಂಡ್ಯಗಾಗಿ ಗ್ರೀನ್​ ಅವರನ್ನು ಬಿಡುಗಡೆ ಮಾಡುತ್ತಿದ್ದರು. ಈ ವೇಳೆ ಹರಾಜಿನಲ್ಲಿಯೇ ಅವರನ್ನು ಪಡೆಯಬಹುದಾಗಿತ್ತು. ಆರ್​ಸಿಬಿ ಬಳಿ 40 ಕೋಟಿ ರೂ.ಗಿಂತ ಹೆಚ್ಚು ಹಣವಿದ್ದ ಕಾರಣ ಹರಾಜು ಕಷ್ಟವಿರಲಿಲ್ಲ. ಇದೀಘ ಮುಂಬೈ ಇಂಡಿಯನ್ಸ್​ ತಂಡಕ್ಕೆ ಶುಭವಾಗಿದೆ , “ಎಂದು ಚೋಪ್ರಾ ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಹೇಳಿದ್ದಾರೆ. ಮತ್ತೊಂದೆಡೆ, ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿರುವ ಮುಂಬರುವ ಐಪಿಎಲ್ ಮಿನಿ ಹರಾಜಿನಲ್ಲಿ ಹೂಡಿಕೆ ಮಾಡಲು ಮುಂಬೈ ಬಳಿ 17.75 ಕೋಟಿ ರೂ., ಆರ್​ಸಿಬಿ ಬಳಿ 23.25 ಕೋಟಿ ರೂ. ಉಳಿದಿದೆ.

Continue Reading
Advertisement
PM Narendra Modi phone call to workers, who rescued from collapsed tunnel
ದೇಶ1 hour ago

ಸುರಂಗದಿಂದ ರಕ್ಷಿಸಲಾದ ಕಾರ್ಮಿಕರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ!

mantralaya mutt
ಕರ್ನಾಟಕ2 hours ago

ಮಂತ್ರಾಲಯ ಮಠಕ್ಕೆ ಭಕ್ತರೊಬ್ಬರಿಂದ ಹೆಲಿಕಾಪ್ಟರ್‌ ಕೊಡುಗೆ

Uttarakhand CM announces rs 1 lakh rupees to trapped labourers Who rescued after 17 days
ದೇಶ2 hours ago

ಬದುಕುಳಿದು ಬಂದ ಕಾರ್ಮಿಕರಿಗೆ 1 ಲಕ್ಷ ಪರಿಹಾರ ಎಂದ ಉತ್ತರಾಖಂಡ ಸಿಎಂ ಧಾಮಿ

Maxwell
ಕ್ರಿಕೆಟ್2 hours ago

Ind vs Aus : ಮ್ಯಾಕ್ಸ್​ವೆಲ್​ ಸ್ಫೋಟಕ ಶತಕ; 3ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು

Siddaramaiah
ಕರ್ನಾಟಕ3 hours ago

ಕಾರ್ಮಿಕರಿಗೆ ಮರುಹುಟ್ಟು ನೀಡಿದ ರಕ್ಷಣಾ ಸಿಬ್ಬಂದಿಗೆ ಸಿದ್ದರಾಮಯ್ಯ ಧನ್ಯವಾದ

Uttarkashi Tunnel Rescue and Makeshift hospital
ದೇಶ3 hours ago

ಸುರಂಗದಿಂದ 41 ಕಾರ್ಮಿಕರ ರಕ್ಷಣೆ; ಮುಂದೇನಾಗುತ್ತದೆ ಎಂಬುದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Top 10 news
ಕರ್ನಾಟಕ3 hours ago

VISTARA TOP 10 NEWS: ಸುರಂಗದಲ್ಲಿ ಸಿಲುಕಿದ್ದ ಎಲ್ಲ ಕಾರ್ಮಿಕರ ರಕ್ಷಣೆ, ಮಕ್ಕಳ ಮಾರಾಟ ಬೃಹತ್​ ಜಾಲ ಪತ್ತೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

Uttarakhand Tunnel Collapse
EXPLAINER4 hours ago

150 ಮೀಟರ್‌ ಸುರಂಗ ಕುಸಿತ, 57 ಮೀಟರ್‌ ಕೊರೆತ! 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ?

Uttarkashi Tunnel rescue success makes us emotional says PM Narendra Modi
ದೇಶ4 hours ago

ಕಾರ್ಮಿಕರ ರಕ್ಷಣೆಯ ಯಶಸ್ಸು ನಮ್ಮನ್ನೆಲ್ಲ ಭಾವುಕರನ್ನಾಗಿಸಿದೆ ಎಂದ ಪ್ರಧಾನಿ ಮೋದಿ

Ruturaj Gaikwad
ಕ್ರಿಕೆಟ್4 hours ago

Ruturaj Gaikwad : ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ ಋತುರಾಜ್​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ20 hours ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ1 day ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ1 day ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ2 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ2 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

BY Vijayendra and HD Kumarswamy
ಕರ್ನಾಟಕ2 days ago

BJP JDS Alliance: ಎಚ್‌ಡಿಕೆ-ವಿಜಯೇಂದ್ರ ಭೇಟಿ; 28ಕ್ಕೆ 28 ಸ್ಥಾನ ಗೆಲ್ಲುವ ಪಣ!

ಟ್ರೆಂಡಿಂಗ್‌