ವಿಸ್ತಾರ Explainer | ಭಾರತವನ್ನು ಎದುರು ಹಾಕಿಕೊಂಡರೆ ಪಾಕಿಸ್ತಾನ ಕ್ರಿಕೆಟ್‌ ಬರ್ಬಾದ್‌; ಯಾಕೆ ಗೊತ್ತೆ? - Vistara News

ಕ್ರಿಕೆಟ್

ವಿಸ್ತಾರ Explainer | ಭಾರತವನ್ನು ಎದುರು ಹಾಕಿಕೊಂಡರೆ ಪಾಕಿಸ್ತಾನ ಕ್ರಿಕೆಟ್‌ ಬರ್ಬಾದ್‌; ಯಾಕೆ ಗೊತ್ತೆ?

ಭಾರತ ಕ್ರಿಕೆಟ್‌ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದೇ ಇರುವುದಕ್ಕೆ ಬಿಸಿಸಿಐ ವಿರುದ್ಧ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಪ್ರತೀಕಾರ ತೀರಿಸಲು ಮುಂದಾದರೆ ದೊಡ್ಡ ಮಟ್ಟದ ನಷ್ಟ ಅನುಭವಿಸಲಿದೆ.

VISTARANEWS.COM


on

ind vs pak
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಕ್ರಿಕೆಟ್‌ ಪಂದ್ಯವೆಂದರೆ ಅದೊಂದು ಮಿನಿ ಸಮರ. ಗ್ರೌಂಡ್‌ನ ಒಳಗೆ, ಹೊರಗೆ, ಟಿವಿಗಳಲ್ಲಿ, ನ್ಯೂಸ್‌ ಚಾನೆಲ್‌ಗಳಲ್ಲಿ, ಹಳ್ಳಿಗಳ ಕಟ್ಟೆಗಳಲ್ಲಿ ಸೇರಿದಂತೆ ಎಲ್ಲೆಡೆ ಬಿಗ್‌ ಫೈಟ್‌. ಎರಡೂ ದೇಶಗಳ ನಡುವಿನ ರಾಜಕೀಯ ವೈಷಮ್ಯ ಕ್ರಿಕೆಟ್‌ ಆಟದಲ್ಲಿ ಹಾಗೂ ಮಾತಿನಲ್ಲಿ ಎದ್ದು ಕಾಣುತ್ತದೆ ಹಾಗೂ ಜಿದ್ದಿಗೆ ಕೊನೆಯೇ ಇರುವುದಿಲ್ಲ. ತೋಳು ತಟ್ಟಿ ಪಂಥಾಹ್ವಾನ ನೀಡುವುದು, ಗೆದ್ದ ಮೇಲೆ ಬೆನ್ನು ತಟ್ಟಿಕೊಳ್ಳುವುದು, ಪರಸ್ಪರ ನಿಂದನೆ, ಕೈ ಕೈ ಹಿಸುಕಿಕೊಳ್ಳುವುದು, ಒಂದೆರಡು ಟಿವಿ ಸೆಟ್‌ಗಳು ಉಡೀಸ್ ಆಗುವುದು ಮಾಮೂಲು. ಇತ್ತಂಡಗಳ ನಡುವಿನ ಹಣಾಹಣಿಯೊಂದಕ್ಕೆ ವೇದಿಕೆ ಸಜ್ಜುಗೊಳ್ಳುತ್ತಿದ್ದಂತೆ ಆರಂಭಗೊಳ್ಳುವ ಚರ್ಚೆ, ವಿಶ್ಲೇಷಣೆ, ಮೂದಲಿಕೆಗಳು ಪಂದ್ಯದ ಫಲಿತಾಂಶ ಪ್ರಕಟಗೊಂಡ ನಂತರವೂ ಹಲವು ದಿನಗಳ ಕಾಲ ಮುಂದುವರಿಯುತ್ತದೆ. ದೇಶ ವಿಭಜನೆ ಬಳಿಕ ೧೯೫೨ರಲ್ಲಿ ನಡೆದ ಮೊದಲ ಸರಣಿಯಲ್ಲಿ ಆರಂಭಗೊಂಡ ಈ ಜಿದ್ದು ಈಗಲೂ ಮುಂದುವರಿದಿದ್ದು, ಕೊನೆಯಾಗುವ ಯಾವ ಲಕ್ಷಣವೂ ತೋರುತ್ತಿಲ್ಲ. ಏತನ್ಮಧ್ಯೆ, ಭಾರತ ಹಾಗೂ ಪಾಕಿಸ್ತಾನ ನಡುವಿನ ರಾಜಕೀಯ ಸಂಬಂಧವೂ ದಿನೇದಿನೆ ಹಳಸುತ್ತಿದೆ. ಹೀಗೆ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವಿನ ಜಿದ್ದು ಎಲ್ಲಿಂದ ಆರಂಭ, ಇತ್ತಂಡಗಳ ಪಂದ್ಯದ ಕಿಮ್ಮತ್ತೇನು, ಈ ದೇಶಗಳ ನಡುವಿನ ವೈರತ್ವ ಕೊನೆಯಾಗಬಹುದೇ ಎಂಬಿತ್ಯಾದಿ ವಿಷಯಗಳ ಬಗ್ಗೆ ಸಂಕ್ಷಿಪ್ತ ನೋಟ (ವಿಸ್ತಾರ Explainer) ಇಲ್ಲಿದೆ.

ಯಾಕೆ ಮತ್ತೆ ಚರ್ಚೆ?

ವಿರಾಟ್‌ ಕೊಹ್ಲಿ

ಕೆಲವು ದಿನಗಳ ಹಿಂದೆ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್‌ ತಂಡಗಳ ನಡುವಿನ ಕ್ರಿಕೆಟ್‌ ವೈರತ್ವ ಮತ್ತೆ ಮುನ್ನೆಲೆಗೆ ಬಂದಿದೆ. ಅದಕ್ಕೆ ಕಾರಣ ೨೦೨೩ರಲ್ಲಿ ಪಾಕಿಸ್ತಾನದಲ್ಲಿ ಆಯೋಜನೆಗೊಂಡಿರುವ ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿ. ಏಷ್ಯಾ ಕ್ರಿಕೆಟ್ ಕೌನ್ಸಿಲ್‌ನಿಂದ (ಎಸಿಸಿ) ಆತಿಥ್ಯದ ಹಕ್ಕು ಪಡೆದುಕೊಂಡಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ತನ್ನ ನೆಲದಲ್ಲೇ ಟೂರ್ನಿ ಆಯೋಜಿಸಲು ಮುಂದಾಗಿದೆ. ಆದರೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಅಸಾಧ್ಯ ಎಂದಿದೆ. ನಾವು ಬರಬೇಕಿದ್ದರೆ ತಟಸ್ಥ ತಾಣದಲ್ಲಿ ಪಂದ್ಯ ನಡೆಯಲಿ. ಯಾವ ಕಾರಣಕ್ಕೂ ನಮ್ಮ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಿಲ್ಲ ಎಂಬುದಾಗಿ ಹೇಳಿಕೆ ಕೊಟ್ಟಿದೆ. ಏಷ್ಯಾ ಕ್ರಿಕೆಟ್‌ ಕೌನ್ಸಿಲ್‌ನ ಮುಖ್ಯಸ್ಥರೂ ಆಗಿರುವ ಜಯ್‌ ಶಾ ಅವರು ಟೂರ್ನಿ ತಟಸ್ಥ ತಾಣದಲ್ಲೇ ನಡೆಯಲಿದೆ ಎಂಬುದನ್ನು ಒತ್ತಿ ಹೇಳಿದ್ದಾರೆ. ಭಾರತದ ಹೇಳಿಕೆಗೆ ಬೇಸ್ತು ಬಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ, ಹಾಗಾದರೆ ನಮ್ಮ ತಂಡವನ್ನು ಮುಂದಿನ ವರ್ಷ ಭಾರತದಲ್ಲಿ ನಡೆಯುವ ಏಕ ದಿನ ವಿಶ್ವ ಕಪ್‌ಗೆ ಕಳುಹಿಸುವುದಿಲ್ಲ ಎಂದು ಬಾಲಿಷ ಹೇಳಿಕೆ ಕೊಟ್ಟಿದೆ. ಆದರೆ, ಪಾಕಿಸ್ತಾನದ ಬೆದರಿಕೆಗೆ ಕಿಮ್ಮತ್ತಿಲ್ಲ ಎಂಬುದು ಎಲ್ಲಿಗೂ ಗೊತ್ತಿರುವ ಸಂಗತಿ.

ಸದ್ಯದ ಪರಿಸ್ಥಿತಿಯಲ್ಲಿ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರಕಾರ ಸಮ್ಮತಿ ನೀಡದು. ಇದರ ಅರಿವಿರುವ ಬಿಸಿಸಿಐ ನಮ್ಮ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಿಲ್ಲ ಎಂಬುದಾಗಿ ಮೊದಲೇ ಹೇಳಿಕೆ ಕೊಟ್ಟಿದೆ. ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ ಕೂಡ, ಜಗತ್ತಲ್ಲಿ ಏನೂ ಬೇಕಾದರೂ ಆಗಬಹುದು, ಆದರೆ ಇದೊಂದು ಕಷ್ಟ ಎಂಬರ್ಥದಲ್ಲಿ ಮಾತನಾಡಿದ್ದಾರೆ.

ಯಾಕೆ ಕಳುಹಿಸುವುದಿಲ್ಲ?

ಕ್ರಿಕೆಟ್‌ ಹೊರತುಪಡಿಸಿ ಉಳಿದ ಕ್ರೀಡಾ ಕ್ಷೇತ್ರದ ಕ್ರೀಡಾಪಟುಗಳು ಪಾಕಿಸ್ತಾನಕ್ಕೆ ಹೋಗುತ್ತಾರೆ. ಅಲ್ಲಿನ ಕ್ರೀಡಾಪಟುಗಳೂ ಭಾರತಕ್ಕೆ ಬಂದು ಟೂರ್ನಿಗಳಲ್ಲಿ ಪಾಲ್ಗೊಳ್ಳುತ್ತಾರೆ. ಅಥ್ಲೆಟಿಕ್ಸ್‌, ಚೆಸ್‌, ಟೆನಿಸ್‌ಗೆ ಇಲ್ಲದ ನಿರ್ಬಂಧ ಕ್ರಿಕೆಟ್‌ಗೆ ಮಾತ್ರ ಸೀಮಿತ ಯಾಕೆ ಎನ್ನುವ ಪ್ರಶ್ನೆಯೂ ಸಹಜ. ಉತ್ತರವೂ ಅಷ್ಟೇ ಸರಳ. ಭಾರತ ಹಾಗೂ ಪಾಕಿಸ್ತಾನದ ನಾಗರಿಕರು ಕ್ರಿಕೆಟ್‌ಗೆ ಇನ್ನಿಲ್ಲದ ಪ್ರಾಮುಖ್ಯತೆ ಕೊಡುತ್ತಾರೆ. ಕ್ರಿಕೆಟ್‌ ಅವರ ಜೀವಾಳ. ಕ್ರಿಕೆಟ್‌ ತಾರೆಗಳನ್ನು ಅವರು ಹೃದಯದಲ್ಲಿಟ್ಟು ಆರಾಧಿಸುತ್ತಾರೆ. ಎಲ್ಲದರ ಮಧ್ಯೆ ಎರಡೂ ದೇಶಗಳಲ್ಲಿ ಕ್ರಿಕೆಟ್‌ ತಂಡಗಳಲ್ಲಿ ಹಲವು ಸ್ಟಾರ್‌ಗಳಿದ್ದಾರೆ.

ind vs aus

ಭಾರತದ ಹಾಲಿ ತಂಡವನ್ನು ಪರಿಗಣಿಸುವುದಾದರೆ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮ, ಕೆ ಎಲ್‌ ರಾಹುಲ್‌ ಅವರಂತಹ ಸ್ಟಾರ್‌ಗಳ ದಂಡೇ ಇದೆ. ಇಂಥ ಆಟಗಾರರನ್ನು ಒಳಗೊಂಡ ತಂಡವನ್ನು ಬೇರೆ ದೇಶಕ್ಕೆ ಕಳುಹಿಸುವಾಗ ಅವರ ಸುರಕ್ಷತೆಯ ಬಗ್ಗೆಯೂ ಕಾಳಜಿ ಅಗತ್ಯ. ಸುರಕ್ಷತೆ ಎಂಬುದು ಎರಡೂ ದೇಶಗಳ ನಡುವಿನ ರಾಜಕೀಯ ಸಂಬಂಧವನ್ನು ಅವಲಂಬಿಸಿರುತ್ತದೆ. ಭಾರತ ಮತ್ತು ಪಾಕಿಸ್ತಾನದ ದ್ವಿಪಕ್ಷೀಯ ಸಂಬಂಧ ಹಳಸಿ ಹೋಗಿರುವ ಪ್ರಸ್ತುತ ಸಂದರ್ಭದಲ್ಲಿ ಆ ದೇಶಕ್ಕೆ ನಮ್ಮ ಸ್ಟಾರ್‌ ಆಟಗಾರರನ್ನು ಕಳುಹಿಸಿಕೊಡುವುದು ಉಚಿತವಲ್ಲ ಎಂಬುದುಎಲ್ಲರ ಅಭಿಪ್ರಾಯ. ಹೇಳಿಕೇಳಿ ಪಾಕಿಸ್ತಾನ, ಭಯೋತ್ಪಾದಕರ ನೆಲೆವೀಡು. ಅಲ್ಲಿಗೆ ನಮ್ಮ ಆಟಗಾರರನ್ನು ಕಳುಹಿಸಿ ಸಂಕಷ್ಟಕ್ಕೆ ದೂಡಲು ಬಿಸಿಸಿಐ ಹಿರಿ ತಲೆಗಳು ಸಿದ್ಧರಿಲ್ಲ.

ಈ ಹಿಂದೆ ಪಾಕಿಸ್ತಾನಕ್ಕೆ ಪ್ರವಾಸ ಹೋಗಿದ್ದ ಶ್ರೀಲಂಕಾ ಕ್ರಿಕೆಟ್‌ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ಬಸ್‌ಗೆ ಭಯೋತ್ಪಾದಕರ ಗುಂಡಿನ ದಾಳಿ ನಡೆದಿತ್ತು. ವಿಶ್ವ ಕ್ರಿಕೆಟ್‌ನ ಅತ್ಯಂತ ಕರಾಳ ಘಟನೆ ಇದು. ಇಂಥ ದೇಶಕ್ಕೆ ಭಾರತ ತಂಡದ ಆಟಗಾರರನ್ನು ಹೇಗೆ ಕಳುಹಿಸಿತು?

ಇದು ಬರೇ ಆಟಗಾರರ ವಿಷಯಕ್ಕೆ ಸೀಮಿತವಾಗಿರುವ ಸಂಗತಿಯಲ್ಲ. ಅಲ್ಲಿ ಕ್ರಿಕೆಟ್‌ ಮ್ಯಾಚ್‌ ನಡೆದರೆ ಭಾರತದ ಕ್ರಿಕೆಟ್‌ ಅಭಿಮಾನಿಗಳು ಪಂದ್ಯ ವೀಕ್ಷಣೆಗೆ ಹೋಗುತ್ತಾರೆ. ವೀಸಾ ನೀಡುವಿಕೆ, ಅವರ ಸುರಕ್ಷತೆ ಸೇರಿದಂತೆ ಎಲ್ಲವೂ ಭಾರತಕ್ಕೆ ಸವಾಲು. ಅಲ್ಲಿ ಒಬ್ಬ ಭಾರತೀಯನ ಮೇಲೆ ಆಕ್ರಮಣ ನಡೆದರೂ ಅದು ದೊಡ್ಡ ವಿಷಯವಾಗಿ ಮಾರ್ಪಡುತ್ತದೆ. ಭದ್ರತಾ ವೈಫಲ್ಯ ಎಂಬುದು ಪಾಕಿಸ್ತಾನದಲ್ಲಿ ಮಾಮೂಲಿ ಸಂಗತಿ. ಅಲ್ಲಿನ ಸರಕಾರವೂ ಆರ್ಥಿಕವಾಗಿ ಸೊರಗಿದೆ. ಇಂಥ ಸಂದರ್ಭದಲ್ಲಿ ಸ್ಟಾರ್‌ ಆಟಗಾರರನ್ನು ಒಳಗೊಂಡಿರುವ ಭಾರತ ತಂಡಕ್ಕೆ ರಕ್ಷಣೆ ಕೊಡುವುದಕ್ಕೆ ಅವರಿಗೆ ಸಾಧ್ಯವಿಲ್ಲ ಎಂಬುದು ಬಿಸಿಸಿಐ ಅಭಿಪ್ರಾಯ.

ಯಾರಿಗೆ ಲಾಸ್‌?

ಭಾರತ ತಂಡ ಪಾಕಿಸ್ತಾನಕ್ಕೆ ಹೋಗದಿದ್ದರೆ ಅಥವಾ ಪಾಕಿಸ್ತಾನ ತಂಡ ಭಾರತಕ್ಕೆ ಬರದಿದ್ದರೆ ಯಾರಿಗೆ ನಷ್ಟ ಎಂಬುದು ಸದ್ಯದ ಚರ್ಚೆ. ಎರಡೂ ಪ್ರಸಂಗಗಳಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನಷ್ಟ. ಭಾರತ ತಂಡ ಪಾಕಿಸ್ತಾನಕ್ಕೆ ಹೋಗದಿದ್ದರೆ ಉಳಿದ ತಂಡಗಳೂ ಟೂರ್ನಿಗೆ ಹಿಂದೇಟು ಹಾಕುವ ಸಾಧ್ಯತೆಗಳಿವೆ. ಭಾರತ ಬರದಿದ್ದರೂ ಪರ್ವಾಗಿಲ್ಲ. ಇಲ್ಲೇ ಪಂದ್ಯ ನಡೆಸುತ್ತೇವೆ ಎಂದು ಪಿಸಿಬಿ ಏನಾದರೂ ತೀರ್ಮಾನಿಸಿದರೆ? ಅದೊಂದು ಕೆಟ್ಟ ನಿರ್ಧಾರವಾಗಲಿದೆ ಹಾಗೂ ಪಿಸಿಬಿ ಬರ್ಬಾದ್ ಅಗೋದು ಗ್ಯಾರಂಟಿ. ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಪಂದ್ಯವೇ ಇಲ್ಲದ ಆ ಟೂರ್ನಿಯನ್ನು ನೋಡಲು ಪ್ರೇಕ್ಷಕರು ಮುಂದೆ ಬರುವುದಿಲ್ಲ. ಹೀಗಾಗಿ ಟಿಕೆಟ್‌ ಮಾರಾಟದಿಂದ ಬರುವ ಆದಾಯ ಸಂಪೂರ್ಣ ಖೋತಾ. ಪ್ರಾಯೋಜಕರು ಆ ಕಡೆ ಕತ್ತೆತ್ತಿಯೂ ನೋಡುವುದಿಲ್ಲ. ನೇರ ಪ್ರಸಾರದ ಹಕ್ಕುಗಳ ಮಾರಾಟವೂ ಕನಿಷ್ಠ ದರಕ್ಕೆ ಬಿಡ್ ಆಗಬಹುದು. ಈ ಎರಡೂ ಆದಾಯಗಳನ್ನು ನಷ್ಟ ಮಾಡಿಕೊಂಡು ಟೂರ್ನಿಗೆ ಆತಿಥ್ಯ ವಹಿಸಿ ಮಾಡುವುದು ಏನಿದೆ?

ಏಷ್ಯಾ ಕ್ರಿಕೆಟ್‌ ಕೌನ್ಸಿಲ್‌ ಆತಿಥ್ಯವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನೀಡಿರುವ ಹೊರತಾಗಿಯೂ ಟೂರ್ನಿಯ ಮೇಲಿನ ಹಿಡಿತ ಕಳೆದುಕೊಳ್ಳುವುದಿಲ್ಲ. ಏಷ್ಯಾ ಕ್ರಿಕೆಟ್‌ ಕೌನ್ಸಿಲ್‌, ಪಂದ್ಯವನ್ನು ತಟಸ್ಥ ತಾಣದಲ್ಲಿ ನಡೆಸುವುದು ಸೂಕ್ತ ಎಂಬ ಅಭಿಪ್ರಾಯವನ್ನು ಬಹುಮತದೊಂದಿಗೆ ವ್ಯಕ್ತಪಡಿಸಿದರೆ, ಪಿಸಿಬಿ ಅದನ್ನು “ಕೈ ಕಟ್‌, ಬಾಯ್‌ ಮುಚ್‌’ ಎಂದು ಒಪ್ಪಲೇಬೇಕಾಗುತ್ತದೆ. ಈ ವಿಚಾರದಲ್ಲಿ ಏಷ್ಯಾ ಕ್ರಿಕೆಟ್ ಕೌನ್ಸಿಲ್‌ನಲ್ಲಿ ಸದಸ್ಯತ್ವ ಹೊಂದಿರುವ ಬಾಂಗ್ಲಾದೇಶ, ಶ್ರೀಲಂಕಾ ಕ್ರಿಕೆಟ್‌ ಸಂಸ್ಥೆಗಳೂ ಬಿಸಿಸಿಐ ಪರವಾಗಿರುತ್ತದೆ. ಇನ್ನು ಅತಿ ಹೆಚ್ಚು ಆದಾಯ ತಂದುಕೊಡುವ ಬಿಸಿಸಿಐ ವಿರೋಧಿ ನಿರ್ಧಾರವನ್ನು ಕ್ರಿಕೆಟ್‌ನ ಜಾಗತಿಕ ಸಂಸ್ಥೆ ಐಸಿಸಿ ಕೂಡ ತಳೆಯದು. ಹೀಗಾಗಿ ಈ ವಿಚಾರದಲ್ಲಿ ಬಿಸಿಸಿಐ ಗೆಲುವು ನಿಶ್ಚಿತ.

ಇದಕ್ಕೆ ಪ್ರತಿಯಾಗಿ ೨೦೨೩ರಲ್ಲಿ ನಡೆಯುವ ವಿಶ್ವ ಕಪ್‌ಗೆ ತನ್ನ ತಂಡವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾರತಕ್ಕೆ ಕಳುಹಿಸದಿದ್ದರೂ ಅವರಿಗೇ ನಷ್ಟ. ಐಸಿಸಿ ಟೂರ್ನಿಯೊಂದರಲ್ಲಿ ಪಾಲ್ಗೊಳ್ಳುವ ಅವಕಾಶ ಕಳೆದುಕೊಂಡರೆ ಆ ಕ್ರಿಕೆಟ್‌ ಮಂಡಳಿಗೆ ಉಳಿಗಾಲವೇ ಇಲ್ಲ. ಐಸಿಸಿಯಿಂದ ಯಾವುದೇ ಆದಾಯ ಹಂಚಿಕೆ ಆ ಕ್ರಿಕೆಟ್‌ ಮಂಡಳಿಗೆ ಆಗದು. ಇಲ್ಲೂ ಪಿಸಿಬಿಗೆ ಆರ್ಥಿಕ ಹಿಂಜರಿತ. ಈಗ ಬರವುದಿಲ್ಲ ಎಂದು ಬೆದರಿಕೆ ಹಾಕಿದರೂ, ಮುಂದೆ ತಂಡವನ್ನು ಕಳುಹಿಸಿಯೇ ಕಳುಹಿಸುತ್ತದೆ. ಒಂದು ವೇಳೆ ಕೊನೇ ತನಕ ಹಠ ಹಿಡಿದರೂ, ಐಸಿಸಿ ಮಧ್ಯಸ್ಥಿಕೆ ವಹಿಸಲಿದೆ.

ತಟಸ್ಥ ತಾಣ ಯಾವುದು?

ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಾಲಿಗೆ ತಟಸ್ಥ ತಾಣ ದುಬೈ. ಅಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಮ್‌ ಭಾರತದ ಪಾಲಿಗೆ ಸುರಕ್ಷಿತ ತಾಣ. ನೇರ ಪ್ರಸಾರ, ಭದ್ರತೆ, ಟೈಮ್‌ ಜೋನ್‌ ಸೇರಿದಂತೆ ಎಲ್ಲ ವಿಚಾರದಲ್ಲೂ ಅನುಕೂಲಕರ. ಶಾರ್ಜಾ ಹಾಗೂ ಅಬು ಧಾಬಿಯೂ ಈ ಪಟ್ಟಿಯಲ್ಲಿವೆ. ದಶಕಗಳ ಹಿಂದೆ ಕೆನಡಾದ ಟೊರಂಟೊವನ್ನು ಕೂಡ ತಟಸ್ಥ ತಾಣವಾಗಿ ಆಯ್ಕೆ ಮಾಡಲಾಗುತ್ತಿತ್ತು.

ಭಾರತ – ಪಾಕ್‌ ಕ್ರಿಕೆಟ್‌ ವೈರತ್ವ ಎಲ್ಲಿಂದ ಆರಂಭ?

team india

ದೇಶ ವಿಭಜಗೊಂಡು ಎರಡೂ ದೇಶಗಳೂ ಪರಸ್ಪರ ದ್ವೇಷ ಬೆಳೆಸಿಕೊಂಡ ಬಳಿಕದಿಂದಲೇ ಕ್ರಿಕೆಟ್‌ ತಂಡಗಳ ನಡುವೆಯೂ ವೈರತ್ವ ಶುರುವಾಯಿತು. ೧೯೪೭ರಲ್ಲಿ ಎರಡೂ ದೇಶಗಳಿಗೆ ಸ್ವಾತಂತ್ರ್ಯ ದೊರಕಿದರೂ ಮೊದಲ ದ್ವಿಪಕ್ಷೀಯ ಸರಣಿ ನಡೆದಿದ್ದು ೧೯೫೨ರಲ್ಲಿ. ಎರಡೂ ದೇಶಗಳ ರಾಜಕೀಯ ದ್ವೇಷ ಕ್ರಿಕೆಟ್‌ನೊಂದಿಗೆ ಬೆರೆತಿತು. ಪಂದ್ಯವನ್ನು ಗೆದ್ದರೆ ಯುದ್ಧದ್ದಲಿ ಗೆದ್ದಂತೆ ಎಂಬ ಭಾವ ಸೃಷ್ಟಿಯಾಯಿತು.

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಮೇಲಿನ ಹಕ್ಕು ಸ್ಥಾಪನೆ ವಿಚಾರದಲ್ಲಿ ಆರಂಭಗೊಂಡ ಬಿಕ್ಕಟ್ಟು ಹಾಗೂ ಆ ಬಳಿಕ ನಡೆದ ಇಂಡೋ-ಪಾಕ್‌ ಸಮರಗಳ ಪ್ರಭಾವ ಹಲವು ಬಾರಿ ಕ್ರಿಕೆಟ್‌ ಪಂದ್ಯಗಳಿಗೂ ತಟ್ಟಿದೆ. ೧೯೫೨ರಲ್ಲಿ ಪಾಕ್‌ ತಂಡ ಮೊದಲ ಬಾರಿ ಭಾರತಕ್ಕೆ ಬಂತು. ಆದರೆ, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಹಣಾಹಣಿ ೧೯೬೨ರಲ್ಲಿ ಕೊನೆಗೊಂಡಿತು. ೧೯೬೨ರಿಂದ ೧೯೭೭ರವರೆಗೆ ಕ್ರಿಕೆಟ್ ಸಂಬಂಧವೇ ಇರಲಿಲ್ಲ. ೧೯೬೫ ಹಾಗೂ ೧೯೭೧ರಲ್ಲಿ ನಡೆದ ಎರಡೂ ದೇಶಗಳ ನಡುವಿನ ಯುದ್ಧವೇ ಅದಕ್ಕೆ ಕಾರಣ.

೧೯೭೮ರಲ್ಲಿ ಭಾರತ ತಂಡದ ಮತ್ತೆ ಪಾಕಿಸ್ತಾನಕ್ಕೆ ಪ್ರವಾಸ ಮಾಡಿತ್ತು. ಅಲ್ಲಿಗೆ ದೀರ್ಘ ಕಾಲದ ವೈಷಮ್ಯ ಕೊನೆಗೊಂಡಿತ್ತು. ೧೯೭೯ರಲ್ಲಿ ಪಾಕ್‌ ತಂಡ ಭಾರತಕ್ಕೂ ಬಂತು. ೧೯೮೪ರಲ್ಲಿ ಭಾರತ ತಂಡದ ಪಾಕ್‌ ಪ್ರವಾಸ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಹತ್ಯೆಯ ಕಾರಣಕ್ಕೆ ಸ್ಥಗಿತಗೊಂಡಿತ್ತು. ಅ೮೦ ಹಾಗೂ ೯೦ರ ದಶಕದಲ್ಲಿ ಇತ್ತಂಡಗಳ ನಡುವಿನ ಪಂದ್ಯಗಳು ಯುಎಇನಲ್ಲಿ ನಡೆದಿದ್ದವು.

೧೯೯೯ರಲ್ಲಿ ಭಾರತದ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ಪಾಕಿಸ್ತಾನಕ್ಕೆ ಐತಿಹಾಸಿಕ ಭೇಟಿ ನೀಡಿದ ಬಳಿಕ ಪಾಕ್‌ ತಂಡ ಭಾರತಕ್ಕೆ ಬಂದಿತ್ತು. ಅದಾದ ಬೆನ್ನಲ್ಲೇ ಕಾರ್ಗಿಲ್‌ ಯುದ್ಧ ನಡೆಯಿತು. ಬಳಿಕ ಕ್ರಿಕೆಟ್‌ ಸಂಬಂಧ ಹಳಸಿ ಹೋಯಿತು. ೨೦೦೩ರಲ್ಲಿ ವಾಜಪೇಯಿ ಮತ್ತೆ ಪಾಕಿಸ್ತಾನ ಜತೆಗಿನ ಶಾಂತಿಯ ಒಪ್ಪಂದ ಮಾಡಿಕೊಂಡ ಬಳಿಕ ೧೫ ವರ್ಷಗಳ ಮುನಿಸು ಮುಗಿದು ಭಾರತ ತಂಡ ಪಾಕಿಸ್ತಾನಕ್ಕೆ ಭೇಟಿ ನೀಡಿತು. ೨೦೦೫ ಹಾಗೂ ೨೦೦೬ರಲ್ಲಿ ಮತ್ತೆ ಪ್ರವಾಸಗಳು ನಡೆದವು. ೨೦೦೮ರಲ್ಲಿ ಪಾಕ್‌ ಚಿತಾವಣೆಯಿಂದ ಮುಂಬಯಿ ಭಯೋತ್ಪಾದನಾ ದಾಳಿ (೨೬/೧೧) ನಡೆಯಿತು. ಹೀಗಾಗಿ ೨೦೦೯ರಲ್ಲಿ ನಿಗದಿಯಾಗಿದ್ದ ಪಾಕ್‌ ಪ್ರವಾಸ ಕೈಗೊಳ್ಳಲು ಬಿಸಿಸಿಐ ನಿರಾಕರಿಸಿತು. ಅಲ್ಲಿಂದ ಭಾರತ ತಂಡ ಪಾಕಿಸ್ತಾನಕ್ಕೆ ಕಾಲಿಟ್ಟಿಲ್ಲ. ಮುಂದೆಯೂ ಹೋಗುವುದಿಲ್ಲ ಎಂದು ಶಪಥ ಮಾಡಿದೆ.

೨೦೦೯ರಲ್ಲಿ ಪಾಕಿಸ್ತಾನಕ್ಕೆ ಪ್ರವಾಸ ಮಾಡಿದ್ದ ಶ್ರೀಲಂಕಾ ತಂಡದ ಆಟಗಾರರು ಇದ್ದ ಬಸ್‌ ಮೇಲೆ ಭಯೋತ್ಪಾದಕರ ದಾಳಿ ನಡೆಯಿತು. ಸುರಕ್ಷಿತವಲ್ಲದ ಪಾಕಿಸ್ತಾನಕ್ಕೆ ಬೇರೆ ದೇಶಗಳ ಕ್ರಿಕೆಟ್‌ ತಂಡಗಳು ಕಾಲಿಡಲಿಲ್ಲ. ಈ ವಿಚಾರದಲ್ಲಿ ಎಲ್ಲರೂ ಭಾರತ ಪರ ನಿಂತವು. ಈ ಘಟನೆಯಿಂದಾಗಿ ಪಾಕಿಸ್ತಾನದ ನಿಜ ಬಣ್ಣ ಬಯಲಾಯಿತು. ಏತನ್ಮಧ್ಯೆ, ೨೦೧೩ರಲ್ಲಿ ಪಾಕಿಸ್ತಾನ ಕ್ರಿಕೆಟ್‌ ತಂಡ ಭಾರತಕ್ಕೆ ಆಗಮಿಸಿತ್ತು. ಅದುವೇ ಕೊನೇ ಸರಣಿ. ಅಲ್ಲಿಂದ ಎರಡೂ ದೇಶಗಳ ಕ್ರಿಕೆಟ್‌ ಮಂಡಳಿಗಳು ಹಲವು ಒಪ್ಪಂದಕ್ಕೆ ಮುಂದಾಗಿದ್ದವು. ಆದರೆ, ಇಂಥ ಒಪ್ಪಂದಕ್ಕೆ ಭಾರತ ಸರಕಾರದ ಒಪ್ಪಿಗೆ ಅಗತ್ಯವಾಗಿತ್ತು. ಎಲ್ಲ ಪ್ರಸ್ತಾಪಗಳನ್ನು ಸರಕಾರ ತಳ್ಳಿ ಹಾಕಿತು. ಈಗ ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ.

ಆಟಗಾರರಿಗೂ ಅಷ್ಟೇ ಜಿದ್ದು

ಎರಡೂ ದೇಶಗಳ ನಡುವಿನ ರಾಜಕೀಯ ವಿರೋಧ ಮೈದಾನದಲ್ಲೂ ಪ್ರಕಟಗೊಂಡಿದ್ದವು. ೧೯೯೨ರಲ್ಲಿ ಕಿರಣ್‌ ಮೋರೆ ಹಾಗೂ ಜಾವೆದ್ ಮೀಯಾಂದಾದ್‌ ನಡುವಿನ ಗಲಾಟೆ, ೧೯೯೬ರಲ್ಲಿ ವೆಂಕಟೇಶ್‌ ಪ್ರಸಾದ್‌ ಹಾಗೂ ಅಮಿರ್‌ ಸೋಹೈಲ್ ನಡುವಿನ ಜಿದ್ದು, ೨೦೦೭ರಲ್ಲಿ ಕಾನ್ಪುರದಲ್ಲಿ ನಡೆದ ಪಂದ್ಯದಲ್ಲಿ ಶಾಹಿದ್‌ ಅಫ್ರಿದಿ ಹಾಗೂ ಗೌತಮ್‌ ಗಂಭೀರ್‌ ಕಿತ್ತಾಡಿಕೊಂಡಿರುವುದು, ೨೦೧೦ರಲ್ಲಿ ಶೋಯೆಬ್‌ ಅಖ್ತರ್‌ ಹಾಗೂ ಹರ್ಭಜನ್ ಸಿಂಗ್ ಕಚ್ಚಾಡಿಕೊಂಡಿರುವುದು, ೨೦೧೦ರಲ್ಲಿ ಗೌತಮ್‌ ಗಂಭೀರ್ ಹಾಗೂ ಕಮ್ರಾನ್‌ ಅಕ್ಮಲ್‌ ಜಗಳವಾಡಿಕೊಂಡಿರುವುದು ಕ್ರಿಕೆಟ್‌ ಪ್ರೇಮಿಗಳ ಮನದಲ್ಲಿ ಇನ್ನೂ ಅಚ್ಚಳಿಯದೇ ಉಳಿದ ಘಟನೆಗಳಾಗಿವೆ.

ಈಗ ಹೇಗಿದೆ ಆಟಗಾರರ ವರ್ತನೆ?

indo̲̲-pak

ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್‌ ತಂಡಗಳ ಆಟಗಾರರು ಈಗ ಮೊದಲಿನಂತೆ ಗ್ರೌಂಡ್‌ನಲ್ಲಿ ಕಚ್ಚಾಡುವುದಿಲ್ಲ. ಎದುರು ಸಿಕ್ಕಾಗ ಪರಸ್ಪರ ಅಭಿಮಾನದಿಂದಲೇ ಮಾತನಾಡುತ್ತಾರೆ. ೨೦೨೧ರ ಟಿ೨೦ ವಿಶ್ವ ಕಪ್‌ನಲ್ಲಿ ಪರಸ್ಪರ ಎದುರಾದಾಗ, ಕಳೆದ ತಿಂಗಳು ನಡೆದ ಏಷ್ಯಾ ಕಪ್‌ನಲ್ಲಿ ಎರಡು ಸಲ ಪರಸ್ಪರ ಎದುರಾದಾಗಲೂ ಇತ್ತಂಡಗಳ ಆಟಗಾರರು ಸಂಭ್ರಮದಿಂದಲೇ ಎದುರುಗೊಂಡಿದ್ದರು. ಎರಡೂ ದೇಶಗಳ ಆಟಗಾರರು ಪ್ರೀತಿ, ಅಭಿಮಾನದಿಂದ ಮಾತನಾಡುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದವು. ಪಾಕಿಸ್ತಾನದ ಬೌಲರ್‌ ಹ್ಯಾರಿಸ್ ರವೂಫ್‌, ಟೀಮ್‌ ಇಂಡಿಯಾ ಸ್ಟಾರ್ ಬ್ಯಾಟರ್‌ ವಿರಾಟ್‌ ಕೊಹ್ಲಿಯಿಂದ ಟಿ ಶರ್ಟ್‌ ಮೇಲೆ ಆಟೋಗ್ರಾಫ್‌ ಪಡೆದಿರುವುದು, ರೋಹಿತ್ ಶರ್ಮ ಅವರು ಪಾಕ್‌ ತಂಡದ ನಾಯಕನ ಕೈ ಕುಲುಕಿ ಮಾತನಾಡಿದ್ದು, ಪಾಕ್‌ ಬೌಲರ್‌ ಶಾಹಿನ್‌ ಶಾ ಅಫ್ರಿದಿ ಜತೆ ಭಾರತ ತಂಡದ ಆಟಗಾರರ ಒಡನಾಟ ಇದಕ್ಕೆಲ್ಲ ಸ್ಪಷ್ಟ ಉದಾಹರಣೆ. ಆದರೆ, ಪರಸ್ಪರ ಗೆದ್ದೇ ತೀರಬೇಕು ಎಂಬ ಇತ್ತಂಡಗಳ ಆಟಗಾರರ ಮೇಲಿನ ಒತ್ತಡ ಇನ್ನೂ ಕಡಿಮೆಯಾಗಿಲ್ಲ.

ಆಯೋಜಕರಿಗೆ ಹಬ್ಬ?

ಭಾರತ- ಪಾಕ್‌ ತಂಡಗಳ ನಡುವಿನ ಜಿದ್ದು ಟೂರ್ನಿ ಆಯೋಜಕರ ಪಾಲಿಗೆ ಆದಾಯದ ಮೂಲ. ಎರಡೂ ದೇಶಗಳ ನಡುವಿನ ಪಂದ್ಯ ಆಯೋಜನೆಗೊಂಡರೆ ಆದಾಯ ಮತ್ತು ಪ್ರಾಯೋಜಕತ್ವ ಹುಡುಕಿಕೊಂಡು ಬರುತ್ತದೆ. ಪ್ರೇಕ್ಷಕರ ಗ್ಯಾಲರಿಗಳೂ ತುಂಬಿ ತುಳುಕುತ್ತವೆ. ಪಂದ್ಯದ ಟಿಕೆಟ್‌ ಬಿಡುಗಡೆಗೊಂಡ ಕ್ಷಣಾರ್ಧದಲ್ಲೇ ಸೋಲ್ಡ್‌ ಔಟ್‌ ಆಗುತ್ತದೆ. ನೇರ ಪ್ರಸಾರದ ಹಕ್ಕು ಕೂಡ ಲಾಭದಾಯಕ ಮೊತ್ತಕ್ಕೆ ಸೇಲ್‌ ಆಗುತ್ತದೆ. ಹೀಗಾಗಿ ಪ್ರತಿ ಐಸಿಸಿ ಟೂರ್ನಿಯಲ್ಲೂ ಭಾರತ ಹಾಗೂ ಪಾಕಿಸ್ತಾನ ಒಂದೇ ಗುಂಪಿನಲ್ಲಿರುತ್ತದೆ ಹಾಗೂ ಆರಂಭದಲ್ಲೇ ಒಂದು ಪಂದ್ಯ ನಿಗದಿ ಮಾಡಲಾಗುತ್ತದೆ. ಅಲ್ಲಿಂದ ಇಡೀ ಟೂರ್ನಿಗೆ ಕಳೆ ಬರುತ್ತದೆ.

ಭಾರತ ಮತ್ತು ಪಾಕಿಸ್ತಾನಗಳ ನಡುವಿನ ದ್ವಿಪಕ್ಷೀಯ ಸಂಬಂಧ ಸದ್ಯಕ್ಕೆ ಸರಿಹೋಗುವ ಯಾವುದೇ ಲಕ್ಷಗಳು ಇಲ್ಲ. ಹೀಗಾಗಿ ಕ್ರಿಕೆಟ್‌ ತಂಡಗಳ ನಡುವಿನ ವೈರತ್ವವೂ ಮುಂದುವರಿಯುವುದರಲ್ಲಿ ಅನುಮಾನ ಇಲ್ಲ. ಆದರೆ, ಬಿಸಿಸಿಐ ಜಾಗತಿಕ ಮಟ್ಟದಲ್ಲಿ ಅತ್ಯಂತ ಬಲಿಷ್ಠ ಕ್ರಿಕೆಟ್‌ ಸಂಸ್ಥೆಯಾಗಿರುವ ಕಾರಣ ನೇರ ಸಮರದಲ್ಲಿ ಗೆಲುವು ನಮ್ಮದೇ.

ಇದನ್ನೂ ಓದಿ | IND vs PAK | ಭಾರತ ಮತ್ತು ಪಾಕಿಸ್ತಾನ ಪಂದ್ಯದಲ್ಲಿ ಆಟಗಾರರ ನಡುವಿನ ಬಿಗ್‌ ಫೈಟ್‌ಗಳು ಇಲ್ಲಿವೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

LSG vs SRH: ಚೇಸಿಂಗ್​ ವೇಳೆ ಸಿಡಿಲಬ್ಬರದ ಬ್ಯಾಟಿಂಗ್​ ನಡೆಸಿದ ಹೆಡ್​ ಮತ್ತು ಅಭಿಷೇಕ್ ಲಕ್ನೋ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದರು. ಹೆಡ್​ 16 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರೆ, ಅಭಿಷೇಕ್​ ಶರ್ಮ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.

VISTARANEWS.COM


on

LSG vs SRH
Koo

ಹೈದರಾಬಾದ್​: ಟ್ರಾವಿಸ್​ ಹೆಡ್(89*)​ ಮತ್ತು ಅಭಿಷೇಕ್​ ಶರ್ಮ(75*) ಅವರ ಸುಂಟರಗಾಳಿ ಬ್ಯಾಟಿಂಗ್​ಗೆ ತತ್ತರಿಸಿದ ಲಕ್ನೋ ಸೂಪರ್​ ಜೈಂಟ್ಸ್​(LSG vs SRH) 10 ವಿಕೆಟ್​ಗಳ ಅಂತರದ ಹೀನಾಯ ಸೋಲಿಗೆ ತುತ್ತಾಗಿದೆ. ಈ ಸೋಲಿನಿಂದ ರಾಹುಲ್​ ಪಡೆಯ ಪ್ಲೇ ಆಫ್​ ಹಾದಿ ದುರ್ಗಮವಾಗಿದೆ.

ಇಲ್ಲಿನ ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಆಮೆ ಗತಿಯ ಬ್ಯಾಟಿಂಗ್​ ನಡೆಸಿದ ಲಕ್ನೋ ಸೂಪರ್​ ಜೈಂಟ್ಸ್​ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 165 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ ಯಾವುದೇ ವಿಕೆಟ್​ ನಷ್ಟವಿಲ್ಲದೆ ಕೇವಲ 9.4 ಓವರ್​ಗಳಲ್ಲಿ 167 ರನ್​ ಬಾರಿಸಿ ಭರ್ಜರಿ 10 ವಿಕೆಟ್​ ಅಂತರದ ಗೆಲುವು ಸಾಧಿಸಿತು.

ಚೇಸಿಂಗ್​ ವೇಳೆ ಸಿಡಿಲಬ್ಬರದ ಬ್ಯಾಟಿಂಗ್​ ನಡೆಸಿದ ಹೆಡ್​ ಮತ್ತು ಅಭಿಷೇಕ್ ಲಕ್ನೋ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದರು. ಹೆಡ್​ 16 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ಇದು ಈ ಆವೃತ್ತಿಯಲ್ಲಿ ಹೆಡ್​ 16 ಎಸೆತಗಳಿಂದ ಬಾರಿಸಿದ ಮೂರನೇ ಅರ್ಧಶತಕವಾಗಿದೆ. ಅಭಿಷೇಕ್​ ಶರ್ಮ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಅದರಲ್ಲೂ ಹೆಡ್​ ಕನ್ನಡಿಗ ಕೃಷ್ಣಪ್ಪ ಗೌತಮ್​ ಅವರಿಗೆ ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಚಳಿ ಬಿಡಿಸಿದರು. 2 ಓವರ್​ಗೆ 29 ರನ್​ ಬಿಟ್ಟುಕೊಟ್ಟರು. 30 ಎಸೆತ ಎದುರಿಸಿದ ಹೆಡ್​ ತಲಾ 8 ಸಿಕ್ಸರ್​ ಮತ್ತು ಬೌಂಡರಿ ಸಿಡಿಸಿ ಅಜೇಯ 89 ರನ್​ ಬಾರಿಸಿದರು. ಅಭಿಷೇಕ್​ ಶರ್ಮ 8 ಬೌಂಡರಿ ಮತ್ತು 6 ಸಿಕ್ಸರ್​ ನೆರವಿನಿಂದ ಅಜೇಯ 75 ರನ್​ ಬಾರಿಸಿ ತಂಡದ ಜಯ ಸಾರಿದರು.

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಲಕ್ನೋ ತಂಡದ ಪವರ್​ ಪ್ಲೇ ವೈಫಲ್ಯ ಈ ಪಂದ್ಯದಲ್ಲಿಯೂ ಮುಂದುವರಿಯಿತು. ರನ್​ ಗಳಿಸಲು ಪರದಾಡಿದ ಕ್ವಿಂಟನ್​ ಡಿ ಕಾಕ್(2) ರನ್​ಗೆ ವಿಕೆಟ್​ ಕಳೆದುಕೊಂಡರೆ, ಇದರ ಬೆನ್ನಲ್ಲೇ ಮಾರ್ಕಸ್​ ಸ್ಟೋಯಿನಿಸ್​ 3 ರನ್​ ಗಳಿಸಿ ಪೆವಿಲಿಯನ್​ ಕಡೆಗೆ ನಡೆದರು. 21 ರನ್​ಗೆ 2 ವಿಕೆಟ್​ ಕಳೆದುಕೊಂಡು ತಂಡ ಸಂಕಷ್ಟಕ್ಕೆ ಸಿಲುಕಿತು. ಪವರ್​ ಪ್ಲೇಯಲ್ಲಿ ದಾಖಲಾದದ್ದು ಕೇವಲ 27 ರನ್​ ಮಾತ್ರ. ಇದು ತಂಡದ ಬೃಹತ್​ ಮೊತ್ತಕ್ಕೆ ಹಿನ್ನಡೆಯಾಯಿತು.

ನಾಯಕ ರಾಹುಲ್​ ಕೂಡ ಅತ್ಯಂತ ರಕ್ಷಣಾತ್ಮಕ ಆಟಕ್ಕೆ ಒತ್ತು ಕೊಟ್ಟು 33 ಎಸೆತಗಳಿಂದ 29 ರನ್​ ಬಾರಿಸಿದರು. ಬಾರಿಸಿದ್ದು ತಲಾ ಒಂದು ಸಿಕ್ಸರ್​ ಮತ್ತು ಬೌಂಡರಿ ಮಾತ್ರ. 4ನೇ ವಿಕೆಟ್​ಗೆ ಆಡಲು ಬಂದ ಕೃಣಾಲ್​ ಪಾಂಡ್ಯ ಮಧ್ಯಮ ಕ್ರಮಾಂದಲ್ಲಿ ಸಣ್ಣ ಮಟ್ಟದ ಹೋರಾಟ ಸಂಘಟಿಸಿ 2 ಸಿಕ್ಸರ್​ ಸಿಡಿಸಿ 24 ರನ್​ ಗಳಿಸಿ ಪ್ಯಾಟ್​ ಕಮಿನ್ಸ್​ ಅವರ ನೇರ ಥ್ರೋಗೆ ರನೌಟ್​ ಆದರು. ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾದದ್ದು ಆಯುಷ್​ ಬದೋನಿ ಮತ್ತು ನಿಕೋಲಸ್​ ಪೂರನ್​. ಉಭಯ ಆಟಗಾರರು ಹೈದರಾಬಾದ್​ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸಿ ನಿಂತು 5ನೇ ವಿಕೆಟ್​ಗೆ ಮುರಿಯದ 99 ರನ್​ಗಳ ಅತ್ಯಮೂಲ್ಯ ಜತೆಯಾಟ ನಡೆಸಿದರು. ಹೀಗಾಗಿ ತಂಡ 150ರ ಗಡಿ ದಾಡಿತು.

ಬದೋನಿ 30 ಎಸೆತ ಎದುರಿಸಿ 55 ರನ್​ ಬಾರಿಸುವ ಮೂಲಕ ಅರ್ಧಶತಕ ಪೂರ್ತಿಗೊಳಿಸಿದರು. ನಿಕೋಲಸ್​ ಪೂರನ್​ 26 ಎಸೆತಗಳಿಂದ 48 ರನ್​ ಗಳಿಸಿದರು. ಹೈದರಾಬಾದ್​ ಪರ ಅನುಭವಿ ಭುವನೇಶ್ವರ್ ಕುಮಾರ್​ 2 ವಿಕೆಟ್​ ಪಡೆದರೆ, ಕಮಿನ್ಸ್​ 1 ವಿಕೆಟ್​ ಕಿತ್ತರು. ಹುಟ್ಟುಹಬ್ಬದ ದಿನವೇ ಕಮಿನ್ಸ್​ಗೆ ಭರ್ಜರಿ ಗೆಲುವಿನ ಉಡುಗೊರೆ ದೊರೆತಿದೆ.​

Continue Reading

ಕ್ರಿಕೆಟ್

Monty Panesar: ರಾಜಕೀಯಕ್ಕೆ ಎಂಟ್ರಿ ಕೊಟ್ಟು ಒಂದೇ ವಾರದಲ್ಲಿ ಗುಡ್​ ಬೈ ಹೇಳಿದ ಇಂಗ್ಲೆಂಡ್​ ಸ್ಪಿನ್ನರ್

Monty Panesar: 42 ವರ್ಷದ ಪನೇಸರ್ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಪಶ್ಚಿಮ ಲಂಡನ್‌ನ ಈಲಿಂಗ್ ಸೌಥಾಲ್ ಕ್ಷೇತ್ರದಿಂದ ಸ್ಪರ್ಧಿಸಲು ಆಯ್ಕೆಯಾಗಿದ್ದರು. ಇದೀಗ ಅಚ್ಚರಿ ಎಂಬತ್ತೆ ಒಂದೇ ವಾರಕ್ಕೆ ರಾಜಕೀಯಕ್ಕೆ ಗುಡ್​ ಬೈ ಹೇಳಿದ್ದಾರೆ. ಆದರೆ, ರಾಜಕೀಯದಿಂದ ದೂರವಾಗಲು ಕಾರಣ ಏನೆಂಬುದನ್ನು ಪನೇಸರ್ ತಿಳಿಸಿಲ್ಲ.

VISTARANEWS.COM


on

Monty Panesar
Koo

ಲಂಡನ್​: ಕಳೆದ ವಾರವಷ್ಟೇ ಇಂಗ್ಲೆಂಡ್‌ನ‌ ಮಾಂಟಿ ಪನೇಸರ್‌(Monty Panesar) ರಾಜಕೀಯಕ್ಕೆ ಗ್ರ್ಯಾಂಡ್​ ಎಂಟ್ರಿ ಕೊಟ್ಟಿದ್ದರು. ಇದೀಗ ಒಂದು ವಾರ ಆಗುವಷ್ಟರಲ್ಲಿ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಜಾರ್ಜ್ ಗ್ಯಾಲೋವೆ ನೇತೃತ್ವದ ವರ್ಕರ್ಸ್ ಪಾರ್ಟಿ ಆಫ್ ಗ್ರೇಟ್ ಬ್ರಿಟನ್‌ನ ಸಂಸದೀಯ ಅಭ್ಯರ್ಥಿಯಾಗಿದ್ದ ಮಾಂಟಿ ಪನೇಸರ್‌, ತಮ್ಮ ಹೆಸರನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಇದೇ ವರ್ಷಾರಂಭದಲ್ಲಿ ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ಕೂಡ ರಾಜಕೀಯಕ್ಕೆ ಎಂಟ್ರಿ ಕೊಟ್ಟು ಒಂದೇ ವಾರಕ್ಕೆ ದಿಢೀರ್​ ರಾಜಕೀಯದಿಂದ ಹಿಂದೆ ಸರಿದಿದ್ದರು.

42 ವರ್ಷದ ಪನೇಸರ್ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಪಶ್ಚಿಮ ಲಂಡನ್‌ನ ಈಲಿಂಗ್ ಸೌಥಾಲ್ ಕ್ಷೇತ್ರದಿಂದ ಸ್ಪರ್ಧಿಸಲು ಆಯ್ಕೆಯಾಗಿದ್ದರು. ಇದೀಗ ಅಚ್ಚರಿ ಎಂಬತ್ತೆ ಒಂದೇ ವಾರಕ್ಕೆ ರಾಜಕೀಯಕ್ಕೆ ಗುಡ್​ ಬೈ ಹೇಳಿದ್ದಾರೆ. ಆದರೆ, ರಾಜಕೀಯದಿಂದ ದೂರವಾಗಲು ಕಾರಣ ಏನೆಂಬುದನ್ನು ಪನೇಸರ್ ತಿಳಿಸಿಲ್ಲ. ಮೂಲಗಳ ಪ್ರಕಾರ ಮಾಧ್ಯಮಗಳ ನಿರಂತರವಾದ ಸಂದರ್ಶನಗಳಿಂದ ಬೇಸತ್ತು ಅವರು ಈ ನಿರ್ಧಾರ ಕೈಗೊಂಡರು ಎನ್ನಲಾಗಿದೆ.

ಕೆಲ ದಿನಗಳ ಹಿಂದೆ ನಡೆದಿದ್ದ ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ಪನೇಸರ್ ನ್ಯಾಟೊದಲ್ಲಿ ಯುನೈಟೆಡ್ ಕಿಂಗ್‌ಡಮ್‌ನ ಮುಂದುವರಿದ ಸದಸ್ಯತ್ವದ ಬಗ್ಗೆ ಕೇಳಲಾಗಿದ್ದ ಪ್ರಶ್ನೆಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಲು ಹೆಣಗಾಡಿದ್ದರು. ಈ ಘಟನೆ ನಡೆದ 2 ದಿನಗಳ ಅಂತರದಲ್ಲಿ ಪನೇಸರ್ ರಾಜಕೀಯದಿಂದ ದೂರ ಸರಿದಿದ್ದಾರೆ. ರಾಜಕೀಯವು ಜನರಿಗೆ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ನಾನಿನ್ನೂ ಕಲಿಯಬೇಕಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ತಮ್ಮ ರಾಜಕೀಯ ನಿವೃತ್ತಿಯನ್ನು ಪ್ರಕಟಿಸಿದ್ದಾರೆ.

“ವರ್ಕರ್ಸ್ ಪಾರ್ಟಿಯ ಸಾರ್ವತ್ರಿಕ ಚುನಾವಣಾ ಅಭ್ಯರ್ಥಿಯಾಗಿ ನನ್ನ ಹೆಸರನ್ನು ಹಿಂತೆಗೆದುಕೊಳ್ಳುತ್ತಿದ್ದೇನೆ. ನನ್ನ ವೈಯಕ್ತಿಕ ಮತ್ತು ರಾಜಕೀಯ ಮೌಲ್ಯಗಳಿಗೆ ಹೊಂದಿಕೆಯಾಗುವ ರಾಜಕೀಯ ನೆಲೆಯನ್ನು ಹುಡುಕಲು ನನಗೆ ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಅರಿತುಕೊಂಡಿದ್ದೇನೆ. ಹೀಗಾಗಿ ನಾನು ಈ ನಿಲುವು ಕೈಗೊಂಡಿದ್ದೇನೆ. ವರ್ಕರ್ಸ್ ಪಾರ್ಟಿಗೆ ಶುಭ ಹಾರೈಸುತ್ತೇನೆ. ನನ್ನ ರಾಜಕೀಯ ನೆಲೆಯನ್ನು ಪ್ರಬುದ್ಧಗೊಳಿಸಲು ಮತ್ತು ಕಂಡುಕೊಳ್ಳಲು ಸ್ವಲ್ಪ ಸಮಯ ಬೇಕು. ಮುಂದಿನ ದಿನಗಳಲ್ಲಿ ಮತ್ತೆ ಬಲಿಷ್ಠನಾಗಿ ರಾಜಕೀಯಕ್ಕೆ ಟಂಟ್ರಿ ಕೊಡಲಿದ್ದೇನೆ” ಎಂದು ಪನೇಸರ್ ಹೇಳಿದ್ದಾರೆ.

ಇಂಗ್ಲೆಂಡ್ ಪರ 50 ಟೆಸ್ಟ್ ಪಂದ್ಯಗಳಲ್ಲಿ 167 ವಿಕೆಟ್ ಪಡೆದಿದ್ದಾರೆ. 26 ಏಕದಿನ ಪಂದ್ಯಗಳಲ್ಲಿ 26 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಕ್ರಿಕೆಟ್​ನಿಂದ ನಿವೃತ್ತಿ ಹೊಂದಿರುವ ಪನೇಸರ್ ಕ್ರಿಕೆಟ್​ ಕಾಮೆಂಟ್ರಿಯಲ್ಲಿ ತೊಡಗಿಕೊಂಡಿದ್ದಾರೆ.

Continue Reading

ಕ್ರೀಡೆ

Virat Kohli: ಪಂಜಾಬಿ ಮಾತನಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Virat Kohli: ಅಭ್ಯಾಸದ ವೇಳೆ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(Virat Kohli) ಪಂಜಾಬ್​ನ ಸ್ಥಳೀಯ ಕ್ರಿಕೆಟಿಗರೊಂದಿಗೆ ಪಂಜಾಬಿ ಮಾತನಾಡಿ ಗಮನಸೆಳೆದಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Virat Kohli
Koo

ಧರ್ಮಶಾಲಾ: ನಾಳೆ(ಗುರುವಾರ) ನಡೆಯುವ ಐಪಿಎಲ್​ನ(IPL 2024) 58ನೇ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್(Punjab Kings)​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ಮುಖಾಮುಖಿಯಾಗಲಿವೆ. ಈ ಪಂದ್ಯ ಹಿಮಾಲಯದ ತಪ್ಪಲಿನ ರಮಣೀಯ ತಾಣವಾದ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(Virat Kohli) ಇಲ್ಲಿನ ಸ್ಥಳೀಯ ಆಟಗಾರರೊಂದಿಗೆ ಪಂಜಾಬಿ ಮಾತನಾಡಿ ಗಮನಸೆಳೆದಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಪಂಜಾಬ್​ನ ಸ್ಥಳೀಯ ಕ್ರಿಕೆಟಿಗರು ಕೂಡ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಶನ್‌ ಸ್ಟೇಡಿಯಂ (ಎಚ್‌ಪಿಸಿಎ)ನಲ್ಲಿ ಕ್ರಿಕೆಟ್​ ಅಭ್ಯಾಸ ನಡೆಸುತ್ತಿದ್ದರು. ಈ ವೇಳೆ ತಮ್ಮ ನೆಚ್ಚಿನ ಆಟಗಾರರ ವಿರಾಟ್​ ಕೊಹ್ಲಿಯ ಆಟೋಗ್ರಾಫ್​ ಪಡೆದುಕೊಂಡಿದ್ದಾರೆ. ಈ ವೇಳೆ ಕೊಹ್ಲಿ ಕೆಲವು ಪಂಜಾಬಿ ಪದಗಳನ್ನು ಹೇಳಿದ್ದಾರೆ. ಕೊಹ್ಲಿಯ ಪಂಜಾಬಿ ಮಾತುಗಳು ಕೇಳಿ ಸಹ ಆಟಗಾರರು ಜೋರಾಗಿ ನಕ್ಕಿದ್ದಾರೆ. ಕೊಹ್ಲಿ ಕೂಡ ಇವರೊಂದಿಗೆ ನಕ್ಕಿದ್ದಾರೆ.

ಶನಿವಾರ ನಡೆದಿದ್ದ ಗುಜರಾತ್​ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ 4 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(Virat- Anushka) ಅವರು ಎದುರಾಳಿ ತಂಡದ ಆಟಗಾರ ಶಾರೂಖ್​ ಖಾನ್​ ಅವರನ್ನು ಮಿಂಚಿನ ಎಸೆತದ ಮೂಲಕ ರನೌಟ್​ ಮಾಡಿ ಗಮನಸೆಳೆದಿದ್ದರು. ಬುಲೆಟ್​ ಚಿಮ್ಮಿದ ವೇಗದಲ್ಲಿ ರನೌಟ್​ ಮಾಡಿದ್ದನ್ನು ಕಂಡು ಪತ್ನಿ ಅನುಷ್ಕಾ(Anushka Sharma) ದಂಗಾಗಿದ್ದರು. ಇದರ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video)​ ಆಗಿತ್ತು.

ಆರಂಭಿಕ ಆಘಾತ ಕಂಡಿದ್ದ ಗುಜರಾತ್​ಗೆ ಶಾರೂಖ್​ ಖಾನ್​ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್​ ಮೂಲಕ ಆಸರೆಯಾಗಿದ್ದರು. 24 ಎಸೆತಗಳಿಂದ 37 ರನ್​ ಗಳಿಸಿ ನಾನ್​ಸ್ಟ್ರೈಕ್​ನಲ್ಲಿದ್ದ ಶಾರೂಖ್ ಇಲ್ಲದ ರನ್​ ಕದಿಯಲು ಯತ್ನಿಸಿದ ವೇಳೆ ಚಿರತೆ ವೇಗದಲ್ಲಿ ಫೀಲ್ಡಿಂಗ್​ ನಡೆಸಿ ಕೊಹ್ಲಿ ಚೆಂಡನ್ನು ನೇರವಾಗಿ ವಿಕೆಟ್​ಗೆ ಎಸೆದು ರನೌಟ್​ ಮಾಡಿದರು. ಒಂದೊಮ್ಮೆ ಕೊಹ್ಲಿ ಈ ರನೌಟ್​ ಮಾಡದಿದ್ದರೆ ಶಾರೂಖ್​ ಆರ್​ಸಿಬಿಗೆ ಅಪಾಯಕಾರಿಯಾಗಿ ಗೋಚರಿಸುವ ಸಾಧ್ಯತೆಯೂ ಇತ್ತು.

ಇದನ್ನೂ ಓದಿ IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

ಗುಜರಾತ್​ ವಿರುದ್ಧ  6 ರನ್​ ಗಳಿಸುತ್ತಿದ್ದಂತೆ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 12500 ರನ್​ ಪೂರೈಸಿದ ಮೊದಲ ಭಾರತೀಯ ಎನಿಸಿಕೊಂಡರು. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಮೋಹಿತ್​ ಶರ್ಮ ಎಸೆದ ಇನಿಂಗ್ಸ್​ನ ಮೊದಲ ಓವರ್​ನ ದ್ವಿತೀಯ ಎಸೆತವನ್ನು ಸಿಕ್ಸರ್​ಗೆ ಬಡಿದಟ್ಟುವ ಮೂಲಕ ​ ವಿರಾಟ್​ ಕೊಹ್ಲಿ ರನ್​ ಖಾತೆ ತೆರೆದರು. ಜತೆಗೆ ಈ ರನ್​ ಮೂಲಕ ಟಿ20 ಕ್ರಿಕೆಟ್​ನಲ್ಲಿ 12500 ರನ್​ ಪೂರೈಸಿದರು. ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ವಿಂಡೀಸ್​ನ ಮಾಜಿ ಆಟಗಾರ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 14562 ರನ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ. ಪಾಕಿಸ್ತಾನದ ಶೊಯೆಬ್ ಮಲಿಕ್ (13360) ದ್ವಿತೀಯ, ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್(12900) ತೃತೀಯ ಸ್ಥಾನದಲ್ಲಿದ್ದಾರೆ. ಕೊಹ್ಲಿ 12536* ರನ್​ಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ.

Continue Reading

ಕ್ರೀಡೆ

RCB vs PBKS: ಪಂಜಾಬ್​-ಆರ್​ಸಿಬಿ ಸೆಣಸಾಟ; ಸೋತವರು ಟೂರ್ನಿಯಿಂದ ಔಟ್​

RCB vs PBKS: ಎರಡೂ ತಂಡಗಳು 11 ಪಂದ್ಯಗಳಿಂದ ಎಂಟು ಅಂಕಗಳನ್ನು ಹೊಂದಿದ್ದರೂ, ಆರ್​ಸಿಬಿ ಉತ್ತಮ ರನ್ ರೇಟ್​ ಆಧಾರದಲ್ಲಿ 7ನೇ ಸ್ಥಾನದಲ್ಲಿದೆ ಪಂಜಾಬ್​ 8ನೇ ಸ್ಥಾನದಲ್ಲಿದೆ. ಉಭಯ ತಂಡಗಳಿಗೂ ಇನ್ನು ಮೂರು ಪಂದ್ಯಗಳು ಬಾಕಿ ಉಳಿದಿವೆ. ಈ ಮೂರು ಪಂದ್ಯಗಳನ್ನು ಗೆದ್ದರೆ ಮಾತ್ರ ಪ್ಲೇಆಫ್‌ಗೆ ಪ್ರವೇಶಿಸುವ ಅವಕಾಶ ಇದೆ.

VISTARANEWS.COM


on

RCB vs PBKS
Koo

ಧರ್ಮಶಾಲಾ: ಆರಂಭಿಕ ಹಂತದಲ್ಲಿ ನಿರಾಶಾದಾಯಕ ಪ್ರದರ್ಶನ ತೋರಿ, ಟೂರ್ನಿ ಮುಕ್ತಾಯದ ಹಂತದಲ್ಲಿ ಶ್ರೇಷ್ಠ ಪ್ರದರ್ಶನದ ಮೂಲಕ ಹ್ಯಾಟ್ರಿಕ್​ ಗೆಲುವು ಸಾಧಿಸಿರುವ ಆರ್​ಸಿಬಿ ತಂಡ ನಾಳೆ ನಡೆಯುವ ಐಪಿಎಲ್​(IPL 2024) ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್(RCB vs PBKS)​ ವಿರುದ್ಧ ಕಣಕ್ಕಿಳಿಯಲಿದೆ. ಪ್ಲೇ ಆಫ್​ಗೆ ಕ್ಷೀಣ ಅವಕಾಶ ಹೊಂದಿರುವ ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಹೀಗಾಗಿ ಪಂದ್ಯ ಅತ್ಯಂತ ರೋಚಕವಾಗಿ ಸಾಗುವ ಸಾಧ್ಯತೆ ಇದೆ. ಸೋತ ತಂಡದ ಪ್ಲೇ ಆಫ್​ ಹಾದಿ ಬಂದ್​ ಆಗಲಿದೆ.

ಎರಡೂ ತಂಡಗಳು 11 ಪಂದ್ಯಗಳಿಂದ ಎಂಟು ಅಂಕಗಳನ್ನು ಹೊಂದಿದ್ದರೂ, ಆರ್​ಸಿಬಿ ಉತ್ತಮ ರನ್ ರೇಟ್​ ಆಧಾರದಲ್ಲಿ 7ನೇ ಸ್ಥಾನದಲ್ಲಿದೆ ಪಂಜಾಬ್​ 8ನೇ ಸ್ಥಾನದಲ್ಲಿದೆ. ಉಭಯ ತಂಡಗಳಿಗೂ ಇನ್ನು ಮೂರು ಪಂದ್ಯಗಳು ಬಾಕಿ ಉಳಿದಿವೆ. ಈ ಮೂರು ಪಂದ್ಯಗಳನ್ನು ಗೆದ್ದರೆ ಮಾತ್ರ ಪ್ಲೇಆಫ್‌ಗೆ ಪ್ರವೇಶಿಸುವ ಅವಕಾಶ ಇದೆ. ಜತೆಗೆ ಇತರ ತಂಡಗಳ ಫಲಿತಾಂಶಗಳು ಕೂಡ ಮುಖ್ಯವಾಗಿದೆ. ಒಟ್ಟಾರೆ ನಾಳೆ ಗೆದ್ದ ತಂಡ ಪ್ಲೇ ಆಪ್​ ರೇಸ್​ನಲ್ಲಿ ಉಳಿಯಲಿದೆ.

ಪಿಚ್​ ರಿಪೋರ್ಟ್​

ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಶನ್‌ ಸ್ಟೇಡಿಯಂ (ಎಚ್‌ಪಿಸಿಎ) ಪ್ರಕೃತಿಯ ಅತ್ಯಂತ ರಮಣೀಯ ಸ್ಟೇಡಿಯಂ ಆಗಿದ್ದು, ಹಿಮಾಲಯ ಶ್ರೇಣಿಯಲ್ಲಿ ತಲೆಯೆತ್ತಿ ನಿಂತಿದೆ. ಸಮುದ್ರ ಮಟ್ಟದಿಂದ 1,317 ಮೀ. ಎತ್ತರದಲ್ಲಿದೆ. ಅಡಿಲೇಡ್‌ ಓವಲ್‌, ನ್ಯೂಜಿಲ್ಯಾಂಡ್​ ಸ್ಟೇಡಿಯಂಗಳಂತೆ ಇದು ಕೂಡ ಚಿತ್ರಸದೃಶವಾಗಿದೆ. 23 ಸಾವಿರದಷ್ಟು ವೀಕ್ಷಕರ ಸಾಮರ್ಥ್ಯ ಹೊಂದಿರುವ ಈ ಸ್ಟೇಡಿಯಂ ಪ್ರಕೃತಿಗೆ ತೆರೆದುಕೊಂಡಿದೆ. ರಾತ್ರಿ ಪಂದ್ಯ ನಡೆಯುವ ಕಾರಣ ಇಲ್ಲಿ ಹುಳದ ಕಾಟ ಕೂಡ ಹೆಚ್ಚಾಗಿ ಕಾಡಲಿದೆ. ಜತೆಗೆ ಮಳೆಯ ಮುನ್ಸೂಚನೆಯೂ ಇದೆ.

ಇದನ್ನೂ ಓದಿ IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

ಆರ್​ಸಿಬಿ ತಂಡದ ನಾಯಕ ಫಾಫ್​ ಡು ಪ್ಲೆಸಿಸ್​ ಕಳೆದ ಪಂದ್ಯದಲ್ಲಿ ಗಾಯಗೊಂಡಿದ್ದು ಈ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ. ಒಂದೊಮ್ಮೆ ಅವರು ಪಂದ್ಯದಿಂದ ಇಂಪ್ಯಾಕ್ಟ್​ ಆಟಗಾರನಾಗಿ ಕೇವಲ ಬ್ಯಾಟಿಂಗ್​ ಮಾಡುವ ಸಾಧ್ಯತೆ ಇದೆ. ವಿರಾಟ್​ ಕೊಹ್ಲಿ ಹಂಗಾಮಿ ನಾಯಕನಾಗಿ ತಂಡವನ್ನು ಮುನ್ನಡೆಸಬಹುದು.

ಪಂಜಾಬ್​ ಗೆದ್ದಿರುವುದು ಬ್ಯಾಟಿಂಗ್​ ಬಲದಿಂದ. ಹೀಗಾಗಿ ಈ ಪಂದ್ಯದಲ್ಲಿಯೂ ಪಂಜಾಬ್​ ಬ್ಯಾಟಿಂಗ್​ ಬಲವನ್ನೇ ನಂಬಿದೆ. ಕಳೆದೊಂದು ವರ್ಷದಿಂದ ತೀವ್ರ ಬ್ಯಾಟಿಂಗ್​ ಬರ ಎದುರಿಸಿದ್ದ ಜಾನಿ ಬೇರ್​ಸ್ಟೋ ಪ್ರಚಂಡ ಫಾರ್ಮ್​ಗೆ ಮರಳಿದ್ದಾರೆ. ಇದು ಪಂಜಾಬ್​ಗೆ ಆನೆ ಬಲ ಬಂದಂತಾಗಿದೆ. ಮಧ್ಯಮ ಕ್ರಮಾಂಕದಲ್ಲಿ ಶಶಾಂಕ್​ ಸಿಂಗ್​ ಮತ್ತು ಅಶುತೋಷ್ ಶರ್ಮಾ ಸಿಡಿಲಬ್ಬರ ಬ್ಯಾಟಿಂಗ್​ ಮೂಲಕ ತಂಡಕ್ಕೆ ನೆರವಾಗಬಲ್ಲರು. ಒಟ್ಟಾರೆಯಾಗಿ ಪಂಜಾಬ್​ಗೆ ಬ್ಯಾಟಿಂಗ್​ಗೇ ಮುಖ್ಯ ಬಲವಾಗಿದೆ.

ಎಚ್‌ಪಿಸಿಎ ಕ್ರಿಕೆಟ್​ ಸ್ಟೇಡಿಯಂನಲ್ಲಿ ಇದುವರೆಗೆ 12 ಐಪಿಎಲ್​ ಪಂದ್ಯಗಳು ನಡೆದಿವೆ. ಈ ಪೈಕಿ 7 ಪಂದ್ಯಗಳನ್ನು ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದ್ದರೆ, 5 ಬಾರಿ ಚೇಸಿಂಗ್​ ನಡೆಸಿದ ತಂಡ ಗೆದ್ದಿದೆ. 2 ವಿಕೆಟ್​ಗೆ 232 ರನ್​ ಇಲ್ಲಿ ದಾಖಲಾದ ಅತ್ಯಧಿಕ ರನ್​ ಗಳಿಕೆಯಾಗಿದೆ. 2011ರಲ್ಲಿ ಪಂಜಾಬ್​ ಮತ್ತು ಆರ್​ಸಿಬಿ ನಡುವಿನ ಪಂದ್ಯದಲ್ಲಿ ಈ ಮೊತ್ತ ದಾಖಲಾಗಿತ್ತು.

ಸಂಭಾವ್ಯ ತಂಡಗಳು

ಪಂಜಾಬ್​ ಕಿಂಗ್ಸ್​: ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್ (ನಾಯಕ), ರಿಲೀ ರೊಸೊ, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿಕೆ), ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

ಆರ್​ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ವಿಲ್ ಜಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ವಿಜಯ್ ಕುಮಾರ್ ವೈಶಾಕ್.

Continue Reading
Advertisement
Pune
ದೇಶ3 hours ago

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಉತ್ತರ ಕನ್ನಡ4 hours ago

Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

Kulgam
ದೇಶ4 hours ago

Kulgam: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಮತ್ತೊಬ್ಬ ಉಗ್ರನ ಎನ್‌ಕೌಂಟರ್‌, 2 ದಿನದಲ್ಲಿ 3ನೇ ಬಲಿ

ವಿಸ್ತಾರ ಗ್ರಾಮದನಿ Vistara Gramadaani
ಕರ್ನಾಟಕ4 hours ago

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

LSG vs SRH
ಕ್ರೀಡೆ5 hours ago

LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

Hindu Girl
ದೇಶ5 hours ago

Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Monty Panesar
ಕ್ರಿಕೆಟ್5 hours ago

Monty Panesar: ರಾಜಕೀಯಕ್ಕೆ ಎಂಟ್ರಿ ಕೊಟ್ಟು ಒಂದೇ ವಾರದಲ್ಲಿ ಗುಡ್​ ಬೈ ಹೇಳಿದ ಇಂಗ್ಲೆಂಡ್​ ಸ್ಪಿನ್ನರ್

Murder Case
ಕರ್ನಾಟಕ5 hours ago

Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Virat Kohli
ಕ್ರೀಡೆ6 hours ago

Virat Kohli: ಪಂಜಾಬಿ ಮಾತನಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Poonch Terrorists
ದೇಶ6 hours ago

Poonch Terrorists: ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ22 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌