ICC World Cup 2023 : ಪಾಕಿಸ್ತಾನ ಔಟ್​; ಭಾರತ- ಕಿವೀಸ್​ ಸೆಮಿಫೈನಲ್​ ಫಿಕ್ಸ್​ - Vistara News

ಕ್ರಿಕೆಟ್

ICC World Cup 2023 : ಪಾಕಿಸ್ತಾನ ಔಟ್​; ಭಾರತ- ಕಿವೀಸ್​ ಸೆಮಿಫೈನಲ್​ ಫಿಕ್ಸ್​

ಭಾರತ ತಂಡವು ವಿಶ್ವ ಕಪ್​ನ ಮೊದಲ ಸೆಮಿಫೈನಲ್​ನಲ್ಲಿ ಅಂಕಪಟ್ಟಿಯ ನಾಲ್ಕನೇ ಸ್ಥಾನಿ ನ್ಯೂಜಿಲ್ಯಾಂಡ್ ವಿರುದ್ದ ಸೆಣಸಾಡಲಿದೆ.

VISTARANEWS.COM


on

Pakistan Criket Team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತಾ: ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ತಂಡ ಹಾಲಿ ಆವೃತ್ತಿಯ ವಿಶ್ವ ಕಪ್​ನ (ICC World Cup 2023) ಲೀಗ್​ ಹಂತದಿಂದಲೇ ಹೊರಕ್ಕೆ ನಡೆದಿದೆ. ಭಾರತೀಯ ಉಪ ಖಂಡದ ಲಾಭಗಳನ್ನು ಬಳಸಿಕೊಂಡು ಕಪ್​ ಗೆದ್ದುಕೊಂಡು ಬರುತ್ತೇವೆ ಎಂಬ ಹುಮ್ಮಸ್ಸಿನಲ್ಲಿ ಭಾರತಕ್ಕೆ ಕಾಲಿಟ್ಟಿದ್ದ ಪಾಕ್​ ತಂಡ ನಿರಾಶಾದಾಯಕ ಪ್ರದರ್ಶನ ನೀಡುವ ಮೂಲಕ ಮೊದಲ ಹಂತದಿಂದಲೇ ನಿರ್ಗಮಿಸಿದೆ. ಈ ಮೂಲಕ ಆಡಳಿತಾತ್ಮಕವಾಗಿ ಹಾಗೂ ಆಂತರಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದ ಪಾಕ್ ತಂಡ ಭಾರತದಿಂದ ಬೇಸರದಿಂದ ನಿರ್ಗಮಿಸುವಂತಾಗಿದೆ.

ಪಾಕಿಸ್ತಾನ ತಂಡ ಹೊರಕ್ಕೆ ಬೀಳುತ್ತಿದ್ದಂತೆಯೇ ಭಾರತ ಹಾಗೂ ನ್ಯೂಜಿಲ್ಯಾಂಡ್ ತಂಡಗಳ ನಡುವಿನ ಸೆಮಿಫೈನಲ್ ಪಂದ್ಯ ಫಿಕ್ಸ್ ಆಗಿದೆ. ನವೆಂಬರ್​ 15ರಂದು ಮೊದಲ ಸೆಮಿ ಫೈನಲ್ ನಡೆಯಲಿದ್ದು, ಈ ಪಂದ್ಯ ಮುಂಬಯಿಯ ವಾಂಖೆಡೆ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ಅಯೋಜನೆಗೊಂಡಿದೆ.

ನವೆಂಬರ್​ 11ರಂದು ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬೃಹತ್ ಅಂತರದ ಗೆಲುವು ಸಾಧಿಸುವ ಮೂಲಕ ಪಾಕಿಸ್ತಾನ ತಂಡಕ್ಕೆ ಸೆಮಿಫೈನಲ್​ಗೇರುವ ಅವಕಾಶ ಇತ್ತು.ಗೆಲುವಿನ ಜತೆಗೆ ನ್ಯೂಜಿಲ್ಯಾಂಡ್ ತಂಡವನ್ನು ನೆಟ್​ರನ್ ರೇಟ್​ನಲ್ಲಿ ಹಿಂದಿಕ್ಕಿ ಪಾಕಿಸ್ತಾನ ತಂಡ ಉಪಾಂತ್ಯಕ್ಕೆ ಪ್ರವೇಶ ಮಾಡಬೇಕಾಗಿತ್ತು. ಆದರೆ ಆ ಗುರಿ ಅಸಾಧ್ಯವಾಗಿತ್ತು. ಮೊದಲು ಬ್ಯಾಟ್​ ಮಾಡಿದ ಇಂಗ್ಲೆಂಡ್​ ತಂಡ 337 ರನ್​ ಬಾರಿಸಿತ್ತು. ಕೇವಲ 6. 4 ಓವರ್​ಗಳಲ್ಲಿ ಆ ಗುರಿಯನ್ನು ಮುಟ್ಟಿದ್ದರೆ ಪಾಕ್​ಗೆ ಸೆಮೀಸ್ ಪ್ರವೇಶದ ಅವಕಾಶ ಇತ್ತು. ಆ ಅವಕಾಶ ಮುಗಿದ ತಕ್ಷಣ ಪಾಕ್ ತಂಡದ ಸೆಮಿಸ್ ಕತೆ ಮುಗಿಯಿತು.

ಪಾಕಿಸ್ತಾನ ತಂಡ ಇನ್ನು ಇಂಗ್ಲೆಂಡ್ ವಿರುದ್ಧ ಗೆದ್ದರೂ ಏನೂ ಪ್ರಯೋಜನ ಇಲ್ಲ. ಅದು ಗರಿಷ್ಠ 5 ಗೆಲುವುಗಳೊಂದಿಗೆ 10 ಅಂಕಗಳನ್ನು ಸಂಪಾದಿಸಿ ತವರಿಗೆ ಮರಳಬಹುದು.

ಈ ಸುದ್ದಿಯನ್ನೂ ಓದಿ : ICC World Cup 2023 : ಡಚ್ಚರನ್ನು ಸೋಲಿಸಿ ಅಜೇಯ ಸಾಧನೆ ಮಾಡುವುದೇ ರೋಹಿತ್ ಪಡೆ?

ಪಂದ್ಯದ ಮೊದಲು ಸನ್ನಿವೇಶಗಳ ಬಗ್ಗೆ ಮಾತನಾಡಿದ ಬಾಬರ್ ಅಜಮ್ ಅಂಡ್ ಕೋ 1.3 ಓವರ್ಗಳಲ್ಲಿ 20 ರನ್ಗಳ ಗುರಿಯನ್ನು ಬೆನ್ನಟ್ಟಬೇಕಾಗಿತ್ತು. 2.5 ಓವರ್ ಗಳಲ್ಲಿ 50 ರನ್ ಗಳ ಗುರಿ ನೀಡಲಾಗಿತ್ತು 3.4 ಓವರ್ ಗಳಲ್ಲಿ 150 ರನ್ ಗಳ ಗುರಿ ನೀಡಲಾಯಿತು. 4.3 ಓವರ್ ಗಳಲ್ಲಿ 200 ಮತ್ತು 6.1 ಓವರ್ ಗಳಲ್ಲಿ 300 ರನ್ ಗಳ ಗುರಿಯು ಎದುರಾಗಿತ್ತು.

ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಜಾನಿ ಬೈರ್​​ಸ್ಟೋವ್​ ಬೆನ್ ಸ್ಟೋಕ್ಸ್, ಜೋ ರೂಟ್ ಅವರ ಅರ್ಧಶತಕಗಳೊಂದಿಗೆ ಒಟ್ಟು 337 ರನ್ ಗಳಿಸಿತು. ನಾಯಕ ಜೋಸ್ ಬಟ್ಲರ್, ಹ್ಯಾರಿ ಬ್ರೂಕ್ ಮತ್ತು ಡೇವಿಡ್ ವಿಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಪಾಕಿಸ್ತಾನ ಪರ ಹ್ಯಾರಿಸ್ ರವೂಫ್ 3 ವಿಕೆಟ್ ಪಡೆದರು. ಆದಾಗ್ಯೂ, ಅವರು ವಿಶ್ವಕಪ್​​ನಲ್ಲಿ ಅತಿ ಹೆಚ್ಚು ರನ್ ಬಿಟ್ಟುಕೊಟ್ಟ ಬೌಲರ್ ಎಂಬ ಕುಖ್ಯಾತಿಗೆ ಪಾತ್ರರಾದರು.

ವಿಶ್ವಕಪ್​​ನಲ್ಲಿ ಬೌಲರ್ ಬಿಟ್ಟುಕೊಟ್ಟ ಅತಿ ಹೆಚ್ಚು ರನ್​​ಗಳು

  • 528* – 2023ರಲ್ಲಿ ಹ್ಯಾರಿಸ್ ರವೂಫ್ (9 ಅಂಕ)
  • 526 – ಆದಿಲ್ ರಶೀದ್ (2019)
  • 525 – 2023 ರಲ್ಲಿ ಮಧುಶಂಕ (9 ಮ್ಯಾಟ್ ಗಳು)
  • 502 – 2019 ರಲ್ಲಿ ಸ್ಟಾರ್ಕ್ (10 ಮ್ಯಾಟ್)
  • 484 – 2019 ರಲ್ಲಿ ಮುಸ್ತಾಫಿಜುರ್ (8 ಅಂಕಗಳು)
  • 481 – ಶಾಹೀನ್ ಅಫ್ರಿದಿ (9 ಮ್ಯಾಟ್)

ಸೆಮಿಫೈನಲ್ನಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು ಎದುರಿಸಿದರೆ, ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Yusuf Pathan: ಜಮೀನು ಒತ್ತುವರಿ ಆರೋಪ; ನೂತನ ಸಂಸದ ಯೂಸುಫ್ ಪಠಾಣ್​ಗೆ ನೋಟಿಸ್

Yusuf Pathan: ಜೂನ್‌ 6ರಂದು ಪಠಾಣ್‌ ಅವರಿಗೆ ನೋಟಿಸ್‌‍ ನೀಡಿ ಎಲ್ಲ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹೇಳಲಾಗಿದೆ. ಜತೆಗೆ ಒಂದೆರಡು ವಾರಗಳ ಕಾಲಾವಕಾಶ ನೀಡಲಾಗಿದೆ ಎಂದು ವಿಎಂಸಿಯ ಸ್ಥಾಯಿ ಸಮಿತಿ ಅಧ್ಯಕ್ಷ ಶೀತಲ್‌ ಮಿಸ್ತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

VISTARANEWS.COM


on

Yusuf Pathan
Koo

ವಡೋದರಾ: ಮೊನೆಯಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಬಹರಂಪುರ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್‌‍ (ಟಿಎಂಸಿ) ಪಕ್ಷದಿಂದ ಸ್ಪರ್ಧಿಸಿ ಸಂಸದರಾದ ಟೀಮ್​ ಇಂಡಿಯಾ ಮಾಜಿ ಕ್ರಿಕೆಟಿಗ ಯೂಸುಫ್‌ ಪಠಾಣ್‌(Yusuf Pathan) ಸಂಕಷ್ಟವೊಂದರಲ್ಲಿ ಸಿಲುಕಿದ್ದಾರೆ. ನಾಗರಿಕರ ಜಮೀನನ್ನು ಒತ್ತುವರಿ ಮಾಡಿದ ಆರೋಪದ ಮೇಲೆ ವಡೋದರಾ ಮುನ್ಸಿಪಲ್‌ ಕಾರ್ಪೊರೇಷನ್‌ (ವಿಎಂಸಿ) ಯೂಸುಫ್‌ ಅವರಿಗೆ ನೋಟಿಸ್‌‍ ಜಾರಿಗೊಳಿಸಿದೆ. ಜೂನ್‌ 6 ರಂದು ಪಠಾಣ್‌ ಅವರಿಗೆ ನೋಟಿಸ್‌‍ ನೀಡಲಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿಯ ಮಾಜಿ ಕಾರ್ಪೊರೇಟರ್‌ ವಿಜಯ್‌ ಪವಾರ್‌ ಅವರು ಯೂಸುಫ್‌ ವಿರುದ್ಧ ಜಮೀನು ಒತ್ತುವರಿ ಆರೋಪ ಮಾಡಿದ್ದರು. 2012ರಲ್ಲಿ ಪಠಾಣ್‌ಗೆ ನಿವೇಶನ ಮಾರಾಟ ಮಾಡುವ ವಿಎಂಸಿ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದರೂ, ಹೊಸದಾಗಿ ಆಯ್ಕೆಯಾದ ಸಂಸದರು ಕಾಂಪೌಂಡ್‌ ಗೋಡೆ ನಿರ್ಮಿಸಿ ನಿವೇಶನವನ್ನು ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಯೂಸುಫ್‌ ಮೇಲೆ ನನಗೆ ಯಾವುದೇ ದ್ವೇಷವಿಲ್ಲ. ಟಿಪಿ 22ರ ಅಡಿಯಲ್ಲಿ ತನದಲ್ಜಾ ಪ್ರದೇಶದಲ್ಲಿನ ಪ್ಲಾಟ್‌ ವಿಎಂಸಿ ಒಡೆತನದ ವಸತಿ ಪ್ಲಾಟ್‌ ಆಗಿದೆ. 2012 ರಲ್ಲಿ ಪಠಾಣ್‌ ಅವರು ವಿಎಂಸಿಯಿಂದ ಈ ನಿವೇಶನವನ್ನು ಕೇಳಿದ್ದರು. ಆ ಸಮಯದಲ್ಲಿ ನಿರ್ಮಾಣ ಹಂತದಲ್ಲಿದ್ದ ಅವರ ಮನೆ, ಆ ಪ್ಲಾಟ್‌ನ ಪಕ್ಕದಲ್ಲಿ ಇತ್ತು. ಪಠಾಣ್‌ ಅವರು ನಿವೇಶನವನ್ನು ಒತ್ತುವರಿ ಮಾಡಿಕೊಂಡು ಸುತ್ತಲೂ ಕಾಂಪೌಂಡ್‌ ಗೋಡೆ ನಿರ್ಮಿಸಿದ್ದರು. ಹೀಗಾಗಿ ನಗರಸಭೆಗೆ ತನಿಖೆ ನಡೆಸುವಂತೆ ಕೋರಿದ್ದೇನೆ ಎಂದು ಪವಾರ್‌ ಹೇಳಿದ್ದಾರೆ.

ಅತಿಕ್ರಮಣಕ್ಕಾಗಿ ಅವರಿಗೆ ನೋಟಿಸ್‌‍ ನೀಡಲಾಗಿದೆ ಎಂದು ವಿಎಂಸಿಯ ಸ್ಥಾಯಿ ಸಮಿತಿ ಅಧ್ಯಕ್ಷ ಶೀತಲ್‌ ಮಿಸ್ತ್ರಿ ಹೇಳಿದ್ದಾರೆ. ಇತ್ತೀಚೆಗೆ, ಪಠಾಣ್​ ಕಾಂಪೌಂಡ್‌ ಗೋಡೆಯನ್ನು ನಿರ್ಮಿಸಿದ ಬಗ್ಗೆ ನಮಗೆ ಕೆಲವು ದೂರುಗಳು ಬಂದವು. ಹೀಗಾಗಿ ಜೂನ್‌ 6ರಂದು ಪಠಾಣ್‌ ಅವರಿಗೆ ನೋಟಿಸ್‌‍ ನೀಡಿ ಎಲ್ಲ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹೇಳಿದ್ದೆವೆ. ನಾವು ಒಂದೆರಡು ವಾರಗಳ ಕಾಲ ಕಾಯುತ್ತೇವೆ ಮತ್ತು ನಂತರ ನಾವು ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ. ಈ ಭೂಮಿ ವಿಎಂಸಿಗೆ ಸೇರಿದ್ದು, ಅದನ್ನು ವಾಪಸ್‌‍ ಪಡೆಯುತ್ತೇವೆ ಎಂದು ಮಿಸ್ತ್ರಿ ಹೇಳಿದ್ದಾರೆ.

ಇದನ್ನೂ ಓದಿ Election Results 2024: 5 ಬಾರಿಯ ಸಂಸದನ ವಿರುದ್ಧ ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಯೂಸುಫ್ ಪಠಾಣ್

ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದರು. ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದಿದ್ದರು. ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.

ಮೂಲತಃ ಗುಜರಾತ್‌ನವರಾದ ಯೂಸುಫ್ ಪಠಾಣ್ ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಪರ ಹಲವು ವರ್ಷಗಳ ಕಾಲ ಆಡಿದ್ದರು. ಅಲ್ಲದೆ ತಂಡದ ಪ್ರಧಾನ ಆಟಗಾರನಾಗಿ ಗುರುತಿಸಿಕೊಂಡಿದ್ದರು. ಹೀಗಾಗಿ ಅವರಿಗೆ ಬಂಗಾಳದಾದ್ಯಂತ ಯೂಸುಫ್​ಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇದೇ ಕಾರಣದಿಂದ ಅವರಿಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ಟಿಕೆಟ್​ ನೀಡಲಾಗಿತ್ತು.

Continue Reading

ಕ್ರೀಡೆ

Shakib Al Hasan: ನಿವೃತ್ತಿಯಾಗಿ ಎಂದು ಲೇವಡಿ ಮಾಡಿದ ಸೆಹವಾಗ್​ಗೆ ತಕ್ಕ ತಿರುಗೇಟು ನೀಡಿದ ಬಾಂಗ್ಲಾ ನಾಯಕ

Shakib Al Hasan: ನೆದರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಶಕೀಬ್​ ಅವರು ಅಜೇಯ 64 ರನ್​ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ಮ್ಯಾಚ್​ ವಿನ್ನಿಂಗ್​ ಪ್ರದರ್ಶನಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು.

VISTARANEWS.COM


on

Shakib Al Hasan
Koo

ನ್ಯೂಯಾರ್ಕ್​: ಕಳೆದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಬಾಂಗ್ಲಾದೇಶ ತಂಡದ ನಾಯಕ ಶಕೀಬ್​ ಅಲ್​ ಹಸನ್(Shakib Al Hasan)​ ಅವರನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ಕೈಬಿಟ್ಟರೆ ಉತ್ತಮ ಎಂದು ಹೇಳಿದ್ದ ಟೀಮ್​ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹವಾಗ್​ಗೆ(Virender Sehwag) ಶಕೀಬ್​ ತಿರಿಗೇಟು ನೀಡಿದ್ದಾರೆ.

ಗುರುವಾರ ನಡೆದಿದ್ದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೆದರ್ಲೆಂಡ್ಸ್(Bangladesh vs Netherlands)​ ವಿರುದ್ಧ 25 ರನ್​ ಅಂತರದ ಗೆಲುವು ಸಾಧಿಸಿ ಸೂಪರ್​-8 ಪ್ರವೇಶವನ್ನು ಜೀವಂತವಾಗಿ ಇರಿಸಿದೆ. ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಶಕೀಬ್​, ಯಾವುದೇ ತಂಡದ ಆಟಗಾರರು ಮೂರನೇ ವ್ಯಕ್ತಿಯ ಪ್ರಶ್ನೆಗಳಿಗೆ ಉತ್ತರಿಸಲು ಆಡುತ್ತಿಲ್ಲ. ತಮ್ಮ ತಂಡಕ್ಕೆ ಹೆಚ್ಚಿನ ಕೊಡುಗೆ ನೀಡುವ ಜವಾಬ್ದಾರಿಯಿಂದ ಅಷ್ಟೇ. ಅದು ಒಬ್ಬ ಬ್ಯಾಟ್ಸ್​ಮನ್​, ಬೌಲರ್ ಅಥವಾ ಫೀಲ್ಡರ್​ ಆಗಿಯೂ ಇರಬಹುದು. ಕೊಡುಗೆ ನೀಡುವಲ್ಲಿ ವಿಫಲರಾದರೆ, ತಮ್ಮ ಫಾರ್ಮ್​ ಬಗ್ಗೆ ಇಂತಹ ಟೀಕೆಗಳು ಕೇಳಿಬರುವುದು ಸಾಮಾನ್ಯ ಎಂದು ಹೇಳುವ ಮೂಲಕ ಸೆಹವಾಗ್​ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಸೆಹವಾಗ್​ ಹೇಳಿದ್ದೇನು?


ನನ್ನ ಪ್ರಕಾರ, ಶಕೀಬ್ ಅಲ್​ ಹಸನ್​ ಕ್ರಿಕೆಟ್​ನಿಂದ ನಿವೃತ್ತಿ ಪಡೆಯುವುದೇ ಉತ್ತಮ. ಶಕೀಬ್​ ಅವರನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ಅಂದೇ ಕೈಬಿಡಬೇಕಿತ್ತು. ಅವರನ್ನು ಆಡಿಸುವ ಅವಶ್ಯಕತೆಯೇ ಇರಲಿಲ್ಲ ಎಂದು ಸೆಹವಾಗ್​ ಲೇವಡಿ ಮಾಡಿದ್ದರು. ನೆದರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಶಕೀಬ್​ ಅವರು ಅಜೇಯ 64 ರನ್​ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ಮ್ಯಾಚ್​ ವಿನ್ನಿಂಗ್​ ಪ್ರದರ್ಶನಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು.


ಬಾಂಗ್ಲಾದೇಶ ತಂಡ ‘ಸಿ’ ಗುಂಪಿನಲ್ಲಿ ಸದ್ಯ 4 ಅಂಕದೊಂದಿಗೆ 2ನೇ ಸ್ಥಾನಿಯಾಗಿದೆ. ಸೂಪರ್​ 8 ಹಂತಕ್ಕೇರಲು ನೆಪಾಳ ವಿರುದ್ಧ ನಡೆಯುವ ಅಂತಿಮ ಲೀಗ್​ ಪಂದ್ಯದಲ್ಲಿ ಗೆಲ್ಲಲೇ ಬೇಕು. ಒಂದು ವೇಳೆ ಬಾಂಗ್ಲಾದೇಶ ಈ ಪಂದ್ಯದಲ್ಲಿ ಸೋತು, ಶ್ರೀಲಂಕಾ ವಿರುದ್ಧ ನೆದರ್ಲೆಂಡ್ ಸೋತರೆ ಬಾಂಗ್ಲಾ ತಂಡವೇ ಸೂಪರ್​ 8ಗೆ ಪ್ರವೇಶಿಸುತ್ತದೆ.

ಇದನ್ನೂ ಓದಿ T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನವೇ ತವರಿಗೆ ಮರಳಲು ಸಿದ್ಧರಾದ ಟೀಮ್​ ಇಂಡಿಯಾದ ಇಬ್ಬರು ಆಟಗಾರರು​

ಟಿ20 ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್​


ಶುಕ್ರವಾರ ನಡೆದ ಟಿ20 ವಿಶ್ವಕಪ್​ನ ‘ಸಿ’ ವಿಭಾಗದ ಪಂದ್ಯದಲ್ಲಿ ಅಫಘಾನಿಸ್ತಾನ(PNG vs AFG) ತಂಡ ಪಪುವಾ ನ್ಯೂ ಗಿನಿಯಾ ವಿರುದ್ಧ 7 ವಿಕೆಟ್​ ಅಂತರದ ಗೆಲುವು ಸಾಧಿಸುವ ಮೂಲಕ ಸೂಪರ್​-8 ಹಂತಕ್ಕೆ ಪ್ರವೇಶ ಪಡೆದಿದೆ. ಅಫಘಾನಿಸ್ತಾನ ಗೆಲುವಿನಿಂದ ನ್ಯೂಜಿಲ್ಯಾಂಡ್(New Zealand)​ ತಂಡ ಟೂರ್ನಿಯಿಂದ ಹೊರಬಿದ್ದಿತು.

ಇಲ್ಲಿನ ಟರೂಬದಲ್ಲಿರುವ ಬ್ರಿಯಾನ್‌ ಲಾರಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಪಪುವಾ ನ್ಯೂ ಗಿನಿಯಾ ತಂಡ ಫಜಲ್ಹಕ್ ಫಾರೂಕಿ ಮತ್ತು ನವೀನ್​ ಉಲ್​ ಹಕ್​ ಅವರ ಘಾತಕ ದಾಳಿಗೆ ನಲುಗಿ 95 ರನ್​ಗೆ ಸರ್ವಪತನ ಕಂಡಿತು. ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಅಫಘಾನಿಸ್ತಾನ 15.1 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 101 ರನ್​ ಬಾರಿಸಿ ಗೆಲುವು ದಾಖಲಿಸಿತು. ಅತ್ತ ಏಕದಿನ ಸೇರಿದಂತೆ ಕಳೆದ ಆರೂ ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದ ನ್ಯೂಜಿಲ್ಯಾಂಡ್‌ ಈ ಬಾರಿ ಲೀಗ್​ನಿಂದಲೇ ಹೊರಬಿದ್ದ ಅವಮಾನಕ್ಕೆ ಸಿಲುಕಿತು.

Continue Reading

ಕ್ರೀಡೆ

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನವೇ ತವರಿಗೆ ಮರಳಲು ಸಿದ್ಧರಾದ ಟೀಮ್​ ಇಂಡಿಯಾದ ಇಬ್ಬರು ಆಟಗಾರರು​

T20 World Cup 2024: ಭಾರತವು ಅಮೆರಿಕದಲ್ಲಿ ಇನ್ನೂ ಒಂದು ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಶುಭಮನ್​ ಗಿಲ್(Shubman Gill)​ ಮತ್ತು ಅವೇಶ್​ ಖಾನ್(Avesh Khan)​ ತವರಿಗೆ ಮರಳಲಿದ್ದಾರೆ ಎಂದು ಕ್ರಿಕ್‌ಬಜ್‌ ವರದಿ ಮಾಡಿದೆ. ಜೂನ್​ 15ರಂದು ಉಭಯ ಆಟಗಾರರು ಭಾರತಕ್ಕೆ ವಾಪಸ್‌ ಆಗಲಿದ್ದಾರೆ ಎಂದು ತಿಳಿಸಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್: ಭಾರತ ಕ್ರಿಕೆಟ್ ತಂಡವು ಈಗಾಗಲೇ 2024 ರ ಟಿ20 ವಿಶ್ವಕಪ್‌(T20 World Cup 2024) ಟೂರ್ನಿಯಲ್ಲಿ ಸೂಪರ್ 8 ಹಂತಕೇರಿದೆ. ಸೂಪರ್ 8 ಮತ್ತು ನಾಕೌಟ್ ಹಂತಕ್ಕಾಗಿ ವೆಸ್ಟ್ ಇಂಡೀಸ್‌ಗೆ ತೆರಳುವ ಮೊದಲು ಭಾರತವು ಅಮೆರಿಕದಲ್ಲಿ ಇನ್ನೂ ಒಂದು ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಶುಭಮನ್​ ಗಿಲ್(Shubman Gill)​ ಮತ್ತು ಅವೇಶ್​ ಖಾನ್(Avesh Khan)​ ತವರಿಗೆ ಮರಳಲಿದ್ದಾರೆ ಎಂದು ಕ್ರಿಕ್‌ಬಜ್‌ ವರದಿ ಮಾಡಿದೆ. ಜೂನ್​ 15ರಂದು ಉಭಯ ಆಟಗಾರರು ಭಾರತಕ್ಕೆ ವಾಪಸ್‌ ಆಗಲಿದ್ದಾರೆ ಎಂದು ತಿಳಿಸಿದೆ.

ಶುಭಮನ್ ಗಿಲ್ ಮತ್ತು ಅವೇಶ್ ಖಾನ್ ತಂಡದಲ್ಲಿ ಪ್ರಯಾಣ ಮೀಸಲು ಭಾಗವಾಗಿ ಸ್ಥಾನ ಪಡೆದಿದ್ದರು. ಇವರ ಜತೆ ಸ್ಥಾನ ಪಡೆದಿದ್ದ ರಿಂಕು ಸಿಂಗ್(Rinku Singh) ಮತ್ತು ಖಲೀಲ್ ಅಹ್ಮದ್(Khaleel Ahmed) ತಂಡದ ಜತೆಗೆ ಇರಲಿದ್ದಾರೆ ಎನ್ನಲಾಗಿದೆ. ಗಿಲ್​ ಮತ್ತು ಅವೇಶ್​ ತವರಿಗೆ ಮರಳಲು ಸಿದ್ಧರಾಗಿದ್ದಾರೆ ಎಂದು ತಿಳಿದುಬಂದಿದೆ. ಉಭಯ ಆಟಗಾರರು ತಂಡದೊಂದಿಗೆ ಇದ್ದರೂ ಕೂಡ ಇವರಿಗೆ ಆಡುವ ಅವಕಾಶವಿಲ್ಲ. ಏಕೆಂದರೆ ಇವರು ಪ್ರಧಾನ 15 ಸದಸ್ಯರ ತಂಡದಲ್ಲಿ ಅವಕಾಶ ಪಡೆದಿಲ್ಲ.

ಭಾರತ ತನ್ನ ಕೊನೆಯ ಲೀಗ್​ ಪಂದ್ಯವನ್ನು ಜೂನ್​ 15ರಂದು ಕೆನಡಾ ವಿರುದ್ಧ ಆಡಲಿದೆ. ಆದರೆ ಈ ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿದೆ. ಈ ಪಂದ್ಯಕ್ಕೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಪಂದ್ಯ ರದ್ದಾದರೂ ಕೂಡ ಭಾರತಕ್ಕೆ ಯಾವುದೇ ನಷ್ಟ ಸಂಭವಿಸದು. ಏಕೆಂದರೆ ಭಾರತ ಈಗಾಗಲೇ ಸೂಪರ್​-8 ಪ್ರವೇಶ ಪಡೆದಾಗಿದೆ. ಹೀಗಾಗಿ ಈ ಪಂದ್ಯ ಭಾರತದ ಪಾಲಿಗೆ ಔಪಚಾರಿಕ ಪಂದ್ಯವಿದ್ದಂತೆ.

ಇದನ್ನೂ ಓದಿ PNG vs AFG: ಆಫ್ಘಾನ್​ಗೆ ಗೆಲುವು; ಟಿ20 ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್​

ನ್ಯೂಯಾರ್ಕ್‌ ಪಿಚ್‌ನಲ್ಲಿ ಆಡುವುದು ಸುಲಭವಲ್ಲ: ರೋಹಿತ್​


ಸತತ ಮೂರು ಗೆಲುವು ಸಾಧಿಸಿ ಸೂಪರ್​-8 ಪ್ರವೇಶ ಪಡೆದಿದ್ದರೂ ಕೂಡ ಟೀಮ್​ ಇಂಡಿಯಾದ(Team India) ನಾಯಕ ರೋಹಿತ್​ ಶರ್ಮ(Rohit Sharma) ಅವರು ನ್ಯೂಯಾರ್ಕ್​ನಲ್ಲಿ ಆಡಿದ್ದು ನಿಜಕ್ಕೂ ಸವಾಲಿನಿಂದ ಕೂಡಿತ್ತು ಎಂದು ಹೇಳಿದ್ದಾರೆ.

‘ನಾವು ಮೂರು ಪಂದ್ಯಗಳನ್ನು ಗೆದ್ದಿರಬಹುದು. ಆದರೆ, ಈ ಪಂದ್ಯ ಗೆಲ್ಲಲು ನಾವು ಪಟ್ಟ ಕಷ್ಟ ನಮ್ಮ ತಂಡದ ಆಟಗಾರರಿಗೆ ಮಾತ್ರ ಗೊತ್ತು. ಇಲ್ಲಿ ಯಾವ ತಂಡ ಗೆಲ್ಲಬಹುದು ಎನ್ನುವುದನ್ನು ಊಹಿಸಲು ಕೂಡ ಅಸಾಧ್ಯ. ನಮ್ಮ ತಂಡದ ಗೆಲುವು ಅಷ್ಟು ಸುಲಭವಾಗಿರಲಿಲ್ಲ” ಎಂದು ಹೇಳಿದ್ದಾರೆ.

ರೋಹಿತ್​ ಅವರು ಈ ಹಿಂದೆಯೇ ನಸೌ ಪಿಚ್​ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈ ಪಿಚ್​ ಮತ್ತು ಮೈದಾನ ಕ್ರಿಕೆಟ್​ ಆಡಲು ಸೂಕ್ತವಾಗಿಲ್ಲ. ಆಟಗಾರರು ಗಾಯಗೊಳ್ಳುವ ಸಾಧ್ಯತೆ ಅಧಿಕವಾಗಿದೆ ಎಂದು ಹೇಳಿದ್ದರು. ಭಾರತ ಸೂಪರ್​-8 ಹಂತದಲ್ಲಿ ಭಾರತಕ್ಕೆ ಮೊದಲ ಪಂದ್ಯದಲ್ಲಿ ಆಸ್ಟ್ರೇಯಾ ತಂಡದ ಸವಾಲು ಎದುರಾಗುವ ಸಾಧ್ಯತೆ ಇದೆ.

Continue Reading

ಕ್ರೀಡೆ

PNG vs AFG: ಆಫ್ಘಾನ್​ಗೆ ಗೆಲುವು; ಟಿ20 ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್​

PNG vs AFG: ಅಫಘಾನಿಸ್ತಾನ(PNG vs AFG) ತಂಡ ಪಪುವಾ ನ್ಯೂ ಗಿನಿಯಾ ವಿರುದ್ಧ 7 ವಿಕೆಟ್​ ಅಂತರದ ಗೆಲುವು ಸಾಧಿಸುವ ಮೂಲಕ ಸೂಪರ್​-8 ಹಂತಕ್ಕೆ ಪ್ರವೇಶ ಪಡೆದಿದೆ. ಅಫಘಾನಿಸ್ತಾನ ಗೆಲುವಿನಿಂದ ನ್ಯೂಜಿಲ್ಯಾಂಡ್(New Zealand)​ ತಂಡ ಟೂರ್ನಿಯಿಂದ ಹೊರಬಿದ್ದ ಸಂಕಟಕ್ಕೆ ಸಿಲುಕಿದೆ.

VISTARANEWS.COM


on

PNG vs AFG
Koo

ಟ್ರಿನಿಡಾಡ್‌: ಶುಕ್ರವಾರ ನಡೆದ ಟಿ20 ವಿಶ್ವಕಪ್​ನ ‘ಸಿ’ ವಿಭಾಗದ ಪಂದ್ಯದಲ್ಲಿ ಅಫಘಾನಿಸ್ತಾನ(PNG vs AFG) ತಂಡ ಪಪುವಾ ನ್ಯೂ ಗಿನಿಯಾ ವಿರುದ್ಧ 7 ವಿಕೆಟ್​ ಅಂತರದ ಗೆಲುವು ಸಾಧಿಸುವ ಮೂಲಕ ಸೂಪರ್​-8 ಹಂತಕ್ಕೆ ಪ್ರವೇಶ ಪಡೆದಿದೆ. ಅಫಘಾನಿಸ್ತಾನ ಗೆಲುವಿನಿಂದ ನ್ಯೂಜಿಲ್ಯಾಂಡ್(New Zealand)​ ತಂಡ ಟೂರ್ನಿಯಿಂದ ಹೊರಬಿದ್ದ ಸಂಕಟಕ್ಕೆ ಸಿಲುಕಿದೆ.

ಇಲ್ಲಿನ ಟರೂಬದಲ್ಲಿರುವ ಬ್ರಿಯಾನ್‌ ಲಾರಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಪಪುವಾ ನ್ಯೂ ಗಿನಿಯಾ ತಂಡ ಫಜಲ್ಹಕ್ ಫಾರೂಕಿ ಮತ್ತು ನವೀನ್​ ಉಲ್​ ಹಕ್​ ಅವರ ಘಾತಕ ದಾಳಿಗೆ ನಲುಗಿ 95 ರನ್​ಗೆ ಸರ್ವಪತನ ಕಂಡಿತು. ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಅಫಘಾನಿಸ್ತಾನ 15.1 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 101 ರನ್​ ಬಾರಿಸಿ ಗೆಲುವು ದಾಖಲಿಸಿತು. ಅತ್ತ ಏಕದಿನ ಸೇರಿದಂತೆ ಕಳೆದ ಆರೂ ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದ ನ್ಯೂಜಿಲ್ಯಾಂಡ್‌ ಈ ಬಾರಿ ಲೀಗ್​ನಿಂದಲೇ ಹೊರಬಿದ್ದ ಅವಮಾನಕ್ಕೆ ಸಿಲುಕಿತು.

ಚೇಸಿಂಗ್​ ವೇಳೆ ಆಫ್ಘಾನ್ ಕೂಡ ಆರಂಭಿಕ ಆಘಾತ ಎದುರಿಸಿತು. ಆರಂಭಿಕರಾದ ಇಬ್ರಾಹಿಂ ಜದ್ರಾನ್(0) ಮತ್ತು ರಹಮಾನುಲ್ಲಾ ಗುರ್ಬಾಜ್(11) ವಿಕೆಟ್ ಬೇಗನೆ​ ಕಳೆದುಕೊಂಡಿತು. ಆದರೆ, ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಗುಲ್ಬದಿನ್ ನೈಬ್​ ಅಜೇಯ 49 ರನ್​ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಕೇವಲ ಒಂದು ರನ್​ ಹಿನ್ನಡೆಯಲ್ಲಿ ಅರ್ಧಶತಕ ಬಾರಿಸುವ ಅವಕಾಶ ಕಳೆದುಕೊಂಡರು.

ಇದನ್ನೂ ಓದಿ T20 World Cup : ಒಮನ್ ವಿರುದ್ಧ 8 ವಿಕೆಟ್​ ಜಯ ಗಳಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್​

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಪಪುವಾ ನ್ಯೂ ಗಿನಿಯಾ ಪರ ಕಿಪ್ಲಿನ್ ಡೋರಿಗಾ(27) ಹೊರತು ಪಡಿಸಿ ಉಳಿದೆಲ್ಲರು ನಿರೀಕ್ಷಿತ ಬ್ಯಾಟಿಂಗ್​ ನಡೆಸುವಲ್ಲಿ ವಿಫಲರಾದರು. ಡೋರಿಗಾ ಅವರ ಸಣ್ಣ ಮಟ್ಟಿನ ಬ್ಯಾಟಿಂಗ್​ ಹೋರಾಟದಿಂದ ತಂಡದ ಮೊತ್ತ ಕನಿಷ್ಠ 100 ಸನಿಹಕ್ಕೆ ಬಂದಿತು. ಕಳೆದ 2 ಪಂದ್ಯಗಳಲ್ಲಿ ಘಾತಕ ಬೌಲಿಂಗ್​ ದಾಳಿ ನಡೆಸಿದ್ದ ಫಜಲ್ಹಕ್ ಫಾರೂಕಿ ಅವರ ಘಾತಕ ಬೌಲಿಂಗ್​ ದಾಳಿ ಈ ಪಂದ್ಯದಲ್ಲಿಯೂ ಮುಂದುವರಿಯಿತು. ಈ ಪಂದ್ಯದಲ್ಲಿ 4 ಓವರ್​ ಎಸೆದು ಕೇವಲ 16 ರನ್​ ವೆಚ್ಚದಲ್ಲಿ 3 ವಿಕೆಟ್​ ಕಿತ್ತು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಉಳಿದಂತೆ ನವೀನ್​ ಉಲ್ ಹಕ್​ 4 ರನ್​ಗೆ 2 ವಿಕೆಟ್​ ಪಡೆದರು.​


ಇಂಗ್ಲೆಂಡ್​ಗೆ ಭರ್ಜರಿ ಗೆಲುವು


ತಡರಾತ್ರಿ ನಡೆದ ಇನ್ನೊಂದು ಪಂದ್ಯದಲ್ಲಿ ಇಂಗ್ಲೆಂಡ್​ ತಂಡದ ಒಮಾನ್​ ವಿರುದ್ಧ ಭರ್ಜರಿ 8 ವಿಕೆಟ್​ಗಳ ಗೆಲುವು ದಾಖಲಿಸಿ ಸೂಪರ್​-8 ಪ್ರವೇಶದ ಆಸೆಯನ್ನು ಜೀವಂತವಿರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಒಮಾನ್​ ಕೇವಲ 47 ರನ್​ಗೆ ಆಲೌಟ್​ ಆಯಿತು. ಈ ಸಣ್ಣ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್​ ಕೇವಲ 3.1 ಓವರ್​ಗಳಲ್ಲಿ ಅಂದರೆ 19 ಎಸೆತಗಳಲ್ಲಿ 2 ವಿಕೆಟ್​ಗೆ 50 ರನ್​ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು.

Continue Reading
Advertisement
Nari Samman 2024 award ceremony on June 15 in Bengaluru
ಕರ್ನಾಟಕ5 mins ago

Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

Viral Video
ವಿದೇಶ15 mins ago

ಹಿಂದೂಗಳ ಆಸ್ತಿ ಲೂಟಿ ಮಾಡಿ, ದೇವರ ವಿಗ್ರಹ ಕದ್ದು ಪಾಕಿಸ್ತಾನ ಸ್ಥಾಪನೆ; ಪಾಕ್‌ ಪತ್ರಕರ್ತನ ವಿಡಿಯೊ ವೈರಲ್‌

Actor Darshan
ಪ್ರಮುಖ ಸುದ್ದಿ23 mins ago

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಸೀಜ್

Flight issues
Latest26 mins ago

flight problems: ವಿಮಾನದಲ್ಲಿ ಕೈಕೊಟ್ಟ ಎಸಿ; ಸೆಕೆ ತಾಳಲಾರದೆ ಬಟ್ಟೆ ಬಿಚ್ಚಿದ ಪ್ರಯಾಣಿಕರು!

Darshan Arrested
ಪ್ರಮುಖ ಸುದ್ದಿ27 mins ago

Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​!

NEET UG 2024
ಶಿಕ್ಷಣ42 mins ago

NEET UG 2024: ನೀಟ್ ಯುಜಿ ವಿವಾದದ ಬಗ್ಗೆ ಸಿಬಿಐ ತನಿಖೆಗೆ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್

Union Food and Consumer Affairs Minister Pralhad Joshi latest statement
ಕರ್ನಾಟಕ43 mins ago

Pralhad Joshi: ಚುನಾವಣೆ ಸೋಲಿನ ಸೇಡಿಗಾಗಿ ಯಡಿಯೂರಪ್ಪ ಮೇಲೆ ರಾಜಕೀಯ ವೈಷಮ್ಯ; ಪ್ರಲ್ಹಾದ್‌ ಜೋಶಿ

Aliens
ವಿಜ್ಞಾನ54 mins ago

Aliens: ಏಲಿಯನ್‌ಗಳು ಅನ್ಯಗ್ರಹ ಜೀವಿಗಳಲ್ಲ; ಈ ಭೂಮಿಯ ರಹಸ್ಯ ನಿವಾಸಿಗಳು! ಹಾರ್ವರ್ಡ್ ವಿಜ್ಞಾನಿಗಳ ಸಂಶೋಧನೆ

Actress Siri marriage to actor prabhakar
ಬಿಗ್ ಬಾಸ್54 mins ago

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Yusuf Pathan
ಕ್ರೀಡೆ1 hour ago

Yusuf Pathan: ಜಮೀನು ಒತ್ತುವರಿ ಆರೋಪ; ನೂತನ ಸಂಸದ ಯೂಸುಫ್ ಪಠಾಣ್​ಗೆ ನೋಟಿಸ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌