IPL 2022| ಹಾರ್ದಿಕ್‌ ಕಮಾಲ್‌, ನಾಯಕನಾದ ಮೊದಲ ಟೂರ್ನಿಯಲ್ಲೆ ಟ್ರೋಫಿ ಗೆದ್ದ ಪಾಂಡ್ಯ - Vistara News

ಐಪಿಎಲ್ 2024

IPL 2022| ಹಾರ್ದಿಕ್‌ ಕಮಾಲ್‌, ನಾಯಕನಾದ ಮೊದಲ ಟೂರ್ನಿಯಲ್ಲೆ ಟ್ರೋಫಿ ಗೆದ್ದ ಪಾಂಡ್ಯ

ನಾಯಕತ್ವದ ಅನುಭವ ಇಲ್ಲದಿದ್ದರೂ ತಂಡವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿ ಮೊದಲ ಸೀಸನ್‌ನಲ್ಲೇ ಪಾಂಡ್ಯ ಟ್ರೋಪಿ ಗೆದ್ದಿದ್ದಾರೆ.

VISTARANEWS.COM


on

Hardik pandya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್: ಪದಾರ್ಪಣೆ ಟೂರ್ನಿಯಲ್ಲೆ ಅದ್ಭುತ ಪ್ರದರ್ಶನದೊಂದಿಗೆ ಗುಜರಾತ್‌ ಟೈಟನ್ಸ್‌ ಐಪಿಎಲ್-2022‌ ಚಾಂಪಿಯನ್‌ ಆಗಿದೆ. 15ನೇ ಆವೃತ್ತಿ ಆರಂಭದಿಂದ ಸಂಘಟಿತ ಹೋರಾಟದ ಮೂಲಕ ಅಂಕಪಟ್ಟಿಯಲ್ಲಿ ಟಾಪರ್‌ ಆಗಿದ್ದ ತಂಡ, ಫೈನಲ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 7 ವಿಕೆಟ್‌ಗಳ ಅಂತರದ ಗೆಲುವು ಪಡೆದು ಟ್ರೋಫಿಯನ್ನು ಎತ್ತಿಹಿಡಿಯಿತು. ಈ ಮೂಲಕ ತನಗೆ ನಾಯಕನ ಜವಾಬ್ದಾರಿ ನೀಡಿದ ಪ್ರಾಂಚೈಸಿ ಮಾಲೀಕರ ನಂಬಿಕೆಯನ್ನು ಹಾರ್ದಿಕ್‌ ಪಾಂಡ್ಯ ಉಳಿಸಿಕೊಂಡಿದ್ದಾರೆ.

ಐಪಿಎಲ್‌-2021ರಲ್ಲಿ ಆಲ್‌ರೌಂಡರ್‌ ಆಗಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದ ಹಾರ್ದಿಕ್‌, ಟಿ20 ವಿಶ್ವಕಪ್-2021 ಟೂರ್ನಿಯಲ್ಲೂ ಫಿಟ್‌ನೆಸ್‌ ಸಮಸ್ಯೆಯಿಂದ ತಂಡಕ್ಕೆ ದೂರವಾದರು. ಆದರೂ ಇವರ ಮೇಲೆ ನಂಬಿಕೆ ಇಟ್ಟು ಸಿವಿಸಿ ಕ್ಯಾಪಿಟಲ್ಸ್ ಗುಜರಾತ್‌ ಟೈಟನ್ಸ್‌ ನಾಯಕನಾಗಲು ಅವಕಾಶ ನೀಡಿತು. ಇದರಿಂದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪ್ರಶಸ್ತಿ ಗೆದ್ದ ನಾಲ್ಕನೇ ಭಾರತೀಯ ನಾಯಕನಾಗಿ ದಾಖಲೆ ನಿರ್ಮಿಸಿದ್ದಾರೆ.

ಇದಕ್ಕೂ ಮೊದಲು ನಾಯಕತ್ವದ ಅನುಭವ ಇಲ್ಲದಿದ್ದರೂ ತಂಡವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿ ಮೊದಲ ಸೀಸನ್‌ನಲ್ಲೇ ಟ್ರೋಪಿ ಗೆದ್ದಿದ್ದಾರೆ. ಈ ಹಿಂದೆ ಎಂ.ಎಸ್‌.ಧೋನಿ (4 ಬಾರಿ-ಚೆನ್ನೈ ಸೂಪರ್‌ಕಿಂಗ್ಸ್; 2010, 2011, 2018, 2021), ಗೌತಮ್‌ ಗಂಭೀರ್ (2‌ ಬಾರಿ-ಕೋಲ್ಕತ್ತಾ ನೈಟ್‌ರೈಡರ್ಸ್‌ ; 2012, 2014, ರೋಹಿತ್‌ ಶರ್ಮ (5 ಬಾರಿ-ಮುಂಬೈ ಇಂಡಿಯನ್ಸ್‌; 2013, 2015, 2017, 2019, 2020) ಈ ಸಾಧನೆ ಮಾಡಿದ್ದಾರೆ. ಗುಜರಾತ್‌ ಸಾರಥಿಯಾಗಿ ಅಲ್ಲದೆ ಆಲ್‌ರೌಂಡರ್‌ ಆಗಿ ಹಾರ್ದಿಕ್‌ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಮೊದಲ ಬಾರಿ ಸಮರ್ಥವಾಗಿ ನಾಯಕತ್ವ ನಿರ್ವಹಣೆ
ಗೆದ್ದರೆ ಶ್ರೇಯಸ್ಸು ನಿಮ್ಮದು, ಸೋತರೆ ಹೊಣೆ ತಮ್ಮದು ಎಂದು ಐಪಿಎಲ್-2022‌ ಆವೃತ್ತಿಯಲ್ಲಿ ಗುಜರಾತ್‌ ಟೈಟನ್ಸ್‌ ಟ್ರೋಫಿ ಅನಾವರಣಗೊಳಿಸಿದಾಗ ಸಹಚರರೊಂದಿಗೆ ಹಾರ್ದಿಕ್‌ ಪಾಂಡ್ಯ ಹೇಳಿದ್ದ ಮಾತು ಇದು. ಐಪಿಎಲ್‌ ಟೈಟಲ್ಸ್‌ ಇವರಿಗೆ ಹೊಸತೇನೂ ಅಲ್ಲ, ಮುಂಬೈ ಇಂಡಿಯನ್ಸ್‌ನಲ್ಲಿ ಅವರ ಸಾಧನೆ ಅಮೋಘವಾದುದು. ಆದರೂ ನಾಯಕನಾಗಿ ಮೊದಲ ಅವಕಾಶದಲ್ಲೂ ತಂಡವನ್ನು ಚಾಂಪಿಯನ್‌ ಮಾಡಿದ್ದಾರೆ.

ಈ ಮೊದಲು ನಾಯಕನಾಗಿ ಜವಾಬ್ದಾರಿ ಹೊತ್ತ ಉದಾಹರಣೆ ಕಡಿಮೆ. ಆದರೂ ಸಮರ್ಥ ನಾಯಕತ್ವ ಗುಣಗಳಿಂದ ಈ ಟೂರ್ನಿಯಲ್ಲಿ ಸತತ ಗೆಲುವು ದಾಖಲಿಸಿ ಕೊನೆಗೆ ಪ್ರಶಸ್ತಿ ಗೆದ್ದುಕೊಟ್ಟ ಪಾಂಡ್ಯ ಅವರನ್ನು ಎಷ್ಟು ಪ್ರಶಂಸಿಸಿದರೂ ಸಾಲದು. ಎಷ್ಟೋ ಮಂದಿ ಸ್ಟಾರ್‌ ಆಟಗಾರರಿಗೂ ಸಾಧ್ಯವಾಗದ ಸಾಧನೆಯನ್ನು ಇವರು ಮಾಡಿದ್ದಾರೆ. ಈ ಬಾರಿ ಬ್ಯಾಟಿಂಗ್‌ನಲ್ಲಿ 131.26 ಸ್ಟ್ರೈಕ್‌ರೇಟ್‌ನೊಂದಿಗೆ 487 ರನ್‌ ಜತೆಗೆ ಪ್ರಮುಖ ಸಮಯದಲ್ಲಿ ವಿಕೆಟ್‌(ಒಟ್ಟು8) ಪಡೆದು ಆಲ್‌ರೌಂಡರ್‌ ಆಗಿ ತಾವು ಏನೆಂದು ನಿರೂಪಿಸಿದ್ದಾರೆ.

ಸಹಚರರಿಗೆ ವಿವಿಧ ಹೊಣೆಗಾರಿಕೆ ವಹಿಸಿ ಪ್ರಶಾಂತವಾಗಿ ತಮ್ಮ ಕೆಲಸ ನಿರ್ವಹಿಸಿದ್ದಾರೆ. ತಂಡದ ಪ್ರಣಾಳಿಕೆಗಳಲ್ಲಿ ಇವರು ಹಾಕಿದ ಪ್ರತಿ ಹೆಜ್ಜೆ ಉತ್ತಮ ಫಲಿತಾಂಶ ನೀಡಿತು. ಇವರ ತಂಡ ಯಾರೋ ಒಬ್ಬರ ಮೇಲೆ ಆಧಾರವಾಗದೆ ಎಲ್ಲರನ್ನೂ ನಂಬಿ ಮುನ್ನಡೆದಿದ್ದೆ ಇದರ ಯಶಸ್ಸಿಗೆ ಕಾರಣವಾಗಿದೆ. ಹಾರ್ದಿಕ್‌,‌ ಶುಭಮನ್ ಗಿಲ್‌,‌ ವೃದ್ಧಿಮಾನ್ ಸಾಹ, ರಾಹುಲ್‌ ತೆವಾಟಿಯಾ, ರಷೀದ್‌ ಖಾನ್‌, ಡೇವಿಡ್‌ ಮಿಲ್ಲರ್…‌ ಹೀಗೆ ಪ್ರಧಾನ ಆಟಗಾರರು ಯಾವುದಾದರೂ ಒಂದು ಪಂದ್ಯದಲ್ಲಿ ಮ್ಯಾನ್‌ ಆಫ್‌ ದಿ ಮ್ಯಾಚ್‌ ಆಗಿ ನಿಂತು ತಂಡದ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಗಿಲ್(483), ಮಿಲ್ಲರ್(481)‌, ಸಾಹ(317) ರನ್‌ ಗಳಿಸುವ ಮೂಲಕ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ಮಾಡಿದ್ದಾರೆ. ಇನ್ನು ರಷೀದ್‌ಖಾನ್‌, ಮೊಹಮದ್‌ ಶಮಿ ಬೌಲಿಂಗ್‌ನಲ್ಲಿ ಮಿಂಚಿದ್ದಾರೆ.

ಇನ್ನು ಯುವ ಆಟಗಾರರಲ್ಲಿ ಸಾಯಿಸುದರ್ಶನ್‌, ಅಭಿನವ್‌ ಮನೋಹರ್‌, ಸಾಯಿಕಿಶೋರ್‌ ಎಲ್ಲಿಯೂ ನಿರಾಸೆಪಡಿಸದೆ ತಮಗೆ ನೀಡಿದ ಅವಕಾಶಗಳನ್ನು ಸದುಪಯೋಗ ಮಾಡಿಕೊಂಡಿದ್ದಾರೆ. ಗುಜರಾತ್ ಕೊನೆಯ ಓವರ್‌ನಲ್ಲಿ ಸಾಧಿಸಿದ ಗೆಲುವುಗಳು ಗಮನಾರ್ಹ. 8 ಬಾರಿ ಚೇಸಿಂಗ್‌ ಇಳಿದಾಗ, ಇದರಲ್ಲಿ 7 ಬಾರಿ ಕೊನೆಯ ಓವರ್‌ನಲ್ಲೇ ಈ ತಂಡ ಗೆದ್ದಿದೆ. ರನ್‌ಗಳಿಕೆಗಿಂತ ಕೊನೆಯ ಸಂದರ್ಭದಲ್ಲಿ ತಂಡದ ಸದಸ್ಯರ ಪ್ರಶಾಂತತೆಯ ಆಟ ಹಾಗೂ ಒತ್ತಡ ನಿರ್ವಹಣೆ ಪ್ರಶಂಸನೀಯವಾಗಿದೆ.

ಇದನ್ನೂ ಓದಿ | IPL 2022 | IPLಗಷ್ಟೇ ಹೊಸಬರು, ಕ್ರಿಕೆಟ್‌ಗಲ್ಲ !: ಮೊದಲ ಟೂರ್ನಿಯಲ್ಲೇ ಗುಜರಾತ್‌ ಟೈಟಾನ್ಸ್‌ ಚಾಂಪಿಯನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Traffic Restrictions: ಐಪಿಎಲ್‌ ಕ್ರಿಕೆಟ್‌; ಈ ರೋಡ್‌ನಲ್ಲಿ ಅಪ್ಪಿತಪ್ಪಿಯೂ ಪಾರ್ಕಿಂಗ್ ಮಾಡಬೇಡಿ

IPL 2024 : ಬೆಂಗಳೂರಿನಲ್ಲಿ ನಡೆಯುತ್ತಿರುವ ಆರ್‌ಸಿಬಿ vs ಜಿಟಿ ಐಪಿಎಲ್‌ ಪಂದ್ಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಾಗಿ ಮಧ್ಯಾಹ್ನ ಮೂರು ಗಂಟೆಯಿಂದ ರಾತ್ರಿ 11 ಗಂಟೆ ವರೆಗೆ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿಷೇಧ (Traffic Restrictions) ಹೇರಲಾಗಿದೆ.

VISTARANEWS.COM


on

By

IPL 2024
Koo

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ (IPL 2024) ಇರುವ ಕಾರಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ (Traffic Restrictions) ನಿರ್ಬಂಧವಿದೆ. ಶನಿವಾರದಂದು ಬೆಂಗಳೂರಿನಲ್ಲಿ ಆರ್‌ಸಿಬಿ vs ಜಿಟಿ ಪಂದ್ಯಾವಳಿ ನಡೆಯಲಿದೆ. ಹೀಗಾಗಿ ಕ್ರೀಡಾಂಗಣದ ಸುತ್ತಲಿನ ಕೆಲವು ರಸ್ತೆಗಳಲ್ಲಿ ಸಂಚಾರಿ ವ್ಯವಸ್ಥೆಗಳ ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನ 03:00 ಗಂಟೆಯಿಂದ ರಾತ್ರಿ 11:00 ಗಂಟೆಯವರೆಗೆ ಈ ನಿಯಮಗಳು ಅನ್ವಯವಾಗಲಿದೆ.

ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ ಹೀಗಿದೆ

ಕ್ಲೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ ಹಾಗೂ ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ. ಲ್ಯಾವೆಲ್ಲೆ ರಸ್ತೆಯೊಂದಿಗೆ ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್‌ ಮಾಡುವಂತಿಲ್ಲ.

ಬೇರೆ ಎಲ್ಲಿ ಪಾರ್ಕಿಂಗ್‌ ಮಾಡಬಹುದು?

ಸಾರ್ವಜನಿಕರು ತಮ್ಮ ವಾಹನಗಳ ನಿಲುಗಡೆ ಮಾಡಲು ಸ್ಥಳಗಳನ್ನು ನಿಯೋಜನೆ ಮಾಡಲಾಗಿದೆ. ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಯು.ಬಿ ಸಿಟಿ ಪಾರ್ಕಿಂಗ್‌, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಹಿಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್ ಪಾರ್ಕ್ ಒಳಭಾಗ)ದಲ್ಲಿ ಪಾರ್ಕಿಂಗ್‌ ಮಾಡಬಹುದಾಗಿದೆ.

ಇದನ್ನೂ ಓದಿ: IPL 2024: ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಗೆಲುವು ಸಾಧಿಸಿದ ಕೆಕೆಆರ್​

ಕೆಎಸ್‌ಸಿಎಗೆ ಮತ್ತೆ ಸಂಕಷ್ಟ; ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!

ಬೆಂಗಳೂರು: ಬೆಂಗಳೂರಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದ ವೇಳೆಯೂ(bangalore water crisis) ಚಿನ್ನಸ್ವಾಮಿ(m chinnaswamy) ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) 17ನೇ ಆವೃತ್ತಿಯ ಐಪಿಎಲ್(IPL 2024) ಟೂರ್ನಿಯ​ ಪಂದ್ಯಾವಳಿಗಳನ್ನು ನಡೆಸಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. 3 ವಾರಗಳ ಹಿಂದೆ ನೀರಿನ ಬಳಕೆ ಕುರಿತು ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ವರದಿ ಕೇಳಿತ್ತು. ಇದೀಗ ಪಂದ್ಯಗಳಿಗೆ ಬಳಸಿರುವ ನೀರಿನ ಮೂಲ ಹಾಗೂ ಕ್ರೀಡಾಂಗಣದಲ್ಲಿರುವ 400 ಅಡಿ ಆಳದ ನಾಲ್ಕು ಕೊಳವೆ ಬಾವಿಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

ಜನರು ನೀರಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಹೆಚ್ಚು ನೀರು ಬಳಸುವ ಐಪಿಎಲ್‌ ಪಂದ್ಯಗಳನ್ನು ನಡೆಸುವುದು ಸೂಕ್ತವಲ್ಲ, ಹೀಗಾಗಿ ಬೆಂಗಳೂರಿನನಲ್ಲಿ ನಡೆಯುವ ಪಂದ್ಯಗಳನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರ ಮಾಡಬೇಕು ಎಂದು ಸಾರ್ವಜನಿಕ ವಲಯದಿಂದ ಸರ್ಕಾರಕ್ಕೆ ಮನವಿ ಬಂದಿತ್ತು. ಈ ವೇಳೆ ಕೆಎಸ್​ಸಿಎ ಆಡಳಿತ ಮಂಡಳಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ)ದ ನೀರು ಬಳಕೆ ಮಾಡುಲಾಗುತ್ತದೆ ಎಂದು ಹೇಳಿ ಪಂದ್ಯವಾವಳಿಯನ್ನು ನಡೆಸಿತ್ತು.

ಈ ವೇಳೆ ಸ್ಪಷ್ಟನೆ ನೀಡಿದ್ದ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶುಭೇಂದು ಘೋಷ್, ನೀರಿಗೆ ಸಂಬಂಧಿಸಿದಂತೆ ನಮಗೆ ಯಾವುದೇ ಸಮಸ್ಯೆ ಇಲ್ಲ. ರಾಜ್ಯ ಸರ್ಕಾರವು ಹೊರಡಿಸಿರುವ ನೀರು ಬಳಕೆ ಮಾರ್ಗಸೂಚಿಯನ್ನು ನಾವು ಪಾಲಿಸುತ್ತೇವೆ. ಪಿಚ್ ಮತ್ತು ಹೊರಾಂಗಣಕ್ಕಾಗಿ ನಾವು ಯೋಗ್ಯವಾದ ನೀರನ್ನು ಬಳಸುವುದಿಲ್ಲ. ನೀರಿನ ಮೌಲ್ಯ ಏನೆಂಬುವುದು ನಮಗೆ ತಿಳಿದಿದೆ. ಎಸ್‌ಟಿಪಿ ಘಟಕದ ನೀರನ್ನು ನಾವು ಬಳಸುತ್ತಿದ್ದೇವೆ. ಕ್ರೀಡಾಂಗಣದಲ್ಲಿ ಕೆಲವು ಕಾರ್ಯಗಳಿಗಾಗಿ ಬಳಸಲು ಕೂಡ ಇದೇ ಸಂಸ್ಕರಿತ ನೀರು ಬಳಕೆ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಪಂದ್ಯಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಕೆ ಮಾಡಿರುವುದನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಪ್ರಧಾನ ಪೀಠ ಗಂಭೀರವಾಗಿ ಪರಿಗಣಿಸಿದ್ದು, ನೀರಿನ ಬಳಕೆಯ ಪ್ರಸ್ತುತ ಸ್ಥಿತಿಯ ಬಗ್ಗೆ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ (ಕೆಎಸ್‌ಸಿಎ) ಆದೇಶಿಸಿ ಮೇ 2ಕ್ಕೆ ಎರಡನೇ ಹಂತದ ವಿಚಾರಣೆಯನ್ನು ನಿಗದಿಪಡಿಸಿತ್ತು.

ಇದೀಗ ವಿಚಾರಣೆ ನಡೆದಿದ್ದು, ಎನ್‌ಜಿಟಿ ಮುಖ್ಯಸ್ಥ ನ್ಯಾ. ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು, ಕ್ರೀಡಾಂಗಣದಲ್ಲಿ ಬಳಕೆಯಾಗುತ್ತಿರುವ ನೀರಿನ ಎಲ್ಲಾ ಮೂಲ, ಕ್ರೀಡಾಂಗಣದಲ್ಲಿರುವ ಬೋರ್‌ವೆಲ್‌, ಒಳಚರಂಡಿ ಸಂಸ್ಕರಣಾ ಘಟಕದ ಬಳಕೆ ಬಗ್ಗೆ 4 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್​ 13ಕ್ಕೆ ನಿಗದಿಪಡಿಸಿದೆ. ಮುಂದಿನ ವಿಚಾರಣೆಗೆ ಇನ್ನೂ ಮೂರು ತಿಂಗಳು ಬಾಕಿ ಇದ್ದು ಈ ವೇಳೆಗಾಗಲೇ ಐಪಿಎಲ್​ ಪಂದ್ಯ ಕೂಡ ಮುಕ್ತಾಯ ಕಂಡಿರುತ್ತದೆ. ಹೀಗಾಗಿ ಈ ಬಾರಿಯ ಆರ್​ಸಿಬಿ ಪಂದ್ಯಗಳಿಗೆ ಯಾವುದೇ ಅಡ್ಡಿ ಉಂಟಾಗದು. ಚಿನ್ನಸ್ವಾಮಿಯಲ್ಲಿ ಇನ್ನು ಕೇವಲ 2 ಪಂದ್ಯ ಮಾತ್ರ ಬಾಕಿ ಉಳಿದಿದೆ. ಇದರಲ್ಲಿ ಒಂದು ಪಂದ್ಯ ಇಂದು(ಶನಿವಾರ) ನಡೆಯಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಐಪಿಎಲ್ 2024

IPL 2024: ಎಸ್‌ಆರ್‌ಎಚ್‌ ಫ್ಯಾನ್ಸ್‌ ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡ ಆರ್‌ಸಿಬಿ ಫ್ಯಾನ್ಸ್;‌ ವಿಡಿಯೊ ವೈರಲ್

IPL 2024: IPL 2024: ಹೈದರಾಬಾದ್‌ನ ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಇದರ ಮಧ್ಯೆಯೇ, ಹೈದರಾಬಾದ್‌ ಫ್ಯಾನ್ಸ್‌ಗೆ ಆರ್‌ಸಿಬಿ ಫ್ಯಾನ್ಸ್‌ ತಿರುಗೇಟು ನೀಡಿದ್ದಾರೆ.

VISTARANEWS.COM


on

IPL 2024
Koo

ಹೈದರಾಬಾದ್:‌ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2024) ಎಂದರೆ, ಅದು ಸ್ಟೇಡಿಯಂನಲ್ಲಿ ಕೇವಲ ಆಟಗಾರರ ನಡುವಿನ ಕಾಳಗ ಅಲ್ಲ. ಮೈದಾನದಲ್ಲಿ ಪಂದ್ಯ ಕುತೂಹಲ ಹಂತ ತಲುಪಿದಾಗ, ಯಾವುದೇ ತಂಡ ಸೋತಾಗ ಎದುರಾಳಿ ತಂಡದ ಅಭಿಮಾನಿಗಳು ಕೂಡ ತಿರುಗೇಟು ನೀಡುತ್ತಾರೆ. ಅದರಲ್ಲೂ, ಆರ್‌ಸಿಬಿ ಅಭಿಮಾನಿಗಳ ಅಬ್ಬರ ಮೈದಾನದಲ್ಲೂ ಅಥವಾ ಹೊರಗೂ ಜೋರಾಗಿರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಅಭಿಮಾನಿಗಳು (RCB Fans) ಎಸ್‌ಆರ್‌ಎಚ್‌ ಅಭಿಮಾನಿಗಳ (SRH Fans) ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡಿದ್ದಾರೆ.

ಹೌದು, ಪ್ರಸಕ್ತ ಆವೃತ್ತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಎಸ್‌ಆರ್‌ಎಚ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಸೋಲನುಭವಿಸಿದ್ದಾಗ ಎಸ್‌ಆರ್‌ಎಚ್‌ ಅಭಿಮಾನಿಗಳು ಸುಮ್ಮನಿರಿ, ಬಾಯಿಮುಚ್ಚಿ ಎಂಬ ರೀತಿಯಲ್ಲಿ ಸನ್ನೆ ಮಾಡಿದ್ದರು. ಇದು ಸಹಜವಾಗಿಯೇ ಆರ್‌ಸಿಬಿ ಅಭಿಮಾನಿಗಳನ್ನು ಕೆರಳಿಸಿತ್ತು. ಆದರೆ, ಗುರುವಾರ (ಏಪ್ರಿಲ್‌ 25) ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದೆ. ಇದಾದ ಬಳಿಕ ಆರ್‌ಸಿಬಿ ಅಭಿಮಾನಿಗಳು ಕೂಡ ಗಪ್‌ ಚುಪ್‌ ಎಂಬ ಸನ್ನೆ ಮಾಡುವ ಮೂಲಕ ಎಸ್‌ಆರ್‌ಎಚ್‌ ಅಭಿಮಾನಿಗಳಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಈ ಗೆಲುವಿನೊಂದಿಗೆ ಆರ್​ಸಿಬಿಗೆ ಒಟ್ಟು ನಾಲ್ಕು ಅಂಕಗಳು ದೊರಕಿದವು.

ಕೊಹ್ಲಿ, ಪಾಟೀದಾರ್ ಅರ್ಧ ಶತಕ

ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿಯ ಪ್ರದರ್ಶನವೇನೂ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್​ ವಿರಾಟ್ ಕೊಹ್ಲಿ ಮತ್ತೆ ಸ್ಟ್ರೈಕ್​ ರೇಟ್​ ಟೀಕೆಯನ್ನು ಮರೆತು 43 ಎಸೆತಕ್ಕೆ 51 ರನ್ ಬಾರಿಸಿದರು. ಅದಕ್ಕೆ ಅವರು ಟೀಕೆಯನ್ನೂ ಎದುರಿಸಿದರು. ಆದರೆ, ರಜತ್ ಪಾಟೀದಾರ್​ 20 ಎಸೆತಕ್ಕೆ 50 ರನ್ ಬಾರಿಸಿ ತಂಡಕ್ಕೆ ದೊಡ್ಡ ಪ್ರಮಾಣದಲ್ಲಿ ನೆರವಾದರು. ಕ್ಯಾಮೆರೂನ್ ಗ್ರೀನ್​ 37 ರನ್ ಬಾರಿಸಿದರೆ ಫಾಫ್​​ ಡು ಪ್ಲೆಸಿಸ್​ 25 ಕೊಡುಗೆ ಕೊಟ್ಟರು. ಹೀಗಾಗಿ ಪೇಚಾಡಿ 200 ರನ್​ಗಳ ಗಡಿ ದಾಟಿತು. ಬೌಲಿಂಗ್‌ನಲ್ಲಿ ಪರಾಕ್ರಮ ತೋರಿದ ಆರ್‌ಸಿಬಿ ಬೌಲರ್‌ಗಳು ತಂಡಕ್ಕೆ 35 ರನ್‌ಗಳ ಗೆಲುವು ತಂದುಕೊಟ್ಟರು.

ಇದನ್ನೂ ಓದಿ: Yuzvendra Chahal : ​ ಚಾಹಲ್ ಕೈಬಿಟ್ಟಿರುವುದರ ಹಿಂದಿನ ಕಾರಣ ಬಹಿಂಗ ಮಾಡಿದ ಆರ್​ಸಿಬಿ ಮಾಜಿ ಡೈರೆಕ್ಟರ್​

Continue Reading

ಮಂಡ್ಯ

IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

Self Harming: ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಪತಿಯೊಬ್ಬ ಸಾಲಗಾರರ ಕಾಟಕ್ಕೆ ಪತ್ನಿ ಹಾಗೂ ಮಕ್ಕಳಿಬ್ಬರಿಗೆ ವಿಷವಿಕ್ಕಿ ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥನಾಗಿದ್ದು, ಆಸ್ಪತ್ರೆಪಾಲಾಗಿದ್ದಾನೆ.

VISTARANEWS.COM


on

By

IPL Betting
Koo

ಮಂಡ್ಯ: ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ (IPL‌ Betting) ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ (Self Harming) ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ಘಟನೆ ನಡೆದಿದೆ.

ನರಸಿಂಹ ಎಂಬಾತ ಈ ಕೃತ್ಯವೆಸಗಿದ್ದಾನೆ. ಪತ್ನಿ ಕೀರ್ತನ (23) ಮಕ್ಕಳಾದ ಜಯಸಿಂಹ (4) ದೀಪಿಕಾ (1) ಮೃತ ದುರ್ದೈವಿ. ಅಸ್ವಸ್ಥನಾಗಿರುವ ನರಸಿಂಹನನ್ನು ನಾಗಮಂಗಲ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಐಪಿಎಲ್ ಕ್ರಿಕೆಟ್‌ ನೋಡುತ್ತಿದ್ದ ನರಸಿಂಹ ಬೆಟ್ಟಂಗ್‌ನ ಹಿಂದೆ ಬಿದ್ದಿದ್ದ. ಇದರಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಕಳೆದುಕೊಂಡಿದ್ದ ಎಂದು ತಿಳಿದು ಬಂದಿದೆ. ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಳ್ಳುತ್ತಿದ್ದರೂ ಇವತ್ತಲ್ಲ ನಾಳೆ ಮರಳಿ ಬರುತ್ತದೆ ಎನ್ನುವ ಭರವಸೆಯೊಂದಿಗೆ ಮೇಲಿಂದ ಮೇಲೆ ಸಾಲ ಮಾಡಿ ಲಕ್ಷಾಂತರ ರೂ. ಕಳೆದುಕೊಂಡಿದ್ದ.

ಇದರಿಂದ ಮನನೊಂದ ನರಸಿಂಹ ಪತ್ನಿ ಹಾಗೂ ಪುಟ್ಟ ಮಕ್ಕಳಿಬ್ಬರಿಗೆ ವಿಷ ನೀಡಿ ಹತ್ಯೆ ಮಾಡಿದ್ದಾನೆ. ಅವರೆಲ್ಲೂ ಮೃತಪಟ್ಟ ಬಳಿಕ ತಾನೂ ವಿಷ ಸೇವಿಸಿದ್ದಾನೆ. ಸದ್ಯ ನಾಗಮಂಗಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Road Accident : ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರಿನ ಕಮ್ಮನಹಳ್ಳಿ ಮುಖ್ಯರಸ್ತೆಯ ಸುಖಸಾಗರ್ ಬಳಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆಶಾ (26) ಮೃತ ದುರ್ದೈವಿ.

ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ ನೀಡುತ್ತಿದ್ದರು.

ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಶಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರಿಕೆಟ್

Ruturaj Gaikwad: ಅಬ್ಬರದ ಫಿಫ್ಟಿ ಜತೆಗೆ ಕನ್ನಡಿಗನ ದಾಖಲೆ ಮುರಿದ ಋತುರಾಜ್‌ ಗಾಯಕ್ವಾಡ್!

Ruturaj Gaikwad: ಟಾಸ್‌ ಸೋತು ಮೊದಲು ಬ್ಯಾಟಿಂಗ್​ ಮಾಡಲು ಆಹ್ವಾನ ಪಡೆದ ಚೆನ್ನೈ ತಂಡದ ಅತ್ಯುತ್ತಮವಾಗಿ ಬ್ಯಾಟ್ ಮಾಡಿತು. ಋತುರಾಜ್‌ ಗಾಯಕ್ವಾಡ್‌, ಶಿವಂ ದುಬೆ ಹಾಗೂ ಧೋನಿ ಬ್ಯಾಟಿಂಗ್‌ ನೆರವಿನಿಂದ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟ ಮಾಡಿಕೊಂಡು 206 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಳ್ಳುವಾಗ 6 ವಿಕೆಟ್​ ನಷ್ಟಕ್ಕೆ 186 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

Ruturaj Gaikwad
Koo

ಮುಂಬೈ: ಮಹಾರಾಷ್ಟ್ರದ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ (ಏಪ್ರಿಲ್‌ 14) ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡವು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಆಡಿದ 6 ಪಂದ್ಯಗಳಲ್ಲಿ 4 ಪಂದ್ಯ ಗೆಲ್ಲುವ ಮೂಲಕ ಋತುರಾಜ್‌ ಗಾಯಕ್ವಾಡ್‌ (Ruturaj Gaikwad) ನೇತೃತ್ವದಲ್ಲಿ ಸಿಎಸ್‌ಕೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಭದ್ರವಾಗಿದೆ. ಇನ್ನು, ಮುಂಬೈ ವಿರುದ್ಧದ ಪಂದ್ಯದಲ್ಲಿ ಅಮೋಘ 69 ರನ್‌ ಬಾರಿಸಿದ ಋತುರಾಜ್‌ ಗಾಯಕ್ವಾಡ್‌, ಐಪಿಎಲ್‌ನಲ್ಲಿ ಅತಿ ಕಡಿಮೆ ಪಂದ್ಯಗಳಲ್ಲಿ 2 ಸಾವಿರ ರನ್‌ ಗಳಿಸಿದ ಭಾರತದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾದರು.

ಋತುರಾಜ್‌ ಗಾಯಕ್ವಾಡ್‌ ಅವರು 57 ಇನ್ನಿಂಗ್ಸ್‌ಗಳಲ್ಲಿಯೇ 2 ಸಾವಿರ ರನ್‌ ಪೂರೈಸಿದ್ದು, ಭಾರತದಲ್ಲಿಯೇ ವೇಗವಾಗಿ ಇಷ್ಟು ರನ್‌ ಗಳಿಸಿದ ಮೊದಲ ಆಟಗಾರ ಎನಿಸಿದ್ದಾರೆ. ಇದುವರೆಗೆ ಕಡಿಮೆ ಪಂದ್ಯಗಳಲ್ಲಿ 2 ಸಾವಿರ ರನ್‌ ಗಳಿಸಿದ ದಾಖಲೆಯು ಕನ್ನಡಿಗ, ಲಕ್ನೋ ಸೂಪರ್‌ ಜೈಂಟ್ಸ್‌ ಕ್ಯಾಪ್ಟನ್‌ ಕೆ.ಎಲ್.ರಾಹುಲ್‌ ಹೆಸರಲ್ಲಿತ್ತು. ರಾಹುಲ್‌ ಅವರು 60 ಇನ್ನಿಂಗ್ಸ್‌ಗಳಲ್ಲಿ 2 ಸಾವಿರ ರನ್‌ ಗಳಿಸಿದ ಸಾಧನೆ ಮಾಡಿದ್ದರು.

ಮುಂಬೈ ವಿರುದ್ಧ ಋತುರಾಜ್‌ ಗಾಯಕ್ವಾಡ್‌ 40 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಐದು ಸಿಕ್ಸರ್‌ ಸಮೇತ 69 ರನ್‌ ಗಳಿಸಿದರು. ಶಿವಂ ದುಬೆ ಕೂಡ 38 ಎಸೆತಗಳಲ್ಲಿ 66 ರನ್‌ ಗಳಿಸಿದ್ದು ಸಿಎಸ್‌ಕೆ 206 ರನ್‌ಗಳ ಬೃಹತ್‌ ಮೊತ್ತ ದಾಖಲಿಸಲು ಸಾಧ್ಯವಾಯಿತು. ಈ ಮೊತ್ತ ಬೆನ್ನತ್ತಿದ ಮುಂಬೈ 20 ಓವರ್‌ಗಳಲ್ಲಿ 186 ರನ್‌ ಅಷ್ಟೇ ಕಲೆಹಾಕಲು ಸಾಧ್ಯವಾಯಿತು.

Ruturaj Gaikwad becomes fastest Indian to 2000 IPL runs during 69-run knock vs MI

ರೋಹಿತ್‌ ಶರ್ಮಾ ರೆಕಾರ್ಡ್

ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿಯೇ ಮುಂಬೈ ಇಂಡಿಯನ್ಸ್‌ ತಂಡದ ರೋಹಿತ್‌ ಶರ್ಮಾ ಕೂಡ ಮತ್ತೊಂದು ದಾಖಲೆ ಬರೆದರು. ಟಿ20 ಕ್ರಿಕೆಟ್​​ನಲ್ಲಿ 500 ಸಿಕ್ಸರ್​ಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಇನಿಂಗ್ಸ್​ನಲ್ಲಿ ಐದು ಸಿಕ್ಸರ್ ಬಾರಿಸುವ ಮೂಲಕ ಈ ಗಡಿಯನ್ನು ದಾಟಿದ್ದಾರೆ. ರವೀಂದ್ರ ಜಡೇಜಾ ಅವರ ಬೌಲಿಂಗ್​ನಲ್ಲಿ ಬಂದ ಮೂರನೇ ಸಿಕ್ಸರ್​ಗಳೊಂದಿಗೆ ರೋಹಿತ್ 500 ಟಿ 20 ಸಿಕ್ಸರ್​​ ಪೂರೈಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.‌

ಅತಿ ಹೆಚ್ಚು ಪಂದ್ಯ; ಧೋನಿ 2ನೇ ಆಟಗಾರ ಎಂಬ ಹೆಗ್ಗಳಿಕೆ

ಆರ್‌ಸಿಬಿ ಪರವಾಗಿ 250 ಪಂದ್ಯಗಳನ್ನು ಆಡುವ ಮೂಲಕ ಐಪಿಎಲ್‌ ಇತಿಹಾಸದಲ್ಲಿಯೇ ಒಂದೇ ಫ್ರಾಂಚೈಸ್‌ ಪರ ಇಷ್ಟು ಪಂದ್ಯಗಳನ್ನು ಆಡಿದ ಏಕೈಕ ಬ್ಯಾಟ್ಸ್‌ಮನ್‌ ಎನಿಸಿದ್ದರು. ಈಗ ಧೋನಿ ಅವರು ಕೂಡ 250 ಪಂದ್ಯಗಳನ್ನು ಆಡುವಾಗ ಮೂಲಕ ಅತಿ ಹೆಚ್ಚು ಪಂದ್ಯವಾಡಿದ ಎರಡನೇ ಆಟಗಾರ ಎನಿಸಿದ್ದಾರೆ. 2008ರಲ್ಲಿ ಸಿಎಸ್‌ಕೆ ಪರವಾಗಿ ಧೋನಿ ಆಡಲು ಆರಂಭಿಸಿದರು. ಎರಡು ವರ್ಷ ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ ಪರವಾಗಿ ಹೊರತುಪಡಿಸಿದರೆ ಧೋನಿ ಅವರು ಸಿಎಸ್‌ಕೆ ಪರವಾಗಿಯೇ ಆಡಿದ್ದಾರೆ.

ಇದನ್ನೂ ಓದಿ: MS Dhoni: ಕೊಹ್ಲಿ ನಂತರ ಈ ದಾಖಲೆ ಬರೆದ ಎರಡನೇ ಆಟಗಾರ ಎನಿಸಿದ ಧೋನಿ; ಏನದು?

Continue Reading
Advertisement
The Goat Life OTT Release Date Fix
ಒಟಿಟಿ4 mins ago

The Goat Life: ಪೃಥ್ವಿರಾಜ್ ಸುಕುಮಾರನ್ ಅಭಿನಯದ ʻಆಡುಜೀವಿತಂʼ ಒಟಿಟಿ ರಿಲೀಸ್‌ ಎಲ್ಲಿ?

No Diet Day
ಆರೋಗ್ಯ5 mins ago

No Diet Day: ಬೇಕಾಬಿಟ್ಟಿ ಡಯಟ್‌ ಮಾಡಿದರೆ ಏನಾಗುತ್ತದೆ? ಈ ಸಂಗತಿ ತಿಳಿದಿರಲಿ

Dead Body Found
ಕ್ರೈಂ11 mins ago

Dead Body Found: ಕಾಫಿ ತೋಟದ ಮಧ್ಯೆ ನೇತಾಡುತ್ತಿತ್ತು ವ್ಯಕ್ತಿ ಶವ; ಕೆರೆಯಲ್ಲಿ ತೇಲಿ ಬಂದ ಅಪರಿಚಿತ

Medical Students
ದೇಶ16 mins ago

Medical Students: ಮದುವೆಗೆ ಹೋದವರು ಸಮುದ್ರದಲ್ಲಿ ಮುಳುಗಿ 5 ಮೆಡಿಕಲ್‌ ವಿದ್ಯಾರ್ಥಿಗಳ ಸಾವು!

India's T20 World Cup Jersey
ಕ್ರೀಡೆ23 mins ago

India’s T20 World Cup Jersey: ಟಿ20 ವಿಶ್ವಕಪ್​ಗೆ ಹೊಸ ಜೆರ್ಸಿಯಲ್ಲಿ ಆಡಲಿದೆ ಭಾರತ; ಜೆರ್ಸಿ ಫೋಟೊ ವೈರಲ್​

Job Alert
ಉದ್ಯೋಗ28 mins ago

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನಾಳೆಯೇ ಕೊನೆಯ ದಿನ

assault case in bengaluru
ಬೆಂಗಳೂರು2 hours ago

Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ

Prajwal Revanna Case site inspection by SIT team in HD Revanna Basavanagudi residence
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

No Diet Day 2024
ಆರೋಗ್ಯ2 hours ago

No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

Pakistan Cricket
ಕ್ರೀಡೆ2 hours ago

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ21 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ23 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ23 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ4 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ5 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌