Paris Olympic 2024: ಒಲಿಂಪಿಕ್ಸ್ ಕ್ರೀಡಾ ಗ್ರಾಮಕ್ಕೆ​ ದಾಖಲೆಯ 3 ಲಕ್ಷ ಕಾಂಡೋಮ್ ಪೂರೈಕೆ! - Vistara News

ಕ್ರೀಡೆ

Paris Olympic 2024: ಒಲಿಂಪಿಕ್ಸ್ ಕ್ರೀಡಾ ಗ್ರಾಮಕ್ಕೆ​ ದಾಖಲೆಯ 3 ಲಕ್ಷ ಕಾಂಡೋಮ್ ಪೂರೈಕೆ!

Paris Olympic 2024: ಒಲಿಂಪಿಕ್ಸ್​ ಕ್ರೀಡಾಕೂಟದ ವೇಳೆ ಕಾಂಡೋಮ್​ಗಳನ್ನು ಪೂರೈಸುವುದು ಆರಂಭಗೊಂಡಿದ್ದು 1988ರಲ್ಲಿ. ಏಡ್ಸ್​ ಜಾಗೃತಿಗಾಗಿ ಸಿಯೋಲ್​ ಒಲಿಂಪಿಕ್ಸ್​ ವೇಳೆ ಮೊದಲ ಬಾರಿ ಕಾಂಡೋಮ್​ಗಳನ್ನು ಹಂಚಲಾಗಿತ್ತು.

VISTARANEWS.COM


on

Paris Olympic 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್​: ಪ್ರತಿಷ್ಠಿತ ಒಲಿಂಪಿಕ್ಸ್​(Olympic) ಕ್ರೀಡಾಕೂಟ ಆರಂಭಕ್ಕೆ ಇನ್ನು ಕೇವಲ ಬೆರಳೆಣಿಕೆಯ ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಕ್ರೀಡಾಕೂಡದ ಯಶಸ್ಸಿಗಾಗಿ ಪ್ಯಾರಿಸ್(Paris Olympic 2024)​ ಸರ್ವ ಸನ್ನದ್ಧವಾಗಿದೆ. ಜುಲೈ 26ರಿಂದ ಟೂರ್ನಿ ಆರಂಭವಾಗಲಿದೆ. ಇದೀಗ ಒಲಿಂಪಿಕ್ಸ್​ ಕ್ರೀಡಾ ಗ್ರಾಮದಲ್ಲಿ(Olympic Game Village) ಕ್ರೀಡಾಪಟುಗಳಿಗೆ ಸಂಘಟಕರು 3 ಲಕ್ಷ ಕಾಂಡೋಮ್​ಗಳನ್ನು ಪೂರೈಕೆ ಮಾಡಿದ್ದಾರೆ. ಇದು ಒಲಿಂಪಿಕ್ಸ್​ ಇತಿಹಾಸದಲ್ಲೇ ಗರಿಷ್ಠ ಸಂಖ್ಯೆಯ ಕಾಂಡೋಮ್​ ಪೂರೈಕೆಯಾಗಿರಲಿದೆ.

2021ರ ಟೋಕಿಯೊ ಒಲಿಂಪಿಕ್ಸ್​ ವೇಳೆ ಕರೊನಾ ಹಾವಳಿ ಇದ್ದ ಕಾರಣದಿಂದಾಗಿ ​ಸಂಟಕರು 1.5 ಲಕ್ಷ ಕಾಂಡೋಮ್​ಗಳನ್ನು ಕ್ರೀಡಾಪಟುಗಳಿಗೆ ಪೂರೈಕೆ ಮಾಡಿದ್ದರು. ಈ ಆದರೆ ಬಾರಿ ದಾಖಲೆಯ ಸಂಖ್ಯೆಯಲ್ಲಿ ಕಾಂಡೋಮ್​ಗಳನ್ನು ಪೂರೈಕೆ ಮಾಡಲಾಗಿದೆ. ಇದಕ್ಕೂ ಒಂದು ಕಾರಣವಿದೆ. ಪ್ಯಾರಿಸ್ ಎಂದರೆ ಪ್ರಣಯ ನಗರ ಎಂದೇ ಪ್ರಸಿದ್ಧಿ ಹೀಗಾಗಿ ಇಷ್ಟು ದೊಡ್ಡ ಸಂಖ್ಯೆಯ ಕಾಂಡೋಮ್​ಗಳನ್ನು ಸಂಘಟಕರು ಪೂರೈಕೆ ಮಾಡಿದ್ದಾರೆ. ಜತೆಗೆ ನಿಮ್ಮ ದೇಶದಲ್ಲಿ ಎಚ್​ಐವಿ ಜಾಗೃತಿ ಮೂಡಿಸಲು ಇದನ್ನು ಬಳಸಿ ಎಂಬ ಕಿವಿಮಾತು ಹೇಳಿದ್ದಾರೆ. ಈ ಕಾಂಡೋಮ್ ಕವರ್​ನಲ್ಲಿ ಪ್ಯಾರಿಸ್​ ಒಲಿಂಪಿಕ್ಸ್​ 2024 ಎಂದು ಬರೆದಿದೆ.

ಇದನ್ನೂ ಓದಿ Paris Olympics 2024: ಮಹಿಳೆಯರ 100 ಮೀಟರ್ ಹರ್ಡಲ್ಸ್​ನಲ್ಲಿ ಒಲಿಂಪಿಕ್ಸ್​ ಅರ್ಹತೆ ಪಡೆದ ಮೊದಲ ಭಾರತೀಯ ಮಹಿಳೆ ಜ್ಯೋತಿ ಯರ‍್ರಾಜಿ

1988ರಲ್ಲಿ ಆರಂಭ


ಒಲಿಂಪಿಕ್ಸ್​ ಕ್ರೀಡಾಕೂಟದ ವೇಳೆ ಕಾಂಡೋಮ್​ಗಳನ್ನು ಪೂರೈಸುವುದು ಆರಂಭಗೊಂಡಿದ್ದು 1988ರಲ್ಲಿ. ಏಡ್ಸ್​ ಜಾಗೃತಿಗಾಗಿ ಸಿಯೋಲ್​ ಒಲಿಂಪಿಕ್ಸ್​ ವೇಳೆ ಮೊದಲ ಬಾರಿ ಕಾಂಡೋಮ್​ಗಳನ್ನು ಹಂಚಲಾಗಿತ್ತು. 2000ದಲ್ಲಿ ಸಿಡ್ನಿ ಗೇಮ್ಸ್​ ವೇಳೆ 70 ಸಾವಿರ ಕಾಂಡಂ ವ್ಯವಸ್ಥೆ ಮಾಡಲಾಗಿತ್ತು. ಆದರೆ ಇದು ಖಾಲಿಯಾಗಿ ಮತ್ತೆ 20 ಸಾವಿರ ಹೆಚ್ಚುವರಿ ಕಾಂಡಂ ಪೂರೈಸಲಾಗಿತ್ತು. 2016ರ ರಿಯೋ ಒಲಿಂಪಿಕ್ಸ್​ ವೇಳೆ ಮಹಿಳೆಯರಿಗೂ ಗರ್ಭ ನಿರೋಧಕಗಳನ್ನೂ ಪೂರೈಸಲಾಗಿತ್ತು. ಈ ಬಾರಿ ದಾಖಲೆಯ ಸಂಖ್ಯೆಯ ಕಾಂಡೋಮ್​ ಪೂರೈಕೆಯಾಗಿದೆ. ಮುಂದಿನ ಬಾರಿ ಈ ಸಂಧ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ಒಲಿಂಪಿಕ್ಸ್‌ ಆರಂಭೋತ್ಸವವನ್ನು ಮೊದಲ ಬಾರಿಗೆ ಅಳವಡಿಸಿದ್ದು 1908ರ ಲಂಡನ್‌ ಒಲಿಂಪಿಕ್ಸ್‌ನಲ್ಲಿ. ಚೊಚ್ಚಲ ಒಲಿಂಪಿಕ್ಸ್‌ ಸಂಘಟಿಸಿದ ಹೆಗ್ಗಳಿಕೆ ಗ್ರೀಕ್‌ಗೆ ಸಲ್ಲುತ್ತದೆ. ಇದೇ ಕಾರಣಕ್ಕೆ ಉದ್ಘಾಟನ ಸಮಾರಂಭದಲ್ಲಿ ಕ್ರೀಡಾಪಟುಗಳ ಪಥಸಂಚಲನ ನಡೆಯುವಾಗ ಪ್ರತಿಸಲವೂ ಗ್ರೀಕ್‌ ತಂಡವೇ ಮುಂಚೂಣಿಯಲ್ಲಿರುತ್ತದೆ. ಬಳಿಕ ಆತಿಥೇಯ ದೇಶದ ಭಾಷೆಯ ಅಲ್ಪಾಬೆಟಿಕ್‌ ಅಕ್ಷರಮಾಲೆಯನ್ನು ಅನುಸರಿಸಿ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳುತ್ತವೆ. ಆತಿಥೇಯ ತಂಡ ಯಾವಾಗಲೂ ಕೊನೆಯ ಸ್ಥಾನದಲ್ಲಿರುತ್ತದೆ.

ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಕ್ರೀಡಾಕೂಟ ಜುಲೈ 26ರಿಂದ ಆರಂಭವಾಗಿ, ಆಗಸ್ಟ್‌ 11ರವರೆಗೆ ನಡೆಯಲಿದೆ. ಪ್ಯಾರಾಲಿಂಪಿಕ್ಸ್‌ ಆಗಸ್ಟ್‌ 28 ರಿಂದ ಸೆಪ್ಟೆಂಬರ್‌ 8ರವರೆಗೆ ನಿಗದಿಯಾಗಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

IND vs SL ODI : ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ನಿಧಾನಗತಿಯ ಮೇಲ್ಮೈಯಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಪಥುಮ್ ನಿಸ್ಸಾಂಕಾ 75 ಎಸೆತಗಳಲ್ಲಿ 56 ರನ್ ಗಳಿಸಿದ್ದರು. ಇತರ ಬ್ಯಾಟರ್​ಗಳು ಕ್ಲಿಷ್ಟಕರ ಮೇಲ್ಮೈಗೆ ಒಗ್ಗಿಕೊಳ್ಳಲು ವಿಫಲರಾದರು. ಭಾರತೀಯ ಸ್ಪಿನ್ನರ್​ಗಳು ಮಧ್ಯಮ ಕ್ರಮಾಂಕದಲ್ಲಿ ಆತಿಥೇಯರ ಮೇಲೆ ಮೇಲುಗೈ ಸಾಧಿಸಿದರು. 5 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿದ್ದ ಶ್ರೀಲಂಕಾ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿತು. ದುನಿತ್ ವೆಲ್ಲಾಲಗೆ, ವನಿಂದು ಹಸರಂಗ ಮತ್ತು ಅಕಿಲಾ ಧನಂಜಯ ಅವರ ಬೆಂಬಲ ಪಡೆದ ಲಂಕಾ ಸ್ಪರ್ಧಾತ್ಮಕ ಮೊತ್ತ ಪೇರಿಸಿತು.

VISTARANEWS.COM


on

IND vs SL ODI
Koo

ಕೊಲಂಬೊ: ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಆಗಸ್ಟ್ 4 ರಂದು ಶ್ರೀಲಂಕಾ ಮತ್ತು ಭಾರತ ನಡುವಿನ (IND vs SL ODI) ಎರಡನೇ ಏಕದಿನ ಪಂದ್ಯ ನಡೆಯಲಿದೆ. ಮೊದಲ ಏಕದಿನ ಪಂದ್ಯವು ರೋಚಕ ಮುಖಾಮುಖಿಯಾಗಿ ಪರಿಣಮಿಸಿತ್ತು. ಅಂತಿಮವಾಗಿ ಪಂದ್ಯ ಟೈನಲ್ಲಿ ಮುಕ್ತಾಯಗೊಂಡಿತು. ಭಾನುವಾರ ಇದೇ ರೀತಿಯ ಥ್ರಿಲ್ಲರ್ ಅನ್ನು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.

ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ನಿಧಾನಗತಿಯ ಮೇಲ್ಮೈಯಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಪಥುಮ್ ನಿಸ್ಸಾಂಕಾ 75 ಎಸೆತಗಳಲ್ಲಿ 56 ರನ್ ಗಳಿಸಿದ್ದರು. ಇತರ ಬ್ಯಾಟರ್​ಗಳು ಕ್ಲಿಷ್ಟಕರ ಮೇಲ್ಮೈಗೆ ಒಗ್ಗಿಕೊಳ್ಳಲು ವಿಫಲರಾದರು. ಭಾರತೀಯ ಸ್ಪಿನ್ನರ್​ಗಳು ಮಧ್ಯಮ ಕ್ರಮಾಂಕದಲ್ಲಿ ಆತಿಥೇಯರ ಮೇಲೆ ಮೇಲುಗೈ ಸಾಧಿಸಿದರು. 5 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿದ್ದ ಶ್ರೀಲಂಕಾ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿತು. ದುನಿತ್ ವೆಲ್ಲಾಲಗೆ, ವನಿಂದು ಹಸರಂಗ ಮತ್ತು ಅಕಿಲಾ ಧನಂಜಯ ಅವರ ಬೆಂಬಲ ಪಡೆದ ಲಂಕಾ ಸ್ಪರ್ಧಾತ್ಮಕ ಮೊತ್ತ ಪೇರಿಸಿತು.

ಪ್ರತಿಯಾಗಿ ಬ್ಯಾಟ್ ಮಾಡಿದ ಭಾಋತ ಪರ ನಾಯಕ ರೋಹಿತ್ ಶರ್ಮಾ 47 ಎಸೆತಗಳಲ್ಲಿ 58 ರನ್ ಗಳಿಸಿ ಭಾರತಕ್ಕೆ ಉತ್ತಮ ಆರಂಭ ನೀಡಿದರು. 35 ಎಸೆತಗಳಲ್ಲಿ 16 ರನ್ ಗಳಿಸಿದ್ದ ಶುಬ್ಮನ್ ಗಿಲ್ 13ನೇ ಓವರ್​ನಲ್ಲಿ ಔಟಾದರು. ಈ ವೇಳೆ ಭಾರತ 75 ರನ್ ಗಳಿಸಿತ್ತು. ಬಳಿಕ ಭಾರತದ ಮೂರು ವಿಕೆಟ್ ಗಳು ತ್ವರಿತವಾಗಿ ಬಿದ್ದವು. ಶ್ರೇಯಸ್ ಅಯ್ಯರ್ ಮತ್ತು ವಿರಾಟ್ ಕೊಹ್ಲಿ 45 ಎಸೆತಗಳಲ್ಲಿ 43 ರನ್​ಗಳ ಜೊತೆಯಾಟ ನೀಡಿದರು. ಆದಾಗ್ಯೂ, ಶ್ರೀಲಂಕಾ ಮತ್ತೆ ಚೇತರಿಸಿಕೊಂಡಿತು.

ಅಕ್ಷರ್ ಪಟೇಲ್ ಮತ್ತು ಕೆಎಲ್ ರಾಹುಲ್ ಎಚ್ಚರಿಕೆಯಿಂದ ಆಡಿ 92 ಎಸೆತಗಳಲ್ಲಿ 57 ರನ್​ ಸೇರಿಸಿ ಭಾರತವನ್ನು ಮುನ್ನಡೆಸಿದರು. ಆದಾಗ್ಯೂ, ಪಂದ್ಯ ಟೈನಲ್ಲಿ ಕೊನೆಗೊಂಡಿತು. ಶ್ರೀಲಂಕಾ ತಂಡದ ನಾಯಕ ಚರಿತ್ ಅಸಲಂಕಾ ಸತತ ಎಸೆತಗಳಲ್ಲಿ ಶಿವಂ ದುಬೆ ಮತ್ತು ಅರ್ಶ್​ದೀಪ್ ಅವರನ್ನು ಔಟ್ ಮಾಡಿದರು.

ಲಂಕಾಗೆ ಬಲ

ಈ ಪಂದ್ಯವು ಶ್ರೀಲಂಕಾದ ನೈತಿಕ ಸ್ಥೈರ್ಯ ಹೆಚ್ಚಿಸುತ್ತದೆ ಎಂದು ಕ್ರಿಕೆಟ್​ ತಜ್ಞರು ಹೇಳಿದ್ದಾರೆ. ಭಾರತವು ಗೆಲುವಿನ ಹಾದಿಗೆ ಮರಳಲು ತಮ್ಮ ಪ್ರಾಬಲ್ಯ ಬಯಸಲಿದೆ. ಆಟದ ವಿಧಾನವನ್ನು ಉತ್ತಮವಾಗಿ ಯೋಜಿಸಲು ಬಯಸುತ್ತಿದ್ದಾರೆ. ಮೊದಲ ಪಂದ್ಯದಲ್ಲಿ ಭಾರತದ ಮೂವರು ಬ್ಯಾಟರ್​ಗಳು ಸ್ವೀಪ್ ಶಾಟ್​ಗಳಿಗೆ ಬಲಿಯಾದರು. ಟರ್ನಿಂಗ್ ಟ್ರ್ಯಾಕ್​ಗಳಲ್ಲಿ ಬಳಸಲು ಇದು ಸುಲಭವಾದ ತಂತ್ರವಾಗಿದ್ದರೂ ಭಾರತೀಯ ಬ್ಯಾಟರ್​ಗಳು ಈ ಬಗ್ಗೆ ಎಚ್ಚರಿಕೆ ವಹಿಸಲಿದ್ದಾರೆ ಶ್ರೀಲಂಕಾದ ಶಕ್ತಿ ಅವರ ಸ್ಪಿನ್-ಬೌಲಿಂಗ್/ ಅನುಕೂಲಕರ ಪರಿಸ್ಥಿತಿಗಳಲ್ಲಿ ಭಾರತೀಯ ಬ್ಯಾಟರ್​ಗಳ ಮೇಲೆ ಸಾಧ್ಯವಾದಷ್ಟು ಒತ್ತಡ ಹೇರಲು ಬಯಸುತ್ತಾರೆ.

ಮೊದಲ ಏಕದಿನ ಪಂದ್ಯವನ್ನು ಸ್ವಲ್ಪ ಸಮಯದವರೆಗೆ ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದರಿಂದ ಭಾರತಕ್ಕೆ ಭಯವೇನೂ ಇಲ್ಲ. ಅವರ ಸಂಯೋಜನೆಯು ಪರಿಸ್ಥಿತಿಗಳಿಗೆ ಸಾಕಷ್ಟು ಸ್ಥಿರವಾಗಿದೆ ಎಂದು ತೋರುತ್ತದೆ. ಭಾರತೀಯ ಬ್ಯಾಟರ್​ಗಳು ಲಂಕಾ ಬೌಲರ್​ಗಳನ್ನು ಒತ್ತಡದಲ್ಲಿ ಸಿಲುಕಿಸಬಹುದು.

ಶ್ರೀಲಂಕಾದ ಮುಂಚೂಣಿ ವೇಗಿಗಳಾದ ದುಷ್ಮಂತ ಚಮೀರಾ, ಬಿನುರಾ ಫರ್ನಾಂಡೊ, ಮಥೀಶಾ ಪತಿರಾನಾ, ನುವಾನ್ ತುಷಾರಾ ಮತ್ತು ದಿಲ್ಶಾನ್ ಮಧುಶಂಕಾ ಗಾಯಗೊಂಡಿದ್ದಾರೆ. ಬಲಿಷ್ಠ ಭಾರತೀಯ ಬ್ಯಾಟಿಂಗ್ ಲೈನ್ಅಪ್ ವಿರುದ್ಧ ಹೆಜ್ಜೆ ಇಡುವ ಜವಾಬ್ದಾರಿ ಅಸಿತಾ ಫರ್ನಾಂಡೊ ಮತ್ತು ಮೊಹಮ್ಮದ್ ಶಿರಾಜ್ ಅವರ ಮೇಲಿದೆ. ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಅವರು ಶ್ರೇಯಸ್ ಅಯ್ಯರ್ ಅವರ ವಿಕೆಟ್ ಪಡೆದಿದ್ದರು. ಸ್ಪಿನ್ ಸ್ನೇಹಿ ಪರಿಸ್ಥಿತಿಗಳನ್ನು ಪರಿಗಣಿಸಿ, ಶಿರಾಜ್ ಬದಲಿಗೆ ಮಹೀಶ್ ದೀಕ್ಷಾ ಅವರನ್ನು ಕರೆತರಲು ಶ್ರೀಲಂಕಾ ಪ್ರಚೋದಿಸಬಹುದು.

ಆರ್ ಪ್ರೇಮದಾಸ ಕ್ರೀಡಾಂಗಣದ ಪಿಚ್ ವರದಿ

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಇದುವರೆಗೆ 150 ಏಕದಿನ ಪಂದ್ಯಗಳು ನಡೆದಿವೆ. ಈ ಸ್ಥಳದಲ್ಲಿ ಮೊದಲು ಬ್ಯಾಟಿಂಗ್ ಮಾಡುವುದು ಹೆಚ್ಚು ಅನುಕೂಲಕರ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು 80 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ತಂಡಗಳು ಕೇವಲ 59 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಮೊದಲ ಪಂದ್ಯದಲ್ಲಿ ಸ್ಪಿನ್ನರ್​ಗಳು ಪ್ರಭಾವ ಬೀರಿದ್ದರು. ಎರಡನೇ ಏಕದಿನ ಪಂದ್ಯದಲ್ಲಿ ಹೆಚ್ಚಿನದನ್ನು ನಿರೀಕ್ಷಿಸಲಾಗಿದೆ. ಪಂದ್ಯ ಮುಂದುವರಿದಂತೆ ಬ್ಯಾಟಿಂಗ್ ಕಠಿಣವಾಗುತ್ತದೆ. ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಮಾಡಲು ಒಲವು ತೋರುತ್ತಾನೆ.

ಇದನ್ನೂ ಓದಿ: National Cricket Academy : ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ 45 ಪಿಚ್​ಗಳಿರುವ ಬೃಹತ್​​ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ

ಸಂಭಾವ್ಯ ಪ್ಲೇಯಿಂಗ್ ಇಲೆವೆನ್


ಶ್ರೀಲಂಕಾ: ಪಥುಮ್ ನಿಸ್ಸಾಂಕಾ, ಅವಿಷ್ಕಾ ಫರ್ನಾಂಡೊ, ಕುಸಾಲ್ ಮೆಂಡಿಸ್ (ವಿಕೆ), ಸದೀರಾ ಸಮರವಿಕ್ರಮ, ಚರಿತ್ ಅಸಲಂಕಾ (ಸಿ), ಜನಿತ್ ಲಿಯಾನಗೆ, ದುನಿತ್ ವೆಲ್ಲಾಲಗೆ, ವನಿಂದು ಹಸರಂಗ, ಅಕಿಲಾ ಧನಂಜಯ, ಮೊಹಮ್ಮದ್ ಶಿರಾಜ್ / ಮಹೇಶ್ ತೀಕ್ಷಾನಾ, ಅಸಿತಾ ಫರ್ನಾಂಡೊ.

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ವಾಷಿಂಗ್ಟನ್ ಸುಂದರ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಿವಂ ದುಬೆ, ಕುಲದೀಪ್ ಯಾದವ್, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಪಂದ್ಯದ ವಿವರಗಳು

  • ಭಾರತ-ಶ್ರೀಲಂಕಾ 2ನೇ ಏಕದಿನ ಪಂದ್ಯ
  • ಸ್ಥಳ: ಆರ್ ಪ್ರೇಮದಾಸ ಕ್ರೀಡಾಂಗಣ, ಕೊಲಂಬೊ
  • ದಿನಾಂಕ ಮತ್ತು ಸಮಯ ಭಾನುವಾರ, ಆಗಸ್ಟ್ 4, ಮಧ್ಯಾಹ್ನ 2:30

ಮುಖಾಮುಖಿ ದಾಖಲೆಗಳು

  • ಪಂದ್ಯಗಳು- 169
  • ಶ್ರೀಲಂಕಾ ಗೆಲುವು- 57
  • ಭಾರತ ಗೆಲುವು- 99
  • ಸಮಬಲ 02
  • ಫಲಿತಾಂಶ ಇಲ್ಲ 11
  • ಮೊದಲ ಪಂದ್ಯ: ಜೂನ್ 16, 1979
  • ಇತ್ತೀಚಿನ ಪಂದ್ಯ- ಆಗಸ್ಟ್ 2, 2024
Continue Reading

ಪ್ರಮುಖ ಸುದ್ದಿ

National Cricket Academy : ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ 45 ಪಿಚ್​ಗಳಿರುವ ಬೃಹತ್​​ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ

New National Cricket Academy : ಹೊಸ ಎನ್​​ಸಿಎ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಹೊಂದಿದೆ. ಕ್ರಿಕೆಟಿಗರಿಗೆ ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಉತ್ತಮ ವಾತಾವರಣ ಒದಗಿಸುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಈ ಸೌಲಭ್ಯವು ಮೂರು ಅಂತಾರರಾಷ್ಟ್ರೀಯ ಗುಣಮಟ್ಟದ ಆಟದ ಮೈದಾನಗಳನ್ನು ಒಳಗೊಂಡಿರುತ್ತದೆ. ಜೊತೆಗೆ 45 ನೆಟ್​ಪ್ರಾಕ್ಟೀಸ್​ ಪಿಚ್ ಗಳನ್ನು ಹೊಂದಿದೆ. ಹೆಚ್ಚುವರಿಯಾಗಿ ಇದು ಒಳಾಂಗಣ ಕ್ರಿಕೆಟ್ ಪಿಚ್​​ಗಳನ್ನು ಹೊಂದಿದೆ. ಅದೇ ರೀತಿ ಒಲಿಂಪಿಕ್ ಗಾತ್ರದ ಈಜುಕೊಳ ಮತ್ತು ಅತ್ಯಾಧುನಿಕ ತರಬೇತಿ ಪ್ರದೇಶ, ಪುನಶ್ಚೇತನ ಮತ್ತು ಕ್ರೀಡಾ ವಿಜ್ಞಾನ ಸೌಲಭ್ಯಗಳನ್ನು ಹೊಂದಿರುತ್ತದೆ.

VISTARANEWS.COM


on

New National Cricket Academy
Koo

ಬೆಂಗಳೂರು: ನಗರದಲ್ಲಿ ಅತ್ಯಾಧುನಿಕ ಸೌಕರ್ಯಗಳನ್ನು ಹೊಂದಿರವು ಹೊಸ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (National Cricket Academy) ಪೂರ್ಣಗೊಳ್ಳುವ ಹಂತದಲ್ಲಿದೆ ಮತ್ತು ಶೀಘ್ರದಲ್ಲೇ ಕ್ರಿಕೆಟಿಗರಿಗೆ ಲಭ್ಯವಾಗಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ಕಾರ್ಯದರ್ಶಿ ಜಯ್ ಶಾ ಪ್ರಕಟಿಸಿದ್ದಾರೆ. ಈ ಅತ್ಯಾಧುನಿಕ ಕೇಂದ್ರವು ದೇಶದಲ್ಲಿ ಕ್ರಿಕೆಟ್ ಅಭಿವೃದ್ಧಿಪಡಿಸುವ ಮತ್ತು ಪೋಷಿಸುವ ವಿಧಾನದಲ್ಲಿ ಕ್ರಾಂತಿಯನ್ನುಂಟು ಮಾಡಲಿದೆ.

ಹೊಸ ಎನ್​​ಸಿಎ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಹೊಂದಿದೆ. ಕ್ರಿಕೆಟಿಗರಿಗೆ ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಉತ್ತಮ ವಾತಾವರಣ ಒದಗಿಸುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಈ ಸೌಲಭ್ಯವು ಮೂರು ಅಂತಾರರಾಷ್ಟ್ರೀಯ ಗುಣಮಟ್ಟದ ಆಟದ ಮೈದಾನಗಳನ್ನು ಒಳಗೊಂಡಿರುತ್ತದೆ. ಜೊತೆಗೆ 45 ನೆಟ್​ಪ್ರಾಕ್ಟೀಸ್​ ಪಿಚ್ ಗಳನ್ನು ಹೊಂದಿದೆ. ಹೆಚ್ಚುವರಿಯಾಗಿ ಇದು ಒಳಾಂಗಣ ಕ್ರಿಕೆಟ್ ಪಿಚ್​​ಗಳನ್ನು ಹೊಂದಿದೆ. ಅದೇ ರೀತಿ ಒಲಿಂಪಿಕ್ ಗಾತ್ರದ ಈಜುಕೊಳ ಮತ್ತು ಅತ್ಯಾಧುನಿಕ ತರಬೇತಿ ಪ್ರದೇಶ, ಪುನಶ್ಚೇತನ ಮತ್ತು ಕ್ರೀಡಾ ವಿಜ್ಞಾನ ಸೌಲಭ್ಯಗಳನ್ನು ಹೊಂದಿರುತ್ತದೆ.

ಜಯ್ ಶಾ ತಮ್ಮ ಪ್ರಕಟಣೆಯಲ್ಲಿ, ಎನ್​​ಸಿಎ ಪ್ರಾರಂಭದ ಬಗ್ಗೆ ತಮ್ಮ ಉತ್ಸಾಹ ವ್ಯಕ್ತಪಡಿಸಿದ್ದಾರೆ. ಇದು ಭಾರತೀಯ ಕ್ರಿಕೆಟ್​ಗೆ ಒದಗಿಸುವ ಅಪಾರ ಪ್ರಯೋಜನಗಳನ್ನು ವಿವರಿಸಿದ್ದಾರೆ. ಅಕಾಡೆಮಿಯ ಬಗ್ಗೆ ಅವರ ದೃಷ್ಟಿಕೋನವು ಕ್ರಿಕೆಟಿಗರು ಒಗ್ಗೂಡಲು, ಕಲಿಯಲು ಮತ್ತು ಬೆಳೆಯಲು ಒಂದು ಕೇಂದ್ರವನ್ನು ನಿರ್ಮಿಸುವುದಾಗಿದೆ. ಅಂತಿಮವಾಗಿ ರಾಷ್ಟ್ರೀಯ ತಂಡದ ಯಶಸ್ಸಿಗೆ ಕೊಡುಗೆ ನೀಡುವುದೇ ಉದ್ದೇಶವಾಗಿದೆ.

ಇದನ್ನೂ ಓದಿ: Deepika Kumari : ಪದಕದ ಭರವಸೆ ಮೂಡಿಸಿ ಬರಿಗೈಯಲ್ಲಿ ವಾಪಸಾದ ಆರ್ಚರ್​ ದೀಪಿಕಾ ಕುಮಾರಿ

ಬಿಸಿಸಿಐನ ಹೊಸ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಬಹುತೇಕ ಪೂರ್ಣಗೊಂಡಿದೆ. ಶೀಘ್ರದಲ್ಲೇ ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ ಎಂದು ಘೋಷಿಸಲು ತುಂಬಾ ಉತ್ಸುಕನಾಗಿದ್ದೇನೆ. ಹೊಸ ಎನ್​ಸಿಎ ಮೂರು ವಿಶ್ವ ದರ್ಜೆಯ ಆಟದ ಮೈದಾನಗಳು, 45 ಅಭ್ಯಾಸ ಪಿಚ್​ಗಳು ಒಳಾಂಗಣ ಕ್ರಿಕೆಟ್ ಪಿಚ್​ಗಳು, ಒಲಿಂಪಿಕ್ ಗಾತ್ರದ ಈಜುಕೊಳ ಮತ್ತು ಅತ್ಯಾಧುನಿಕ ತರಬೇತಿ, ಚೇತರಿಕೆ ಮತ್ತು ಕ್ರೀಡಾ ವಿಜ್ಞಾನ ಸೌಲಭ್ಯಗಳನ್ನು ಒಳಗೊಂಡಿರುತ್ತದೆ. ಈ ಉಪಕ್ರಮವು ನಮ್ಮ ರಾಷ್ಟ್ರದ ಪ್ರಸ್ತುತ ಮತ್ತು ಭವಿಷ್ಯದ ಕ್ರಿಕೆಟಿಗರಿಗೆ ತಮ್ಮ ಕೌಶಲ್ಯಗಳನ್ನು ಸಾಧ್ಯವಾದಷ್ಟು ಉತ್ತಮ ವಾತಾವರಣದಲ್ಲಿ ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ ಎಂದು ಜಯ್ ಶಾ ‘ಎಕ್ಸ್’ ನಲ್ಲಿ ಬರೆದಿದ್ದಾರೆ.

ಜಯ್ ಶಾ ಅವರು ಭಾರತೀಯ ಕ್ರಿಕೆಟ್ ಅಭಿವೃದ್ದಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಕಳೆದ ವರ್ಷ ಭಾರತ ಏಕದಿನ ವಿಶ್ವಕಪ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಷಿಪ್​ನಲ್ಲಿ ರನ್ನರ್ ಅಪ್ ಸ್ಥಾನ ಪಡೆದಿತ್ತು. ಜುಲೈನಲ್ಲಿ ದಕ್ಷಿಣ ಆಫ್ರಿಕಾವನ್ನು ಫೈನಲ್​​ನಲ್ಲಿ ಸೋಲಿಸಿದ ನಂತರ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಟಿ20 ವಿಶ್ವ ಕಪ್​ ಗೆದ್ದುಕೊಂಡಿದೆ.

Continue Reading

ಪ್ರಮುಖ ಸುದ್ದಿ

Deepika Kumari : ಪದಕದ ಭರವಸೆ ಮೂಡಿಸಿ ಬರಿಗೈಯಲ್ಲಿ ವಾಪಸಾದ ಆರ್ಚರ್​ ದೀಪಿಕಾ ಕುಮಾರಿ

Deepika Kumari:

VISTARANEWS.COM


on

Deepika Kumari
Koo

ಬೆಂಗಳೂರು : ಭಾರತದ ಹಿರಿಯ ಬಿಲ್ಲುಗಾರ್ತಿ ದೀಪಿಕಾ ಕುಮಾರಿ (Deepika Kumari ) ಶನಿವಾರ ಕೊರಿಯಾದ ನಾಮ್ ಸುಹ್ಯಾನ್ ವಿರುದ್ಧ 6-4 ಅಂತರದಲ್ಲಿ ಸೋಲನುಭವಿಸಿದರು. ಈ ಮೂಲಕ ಅವರು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ನಿರಾಸೆಯ ಅಭಿಯಾನ ಕಂಡರು. ಶನಿವಾರದ ದಿನವನ್ನು ದೀಪಿಕಾ ಉತ್ತಮವಾಗಿ ಪ್ರಾರಂಭಿಸಿದರು. ಆದರೆ ನಿಧಾನವಾಗಿ ಪ್ರದರ್ಶನ ಕಳೆದುಕೊಂಡರು. ಪಂದ್ಯದ ನಿರ್ಣಾಯಕ ಹಂತಗಳಲ್ಲಿ ದೀಪಿಕಾ 6 ಮತ್ತು 7 ಅಂಕಗಳನ್ನು ಗಳಿಸಿದರು. ಇದು ದಿನದ ಅವರ ಫಲಿತಾಂಶದ ಮೇಲೆ ಪರಿಣಾಮ ಬೀರಿತು. ದೀಪಿಕಾ ಅವರ ಸೋಲಿನೊಂದಿಗೆ, ಭಾರತದಿಂದ ಬಿಲ್ಲುಗಾರಿಕೆ ತಂಡವು ಪ್ಯಾರಿಸ್​ನಿಂದ ಬರಿಗೈಯಲ್ಲಿ ಮರಳುವಂತಾಗಿದೆ. ಭಾರತೀಯ ಬಿಲ್ಲುಗಾರಿಕೆ ತಂಡವು ಸಾಕಷ್ಟು ಭರವಸೆಯೊಂದಿಗೆ ಆಡುತ್ತಿತ್ತು. ಆದರೆ, ಯಾವುದೇ ಪದಕ ಸುತ್ತುಗಳನ್ನು ಪ್ರವೇಶಿಸಲು ವಿಫಲವಾಯಿತು.

ಕ್ವಾರ್ಟರ್ ಫೈನಲ್ ಪಂದ್ಯದ ಮೊದಲ ಸೆಟ್​​ನಲ್ಲಿ ದೀಪಿಕಾ ಕುಮಾರಿ 9,10,9 ಅಂಕಗಳನ್ನು ಗಳಿಸಿ ಎರಡನೇ ಶ್ರೇಯಾಂಕಿತ ಬಿಲ್ಲುಗಾರ ನಾಮ್ ಸುಹೈಯಾನ್ ವಿರುದ್ಧ ಗೆಲುವು ಸಾಧಿಸಿದರು. ಎರಡನೇ ಸೆಟ್ ನಲ್ಲಿ ಭಾರತೀಯ ಬಿಲ್ಲುಗಾರ್ತಿ 10 ಅಂಕಗಳೊಂದಿಗೆ ಪ್ರಾರಂಭಿಸಿದ ನಂತರ 6 ಮತ್ತು 9 ರನ್ ಗಳಿಸಿದರು. ದೀಪಿಕಾ ಅವರ ಆಟವು ದೀರ್ಘವಾಗುತ್ತಿತ್ತು. ಅವರು ಕೊನೆಯ ಎರಡು ಸೆಕೆಂಡುಗಳಲ್ಲಿ ತಮ್ಮ ಹೆಚ್ಚಿನ ಬಾಣಗಳನ್ನು ಹೊಡೆದರು. ಅವರ ಅಂತಿಮ ಎರಡನೇ ಬಿಲ್ಲು 6, 7 ಮತ್ತು 8 ಗಳನ್ನು ಮುಟ್ಟಿದವು. ಹೀಗಾಗಿ ಹಿನ್ನಡೆ ಉಂಟಾಯಿತು.

ಪಂದ್ಯದ ಮೂರನೇ ಸೆಟ್​​ನಲ್ಲಿ ಅನುಭವಿ ಬಿಲ್ಲುಗಾರ್ತಿ ದೀಪಿಕಾ 10,9,10 ಅಂಕಗಳನ್ನು ಗಳಿಸಿ 29-28 ಅಂತರದಲ್ಲಿ ಗೆಲುವು ಸಾಧಿಸಿದರು. ಮೂರು ಸೆಟ್ ಗಳ ನಂತರ ಪಂದ್ಯವನ್ನು 4-2 ರಿಂದ ಮುನ್ನಡೆಸಿದ ದೀಪಿಕಾ ನಾಲ್ಕನೇ ಸೆಟ್ ನಲ್ಲಿ ಮತ್ತೊಮ್ಮೆ ಎಡವಿದರು. ಒತ್ತಡದಲ್ಲಿ 7 ಅಂಕ ಗಳಿಸಿದರು. . ಕೊರಿಯಾದ ಬಿಲ್ಲುಗಾರ್ತಿ 4ನೇ ಸೆಟ್ ಅನ್ನು 29-27ರಿಂದ ಗೆದ್ದು ಮುಂದುವರಿದರು.

ಇದನ್ನೂ ಓದಿ: Mohammed Shami : ಭಾರತ ತಂಡ ಬಿಟ್ಟು ಬೇರೆ ತಂಡಕ್ಕೆ ಮರಳಲು ಮೊಹಮ್ಮದ್ ಶಮಿ ನಿರ್ಧಾರ

ಭಜನ್​ಗೆ ಸೋಲು

ಇದಕ್ಕೂ ಮುನ್ನ ನಡೆದ ರೌಂಡ್ ಆಫ್ 16 ಪಂದ್ಯದಲ್ಲಿ ಇಂಡೋನೇಷ್ಯಾದ ಡಯಾನಂದಾ ಕೊಯಿರುನ್ನಿಸಾ ವಿರುದ್ಧ ರೋಚಕ ಶೂಟ್ ಆಫ್ ನಲ್ಲಿ ಭಜನ್ ಕೌರ್ ಗೆ ಹಿಡಿತ ಸಾಧಿಸಲು ಸಾಧ್ಯವಾಗಲಿಲ್ಲ. ಚೊಚ್ಚಲ ಒಲಿಂಪಿಕ್ ಪಂದ್ಯದಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ನೀಡಿದ್ದ ಭಜನ್, ಹಿಂದಿನಿಂದ ಹೋರಾಡಿ 5-5ರ ಮುನ್ನಡೆ ಸಾಧಿಸಿದರು. ಆದಾಗ್ಯೂ, ಟೈ-ಬ್ರೇಕರ್​ನಲ್ಲಿ ಅವರು 8 ಅಂಕಗಳನ್ನು ಗಳಿಸಿ ಕೊಯಿರುನ್ನಿಸಾ ವಿರುದ್ಧ ಸೋತರು.

Continue Reading

ಪ್ರಮುಖ ಸುದ್ದಿ

Mohammed Shami : ಭಾರತ ತಂಡ ಬಿಟ್ಟು ಬೇರೆ ತಂಡಕ್ಕೆ ಮರಳಲು ಮೊಹಮ್ಮದ್ ಶಮಿ ನಿರ್ಧಾರ

Mohammed Shami : ನಾನು ಯಾವಾಗ ಹಿಂತಿರುಗುತ್ತೇನೆ ಎಂದು ಹೇಳುವುದು ಕಷ್ಟ. ನಾನು ಕಠಿಣ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ನಾನು ಮತ್ತೆ ಭಾರತದ ಜೆರ್ಸಿ ಧರಿಸುವ ಮೊದಲು ನೀವು ನನ್ನನ್ನು ಬಂಗಾಳ ತಂಡದಲ್ಲಿ ನೋಡುತ್ತೀರಿ ಎಂದು ಭಾವಿಸುತ್ತೇನೆ. ನಾನು ಬಂಗಾಳ ಪರ ಎರಡು-ಮೂರು ಪಂದ್ಯಗಳನ್ನು ಆಡಲು ಸಿದ್ಧನಾಗಿದ್ದೇನೆ”ಎಂದು ಶಮಿ ಕೋಲ್ಕತ್ತಾದಲ್ಲಿ ಈಸ್ಟ್ ಬೆಂಗಾಲ್ ಕ್ಲಬ್ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಹೇಳಿದರು.

VISTARANEWS.COM


on

Koo

ನವದೆಹಲಿ: ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ (Mohammed Shami) ಅವರು ಭಾರತ ತಂಡಕ್ಕೆ ಮರಳುವ ಕುರಿತು ಇನ್ನೂ ಅನಿಶ್ಚಿತರಾಗಿದ್ದಾರೆ. ಯಾವ ಸರಣಿಗೆ ಅವರು ತಂಡ ಸೇರಿಕೊಳ್ಳುತ್ತಾರೆ ಎಂಬ ಸ್ಪಷ್ಟತೆ ಇಲ್ಲ. ಆದಾಗ್ಯೂ, ಶಮಿ ಭಾರತೀಯ ಜೆರ್ಸಿಯನ್ನು ತೊಡುವ ಮೊದಲು ದೇಶೀಯ ಕ್ರಿಕೆಟ್​ ಹಾದಿಯನ್ನು ಹಿಡಿಯಲಿದ್ದಾರೆ ಎಂಬುದಾಗಿ ವರದಿಯಾಗಿದೆ. ನವೆಂಬರ್ 19 ರಂದು ಅಹಮದಾಬಾದ್​​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್ 2023 ರ ಫೈನಲ್​​ನಲ್ಲಿ ಭಾರತದ ಹೃದಯ ವಿದ್ರಾವಕ ಸೋಲಿನ ನಂತರ ಶಮಿ ಆಟದಿಂದ ಹೊರಗುಳಿದಿದ್ದಾರೆ. ಅವರು ಫೆಬ್ರವರಿ 2024ರಲ್ಲಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಂದಿನಿಂದ ಅವರು ಚೇತರಿಕೆಯ ಹಾದಿಯಲ್ಲಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ನೆಟ್ಸ್​​ನಲ್ಲಿ ಬೌಲಿಂಗ್ ಮಾಡುತ್ತಾ ಸಂಪೂರ್ಣವಾಗಿ ಚೇತರಿಸಿಕೊಳ್ಳುವುದಕ್ಕೆ ಎದುರು ನೋಡುತ್ತಿದ್ದಾರೆ.

ನಾನು ಯಾವಾಗ ಹಿಂತಿರುಗುತ್ತೇನೆ ಎಂದು ಹೇಳುವುದು ಕಷ್ಟ. ನಾನು ಕಠಿಣ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ನಾನು ಮತ್ತೆ ಭಾರತದ ಜೆರ್ಸಿ ಧರಿಸುವ ಮೊದಲು ನೀವು ನನ್ನನ್ನು ಬಂಗಾಳ ತಂಡದಲ್ಲಿ ನೋಡುತ್ತೀರಿ ಎಂದು ಭಾವಿಸುತ್ತೇನೆ. ನಾನು ಬಂಗಾಳ ಪರ ಎರಡು-ಮೂರು ಪಂದ್ಯಗಳನ್ನು ಆಡಲು ಸಿದ್ಧನಾಗಿದ್ದೇನೆ”ಎಂದು ಶಮಿ ಕೋಲ್ಕತ್ತಾದಲ್ಲಿ ಈಸ್ಟ್ ಬೆಂಗಾಲ್ ಕ್ಲಬ್ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಹೇಳಿದರು.

ದೇಶೀಯ ಕ್ರಿಕೆಟ್​ನಲ್ಲಿ ಆಡಲು ಬಿಸಿಸಿಐ ಆದೇಶ

ಭಾರತ ತಂಡಕ್ಕೆ ಮರಳುವ ಸಲುವಾಗಿ ಭಾರತೀಯ ಆಟಗಾರರು ದೇಶೀಯ ಪಂದ್ಯಗಳನ್ನು ಆಡುವುದನ್ನು ಕಡ್ಡಾಯ ಎಂಬ ತನ್ನ ನಿಲುವನ್ನು ಬಿಸಿಸಿಐ ತನ್ನ ಸ್ಪಷ್ಟಪಡಿಸಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿ ಎಲ್ಲಾ ಕ್ರಿಕೆಟಿಗರು ರಾಷ್ಟ್ರೀಯ ಕರ್ತವ್ಯಗಳಿಂದ ಮುಕ್ತರಾದಾಗಲೆಲ್ಲಾ ದೇಶೀಯ ಕ್ರಿಕೆಟ್ ಆಡುವಂತೆ ಬಿಸಿಸಿಐ ನಿರ್ದೇಶನ ನೀಡಿದೆ.

ಈ ಕ್ರಮವು ದೇಶೀಯ ಕ್ರಿಕೆಟ್ ಆಡುವ ಪ್ರಾಮುಖ್ಯತೆಯ ಬಗ್ಗೆ ಬಿಸಿಸಿಐನ ಗಮನವನ್ನು ಎತ್ತಿ ತೋರಿಸಿದೆ, ಇದು ಆಟಗಾರರ ಫಾರ್ಮ್ ಮತ್ತು ಫಿಟ್ನೆಸ್ ಅನ್ನು ಕಾಪಾಡಿಕೊಳ್ಳುವಲ್ಲಿ ನಿರ್ಣಾಯಕವಾಗಿದೆ. ಮುಂಬರುವ ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ತಯಾರಿ ನಡೆಸುವಂತೆ ಟೆಸ್ಟ್ ಸ್ಪೆಷಲಿಸ್ಟ್​​ಗಳಿಗೆ ನಿರ್ದೇಶನ ನೀಡಲಾಗಿದೆ.

ಶಮಿ ಚೇತರಿಕೆಯ ಹಾದಿ

ಐಪಿಎಲ್ 2024 ಮತ್ತು ಟಿ 20 ವಿಶ್ವಕಪ್ 2024ರಂತಹ ಪ್ರಮುಖ ಪಂದ್ಯಾವಳಿಗಳಿಗೆ ಮುಂಚಿತವಾಗಿ ಗಾಯವು ಇಷ್ಟು ಹದಗೆಡುತ್ತದೆ ಎಂದು ನಾನು ಊಹಿಸಿರಲಿಲ್ಲ ಎಂದು ಶಮಿ ಸಲಹೆ ನೀಡಿದರು.

ಇದನ್ನೂ ಓದಿ: MS Dhoni : ವಿರಾಟ್ ಕೊಹ್ಲಿ ಜತೆಗಿನದ ಸಂಬಂಧವನ್ನು ವಿವರಿಸಿದ ಕೂಲ್ ಕ್ಯಾಪ್ಟನ್​ ಮಹೇಂದ್ರ ಸಿಂಗ್ ಧೋನಿ

ಗಾಯವು ಇಷ್ಟು ಗಂಭೀರವಾಗಿರುತ್ತದೆ ಎಂದು ನಾವು ಎಂದಿಗೂ ಭಾವಿಸಿರಲಿಲ್ಲ. ಕಳೆದ ವರ್ಷದ ವಿಶ್ವಕಪ್ ನಂತರ ಐಪಿಎಲ್ ಮತ್ತು ಐಸಿಸಿ ಟಿ 20 ಮೆಗಾ ಈವೆಂಟ್ ಬಹುತೇಕ ಬ್ಯಾಕ್ ಟು ಬ್ಯಾಕ್ ಬಂದಿದ್ದರಿಂದ ಟಿ 20 ವಿಶ್ವಕಪ್ ನಂತರ ಅದನ್ನು ಪರಿಹರಿಸುವ ಯೋಜನೆ ಇತ್ತು”ಎಂದು ಶಮಿ ಹೇಳಿದರು.

ಆದರೆ ಏಕದಿನ ವಿಶ್ವಕಪ್ ಸಮಯದಲ್ಲಿಯೇ ಪರಿಸ್ಥಿತಿ ಹದಗೆಟ್ಟಿತು. ನೋವಿನೊಂದಿಗೆ ಆಡುವ ಅಪಾಯವನ್ನು ಎದುರಿಸುವುದು ನನಗೆ ಸರಿ ಎನಿಸಲಿಲ್ಲ. ಗಾಯವು ಇಷ್ಟು ಗಂಭೀರ ತಿರುವು ಪಡೆಯುತ್ತದೆ ಮತ್ತು ಗುಣವಾಗಲು ತುಂಬಾ ಸಮಯ ತೆಗೆದುಕೊಳ್ಳುತ್ತದೆ ಎಂದು ವೈದ್ಯರು ಸಹ ಊಹಿಸಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ಶಮಿ ಜಿಟಿಗಾಗಿ ಐಪಿಎಲ್ 2024 ಅನ್ನು ತಪ್ಪಿಸಿಕೊಂಡಿದ್ದರು ಮತ್ತು ಭಾರತದ ಟಿ 20 ವಿಶ್ವಕಪ್ ವಿಜೇತ ಅಭಿಯಾನದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.

Continue Reading
Advertisement
KHIR City project Launch on August 23 at bengaluru says Minister MB Patil
ಕರ್ನಾಟಕ45 seconds ago

KHIR City: ಬೆಂಗಳೂರಿನಲ್ಲಿ ದೇಶದಲ್ಲೇ ಮೊದಲ ‘ನಾಲೆಡ್ಜ್, ಹೆಲ್ತ್, ಇನ್ನೋವೇಶನ್ ಆಂಡ್ ರೀಸರ್ಚ್ ಸಿಟಿ’; ಆ.23ರಂದು ಉದ್ಘಾಟನೆ

IND vs SL ODI
ಪ್ರಮುಖ ಸುದ್ದಿ2 mins ago

IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

Indian Organ Donation Day program inauguration by Minister Dinesh Gundurao at Belagavi
ಕರ್ನಾಟಕ8 mins ago

Belagavi News: ಸ್ವಾತಂತ್ರ್ಯ ದಿ‌ನಾಚರಣೆಯಂದು ಅಂಗಾಂಗ ದಾನಿಗಳ ಕುಟುಂಬಗಳಿಗೆ ಗೌರವ; ದಿ‌ನೇಶ್ ಗುಂಡೂರಾವ್

Minister MB Patil statement in janandolana programme by congress party at ramanagara
ಕರ್ನಾಟಕ15 mins ago

MB Patil: ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ, ಜೆಡಿಎಸ್ ಷಡ್ಯಂತ್ರ; ಎಂ‌.ಬಿ. ಪಾಟೀಲ ಆರೋಪ

Wayanad Tragedy
Latest17 mins ago

Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

Yamini Krishnamurthy
ದೇಶ43 mins ago

Yamini Krishnamurthy: ಪದ್ಮವಿಭೂಷಣ ಪುರಸ್ಕೃತ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ಇನ್ನಿಲ್ಲ

Namma Metro
ಪ್ರಮುಖ ಸುದ್ದಿ45 mins ago

Namma Metro: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ; ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ

New National Cricket Academy
ಪ್ರಮುಖ ಸುದ್ದಿ1 hour ago

National Cricket Academy : ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ 45 ಪಿಚ್​ಗಳಿರುವ ಬೃಹತ್​​ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ

UPSC Aspirant
ದೇಶ1 hour ago

UPSC Aspirant: ‘ನಾನು ಸತ್ರೆ ಬ್ರೇಕಿಂಗ್‌ ನ್ಯೂಸ್‌ ಆಗತ್ತೆ’ ಎಂದು ಬರೆದಿಟ್ಟು ಯುಪಿಎಸ್‌ಸಿ ಅಭ್ಯರ್ಥಿ ಆತ್ಮಹತ್ಯೆ!

PSI Parshuram Death Case
ಕರ್ನಾಟಕ1 hour ago

PSI Parashuram Case: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ8 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌