Paris Olympics 2024: ವಿನೇಶ್‌ ಫೋಗಟ್‌ ಅನರ್ಹಗೊಂಡ ಬೆನ್ನಲ್ಲೇ ಮತ್ತೊಂದು ಆಘಾತ; ಕುಸ್ತಿಪಟು ಆಂಟಿಮ್ ಪಂಘಲ್ ಗಡೀಪಾರಿಗೆ ಆದೇಶ - Vistara News

ಕ್ರೀಡೆ

Paris Olympics 2024: ವಿನೇಶ್‌ ಫೋಗಟ್‌ ಅನರ್ಹಗೊಂಡ ಬೆನ್ನಲ್ಲೇ ಮತ್ತೊಂದು ಆಘಾತ; ಕುಸ್ತಿಪಟು ಆಂಟಿಮ್ ಪಂಘಲ್ ಗಡೀಪಾರಿಗೆ ಆದೇಶ

Paris Olympics 2024: ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ನ ಫೈನಲ್‌ ಪಂದ್ಯದಿಂದ ಅನರ್ಹಗೊಂಡ ಬೆನ್ನಲ್ಲೇ ಭಾರತಕ್ಕೆ ಇನ್ನೊಂದು ಆಘಾತ ಎದುರಾಗಿದೆ. ಮತ್ತೊಬ್ಬ ಪ್ರಮುಖ ಕುಸ್ತಿಪಟು ಆಂಟಿಮ್ ಪಂಘಲ್ ಅವರನ್ನು ಅಶಿಸ್ತಿನ ಕಾರಣದಿಂದಾಗಿ ಪ್ಯಾರಿಸ್‌ನಿಂದ ಗಡೀಪಾರು ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

VISTARANEWS.COM


on

Paris Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್‌: ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics 2024)ನಲ್ಲಿ ಭಾರತಕ್ಕೆ ಹಿನ್ನಡೆಯಾಗಿದೆ. ಮಹಿಳೆಯರ 50 ಕೆಜಿ ಕುಸ್ತಿ ಫೈನಲ್‌ ಪಂದ್ಯದಿಂದ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ಅವರು ಅನರ್ಹಗೊಂಡ ಬೆನ್ನಲ್ಲೇ ಇನ್ನೊಂದು ಆಘಾತ ಎದುರಾಗಿದೆ. ಭಾರತದ ಮತ್ತೊಬ್ಬ ಪ್ರಮುಖ ಕುಸ್ತಿಪಟು ಆಂಟಿಮ್ ಪಂಘಲ್ (Antim Panghal) ಅವರನ್ನು ಅಶಿಸ್ತಿನ ಕಾರಣದಿಂದಾಗಿ ಪ್ಯಾರಿಸ್‌ನಿಂದ ಗಡೀಪಾರು ಮಾಡಲು ನಿರ್ಧರಿಸಲಾಗಿದೆ. ಈ ಮಧ್ಯೆ ಬುಧವಾರ ಪ್ರಿ ಕ್ವಾರ್ಟರ್ ಫೈನಲ್​​ನಲ್ಲಿ ಆಂಟಿಮ್ ಟರ್ಕಿಯ ಯೆಟ್ಗಿಲ್ ಝೆನೆಪ್ ವಿರುದ್ಧ 0-10 ಅಂತರದಲ್ಲಿ ಸೋತಿದ್ದಾರೆ.

ʼʼಒಲಿಂಪಿಕ್ ಗೇಮ್ಸ್ ವಿಲೇಜ್‌ಗೆ ಪ್ರವೇಶಿಸಲು ಆಂಟಿಮ್ ಪಂಘಲ್‌ ಅವರ ಅಧಿಕೃತ ಕಾರ್ಡ್‌ ಅನ್ನು ಸಹೋದರಿ ನಿಶಾ ಬಳಸಿ ಸಿಕ್ಕಿಬಿದ್ದಿದ್ದಾರೆ. ಒಲಿಂಪಿಕ್ ಗೇಮ್ಸ್ ವಿಲೇಜ್‌ಗೆ ಆಟಗಾರರಲ್ಲದವರು ಪ್ರವೇಶಿಸುವಂತಿಲ್ಲ. ಹೀಗಾಗಿ ಆಂಟಿಮ್ ಪಂಘಲ್‌ ಅವರ ಕುಟುಂಬವನ್ನು ಗಡೀಪಾರು ಮಾಡಲಾಗುವುದುʼʼ ಎಂದು ಒಲಿಂಪಿಕ್ಸ್‌ ಸಮಿತಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಿ ಕ್ವಾರ್ಟರ್ ಫೈನಲ್​​ನಲ್ಲಿ ಸೋತ ನಂತರ ಆಂಟಿಮ್ ಪಂಘಲ್‌ ಗೇಮ್ಸ್ ವಿಲೇಜ್ ತೊರೆದು ತನ್ನ ತರಬೇತುದಾರ ಮತ್ತು ಸಹೋದರಿ ತಂಗಿದ್ದ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಅವರು ತನ್ನ ಅಧಿಕೃತ ಐಡಿ ಕಾರ್ಡ್‌ ಅನ್ನು ಸಹೋದರಿ ನಿಶಾ ಅವರಿಗೆ ನೀಡಿ ಗೇಮ್ಸ್ ವಿಲೇಜ್‌ಗೆ ತೆರಳಿ ಬ್ಯಾಗ್‌ ತರುವಂತೆ ಸೂಚಿಸಿದ್ದರು. ಅದರಂತೆ ಗೇಮ್ಸ್‌ ವಿಲೇಜ್‌ನಿಂದ ಹೊರ ಬರುತ್ತಿದ್ದಾಗ ನಿಶಾ ಭದ್ರತಾ ಸಿಬ್ಬಂದಿ ಕೈಗೆ ರೆಡ್‌ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದರು. ವಿಚಾರಣೆ ಬಳಿಕ ಅವರನ್ನು ಬಿಡುಗಡೆ ಮಾಡಲಾಯಿತು. ಜತೆಗೆ ಶಿಸ್ತು ಉಲ್ಲಂಘಿಸಿದ ಕಾರಣಕ್ಕೆ ಆಂಟಿಮ್ ಪಂಘಲ್‌ ಅವರ ಇಡೀ ಪರಿವಾರವನ್ನೇ ಗಡೀಪಾರು ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

“ಶಿಸ್ತು ಉಲ್ಲಂಘನೆಯನ್ನು ಫ್ರೆಂಚ್ ಅಧಿಕಾರಿಗಳು ಗಮನಕ್ಕೆ ತಂದ ಹಿನ್ನಲೆಯಲ್ಲಿ ಕುಸ್ತಿಪಟು ಆಂಟಿಮ್ ಮತ್ತು ಅವರ ಸಹಾಯಕ ಸಿಬ್ಬಂದಿಯನ್ನು ವಾಪಸ್ ಕಳುಹಿಸಲು ನಿರ್ಧರಿಸಲಾಗಿದೆ” ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ (Indian Olympic Association) ತಿಳಿಸಿದೆ.

ಸಹಾಯ ಸಿಬ್ಬಂದಿ ವಿರದ್ಧವೂ ಆರೋಪ

ಇದಲ್ಲದೆ ಆಂಟಿಮ್ ಅವರ ಸಹಾಯಕ ಸಿಬ್ಬಂದಿ ವಿಕಾಸ್ ಮತ್ತು ಭಗತ್ ಕುಡಿದು ಕ್ಯಾಬ್‌ನಲ್ಲಿ ಪ್ರಯಾಣಿಸಿದ್ದಾರೆ ಮತ್ತು ಬಾಡಿಗೆ ಹಣ ಕೊಡಲು ನಿರಾಕರಿದ್ದಾರೆ ಎಂದು ಚಾಲಕ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಈ ಎಲ್ಲ ಹಿನ್ನಲೆಯಲ್ಲಿ 19 ವರ್ಷದ ಅಂಡರ್ 20 ವಿಶ್ವ ಚಾಂಪಿಯನ್ ಆಂಟಿಮ್ ಅವರನ್ನೂ ಪೊಲೀಸರು ಕರೆಸಿಕೊಂಡು ಹೇಳಿಕೆ ದಾಖಲಿಸಿದ್ದಾರೆ. ಆದರೆ ಆಂಟಿಮ್ ಮತ್ತು ಅವರ ಸಿಬ್ಬಂದಿ ಈ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ. ಆಂಟಿಮ್‌ ಇದೇ ಮೊದಲ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ: Vinesh Phogat: ಬೆಳ್ಳಿ ಪದಕಕ್ಕಾಗಿ ಕೋರ್ಟ್‌ ಕದ ತಟ್ಟಿದ ವಿನೇಶ್‌ ಫೋಗಟ್‌; ಇಂದು ತೀರ್ಪು ಪ್ರಕಟ

ನಿವೃತ್ತಿ ಘೋಷಣೆ

ಒಲಿಂಪಿಕ್ಸ್‌ ಫೈನಲ್‌ನಲ್ಲಿ ಕಣಕ್ಕಿಳಿಯಲು ಅನರ್ಹಗೊಂಡ ಬೆನ್ನಲ್ಲೇ ವಿನೇಶ್‌ ಫೋಗಟ್‌ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. “ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Mary Kom: ಒಂದೇ ತಾಸಿನಲ್ಲಿ 2 ಕೆಜಿ ತೂಕ ಇಳಿಸಿ ಚಿನ್ನ ಗೆದ್ದಿದ್ದ ಬಾಕ್ಸರ್​ ಮೇರಿ ಕೋಮ್

Mary Kom: ಅಚ್ಚರಿ ಎಂದರೆ ಕೋಮ್​ ಒಂದು ಗಂಟೆಯ ಅವಧಿಯಲ್ಲಿ 2 ಕೆಜಿ ತೂಕ ಇಳಿಸಿ ಫೈನಲ್​ನಲ್ಲಿ ಚಿನ್ನದ ಪದಕ ಜಯಿಸಿದ್ದರು. ತೂಕ ಇಳಿಸುವ ಸಲುವಾಗಿ ಸತತ 1 ಗಂಟೆಗಳ ಕಾಲ ಅವರು ಸ್ಕಿಪ್ಪಿಂಗ್ ನಡೆಸಿದ್ದಾಗಿ ​ ಹೇಳಿಕೊಂಡಿದ್ದಾರೆ.

VISTARANEWS.COM


on

Mary Kom
Koo

ನವದೆಹಲಿ: ದೇಹತೂಕ ಕಾಪಾಡಿಕೊಳ್ಳಲು ವಿಫಲವಾದ ಹಿನ್ನಲೆಯಲ್ಲಿ ಒಲಿಂಪಿಕ್ಸ್ ಕೂಟದಿಂದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(vinesh phogat) ಅನರ್ಹಗೊಂಡಿರುವ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದಿದೆ. ಅಗತ್ಯಕ್ಕಿಂತ 100 ಗ್ರಾಂ ಹೆಚ್ಚು ತೂಕ ಹೊಂದಿದ್ದ ಕಾರಣ ಅವರನ್ನು ಫೈನಲ್ ಸ್ಪರ್ಧೆಯಲ್ಲಿ ಆಡದಂತೆ ಅನರ್ಹಗೊಳಿಸಲಾಗಿತ್ತು. ಆರು ಬಾರಿಯ ವಿಶ್ವ ಚಾಂಪಿಯನ್ ಮತ್ತು 2012 ರ ಒಲಿಂಪಿಕ್ ಕಂಚಿನ ಪದಕ ವಿಜೇತೆ, ಭಾರತದ ಖ್ಯಾತ ಬಾಕ್ಸಿಂಗ್​ ತಾರೆ ಮೇರಿ ಕೋಮ್(Mary Kom) ಕೂಡ ಹಿಂದೊಮ್ಮೆ ತೂಕದ ಸಮಸ್ಯೆಯಿಂದ ಅನರ್ಹಗೊಳ್ಳುವ ಭೀತಿಯನ್ನು ಎದುರಿಸಿದ್ದರಂತೆ. ಈ ವಿಚಾರವನ್ನು ಅವರೇ ಈಗ ಬಹಿರಂಗಪಡಿಸಿದ್ದಾರೆ.

ವಿನೇಶ್ ಫೋಗಟ್ ಘಟನೆಯ ಬಳಿಕ ಸಂದರ್ಶನವೊಂದರಲ್ಲಿ ಮಾತನಾಡಿದ ಖ್ಯಾತ ಮಹಿಳಾ ಬಾಕ್ಸರ್ ಮೇರಿ ಕೋಮ್, 2018ರಲ್ಲಿ ಪೊಲೆಂಡ್‌ನ ಗ್ಲಿವೈಸ್‌ನಲ್ಲಿ ನಡೆದಿದ್ದ ಮಹಿಳೆಯರ 13ನೇ ಸಿಲೆಸಿಯನ್ ಓಪನ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ನನಗೆ ತೂಕದ ಸಮಸ್ಯೆ ಎದುರಾಗಿತ್ತು. ನಾನು ಸ್ಪರ್ಧಿಸುವ ವಿಭಾಗದಲ್ಲಿ 48 ಕೆಜಿ ತೂಕದ ಮಿತಿ ಇತ್ತು. ಅದಕ್ಕಿಂತ ಒಂದೆರಡು ಕಿಲೋಗ್ರಾಂಗಳಷ್ಟು ಹೆಚ್ಚಿನ ತೂಕ ಹೊಂದಿದ್ದೆ. ಹೀಗಾಗಿ ಅನರ್ಹದ ಭೀತಿ ಎದುರಿಸಿದ್ದೆ. ಆದರೆ, ನಾನು ಸತತವಾಗಿ ಒಂದು ಗಂಟೆ ಸ್ಕಿಪ್ಪಿಂಗ್ ಮಾಡಿದ ನಂತರ ತೂಕವನ್ನು ಇಳಿಸಲು ಸಾಧ್ಯವಾಯಿತು” ಎಂದು ಮೇರಿ ಕೋಮ್‌ ಅಂದಿನ ಘಟನೆಯನ್ನು ಮೆಲುಕು ಹಾಕಿದ್ದಾರೆ.

ಇದನ್ನೂ ಓದಿ Paris Olympics: ಶ್ರೀಜೇಶ್​ಗೆ ಸಿಗಲಿ ಗೆಲುವಿನ ವಿದಾಯ; ಇಂದು ಭಾರತ-ಸ್ಪೇನ್​ ಕಂಚಿನ ಕಾದಾಟ

ಚಿನ್ನ ಗೆದ್ದಿದ್ದ ಕೋಮ್​


ಅಚ್ಚರಿ ಎಂದರೆ ಕೋಮ್​ ಒಂದು ಗಂಟೆಯ ಅವಧಿಯಲ್ಲಿ 2 ಕೆಜಿ ತೂಕ ಇಳಿಸಿ ಫೈನಲ್​ನಲ್ಲಿ ಚಿನ್ನದ ಪದಕ ಜಯಿಸಿದ್ದರು. ತೂಕ ಇಳಿಸುವ ಸಲುವಾಗಿ ಸತತ 1 ಗಂಟೆಗಳ ಕಾಲ ಅವರು ಸ್ಕಿಪ್ಪಿಂಗ್ ನಡೆಸಿದ್ದಾಗಿ ​ ಹೇಳಿಕೊಂಡಿದ್ದಾರೆ.

ಬೆಳ್ಳಿ ಪದಕ್ಕಕೆ ಮನವಿ ಮಾಡಿದ ವಿನೇಶ್​


ವಿನೇಶ್ ಫೋಗಟ್ ತಮ್ಮನ್ನು ಅನರ್ಹ ಮಾಡಿದ ನಿರ್ಧಾರದ ವಿರುದ್ಧ ಕೋರ್ಟ್ ಆಫ್ ಆರ್ಬಿಟ್ರೇಷನ್ ಫಾರ್ ಸ್ಪೋರ್ಟ್ಸ್ (ಸಿಎಎಸ್)ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜಂಟಿ ಬಳ್ಳಿಪದಕವನ್ನು ನೀಡುವಂತೆ ಕೋರಿದ್ದಾರೆ. ಗುರುವಾರ ಈ ಮೇಲ್ಮನವಿ ಬಗ್ಗೆ ಮಧ್ಯಂತರ ತೀರ್ಪು ನೀಡುವ ನಿರೀಕ್ಷೆ ಇದ್ದು, ಮೂಲ ನಿರ್ಧಾರವನ್ನು ಬದಲಿಸುವ ಸಾಧ್ಯತೆಯೂ ಇದೆ. ಒಲಿಂಪಿಕ್ ಕೂಟದ ಕಟ್ಟುನಿಟ್ಟಿನ ಸಂರಚನೆ ಕಾರಣದಿಂದಾಗಿ ಚಿನ್ನದ ಪದಕಕ್ಕೆ ಸ್ಪರ್ಧಿಸುವ ಅವಕಾಶವನ್ನು ನೀಡುವ ಸಾಧ್ಯತೆ ಕಡಿಮೆ. ಏಕೆಂದರೆ ಚಿನ್ನದ ಪದಕಕ್ಕಾಗಿ ಇರುವ ಸ್ಪರ್ಧೆಯ ಮರು ವೇಳಾಪಟ್ಟಿ ಸಿದ್ಧಪಡಿಸುವುದು ಸವಾಲುದಾಯಕ. ಆದರೆ ಅಧಿಕೃತ ಪ್ರಸಾರಸಂಸ್ಥೆಯಾಗಿರುವ ಜಿಯೊಸಿನಿಮಾ ಪ್ರಕಾರ, ವಿನೇಶ್ ಜಂಟಿ ಬೆಳ್ಳಿಪದಕಕ್ಕಾಗಿ ಮನವಿ ಸಲ್ಲಿಸಿದ್ದಾರೆ.

ಸಿಎಎಸ್ ಎನ್ನುವುದು 1984ರಲ್ಲಿ ಸ್ಥಾಪಿತವಾದ ಸ್ವತಂತ್ರ ಸಂಸ್ಥೆಯಾಗಿದ್ದು, ಕ್ರೀಡಾಸಂಬಂಧಿ ವ್ಯಾಜ್ಯಗಳನ್ನು ಮಧ್ಯಸ್ಥಿಕೆ ಮೂಲಕ ಬಗೆಹರಿಸುತ್ತದೆ. ಸ್ವಿಡ್ಜರ್ಲೆಂಡ್ ನ ಲೌಸನ್ ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಿಎಎಸ್, ನ್ಯೂಯಾರ್ಕ್ ಹಾಗೂ ಸಿಡ್ನಿಯಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಹೊಂದಿದ್ದು, ಒಲಿಂಪಿಕ್ ಆತಿಥ್ಯ ವಹಿಸುವ ದೇಶಗಳಲ್ಲಿ ತಾತ್ಕಾಲಿಕ ಕೋರ್ಟ್ ಗಳನ್ನು ಹೊಂದಿರುತ್ತದೆ.

Continue Reading

ಕ್ರೀಡೆ

Paris Olympics: ಶ್ರೀಜೇಶ್​ಗೆ ಸಿಗಲಿ ಗೆಲುವಿನ ವಿದಾಯ; ಇಂದು ಭಾರತ-ಸ್ಪೇನ್​ ಕಂಚಿನ ಕಾದಾಟ

Paris Olympics: ಸ್ಪೇನ್‌ ವಿರುದ್ಧ ಭಾರತದ ದಾಖಲೆ ಉತ್ತಮವಾಗಿದೆ. ಒಲಿಂಪಿಕ್ಸ್​ನಲ್ಲಿ ಇತ್ತಂಡಗಳು ಈವರೆಗೆ 10 ಸಲ ಮುಖಾಮುಖಿಯಾಗಿವೆ. ಭಾರತ ಏಳನ್ನು ಗೆದ್ದರೆ, ಸ್ಪೇನ್‌ ಕೇವಲ ಒಂದು ಗೆಲುವು ಮಾತ್ರ ಸಾಧಿಸಿದೆ. ಉಳಿದೆರಡು ಪಂದ್ಯಗಳು ಡ್ರಾಗೊಂಡಿವೆ

VISTARANEWS.COM


on

Paris Olympics
Koo

ಪ್ಯಾರಿಸ್​:  44 ವರ್ಷಗಳ ಬಳಿಕ ಒಲಿಂಪಿಕ್ಸ್(Paris Olympics)​ ಹಾಕಿಯಲ್ಲಿ ಫೈನಲ್​ ಪ್ರವೇಶಿಸುವ ಅವಕಾಶ ಕಳೆದುಕೊಂಡ ಭಾರತ ಪುರುಷರ ಹಾಕಿ ತಂಡ ಇಂದು ನಡೆಯುವ ಕಂಚಿನ ಪದಕದ ಸ್ಪರ್ಧೆಯಲ್ಲಿ ಸ್ಪೇನ್(india vs spain)​ ವಿರುದ್ಧ ಸೆಣಸಾಡಲಿದೆ. ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಭಾರತ ಕಂಚಿನ ಪದಕ ಗೆದ್ದು 41 ವರ್ಷಗಳ ಬಳಿಕ ಪದಕದ ಬರ ನೀಗಿಸಿತ್ತು. ಈ ಬಾರಿಯೂ ಕಂಚಿಗೆ ತೃಪ್ತಿಪಡಬೇಕಾದ ಸ್ಥಿತಿ ಎದುರಾಗಿದೆ. ಅದು ಕೂಡ ಇಂದು ಗೆದ್ದರೆ ಮಾತ್ರ.

ಈ ಬಾರಿಯ ಕೂಟದಲ್ಲಿ ಭಾರತ ಕ್ವಾರ್ಟರ್​ ಫೈನಲ್​ ತನಕ ತೋರಿದ್ದ ಪ್ರದರ್ಶನವನ್ನು ಕಂಡಾಗ ಭಾರತ ನಿಶ್ಚಿತವಾಗಿ ಚಿನ್ನ ಗೆಲ್ಲಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಅಲ್ಲದೆ ಕಳೆದ ಬಾರಿಯ ಚಾಂಪಿಯನ್​ ಮತ್ತು ರನ್ನರ್​ ಅಪ್​ಗಳು ಕೂಡ ಕ್ವಾರ್ಟರ್​ ಫೈನಲ್​ನಲ್ಲಿಯೇ ಮುಗ್ಗರಿಸಿತ್ತು. ಹೀಗಾಗಿ ಭಾರತಕ್ಕೆ ಚಿನ್ನ ಗೆಲ್ಲುವ ಉತ್ತಮ ಅವಕಾಶ ಕೂಡ ಇತ್ತು. ಆದರೆ, ಸೆಮಿಫೈನಲ್​ನಲ್ಲಿ ತನಗಿಂತ ಬಲಿಷ್ಟವಲ್ಲದ ಜರ್ಮನಿ ವಿರುದ್ಧ ಹಲವು ತಪ್ಪುಗಳನ್ನು ಮಾಡಿದ ಕಾರಣ 3-2 ಗೋಲುಗಳ ಅಂತರದಿಂದ ಆಘಾತಕಾರಿ ಸೋಲು ಕಂಡು ಫೈನಲ್​ ಪ್ರವೇಶಿಸುವ ಅವಕಾಶ ಕಳೆದುಕೊಂಡಿತು.

ಟೂರ್ನಿಯುದ್ದಕ್ಕೂ ಹಿಮಾಲಯ ಪರ್ವತದಂತೆ ತೆಡೆಗೋಡೆಯಾಗಿ ನಿಂತು ಹಲವು ಗೋಲುಗಳನ್ನು ತಡೆದಿದ್ದ ಗೋಲ್​ ಕೀಪರ್​ ಪಿ.ಆರ್​. ಶ್ರೀಜೇಶ್​ ನಿರ್ಣಾಯಕ ಸೆಮಿ ಫೈನಲ್​ನಲ್ಲಿ ಇದೇ ಪ್ರದರ್ಶನ ತೋರುವಲ್ಲಿ ವಿಫಲರಾದರು. ಜತೆಗೆ ಅಮಿತ್‌ ರೋಹಿದಾಸ್‌ ಅವರಿಗೆ ಒಂದು ಪಂದ್ಯದ ಬ್ಯಾನ್​ ಶಿಕ್ಷೆ, ಒಟ್ಟಾರೆ ಭಾರತಕ್ಕೆ ಅದೃಷ್ಟ ಕೈಕೊಟ್ಟಿತು. ಇಂದು ನಡೆಯುವ ಕಂಚಿನ ಸ್ಪರ್ಧೆಯಲ್ಲಾದರೂ ಉತ್ತಮವಾಗಿ ಆಡಿ ಪದಕ ಗೆಲ್ಲಲಿ ಎಂಬುದು ಭಾರತದ ಕ್ರೀಡಾಪ್ರೇಮಿಗಳ ಪ್ರಾರ್ಥನೆ.

ಇದನ್ನೂ ಓದಿ Paris Olympics 2024: ವಿನೇಶ್‌ ಫೋಗಟ್‌ ಅನರ್ಹಗೊಂಡ ಬೆನ್ನಲ್ಲೇ ಮತ್ತೊಂದು ಆಘಾತ; ಕುಸ್ತಿಪಟು ಆಂಟಿಮ್ ಪಂಘಲ್ ಗಡೀಪಾರಿಗೆ ಆದೇಶ

ಸ್ಪೇನ್‌ ವಿರುದ್ಧ ಭಾರತದ ದಾಖಲೆ ಉತ್ತಮವಾಗಿದೆ. ಒಲಿಂಪಿಕ್ಸ್​ನಲ್ಲಿ ಇತ್ತಂಡಗಳು ಈವರೆಗೆ 10 ಸಲ ಮುಖಾಮುಖಿಯಾಗಿವೆ. ಭಾರತ ಏಳನ್ನು ಗೆದ್ದರೆ, ಸ್ಪೇನ್‌ ಕೇವಲ ಒಂದು ಗೆಲುವು ಮಾತ್ರ ಸಾಧಿಸಿದೆ. ಉಳಿದೆರಡು ಪಂದ್ಯಗಳು ಡ್ರಾಗೊಂಡಿವೆ. ಬಲಾಬಲದ ಲೆಕ್ಕಾಚಾರದಲ್ಲಿ ಭಾರತ ಮುಂದಿದ್ದರೂ ಕೂಡ ಎದುರಾಳಿಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು.

ಶ್ರೀಜೇಶ್​ಗೆ ಕೊನೆಯ ಪಂದ್ಯ


ಭಾರತೀಯ ಹಾಕಿ ತಂಡದ ಹಿರಿಯ ಆಟಗಾರ, ಗೋಲ್ ಕೀಪರ್ ಪಿಆರ್ ಶ್ರೀಜೇಶ್ (PR Sreejesh) ಅವರಿಗೆ ಇದು ಕೊನೆಯ ಅಂತಾರಾಷ್ಟ್ರೀಯ ಹಾಕಿ (International Hockey) ಪಂದ್ಯವಾಗಿದೆ. ಒಲಿಂಪಿಕ್ಸ್​ ಆರಂಭಕ್ಕೂ ಮುನ್ನವೇ ಅವರು ತಮ್ಮ ನಿವೃತ್ತಿ ಪ್ರಕಟಿಸಿದ್ದರು. ನಾಲ್ಕನೇ ಒಲಿಂಪಿಕ್ಸ್​ ಆಡುತ್ತಿರುವ ಅವರಿಗೆ ಗೆಲುವಿನ ವಿದಾಯ ಸಿಗುವಂತಾಗಲಿ.

 2006ರಲ್ಲಿ ಭಾರತೀಯ ಹಾಕಿ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಕಳೆದ ಟೊಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಕಂಚಿನ ಪದಕ ಗೆದ್ದುಕೊಂಡಿತ್ತು. ಭಾರತ ತಂಡದ ಈ ಪದಕ ಗೆಲುವಿನಲ್ಲಿ ಶ್ರೀಜೇಶ್ ಪ್ರಮುಖ ಪಾತ್ರವಹಿಸಿದ್ದರು. ವಿಶ್ವದ ಅತ್ಯುತ್ತಮ ಗೋಲ್ ಕೀಪರ್ ಎಂಬ ಪುರಸ್ಕಾರವೂ ಸಂದಿತ್ತು.

Continue Reading

ಸಿನಿಮಾ

Kangana Ranaut: ವಿನೇಶ್‌ಗೆ ಅಭಿನಂದಿಸಿ ವ್ಯಂಗ್ಯದ ಪೋಸ್ಟ್ ಮಾಡಿದ ಬೆನ್ನಲ್ಲೇ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ ಎಂದ ಕಂಗನಾ ರಣಾವತ್‌!

Kangana Ranaut: ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಿದ್ದು, ಕೋಟ್ಯಂತರ ಭಾರತೀಯರ ಚಿನ್ನದ ಪದಕದ ಕನಸಿಗೆ ಕೊಳ್ಳಿ ಇಟ್ಟಂತಾಗಿದೆ.  ಇದೀಗ ಈ ಬಗ್ಗೆ ಕಂಗನಾ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Kangana Reacts to Vinesh Phogat's Olympics Disqualification
Koo

ಬೆಂಗಳೂರು: ಪ್ಯಾರಿಸ್ 2024ರ ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಿಂದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ನಂತರ ನಟಿ-ರಾಜಕಾರಣಿ ಕಂಗನಾ ರಣಾವತ್‌ (Kangana Ranaut) ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಿದ್ದು, ಕೋಟ್ಯಂತರ ಭಾರತೀಯರ ಚಿನ್ನದ ಪದಕದ ಕನಸಿಗೆ ಕೊಳ್ಳಿ ಇಟ್ಟಂತಾಗಿದೆ.  ಇದೀಗ ಈ ಬಗ್ಗೆ ಕಂಗನಾ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಈ ಸುದ್ದಿಗೆ ಪ್ರತಿಕ್ರಿಯಿಸಿದ ಕಂಗನಾ ರಣಾವತ್‌ ಇನ್‌ಸ್ಟಾದಲ್ಲಿ ʻʻಸಿಂಹಿಣಿʼʼಎಂದು ಕರೆದಿದ್ದಾರೆ. ʻʻಅಳಬೇಡ, ವಿನೇಶ್, ಇಡೀ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ” ಎಂದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ವಿನೇಶ್‌ರನ್ನು ಸಾಂತ್ವನಗೊಳಿಸುವ ಭಾರತದ ನಕ್ಷೆಯಗ್ರಾಫಿಕ್ ಪೋಸ್ಟ್‌ ಶೇರ್‌ ಮಾಡಿಕೊಂಡಿದ್ದಾರೆ ಕಂಗನಾ.

ಇದಕ್ಕೂ ಮೊದಲು ಕಂಗನಾ ಇನ್‌ಸ್ಟಾ ಸ್ಟೋರಿಯಲ್ಲಿ, ‘ಭಾರತಕ್ಕೆ ಮೊದಲ ಚಿನ್ನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತಿದ್ದೇನೆ. ವಿನೇಶ್ ಫೋಗಟ್ ಒಮ್ಮೆ ಚಳವಳಿಯಲ್ಲಿ ಭಾಗವಹಿಸಿದ್ದರು, ಅದರಲ್ಲಿ ಅವರು ‘ಮೋದಿ ನಿಮ್ಮ ಸಮಾಧಿಯನ್ನು ಅಗೆಯುತ್ತಾರೆ’ ಎಂದು ಹೇಳಿದ್ದರು. ಇದರ ಹೊರತಾಗಿಯೂ ದೇಶವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದೆ. ಅವರು ಅತ್ಯುತ್ತಮ ತರಬೇತಿ, ತರಬೇತುದಾರರು ಮತ್ತು ಸೌಲಭ್ಯಗಳನ್ನು ಪಡೆದರು. ಇದು ಪ್ರಜಾಪ್ರಭುತ್ವದ ಸೌಂದರ್ಯ ಮತ್ತು ಉತ್ತಮ ನಾಯಕ’ ಎಂದು ಹೇಳಿದ್ದರು. ಈ ಹೇಳಿಕೆಗೆ ಸಖತ್‌ ಚರ್ಚೆಯೂ ಆಗಿತ್ತು.

ಇದನ್ನೂ ಓದಿ: Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

ಕಳೆದ ವರ್ಷ, 29 ವರ್ಷದ ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ, ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಪ್ರಕರಣಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸದೇ ಇದ್ದಾಗ ನಿರಂತರವಾಗಿ ಪ್ರತಿಭಟನೆಗಳನ್ನು ಮುನ್ನಡೆಸುವಾಗ ಅವರು ದೀರ್ಘಕಾಲದವರೆಗೆ ಕುಸ್ತಿಯಿಂದ ದೂರವಿದ್ದರು.

ಬೆಳ್ಳಿ ಪದಕಕ್ಕಾಗಿ ಕೋರ್ಟ್‌ ಕದ ತಟ್ಟಿದ ವಿನೇಶ್‌ ಫೋಗಟ್‌

ಜಂಟಿಯಾಗಿ ಬೆಳ್ಳಿ ಪದಕ ಹಸ್ತಾಂತರಿಸುವಂತೆ ಕೋರಿ ವಿನೇಶ್‌ ಫೋಗಟ್‌ ಮನವಿ ಸಲ್ಲಿಸಿದ್ದಾರೆ. ಈ ವಿಚಾರದಲ್ಲಿ ಕೋರ್ಟ್‌ (CAS) ತನ್ನ ಅಂತಿಮ ತೀರ್ಪನ್ನು ಇಂದು (ಆಗಸ್ಟ್‌ 8) ಬೆಳಿಗ್ಗೆ 11:30ಕ್ಕೆ ಪ್ರಕಟಿಸಲಿದೆ. ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಫೋಗಟ್ ಪರವಾಗಿ ತೀರ್ಪು ನೀಡಿದರೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ (International Olympic Committee) ಬೆಳ್ಳಿ ಪದಕ ನೀಡಬೇಕಾಗುತ್ತದೆ. ಹೀಗಾಗಿ ತೀರ್ಪಿಗಾಗಿ ಭಾರತೀಯರು ನಿರೀಕ್ಷೆಯೆಂದ ಕಾದು ಕುಳಿತ್ತಿದ್ದಾರೆ. ಯಾವುದೇ ಕ್ರೀಡಾ ಕೂಟದ ವೇಳೆ ಉದ್ಭವಿಸಬಹುದಾದ ವಿವಾದಗಳನ್ನು ಪರಿಹರಿಸಲು ಅಂತಾರಾಷ್ಟ್ರೀಯ ಸಂಸ್ಥೆ ಸಿಎಎಸ್‌ಯನ್ನು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಸ್ಥಾಪಿಸಲಾಗಿದೆ.

ನಿವೃತ್ತಿ ಘೋಷಣೆ

ಇದೀಗ 29 ವರ್ಷದ ವಿನೇಶ್‌ ಫೋಗಟ್‌ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. “ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

Continue Reading

ಕ್ರೀಡೆ

Manu Bhaker: ಮೋದಿಗಿಂತ ಮೊದಲು ಸೋನಿಯಾ ಗಾಂಧಿ ಭೇಟಿಯಾದ ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಮನು ಭಾಕರ್

Manu Bhaker: ಒಲಿಂಪಿಕ್ಸ್‌ನಲ್ಲಿ ದೇಶದ ಗೌರವವನ್ನು ಎತ್ತಿಹಿಡಿದ ಶೂಟರ್‌ ಮನು ಭಾಕರ್‌ ಅವರಿಗೆ ಒಲಿಂಪಿಕ್ಸ್‌ ಸಮಾರೋಪ ಸಮಾರಂಭದಲ್ಲಿ ಭಾರತದ ಮಹಿಳಾ ಧ್ವಜಧಾರಿಯ ಗೌರವ ಲಭಿಸಿದೆ. ಸಮಾರೋಪ ಸಮಾರಂಭ ಭಾನುವಾರ ರಾತ್ರಿ ನಡೆಯಲಿದೆ. ತವರಿಗೆ ಮರಳಿರುವ ಭಾಕರ್ ಶನಿವಾರ​ ಮತ್ತೆ ಪ್ಯಾರಿಸ್​ಗೆ ತೆರಳಲಿದ್ದಾರೆ.

VISTARANEWS.COM


on

Manu Bhaker
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್(paris olympics)​ ಅವಳಿ ಕಂಚಿನ ಪದಕ ವಿಜೇತೆ, ಶೂಟರ್​ ಮನು ಭಾಕರ್(Manu Bhaker)​ ಬುಧವಾರ ತವರಿಗೆ ಮರಳಿದ್ದರು. ನವದೆಹಲಿಗೆ ಬಂದಿಳಿದಿದ್ದ ಮನುಗೆ ಹಾರ ಮತ್ತು ಗುಲಾಬಿ ದಳಗಳ ಅಭಿಷೇಕದೊಂದಿಗೆ ಕ್ರೀಡಾಪ್ರೇಮಿಗಳು ಭರ್ಜರಿಯಾಗಿ ಸ್ವಾಗತ ಕೋರಿದ್ದರು. ಬಳಿಕ ತೆರೆದ ಜೀಪ್​ನಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಲಾಗಿತ್ತು. ಈ ಎಲ್ಲ ಕಾರ್ಯಕ್ರಮ ಮುಗಿದ ಬಳಿಕ ಮನು ಭಾಕರ್​ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೊ ವೈರಲ್​ ಆಗಿದೆ. ಜತೆಗೆ ಚರ್ಚೆಗೂ ಕಾರಣವಾಗಿದೆ.

ಮನು ಭಾಕರ್ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಫೋಟೊ ಕಂಡ ಕೆಲ ನೆಟ್ಟಿಗರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಮುನ್ನ ಸೋನಿಯಾ ಗಾಂಧಿಯನ್ನು ಭೇಟಿಯಾದದ್ದು ಏಕೆ? ಎಂದು ಪ್ರಶ್ನಿಸಿದರೆ. ಇನ್ನು ಕೆಲವರು ಪ್ರಧಾನಿಯನ್ನೇ ಮೊದಲು ಭೇಟಿ ಮಾಡಬೇಕು ಎಂದು ಈ ದೇಶದ ಸಂವಿಧಾನದ ನಿಯಮವೇ? ಎಂದು ತಿರುಗೇಟು ಕೊಟ್ಟಿದ್ದಾರೆ. ಒಟ್ಟಾರೆ ಇಬರಿಬ್ಬರ ಭೇಟಿಯ ಫೋಟೊ ಎಡ ಪಂಥಿಯರ ಮತ್ತು ಬಲ ಪಂಥಿಯರ ಅನಗತ್ಯ ಚರ್ಚೆಗೆ ಆಹಾರವಾದಂತಿದೆ.

ಇದನ್ನೂ ಓದಿ John Abraham: ಮನು ಭಾಕರ್‌ ಗೆದ್ದ ಒಲಿಂಪಿಕ್ಸ್‌ ಪದಕ ಮುಟ್ಟಿದ ಜಾನ್‌ ಅಬ್ರಾಹಂ; ನೆಟ್ಟಿಗರಿಂದ ನಟನಿಗೆ ಕ್ಲಾಸ್‌ ಏಕೆ?

22 ವರ್ಷದ ಮನು ಭಾಕರ್ ಮಹಿಳೆಯರ ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮತ್ತು ಸರಬ್ಜೋತ್ ಸಿಂಗ್ ಜತೆಗೂಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲೂ ಕಂಚಿನ ಪದಕ ಜಯಿಸುವ ಮೂಲಕ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲೇ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎನ್ನುವ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು. 25 ಮೀ. ಪಿಸ್ತೂಲ್​ ಶೂಟಿಂಗ್​ ಫೈನಲ್​ ಪಂದ್ಯದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಹ್ಯಾಟ್ರಿಕ್​ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾಗಿದ್ದರು.

ಮನು ಭಾಕರ್‌ ಗೆದ್ದ ಪದಕ ಮುಟ್ಟಿದ ಜಾನ್‌ ಅಬ್ರಾಹಂ; ನೆಟ್ಟಿಗರಿಂದ ನಟನಿಗೆ ಕ್ಲಾಸ್‌


ಬಾಲಿವುಡ್‌ ನಟ ಜಾನ್‌ ಅಬ್ರಾಹಂ ಅವರು ಮನು ಭಾಕರ್‌ ಅವರನ್ನು ಭೇಟಿಯಾಗಿದ್ದು, ಅವರ ಪದಕಗಳನ್ನು ನಟ ಮುಟ್ಟಿದ್ದು ಈಗ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಮನು ಭಾಕರ್‌ ಜತೆಗಿನ ಫೋಟೊವನ್ನು ಜಾನ್‌ ಅಬ್ರಾಹಂ ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅವರು ಮನು ಭಾಕರ್‌ ಅವರ ಒಂದು ಪದಕವನ್ನು ಕೈಯಲ್ಲಿ ಹಿಡಿದಿರುವುದು ಈಗ ಜನರ ಆಕ್ರೋಶಕ್ಕೆ ಕಾರಣವಾಗಿದೆ. “ಒಲಿಂಪಿಕ್ಸ್‌ನಲ್ಲಿ ಮನು ಭಾಕರ್‌ ಅವರು ಪದಕಗಳನ್ನು ಗೆದ್ದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಅವರು ಗೆದ್ದಿರುವ ಪದಕಗಳನ್ನು ನೀವೇ ಗೆದ್ದಿರುವಂತೆ ಹಿಡಿದುಕೊಂಡು ಪೋಸ್‌ ನೀಡುವುದು ಸಮಂಜಸವಲ್ಲ” ಎಂದು ಜನ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ದೇಶದ ಗೌರವವನ್ನು ಎತ್ತಿಹಿಡಿದ ಶೂಟರ್‌ ಮನು ಭಾಕರ್‌ ಅವರಿಗೆ ಒಲಿಂಪಿಕ್ಸ್‌ ಸಮಾರೋಪ ಸಮಾರಂಭದಲ್ಲಿ ಭಾರತದ ಮಹಿಳಾ ಧ್ವಜಧಾರಿಯ ಗೌರವ ಲಭಿಸಿದೆ. ಸಮಾರೋಪ ಸಮಾರಂಭ ಭಾನುವಾರ ರಾತ್ರಿ ನಡೆಯಲಿದೆ. ತವರಿಗೆ ಮರಳಿರುವ ಭಾಕರ್ ಶನಿವಾರ​ ಮತ್ತೆ ಪ್ಯಾರಿಸ್​ಗೆ ತೆರಳಲಿದ್ದಾರೆ.

Continue Reading
Advertisement
Vinay Rajkumar pepe preset Vinay Rajkumar Shreelesh S Nair
ಸ್ಯಾಂಡಲ್ ವುಡ್2 mins ago

Vinay Rajkumar: ʻಪೆಪೆ’ ಸಿನಿಮಾದಲ್ಲಿ ಜೇನು ಕುರುಬ ಸಾಂಗ್: ಚಿತ್ರತಂಡದ ವಿಭಿನ್ನ ಪ್ರಯತ್ನಕ್ಕೆ ಪ್ರೇಕ್ಷಕರ ಜೈಕಾರ!

Mary Kom
ಕ್ರೀಡೆ5 mins ago

Mary Kom: ಒಂದೇ ತಾಸಿನಲ್ಲಿ 2 ಕೆಜಿ ತೂಕ ಇಳಿಸಿ ಚಿನ್ನ ಗೆದ್ದಿದ್ದ ಬಾಕ್ಸರ್​ ಮೇರಿ ಕೋಮ್

Repo Rate
ವಾಣಿಜ್ಯ9 mins ago

Repo Rate: ಗೃಹಸಾಲದ ಇಎಂಐ ಭಾರ ಇಳಿಕೆ ಇಲ್ಲ; ರೆಪೋ ದರ ಯಥಾಸ್ಥಿತಿ

Naga Chaitanya Nagarjuna Called Sobhita Dhulipala Hot
ಟಾಲಿವುಡ್15 mins ago

Naga Chaitanya: ನಾನು ಹೀಗೆ ಹೇಳಬಾರದು..ಆದರೂ ಶೋಭಿತಾ ತುಂಬಾ ಹಾಟ್‌ ಎಂದಿದ್ದ ನಾಗಾರ್ಜುನ; ವಿಡಿಯೊ ವೈರಲ್‌!

Henna Jihad
ದೇಶ27 mins ago

Henna Jihad: ಹಿಂದೂ ಮಹಿಳೆಯರಿಗೆ ಮುಸ್ಲಿಮರು ಮೆಹಂದಿ ಹಚ್ಚಿದರೆ ಹುಷಾರ್‌! ಭುಗಿಲೆದ್ದ ಹೆನ್ನಾ ಜಿಹಾದ್‌ ವಿವಾದ

lalbagh flower show 2024
ಪ್ರಮುಖ ಸುದ್ದಿ31 mins ago

Lalbagh Flower Show: ಸಸ್ಯಕಾಶಿಯಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ; ಏನೇನಿದೆ, ಪಾರ್ಕಿಂಗ್‌ ಎಲ್ಲಿ, ಟಿಕೆಟ್‌ ದರ ಎಷ್ಟು?

Gold Rate Today
ಚಿನ್ನದ ದರ37 mins ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬಂಗಾರ ಇಂದು ಇಷ್ಟು ಅಗ್ಗ

ಉದ್ಯೋಗ42 mins ago

Banking Recruitment 2024: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 896 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ; ಆಯ್ಕೆ ಪ್ರಕ್ರಿಯೆ ಹೇಗೆ? Complete Details

Actor Yash journey begins Yash Gave Update On Toxic Movie
ಸ್ಯಾಂಡಲ್ ವುಡ್44 mins ago

Actor Yash:  ʻಟಾಕ್ಸಿಕ್‌ʼ ಪಯಣ ಶುರುವಾಗಿದೆ ಎಂದು ಗುಡ್‌ ನ್ಯೂಸ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌!

head master self harming
ಕ್ರೈಂ53 mins ago

Self Harming: ಇಬ್ಬರು ಇನ್‌ಸ್ಪೆಕ್ಟರ್‌ಗಳ ಬಳಿಕ ಹೆಡ್‌ಮಾಸ್ಟರ್‌ ಶಾಲೆಯಲ್ಲೇ ಆತ್ಮಹತ್ಯೆ; ಏನಾಗ್ತಿದೆ ರಾಜ್ಯದಲ್ಲಿ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ7 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ7 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ7 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌