Paris Olympics 2024: ಒಲಿಂಪಿಕ್ಸ್‌ನಲ್ಲಿ ಇಂದು ಭಾರತದ ಸ್ಪರ್ಧಿಗಳ ಕಾದಾಟ; ಯಾವ ಪದಕ ನಿರೀಕ್ಷೆ? ಇಲ್ಲಿದೆ ವೇಳಾಪಟ್ಟಿ - Vistara News

ಕ್ರೀಡೆ

Paris Olympics 2024: ಒಲಿಂಪಿಕ್ಸ್‌ನಲ್ಲಿ ಇಂದು ಭಾರತದ ಸ್ಪರ್ಧಿಗಳ ಕಾದಾಟ; ಯಾವ ಪದಕ ನಿರೀಕ್ಷೆ? ಇಲ್ಲಿದೆ ವೇಳಾಪಟ್ಟಿ

Paris Olympics 2024 : 1972ರಲ್ಲಿ ಪುರುಷರ ಹಾಕಿ ತಂಡ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದಿತ್ತು. ಅದೇ ರೀತಿ ಭಾರತ ಹಾಕಿ ತಂಡ ಮತ್ತೊಮ್ಮೆ ಸತತ ಎರಡು ಬಾರಿ ಪದಕವನ್ನು ಗೆದ್ದುಕೊಂಡಿದೆ. 2021ರಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಭಾರತ ತಂಡ ಕಂಚಿನ ಪದಕ ಗೆದ್ದುಕೊಂಡಿತ್ತು. ಇದೀಗ ಮತ್ತೆ ಕಂಚಿನ ಪದಕಕ್ಕೆ ಭಾಜನವಾಗಿದೆ.

VISTARANEWS.COM


on

Paris Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಗುರುವಾರ ಭಾರತಕ್ಕೆ ಮತ್ತೊಂದು ಪದಕ ಲಭಿಸಿದೆ. ಹಾಕಿ ತಂಡ ಸ್ಪೇನ್ ವಿರುದ್ಧದ ಕಂಚಿನ ಪದಕದ ಪಂದ್ಯದಲ್ಲಿ ಗೆದ್ದಿದೆ. ಇದರೊಂದಿಗೆ ಭಾರತದ ಪದಕಗಳ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಎಲ್ಲವೂ ಕಂಚಿನ ಪದಕಗಳಾಗಿವೆ. ಭಾರತದ ಪಾಲಿಗೆ ಇದು ಖುಷಿಯ ವಿಚಾರವೇ ಸರಿ. ಪುರುಷರ 57 ಕೆ.ಜಿ ವಿಭಾಗದ ಪದಕದ ಸುತ್ತಿಗೆ ಪ್ರವೇಶ ಪಡೆಯುವ ಗುರಿಯೊಂದಿಗೆ ಪ್ರದರ್ಶನ ನೀಡಿದ್ದಾರೆ. ಗುರುವಾರ ನಡೆದ ಆರಂಭಿಕ ಎರಡು ಪಂದ್ಯಗಳಲ್ಲಿ ಅಮನ್ ಅತ್ಯುತ್ತಮ ಪ್ರದರ್ಶನ ನೀಡಿದರು, ತಾಂತ್ರಿಕ ಶ್ರೇಷ್ಠತೆಯೊಂದಿಗೆ ಎರಡನ್ನೂ ಗೆದ್ದಿದ್ದಾರೆ.

1972ರಲ್ಲಿ ಪುರುಷರ ಹಾಕಿ ತಂಡ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದಿತ್ತು. ಅದೇ ರೀತಿ ಭಾರತ ಹಾಕಿ ತಂಡ ಮತ್ತೊಮ್ಮೆ ಸತತ ಎರಡು ಬಾರಿ ಪದಕವನ್ನು ಗೆದ್ದುಕೊಂಡಿದೆ. 2021ರಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಭಾರತ ತಂಡ ಕಂಚಿನ ಪದಕ ಗೆದ್ದುಕೊಂಡಿತ್ತು. ಇದೀಗ ಮತ್ತೆ ಕಂಚಿನ ಪದಕಕ್ಕೆ ಭಾಜನವಾಗಿದೆ.

ಭಾರತ ನಿಯೋಗದ ಕೆಲವು ಸ್ಪರ್ಧಿಗಳು ಆಗಸ್ಟ್​​ 9ರಂದು ಕೆಲವೊಂದು ಸ್ಪರ್ಧೆಗಳಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಆ ಸ್ಪರ್ಧೆಗಳ ವಿವರ ಈ ಕೆಳಗೆ ನೀಡಲಾಗಿದೆ.

ಇದನ್ನೂ ಓದಿ: Paris Olympics 2024 : ಕ್ರೀಡಾಗ್ರಾಮಲ್ಲಿ ಮಾದಕ ವಸ್ತು ಕೊಕೇನ್ ಸೇವನೆ, ಆಸ್ಟ್ರೇಲಿಯಾದ ಹಾಕಿ ಆಟಗಾರನ ಬಂಧನ

ಮಧ್ಯಾಹ್ನ 12:30: ಗಾಲ್ಫ್ – ಮಹಿಳೆಯರ ವೈಯಕ್ತಿಕ ಸ್ಟ್ರೋಕ್ ಪ್ಲೇ ರೌಂಡ್ 2 ರಲ್ಲಿ ದೀಕ್ಷಾ ದಾಗರ್ ಮತ್ತು ಅದಿತಿ ಅಶೋಕ್.

ಮಧ್ಯಾಹ್ನ 2:10: ಅಥ್ಲೆಟಿಕ್ಸ್ – ಮಹಿಳೆಯರ 4×400 ಮೀಟರ್ ರಿಲೇ ಹೀಟ್ಸ್.
ಭಾರತದ ಜ್ಯೋತಿಕಾ ಶ್ರೀ ದಂಡಿ, ಕಿರಣ್ ಪಹಲ್, ಎಂ.ಪೂವಮ್ಮ ರಾಜು ಮತ್ತು ವಿಠ್ಠಲ ರಾಮರಾಜ್ ಕಣಕ್ಕಿಳಿಯಲಿದ್ದಾರೆ.

ಮಧ್ಯಾಹ್ನ 2:35: ಅಥ್ಲೆಟಿಕ್ಸ್ – ಪುರುಷರ 4×400 ಮೀಟರ್ ರಿಲೇ ಹೀಟ್ಸ್.
ಅಮೋಜ್ ಜಾಕೋಬ್, ರಾಜೇಶ್ ರಮೇಶ್, ಸಂತೋಷ್ ಕುಮಾರ್ ತಮಿಳರಸನ್ ಮತ್ತು ಮುಹಮ್ಮದ್ ಅಜ್ಮಲ್ ವರಿಯತೋಡಿ ಸೆಮಿಫೈನಲ್ ಗೆ ಅರ್ಹತೆ ಪಡೆಯುವ ಗುರಿ ಹೊಂದಿದ್ದಾರೆ.

ಮಧ್ಯಾಹ್ನ 2:30: ಮಹಿಳೆಯರ 57 ಕೆ.ಜಿ ಫ್ರೀಸ್ಟೈಲ್​ನಲ್ಲಿ ಕುಸ್ತಿಯಲ್ಲಿ ಅನ್ಶು ಮಲಿಕ್ . ಅನ್ಶು ಅವರ ಅದೃಷ್ಟ ಮಾಜಿ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಹೆಲೆನ್ ಮರೌಲಿಸ್ ಅವರ ವಿರುದ್ಧ ಗೆಲ್ಲುವ ಮೂಲಕ ನಿರ್ಧಾರವಾಗಲಿದೆ.

ರಾತ್ರಿ 11:10: ಪುರುಷರ 57 ಕೆ.ಜಿ ಫ್ರೀಸ್ಟೈಲ್ ಕಂಚಿನ ಅಥವಾ ಚಿನ್ನದ ಪದಕ ಪಂದ್ಯದಲ್ಲಿ (ಪದಕ ಸ್ಪರ್ಧೆಗಳು) ಅಮನ್ ಸೆಹ್ರಾವತ್.

ಇದನ್ನೂ ಓದಿ: Paris Olympics 2024 : ಅಥ್ಲೀಟ್​ಗಳಿಗೆ ಒಲಿಂಪಿಕ್ಸ್​ ಮಸ್ಕಾಟ್​ ಚಿತ್ರ ಇರುವ ಕಾಂಡೋಮ್ ಹಂಚಿದ ಆಯೋಜಕರು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Neeraj Chopra: ನೀರಜ್‌ ಚೋಪ್ರಾ ಜಾವೆಲಿನ್‌ ಎಸೆತದಲ್ಲಿ ಭಾರತಕ್ಕೆ ಚಿನ್ನ ಮಿಸ್‌ ಆದದ್ದು ಹೇಗೆ? ಕೋಚ್‌ ಏನ್‌ ಹೇಳ್ತಾರೆ ನೋಡಿ

Neeraj Chopra: ಭಾರತೀಯ ಸೇನೆಯಲ್ಲಿ ನಾಯ್ಕ್ ಸುಬೇದಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಾಶೀನಾಥ್ ನಾಯ್ಕ್, ಮೂಲತಃ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಮೂಲದವರು. 2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಜಾವೆಲಿನ್‌ ಎಸೆತದಲ್ಲಿ ಕಾಶೀನಾಥ್ ನಾಯ್ಕ್ ಕಂಚಿನ ಪದಕ ಗೆದ್ದವರು.

VISTARANEWS.COM


on

neeraj chopra kashinath naik 1
ಕೋಚ್‌ ಕಾಶಿನಾಥ್‌ ನಾಯ್ಕ್‌ ಜೊತೆಗೆ ನೀರಜ್‌ ಚೋಪ್ರಾ
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ನಿನ್ನೆ ರಾತ್ರಿ ನಡೆದ ಜಾವೆಲಿನ್‌ ಎಸೆತ (Javelin throw) ಪಂದ್ಯದಲ್ಲಿ ಭಾರತಕ್ಕೆ ಬೆಳ್ಳಿಯ ಪದಕ (Silver medal) ಗೆದ್ದುಕೊಟ್ಟಿದ್ದಾರೆ ಬಂಗಾರದ ಹುಡುಗ ನೀರಜ್ ಚೋಪ್ರಾ (Neeraj Chopra). ಚಿನ್ನದ ಪದಕವನ್ನೇ ಗೆದ್ದು ತರುತ್ತಾರೆ ಎಂಬ ನಿರೀಕ್ಷೆಯಿತ್ತು. ಆದರೆ ಅದು ಕೈತಪ್ಪಿತು. ಯಾಕೆ ಹೀಗಾಯ್ತು? ಇದಕ್ಕೆ ನೀರಜ್ ಚೋಪ್ರಾ ಅವರ ಕೋಚ್‌ (Coach) ಕಾಶೀನಾಥ್ ನಾಯ್ಕ್ (Kashinath Naik) ನೀಡಿದ ಕಾರಣ ಇಲ್ಲಿದೆ.

ಭಾರತೀಯ ಸೇನೆಯಲ್ಲಿ ನಾಯ್ಕ್ ಸುಬೇದಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಾಶೀನಾಥ್ ನಾಯ್ಕ್, ಮೂಲತಃ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಮೂಲದವರು. 2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಜಾವೆಲಿನ್‌ ಎಸೆತದಲ್ಲಿ ಕಾಶೀನಾಥ್ ನಾಯ್ಕ್ ಕಂಚಿನ ಪದಕ ಗೆದ್ದವರು.

ʼನೀರಜ್ ಚೋಪ್ರಾ ಸತತ ಎರಡನೇ ಬಾರಿ ಒಲಿಂಪಿಕ್ಸ್ ಪದಕ ಗೆಲ್ಲುತ್ತಿರೋದಕ್ಕೆ ಸಂತಸವಾಗಿದೆ. ಆದರೆ ಈ ಬಾರಿ ಚಿನ್ನ ಗೆಲ್ಲೋದಕ್ಕೆ ಸಾಧ್ಯವಾಗಿಲ್ಲ ಅನ್ನೋ ಬೇಸರವೂ ಇದೆ. ನೀರಜ್ ಚೋಪ್ರಾ ಅತ್ಯುತ್ತಮ ಎಸೆತವನ್ನೇ ಎಸೆದಿದ್ದಾರೆ. ಆದರೆ ಪಾಕಿಸ್ತಾನದ ಅರ್ಷದ್ ನದೀಮ್ ಇನ್ನಷ್ಟು ಅತ್ಯುತ್ತಮ ಎಸೆತವನ್ನು ಎಸೆದಿದ್ದಾರೆ. ನೀರಜ್‌ ತನ್ನ ಮೊದಲ ಎಸೆತದಲ್ಲಿ ಪೌಲ್‌ ಆಗಿದ್ದು ಬೆಳ್ಳಿ ಪದಕ ಬರುವುದಕ್ಕೆ ಕಾರಣವಾಯಿತುʼ ಎಂದು ಕಾಶೀನಾಥ್‌ ವಿವರಿಸಿದ್ದಾರೆ.

ಕೋಚ್‌ ಕಾಶಿನಾಥ ನಾಯ್ಕ್‌

2022ರ ಕಾಮನ್ ವೇಲ್ತ್ ಗೇಮ್ಸ್ ಬಳಿಕ ಅರ್ಷದ್ ನದೀಮ್ ಗಾಯದ ಸಮಸ್ಯೆಗೊಳಗಾಗಿದ್ದರು. ಗಾಯದಿಂದ ವಾಪಸಾದ ಬಳಿಕವೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಪ್ಯಾರಿಸ್ ಒಲಿಂಪಿಕ್ಸ್ ಅರ್ಹತಾ ಸುತ್ತಿನಲ್ಲಿಯೂ 88 ಮೀಟರ್ ಎಸೆದಿದ್ರು. ಆದ್ರೆ ನೀರಜ್ ತನ್ನ ಮೊದಲ ಎಸೆತದಲ್ಲಿ ಪೌಲ್ ಆಗಿದ್ದು ಅವರಿಗೆ ಧೈರ್ಯ ತುಂಬಿತು. ಒಂದು ವೇಳೆ ನೀರಜ್ ತನ್ನ ಮೊದಲ ಎಸೆತದಲ್ಲಿ 88, 89 ಮೀಟರ್ ಎಸೆದಿದ್ರೆ ಆತ ನರ್ವಸ್ ಆಗಿಬಿಡುತ್ತಿದ್ದ. ನೀರಜ್ ಮೊದಲ ಎಸೆತ ಫೌಲ್ ಆಗಿದ್ರಿಂದಲೇ ಆತನ ಆತ್ಮವಿಶ್ವಾಸ ಹೆಚ್ಚಾಯ್ತು ಎಂದು ಕಾಶೀನಾಥ್‌ ಹೇಳಿದ್ದಾರೆ.

ಯಾವಾಗಲೂ ನೀರಜ್ ತನ್ನ ಮೊದಲ ಎಸೆತದಲ್ಲಿ 88, 89 ಮೀಟರ್ ಎಸೆಯುತ್ತಿದ್ದ. ಆದರೆ ಈ ಬಾರಿ ಪೌಲ್ ಆಗಿದ್ದು ಅರ್ಷದ್ ನದೀಮ್‌ಗೆ ವರವಾಯ್ತು. ನದೀಮ್ ಒಲಿಂಪಿಕ್ಸ್ ರೆಕಾರ್ಡ್ಸ್ ಮಾಡುತ್ತಿದ್ದಂತೆ ನೀರಜ್ ನರ್ವಸ್ ಆಗಿಬಿಟ್ಟ. ಆದರೂ ನೀರಜ್ ತನ್ನ ಸಾಮರ್ಥ್ಯ ಮೀರಿ ಪ್ರಯತ್ನ ಮಾಡಿದ್ದಾನೆ. ಅಥ್ಲೆಟಿಕ್ಸ್‌ನಲ್ಲಿ ಸತತ ಎರಡನೇ ಪದಕ ಗೆದ್ದು ಸಾಧನೆ ಮಾಡಿದ್ದಾನೆ. ಇದು ನಿಜಕ್ಕೂ ದೊಡ್ಡ ಸಾಧನೆ ಎಂದು ತಮ್ಮ ಶಿಷ್ಯನನ್ನು ಕಾಶೀನಾಥ್ ನಾಯ್ಕ ಶ್ಲಾಘಿಸಿದ್ದಾರೆ.

ಪೌಲ್‌ ಮಾಡಿದ ನೀರಜ್

ನೀರಜ್​ ಚೋಪ್ರಾ ಅವರ ಮೊದಲ ಎಸೆತವೇ ಪೌಲ್​. ಹೀಗಾಗಿ ನಿರಾಸೆಯ ಆರಂಭವಾಯಿತು. ನಂತರದ ಎಸೆತದಲ್ಲಿ 89.45 ಮೀಟರ್ ದೂರ ಎಸೆದರು. ಅಲ್ಲದೆ ಆ ಬಳಿಕದ ನಾಲ್ಕು ಎಸೆತಗಳು ಪೌಲ್​ ಆದವು. ತಮ್ಮ ಎಸೆತಗಳು ನಿರೀಕ್ಷೆಯಷ್ಟು ದೂರ ಹೋಗದ ಕಾರಣ ನಂತರದ ಮೂರು ಬಾರಿ ಅವರು ಅಂತಿಮ ಲೈನ್ ಮೆಟ್ಟಿ ಸ್ವತಃ ಪೌಲ್ ಮಾಡಿದರು. ಅರ್ಷದ್​ 92. ಮೀಟರ್​ಗಿಂತಲೂ ದೂರ ಎಸೆದ ತಕ್ಷಣವೇ ಒತ್ತಡಕ್ಕೆ ಬಿದ್ದ ನೀರಜ್​ಗೆ ಚೇತರಿಸಿಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. ಆದರೆ, ಅರ್ಷದ್​ ತಮ್ಮ ಕೊನೇ ಎಸೆತವನ್ನೂ 91. 79 ಮೀಟರ್ ದೂರ ಎಸೆದರು. ಅಂದ ಹಾಗೆ ಪಾಕಿಸ್ತಾನಕ್ಕೆ 32 ವರ್ಷಗಳ ಬಳಿಕ ಒಲಿಂಪಿಕ್ಸ್​ನಲ್ಲಿ ಪದಕವೊಂದು ದೊರಕಿತು. ಅದೂ ಚಿನ್ನ!

ಇದನ್ನೂ ಓದಿ: Neeraj Chopra : ನೀರಜ್​ ಚೋಪ್ರಾಗೆ ರಜತ ಪದಕ; ಪಾಕಿಸ್ತಾನದ ನದೀಮ್​ಗೆ ಒಲಿಂಪಿಕ್​ ದಾಖಲೆಯ ಬಂಗಾರ

Continue Reading

ಪ್ರಮುಖ ಸುದ್ದಿ

Neeraj Chopra : ನೀರಜ್​ ಚೋಪ್ರಾಗೆ ರಜತ ಪದಕ; ಪಾಕಿಸ್ತಾನದ ನದೀಮ್​ಗೆ ಒಲಿಂಪಿಕ್​ ದಾಖಲೆಯ ಬಂಗಾರ

Neeraj Chopra: ಭಾರತದ ಸೂಪರ್ ಸ್ಟಾರ್ ಅಥ್ಲೀಟ್ ನೀರಜ್ ಚೋಪ್ರಾ ಗುರುವಾರ ಮಧ್ಯರಾತ್ರಿ (ಭಾರತೀಯ ಕಾಲಮಾ) ಫೈನಲ್​ಗೇರಿದ್ದ 12 ಸ್ಪರ್ಧಿಗಳ ಜತೆ ಹೋರಾಡಿ ರಜತ ಪದಕ ಗೆದ್ದರು. ಭಾರತದ ಉಳಿದ ಅಥ್ಲೆಟಿಕ್ಸ್ ಗಳ ನಿರಾಶಾದಾಯಕ ಅಭಿಯಾನದ ವೇಳೆ ನೀರಜ್ ಏಕೈಕ ಭರವಸೆಯಾಗಿ ಉಳಿದಿದ್ದರು. ಅವರು ಚಿನ್ನ ಗೆಲ್ಲುವರೆಂಬ ನಿರೀಕ್ಷೆ ಎಲ್ಲ ಭಾರತೀಯರಿಗೆ ಇತ್ತು. ಆದರೆ, ಪಾಕಿಸ್ತಾನದ ಅರ್ಷದ್ ತಮ್ಮೆಲ್ಲ ಶಕ್ತಿಯನ್ನು ಬಳಸಿ ದಾಖಲೆಯ ಎಸೆತವನ್ನು ಎಸೆದು ಚಿನ್ನ ಗೆದ್ದರು.

VISTARANEWS.COM


on

Neeraj Chopra
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್​ನ ಭಾರತದ ಸ್ಟಾರ್​ ಜಾವೆಲಿನ್​ ಎಸೆತದಲ್ಲಿ ನೀರಜ್​ ಚೋಪ್ರಾಗೆ (Neeraj Chopra) ತಮ್ಮ ಬಂಗಾರದ ಪದಕವನ್ನು ಉಳಿಸಿಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. ಅವರ ಪ್ರತಿಸ್ಪರ್ಧಿ ಹಾಗೂ ನೆರೆಯ ಪಾಕಿಸ್ತಾನದ ಅರ್ಷದ್ ನದೀಮ್ (Arshad Nadeem) ಒಲಿಂಪಿಕ್ಸ್ ದಾಖಲೆಯ 92.97 ಮೀಟರ್ ಎಸೆಯುವ ಮೂಲಕ ಬಂಗಾರ ಗೆದ್ದರು. ಹೀಗಾಗಿ ನೀರಜ್ ಚೋಪ್ರಾ ಅವರಿಗೆ ಬೆಳ್ಳಿಯ ಪದಕ ಲಭಿಸಿತು. ಅವರು 89.45 ದೂರ ಎಸೆಯುವ ಮೂಲಕ ಭಾರತಕ್ಕೊಂದು ಪದಕವನ್ನು ತಂದುಕೊಟ್ಟರು. ಇದು ಭಾರತದ ಪಾಲಿಗೆ ಹಾಲಿ ಆವೃತ್ತಿಯ ಒಲಿಂಪಿಕ್ಸ್​ನಲ್ಲಿ ಐದನೇ ಪದಕ. ನೀರಜ್ ತಂದ ಬೆಳ್ಳಿಯೇ ಅದರಲ್ಲಿ ಗರಿಷ್ಠ ಪದಕವಾಗಿದೆ. ಆದಾಗ್ಯೂ ನೀರಜ್ ಚಿನ್ನ ಗೆಲ್ಲುತ್ತಾರೆಂಬ ಭಾರತದ ಕೋಟ್ಯಂತರ ಕ್ರೀಡಾಭಿಮಾನಿಗಳ ನಿರೀಕ್ಷೆ ಹುಸಿಯಾಯಿತು.

ನೀರಜ್​ ಚೋಪ್ರಾ ಅವರ ಮೊದಲ ಎಸೆತವೇ ಪೌಲ್​. ಹೀಗಾಗಿ ನಿರಾಸೆಯ ಆರಂಭವಾಯಿತು. ನಂತರದ ಎಸೆತದಲ್ಲಿ 89.45 ಮೀಟರ್ ದೂರ ಎಸೆದರು. ಅಲ್ಲದೆ ಆ ಬಳಿಕದ ನಾಲ್ಕು ಎಸೆತಗಳು ಪೌಲ್​ ಆದವು. ತಮ್ಮ ಎಸೆತಗಳು ನಿರೀಕ್ಷೆಯಷ್ಟು ದೂರ ಹೋಗದ ಕಾರಣ ನಂತರದ ಮೂರು ಬಾರಿ ಅವರು ಅಂತಿಮ ಲೈನ್ ಮೆಟ್ಟಿ ಸ್ವತಃ ಪೌಲ್ ಮಾಡಿದರು. ಅರ್ಷದ್​ 92. ಮೀಟರ್​ಗಿಂತಲೂ ದೂರ ಎಸೆದ ತಕ್ಷಣವೇ ಒತ್ತಡಕ್ಕೆ ಬಿದ್ದ ನೀರಜ್​ಗೆ ಚೇತರಿಸಿಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. ಆದರೆ, ಅರ್ಷದ್​ ತಮ್ಮ ಕೊನೇ ಎಸೆತವನ್ನೂ 91. 79 ಮೀಟರ್ ದೂರ ಎಸೆದರು. ಅಂದ ಹಾಗೆ ಪಾಕಿಸ್ತಾನಕ್ಕೆ 32 ವರ್ಷಗಳ ಬಳಿಕ ಒಲಿಂಪಿಕ್ಸ್​ನಲ್ಲಿ ಪದಕವೊಂದು ದೊರಕಿತು. ಅದೂ ಚಿನ್ನ!

ಭಾರತದ ಸೂಪರ್ ಸ್ಟಾರ್ ಅಥ್ಲೀಟ್ ನೀರಜ್ ಚೋಪ್ರಾ ಗುರುವಾರ ಮಧ್ಯರಾತ್ರಿ (ಭಾರತೀಯ ಕಾಲಮಾ) ಫೈನಲ್​ಗೇರಿದ್ದ 12 ಸ್ಪರ್ಧಿಗಳ ಜತೆ ಹೋರಾಡಿ ರಜತ ಪದಕ ಗೆದ್ದರು. ಭಾರತದ ಉಳಿದ ಅಥ್ಲೆಟಿಕ್ಸ್ ಗಳ ನಿರಾಶಾದಾಯಕ ಅಭಿಯಾನದ ವೇಳೆ ನೀರಜ್ ಏಕೈಕ ಭರವಸೆಯಾಗಿ ಉಳಿದಿದ್ದರು. ಅವರು ಚಿನ್ನ ಗೆಲ್ಲುವರೆಂಬ ನಿರೀಕ್ಷೆ ಎಲ್ಲ ಭಾರತೀಯರಿಗೆ ಇತ್ತು. ಆದರೆ, ಪಾಕಿಸ್ತಾನದ ಅರ್ಷದ್ ತಮ್ಮೆಲ್ಲ ಶಕ್ತಿಯನ್ನು ಬಳಸಿ ದಾಖಲೆಯ ಎಸೆತವನ್ನು ಎಸೆದು ಚಿನ್ನ ಗೆದ್ದರು.

2021ರ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಗೆದ್ದ ಚಿನ್ನದ ಪದಕ ಉಳಿಸಿಕೊಳ್ಳುವುಕ್ಕೆ 26 ವರ್ಷದ ನೀರಜ್​ಗೆ ಸಾಧ್ಯವಾಗಲಿಲ್ಲ. ಒಲಿಂಪಿಕ್ಸ್​ನಲ್ಲಿ ಮತ್ತೊಂದು ಚಿನ್ನ ಗೆಲ್ಲುವ ಅವಕಾಶ ಅವರಿಗೆ ತಪ್ಪಿತು. ಮಂಗಳವಾರ ನಡೆದ ಅರ್ಹತಾ ಸ್ಪರ್ಧೆಯಲ್ಲಿ ನೀರಜ್ 89.34 ಮೀಟರ್ ಎಸೆಯುವ ಮೂಲಕ ನೇರವಾಗಿ ಅರ್ಹತೆ ಪಡೆದಿದ್ದರು. ಆಗಸ್ಟ್ 7, 2021ರಂದು, ನೀರಜ್ ಚೋಪ್ರಾ ಒಲಿಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಫೈನಲ್​ನಲ್ಲಿ ಅವರ ಎರಡನೇ ಎಸೆತವು 87.58 ಮೀಟರ್ ದೂರ ಹೋಗಿತ್ತು. ಅದರ ಮೂಲಕ ಅವರು ಚಿನ್ನ ಗೆದ್ದಿದ್ದರು.

ಹಲವಾರು ಸಾಧನೆಗಳು

ಹಂಗೇರಿಯ ಬುಡಾಪೆಸ್ಟ್​​ನಲ್ಲಿ ನಡೆದ 2023 ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​​ನಲ್ಲಿ ನೀರಜ್ ಚೋಪ್ರಾ 88.17 ಮೀಟರ್ ಎಸೆಯುವ ಮೂಲಕ ಚಿನ್ನ ಗೆದ್ದರು. ಎರಡು ವರ್ಷಗಳ ಹಿಂದೆ ಟೋಕಿಯೊದಲ್ಲಿ ನಡೆದಂತೆಯೇ, ನೀರಜ್ ಮತ್ತೊಮ್ಮೆ ರಾತ್ರಿಯ ಎರಡನೇ ಎಸೆತದೊಂದಿಗೆ ಅಗ್ರ ಪ್ರಶಸ್ತಿ ಗೆದ್ದರು. ವಿಶ್ವ ಅಥ್ಲೆಟಿಕ್ಸ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನೀರಜ್ ಈಗಾಗಲೇ ತಮ್ಮ ವೃತ್ತಿಜೀವನದಲ್ಲಿ ಎರಡು ಬಾರಿ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಜಕಾರ್ತಾದಲ್ಲಿ ನಡೆದ 2018 ರ ಏಷ್ಯನ್ ಕ್ರೀಡಾಕೂಟದಲ್ಲಿ ಅವರು 88.06 ಮೀಟರ್ ದೂರ ಜಾವೆಲಿನ್ ಅನ್ನು ಮೂರನೇ ಎಸೆತದೊಂದಿಗೆ ಪ್ರಾರಂಭಿಸಿದರು.

ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಹ್ಯಾಂಗ್ಝೌನಲ್ಲಿ ನಡೆದ 2023 ರ ಏಷ್ಯನ್ ಕ್ರೀಡಾಕೂಟದಲ್ಲಿ ಅವರು ತಮ್ಮ ಜಾವೆಲಿನ್ ಥ್ರೋ ಪ್ರಶಸ್ತಿ ಉಳಿಸಿಕೊಂಡರು. ಆ ಬಾರಿ ನೀರಜ್ 88.88 ಮೀಟರ್ ಎಸೆದು ಸಹ ಆಟಗಾರ ಕಿಶೋರ್ ಜೆನಾ ಅವರನ್ನು ಸೋಲಿಸಿ ಚಿನ್ನ ಗೆದ್ದರು.

ಗೋಲ್ಡ್​ ಕೋಸ್ಟ್​ ಕಾಮನ್ವೆಲ್ತ್​

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ನಲ್ಲಿ ನಡೆದ 2018 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ನೀರಜ್ ಚೋಪ್ರಾ 86.47 ಮೀಟರ್ ಎಸೆಯುವ ಮೂಲಕ ಕಾಮನ್ವೆಲ್ತ್ ಕ್ರೀಡಾಕೂಟದ ಚಾಂಪಿಯನ್ ಆದರು. ಆದಾಗ್ಯೂ, ಗಾಯದಿಂದಾಗಿ ಬರ್ಮಿಂಗ್​​ಹ್ಯಾಮ್​ನಲ್ಲಿ ನಡೆದ 2022 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಅವರು ಸ್ಪರ್ಧಿಸಲಿಲ್ಲ.

ಹರಿಯಾಣದ ಅಥ್ಲೀಟ್ ಭುವನೇಶ್ವರದಲ್ಲಿ ನಡೆದ 2017 ರ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕವನ್ನು ಗೆದ್ದರು ಮತ್ತು ಗುವಾಹಟಿಯಲ್ಲಿ ನಡೆದ ದಕ್ಷಿಣ ಏಷ್ಯಾ ಕ್ರೀಡಾಕೂಟ 2016 ರಲ್ಲಿ ಪೋಡಿಯಂನಲ್ಲಿ ಅಗ್ರಸ್ಥಾನ ಪಡೆದರು.

ಇದನ್ನೂ ಓದಿ: Paris Olympics 2024: ಕಂಚು ಗೆದ್ದ ಹಾಕಿ ತಂಡದ ಪಂಜಾಬ್​​ನ ಆಟಗಾರರಿಗೆ ತಲಾ 1 ಕೋಟಿ ರೂ. ಬಹುಮಾನ ಘೋಷಿಸಿದ ಪಂಜಾಬ್ ಸರ್ಕಾರ 

2016ರಲ್ಲಿ ಪೋಲೆಂಡ್​ನಲ್ಲಿ ನಡೆದ ಐಎಎಎಫ್ ವಿಶ್ವ ಅಂಡರ್ 20 ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ನಲ್ಲಿ ನೀರಜ್ ಚೋಪ್ರಾ ತಮ್ಮ ಪ್ರದರ್ಶನದಿಂದ ಗಮನ ಸೆಳೆದರು. ಫೈನಲ್​ನಲ್ಲಿ 86.48 ಮೀಟರ್ ದೂರ ಎಸೆದು ಹೊಸ ಅಂಡರ್-20 ವಿಶ್ವ ದಾಖಲೆ ನಿರ್ಮಿಸಿದ್ದರು. ಆ ಸಮಯದಲ್ಲಿ ಕೇವಲ 18 ವರ್ಷ ವಯಸ್ಸಿನ ಅವರು ವಿಶ್ವ ದಾಖಲೆಯನ್ನು ಸಾಧಿಸಿದ ಮೊದಲ ಭಾರತೀಯ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಜ್ಯೂರಿಚ್​ನಲ್ಲಿ ನಡೆದ 2023 ರ ಫೈನಲ್​ನಲ್ಲಿ ನೀರಜ್ ಚೋಪ್ರಾ 88.44 ಮೀಟರ್ ಎಸೆಯುವ ಮೂಲಕ ಗೆದ್ದಿದ್ದರು.

ನೀರಜ್ ಚೋಪ್ರಾ ಚಿನ್ನದ ಪದಕಗಳು

ಸೌತ್ ಏಷ್ಯನ್ ಗೇಮ್ಸ್, ಗುವಾಹಟಿ, 2016, 82.23 ಮೀ
ವಿಶ್ವ ಅಂಡರ್ 20 ಚಾಂಪಿಯನ್​ಶಿಪ್​. ಬೈಡೋಗಸ್ಜ್ 2016. 86.48 ಮೀ ಪೋಲೆಂಡ್
ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್, ಭುವನೇಶ್ವರ, 2017, 85.23 ಮೀ.
ಏಷ್ಯನ್ ಗೇಮ್ಸ್ ಜಕಾರ್ತಾ, 2018, 88.06 ಮೀ, ಇಂಡೋನೇಷ್ಯಾ
ಕಾಮನ್ವೆಲ್ತ್ ಗೇಮ್ಸ್ ಗೋಲ್ಡ್ ಕೋಸ್ಟ್, 2018. 86.47 ಮೀ, ಆಸ್ಟ್ರೇಲಿಯಾ
ಟೋಕಿಯೊ ಒಲಿಂಪಿಕ್ಸ್ 2020, 87.58 ಮೀ, ಜಪಾನ್
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ ಬುಡಾಪೆಸ್ಟ್, 2023, 88.17 ಮೀ ಹಂಗೇರಿ
ಏಷ್ಯನ್ ಗೇಮ್ಸ್ ಹ್ಯಾಂಗ್ಝೌ. 2023, 88.88 ಮೀ, ಚೀನಾ

Continue Reading

ಕರ್ನಾಟಕ

Prakash Raj:‌ ವಿನೇಶ್‌ ಫೋಗಟ್‌ ಅನರ್ಹತೆಗೆ ಮೋದಿ ಕಾರಣ ಎಂಬಂತೆ ಪ್ರಕಾಶ್ ರಾಜ್‌ ಪೋಸ್ಟ್;‌ ಜನರಿಂದ ರೋಸ್ಟ್!

Prakash Raj: ವಿನೇಶ್‌ ಫೋಗಟ್‌ ಅವರು ಒಲಿಂಪಿಕ್ಸ್‌ನಲ್ಲಿ ಅನರ್ಹತೆಗೊಂಡಿರುವ ಕುರಿತ ಕಾರ್ಟೂನ್‌ನ ಫೋಟೊವನ್ನು ಪ್ರಕಾಶ್‌ ರಾಜ್‌ ಎಕ್ಸ್‌ ಜಾಲತಾಣದಲ್ಲಿ ಫೋಟೊ ಸಮೇತ ಹಂಚಿಕೊಂಡಿದ್ದಾರೆ. ನರೇಂದ್ರ ಮೋದಿ ಅವರೇ ವಿನೇಶ್‌ ಅನರ್ಹತೆಗೆ ಕಾರಣ ಎಂಬುದು ಪ್ರಕಾಶ್‌ ರಾಜ್‌ ಪೋಸ್ಟ್‌ನ ಅರ್ಥವಾಗಿದೆ. ಇದಕ್ಕಾಗಿ ಜನ ನಟನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

VISTARANEWS.COM


on

Prakash Raj
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics) ವಿನೇಶ್‌ ಫೋಗಟ್‌ (Vinesh Phogat) ಅವರಿಗೆ ಮಾತ್ರವಲ್ಲ ಇಡೀ ಭಾರತೀಯರಿಗೆ ಆಘಾತವಾಗಿದೆ. ಕುಸ್ತಿಯಲ್ಲಿ ಫೈನಲ್‌ ತಲುಪಿ ಇತಿಹಾಸ ಸೃಷ್ಟಿಸಿದ್ದ ಅವರು ಇನ್ನೇನು ಚಿನ್ನದ ಪದಕಕ್ಕಾಗಿ ಕಾದಾಡಬೇಕು ಎನ್ನುವರಷ್ಟರಲ್ಲಿಯೇ ದೇಹದ ತೂಕ 100 ಗ್ರಾಂ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸಿರುವುದು ಕುಸ್ತಿಪಟುವಿನ ಜತೆಗೆ ಇಡೀ ದೇಶದ ಜನರಿಗೆ ಅಸಮಾಧಾನ ಉಂಟಾಗಿದೆ. ಇದರ ಬೆನ್ನಲ್ಲೇ, ವಿನೇಶ್‌ ಫೋಗಟ್‌ ವಿಷಯದಲ್ಲೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಟೀಕಿಸಿ ನಟ ಪ್ರಕಾಶ್‌ ರಾಜ್‌ (Prakash Raj) ಪೋಸ್ಟ್‌ ಮಾಡಿದ್ದು, ನಟನ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿನೇಶ್‌ ಫೋಗಟ್‌ ಅವರು ಒಲಿಂಪಿಕ್ಸ್‌ನಲ್ಲಿ ಅನರ್ಹತೆಗೊಂಡಿರುವ ಕುರಿತ ಕಾರ್ಟೂನ್‌ನ ಫೋಟೊವನ್ನು ಪ್ರಕಾಶ್‌ ರಾಜ್‌ ಎಕ್ಸ್‌ ಜಾಲತಾಣದಲ್ಲಿ ಫೋಟೊ ಸಮೇತ ಹಂಚಿಕೊಂಡಿದ್ದಾರೆ. ತೂಕ ಪರಿಶೀಲನೆ ಯಂತ್ರದ ಮೇಲೆ ವಿನೇಶ್‌ ಫೋಗಟ್‌ ನಿಂತಿರುವ, ಆ ತೂಕದ ಯಂತ್ರದ ಮೇಲೆ ನರೇಂದ್ರ ಮೋದಿ ಅವರು ಹಿಂದಿನಿಂದ ಕಾಲಿಡುತ್ತಿರುವಂತೆ ಬಿಂಬಿಸಿರುವ ಕಾರ್ಟೂನ್‌ನ ಫೋಟೊವನ್ನು ಪ್ರಕಾಶ್‌ ರಾಜ್‌ ಪೋಸ್ಟ್‌ ಮಾಡಿ, ‘ನಿಮಗೆ ಏನು ಅನಿಸುತ್ತದೆ’ ಎಂದು ಪೋಸ್ಟ್‌ ಮಾಡಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ‌

“ಇಟಲಿಯ ಕುಸ್ತಿಪಟು ಕೂಡ ಹೆಚ್ಚಿನ ತೂಕದ ಹಿನ್ನೆಲೆಯಲ್ಲಿ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದಾರೆ. ಅವರ ಅನರ್ಹತೆಯ ಹಿಂದೆಯೂ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಕೈವಾಡ ಇದೆಯೇ” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. “ನೀವೊಬ್ಬ ಅರ್ಬನ್‌ ನಕ್ಸಲ್”‌ ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ. “ನರೇಂದ್ರ ಮೋದಿ ಅವರಿಂದಲೇ ನಿಮ್ಮ ತೂಕ ಹೆಚ್ಚಾಗಿದೆಯೇ” ಎಂದು ಮತ್ತೊಬ್ಬರು ನಟನನ್ನು ಪ್ರಶ್ನಿಸಿದ್ದಾರೆ.

ದೇಶದ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಪ್ರಕಾಶ್‌ ರಾಜ್‌ ಪೋಸ್ಟ್‌ಗಳಿಗೆ ಜನ ಆಕ್ರೋಶ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಭಾರತದ ಚಂದ್ರಯಾನ 3 ಮಿಷನ್‌ ಯಶಸ್ವಿಯಾದ ಬಳಿಕವೂ ಪ್ರಕಾಶ್‌ ರಾಜ್‌ ವ್ಯಂಗ್ಯ ಮಾಡಿದ್ದು ಭಾರಿ ಟೀಕೆಗೆ ಕಾರಣವಾಗಿತ್ತು. ಚಂದ್ರಯಾನ 3ರ ಬಗ್ಗೆ ವ್ಯಂಗ್ಯಭರಿತ ಪೋಸ್ಟ್ ಮಾಡಿದ್ದಕ್ಕೆ ಎಲ್ಲೆಡೆ ನಟ ಪ್ರಕಾಶ್‌ ರಾಜ್‌ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಷ್ಟೇ ಅಲ್ಲ, ಪ್ರಕಾಶ್‌ ರಾಜ್‌ ಅವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶ್ರೀರಾಮಸೇನೆಯಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಕಾಶ್‌ ರಾಜ್‌ ವಿರುದ್ಧ ಕೇಸ್‌ ದಾಖಲಿಸಲಾಗಿತ್ತು.

ಇದನ್ನೂ ಓದಿ: Prakash Raj: ಕಾಶ್ಮೀರವನ್ನು ಪ್ಯಾಲೆಸ್ತೀನ್‌ಗೆ ಹೋಲಿಸಿದ ಪ್ರಕಾಶ್‌ ರಾಜ್;‌ ಕೆಂಡವಾದ ಜನ

Continue Reading

ಪ್ರಮುಖ ಸುದ್ದಿ

PR Sreejesh : ಕಂಚು ಗೆದ್ದ ತಕ್ಷಣ ಗೋಲ್​ ಕೀಪಿಂಗ್​ ಗ್ಲವ್ಸ್​ಗೆ ದೀರ್ಘದಂಡ ನಮಸ್ಕಾರ ಹಾಕಿದ ಶ್ರೀಜೇಶ್​​​

PR Sreejesh : ಪಿ.ಆರ್.ಶ್ರೀಜೇಶ್ ಭಾರತೀಯ ಪುರುಷರ ಹಾಕಿ ತಂಡದ ಪ್ರಮುಖ ಆಟಗಾರ. ಅವರು ತಂಡದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಎರಡು ದಶಕಗಳ ವೃತ್ತಿಜೀವನದಲ್ಲಿ, ಶ್ರೀಜೇಶ್ ಭಾರತದ ವಿಜಯಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ, ಗೋಲ್ ಪೋಸ್ಟ್​ನಲ್ಲಿ ಅವರ ಅಸಾಧಾರಣ ಕೌಶಲ್ಯಗಳಿಗಾಗಿ ಅವರಿಗೆ “ಸೂಪರ್​ಮ್ಯಾನ್” ಎಂಬ ಅಡ್ಡಹೆಸರನ್ನು ಗಳಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ಆರಂಭಕ್ಕೆ ಮೊದಲೇ ಇದು ನನ್ನ ಕೊನೇ ಟೂರ್ನಿ ಎಂದು ಹೇಳಿದ್ದರು.

VISTARANEWS.COM


on

PR Sreejesh
Koo

ಬೆಂಗಳೂರು: ಪ್ಯಾರಿಸ್​ನಲ್ಲಿ ನಡೆದ ಒಲಿಂಪಿಕ್ಸ್​ನಲ್ಲಿ (Paris Olympics 2024) ಕಂಚಿನ ಪದಕ ಗೆಲ್ಲುವುದರೊಂದಿಗೆ ವೃತ್ತಿಜೀವನ ಕೊನೆಗೊಳಿಸಿದ ಭಾರತ ಹಾಕಿ ತಂಡದ ಗೋಲ್​ಕೀಪರ್​ ಶ್ರೀಜೇಶ್ (PR Sreejesh)​ ನಂತರ ಭಾವುಕರಾದರು. ತಕ್ಷಣ ಅವರು ಗೋಲ್​ಕೀಪಿಂಗ್​ ಗ್ಲವ್ಸ್​ಗಳನ್ನು ಕಳಚಿಟ್ಟು ದೀರ್ಘದಂಡ ನಮಸ್ಕಅರ ಹಾಕಿದರು. ಸ್ಪೇನ್ ವಿರುದ್ಧ ಭಾರತ 2-1 ಗೋಲುಗಳ ರೋಚಕ ಜಯ ಸಾಧಿಸಿದ ಬಳಿಕ ಎಲ್ಲರೂ ಖುಷಿಯಲ್ಲಿದ್ದ ವೇಳೆ ಶ್ರೀಜೇಶ್ ಕಣ್ಣೀರಿಟ್ಟು ನಮಸ್ಕಾರ ಹಾಕಿದರು. ಈ ವೇಳೆ ತಮ್ಮ ಗೋಲ್​ ಕೀಪಂಗ್​ ಸಲಕರಣೆಗಳಿಗೆ ಗರಿಷ್ಠ ಗೌರವ ಸಲ್ಲಿಸಿದರು.

1972ರ ಬಳಿಕ ಇದೇ ಮೊದಲ ಬಾರಿಗೆ ಭಾರತ ಸತತ ಒಲಿಂಪಿಕ್ಸ್​ಗಳಲ್ಲಿ ಪದಕಗಳನ್ನು ಗೆದ್ದಿದೆ. ಹರ್ಮನ್ ಪ್ರೀತ್ ಸಿಂಗ್ ಗಳಿಸಿದ ಗೋಲಿನ ನೆರವಿನಿಂದ ಭಾರತ ಒಲಿಂಪಿಕ್ಸ್ ನಲ್ಲಿ ದಾಖಲೆಯ 13ನೇ ಹಾಕಿ ಪದಕ ಜಯಿಸಿತು.

ಪಿ.ಆರ್.ಶ್ರೀಜೇಶ್ ಭಾರತೀಯ ಪುರುಷರ ಹಾಕಿ ತಂಡದ ಪ್ರಮುಖ ಆಟಗಾರ. ಅವರು ತಂಡದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಎರಡು ದಶಕಗಳ ವೃತ್ತಿಜೀವನದಲ್ಲಿ, ಶ್ರೀಜೇಶ್ ಭಾರತದ ವಿಜಯಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ, ಗೋಲ್ ಪೋಸ್ಟ್​ನಲ್ಲಿ ಅವರ ಅಸಾಧಾರಣ ಕೌಶಲ್ಯಗಳಿಗಾಗಿ ಅವರಿಗೆ “ಸೂಪರ್​ಮ್ಯಾನ್” ಎಂಬ ಅಡ್ಡಹೆಸರನ್ನು ಗಳಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ಆರಂಭಕ್ಕೆ ಮೊದಲೇ ಇದು ನನ್ನ ಕೊನೇ ಟೂರ್ನಿ ಎಂದು ಹೇಳಿದ್ದರು.

ಕೇರಳದ ಕೊಚ್ಚಿಯ ಆಟಗಾರ

ಕೇರಳದ ಕೊಚ್ಚಿಯ ಉಪನಗರವಾದ ಕಿಝಕ್ಕಂಬಲಂನಲ್ಲಿ ಜನಿಸಿದ ಶ್ರೀಜೇಶ್ ಕೃಷಿ ಕುಟುಂಬದಿಂದ ಬಂದವರು. ಹಾಕಿ ಕಿಟ್ ಖರೀದಿಸಲು ತಮ್ಮ ಹಸುವನ್ನು ಮಾರಿದ ಅವರ ತಂದೆಯ ತ್ಯಾಗವು ಕ್ರೀಡೆಯಲ್ಲಿ ಅವರ ಆರಂಭಿಕ ಹಂತದ ಪ್ರಯಾಣವಾಗಿತ್ತು. ಸಾಂಪ್ರದಾಯಿಕ ಉಡುಗೆ ಮತ್ತು ಮಲಯಾಳಂ ಉಚ್ಚಾರಣೆಗಾಗಿ ಅಪಹಾಸ್ಯವನ್ನು ಎದುರಿಸುತ್ತಿದ್ದರೂ, ಶ್ರೀಜೇಶ್ ತನ್ನ ತಂದೆಯ ಅಚಲ ಬೆಂಬಲದಿಂದ ತಿರುವನಂತಪುರಂನ ಜಿವಿ ರಾಜಾ ಸ್ಪೋರ್ಟ್ಸ್ ಸ್ಕೂಲ್​ಗೆ ಸೇರಿದ್ದರು ಅಲ್ಲಿ ಅವರ ತರಬೇತುದಾರರು ಗೋಲ್ ಕೀಪಿಂಗ್ ಆಯ್ಕೆ ಮಾಡಲು ಸಲಹೆ ನೀಡಿದರು. ಈ ನಿರ್ಧಾರವು ಅವರ ವೃತ್ತಿಜೀವನವನ್ನು ರೂಪಿಸುವಲ್ಲಿ ನಿರ್ಣಾಯಕವಾಯಿತು.

ಶ್ರೀಜೇಶ್ ಆರಂಭದಲ್ಲಿ ಭಾರತೀಯ ಶಿಬಿರದ ಹಿಂದಿ ಮಾತನಾಡುವ ವಾತಾವರಣಕ್ಕೆ ಹೊಂದಿಕೊಳ್ಳಲು ಹೆಣಗಾಡಿದರು. ಗೋಲ್ ಕೀಪರ್ ಆಗಿದ್ದ ಅವರಿಗೆ ಭಾಷೆಯ ಅಡೆತಡೆಯ ಹೊರತಾಗಿಯೂ ಬೆಳೆಯಲು ಸಹಾಯವಾಯಿತು. ಆರಂಭಿಕ ವರ್ಷಗಳಲ್ಲಿ ಓಡಬೇಕಾಗುತ್ತದೆ ಎಂಬ ಕಾರಣಕ್ಕೆ ಗೋಲ್ ಕೀಪಿಂಗ್ ಅನ್ನು ಆಯ್ಕೆ ಮಾಡಿದ್ದರು. ಇದು ಅವರ ಯಶಸ್ಸಿನ ಅಡಿಪಾಯವಾಯಿತು.

ಇದನ್ನೂ ಓದಿ: Aman Sehrawat : ಸೆಮಿ ಫೈನಲ್​ನಲ್ಲಿ ಸೋತ ಅಮನ್​; ನಾಳೆ ಕಂಚಿನ ಪದಕಕ್ಕಾಗಿ ಹೋರಾಟ

ತಮ್ಮ ವೃತ್ತಿಜೀವನದುದ್ದಕ್ಕೂ, ಶ್ರೀಜೇಶ್ ಭಾರತದ ಹಾಕಿ ತಂಡದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಚಿನ್ನ ಸೇರಿದಂತೆ ಮೂರು ಏಷ್ಯನ್ ಕ್ರೀಡಾಕೂಟದ ಪದಕಗಳನ್ನು ಗೆದ್ದಿದ್ದಾರೆ. ಇದು ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಥಾನವನ್ನು ಭದ್ರಪಡಿಸಿತು. ಒಲಿಂಪಿಕ್ಸ್​ನಲ್ಲಿ ಗ್ರೇಟ್ ಬ್ರಿಟನ್ ವಿರುದ್ಧದ ಕ್ವಾರ್ಟರ್ ಫೈನಲ್​ನಲ್ಲಿ ಅವರ ಅಸಾಧಾರಣ ಪ್ರದರ್ಶನ ಭಾರತದ ಗೆಲುವಿಗೆ ಕಾರಣವಾಯಿತು. ಎದುರಾಳಿ ತಂಡದ 15 ಶಾಟ್​ಗಳಲ್ಲಿ 13 ಅನ್ನು ತಡೆದಿದ್ದರು. 2021 ಮತ್ತು 2022 ರಲ್ಲಿ ಎಫ್ಐಎಚ್​​ನ ಅತ್ಯುತ್ತಮ ಗೋಲ್​​ಕೀಪರ್​ ಪ್ರಶಸ್ತಿ ಪಡೆದಿದ್ದರು.

ಶ್ರೀಜೇಶ್ ಅವರ ನಾಯಕತ್ವ ಮತ್ತು ಮಾರ್ಗದರ್ಶನ ಭಾರತ ತಂಡಕ್ಕೆ ಅಮೂಲ್ಯವಾಗಿದೆ. ಅವರು ತಮ್ಮ ತಂಡದ ಆಟಗಾರರಿಗೆ ಸ್ಫೂರ್ತಿಯಾಗಿದ್ದಾರೆ. ಅವರು ತಂಡದ ಆಟಗಾರರಿಗೆ ಸೂಚನೆಗಳನ್ನು ನೀಡುತ್ತಾರೆ. ಇದು ಅವರ ಆಟದ ಶೈಲಿಯ ಹೆಗ್ಗುರುತಾಗಿದೆ. ಆಡದಿದ್ದರೂ ಸಹ ತಂಡದ ಆಟಗಾರನಾಗಿ ಬದಿಯಿಂದ ಮಾರ್ಗದರ್ಶನ ನೀಡುವುದನ್ನು ಮುಂದುವರಿಸಿದ್ದರು.

ಶ್ರೀಜೇಶ್ ಅವರಿಗೆ 2017 ರಲ್ಲಿ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಮತ್ತು 2021 ರಲ್ಲಿ ದೇಶದ ಅತ್ಯುನ್ನತ ಕ್ರೀಡಾ ಗೌರವವಾದ ಖೇಲ್ ರತ್ನ ಪ್ರಶಸ್ತಿ ನೀಡಲಾಗಿದೆ. ಅವರು ವರ್ಷದ ವಿಶ್ವ ಕ್ರೀಡಾಕೂಟದ ಅಥ್ಲೀಟ್ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯ.

Continue Reading
Advertisement
neeraj chopra kashinath naik 1
ಕ್ರೀಡೆ8 mins ago

Neeraj Chopra: ನೀರಜ್‌ ಚೋಪ್ರಾ ಜಾವೆಲಿನ್‌ ಎಸೆತದಲ್ಲಿ ಭಾರತಕ್ಕೆ ಚಿನ್ನ ಮಿಸ್‌ ಆದದ್ದು ಹೇಗೆ? ಕೋಚ್‌ ಏನ್‌ ಹೇಳ್ತಾರೆ ನೋಡಿ

Bhavishya
ಭವಿಷ್ಯ17 mins ago

Bhavishya: ಅಂಗೈಯಲ್ಲಿರುವ ʼಹೃದಯ ರೇಖೆಗಳುʼ ನಿಮ್ಮ ವ್ಯಕ್ತಿತ್ವ ಏನೆಂದು ಹೇಳುತ್ತವೆ; ಚೆಕ್‌ ಮಾಡಿ ನೋಡಿ!

BBMP Property Tax Hike postpone
ಬೆಂಗಳೂರು37 mins ago

BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಬಾಕಿದಾರರಿಗೆ ಗುಡ್ ನ್ಯೂಸ್, ಬಾಕಿ ಪಾವತಿಗೆ ಸೆ.30ರವರೆಗೆ ಅವಧಿ ವಿಸ್ತರಣೆ

ರಾಜಮಾರ್ಗ ಅಂಕಣ nagara panchami
ಅಂಕಣ1 hour ago

ರಾಜಮಾರ್ಗ ಅಂಕಣ: ನಾಗಾರಾಧನೆ- ಪ್ರಕೃತಿಯ ಆರಾಧನೆ ಆಗಲಿ

Govt Teachers
ಪ್ರಮುಖ ಸುದ್ದಿ2 hours ago

Govt Teachers: ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆ ಆಲಿಸಿದ ಸಚಿವ ಮಧು ಬಂಗಾರಪ್ಪ; ಹೋರಾಟ ನಿಲ್ಲದು ಎಂದ ಸಂಘ

Herbal Supplement
ಆರೋಗ್ಯ2 hours ago

Herbal Supplement: ಅರಿಶಿನ ಸೇರಿದಂತೆ ಹರ್ಬಲ್‌ ಸಪ್ಲಿಮೆಂಟ್‌ ಸೇವಿಸುತ್ತಿದ್ದೀರಾ? ಹಾಗಾದರೆ ಎಚ್ಚರ!

Paris Olympics 2024
ಕ್ರೀಡೆ2 hours ago

Paris Olympics 2024: ಒಲಿಂಪಿಕ್ಸ್‌ನಲ್ಲಿ ಇಂದು ಭಾರತದ ಸ್ಪರ್ಧಿಗಳ ಕಾದಾಟ; ಯಾವ ಪದಕ ನಿರೀಕ್ಷೆ? ಇಲ್ಲಿದೆ ವೇಳಾಪಟ್ಟಿ

Nagara Panchami 2024
ಕರ್ನಾಟಕ2 hours ago

Nagara Panchami 2024: ನಾಗದೋಷ ಎಂದರೇನು? ಇದರ ಪರಿಹಾರ ಕ್ರಮಗಳು ಏನೇನು?

karnataka weather forecast
ಮಳೆ2 hours ago

Karnataka Weather : ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

Dina Bhavishya
ಭವಿಷ್ಯ3 hours ago

Dina Bhavishya : ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ; ವಾತಾವರಣ ಹದಗೆಡದಂತೆ ಜಾಗ್ರತೆ ವಹಿಸಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ14 hours ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ16 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ17 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌