Paris Olympics: ಭರ್ಜರಿ ಗೆಲುವಿನೊಂದಿಗೆ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಅಮನ್ ಸೆಹ್ರಾವತ್ - Vistara News

ಕ್ರೀಡೆ

Paris Olympics: ಭರ್ಜರಿ ಗೆಲುವಿನೊಂದಿಗೆ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಅಮನ್ ಸೆಹ್ರಾವತ್

Paris Olympics: ಪುರುಷರ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಅಮನ್ ಸೆಹ್ರಾವತ್(Aman Sehrawat) ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದು ಪದಕ ಗೆಲ್ಲುವ ಆಸೆ ಜೀವಂತವಿರಿಸಿದ್ದಾರೆ.

VISTARANEWS.COM


on

Paris Olympics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್​: ಪ್ಯಾರಿಸ್ ಒಲಿಂಪಿಕ್ಸ್(Paris Olympics) ಪುರುಷರ 57 ಕೆ.ಜಿ ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಭಾರತದ ಅಮನ್ ಸೆಹ್ರಾವತ್(Aman Sehrawat) ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದು ಪದಕ ಗೆಲ್ಲುವ ಆಸೆ ಜೀವಂತವಿರಿಸಿದ್ದಾರೆ. ಗುರುವಾರ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ 21 ವರ್ಷದ ಅಮನ್ ನಾರ್ತ್ ಮ್ಯಾಸೆಡೋನಿಯಾದ ವ್ಲಾಡಿಮಿರ್ ಎಗೊರೊವ್ ವಿರುದ್ಧ 10-0 ಅಂತರದ ಭರ್ಜರಿ ಗೆಲುವು ದಾಖಲಿ ಕ್ವಾರ್ಟರ್​ ಫೈನಲ್​ಗೆ ಲಗ್ಗೆ ಇಟ್ಟಿದ್ದಾರೆ. ಇಂದೇ ನಡೆಯುವ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಅಲ್ಬೆನಿಯಾದ ಝೆಲಿಮ್ಖಾನ್ ಅಬಕರೋವ್ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಮಹಿಳಾ ವಿಭಾಗದ 57 ಕೆಜಿ ವಿಭಾಗದಲ್ಲಿ ಕಣಕ್ಕಿಳಿದಿದ್ದ ಅಂಶು ಮಲಿಕ್​ ಸೋತು ನಿರಾಸೆ ಮೂಡಿಸಿದ್ದಾರೆ.

ಮಹಿಳೆಯರ 100 ಮೀ. ಹರ್ಡಲ್ಸ್‌ನ ರೆಪೆಷಾಜ್ ಸುತ್ತಿನಲ್ಲಿ ಜ್ಯೋತಿ ಯರ್ರಾಜಿ ವಿಫಲರಾಗಿದ್ದಾರೆ. 13.17 ಸೆಕೆಂಡುಗಳಲ್ಲಿ ನಾಲ್ಕನೇಯವರಾಗಿ ಜ್ಯೋತಿ ಗುರಿ ಮುಟ್ಟಿದರು. ಆ ಮೂಲಕ ಸೆಮಿಫೈನಲ್‌ಗೆ ಪ್ರವೇಶಿಸುವಲ್ಲಿ ವಿಫಲರಾಗಿದ್ದಾರೆ.

ಇದನ್ನೂ ಓದಿ Paris Olympics: ಒಲಿಂಪಿಕ್ಸ್​ನಲ್ಲಿಯೂ ಸದ್ದು ಮಾಡಿದ ‘​ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡು; ವಿಡಿಯೊ ವೈರಲ್​

ಕೆಲವೇ ಗಂಟೆಗಳಲ್ಲಿ ಹಾಕಿ ಪಂದ್ಯ

44 ವರ್ಷಗಳ ಬಳಿಕ ಒಲಿಂಪಿಕ್ಸ್(Paris Olympics)​ ಹಾಕಿಯಲ್ಲಿ ಫೈನಲ್​ ಪ್ರವೇಶಿಸುವ ಅವಕಾಶ ಕಳೆದುಕೊಂಡ ಭಾರತ ಪುರುಷರ ಹಾಕಿ ತಂಡ ಇಂದು ನಡೆಯುವ ಕಂಚಿನ ಪದಕದ ಸ್ಪರ್ಧೆಯಲ್ಲಿ ಸ್ಪೇನ್(india vs spain)​ ವಿರುದ್ಧ ಸೆಣಸಾಡಲಿದೆ. ಪಂದ್ಯ ಸಂಜೆ 5.30ಕ್ಕೆ ಆರಂಭಗೊಳ್ಳಲಿದೆ. ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಭಾರತ ಕಂಚಿನ ಪದಕ ಗೆದ್ದು 41 ವರ್ಷಗಳ ಬಳಿಕ ಪದಕದ ಬರ ನೀಗಿಸಿತ್ತು. ಈ ಬಾರಿಯೂ ಕಂಚಿಗೆ ತೃಪ್ತಿಪಡಬೇಕಾದ ಸ್ಥಿತಿ ಎದುರಾಗಿದೆ. ಅದು ಕೂಡ ಇಂದು ಗೆದ್ದರೆ ಮಾತ್ರ.

ಈ ಬಾರಿಯ ಕೂಟದಲ್ಲಿ ಭಾರತ ಕ್ವಾರ್ಟರ್​ ಫೈನಲ್​ ತನಕ ತೋರಿದ್ದ ಪ್ರದರ್ಶನವನ್ನು ಕಂಡಾಗ ಭಾರತ ನಿಶ್ಚಿತವಾಗಿ ಚಿನ್ನ ಗೆಲ್ಲಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಅಲ್ಲದೆ ಕಳೆದ ಬಾರಿಯ ಚಾಂಪಿಯನ್​ ಮತ್ತು ರನ್ನರ್​ ಅಪ್​ಗಳು ಕೂಡ ಕ್ವಾರ್ಟರ್​ ಫೈನಲ್​ನಲ್ಲಿಯೇ ಮುಗ್ಗರಿಸಿತ್ತು. ಹೀಗಾಗಿ ಭಾರತಕ್ಕೆ ಚಿನ್ನ ಗೆಲ್ಲುವ ಉತ್ತಮ ಅವಕಾಶ ಕೂಡ ಇತ್ತು. ಆದರೆ, ಸೆಮಿಫೈನಲ್​ನಲ್ಲಿ ತನಗಿಂತ ಬಲಿಷ್ಟವಲ್ಲದ ಜರ್ಮನಿ ವಿರುದ್ಧ ಹಲವು ತಪ್ಪುಗಳನ್ನು ಮಾಡಿದ ಕಾರಣ 3-2 ಗೋಲುಗಳ ಅಂತರದಿಂದ ಆಘಾತಕಾರಿ ಸೋಲು ಕಂಡು ಫೈನಲ್​ ಪ್ರವೇಶಿಸುವ ಅವಕಾಶ ಕಳೆದುಕೊಂಡಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Manu Bhaker : ಮನು ಭಾಕರ್​ಗೆ ಕ್ರೀಡಾ ಇಲಾಖೆಯಿಂದ ವಿಶೇಷ ಸನ್ಮಾನ; 30 ಲಕ್ಷ ರೂಪಾಯಿ ವಿತರಣೆ

Manu Bhaker : ಒಲಿಂಪಿಕ್ಸ್​ನಲ್ಲಿನ ಗಮನಾರ್ಹ ಸಾಧನೆಗಾಗಿ ಭಾಕರ್ ಅವರನ್ನು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಕೊಂಡಾಡಿದರು. ಅವರಿಗೆ ಐತಿಹಾಸಿಕ ಸಾಧನೆಗಾಗಿ ಅವರನ್ನು ಅಭಿನಂದಿಸಿದರು. ಅವರ ಯಶಸ್ಸು ನಮ್ಮ ದೇಶದ ಯುವಕರಿಗೆ ಸ್ಫೂರ್ತಿ ನೀಡುತ್ತದೆ ಎಂದು ಮಾಂಡವಿಯಾ ಹೇಳಿದ್ದಾರೆ. 22ರ ಹರೆಯದ ಆಟಗಾರ್ತಿಗೆ 30 ಲಕ್ಷ ರೂಪಾಯಿ ನಗದು ಬಹುಮಾನವನ್ನೂ ನೀಡಲಾಗಿದೆ.

VISTARANEWS.COM


on

Manu Bhaker
Koo

ನವದೆಹಲಿ: ಭಾರತದ ಸ್ಟಾರ್ ಶೂಟರ್ ಮನು ಭಾಕರ್ (Manu Bhaker) ಅವರನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಡಾ.ಮನ್ಸುಖ್ ಮಾಂಡವಿಯಾ ಗುರುವಾರ ಸನ್ಮಾನಿಸಿದರು. ವಿಶೇಷವೆಂದರೆ, ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದ ನಂತರ ಭಾಕರ್ ಆಗಸ್ಟ್ 7 ರಂದು ಭಾರತಕ್ಕೆ ಮರಳಿದ್ದಾರೆ. ಇದರ ಪರಿಣಾಮವಾಗಿ ಅವರು ಸ್ವಾತಂತ್ರ್ಯದ ನಂತರ ಕ್ರೀಡಾಕೂಟದ ಒಂದೇ ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಮತ್ತು ಒಟ್ಟಾರೆ ಎರಡನೇ ಭಾರತೀಯ ಎನಿಸಿಕೊಂಡಿದ್ದಾರೆ.

ಒಲಿಂಪಿಕ್ಸ್​ನಲ್ಲಿನ ಗಮನಾರ್ಹ ಸಾಧನೆಗಾಗಿ ಭಾಕರ್ ಅವರನ್ನು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಕೊಂಡಾಡಿದರು. ಅವರಿಗೆ ಐತಿಹಾಸಿಕ ಸಾಧನೆಗಾಗಿ ಅವರನ್ನು ಅಭಿನಂದಿಸಿದರು. ಅವರ ಯಶಸ್ಸು ನಮ್ಮ ದೇಶದ ಯುವಕರಿಗೆ ಸ್ಫೂರ್ತಿ ನೀಡುತ್ತದೆ ಎಂದು ಮಾಂಡವಿಯಾ ಹೇಳಿದ್ದಾರೆ. 22ರ ಹರೆಯದ ಆಟಗಾರ್ತಿಗೆ 30 ಲಕ್ಷ ರೂಪಾಯಿ ನಗದು ಬಹುಮಾನವನ್ನೂ ನೀಡಲಾಗಿದೆ.

ಇಂದು ನಾನು ದೇಶದ ಮಗಳನ್ನು ಭೇಟಿಯಾದೆ. ಎರಡು ಕಂಚಿನ ಪದಕಗಳನ್ನು ಗೆದ್ದ ನಂತರ ಮನೆಗೆ ಮರಳಿದ್ದಾರೆ. ಈ ಐತಿಹಾಸಿಕ ವಿಜಯಕ್ಕಾಗಿ ಅವಳನ್ನು ಅಭಿನಂದಿಸಿದೆ ಮತ್ತು ಹಾರೈಸಿದೆ. ಮನು ಭಾಕರ್ ಅವರ ಈ ಯಶಸ್ಸು ಭಾರತೀಯ ಕ್ರೀಡಾ ಜಗತ್ತಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿ ನೀಡುತ್ತದೆ. ಇಡೀ ದೇಶ ಅವಳ ಬಗ್ಗೆ ಹೆಮ್ಮೆ ಪಡುತ್ತದೆ” ಎಂದು ಮಾಂಡವಿಯಾ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

“ಗೌರವಾನ್ವಿತ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರನ್ನು ಇಂದು ಭೇಟಿಯಾದೆ. ಅವರ ಬೆಂಬಲ ಮತ್ತು ಪ್ರೋತ್ಸಾಹಕ್ಕಾಗಿ ವೈಯಕ್ತಿಕವಾಗಿ ಧನ್ಯವಾದ ಹೇಳುವುದು ಒಂದು ಗೌರವ. ಅವರ ನಿರಂತರ ಪ್ರಯತ್ನಗಳಿಂದ, ರಾಷ್ಟ್ರದ ಕ್ರೀಡಾಪಟುಗಳು ಇನ್ನೂ ಹೆಚ್ಚಿನ ಎತ್ತರವನ್ನು ತಲುಪಬಹುದು ಎಂದು ಮನು ಭಾಕರ್ ಹೇಳಿದ್ದಾರೆ.

ಮನು ಭಾಕರ್ ಅವರ ಪ್ಯಾರಿಸ್ ಒಲಿಂಪಿಕ್ಸ್ ಪ್ರದರ್ಶನ

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಬೆಳಿಗ್ಗೆ 10 ಗಂಟೆಗೆ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾಕರ್ ಭಾರತದ ಖಾತೆ ತೆರೆದರು. ಒಲಿಂಪಿಕ್ಸ್​ನಲ್ಲಿ ಶೂಟಿಂಗ್​ ಪದಕಕ್ಕಾಗಿ ಭಾರತದ 12 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದರು. ಸರಬ್ಜೋತ್ ಸಿಂಗ್ ಅವರೊಂದಿಗೆ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಎರಡನೇ ಕಂಚಿನ ಪದಕ ಗೆಲ್ಲುವ ಮೂಲಕ 22 ವರ್ಷದ ಅವರು ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟರು.

ಇದನ್ನೂ ಓದಿ: Paris Olympics 2024 : ರೇಸಿಂಗ್​ ಟ್ರ್ಯಾಕ್​ ಬಳಿಯೇ ಯುವಕನೊಬ್ಬನಿಗೆ ಪ್ರಪೋಸ್ ಮಾಡಿದ ಫ್ರಾನ್ಸ್​ನ ಮಹಿಳಾ ಅಥ್ಲೀಟ್​, ವಿಡಿಯೊ ಇದೆ

ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲಲು ವಿಫಲವಾದ ಕಾರಣ ಅವರು ಹ್ಯಾಟ್ರಿಕ್ ಪದಕದ ಸಾಧನೆ ಮಾಡಲು ವಿಫಲರಾದರು. ಒಲಿಂಪಿಕ್ಸ್​ಗೆ ಪದಾರ್ಪಣೆ ಮಾಡಿದ ನಂತರ, ಭಾಕರ್ ವೈಯಕ್ತಿಕ ಸ್ಪರ್ಧೆಯಲ್ಲಿ ಎರಡು ಪದಕಗಳನ್ನು ಗೆದ್ದ ನಾಲ್ಕನೇ ಭಾರತೀಯ ಮತ್ತು ದೇಶದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Continue Reading

ಪ್ರಮುಖ ಸುದ್ದಿ

Paris Olympics 2024 : ರೇಸಿಂಗ್​ ಟ್ರ್ಯಾಕ್​ ಬಳಿಯೇ ಯುವಕನೊಬ್ಬನಿಗೆ ಪ್ರಪೋಸ್ ಮಾಡಿದ ಫ್ರಾನ್ಸ್​ನ ಮಹಿಳಾ ಅಥ್ಲೀಟ್​, ವಿಡಿಯೊ ಇದೆ

Paris Olympics 2024 : ಪ್ಯಾರಿಸ್ ಹೇಳಿ ಕೇಳಿ ಪ್ರಣಯದ ನಗರ. ಟ್ರ್ಯಾಕ್​ನಲ್ಲೇ ಪ್ರೀತಿಯ ಹುಡುಗನಿಗೆ ಪ್ರಪೋಸ್ ಮಾಡಿರುವುದು ವಿಶೇಷ ಎನಿಸಿತು. ಪ್ಯಾರಿಸ್​​ನಲ್ಲಿ ಕೇವಲ ಸ್ಪರ್ಧಾತ್ಮಕ ಮನೋಭಾವ ಮಾತ್ರವಲ್ಲ, ಪ್ರೀತಿಯೂ ಹೆಚ್ಚಿದೆ. ರೇಸ್ ಮುಗಿದ ನಂತರ ಸ್ಟ್ಯಾಂಡ್ ಗಳ ಕಡೆಗೆ ನಡೆದು ಫಿನೋಟ್ ಹೋಗುತ್ತಿದ್ದ ವೀಡಿಯೊ ಶೀಘ್ರದಲ್ಲೇ ವೈರಲ್ ಆಯಿತು. ಗೆಳೆಯನಿಗೆ ಪ್ರಪೋಸ್ ಮಾಡಲು ಒಂದು ಮೊಣಕಾಲಿನ ಮೇಲೆ ಮಂಡಿಯೂರಿ ಕುಳಿತಾಗ ಸುತ್ತಲೂ ಇದ್ದವರು ಚಪ್ಪಾಳೆ ತಟ್ಟಿದರು.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ 2024 (Paris Olympics 2024) ಹಲವಾರು ವಿವಾದಗಳು ಘಟಿಸಿದೆ. ಇದೇ ವೇಳೆ ಕೆಲವು ಹೃದಯಸ್ಪರ್ಶಿ ಘಟನೆಗಳೂ ನಡೆದಿವೆ. ಅಂತೆಯೇ ಫ್ರೆಂಚ್ ಅಥ್ಲೀಟ್ ಆಲಿಸ್ ಫಿನಾಟ್ 3000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯ ಫೈನಲ್ ನಲ್ಲಿ ಭಾಗವಹಿಸಿದ್ದರು. ಅವರು ಓಟದಲ್ಲಿ ಯಾವುದೇ ಪದಕವನ್ನು ಗೆದ್ದಿಲ್ಲ. ಆದರೆ ಅವರು ಈವೆಂಟ್​​ನಲ್ಲಿ ಯುರೋಪಿಯನ್ ದಾಖಲೆ ಮುರಿಯುವಲ್ಲಿ ಯಶಸ್ವಿಯಾದರು. ತನ್ನ ದಾಖಲೆ ಮುರಿಯುವ ಪ್ರದರ್ಶನದ ನಂತರ ಟ್ರ್ಯಾಕ್​ ಬದಿಯಲ್ಲೇ ತನ್ನ ಬಾಯ್​ ಫ್ರೆಂಡ್​ಗೆ ಪ್ರಪೋಸ್ ಮಾಡಿದರು. ಈ ವಿಡಿಯೊ ಸೋಶಿಯಲ್ಲ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಪ್ಯಾರಿಸ್ ಹೇಳಿ ಕೇಳಿ ಪ್ರಣಯದ ನಗರ. ಹೀಗಾಗಿ ಅಥ್ಲೀಟ್​ ಟ್ರ್ಯಾಕ್​ನಲ್ಲೇ ಪ್ರೀತಿಯ ಹುಡುಗನಿಗೆ ಪ್ರಪೋಸ್ ಮಾಡಿರುವುದು ವಿಶೇಷ ಎನಿಸಿತು. ಪ್ಯಾರಿಸ್​​ನಲ್ಲಿ ಕೇವಲ ಸ್ಪರ್ಧಾತ್ಮಕ ಮನೋಭಾವ ಮಾತ್ರವಲ್ಲ, ಪ್ರೀತಿಯೂ ಹೆಚ್ಚಿದೆ. ರೇಸ್ ಮುಗಿದ ನಂತರ ಸ್ಟ್ಯಾಂಡ್ ಗಳ ಕಡೆಗೆ ನಡೆದು ಫಿನಾಟ್​​ ಹೋಗುತ್ತಿದ್ದ ವೀಡಿಯೊ ಶೀಘ್ರದಲ್ಲೇ ವೈರಲ್ ಆಯಿತು. ಗೆಳೆಯನಿಗೆ ಪ್ರಪೋಸ್ ಮಾಡಲು ಒಂದು ಮೊಣಕಾಲಿನ ಮೇಲೆ ಮಂಡಿಯೂರಿ ಕುಳಿತಾಗ ಸುತ್ತಲೂ ಇದ್ದವರು ಚಪ್ಪಾಳೆ ತಟ್ಟಿದರು. ಅವರಿಗೆ ರಿಂಗ್ ಕೊಟ್ಟು ಮದುವೆಯಾಗುವಂತೆ ಕೋರಿದರು.

ಇದನ್ನೂ ಓದಿ: Neeraj Chopra : ನೀರಜ್​ ಚೋಪ್ರಾನನ್ನ ಅರ್ಷದ್​ ನದೀಮ್ ಸೋಲಿಸಿ ಬಂಗಾರ ಗೆಲ್ತಾರೆ; ಪಾಕ್​ನ ಕ್ರಿಕೆಟಿಗರ ಶುಭಾಶಯ

ಫಿನೋಟ್ ಮತ್ತು ಸ್ಪೇನ್ ನ ಟ್ರಯಥ್ಲೆಟ್ ಆಗಿರುವ ಬ್ರೂನೋ ಮಾರ್ಟಿನೆಜ್ ಒಂಬತ್ತು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದಾರೆ. “ಒಂಬತ್ತು ನಿಮಿಷಗಳಿಗಿಂತ ಕಡಿಮೆ ಸಮಯದಲ್ಲಿ ಓಡಿದೆ. ಒಂಬತ್ತು ನನ್ನ ಅದೃಷ್ಟದ ಸಂಖ್ಯೆ ಮತ್ತು ನಾವು ಒಂಬತ್ತು ವರ್ಷಗಳಿಂದ ಒಟ್ಟಿಗೆ ಇದ್ದೇವೆ. ನಾನು ಪ್ರಪೋಸ್ ಮಾಡುತ್ತೇನೆ ಎಂದು ನನಗೆ ನಾನೇ ಹೇಳಿಕೊಂಡೆ ಎಂದು ಫಿನೋಟ್ ನಂತರ ಸುದ್ದಿಗಾರರಿಗೆ ತಿಳಿಸಿದರು.

“ನನ್ನ ಬಾಯ್​ಫ್ರೆಂಡ್​​ ಇನ್ನೂ ಇನ್ನೂ ಪ್ರಪೋಸ್ ಮಾಡದ ಕಾರಣ, ಬಹುಶಃ ಅದು ನನಗೆ ಬಿಟ್ಟದ್ದು ಎಂದು ನಾನು ಭಾವಿಸಿದೆ.” ಎಂದು ಫಿನೋಟ್ ಹೇಳಿದ್ದಾರೆ.

ಬ್ಯಾಡ್ಮಿಂಟನ್​​ ಮಿಶ್ರ ಡಬಲ್ಸ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ನಂತರ ಚೀನಾದ ಬ್ಯಾಡ್ಮಿಂಟನ್ ತಂಡದ ಲಿ ಯುಚೆನ್ ಅವರು ಮದುವೆ ಪ್ರಸ್ತಾಪ ಮಾಡಿದ್ದರು. ಅವರ ಸಹ ಆಟಗಾರ್ತಿ ಹುವಾಂಗ್ ಯಾ ಕಿಯಾಂಗ್​ ತಕ್ಷಣವೇ ಆಯಿತು ಎಂದು ಒಪ್ಪಿಕೊಂಡಿದ್ದರು. ಹೀಗಾಗಿ ಕ್ರೀಡಾಕೂಟದ ಸಮಯದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಏಕೈಕ ಕ್ರೀಡಾಪಟು ಫಿನೋಟ್ ಅಲ್ಲ ಎಂದು ಹೇಳಬಹುದು.

Continue Reading

ಕ್ರೀಡೆ

Aman Sehrawat: ಕುಸ್ತಿಯಲ್ಲಿ ಪದಕ ಭರವಸೆ ಮೂಡಿಸಿದ ಅಮನ್ ಸೆಹ್ರಾವತ್; ಸೆಮಿಗೆ ಲಗ್ಗೆ

Aman Sehrawat: ಎದುರಾಳಿಗೆ ಒಂದೇ ಒಂದು ಅಂಕ ಬಿಟ್ಟು ಕೊಡದೆ ಸೆಮಿಫೈನಲ್​ ಪ್ರವೇಶಿಸಿರುವ ಅಮನ್ ಸೆಹ್ರಾವತ್ ಭಾರತಕ್ಕೆ ಅನಿರೀಕ್ಷಿತ ಪದಕೊಂದನ್ನು ಗೆಲ್ಲುವ ತವಕದಲ್ಲಿದ್ದಾರೆ

VISTARANEWS.COM


on

Aman Sehrawat
Koo

ಪ್ಯಾರಿಸ್​: ವಿನೇಶ್ ಫೋಗಟ್​ ಅವರು ಅನರ್ಹಗೊಂಡು ಪದಕವೊಂದನ್ನು ಕಳೆದುಕೊಂಡ ಆಘಾತದಲ್ಲಿರುವಾಗಲೇ ಭಾರತಕ್ಕೆ ಪ್ಯಾರಿಸ್​ ಪಲಿಂಪಿಕ್ಸ್​(Paris Olympics) ಕುಸ್ತಿಯಲ್ಲಿ ಪದಕವೊಂದು ದೊರೆಯುವ ಆಸೆ ಚಿಗುರೊಡೆದಿದೆ. ಯಾರು ನಿರೀಕ್ಷೆಯೂ ಮಾಡದ ಪುರುಷರ ಕುಸ್ತಿ ಸ್ಪರ್ಧೆಯ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ 21 ವರ್ಷದ ಭಾರತದ ಅಮನ್ ಸೆಹ್ರಾವತ್(Aman Sehrawat) ಸೆಮಿ ಫೈನಲ್‌ಗೆ ಪ್ರವೇಶಿಸಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಇಂದು ರಾತ್ರಿ 9.45ಕ್ಕೆ ನಡೆಯುವ ಸೆಮಿಫೈನಲ್​ ಪಂದ್ಯದಲ್ಲಿ ಅಮನ್​ ಜಪಾನ್​ ರೇ ಹಿಗುಚಿ ಸವಾಲು ಎದುರಿಸಲಿದ್ದಾರೆ.

ಎದುರಾಳಿಗೆ ಒಂದೇ ಒಂದು ಅಂಕ ಬಿಟ್ಟು ಕೊಡದೆ ಸೆಮಿಫೈನಲ್​ ಪ್ರವೇಶಿಸಿರುವ ಅಮನ್ ಸೆಹ್ರಾವತ್ ಭಾರತಕ್ಕೆ ಅನಿರೀಕ್ಷಿತ ಪದಕೊಂದನ್ನು ಗೆಲ್ಲುವ ತವಕದಲ್ಲಿದ್ದಾರೆ. ಸೆಮಿ ಒಂದು ಗೆದ್ದರೆ ಕನಿಷ್ಠ ಬೆನ್ಳ್ಳಿನು ಖಚಿತಪಡಿಸಿಕೊಳ್ಳಲಿದ್ದಾರೆ. ಅವರ ಆಟವನ್ನು ನೋಡುವಾಗ ಚಿನ್ನಕ್ಕೆ ಕೊರಳೊಡ್ಡುವ ಸಾಧ್ಯತೆ ಕಂಡು ಬಂದಿದೆ.

ಗುರುವಾರ ನಡೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಅಮನ್​ ಅಲ್ಬೆನಿಯಾದ ಝೆಲಿಮ್ಖಾನ್ ಅಬಕರೋವ್ ವಿರುದ್ಧ 12-0 ಅಂತರದ ಭರ್ಜರಿ ಗೆಲುವು ಸಾಧಿಸಿ ಸೆಮಿಫೈನಲ್​ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ನಾರ್ತ್ ಮ್ಯಾಸೆಡೋನಿಯಾದ ವ್ಲಾಡಿಮಿರ್ ಎಗೊರೊವ್ ವಿರುದ್ಧ 10-0 ಅಂತರದ ಮಣಿಸಿ ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಅಮನ್​ ಅವರಿಗೆ ಇದು ಚೊಚ್ಚಲ ಒಲಿಂಪಿಕ್ಸ್​ ಟೂರ್ನಿಯಾಗಿದೆ. ಮೊದಲ ಪ್ರಯತ್ನದಲ್ಲೇ ಅವರು ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ವರ್ಷ ನಡೆದಿದ್ದ ಏಷ್ಯನ್​ ಚಾಂಪಿಯನ್​ಶಿಪ್​ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಅಮನ್​ ಅವರದ್ದಾಗಿದೆ.

ಇದನ್ನೂ ಓದಿ Paris Olympics: ಭರ್ಜರಿ ಗೆಲುವಿನೊಂದಿಗೆ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಅಮನ್ ಸೆಹ್ರಾವತ್

ನೀರಜ್​ ಮೇಲೆ ಚಿನ್ನ ನಿರೀಕ್ಷೆ

ಚಿನ್ನದ ಪದಕ ಭರವಸೆಯಾಗಿ ಉಳಿದಿರುವ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ(Neeraj Chopra) ಅವರು ಇಂದು ಫೈನಲ್​ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದು ಭಾರತಕ್ಕೆ ಟ್ರ್ಯಾಕ್​ ಆ್ಯಂಡ್​ ಫೀಲ್ಡ್​ನಲ್ಲಿ ಐತಿಹಾಸಿಕ ಪದಕ ಗೆದ್ದ ನೀರಜ್​ ಈ ಬಾರಿಯೂ ಚಿನ್ನಕ್ಕೆ ಗುರಿ ಇರಿಸಲಿ ಎನ್ನುವುದು ದೇಶವಾಸಿಗಳ ಹಾರೈಕೆ. ಫೈನಲ್​ ಪಂದ್ಯ ರಾತ್ರಿ 11:55ಕ್ಕೆ ಅರಂಭವಾಗಲಿದೆ.

ಮಂಗಳವಾರ ನಡೆದಿದ್ದ ಅರ್ಹತಾ ಸುತ್ತಿನ ಪಂದ್ಯದಲ್ಲಿ ತಮ್ಮ ಮೊದಲ ಪ್ರಯತ್ನದಲ್ಲೇ 89.34 ಮೀ. ದೂರ ಜಾವೆಲಿನ್​ ಎಸೆದು ನೇರವಾಗಿ ಫೈನಲ್​ ಪ್ರವೇಶಿಸಿದ್ದರು. ನೀರಜ್​ ಅವರೇ ಅರ್ಹತಾ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿದ್ದರು. ಹೀಗಾಗಿ ಫೈನಲ್​ನಲ್ಲಿಯೂ ಅವರ ಮೇಲೆ ನಿರೀಕ್ಷೆ ಇರಿಸಲಾಗಿದೆ. ಜರ್ಮನಿಯ ಜೂಲಿಯನ್ ವೆಬ್ಬರ್, ಪಾಕಿಸ್ತಾನದ ಅರ್ಷದ್ ನದೀಮ್, ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

Continue Reading

ಕ್ರೀಡೆ

Neeraj Chopra : ನೀರಜ್​ ಚೋಪ್ರಾನನ್ನ ಅರ್ಷದ್​ ನದೀಮ್ ಸೋಲಿಸಿ ಬಂಗಾರ ಗೆಲ್ತಾರೆ; ಪಾಕ್​ನ ಕ್ರಿಕೆಟಿಗರ ಶುಭಾಶಯ

Neeraj Chopra : “ಮೊದಲನೆಯದಾಗಿ, ಅರ್ಷದ್ ನದೀಮ್, ಫೈನಲ್​ಗೆ ಅರ್ಹತೆ ಪಡೆದಿರುವುದಕ್ಕೆ ಅಭಿನಂದನೆಗಳು” ಎಂದು ಪಾಕಿಸ್ತಾನದ ಟೆಸ್ಟ್ ನಾಯಕ ಶಾನ್ ಮಸೂದ್ ಹೇಳಿದ್ದಾರೆ. “ನಮ್ಮ ಶುಭ ಹಾರೈಕೆಗಳು ಮತ್ತು ಪ್ರಾರ್ಥನೆಗಳು ನಿಮ್ಮೊಂದಿಗಿವೆ. ನೀವು ಪಾಕಿಸ್ತಾನಕ್ಕಾಗಿ ಪದಕ ಗೆಲ್ಲುತ್ತೀರಿ ಎಂದು ನಾವು ಕುತೂಹಲದಿಂದ ಕಾಯುತ್ತಿದ್ದೇವೆ ಮತ್ತು ಆಶಿಸುತ್ತೇವೆ. ಪಾಕಿಸ್ತಾನಕ್ಕಾಗಿ ನೀವು ಏನು ಮಾಡಿದ್ದೀರಿ ಮತ್ತು ಸಾಧಿಸಿದ್ದೀರಿ ಎಂಬುದನ್ನು ಪದಗಳಲ್ಲಿ ವಿವರಿಸಲಾಗದು ನೀವು ರೋಲ್ ಮಾಡೆಲ್ ಮತ್ತು ಆಗಸ್ಟ್ 8 ರಂದು ನೀವು ವೇದಿಕೆಯಲ್ಲಿರುತ್ತೀರಿ ಎಂದು ನಾವು ಭಾವಿಸುತ್ತೇವೆ. ಆಲ್ ದಿ ಬೆಸ್ಟ್, ಸಹೋದರ, ಎಂದು ಅವರು ಹೇಳಿದ್ದಾರೆ.

VISTARANEWS.COM


on

Neeraj Chopra
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ (Paris Olympics 2024) ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಅಂತಿಮ ಸ್ಪರ್ಧೆಯಲ್ಲಿ ಏಷ್ಯಾದ ಇಬ್ಬರು ಜಾವೆಲಿನ್ ಎಸೆತಗಾರರು ಪರಸ್ಪರ ಮುಖಾಮುಖಿಯಾಗಲಿದ್ದಾರೆ. ನೀರಜ್ ಚೋಪ್ರಾ (Neeraj Chopra) ಈ ಸ್ಪರ್ಧೆಯಲ್ಲಿ ಹಾಲಿ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಆಗಿ ಟ್ರ್ಯಾಕ್ ಗೆ ಬರಲಿದ್ದಾರೆ. ಇದೇ ವೇಳೆ ಪಾಕಿಸ್ತಾನದ ಅರ್ಷದ್ ನದೀಮ್ ತಮ್ಮ ದೇಶಕ್ಕಾಗಿ 1992ರ ಬಳಿಕ ಒಲಿಂಪಿಕ್ ಮೊದಲ ಪದಕ ಗೆಲ್ಲುವ ಗುರಿ ಹೊಂದಿದ್ದಾರೆ. ಪಿಸಿಬಿ (ಪಾಕಿಸ್ತಾನ ಕ್ರಿಕೆಟ್ ಮಂಡಳಿ) ಪಾಕಿಸ್ತಾನ ತಂಡದ ಸ್ಟಾರ್ ಕ್ರಿಕೆಟಿಗರನ್ನು ಒಳಗೊಂಡ ವಿಶೇಷ ವೀಡಿಯೊವೊಂದನ್ನು ಬಿಡುಗಡೆ ಮಾಡಿದ್ದು, ಅರ್ಷದ್​​ಗೆ ಶುಭ ಹಾರೈಸಿದೆ. ಅದರಲ್ಲಿ ಅವರು ಈ ಬಾರಿ ನಾವೇ ಚಿನ್ನ ಗೆಲ್ಲೋದು ಎಂದು ಹೇಳಿದ್ದಾರೆ.

“ಮೊದಲನೆಯದಾಗಿ, ಅರ್ಷದ್ ನದೀಮ್, ಫೈನಲ್​ಗೆ ಅರ್ಹತೆ ಪಡೆದಿರುವುದಕ್ಕೆ ಅಭಿನಂದನೆಗಳು” ಎಂದು ಪಾಕಿಸ್ತಾನದ ಟೆಸ್ಟ್ ನಾಯಕ ಶಾನ್ ಮಸೂದ್ ಹೇಳಿದ್ದಾರೆ. “ನಮ್ಮ ಶುಭ ಹಾರೈಕೆಗಳು ಮತ್ತು ಪ್ರಾರ್ಥನೆಗಳು ನಿಮ್ಮೊಂದಿಗಿವೆ. ನೀವು ಪಾಕಿಸ್ತಾನಕ್ಕಾಗಿ ಪದಕ ಗೆಲ್ಲುತ್ತೀರಿ ಎಂದು ನಾವು ಕುತೂಹಲದಿಂದ ಕಾಯುತ್ತಿದ್ದೇವೆ ಮತ್ತು ಆಶಿಸುತ್ತೇವೆ. ಪಾಕಿಸ್ತಾನಕ್ಕಾಗಿ ನೀವು ಏನು ಮಾಡಿದ್ದೀರಿ ಮತ್ತು ಸಾಧಿಸಿದ್ದೀರಿ ಎಂಬುದನ್ನು ಪದಗಳಲ್ಲಿ ವಿವರಿಸಲಾಗದು ನೀವು ರೋಲ್ ಮಾಡೆಲ್ ಮತ್ತು ಆಗಸ್ಟ್ 8 ರಂದು ನೀವು ವೇದಿಕೆಯಲ್ಲಿರುತ್ತೀರಿ ಎಂದು ನಾವು ಭಾವಿಸುತ್ತೇವೆ. ಆಲ್ ದಿ ಬೆಸ್ಟ್, ಸಹೋದರ, ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Gautam Gambhir: 27 ವರ್ಷದ ಬಳಿಕ ಲಂಕಾ ವಿರುದ್ಧ ಸೋಲು; ಗಂಭೀರ್​ ಫುಲ್​ ಟ್ರೋಲ್​

ಬಾಬರ್ ಅಜಮ್, ನಸೀಮ್ ಶಾ, ಸರ್ಫರಾಜ್ ಅಹ್ಮದ್, ಶಾಹೀನ್ ಶಾ ಅಫ್ರಿದಿ ಮತ್ತು ಉಮರ್ ಗುಲ್ ಸೇರಿದಂತೆ ನದೀಮ್ ಉತ್ತಮ ಪ್ರದರ್ಶನ ನೀಡಿ ಪದಕ ತರಲಿ ಎಂದು ಇತರ ಹಾಲಿ ಮತ್ತು ಮಾಜಿ ಆಟಗಾರರು ಹಾರೈಸಿದ್ದಾರೆ.

ಅರ್ಷದ್ ನದೀಮ್ ವಿರುದ್ಧ ನೀರಜ್ ಚೋಪ್ರಾ


2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವ ಪಾಕಿಸ್ತಾನದ ಏಕೈಕ ಭರವಸೆ ಅರ್ಷದ್ ನದೀಮ್. ಬುಡಾಪೆಸ್ಟ್​​ನಲ್ಲಿ ವಿಶ್ವ ಚಾಂಪಿಯನ್ಶಿಪ್​​ನಲ್ಲಿ ನೀರಜ್ ಚಿನ್ನದ ಪದಕ ಗೆದ್ದಾಗ ನದೀಮ್​ ಬೆಳ್ಳಿ ಗೆದ್ದಿದ್ದರು. ಅವರು ತಮ್ಮ ಮೊದಲ ಪ್ರಯತ್ನದಲ್ಲೇ 86.59 ಮೀಟರ್ ಎಸೆದು 84 ಮೀಟರ್ ನೇರ ಅರ್ಹತಾ ಅಂಕವನ್ನು ದಾಟಿದ್ದಾರೆ. ಟೋಕಿಯೊ ಒಲಿಂಪಿಕ್ಸ್ 2020 ಚಿನ್ನದ ಪದಕ ವಿಜೇತ ನೀರಜ್ ತಮ್ಮ ಮೊದಲ ಪ್ರಯತ್ನದಲ್ಲೇ 89.34 ಮೀಟರ್ ಎಸೆಯುವ ಮೂಲಕ 32 ಎಸೆತಗಾರರನ್ನು ಒಳಗೊಂಡ ಎರಡೂ ಗುಂಪುಗಳಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.

ಪುರುಷರ ಜಾವೆಲಿನ್ ಥ್ರೋ ಫೈನಲ್ ಆಗಸ್ಟ್ 8 ರಂದು ಪ್ಯಾರಿಸ್​​ನ ಸ್ಟೇಡ್ ಡಿ ಫ್ರಾನ್ಸ್ನಲ್ಲಿ ನಡೆಯಲಿದೆ. ಟೋಕಿಯೊ 2020 ರಲ್ಲಿ ನೀರಜ್ 87.58 ಮೀಟರ್ ಎಸೆಯುವ ಮೂಲಕ ಒಲಿಂಪಿಕ್ ಚಾಂಪಿಯನ್ ಆಗಿ ಕಿರೀಟ ಧರಿಸಿದರು. 27ರ ಹರೆಯದ ಅರ್ಷದ್ ನದೀಮ್ 84.62 ಮೀಟರ್ ಎಸೆದು ಐದನೇ ಸ್ಥಾನ ಪಡೆದಿದ್ದರು. ಒಲಿಂಪಿಕ್ಸ್ ಇತಿಹಾಸದಲ್ಲಿ ಯಾವುದೇ ಟ್ರ್ಯಾಕ್ ಮತ್ತು ಫೀಲ್ಡ್ ಸ್ಪರ್ಧೆಯ ಫೈನಲ್​​​ಗೆ ಅರ್ಹತೆ ಪಡೆದ ಮೊದಲ ಪಾಕಿಸ್ತಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Continue Reading
Advertisement
karnataka Weather Forecast
ಮಳೆ4 mins ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Manu Bhaker
ಕ್ರೀಡೆ5 mins ago

Manu Bhaker : ಮನು ಭಾಕರ್​ಗೆ ಕ್ರೀಡಾ ಇಲಾಖೆಯಿಂದ ವಿಶೇಷ ಸನ್ಮಾನ; 30 ಲಕ್ಷ ರೂಪಾಯಿ ವಿತರಣೆ

Lalbagh Flower Show
ಬೆಂಗಳೂರು6 mins ago

Lalbagh Flower Show: ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ದೊರೆಯಬೇಕು; ಸಿದ್ದರಾಮಯ್ಯ

Cattle Smuggling
ದೇಶ19 mins ago

Cattle Smuggling: ಗಡಿಯಲ್ಲಿ ಬಿಎಸ್‌ಎಫ್‌ ಮಹಿಳಾ ಪೇದೆ ಶೌರ್ಯ; ಗೋವುಗಳ ಸಾಗಣೆ ತಡೆದ ದಿಟ್ಟೆ

Paris Olympics 2024
ಪ್ರಮುಖ ಸುದ್ದಿ52 mins ago

Paris Olympics 2024 : ರೇಸಿಂಗ್​ ಟ್ರ್ಯಾಕ್​ ಬಳಿಯೇ ಯುವಕನೊಬ್ಬನಿಗೆ ಪ್ರಪೋಸ್ ಮಾಡಿದ ಫ್ರಾನ್ಸ್​ನ ಮಹಿಳಾ ಅಥ್ಲೀಟ್​, ವಿಡಿಯೊ ಇದೆ

Naga Chaitanya deleated ex samantha
ಸಿನಿಮಾ54 mins ago

Naga Chaitanya: ನಿಶ್ಚಿತಾರ್ಥದ ಮೊದಲು ಮಾಜಿ ಪತ್ನಿಯ ಪೋಟೊ ಡಿಲಿಟ್‌ ಮಾಡಿದ ನಾಗ ಚೈತನ್ಯ!

Road Accident
ಉಡುಪಿ1 hour ago

Road Accident : ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಸವಾರನ ಕುತ್ತಿಗೆಗೆ ತಂತಿ ಸಿಲುಕಿ ಗಂಭೀರ

Aman Sehrawat
ಕ್ರೀಡೆ1 hour ago

Aman Sehrawat: ಕುಸ್ತಿಯಲ್ಲಿ ಪದಕ ಭರವಸೆ ಮೂಡಿಸಿದ ಅಮನ್ ಸೆಹ್ರಾವತ್; ಸೆಮಿಗೆ ಲಗ್ಗೆ

Sunita Williams
ವಿದೇಶ1 hour ago

Sunita Williams: 2025ರವರೆಗೂ ಬಾಹ್ಯಾಕಾಶದಲ್ಲೇ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌; ನಾಸಾ ಘೋಷಣೆ

Neeraj Chopra
ಕ್ರೀಡೆ1 hour ago

Neeraj Chopra : ನೀರಜ್​ ಚೋಪ್ರಾನನ್ನ ಅರ್ಷದ್​ ನದೀಮ್ ಸೋಲಿಸಿ ಬಂಗಾರ ಗೆಲ್ತಾರೆ; ಪಾಕ್​ನ ಕ್ರಿಕೆಟಿಗರ ಶುಭಾಶಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 mins ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌