Paris Olympics: ಒಲಿಂಪಿಕ್ಸ್​ ಶೂಟಿಂಗ್; ಪದಕ ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ ಶಾಸಕಿ - Vistara News

ಕ್ರೀಡೆ

Paris Olympics: ಒಲಿಂಪಿಕ್ಸ್​ ಶೂಟಿಂಗ್; ಪದಕ ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ ಶಾಸಕಿ

Paris Olympics: ಶ್ರೇಯಸಿ 2014ರ ಕಾಮನ್ವೆಲ್ತ್‌ ಗೇಮ್ಸ್‌ ಹಾಗೂ ಏಷ್ಯಾಡ್‌ನ‌ ಡಬಲ್‌ ಟ್ರ್ಯಾಪ್‌ ಸ್ಪರ್ಧೆಯಲ್ಲಿ ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಜಯಿಸಿದ್ದರು. 2018 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಅವರು ದೇಶಕ್ಕೆ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದೇಶಕ್ಕೆ ಮತ್ತು ಬಿಹಾರಕ್ಕೆ ಕೀರ್ತಿ ತಂದಿದ್ದರು.

VISTARANEWS.COM


on

Paris Olympics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟದಲ್ಲಿ ಸ್ಪರ್ಧಿಸುವ 117 ಭಾರತೀಯ ಕ್ರೀಡಾಪಟುಗಳಲ್ಲಿ ಒಬ್ಬರು ಶಾಸಕಿ ಕೂಡ ಇರುವುದು ವಿಶೇಷ. ಇವರ ಹೆಸರು ಶ್ರೇಯಸಿ ಸಿಂಗ್(Shreyasi Singh). ಬಿಹಾರದ ಜಮುಯಿ ವಿಧಾನಸಭಾ ಕ್ಷೇತ್ರದ(Member of Bihar Vidhan Sabha) ಹಾಲಿ ಬಿಜೆಪಿ ಶಾಸಕಿಯಾಗಿದ್ದಾರೆ. ಕಾಮನ್ವೆಲ್ತ್‌ ಗೇಮ್ಸ್‌ ಮತ್ತು ಏಷ್ಯಾಡ್‌ನ‌ಲ್ಲಿ ಪದಕ ಜಯಿಸಿದ್ದರು. 32 ವರ್ಷದ ಶ್ರೇಯಸಿ ಸಿಂಗ್‌, ಮಾಜಿ ಸಚಿವ ದಿವಂಗತ ದಿಗ್ವಿಜಯ್‌ ಸಿಂಗ್‌ ಅವರ ಪುತ್ರಿ.

ಆರಂಭದಲ್ಲಿ ಒಲಿಂಪಿಕ್ಸ್‌ ಆಯ್ಕೆಯ ಪಟ್ಟಿಯಲ್ಲಿ ಶ್ರೇಯಸಿ ಅವರ ಹೆಸರಿರಲಿಲ್ಲ. ಟೋಕಿಯೊ ಒಲಿಂಪಿಯನ್‌ ಮನು ಭಾಕರ್‌ ಮಹಿಳೆಯರ 10 ಮೀ. ಪಿಸ್ತೂಲ್‌ ಮತ್ತು 25 ಮೀ. ಪಿಸ್ತೂಲ್‌ ಸ್ಪರ್ಧೆಗಳಲ್ಲಿ ಅರ್ಹತೆ ಪಡೆದಿದ್ದರು. ಹೀಗಾಗಿ ಒಂದು ಕೋಟಾವನ್ನು ಮರುಹಂಚಿಕೆ ಮಾಡಬಹುದಾಗಿತ್ತು. ಇದನ್ನು ಟ್ರ್ಯಾಪ್‌ ಶೂಟರ್‌ಗಾಗಿ ಬದಲಾಯಿಸಲಾಯಿತು. ಹೀಗಾಗಿ ಈ ಕೋಟಾದಲ್ಲಿ ಶ್ರೇಯಸಿ ಅವರನ್ನು ಆಯ್ಕೆ ಮಾಡಲಾಯಿತು.

ಶ್ರೇಯಸಿ 2014ರ ಕಾಮನ್ವೆಲ್ತ್‌ ಗೇಮ್ಸ್‌ ಹಾಗೂ ಏಷ್ಯಾಡ್‌ನ‌ ಡಬಲ್‌ ಟ್ರ್ಯಾಪ್‌ ಸ್ಪರ್ಧೆಯಲ್ಲಿ ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಜಯಿಸಿದ್ದರು. 2018 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಅವರು ದೇಶಕ್ಕೆ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದೇಶಕ್ಕೆ ಮತ್ತು ಬಿಹಾರಕ್ಕೆ ಕೀರ್ತಿ ತಂದಿದ್ದರು.

ಒಲಿಂಪಿಕ್ಸ್​ನಲ್ಲಿ​ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ರೇಯಸಿ, “ನಾನು ಒಲಿಂಪಿಕ್ಸ್‌ ಕ್ರೀಡಾಕೂಡದಲ್ಲಿ ದೇಶವನ್ನು ಪ್ರತಿನಿಧಿಸಬೇಕೆಂಬುದು ನನ್ನ ತಂದೆಯ ದೊಡ್ಡ ಕನಸಾಗಿತ್ತು. ತಂದೆಯ ಕನಸಿನಂತೆ ಒಲಿಂಪಿಕ್ಸ್​ ಆಡುವ ಸೌಭಾಗ್ಯ ಒದಗಿ ಬಂದಿದೆ. ಕೂಟದಲ್ಲಿ ಶ್ರೇಷ್ಠ ಪ್ರದರ್ಶನ ತೋರುವ ಮೂಲಕ ಪದಕವೊಂದನ್ನು ಗೆಲ್ಲುವುದು ನನ್ನ ಗುರಿ. ಇದಕ್ಕಾಗಿ ಜಮುಯಿ ಜನತೆ ಪ್ರಾರ್ಥಿಸಲಿ” ಎಂದು ಹೇಳಿದ್ದಾರೆ. 2020ರ ಚುನಾವಣೆಯಲ್ಲಿ ಜುಮಯಿ ಕ್ಷೇತ್ರದಿಂದ ಬಿಜೆಪಿ ಪರ ಸ್ಪರ್ಧಿಸಿದ್ದ ಶ್ರೇಯಸಿ 41 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನು ಓದಿ India’s July 25 Schedule At Paris Olympics: ನಾಳೆಯಿಂದ ಭಾರತದ ಒಲಿಂಪಿಕ್ಸ್​ ಸ್ಪರ್ಧೆ ಆರಂಭ; ವೇಳಾಪಟ್ಟಿ ಹೀಗಿದೆ

ನಾಳೆಯಿಂದ ಭಾರತದ ಸ್ಪರ್ಧೆ ಆರಂಭ

ಭಾರತ (India’s Schedule At Paris Olympics) ನಾಳೆಯಿಂದ ಒಲಿಂಪಿಕ್ಸ್​ ಸ್ಪರ್ಧೆ ಆರಂಭಿಸಲಿದೆ(India’s July 25 Schedule At Paris Olympics). ನಾಳೆ(ಗುರುವಾರ) ನಡೆಯುವ ಆರ್ಚರಿ(Archery) ಸ್ಪರ್ಧೆಯ ಮಹಿಳೆಯರ ವೈಯಕ್ತಿಕ ಶ್ರೇಯಾಂಕ ಸುತ್ತು ವಿಭಾಗದಲ್ಲಿ ಭಾರತ ದೀಪಿಕಾ ಕುಮಾರಿ(Deepika Kumari), ಅಂಕಿತಾ ಭಕತ್(Ankita Bhakat), ಭಜನ್ ಕೌರ್(Bhajan Kaur)​ ಕಣಕ್ಕಿಳಿಯಲಿದ್ದಾರೆ. ಪುರುಷರ ವೈಯಕ್ತಿಕ ಶ್ರೇಯಾಂಕ ಸುತ್ತಿನಲ್ಲಿ ಬಿ. ಧೀರಾಜ್(B. Dhiraj), ತರುಣದೀಪ್ ರೈ(Tarundeep Rai), ಪ್ರವೀಣ್ ಜಾಧವ್(Pravin Jadhav) ಸ್ಪರ್ಧಿಸಲಿದ್ದಾರೆ. ಈ ಪಂದ್ಯ ಸಂಜೆ 5: 45ಕ್ಕೆ ನಡೆಯಲಿದೆ. ಮಹಿಳೆಯ ಪಂದ್ಯ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.

ಅಥ್ಲೆಟಿಕ್ಸ್​ ದೊಡ್ಡ ತಂಡ

ಅಥ್ಲೆಟಿಕ್ಸ್​ನಲ್ಲಿ 29 ಸ್ಪರ್ಧಿಗಳು ಭಾರತವನ್ನು ಪ್ರತಿನಿಧಿಸಲಿದ್ದಾರೆ. 18 ಪುರುಷರು ಹಾಗೂ 11 ಮಹಿಳೆಯರು ಸೇರಿದ್ದಾರೆ. ಆರಂಭದಲ್ಲಿ ಅಥ್ಲೀಟ್​ಗಳ ಸಂಖ್ಯೆ​ 30 ಇತ್ತು. ಆದರೆ ವನಿತಾ ಶಾಟ್‌ಪುಟರ್‌ ಅಭಾ ಖತುವಾ ಗೈರಿನಿಂದ 29ಕ್ಕೆ ಇಳಿಯಿತು. ಆದರೆ ಅವರನ್ನು ಕೈಬಿಟ್ಟ ಬಗ್ಗೆ ಯಾವುದೇ ಕಾರಣ ಅಥವಾ ವಿವರಣೆ ನೀಡಲಾಗಿಲ್ಲ.  29 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಟೋಕಿಯೊ ಒಲಿಂಪಿಕ್​ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ನಾಯಕನಾಗಿದ್ದಾರೆ.

ಶೂಟಿಂಗ್​ನಲ್ಲಿ ಒಟ್ಟು 21 ಮಂದಿ ಸ್ಥಾನ ಪಡೆದಿದ್ದಾರೆ. 10 ಮಂದಿ ಪುರುಷರು ಹಾಗೂ 11 ಮಂದಿ ಮಹಿಳಾ ಸ್ಪರ್ಧಿಗಳು ಕಾಣಿಸಿಕೊಂಡಿದ್ದಾರೆ. ಹಾಕಿ ತಂಡದಲ್ಲಿ 19 ಆಟಗಾರರಿದ್ದಾರೆ. ಟೇಬಲ್‌ ಟೆನಿಸ್​ನಲ್ಲಿ 8 ಮಂದಿ ಆಟಗಾರರು, ಬ್ಯಾಡ್ಮಿಂಟನ್​ನಲ್ಲಿ 7 ಮಂದಿ ಕಣಕ್ಕಿಳಿಯಲಿದ್ದಾರೆ. ಅವಳಿ ಒಲಿಂಪಿಕ್‌ ಪದಕ ಗೆದ್ದ ಪಿ.ವಿ. ಸಿಂಧು ಮೇಲೆ ಹ್ಯಾಟ್ರಿಕ್​ ಪದಕವೊಂದನ್ನು ನಿರೀಕ್ಷೆ ಮಾಡಲಾಗಿದೆ. ಉಳಿದಂತೆ ಕುಸ್ತಿ, ಆರ್ಚರಿ ಮತ್ತು ಬಾಕ್ಸಿಂಗ್‌ನಲ್ಲಿ ತಲಾ 6 ಮಂದಿ ಸ್ಪರ್ಧಿಸಲಿದ್ದಾರೆ.

ಗಾಲ್ಫ್​ನಲ್ಲಿ 4, ಟೆನಿಸ್‌ನಲ್ಲಿ 3, ಈಜು ಮತ್ತು ಹಾಯಿದೋಣಿಯಲ್ಲಿ ತಲಾ ಇಬ್ಬರು ಕಣಕ್ಕಿಳಿಯಲಿದ್ದಾರೆ. ಈಕ್ವೇಸ್ಟ್ರಿಯನ್‌(ಕುದುರೆ ಸವಾರಿ), ಜೂಡೋ, ರೋಯಿಂಗ್‌ ಮತ್ತು ವೇಟ್‌ಲಿಫ್ಟಿಂಗ್‌ನಲ್ಲಿ ಒಬ್ಬರಷ್ಟೇ ಸ್ಪರ್ಧಿಸಲಿದ್ದಾರೆ. ಪಿ.ವಿ.ಸಿಂಧು(PV Sindhu) ಮತ್ತು ಹಿರಿಯ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್(Sharath Kamal) ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics: ಒಲಿಂಪಿಕ್ಸ್​ ನೋಡಲು ಬಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಸಿಸಿಟಿವಿಯಲ್ಲಿ ಭಯಾನಕ ವಿಡಿಯೊ ಸೆರೆ

Paris Olympics: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ನೋಡಲು ಬಂದಿದ್ದ ಆಸ್ಟ್ರೇಲಿಯಾ ಮೂಲದ ಮಹಿಳೆಯ ಮೇಲೆ ಐವರು ಬರ್ಬರವಾಗಿ ಗ್ಯಾಂಗ್‌ ರೇಪ್ ಮಾಡಿರುವ ಆತಂಕಕಾರಿ ಘಟನೆ ತಡವಾಗಿ ನಡೆದಿದೆ. ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಜಗತ್ತಿನ ಅತ್ಯಂತ ದೊಡ್ಡ ಕ್ರೀಡಾಕೂಟವಾದ ಒಲಿಂಪಿಕ್ಸ್‌(Paris Olympics) ಟೂರ್ನಿಯ ಆತಿಥ್ಯ ವಹಿಸಿಕೊಂಡ ‘ಬೆಳಕಿನ ನಗರಿ’ ಪ್ಯಾರಿಸ್‌ ಈ ಕ್ರೀಡಾ ಮಹಾಮೇಳಕ್ಕೆ ಸಿದ್ಧವಾಗಿ ನಿಂತಿದೆ. ಇನ್ನೆರಡು ದಿನಗಳು ಕಳೆದರೆ ಇಲ್ಲಿ ಒಲಿಂಪಿಕ್ಸ್ ಜ್ಯೋತಿಯು ಪ್ರಜ್ವಲಿಸಲಿದೆ. ಆದರೆ, ಈ ಮಹಾ ಕ್ರೀಡಾಕೂಟ ಆರಂಭಕ್ಕೂ ಮುನ್ನವೇ ಪ್ಯಾರಿಸ್​ನಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದು ಕ್ರೀಡಾಭಿಮಾನಿಗಳನ್ನು ಬೆಚ್ಚಿ ಬೀಳಿಸಿದೆ.

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ನೋಡಲು ಬಂದಿದ್ದ ಆಸ್ಟ್ರೇಲಿಯಾ ಮೂಲದ ಮಹಿಳೆಯ ಮೇಲೆ ಐವರು ಬರ್ಬರವಾಗಿ ಗ್ಯಾಂಗ್‌ ರೇಪ್ ಮಾಡಿರುವ ಆತಂಕಕಾರಿ ಘಟನೆ ತಡವಾಗಿ ನಡೆದಿದೆ. ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 25 ವರ್ಷದ ಆಸ್ಟ್ರೇಲಿಯಾ ಮಹಿಳೆಯ ಮೇಲೆ ಗ್ಯಾಂಗ್‌ ರೇಪ್ ಮಾಡಲಾಗಿದೆ.

ಜುಲೈ 19ರ ರಾತ್ರಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೌಲಿನ್ ರೋಗ್ ಕ್ಯಾಬರ್ಟ್‌ನ ಪಬ್​ ಒಂದರಲ್ಲಿ ಮದ್ಯ ಸೇವಿಸಿ, ಹೊರ ಬರುವ ಸಂದರ್ಭದಲ್ಲಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಗ್ಯಾಂಗ್ ರೇಪ್ ನಡೆಸಿದ್ದಾಗಿ ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ.

ವೈರಲ್​ ಆಗುತ್ತಿರುವ ವಿಡಿಯೊದಲ್ಲಿ ಆಕೆ ಹರಿದ ಬಟ್ಟೆಯಲ್ಲೇ ಸಹಾಯಕ್ಕಾಗಿ ಹತ್ತಿರದಲ್ಲೇ ಇದ್ದ ಕಬಾಬ್ ಶಾಪ್‌ಗೆ ಓಡಿ ಬಂದು ಬಂದು ರಕ್ಷಣೆ ಪಡೆದಿದ್ದಾಳೆ. ಈ ಎಲ್ಲ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ವಿಡಿಯೊ ಕಂಡ ಅನೇಕರು ಈ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಫ್ರಾನ್ಸ್​ನಲ್ಲಿ ಮಹಿಳೆಯರಿಗೆ ಸರಿಯಾದ ಸುರಕ್ಷತೆ ಮತ್ತು ರಕ್ಷಣ ಇಲ್ಲ ಎಂದು ಆರೋಪಿಸಿದ್ದಾರೆ. ಸಿಸಿಟಿವಿ ವಿಡಿಯೋದಲ್ಲಿ ಆ ಮಹಿಳೆಯು ಓಡೋಡಿ ಬರುವುದು, ಭಯಭೀತರಾಗಿರುವುದು, ಸಹಾಯಕ್ಕಾಗಿ ಅಲ್ಲಿರುವ ಸಿಬ್ಬಂದಿಗಳಲ್ಲಿ ಮನವಿ ಮಾಡಿಕೊಳ್ಳುವ ದೃಶ್ಯಾವಳಿಗಳು ಸೆರೆಯಾಗಿವೆ. ಈಗಾಗಲೇ ಪ್ಯಾರಿಸ್ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದರೂ ಕೂಡ ಈ ಘಟನೆ ನಡೆದಿರುವು ನಿಜಕ್ಕೂ ಆಘಾತಕಾರಿ ಸಂಗತಿ.

ಇದನ್ನೂ ಓದಿ Paris Olympics: ಒಲಿಂಪಿಕ್ಸ್​ ಶೂಟಿಂಗ್; ಪದಕ ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ ಶಾಸಕಿ

ಬೆದರಿಕೆ ಹಾಕಿದ ಹಮಾಸ್ ಉಗ್ರರು


ಈಗಾಗಲೇ ಈ ಕ್ರೀಡಾಕೂಟಕ್ಕೆ ಉಗ್ರರ ದಾಳಿಯ ಭೀತಿ ಎದುರಾಗಿದ್ದ ಕಾರಣ ಪ್ಯಾರಿಸ್​ನಲ್ಲಿ ಹಿಂದೆಂದೂ ಕಾಣದ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚುವರಿ ಭದ್ರತೆಗಾಗಿ ಫ್ರಾನ್ಸ್​ನೊಂದಿಗೆ ಭಾರತದ ಯೋಧರು ಕೂಡ ಕೈಜೋಡಿಸಿದ್ದಾರೆ. ಇದೀಗ ಹಮಾಸ್(Hamas) ಭಯೋತ್ಪಾದಕರಿಂದ(hamas terrorist) ಭೀಕರ ದಾಳಿಯ ಬೆದರಿಕೆ ಬಂದಿದೆ.

ಮುಸುಕುಧಾರಿ ವ್ಯಕ್ತಿಯೊಬ್ಬ ಅರೇಬಿಕ್ ಭಾಷೆಯಲ್ಲಿ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೊದಲ್ಲಿ ಮುಸುಕುಧಾರಿ ಒಲಿಂಪಿಕ್ಸ್​ ವೇಳೆ ಫ್ರಾನ್ಸ್​ ಅಧ್ಯಕ್ಷರನ್ನು ಹತ್ಯೆ ಮಾಡುವುದಾಗಿ ಮತ್ತು ಫ್ರಾನ್ಸ್​ನಲ್ಲಿ ರಕ್ತದೋಕುಳಿ ಹರಿಸುವುದಾಗಿ ಎಚ್ಚರಿಕೆ ನೀಡಿದ್ದಾನೆ.

ಈ ವಿಡಿಯೊ ವೈರಲ್​ ಆಗುತ್ತಿದ್ದಂತೆ ಫ್ರಾನ್ಸ್​ನಲ್ಲಿ ಮತ್ತಷ್ಟು ಭದ್ರತೆ ಕೈಗೊಳ್ಳಲಾಗಿದೆ. ಪ್ಯಾರಿಸ್​ನ ಕ್ರೀಡಾ ಗ್ರಾಮದ ವಿವಿಧ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ಸಂಘಟಕರು ನಿರ್ಧರಿಸಿದ್ದಾರೆ. ಪ್ಯಾರಿಸ್ ಪೊಲೀಸ್ ಮುಖ್ಯಸ್ಥ ಲಾರೆಂಟ್ ನುನೆಜ್ ಅವರು ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟಕ್ಕೆ ಸಂಬಂಧಿಸಿ ಮಾತನಾಡಿದ್ದು, ನಾವು ಉಗ್ರರ ಬೆದರಿಕೆಯ ಬಗ್ಗೆ ಕಳವಳ ಹೊಂದಿದ್ದೇವೆ. ವಿಶೇಷವಾಗಿ ಇಸ್ಲಾಮಿಕ್ ಉಗ್ರವಾದಿಗಳು, ಪ್ಯಾಲೆಸ್ಟೀನಿಯನ್ ಪರ ಚಳವಳಿಯಿಂದ ಕಡಿಮೆ-ತೀವ್ರತೆಯ ಬೆದರಿಕೆಯ ಬಗ್ಗೆಯೂ ನಾವು ವಿಶೇಷ ಕಾಳಜಿ ವಹಿಸುತ್ತೇವೆ. ಕ್ರೀಡಾಪಟುಗಳು ಆತಂಕಪಡಬೇಕಿಲ್ಲ ಎಂದು ಹೇಳಿದ್ದಾರೆ.

Continue Reading

ಕ್ರೀಡೆ

India’s July 25 Schedule At Paris Olympics: ನಾಳೆಯಿಂದ ಭಾರತದ ಒಲಿಂಪಿಕ್ಸ್​ ಸ್ಪರ್ಧೆ ಆರಂಭ; ವೇಳಾಪಟ್ಟಿ ಹೀಗಿದೆ

India’s July 25 Schedule At Paris Olympics:ನಾಳೆ(ಗುರುವಾರ) ನಡೆಯುವ ಆರ್ಚರಿ(Archery) ಸ್ಪರ್ಧೆಯ ಮಹಿಳೆಯರ ವೈಯಕ್ತಿಕ ಶ್ರೇಯಾಂಕ ಸುತ್ತು ವಿಭಾಗದಲ್ಲಿ ಭಾರತ ದೀಪಿಕಾ ಕುಮಾರಿ(Deepika Kumari), ಅಂಕಿತಾ ಭಕತ್(Ankita Bhakat), ಭಜನ್ ಕೌರ್(Bhajan Kaur)​ ಕಣಕ್ಕಿಳಿಯಲಿದ್ದಾರೆ.

VISTARANEWS.COM


on

India’s July 25 Schedule At Paris Olympics
Koo

ಪ್ಯಾರಿಸ್​: ಎಂದಿನಂತೆ ಈ ಸಲವೂ ಒಲಿಂಪಿಕ್ಸ್(Paris Olympics)​ ಉದ್ಘಾಟನೆಗೆ ಮುನ್ನವೇ ಕೆಲವು ಸ್ಫರ್ದೆಗಳು ಆರಂಭಗೊಂಡಿವೆ. ಫುಟ್ಬಾಲ್​ ಮತ್ತು ರಗ್ಬಿ ಬುಧವಾರ ಆರಂಭಗೊಂಡರೆ, ನಾಳೆ(ಗುರುವಾರ) ಹ್ಯಾಂಡ್​ಬಾಲ್​ ಮತ್ತು ಆರ್ಚರಿ ಸ್ಪರ್ಧೆಗಳು ನಡೆಯಲಿವೆ. ಭಾರತ ಕೂಡ(India’s Schedule At Paris Olympics) ನಾಳೆಯಿಂದ ಸ್ಪರ್ಧೆ ಆರಂಭಿಸಲಿದೆ(India’s July 25 Schedule At Paris Olympics). ಆರ್ಚರಿ ಪಟುಗಳು ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಒಲಿಂಪಿಕ್ಸ್​ ಉದ್ಘಾಟನ ಸಮಾರಂಭ ಜುಲೈ 26ರಂದು ನಡೆಯಲಿದೆ.

ನಾಳೆ(ಗುರುವಾರ) ನಡೆಯುವ ಆರ್ಚರಿ(Archery) ಸ್ಪರ್ಧೆಯ ಮಹಿಳೆಯರ ವೈಯಕ್ತಿಕ ಶ್ರೇಯಾಂಕ ಸುತ್ತು ವಿಭಾಗದಲ್ಲಿ ಭಾರತ ದೀಪಿಕಾ ಕುಮಾರಿ(Deepika Kumari), ಅಂಕಿತಾ ಭಕತ್(Ankita Bhakat), ಭಜನ್ ಕೌರ್(Bhajan Kaur)​ ಕಣಕ್ಕಿಳಿಯಲಿದ್ದಾರೆ. ಪುರುಷರ ವೈಯಕ್ತಿಕ ಶ್ರೇಯಾಂಕ ಸುತ್ತಿನಲ್ಲಿ ಬಿ. ಧೀರಾಜ್(B. Dhiraj), ತರುಣದೀಪ್ ರೈ(Tarundeep Rai), ಪ್ರವೀಣ್ ಜಾಧವ್(Pravin Jadhav) ಸ್ಪರ್ಧಿಸಲಿದ್ದಾರೆ. ಈ ಪಂದ್ಯ ಸಂಜೆ 5: 45ಕ್ಕೆ ನಡೆಯಲಿದೆ. ಮಹಿಳೆಯ ಪಂದ್ಯ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.

ಇದನ್ನೂ ಓದಿ Paris Olympics: ಪ್ಯಾರಿಸ್​ನಲ್ಲಿ ರಕ್ತದೋಕುಳಿ ಹರಿಸುವುದಾಗಿ ವಿಡಿಯೊ ಮೂಲಕ ಬೆದರಿಕೆ ಹಾಕಿದ ಹಮಾಸ್ ಉಗ್ರರು

27ರಂದು ಹಲವು ಸ್ಪರ್ಧೆ


ಶನಿವಾರದಂದು(ಜುಲೈ 27) ಭಾರತದ ಹಲವು ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಭಾರತೀಯ ಕ್ರೀಡಾಪಟುಗಳ ಸ್ಪರ್ಧೆಯ ವೇಳಾಪಟ್ಟಿ ಇಂತಿದೆ.

ಬ್ಯಾಡ್ಮಿಂಟನ್

ಪುರುಷರ ಸಿಂಗಲ್ಸ್ ಗುಂಪು ಹಂತ: ಎಚ್ ಎಸ್ ಪ್ರಣಯ್, ಲಕ್ಷ್ಯ ಸೇನ್.

ಮಹಿಳೆಯರ ಸಿಂಗಲ್ಸ್ ಗುಂಪು ಹಂತ: ಪಿ.ವಿ ಸಿಂಧು.

ಪುರುಷರ ಡಬಲ್ಸ್ ಗುಂಪು ಹಂತ: ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ.

ಮಹಿಳೆಯರ ಡಬಲ್ಸ್ ಗುಂಪು ಹಂತ: ತನೀಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ. (ಮಧ್ಯಾಹ್ನ 12 ಗಂಟೆಯಿಂದ)

ರೋಯಿಂಗ್


ಪುರುಷರ ಸಿಂಗಲ್ ಸ್ಕಲ್ಸ್ ಹೀಟ್ಸ್: ಬಾಲರಾಜ್ ಪನ್ವಾರ್. ಆರಂಭ ಮಧ್ಯಾಹ್ನ 12:30 ರಿಂದ

ಶೂಟಿಂಗ್

10 ಮೀ ಏರ್ ರೈಫಲ್ ಮಿಶ್ರ ತಂಡ ಅರ್ಹತೆ: ಸಂದೀಪ್ ಸಿಂಗ್, ಅರ್ಜುನ್ ಬಾಬುತಾ, ಎಲವೆನಿಲ್ ವಲರಿವನ್, ರಮಿತಾ ಜಿಂದಾಲ್. ಮಧ್ಯಾಹ್ನ 12:30

10ಮೀ ಏರ್ ಪಿಸ್ತೂಲ್ ಪುರುಷರ ಅರ್ಹತೆ: ಸರಬ್ಜೋತ್ ಸಿಂಗ್, ಅರ್ಜುನ್ ಚೀಮಾ. (ಮಧ್ಯಾಹ್ನ 2 ಗಂಟೆ)

10ಮೀ ಏರ್ ರೈಫಲ್ ಮಿಶ್ರ ತಂಡ ಪದಕ ಸುತ್ತುಗಳು: (ಅರ್ಹತೆ ಪಡೆದರೆ) ಮಧ್ಯಾಹ್ನ 2 ಗಂಟೆ

10 ಮೀ ಏರ್ ಪಿಸ್ತೂಲ್ ಮಹಿಳೆಯರ ಅರ್ಹತೆ ಸುತ್ತು: ರಿದಮ್ ಸಾಂಗ್ವಾನ್, ಮನು ಭಾಕರ್. (ಸಂಜೆ 4 ಗಂಟೆಯಿಂದ)

ಟೆನಿಸ್; ಮೊದಲ ಸುತ್ತಿನ ಪಂದ್ಯಗಳು


ಪುರುಷರ ಸಿಂಗಲ್ಸ್: ಸುಮಿತ್ ನಗಾಲ್.

ಪುರುಷರ ಡಬಲ್ಸ್: ರೋಹನ್ ಬೋಪಣ್ಣ ಮತ್ತು ಎನ್. ಶ್ರೀರಾಮ್ ಬಾಲಾಜಿ. (ಮಧ್ಯಾಹ್ನ 3:30 ರಿಂದ)

ಟೇಬಲ್ ಟೆನ್ನಿಸ್


ಪುರುಷರ ಸಿಂಗಲ್ಸ್: ಶರತ್ ಕಮಲ್, ಹರ್ಮೀತ್ ದೇಸಾಯಿ

ಮಹಿಳೆಯರ ಸಿಂಗಲ್ಸ್: ಮಾಣಿಕಾ ಬಾತ್ರಾ, ಶ್ರೀಜಾ ಅಕುಲಾ. (ಸಂಜೆ 6:30 ರಿಂದ)

ಬಾಕ್ಸಿಂಗ್

ಮಹಿಳೆಯರ 54 ಕೆಜಿ ವಿಭಾಗ: ಪ್ರೀತಿ ಪವಾರ್, 32ರ ಸುತ್ತು. (ಸಂಜೆ 7 ರಿಂದ)

ಹಾಕಿ


ಪುರುಷರ ಗುಂಪು ‘ಬಿ’:
ಭಾರತ ಮತ್ತು ನ್ಯೂಜಿಲ್ಯಾಂಡ್​. (ರಾತ್ರಿ 9 ಗಂಟೆಗೆ)

Continue Reading

ಕ್ರೀಡೆ

Paris Olympics: ಪ್ಯಾರಿಸ್​ನಲ್ಲಿ ರಕ್ತದೋಕುಳಿ ಹರಿಸುವುದಾಗಿ ವಿಡಿಯೊ ಮೂಲಕ ಬೆದರಿಕೆ ಹಾಕಿದ ಹಮಾಸ್ ಉಗ್ರರು

Paris Olympics: ಮುಸುಕುಧಾರಿ ವ್ಯಕ್ತಿಯೊಬ್ಬ ಅರೇಬಿಕ್ ಭಾಷೆಯಲ್ಲಿ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೊದಲ್ಲಿ ಮುಸುಕುಧಾರಿ ಒಲಿಂಪಿಕ್ಸ್​ ವೇಳೆ ಫ್ರಾನ್ಸ್​ ಅಧ್ಯಕ್ಷರನ್ನು ಹತ್ಯೆ ಮಾಡುವುದಾಗಿ ಮತ್ತು ಫ್ರಾನ್ಸ್​ನಲ್ಲಿ ರಕ್ತದೋಕುಳಿ ಹರಿಸುವುದಾಗಿ ಎಚ್ಚರಿಕೆ ನೀಡಿದ್ದಾನೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಅತಿ ದೊಡ್ಡ ಕ್ರೀಡಾಕೂಟವಾದ ಪ್ಯಾರಿಸ್​ ಒಲಿಂಪಿಕ್ಸ್(Paris Olympics) ಆರಂಭಕ್ಕೆ​ ಇನ್ನು 2 ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ಈ ಕ್ರೀಡಾಕೂಟಕ್ಕೆ ಉಗ್ರರ ದಾಳಿಯ ಭೀತಿ ಎದುರಾಗಿದ್ದ ಕಾರಣ ಪ್ಯಾರಿಸ್​ನಲ್ಲಿ ಹಿಂದೆಂದೂ ಕಾಣದ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚುವರಿ ಭದ್ರತೆಗಾಗಿ ಫ್ರಾನ್ಸ್​ನೊಂದಿಗೆ ಭಾರತದ ಯೋಧರು ಕೂಡ ಕೈಜೋಡಿಸಿದ್ದಾರೆ. ಇದೀಗ ಹಮಾಸ್(Hamas) ಭಯೋತ್ಪಾದಕರಿಂದ(hamas terrorist) ಭೀಕರ ದಾಳಿಯ ಬೆದರಿಕೆ ಬಂದಿದೆ.

ಮುಸುಕುಧಾರಿ ವ್ಯಕ್ತಿಯೊಬ್ಬ ಅರೇಬಿಕ್ ಭಾಷೆಯಲ್ಲಿ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೊದಲ್ಲಿ ಮುಸುಕುಧಾರಿ ಒಲಿಂಪಿಕ್ಸ್​ ವೇಳೆ ಫ್ರಾನ್ಸ್​ ಅಧ್ಯಕ್ಷರನ್ನು ಹತ್ಯೆ ಮಾಡುವುದಾಗಿ ಮತ್ತು ಫ್ರಾನ್ಸ್​ನಲ್ಲಿ ರಕ್ತದೋಕುಳಿ ಹರಿಸುವುದಾಗಿ ಎಚ್ಚರಿಕೆ ನೀಡಿದ್ದಾನೆ.

ಈ ವಿಡಿಯೊ ವೈರಲ್​ ಆಗುತ್ತಿದ್ದಂತೆ ಫ್ರಾನ್ಸ್​ನಲ್ಲಿ ಮತ್ತಷ್ಟು ಭದ್ರತೆ ಕೈಗೊಳ್ಳಲಾಗಿದೆ. ಪ್ಯಾರಿಸ್​ನ ಕ್ರೀಡಾ ಗ್ರಾಮದ ವಿವಿಧ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ಸಂಘಟಕರು ನಿರ್ಧರಿಸಿದ್ದಾರೆ. ಪ್ಯಾರಿಸ್ ಪೊಲೀಸ್ ಮುಖ್ಯಸ್ಥ ಲಾರೆಂಟ್ ನುನೆಜ್ ಅವರು ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟಕ್ಕೆ ಸಂಬಂಧಿಸಿ ಮಾತನಾಡಿದ್ದು, ನಾವು ಉಗ್ರರ ಬೆದರಿಕೆಯ ಬಗ್ಗೆ ಕಳವಳ ಹೊಂದಿದ್ದೇವೆ. ವಿಶೇಷವಾಗಿ ಇಸ್ಲಾಮಿಕ್ ಉಗ್ರವಾದಿಗಳು, ಪ್ಯಾಲೆಸ್ಟೀನಿಯನ್ ಪರ ಚಳವಳಿಯಿಂದ ಕಡಿಮೆ-ತೀವ್ರತೆಯ ಬೆದರಿಕೆಯ ಬಗ್ಗೆಯೂ ನಾವು ವಿಶೇಷ ಕಾಳಜಿ ವಹಿಸುತ್ತೇವೆ. ಕ್ರೀಡಾಪಟುಗಳು ಆತಂಕಪಡಬೇಕಿಲ್ಲ ಎಂದು ಹೇಳಿದ್ದಾರೆ.

ಭಯೋತ್ಪಾದನಾ ದಾಳಿ ತಡೆ ಭದ್ರತಾ ಕಾರ್ಯಕ್ಕಾಗಿ ಭಾರತೀಯ ಸೇನೆಯಲ್ಲಿ ತರಬೇತುಗೊಂಡ ಶ್ವಾನದಳವನ್ನು ನಿಯೋಜಿಸಲಾಗಿದೆ. ಈ ಶ್ವಾನಪಡೆಯ ಸಾಮರ್ಥ್ಯ ಪರೀಕ್ಷೆ ನಡೆದದ್ದು ಬೆಂಗಳೂರಿನಲ್ಲಿ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್‌) ಮತ್ತು ವಿಶೇಷ ಕಮಾಂಡೊ ಪಡೆಯ ಭಾರತೀಯ ಕೆ9 (ಕೆನೈನ್) ಹತ್ತು ಶ್ವಾನಗಳ ಪಡೆಯನ್ನು ಪ್ಯಾರಿಸ್‌ಗೆ ಕಳುಹಿಸಲಾಗಿದೆ. ಬೆಂಗಳೂರು ಸಮೀಪದ ತರಳುವಿನಲ್ಲಿರುವ ಸಿಆರ್‌ಪಿಎಫ್ ಶ್ವಾನ ತಳಿ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಈ ಶ್ವಾನಪಡೆಯ ಸಾಮರ್ಥ್ಯ ಪರೀಕ್ಷೆ ನಡೆಸಿದ ಬಳಿಕ ಪ್ಯಾರಿಸ್‌ಗೆ ಕಳುಹಿಸಲಾಗಿದೆ. ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿರುವ ಭದ್ರತಾ ಪಡೆಗಳೊಂದಿಗೆ ಈ ಶ್ವಾನಪಡೆಯು ಕಾರ್ಯನಿರ್ವಹಿಸಲಿದೆ.

ಇದನ್ನೂ ಓದಿ Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೂ ವಕ್ಕರಿಸಿದ ಕೊರೊನಾ ಸೋಂಕು; ಮೊದಲ ಪ್ರಕರಣ ಪತ್ತೆ

ಈ ಶ್ವಾನಗಳಿಗೆ ಹತ್ತು ವಾರಗಳ ಕಾಲ ವಿಶೇಷ ತರಬೇತಿ ನೀಡಲಾಗಿದೆ. ಸಿಎಪಿಎಫ್‌, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌), ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ), ಇಂಡೋ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಪಡೆಗಳಿಂದ ಈ ಶ್ವಾನ ಮತ್ತು ನಿರ್ವಹಾಕರನ್ನು ಆಯ್ಕೆ ಮಾಡಲಾಗಿದೆ. ಈ ಶ್ವಾನಪಡೆಯಲ್ಲಿರುವ ಬೆಲ್ಜಿಯನ್ ಮೆಲಿನೊಸ್ ತಳಿಯು ಪ್ರಮುಖವಾಗಿದೆ. ಬಾಂಬ್‌ ಪತ್ತೆ ಕಾರ್ಯಾಚರಣೆಯಲ್ಲಿ ಅತ್ಯಂತ ಚುರುಕಾದ ತಳಿ ಇದಾಗಿದೆ.

ಪ್ಯಾರಿಸ್‌ ಆತಿಥ್ಯದಲ್ಲಿ ನಡೆಯಲಿರುವ 3ನೇ ಒಲಿಂಪಿಕ್ಸ್‌ ಕೀಡಾಕೂಟ ಇದಾಗಿದೆ. ಮೊದಲ ಒಲಿಂಪಿಕ್ಸ್‌ ನಡೆದದ್ದು 1900ರಲ್ಲಿ. ಇದಾದ ಬಳಿಕ 1924ರಲ್ಲಿ ಆತಿಥ್ಯ ವಹಿಸಿತ್ತು. ಇದೀಗ ಬರೋಬ್ಬರಿ 100 ವರ್ಷಗಳ ಬಳಿಕ ಇಲ್ಲಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ನಡೆಯುತ್ತಿದೆ. ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Continue Reading

ಕ್ರೀಡೆ

IPL 2025: ಆರ್​ಸಿಬಿ ಸೇರಲಿದ್ದಾರೆ ಹಿಟ್​ಮ್ಯಾನ್​ ರೋಹಿತ್​ ಶರ್ಮ!

IPL 2025: ರೋಹಿತ್​ ಆರ್​ಸಿಬಿ ಸೇರುತ್ತಾರೆ ಎನ್ನುವ ಸುದ್ದಿ ಕೇಳಿದ್ದೇ ತಡ ಅಭಿಮಾನಿಗಳು ಆರ್​ಸಿಬಿ ಜೆರ್ಸಿಯಲ್ಲಿ ರೋಹಿತ್​ ಅವರ ಫೋಟೊವನ್ನು ಎಡಿಟ್​ ಮಾಡಿ ಎಲ್ಲಡೆ ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಒಂದೊಮ್ಮೆ ಅಭಿಮಾನಿಗಳ ಈ ಮಾತು ನಿಜವಾದರೂ ಅಚ್ಚರಿಯಿಲ್ಲ. ಆದರೆ ರೋಹಿತ್​ ಹಾಗೂ ಆರ್​ಸಿಬಿ ಫ್ರಾಂಚೈಸಿ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

VISTARANEWS.COM


on

IPL 2025: Rohit Sharma To Captain RCB In IPL 2025?
Koo

ಮುಂಬಯಿ: 18ನೇ ಆವೃತ್ತಿಯ ಐಪಿಎಲ್(IPL 2025)​ ಕುರಿತಾಗಿ ಪ್ರತಿ ದಿನ ಸಾಮಾಜಿಕ ಜಾಲತಾಣದಲ್ಲಿ ಒಂದಲ್ಲ ಒಂದು ಸುದ್ದಿಗಳು ಭಾರೀ ಚರ್ಚೆಯಾಗುತ್ತಿದೆ. ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮಾಜಿ ನಾಯಕ ರೋಹಿತ್​ ಶರ್ಮ(Rohit Sharma) ಅವರು ಆರ್​ಸಿಬಿ(RCB) ಸೇರಲಿದ್ದಾರೆ(rohit sharma join rcb team) ಎಂದು ವರದಿಯಾಗಿದೆ. ಇದೇ ವರ್ಷದ ಡಿಸೆಂಬರ್​ನಲ್ಲಿ ಆಟಗಾರರ ಮೆಗಾ ಹರಾಜು ಕೂಡ ನಡೆಯಲಿದ್ದು ಹಲವು ಸ್ಟಾರ್​ ಆಟಗಾರರು ತಮ್ಮ ಮೂಲ ತಂಡ ತೊರೆದು ಬೇರೆ ತಂಡದ ಪರ ಆಡಲು ಬಯಸಿರುವುದಾಗಿ ತಿಳಿದುಬಂದಿದೆ.

ಕಳೆದ 17ನೇ ಆವೃತ್ತಿಯಲ್ಲಿ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರನ್ನು ದಿಢೀರ್​ ಆಗಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕನನ್ನಾಗಿ ನೇಮಿಸಿ, 5 ಬಾರಿ ಕಪ್​ ಗೆಲ್ಲಿಸಿದ ರೋಹಿತ್​ ಅವರನ್ನು ನಾಯಕನ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಇದು ರೋಹಿತ್‌ ಅಭಿಮಾನಿಗಳು ಸೇರಿ ತಂಡದ ಸಹ ಆಟಗಾರರಿಗೂ ತೀವ್ರ ನೋವುಂಟು ಮಾಡಿತ್ತು. ಇದೇ ವಿಚಾರವಾಗಿ ಮುಂಬೈ ಫ್ರಾಂಚೈಸಿ ವಿರುದ್ಧ ತಮ್ಮದೇ ಅಭಿಮಾನಿಗಳು ಆಕ್ರೋಶ ಕೂಡ ವ್ಯಕ್ತಪಡಿಸಿದ್ದರು. ಅದಾಗಲೇ ರೋಹಿತ್​ ಮುಂಬೈ ತಂಡ ತೊರೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು, ಆದರೂ ರೋಹಿತ್​ ತಂಡದ ಪರ ಆಡಿದ್ದರು. ಆದರೆ ಈ ಬಾರಿ ಮಾತ್ರ ಮುಂಬೈ ಪರ ಆಡದಿರಲು ರೋಹಿತ್​ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ರೋಹಿತ್ ಶರ್ಮಗೆ ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್‌ ಪ್ರಾಂಚೈಸಿಯಿಂದ ನಾಯಕತ್ವದ ಆಫರ್‌ಗಳು ಬಂದಿದೆ ಎನ್ನಲಾಗಿದೆ. ಆದರೆ, ರೋಹಿತ್​ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುವ ಆಸಕ್ತಿ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರೋಹಿತ್​ ಆರ್​ಸಿಬಿ ಸೇರುತ್ತಾರೆ ಎನ್ನುವ ಸುದ್ದಿ ಕೇಳಿದ್ದೇ ತಡ ಅಭಿಮಾನಿಗಳು ಆರ್​ಸಿಬಿ ಜೆರ್ಸಿಯಲ್ಲಿ ರೋಹಿತ್​ ಅವರ ಫೋಟೊವನ್ನು ಎಡಿಟ್​ ಮಾಡಿ ಎಲ್ಲಡೆ ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಒಂದೊಮ್ಮೆ ಅಭಿಮಾನಿಗಳ ಈ ಮಾತು ನಿಜವಾದರೂ ಅಚ್ಚರಿಯಿಲ್ಲ. ಆದರೆ ರೋಹಿತ್​ ಹಾಗೂ ಆರ್​ಸಿಬಿ ಫ್ರಾಂಚೈಸಿ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಇದನ್ನೂ ಓದಿ Mumbai Indians : ಮುಂದಿನ ಐಪಿಎಲ್​ಗೆ ಮುಂಬೈ ತೊರೆಯಲಿದ್ದಾರೆ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್​

ರೋಹಿತ್‌ ಶರ್ಮ ಅವರನ್ನು ನಾಯಕತ್ವ ಸ್ಥಾನದಿಂದ ಕೈಬಿಟ್ಟು ಪಾಂಡ್ಯ ಅವರಿಗೆ ಪಟ್ಟ ಕಟ್ಟಿದ ಕೆಲವೇ ಕ್ಷಣದಲ್ಲಿ ಮಂಬೈ ಇಂಡಿಯನ್ಸ್‌ ಫ್ರಾಂಚೈಸಿಯು ಟ್ವಿಟರ್‌ನಲ್ಲಿ (ಎಕ್ಸ್‌) ನಾಲ್ಕು ಲಕ್ಷಕ್ಕೂ ಹೆಚ್ಚು ಫಾಲೋವರ್ಗಳನ್ನು ಕಳೆದುಕೊಂಡಿತ್ತು. ಒಂದೊಮ್ಮೆ ರೋಹಿತ್ ಈ ಬಾರಿ​ ಮುಂಬೈ ತಂಡ ತೊರೆದರೆ ಮತ್ತಷ್ಟು ಫಾಲೋವರ್ಗಳ ಸಂಖ್ಯೆ ಕುಸಿತ ಕಾಣುವುದು ನಿಶ್ಚಿತ.

17 ಆವೃತ್ತಿಗಳಿಂದ ಈ ಸಲ ಕಪ್​ ನಮ್ದೇ ಎಂದು ಹೇಳಿಕೊಂಡು ಬಂದರೂ ಒಮ್ಮೆಯೂ ಕಪ್​ ಗೆಲ್ಲುವಲ್ಲಿ ಯಶಸ್ವಿಯಾಗದ ಆರ್​ಸಿಬಿಗೆ ರೋಹಿತ್​ ಬಂದು ಕಪ್​ ಗೆಲ್ಲಿಸಬೇಕು ಎನ್ನುವುದು ಆರ್​ಸಿಬಿ ಅಭಿಮಾನಿಗಳ ಬಯಕೆಯಾಗಿದೆ. ರೋಹಿತ್​ ಗರಿಷ್ಠ 5 ಐಪಿಎಲ್ ಕಪ್​ ಗೆದ್ದ ನಾಯಕನಾಗಿದ್ದಾರೆ. ರೋಹಿತ್​ ಮಾತ್ರವಲ್ಲದೆ ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್​ ಕೂಡ ಮುಂಬೈ ತಂಡ ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಬುಮ್ರಾ ತಮ್ಮ ತವರಾದ ಗುಜರಾತ್​ ಟೈಟಾನ್ಸ್​​ ತಂಡದ ಪರ ಆಡಲಿದ್ದಾರೆ ಎನ್ನಲಾಗಿದೆ.

Continue Reading
Advertisement
Mock demonstration by SDRF team on flood protection in Honnali
ದಾವಣಗೆರೆ5 mins ago

Davanagere News: ಹೊನ್ನಾಳಿಯಲ್ಲಿ ನೆರೆಹಾವಳಿ ರಕ್ಷಣೆ ಬಗ್ಗೆ ಎಸ್‌ಡಿಆರ್‌ಎಫ್ ತಂಡದಿಂದ ಅಣಕು ಪ್ರದರ್ಶನ

DK Shivakumar
ಕರ್ನಾಟಕ5 mins ago

DK Shivakumar: ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿ.ಕೆ. ಶಿವಕುಮಾರ್

Greater Bengaluru Governance Bill 2024
ಬೆಂಗಳೂರು11 mins ago

Greater Bengaluru Governance Bill 2024: ಗ್ರೇಟರ್ ಬೆಂಗಳೂರಿನಲ್ಲಿ ಯಾವ್ಯಾವ ಏರಿಯಾಗಳು ಸೇರಬಹುದು? ಇದರ ಉದ್ದೇಶ ಏನು?

Cat kidnaping Case
ಕರ್ನಾಟಕ21 mins ago

Cat Kidnaping Case: ಬೆಕ್ಕು ಅಪಹರಣ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ತೀರ್ಪು

Bitcoin Scam
ಕರ್ನಾಟಕ26 mins ago

Bitcoin Scam: ಬಿಟ್‌‌ ಕಾಯಿನ್ ಹಗರಣ; ಆರೋಪಿಗಳಾದ ಶ್ರೀಕಿ, ಖಂಡೇಲ್ ವಾಲಾ ಜೈಲಿನಿಂದ ಬಿಡುಗಡೆ

No Makeup For Kids
ಲೈಫ್‌ಸ್ಟೈಲ್32 mins ago

No Makeup For Kids: ನಿಮ್ಮ ಮಕ್ಕಳ ಮೇಕಪ್‌ ಕ್ರೇಜ್‌ಗೆ NO ಹೇಳಿ!

Union Budget 2024
ದೇಶ56 mins ago

Union Budget 2024: ಬಜೆಟ್‌ನಲ್ಲಿ ಕಸ್ಟಮ್ಸ್‌ ಸುಂಕ ಇಳಿಕೆ; ಚಿನ್ನದ ಮೇಲಿನ ಹೂಡಿಕೆಗೆ ಇದು ಸಕಾಲವೇ? ತಜ್ಞರು ಹೇಳೋದಿಷ್ಟು

Salman Khan
ಸಿನಿಮಾ1 hour ago

Salman Khan: “ನನ್ನನ್ನು ಕೊಲ್ಲಲು ಬಿಷ್ಣೋಯಿ ಗ್ಯಾಂಗ್‌ ಯತ್ನಿಸುತ್ತಿದೆ”-ಗುಂಡಿನ ದಾಳಿ ಬಗ್ಗೆ ಸಲ್ಮಾನ್‌ ಖಾನ್‌ ಹೇಳಿಕೆ ದಾಖಲು

Viral Video
Latest2 hours ago

Viral Video: ದೆಹಲಿ ಬೀದಿಯಲ್ಲಿ ಈ ಹುಡುಗಿಯ ಪರೋಟಾ ತಿನ್ನಲು ಕ್ಯೂ! ವಿಡಿಯೊ ನೋಡಿ

Sandalwood Star Fashion
ಫ್ಯಾಷನ್2 hours ago

Sandalwood Star Fashion: ಮಾನ್ಸೂನ್‌ನಲ್ಲಿ ಮಾಲಾಶ್ರೀ ಮಗಳ ಗ್ಲಾಮರಸ್‌ ಫ್ಯಾಷನ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ14 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ1 day ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌