Paris Olympics: "ಇಂಡಿಯಾ ಹೌಸ್‌"ನಲ್ಲಿ ನೀರಜ್​ ಚೋಪ್ರಾ ಸೇರಿ ಪದಕ ವಿಜೇತರನ್ನು ಗೌರವಿಸಿದ ನೀತಾ ಅಂಬಾನಿ - Vistara News

ಕ್ರೀಡೆ

Paris Olympics: “ಇಂಡಿಯಾ ಹೌಸ್‌”ನಲ್ಲಿ ನೀರಜ್​ ಚೋಪ್ರಾ ಸೇರಿ ಪದಕ ವಿಜೇತರನ್ನು ಗೌರವಿಸಿದ ನೀತಾ ಅಂಬಾನಿ

Paris Olympics: ಕುಸ್ತಿಯಲ್ಲಿ ಕಂಚು ಗೆದ್ದ ಅಮಾನ್‌ ಸೆಹ್ರಾವತ್‌ರನ್ನು ಶ್ಲಾಘಿಸಿದ ನೀತಾ, ‘ಚೊಚ್ಚಲ ಪಂದ್ಯದಲ್ಲೇ ಅಮಾನ್‌ ನಮ್ಮೆಲ್ಲರಿಗೂ ಹೆಮ್ಮೆ ತಂದಿದ್ದಾರೆ. ಎಲ್ಲಾ ಕಷ್ಟಗಳನ್ನು ಮೆಟ್ಟಿ ನಿಂತು ಅವರು ತೋರಿದ ಈ ಸಾಧನೆ ನಮಗೆಲ್ಲ ಸ್ಫೂರ್ತಿ’ ಎಂದು ಹೇಳಿದರು.

VISTARANEWS.COM


on

Paris Olympics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್‌: ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗಿದ್ದ ಭಾರತದ ಅಥ್ಲೀಟ್‌ಗಳಿಗೆ ಮನೆಯ ತಾವರಣವನ್ನು ಕಲ್ಪಿಸುವ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿತ್ತು. ಇದೀಗ ಪದಕ ಗೆದ್ದ ಕ್ರೀಡಾಪಟುಗಳನ್ನು ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯ ಸದಸ್ಯೆ ನೀತಾ ಅಂಬಾನಿ(Nita Ambani) ಇಂಡಿಯಾ ಹೌಸ್‌ನಲ್ಲಿ ಸನ್ಮಾನಿಸಿದ್ದಾರೆ.

ಜಾವೆಲಿನ್​ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್‌ ಚೋಪ್ರಾ, ಕಂಚು ಗೆದ್ದ ಅಮಾನ್‌ ಸೆಹ್ರಾವತ್‌ ಹಾಗೂ ಹಾಕಿ ತಂಡದ ಕ್ರೀಡಾಪಟುಗಳನ್ನು ಶನಿವಾರ ನೀತಾ ಅಂಬಾನಿ ಸನ್ಮಾನಿಸಿದ್ದರು. ಕ್ರೀಡಾಗ್ರಾಮದಲ್ಲಿರುವ ಇಂಡಿಯಾ ಹೌಸ್‌ನಲ್ಲಿ ನಡೆದ ಈ ಸಂಭ್ರಮಾಚರಣೆ ವೇಳೆ ಭಾರತೀಯ ಒಲಿಂಪಿಕ್‌ ಸಂಘದ ಅಧ್ಯಕ್ಷೆ ಪಿ.ಟಿ.ಉಷಾ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಪಿ.ಆರ್‌.ಶ್ರೀಜೇಶ್‌, ಅಭಿಶೇಕ್‌ ನೈನ್‌, ಅಮಿತ್‌ ರೋಹಿದಾಸ್‌ ಹಾಗೂ ಸಂಜಯ್‌ ಹಾಕಿ ತಂಡದ ಪರವಾಗಿ ಭಾಗಿಯಾಗಿದ್ದರು. ಪದಕ ಗೆದ್ದ ಎಲ್ಲ ಭಾರತೀಯ ಕೀಡಾಪಟುಗಳನ್ನು ಅಂಬಾನಿ ಇಂಡಿಯಾ ಹೌಸ್‌ನಲ್ಲಿ ಸನ್ಮಾನಿಸಿದ್ದರು.


ಕುಸ್ತಿಯಲ್ಲಿ ಕಂಚು ಗೆದ್ದ ಅಮಾನ್‌ ಸೆಹ್ರಾವತ್‌ರನ್ನು ಶ್ಲಾಘಿಸಿದ ನೀತಾ, ‘ಚೊಚ್ಚಲ ಪಂದ್ಯದಲ್ಲೇ ಅಮಾನ್‌ ನಮ್ಮೆಲ್ಲರಿಗೂ ಹೆಮ್ಮೆ ತಂದಿದ್ದಾರೆ. ಎಲ್ಲಾ ಕಷ್ಟಗಳನ್ನು ಮೆಟ್ಟಿ ನಿಂತು ಅವರು ತೋರಿದ ಈ ಸಾಧನೆ ನಮಗೆಲ್ಲ ಸ್ಫೂರ್ತಿ’ ಎಂದು ಹೇಳಿದರು.

ಇದನ್ನೂ ಓದಿ Mukesh Ambani Mobile: ಮುಕೇಶ್ ಅಂಬಾನಿ, ನೀತಾ ಅಂಬಾನಿ ಯಾವ ಮೊಬೈಲ್‌ ಬಳಸುತ್ತಾರೆ? ಅವುಗಳ ವೈಶಿಷ್ಟ್ಯ ಏನೇನು?

ಇಂಡಿಯಾ ಹೌಸ್ ಉದ್ಘಾಟನಾ ಸಮಾರಂಭಕ್ಕೆ ಬಾಲಿವುಡ್ ಗಾಯಕ ಶಾನ್ ತಮ್ಮ ಗಾಯನದ ಮೂಲಕ ಕಳೆ ತುಂಬಿದ್ದರು. ಟೀಮ್​ ಇಂಡಿಯಾದ ಮಾಜಿ ಆಟಗಾರ ಮತ್ತು ಮುಖ್ಯ ಕೋಚ್​ ಆಗಿದ್ದ ರಾಹುಲ್​ ದ್ರಾವಿಡ್, ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ​ ಕೂಡ ಇಂಡಿಯಾ ಹೌಸ್​ಗೆ ಭೇಟಿ ನೀಡಿದ್ದರು. ಒಟ್ಟಾರೆ ಇಂಡಿಯಾ ಹೌಸ್​ನಿಂದ ಭಾರತೀಯ ಕ್ರೀಡಾಪಟುಗಳಿಗೆ ಉತ್ತಮ ಆತಿಥ್ಯ ಲಭಿಸಿದೆ.


ಒಲಿಂಪಿಕ್ಸ್​ಗೆ ಇಂದು ತೆರೆ


ಪ್ಯಾರಿಸ್​ನಲ್ಲಿ ನಡೆದ 33ನೇ ಆವೃತ್ತಿಯ ಬೇಸಗೆ ಒಲಿಂಪಿಕ್ಸ್​ಗೆ ಇಂದು(ಭಾನುವಾರ) ಅಧಿಕೃತವಾಗಿ ತೆರೆ ಬೀಳಲಿದೆ. ಕಳೆದ 17 ದಿನಗಳಿಂದ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದ ಸಮಾರೋಪ ಸಮಾರಂಭ ಪ್ಯಾರಿಸ್‌ನ ಹೃದಯ ಭಾಗವಾದ “ಸ್ಟೇಡ್‌ ಡೆ ಫ್ರಾನ್ಸ್‌ ಸ್ಟೇಡಿಯಂ’ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದಂತೆ ರಾತ್ರಿ 12.30ಕ್ಕೆ ಈ ಕಾರ್ಯಕ್ರಮ ಆರಂಭವಾಗಲಿದೆ. ಹಾಕಿ ಆಟಗಾರ ಪಿ.ಆರ್ ಶ್ರೀಜೇಶ್(PR Sreejesh)​ ಮತ್ತು ಅವಳಿ ಕಂಚಿನ ಪದಕ ವಿಜೇತೆ ಶೂಟರ್​ ಮನು ಭಾಕರ್​(Manu Bhaker) ಭಾರದ ಧ್ವಜಧಾರಿಗಳಾಗಿ( India’s Co-Flag Bearer) ಪಥಸಂಚಲನದಲ್ಲಿ ಸಾಗಲಿದ್ದಾರೆ. 

ಸಮಾರೋಪ ಸಮಾರಂಭದಲ್ಲಿ ಅಮೆರಿಕದ ಖ್ಯಾತ ನಟ ಹಾಗೂ ನಿರ್ಮಾಪಕ ಟಾಮ್‌ ಕ್ರುಯಿಸ್‌ ಇದರಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಮುಂದಿನ ಒಲಿಂಪಿಕ್ಸ್‌ ಕ್ರೀಡಾಕೂಟ ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುವುದರಿಂದ ಹಾಲಿವುಡ್‌ ತಂಡವೊಂದು ಪಾಲ್ಗೊಳ್ಳುವುದಾಗಿ ವರದಿಯಾಗಿದೆ. ಫ್ರೆಂಚ್‌ ಮತ್ತು ಅಮೆರಿಕನ್‌ ಕಲಾವಿದರು ಜಂಟಿಯಾಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಮುಂದಿನ ಒಲಿಂಪಿಕ್‌ ಆತಿಥ್ಯ ವಹಿಸಿದ ದೇಶಕ್ಕೆ ಒಲಿಂಪಿಕ್​​ ಧ್ವಜವನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ. ಈ ಸಂದರ್ಭದಲ್ಲಿ ಪ್ಯಾರಿಸ್‌ ಹಾಗೂ ಲಾಸ್‌ ಏಂಜಲೀಸ್‌ ನಗರಗಳ ಮೇಯರ್‌ಗಳು ಉಪಸ್ಥಿತರಿರುತ್ತಾರೆ. ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯ ಅಧ್ಯಕ್ಷ ಥಾಮಸ್‌ ಬಾಶ್‌ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ಮುಕ್ತಾಯವನ್ನು ಘೋಷಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Women’s T20 World Cup: ವಿಶ್ವಕಪ್​ ನಡೆಸಲು ಸೇನೆಯ ನೆರವು ಕೇಳಿದ ಬಾಂಗ್ಲಾ ಕ್ರಿಕೆಟ್​ ಮಂಡಳಿ

Women’s T20 World Cup:ಬಾಂಗ್ಲಾದೇಶ ಕ್ರಿಕೆಟ್​ ಮಂಡಳಿ ಸೇನಾ ಮುಖ್ಯಸ್ಥ ಜನರಲ್‌ ವಕಾರ್‌ ಜಮಾನ್‌ ಅವರಿಗೆ ಪತ್ರ ಬರೆದಿದ್ದು, ಬಾಂಗ್ಲಾದೇಶದಲ್ಲಿ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ನಡೆಸಿಕೊಡಲು ಸಹಾಯ ಮಾಡಬೇಕು ಎಂದು ಕೋರಿದೆ.

VISTARANEWS.COM


on

Women’s T20 World Cup
Koo

ಢಾಕಾ: ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿ(Women’s T20 World Cup) ಅಕ್ಟೋಬರ್‌ನಲ್ಲಿ ಬಾಂಗ್ಲಾದೇಶ ಆತಿಥ್ಯದಲ್ಲಿ ನಡೆಯಲಿದೆ. ಆದರೆ, ಬಾಂಗ್ಲಾದೇಶದಲ್ಲಿ(bangladesh violence)  ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಅಲ್ಲಿನ ನಾಗರೀಕರು ನಡೆಸುತ್ತಿರುವ ಪ್ರತಿಭಟನೆ, ಗಲಭೆಗಳು ಹಿಂಸಾತ್ಮಕ ರೂಪ ತಳೆದ ಕಾರಣ ಶೇಕ್ ಹಸೀನಾ‌ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಕಳೆದ ಸೋಮವಾರ (ಆ.04) ಭಾರತಕ್ಕೆ ಪಲಾಯನ ಮಾಡಿದ್ದರು. ಹೊಸ ಸರ್ಕಾರ ರಚನೆಯಾಗಿದ್ದರೂ ಕೂಡ ಹಿಂಸಾತ್ಮಕ ಘಟನೆಗಳು ಇನ್ನೂ ನಡೆಯುತ್ತಲೇ ಇದೆ. ಹೀಗಾಗಿ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ (Bangladesh Cricket Board) ಸೇನೆಯ ನೆರವು ಕೋರಿದೆ.

ಬಾಂಗ್ಲಾದೇಶ ಕ್ರಿಕೆಟ್​ ಮಂಡಳಿ ಸೇನಾ ಮುಖ್ಯಸ್ಥ ಜನರಲ್‌ ವಕಾರ್‌ ಜಮಾನ್‌ ಅವರಿಗೆ ಪತ್ರ ಬರೆದಿದ್ದು, ಬಾಂಗ್ಲಾದೇಶದಲ್ಲಿ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ನಡೆಸಿಕೊಡಲು ಸಹಾಯ ಮಾಡಬೇಕು ಎಂದು ಕೋರಿದೆ. ಐಸಿಸಿ ಕೂಡ ಬಾಂಗ್ಲಾದೇಶದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಒಂದೊಮ್ಮೆ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸದೇ ಹೋದರೆ, ಭದ್ರತಾ ಕಾರಣದಿಂದ ಟೂರ್ನಿಯನ್ನು ಬಾಂಗ್ಲಾದೇಶದಿಂದ ಬೇರೆ ದೇಶಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಟೂರ್ನಿ ಸ್ಥಳಾಂತರಗೊಂಡರೆ ಭಾರತದಲ್ಲಿ ನಡೆಯಲಿದೆ ಎನ್ನಲಾಗಿದೆ. ಸದ್ಯ ಸೇನೆ ಢಾಕಾದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ.

ಇದನ್ನೂ ಓದಿ ICC Women’s T20 World Cup 2024: ಮಹಿಳಾ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ಶ್ರೀಲಂಕಾ

ಹಿಂಸಾತ್ಮಕ ಪ್ರತಿಭಟನೆ ಏಕೆ?

ಬಾಂಗ್ಲಾದೇಶದಲ್ಲಿ ಮೀಸಲಾತಿ ಕಾರಣಕ್ಕಾಗಿ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದೆ. 1971ರಲ್ಲಿ ನಡೆದ ಬಾಂಗ್ಲಾದೇಶ ಹೋರಾಟದಲ್ಲಿ ಭಾಗಿಯಾದವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.30ರಷ್ಟು ಮೀಸಲಾತಿ ಕಲ್ಪಿಸಲಾಗಿತ್ತು. ಮೀಸಲಾತಿ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಕೆಲ ದಿನಗಳ ಹಿಂದೆಯೂ ನಡೆದ ಹಿಂಸಾತ್ಮಕ ಹೋರಾಟದಲ್ಲಿ ನೂರಾರು ಜನ ಮೃತಪಟ್ಟಿದ್ದರು.

ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆ ಭುಗಿಲೇಳುತ್ತಲೇ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್‌, ಶೇ.30ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿತ್ತು. ಆದರೆ, ಸಂಪೂರ್ಣವಾಗಿ ಮೀಸಲಾತಿಯನ್ನು ರದ್ದುಗೊಳಿಸುವ ಬದಲು ಶೇ.5ರಷ್ಟು ಮೀಸಲಾತಿ ಮುಂದುವರಿಸಿದೆ. ಸಂಪೂರ್ಣವಾಗಿ ಮೀಸಲಾತಿ ರದ್ದುಗೊಳಿಸಬೇಕು ಎಂದು ಜನರ ಆಗ್ರಹವಾಗಿದ್ದು, ಇದಕ್ಕಾಗಿ ಪ್ರತಿಭಟನೆ ಆರಂಭವಾಗಿದೆ. ಪ್ರತಿಭಟನೆಗೆ ಪ್ರತಿಪಕ್ಷಗಳೂ ಬೆಂಬಲ ನೀಡಿದ್ದು, ಶೇಖ್‌ ಹಸೀನಾ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಅದರಂತೆ, ಶೇಖ್‌ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ.

ಹಿಂದೂಗಳ ಮೇಲೆ ದಾಳಿ

ಶೇಕ್‌ ಹಸೀನಾ ಅವರು ರಾಜೀನಾಮೆ ನೀಡಿ ಪಲಾಯನ ಮಾಡಿದ ಬಳಿಕ ನಡೆದ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿದೆ. ಹಿಂದೂಗಳ ಮನೆಗಳು, ವ್ಯವಹಾರಗಳು ಮತ್ತು ದೇವಾಲಯಗಳನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರದಲ್ಲಿ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 45 ಜನರು ಗಾಯಗೊಂಡಿದ್ದಾರೆ. ಬಾಂಗ್ಲಾದೇಶದ 17 ಕೋಟಿ ಜನಸಂಖ್ಯೆಯ ಸುಮಾರು 8 ಪ್ರತಿಶತ ಹಿಂದೂಗಳಿದ್ದಾರೆ. ಇವರು ಸಾಂಪ್ರದಾಯಿಕವಾಗಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರು. ಹೀಗಾಗಿ ಇವರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತದೆ ಎನ್ನಲಾಗಿದೆ.

ನೊಬೆಲ್ ಪ್ರಶಸ್ತಿ ವಿಜೇತ ಅರ್ಥ ಶಾಸ್ತ್ರಜ್ಞ ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಗುರುವಾರ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರವನ್ನು ನೇಮಿಸಲಾಯಿತು. ಸಂವಿಧಾನದ ಅಡಿಯಲ್ಲಿ, 90 ದಿನಗಳಲ್ಲಿ ಚುನಾವಣೆಯನ್ನು ನಡೆಸಬೇಕಾಗಿದೆ. ಆದರೆ ಯೂನಸ್ ಹಾಗೂ ಮಿಲಿಟರಿ ಮತ್ತು ಅಧ್ಯಕ್ಷರು, ಚುನಾವಣೆಗಳು ಯಾವಾಗ ನಡೆಯುತ್ತವೆ ಎಂಬುದರ ಕುರಿತು ಪ್ರತಿಕ್ರಿಯಿಸಿಲ್ಲ.

Continue Reading

ಕ್ರೀಡೆ

Paris Olympics: ಒಂದೇ ವಾರಕ್ಕೆ ಬಣ್ಣ ಕಳೆದುಕೊಂಡ ​ಒಲಿಂಪಿಕ್ಸ್​ ಪದಕ!

Paris Olympics: ಅಮೆರಿಕದ ಸ್ಕೇಟ್‌ಬೋರ್ಡರ್‌ ನೈಜಾ ಹ್ಯೂಸ್ಟನ್‌(Nyjah Huston) ತಮ್ಮ ಕಂಚಿನ ಪದಕ ಕೆಲವೇ ದಿನಗಳಲ್ಲಿ ಮಾಸಿ ಹೋಗಿದೆ ಎಂದು ಆರೋಪಿಸಿದ್ದಾರೆ.

VISTARANEWS.COM


on

Koo

ಪ್ಯಾರಿಸ್‌: ಈ ಬಾರಿಯ ಪ್ಯಾರಿಸ್​ ಒಲಿಂಪಿಕ್ಸ್​ ಹಲವು ವಿವಾದಗಳಿಂದ ಸುದ್ದಿಯಾಗಿತ್ತು. ಇದೀಗ ವಿಜೇತರಿಗೆ ನೀಡಲಾದ ಪದಕಗಳ ಗುಣಮಟ್ಟ ಅತ್ಯಂತ ಕಳಪೆ ಮಟ್ಟದ್ದಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಅಮೆರಿಕದ ಸ್ಕೇಟ್‌ಬೋರ್ಡರ್‌ ನೈಜಾ ಹ್ಯೂಸ್ಟನ್‌(Nyjah Huston) ತಮ್ಮ ಕಂಚಿನ ಪದಕ ಕೆಲವೇ ದಿನಗಳಲ್ಲಿ ಮಾಸಿ ಹೋಗಿದೆ ಎಂದು ಆರೋಪಿಸಿದ್ದಾರೆ.

“ಕಂಚಿನ ಪದಕದ ಬಣ್ಣ ಈಗಾಗಲೇ ಮಾಸಿ ಹೋಹಿದೆ. ಪದಕದ ಮೇಲ್ಪದರ ಕಿತ್ತು ಬರಲಾರಂಭಿಸಿದೆ. ಇದು ನಾವು, ನೀವು ನಿರೀಕ್ಷಿಸಿದಷ್ಟು ಉತ್ತಮ ಗುಣಮಟ್ಟವನ್ನು ಹೊಂದಿಲ್ಲ. ಹಿಂದೆಂದು ಕೂಡ ಈ ರೀತಿಯ ಒಲಿಂಪಿಕ್‌ ಪದಕಗಳು ಕಂಡಿಲ್ಲ. ಇದು ಅತ್ಯಂತ ಕಳಪೆ ಗುಣಮಟ್ಟವನ್ನು ಹೊಂದಿದೆ. ಇದನ್ನು ಜೋಪಾನವಾಗಿ ಇಡುವುದು ಹೇಗೆ ಎಂದು ತಿಳಿಯುತ್ತಿಲ್ಲ” ಎಂದು ನೈಜಾ ಹ್ಯೂಸ್ಟನ್‌ ವಿಡಿಯೊ ಮೂಲಕ ಹೇಳಿದ್ದಾರೆ.

ಪದಕದ ಜತೆ ಕಬ್ಬಿಣ ವಿಶ್ರಣ

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ವಿಜೇತರಾದ ಕ್ರಿಡಾಳುಗಳಿಗೆ ನೀಡಲಾದ ಪದಕಗಳಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚು ಮಾತ್ರವಲ್ಲದೆ ಈ ಬಾರಿ ಕಬ್ಬಿಣವೂ ಸೇರಿತ್ತು. ಪ್ಯಾರಿಸ್ ನಗರದ ಪ್ರಸಿದ್ಧ ಐಫೆಲ್ ಟವರ್​ನ ಕಬ್ಬಿಣದ ತುಂಡುಗಳನ್ನು ಈ ಬಾರಿ ಕ್ರಾಂತಿಕಾರಿಯಾಗಿ ಪದಕದೊಂದಿಗೆ ವಿನ್ಯಾಸಗೊಳಿಸಲಾಗಿತ್ತು. ಐಫೆಲ್ ಟವರ್ ನವೀಕರಣ ಕೆಲಸದ ವೇಳೆ ಕತ್ತರಿಸಲ್ಪಟ್ಟ ಕಬ್ಬಿಣದ ತುಂಡುಗಳನ್ನು ಸಂಗ್ರಹಿಸಿಡಲಾಗಿತ್ತು ಇದನ್ನು ಒಲಿಂಪಿಕ್ಸ್ ಪದಕಗಳಲ್ಲಿ ಬಳಸಲಾಗಿತ್ತು. ಪ್ರತಿ ಪದಕವೂ 18 ಗ್ರಾಂ ಭಾರದ ಕಬ್ಬಿಣದ ತುಂಡನ್ನು ಒಳಗೊಂಡಿತ್ತು. ಇದೇ ಕಬ್ಬಿಣ ವಿಶ್ರಿತ ಮಾಡಿದ ಕಾರಣದಿಂದಲೂ ಪದಕದ ಗುಣಮಟ್ಟ ಕಳೆದುಕೊಂಡಿರುವ ಸಾಧ್ಯತೆ ಇದೆ. ಕೆಲವರು ಈ ಬಾರಿಯ ಚಿನ್ನದ ಪದಕದಲ್ಲಿ ಕೇವಲ ಶೇ.1ರಷ್ಟು ಮಾತ್ರ ಚಿನ್ನ ಇದೆ ಎಂದು ದೂರಿದ್ದಾರೆ.

ಒಲಿಂಪಿಕ್ಸ್​ಗೆ ಇಂದು ತೆರೆ


ಪ್ಯಾರಿಸ್​ನಲ್ಲಿ ನಡೆದ 33ನೇ ಆವೃತ್ತಿಯ ಬೇಸಗೆ ಒಲಿಂಪಿಕ್ಸ್​ಗೆ ಇಂದು(ಭಾನುವಾರ) ಅಧಿಕೃತವಾಗಿ ತೆರೆ ಬೀಳಲಿದೆ. ಕಳೆದ 17 ದಿನಗಳಿಂದ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದ ಸಮಾರೋಪ ಸಮಾರಂಭ ಪ್ಯಾರಿಸ್‌ನ ಹೃದಯ ಭಾಗವಾದ “ಸ್ಟೇಡ್‌ ಡೆ ಫ್ರಾನ್ಸ್‌ ಸ್ಟೇಡಿಯಂ’ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದಂತೆ ರಾತ್ರಿ 12.30ಕ್ಕೆ ಈ ಕಾರ್ಯಕ್ರಮ ಆರಂಭವಾಗಲಿದೆ. ಹಾಕಿ ಆಟಗಾರ ಪಿ.ಆರ್ ಶ್ರೀಜೇಶ್(PR Sreejesh)​ ಮತ್ತು ಅವಳಿ ಕಂಚಿನ ಪದಕ ವಿಜೇತೆ ಶೂಟರ್​ ಮನು ಭಾಕರ್​(Manu Bhaker) ಭಾರದ ಧ್ವಜಧಾರಿಗಳಾಗಿ( India’s Co-Flag Bearer) ಪಥಸಂಚಲನದಲ್ಲಿ ಸಾಗಲಿದ್ದಾರೆ. 

ಇದನ್ನೂ ಓದಿ Paris Olympics: “ಇಂಡಿಯಾ ಹೌಸ್‌”ನಲ್ಲಿ ನೀರಜ್​ ಚೋಪ್ರಾ ಸೇರಿ ಪದಕ ವಿಜೇತರನ್ನು ಗೌರವಿಸಿದ ನೀತಾ ಅಂಬಾನಿ

ಸಮಾರೋಪ ಸಮಾರಂಭದಲ್ಲಿ ಅಮೆರಿಕದ ಖ್ಯಾತ ನಟ ಹಾಗೂ ನಿರ್ಮಾಪಕ ಟಾಮ್‌ ಕ್ರುಯಿಸ್‌ ಇದರಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಮುಂದಿನ ಒಲಿಂಪಿಕ್ಸ್‌ ಕ್ರೀಡಾಕೂಟ ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುವುದರಿಂದ ಹಾಲಿವುಡ್‌ ತಂಡವೊಂದು ಪಾಲ್ಗೊಳ್ಳುವುದಾಗಿ ವರದಿಯಾಗಿದೆ. ಫ್ರೆಂಚ್‌ ಮತ್ತು ಅಮೆರಿಕನ್‌ ಕಲಾವಿದರು ಜಂಟಿಯಾಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಮುಂದಿನ ಒಲಿಂಪಿಕ್‌ ಆತಿಥ್ಯ ವಹಿಸಿದ ದೇಶಕ್ಕೆ ಒಲಿಂಪಿಕ್​​ ಧ್ವಜವನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ. ಈ ಸಂದರ್ಭದಲ್ಲಿ ಪ್ಯಾರಿಸ್‌ ಹಾಗೂ ಲಾಸ್‌ ಏಂಜಲೀಸ್‌ ನಗರಗಳ ಮೇಯರ್‌ಗಳು ಉಪಸ್ಥಿತರಿರುತ್ತಾರೆ. ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯ ಅಧ್ಯಕ್ಷ ಥಾಮಸ್‌ ಬಾಶ್‌ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ಮುಕ್ತಾಯವನ್ನು ಘೋಷಿಸಲಿದ್ದಾರೆ.

Continue Reading

ಪ್ರಮುಖ ಸುದ್ದಿ

Paris Olympics 2024: ಇಂದು ಪ್ಯಾರಿಸ್​ ಒಲಿಂಪಿಕ್ಸ್​ ಕ್ರೀಡಾಕೂಟದ ಸಮಾರೋಪ; ಕಾರ್ಯಕ್ರಮದ ಎಲ್ಲ ವಿವರ ಇಲ್ಲಿದೆ

Paris Olympics 2024 : ಕಾರ್ಯಕ್ರಮಗಳ ನಿರ್ದಿಷ್ಟ ವಿವರಗಳು ಲಭ್ಯವಿಲ್ಲದಿದ್ದರೂ ಸಮಾರೋಪ ಸಮಾರಂಭದಲ್ಲಿ ಸ್ಟೇಡ್ ಡಿ ಫ್ರಾನ್ಸ್ ನಲ್ಲಿ ನಡೆಯಲಿದೆ ಎಂಬುದು ಖಾತರಿಯಾಗಿದೆ. 100 ಕ್ಕೂ ಹೆಚ್ಚು ಅಕ್ರೋಬ್ಯಾಟ್​ಗಳು ಮತ್ತು ವೈಮಾನಿಕ ಪ್ರದರ್ಶನ ಇದರ ಪ್ರಮುಖ ಹೈಲೈಟ್​. ನಟ ಟಾಮ್ ಕ್ರೂಸ್ 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್​​ ಸಮಾರೋಪದಲ್ಲಿ ಸ್ಕೈಡೈವಿಂಗ್ ಸ್ಟಂಟ್ ಮಾಡಲಿದ್ದಾರೆ ಎಂಬ ವದಂತಿಗಳಿವೆ. ಸಮಾರಂಭದಲ್ಲಿ ಸ್ನೂಪ್ ಡಾಗ್, ಬಿಲ್ಲಿ ಐಲಿಷ್ ಮತ್ತು ರೆಡ್ ಹಾಟ್ ಚಿಲ್ಲಿ ಪೆಪ್ಪರ್ಸ್ ತಂಡಗಳೂ ಕಾಣಿಸಿಕೊಳ್ಳಲಿವೆ ಎಂಬ ವರದಿಗಳು ಹೇಳಿವೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಜುಲೈ 26ರಂದು ಶುಭಾರಂಭಗೊಂಡ ಪ್ಯಾರಿಸ್ ಒಲಿಂಪಿಕ್ಸ್​ (Paris Olympics 2024) ಭಾನುವಾರ ಮುಕ್ತಾಯಗೊಳ್ಳಲಿದೆ. ಲೈವ್ ಸಂಗೀತ ಪ್ರದರ್ಶನಗಳು, ಕಲಾತ್ಮಕ ನೃತ್ಯಗಳು ಮತ್ತು ಸೀನ್ ನದಿಯ ಉದ್ದಕ್ಕೂ ಪ್ರಯಾಣಿಸಿದ ಕ್ರೀಡಾಪಟುಗಳು ಸೇರಿದಂತೆ ಉದ್ಘಾಟನಾ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲಾಗಿತ್ತು. ಅದೇ ರೀತಿಯಲ್ಲಿ ಸಮಾರೋಪದಲ್ಲಿಯೂ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳು ಆಯೋಜನೆಗೊಂಡಿವೆ ಎಂಬುದಾಗಿ ಪ್ಯಾರಿಸ್ ಒಲಿಂಪಿಕ್ಸ್ ಸಂಘಟನಾ ಸಮಿತಿ ಹೇಳಿದೆ.

ಕಾರ್ಯಕ್ರಮಗಳ ನಿರ್ದಿಷ್ಟ ವಿವರಗಳು ಲಭ್ಯವಿಲ್ಲದಿದ್ದರೂ ಸಮಾರೋಪ ಸಮಾರಂಭದಲ್ಲಿ ಸ್ಟೇಡ್ ಡಿ ಫ್ರಾನ್ಸ್ ನಲ್ಲಿ ನಡೆಯಲಿದೆ ಎಂಬುದು ಖಾತರಿಯಾಗಿದೆ. 100 ಕ್ಕೂ ಹೆಚ್ಚು ಅಕ್ರೋಬ್ಯಾಟ್​ಗಳು ಮತ್ತು ವೈಮಾನಿಕ ಪ್ರದರ್ಶನ ಇದರ ಪ್ರಮುಖ ಹೈಲೈಟ್​. ನಟ ಟಾಮ್ ಕ್ರೂಸ್ 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್​​ ಸಮಾರೋಪದಲ್ಲಿ ಸ್ಕೈಡೈವಿಂಗ್ ಸ್ಟಂಟ್ ಮಾಡಲಿದ್ದಾರೆ ಎಂಬ ವದಂತಿಗಳಿವೆ. ಸಮಾರಂಭದಲ್ಲಿ ಸ್ನೂಪ್ ಡಾಗ್, ಬಿಲ್ಲಿ ಐಲಿಷ್ ಮತ್ತು ರೆಡ್ ಹಾಟ್ ಚಿಲ್ಲಿ ಪೆಪ್ಪರ್ಸ್ ತಂಡಗಳೂ ಕಾಣಿಸಿಕೊಳ್ಳಲಿವೆ ಎಂಬ ವರದಿಗಳು ಹೇಳಿವೆ.

2024ರ ಪ್ಯಾರಿಸ್ ಒಲಿಂಪಿಕ್ಸ್ ಸಮಾರೋಪ ಬಗ್ಗೆ ಹೆಚ್ಚಿನ ವಿವರಗಳು ಇಲ್ಲಿವೆ.

2024ರ ಒಲಿಂಪಿಕ್ಸ್ ಸಮಾರೋಪ ಸಮಾರಂಭ ಯಾವಾಗ?

ಸಮಾರೋಪ ಸಮಾರಂಭ ಆಗಸ್ಟ್​​​ 11ರಂದು ಭಾನುವಾರ ನಡೆಯಲಿದೆ.

2024 ರ ಒಲಿಂಪಿಕ್ಸ್ ಮುಕ್ತಾಯ ಸಮಾರಂಭದ ಸಮಯವೇನು?

ಪ್ಯಾರಿಸ್​​ನ ಉತ್ತರಕ್ಕಿರುವ ಸ್ಟೇಡ್ ಡಿ ಫ್ರಾನ್ಸ್​ನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ಪ್ರಾರಂಭವಾಗಲಿದೆ. ಇದು ಸಂಜೆ 5:15 ರವರೆಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಸಮಾರಂಭ ಎಲ್ಲಿ ನಡೆಯಲಿದೆ?

ಸಮಾರೋಪ ಸಮಾರಂಭವು ಪ್ಯಾರಿಸ್ ನ ಸ್ಟೇಡ್ ಡಿ ಫ್ರಾನ್ಸ್ ಒಳಗೆ ನಡೆಯಲಿದೆ.

ಸಮಾರಂಭದ ಆತಿಥ್ಯ ವಹಿಸುವವರು ಯಾರು?

“ದಿ ಟುನೈಟ್ ಶೋ” ನಿರೂಪಕ ಜಿಮ್ಮಿ ಫಾಲನ್ ಮತ್ತು ದೀರ್ಘಕಾಲದ ಕ್ರೀಡಾ ನಿರೂಪಕ ಮೈಕ್ ಟಿರಿಕೊ ಈ ಕಾರ್ಯಕ್ರಮವನ್ನು ಆಯೋಜಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಏನೇನಿವೆ?

ಸಮಾರೋಪ ಸಮಾರಂಭವು ಆಯಾ ದೇಶಗಳ ಧ್ವಜಗಳ ಪರೇಡ್​ನೊಂದಿಗೆ ಪ್ರಾರಂಭವಾಗುತ್ತದೆ. ಇದರಲ್ಲಿ ಪ್ರತಿ ರಾಷ್ಟ್ರದ ಕ್ರೀಡಾಪಟುಗಳು ತಮ್ಮ ಧ್ವಜದೊಂದಿಗೆ ಕ್ರೀಡಾಂಗಣಕ್ಕೆ ಬರಲಿದ್ದಾರೆ. ಒಲಿಂಪಿಕ್ಸ್ ಗ್ರೀಸ್​ನಲ್ಲಿ ಹುಟ್ಟಿಕೊಂಡಿದ್ದರಿಂದ, ಗ್ರೀಕ್ ಧ್ವಜವು ಮೆರವಣಿಗೆಯನ್ನು ಮುನ್ನಡೆಸಲಿದೆ. ಆತಿಥೇಯ ದೇಶವು ಕೊನೆಯಲ್ಲಿ ಸಾಗಲಿದೆ ಅಂತಾರರಾಷ್ಟ್ರೀಯ ಒಲಿಂಪಿಕ್ ಸಮಿತಿ ತಿಳಿಸಿದೆ. ಪ್ಯಾರಿಸ್ ನಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಕೇಟಿ ಲೆಡೆಕಿ ಮತ್ತು ನಿಕ್ ಮೀಡ್ ಅಮೆರಿಕದ ಧ್ವಜ ಹೊತ್ತೊಯ್ಯಲಿದ್ದಾರೆ.

ಇದನ್ನೂ ಓದಿ: Vinesh Phogat : ವಿನೇಶ್​ ಫೋಗಟ್​ಗೆ ಅನ್ಯಾಯವಾಗಿದೆ ಎಂದ ಆರ್​. ಅಶ್ವಿನ್​; ಅಥ್ಲೀಟ್​ಗಳ ಸಮಸ್ಯೆ ವಿವರಿಸಿದ ಸ್ಪಿನ್ನರ್​

ಭಾರತದ ಧ್ವಜಧಾರಿಗಳು ಯಾರು?

ಪ್ಯಾರಿಸ್ ಒಲಿಂಪಿಕ್ಸ್ 2024 ರ ಸಮಾರೋಪ ಸಮಾರಂಭದಲ್ಲಿ ಪಿ.ಆರ್.ಶ್ರೀಜೇಶ್ ಮತ್ತು ಶೂಟರ್ ಮನು ಭಾಕರ್ ಅವರು ಭಾರತದ ಧ್ವಜ ಹೊತ್ತೊಯ್ಯಲಿದ್ದಾರೆ ಎಂದು ಟೀಮ್ ಇಂಡಿಯಾದ ಇತ್ತೀಚಿನ ಪ್ರಕಟಣೆ ತಿಳಿಸಿದೆ.

ಶ್ರೀಜೇಶ್ ಹಾಕಿ ತಂಡ ಕಂಚು ಗೆಲ್ಲುವಲ್ಲಿ ನಿರ್ಣಾಯಕರು. ಪ್ಯಾರಿಸ್​​ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದ ಮನು ಭಾಕರ್ ಈಗ ಧ್ವಜವನ್ನು ಹೊತ್ತೊಯ್ಯಲು ಆಯ್ಕೆಯಾಗಿದ್ದಾರೆ.

ಪದಕಗಳ ಪ್ರಧಾನ

ಭಾನುವಾರ ತಮ್ಮ ಸ್ಪರ್ಧೆಗಳನ್ನು ಮುಕ್ತಾಯಗೊಳಿಸುವ ಕ್ರೀಡಾಪಟುಗಳಿಗೆ ಸಮಾರೋಪ ಸಮಾರಂಭದಲ್ಲಿಯೇ ಅಂತಿಮ ಪದಕ ಪ್ರದಾನ ನಡೆಯಲಿದೆ. ಮಹಿಳೆಯರ ಮ್ಯಾರಥಾನ್, ಪುರುಷರ ಹ್ಯಾಂಡ್ಬಾಲ್, ಪುರುಷರ ವಾಟರ್ ಪೋಲೊ, ಪುರುಷರ ಮತ್ತು ಮಹಿಳೆಯರ ವೇಟ್ಲಿಫ್ಟಿಂಗ್, ಪುರುಷರ ಮತ್ತು ಮಹಿಳೆಯರ ಕುಸ್ತಿ, ಮಹಿಳಾ ಬ್ಯಾಸ್ಕೆಟ್​​ಬಾ ಲ್, ಮಹಿಳಾ ಪೆಂಟಾಥ್ಲಾನ್, ಮಹಿಳಾ ವಾಲಿಬಾಲ್ ಮತ್ತು ಪುರುಷರ ಮತ್ತು ಮಹಿಳೆಯರ ಸೈಕ್ಲಿಂಗ್ ಫೈನಲ್​ಗಳು ಭಾನುವಾರ ಕೊನೆಗೊಳ್ಳಲಿವೆ.

ಇದನ್ನೂ ಓದಿ: Smriti Mandhana : ವಿರಾಟ್​ ಕೊಹ್ಲಿ ಜತೆ ನನ್ನನ್ನು ಹೋಲಿಕೆ ಮಾಡಬೇಡಿ; ಸ್ಮೃತಿ ಮಂದಾನ ಮನವಿ

ಒಲಿಂಪಿಕ್​​ ಧ್ವಜ ಹಸ್ತಾಂತರ

ಬೇಸಿಗೆ ಕ್ರೀಡಾಕೂಟದ ಪ್ರಸ್ತುತ ಆತಿಥೇಯ ನಗರದ ಮೇಯರ್ ಒಲಿಂಪಿಕ್ ಧ್ವಜವನ್ನು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧ್ಯಕ್ಷರಿಗೆ ಹಸ್ತಾಂತರ ಮಾಡಲಿದ್ದಾರೆ. ಅವರು ಅದನ್ನು ಮುಂದಿನ ಆತಿಥೇಯ ನಗರದ ಮೇಯರ್ ನೀಡುತ್ತಾರೆ. ಪ್ಯಾರಿಸ್ ಮೇಯರ್ ಅನ್ನೆ ಹಿಡಾಲ್ಗೊ ಒಲಿಂಪಿಕ್ ಧ್ವಜವನ್ನು ಐಒಸಿ ಅಧ್ಯಕ್ಷ ಥಾಮಸ್ ಬಾಚ್ ಅವರಿಗೆ ಹಸ್ತಾಂತರಿಸಲಿದ್ದಾರೆ. ನಂತರ ಅದನ್ನು ಲಾಸ್ ಏಂಜಲೀಸ್ ಮೇಯರ್ ಕರೆನ್ ಬಾಸ್ ಅವರಿಗೆ ನೀಡಲಿದ್ದಾರೆ.

2028 ರ ಬೇಸಿಗೆ ಕ್ರೀಡಾಕೂಟದ ಪೂರ್ವವೀಕ್ಷಣೆಯ ನಂತರ, ಒಲಿಂಪಿಕ್ ಜ್ವಾಲೆ ನಂದಿಸಲಾಗುವುದು. ಇದು 2024 ರ ಪ್ಯಾರಿಸ್ ಬೇಸಿಗೆ ಒಲಿಂಪಿಕ್ಸ್​ನ ಅಂತ್ಯವನ್ನು ಸೂಚಿಸುತ್ತದೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧಿಗಳ ಹೋರಾಟ ಮುಕ್ತಾಯ; ಈ ಬಾರಿ ಆರು ಪದಕಗಳು ಮಾತ್ರ

Paris Olympics 2024: ಈ ಬಾರಿ ಶೂಟಿಂಗ್​ನಲ್ಲಿ ಮನು ಭಾಕರ್ 2 ಕಂಚು ಗೆದ್ದರೆ ಅವರ ಜತೆಗೆ ಸರಬ್ಜೋತ್​ ಸಿಂಗ್​ ಕೂಡ ಕಂಚಿನ ಹಾರ ಹಾಕಿಸಿಕೊಂಡಿದ್ದರು. ನಂತರದ ಸ್ವಪ್ನಿಲ್ ಕುಸಾಳೆ ಶೂಟಿಂಗ್​ನಲ್ಲಿ ಪದಕವೊಂದರನ್ನು ತಂದಿದ್ದರು. ಹೀಗಾಗಿ ಶೂಟಿಂಗ್​ಗೆ 3 ಪದಕ ಲಭಿಸಿತ್ತು. ಹಾಕಿ ತಂಡ ಕಂಚಿನ ಪದಕ ಗೆದ್ದಿದ್ದರೆ ಕುಸ್ತಿಯಲ್ಲಿ ಅಮನ್ ಸೆಹ್ರಾವತ್​ ಕಂಚು ಗೆದ್ದುಕೊಂಡಿದ್ದರು. ನೀರಜ್ ಚೋಪ್ರಾ ಜಾವೆಲಿನ್​ನಲ್ಲಿ ಒಂದು ಬೆಳ್ಳಿ ತಂದುಕೊಟ್ಟಿದ್ದಾರೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಶನಿವಾರ ರಾತ್ರಿಯ ವೇಳೆಗೆ ಭಾರತದ ಸ್ಪರ್ಧಿಗಳ ಹೋರಾಟಗಳು ಅಂತ್ಯಗೊಂಡಿದೆ. ಭಾರತದ ಅದಿತಿ ಅಶೋಕ್ ಮತ್ತು ದೀಕ್ಷಾ ದಾಗರ್ ಮಹಿಳಾ ಗಾಲ್ಫ್ ಸ್ಪರ್ಧೆಯಲ್ಲಿ ಕ್ರಮವಾಗಿ ಟಿ 29 ಮತ್ತು ಟಿ 49 ಅನ್ನು ಮುಗಿಸುವ ಮೂಲಕ ಭಾರತದ ಅಭಿಯಾನ ಕೊನೆಗೊಂಡಿತು. ಭಾರತವು ಪ್ಯಾರಿಸ್ 2024 ರಲ್ಲಿ ಗಾಲ್ಫ್​​ನಲ್ಲಿ ಪದಕ ಪಡೆಯದೆ ಮಗಿಸಿತು. ಹಿಂದಿನ ವಾರ ಪುರುಷರ ವಿಭಾಗದಲ್ಲಿ ಶುಭಂಕರ್ ಶರ್ಮಾ ಮತ್ತು ಗಗನ್ಜೀತ್ ಭುಲ್ಲರ್ ಕ್ರಮವಾಗಿ ಟಿ 40 ಮತ್ತು ಟಿ 45 ಸ್ಥಾನಗಳನ್ನು ಪಡೆದಿದ್ದರು. ಶನಿವಾರ ಮಧ್ಯಾಹ್ನ ನಡೆದ 78 ಕೆ.ಜಿ ವಿಭಾಗದಲ್ಲಿ ಮಹಿಳೆಯ ಕುಸ್ತಿಯಲ್ಲಿ ರಿತಿಕಾ ಹೂಡಾ ಕ್ವಾರ್ಟರ್​ಫೈನಲ್​ನಲ್ಲಿ ಸೋತಿದ್ದರು. ಆದಾಗ್ಯೂ ಅವರಿಗೆ ರೆಪೆಚೇಜ್ ಅವಕಾಶವೊಂದಿತ್ತು. ಆದರೆ ಅವರನ್ನು ಸೋಲಿಸಿದ ಕಿರ್ಗಿಸ್ತಾನದ ಪ್ರತಿಸ್ಪರ್ಧಿ ಸೆಮಿ ಫೈನಲ್​ನಲ್ಲಿ ಸೋತಿದ್ದಾರೆ. (ಒಂದು ವೇಳೆ ಅವರು ಫೈನಲ್​ಗೇರಿ ಚಿನ್ನ ಗೆದ್ದಿದ್ದರೆ ರಿತಿಕಾಗೆ ಕಂಚಿನ ಪದಕದ ಹೊರಾಟಕ್ಕೆ ಅವಕಾಶವಿತ್ತು). ರೀತಿಕಾ ಸೋತ ನಂತರ, ಭಾರತದ ಪ್ಯಾರಿಸ್ ಒಲಿಂಪಿಕ್ಸ್ ಅಭಿಯಾನವು ಇಲ್ಲಿಯವರೆಗೆ 6 ಪದಕಗಳೊಂದಿಗೆ ಕೊನೆಗೊಂಡಿದೆ.

ಹಿಂದಿನ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಭಾರತ 7 ಪದಕ ಗೆದ್ದುಕೊಂಡಿತ್ತು. ಈ ಬಾರಿ ಶೂಟಿಂಗ್​ನಲ್ಲಿ ಮನು ಭಾಕರ್ 2 ಕಂಚು ಗೆದ್ದರೆ ಅವರ ಜತೆಗೆ ಸರಬ್ಜೋತ್​ ಸಿಂಗ್​ ಕೂಡ ಕಂಚಿನ ಹಾರ ಹಾಕಿಸಿಕೊಂಡಿದ್ದರು. ನಂತರದ ಸ್ವಪ್ನಿಲ್ ಕುಸಾಳೆ ಶೂಟಿಂಗ್​ನಲ್ಲಿ ಪದಕವೊಂದರನ್ನು ತಂದಿದ್ದರು. ಹೀಗಾಗಿ ಶೂಟಿಂಗ್​ಗೆ 3 ಪದಕ ಲಭಿಸಿತ್ತು. ಹಾಕಿ ತಂಡ ಕಂಚಿನ ಪದಕ ಗೆದ್ದಿದ್ದರೆ ಕುಸ್ತಿಯಲ್ಲಿ ಅಮನ್ ಸೆಹ್ರಾವತ್​ ಕಂಚು ಗೆದ್ದುಕೊಂಡಿದ್ದರು. ನೀರಜ್ ಚೋಪ್ರಾ ಜಾವೆಲಿನ್​ನಲ್ಲಿ ಒಂದು ಬೆಳ್ಳಿ ತಂದುಕೊಟ್ಟಿದ್ದಾರೆ. ಹಿಂದಿನ ಬಾರಿ ನೀರಜ್​ ಚಿನ್ನ ಗೆದ್ದಿದ್ದ ಕಾರಣ ಸಂಭ್ರಮ ಹೆಚ್ಚಿತ್ತು. ಈ ಬಾರಿ ಭಾರತಕ್ಕೆ ಸಂಭ್ರಮಿಸಲು ಹೆಚ್ಚು ಅವಕಾಶಗಳು ಇಲ್ಲ. ಅದೇ ರೀತಿ 70ನೇ ಸ್ಥಾನ ಪಡೆಯುವ ಮೂಲಕ ಕಳೆದ ಬಾರಿಗಿಂತ ಹಿನ್ನಡೆ ಅನುಭವಿಸಿದೆ. ಆ ಬಾರಿ 64ನೇ ಸ್ಥಾನ ಪಡೆದುಕೊಂಡಿತ್ತು.

ಗಾಲ್ಫ್​​ನಲ್ಲಿ ಏನಾಯಿತು?

ಭಾರತದ ಅಗ್ರ ಶ್ರೇಯಾಂಕಿತ ಮಹಿಳಾ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಗುರುವಾರ ಎರಡನೇ ಸುತ್ತಿನ ನಂತರ ಟಿ 14 ನೇ ಸ್ಥಾನ ಪಡೆದರು. ಆದಾಗ್ಯೂ, ಸವಾಲಿನ ಮೂರನೇ ಸುತ್ತಿನಲ್ಲಿ ಅವರು ಟಿ 40 ಗೆ 26 ಸ್ಥಾನಗಳನ್ನು ಕಳೆದುಕೊಂಡರು. ಅವರು ಶನಿವಾರ 4-ಅಂಡರ್ 68 ನೊಂದಿಗೆ ಬಲವಾದ ಪುನರಾಗಮನ ಮಾಡಿದರು, ತಮ್ಮ ಅಂತಿಮ ಸ್ಥಾನವನ್ನು 11 ಸ್ಥಾನಗಳಿಂದ ಸುಧಾರಿಸಿದರು, ಒಟ್ಟು 2 ಓವರ್ 290 ಅಂಕಗಳೊಂದಿಗೆ ಮುಕ್ತಾಯಗೊಳಿಸಿದರು. ಗಾಲ್ಫ್ ನ್ಯಾಷನಲ್ಸ್​ನಲ್ಲಿ ಸ್ಪರ್ಧಿಸಿದ್ದ ಅದಿತಿ ಅಂತಿಮ ದಿನದಂದು ಏಳು ಬರ್ಡಿಗಳು ಮತ್ತು ಮೂರು ಬೋಗಿಗಳನ್ನು ದಾಖಲಿಸಿದರು.

ದೀಕ್ಷಾ ದಾಗರ್ ಶನಿವಾರ 6 ರಲ್ಲಿ 78 ರನ್ ಗಳಿಸುವ ಮೂಲಕ ಟಿ 49ಕ್ಕೆ ಅಂದರೆ ಏಳು ಸ್ಥಾನಗಳನ್ನು ಕಳೆದುಕೊಂಡರು. 2021 ರ ಕಿವುಡರ ಚಾಂಪಿಯನ್ ಮೊದಲ ದಿನದ ನಂತರ ಟಿ 7 ಆಗಿ ಪ್ರಬಲವಾಗಿ ಪ್ರಾರಂಭಿಸಿದರು. ಆದರೆ ನಂತರದ ಸುತ್ತುಗಳಲ್ಲಿ ಅವರ ಪ್ರದರ್ಶನವು ಕುಸಿಯಿತು.

ಅದಿತಿ ಮತ್ತು ದೀಕ್ಷಾ ಇಬ್ಬರೂ ಟೋಕಿಯೊ 2020 ಒಲಿಂಪಿಕ್ಸ್​ನಲ್ಲಿ ಭಾರತದ ತಂಡದ ಭಾಗವಾಗಿದ್ದರು. ಒಲಿಂಪಿಕ್ ಗಾಲ್ಫ್​ನಲ್ಲಿ ಭಾರತದ ಅತ್ಯುತ್ತಮ ಫಲಿತಾಂಶವನ್ನು ಸೂಚಿಸುವ ಮೂಲಕ ಅದಿತಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ಪದಕವನ್ನು ಕಳೆದುಕೊಂಡಿದ್ದರೆ, ದೀಕ್ಷಾ ಟಿ 50 ನಲ್ಲಿ ಸ್ಥಾನ ಪಡೆದರು. ಪ್ಯಾರಿಸ್ 2024 ರಲ್ಲಿ ನಡೆದ ಮಹಿಳಾ ಗಾಲ್ಫ್ ಸ್ಪರ್ಧೆಯಲ್ಲಿ 60 ಸ್ಪರ್ಧಿಗಳು ಭಾಗವಹಿಸಿದ್ದರು. ಅವರು ನಾಲ್ಕು ದಿನಗಳಲ್ಲಿ ನಾಲ್ಕು ಸುತ್ತುಗಳನ್ನು ಆಡಿದರು, ಪ್ರತಿ ಸುತ್ತು 18 ಹೋಲ್​ಗಳನ್ನು ಒಳಗೊಂಡಿದೆ.

ಇದನ್ನೂ ಓದಿ: Narendra Modi Stadium : ಗುಜರಾತ್​ಗೆ ಸಡ್ಡು; ತಮಿಳುನಾಡಿನಲ್ಲಿ ನಿರ್ಮಾಣವಾಗಲಿದೆ ನರೇಂದ್ರ ಮೋದಿ ಸ್ಟೇಡಿಯಮ್​​ಗಿಂತ ದೊಡ್ಡ ಕ್ರಿಕೆಟ್​ ಸೌಲಭ್ಯ

ಈ ಹಿಂದೆ ರಿಯೋ 2016 ರಲ್ಲಿ ಬೆಳ್ಳಿ ಮತ್ತು ಟೋಕಿಯೊ 2020 ರಲ್ಲಿ ಕಂಚು ಗೆದ್ದಿದ್ದ ನ್ಯೂಜಿಲೆಂಡ್​​ನ ಲಿಡಿಯಾ ಕೋ, ಪ್ಯಾರಿಸ್ 2024 ರಲ್ಲಿ 278 ಅಂಕಗಳೊಂದಿಗೆ ಚಿನ್ನದ ಪದಕವನ್ನು ಗೆದ್ದರು. ಜರ್ಮನಿಯ ಎಸ್ತರ್ ಹೆನ್ಸೆಲಿಟ್ ಬೆಳ್ಳಿ ಗೆದ್ದರೆ, ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಕ್ಸಿಯು ಲಿನ್ 281 ಅಂಕಗಳೊಂದಿಗೆ ಕಂಚಿನ ಪದಕ ಗೆದ್ದರು.

Continue Reading
Advertisement
Police Firing
ಕ್ರೈಂ14 mins ago

Police Firing: ಪೊಲೀಸರ ಮೇಲೆ ದಾಳಿ ನಡೆಸಿದ ರೌಡಿ ಕಾಲಿಗೆ ಗುಂಡೇಟು

Bangladesh Unrest
ವಿದೇಶ14 mins ago

Bangladesh Unrest: ಹಿಂದೂಗಳ ಮೇಲಿನ ದಾಳಿ ಖಂಡಿಸಿ ಬಾಂಗ್ಲಾದೇಶದಲ್ಲಿ ಭಾರೀ ಪ್ರತಿಭಟನೆ; ಅಮೆರಿಕ, ಯುಕೆಯಲ್ಲೂ ಧರಣಿ

Tharun Sudhir wedding live video is here
ಸ್ಯಾಂಡಲ್ ವುಡ್36 mins ago

Tharun Sudhir: ತರುಣ್ ಸುಧೀರ್-ಸೋನಲ್ ಮದುವೆ ಸಂಭ್ರಮದ ಲೈವ್‌ ವಿಡಿಯೊ ಇಲ್ಲಿದೆ ನೋಡಿ!

Shiva Rajkumar Bhairathi Ranagal Title Song Geetha SRK
ಸ್ಯಾಂಡಲ್ ವುಡ್53 mins ago

Shiva Rajkumar: ʻಭೈರತಿ ರಣಗಲ್ʼ ಟೈಟಲ್ ಸಾಂಗ್ ಔಟ್‌; ಸೆಪ್ಟೆಂಬರ್‌ನಲ್ಲಿ ತೆರೆಗೆ!

Women’s T20 World Cup
ಕ್ರೀಡೆ59 mins ago

Women’s T20 World Cup: ವಿಶ್ವಕಪ್​ ನಡೆಸಲು ಸೇನೆಯ ನೆರವು ಕೇಳಿದ ಬಾಂಗ್ಲಾ ಕ್ರಿಕೆಟ್​ ಮಂಡಳಿ

Jr NTR luxury watch at Hyderabad event
South Cinema1 hour ago

Jr NTR: ಸಿನಿಮಾ ಮುಹೂರ್ತದಲ್ಲಿ ಜ್ಯೂ. ಎನ್​ಟಿಆರ್ ಧರಿಸಿದ ವಾಚ್ ಬೆಲೆ ಕೇಳಿದರೆ ನೀವು ಬೆರಗಾಗೋದು ಖಚಿತ​!

Police Firing
ಕ್ರೈಂ1 hour ago

Police Firing: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಗುಂಡಿನ ಸದ್ದು; ಕೊಲೆ ಆರೋಪಿ ಕಾಲಿಗೆ ಫೈರಿಂಗ್‌

Kejriwal Bungalow Case
ದೇಶ1 hour ago

Kejriwal Bungalow Case: ಕೇಜ್ರಿವಾಲ್‌ ಬಂಗಲೆ ನವೀಕರಣ ಅಕ್ರಮ; ಮೂವರು ಇಂಜಿನಿಯರ್‌ಗಳು ಸಸ್ಪೆಂಡ್‌

ಕ್ರೀಡೆ2 hours ago

Paris Olympics: ಒಂದೇ ವಾರಕ್ಕೆ ಬಣ್ಣ ಕಳೆದುಕೊಂಡ ​ಒಲಿಂಪಿಕ್ಸ್​ ಪದಕ!

Cyber Crime
ಕ್ರೈಂ2 hours ago

Cyber Crime: ಆನ್‌ಲೈನ್‌ ಹೂಡಿಕೆ ಹೆಸರಲ್ಲಿ ವಂಚನೆ; 1.53 ಕೋಟಿ ರೂ. ಕಳೆದುಕೊಂಡ ಟೆಕ್ಕಿ ದಂಪತಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌