Paris Olympics: ಸೆಮಿ ಫೈನಲ್​ ಪ್ರವೇಶಿಸಿದ ವಿನೇಶ್ ಫೋಗಟ್ - Vistara News

ಕ್ರೀಡೆ

Paris Olympics: ಸೆಮಿ ಫೈನಲ್​ ಪ್ರವೇಶಿಸಿದ ವಿನೇಶ್ ಫೋಗಟ್

Paris Olympics: ಪ್ಯಾರಿರ್ಸ್​ ಒಲಿಂಪಿಕ್ಸ್​ ಆರಂಭಕ್ಕೇ ಕೆಲವೇ ದಿನ ಬಾಕಿ ಇರುವಾಗ ಮ್ಯಾಡ್ರಿಡ್​ನಲ್ಲಿ ನಡೆದಿದ್ದ ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್(Grand Prix) ಕುಸ್ತಿ ಟೂರ್ನಿಯಲ್ಲಿ ವಿನೇಶ್ ಫೋಗಟ್ ಚಿನ್ನದ ಪದಕ ಗೆದ್ದು ಬೀಗಿದ್ದರು.

VISTARANEWS.COM


on

Paris Olympics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್​: ಭಾರತೀಯ ಕುಸ್ತಿ ಒಕ್ಕೂಟದ ವಿರುದ್ಧ ತೊಡೆತಟ್ಟಿ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ(Kartavya Path) ಪಾದಚಾರಿ ಮಾರ್ಗದಲ್ಲಿಟ್ಟು ತೊರೆದಿದ್ದ ಕುಸ್ತಿಪಟು ವಿನೇಶ್ ಫೋಗಟ್(Vinesh Phogat), ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ 50 ಕೆಜಿ ಮಹಿಳಾ ಸಿಂಗಲ್ಸ್​ ವಿಭಾಗದಲ್ಲಿ ಸೆಮಿಫೈನಲ್​ ಪ್ರವೇಶಿಸಿಸಿದ್ದಾರೆ. ಈ ಮೂಲಕ ಪದಕ ಭರವಸೆಯೊಂದನ್ನು ಮೂಡಿಸಿದ್ದಾರೆ.

ಮಂಗಳವಾರ ನಡೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮೂರು ಬಾರಿಯ ಕಾಮನ್​ವೆಲ್ತ್​ ಚಿನ್ನದ ಪದಕ ವಿಜೇತೆ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದಿದ್ದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು. ಈ ಗೆಲುವು ಕಂಡಾಗಲೇ ವಿನೇಶ್​ ಈ ಬಾರಿ ಪದಕ ಗೆಲ್ಲುವುದು ಖಚಿತ ಎಂದು ನಿರ್ಧರಿಸಲಾಗಿತ್ತು. ಇದೀಗ ಸೆಮಿ ಹಂತಕ್ಕೇರಿರುವ ಅವರು ಪದಕವೊಂದನ್ನು ಖಾತ್ರಿ ಪಡಿಸಿದ್ದಾರೆ. ಸುಸಾಕಿ ಅವರ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಕಂಡ ಮೊದಲ ಸೋಲು ಇದಾಗಿದೆ. 82 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದ ಸುಸಾಕಿ ಎಲ್ಲ ಪಂದ್ಯವನ್ನು ಗೆದ್ದು ಬೀಗಿದ್ದರು. ಇದೀಗ ಇವರ ಗೆಲುವಿನ ನಾಗಾಲೋಟಕ್ಕೆ ಭಾರತೀಯ ಕುಸ್ತಿಪಟು ಬ್ರೇಕ್​ ಹಾಕುವಲ್ಲಿ ಯಶಸ್ಸು ಕಂಡಿದ್ದಾರೆ.

ಪ್ಯಾರಿಸ್​ ಒಲಿಂಪಿಕ್ಸ್​ ಆರಂಭಕ್ಕೇ ಕೆಲವೇ ದಿನ ಬಾಕಿ ಇರುವಾಗ ಮ್ಯಾಡ್ರಿಡ್​ನಲ್ಲಿ ನಡೆದಿದ್ದ ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್(Grand Prix) ಕುಸ್ತಿ ಟೂರ್ನಿಯಲ್ಲಿ ವಿನೇಶ್​ ಚಿನ್ನದ ಪದಕ ಗೆದ್ದು ಬೀಗಿದ್ದರು. 50 ಕೆಜಿ ವಿಭಾಗದಲ್ಲಿ ವಿನೇಶ್ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ಅವರು 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು.

ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ರಾಜೀನಾಮೆ ನೀಡಬೇಕಾಯಿತು. ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಕಳೆದ ವರ್ಷ ಜನವರಿಯಲ್ಲಿ ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೀದಿಗಿಳಿದಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್​ ಅವರೇ ಆಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs SL 3rd ODI: ನಾಳೆ ಅಂತಿಮ ಏಕದಿನ; ರೋಹಿತ್​ ಪಡೆಗೆ ಗೆಲ್ಲಲೇ ಬೇಕಾದ ಒತ್ತಡ!

IND vs SL 3rd ODI: ದ್ವಿತೀಯ ಪಂದ್ಯಕ್ಕೆ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿತ್ತು. ಆದರೆ, ಪಂದ್ಯಕ್ಕೆ ಯಾವುದೇ ಮಳೆ ಕಾಟ ಎದುರಾಗಿರಲಿಲ್ಲ. ಇದೀಗ ನಾಳೆ ನಡೆಯುವ ಮೂರನೇ ಪಂದ್ಯಕ್ಕೂ ಶೇ.77ರಷ್ಟು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

IND vs SL 3rd ODI
Koo

ಕೊಲಂಬೊ: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 0-1 ಹಿನ್ನಡೆಯಲ್ಲಿರುವ ಭಾರತ ತಂಡ ನಾಳೆ(ಬುಧವಾರ) ನಡೆಯುವ ಅಂತಿಮ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದೊಂದಿಗೆ ಕಣಕ್ಕಿಳಿಯಲಿದೆ. ದುರ್ಬಲ ಲಂಕಾ ವಿರುದ್ಧ ಸರಣಿ(IND vs SL 3rd ODI) ಸೋಲಿನ ಭೀತಿಯಲ್ಲಿರುವ ರೋಹಿತ್​ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮೊದಲ ಪಂದ್ಯ ಟೈ ಗೊಂಡಿತ್ತು.

ಭಾರತ ತಂಡಕ್ಕೆ ನಾಯಕ ರೋಹಿತ್​ ಶರ್ಮ ಬಿರುಸಿನ ಬ್ಯಾಟಿಂಗ್​ ಮೂಲಕ ಉತ್ತಮ ಆರಂಭ ಒದಗಿಸುತ್ತಿದ್ದರೂ ಕೂಡ ಮಧ್ಯಮ ಕ್ರಮಾಂಕದಲ್ಲಿ ಯಾರು ಕೂಡ ತಂಡವನ್ನು ಆಧರಿಸಿ ನಿಲ್ಲುತ್ತಿಲ್ಲ. ಬ್ಯಾಟಿಂಗ್​ ಮರೆತವರಂತೆ ಬ್ಯಾಟ್​ ಬೀಸಿ ವಿಕೆಟ್​ ಕಳೆದುಕೊಳ್ಳುತ್ತಿದ್ದಾರೆ. ಕೊಹ್ಲಿ, ರಾಹುಲ್​, ದುಬೆ, ಅಯ್ಯರ್​ ಆಡಿದ 2 ಪಂದ್ಯಗಳಲ್ಲಿಯೂ ವೈಫಲ್ಯ ಕಂಡಿದ್ದಾರೆ. ಅಕ್ಷರ್​ ಪಟೇಲ್​​ ಕೆಳ ಕ್ರಮಾಂಕದಲ್ಲಿ ಸಣ್ಣ ಮಟ್ಟಿನ ಬ್ಯಾಟಿಂಗ್​ ಹೋರಾಟ ನಡೆಸಿದರೂ ಕೂಡ ಅವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್​ ಸಿಗದ ಕಾರಣ ಪಂದ್ಯವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗುತ್ತಿಲ್ಲ. ಭಾರತದ ಸೋಲಿಗೆ ಪ್ರಮುಖ ಕಾರಣ ಮಧ್ಯಮ ಕ್ರಮಾಂಕದ ಬ್ಯಾಟಿಂಗ್​ ವೈಫಲ್ಯ. ನಿರ್ಣಾಯ ಪಂದ್ಯದಲ್ಲಾದರೂ ಜವಾಬ್ದಾರಿಯುತ ಬ್ಯಾಟಿಂಗ್​ ನಡೆಸುವ ಅನಿವಾರ್ಯತೆ ಇದೆ.

ಸರಣಿ ಆರಂಭಕ್ಕೂ ಮುನ್ನ ಲಂಕಾ ತಂಡವನ್ನು ದುರ್ಬಲ ತಂಡ, ಭಾರತಕ್ಕೆ ಸವಾಲೊಡ್ಡುವುದು ಕಷ್ಟ ಎಂದು ಊಹಿಸಲಾಗಿತ್ತು. ಜತೆಗೆ ಅನುಭವಿ ಆಟಗಾರರು ಕೂಡ ಗಾಯದಿಂದ ಅಲಭ್ಯರಾಗಿದ್ದರು. ಆದರೆ, ಸನತ್​ ಜಯಸೂರ್ಯ ಮಾರ್ಗದರ್ಶನದಲ್ಲಿ ಲಂಕಾ ತಂಡದ ಯುವ ಆಟಗಾರರು ಅಸಾಮಾನ್ಯ ಪ್ರದರ್ಶನ ತೋರುವ ಮೂಲಕ ಬಲಿಷ್ಠ ಭಾರತ ತಂಡಕ್ಕೆ ನೀರು ಕುಡಿಸಿತು. ಭಾರತ ತಂಡದ ಅತಿಯಾದ ಆತ್ಮವಿಶ್ವಾಸವೇ ಸೋಲಿಗೆ ಕಾರಣವಾಯಿತು.

ಇದನ್ನೂ ಓದಿ IND vs SL: ಮೂರನೇ ಏಕದಿನ ಪಂದ್ಯಕ್ಕೆ ರಾಹುಲ್​ ಅನುಮಾನ​; ಪಂತ್​ಗೆ ಅವಕಾಶ?

ಪಿಚ್ ರಿಪೋರ್ಟ್

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಇದುವರೆಗೆ 150 ಏಕದಿನ ಪಂದ್ಯಗಳು ನಡೆದಿವೆ. ಇಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಹೆಚ್ಚು ಬಾರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು 80 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ಮಾಡಿದ ತಂಡ ಕೇವಲ 59 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಮೊದಲ ಪಂದ್ಯದಲ್ಲಿ ಸ್ಪಿನ್ನರ್​ಗಳು ಪ್ರಭಾವ ಬೀರಿದ್ದರು. ಹೀಗಾಗಿ ಎರಡನೇ ಏಕದಿನ ಪಂದ್ಯದಲ್ಲಿಯೂ ಸ್ಪಿನ್​ ಬೌಲರ್​ಗಳು ಪ್ರಾಬಲ್ಯ ತೋರುವ ನಿರೀಕ್ಷೆ ಇದೆ. ಪಂದ್ಯ ಸಾಗಿದಂತೆ ಈ ಪಿಚ್​ ಅತ್ಯಂತ ತಿರುವ ಪಡೆದುಕೊಳ್ಳಲಿದೆ. ಬ್ಯಾಟಿಂಗ್​ ನಡೆಸುವುದೇ ಒಂದು ಸವಾಲಾಗಿರಲಿದೆ. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ಆಯ್ದುಕೊಳ್ಳಬಹುದು.

ಹವಾಮಾನ ವರದಿ


ದ್ವಿತೀಯ ಪಂದ್ಯಕ್ಕೆ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿತ್ತು. ಆದರೆ, ಪಂದ್ಯಕ್ಕೆ ಯಾವುದೇ ಮಳೆ ಕಾಟ ಎದುರಾಗಿರಲಿಲ್ಲ. ಇದೀಗ ನಾಳೆ ನಡೆಯುವ ಮೂರನೇ ಪಂದ್ಯಕ್ಕೂ ಶೇ.77ರಷ್ಟು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

ಸಂಭಾವ್ಯ ತಂಡಗಳು


ಭಾರತ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್​ ಪಂತ್​ (ವಿಕೀ), ರಿಯಾನ್​ ಪರಾಗ್​, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ.

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೀ), ಸದೀರ ಸಮರವಿಕ್ರಮ, ಚರಿತ್ ಅಸಲಂಕ (ನಾಯಕ), ಕಾಮಿಂದು ಮೆಂಡಿಸ್, ಜನಿತ್ ಲಿಯಾನಗೆ, ದುನಿತ್ ವೆಲ್ಲಲಾಗೆ, ಅಕಿಲ ದನಂಜಯ, ಅಸಿತ ಫೆರ್ನಾಂಡೋ, ಜೆಫ್ರಿ ವಂಡರ್ಸೆ.

Continue Reading

ಕ್ರೀಡೆ

Rohit Sharma: ಕ್ರಿಸ್​ ಗೇಲ್​ ಸಿಕ್ಸರ್​ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​

Rohit Sharma: ಲಂಕಾ ವಿರುದ್ಧದ ನಾಳಿನ ಪಂದ್ಯದಲ್ಲಿ ರೋಹಿತ್​ ಶರ್ಮ 2 ಸಿಕ್ಸರ್​ ಬಾರಿಸಿದರೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ(Most sixes in career in ODIs) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಲಿದ್ದಾರೆ. ಈ ಮೂಲಕ ಕ್ರಿಸ್​ ಗೇಲ್​ (331 ಸಿಕ್ಸರ್​) ದಾಖಲೆಯನ್ನು ಮುರಿಯಲಿದ್ದಾರೆ.

VISTARANEWS.COM


on

Koo

ಕೊಲಂಬೊ: ಈಗಾಗಲೇ ಶ್ರೀಲಂಕಾ(india vs sri lanka) ವಿರುದ್ಧದ ಏಕದಿನ ಸರಣಿಯಲ್ಲಿ ಪ್ರಚಂಡ ಬ್ಯಾಟಿಂಗ್​ ನಡೆಸುವ ಮೂಲಕ ನಾಯಕನಾಗಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಆಟಗಾರ ಎಂಬ ದಾಖಲೆ ನಿರ್ಮಿಸಿರುವ ರೋಹಿತ್​ ಶರ್ಮ(Rohit Sharma) ಇದೀಗ ಮತ್ತೊಂದು ಸಿಕ್ಸರ್​ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ. ನಾಳೆ(ಬುಧವಾರ) ನಡೆಯುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್​ 2 ಸಿಕ್ಸರ್​ ಬಾರಿಸಿದರೆ ವಿಂಡೀಸ್​ ದಿಗ್ಗಜ ಕ್ರೀಸ್​ ಗೇಲ್(chris gayle)​ ದಾಖಲೆಯೊಂದು ಪತನಗೊಳ್ಳಲಿದೆ.

ಹೌದು, ಲಂಕಾ ವಿರುದ್ಧದ ನಾಳಿನ ಪಂದ್ಯದಲ್ಲಿ ರೋಹಿತ್​ ಶರ್ಮ 2 ಸಿಕ್ಸರ್​ ಬಾರಿಸಿದರೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ(Most sixes in career in ODIs) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಲಿದ್ದಾರೆ. ಈ ಮೂಲಕ ಕ್ರಿಸ್​ ಗೇಲ್​ (331 ಸಿಕ್ಸರ್​) ದಾಖಲೆಯನ್ನು ಮುರಿಯಲಿದ್ದಾರೆ. ಸದ್ಯ ರೋಹಿತ್​ 330 ಸಿಕ್ಸರ್​ ಬಾರಿಸಿ ಮೂರನೇ ಸ್ಥಾನಿಯಾಗಿದ್ದಾರೆ. ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಮಾಜಿ ನಾಯಕ ಹಾಗೂ ಆಟಗಾರ ಶಾಹೀದ್ ಅಫ್ರಿದಿ ಹೆಸರಿನಲ್ಲಿದೆ. ಅಫ್ರಿದಿ 398 ಏಕದಿನ ಪಂದ್ಯಗಳನ್ನಾಡಿ 351 ಸಿಕ್ಸರ್​ ಬಾರಿಸಿದ್ದಾರೆ. ರೋಹಿತ್​ ಕನಿಷ್ಠ 2 ವರ್ಷಗಳ ಕಾಲ ಏಕದಿನ ಆಡಿದರೆ ಈ ದಾಖಲೆಯನ್ನು ಮುರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಲಂಕಾ ವಿರುದ್ಧ ಆಡಿದ 2 ಏಕದಿನ ಪಂದ್ಯದಲ್ಲಿಯೂ ಅರ್ಧಶತಕ ಬಾರಿಸಿ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ರೋಹಿತ್​ ಅಂತಿಮ ಏಕದಿನದಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ. ಮೊದಲ ಪಂದ್ಯದಲ್ಲಿ ರೋಹಿತ್ 58 ರನ್‌ಗಳ ಇನಿಂಗ್ಸ್‌ ಆಡಿದ್ದರು. ಎರಡನೇ ಪಂದ್ಯದಲ್ಲಿ ಹಿಟ್‌ಮ್ಯಾನ್ 64 ರನ್‌ಗಳನ್ನು ಕಲೆ ಹಾಕಿದ್ದರು. ಮೊದಲ ಪಂದ್ಯ ಟೈ ಗೊಂಡು ದ್ವಿತೀಯ ಪಂದ್ಯದಲ್ಲಿ ಸೋಲು ಕಂಡಿರುವ ಭಾರತಕ್ಕೆ ಸರಣಿ ಸೋಲು ತಪ್ಪಿಸಲು ನಾಳೆಯ ಪಂದ್ಯದಲ್ಲಿ ಗೆಲುವು ಅತ್ಯಗತ್ಯ.

ಮೂರನೇ ಪಂದ್ಯಕ್ಕೆ ಭಾರತ ತಂಡದಲ್ಲಿ ಹಲವು ಬದಲಾವಣೆ ಮಾಡುವ ಸಾಧ್ಯತೆ ಕಂಡುಬಂದಿದೆ. ಮೂಲಗಳ ಪ್ರಕಾರ ಆಯ್ಕೆ ಸಮಿತಿ ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರನ್ನು ಕೈ ಬಿಟ್ಟು ರಿಷಭ್​ ಪಂತ್​ಗೆ(Rishabh Pant) ಅವಕಾಶ ನೀಡಲಿದೆ ಎನ್ನಲಾಗಿದೆ.

ಇದನ್ನೂ ಓದಿ Rohit Sharma : ಧೋನಿಯ ನಾಯಕತ್ವದ ದಾಖಲೆಯೊಂದನ್ನು ಮುರಿದ ರೋಹಿತ್ ಶರ್ಮಾ

ರಾಹುಲ್​ ಕಳೆದ ದ್ವಿತೀಯ ಪಂದ್ಯದಲ್ಲಿ ಶೂನ್ಯಕ್ಕೆ ನಿರ್ಗಮಿಸಿದ್ದರು. ಮೊದಲ ಪಂದ್ಯದಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿದ್ದರು. ಇದೀಗ ಸರಣಿ ಸೋಲಿನ ಭೀತಿಯಲ್ಲಿರುವ ಭಾರತ ತಂಡ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ಎದುರಾಳಿ ಬೌಲರ್​ಗಳ ಲೆಕ್ಕಾಚಾರವನ್ನು ಬುಡಮೇಲು ಮಾಡುವಂತಹ ಪಂತ್​ ಅವರನ್ನು ಮೂರನೇ ಪಂದ್ಯದಲ್ಲಿ ಆಡಿಸಲು ತಂಡ ಮುಂದಾಗಿದೆ ಎಂದು ತಿಳಿದುಬಂದಿದೆ.

ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನ ಪಿಚ್​ ಸಿನ್ನರ್​ಗಳಿಗೆ ಹೆಚ್ಚಿನ ನೆರವು ನೀಡುವ ಕಾರಣ ಶಿವಂ ದುಬೆ ಅವರನ್ನು ಈ ಪಂದ್ಯದಿಂದ ಕೈಬಿಟ್ಟು ಅವರ ಬದಲಿಗೆ ಸ್ಪಿನ್​ ಆಲ್​ರೌಂಡರ್​ ಆಗಿರುವ ರಿಯಾನ್ ಪರಾಗ್ ಸ್ಥಾನ ಪಡೆಯಬಹುದು. ಟಿ20 ಸರಣಿಯಲ್ಲಿ ಬ್ಯಾಟಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಪರಾಗ್​ ಉತ್ತಮ ಪ್ರದರ್ಶನ ತೋರಿದ್ದರು. ಹೀಗಾಗಿ ಇವರಿಗೆ ಸ್ಥಾನ ಸಿಗುವುದು ಬಹುತೇಕ ಖಚಿತ.

Continue Reading

ಕ್ರೀಡೆ

Paris Olympics: ಫೈನಲ್​ ಪ್ರವೇಶಿಸಿದ ನೀರಜ್​ ಚೋಪ್ರಾ; ಕುಸ್ತಿಯಲ್ಲಿ ವಿನೇಶ್ ಕ್ವಾರ್ಟರ್​ ಫೈನಲ್​ಗೆ

Paris Olympics: ‘ಬಿ’ ವಿಭಾಗದ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿದ ನೀರಜ್​ ತಮ್ಮ ಮೊದಲ ಎಸೆತವನ್ನೇ 89.34 ಮೀ. ದೂರ ಎಸೆದು ನೇರವಾಗಿ ಫೈನಲ್​ ಪ್ರವೇಶಿಸಿದರು. ಇವರ ಜತೆ ಪಾಕಿಸ್ತಾನದ ಅರ್ಷದ್ ನದೀಮ್ 86.59 ಮೀ. ಸಾಧನೆಯೊಂದಿಗೆ ಫೈನಲ್​ ಟಿಕೆಟ್​ ಪಡೆದರು.

VISTARANEWS.COM


on

Paris Olympics
Koo

ಪ್ಯಾರಿಸ್​: ಟೋಕಿಯೊ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ನೀರಜ್​ ಚೋಪ್ರಾ(Neeraj Chopra) ಅವರು ಪ್ಯಾರಿಸ್​ ಒಲಿಂಪಿಕ್ಸ್​(Paris Olympics) ಟೂರ್ನಿಯಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಇಂದು(ಮಂಗಳವಾರ) ನಡೆದ ಜಾವೆಲಿನ್​ ಅರ್ಹತಾ ಸುತ್ತಿನ ಪಂದ್ಯದಲ್ಲಿ 89.34 ಮೀ. ದೂರ ಜಾವೆಲಿನ್​ ಎಸೆದು ಫೈನಲ್​ ಪ್ರವೇಶಿಸಿದ್ದಾರೆ. ಆದರೆ ಭಾರತದ ಮತ್ತೋರ್ವ ಜಾವೆಲಿನ್‌ ಎಸೆತಗಾರ ಕಿಶೋರ್‌ ಜೇನಾ 9ನೇ ಸ್ಥಾನಿಯಾಗಿ ನಿರಾಸೆ ಮೂಡಿಸಿದರು.

‘ಬಿ’ ವಿಭಾಗದ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿದ ನೀರಜ್​ ತಮ್ಮ ಮೊದಲ ಎಸೆತವನ್ನೇ 89.34 ಮೀ. ದೂರ ಎಸೆದು ನೇರವಾಗಿ ಫೈನಲ್​ ಪ್ರವೇಶಿಸಿದರು. ಇವರ ಜತೆ ಪಾಕಿಸ್ತಾನದ ಅರ್ಷದ್ ನದೀಮ್ 86.59 ಮೀ. ಸಾಧನೆಯೊಂದಿಗೆ ಫೈನಲ್​ ಟಿಕೆಟ್​ ಪಡೆದರು.

89.34 ಮೀ. ದೂರ ಜಾವೆಲಿನ್​ ಎಸೆದದ್ದು ನೀರಜ್​ ಅವರ 2ನೇ ಶ್ರೇಷ್ಠ ಸಾಧನೆಯಾಗಿದೆ. ಅವರ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಟೋಕಿಯೊದಲ್ಲಿ 87.58 ಮೀ. ಸಾಧನೆಯೊಂದಿಗೆ ಚಿನ್ನ ಗೆದ್ದಿದ್ದರು. ಆಗಸ್ಟ್​ 8ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ನೀರಜ್​ ಚೋಪ್ರಾ ಚಿನ್ನದ ಪದಕ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ. ‘ಎ’ ವಿಭಾಗದಲ್ಲಿ ಜರ್ಮನಿಯ ಜೂಲಿಯನ್ ವೆಬರ್ 87.76 ಮೀ. ದೂರ ಎಸೆದು ಮೊದಲ ಸ್ಥಾನದೊಂದಿಗೆ ಫೈನಲ್​ ಪ್ರವೇಶಿಸಿದ್ದರು.

ಕಾಶಿನಾಥ್ ನಾಯ್ಕ್ ಅವರು ನೀರಜ್ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿಯೂ(neeraj chopra paris olympics) ಚಿನ್ನದ ಪದಕ ಗೆಲ್ಲಲಿದ್ದಾರೆ ಎಂದು ಆತ್ಮವಿಶ್ವಾಸದಿಂದ ಈ ಮಾತನ್ನು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿನಾಥ್, “ನಾನು 2015 ರಿಂದ ನೀರಜ್​ ಜತೆ ಕೆಲಸ ಮಾಡುತ್ತಿದ್ದೇನೆ. ಅವರ ಛಲವನ್ನು ಮೆಚ್ಚಲೇ ಬೇಕು.​ ಸಾಧಿಸುವ ಛಲವೇ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ಅತ್ಯಂತ ಶಿಸ್ತಿನ ಕ್ರೀಡಾಪಟು ಕೂಡ ಆಗಿದ್ದಾರೆ. 90 ಮೀ. ದೂರ ಜಾವೆಲಿನ್​ ಎಸೆಯುವದು ಪ್ರಮುಖ ಗುರಿ ಎಂದು ನೀರಜ್​ ಈಗಾಗಲೇ ಹೇಳಿದ್ದಾರೆ. ಹೇಳಿದಂತೆ ಅವರು ಈ ದೂರವನ್ನು ಕ್ರಮಿಸುವ ವಿಶ್ವಾಸ ನನ್ನಲ್ಲಿದೆ” ಎಂದು ಹೇಳಿದ್ದಾರೆ.

ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ವಿನೇಶ್​


ಭಾರತ ಮಹಿಳಾ ಕುಸ್ತಿಪಟು ವಿನೇಶ್​ ಪೋಗಟ್​ 50 ಕೆಜಿ ವಿಭಾಗದಲ್ಲಿ ಇಂದು ನಡೆದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದಾರೆ. ಇಂದೇ ನಡೆಯುವ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್​ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ ಸೆಣಸಾಡಲಿದ್ದಾರೆ.

Continue Reading

ಕ್ರೀಡೆ

IND vs SL: ಮೂರನೇ ಏಕದಿನ ಪಂದ್ಯಕ್ಕೆ ರಾಹುಲ್​ ಅನುಮಾನ​; ಪಂತ್​ಗೆ ಅವಕಾಶ?

IND vs SL: ರಾಹುಲ್​ ಬ್ಯಾಟಿಂಗ್​ ವೈಫಲ್ಯಕ್ಕೆ ತಂಡದ ಕೆಲ ನಿರ್ಧಾರವೇ ಕಾರಣ ಎನ್ನುವ ಮಾತುಗಳು ಕೂಡ ಕೇಳಿ ಬಂದಿವೆ. ಅನುಭವಿ ಆಟಗಾರನಾಗಿದ್ದರೂ ಕೂಡ ಅವರನ್ನು 7ನೇ ಕ್ರಮಾಂಕದಲ್ಲಿ ಆಡಿಸಿದ್ದು ಕೂಡ ಅವರ ವೈಫಲ್ಯಕ್ಕೆ ಕಾರಣ ಎಂದು ಅನೇಕ ಮಾಜಿ ಆಟಗಾರರು ಟೀಕೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

IND vs SL
Koo

ಕೊಲಂಬೊ: ಶ್ರೀಲಂಕಾ(IND vs SL) ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಹೀನಾಯವಾ್ಗಿ ಸೋಲು ಕಂಡಿದ್ದ ಭಾರತ ನಾಳೆ ನಡೆಯುವ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಈ ಪಂದ್ಯಕ್ಕೆ ತಂಡದಲ್ಲಿ ಹಲವು ಬದಲಾವಣೆ ಮಾಡುವ ಸಾಧ್ಯತೆ ಕಂಡುಬಂದಿದೆ. ಮೂಲಗಳ ಪ್ರಕಾರ ಆಯ್ಕೆ ಸಮಿತಿ ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರನ್ನು ಕೈ ಬಿಟ್ಟು ರಿಷಭ್​ ಪಂತ್​ಗೆ(Rishabh Pant) ಅವಕಾಶ ನೀಡಲಿದೆ ಎನ್ನಲಾಗಿದೆ.

ರಾಹುಲ್​ ಕಳೆದ ದ್ವಿತೀಯ ಪಂದ್ಯದಲ್ಲಿ ಶೂನ್ಯಕ್ಕೆ ನಿರ್ಗಮಿಸಿದ್ದರು. ಮೊದಲ ಪಂದ್ಯದಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿದ್ದರು. ಇದೀಗ ಸರಣಿ ಸೋಲಿನ ಭೀತಿಯಲ್ಲಿರುವ ಭಾರತ ತಂಡ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ಎದುರಾಳಿ ಬೌಲರ್​ಗಳ ಲೆಕ್ಕಾಚಾರವನ್ನು ಬುಡಮೇಲು ಮಾಡುವಂತಹ ಪಂತ್​ ಅವರನ್ನು ಮೂರನೇ ಪಂದ್ಯದಲ್ಲಿ ಆಡಿಸಲು ತಂಡ ಮುಂದಾಗಿದೆ ಎಂದು ತಿಳಿದುಬಂದಿದೆ.

ರಾಹುಲ್​ ಬ್ಯಾಟಿಂಗ್​ ವೈಫಲ್ಯಕ್ಕೆ ತಂಡದ ಕೆಲ ನಿರ್ಧಾರವೇ ಕಾರಣ ಎನ್ನುವ ಮಾತುಗಳು ಕೂಡ ಕೇಳಿ ಬಂದಿವೆ. ಅನುಭವಿ ಆಟಗಾರನಾಗಿದ್ದರೂ ಕೂಡ ಅವರನ್ನು 7ನೇ ಕ್ರಮಾಂಕದಲ್ಲಿ ಆಡಿಸಿದ್ದು ಕೂಡ ಅವರ ವೈಫಲ್ಯಕ್ಕೆ ಕಾರಣ ಎಂದು ಅನೇಕ ಮಾಜಿ ಆಟಗಾರರು ಟೀಕೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲ ನೆಟ್ಟಿಗರು ರಾಹುಲ್​ ವಿಷಯದಲ್ಲಿ ಮಾತ್ರ ಏಕೆ ಹೀಗಾಗುತ್ತಿದೆ ಎಂದು ಬಿಸಿಸಿಐ ಮತ್ತು ಆಯ್ಕೆ ಸಮಿತಿಗೆ ಪ್ರಶ್ನೆ ಮಾಡಿದ್ದಾರೆ.

ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನ ಪಿಚ್​ ಸಿನ್ನರ್​ಗಳಿಗೆ ಹೆಚ್ಚಿನ ನೆರವು ನೀಡುವ ಕಾರಣ ಶಿವಂ ದುಬೆ ಅವರನ್ನು ಈ ಪಂದ್ಯದಿಂದ ಕೈಬಿಟ್ಟು ಅವರ ಬದಲಿಗೆ ಸ್ಪಿನ್​ ಆಲ್​ರೌಂಡರ್​ ಆಗಿರುವ ರಿಯಾನ್ ಪರಾಗ್ ಸ್ಥಾನ ಪಡೆಯಬಹುದು. ಟಿ20 ಸರಣಿಯಲ್ಲಿ ಬ್ಯಾಟಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಪರಾಗ್​ ಉತ್ತಮ ಪ್ರದರ್ಶನ ತೋರಿದ್ದರು. ಹೀಗಾಗಿ ಇವರಿಗೆ ಸ್ಥಾನ ಸಿಗುವುದು ಬಹುತೇಕ ಖಚಿತ.

ಇದನ್ನೂ ಓದಿ IND vs SL ODI : ಎರಡನೇ ಏಕ ದಿನ ಪಂದ್ಯದಲ್ಲಿ ಭಾರತ ತಂಡಕ್ಕೆ32 ರನ್ ಸೋಲು, ಸರಣಿಯಲ್ಲಿ ಲಂಕಾಗೆ ಮುನ್ನಡೆ

ಈ ಬಾರಿಯ ಐಪಿಎಲ್​ನಲ್ಲಿ ಕೆಕೆಆರ್​ ಪರ ಘಾತಕ ಬೌಲಿಂಗ್​ ಮೂಲಕ ಹಲವು ವಿಕೆಟ್​ ಕಿತ್ತಿದ್ದ ಹರ್ಷಿತ್ ರಾಣಾ ಕೂಡ ಅವಕಾಶ ಗಿಟ್ಟಿಸಿಕೊಳ್ಳುವ ಸಾಧ್ಯತೆ ಇದೆ. ದುಬಾರಿಯಾಗಿ ಕಂಡು ಬರುತ್ತಿರುವ ಮೊಹಮ್ಮದ್​ ಸಿರಾಜ್​ ಬದಲಿಗೆ ಇವರು ಆಡುವ ಸಾಧ್ಯತೆ ಇದೆ. ಗಂಭೀರ್​ ಅವರ ಮಾರ್ಗದರ್ಶನಲ್ಲಿ ಆಡಿದ ಅನುಭವ ಕೂಡ ಹರ್ಷಿತ್ ರಾಣಾಗೆ ಇದೆ.

ಮೂರನೇ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್​ ಪಂತ್​ (ವಿಕೀ), ರಿಯಾನ್​ ಪರಾಗ್​, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ.

Continue Reading
Advertisement
Devara Part 1
ಸಿನಿಮಾ6 mins ago

Devara Part 1: ಕಿರಿಯ ವಯಸ್ಸಿನ ಜಾನ್ವಿ ಕಪೂರ್‌ ಜತೆ ರೊಮ್ಯಾನ್ಸ್‌ ; ಟ್ರೋಲ್‌ಗೆ ಗುರಿಯಾದ ಜೂನಿಯರ್ ಎನ್‌ಟಿಆರ್!

Bangladesh Unrest
ವಿದೇಶ7 mins ago

Bangladesh Unrest: ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌; ರಫಾ.. ರಫಾ.. ಎಂದು ಬೊಬ್ಬಿಡುತ್ತಿದ್ದ ಸೆಲೆಬ್ರಿಟಿಗಳು ಈಗೇಕೆ ಸೈಲೆಂಟ್‌?

National Handloom Day
ಫ್ಯಾಷನ್16 mins ago

National Handloom Day: ಮಾಡರ್ನ್‌ ಯುವತಿಯರ ಮನವನ್ನೂ ಗೆಲ್ಲುತ್ತಿರುವ ಹ್ಯಾಂಡ್‌ ಲೂಮ್‌ ಸೀರೆ

Mangalore Homestay case
ಕರ್ನಾಟಕ23 mins ago

Mangalore Homestay case: ಮಂಗಳೂರು ಹೋಮ್‌ ಸ್ಟೇ ದಾಳಿ ಪ್ರಕರಣದ ಎಲ್ಲಾ 40 ಆರೋಪಿಗಳು ಖುಲಾಸೆ

shravan foods
ಆರೋಗ್ಯ34 mins ago

Shravan Recipes: ಶ್ರಾವಣ ಮಾಸದಲ್ಲಿ ಸಾಬುದಾನದ ಈ 5 ಖಾದ್ಯಗಳನ್ನು ಮಾಡಿ ನೋಡಿ

IND vs SL 3rd ODI
ಕ್ರೀಡೆ35 mins ago

IND vs SL 3rd ODI: ನಾಳೆ ಅಂತಿಮ ಏಕದಿನ; ರೋಹಿತ್​ ಪಡೆಗೆ ಗೆಲ್ಲಲೇ ಬೇಕಾದ ಒತ್ತಡ!

Wild Animals Attack
ಚಿಕ್ಕಮಗಳೂರು1 hour ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Fortis Hospital
ಬೆಂಗಳೂರು1 hour ago

Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ

Viral Video
Latest1 hour ago

Viral Video: ಪಿಕ್‌ನಿಕ್‌ಗೆಂದು ಬಂದವನು ರೀಲ್ಸ್‌ ಮಾಡಲು ಹೋದ; ಜಲಪಾತದಿಂದ ಬಿದ್ದು ಸತ್ತ

Komari Janaiah Naidu
ಸಿನಿಮಾ1 hour ago

Komari Janaiah Naidu: ಟಾಲಿವುಡ್‌ ನಿರ್ದೇಶಕ ಕೊಮರಿ ಜನಯ್ಯ ನಾಯ್ಡು ಆತ್ಮಹತ್ಯೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು1 hour ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌