Paris Olympics: ಟ್ರ್ಯಾಕ್‌-ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದರೆ 41.6 ಲಕ್ಷ ಬಹುಮಾನ!; ಐತಿಹಾಸಿಕ ನಿರ್ಧಾರ ಪ್ರಕಟಿಸಿದ ಡಬ್ಲ್ಯುಎ - Vistara News

ಕ್ರೀಡೆ

Paris Olympics: ಟ್ರ್ಯಾಕ್‌-ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದರೆ 41.6 ಲಕ್ಷ ಬಹುಮಾನ!; ಐತಿಹಾಸಿಕ ನಿರ್ಧಾರ ಪ್ರಕಟಿಸಿದ ಡಬ್ಲ್ಯುಎ

Paris Olympics: ಟೋಕಿಯೊ ಒಲಿಂಪಿಕ್ ಕೂಟದ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಜಯಿಸಿದ್ದದ್ದ ನೀರಜ್​ ಚೋಪ್ರಾ ಅವರು ಈ ಬಾರಿ ಚೆನ್ನ ಗೆದ್ದರೆ ಅವರಿಗೆ 50,000 ಅಮೆರಿಕನ್‌ ಡಾಲರ್‌ ಬಹುಮಾನ ದೊರೆಯಲಿದೆ. ನೀರಜ್​ ಅವರು ಟ್ರ್ಯಾಕ್‌ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಪ್ಯಾರಿಸ್‌ನಲ್ಲಿಯೂ ಅವರ ಮೇಲೆ ಚಿನ್ನದ ನಿರೀಕ್ಷೆ ಮಾಡಲಾಗಿದೆ.

VISTARANEWS.COM


on

Paris Olympics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೊನಾಕೊ: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟ ಜುಲೈ 26ರಿಂದ ಆರಂಭಗೊಳ್ಳಲಿದೆ. ಕೂಟ ಆರಂಭಕ್ಕೂ ಮುನ್ನವೇ ಎಲ್ಲ ಕ್ರೀಡಾಪಡುಗಳಿಗೆ ಸಿಹಿ ಸುದ್ದಿಯೊಂದು ಲಭಿಸಿದೆ. ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡಲು ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ತೀರ್ಮಾನಿಸಿದೆ. 2028ರಲ್ಲಿ ಲಾಸ್‌ ಏಂಜಲಿಸ್​ನಲ್ಲಿ ನಡೆಯುವ ಒಲಿಂಪಿಕ್ ಕೂಟದಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಎಲ್ಲರಿಗೂ ನಗದು ಪ್ರಶಸ್ತಿ ನೀಡುವುದಾಗಿಯೂ ಸಂಸ್ಥೆ ಘೋಷಿಸಿದೆ. ಇದೇ ಮೊದಲ ಬಾರಿಗೆ ಒಲಿಂಪಿಕ್ ಕೂಟದಲ್ಲಿ ನಗದು ಪ್ರಶಸ್ತಿ ನೀಡಲಾಗುತ್ತಿದೆ.

ಟೋಕಿಯೊ ಒಲಿಂಪಿಕ್ ಕೂಟದ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಜಯಿಸಿದ್ದದ್ದ ನೀರಜ್​ ಚೋಪ್ರಾ ಅವರು ಈ ಬಾರಿ ಚೆನ್ನ ಗೆದ್ದರೆ ಅವರಿಗೆ 50,000 ಅಮೆರಿಕನ್‌ ಡಾಲರ್‌ ಬಹುಮಾನ ದೊರೆಯಲಿದೆ. ನೀರಜ್​ ಅವರು ಟ್ರ್ಯಾಕ್‌ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಪ್ಯಾರಿಸ್‌ನಲ್ಲಿಯೂ ಅವರ ಮೇಲೆ ಚಿನ್ನದ ನಿರೀಕ್ಷೆ ಮಾಡಲಾಗಿದೆ.

“ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ)ಯಿಂದ ಬರುವ ಹಣವು ಒಲಿಂಪಿಕ್ ಕ್ರೀಡೆಗಳಿಗೆ ಮರಳಿ ಹೋಗುವಂತೆ ಮಾಡಿರುವುದು ಸಂತಸ ತಂದಿದೆ. ಡೈಮಂಡ್ ಲೀಗ್, ಕಾಂಟಿನೆಂಟಲ್ ಕಪ್‌ಗಳಲ್ಲಿ ಪದಕ ಗೆದ್ದಾಗ ನಗದು ಬಹುಮಾನ ಇರುತ್ತಿತ್ತು. ಆದರೆ ಒಲಿಂಪಿಕ್ಸ್ ಬಹುಮಾನದಲ್ಲಿ ಈ ಸೌಕರ್ಯ ಇರಲಿಲ್ಲ. ಇದೀಗ ಒಲಿಂಪಿಕ್ಸ್​ನಲ್ಲಿಯೂ ಈ ನಿಯಮ ಬರಲಿದೆ” ಎಂದು ಡಬ್ಲ್ಯುಎ ಅಧ್ಯಕ್ಷ ಸೆಬಾಸ್ಟಿಯನ್ ಕೊ ಹೇಳಿದ್ದಾರೆ.

ಸೀನ್ ನದಿಯಲ್ಲಿ ಉದ್ಘಾಟನಾ ಸಮಾರಂಭ


ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

ಇದನ್ನೂ ಓದಿ Mirabai Chanu: ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೀರಾಬಾಯಿ ಚಾನು

ಬೋಟ್‌ಗಳಲ್ಲೇ ಪರೇಡ್‌

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

IPL 2024 POINTS TABLE: ಕೆಕೆಆರ್​ ಗೆಲುವಿನ ಬಳಿಕ ಅಂಕಪಟ್ಟಿ ಹೇಗಿದೆ?

IPL 2024 POINTS TABLE: ಕೆಕೆಆರ್​ ಗೆಲುವು ಸಾಧಿಸಿ 14 ಅಂಕದೊಂದಿಗೆ ಪ್ಲೇ ಆಫ್​ ಸನಿಹಕ್ಕೆ ಬಂದು ನಿಂತಿದೆ. ಸದ್ಯ 2ನೇ ಸ್ಥಾನದಲ್ಲಿರುವ ಕೆಕೆಆರ್​ಗೆ ಇನ್ನು 4 ಪಂದ್ಯಗಳು ಬಾಕಿ ಉಳಿದಿವೆ. ಈ ಪೈಕಿ ಕನಿಷ್ಠ 1 ಪಂದ್ಯ ಗೆದ್ದರೂ ಪ್ಲೇ ಆಫ್​ ಪ್ರವೇಶಿಸಬಹುದು. ಇಂದು ನಡೆಯುವ ಆರ್​ಸಿಬಿ ಮತ್ತು ಗುಜರಾತ್​ ಟೈಟಾನ್ಸ್​ ಮುಖಾಮುಖಿಯಾಗಲಿವೆ.

VISTARANEWS.COM


on

IPL 2024 POINTS TABLE
Koo

ಮುಂಬಯಿ: ಶುಕ್ರವಾರ ರಾತ್ರಿ ನಡೆದ ಐಪಿಎಲ್(IPL 2024)​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್(Mumbai Indians)​ ತಂಡ ತವರಿನಲ್ಲೇ ಕೆಕೆಆರ್(Kolkata Knight Riders)​ ವಿರುದ್ಧ 24 ರನ್​​ ಅಂತರದ ಸೋಲು ಕಂಡಿತು. ಈ ಸೋಲಿನಿಂದ ಮುಂಬೈಯ ಪ್ಲೇ ಆಫ್​ ಆಸೆ ಬಹುತೇಕ ಕಮರಿ ಹೋಗಿದೆ. ಅಂಕಪಟ್ಟಿಯಲ್ಲಿ(IPL 2024 POINTS TABLE) 9ನೇ ಸ್ಥಾನದಲ್ಲಿರುವ ಹಾರ್ದಿಕ್​ ಪಡೆಗೆ ಇನ್ನು ಮೂರು ಪಂದ್ಯಗಳು ಮಾತ್ರ ಬಾಕಿ ಉಳಿದಿದೆ. ಈ ಪಂದ್ಯ ಗೆದ್ದರೂ ಕೂಡ ಯಾವುದೇ ಲಾಭವಿಲ್ಲ.

ಕೆಕೆಆರ್​ ಗೆಲುವು ಸಾಧಿಸಿ 14 ಅಂಕದೊಂದಿಗೆ ಪ್ಲೇ ಆಫ್​ ಸನಿಹಕ್ಕೆ ಬಂದು ನಿಂತಿದೆ. ಸದ್ಯ 2ನೇ ಸ್ಥಾನದಲ್ಲಿರುವ ಕೆಕೆಆರ್​ಗೆ ಇನ್ನು 4 ಪಂದ್ಯಗಳು ಬಾಕಿ ಉಳಿದಿವೆ. ಈ ಪೈಕಿ ಕನಿಷ್ಠ 1 ಪಂದ್ಯ ಗೆದ್ದರೂ ಪ್ಲೇ ಆಫ್​ ಪ್ರವೇಶಿಸಬಹುದು. ಇಂದು ನಡೆಯುವ ಆರ್​ಸಿಬಿ ಮತ್ತು ಗುಜರಾತ್​ ಟೈಟಾನ್ಸ್​ ಮುಖಾಮುಖಿಯಾಗಲಿವೆ. ಈ ಪಂದ್ಯ ಉಭಯ ತಂಡಗಳಿಗೂ ಪ್ಲೇ ಆಫ್​ ಪ್ರವೇಶದ ನಿಟ್ಟಿನಲ್ಲಿ ಮಹತ್ವದ್ದಾಗಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​107314 (+1.098)
ಲಕ್ನೋ​​106412 (+0.094)
ಹೈದರಾಬಾದ್​106512 (+0.072)
ಚೆನ್ನೈ​105510 (+0.627)
ಡೆಲ್ಲಿ115610 (-0.442)
ಪಂಜಾಬ್​10488 (-0.062)
ಗುಜರಾತ್​10468 (-1.113)
ಮುಂಬೈ11386 (-0.356)
ಆರ್​ಸಿಬಿ10376 (-0.415)

ತವರಿನಲ್ಲೇ ಸೋಲಿನ ಮುಖಭಂಗ

ವಾಖೆಂಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ 19.5 ಓವರ್​ಗಳಲ್ಲಿ 169 ರನ್​ಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ 18.5 ಓವರ್​​ 145 ರನ್​ಗಳಿಗೆ ಶರಣಾಗಿ ಸೋಲೊಪ್ಪಿಕೊಂಡಿತು. ಕೆಕೆಅರ್​ ಪರ ಬ್ಯಾಟಿಂಗ್​ನಲ್ಲಿ ವೆಂಕಟೇಶ್​ ಅಯ್ಯರ್​ (70) ಅರ್ಧ ಶತಕ ಬಾರಿಸಿ ಮಿಂಚಿದರೆ ಬೌಲಿಂಗ್​ನಲ್ಲಿ ಮಿಚೆಲ್ ಸ್ಟಾರ್ಕ್​ 4 ವಿಕೆಟ್ ತಮ್ಮದಾಗಿಸಿಕೊಂಡರು.

ಇದನ್ನೂ ಓದಿ IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

ಬ್ಯಾಟಿಂಗ್​ ಪೂರಕವಾಗಿದ್ದ ಟ್ರ್ಯಾಕ್​ನಲ್ಲಿ ಟಾಸ್​ ಸೋತು ಬ್ಯಾಟಿಂಗ್​ ನಡೆಸಿದ ಕೆಕೆಆರ್​ 57 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತು. ಈ ವೇಳೆ ವೆಂಕಟೇಶ್ ಅಯ್ಯರ್ ಹಾಗೂ ಹಾಲಿ ಆವೃತ್ತಿಯಲ್ಲಿ ಮೊದಲ ಅವಕಾಶ ಪಡೆದ ಮನೀಶ್ ಪಾಂಡೆ 42 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಇವರಿಬ್ಬರ ನೆರವಿನಿಂದ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸಲು ಕೆಕೆಆರ್​ಗೆ ಸಾಧ್ಯವಾಯಿತು. ಅಂಗ್​ಕ್ರಿಶ್​ ರಘುವಂಶಿ 13 ರನ್ ಬಾರಿಸಿ ಕೆಕೆಆರ್​ ಪರ ಎರಡಂಕಿ ಮೊತ್ತ ದಾಟಿದ ಎರಡನೇ ಆಟಗಾರ ಎನಿಸಿಕೊಂಡರು. ಉಳಿದವರೆಲ್ಲರೂ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು.

Continue Reading

ಕ್ರಿಕೆಟ್

RCB vs GT: ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ; ಮೆಟ್ರೋ ಸೇವೆ ವಿಸ್ತರಣೆ

RCB vs GT: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐಪಿಎಲ್ 2024 ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಕೆಳಕಂಡಂತೆ ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ಮೇ 4 ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಿದೆ. ಜತೆಗೆ ಬೆಂಗಳೂರು ನಗರ ಸಂಚಾರ ಪೊಲೀಸರಿಂದಲೂ ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

VISTARANEWS.COM


on

RCB vs GT
Koo

ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ಆರ್​ಸಿಬಿ(Royal Challengers Bengaluru) ಇಂದು (ಮೇ​ 4) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಗುಜರಾತ್​ ಟೈಟಾನ್ಸ್(Gujarat Titans)​ ವಿರುದ್ಧ​ಕಣಕ್ಕಿಳಿಯಲು ಸಜ್ಜಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐಪಿಎಲ್ 2024 ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಕೆಳಕಂಡಂತೆ ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ಮೇ 4 ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಿದೆ. ಜತೆಗೆ ಬೆಂಗಳೂರು ನಗರ ಸಂಚಾರ ಪೊಲೀಸರಿಂದಲೂ ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಪೂರ್ಣವಾಗಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.

ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ


ಕ್ರೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆ.

ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು


ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ) ಈ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಮೆಟ್ರೋ ಸೇವೆ


ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಪೇಪರ್‌ ಟಿಕೆಟ್‌ ಮಾರಾಟ


ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ ( QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

Continue Reading

ಕ್ರೀಡೆ

Brij Bhushan: ಮಗನ ನಾಮನಿರ್ದೇಶನದ ವೇಳೆ 10 ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶಿಸಿದ ಬ್ರಿಜ್ ಭೂಷಣ್

Brij Bhushan: ಕರಣ್ ಭೂಷಣ್ ಸಿಂಗ್ ಅವರು ಉತ್ತರ ಪ್ರದೇಶದಿಂದ ಸತತ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಕಿರಿಯ ಪುತ್ರ . 2019 ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜ್ ಭೂಷಣ್ ಅವರು ಕೈಸರ್‌ಗಂಜ್‌ನಿಂದ ಚುನಾವಣೆಯಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ.

VISTARANEWS.COM


on

Brij Bhushan
Koo

ಉತ್ತರ ಪ್ರದೇಶ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಕೈಸರ್‌ಗಂಜ್‌ನ(Kaiserganj ) ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್(Brij Bhushan) ಅವರನ್ನು ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆಯಿಂದ(Lok Sabha polls) ಕೈಬಿಟ್ಟು, ಅವರ ಪುತ್ರ ಕರಣ್(Karan) ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಗನ ನಾಮನಿರ್ದೇಶನ ಮಾಡುವ ಮೊದಲು ಕೈಸರ್‌ಗಂಜ್‌ನಲ್ಲಿ ಭರ್ಜರಿ ಶಕ್ತಿ ಪ್ರದರ್ಶನ ಮಾಡಿದ್ದಾರೆ.

500 ಅಧಿಕ 700 ಎಸ್‌ಯುವಿ ಕಾರುಗಳ ಮೂಲಕ ರ‍್ಯಾಲಿ ಮತ್ತು ನಾಮನಿರ್ದೇಶನ ಸಭೆಯಲ್ಲಿ 10,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಇದರಲ್ಲಿ ಶಾಸಕರು, ಎಂಎಲ್‌ಸಿಗಳು, ಜಿಲ್ಲಾ ಪಂಚಾಯತ್ ಮುಖ್ಯಸ್ಥರು, ಹತ್ತಿರದ ಜಿಲ್ಲೆಗಳ ಬಿಜೆಪಿಯ ಸ್ಥಳೀಯ ನಾಯಕರು, ಅಯೋಧ್ಯೆಯ ಪ್ರಮುಖ ಧಾರ್ಮಿಕ ಮುಖಂಡರು ಸೇರಿದ್ದರು.

ಕರಣ್ ಭೂಷಣ್ ಸಿಂಗ್ ಅವರು ಉತ್ತರ ಪ್ರದೇಶದಿಂದ ಸತತ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಕಿರಿಯ ಪುತ್ರ . 2019 ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜ್ ಭೂಷಣ್ ಅವರು ಕೈಸರ್‌ಗಂಜ್‌ನಿಂದ ಚುನಾವಣೆಯಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಜನ ಸಂಪರ್ಕ ಹೊಂದಿದ್ದಾರೆ. ಐದನೇ ಹಂತದಲ್ಲಿ ಮೇ 20 ರಂದು ಕೈಸರ್‌ಗಂಜ್‌ನಲ್ಲಿ ಮತದಾನ ನಡೆಯಲಿದೆ.

ಹಳದಿ ಕುರ್ತಾ, ಕಿತ್ತಳೆ ಬಣ್ಣದ ಸ್ಕಾರ್ಫ್ ಮತ್ತು ಧೋತಿ ಧರಿಸಿದ್ದ ಬ್ರಿಜ್ ಭೂಷಣ್, ಉತ್ಸಾಹಭರಿತ ಕಾರ್ಯಕರ್ತರ ನಡುವೆ ಕೈಯಲ್ಲಿ ಮೈಕ್ರೊಫೋನ್ನೊಂದಿಗೆ ಎಲ್ಲ ವ್ಯವಸ್ಥೆಗಳನ್ನು ನಿರ್ವಹಿಸುತ್ತಿದ್ದರು. ತಾನು ಚುನಾವಣ ಕಣದಲ್ಲಿ ಇಲ್ಲದಿದ್ದರೂ ಕೂಡ ಈ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಇನ್ನೂ ಕೂಡ ಇದೆ ಎನ್ನುವುದನ್ನು ಈ ಶಕ್ತ ಪ್ರದರ್ಶನದ ಮೂಲಕ ತೋರಿಸಿಕೊಟ್ಟಿದ್ದಾರೆ. ಆದ್ಯಾಗೂ, ಬ್ರಿಜ್​ ಭೂಷಣ್​ ಕಾರ್ಯಕ್ರಮದ ಉದ್ದಕ್ಕೂ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅಥವಾ ಅವರ ಮಗನ ಬಳಿ ಹೋಗಲಿಲ್ಲ. ಗಣ್ಯರು ಮತ್ತು ಧಾರ್ಮಿಕ ಮುಖಂಡರನ್ನು ಭೇಟಿ ಮಾಡುವುದರಲ್ಲಿ ನಿರತರಾಗಿದ್ದರು. ಮಗನ ನಾಮಪತ್ರ ಸಲ್ಲಿಕೆಗೂ ಹೋಗಿರಲಿಲ್ಲ.

ನಾಮಪತ್ರ ಸಲ್ಲಿಕೆಗೆ ಮಗನ ಜತೆ ಏಕೆ ಹೋಗಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಬ್ರಿಜ್​ ಭೂಷಣ್​​, “ಐದು ಜನರಿಗೆ ಮಾತ್ರ ಹೋಗಲು ಅನುಮತಿಸಲಾಗಿದೆ. ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಸಂದರ್ಭದಲ್ಲಿ ನಾನು ಇಲ್ಲಿನ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದೆ” ಎಂದು ಹೇಳಿದರು.

Continue Reading

ಕ್ರೀಡೆ

RCB vs GT: ಆರ್​ಸಿಬಿ ಅಭಿಮಾನಿಗಳಿಗೆ ಇಂದು ಶೇ.99ರಷ್ಟು ನಿರಾಸೆ ಖಚಿತ; ಪಂದ್ಯ ನಡೆಯುವುದೇ ಅನುಮಾನ

RCB vs GT: ಬೆಂಗಳೂರು (Bengaluru Rains) ಸೇರಿದಂತೆ ಹಲವೆಡೆ ಗುಡುಗು ಸಿಡಿಲು ಸಹಿತ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಳೆದ 2 ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಅದು ಕೂಡ ಸಂಜೆಯ ವೇಳೆಯಲ್ಲಿ. ಹೀಗಾಗಿ ಇಂದು ಕೂಡ ಮಳೆಯ ಸಾಧ್ಯತೆ ಅಧಿಕವಾಗಿದೆ.

VISTARANEWS.COM


on

RCB vs GT
Koo

ಬೆಂಗಳೂರು: ಪ್ಲೇ ಆಫ್​ ರೇಸ್​ನ ಕ್ಷೀಣ ಅವಕಾಶ ಹೊಂದಿರುವ ಆರ್​ಸಿಬಿ ಇಂದು ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(RCB vs GT) ಗುಜರಾತ್​ ಟೈಟಾನ್ಸ್​ ವಿರುದ್ಧ ಪಂದ್ಯವನ್ನಾಡಲಿದೆ. ಆದರೆ ಈ ಪಂದ್ಯ ನಡೆಯುವುದೇ ಅನುಮಾನ ಎನ್ನುವಂತಿದೆ. ಇದಕ್ಕೆ ಕಾರಣ ಮಳೆ ಭೀತಿ.

ಹೌದು, ಬೆಂಗಳೂರು (Bengaluru Rains) ಸೇರಿದಂತೆ ಹಲವೆಡೆ ಗುಡುಗು ಸಿಡಿಲು ಸಹಿತ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಳೆದ 2 ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಅದು ಕೂಡ ಸಂಜೆಯ ವೇಳೆಯಲ್ಲಿ. ಹೀಗಾಗಿ ಇಂದು ಕೂಡ ಮಳೆಯ ಸಾಧ್ಯತೆ ಅಧಿಕವಾಗಿದೆ.

ಇನ್ನೂ ಇದೆ ಪ್ಲೇ ಆಫ್​ ಅವಕಾಶ


ಸದ್ಯ ಅಂಕಪಟ್ಟಿಯಲ್ಲಿ(IPL 2024 Points Table) ಕೊನೆಯ ಸ್ಥಾನಿಯಾಗಿದ್ದರೂ ಕೂಡ ಆರ್​ಸಿಬಿಯ(Royal Challengers Bengaluru) ಪ್ಲೇ ಆಫ್​ ಬಾಗಿಲು ಇನ್ನೂ ಮುಚ್ಚಿಲ್ಲ. ಇನ್ನೂ ಕೂಡ ಆರ್​ಸಿಬಿಯ ಪ್ಲೇ ಆಫ್​ ಆಸೆ ಜೀವಂತವಾಗಿಯೇ ಇದೆ.

ಸದ್ಯದ ಪರಿಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ಮತ್ತು ಪವಾಡವೊಂದು ನಡೆದರೆ ಆರ್​ಸಿಬಿಗೆ ಪ್ಲೇ ಆಫ್​ ಟಿಕೆಟ್​ ಸಿಗಲಿದೆ. ಈಗಾಗಲೇ 10 ಪಂದ್ಯ ಆಡಿದ್ದು, 3 ಪಂದ್ಯ ಗೆದ್ದು, 7 ಪಂದ್ಯದಲ್ಲಿ ಸೋಲು ಕಂಡಿದೆ. 6 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 4 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಜತೆಗೆ ತನಗಿಂತ ಮೇಲಿರುವ ತಂಡಗಳು ಸತತ ಸೋಲು ಕಂಡರೆ ಕನಿಷ್ಠ 4ನೇ ಸ್ಥಾನಿಯಾಗಿ ಪ್ಲೇ ಆಫ್ ಗೇರುವ ಸಣ್ಣ ಅವಕಾಶವೊಂದಿದೆ. ಉಳಿದ 4 ಪಂದ್ಯಗಳ ಪೈಕಿ 2 ಪಂದ್ಯಗಳನ್ನು ಆರ್​ಸಿಬಿ ತವರಿನಲ್ಲಿ ಆಡಲಿದೆ. ಒಂದು ಪಂದ್ಯ ಹಾಲಿ ಚಾಂಪಿಯನ್​ ಚೆನ್ನೈ ವಿರುದ್ಧ. ಇದು ಆರ್​ಸಿಬಿಗೆ ಕೊನೆಯ ಲೀಗ್​ ಪಂದ್ಯವಾಗಿರಲಿದೆ. ಮೇ 18ರಂದು ಈ ಪಂದ್ಯ ನಡೆಯಲಿದೆ. ಒಂದೊಮ್ಮೆ ಇಂದು ನಡೆಯುವ ಪಂದ್ಯದಲ್ಲಿ ಆರ್​ಸಿಬಿ ಸೋತರೆ, ಅಥವಾ ಪಂದ್ಯ ರದ್ದಾದರೆ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

ಇದನ್ನೂ ಓದಿ IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

ಪಿಚ್​ ರಿಪೋರ್ಟ್​


ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಯಾವಾಗಲೂ ಬ್ಯಾಟಿಂಗ್ ಸ್ನೇಹಿ ಸ್ಥಳವಾಗಿದೆ. ಇದುವರೆಗೆ ಇಲ್ಲಿ ನಡೆದ ಬಹುತೇಕ ಪಂದ್ಯಗಳು ಕೂಡ ಚೇಸಿಂಗ್​ ನಡೆಸಿದ ತಂಡವೇ ಹೆಚ್ಚು ಬಾರಿ ಗೆದ್ದಿದೆ. ಇದುವರೆಗೆ ಇಲ್ಲಿ 92 ಐಪಿಎಲ್​ ಪಂದ್ಯಗಳು ನಡೆದಿದ್ದು, 49 ಬಾರಿ ಚೇಸಿಂಗ್​ ನಡೆಸಿದ ತಂಡ ಜಯಶಾಲಿಯಾಗಿದೆ. 39 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ. ಆದರೆ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ.

ವಿರಾಟ್​ ಕೊಹ್ಲಿ ಈ ಮೈದಾನದಲ್ಲಿ ಇದುವರೆಗೆ 2924 ರನ್​ ಬಾರಿಸಿದ್ದಾರೆ. ಜತೆಗೆ ಈ ಬಾರಿಯ ಐಪಿಎಲ್​ನಲ್ಲಿಯೂ ಕೊಹ್ಲಿ ಉತ್ತಮವಾಗಿ ರನ್​ ಗಳಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ ಆರ್​ಸಿಬಿಗೆ ಪ್ಲೇ ಆಫ್​ಗೆ ಹೋಗಬೇಕಿದ್ದರೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಗುಜರಾತ್​ ಅಡಗಾಲಿಕ್ಕಿತ್ತು. ಶುಭಮನ್​ ಗಿಲ್​ ಶತಕ ಬಾರಿಸಿ ಆರ್​ಸಿಬಿಗೆ ಸೋಲಿನ ರುಚಿ ತೋರಿಸಿದ್ದರು.

ಗುಜರಾತ್​ ಆಡಿದ 10 ಪಂದ್ಯಗಳಲ್ಲಿ 4 ಪಂದ್ಯ ಗೆದ್ದು 8 ಅಂಕ ಗಳಿಸಿ 8ನೇ ಸ್ಥಾನದಲ್ಲಿದೆ. ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಉಳಿದ 4 ಪಂದ್ಯಗಳನ್ನು ಕೂಡ ಗೆಲ್ಲಬೇಕಿದೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಾದ ಒತ್ತಡ ಶುಭಮನ್​ ಗಿಲ್​ ಪಡೆಯ ಮೇಲಿದೆ.

ಉಭಯ ತಂಡಗಳು


ಆರ್​ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್​ ಕೀಪರ್​), ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್.

ಗುಜರಾತ್​: ವೃದ್ಧಿಮಾನ್ ಸಹಾ (ವಿಕೆಟ್​ ಕೀಪರ್​), ಶುಭಮನ್​ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ.

Continue Reading
Advertisement
Amith Shah
ದೇಶ2 mins ago

Amit Shah: ತೆಲಂಗಾಣದಲ್ಲಿ ಗೃಹಸಚಿವ ಅಮಿತ್ ಶಾ ವಿರುದ್ಧ FIR ದಾಖಲು

Porbandar Tour
ಪ್ರವಾಸ7 mins ago

Porbandar Tour: ಪೋರ್ ಬಂದರಿನಲ್ಲಿ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

hd revanna prajwal revanna case
ಪ್ರಮುಖ ಸುದ್ದಿ27 mins ago

Prajwal Revanna Case: ಕಾಣದಂತೆ ಮಾಯವಾದ ಎಚ್‌ಡಿ ರೇವಣ್ಣ ! ಇಂದು ಜಾಮೀನು ಸಿಗದೇ ಹೋದರೆ….

Cocoa Price
ಕೃಷಿ31 mins ago

Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

IPL 2024 POINTS TABLE
ಕ್ರೀಡೆ48 mins ago

IPL 2024 POINTS TABLE: ಕೆಕೆಆರ್​ ಗೆಲುವಿನ ಬಳಿಕ ಅಂಕಪಟ್ಟಿ ಹೇಗಿದೆ?

prajwal revanna case hassan MP home
ಕ್ರೈಂ57 mins ago

Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

Robbery Case
ಕ್ರೈಂ1 hour ago

Robbery Case: ಕಾರು ತಪಾಸಣೆ ನೆಪದಲ್ಲಿ ಸುಲಿಗೆ; ಪೊಲೀಸರ ವಿರುದ್ಧವೇ ಕೇಳಿ ಬಂತು ಗಂಭೀರ ಆರೋಪ

Food Cleaning Tips Kannada
ಲೈಫ್‌ಸ್ಟೈಲ್1 hour ago

Food Cleaning Tips Kannada: ಹಣ್ಣು, ತರಕಾರಿಗಳಿಂದ ರಾಸಾಯನಿಕ ಅಂಶ ಸ್ವಚ್ಛಗೊಳಿಸುವ 5 ವಿಧಾನಗಳಿವು

Viral Video
ವೈರಲ್ ನ್ಯೂಸ್1 hour ago

Viral Video: ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

Salaar Movie Fails To Get Expected TRP Star Suvarna
ಸಿನಿಮಾ1 hour ago

Salaar Movie: ಕಿರುತೆರೆಯಲ್ಲಿ ‘ಸಲಾರ್’ಗೆ ಕಡಿಮೆ ಟಿಆರ್‌ಪಿ: ಪ್ಲಾಪ್‌ ಆಗಲು ಕಾರಣವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ19 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌