Site icon Vistara News

PKL 2022 | ಪ್ರೊ ಕಬಡ್ಡಿಗೆ ಪವನ್ ಸೆಹ್ರಾವತ್​ ಎಂಟ್ರಿ; ಅಭಿಮಾನಿಗಳಿಗೆ ಫುಲ್​ ಖುಷ್​​!

ಬೆಂಗಳೂರು: ಬೆಂಗಳೂರು ಬುಲ್ಸ್​ ತಂಡದ ಮಾಜಿ ತಾರಾ ಕಬಡ್ಡಿ ಪಟು ಪವನ್ ಸೆಹ್ರಾವತ್ ಮತ್ತೆ ಕಬಡ್ಡಿ ಕೋರ್ಟ್​ಗೆ ಮರಳಲಿದ್ದಾರೆ. ಆದರೆ ಈ ಬಾರಿ ಅವರು ಆಟಗಾರನ ಬದಲಾಗಿ ವೀಕ್ಷಕ ವಿವರಣೆಗಾರರಾಗಿ ಕಬಡ್ಡಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಕೂಟದ ಆರಂಭಿಕ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದಾಗಿ ಪವನ್​​ 9ನೇ ಆವೃತ್ತಿಯ ಪ್ರೊ ಕಬಡ್ಡಿ ಟೂರ್ನಿಯಿಂದ ಹೊರಬಿದ್ದಿದ್ದರು.

ಕಾಲಿನ ಶಸ್ತ್ರಚಿಕಿತ್ಸೆ ಬಳಿಕ ಚೇತರಿಕೆ ಕಾಣುತ್ತಿರುವ ತಮಿಳ್ ತಲೈವಾಸ್ ತಂಡದ ನಾಯಕ ಪವನ್ ಸೆಹ್ರಾವತ್ ಇದೀಗ 9ನೇ ಆವೃತ್ತಿಯ ಪ್ರೊ ಕಬಡ್ಡಿ ಕೂಟದ ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಲ್ಲಿ ವೀಕ್ಷಕ ವಿವರಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ದುಬಾರಿ ಆಟಗಾರ

9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹರಾಜಿನಲ್ಲಿ ಪವನ್ ಅವರನ್ನು ತಮಿಳ್ ತಲೈವಾಸ್ ಫ್ರಾಂಚೈಸಿಯು ಬರೋಬ್ಬರಿ 2.23 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿತ್ತು. ಈ ಮೂಲಕ ಪವನ್ ಪ್ರೊ ಕಬಡ್ಡಿ ಇತಿಹಾಸದಲ್ಲೇ ಅತ್ಯಂತ ದುಬಾರಿ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ಗುಜರಾತ್ ಜೈಂಟ್ಸ್ ಎದುರಿನ ಮೊದಲ ಪಂದ್ಯದಲ್ಲಿಯೇ ಎದುರಾಳಿ ತಂಡದ ಚಂದ್ರನ್​ ರಂಜಿತ್​ ಅವರನ್ನು ಟ್ಯಾಕಲ್​ ಮಾಡುವ ಬರದಲ್ಲಿ ಗಾಯಕ್ಕೆ ತುತ್ತಾಗಿ ಕೂಟದಿಂದ ಹೊರಬಿದ್ದಿದ್ದರು. ಸದ್ಯ ಅವರು ಬಲಗಾಲಿನ ಮಂಡಿ ಶಸ್ತ್ರಚಿಕಿತ್ಸೆಯಿಂದ ಚೇತರಿಕೆ ಕಾಣುತ್ತಿದ್ದಾರೆ.

ಇದನ್ನೂ ಓದಿ | Pro Kabaddi | ರೋಚಕ ಪಂದ್ಯದಲ್ಲಿ ಬುಲ್ಸ್​ ವಿರುದ್ಧ ಮೇಲುಗೈ ಸಾಧಿಸಿದ ಗುಜರಾತ್​ ಜೈಂಟ್ಸ್

Exit mobile version