pcb-likely-to-cut-contract-ties-with-several-cricketers ಕೆಲವೇ ದಿನಗಳಲ್ಲಿ ನಿರುದ್ಯೋಗಿಗಳಾಗಲಿದ್ದಾರೆ ಪಾಕಿಸ್ತಾನ ಕ್ರಿಕೆಟಿಗರು! - Vistara News

ಕ್ರೀಡೆ

ಕೆಲವೇ ದಿನಗಳಲ್ಲಿ ನಿರುದ್ಯೋಗಿಗಳಾಗಲಿದ್ದಾರೆ ಪಾಕಿಸ್ತಾನ ಕ್ರಿಕೆಟಿಗರು!

ಪಿಸಿಬಿ ಕೇಂದ್ರ ಒಪ್ಪಂದಗಳು ಬದಲಾಗಲಿದ್ದು ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ಜನಪ್ರಿಯ ಹೆಸರುಗಳು ಪಟ್ಟಿಯಿಂದ ಕಾಣೆಯಾಬಹುದು ಎನ್ನಲಾಗಿದೆ.

VISTARANEWS.COM


on

pakistan cricket team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಾಹೋರ್​: ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಂಬರುವ 2023-2024 ಋತುವಿಗೆ ಆಟಗಾರರ ಕೇಂದ್ರ ಒಪ್ಪಂದಗಳನ್ನು ಪರಿಷ್ಕರಿಸಲು ಮುಂದಾಗಿದೆ. ಆಟಗಾರರ ಹಾಲಿ ಕೇಂದ್ರ ಒಪ್ಪಂದಗಳು ಜೂನ್ 30ರಂದು ಕೊನೆಗೊಳ್ಳಲಿವೆ. ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಹೊಸ ಮುಖಗಳನ್ನು ಗುತ್ತಿಗೆಯಡಿ ತರಲು ಮುಂದಾಗಿದೆ. ಹೀಗಾಗಿ ಹಲವಾರು ಪಾಕಿಸ್ತಾನದ ಹಲವಾರು ಕ್ರಿಕೆಟಿಗರು ನಿರುದ್ಯೋಗಿಗಳಾಗಬಹುದು ಎಂದು ಹೇಳಲಾಗುತ್ತಿದೆ!

ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಮತ್ತು ಇತರ ಹಿರಿಯ ಕ್ರಿಕೆಟಿಗರೊಂದಿಗೆ ಮಾತುಕತೆ ನಡೆಸಿದ ಬಳಿಕ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹಲವಾರು ಆಟಗಾರರ ಬಡ್ತಿ ನೀಡಲು ಹಾಗೂ ಇನ್ನೂ ಕೆಲವರಿಗೆ ಹಿಂಬಡ್ತಿ ನೀಡಲು ಉದ್ದೇಶಿಸಿದೆ ಎಂದು ಹೇಳಲಾಗಿದೆ.

ಒಪ್ಪಂದಗಳಲ್ಲಿನ ಮಾರ್ಪಾಡುಗಳು ಆಟಗಾರರ ವೇತನ ಹೆಚ್ಚಳಕ್ಕೆ ಕಾರಣವಾಗಿರಬಹುದು ಎನ್ನಲಾಗಿದೆ. ಒಪ್ಪಂದದಲ್ಲಿರುವ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿ ನಜಾಮ್ ಸೇಥಿ ನೇತೃತ್ವದ ಪಿಸಿಬಿ ನಿರ್ವಹಣಾ ಸಮಿತಿಗೆ ನೀಡಲಾಗಿದೆ. ರೆಡ್-ಬಾಲ್ ಮತ್ತು ವೈಟ್-ಬಾಲ್ ಕ್ರಿಕೆಟ್​​​ಗೆ ಪ್ರತ್ಯೇಕ ಒಪ್ಪಂದಗಳನ್ನು ಮಾಡಿಕೊಳ್ಳುವ ಸಾಧ್ಯತೆಗಳಿವೆ. ಬಿಸಿಸಿಐ ಮಾದರಿಯಲ್ಲೇ ಒಪ್ಪಂದಗಳನ್ನು ಎ, ಬಿ ಮತ್ತು ಸಿ ಎಂದು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ.

ಅನುಭವಿ ಬ್ಯಾಟ್ಸ್​​ಮನ್​ ಅಜರ್​ ಅಲಿ ನಿವೃತ್ತಿಯ ಘೋಷಿಸಿರುವ ಕಾರಣ ಇನ್ನು ಮುಂದೆ ಕೇಂದ್ರ ಗುತ್ತಿಗೆ ಆಟಗಾರರ ಪಟ್ಟಿಯಲ್ಲಿ ಇರುವುದಿಲ್ಲ. ಇದಲ್ಲದೆ, ಫವಾದ್ ಆಲಂ, ಹೈದರ್ ಅಲಿ, ಅಬಿದ್ ಅಲಿ, ಯಾಸಿರ್ ಶಾ, ನೌಮನ್ ಅಲಿ, ಖುಶ್ದಿಲ್ ಶಾ, ಉಸ್ಮಾನ್ ಖಾದಿರ್ ಮತ್ತು ಜಾಹಿದ್ ಮೆಹಮೂದ್ ಅವರಂತಹ ಆಟಗಾರರು ಗುತ್ತಿಗೆಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಇವೆರೆಲ್ಲರೂ ಅವಕಾಶ ವಂಚಿತರಾಗಲಿದ್ದಾರೆ.

ಇದನ್ನೂ ಓದಿ : Asia Cup 2023 : ಪಾಕಿಸ್ತಾನ ತಂಡವನ್ನು ಹೊರಗಿಟ್ಟು ಏಷ್ಯಾ ಕಪ್​ ಆಯೋಜಿಸಲು ಜಯ್​ ಶಾ ಯೋಜನೆ

ಶದಾಬ್ ಖಾನ್, ಫಖರ್ ಜಮಾನ್, ಮೊಹಮ್ಮದ್ ರಿಜ್ವಾನ್, ಶಾಹೀನ್ ಅಫ್ರಿದಿ ಮತ್ತು ಬಾಬರ್ ಅಜಮ್ ಎ ವಿಭಾಗದಲ್ಲಿ ಉಳಿಯುವ ನಿರೀಕ್ಷೆಯಿದೆ. ವೇಗದ ಬೌಲರ್​ಗಳಾದ ನಸೀಮ್ ಶಾ ಮತ್ತು ಹ್ಯಾರಿಸ್ ರವೂಫ್ ಅವರಿಗೆ ಬಡ್ತಿ ನೀಡುವ ನಿರೀಕ್ಷೆಯಿದೆ. ನಸೀಮ್ ಶಾ ಅವರು ಟೆಸ್ಟ್​ ಮತ್ತು ಸೀಮಿತ ಓವರ್​ಗಳ ಪಂದ್ಯಗಳಲ್ಲಿ ಅವಕಾಶ ಪಡೆಯಲಿದ್ದಾರೆ. ಇಫ್ತಿಕರ್ ಅಹ್ಮದ್, ಸೈಮ್ ಅಯೂಬ್, ಇಹ್ಸಾನುಲ್ಲಾ, ಉಸಾಮಾ ಮಿರ್, ಮೊಹಮ್ಮದ್ ಹ್ಯಾರಿಸ್ ಮತ್ತು ಜಮಾನ್ ಖಾನ್ ಗುತ್ತಿಗೆ ಪಟ್ಟಿಯಲ್ಲಿದ್ದಾರೆ. ಮಾಜಿ ನಾಯಕ ಸರ್ಫರಾಜ್ ಅಹ್ಮದ್ ಕೂಡ ಸೀಮಿತ ಓವರ್​​ಗಳ ಕ್ರಿಕೆಟ್​​ನಲ್ಲಿ ಗುತ್ತಿಗೆ ಕಳೆದುಕೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Preity Zinta : ರೋಹಿತ್​ ಶರ್ಮಾಗಾಗಿ ಪ್ರಾಣ ಪಣಕ್ಕಿಡಲು ಸಿದ್ಧ; ಪ್ರೀತಿ ಜಿಂಟಾ ಹೇಳಿಕೆ ಸಿಕ್ಕಾಪಟ್ಟೆ ವೈರಲ್​

Preity Zinta: ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯಕ್ಕೂ ಮುನ್ನ ಮಾತನಾಡಿದ ಪ್ರೀತಿ ಜಿಂಟಾ, ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡ ರೋಹಿತ್​ ಅವರನ್ನು ಬಿಡುಗಡೆ ಮಾಡಿದರೆ ಅವರನ್ನು ನಾಯಕನನ್ನಾಗಿ ಮಾಡಲು ತಮ್ಮ ಪ್ರಾಣವನ್ನು ಪಣಕ್ಕಿಡಲು ಸಿದ್ಧ ಎಂದು ಹೇಳಿದ್ದಾರೆ.

VISTARANEWS.COM


on

Preity Zinta
Koo

ಬೆಂಗಳೂರು: ಪಂಜಾಬ್ ಕಿಂಗ್ಸ್ ತಂಡದ ಮಾಲೀಕರಾದ ಪ್ರೀತಿ ಜಿಂಟಾ (Preity Zinta) ಅವರು ಐಪಿಎಲ್ 2024 (IPL 2024) ರಲ್ಲಿ ಸಂಪೂರ್ಣವಾಗಿ ಬ್ಯುಸಿಯಾಗಿದ್ದಾರೆ. ಅವರು ತಮ್ಮ ಪಂಜಾಬ್ ಕಿಂಗ್ಸ್ (Punjab Kings) ತಂಡವನ್ನು ಹುರಿದುಂಬಿಸಲೆಂದೇ ಸ್ಟೇಡಿಯಮ್​ಗೆ ಬರುತ್ತಿದ್ದಾರೆ. ಅಂತೆಯೇ ಗುರುವಾರ (ಏಪ್ರಿಲ್​ 18ರಂದು) ಕಾಯಂ ನಾಯಕ ಶಿಖರ್ ಧವನ್ ಇಲ್ಲದೆ ಮುಂಬೈ ಇಂಡಿಯನ್ಸ್ ಆಡುತ್ತಿರುವ ಪಂಜಾಬ್ ತಂಡಕ್ಕೆ ಪ್ರೋತ್ಸಾಹ ನೀಡಲು ಅವರು ಬಂದಿದ್ದರು. ಅಂತೆಯೇ ಅವರು ಪಂದ್ಯಕ್ಕೆ ಮೊದಲು ಮಾತನಾಡುತ್ತಾ ರೋಹಿತ್​ ಶರ್ಮಾ ಅವರನ್ನು ಪಡೆದುಕೊಳ್ಳುವುದಕ್ಕೆ ಜೀವನ ಪಣವಿಡುತ್ತೇನೆ ಎಂದು ಹೇಳಿದ್ದಾರೆ. ಈ ಮಾರು ವೈರಲ್​ ಆಗಿದೆ.

ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯಕ್ಕೂ ಮುನ್ನ ಮಾತನಾಡಿದ ಪ್ರೀತಿ ಜಿಂಟಾ, ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡ ರೋಹಿತ್​ ಅವರನ್ನು ಬಿಡುಗಡೆ ಮಾಡಿದರೆ ಅವರನ್ನು ನಾಯಕನನ್ನಾಗಿ ಮಾಡಲು ತಮ್ಮ ಪ್ರಾಣವನ್ನು ಪಣಕ್ಕಿಡಲು ಸಿದ್ಧ ಎಂದು ಹೇಳಿದ್ದಾರೆ.

“ರೋಹಿತ್ ಶರ್ಮಾ ಮೆಗಾ ಹರಾಜಿಗೆ ಬಂದರೆ ಅವರನ್ನು ಪಡೆಯಲು ನಾನು ನನ್ನ ಜೀವನವನ್ನು ಪಣಕ್ಕಿಡುತ್ತೇನೆ. ನಮ್ಮ ತಂಡದಲ್ಲಿ ಸ್ಥಿರತೆ ಮತ್ತು ಚಾಂಪಿಯನ್ ಮನಸ್ಥಿತಿಯನ್ನು ತರುವ ನಾಯಕನನ್ನು ಮಾತ್ರ ನಾವು ಕಳೆದುಕೊಳ್ಳುತ್ತಿದ್ದೇವೆ”ಎಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಸೋತ ನಂತರ ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಪ್ರೀತಿ ಜಿಂಟಾ ಹೇಳಿದ್ದಾರೆ.

ಐಪಿಎಲ್ 2024 ಪಾಯಿಂಟ್ಸ್ ಟೇಬಲ್​ನ್ಲಲಿ 8 ನೇ ಸ್ಥಾನದಲ್ಲಿರುವ ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ಸ್ ಈ ಋತುವಿನಲ್ಲಿ ಕೆಟ್ಟ ಫಾರ್ಮ್​ನಿಂದ ಬಳಲುತ್ತಿದೆ.

ಇದನ್ನೂ ಓದಿ: IPL 2024 : ಮದುವೆ ಆಮಂತ್ರಣಕ್ಕೆ ಸಿಎಸ್​ಕೆ ಥೀಮ್​, ಯುವ ಜೋಡಿಯ ಅಭಿಮಾನಕ್ಕೆ ಮೆಚ್ಚುಗೆ

ಮತ್ತೊಂದು ಫ್ರಾಂಚೈಸಿ ರೋಹಿತ್ ಶರ್ಮಾ ಬಗ್ಗೆ ಆಸಕ್ತಿ ತೋರಿಸುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಐಪಿಎಲ್ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಮಾಜಿ ನಾಯಕ ಲಭ್ಯವಿರಬೇಕು ಎಂದು ಹಲವು ತಂಡಗಳು ಬಯಸಿವೆ. ಇದಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಕೂಡ ರೋಹಿತ್ ಶರ್ಮಾ ಅವರನ್ನು ತಮ್ಮ ತಂಡದಲ್ಲಿ ಹೊಂದುವ ಬಗ್ಗೆ ಮಾತನಾಡಿದ್ದರು.

Continue Reading

ಕ್ರೀಡೆ

IPL 2024 : ಮದುವೆ ಆಮಂತ್ರಣಕ್ಕೆ ಸಿಎಸ್​ಕೆ ಥೀಮ್​, ಯುವ ಜೋಡಿಯ ಅಭಿಮಾನಕ್ಕೆ ಮೆಚ್ಚುಗೆ

IPL 2024: ಆಹ್ವಾನವನ್ನು ಐಪಿಎಲ್ ಟಿಕೆಟ್ ರೂಪದಲ್ಲಿ ರಚಿಸಲಾಗಿದೆ. ಮ್ಯಾಚ್ ಪ್ರಿವ್ಯೂ” ಮತ್ತು “ಮ್ಯಾಚ್ ಪ್ರೆ ಡಿಕ್ಷನ್” ನಂತಹ ಪದಗಳ ಬಳಕೆ ಮಾಡಲಾಗಿದ್ದು ಆಮಂತ್ರಣ ಪತ್ರಿಕೆ ಸಂಪೂರ್ಣವಾಗಿ ಐಪಿಎಲ್​ನಿಂದ ಪ್ರೇರಿತವಾಗಿದೆ. ಮದುವೆ ಆಮಂತ್ರಣ ಪತ್ರಿಕೆಯ ಫೋಟೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದ್ದು, 10 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ 60,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

VISTARANEWS.COM


on

IPL 2024
Koo

ಚೆನ್ನೈ: ಮನುಷ್ಯನ ಜೀವನದಲ್ಲಿ ವಿವಾಹವು ಒಂದು ವಿಶೇಷ ಸಂದರ್ಭ. ಈ ಸಂದರ್ಭವನ್ನು ಅತ್ಯಂತ ಸಂಭ್ರಮದಿಂದ ಕಳೆಯಲು ಎಲ್ಲರೂ ಬಯಸುತ್ತಾರೆ. ಇನ್ನೂ ಕೆಲವರು ಅದನ್ನು ಇನ್ನಷ್ಟು ವಿಶೇಷವಾಗಿ ಅಥವಾ ಆಕರ್ಷಣೀಯವಾಗಿ ಮಾಡುತ್ತಾರೆ. ಅಂತೆಯೇ ತಮಿಳುನಾಡಿನ ಕ್ರಿಕೆಟ್​ ಪ್ರೇಮಿ ದಂಪತಿಗಳು ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಥೀಮ್​ ಬಣ್ಣಗಳನ್ನು ಬಳಸಿಕೊಂಡು ತಮ್ಮ ಮದುವೆಯ ಆಮಂತ್ರಣ ಪತ್ರಿಕೆ ಮುದ್ರಣ ಮಾಡಿಸಿ ಸುದ್ದಿಯಾಗಿದ್ದಾರೆ. ಐಪಿಎಲ್ (IPL 2024) ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದು ಬಹುವಾಗಿ ಗಮನ ಸೆಳೆದಿದೆ. ವಿಶಿಷ್ಟ ವಿವಾಹ ಆಮಂತ್ರಣ ಪತ್ರಿಕೆ ವೈರಲ್ ಆಗಿದ್ದು, ಸಿಎಸ್​ಕೆ ಲೋಗೋದೊಳಗೆ ವಧು ಮತ್ತು ವರನ ಹೆಸರುಗಳನ್ನು ಹಾಕಲಾಗಿದೆ.

ಆಹ್ವಾನವನ್ನು ಐಪಿಎಲ್ ಟಿಕೆಟ್ ರೂಪದಲ್ಲಿ ರಚಿಸಲಾಗಿದೆ. ಮ್ಯಾಚ್ ಪ್ರಿವ್ಯೂ” ಮತ್ತು “ಮ್ಯಾಚ್ ಪ್ರೆ ಡಿಕ್ಷನ್” ನಂತಹ ಪದಗಳ ಬಳಕೆ ಮಾಡಲಾಗಿದ್ದು ಆಮಂತ್ರಣ ಪತ್ರಿಕೆ ಸಂಪೂರ್ಣವಾಗಿ ಐಪಿಎಲ್​ನಿಂದ ಪ್ರೇರಿತವಾಗಿದೆ. ಮದುವೆ ಆಮಂತ್ರಣ ಪತ್ರಿಕೆಯ ಫೋಟೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದ್ದು, 10 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ 60,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

ಫೋಟೋದಲ್ಲಿ ದಂಪತಿಗಳಾದ ಗಿಫ್ಟ್ಲೀನ್ ಪರ್ಸಿ ಮತ್ತು ಮಾರ್ಟಿನ್ ರಾಬರ್ಟ್ ಗೆ ಶುಭಾಶಯ ತಿಳಿಸಲಾಗಿದೆ. ಇದು ಅದ್ಭುತ ಜತೆಯಾಟ ಎಂದು ಕೆಲವು ಕಾಮೆಂಟ್ ಬರೆದಿದ್ದಾರೆ. ಈ ಪೋಸ್ಟ್​ನಲ್ಲಿ ನವವಿವಾಹಿತರು ತಮ್ಮ ಚಿತ್ರಗಳನ್ನು ಒಳಗೊಂಡ ಟ್ರೋಫಿಯಂತಹ ಕಟ್-ಔಟ್ ಪೋಸ್ಟರ್​ಗಳನ್ನು ನೀಡಿದ್ದಾರೆ. ಬಳಕೆದಾರರು ದಂಪತಿಗಳನ್ನು ಅಭಿನಂದಿಸಿದ್ದಾರೆ ಮತ್ತು ಅವರಿಗೆ ಯಶಸ್ವಿ ಜೀವನಕ್ಕಾಗಿ ಹಾರೈಸಿದ್ದಾರೆ.

ಇದನ್ನೂ ಓದಿ: Kodagu News: ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

“ಸುಂದರ ಜತೆಯಾಟ ಮತ್ತು ಇನ್ನಿಂಗ್ಸ್​​ಗಾಗಿ ಹೆಚ್ಚಿನ ಅಭಿನಂದನೆಗಳು” ಎಂದು ಬಳಕೆದಾರರೊಬ್ಬರು ಕಾಮೆಂಟ್ ಮಾಡಿದ್ದಾರೆ. “ಆಮಂತ್ರಣದ ಎಡಭಾಗದಲ್ಲಿರುವ ಆ ಪೈವ್​ ಸ್ಟಾರ್​” ಎಂದು ಇನ್ನೊಬ್ಬರು ಹೇಳಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾರ್ಚ್ 22 ರಂದು ಪ್ರಾರಂಭವಾಗಿ ಮೇ 26 ರವರೆಗೆ ನಡೆಯುತ್ತದೆ. 17ನೇ ಆವೃತ್ತಿಯ ಟಿ20 ಟೂರ್ನಿ ಭಾರತದ 13 ನಗರಗಳಲ್ಲಿ ನಡೆಯುತ್ತಿದ್ದು, 10 ತಂಡಗಳು 74 ಪಂದ್ಯಗಳಲ್ಲಿ ಸ್ಪರ್ಧಿಸುತ್ತಿವೆ.

ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಐದನೇ ಬಾರಿಗೆ ಪ್ರಶಸ್ತಿ ಗೆದ್ದಿದ್ದ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಜೊತೆಗೆ ಟೂರ್ನಿಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಫ್ರಾಂಚೈಸಿ ಎಂಬ ಖ್ಯಾತಿ ಪಡೆದುಕೊಂಡಿದೆ.

Continue Reading

ಮಂಡ್ಯ

IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

Self Harming: ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಪತಿಯೊಬ್ಬ ಸಾಲಗಾರರ ಕಾಟಕ್ಕೆ ಪತ್ನಿ ಹಾಗೂ ಮಕ್ಕಳಿಬ್ಬರಿಗೆ ವಿಷವಿಕ್ಕಿ ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥನಾಗಿದ್ದು, ಆಸ್ಪತ್ರೆಪಾಲಾಗಿದ್ದಾನೆ.

VISTARANEWS.COM


on

By

IPL Betting
Koo

ಮಂಡ್ಯ: ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ (IPL‌ Betting) ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ (Self Harming) ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ಘಟನೆ ನಡೆದಿದೆ.

ನರಸಿಂಹ ಎಂಬಾತ ಈ ಕೃತ್ಯವೆಸಗಿದ್ದಾನೆ. ಪತ್ನಿ ಕೀರ್ತನ (23) ಮಕ್ಕಳಾದ ಜಯಸಿಂಹ (4) ದೀಪಿಕಾ (1) ಮೃತ ದುರ್ದೈವಿ. ಅಸ್ವಸ್ಥನಾಗಿರುವ ನರಸಿಂಹನನ್ನು ನಾಗಮಂಗಲ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಐಪಿಎಲ್ ಕ್ರಿಕೆಟ್‌ ನೋಡುತ್ತಿದ್ದ ನರಸಿಂಹ ಬೆಟ್ಟಂಗ್‌ನ ಹಿಂದೆ ಬಿದ್ದಿದ್ದ. ಇದರಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಕಳೆದುಕೊಂಡಿದ್ದ ಎಂದು ತಿಳಿದು ಬಂದಿದೆ. ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಳ್ಳುತ್ತಿದ್ದರೂ ಇವತ್ತಲ್ಲ ನಾಳೆ ಮರಳಿ ಬರುತ್ತದೆ ಎನ್ನುವ ಭರವಸೆಯೊಂದಿಗೆ ಮೇಲಿಂದ ಮೇಲೆ ಸಾಲ ಮಾಡಿ ಲಕ್ಷಾಂತರ ರೂ. ಕಳೆದುಕೊಂಡಿದ್ದ.

ಇದರಿಂದ ಮನನೊಂದ ನರಸಿಂಹ ಪತ್ನಿ ಹಾಗೂ ಪುಟ್ಟ ಮಕ್ಕಳಿಬ್ಬರಿಗೆ ವಿಷ ನೀಡಿ ಹತ್ಯೆ ಮಾಡಿದ್ದಾನೆ. ಅವರೆಲ್ಲೂ ಮೃತಪಟ್ಟ ಬಳಿಕ ತಾನೂ ವಿಷ ಸೇವಿಸಿದ್ದಾನೆ. ಸದ್ಯ ನಾಗಮಂಗಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Road Accident : ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರಿನ ಕಮ್ಮನಹಳ್ಳಿ ಮುಖ್ಯರಸ್ತೆಯ ಸುಖಸಾಗರ್ ಬಳಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆಶಾ (26) ಮೃತ ದುರ್ದೈವಿ.

ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ ನೀಡುತ್ತಿದ್ದರು.

ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಶಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

Kodagu News: ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

Kodagu News: ಕೊಡಗು ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 25ನೇ ವರ್ಷದ ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ದೊರೆಯಿತು.

VISTARANEWS.COM


on

Kodagu Gowda Premier League Cricket Tournament inauguration
Koo

ಮಡಿಕೇರಿ: ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ 25ನೇ ವರ್ಷದ ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ (Kodagu News) ಚಾಲನೆ ದೊರೆಯಿತು.

ಕಾರ್ಯಕ್ರಮವನ್ನು ವಿಧಾನಸಭೆ ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೊಡಗು ಗೌಡ ಯುವ ವೇದಿಕೆಯು ಕ್ರೀಡಾಕೂಟದ ಆಯೋಜನೆಯೊಂದಿಗೆ ಉತ್ತಮ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಇದನ್ನೂ ಓದಿ: LSG vs CSK: ಗೆಲುವಿನ ಹಳಿ ಏರೀತೇ ಲಕ್ನೋ?; ಚೆನ್ನೈ ಎದುರಾಳಿ

ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಮಾತನಾಡಿ, ಕೊಡಗು ಗೌಡ ಯುವ ವೇದಿಕೆ ಈ ಹಿಂದೆ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುತ್ತಿತ್ತು. ಪ್ರಸ್ತುತ ಕ್ರೀಡಾ ಪ್ರತಿಭೆಗಳ ಬೆಳವಣಿಗೆಗೆ ಪೂರಕವಾಗಿ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆಗೆ ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಅಧ್ಯಕ್ಷತೆ ವಹಿಸಿದ್ದರು.

ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಆಕರ್ಷಕ ಟ್ರೋಫಿಯನ್ನು ಅನಾವರಣಗೊಳಿಸಲಾಯಿತು.

ಇದೇ ಸಂದರ್ಭದಲ್ಲಿ ಗಣ್ಯರು ಪಂದ್ಯಾವಳಿಯ ಆಕರ್ಷಕ ಟ್ರೋಫಿಯನ್ನು ಅನಾವರಣ ಗೊಳಿಸಿದರು. ಮಡಿಕೇರಿಯ ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಬ್ಯಾಟಿಂಗ್‌ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು.

ಇದನ್ನೂ ಓದಿ: Navya Naveli Nanda: ಆರಾಧ್ಯ ಬಚ್ಚನ್‌ ನನಗಿಂತ ಹೆಚ್ಚು ಬುದ್ಧಿವಂತೆ ಎಂದ ಶ್ವೇತಾ ಬಚ್ಚನ್ ಮಗಳು!

ಈ ಸಂದರ್ಭದಲ್ಲಿ ರಣಜಿ ಕ್ರಿಕಟ್ ಆಟಗಾರ ಸುಳ್ಯಕೋಡಿ ರಿಷಿ ಬೋಪಣ್ಣ, ವೇದಿಕೆಯ ಸ್ಥಾಪಕಾಧ್ಯಕ್ಷ ಪೊನ್ನಚ್ಚನ ಮಧು ಸೋಮಣ್ಣ, ಗೌರವ ಸಲಹೆಗಾರ ಕಟ್ಟೆಮನೆ ಸೋನಾಜಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
Rishab Shetty
ಸಿನಿಮಾ10 mins ago

Rishab Shetty: ರಿಷಬ್‌ ಮೀಟ್ಸ್‌ ಮೋಹನ್‌ಲಾಲ್‌; ʼಕಾಂತಾರʼ ಪ್ರೀಕ್ವೆಲ್​ನಲ್ಲಿ ಅಭಿನಯಿಸುತ್ತಾರಾ ಮಾಲಿವುಡ್‌ ಸೂಪರ್‌ ಸ್ಟಾರ್‌?

lok Sabha Election
ಪ್ರಮುಖ ಸುದ್ದಿ13 mins ago

Lok Sabha Election : ಕಾಂಗ್ರೆಸ್​​ಗೆ ಹಿನ್ನಡೆಯಾದರೆ ಸಿದ್ದರಾಮಯ್ಯ ಸ್ಥಾನಕ್ಕೆಕಂಟಕ​​​; ಚರ್ಚೆ ಹುಟ್ಟು ಹಾಕಿದ ಬೈರತಿ ಸುರೇಶ್​ ಹೇಳಿಕೆ

Hubli Murder Case
ಪ್ರಮುಖ ಸುದ್ದಿ37 mins ago

Hubli murder case : ನೇಹಾಳನ್ನು ಕೊಲ್ಲಲೆಂದೇ ಕಾಲೇಜಿಗೆ ಸಜ್ಜಾಗಿ ಬಂದಿದ್ದ ಶಿಕ್ಷಕರ ಪುತ್ರ ಫಯಾಜ್!

congress workers meeting in kudligi
ವಿಜಯನಗರ1 hour ago

Lok Sabha Election 2024: ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಗೆಲ್ಲಿಸಲು ಸಂತೋಷ್‌ ಲಾಡ್‌ ಮನವಿ

Indian Railways
ದೇಶ1 hour ago

Indian Railways: ಹಿರಿಯ ನಾಗರಿಕ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಲೋವರ್ ಬರ್ತ್ ಕಾಯ್ದಿರಿಸುವಿಕೆಗೆ ಹೊಸ ನಿಯಮ

Man death in tiger attack in Nittur village
ಕೊಡಗು2 hours ago

Wild Animals Attack: ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ; ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಸಾವು

Surapura Assembly Constituency By election BJP candidate Raju Gowda filed nomination
ಯಾದಗಿರಿ2 hours ago

Yadgiri News: ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ರಾಜುಗೌಡ ನಾಮಪತ್ರ ಸಲ್ಲಿಕೆ

Preity Zinta
ಕ್ರೀಡೆ2 hours ago

Preity Zinta : ರೋಹಿತ್​ ಶರ್ಮಾಗಾಗಿ ಪ್ರಾಣ ಪಣಕ್ಕಿಡಲು ಸಿದ್ಧ; ಪ್ರೀತಿ ಜಿಂಟಾ ಹೇಳಿಕೆ ಸಿಕ್ಕಾಪಟ್ಟೆ ವೈರಲ್​

Lok Sabha Election 2024 Malikayya Guttedar Joining Congress April 19
Lok Sabha Election 20242 hours ago

Lok Sabha Election 2024: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಗೆ ಗುಡ್‌ ಬೈ; ನಾಳೆ ಕಾಂಗ್ರೆಸ್‌ ಸೇರ್ಪಡೆ

Lok Sabah Election
ಪ್ರಮುಖ ಸುದ್ದಿ2 hours ago

Lok Sabah Election : ತಮಿಳುನಾಡಿನಲ್ಲಿ ಕತ್ತೆಗಳ ಮೂಲಕ ಹಳ್ಳಿಗಳಿಗೆ ಇವಿಎಂ ತಲುಪಿಸಿದ ಅಧಿಕಾರಿಗಳು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌