IPL 2023 : ಟ್ರೋಫಿ ಗೆದ್ದವರ ಜೇಬಿಗಿಳಿಯಲಿದೆ ಕೋಟಿ ಕೋಟಿ ರೂಪಾಯಿ! ಇಲ್ಲಿದೆ ಬಹುಮಾನದ ವಿವರ - Vistara News

ಕ್ರಿಕೆಟ್

IPL 2023 : ಟ್ರೋಫಿ ಗೆದ್ದವರ ಜೇಬಿಗಿಳಿಯಲಿದೆ ಕೋಟಿ ಕೋಟಿ ರೂಪಾಯಿ! ಇಲ್ಲಿದೆ ಬಹುಮಾನದ ವಿವರ

ಮೇ 28ರ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ.

VISTARANEWS.COM


on

2023 IPL trophy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ ಫೈನಲ್ (IPL 2023) ಪಂದ್ಯ ಮೇ 27ರಂದು ನಡೆಯಲಿದ್ದು, ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ಗುಜರಾತ್ ಟೈಟನ್ಸ್ (GT) ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಜಗತ್ತಿನ ಶ್ರಿಮಂತ ಕ್ರಿಕೆಟ್​ ಟೂರ್ನಿಯ ಫೈನಲ್​ಗೆ ಮುಂಚಿತವಾಗಿ ವಿಜೇತರು ಮತ್ತು ರನ್ನರ್​ಅಪ್​ ತಂಡಗಳು ಪಡೆಯಲಿರುವ ಬಹುಮಾನದ ಮೊತ್ತವನ್ನು ಬಹಿರಂಗಪಡಿಸಲಾಗಿದೆ. ಅದರ ಪ್ರಕಾರ ತಂಡಗಳು ದೊಡ್ಡ ಮೊತ್ತದ ನಗದು ಬಹುಮಾನವನ್ನು ಬಿಸಿಸಿಐ ಕಡೆಯಿಂದ ಪಡೆಯಲಿದೆ.

ಸ್ಪೋರ್ಟ್ಸ್​​ಸ್ಟಾರ್​ ವದರಿ ಪ್ರಕಾರ, ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದಿರುವ ಮುಂಬೈ ಇಂಡಿಯನ್ಸ್​ ತಂಡ 7 ಕೋಟಿ ರೂಪಾಯಿ ಬಹುಮಾನ ಪಡೆದುಕೊಳ್ಳಲಿದೆ. ಸೋತ ಲಕ್ನೋ ಸೂಪರ್ ಜೈಂಟ್ಸ್​ ಬಳಗಕ್ಕೆ 6.5 ಕೋಟಿ ರೂಪಾಯಿ ಸಿಗಲಿದೆ. ಚಾಂಪಿಯನ್​ ತಂಡಕ್ಕೆ ದೊಡ್ಡ ಮೊತ್ತ ಸಿಗಲಿದ್ದು ಅವರಿಗೆ ಐಪಿಎಲ್​ ಆಡಳಿತ ಮಂಡಳಿ 20 ಕೋಟಿ ರೂಪಾಯಿ ನಗದು ಬಹುಮಾನ ನೀಡಲಿದೆ. ಅದೇ ರೀತಿ ಫೈನಲ್​ನಲ್ಲಿ ಸೋತು ಎರಡನೇ ಸ್ಥಾನ ಪಡೆಯುವ​ ತಂಡ 13 ಕೋಟಿ ರೂಪಾಯಿ ಪಡೆದುಕೊಳ್ಳಲಿದೆ.

ಫೈನಲ್​ಗೆ ಲಗ್ಗೆ ಇಟ್ಟ ಗುಜರಾತ್​

ಶುಕ್ರವಾರ ರಾತ್ರಿ ನಡೆದ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಗುಜರಾತ್​ ಟೈಟನ್ಸ್​ ತಂಡ ಮುಂಬೈ ಇಂಡಿಯನ್ಸ್​ ವಿರುದ್ಧ 62 ರನ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಹಾರ್ದಿಕ್​ ಪಡೆ ಫೈನಲ್​ಗೆ ಲಗ್ಗೆಯಿಟ್ಟಿದೆ.​ ಮೇ 28 ರಂದು ನಡೆಯುವ ​ಪ್ರಶಸ್ತಿ ಸಮರದಲ್ಲಿ ಚೆನ್ನೈ ತಂಡದ ಸವಾಲು ಎದುರಿಸಲಿದೆ. ಸೋಲು ಕಂಡ ಮುಂಬೈ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಹಾಲಿ ಚಾಂಪಿಯನ್​ ಗುಜರಾತ್​ ಟೈಟನ್ಸ್​ ಶುಭಮನ್​ ಗಿಲ್​ ಅವರ ಅಮೋಘ ಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 233 ರನ್​ ಗಳಿಸಿತು. ಜವಾಬಿತ್ತ ಮುಂಬೈ ಇಂಡಿಯನ್ಸ್​ 18.2 ಓವರ್​ಗಳಲ್ಲಿ 171 ರನ್​ ಗಳಿಸಿ ಸರ್ವಪತನ ಕಂಡಿತು.

ಪರ್ಪಲ್​ ಕ್ಯಾಪ್​ಗೆ ತೀವ್ರ ಮಧ್ಯೆ ಪೈಪೋಟಿ

ಈ ಬಾರಿಯ ಐಪಿಎಲ್​ನಲ್ಲಿ ಪರ್ಪಲ್​ ಕ್ಯಾಪ್​ಗಾಗಿ ಗುಜರಾತ್​ ಟೈಟನ್ಸ್​ ತಂಡದ ಮೊಹಮ್ಮದ್​ ಶಮಿ, ರಶೀದ್​ ಖಾನ್​ ಮತ್ತು ಮೋಹಿತ್​ ಶರ್ಮ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ರಶೀದ್​ ಖಾನ್​ ಮತ್ತು ಶಮಿ 16 ಪಂದ್ಯಗಳನ್ನಾಡಿ ಕ್ರಮವಾಗಿ 28 ಮತ್ತು 27 ವಿಕೆಟ್​ ಕಬಳಿಸಿದ್ದಾರೆ. ಸದ್ಯದ ಮಟ್ಟಿಗೆ ಪರ್ಪಲ್ ಕ್ಯಾಪ್​ ಶಮಿ ಬಳಿ ಇದೆ. ಇದೇ ತಂಡದ ಮೋಹಿತ್​ ಶರ್ಮ ಕೂಡ ಈ ರೇಸ್​ನಲ್ಲಿದ್ದಾರೆ ಅವರು 13 ಪಮದ್ಯಗಳನ್ನು ಆಡಿ 24 ವಿಕೆಟ್​ ಕಬಳಿಸಿದ್ದಾರೆ. ಅದರಲ್ಲೂ ಕಳೆದ ಮುಂಬೈ ವಿರುದ್ಧದ ಕ್ವಾಲಿಫೈಯರ್​ ಪಂದ್ಯದಲ್ಲಿ 5 ವಿಕೆಟ್​ ಕಿತ್ತು ಮಿಂಚಿದ್ದರು. ಫೈನಲ್​ ಪಂದ್ಯದಲ್ಲಿಯೂ ಅವರು ಇದೇ ರೀತಿಯ ಸಾಧನೆ ತೋರಿದರೆ ಶಮಿ ಮತ್ತು ರಶೀದ್​ ಖಾನ್​ ಹಿಂದಿಕ್ಕಿ ಪರ್ಪಲ್ ಕ್ಯಾಪ್ ಪಡೆಯುವ ಅವಕಾಶವಿದೆ. ಮೂವರು ಆಟಗಾರರಿಗೆ ಪ್ರತಿಸ್ಪರ್ಧಿಯಾಗಿದ್ದ ಪಿಯೂಷ್​ ಚಾವ್ಲಾ ಕಳೆದ ಪಂದ್ಯದಲ್ಲಿ ಅವರ ತಂಡ ಮುಂಬೈ ಇಂಡಿಯನ್ಸ್​ ಸೋತು ಟೂರ್ನಿಯಿಂದ ಹೊರಬಿದ್ದ ಕಾರಣ ಅವರೂ ಕೂಡ ಈ ರೇಸ್​ನಿಂದ ಹೊರಬಿದ್ದಿದ್ದಾರೆ.

ಇದನ್ನೂ ಓದಿ : WTC Final 2023: ವಿಶ್ವ ಟೆಸ್ಟ್​ಚಾಂಪಿಯನ್​​ಷಿಪ್​​ ಭಾರತ ಗೆದ್ದರೆ ಸಿಗುವ ಬಹುಮಾನ ಎಷ್ಟು? ಇಲ್ಲಿದೆ ಮಾಹಿತಿ

ಗಿಲ್​ ಬಳಿ ಆರೆಂಜ್​ ಕ್ಯಾಪ್​

ಮುಂಬೈ ಇಂಡಿಯನ್ಸ್​ ವಿರುದ್ಧದ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಮಿಂಚಿದ ಶುಭಮನ್​ ಗಿಲ್​ ಅವರು ಈ ಬಾರಿಯ ಐಪಿಎಲ್​ನ​ ಆರೆಂಜ್​ ಕ್ಯಾಪ್ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ 730 ರನ್​ ಗಳಿಸಿ ಅಗ್ರಸ್ಥಾನದಲ್ಲಿದ್ದ ಡು ಪ್ಲೆಸಿಸ್ ಇದೀಗ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ. ಸದ್ಯ ಗಿಲ್​ ಅವರು 851 ರನ್​ ಬಾರಿಸಿದ್ದಾರೆ. ಆರ್​ಸಿಬಿ ತಂಡ ಸೋತು ಹೊರ ಬಿದ್ದ ಕಾರಣ ಡು ಪ್ಲೆಸಿಸ್​ಗೆ ಇನ್ನು ಗಿಲ್​ ದಾಖಲೆ ಮುರಿಯುವ ಅವಕಾಶವಿಲ್ಲ. ಸದ್ಯ ಈ ರೇಸ್​ನಲ್ಲಿರುವ ಆಟಗಾರನೆಂದರೆ ಚೆನ್ನೈ ತಂಡದ ಡೆವೋನ್​ ಕಾನ್ವೆ. 15 ಪಂದ್ಯ ಆಡಿರುವ ಅವರು 625 ರನ್​ ಬಾರಿಸಿದ್ದಾರೆ. ಫೈನಲ್​ ಪಂದ್ಯ ಬಾಕಿ ಇದ್ದರೂ ಅವರಿಗೆ ಈ ಮೊತ್ತವನ್ನು ಗಳಿಸಲು ಅಸಾಧ್ಯ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

IPL 2024 : ಕೊಹ್ಲಿ- ಗಂಭೀರ್ ಮುಖಾಮುಖಿಯಲ್ಲಿ ವಿಜಯ ಯಾರಿಗೆ?

IPL 2024 : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ಮತ್ತೊಂದು ರನ್​ ಸಂಭ್ರಮಕ್ಕೆ ಕಾರಣವಾಗಲಿದೆ.

VISTARANEWS.COM


on

RCB team
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಋತುವಿನ ಆರಂಭಿಕ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಸೋಲನ್ನು ಅನುಭವಿಸಿದ ಆರ್​ಸಿಬಿ. ಪಂಜಾಬ್ ಕಿಂಗ್ಸ್ ವಿರುದ್ಧದ ಎರಡನೇ ಪಂದ್ಯದಲ್ಲಿ ಭರ್ಜರಿ ಗೆಲುವಿನೊಂದಿಗೆ ಖಾತೆ ತೆರೆದಿದೆ.. ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ 77 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಮುನ್ನಡೆ ಸಿದ್ದರು. ದಿನೇಶ್ ಕಾರ್ತಿಕ್ 10 ಎಸೆತಗಳಲ್ಲಿ ಅಜೇಯ 28 ರನ್ ಗಳಿಸಿ ಉತ್ತಮ ಫಿನಿಶರ್ ಎನಿಸಿಕೊಂಡಿದ್ದರು. ಈ ಪಂದ್ಯವನ್ನು ಆರ್​ಸಿಬಿ ತಂಡದ ಮಾಜಿ ನಾಯಕ ವಿರಾಟ್​ ಕೊಹ್ಲಿ ಹಾಗೂ ಕೆಕೆಆರ್ ತಂಡದ ನೂತನ ಕೋಚ್​ ಗೌತಮ್ ಗಂಭೀರ್ ನಡುವಿನ ಪ್ರತಿಷ್ಠೆಯ ಹಣಾಹಣಿ ಎಂದು ಹೇಳಲಾಗಿದೆ. ಪಂದ್ಯ ಬ್ಯಾಟಿಂಗ್ ಸ್ವರ್ಗವಾಗಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಋತುವಿನ ಆರಂಭಿಕ ಪಂದ್ಯದಲ್ಲಿ ಅಲ್ಪ ಗೆಲುವು ಸಾಧಿಸಿದ ಕೆಕೆಆರ್, ಮೆಗಾ ಈವೆಂಟ್​ನ ಆರಂಭದಲ್ಲಿಯೇ ತಮ್ಮ ಸ್ಥಾನವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ವೆಸ್ಟ್ ಇಂಡೀಸ್​ನ ಆಲ್ರೌಂಡರ್ ಆಂಡ್ರೆ ರಸೆಲ್ 64 ರನ್ ಗಳಿಸುವ ಮೂಲಕ ವಿಶ್ವದ ಅತ್ಯಂತ ಅಪಾಯಕಾರಿ ಟಿ 20 ಬ್ಯಾಟರ್ ತಾವೆಂಬುದನ್ನು ತೋರಿಸಿಕೊಟ್ಟರು. ಯುವ ಆಟಗಾರ ಹರ್ಷಿತ್ ರಾಣಾ ಬೌಲಿಂಗ್​ನಲ್ಲಿ ಮಿಂಚಿ 4 ರನ್​ಗಳ ವಿರೋಚಿತ ಜಯಕ್ಕೆ ಕಾರಣರಾಗಿದ್ದರು.

ಕೊಹ್ಲಿಯ ಫಾರ್ಮ್​ ಮುಂದುವರಿಕೆ

ಕಳೆದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ, ವಿರಾಟ್ ಕೊಹ್ಲಿ ಮುಂಬರುವ ಪಂದ್ಯದಲ್ಲಿ ಮತ್ತೆ ಪಂದ್ಯದ ಅತ್ಯುತ್ತಮ ಬ್ಯಾಟ್ಸ್ಮನ್ ಆಗಿ ಹೊರಹೊಮ್ಮಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಆರ್​​ಸಿಬಿಯನ್ನು ಈ ಋತುವಿನ ಮತ್ತೊಂದು ಗೆಲುವಿನತ್ತ ಮುನ್ನಡೆಸುವ ಗುರಿಯನ್ನು ಅವರು ಹೊಂದಿದ್ದಾರೆ.

ಅತ್ತ ಸುನಿಲ್ ನರೈನ್ ಅವರ ಸ್ಪಿನ್ ಬೌಲಿಂಗ್ ಕೆಕೆಅರ್​ಗೆ ನಿರ್ಣಾಯಕವಾಗಿದೆ. ಮುಂಬರುವ ಮುಖಾಮುಖಿಯಲ್ಲಿ ಅವರು ಅತ್ಯುತ್ತಮ ಬೌಲರ್ ಆಗಬಹುದು. ಕಳೆದ ಪಂದ್ಯದಲ್ಲಿ ಅವರ ಬೌಲಿಂಗ್ ಎಕಾನಮಿ ಉತ್ತಮವಾಗಿತ್ತು. ಅದೂ ಅಲ್ಲದೆ, ಆರ್​ಸಿಬಿ ವಿರುದ್ಧ ಉತ್ತಮ ಅಂಕಿ ಅಂಶಗಳನ್ನು ಹೊಂದಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ವರದಿ


ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವು ಬ್ಯಾಟಿಂಗ್ ಸ್ನೇಹಿ ಪಿಚ್​ಗೆ ಹೆಸರುವಾಸಿಯಾಗಿದೆ. ಇದು ಸಾಮಾನ್ಯವಾಗಿ ಹೆಚ್ಚಿನ ಸ್ಕೋರಿಂಗ್​​ ಹಣಾಹಣಿಗಳನ್ನು ಕಂಡಿದೆ. ಸಣ್ಣ ಬೌಂಡರಿಗಳು ಮತ್ತು ಮಿಂಚಿನ ವೇಗದ ಔಟ್​ಫೀಲ್ಡ್​​ ಕಾರಣದಿಂದಾಗಿ ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಎಷ್ಟೇ ದೊಡ್ಡ ಗುರಿ ಪೇರಿಸಿದರೂ ನಿರಾಳವಾಗಿಲ್ಲ. ಇದು ಕಠಿಣ ಮೊತ್ತವನ್ನು ಸುಲಭವಾಗಿ ಬೆನ್ನಟ್ಟಲು ಅನುವು ಮಾಡಿಕೊಡುತ್ತದೆ. ಆದಾಗ್ಯೂ, ಮೊದಲು ಬ್ಯಾಟಿಂಗ್ ಮಾಡುವ ತಂಡಗಳು ಪಂದ್ಯದಲ್ಲಿ ಸ್ಪರ್ಧಾತ್ಮಕವಾಗಿ ಉಳಿಯಲು 200 ಕ್ಕೂ ಹೆಚ್ಚು ರನ್ ಗಳಿಸುವ ಗುರಿ ಹೊಂದಿರಬೇಕು. ‘

ಇದನ್ನೂ ಓದಿ : IPL 2024 Points Table: ಮುಂಬೈ ವಿರುದ್ಧ ಹೈದರಾಬಾದ್‌ ಗೆದ್ದ ಬಳಿಕ ಅಂಕಪಟ್ಟಿ ಹೇಗಿದೆ?

ಸಂಭಾವ್ಯ ಪ್ಲೇಯಿಂಗ್ ಇಲೆವೆನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿಕೆಟ್ ಕೀಪರ್), ಮಯಾಂಕ್ ದಾಗರ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್.

ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್): ಶ್ರೇಯಸ್ ಅಯ್ಯರ್ (ನಾಯಕ), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಆ್ಯಂಡ್ರೆ ರಸೆಲ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

ಇತ್ತಂಡಗಳ ಮುಖಾಮುಖಿ

ಆಡಿದ ಪಂದ್ಯಗಳು: 32
ಆರ್​ಸಿಬಿ- 14 ಗೆಲುವು
ಕೆಕೆಆರ್- 18 ಗೆಲುವು
ಫಲಿತಾಂಶ ಇಲ್ಲ- 0
ಮೊದಲ ಪಂದ್ಯ- 18/04/2008
ಕೊನೆಯ ಬಾರಿ ಆಡಿದ್ದು- 26/04/2023

ಪಂದ್ಯದ ವಿವರ

ಐಪಿಎಲ್ 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ಮುಖಾಮುಖಿ
ಸ್ಥಳ: ಎಂ.ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು
ದಿನಾಂಕ ಮತ್ತು ಸಮಯ: ಶುಕ್ರವಾರ, ಮಾರ್ಚ್ 29, ಸಂಜೆ 7:30 (ಭಾರತೀಯ ಕಾಲಮಾನ)
ಲೈವ್ ಬ್ರಾಡ್ಕಾಸ್ಟ್ ಮತ್ತು ಸ್ಟ್ರೀಮಿಂಗ್ ವಿವರಗಳು: ಸ್ಟಾರ್ ಸ್ಪೋರ್ಟ್ಸ್ ಚಾನೆಲ್​​ಗಳು, ಜಿಯೋ ಸಿನೆಮಾ ಅಪ್ಲಿಕೇಶನ್ ಮತ್ತು ವೆಬ್ಸೈಟ್

Continue Reading

ಐಪಿಎಲ್ 2024

IPL 2024 Points Table: ಮುಂಬೈ ವಿರುದ್ಧ ಹೈದರಾಬಾದ್‌ ಗೆದ್ದ ಬಳಿಕ ಅಂಕಪಟ್ಟಿ ಹೇಗಿದೆ?

IPL 2024 Points Table: ಮುಂಬೈ ಇಂಡಿಯನ್ಸ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ಅಂಕಪಟ್ಟಿಯಲ್ಲಿ ಮೇಲೇರಿದೆ. ಯಾವ ತಂಡ ಯಾವ ಸ್ಥಾನದಲ್ಲಿದೆ ಎಂಬುದರ ಅಂಕಪಟ್ಟಿ ಹೀಗಿದೆ.

VISTARANEWS.COM


on

SRH
Koo

ಹೈದರಾಬಾದ್:‌ ರನ್‌ಗಳ ಸುರಿಮಳೆಯೇ ಸುರಿದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ತಂಡದ ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ತಂಡವು 31 ರನ್‌ಗಳ ರೋಚಕ ಗೆಲುವು ಸಾಧಿಸುವ ಮೂಲಕ 2024ರ ಐಪಿಎಲ್‌ ಟೂರ್ನಿಯ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಇನ್ನು ಸತತ ಎರಡನೇ ಸೋಲು ಕಂಡ ಮುಂಬೈ ಇಂಡಿಯನ್ಸ್‌ ತಂಡವು 9ನೇ ಸ್ಥಾನಕ್ಕೆ ಕುಸಿದಿದೆ. ಮುಂಬೈ ಹಾಗೂ ಹೈದರಾಬಾದ್‌ ಪಂದ್ಯದ ಬಳಿಕ ಅಂಕಪಟ್ಟಿ (IPL 2024 Points Table) ಹೇಗಿದೆ? ಯಾರು ಯಾವ ಸ್ಥಾನದಲ್ಲಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

ತಂಡಪಂದ್ಯಗೆಲುವುಸೋಲುಅಂಕ
​ ಚೆನ್ನೈ ಸೂಪರ್​ ಕಿಂಗ್ಸ್​2204 (+1.979)
ರಾಜಸ್ಥಾನ್​ ರಾಯಲ್ಸ್1102 (+1.000)
ಸನ್​ರೈಸರ್ಸ್​ ಹೈದರಾಬಾದ್​2112 (+0.675)
ಕೋಲ್ಕೊತಾ ನೈಟ್‌ ರೈಡರ್ಸ್1102(+200)
ಪಂಜಾಬ್‌ ಕಿಂಗ್ಸ್2112‌ (+0.025)
ಆರ್‌ಸಿಬಿ2112 (-0.180)
ಗುಜರಾತ್‌ ಟೈಟಾನ್ಸ್2112 (-1.425)
ಡೆಲ್ಲಿ ಕ್ಯಾಪಿಟಲ್ಸ್1010 (-0.925)
ಮುಂಬೈ ಇಂಡಿಯನ್ಸ್2020 (-1000)
ಲಕ್ನೋ ಸೂಪರ್​ ಜೈಂಟ್ಸ್​1010 (-1.000)

ಹೈದರಾಬಾದ್‌ನ ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಆತಿಥೇಯ ಸನ್​ರೈಸರ್ಸ್ ಹೈದರಾಬಾದ್​ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 277 ರನ್​ ಬಾರಿಸಿತು. ಈ ದೊಡ್ಡ ಮೊತ್ತವನ್ನು ಅಷ್ಟೇ ದಿಟ್ಟ ರೀತಿಯಲ್ಲಿ ಬೆನ್ನಟ್ಟಿಕೊಂಡು ಹೋದ ಮುಂಬೈ ಅಂತಿಮವಾಗಿ 5 ವಿಕೆಟ್​ಗೆ 246 ರನ್​ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು. ಒಟ್ಟಾರೆಯಾಗಿ ಈ ಪಂದ್ಯದಲ್ಲಿ 523 ರನ್​ ದಾಖಲಾಯಿತು. ಇದು ಐಪಿಎಲ್​ನಲ್ಲಿ 2 ತಂಡಗಳು ಸೇರಿ ಬಾರಿಸಿದ ಗರಿಷ್ಠ ಮೊತ್ತದ ದಾಖಲೆ. ಈ ಹಿಂದೆ 2010ರಲ್ಲಿ ಚೆನ್ನೈ ಮತ್ತು ಕೆಕೆಆರ್​ ನಡುವಣ ಪಂದ್ಯದಲ್ಲಿ 469 ರನ್​ ಹರಿದು ಬಂದಿತ್ತು.

ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಮುಂಬೈಗೆ ಆರಂಭಿಕರಾದ ಇಶಾನ್​ ಕಿಶನ್​ ಮತ್ತು ಮುಂಬೈ ಪರ 200ನೇ ಪಂದ್ಯದಲ್ಲಿ ಆಡಲಿಳಿದ ಮಾಜಿ ನಾಯಕ ರೋಹಿತ್​ ಶರ್ಮ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ ಉತ್ತಮ ಅಡಿಪಾಯ ನಿರ್ಮಿಸಿದರು. ಇವರಿಬ್ಬರ ಬ್ಯಾಟಿಂಗ್​ ಆರ್ಭಟದಿಂದ ತಂಡ ಕೇವಲ ಮೂರು ಓವರ್​ಗೆ ವಿಕೆಟ್​ ನಷ್ಟವಿಲ್ಲದೆ 50 ರನ್​ ಕಲೆಹಾಕಿತು.

ಆದರೆ, ಉಭಯ ಆಟಗಾರರ ಈ ಬ್ಯಾಟಿಂಗ್​ ಜೋಶ್​ ಹೆಚ್ಚು ಹೊತ್ತು ಸಾಗಲಿಲ್ಲ. ಅಬ್ದುಲ್​ ಸಮದ್​ ಅವರಿಂದ ಒಂದು ಜೀವದಾನ ಪಡೆದರೂ ಕೂಡ ರೋಹಿತ್​ ಈ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಎಡವಿದರು. 26 ರನ್​ ಗಳಿಸಿ ನಾಯಕ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದರು. ಇಶಾನ್​ ಕಿಶನ್​ 13 ಎಸೆತಗಳಿಂದ 34 (4 ಸಿಕ್ಸರ್​, 3 ಬೌಂಡರಿ) ರನ್​ ಬಾರಿಸಿದರು. ಬಳಿಕ ಬಂದ ನಮನ್ ಧೀರ್ ಮತ್ತು ತಿಲಕ್​ ವರ್ಮ ಕೂಡ ಬಿರುಸಿನ ಆಟವಾಡಿ ತಂಡದ ಗೆಲುವಿಗೆ ಶಕ್ತಿ ಮೀರಿ ಪ್ರಯತ್ನಪಟ್ಟರು. ಮುಂಬೈ 10 ಓವರ್​ಗೆ 140 ರನ್​ ಗಡಿ ದಾಡಿದ ವೇಳೆ ಈ ಬೃಹತ್​ ಮೊತ್ತವನ್ನು ಕೂಡ ಚೇಸಿಂಗ್​ ಮಾಡಿ ಗೆಲ್ಲುವ ಸೂಚನೆ ನೀಡಿತು. ಆದರೆ ಉಭಯ ಆಟಗಾರರ ವಿಕೆಟ್​ ಪತನದ ಬಳಿಕ ಹೈದರಾಬಾದ್​ ಬೌಲರ್​ಗಳು ಲಯಬದ್ಧ ಬೌಲಿಂಗ್​ ನಡೆಸಿ ಪಂದ್ಯವನ್ನು ಹಿಡಿತಕ್ಕೆ ತಂದರು.

ಮೊದಲು ಬ್ಯಾಟಿಂಗ್​ಗೆ ಇಳಿದ ಹೈದರಾಬಾದ್​ ಪರ ಅಗರ್ವಾಲ್(11)​ ಹೊರತುಪಡಿಸಿ ಉಳಿದ ಎಲ್ಲ ಬ್ಯಾಟರ್​ಗಳು ಜಿದ್ದಿಗೆ ಬಿದ್ದವರಂತೆ ಬ್ಯಾಟ್​ ಬೀಸಿ ಗಮನಸೆಳೆದರು. ಅದರಲ್ಲೂ 2ನೇ ವಿಕೆಟ್​ಗೆ ಜತೆಯಾದ ಅಭಿಷೇಕ್​ ಶರ್ಮಾ ಮತ್ತು ಆರಂಭಕಾರ ಟ್ರಾವಿಸ್​ ಹೆಡ್​ ಪೈಪೋಟಿಗೆ ಬಿದ್ದವರಂತೆ ಬ್ಯಾಟಿಂಗ್​ ನಡೆಸಿ ಮುಂಬೈ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದರು. ಉಭಯ ಆಟಗಾರರ ಈ ಬ್ಯಾಟಿಂಗ್​ ಆರ್ಭಟಕ್ಕೆ ಮುಂಬೈ ​7 ಓವರ್​ ಆಗುವ ಮುನ್ನವೇ 100ರ ಗಡಿ ದಾಟಿತು.

ತಿಲಕ್​ ವರ್ಮಾ(64) ಮತ್ತು ನಮನ್ ಧೀರ್(30) ರನ್​ ಗಳಿಸಿದರು. ಬಳಿಕ ಬಂದ ನಾಯಕ ಹಾರ್ದಿಕ್​ ಪಾಂಡ್ಯ(24) ಹಾಗೂ ಟಿಮ್​ ಡೇವಿಡ್(42*)​ ರನ್​ ಬಾರಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು. ಹೈದರಾಬಾದ್​ ಪರ ನಾಯಕ ಕಮಿನ್ಸ್​ ಹಾಗೂ ಉನಾದ್ಕತ್​ ತಲಾ 2 ವಿಕೆಟ್​ ಪಡೆದರು.

ಬೌಲರ್​ಗಳನ್ನು ಚಿಂದಿ ಮಾಡಿದ ಹೆಡ್​-ಅಭಿಷೇಕ್

ವಿಶ್ವಕಪ್​ ಹೀರೊ ಟ್ರಾವಿಸ್​ ಹೆಡ್​ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರೆ, ಇವರ ಜತೆಗಾರ ಅಭಿಷೇಕ್​ ಶರ್ಮ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಈ ಜೋಡಿ ದ್ವಿತೀಯ ವಿಕೆಟ್​ಗೆ 68 ರನ್​ ಒಟ್ಟುಗೂಡಿಸಿತು. ಹೆಡ್​ 24 ಎಸೆತಗಳಿಂದ 9 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 62 ರನ್​ ಬಾರಿಸಿದರು. ಅಭಿಷೇಕ್​ ಶರ್ಮಾ 23 ಎಸೆತ ಎದುರಿಸಿ 7 ಸೊಗಸಾದ ಸಿಕ್ಸರ್​ ಮತ್ತು 3 ಬೌಂಡರಿ ಸಿಡಿಸಿ 63 ರನ್​ ಕಲೆಹಾಕಿದರು. ಈ ಮೊತ್ತ ಬಾರಿಸಲು ಅವರು ಎದುರಿಸಿದ್ದು ಕೇವಲ 23 ಎಸೆತ. ಉಭಯ ಆಟಗಾರರ ಈ ಬ್ಯಾಟಿಂಗ್​ ಆರ್ಭಟದ ಮುಂದೆ ಮುಂಬೈ ತಂಡದ ಬೌಲಿಂಗ್​ ಸಂಪೂರ್ಣ ಹಳಿ ತಪ್ಪಿತು. ಹೆಡ್​ ಮತ್ತು ಅಭಿಷೇಕ್​ ಹೈದರಾಬಾದ್​ ಪರ ಅತಿ ಕಡಿಮೆ ಎಸೆತದಲ್ಲಿ ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನ ಪಡೆದರು.

ಇದನ್ನೂ ಓದಿ: MI vs SRH: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್​’; ಮುಂಬೈಗೆ ಸತತ 2ನೇ ಸೋಲು

ಸಿಡಿದ ಕ್ಲಾಸೆನ್

ಕಳೆದ ಕೆಕೆಆರ್​ ವಿರುದ್ಧ ಅಸಾಮಾನ್ಯ ಬ್ಯಾಟಿಂಗ್​ ಪ್ರದರ್ಶನ ತೋರಿದ್ದ ಹೆನ್ರಿಚ್​ ಕ್ಲಾಸೆನ್​ ಈ ಪಂದ್ಯದಲ್ಲಿಯೂ ಸಿಡಿದು ನಿಂತರು. ಕ್ರೀಸ್​ಗಿಳಿದ ಮೊದಲ ಎಸೆತದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತುಕೊಟ್ಟ ಅವರು ಮೈದಾನದ ಮೂಲೆ ಮೂಲೆಗೂ ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ತವರಿನ ಅಭಿಮಾನಿಗಳಿಗೆ ಬರಪೂರ ರಂಜನೆ ನೀಡಿದರು. ಇವರಿಗೆ ಏಡನ್​ ಮಾರ್ಕ್ರಮ್​ ಕೂಡ ಉತ್ತಮ ಸಾಥ್​ ನೀಡಿದರು. ತಾನೇನು ಕಮ್ಮಿ ಇಲ್ಲ ಎನ್ನುವಂತೆ ಕ್ಲಾಸೆನ್ ಕೂಡ 22 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ಮುಂಬೈ ಪರ ಜಸ್​​ಪ್ರೀತ್​ ಬುಮ್ರಾ ಅವರನ್ನು ಬಿಟ್ಟು ಉಳಿದೆಲ್ಲ ಬೌಲರ್​ಗಳು ದುಬಾರಿಯಾದರು. ನಾಯಕ ಪಾಂಡ್ಯ ಒಂದು ವಿಕೆಟ್​ ಕಿತ್ತರೂ ಕೂಡ 46 ರನ್​ ಬಿಟ್ಟುಕೊಟ್ಟರು.‌

ಚೊಚ್ಚಲ ಐಪಿಎಲ್​ ಪಂದ್ಯವನ್ನಾಡಿದ ದಕ್ಷಿಣ ಆಫ್ರಿಕಾದ 17 ವರ್ಷದ ಕ್ವೆನಾ ಮಫಕಾ ಅವರಂತೂ ಸರಿಯಾಗಿ ರನ್​ ಹೊಡೆಸಿಕೊಂಡರು. 4 ಓವರ್​ ಎಸೆದು 66 ರನ್​ ಬಿಟ್ಟುಕೊಟ್ಟರು. ಸ್ಪಿನ್ನರ್​ ಪಿಯೂಷ್ ಚಾವ್ಲಾ ಕೇವಲ 2 ಓವರ್​ಗೆ 34 ರನ್​ ಚಚ್ಚಿಸಿಕೊಂಡರು. ಕ್ಲಾಸೆನ್​ 34 ಎಸೆತದಿಂದ ಅಜೇಯ 80 ರನ್​ ಬಾರಿಸಿದರು. ಸಿಡಿದ್ದು 7 ಸಿಕ್ಸರ್​ ಮತ್ತು 4 ಬೌಂಡರಿ. ಮಾರ್ಕ್ರಮ್ ಕೂಡ 42 ರನ್​ ಬಾರಿಸಿ ಅಜೇಯರಾಗಿ ಉಳಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

MI vs SRH: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್​’; ಮುಂಬೈಗೆ ಸತತ 2ನೇ ಸೋಲು

MI vs SRH: ಮುಂಬೈ ಇಂಡಿಯನ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 31 ರನ್​ ಅಂತರದಿಂದ ಗೆದ್ದು ಬೀಗಿದೆ.

VISTARANEWS.COM


on

Shahbaz Ahmed celebrates nabbing Ishan Kishan
Koo

ಹೈದರಾಬಾದ್​: ಮುತ್ತಿನ ನಗರಿ ಹೈದರಾಬಾದ್​ನಲ್ಲಿ ಬುಧವಾರ ಸಿಕ್ಸರ್​ಗಳ ಸುರಿಮಳೆಯೇ ಸುರಿಯಿತು. ಮುಂಬೈ ಇಂಡಿಯನ್ಸ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳ ಆಟಗಾರರು ತಮ್ಮ ಸ್ಫೋಟಕ ಬ್ಯಾಟಿಂಗ್​ ಮೂಲಕ ಈ ಸಿಕ್ಸರ್​ಗಳ ಮಳೆಗೆ ಕಾರಣರಾದರು. ಅಂತಿಮವಾಗಿ ಪಂದ್ಯದಲ್ಲಿ ತವರಿನ ತಂಡವಾದ ಸನ್​ರೈಸರ್ಸ್​ ಹೈದರಾಬಾದ್ 31 ರನ್​ ಅಂತರದಿಂದ ಗೆದ್ದು ಬೀಗಿತು​. ಮುಂಬೈ ಸತತ 2ನೇ ಸೋಲಿನ ಅವಮಾನಕ್ಕೆ ಸಿಲುಕಿತು.

ಇಲ್ಲಿನ ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಆತಿಥೇಯ ಸನ್​ರೈಸರ್ಸ್ ಹೈದರಾಬಾದ್​ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 277 ರನ್​ ಬಾರಿಸಿತು. ಈ ದೊಡ್ಡ ಮೊತ್ತವನ್ನು ಅಷ್ಟೇ ದಿಟ್ಟ ರೀತಿಯಲ್ಲಿ ಬೆನ್ನಟ್ಟಿಕೊಂಡು ಹೋದ ಮುಂಬೈ ಅಂತಿಮವಾಗಿ 5 ವಿಕೆಟ್​ಗೆ 246 ರನ್​ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು. ಒಟ್ಟಾರೆಯಾಗಿ ಈ ಪಂದ್ಯದಲ್ಲಿ 523 ರನ್​ ದಾಖಲಾಯಿತು. ಇದು ಐಪಿಎಲ್​ನಲ್ಲಿ 2 ತಂಡಗಳು ಸೇರಿ ಬಾರಿಸಿದ ಗರಿಷ್ಠ ಮೊತ್ತದ ದಾಖಲೆ. ಈ ಹಿಂದೆ 2010ರಲ್ಲಿ ಚೆನ್ನೈ ಮತ್ತು ಕೆಕೆಆರ್​ ನಡುವಣ ಪಂದ್ಯದಲ್ಲಿ 469 ರನ್​ ಹರಿದು ಬಂದಿತ್ತು.

ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಮುಂಬೈಗೆ ಆರಂಭಿಕರಾದ ಇಶಾನ್​ ಕಿಶನ್​ ಮತ್ತು ಮುಂಬೈ ಪರ 200ನೇ ಪಂದ್ಯದಲ್ಲಿ ಆಡಲಿಳಿದ ಮಾಜಿ ನಾಯಕ ರೋಹಿತ್​ ಶರ್ಮ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ ಉತ್ತಮ ಅಡಿಪಾಯ ನಿರ್ಮಿಸಿದರು. ಇವರಿಬ್ಬರ ಬ್ಯಾಟಿಂಗ್​ ಆರ್ಭಟದಿಂದ ತಂಡ ಕೇವಲ ಮೂರು ಓವರ್​ಗೆ ವಿಕೆಟ್​ ನಷ್ಟವಿಲ್ಲದೆ 50 ರನ್​ ಕಲೆಹಾಕಿತು.

ಆದರೆ, ಉಭಯ ಆಟಗಾರರ ಈ ಬ್ಯಾಟಿಂಗ್​ ಜೋಶ್​ ಹೆಚ್ಚು ಹೊತ್ತು ಸಾಗಲಿಲ್ಲ. ಅಬ್ದುಲ್​ ಸಮದ್​ ಅವರಿಂದ ಒಂದು ಜೀವದಾನ ಪಡೆದರೂ ಕೂಡ ರೋಹಿತ್​ ಈ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಎಡವಿದರು. 26 ರನ್​ ಗಳಿಸಿ ನಾಯಕ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದರು. ಇಶಾನ್​ ಕಿಶನ್​ 13 ಎಸೆತಗಳಿಂದ 34 (4 ಸಿಕ್ಸರ್​, 3 ಬೌಂಡರಿ) ರನ್​ ಬಾರಿಸಿದರು. ಬಳಿಕ ಬಂದ ನಮನ್ ಧೀರ್ ಮತ್ತು ತಿಲಕ್​ ವರ್ಮ ಕೂಡ ಬಿರುಸಿನ ಆಟವಾಡಿ ತಂಡದ ಗೆಲುವಿಗೆ ಶಕ್ತಿ ಮೀರಿ ಪ್ರಯತ್ನಪಟ್ಟರು. ಮುಂಬೈ 10 ಓವರ್​ಗೆ 140 ರನ್​ ಗಡಿ ದಾಡಿದ ವೇಳೆ ಈ ಬೃಹತ್​ ಮೊತ್ತವನ್ನು ಕೂಡ ಚೇಸಿಂಗ್​ ಮಾಡಿ ಗೆಲ್ಲುವ ಸೂಚನೆ ನೀಡಿತು. ಆದರೆ ಉಭಯ ಆಟಗಾರರ ವಿಕೆಟ್​ ಪತನದ ಬಳಿಕ ಹೈದರಾಬಾದ್​ ಬೌಲರ್​ಗಳು ಲಯಬದ್ಧ ಬೌಲಿಂಗ್​ ನಡೆಸಿ ಪಂದ್ಯವನ್ನು ಹಿಡಿತಕ್ಕೆ ತಂದರು.

ಮೊದಲು ಬ್ಯಾಟಿಂಗ್​ಗೆ ಇಳಿದ ಹೈದರಾಬಾದ್​ ಪರ ಅಗರ್ವಾಲ್(11)​ ಹೊರತುಪಡಿಸಿ ಉಳಿದ ಎಲ್ಲ ಬ್ಯಾಟರ್​ಗಳು ಜಿದ್ದಿಗೆ ಬಿದ್ದವರಂತೆ ಬ್ಯಾಟ್​ ಬೀಸಿ ಗಮನಸೆಳೆದರು. ಅದರಲ್ಲೂ 2ನೇ ವಿಕೆಟ್​ಗೆ ಜತೆಯಾದ ಅಭಿಷೇಕ್​ ಶರ್ಮಾ ಮತ್ತು ಆರಂಭಕಾರ ಟ್ರಾವಿಸ್​ ಹೆಡ್​ ಪೈಪೋಟಿಗೆ ಬಿದ್ದವರಂತೆ ಬ್ಯಾಟಿಂಗ್​ ನಡೆಸಿ ಮುಂಬೈ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದರು. ಉಭಯ ಆಟಗಾರರ ಈ ಬ್ಯಾಟಿಂಗ್​ ಆರ್ಭಟಕ್ಕೆ ಮುಂಬೈ ​7 ಓವರ್​ ಆಗುವ ಮುನ್ನವೇ 100ರ ಗಡಿ ದಾಟಿತು.

ಇದನ್ನೂ ಓದಿ IPL 2024: ಐಪಿಎಲ್​ನಲ್ಲಿ ದಾಖಲೆ ನೂತನ ಬರೆದ ಹೈದರಾಬಾದ್; ಆರ್​ಸಿಬಿ ರೆಕಾರ್ಡ್ ಉಡೀಸ್​​

ತಿಲಕ್​ ವರ್ಮಾ(64) ಮತ್ತು ನಮನ್ ಧೀರ್(30) ರನ್​ ಗಳಿಸಿದರು. ಬಳಿಕ ಬಂದ ನಾಯಕ ಹಾರ್ದಿಕ್​ ಪಾಂಡ್ಯ(24) ಹಾಗೂ ಟಿಮ್​ ಡೇವಿಡ್(42*)​ ರನ್​ ಬಾರಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು. ಹೈದರಾಬಾದ್​ ಪರ ನಾಯಕ ಕಮಿನ್ಸ್​ ಹಾಗೂ ಉನಾದ್ಕತ್​ ತಲಾ 2 ವಿಕೆಟ್​ ಪಡೆದರು.

ಬೌಲರ್​ಗಳನ್ನು ಚಿಂದಿ ಮಾಡಿದ ಹೆಡ್​-ಅಭಿಷೇಕ್

ವಿಶ್ವಕಪ್​ ಹೀರೊ ಟ್ರಾವಿಸ್​ ಹೆಡ್​ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರೆ, ಇವರ ಜತೆಗಾರ ಅಭಿಷೇಕ್​ ಶರ್ಮ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಈ ಜೋಡಿ ದ್ವಿತೀಯ ವಿಕೆಟ್​ಗೆ 68 ರನ್​ ಒಟ್ಟುಗೂಡಿಸಿತು. ಹೆಡ್​ 24 ಎಸೆತಗಳಿಂದ 9 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 62 ರನ್​ ಬಾರಿಸಿದರು. ಅಭಿಷೇಕ್​ ಶರ್ಮಾ 23 ಎಸೆತ ಎದುರಿಸಿ 7 ಸೊಗಸಾದ ಸಿಕ್ಸರ್​ ಮತ್ತು 3 ಬೌಂಡರಿ ಸಿಡಿಸಿ 63 ರನ್​ ಕಲೆಹಾಕಿದರು. ಈ ಮೊತ್ತ ಬಾರಿಸಲು ಅವರು ಎದುರಿಸಿದ್ದು ಕೇವಲ 23 ಎಸೆತ. ಉಭಯ ಆಟಗಾರರ ಈ ಬ್ಯಾಟಿಂಗ್​ ಆರ್ಭಟದ ಮುಂದೆ ಮುಂಬೈ ತಂಡದ ಬೌಲಿಂಗ್​ ಸಂಪೂರ್ಣ ಹಳಿ ತಪ್ಪಿತು. ಹೆಡ್​ ಮತ್ತು ಅಭಿಷೇಕ್​ ಹೈದರಾಬಾದ್​ ಪರ ಅತಿ ಕಡಿಮೆ ಎಸೆತದಲ್ಲಿ ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಕ್ರಮವಾಗಿ ಮೊದಲೆಡರು ಸ್ಥಾನ ಪಡೆದರು.

ಮತ್ತೆ ಸಿಡಿದ ಕ್ಲಾಸೆನ್​


ಕಳೆದ ಕೆಕೆಆರ್​ ವಿರುದ್ಧ ಅಸಾಮಾನ್ಯ ಬ್ಯಾಟಿಂಗ್​ ಪ್ರದರ್ಶನ ತೋರಿದ್ದ ಹೆನ್ರಿಚ್​ ಕ್ಲಾಸೆನ್​ ಈ ಪಂದ್ಯದಲ್ಲಿಯೂ ಸಿಡಿದು ನಿಂತರು. ಕ್ರೀಸ್​ಗಿಳಿದ ಮೊದಲ ಎಸೆತದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತುಕೊಟ್ಟ ಅವರು ಮೈದಾನದ ಮೂಲೆ ಮೂಲೆಗೂ ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ತವರಿನ ಅಭಿಮಾನಿಗಳಿಗೆ ಬರಪೂರ ರಂಜನೆ ನೀಡಿದರು. ಇವರಿಗೆ ಏಡನ್​ ಮಾರ್ಕ್ರಮ್​ ಕೂಡ ಉತ್ತಮ ಸಾಥ್​ ನೀಡಿದರು. ತಾನೇನು ಕಮ್ಮಿ ಇಲ್ಲ ಎನ್ನುವಂತೆ ಕ್ಲಾಸೆನ್ ಕೂಡ 22 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ಮುಂಬೈ ಪರ ಜಸ್​​ಪ್ರೀತ್​ ಬುಮ್ರಾ ಅವರನ್ನು ಬಿಟ್ಟು ಉಳಿದೆಲ್ಲ ಬೌಲರ್​ಗಳು ದುಬಾರಿಯಾದರು. ನಾಯಕ ಪಾಂಡ್ಯ ಒಂದು ವಿಕೆಟ್​ ಕಿತ್ತರೂ ಕೂಡ 46 ರನ್​ ಬಿಟ್ಟುಕೊಟ್ಟರು.

ಚೊಚ್ಚಲ ಐಪಿಎಲ್​ ಪಂದ್ಯವನ್ನಾಡಿದ ದಕ್ಷಿಣ ಆಫ್ರಿಕಾದ 17 ವರ್ಷದ ಕ್ವೆನಾ ಮಫಕಾ ಅವರಂತೂ ಸರಿಯಾಗಿ ರನ್​ ಹೊಡೆಸಿಕೊಂಡರು. 4 ಓವರ್​ ಎಸೆದು 66 ರನ್​ ಬಿಟ್ಟುಕೊಟ್ಟರು. ಸ್ಪಿನ್ನರ್​ ಪಿಯೂಷ್ ಚಾವ್ಲಾ ಕೇವಲ 2 ಓವರ್​ಗೆ 34 ರನ್​ ಚಚ್ಚಿಸಿಕೊಂಡರು. ಕ್ಲಾಸೆನ್​ 34 ಎಸೆತದಿಂದ ಅಜೇಯ 80 ರನ್​ ಬಾರಿಸಿದರು. ಸಿಡಿದ್ದು 7 ಸಿಕ್ಸರ್​ ಮತ್ತು 4 ಬೌಂಡರಿ. ಮಾರ್ಕ್ರಮ್ ಕೂಡ 42 ರನ್​ ಬಾರಿಸಿ ಅಜೇಯರಾಗಿ ಉಳಿದರು.

ದಾಖಲೆ ಬರೆದ ಹೈದರಾಬಾದ್​


ಹೈದರಾಬಾದ್​ ತಂಡ ಈ ಬೃಹತ್​ ಮೊತ್ತವನ್ನು ಬಾರಿಸುವ ಮೂಲಕ ಐಪಿಎಲ್​(IPL 2024) ಇತಿಹಾಸದಲ್ಲೇ ಅತ್ಯಧಿಕ ರನ್​ ಪೇರಿಸಿದ ಮೊದಲ ತಂಡ ಎಂಬ ದಾಖಲೆ ಬರೆಯಿತು. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ ದಾಖಲೆಯನ್ನು ಮುರಿಯಿತು. ಆರ್​ಸಿಬಿ 2013ರಲ್ಲಿ ಪುಣೆ ವಾರಿಯರ್ಸ್​ ವಿರುದ್ಧ 5 ವಿಕೆಟ್​ಗೆ 263 ರನ್​ ಬಾರಿಸಿತ್ತು. ಇದೀಗ ಸನ್​ರೈಸರ್ಸ್​ 3 ವಿಕೆಟ್​ಗೆ 277 ರನ್​ ಬಾರಿಸುವ ಕಳೆದ 11 ವರ್ಷಗಳಿಂದ ಆರ್​ಸಿಬಿ ಹೆಸರಿನಲ್ಲಿ ದಾಖಲೆಯನ್ನು ಮೀರಿ ನಿಂತಿದೆ.

Continue Reading

ಕ್ರಿಕೆಟ್

IPL 2024: ಐಪಿಎಲ್​ನಲ್ಲಿ ದಾಖಲೆ ನೂತನ ಬರೆದ ಹೈದರಾಬಾದ್; ಆರ್​ಸಿಬಿ ರೆಕಾರ್ಡ್ ಉಡೀಸ್​​

IPL 2024: ಐಪಿಎಲ್​(IPL 2024) ಇತಿಹಾಸದಲ್ಲೇ ಅತ್ಯಧಿಕ ರನ್​ ಪೇರಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆ ರೈಸರ್ಸ್​ ಹೈದರಾಬಾದ್ ತಂಡ ಪಾತ್ರವಾಗಿದೆ.

VISTARANEWS.COM


on

Sunrisers Hyderabad
Koo

ಹೈದರಾಬಾದ್​: ಸನ್​ರೈಸರ್ಸ್​ ಹೈದರಾಬಾದ್​ ತಂಡ ಐಪಿಎಲ್​ನಲ್ಲಿ ನೂತನ ದಾಖಲೆಯೊಂದನ್ನು ಬರೆದಿದೆ. ಐಪಿಎಲ್​(IPL 2024) ಇತಿಹಾಸದಲ್ಲೇ ಅತ್ಯಧಿಕ ರನ್​ ಪೇರಿಸಿದ ಮೊದಲ ತಂಡ ಎನಿಸಿಕೊಂಡಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ ದಾಖಲೆಯನ್ನು ಮುರಿದಿದೆ.

ಇಲ್ಲಿನ ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್​ ವಿರುದ್ಧ ನಡೆಯುತ್ತಿರುವ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್​ ನಡೆಸಿ 20 ಓವರ್​ಗಳಲ್ಲಿ 3 ವಿಕೆಟ್​ಗೆ 277 ರನ್​ ಬಾರಿಸಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕಿದೆ. ಆರ್​ಸಿಬಿ 2013ರಲ್ಲಿ ಪುಣೆ ವಾರಿಯರ್ಸ್​ ವಿರುದ್ಧ 5 ವಿಕೆಟ್​ಗೆ 263 ರನ್​ ಬಾರಿಸಿತ್ತು. ಇದೀಗ ಈ ದಾಖಲೆಯನ್ನು ಹೈದರಾಬಾದ್​ 11 ವರ್ಷಗಳ ಬಳಿಕ ಮೀರಿ ನಿಂತಿದೆ.

ಐಪಿಎಲ್​ನಲ್ಲಿ ಅತಿ ಹೆಚ್ಚು ರನ್​ ಬಾರಿಸಿದ ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​-3 ವಿಕೆಟ್​ಗೆ 277(ಮುಂಬೈ ಇಂಡಿಯನ್ಸ್​ ವಿರುದ್ಧ)

ರಾಯಲ್​ ಚಾಲೆಂಜರ್ಸ್​ ಬೆಂಗಳೂರು 5 ವಿಕೆಟ್​ಗೆ 263( ಪುಣೆ ವಾರಿಯರ್ಸ್​ ವಿರುದ್ಧ)

ಲಕ್ನೋ ಸೂಪರ್​ ಜೈಂಟ್ಸ್​-5 ವಿಕೆಟ್​ಗೆ 257(ಪಂಜಾಬ್​ ಕಿಂಗ್ಸ್​ ವಿರುದ್ಧ)

ರಾಯಲ್​ ಚಾಲೆಂಜರ್ಸ್​ ಬೆಂಗಳೂರು- 3 ವಿಕೆಟ್​ಗೆ 248( ಗುಜರಾತ್​ ಲಯನ್ಸ್​ ವಿರುದ್ಧ

ಕೋಲ್ಕತ್ತಾ ನೈಟ್​ ರೈಡರ್ಸ್​-6 ವಿಕೆಟ್​ಗೆ 246(ರಾಜಸ್ಥಾನ್​ ರಾಯಲ್ಸ್​ ವಿರುದ್ಧ)

ಚೆನ್ನೈ ಸೂಪರ್​ ಕಿಂಗ್ಸ್​-5 ವಿಕೆಟ್​ಗೆ 240(ಕಿಂಗ್ಸ್​ ಇಲೆವೆನ್​ ಪಂಜಾಬ್​ ವಿರುದ್ಧ)

ಚೆನ್ನೈ ಸೂಪರ್​ ಕಿಂಗ್ಸ್​-2 ವಿಕೆಟ್​ಗೆ 235(ಕೆಕೆಆರ್​ ವಿರುದ್ಧ)

ಇದನ್ನೂ ಓದಿ IPL 2024: ಹೆಡ್​, ಅಭಿಷೇಕ್​ ತೂಫಾನ್ ಬ್ಯಾಟಿಂಗ್​; ದಾಖಲೆಗಳ ಸುರಿಮಳೆ

10 ಓವರ್​ನಲ್ಲಿ ಗರಿಷ್ಠ ಮೊತ್ತ


ಹೈದರಾಬಾದ್​ ತಂಡ 10 ಓವರ್​ಗಳಲ್ಲಿ ಕೇವಲ 2 ವಿಕೆಟ್​ಗೆ 148 ರನ್​ ಬಾರಿಸುವ ಮೂಲಕ ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿಯೇ 10 ಓವರ್​ಗೆ ಅ್ಯಧಿಕ ಮೊತ್ತ ಗಳಿಸಿದ ಮೊದಲ ತಂಡ ಹೆಗ್ಗಳಿಕೆಗೆ ಪಾತ್ರವಾಯಿತು. ಇದುವರೆಗೂ ಈ ದಾಖಲೆ ಮುಂಬೈ ತಂಡದ ಪರವಾಗಿತ್ತು. ಮುಂಬೈ 2021 ರಲ್ಲಿ ಹೈದರಾಬಾದ್​ ವಿರುದ್ಧವೇ 131/3 ಬಾರಿಸಿತ್ತು. ಇದೀಗ ಹೈದರಾಬಾದ್​ ಈ ದಾಖಲೆಯನ್ನು ಮುಂಬೈ ವಿರುದ್ಧವೇ ಆಡಿ ಸೇಡು ತೀರಿಸಿಕೊಂಡಿದೆ.

ಅತಿ ಕಡಿಮೆ ಓವರ್​ನಲ್ಲಿ 100 ರನ್​​


7 ಓವರ್​ನಲ್ಲಿ 100 ರನ್​ ಗಡಿ ದಾಟುವ ಮೂಲಕ ಐಪಿಎಲ್​ ಇತಿಹಾಸದ ಅತಿ ಕಡಿಮೆ ಓವರ್​ನಲ್ಲಿ 100 ರನ್​ ಬಾರಿಸಿದ ತಂಡಗಳ ದಾಖಲೆಪಟ್ಟಿಯಲ್ಲಿ ಹೈದರಾಬಾದ್​ 4ನೇ ಸ್ಥಾನ ಪಡೆದುಕೊಂಡಿತು. ದಾಖಲೆ ಮುಂಬೈ ತಂಡದ ಹೆಸರಿನಲ್ಲಿದೆ. 2014ರಲ್ಲಿ ಪಂಜಾಬ್​ ವಿರುದ್ಧ ಮುಂಬೈ ಕೇವಲ 6 ಓವರ್​ನಲ್ಲಿ ಈ ಸಾಧನೆ ಮಾಡಿತ್ತು. ಪವರ್​ ಪ್ಲೇಯಲ್ಲಿ ಅತ್ಯಧಿಕ ರನ್​ ಗಳಿಸಿದ ಮೊದಲ ತಂಡ ಎಂಬ ದಾಖಲೆ ಕೂಡ ಮುಂಬೈ ಪರವೇ ಇದೆ.

Continue Reading
Advertisement
Actor Govinda
ದೇಶ2 mins ago

Actor Govinda: ಶಿವಸೇನೆ ನಾಯಕನ ಜತೆ ನಟ ಗೋವಿಂದಾ ಚರ್ಚೆ; ಚುನಾವಣಾ ಕಣಕ್ಕೆ ಎಂಟ್ರಿ?

SSLC Students Fighting
ಬೆಂಗಳೂರು9 mins ago

SSLC Students Fight: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹೊಡಿಬಡಿ; ಮೂವರಿಗೆ ಚಾಕು ಇರಿತ

RCB team
ಕ್ರೀಡೆ29 mins ago

IPL 2024 : ಕೊಹ್ಲಿ- ಗಂಭೀರ್ ಮುಖಾಮುಖಿಯಲ್ಲಿ ವಿಜಯ ಯಾರಿಗೆ?

toll hike
ಬೆಂಗಳೂರು36 mins ago

Toll Hike: ಮತ್ತೆ ಟೋಲ್‌ ಬರೆ; ಬೆಂಗಳೂರು-ಮೈಸೂರು ಓಡಾಟ ಇನ್ನಷ್ಟು ದುಬಾರಿ

Arvind Kejriwal
ದೇಶ52 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ತಪ್ಪದ ಸಂಕಷ್ಟ; ಇನ್ನೂ 4 ದಿನ ಜೈಲೇ ಗತಿ!

CM Siddaramaiah hugs DK Suresh in Bangalore Rural Lok Sabha constituency election campaign
Lok Sabha Election 202459 mins ago

Lok Sabha Election 2024: ಕಷ್ಟಕ್ಕೆ ಸ್ಪಂದಿಸುವ ಡಿಕೆಸು ಬೇಕೋ? ವೈಟ್‌ ಕಾಲರ್‌ ಡಾ. ಮಂಜುನಾಥ್‌ ಬೇಕೋ? ಸಿಎಂ ಪ್ರಶ್ನೆ

Mudhol Movie Sanjana
ಸ್ಯಾಂಡಲ್ ವುಡ್1 hour ago

Mudhol Movie: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನ ಜತೆ ಸಂಜನಾ ರೊಮ್ಯಾನ್ಸ್!

narendra modi
ದೇಶ1 hour ago

ಮೋದಿ ಅವರ ಡೀಸೆಲ್ ಚಾಲಿತ ವಿಶೇಷ ವಾಹನಗಳ ನೋಂದಣಿ ವಿಸ್ತರಣೆ ತಿರಸ್ಕರಿಸಿದ ಎನ್‌ಜಿಟಿ; ಕಾರಣವೇನು?

Varun Gandhi
ಪ್ರಮುಖ ಸುದ್ದಿ2 hours ago

Varun Gandhi: ಸಂಸದ ಅಲ್ಲದಿದ್ದರೂ ನಿಮ್ಮ ಮಗ; ಜನಕ್ಕೆ ಟಿಕೆಟ್‌ ವಂಚಿತ ವರುಣ್‌ ಗಾಂಧಿ ಭಾವುಕ ಪತ್ರ!

supreme court CJI DY chandrachud
ಪ್ರಮುಖ ಸುದ್ದಿ2 hours ago

CJI DY Chandrachud: 600 ವಕೀಲರಿಂದ ಮುಖ್ಯ ನ್ಯಾಯಮೂರ್ತಿಗೆ ಪತ್ರ; ನ್ಯಾಯಾಂಗದ ಸಮಗ್ರತೆಗೆ ಧಕ್ಕೆ ಬಗೆಗೆ ಕಳವಳ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20243 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20244 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ12 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ1 day ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ2 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌