ಎರಡನೇ ಪಂದ್ಯಕ್ಕೆ Virat Kohli ರಿಟರ್ನ್ಸ್‌: ಟಾಸ್‌ ಗೆದ್ದ ಭಾರತದಿಂದ ಬೌಲಿಂಗ್‌ ಆಯ್ಕೆ - Vistara News

ಕ್ರಿಕೆಟ್

ಎರಡನೇ ಪಂದ್ಯಕ್ಕೆ Virat Kohli ರಿಟರ್ನ್ಸ್‌: ಟಾಸ್‌ ಗೆದ್ದ ಭಾರತದಿಂದ ಬೌಲಿಂಗ್‌ ಆಯ್ಕೆ

ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೆ Team India ಪ್ರಕಟಗೊಂಡಿದ್ದು, ವಿರಾಟ್‌ ಕೊಹ್ಲಿ ತಂಡಕ್ಕೆ ಮರಳಿದ್ದಾರೆ.

VISTARANEWS.COM


on

team india
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ಲಾರ್ಡ್ಸ್‌ನಲ್ಲಿ ಆರಂಭಗೊಂಡಿರುವ ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೆ ಭಾರತ ತಂಡ ಪ್ರಕಟವಾಗಿದ್ದು, ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ ವಿರಾಟ್‌ ಕೊಹ್ಲಿ ಕಣಕ್ಕಿಳಿಯಲಿದ್ದಾರೆ.

ಕೊಹ್ಲಿಗೆ ಶ್ರೇಯಸ್‌ ಅಯ್ಯರ್‌ ಸ್ಥಾನ ಬಿಟ್ಟುಕೊಟ್ಟಿದ್ದು, ಉಳಿದಂತೆ ಮೊದಲ ಪಂದ್ಯದಲ್ಲಿ ಆಡಿರುವ ತಂಡವನ್ನೇ ಉಳಿಸಿಕೊಳ್ಳಲಾಗಿದೆ.

ಟಾಸ್‌ ಗೆದ್ದ ಭಾರತ

ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮ ಲಾರ್ಡ್ಸ್‌ನಲ್ಲೂ ಟಾಸ್‌ ಗೆದ್ದಿದ್ದಾರೆ. ಹಿಂದಿನ ಪಂದ್ಯದಂತೆ ಅವರು ಈ ಪಂದ್ಯದಲ್ಲೂ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದ್ದು, ಎದುರಾಳಿ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಿ ಗೆಲ್ಲುವ ರಣತಂತ್ರ ರೂಪಿಸಿದ್ದಾರೆ.

ತಂಡ

ರೋಹಿತ್‌ ಶರ್ಮ, ಶಿಖರ್‌ ಧವನ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ಹಾರ್ದಿಕ್‌ ಪಾಂಡ್ಯ, ರಿಷಭ್‌ ಪಂತ್‌, ರವೀಂದ್ರ ಜಡೇಜಾ, ಜಸ್‌ಪ್ರಿತ್‌ ಬುಮ್ರಾ, ಮೊಹಮ್ಮದ್‌ ಶಮಿ, ಪ್ರಸಿದ್ಧ್‌ ಕೃಷ್ಣ, ಯಜ್ವೇಂದ್ರ ಚಹಲ್‌.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

T20 World Cup : ಭಾರತ- ಪಾಕಿಸ್ತಾನ ಟಿ20 ವಿಶ್ವ ಕಪ್​ ಪಂದ್ಯದ ಟಿಕೆಟ್ ಬೆಲೆ 1.8 ಕೋಟಿ ರೂಪಾಯಿ!

T20 World Cup :ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಟೂರ್ನಿಯಲ್ಲಿ ಹೆಚ್ಚು ಬೇಡಿಕೆಯ ಸ್ಪರ್ಧೆಗಳಲ್ಲಿ ಒಂದಾಗಿದೆ. ಜೂನ್ 09 ರಂದು ನ್ಯೂಯಾರ್ಕ್​​ನ ನಸ್ಸಾವು ಕೌಂಟಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜನೆಗೊಂಡಿದೆ. ಸಾಂಪ್ರದಾಯಿಕ ಎದುರಾಳಿಗಳ ಮುಖಾಮುಖಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಚಾರ ನಡೆಯುತ್ತಿದೆ.

VISTARANEWS.COM


on

t20 world cup
Koo

ಬೆಂಗಳೂರು: ಐಪಿಎಲ್​ ಟೂರ್ನಿ ಪ್ಲೇ ಆಫ್​ ಹಂತಕ್ಕೆ ಏರಿದ್ದು 2024ರ ಟಿ20 ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ವಿಶ್ವದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ತಮ್ಮ ನೆಚ್ಚಿನ ತಂಡಗಳ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಹೆಚ್ಚಿನ ಅಭಿಮಾನಿಗಳು ತಮ್ಮ ಮನೆಯಿಂದ ಕ್ರಿಯೆಯನ್ನು ಆನಂದಿಸಿದರೆ, ಕೆಲವು ಜನರು ಅಭಿಮಾನಕ್ಕಾಗಿ ಕ್ರೀಡಾಂಗಣದಲ್ಲೇ ಪಂದ್ಯ ವೀಕ್ಷಿಸಲು ಯೋಜಿಸಿದ್ದಾರೆ. ಪಂದ್ಯಾವಳಿಯು ಜೂನ್ 02 ರಂದು ಪ್ರಾರಂಭವಾಗಲಿದ್ದು, ಒಟ್ಟು 20 ತಂಡಗಳು ಭಾಗವಹಿಸಲಿವೆ . ಹೆಚ್ಚು ತಂಡಗಳು ಇರುವ ಕಾರಣ ಈ ಬಾರಿಯ ವಿಶ್ವ ಕಪ್​ ಪಂದ್ಯಗಳ ನೇರ ವೀಕ್ಷಿಸಲು ಸಾಕಷ್ಟು ಕಾಯುತ್ತಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಟೂರ್ನಿಯಲ್ಲಿ ಹೆಚ್ಚು ಬೇಡಿಕೆಯ ಸ್ಪರ್ಧೆಗಳಲ್ಲಿ ಒಂದಾಗಿದೆ. ಜೂನ್ 09 ರಂದು ನ್ಯೂಯಾರ್ಕ್​​ನ ನಸ್ಸಾವು ಕೌಂಟಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜನೆಗೊಂಡಿದೆ. ಸಾಂಪ್ರದಾಯಿಕ ಎದುರಾಳಿಗಳ ಮುಖಾಮುಖಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಚಾರ ನಡೆಯುತ್ತಿದೆ. ಎರಡೂ ದೇಶಗಳ ಅಭಿಮಾನಿಗಳು ದುಬಾರಿ ಟಿಕೆಟ್​ ದರವಿದ್ದರೂ ಜಗತ್ತಿನ ಸುಪ್ರಸಿದ್ಧ ಮುಖಾಮುಖಿಗೆ ತಮ್ಮ ಟಿಕೆಟ್ ಗಳನ್ನು ಕಾಯ್ದಿರಿಸಿದ್ದಾರೆ.

ದುಬಾರಿ ಟಿಕೆಟ್ ಬೆಲೆ

ನ್ಯೂಯಾರ್ಕ್​​ನಿಂದಲೇ ಆಟವನ್ನು ಲೈವ್ ಆಗಿ ನೋಡಬೇಕಾದರೆ ಅಭಿಮಾನಿಗಳು ಪ್ರತಿ ವ್ಯಕ್ತಿಗೆ ಯುಎಸ್ $ 2,500 (ರೂ ~ 200,000) ಖರ್ಚು ಮಾಡಬೇಕಾಗುತ್ತದೆ. ಅಂದರೆ ನಾಲ್ಕು ಜನರ ಗುಂಪು ಕನಿಷ್ಠ 8,50,00 ರೂಪಾಯಿಗಳನ್ನು ಖರ್ಚು ಮಾಡುತ್ತದೆ. ಆದಾಗ್ಯೂ, ಅಧಿಕೃತ ಸೈಟ್​ನಲ್ಲಿ ಟಿಕೆಟ್​ಗಳು ಸೋಲ್ಡ್ ಔಟ್ ಆಗಿರುವುದರಿಂದ, ಅನೇಕ ಅಭಿಮಾನಿಗಳು ಬ್ಲ್ಯಾಕ್​ನಲ್ಲಿ ಟಿಕೆಟ್ ಪಡೆಯಲು ನೋಡುತ್ತಿದ್ದಾರೆ. ಟಿಕೆಟ್​ಗಳ ದ್ವಿತೀಯ ಬೆಲೆಗಳು ಒಂದು ಟಿಕೆಟ್​ಗೆ 1.84 ಕೋಟಿ ರೂಪಾಯಿಗೆ ಏರಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:Virat kohli : ಆರ್​ಸಿಬಿ ಆಟಗಾರರಿಗೆ ಬ್ಯಾಟಿಂಗ್ ಅಭ್ಯಾಸ ನಡೆಸಲು ನೆರವಾದ ಕೊಹ್ಲಿ; ಇಲ್ಲಿದೆ ವಿಡಿಯೊ

2023ರ ಏಕದಿನ ವಿಶ್ವಕಪ್​ನಲ್ಲ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯದ ಒಂದು ಟಿಕೆಟ್ 57 ಲಕ್ಷ ರೂ.ಗೆ ಮಾರಾಟವಾಗಿತ್ತು. ಅದೇ ಸ್ಥಳದಲ್ಲಿ ನಡೆದ ಅಂತಿಮ ಪಂದ್ಯದಲ್ಲೂ ಟಿಕೆಟ್ ಬೆಲೆಗಳು ಅಕ್ರಮ ಕಾಳಸಂತೆಯಲ್ಲಿ ಏನಾದರೊಂದು ಏರಿಕೆಯಾಗಿದ್ದವು. ಆದಾಗ್ಯೂ, ಜಿದ್ದಾಜಿದ್ದಿನ ಪಂದ್ಯ ವೀಕ್ಷಿಸಲು ಅಭಿಮಾನಿಗಳು ಭಾರಿ ಮೊತ್ತವನ್ನು ಪಾವತಿಸಲು ಸ್ವಲ್ಪವೂ ಹಿಂಜರಿಯಲಿಲ್ಲ.

ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ

ನವದೆಹಲಿ: ಪಾಕಿಸ್ತಾನದ ಪರ್ವತಾರೋಹಿ ಶೆಹ್ರೋಜ್ ಕಾಶಿಫ್ ಅವರೊಂದಿಗೆ ಸಂವಹನ ನಡೆಸಿದ್ದ ವೇಳೆ ಭಾರತ ತಂಡದ ಸ್ಟಾರ್ ಬ್ಯಾಟರ್​ ವಿರಾಟ್​ ಕೊಹ್ಲಿ (Virat kohli) ಭವಿಷ್ಯದಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡುವ ಭರವಸೆಯಿದೆ ಎಂದು ಹೇಳಿರುವ ವಿಡಿಯೊ ವೈರಲ್ ಆಗಿದೆ. ಕಾಶಿಫ್ 2021 ರಲ್ಲಿ ಕೆ 2 ಶಿಖರವನ್ನು ಏರಿದ ವಿಶ್ವದ ಯುವ ಪರ್ವತಾರೋಹಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೇ ವೇಳೆ ಅವರಿಗೆ ಭಾರತೀಯ ಕ್ರಿಕೆಟ್ ಸೂಪರ್​ಸ್ಟಾರ್ ಜತೆ ಅವರೊಂದಿಗೆ ಮಾತನಾಡುವ ಅವಕಾಶ ಅವರಿಗೆ ಸಿಕ್ಕಿತು. ಅವರು 2022 ರಲ್ಲಿ ನೇಪಾಳದಲ್ಲಿದ್ದಾಗ ಭಾರತೀಯ ಕ್ರಿಕೆಟ್ ತಂಡದ ಜತೆ ಮಾತನಾಡಿದ್ದರು. ಈ ವೇಳೆ ಕೊಹ್ಲಿ ಅವರಿಗೆ ಪಾಕ್​ಗೆ ಹೋಗುವ ಭರವಸೆ ನೀಡಿದ್ದರು.

ಕಾಶಿಫ್ ವಿರಾಟ್ ಕೊಹ್ಲಿಯೊಂದಿಗೆ ಸಂಭಾಷಣೆ ನಡೆಸುವ ಬಯಕೆ ವ್ಯಕ್ತಪಡಿಸಿದ್ದರು. ಅಂತೆಯೇ ಪಾಕಿಸ್ತಾನದ ಪರ್ವತಾರೋಹಿ ಭಾರತದ ಮಾಜಿ ನಾಯಕನೊಂದಿಗೆ ಸಂಭಾಷಣೆ ನಡೆಸಿದ್ದರು ಅದರ ಕ್ಲಿಪ್ ಅನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

2022 ರಲ್ಲಿ ನಾನು ನೇಪಾಳದಲ್ಲಿದ್ದಾಗ, ಮೂಲತಃ ಭಾರತದಿಂದ ಬಂದ ಅಪರಿಚಿತರೊಬ್ಬರು (ರಾಜಕೀಯ ಕಾರಣಗಳಿಂದಾಗಿ ಅವರು ಯಾವುದೇ ತೊಂದರೆಗೆ ಸಿಲುಕದಂತೆ ಅವರ ಹೆಸರನ್ನು ಹೇಳುವುದಿಲ್ಲ) ನನ್ನ ಕೆಲಸವನ್ನು ಶ್ಲಾಘಿಸಿದ್ದರು ಎಂದು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Virat kohli : ಆರ್​ಸಿಬಿ ಆಟಗಾರರಿಗೆ ಬ್ಯಾಟಿಂಗ್ ಅಭ್ಯಾಸ ನಡೆಸಲು ನೆರವಾದ ಕೊಹ್ಲಿ; ಇಲ್ಲಿದೆ ವಿಡಿಯೊ

Virat Kohli: ಈ ದಕ್ಷಿಣ ಡರ್ಬಿ ಪಂದ್ಯಕ್ಕೆ ಮುಂಚಿತವಾಗಿ, ಆರ್​ಸಿಬಿ ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ ಅಭ್ಯಾಸದ ಸಮಯದಲ್ಲಿ ಬೌಲಿಂಗ್​ ಮಾಡುವ ಮತ್ತು ಥ್ರೋಡೌನ್​ ಮಾಡುವ ಮೂಲಕ ಬ್ಯಾಟರ್​ಗಳಿಗೆ ನೆರವಾದರು. ಪಂದ್ಯದ ಮುನ್ನಾದಿನದಂದು ಫ್ರಾಂಚೈಸಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಕೊಹ್ಲಿ ಸಹ ಆಟಗಾರ ಮಹಿಪಾಲ್ ಲೊಮ್ರೊರ್ ಅವರ ಥ್ರೋಡೌನ್ ಸ್ಪೆಷಲಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿರುವುದನ್ನು ತೋರಿಸಲಾಗಿದೆ.

VISTARANEWS.COM


on

Virat kohli
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಮೇ 18 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವು ಐಪಿಎಲ್​ನ (IPL 2024) ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಲಭ್ಯವಿರುವ ಕೊನೆಯ ಪ್ಲೇಆಫ್ ಸ್ಥಾನದ ಮೇಲೆ ಕಣ್ಣಿಟ್ಟಿರುವುದರಿಂದ ಈ ಪಂದ್ಯವು ನಿರ್ಣಾಯಕವಾಗಿದೆ. ಇದನ್ನು ಸದರ್ನ್​ ಡರ್ಬಿ ಎಂದು ಕರೆಯಲಾಗಿದ್ದು ಪಂದ್ಯ ಅತ್ಯಂತ ರೋಚಕವಾಗಿರುವುದು ಖಚಿತ. ಅದರಲ್ಲೂ ಆರ್​ಸಿಬಿ ತಂಡಕ್ಕೆ ದೊಡ್ಡ ಸವಾಲಾಗಿದೆ. ಅದೇ ರೀತಿ ವಿರಾಟ್ ಕೊಹ್ಲಿಯ (Virat kohli) ಮೇಲೆ ಜವಾಬ್ದಾರಿ ಹೆಚ್ಚಿದೆ.

ಈ ದಕ್ಷಿಣ ಡರ್ಬಿ ಪಂದ್ಯಕ್ಕೆ ಮುಂಚಿತವಾಗಿ, ಆರ್​ಸಿಬಿ ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ ಅಭ್ಯಾಸದ ಸಮಯದಲ್ಲಿ ಬೌಲಿಂಗ್​ ಮಾಡುವ ಮತ್ತು ಥ್ರೋಡೌನ್​ ಮಾಡುವ ಮೂಲಕ ಬ್ಯಾಟರ್​ಗಳಿಗೆ ನೆರವಾದರು. ಪಂದ್ಯದ ಮುನ್ನಾದಿನದಂದು ಫ್ರಾಂಚೈಸಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಕೊಹ್ಲಿ ಸಹ ಆಟಗಾರ ಮಹಿಪಾಲ್ ಲೊಮ್ರೊರ್ ಅವರ ಥ್ರೋಡೌನ್ ಸ್ಪೆಷಲಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿರುವುದನ್ನು ತೋರಿಸಲಾಗಿದೆ. ಕೊಹ್ಲಿ ಕೇವಲ ಥ್ರೋಡೌನ್​​ಗಳನ್ನು ನೀಡುತ್ತಿರಲಿಲ್ಲ; ಅವರು ಸಕ್ರಿಯವಾಗಿ ಲೊಮ್ರೊರ್​ಗೆ ತರಬೇತಿ ನೀಡುತ್ತಿದ್ದರು, ಸಲಹೆ ನೀಡುತ್ತಿದ್ದರು ಮತ್ತು ದೊಡ್ಡ ಶಾಟ್​ಗಳನ್ನು ಆಡಲು ಪ್ರೋತ್ಸಾಹಿಸುತ್ತಿದ್ದರು.

ಸ್ಫೋಟಕ ಇಂಗ್ಲಿಷ್ ಆಲ್ರೌಂಡರ್ ವಿಲ್ ಜಾಕ್ಸ್ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ಈ ಪಂದ್ಯದ ನಡುವೆ ಅಭಿಮಾನಿಗಳ ಊಹಾಪೋಹಗಳನ್ನು ಹುಟ್ಟುಹಾಕಿದೆ. ರಾಷ್ಟ್ರೀಯ ಕರ್ತವ್ಯಗಳಿಂದಾಗಿ ಜಾಕ್ಸ್ ಈಗಾಗಲೇ ತಂಡದ ಶಿಬಿರವನ್ನು ತೊರೆದಿರುವುದರಿಂದ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಕನಿಷ್ಠ ಒಂದು ಬದಲಾವಣೆಯನ್ನು ಮಾಡಬೇಕಾಗುತ್ತದೆ.

ಇದನ್ನೂ ಓದಿ: IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

ಪ್ರಸ್ತುತ ಐಪಿಎಲ್ 2024 ಲೀಗ್ ಅಂಕಗಳನ್ನು ಗಮನಿಸಿದರೆ ಇದು ನಾಕೌಟ್ ಪಂದ್ಯವಾಗಿ ಕಾರ್ಯನಿರ್ವಹಿಸುವುದರಿಂದ ಆರ್​​ಸಿಬಿ ಮತ್ತು ಸಿಎಸ್ಕೆ ತಂಡಗಳ ಉತ್ಸಾಹ ಹೆಚ್ಚಾಗಿದೆ. ಆರ್​ಸಿಬಿ ಪರಿಸ್ಥಿತಿ ವಿಶೇಷವಾಗಿ ಸವಾಲಾಗಿದೆ. ಒಂದು ಗೆಲುವು ಸಿಎಸ್​ಕೆ ತಂಡದ ಪ್ಲೇಆಫ್​​ ಸ್ಥಾನವನ್ನು ಭದ್ರಪಡಿಸುತ್ತದೆಯಾದರೂ, ಆರ್​ಸಿಬಿಗೆ ಪಂದ್ಯವನ್ನು ಗೆಲ್ಲುವುದರ ಜೊತೆಗೆ ತಮ್ಮ ನೆಟ್ ರನ್ ರೇಟ್ ಅನ್ನು ಸಹ ಪರಿಗಣಿಸಬೇಕು.

ಈ ಪಂದ್ಯದಲ್ಲಿ ತವರಿನ ಅಭಿಮಾನಿಗಳು ಕೊಹ್ಲಿಯಿಂದ ಅದ್ಭುತ ಪ್ರದರ್ಶನವನ್ನು ಎದುರು ನೋಡುತ್ತಿದ್ದಾರೆ.

ಈ ಐಪಿಎಲ್ ಋತುವಿನಲ್ಲಿ ಪ್ರಸ್ತುತ ಆರೆಂಜ್ ಕ್ಯಾಪ್ ಹೊಂದಿರುವ ಕೊಹ್ಲಿ 13 ಪಂದ್ಯಗಳಲ್ಲಿ 155.16 ಸ್ಟ್ರೈಕ್ ರೇಟ್​​ನಲ್ಲಿ 661 ರನ್ ಗಳಿಸಿದ್ದಾರೆ. ಆರ್ಸಿಬಿ ಇತಿಹಾಸದಲ್ಲಿ ಒಂಬತ್ತನೇ ಬಾರಿಗೆ ಐಪಿಎಲ್ ಪ್ಲೇಆಫ್​​ಗೆ ಕೊಂಡೊಯ್ಯಲು ಕೊಹ್ಲಿ ಅವರ ಗಮನಾರ್ಹ ಫಾರ್ಮ್ ನಿರ್ಣಾಯಕವಾಗಿದೆ. ಸಿಎಸ್ಕೆ ವಿರುದ್ಧ ಮತ್ತೊಂದು ಪಂದ್ಯ ವಿಜೇತ ಪ್ರದರ್ಶನವನ್ನು ನೀಡಲು ತವರಿನ ಪ್ರೇಕ್ಷಕರು ಅವರನ್ನು ಎದುರು ನೋಡುತ್ತಿದ್ದಾರೆ.

Continue Reading

ಕ್ರೀಡೆ

RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

RCB vs CSK: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

VISTARANEWS.COM


on

RCB vs CSK
Koo

ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ಆರ್​ಸಿಬಿ(Royal Challengers Bengaluru) ಇಂದು (ಮೇ​ 18) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ವಿರುದ್ಧ ಕಣಕ್ಕಿಳಿಯಲಿದೆ. ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಿಲಾಗಿದ್ದು ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಪೂರ್ಣವಾಗಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಇಲ್ಲಿ ಪಾರ್ಕಿಂಗ್​ ನಿಷೇಧ


ನಗರದ ಕ್ರೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್​ ನಿಷೇಧ ಮಾಡಲಾಗಿದೆ.

ಎಲ್ಲಿ ಪಾರ್ಕಿಂಗ್​ ಮಾಡಬಹುದು?


ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ) ಈ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಮೆಟ್ರೋ ಸೇವೆ

ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಇದನ್ನೂ ಓದಿ IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ ( QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

Continue Reading

ಪ್ರಮುಖ ಸುದ್ದಿ

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

IPL 2024: ಮೊದಲ ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ ನಷ್ಟಕ್ಕೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

ipl 2024
Koo

ಮುಂಬೈ: ಹಾರ್ದಿಕ್​ ಪಾಂಡ್ಯಗೆ ನಾಯಕತ್ವ ನೀಡಿದ್ದ ಮುಂಬೈ ಇಂಡಿಯನ್ಸ್ ತಂಡದ ಯೋಜನೆ ಸಂಪೂರ್ಣವಾಗಿ ಬುಡಮೇಲಾಗಿದೆ. ಹೀಗಾಗಿ ಐಪಿಎಲ್ 17ನೇ ಆವೃತ್ತಿಯ (IPL 2024) 14 ಪಂದ್ಯಗಳಲ್ಲಿ 10 ಸೋಲು ಮತ್ತು ಕೇವಲ 4 ಗೆಲುವಿನೊಂದಿಗೆ 8 ಅಂಕಗಳೊಂದಿಗೆ ಅಭಿಯಾನ ಮುಗಿಸಿದೆ. ತವರಿನಲ್ಲಿ ನಡೆದ ಕೊನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿಯೂ 18 ರನ್​ಗಳ ಸೋಲಿಗೆ ಒಳಗಾಗಿದೆ. ಎರಡೂ ತಂಡಗಳಿಗೆ ಇದು ಕೊನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಗೆದ್ದಿರುವ ಲಕ್ನೊ ಸೂಪರ್ ಜೈಂಟ್ಸ್ ತಂಡ ಒಟ್ಟು 7 ಗೆಲುವಿನೊಂದಿಗೆ 14 ಅಂಕಗಳ ಸಮೇತ ಏಳನೇ ಸ್ಥಾನ ಪಡೆದುಕೊಂಡಿದೆ. ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಬ್ಯಾಟರ್​ಗಳು ಮತ್ತೊಂದು ಬಾರಿ ತಮ್ಮ ಅಸಮರ್ಥತೆಯನ್ನು ಪ್ರದರ್ಶಿಸಿ ಅತ್ಯಂತ ನಿರಾಶಾದಾಯಕ ಸೀಸನ್ ಅನ್ನು ಎದುರಿಸಿದರು.

ಇಲ್ಲಿನ ವಾಖೆಂಡೆ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಚೇಸಿಂಗ್ ಸುಲಭ ಎಂಬ ಯೋಜನೆಯೊಂದಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ ನಷ್ಟಕ್ಕೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಚೇಸಿಂಗ್ ಸುಲಭ ಎಂದುಕೊಂಡಿದ್ದ ಮುಂಬೈ ತಂಡಕ್ಕೆ ಮಧ್ಯದಲ್ಲಿ ಸುರಿದ ಮಳೆ ಅಡಚಣೆ ಮಾಡಿತು. ಏಕಾಏಕಿ ವಾತಾವರಣ ತಂಪುಗೊಂಡ ಕಾರಣ ಇಬ್ಬನಿ ಪರಿಣಾಮವನ್ನು ಅನುಭವಿಸಿ ಸುಲಭವಾಗಿ ಸ್ಕೋರ್ ಬಾರಿಸಿ ಗೆಲ್ಲುವ ಯೋಜನೆ ವಿಫಲಗೊಂಡಿತು.

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಮುಂಬೈ ತಂಡ ಅದ್ಭುತ ಆರಂಭ ಪಡೆಯಿತು. ರೋಹಿತ್ ಶರ್ಮಾ 38 ಎಸೆತಕ್ಕೆ 6 ರನ್ ಬಾರಿಸಿ ಮಿಂಚಿದರು. ಡೀವಾಲ್ಡ್​ ಬ್ರೇವಿಸ್​ 23 ರನ್ ಹೊಡೆದರು. ಈ ಜೋಡಿ 8. 4 ಓವರ್​ಗಳಲ್ಲಿ ಮೊದಲ ವಿಕೆಟ್​ಗೆ 84 ರನ್ ಬಾರಿಸಿ ಗೆಲುವಿನ ನಿರೀಕ್ಷೆ ಹುಟ್ಟಿಸಿತು. ಆದರೆ, ಆ ಬಳಿಕ ಮುಂಬೈ ತಂಡ ಬ್ಯಾಟಿಂಗ್ ವೈಫಲ್ಯ ಪ್ರದರ್ಶನಗೊಂಡಿತು. ಸೂರ್ಯಕುಮಾರ್ ಶೂನ್ಯಕ್ಕೆ ಔಟಾದರೆ ಇಶಾನ್ ಕಿಶನ್ 14 ರನ್ ಬಾರಿಸಿದರು. ಹಾರ್ದಿಕ್ ಪಾಂಡ್ಯ ಕೊಡುಗೆ ಕೇವಲ 16 ರನ್​. ನೆಹಲ್ ವದೇರಾ 1 ರನ್​ಗೆ ಔಟಾಗುವ ಮೂಲಕ ಮುಂಬೈ ಆಸೆ ಕಮರಿತು. ಏತನ್ಮದ್ಯೆ ಮಧ್ಯಮ ಕ್ರಮಾಂಕದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ನಮನ್​ ಧಿರ್ 28 ಎಸೆತಕ್ಎಕ 68 ರನ್ ಬಾರಿಸಿದರು. ಅದರೆ ಅವರಿಗೆ ಗೆಲುವು ತಂದು ಕೊಡಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

ಪೂರನ್ ಅಬ್ಬರ್​

ಅದಕ್ಕಿಂತ ಮೊದಲು ಬ್ಯಾಟ್ ಮಾಡಿದ ಲಕ್ನೊ ಪರ ಆರಂಭಿಕ ಬ್ಯಾಟರ್ ರಾಹುಲ್​ ಕಷ್ಟಪಟ್ಟು 55 ರನ್ ಬಾರಿಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ನಿಕೋಲಸ್​ ಪೂರನ್ 29 ಎಸೆತಗಳಿಗೆ 75 ರನ್​ ಬಾರಿಸಿ ದೊಡ್ಡ ಮೊತ್ತ ಪೇರಿಸಲು ನೆರವಾದರು. ಕನ್ನಡಿಗ ದೇವದತ್​ ಪಡಿಕ್ಕಲ್​ ಮತ್ತೊಂದ ಬಾರಿ ವಿಫಲಗೊಂಡು ಶೂನ್ಯಕ್ಕೆ ಔಟಾದರೆ ಸ್ಟೊಯ್ನಿಸ್ 28 ರನ್ ಚಚ್ಚಿದರು. ದೀಪಕ್​ ಹೂಡ 11 ರನ್ ಹೊಡೆದರೆ ಕೊನೆಯಲ್ಲಿ ಆಯುಷ್ ಬದೊನಿ 22 ರನ್​ ಔಟಾದರೆ. ಕೃಣಾಲ್ ಪಾಂಡ್ಯ 12 ರನ್​ಗೆ ಔಟಾದರು.

Continue Reading
Advertisement
Fire Accident
ದೇಶ3 mins ago

Fire Accident: ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಕೊಂಡ ಬೆಂಕಿ; 8 ಮಂದಿ ಭಕ್ತರ ಸಜೀವ ದಹನ

SSLC exam
ಪ್ರಮುಖ ಸುದ್ದಿ5 mins ago

SSLC Exam- 2: ಜೂ.14ರಿಂದ 2ನೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

t20 world cup
ಕ್ರಿಕೆಟ್8 mins ago

T20 World Cup : ಭಾರತ- ಪಾಕಿಸ್ತಾನ ಟಿ20 ವಿಶ್ವ ಕಪ್​ ಪಂದ್ಯದ ಟಿಕೆಟ್ ಬೆಲೆ 1.8 ಕೋಟಿ ರೂಪಾಯಿ!

drowned 4 death in kolhapur
ಕ್ರೈಂ32 mins ago

Drowned: ಬಟ್ಟೆ ತೊಳೆಯಲು ಹೋಗಿ ನಾಲ್ವರು ಜಲ ಸಮಾಧಿ

Virat kohli
ಪ್ರಮುಖ ಸುದ್ದಿ38 mins ago

Virat kohli : ಆರ್​ಸಿಬಿ ಆಟಗಾರರಿಗೆ ಬ್ಯಾಟಿಂಗ್ ಅಭ್ಯಾಸ ನಡೆಸಲು ನೆರವಾದ ಕೊಹ್ಲಿ; ಇಲ್ಲಿದೆ ವಿಡಿಯೊ

Crime News
ಕ್ರೈಂ48 mins ago

Crime News: ಪತ್ನಿಯನ್ನು ಕೊಂದು ಶವದ ಫೋಟೊ ಸಂಬಂಧಿಕರಿಗೆ ಕಳುಹಿಸಿ ನೇಣಿಗೆ ಶರಣಾದ ಪತಿ; ಅನಾಥವಾಯ್ತು ಹೆಣ್ಣು ಮಗು

RCB vs CSK
ಕ್ರೀಡೆ52 mins ago

RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

sarjapura boy murder case
ಕ್ರೈಂ1 hour ago

Murder Case: ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

Skin Care Tips
ಆರೋಗ್ಯ2 hours ago

Skin Care Tips: ಬಿಸಿಲಿನಿಂದ ಚರ್ಮ ಕಪ್ಪಾಗಿದೆಯಾ? ಇಲ್ಲಿದೆ ಸರಳ ಮನೆಮದ್ದು

karnataka Weather Forecast
ಮಳೆ2 hours ago

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ12 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌