PM Modi At Ahmedabad: ಅಹಮದಾಬಾದ್​ ಸ್ಟೇಡಿಯಮ್​ನಲ್ಲಿ ಮೋದಿ ಮೇನಿಯಾ Vistara News
Connect with us

ಕ್ರಿಕೆಟ್

PM Modi At Ahmedabad: ಅಹಮದಾಬಾದ್​ ಸ್ಟೇಡಿಯಮ್​ನಲ್ಲಿ ಮೋದಿ ಮೇನಿಯಾ

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಅಹಮದಾಬಾದ್​ ಟೆಸ್ಟ್ ಪಂದ್ಯಕ್ಕೆ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi At Ahmedabad) ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಟನಿ ಆಲ್ಬನೀಸ್​ ಸ್ಟೇಡಿಯಮ್​ಗೆ ಕಳೆ ತಂದರು.

VISTARANEWS.COM


on

PM Modi At Ahmedabad
Koo
PM Modi At Ahmedabad

ಸ್ಟೇಡಿಯಮ್​ಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಸ್ವಾಗತ

PM Modi At Ahmedabad

ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಆಲ್ಬನೀಸ್​ ಜತೆ ಮೈದಾನದಲ್ಲೊಂದು ಸುತ್ತು

PM Modi At Ahmedabad

ಕ್ರಿಕೆಟಿಗರ ಜತೆ ನಿಂತು ರಾಷ್ಟ್ರಗೀತೆ ಹಾಡಿದ ಪ್ರಧಾನಿ ಮೋದಿ

PM Modi At Ahmedabad

ವಿರಾಟ್​ ಕೊಹ್ಲಿಗೆ ಹಸ್ತಲಾಘವ ನೀಡಿದ ಪ್ರಧಾನಿ ಮೋದಿ

PM Modi At Ahmedabad

ಕ್ಯಾಪ್ಟನ್​ ರೋಹಿತ್​ ಶರ್ಮಗೆ ಶುಭಾಶಯ ಹೇಳಿದ ಮೋದಿ

PM Modi At Ahmedabad

ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಜತೆ ಸೆಲ್ಫಿಗೆ ಪೋಸ್​

PM Modi At Ahmedabad

ಮೈದಾನದ ಸುತ್ತಲೂ ಟೈಟ್​ ಸೆಕ್ಯುರಿಟಿ

ಕ್ರಿಕೆಟ್

Zaheer Khan: ಟೀಮ್​ ಇಂಡಿಯಾ ಇನ್ನೂ ಹಳೆಯ ಬೋಟ್​ನಲ್ಲೇ ಪ್ರಯಾಣಿಸುತ್ತಿದೆ; ಜಹೀರ್​ ಖಾನ್​ ಹೀಗೆ ಹೇಳಿದ್ದು ಏಕೆ?

ಇದೇ ವರ್ಷ ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವಕಪ್​ಗೆ ತಯಾರಿ ನಡೆಸುತ್ತಿರುವ ಟೀಮ್ ಇಂಡಿಯಾ ಇನ್ನೂ ಹಳೆಯ ಬೋಟ್​ನಲ್ಲೇ ಪ್ರಯಾಣಿಸುತ್ತಿದೆ ಎಂದು ಜಹೀರ್ ಖಾನ್ ಹೇಳಿದ್ದಾರೆ.

VISTARANEWS.COM


on

Edited by

Zaheer Khan Team India is still sailing in an old boat Why did Zaheer Khan say this
Koo

ಮುಂಬಯಿ: ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆದ ಏಕದಿನ ಸರಣಿಯಲ್ಲಿ ಭಾರತ ಸೋಲು ಕಂಡ ಬಳಿಕ ಏಕದಿನ ವಿಶ್ವಕಪ್​ನಲ್ಲಿ ಟೀಮ್​ ಇಂಡಿಯಾದ ಪ್ರದರ್ಶನದ ಬಗ್ಗೆ ಹಲವು ಕ್ರಿಕೆಟ್​ ಪಂಡಿತರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿಲು ಆರಂಭಿಸಿದ್ದಾರೆ. ಇದೀಗ ಈ ಸಾಲಿಗೆ 2011ರ ವಿಶ್ವ ಕಪ್(2019 World Cup)​ ವಿಜೇತ ತಂಡ ವೇಗಿ ಜಹೀರ್ ಖಾನ್​​(Zaheer Khan) ಕೂಡ ಸೇರಿದ್ದಾರೆ. ಇದೇ ವರ್ಷ ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವಕಪ್​ಗೆ ತಯಾರಿ ನಡೆಸುತ್ತಿರುವ ಟೀಮ್ ಇಂಡಿಯಾ ಇನ್ನೂ ಹಳೆಯ ಬೋಟ್​ನಲ್ಲೇ ಪ್ರಯಾಣಿಸುತ್ತಿದೆ ಎಂದು ಹೇಳಿದ್ದಾರೆ.

ಕ್ರಿಕ್​ ಬಝ್​ ಜತೆಗಿನ ಸಂದರ್ಶನದಲ್ಲಿ ಮಾತನಾಡಿದ ಜಹೀರ್ ಖಾನ್​ , “ಟೀಮ್​ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಖಂಡಿತವಾಗಿಯೂ ಮತ್ತೊಮ್ಮೆ ಚಿಂತಿಸುವ ಅಗತ್ಯವಿದೆ. ನಾಲ್ಕನೇ ಕ್ರಮಾಂಕದ ಆಯ್ಕೆಯ ಲೆಕ್ಕಾಚಾರ ಇನ್ನೂ ಬಗೆಹರಿದಿಲ್ಲ. ಇದು 2019ರ ವಿಶ್ವಕಪ್​ನಲ್ಲೂ ಚರ್ಚೆಗೆ ಕಾರಣವಾಗಿತ್ತು. ನಾಲ್ಕು ವರ್ಷಗಳ ಬಳಿಕವೂ ನಾವು ಅದೇ ದೋಣಿಯಲ್ಲಿದ್ದೇವೆ. ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕದ ಆಟಗಾರ ಎಂದು ನನಗೆ ಗೊತ್ತು. ಆದರೆ ಅವರು ಈಗ ದೀರ್ಘಕಾಲದವರೆಗೆ ಗಾಯಗೊಂಡಿದ್ದರೆ. ಹೀಗಾಗಿ ಇದಕ್ಕೆ ಶೀಘ್ರದಲ್ಲೇ ಉತ್ತರ ಕಂಡುಕೊಳ್ಳಬೇಕಾದ ಸಮಯ ಬಂದಿದೆ” ಎಂದು ಬಿಸಿಸಿಐ ಮತ್ತು ಆಯ್ಕೆ ಸಮಿತಿಗೆ ಜಹೀರ್​ ಸಲಹೆಯೊಂದನ್ನು ನೀಡಿದ್ದಾರೆ.

ಭಾರತದ ಏಕದಿನ ತಂಡದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡುವ ನಿರೀಕ್ಷೆಯಲ್ಲಿದ್ದ ಸೂರ್ಯಕುಮಾರ್ ಯಾದವ್(Suryakumar Yadav) ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಸರಣಿಯಲ್ಲಿ ಸತತ ಮೂರು ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದರು. ಇದು ಅವರ ಏಕದಿನ ಭವಿಷ್ಯದ ಮೇಲೆ ಗಂಭೀರ ಪ್ರಶ್ನೆಗಳು ಏಳುವಂತೆ ಮಾಡಿದೆ. ಇನ್ನೊಂದೆಡೆ ಗಾಯದ ಸಮಸ್ಯೆಯೂ ಕಾಡುತ್ತಿದೆ. ಒಟ್ಟಾರೆ ಭಾರತದಲ್ಲಿ ಸದ್ಯ ಕೊಹ್ಲಿ ಮತ್ತು ರೋಹಿತ್​ ಅವರನ್ನು ಹೊರತುಪಡಿಸಿ ಇನಿಂಗ್ಸ್​ ಕಟ್ಟುವ ಆಟಗಾರರ ಕೊರತೆ ಎದ್ದು ಕಾಣುತ್ತಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ World Cup 2023 : ಟೀಕೆ ನಿಲ್ಲಿಸಿ, ವಿಶ್ವ ಕಪ್ ಗೆಲ್ಲಲಿದೆ ಭಾರತ ತಂಡ ಎಂದಿದ್ದಾರೆ ಮಾಜಿ ಹೆಡ್​​ ಕೋಚ್​

ನಾವು ವಿಶ್ವ ಕಪ್ ಗೆಲ್ಲುವ ಸಮಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕೊಹ್ಲಿ, ಧೋನಿ, ಯುವರಾಜ್​ ಸಿಂಗ್​, ಸುರೇಶ್​ ರೈನಾ ಅವರಂತರ ಶ್ರೇಷ್ಠ ಆಟಗಾರರನ್ನು ಹೊಂದಿದ್ದೆವು. ಆದರೆ ಈಗ ಭಾರತದಲ್ಲಿ ಇಂತಹ ಮ್ಯಾಚ್​ ವಿನ್ನಿಂಗ್​ ಮತ್ತು ಇನಿಂಗ್ಸ್​ ಬೆಳೆಸುವ ಆಟಗಾರರ ಕೊರತೆ ಎದ್ದು ಕಾಣುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಾಣದ ಹೊರತು ಭಾರತ ವಿಶ್ವ ಕಪ್​ ಗೆಲ್ಲುವುದು ಅನುಮಾನ ಎಂದು ಜಹೀರ್​ ಖಾನ್​ ಅಭಿಪ್ರಾಯಪಟ್ಟರು.

Continue Reading

ಕ್ರಿಕೆಟ್

WPL 2023: ಫೈನಲ್​ಗೆ ಲಗ್ಗೆಯಿಟ್ಟ ಖಷಿಯಲ್ಲಿ ತಂಡದ ಆಟಗಾರ್ತಿಯರೊಂದಿಗೆ ಕುಣಿದು ಕುಪ್ಪಳಿಸಿದ ನೀತಾ ಅಂಬಾನಿ; ವಿಡಿಯೊ ವೈರಲ್

ಮುಂಬೈ ತಂಡದ ಆಟಗಾರ್ತಿಯರೊಂದಿಗೆ ನೀತಾ ಅಂಬಾನಿ ಅವರು ಡ್ಯಾನ್ಸ್​ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

VISTARANEWS.COM


on

Edited by

WPL 2023 Nita Ambani dances with team players in Khasi in finals The video is viral
Koo

ಮುಂಬಯಿ: ಯುಪಿ ವಾರಿಯರ್ಸ್​ ವಿರುದ್ಧ ಶುಕ್ರವಾರ ನಡೆದ ಎಲಿಮಿನೇಟರ್​​ ಪಂದ್ಯದಲ್ಲಿ 72 ರನ್​ಗಳ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್​(Mumbai Indians) ತಂಡ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ(WPL 2023) ಫೈನಲ್ ಪ್ರವೇಶಿಸಿದೆ. ಇದೇ ಖಷಿಯಲ್ಲಿ ತಂಡದ ಮಾಲಕಿಯಾಗಿರುವ ನೀತಾ ಅಂಬಾನಿ ಅವರು ಆಟಗಾರ್ತಿಯರೊಂದಿಗೆ ಡ್ಯಾನ್ಸ್​ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

​ಶುಕ್ರವಾರ ನಡೆದ ಈ ಪಂದ್ಯದಲ್ಲಿ ಟಾಸ್​ ಸೂತು ಮೊದಲು ಬ್ಯಾಟಿಂಗ್​ ನಡೆಸಿದ ಮುಂಬೈ ಇಂಡಿಯನ್ಸ್​ ತಂಡ ನ್ಯಾಟ್​ ಸ್ಕಿವರ್​-ಬ್ರಂಟ್(Nat Sciver-Brunt)​ ಅವರ ಬ್ಯಾಟಿಂಗ್​ ಸಾಹಸದಿಂದ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 182 ರನ್​ ಬಾರಿಸಿ ಸವಾಲೊಡ್ಡಿತು. ದೊಡ್ಡ ಮೊತ್ತವನ್ನು ಕಂಡು ಕಂಗಾಲಾದ ಯುಪಿ ವಾರಿಯರ್ಸ್​ ತಂಡ 17.4 ಓವರ್​ಗಳಲ್ಲಿ ಕೇವಲ 110 ರನ್​ಗೆ ಆಲೌಟ್​ ಆಗುವ ಮೂಲಕ ಸೋಲೊಪ್ಪಿಕೊಂಡಿತು. ಮುಂಬೈ ಈ ಗೆಲುವಿನೊಂದಿಗೆ ಫೈನಲ್​ ಪ್ರವೇಶಿಸಿತು. ಭಾನುವಾರ ನಡೆಯುವ ಫೈನಲ್​ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಉಭಯ ತಂಡಗಳ ಈ ಹೋರಾಟ ಬ್ರಬೋರ್ನ್ ಕ್ರೀಡಾಂಗಣದಲ್ಲಿ.

ಫೈನಲ್​ ಪ್ರವೇಶ ಪಡೆದ ಸಂಭ್ರಮದಲ್ಲಿ ನೀತಾ ಅಂಬಾನಿ ಅವರು ತಂಡದ ಎಲ್ಲ ಸದಸ್ಯರ ಹೆಸರನ್ನು ಕೂಗುವ ಮೂಲಕ ಡ್ಯಾನ್ಸ್​ ಮಾಡಿದ್ದಾರೆ. ಜತೆಗೆ ತಂಡದ ಆಟಗಾರ್ತಿಯರೂ ಡ್ಯಾನ್ಸ್​ ಮಾಡುವಂತೆ ಹುರಿದುಂಬಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಹ್ಯಾಟ್ರಿಕ್​ ವಿಕೆಟ್​ ಕಿತ್ತು ದಾಖಲೆ ಬರೆದ ಇಸ್ಸಿ ವಾಂಗ್​

ಇದೇ ಪಂದ್ಯದಲ್ಲಿ ಹ್ಯಾಟ್ರಿಕ್​ ವಿಕೆಟ್​ ಕಿತ್ತ ಇಂಗ್ಲೆಂಡ್​ ಕ್ರಿಕೆಟ್​ ತಂಡದ ಆಟಗಾರ್ತಿ ಇಸ್ಸಿ ವಾಂಗ್(Issy Wong) ಅವರು ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್(WPL 2023)​ ಲೀಗ್​ನಲ್ಲಿ ಇತಿಹಾಸ ನಿರ್ಮಿಸಿದರು. ಹ್ಯಾಟ್ರಿಕ್​ ಸಹಿತ​ 4 ವಿಕೆಟ್​ ಕಿತ್ತು ಮಿಂಚಿದರು.

Continue Reading

ಕ್ರಿಕೆಟ್

NZ VS SL: ರನೌಟ್​ ಆದರೂ ಮೂರನೇ ಅಂಪೈರ್​ನಿಂದ ನಾಟೌಟ್​; ಹೊಸ ವಿವಾದಕ್ಕೆ ಕಾರಣವಾದ ಲಂಕಾ-ಕಿವೀಸ್​ ಏಕದಿನ ಪಂದ್ಯ

ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ನ್ಯೂಜಿಲ್ಯಾಂಡ್​ ತಂಡ 198 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

VISTARANEWS.COM


on

Edited by

NZ VS SL Runout but not out by third umpire Lanka Kiwis ODI match that caused a new controversy
Koo

ಆಕ್ಲೆಂಡ್​: ಪ್ರವಾಸಿ ಶ್ರೀಲಂಕಾ ಮತ್ತು ನ್ಯೂಜಿಲ್ಯಾಂಡ್(NZ VS SL)​ ವಿರುದ್ಧದ ಏಕದಿನ ಪಂದ್ಯದಲ್ಲಿ ಲಂಕಾ ಆಟಗಾರ ರನೌಟ್​ ಆದ ತೀರ್ಪಿನ ಘಟನೆಯೊಂದು ಇದೀಗ ಕ್ರಿಕೆಟ್​ ಕೇತ್ರದಲ್ಲಿ ಹೊಸ ವಿವಾದವೊಂದನ್ನು ಹುಟ್ಟುಹಾಕಿದೆ.

ಆಕ್ಲೆಂಡ್​ನ ಈಡನ್​ ಪಾರ್ಕ್​ನಲ್ಲಿ ಶನಿವಾರ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆತಿಥೇಯ ನ್ಯೂಜಿಲ್ಯಾಂಡ್​ ತಂಡ 49.3 ಓವರ್​ಗಳಲ್ಲಿ 274 ರನ್​ಗೆ ಆಲೌಟ್​ ಆಯಿತು. ಜವಾಬಿತ್ತ ಶ್ರೀಲಂಕಾ ತಂಡ ಹೆನ್ರಿ ಶಿಪ್ಲಿ ಅವರ ಘಾತಕ ಬೌಲಿಂಗ್​ ದಾಳಿಗೆ ನಲುಗಿ 19.5 ಓವರ್​ಗಳಲ್ಲಿ ಕೇವಲ 76 ರನ್​ಗೆ ಸರ್ವಪತನ ಕಂಡಿತು. ಕಿವೀಸ್​ 198 ರನ್​ಗಳ ಭರ್ಜರಿ ಗೆಲುವು ದಾಖಲಿಸಿತು.

ನ್ಯೂಜಿಲ್ಯಾಂಡ್​ ತಂಡ ಈ ಪಂದ್ಯದಲ್ಲಿ ದೊಡ್ಡ ಮೊತ್ತದಿಂದ ಗೆಲುವು ಸಾಧಿಸಿದರೂ ಗೆಲುವಿಗಿಂತ ದೊಡ್ಡ ಸುದ್ದಿಯಾದದ್ದು ಈ ಪಂದ್ಯದಲ್ಲಿ ನಡೆದ ಒಂದು ರನೌಟ್​. ಶ್ರೀಲಂಕಾದ ಬ್ಯಾಟಿಂಗ್​ ಇನಿಂಗ್ಸ್​ನ 18ನೇ ಓವರ್‌ನಲ್ಲಿ ಟಿಕ್ನರ್(Blair Tickner) ಎಸೆತಕ್ಕೆ ಬ್ಯಾಟ್​ ಬೀಸಿದ ಕರುಣಾರತ್ನೆ(Karunaratne) ಮಿಡ್-ವಿಕೆಟ್​ ಕಡೆಗೆ ಬಾರಿಸಿ ರನ್ ಕದಿಯಲು ಓಡಿದರು. ಆದರೆ ಚುರುಕಿ ಫೀಲ್ಡಿಂಗ್​ ನಡೆಸಿದ ಕಿವೀಸ್​ ಆಟಗಾರ ಚೆಂಡನ್ನು ಹಿಡಿದು ಟಿಕ್ನರ್​ ಕಡೆಗೆ ಎಸೆದರು. ತಕ್ಷಣ ಚೆಂಡನ್ನು ಹಿಡಿದ ಟಿಕ್ನರ್ ರನೌಟ್ ಮಾಡಿದರು.

ರನೌಟ್​ ನಿರ್ಧಾರವನ್ನು ಪರಿಶೀಲನೆ ನಡೆಸಲು ಪೀಲ್ಡ್​ ಅಂಪೈರ್​ ಮೂರನೇ ಅಂಪೈರ್​ ಮೊರೆ ಹೋದರು. ಈ ವೇಳೆ ಕರುಣಾರತ್ನೆ ಕ್ರೀಸ್​ನಿಂದ ದೂರವಿರುವುದು ಸ್ಪಷ್ಟವಾಗಿ ಗೋಚರಿತು. ಇದೇ ವೇಳೆ ಲಂಕಾ ಬ್ಯಾಟರ್​ ಕರುಣಾರತ್ನೆ ಕೂಡ ಪೆವಿಲಿಯನ್​ ಕಡೆಗೆ ತೆರಳಲಾರಂಭಿಸಿದರು. ಆದರೆ ಮೂರನೇ ಅಂಪೈರ್ ಇದನ್ನು ನಾಟೌಟ್ ಎಂದು ತೀರ್ಪು ನೀಡಿದರು. ಆ ತೀರ್ಪು ನೋಡಿ ನ್ಯೂಜಿಲ್ಯಾಂಡ್​ ಆಟಗಾರರು ಮತ್ತು ಕರುಣಾರತ್ನೆ ಆಶ್ಚರ್ಯಚಕಿತರಾದರು. ರನೌಟ್​ ಆದರೂ ಔಟ್​ ಏಕೆ ನೀಡಿಲ್ಲ ಎಂದು ಒಂದು ಕ್ಷಣ ಮೈದಾನಲ್ಲಿ ಆಟಗಾರರ ಮಧ್ಯೆ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಇದನ್ನೂ ಓದಿ NZvsSL : ಟೆಸ್ಟ್​ ಸರಣಿಯಲ್ಲಿ ಶ್ರೀಲಂಕಾ ತಂಡವನ್ನು ಕ್ಲೀನ್​ ಸ್ವೀಪ್​ ಮಾಡಿದ ನ್ಯೂಜಿಲ್ಯಾಂಡ್​

ಕೂಡಲೇ ಕಿವೀಸ್ ಆಟಗಾರರು ಫೀಲ್ಡ್ ಅಂಪೈರ್ ಬಳಿ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದಕ್ಕೆ ಸ್ಪಷ್ಟ ಉತ್ತರ ನೀಡಿದ ಅಂಪೈರ್​ ಟಿಕ್ನರ್ ಚೆಂಡನ್ನು ವಿಕೆಟ್​ ತಾಗಿಸಿದಾಗ ಬೆಲ್ಸ್​ನಲ್ಲಿ ತಕ್ಷಣವೇ ಲೈಟ್ಸ್ ಹೊತ್ತಿಕೊಂಡಿಲ್ಲ. ಟಿಕ್ನರ್ ಚೆಂಡನ್ನು ಬೆಲ್ಸ್​ಗೆ ತಾಗಿಸಿದಾಗ ಬೆಲ್ಸ್​ನಲ್ಲಿ ಲೈಟ್ಸ್ ಆನ್​ ಆಗಿರಲಿಲ್ಲ. ಹೀಗಾಗಿ ಮೂರನೇ ಅಂಪೈರ್ ಇದನ್ನು ನಾಟೌಟ್ ಎಂದು ತೀರ್ಪು ನೀಡಿದ್ದಾರೆ ಎಂದು ತಿಳಿಸಿದರು.

ಸದ್ಯ ಈ ರನೌಟ್​ ಬಗ್ಗೆ ಹಲವು ಅಭಿಪ್ರಾಯಗಳು ಬರಲಾರಂಭಿಸಿದೆ. ತಾಂತ್ರಿಕ ದೋಷದಿಂದಾಗಿ ಕ್ರಿಕೆಟ್​ನಲ್ಲಿ ಪದೇಪದೆ ಈ ರೀತಿಯ ಪ್ರಮಾದಗಳು ನಡೆಯುತ್ತಲೇ ಇದೆ. ಹೀಗಾಗಿ ಇದಕ್ಕೆ ಸರಿಯಾದ ಒಂದು ನಿಮಯವನ್ನು ಜಾರಿಗೆ ತರಬೇಕು ಇಲ್ಲವಾದಲ್ಲಿ ಈ ರೀತಿಯ ತಪ್ಪಿನಿಂದ ತಂಡವೊಂದರ ಪ್ರಾಮಾಣಿಕ ಪ್ರಯತ್ನಕ್ಕೆ ಹಿನ್ನಡೆಯಾತ್ತದೆ ಎಂದು ಹಲವು ಕ್ರಿಕೆಟ್​ ಪಂಡಿತರು ಹೇಳಿದ್ದಾರೆ.

Continue Reading

ಕ್ರಿಕೆಟ್

IPL 2023 : ಆರ್​ಸಿಬಿ ಅನ್​ಬಾಕ್ಸ್​ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬಂದ ವಿರಾಟ್​ ಕೊಹ್ಲಿ, ಕ್ರಿಸ್​ಗೇಲ್​, ವಿಲಿಯರ್ಸ್​

ಆರ್​ಸಿಬಿ ಅಭಿಮಾನಿಗಳಿಗೆ ತಮ್ಮ ಫೇವರಿಟ್​ ಆಟಗಾರರನ್ನು ಭೇಟಿ ಮಾಡುವ ಅವಕಾಶವನ್ನೂ ಫ್ರಾಂಚೈಸಿ ಸೃಷ್ಟಿಸಿಕೊಟ್ಟಿದೆ.

VISTARANEWS.COM


on

virat kohli chris gayle villiers came to bangalore for the rcb unbox event
Koo

ಬೆಂಗಳೂರು: ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಫೇವರಿಟ್​ ಆಟಗಾರರಾದ ವಿರಾಟ್​ ಕೊಹ್ಲಿ, ಕ್ರಿಸ್​ಗೇಲ್​ ಹಾಗೂ ಎಬಿಡಿ ವಿಲಿಯರ್ಸ್​ ಶನಿವಾರ ಬೆಂಗಳೂರಿಗೆ ಬಂದಿದ್ದಾರೆ. ಈ ಮೂವರು ಆಟಗಾರರು ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್​ಸಿಬಿ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾರ್ಚ್​ 31ರಂದು ಐಪಿಎಲ್​ 16ನೇ ಆವೃತ್ತಿ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಆರ್​ಸಿಬಿ ಫ್ರಾಂಚೈಸಿ ಕಾರ್ಯಕ್ರಮ ಆಯೋಜಿಸಿದೆ.

ಎಬಿಡಿ ವಿಲಿಯರ್ಸ್​ಗೆ ಆರ್​ಸಿಬಿ ನೀಡಿದ ಸ್ವಾಗತ ಈ ರೀತಿ ಇದೆ

ಕ್ರಿಸ್​ ಗೇಲ್​, ವಿಲಿಯರ್ಸ್​ ಹಾಗೂ ವಿರಾಟ್​ ಕೊಹ್ಲಿ ಆರ್​ಸಿಬಿ ಅನ್​ಬಾಕ್ಸ್​​ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಮಾಹಿತಿಯನ್ನು ಆರ್​ಸಿಬಿ ಫ್ರಾಂಚೈಸಿ ತನ್ನ ಟ್ವೀಟ್​ ಖಾತೆಯಲ್ಲಿ ಪ್ರಕಟಿಸಿದೆ. ಇದೇ ಕಾರ್ಯಕ್ರಮದಲ್ಲಿ ಮುಂಬರುವ ಐಪಿಎಲ್​ನ ಜೆರ್ಸಿಯೂ ಬಿಡುಗಡೆಯಾಗಲಿದೆ.

ಮೂವರು ಆಟಗಾರರು ಬೆಂಗಳೂರಿಗೆ ಬರುತ್ತಿರುವ ಮಾಹಿತಿಯನ್ನು ಆರ್​ಸಿಬಿ ಫ್ರಾಂಚೈಸಿ ವಿಭಿನ್ನ ರೀತಿಯಲ್ಲಿ ಪ್ರಕಟಿಸಿದೆ. ಗೇಲ್​ಗೆ ಯುನಿವರ್ಸ್​ ಬಾಸ್​ ಎಂದು ಬರೆದಿದ್ದರೆ, ವಿರಾಟ್​ ಕೊಹ್ಲಿಗೆ ಕಾಯುವಿಕೆಗೆ ಅಂತ್ಯ ಎಂದು ಬರೆಯಲಾಗಿದೆ.

ಆರ್​ಸಿಬಿ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಅಭಿಮಾನಿಗಳಿಗೆ ತಂಡದ ಪ್ರಮುಖ ಆಟಗಾರರಾದ ಫಾಫ್​ ಡು ಪ್ಲೆಸಿಸ್​, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್​, ರಜತ್ ಪಾಟೀದಾರ್​ ಭೇಟಿ ಮಾಡುವ ಅವಕಾಶ ನೀಡಲಾಗಿದೆ. ಮುಂದಿನ ಐಪಿಎಲ್​ಗೆ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಲಿದ್ದು ಈ ಬಾರಿ ಕಪ್​ ಗೆಲ್ಲುವ ಗುರಿಯನ್ನು ಹೊಂದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್​ 2ರಂದು ನಡೆಯುವ ಪಂಧ್ಯದಲ್ಲಿ ಆರ್​ಸಿಬಿ ತಂಡ ಮಂಬಯಿ ಇಂಡಿಯನ್ಸ್​ ಬಳಗವನ್ನು ಎದುರಿಸಲಿದೆ.

ಇದನ್ನೂ ಓದಿ : IPL 2023 : ಜಾನಿ ಬೇರ್​ಸ್ಟೋವ್​ ಅಲಭ್ಯತೆ ಖಾತರಿ, ಪಂಜಾಬ್​ ತಂಡ ಸೇರಿದ ಮ್ಯಾಥ್ಯೂ ಶಾರ್ಟ್ಸ್​​

ಈ ಬಾರಿಯ ಐಪಿಎಲ್​ ಮಾರ್ಚ್ 31ರಂದು ಶುಭಾರಂಭಗೊಳ್ಳಲಿದೆ. ಕೊರೊನಾ ಬಳಿಕ ಇದೇ ಮೊದಲ ಬಾರಿಗೆ ಹೋಮ್​ ಮತ್ತು ಅವೇ ಮಾದರಿಯಲ್ಲಿ ಟೂರ್ನಿ ನಡೆಯಲಿದೆ. ಹೀಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿ ಆರ್​ಸಿಬಿಯ ಆಟವನ್ನು ನೋಡುವುದಕ್ಕೆ ಅಭಿಮಾನಿಗಳಿಗೆ ಅವಕಾಶ ಲಭಿಸಿದೆ.

ಆರ್​ಸಿಬಿ ತಂಡದ ಸದಸ್ಯರು

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಾಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವಾನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರಣ್​ ಶರ್ಮಾ, ಮಹಿಪಾಲ್ ಲೊಮ್ರೋರ್, ಮೊಹಮ್ಮದ್ ಸಿರಾಜ್​, ಹೇಜಲ್​​ವುಡ್, ಸಿದ್ದಾರ್ಥ್ ಕೌಲ್, ಆಕಾಶ್ ದೀಪ್, ರೀಸ್ ಟೋಪ್ಲೆ, ಹಿಮಾಂಶು ಶರ್ಮಾ, ವಿಲ್ ಜಾಕ್ಸ್, ಮನೋಜ್ ಭಾಂಡಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್.

Continue Reading
Advertisement
Uttara Kannada News
ಉತ್ತರ ಕನ್ನಡ3 hours ago

Uttara Kannada News: ವಾಕ್ಪ್ರತಿಯೋಗಿತಾ ಸ್ಪರ್ಧೆ; ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆ ಉತ್ತಮ ಸಾಧನೆ

Modi in Karnataka
ಕರ್ನಾಟಕ3 hours ago

Modi in Karnataka: ಮೋದಿ ರೋಡ್ ಶೋ ವೇಳೆ ಭದ್ರತಾ ವೈಫಲ್ಯ; ನಿಷೇಧಿತ ಪ್ರದೇಶಕ್ಕೆ ನುಗ್ಗಿದ ಇಬ್ಬರು ವಶಕ್ಕೆ

rahul-gandhi-will-act-like-a-martyr-with-an-eye-on-karnataka-elections-bjp
ದೇಶ3 hours ago

ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಹುತಾತ್ಮನಂತೆ ನಟಿಸ್ತಾ ಇರೋ ರಾಹುಲ್ ಗಾಂಧಿ: ಬಿಜೆಪಿ

Your rules don't apply to the Gandhi family; Spark of Congress MP!
ದೇಶ4 hours ago

Rahul Gandhi Disqualified : ನಿಮ್ಮ ರೂಲ್ಸ್​ ಗಾಂಧಿ ಫ್ಯಾಮಿಲಿಗೆ ಅನ್ವಯವಾಗಲ್ಲ; ಕಾಂಗ್ರೆಸ್​ ಸಂಸದನ ಕಿಡಿ!

Zaheer Khan: Team India is still sailing in an old boat; Why did Zaheer Khan say this?
ಕ್ರಿಕೆಟ್4 hours ago

Zaheer Khan: ಟೀಮ್​ ಇಂಡಿಯಾ ಇನ್ನೂ ಹಳೆಯ ಬೋಟ್​ನಲ್ಲೇ ಪ್ರಯಾಣಿಸುತ್ತಿದೆ; ಜಹೀರ್​ ಖಾನ್​ ಹೀಗೆ ಹೇಳಿದ್ದು ಏಕೆ?

Amit Shah to visit karnataka on march 26 and Participate in various programmes
ಕರ್ನಾಟಕ5 hours ago

Amit Shah Visit: ಭಾನುವಾರ ಅಮಿತ್‌ ಶಾ ರಾಜ್ಯ ಪ್ರವಾಸ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

heavy rainfall likely to occur at isolated places in the karnataka on March 26 and 27
ಕರ್ನಾಟಕ5 hours ago

Karnataka Rain: ಮಾ.26, 27 ರಂದು ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ

Tricolor flag flown in America; Patriots strike back at Khalistanis
ದೇಶ5 hours ago

ವಿಸ್ತಾರ ಸಂಪಾದಕೀಯ: ಅಮೆರಿಕದಲ್ಲಿ ಹಾರಾಡಿದ ತ್ರಿವರ್ಣ ಧ್ವಜ; ಖಲಿಸ್ತಾನಿಗಳಿಗೆ ದೇಶಪ್ರೇಮಿಗಳ ತಿರುಗೇಟು

WPL 2023: Nita Ambani dances with team players in Khasi in finals; The video is viral
ಕ್ರಿಕೆಟ್5 hours ago

WPL 2023: ಫೈನಲ್​ಗೆ ಲಗ್ಗೆಯಿಟ್ಟ ಖಷಿಯಲ್ಲಿ ತಂಡದ ಆಟಗಾರ್ತಿಯರೊಂದಿಗೆ ಕುಣಿದು ಕುಪ್ಪಳಿಸಿದ ನೀತಾ ಅಂಬಾನಿ; ವಿಡಿಯೊ ವೈರಲ್

Final race of Moto GP today in Portugal
ಕ್ರೀಡೆ5 hours ago

Moto GP : ಫೋರ್ಚುಗಲ್​ನಲ್ಲಿ ಭಾನುವಾರ ಮೋಟೊ ಜಿಪಿ ಮೊದಲ ಸುತ್ತಿನ ಫೈನಲ್​ ರೇಸ್​

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ4 days ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ5 days ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ5 days ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ6 days ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ6 days ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ6 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ6 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ7 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ1 week ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ1 week ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!