ಕ್ರಿಕೆಟ್
PM Modi At Ahmedabad: ಅಹಮದಾಬಾದ್ ಸ್ಟೇಡಿಯಮ್ನಲ್ಲಿ ಮೋದಿ ಮೇನಿಯಾ
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಅಹಮದಾಬಾದ್ ಟೆಸ್ಟ್ ಪಂದ್ಯಕ್ಕೆ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi At Ahmedabad) ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಟನಿ ಆಲ್ಬನೀಸ್ ಸ್ಟೇಡಿಯಮ್ಗೆ ಕಳೆ ತಂದರು.
ಸ್ಟೇಡಿಯಮ್ಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಸ್ವಾಗತ
ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಆಲ್ಬನೀಸ್ ಜತೆ ಮೈದಾನದಲ್ಲೊಂದು ಸುತ್ತು
ಕ್ರಿಕೆಟಿಗರ ಜತೆ ನಿಂತು ರಾಷ್ಟ್ರಗೀತೆ ಹಾಡಿದ ಪ್ರಧಾನಿ ಮೋದಿ
ವಿರಾಟ್ ಕೊಹ್ಲಿಗೆ ಹಸ್ತಲಾಘವ ನೀಡಿದ ಪ್ರಧಾನಿ ಮೋದಿ
ಕ್ಯಾಪ್ಟನ್ ರೋಹಿತ್ ಶರ್ಮಗೆ ಶುಭಾಶಯ ಹೇಳಿದ ಮೋದಿ
ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಜತೆ ಸೆಲ್ಫಿಗೆ ಪೋಸ್
ಮೈದಾನದ ಸುತ್ತಲೂ ಟೈಟ್ ಸೆಕ್ಯುರಿಟಿ
ಕ್ರಿಕೆಟ್
Zaheer Khan: ಟೀಮ್ ಇಂಡಿಯಾ ಇನ್ನೂ ಹಳೆಯ ಬೋಟ್ನಲ್ಲೇ ಪ್ರಯಾಣಿಸುತ್ತಿದೆ; ಜಹೀರ್ ಖಾನ್ ಹೀಗೆ ಹೇಳಿದ್ದು ಏಕೆ?
ಇದೇ ವರ್ಷ ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವಕಪ್ಗೆ ತಯಾರಿ ನಡೆಸುತ್ತಿರುವ ಟೀಮ್ ಇಂಡಿಯಾ ಇನ್ನೂ ಹಳೆಯ ಬೋಟ್ನಲ್ಲೇ ಪ್ರಯಾಣಿಸುತ್ತಿದೆ ಎಂದು ಜಹೀರ್ ಖಾನ್ ಹೇಳಿದ್ದಾರೆ.
ಮುಂಬಯಿ: ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆದ ಏಕದಿನ ಸರಣಿಯಲ್ಲಿ ಭಾರತ ಸೋಲು ಕಂಡ ಬಳಿಕ ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ಪ್ರದರ್ಶನದ ಬಗ್ಗೆ ಹಲವು ಕ್ರಿಕೆಟ್ ಪಂಡಿತರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿಲು ಆರಂಭಿಸಿದ್ದಾರೆ. ಇದೀಗ ಈ ಸಾಲಿಗೆ 2011ರ ವಿಶ್ವ ಕಪ್(2019 World Cup) ವಿಜೇತ ತಂಡ ವೇಗಿ ಜಹೀರ್ ಖಾನ್(Zaheer Khan) ಕೂಡ ಸೇರಿದ್ದಾರೆ. ಇದೇ ವರ್ಷ ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವಕಪ್ಗೆ ತಯಾರಿ ನಡೆಸುತ್ತಿರುವ ಟೀಮ್ ಇಂಡಿಯಾ ಇನ್ನೂ ಹಳೆಯ ಬೋಟ್ನಲ್ಲೇ ಪ್ರಯಾಣಿಸುತ್ತಿದೆ ಎಂದು ಹೇಳಿದ್ದಾರೆ.
ಕ್ರಿಕ್ ಬಝ್ ಜತೆಗಿನ ಸಂದರ್ಶನದಲ್ಲಿ ಮಾತನಾಡಿದ ಜಹೀರ್ ಖಾನ್ , “ಟೀಮ್ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಖಂಡಿತವಾಗಿಯೂ ಮತ್ತೊಮ್ಮೆ ಚಿಂತಿಸುವ ಅಗತ್ಯವಿದೆ. ನಾಲ್ಕನೇ ಕ್ರಮಾಂಕದ ಆಯ್ಕೆಯ ಲೆಕ್ಕಾಚಾರ ಇನ್ನೂ ಬಗೆಹರಿದಿಲ್ಲ. ಇದು 2019ರ ವಿಶ್ವಕಪ್ನಲ್ಲೂ ಚರ್ಚೆಗೆ ಕಾರಣವಾಗಿತ್ತು. ನಾಲ್ಕು ವರ್ಷಗಳ ಬಳಿಕವೂ ನಾವು ಅದೇ ದೋಣಿಯಲ್ಲಿದ್ದೇವೆ. ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕದ ಆಟಗಾರ ಎಂದು ನನಗೆ ಗೊತ್ತು. ಆದರೆ ಅವರು ಈಗ ದೀರ್ಘಕಾಲದವರೆಗೆ ಗಾಯಗೊಂಡಿದ್ದರೆ. ಹೀಗಾಗಿ ಇದಕ್ಕೆ ಶೀಘ್ರದಲ್ಲೇ ಉತ್ತರ ಕಂಡುಕೊಳ್ಳಬೇಕಾದ ಸಮಯ ಬಂದಿದೆ” ಎಂದು ಬಿಸಿಸಿಐ ಮತ್ತು ಆಯ್ಕೆ ಸಮಿತಿಗೆ ಜಹೀರ್ ಸಲಹೆಯೊಂದನ್ನು ನೀಡಿದ್ದಾರೆ.
ಭಾರತದ ಏಕದಿನ ತಂಡದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡುವ ನಿರೀಕ್ಷೆಯಲ್ಲಿದ್ದ ಸೂರ್ಯಕುಮಾರ್ ಯಾದವ್(Suryakumar Yadav) ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಸರಣಿಯಲ್ಲಿ ಸತತ ಮೂರು ಗೋಲ್ಡನ್ ಡಕ್ ಸಂಕಟಕ್ಕೆ ಸಿಲುಕಿದರು. ಇದು ಅವರ ಏಕದಿನ ಭವಿಷ್ಯದ ಮೇಲೆ ಗಂಭೀರ ಪ್ರಶ್ನೆಗಳು ಏಳುವಂತೆ ಮಾಡಿದೆ. ಇನ್ನೊಂದೆಡೆ ಗಾಯದ ಸಮಸ್ಯೆಯೂ ಕಾಡುತ್ತಿದೆ. ಒಟ್ಟಾರೆ ಭಾರತದಲ್ಲಿ ಸದ್ಯ ಕೊಹ್ಲಿ ಮತ್ತು ರೋಹಿತ್ ಅವರನ್ನು ಹೊರತುಪಡಿಸಿ ಇನಿಂಗ್ಸ್ ಕಟ್ಟುವ ಆಟಗಾರರ ಕೊರತೆ ಎದ್ದು ಕಾಣುತ್ತಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ World Cup 2023 : ಟೀಕೆ ನಿಲ್ಲಿಸಿ, ವಿಶ್ವ ಕಪ್ ಗೆಲ್ಲಲಿದೆ ಭಾರತ ತಂಡ ಎಂದಿದ್ದಾರೆ ಮಾಜಿ ಹೆಡ್ ಕೋಚ್
ನಾವು ವಿಶ್ವ ಕಪ್ ಗೆಲ್ಲುವ ಸಮಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕೊಹ್ಲಿ, ಧೋನಿ, ಯುವರಾಜ್ ಸಿಂಗ್, ಸುರೇಶ್ ರೈನಾ ಅವರಂತರ ಶ್ರೇಷ್ಠ ಆಟಗಾರರನ್ನು ಹೊಂದಿದ್ದೆವು. ಆದರೆ ಈಗ ಭಾರತದಲ್ಲಿ ಇಂತಹ ಮ್ಯಾಚ್ ವಿನ್ನಿಂಗ್ ಮತ್ತು ಇನಿಂಗ್ಸ್ ಬೆಳೆಸುವ ಆಟಗಾರರ ಕೊರತೆ ಎದ್ದು ಕಾಣುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಾಣದ ಹೊರತು ಭಾರತ ವಿಶ್ವ ಕಪ್ ಗೆಲ್ಲುವುದು ಅನುಮಾನ ಎಂದು ಜಹೀರ್ ಖಾನ್ ಅಭಿಪ್ರಾಯಪಟ್ಟರು.
ಕ್ರಿಕೆಟ್
WPL 2023: ಫೈನಲ್ಗೆ ಲಗ್ಗೆಯಿಟ್ಟ ಖಷಿಯಲ್ಲಿ ತಂಡದ ಆಟಗಾರ್ತಿಯರೊಂದಿಗೆ ಕುಣಿದು ಕುಪ್ಪಳಿಸಿದ ನೀತಾ ಅಂಬಾನಿ; ವಿಡಿಯೊ ವೈರಲ್
ಮುಂಬೈ ತಂಡದ ಆಟಗಾರ್ತಿಯರೊಂದಿಗೆ ನೀತಾ ಅಂಬಾನಿ ಅವರು ಡ್ಯಾನ್ಸ್ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮುಂಬಯಿ: ಯುಪಿ ವಾರಿಯರ್ಸ್ ವಿರುದ್ಧ ಶುಕ್ರವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ 72 ರನ್ಗಳ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್(Mumbai Indians) ತಂಡ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ(WPL 2023) ಫೈನಲ್ ಪ್ರವೇಶಿಸಿದೆ. ಇದೇ ಖಷಿಯಲ್ಲಿ ತಂಡದ ಮಾಲಕಿಯಾಗಿರುವ ನೀತಾ ಅಂಬಾನಿ ಅವರು ಆಟಗಾರ್ತಿಯರೊಂದಿಗೆ ಡ್ಯಾನ್ಸ್ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶುಕ್ರವಾರ ನಡೆದ ಈ ಪಂದ್ಯದಲ್ಲಿ ಟಾಸ್ ಸೂತು ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ಇಂಡಿಯನ್ಸ್ ತಂಡ ನ್ಯಾಟ್ ಸ್ಕಿವರ್-ಬ್ರಂಟ್(Nat Sciver-Brunt) ಅವರ ಬ್ಯಾಟಿಂಗ್ ಸಾಹಸದಿಂದ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ಗೆ 182 ರನ್ ಬಾರಿಸಿ ಸವಾಲೊಡ್ಡಿತು. ದೊಡ್ಡ ಮೊತ್ತವನ್ನು ಕಂಡು ಕಂಗಾಲಾದ ಯುಪಿ ವಾರಿಯರ್ಸ್ ತಂಡ 17.4 ಓವರ್ಗಳಲ್ಲಿ ಕೇವಲ 110 ರನ್ಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು. ಮುಂಬೈ ಈ ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿತು. ಭಾನುವಾರ ನಡೆಯುವ ಫೈನಲ್ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಉಭಯ ತಂಡಗಳ ಈ ಹೋರಾಟ ಬ್ರಬೋರ್ನ್ ಕ್ರೀಡಾಂಗಣದಲ್ಲಿ.
ಫೈನಲ್ ಪ್ರವೇಶ ಪಡೆದ ಸಂಭ್ರಮದಲ್ಲಿ ನೀತಾ ಅಂಬಾನಿ ಅವರು ತಂಡದ ಎಲ್ಲ ಸದಸ್ಯರ ಹೆಸರನ್ನು ಕೂಗುವ ಮೂಲಕ ಡ್ಯಾನ್ಸ್ ಮಾಡಿದ್ದಾರೆ. ಜತೆಗೆ ತಂಡದ ಆಟಗಾರ್ತಿಯರೂ ಡ್ಯಾನ್ಸ್ ಮಾಡುವಂತೆ ಹುರಿದುಂಬಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹ್ಯಾಟ್ರಿಕ್ ವಿಕೆಟ್ ಕಿತ್ತು ದಾಖಲೆ ಬರೆದ ಇಸ್ಸಿ ವಾಂಗ್
ಇದೇ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಕಿತ್ತ ಇಂಗ್ಲೆಂಡ್ ಕ್ರಿಕೆಟ್ ತಂಡದ ಆಟಗಾರ್ತಿ ಇಸ್ಸಿ ವಾಂಗ್(Issy Wong) ಅವರು ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್(WPL 2023) ಲೀಗ್ನಲ್ಲಿ ಇತಿಹಾಸ ನಿರ್ಮಿಸಿದರು. ಹ್ಯಾಟ್ರಿಕ್ ಸಹಿತ 4 ವಿಕೆಟ್ ಕಿತ್ತು ಮಿಂಚಿದರು.
ಕ್ರಿಕೆಟ್
NZ VS SL: ರನೌಟ್ ಆದರೂ ಮೂರನೇ ಅಂಪೈರ್ನಿಂದ ನಾಟೌಟ್; ಹೊಸ ವಿವಾದಕ್ಕೆ ಕಾರಣವಾದ ಲಂಕಾ-ಕಿವೀಸ್ ಏಕದಿನ ಪಂದ್ಯ
ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ನ್ಯೂಜಿಲ್ಯಾಂಡ್ ತಂಡ 198 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ಆಕ್ಲೆಂಡ್: ಪ್ರವಾಸಿ ಶ್ರೀಲಂಕಾ ಮತ್ತು ನ್ಯೂಜಿಲ್ಯಾಂಡ್(NZ VS SL) ವಿರುದ್ಧದ ಏಕದಿನ ಪಂದ್ಯದಲ್ಲಿ ಲಂಕಾ ಆಟಗಾರ ರನೌಟ್ ಆದ ತೀರ್ಪಿನ ಘಟನೆಯೊಂದು ಇದೀಗ ಕ್ರಿಕೆಟ್ ಕೇತ್ರದಲ್ಲಿ ಹೊಸ ವಿವಾದವೊಂದನ್ನು ಹುಟ್ಟುಹಾಕಿದೆ.
ಆಕ್ಲೆಂಡ್ನ ಈಡನ್ ಪಾರ್ಕ್ನಲ್ಲಿ ಶನಿವಾರ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಆತಿಥೇಯ ನ್ಯೂಜಿಲ್ಯಾಂಡ್ ತಂಡ 49.3 ಓವರ್ಗಳಲ್ಲಿ 274 ರನ್ಗೆ ಆಲೌಟ್ ಆಯಿತು. ಜವಾಬಿತ್ತ ಶ್ರೀಲಂಕಾ ತಂಡ ಹೆನ್ರಿ ಶಿಪ್ಲಿ ಅವರ ಘಾತಕ ಬೌಲಿಂಗ್ ದಾಳಿಗೆ ನಲುಗಿ 19.5 ಓವರ್ಗಳಲ್ಲಿ ಕೇವಲ 76 ರನ್ಗೆ ಸರ್ವಪತನ ಕಂಡಿತು. ಕಿವೀಸ್ 198 ರನ್ಗಳ ಭರ್ಜರಿ ಗೆಲುವು ದಾಖಲಿಸಿತು.
ನ್ಯೂಜಿಲ್ಯಾಂಡ್ ತಂಡ ಈ ಪಂದ್ಯದಲ್ಲಿ ದೊಡ್ಡ ಮೊತ್ತದಿಂದ ಗೆಲುವು ಸಾಧಿಸಿದರೂ ಗೆಲುವಿಗಿಂತ ದೊಡ್ಡ ಸುದ್ದಿಯಾದದ್ದು ಈ ಪಂದ್ಯದಲ್ಲಿ ನಡೆದ ಒಂದು ರನೌಟ್. ಶ್ರೀಲಂಕಾದ ಬ್ಯಾಟಿಂಗ್ ಇನಿಂಗ್ಸ್ನ 18ನೇ ಓವರ್ನಲ್ಲಿ ಟಿಕ್ನರ್(Blair Tickner) ಎಸೆತಕ್ಕೆ ಬ್ಯಾಟ್ ಬೀಸಿದ ಕರುಣಾರತ್ನೆ(Karunaratne) ಮಿಡ್-ವಿಕೆಟ್ ಕಡೆಗೆ ಬಾರಿಸಿ ರನ್ ಕದಿಯಲು ಓಡಿದರು. ಆದರೆ ಚುರುಕಿ ಫೀಲ್ಡಿಂಗ್ ನಡೆಸಿದ ಕಿವೀಸ್ ಆಟಗಾರ ಚೆಂಡನ್ನು ಹಿಡಿದು ಟಿಕ್ನರ್ ಕಡೆಗೆ ಎಸೆದರು. ತಕ್ಷಣ ಚೆಂಡನ್ನು ಹಿಡಿದ ಟಿಕ್ನರ್ ರನೌಟ್ ಮಾಡಿದರು.
ರನೌಟ್ ನಿರ್ಧಾರವನ್ನು ಪರಿಶೀಲನೆ ನಡೆಸಲು ಪೀಲ್ಡ್ ಅಂಪೈರ್ ಮೂರನೇ ಅಂಪೈರ್ ಮೊರೆ ಹೋದರು. ಈ ವೇಳೆ ಕರುಣಾರತ್ನೆ ಕ್ರೀಸ್ನಿಂದ ದೂರವಿರುವುದು ಸ್ಪಷ್ಟವಾಗಿ ಗೋಚರಿತು. ಇದೇ ವೇಳೆ ಲಂಕಾ ಬ್ಯಾಟರ್ ಕರುಣಾರತ್ನೆ ಕೂಡ ಪೆವಿಲಿಯನ್ ಕಡೆಗೆ ತೆರಳಲಾರಂಭಿಸಿದರು. ಆದರೆ ಮೂರನೇ ಅಂಪೈರ್ ಇದನ್ನು ನಾಟೌಟ್ ಎಂದು ತೀರ್ಪು ನೀಡಿದರು. ಆ ತೀರ್ಪು ನೋಡಿ ನ್ಯೂಜಿಲ್ಯಾಂಡ್ ಆಟಗಾರರು ಮತ್ತು ಕರುಣಾರತ್ನೆ ಆಶ್ಚರ್ಯಚಕಿತರಾದರು. ರನೌಟ್ ಆದರೂ ಔಟ್ ಏಕೆ ನೀಡಿಲ್ಲ ಎಂದು ಒಂದು ಕ್ಷಣ ಮೈದಾನಲ್ಲಿ ಆಟಗಾರರ ಮಧ್ಯೆ ಗೊಂದಲದ ವಾತಾವರಣ ಸೃಷ್ಟಿಯಾಯಿತು.
ಇದನ್ನೂ ಓದಿ NZvsSL : ಟೆಸ್ಟ್ ಸರಣಿಯಲ್ಲಿ ಶ್ರೀಲಂಕಾ ತಂಡವನ್ನು ಕ್ಲೀನ್ ಸ್ವೀಪ್ ಮಾಡಿದ ನ್ಯೂಜಿಲ್ಯಾಂಡ್
ಕೂಡಲೇ ಕಿವೀಸ್ ಆಟಗಾರರು ಫೀಲ್ಡ್ ಅಂಪೈರ್ ಬಳಿ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದಕ್ಕೆ ಸ್ಪಷ್ಟ ಉತ್ತರ ನೀಡಿದ ಅಂಪೈರ್ ಟಿಕ್ನರ್ ಚೆಂಡನ್ನು ವಿಕೆಟ್ ತಾಗಿಸಿದಾಗ ಬೆಲ್ಸ್ನಲ್ಲಿ ತಕ್ಷಣವೇ ಲೈಟ್ಸ್ ಹೊತ್ತಿಕೊಂಡಿಲ್ಲ. ಟಿಕ್ನರ್ ಚೆಂಡನ್ನು ಬೆಲ್ಸ್ಗೆ ತಾಗಿಸಿದಾಗ ಬೆಲ್ಸ್ನಲ್ಲಿ ಲೈಟ್ಸ್ ಆನ್ ಆಗಿರಲಿಲ್ಲ. ಹೀಗಾಗಿ ಮೂರನೇ ಅಂಪೈರ್ ಇದನ್ನು ನಾಟೌಟ್ ಎಂದು ತೀರ್ಪು ನೀಡಿದ್ದಾರೆ ಎಂದು ತಿಳಿಸಿದರು.
ಸದ್ಯ ಈ ರನೌಟ್ ಬಗ್ಗೆ ಹಲವು ಅಭಿಪ್ರಾಯಗಳು ಬರಲಾರಂಭಿಸಿದೆ. ತಾಂತ್ರಿಕ ದೋಷದಿಂದಾಗಿ ಕ್ರಿಕೆಟ್ನಲ್ಲಿ ಪದೇಪದೆ ಈ ರೀತಿಯ ಪ್ರಮಾದಗಳು ನಡೆಯುತ್ತಲೇ ಇದೆ. ಹೀಗಾಗಿ ಇದಕ್ಕೆ ಸರಿಯಾದ ಒಂದು ನಿಮಯವನ್ನು ಜಾರಿಗೆ ತರಬೇಕು ಇಲ್ಲವಾದಲ್ಲಿ ಈ ರೀತಿಯ ತಪ್ಪಿನಿಂದ ತಂಡವೊಂದರ ಪ್ರಾಮಾಣಿಕ ಪ್ರಯತ್ನಕ್ಕೆ ಹಿನ್ನಡೆಯಾತ್ತದೆ ಎಂದು ಹಲವು ಕ್ರಿಕೆಟ್ ಪಂಡಿತರು ಹೇಳಿದ್ದಾರೆ.
ಕ್ರಿಕೆಟ್
IPL 2023 : ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬಂದ ವಿರಾಟ್ ಕೊಹ್ಲಿ, ಕ್ರಿಸ್ಗೇಲ್, ವಿಲಿಯರ್ಸ್
ಆರ್ಸಿಬಿ ಅಭಿಮಾನಿಗಳಿಗೆ ತಮ್ಮ ಫೇವರಿಟ್ ಆಟಗಾರರನ್ನು ಭೇಟಿ ಮಾಡುವ ಅವಕಾಶವನ್ನೂ ಫ್ರಾಂಚೈಸಿ ಸೃಷ್ಟಿಸಿಕೊಟ್ಟಿದೆ.
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಫೇವರಿಟ್ ಆಟಗಾರರಾದ ವಿರಾಟ್ ಕೊಹ್ಲಿ, ಕ್ರಿಸ್ಗೇಲ್ ಹಾಗೂ ಎಬಿಡಿ ವಿಲಿಯರ್ಸ್ ಶನಿವಾರ ಬೆಂಗಳೂರಿಗೆ ಬಂದಿದ್ದಾರೆ. ಈ ಮೂವರು ಆಟಗಾರರು ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾರ್ಚ್ 31ರಂದು ಐಪಿಎಲ್ 16ನೇ ಆವೃತ್ತಿ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಆರ್ಸಿಬಿ ಫ್ರಾಂಚೈಸಿ ಕಾರ್ಯಕ್ರಮ ಆಯೋಜಿಸಿದೆ.
ಎಬಿಡಿ ವಿಲಿಯರ್ಸ್ಗೆ ಆರ್ಸಿಬಿ ನೀಡಿದ ಸ್ವಾಗತ ಈ ರೀತಿ ಇದೆ
ಕ್ರಿಸ್ ಗೇಲ್, ವಿಲಿಯರ್ಸ್ ಹಾಗೂ ವಿರಾಟ್ ಕೊಹ್ಲಿ ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಮಾಹಿತಿಯನ್ನು ಆರ್ಸಿಬಿ ಫ್ರಾಂಚೈಸಿ ತನ್ನ ಟ್ವೀಟ್ ಖಾತೆಯಲ್ಲಿ ಪ್ರಕಟಿಸಿದೆ. ಇದೇ ಕಾರ್ಯಕ್ರಮದಲ್ಲಿ ಮುಂಬರುವ ಐಪಿಎಲ್ನ ಜೆರ್ಸಿಯೂ ಬಿಡುಗಡೆಯಾಗಲಿದೆ.
ಮೂವರು ಆಟಗಾರರು ಬೆಂಗಳೂರಿಗೆ ಬರುತ್ತಿರುವ ಮಾಹಿತಿಯನ್ನು ಆರ್ಸಿಬಿ ಫ್ರಾಂಚೈಸಿ ವಿಭಿನ್ನ ರೀತಿಯಲ್ಲಿ ಪ್ರಕಟಿಸಿದೆ. ಗೇಲ್ಗೆ ಯುನಿವರ್ಸ್ ಬಾಸ್ ಎಂದು ಬರೆದಿದ್ದರೆ, ವಿರಾಟ್ ಕೊಹ್ಲಿಗೆ ಕಾಯುವಿಕೆಗೆ ಅಂತ್ಯ ಎಂದು ಬರೆಯಲಾಗಿದೆ.
ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮದಲ್ಲಿ ಅಭಿಮಾನಿಗಳಿಗೆ ತಂಡದ ಪ್ರಮುಖ ಆಟಗಾರರಾದ ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್, ರಜತ್ ಪಾಟೀದಾರ್ ಭೇಟಿ ಮಾಡುವ ಅವಕಾಶ ನೀಡಲಾಗಿದೆ. ಮುಂದಿನ ಐಪಿಎಲ್ಗೆ ಆರ್ಸಿಬಿ ತಂಡ ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಲಿದ್ದು ಈ ಬಾರಿ ಕಪ್ ಗೆಲ್ಲುವ ಗುರಿಯನ್ನು ಹೊಂದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 2ರಂದು ನಡೆಯುವ ಪಂಧ್ಯದಲ್ಲಿ ಆರ್ಸಿಬಿ ತಂಡ ಮಂಬಯಿ ಇಂಡಿಯನ್ಸ್ ಬಳಗವನ್ನು ಎದುರಿಸಲಿದೆ.
ಇದನ್ನೂ ಓದಿ : IPL 2023 : ಜಾನಿ ಬೇರ್ಸ್ಟೋವ್ ಅಲಭ್ಯತೆ ಖಾತರಿ, ಪಂಜಾಬ್ ತಂಡ ಸೇರಿದ ಮ್ಯಾಥ್ಯೂ ಶಾರ್ಟ್ಸ್
ಈ ಬಾರಿಯ ಐಪಿಎಲ್ ಮಾರ್ಚ್ 31ರಂದು ಶುಭಾರಂಭಗೊಳ್ಳಲಿದೆ. ಕೊರೊನಾ ಬಳಿಕ ಇದೇ ಮೊದಲ ಬಾರಿಗೆ ಹೋಮ್ ಮತ್ತು ಅವೇ ಮಾದರಿಯಲ್ಲಿ ಟೂರ್ನಿ ನಡೆಯಲಿದೆ. ಹೀಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿ ಆರ್ಸಿಬಿಯ ಆಟವನ್ನು ನೋಡುವುದಕ್ಕೆ ಅಭಿಮಾನಿಗಳಿಗೆ ಅವಕಾಶ ಲಭಿಸಿದೆ.
ಆರ್ಸಿಬಿ ತಂಡದ ಸದಸ್ಯರು
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಾಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್ವೆಲ್, ವಾನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರಣ್ ಶರ್ಮಾ, ಮಹಿಪಾಲ್ ಲೊಮ್ರೋರ್, ಮೊಹಮ್ಮದ್ ಸಿರಾಜ್, ಹೇಜಲ್ವುಡ್, ಸಿದ್ದಾರ್ಥ್ ಕೌಲ್, ಆಕಾಶ್ ದೀಪ್, ರೀಸ್ ಟೋಪ್ಲೆ, ಹಿಮಾಂಶು ಶರ್ಮಾ, ವಿಲ್ ಜಾಕ್ಸ್, ಮನೋಜ್ ಭಾಂಡಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್.
-
ಅಂಕಣ19 hours ago
Ramzan Fasting : ರಂಜಾನ್ ವ್ರತಾಚರಣೆಗಿದೆ ವೈಜ್ಞಾನಿಕ ದೃಷ್ಟಿಕೋನ; ಆರೋಗ್ಯ ವರ್ಧನೆಗೆ ಇದು ಎಷ್ಟು ಸಹಕಾರಿ?
-
ಅಂಕಣ20 hours ago
ರಾಜ ಮಾರ್ಗ ಅಂಕಣ : ಎಸೆಸೆಲ್ಸಿ ವಿದ್ಯಾರ್ಥಿಗಳು ಇನ್ನು ಆರೇ ದಿನ ಓದಿದರೂ ಪಾಸ್ ಆಗಬಹುದು! ಹಾಗಿದ್ರೆ ಏನು ಮಾಡಬೇಕು?
-
ಕರ್ನಾಟಕ20 hours ago
Modi In Karnataka: ಕೆಆರ್ ಪುರ ಮೆಟ್ರೋ ಉದ್ಘಾಟನೆಗೆ ಮೋದಿ ಆಗಮನ; ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?
-
ಅಂಕಣ21 hours ago
ವಿಸ್ತಾರ ಅಂಕಣ: ಭಾರತಕ್ಕೆ ಈಗ ಬೇಕಿರುವುದು ʼಈಸ್ ಆಫ್ ಡೂಯಿಂಗ್ ಪಾಲಿಟಿಕ್ಸ್ʼ ಸೂಚ್ಯಂಕ
-
ಕರ್ನಾಟಕ18 hours ago
Congress Ticket list : ಸಿದ್ದರಾಮಯ್ಯ ವರುಣ ಕೇಳಿದ್ರು ಕೊಟ್ವಿ, ಕೋಲಾರ ಕೇಳಿದ್ದರೆ ಅದನ್ನೇ ಕೊಡುತ್ತಿದ್ದೆವು; ಡಿ.ಕೆ. ಶಿವಕುಮಾರ್
-
ಕರ್ನಾಟಕ13 hours ago
Modi in Karnataka: ಮೆಟ್ರೊ ರೈಲು ಮಾರ್ಗ ಉದ್ಘಾಟಿಸಿ ಸಾಮಾನ್ಯರಂತೆ ಪ್ರಯಾಣಿಸಿದ ಪ್ರಧಾನಿ ಮೋದಿ
-
ಕರ್ನಾಟಕ18 hours ago
Modi In Karnataka: ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ; ಪ್ರವಾಸದ ಇಂಚಿಂಚು ಮಾಹಿತಿ ಇಲ್ಲಿದೆ
-
ಅಂಕಣ14 hours ago
ಹೊಸ ಅಂಕಣ: ಸೈಬರ್ ಮಿತ್ರ: ಜಾಣರಾಗಿ, ಜಾಗರೂಕರಾಗಿರಿ!