IOC Session : ಐಒಸಿ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ - Vistara News

ಕ್ರಿಕೆಟ್

IOC Session : ಐಒಸಿ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಕತಾರ್, ಜೋರ್ಡಾನ್, ಮೊನಾಕೊ, ಲಕ್ಸಂಬರ್ಗ್ ಮತ್ತು ಭೂತಾನ್ ದೇಶಗಳ ಮುಖ್ಯಸ್ಥರು, ಗ್ರೇಟ್ ಬ್ರಿಟನ್ ಮತ್ತು ಲಿಕ್ಟನ್ ಸ್ಟೈನ್‌ನ ರಾಜಮನೆತನದ ಸದಸ್ಯರೊಂದಿಗೆ ಈ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದು ಅದಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಭಾರತದ ನೇತೃತ್ವದಲ್ಲಿ ನಡೆದಿದ್ದ ಜಿ-20 ಸಮಾವೇಶ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದ್ದು ಜಾಗತಿಕವಾಗಿ ಮೆಚ್ಚುಗೆ ಕೇಳಿಬಂದಿದೆ. ಆ ಯಶಸ್ವಿ ಸಮಾವೇಶದ ನಂತರ ಇದೀಗ ಭಾರತದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ನಡೆಯಲಿದೆ. ಅದುವೇ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ (IOC) 141ನೇ ಅಧಿವೇಶನ. ಮುಂಬಯಿಯಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಇದೇ ಅಕ್ಟೋಬರ್ 15ರಿಂದ 17ರ ತನಕ ಅಧಿವೇಶನ ನಡೆಯಲಿದೆ. ಅಕ್ಟೋಬರ್ 14ರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿವೇಶನ ಉದ್ಘಾಟಿಸಲಿದ್ದಾರೆ. ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ವಿದೇಶದ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಕತಾರ್, ಜೋರ್ಡಾನ್, ಮೊನಾಕೊ, ಲಕ್ಸಂಬರ್ಗ್ ಮತ್ತು ಭೂತಾನ್ ದೇಶಗಳ ಮುಖ್ಯಸ್ಥರು, ಗ್ರೇಟ್ ಬ್ರಿಟನ್ ಮತ್ತು ಲಿಕ್ಟನ್ ಸ್ಟೈನ್‌ನ ರಾಜಮನೆತನದ ಸದಸ್ಯರೊಂದಿಗೆ ಈ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದು ಅದಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

ಒಲಿಂಪಿಕ್ ಕ್ರೀಡೆಯಲ್ಲಿ ಈಜು ವಿಭಾಗದಲ್ಲಿ ಏಳು ಬಾರಿ ಪದಕ ವಿಜೇತ ಕಿರ್ಸ್ಟಿ ಕೊವೆಂಟ್ರಿ, ಎರಡು ಬಾರಿ ಒಲಿಂಪಿಕ್ ಪೋಲ್ ವಾಲ್ಟ್ ಚಿನ್ನದ ಪದಕ ವಿಜೇತೆ ಯೆಲೆನಾ ಇಸೆನ್‌ಬಾಯೆವಾ, ಒಲಿಂಪಿಕ್ 10,000 ಮೀಟರ್ ವಿಭಾಗದ ಎರಡು ಬಾರಿ ಬೆಳ್ಳಿ ಪದಕ ವಿಜೇತರು ಮತ್ತು ಕೀನ್ಯಾದ ರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧ್ಯಕ್ಷರಾದ ಪಾಲ್ ತುರ್ಗಾಟ್, ಒಲಿಂಪಿಕ್ ಪೋಲ್ ವಾಲ್ಟ್ ಚಿನ್ನದ ಪದಕ ವಿಜೇತರಾದ ಸೆರ್ಗೆಯ್ ಬುಬ್ಕಾ ಮತ್ತು ಒಲಿಂಪಿಕ್ ಶೂಟಿಂಗ್ ಚಾಂಪಿಯನ್ ಅಭಿನವ್ ಬಿಂದ್ರಾ, ಒಲಿಂಪಿಕ್ 1500 ಮೀ ಚಾಂಪಿಯನ್ ಮತ್ತು ವಿಶ್ವ ಅಥ್ಲೆಟಿಕ್ಸ್ ಅಧ್ಯಕ್ಷರಾದ ಸೆಬಾಸ್ಟಿಯನ್ ಕೋ ಮತ್ತು ಫಿಫಾ ಅಧ್ಯಕ್ಷರಾದ ಗಿಯಾನಿ ಇನ್ಫಾಂಟಿನೊ ಸಹ ಈ ಸಂದರ್ಭದಲ್ಲಿ ಹಾಜರಿರುತ್ತಾರೆ.

ಇವರ ಜತೆಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧ್ಯಕ್ಷ ಥಾಮಸ್ ಬಾಕ್​, ಭಾರತೀಯ ಒಲಿಂಪಿಕ್ ಸಂಸ್ಥೆ ಸೇರಿದಂತೆ ವಿವಿಧ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಆತಿಥ್ಯ ತಂದ ನೀತಾ ಅಂಬಾನಿ

2022ರ ಫೆಬ್ರವರಿಯಲ್ಲಿ ಚೀನಾದ ರಾಜಧಾನಿ ಬೀಜಿಂಗ್‌ ನಲ್ಲಿ ನಡೆದ ಬಿಡ್ಡಿಂಗ್ ಐಒಸಿ ಸದಸ್ಯರಾದ ನೀತಾ ಅಂಬಾನಿ ಬಿಡ್ಡಿಂಗ್ ನಲ್ಲಿ ಭಾಗವಹಿಸಿದ್ದರು. ಈ ಐತಿಹಾಸಿಕ ಸಭೆಯಲ್ಲಿ ಭಾರತದ ಪರವಾಗಿ 75 ಮತಗಳು ಚಲಾವಣೆಯಾಗಿದ್ದು, ವಿರೋಧವಾಗಿ ಕೇವಲ 1 ಮತ ಚಲಾವಣೆಯಾಯಿತು. ಹೀಗಾಗಿ 40 ವರ್ಷಗಳ ನಂತರ ಭಾರತದಲ್ಲಿ ಐಒಸಿ ಅಧಿವೇಶನ ನಡೆಯುತ್ತಿದೆ.

ಈ ಸುದ್ದಿಗಳನ್ನೂ ಓದಿ
IOC Session: ಮುಂಬೈನಲ್ಲಿ ನಡೆಯಲಿದೆ ಐತಿಹಾಸಿಕ ಒಲಿಂಪಿಕ್ಸ್​ ಅಧಿವೇಶನ; ಏನಿದರ ವಿಶೇಷ?
IOC Sessions : 40 ವರ್ಷಗಳ ಬಳಿಕ ಭಾರತಕ್ಕೆ ಮರಳಿದ ಐಒಸಿ ಅಧಿವೇಶನ

ಐಒಸಿ ಅಧಿವೇಶನವು ಒಲಿಂಪಿಕ್ ಕ್ರೀಡಾಕೂಟದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಸರ್ವೋಚ್ಚ ಸಂಸ್ಥೆಯಾಗಿದೆ. ಇದು ಒಲಿಂಪಿಕ್ ಚಾರ್ಟರ್ ಅನ್ನು ಅಳವಡಿಸಿಕೊಳ್ಳುವುದು ಅಥವಾ ಪರಿಷ್ಕರಿಸುವುದು, ಐಒಸಿ ಸದಸ್ಯರು ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡುವುದು ಹಾಗೂ ಒಲಿಂಪಿಕ್ಸ್‌ನ ಆತಿಥೇಯ ನಗರವನ್ನು ಆಯ್ಕೆ ಮಾಡುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹೊಂದಿರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

IPL 2025: ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ.

VISTARANEWS.COM


on

IPL 2025
Koo

ಬೆಂಗಳೂರು: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್​ ಕೊಹ್ಲಿ(Virat Kohli) ಅವರು ಮತ್ತೆ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಇದು ಆರ್​ಸಿಬಿ ಮತ್ತು ಕೊಹ್ಲಿ ಅಭಿಮಾನಿಗಳಿಗೆ ಕುತೂಹಲ ಮೂಡಿಸುವಂತೆ ಮಾಡಿದೆ.

ಮುಂದಿನ ವರ್ಷ ಮೆಗಾ ಹರಾಜು ಕೂಡ ನಡೆಯಲಿದೆ. (IPL 2025)​ 18ನೇ ಆವೃತ್ತಿಯಲ್ಲಿ ಬೆಂಗಳೂರು ತಂಡದಲ್ಲಿ ಕೂಡ ದೊಡ್ಡ ಬದಲಾವಣೆಯೊಂದು ಸಂಭವಿಸುವ ಮುನ್ಸೂಚನೆಯೊಂದು ಲಭಿಸಿದೆ. ಈ ಹಿಂದೆ ತಂಡದ ನಾಯಕನಾಗಿದ್ದ ದಕ್ಷಿಣ ಆಫ್ರಿಕಾದ ಡುಪ್ಲೆಸಿಸ್​ ಅವರನ್ನು ಕೈ ಬಿಟ್ಟು ಮಾಜಿ ನಾಯಕ ವಿರಾಟ್​ ಕೊಹ್ಲಿ(Virat Kohli)ಗೆ ಮತ್ತೆ ನಾಯಕತ್ವ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿರಾಟ್​ ಕೊಹ್ಲಿ ಅವರು ಭಾರತ ತಂಡದ ಮೂರು ಮಾದರಿಯ ನಾಯಕತ್ವ ವಹಿಸಿಕೊಂಡಿದ್ದ ವೇಳೆ ಐಪಿಎಲ್​ನಲ್ಲಿಯೂ ತಂಡವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ, ಕೆಲಸದ ಒತ್ತಡದಿಂದಾಗಿ ಆಟದ ಕಡೆ ಸರಿಯಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಐಪಿಎಲ್​ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಸೂಕ್ತ ನಾಯಕನ ಸ್ಥಾನಕ್ಕೆ ಚೆನ್ನೈ ತಂಡದಲ್ಲಿದ್ದ ಫಾಫ್​ ಡುಪ್ಲೆಸಿಸ್​ ಅವರನ್ನು ಖರೀದಿ ಮಾಡಿ ಅವರಿಗೆ ನಾಯಕತ್ವ ನೀಡಲಾಗಿತ್ತು.

ಕಳೆದ ಮೂರು ಸೀಸನ್​ನಲ್ಲಿ ಡುಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ತಂಡದ ಭವಿಷ್ಯ ಮಾತ್ರ ಬದಲಾಗಲಿಲ್ಲ. ಕಳೆದ ಬಾರಿಯಂತೂ ಲೀಗ್​ನಿಂದಲೇ ಹೊರಬಿದ್ದಿತ್ತು. ಇದೀಗ ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ. ಈ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ಮೂಲಕ 700ಕ್ಕೂ ಅಧಿಕ ರನ್​ ಕಲೆ ಹಾಕಿ ಟೂರ್ನಿಯ ಅತ್ಯಧಿಕ ಸ್ಕೋರ್​ ಎನಿಸಿಕೊಂಡಿದ್ದರು.

ಇದನ್ನೂ ಓದಿ Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

ಕನ್ನಡಿಗ ಕೆ.ಎಲ್​ ರಾಹುಲ್​ ಕೂಡ ಆರ್​ಸಿಬಿ ತಂಡಕ್ಕೆ ಬರಲಿದ್ದಾರೆ ಎನ್ನುವ ಮಾತುಗಳು ಕೂಡ ಕೆಲ ತಿಂಗಳಿನಿಂದ ಕೇಳಿರುತ್ತಿದೆ. ಒಂದೊಮ್ಮೆ ಕೊಹ್ಲಿ ನಾಯಕನ ಸ್ಥಾನ ತಿರಸ್ಕರಿಸಿದರೆ, ರಾಹುಲ್​ ಆರ್​ಸಿಬಿ ಸೇರಿದರೆ ನಾಯಕತ್ವ ಅವರ ಪಾಲಾಗುವು ಸಾಧ್ಯತೆ ಇದೆ.

ಕೊಹ್ಲಿಯ ನಾಕಯತ್ವ ಸಾಧನೆ ಹೇಗಿದೆ?

ವಿರಾಟ್​ ಕೊಹ್ಲಿ 2013ರಲ್ಲಿ ಆರ್​ಸಿಬಿಯ ಪೂರ್ಣ ಪ್ರಮಾಣದ ನಾಯಕನಾಗಿ ನೇಮಕಗೊಂಡಿದ್ದರು. 2021ರ ತನಕ ಅವರು ಆರ್​ಸಿಬಿಯನ್ನು ಮುನ್ನಡೆಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಒಟ್ಟು 140 ಪಂದ್ಯಗಳನ್ನು ಆಡಿದ್ದ ಆರ್​​ಸಿಬಿ 66 ಪಂದ್ಯಗಳನ್ನು ಜಯಿಸಿದೆ. 70 ಪಂದ್ಯಗಳಲ್ಲಿ ಸೋಲು ಕಂಡಿದೆ. ಐಪಿಎಲ್​ ಇತಿಹಾಸದಲ್ಲಿ ವಿನ್ನಿಂಗ್ಸ್​ ಸರಾಸರಿಯಲ್ಲಿ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರ ನಾಯಕತ್ವದ ಸರಾಸರಿ ಗೆಲುವು ಶೇ. 46.15 ರಷ್ಟಿದೆ. ದಾಖಲೆ ಧೋನಿ ಹೆಸರಿನಲ್ಲಿದೆ. ಧೋನಿ ನಾಯಕತ್ವದ ಗೆಲುವಿನ ಸರಾಸರಿ 60.38 ರಷ್ಟಿದೆ.

Continue Reading

ಕ್ರೀಡೆ

IND vs ZIM: ಜಿಂಬಾಬ್ವೆ ತಲುಪಿದ ಯಂಗ್‌ ಟೀಮ್‌ ಇಂಡಿಯಾ; ಶನಿವಾರದಿಂದ ಸರಣಿ ಆರಂಭ

IND vs ZIM: ಆಟಗಾರರು ಮತ್ತು ಹಂಗಾಮಿ ಕೋಚ್​ ವಿವಿಎಸ್​ ಲಕ್ಮ್ಮಣ್(VVS Laxman)​ ಜಿಂಬಾಬ್ಬೆಗೆ ತಲುಪಿರುವ ಫೋಟೊವನ್ನು ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಉಭಯ ತಂಡಗಳ ಸರಣಿ ಜುಲೈ 6 ರಿಂದ ಆರಂಭಗೊಳ್ಳಲಿದೆ.

VISTARANEWS.COM


on

IND vs ZIM
Koo

ಹರಾರೆ: ಆತಿಥೇಯ ಜಿಂಬಾಬ್ವೆ(IND vs ZIM) ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನಾಡಲು ಭಾರತ ತಂಡ ಹರಾರೆಗೆ(Team India touchdown in Zimbabwe) ತಲುಪಿದೆ. ಆಟಗಾರರು ಮತ್ತು ಹಂಗಾಮಿ ಕೋಚ್​ ವಿವಿಎಸ್​ ಲಕ್ಮ್ಮಣ್(VVS Laxman)​ ಜಿಂಬಾಬ್ಬೆಗೆ ತಲುಪಿರುವ ಫೋಟೊವನ್ನು ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಉಭಯ ತಂಡಗಳ ಸರಣಿ ಜುಲೈ 6 ರಿಂದ ಆರಂಭಗೊಳ್ಳಲಿದೆ.

ಬುಧವಾರ (ಜುಲೈ 3) ಜಿಂಬಾಬ್ವೆಗೆ ಬಂದಿಳಿದ ಟೀಮ್​ ಇಂಡಿಯಾಕ್ಕೆ ಆತ್ಮೀಯ ಸ್ವಾಗತ ಕೋರಲಾಯಿತು. ಜಿಂಬಾಬ್ವೆ ಕ್ರಿಕೆಟ್ ಹಂಚಿಕೊಂಡ ವೀಡಿಯೊದಲ್ಲಿ, ಲಕ್ಷ್ಮಣ್ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವುದನ್ನು ನೋಡಬಹುದು ಮತ್ತು ಇತರ ಬೆಂಬಲ ಸಿಬ್ಬಂದಿಯೊಂದಿಗೆ 15 ಸದಸ್ಯರ ತಂಡ ಕೂಡ ಜತೆಗಿತ್ತು. ಗುರುವಾರದಿಂದ ಆಟಗಾರರು ಅಭ್ಯಾಸ ಆರಂಭಿಸಲಿದ್ದಾರೆ.

ಚಂಡಮಾರುತದಿಂದ ಬಾರ್ಬಡೋಸ್‌ನಲ್ಲಿ ಸಿಲುಕಿರುವ ಟಿ20 ವಿಶ್ವಕಪ್​ ತಂಡದ ಭಾಗವಾಗಿದ್ದ, ಸಂಜು ಸ್ಯಾಮ್ಸನ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಇನ್ನೂ ಕೂಡ ಭಾರತಕ್ಕೆ ಆಗಮಿಸದ ಕಾರಣ ಅವರ ಬದಲಿಗೆ ಸಾಯಿ ಸುದರ್ಶನ್(Sai Sudharsan), ಜಿತೇಶ್ ಶರ್ಮಾ(Jitesh Sharma) ಮತ್ತು ಹರ್ಷಿತ್ ರಾಣಾ(Harshit Rana) ಅವರನ್ನು ಮೊದಲ ಎರಡು ಪಂದ್ಯಗಳಿಗಾಗಿ ಬಿಸಿಸಿಐ ಮಂಗಳವಾರ ತಂಡಕ್ಕೆ ಸೇರ್ಪಡೆಗೊಳಿಸಿತ್ತು.

ಚೊಚ್ಚಕ ಕರೆ ಪಡೆದ ಹರ್ಷಿತ್ ರಾಣಾ ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಮೊನಚಾದ ಬೌಲಿಂಗ್​ ಮೂಲಕ ಒಟ್ಟು 19 ವಿಕೆಟ್​ ಕಿತ್ತು ಮಿಂಚಿದ್ದರು. ಮಾಯಾಂಕ್​ ಅಗರ್ವಾಲ್​ ವಿಕೆಟ್​ ಕಿತ್ತು ದುರ್ವರ್ತನೆ ತೋರಿದ ಕಾರಣಕ್ಕೆ ದಂಡ ಮತ್ತು ಒಂದು ಪಂದ್ಯದ ನಿಷೇಧ ಶಿಕ್ಷೆ ಕೂಡ ಎದುರಿಸಿದ್ದರು.

ಇದನ್ನೂ ಓದಿ Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ

5 ಪಂದ್ಯಗಳ ಟಿ20 ಸರಣಿ ಇದಾಗಿದ್ದು, ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ರಿಯಾನ್ ಪರಾಗ್ 2024 ರ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಫಲಿತಾಂಶವಾಗಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲಿ ಪಂದ್ಯಗಳನ್ನಾಡಲಿದ್ದಾರೆ. ಪರಾಗ್ ಅಸ್ಸಾಂ ನಿಂದ ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಮೊದಲ ಕ್ರೀಡಾಪಟುವಾಗಿದ್ದಾರೆ.

ಭಾರತ ತಂಡ

ಶುಭಮನ್ ಗಿಲ್ (ನಾಯಕ), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವೀಕಿ), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವೀಕಿ) , ಹರ್ಷಿತ್ ರಾಣಾ.

ವೇಳಾಪಟ್ಟಿ

1ನೇ ಟಿ20: ಜುಲೈ 6, ಹರಾರೆ, ಸಂಜೆ 4.30

2ನೇ ಟಿ20: ಜುಲೈ 7, ಹರಾರೆ, ಸಂಜೆ 4.30

3ನೇ T20: ಜುಲೈ 10, ಹರಾರೆ, ಸಂಜೆ 4.30

4ನೇ T20: ಜುಲೈ 13, ಹರಾರೆ, ಸಂಜೆ 4.30

5 ನೇ T20: ಜುಲೈ 14, ಹರಾರೆ, ಸಂಜೆ 4.30

Continue Reading

ಕ್ರೀಡೆ

Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ

Team India: ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ ಮರಳಲಿದ್ದಾರೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು.

VISTARANEWS.COM


on

Team India
Koo

ಬಾರ್ಬಡೋಸ್​: ಟಿ20 ವಿಶ್ವ ಚಾಂಪಿಯನ್​ ಭಾರತ ತಂಡ(Team India) ಬಾರ್ಬಡೋಸ್​ನಿಂದ(Barbados) ತವರಿಗೆ ಪ್ರಯಾಣ ಬೆಳೆಸಿದೆ(Team India’s departure). ಈ ವಿಚಾರವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಬುಧವಾರ ಖಚಿತಪಡಿಸಿದೆ. ಟಿ20 ವಿಶ್ವಕಪ್​ ಟ್ರೋಫಿಯ ವಿಡಿಯೊ ಹಾಕಿ ನಾವು ಮರಳುತ್ತಿದ್ದೇವೆ ಎಂದು ಬರೆದುಕೊಂಡಿದೆ. ಬುಧವಾರ ಬಾರ್ಬಡೋಸ್​ನಿಂದ ಹೊರಡಿರುವ ಟೀಮ್​ ಇಂಡಿಯಾ ಗುರುವಾರ ಬೆಳಗ್ಗೆ ನವದೆಹಲಿಗೆ ತಲುಪಲಿದ್ದಾರೆ ಎಂದು ವರದಿಯಾಗಿದೆ.

ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ ಮರಳಲಿದ್ದಾರೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು. ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿತ್ತು. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿತ್ತು. ಹೀಗಾಗಿ ಭಾರತ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿತ್ತು.

17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದ ಭಾರತ

ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತ್ತು.

ಬೆರಿಲ್ ಚಂಡಮಾರುತದ ದೃಶ್ಯವನ್ನು ವಿಡಿಯೊ ಕಾಲ್​ ಮೂಲಕ ಪತ್ನಿ ಅನುಷ್ಕಾಗೆ ತೋರಿಸಿದ ಕೊಹ್ಲಿ

ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್​ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್​ ಆಗಿದೆ.​

ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ. ಟಿ20 ವಿಶ್ವಕಪ್​ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್​ ಆಗಿತ್ತು.

Continue Reading

ಕ್ರೀಡೆ

Suryakumar Yadav Catch: ಸೂರ್ಯಕುಮಾರ್​ ಕ್ಯಾಚ್ ಎಡವಟ್ಟು; ವಿಶ್ವಕಪ್​ ವಾಪಸ್​ ನೀಡಬೇಕಾ ಭಾರತ?

Suryakumar Yadav Catch: ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ ರಜನೀಶ್ ಗುಪ್ತಾ ಎಂಬವರು ಸೂರ್ಯಕುಮಾರ್​ ಕ್ಯಾಚ್​ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. “ನಾನು ಅಂದು ಮೈದಾನದ ಟಿವಿ ಕಾಮೆಂಟರಿ ಬಾಕ್ಸ್‌ನಲ್ಲಿದ್ದೆ. ಬಿಳಿ ಗೆರೆಯು ಬೌಂಡರಿಯಾಗಿರಲಿಲ್ಲ ಎಂದು ನಾನು ಹೇಳಬಲ್ಲೆ. ಏಕೆಂದರೆ ಬೌಂಡರಿ ರೋಪ್ ವೆಡ್ಜ್ ಆ ಬಿಳಿ ಗೆರೆಯ ಹಿಂದೆ ಇತ್ತು. ಪಂದ್ಯದ ಆರಂಭದಿಂದಲೂ ಹಾಗೆಯೇ ಇತ್ತು. ಪಿಚ್ ಅನ್ನು ಬದಲಾಯಿಸಿದಾಗ, ಬೌಂಡರಿಗಳನ್ನು ಸರಿಹೊಂದಿಸಲಾಗುತ್ತದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದಿದ್ದಾರೆ.

VISTARANEWS.COM


on

Suryakumar Yadav Catch
Koo

ಲಂಡನ್​: ಟಿ20 ವಿಶ್ವಕಪ್(T20 World Cup 2024)​ ಟೂರ್ನಿ ಮುಕ್ತಾಯ ಕಂಡಿದ್ದರೂ ಕೂಡ ಫೈನಲ್​ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್(Suryakumar Yadav Catch)​ ಅವರು ಹಿಡಿದ ಕ್ಯಾಚ್​ ಬಗೆಗಿನ ಚರ್ಚೆಗಳು ಮುಗಿದಂತೆ ಕಾಣುತ್ತಿಲ್ಲ. ಬೌಂಡರಿ ಲೈನ್​ಗೆ ಬಳಸುವ ಕುಶನ್ ಹಿಂದಕ್ಕೆ ತಳ್ಳಲಾಗಿತ್ತು. ಭಾರತದ ಬೌಲಿಂಗ್ ವೇಳೆ ಬೇಕಂತಲೇ ಕುಶನ್ ಹಿಂದಕ್ಕೆ ದೂಡಲಾಗಿತ್ತು, ಸೂರ್ಯಕುಮಾರ್(Suryakumar Yadav) ಅವರು ಬೌಂಡರಿ ಗೆರೆಯನ್ನು ತುಳಿದಿದ್ದಾರೆ ಎನ್ನಲಾದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಇದೀಗ ಭಾರತ ಗೆದ್ದಿರುವ ಟಿ20 ವಿಶ್ವಕಪ್ ವಾಪಸ್ ಕೊಡಬೇಕಾ? ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29, ಶನಿವಾರ ರಾತ್ರಿ ನಡೆದಿದ್ದ ಅತ್ಯಂತ ರೋಚಕ ಟಿ20 ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಟೀಮ್​ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ ಅಂತರದ ಗೆಲುವು ಸಾಧಿಸಿ 13 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಬರವನ್ನು ನೀಗಿಸಿತ್ತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಮಿಲ್ಲರ್​ ಔಟ್​ ಆಗುತ್ತಿದ್ದಂತೆ ಭಾರತದ ಗೆಲುವು ಕೂಡ ಖಚಿತಗೊಂಡಿತು.

ಇದನ್ನೂ ಓದಿ Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

ಕ್ಯಾಚ್​ನ ವಿಡಿಯೊವನ್ನು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದ ದಕ್ಷಿಣ ಆಫ್ರಿಕಾದ ನೆಟ್ಟಿಗರು, ಅಂಪೈರ್​ಗಳು ಈ ವಿಡಿಯೊವನ್ನು ಸೂಕ್ಷವಾಗಿ ಗಮನಿಸುವ ಅಗತ್ಯವಿದೆ. ಸೂರ್ಯಕುಮಾರ್​ ಅವರ ಕಾಲುಗಳು ಬೌಂಡರಿ ಲೈನ್​ಗ ಕೆಳ ಭಾಗದ ಪಟ್ಟಿಗೆ ತಾಗಿರುವುದು ಕಂಡು ಬಂದಿದೆ. ಹೀಗಾಗಿ ಇದು ಔಟ್​ ಅಲ್ಲ ಸಿಕ್ಸ್​ ಎಂದು ಆಕ್ರೋಶ ಹೊರಹಾಕಿದ್ದರು. ಇದಾದ ಬಳಿಕ ಭಾರತದ ಬೌಲಿಂಗ್ ವೇಳೆ ಬೇಕಂತಲೇ ಕುಶನ್ ಹಿಂದಕ್ಕೆ ದೂಡಲಾಗಿತ್ತು ಎಂಬ ಆರೋಪ ಕೂಡ ಕೇಳಿ ಬಂದಿತ್ತು. ಒಂದು ವೇಳೆ ಕುಶನ್ ನಿಗದಿತ ಸ್ಥಳದಲ್ಲಿ ಇದ್ದರೆ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸುತ್ತಿತ್ತು ಎಂದು ಹಲವರು ವಾದಿಸುತ್ತಿದ್ದಾರೆ. ಇದಕ್ಕೆ ಇದೀಗ ಸ್ಪಷ್ಟನೆಯೊಂದು ಸಿಕ್ಕಿದೆ.

ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ ರಜನೀಶ್ ಗುಪ್ತಾ ಎಂಬವರು ಸೂರ್ಯಕುಮಾರ್​ ಕ್ಯಾಚ್​ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. “ನಾನು ಅಂದು ಮೈದಾನದ ಟಿವಿ ಕಾಮೆಂಟರಿ ಬಾಕ್ಸ್‌ನಲ್ಲಿದ್ದೆ. ಬಿಳಿ ಗೆರೆಯು ಬೌಂಡರಿಯಾಗಿರಲಿಲ್ಲ ಎಂದು ನಾನು ಹೇಳಬಲ್ಲೆ. ಏಕೆಂದರೆ ಬೌಂಡರಿ ರೋಪ್ ವೆಡ್ಜ್ ಆ ಬಿಳಿ ಗೆರೆಯ ಹಿಂದೆ ಇತ್ತು. ಪಂದ್ಯದ ಆರಂಭದಿಂದಲೂ ಹಾಗೆಯೇ ಇತ್ತು. ಪಿಚ್ ಅನ್ನು ಬದಲಾಯಿಸಿದಾಗ, ಬೌಂಡರಿಗಳನ್ನು ಸರಿಹೊಂದಿಸಲಾಗುತ್ತದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದಿದ್ದಾರೆ.

Continue Reading
Advertisement
Mangalore News
ಕರ್ನಾಟಕ4 mins ago

Mangalore News: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

Parliament Sessions
ದೇಶ13 mins ago

Parliament Sessions: “ಕಾಂಗ್ರೆಸ್‌ನದ್ದು ರಿಮೋಟ್‌ ಕಂಟ್ರೋಲ್‌ ಸರ್ಕಾರ”-ಸೋನಿಯಾ ವಿರುದ್ಧ ಮೋದಿ ವಾಗ್ಬಾಣ

Physical Abuse
ಕರ್ನಾಟಕ54 mins ago

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

Narendra Modi
ದೇಶ59 mins ago

Narendra Modi: ಮುಂದಿನ 5 ವರ್ಷ ಬಡತನ ವಿರುದ್ಧದ ಹೋರಾಟಕ್ಕೆ ಮೀಸಲು; ರಾಜ್ಯಸಭೆಯಲ್ಲಿ ಮೋದಿ ಭರವಸೆ

Double Ismart Steppa Maar electrifies with mass beats
ಟಾಲಿವುಡ್1 hour ago

Double Ismart: ಪ್ರಚಾರ ಅಖಾಡದಲ್ಲಿ ‘ಡಬಲ್ ಇಸ್ಮಾರ್ಟ್’: ಮೊದಲ ಹಾಡು ರಿಲೀಸ್!

Actor Darshan
ಕರ್ನಾಟಕ1 hour ago

Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

IPL 2025
ಕ್ರೀಡೆ2 hours ago

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

Kannada New Movie kannnajaru teaser teaser Out
ಸಿನಿಮಾ2 hours ago

Kannada New Movie: ‘ಕಣಂಜಾರು’ ಟೀಸರ್ ಮೆಚ್ಚಿದ ಚಂದನವನ!

viral news signboard
ವೈರಲ್ ನ್ಯೂಸ್2 hours ago

Viral News: ʼತುರ್ತಾಗಿ ಒಂದು ಅಪಘಾತ ಮಾಡಿʼ ಅನ್ನುತ್ತಿದೆ ಈ ಸೈನ್‌ಬೋರ್ಡ್‌!

Hijab Row
ದೇಶ2 hours ago

Hijab Row: ಹಿಬಾಬ್‌ ನಿಷೇಧದ ಬೆನ್ನಲ್ಲೇ ಜೀನ್ಸ್‌, ಟೀ-ಶರ್ಟ್‌ ಬ್ಯಾನ್‌- ಪ್ರಕಟಣೆ ಹೊರಡಿಸಿದ ಮುಂಬೈ ಕಾಲೇಜು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌