20km Race Walk: ಚಿನ್ನ ಗೆದ್ದ ಪ್ರಿಯಾಂಕಾ, ಅಕ್ಷದೀಪ್‌ಗೆ ಒಲಿಂಪಿಕ್ಸ್ ಟಿಕೆಟ್‌ - Vistara News

ಕ್ರೀಡೆ

20km Race Walk: ಚಿನ್ನ ಗೆದ್ದ ಪ್ರಿಯಾಂಕಾ, ಅಕ್ಷದೀಪ್‌ಗೆ ಒಲಿಂಪಿಕ್ಸ್ ಟಿಕೆಟ್‌

ನಡಿಗೆ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಪ್ರಿಯಾಂಕಾ ಗೋಸ್ವಾಮಿ ಮತ್ತು ಅಕ್ಷದೀಪ್‌ ಸಿಂಗ್​ ಅವರು ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ.

VISTARANEWS.COM


on

Priyanka Goswami
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಂಚಿ: ಇಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಓಪನ್ ನಡಿಗೆ ಚಾಂಪಿಯನ್‌ಶಿಪ್​ನ 20 ಕಿ.ಮೀ(20km Race Walk) ವಿಭಾಗದಲ್ಲಿ ಅಕ್ಷದೀಪ್‌ ಸಿಂಗ್(Akashdeep Singh) ಹಾಗೂ ಪ್ರಿಯಾಂಕಾ ಗೋಸ್ವಾಮಿ(Priyanka Goswami) ಕ್ರಮವಾಗಿ ಪುರುಷ ಮತ್ತು ಮಹಿಳೆಯರ ವಿಭಾಗಗಳಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ಈ ಮೂಲಕ ಈ ವರ್ಷದ ವಿಶ್ವ ಚಾಂಪಿಯನ್‌ಶಿಪ್‌ ಮತ್ತು 2024ರ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿದ್ದಾರೆ.

ಮಂಗಳವಾರ ನಡೆದ ಪುರುಷರ ವಿಭಾಗದ 20 ಕಿ.ಮೀ ಸ್ಪರ್ಧೆಯಲ್ಲಿ ಪಂಜಾಬ್​ನ 22 ವರ್ಷದ ಅಕ್ಷದೀಪ್‌ ಅವರು 1 ಗಂಟೆ 19 ನಿಮಿಷ 55 ಸೆಕೆಂಡುಗಳಲ್ಲಿ ಗುರಿ ಮುಟ್ಟುವ ಮೂಲಕ ಚಿನ್ನದ ಪದಕ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಗಿಟ್ಟಿಸಿಕೊಂಡರು. ಜತೆಗೆ ಈ ಟೂರ್ನಿಯಲ್ಲಿ ರಾಷ್ಟ್ರೀಯ ದಾಖಲೆಯನ್ನೂ ನಿರ್ಮಿಸಿದರು. ಈ ಹಿಂದೆ ಸಂದೀಪ್‌ ಕುಮಾರ್ (1 ಗಂಟೆ 20 ನಿ. 16 ಸೆ.) ಸ್ಥಾಪಿಸಿದ್ದ ದಾಖಲೆಯನ್ನು ಅಳಿಸಿಹಾಕಿದರು.

ಮಹಿಳೆಯರ 20 ಕಿ.ಮೀ. ವಿಭಾಗದ ಸ್ಪರ್ಧೆಯಲ್ಲಿ ಪ್ರಿಯಾಂಕಾ ನಿರೀಕ್ಷೆಯಂತೆ ಚಿನ್ನ ಜಯಿಸಿದರು. ಅವರು 1 ಗಂಟೆ 28 ನಿ. 50 ಸೆಕೆಂಡುಗಳಲ್ಲಿ ಗುರಿ ಮುಟ್ಟಿದರು. 2021ರಲ್ಲಿ 1 ಗಂಟೆ 28 ನಿ. 45 ಸೆಕೆಂಡುಗಗಳಲ್ಲಿ ಗುರಿ ತಲುಪಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದರು. ಸದ್ಯ ಈ ದಾಖಲೆ ಅವರದೇ ಹೆಸರಿನಲ್ಲಿದೆ.

ಇದನ್ನೂ ಓದಿ 2028 Olympics Cricket: 2028ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಕ್ರಿಕೆಟ್‌ ಸೇರ್ಪಡೆ?

ವಿಶ್ವ ಚಾಂಪಿಯನ್‌ಶಿಪ್‌ ಬುಡಾಪೆಸ್ಟ್‌ನಲ್ಲಿ ಆಗಸ್ಟ್‌ನಲ್ಲಿ ನಡೆಯಲಿದೆ. ಪುರುಷರ ವಿಭಾಗದಲ್ಲಿ ಒಲಿಂಪಿಕ್ಸ್ ಹಾಗೂ ವಿಶ್ವಚಾಂಪಿಯನ್‌ಶಿಪ್‌ಗೆ 1 ತಾಸು 20 ನಿ. 10 ಸೆ. ಸಮಯ ಅರ್ಹತಾ ಮಾನದಂಡವಾಗಿದೆ. ಮಹಿಳಾ ವಿಭಾಗದಲ್ಲಿ 1 ತಾಸು 29 ನಿ. 20 ಸೆಕೆಂಡು ಆಗಿದೆ. ಆದರೆ ಅಕ್ಷದೀಪ್‌ ಮತ್ತು ಪ್ರಿಯಾಂಕಾ ಈ ಸಮಯಕ್ಕಿಂತ ಮುಂಚಿತವಾಗಿ ಗುರಿ ತಲುಪಿ ವಿಶ್ವ ಚಾಂಪಿಯನ್‌ಶಿಪ್‌ ಮತ್ತು ಮುಂದಿನ ವರ್ಷ ಪ್ಯಾರಿಸ್​ನಲ್ಲಿ ನಡೆಯಲಿರುವ ಪ್ರತಿಷ್ಠಿತ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ. ಈ ಮೂಲಕ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs PBKS: ಪಂಜಾಬ್​-ಆರ್​ಸಿಬಿ ಸೆಣಸಾಟ; ಸೋತವರು ಟೂರ್ನಿಯಿಂದ ಔಟ್​

RCB vs PBKS: ಎರಡೂ ತಂಡಗಳು 11 ಪಂದ್ಯಗಳಿಂದ ಎಂಟು ಅಂಕಗಳನ್ನು ಹೊಂದಿದ್ದರೂ, ಆರ್​ಸಿಬಿ ಉತ್ತಮ ರನ್ ರೇಟ್​ ಆಧಾರದಲ್ಲಿ 7ನೇ ಸ್ಥಾನದಲ್ಲಿದೆ ಪಂಜಾಬ್​ 8ನೇ ಸ್ಥಾನದಲ್ಲಿದೆ. ಉಭಯ ತಂಡಗಳಿಗೂ ಇನ್ನು ಮೂರು ಪಂದ್ಯಗಳು ಬಾಕಿ ಉಳಿದಿವೆ. ಈ ಮೂರು ಪಂದ್ಯಗಳನ್ನು ಗೆದ್ದರೆ ಮಾತ್ರ ಪ್ಲೇಆಫ್‌ಗೆ ಪ್ರವೇಶಿಸುವ ಅವಕಾಶ ಇದೆ.

VISTARANEWS.COM


on

RCB vs PBKS
Koo

ಧರ್ಮಶಾಲಾ: ಆರಂಭಿಕ ಹಂತದಲ್ಲಿ ನಿರಾಶಾದಾಯಕ ಪ್ರದರ್ಶನ ತೋರಿ, ಟೂರ್ನಿ ಮುಕ್ತಾಯದ ಹಂತದಲ್ಲಿ ಶ್ರೇಷ್ಠ ಪ್ರದರ್ಶನದ ಮೂಲಕ ಹ್ಯಾಟ್ರಿಕ್​ ಗೆಲುವು ಸಾಧಿಸಿರುವ ಆರ್​ಸಿಬಿ ತಂಡ ನಾಳೆ ನಡೆಯುವ ಐಪಿಎಲ್​(IPL 2024) ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್(RCB vs PBKS)​ ವಿರುದ್ಧ ಕಣಕ್ಕಿಳಿಯಲಿದೆ. ಪ್ಲೇ ಆಫ್​ಗೆ ಕ್ಷೀಣ ಅವಕಾಶ ಹೊಂದಿರುವ ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಹೀಗಾಗಿ ಪಂದ್ಯ ಅತ್ಯಂತ ರೋಚಕವಾಗಿ ಸಾಗುವ ಸಾಧ್ಯತೆ ಇದೆ. ಸೋತ ತಂಡದ ಪ್ಲೇ ಆಫ್​ ಹಾದಿ ಬಂದ್​ ಆಗಲಿದೆ.

ಎರಡೂ ತಂಡಗಳು 11 ಪಂದ್ಯಗಳಿಂದ ಎಂಟು ಅಂಕಗಳನ್ನು ಹೊಂದಿದ್ದರೂ, ಆರ್​ಸಿಬಿ ಉತ್ತಮ ರನ್ ರೇಟ್​ ಆಧಾರದಲ್ಲಿ 7ನೇ ಸ್ಥಾನದಲ್ಲಿದೆ ಪಂಜಾಬ್​ 8ನೇ ಸ್ಥಾನದಲ್ಲಿದೆ. ಉಭಯ ತಂಡಗಳಿಗೂ ಇನ್ನು ಮೂರು ಪಂದ್ಯಗಳು ಬಾಕಿ ಉಳಿದಿವೆ. ಈ ಮೂರು ಪಂದ್ಯಗಳನ್ನು ಗೆದ್ದರೆ ಮಾತ್ರ ಪ್ಲೇಆಫ್‌ಗೆ ಪ್ರವೇಶಿಸುವ ಅವಕಾಶ ಇದೆ. ಜತೆಗೆ ಇತರ ತಂಡಗಳ ಫಲಿತಾಂಶಗಳು ಕೂಡ ಮುಖ್ಯವಾಗಿದೆ. ಒಟ್ಟಾರೆ ನಾಳೆ ಗೆದ್ದ ತಂಡ ಪ್ಲೇ ಆಪ್​ ರೇಸ್​ನಲ್ಲಿ ಉಳಿಯಲಿದೆ.

ಪಿಚ್​ ರಿಪೋರ್ಟ್​

ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಶನ್‌ ಸ್ಟೇಡಿಯಂ (ಎಚ್‌ಪಿಸಿಎ) ಪ್ರಕೃತಿಯ ಅತ್ಯಂತ ರಮಣೀಯ ಸ್ಟೇಡಿಯಂ ಆಗಿದ್ದು, ಹಿಮಾಲಯ ಶ್ರೇಣಿಯಲ್ಲಿ ತಲೆಯೆತ್ತಿ ನಿಂತಿದೆ. ಸಮುದ್ರ ಮಟ್ಟದಿಂದ 1,317 ಮೀ. ಎತ್ತರದಲ್ಲಿದೆ. ಅಡಿಲೇಡ್‌ ಓವಲ್‌, ನ್ಯೂಜಿಲ್ಯಾಂಡ್​ ಸ್ಟೇಡಿಯಂಗಳಂತೆ ಇದು ಕೂಡ ಚಿತ್ರಸದೃಶವಾಗಿದೆ. 23 ಸಾವಿರದಷ್ಟು ವೀಕ್ಷಕರ ಸಾಮರ್ಥ್ಯ ಹೊಂದಿರುವ ಈ ಸ್ಟೇಡಿಯಂ ಪ್ರಕೃತಿಗೆ ತೆರೆದುಕೊಂಡಿದೆ. ರಾತ್ರಿ ಪಂದ್ಯ ನಡೆಯುವ ಕಾರಣ ಇಲ್ಲಿ ಹುಳದ ಕಾಟ ಕೂಡ ಹೆಚ್ಚಾಗಿ ಕಾಡಲಿದೆ. ಜತೆಗೆ ಮಳೆಯ ಮುನ್ಸೂಚನೆಯೂ ಇದೆ.

ಇದನ್ನೂ ಓದಿ IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

ಆರ್​ಸಿಬಿ ತಂಡದ ನಾಯಕ ಫಾಫ್​ ಡು ಪ್ಲೆಸಿಸ್​ ಕಳೆದ ಪಂದ್ಯದಲ್ಲಿ ಗಾಯಗೊಂಡಿದ್ದು ಈ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ. ಒಂದೊಮ್ಮೆ ಅವರು ಪಂದ್ಯದಿಂದ ಇಂಪ್ಯಾಕ್ಟ್​ ಆಟಗಾರನಾಗಿ ಕೇವಲ ಬ್ಯಾಟಿಂಗ್​ ಮಾಡುವ ಸಾಧ್ಯತೆ ಇದೆ. ವಿರಾಟ್​ ಕೊಹ್ಲಿ ಹಂಗಾಮಿ ನಾಯಕನಾಗಿ ತಂಡವನ್ನು ಮುನ್ನಡೆಸಬಹುದು.

ಪಂಜಾಬ್​ ಗೆದ್ದಿರುವುದು ಬ್ಯಾಟಿಂಗ್​ ಬಲದಿಂದ. ಹೀಗಾಗಿ ಈ ಪಂದ್ಯದಲ್ಲಿಯೂ ಪಂಜಾಬ್​ ಬ್ಯಾಟಿಂಗ್​ ಬಲವನ್ನೇ ನಂಬಿದೆ. ಕಳೆದೊಂದು ವರ್ಷದಿಂದ ತೀವ್ರ ಬ್ಯಾಟಿಂಗ್​ ಬರ ಎದುರಿಸಿದ್ದ ಜಾನಿ ಬೇರ್​ಸ್ಟೋ ಪ್ರಚಂಡ ಫಾರ್ಮ್​ಗೆ ಮರಳಿದ್ದಾರೆ. ಇದು ಪಂಜಾಬ್​ಗೆ ಆನೆ ಬಲ ಬಂದಂತಾಗಿದೆ. ಮಧ್ಯಮ ಕ್ರಮಾಂಕದಲ್ಲಿ ಶಶಾಂಕ್​ ಸಿಂಗ್​ ಮತ್ತು ಅಶುತೋಷ್ ಶರ್ಮಾ ಸಿಡಿಲಬ್ಬರ ಬ್ಯಾಟಿಂಗ್​ ಮೂಲಕ ತಂಡಕ್ಕೆ ನೆರವಾಗಬಲ್ಲರು. ಒಟ್ಟಾರೆಯಾಗಿ ಪಂಜಾಬ್​ಗೆ ಬ್ಯಾಟಿಂಗ್​ಗೇ ಮುಖ್ಯ ಬಲವಾಗಿದೆ.

ಎಚ್‌ಪಿಸಿಎ ಕ್ರಿಕೆಟ್​ ಸ್ಟೇಡಿಯಂನಲ್ಲಿ ಇದುವರೆಗೆ 12 ಐಪಿಎಲ್​ ಪಂದ್ಯಗಳು ನಡೆದಿವೆ. ಈ ಪೈಕಿ 7 ಪಂದ್ಯಗಳನ್ನು ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದ್ದರೆ, 5 ಬಾರಿ ಚೇಸಿಂಗ್​ ನಡೆಸಿದ ತಂಡ ಗೆದ್ದಿದೆ. 2 ವಿಕೆಟ್​ಗೆ 232 ರನ್​ ಇಲ್ಲಿ ದಾಖಲಾದ ಅತ್ಯಧಿಕ ರನ್​ ಗಳಿಕೆಯಾಗಿದೆ. 2011ರಲ್ಲಿ ಪಂಜಾಬ್​ ಮತ್ತು ಆರ್​ಸಿಬಿ ನಡುವಿನ ಪಂದ್ಯದಲ್ಲಿ ಈ ಮೊತ್ತ ದಾಖಲಾಗಿತ್ತು.

ಸಂಭಾವ್ಯ ತಂಡಗಳು

ಪಂಜಾಬ್​ ಕಿಂಗ್ಸ್​: ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್ (ನಾಯಕ), ರಿಲೀ ರೊಸೊ, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿಕೆ), ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

ಆರ್​ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ವಿಲ್ ಜಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ವಿಜಯ್ ಕುಮಾರ್ ವೈಶಾಕ್.

Continue Reading

ಕ್ರೀಡೆ

Neeraj Chopra: 3 ವರ್ಷದ ಬಳಿಕ ದೇಶೀಯ ಕ್ರೀಡಾಕೂಟದಲ್ಲಿ ನೀರಜ್​ ಚೋಪ್ರಾ ಸ್ಪರ್ಧೆ

Neeraj Chopra: ನೀರಜ್‌ ಜೋಪ್ರಾ ಮತ್ತು ಕಿಶೋರ್ ಕುಮಾರ್ ಜೆನಾ ಅವರು ಮೇ 12 ರಿಂದ ಭುವನೇಶ್ವರದಲ್ಲಿ ಪ್ರಾರಂಭವಾಗುವ ದೇಶೀಯ ಸ್ಪರ್ಧೆಯಲ್ಲಿ ಸ್ಪರ್ಧಿಸಲಿದ್ದಾರೆ” ಎಂದು ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಬುಧವಾರ ಟ್ವೀಟ್ ಮಾಡಿ ಉಭಯ ಕ್ರೀಡಾಪಟುಗಳ ಉಪಸ್ಥಿತಿಯನ್ನು ಖಚಿತಪಡಿಸಿದೆ.

VISTARANEWS.COM


on

Neeraj Chopra
Koo

ನವದೆಹಲಿ: ಭಾರತದ ತಾರಾ ಜಾವೆಲಿನ್​ ಎಸೆತಗಾರ, ಟೋಕಿಯೊ ಒಲಿಂಪಿಕ್​​ ಚಿನ್ನದ ಪದಕ ವಿಜೇತ ನೀರಜ್​ ಚೋಪ್ರಾ(Neeraj Chopra) ಅವರು ಇದೇ ಮೇ ತಿಂಗಳ 12 ರಿಂದ 15 ರವರೆಗೆ ಭುವನೇಶ್ವರದಲ್ಲಿ ನಡೆಯಲಿರುವ ರಾಷ್ಟ್ರೀಯ ಫೆಡರೇಶನ್ ಕಪ್‌ನಲ್ಲಿ(Federation Cup) ಭಾಗವಹಿಸಲಿದ್ದಾರೆ. ಈ ಮೂಲಕ ಮೂರು ವರ್ಷಗಳ ಬಳಿಕ ದೇಶೀಯ ಕ್ರೀಡಾಕೂಟದಲ್ಲಿ ಕಣಕ್ಕಿಳಿಯಲಿದ್ದಾರೆ.

“ನೀರಜ್‌ ಜೋಪ್ರಾ ಮತ್ತು ಕಿಶೋರ್ ಕುಮಾರ್ ಜೆನಾ ಅವರು ಮೇ 12 ರಿಂದ ಭುವನೇಶ್ವರದಲ್ಲಿ ಪ್ರಾರಂಭವಾಗುವ ದೇಶೀಯ ಸ್ಪರ್ಧೆಯಲ್ಲಿ ಸ್ಪರ್ಧಿಸಲಿದ್ದಾರೆ” ಎಂದು ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಬುಧವಾರ ಟ್ವೀಟ್ ಮಾಡಿ ಉಭಯ ಕ್ರೀಡಾಪಟುಗಳ ಉಪಸ್ಥಿತಿಯನ್ನು ಖಚಿತಪಡಿಸಿದೆ. ಇದೇ ಜುಲೈ 26ರಿಂದ ಪ್ಯಾರಿಸ್​ನಲ್ಲಿ ನಡೆಯಲಿರುವ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೂ ಅಭ್ಯಾಸ ನಡೆಸುವ ನಿಟ್ಟಿನಲ್ಲಿ ಇದೊಂದು ಉತ್ತಮ ವೇದಿಕೆಯಾಗಿದೆ.

ಈ ಟೂರ್ನಿಗೂ ಮುನ್ನ ನೀರಜ್​ ಮತ್ತು 28 ವರ್ಷದ ಕಿಶೋರ್ ಜೆನಾ ಮೇ 10 ರಂದು ದೋಹಾ ಡೈಮಂಡ್ ಲೀಗ್‌ನಲ್ಲಿ ಸ್ಪರ್ಧಿಸಲಿದ್ದಾರೆ. ಕಿಶೋರ್ ಏಷ್ಯನ್​ ಗೇಮ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ನೀರಜ್​ ಚಿನ್ನದ ಪದಕ ಜಯಿಸಿದ್ದರು. ಚೋಪ್ರಾ ಅವರು ದೇಶೀಯ ಟೂರ್ನಿಯಲ್ಲಿ ಕೊನೆಯ ಬಾರಿಗೆ ಸ್ಪರ್ಧಿಸಿದ್ದು ಮಾರ್ಚ್ 17, 2021 ರಲ್ಲಿ. ಈ ವೇಳೆ ಅವರು 87.80 ಮೀ ಎಸೆಯುವ ಮೂಲಕ ಚಿನ್ನ ಗೆದಿದ್ದರು. ಇದಾದ ಬಳಿಕ ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಸ್​ಶಿಪ್​, ಡೈಮಂಡ್​ ಲೀಗ್​ನಂತಹ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದ ಕಾರಣ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ Neeraj Chopra: ಪ್ಯಾರಿಸ್​ ಒಲಿಂಪಿಕ್ಸ್​ಗೆ ಮುನ್ನ 90 ಮೀಟರ್​ ಗಡಿ ದಾಟುವೆ; ನೀರಜ್​ ಚೋಪ್ರಾ ವಿಶ್ವಾಸ

26 ವರ್ಷದ ನೀರಜ್ ಕಳೆದ ವರ್ಷದ ಏಷ್ಯನ್​ ಗೇಮ್ಸ್​ ಬಳಿಕ ಯಾವುದೇ ಟೂರ್ನಿಯಲ್ಲಿಯೂ ಕಣಕ್ಕಿಳಿದಿಲ್ಲ. ಇದೀಗ ಮೇ 10ರಂದು ದೋಹಾ ಡೈಮಂಡ್​ ಲೀಗ್​ನಲ್ಲಿ ಮರಳಿ ಕಣಕ್ಕಿಳಿಯಲಿದ್ದಾರೆ. ಬಳಿಕ ಜೂನ್​ 18ರಂದು ಫಿನ್​ಲ್ಯಾಂಡ್​ನ ಪಾವೊ ನುರ್ಮಿ ಗೇಮ್ಸ್​ನಲ್ಲೂ ಸ್ಪರ್ಧಿಸಲಿದ್ದಾರೆ. ಈ ಟೂರ್ನಿಯಲ್ಲಿ 90 ಮೀ. ಗಡಿ ದಾಟಲು ಅವರು ಪಣ ತೊಟ್ಟಿದ್ದಾರೆ.

ನೀರಜ್​ ಚೋಪ್ರಾ ಕಳೆದ ವರ್ಷ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಅಲ್ಲದೆ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಗೆದ್ದಿದ್ದರು. ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ.

ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ನೀರಜ್‌ ಈ ಬಾರಿಯೂ ಚಿನ್ನ ಗೆಲ್ಲಲಿ ಎನ್ನುವುದು ಶತ ಕೋಟಿ ಭಾರತೀಯರ ಆಶಯ ಮತ್ತು ಹಾರೈಕೆಯಾಗಿದೆ. 2024ರಲ್ಲಿ ನಡೆಯುವ ಪ್ಯಾರಿಸ್ ಒಲಿಂಪಿಕ್ಸ್ ಅತಿ ದೊಡ್ಡ ಮತ್ತು ಮಹತ್ವದ ಕ್ರೀಡಾಕೂಟವಾಗಿದೆ. ಸುಮಾರು 200 ದೇಶಗಳ 10,000 ಕ್ರೀಡಾಪಟುಗಳು ಒಲಿಂಪಿಕ್ ವೈಭವಕ್ಕಾಗಿ ಸ್ಪರ್ಧಿಸಲಿದ್ದಾರೆ. ಪ್ಯಾರಿಸ್ ತನ್ನ ಮೂರನೇ ಬಾರಿಗೆ ಆತಿಥೇಯ ನಗರವಾಗಿ (1900 ಮತ್ತು 1924 ರ ನಂತರ) ಟೂರ್ನಿಯ ಆತಿಥ್ಯ ವಹಿಸಿಕೊಳ್ಳಲಿದೆ. ಜುಲೈ 26 ರಿಂದ ಆಗಸ್ಟ್ 11ರ ತನಕ ಟೂರ್ನಿ ನಡೆಯಲಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಕ್ರೀಡೆ

T20 World Cup 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​​; ಈ ಮೊಬೈಲ್‌ ಆ್ಯಪ್​ನಲ್ಲಿ ಟಿ20 ವಿಶ್ವಕಪ್ ಉಚಿತ ಪ್ರಸಾರ

T20 World Cup 2024: ಕಳೆದ ವರ್ಷ ಏಕದಿನ ವಿಶ್ವಕಪ್ ಮತ್ತು ಏಷ್ಯಾ ಕಪ್‌ ಟೂರ್ನಿಯನ್ನು ಕೂಡ ಡಿಸ್ನಿ + ಹಾಟ್‌ಸ್ಟಾರ್, ಮೊಬೈಲ್​ ಬಳಕೆ ದಾರರಿಗೆ ಉಚಿತ ವೀಕ್ಷಣೆಯನ್ನು ನೀಡಿತ್ತು. ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಇದೇ ನಿಲುವನ್ನು ಮುಂದುವರಿಸಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಇದೇ ಜೂನ್​ 1 ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೂ ಮುನ್ನವೇ ​ಡಿಸ್ನಿ + ಹಾಟ್‌ಸ್ಟಾರ್(Disney+ Hotstar) ಕ್ರಿಕೆಟ್​ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು ಈ ವರ್ಷದ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಅನ್ನು OTT ಪ್ಲಾಟ್‌ಫಾರ್ಮ್‌ನಲ್ಲಿ ಉಚಿತವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ ಎಂದು ಡಿಸ್ನಿ + ಹಾಟ್‌ಸ್ಟಾರ್ ಬುಧವಾರ ಘೋಷಿಸಿದೆ.

ಕಳೆದ ವರ್ಷ ಏಕದಿನ ವಿಶ್ವಕಪ್ ಮತ್ತು ಏಷ್ಯಾ ಕಪ್‌ ಟೂರ್ನಿಯನ್ನು ಕೂಡ ಡಿಸ್ನಿ + ಹಾಟ್‌ಸ್ಟಾರ್, ಮೊಬೈಲ್​ ಬಳಕೆ ದಾರರಿಗೆ ಉಚಿತ ವೀಕ್ಷಣೆಯನ್ನು ನೀಡಿತ್ತು. ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಇದೇ ನಿಲುವನ್ನು ಮುಂದುವರಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಡಿಸ್ನಿ+ ಹಾಟ್‌ಸ್ಟಾರ್ ಇಂಡಿಯಾದ ಮುಖ್ಯಸ್ಥ ಸಜಿತ್ ಶಿವಾನಂದನ್, “ಐಸಿಸಿ ಪುರುಷರ ಟಿ20 ವಿಶ್ವಕಪ್ 2024 ಅನ್ನು ಮೊಬೈಲ್‌ನಲ್ಲಿ ಉಚಿತವಾಗಿ ನೀಡುವ ಮೂಲಕ, ನಾವು ಕ್ರಿಕೆಟ್ ಆಟವನ್ನು ಬೆಳೆಸುವ, ದೇಶಾದ್ಯಂತ ಹೆಚ್ಚಿನ ಪ್ರೇಕ್ಷಕರನ್ನು ತಲುಪುವ ಗುರಿಯನ್ನು ಹೊಂದಿದ್ದೇವೆ” ಎಂದರು.

ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಸಮಯದಲ್ಲಿ, ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್‌ನಲ್ಲಿ ಉಚಿತವಾಗಿ ಸ್ಟ್ರೀಮ್ ಮಾಡಲಾಯಿತು. ಇದು ಏಕಕಾಲದಲ್ಲಿ ಅತ್ಯಧಿಕ ವೀಕ್ಷಣೆ ಕಂಡ 5 ಬಾರಿಯ ದಾಖಲೆಗಳನ್ನು ಮುರಿದಿತ್ತು. ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್‌ನಲ್ಲಿ ಪಂದ್ಯ ಏಕಕಾಲಕ್ಕೆ 5.9 ಕೋಟಿ ವೀಕ್ಷಣೆ ಕಂಡಿತ್ತು. ಈ ದಾಖಲೆ ಟಿ20 ವಿಶ್ವಕಪ್​ನಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ ಎಂದು ಶಿವಾನಂದನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ಪ್ರಕಟಗೊಂಡ ಎಲ್ಲ ತಂಡಗಳ ಆಟಗಾರರ ಪಟ್ಟಿ

ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

Continue Reading

ಕ್ರೀಡೆ

IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

IPL 2024: ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧದ ಪಂದ್ಯದಲ್ಲಿ ಮ್ಯಾಕ್‌ಗುರ್ಕ್ ಅರ್ಧಶತಕ ಬಾರಿಸುವ ಮೂಲಕ 20 ಎಸೆತಗಳಿಗಿಂತ ಕಡಿಮೆ ಎಸೆತ ಎದುರಿಸಿ ಅತ್ಯಧಿಕ ಬಾರಿ ಐಪಿಎಲ್​ ಅರ್ಧಶತಕ ಬಾರಿಸಿದ ದಾಖಲೆ ತಮ್ಮದಾಗಿಸಿಕೊಂಡರು.

VISTARANEWS.COM


on

IPL 2024
Koo

ನವದೆಹಲಿ: ಈ ಬಾರಿಯ ಐಪಿಎಲ್​ನಲ್ಲಿ(IPL 2024) ಬಿರುಸಿನ ಬ್ಯಾಟಿಂಗ್​ ಮೂಲಕ ಸಂಚಲನ ಮೂಡಿಸಿರುವ ಆಸ್ಟ್ರೇಲಿಯಾದ ಬ್ಯಾಟರ್​, ಡೆಲ್ಲಿ(Delhi Capitals) ತಂಡದ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್(Jake Fraser-McGurk) ಐಪಿಎಲ್​ನಲ್ಲಿ ನೂತನ ದಾಖಲೆಯೊಂದನ್ನು ಬರೆದಿದ್ದಾರೆ. ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ 20 ಎಸೆತಗಳಿಗಿಂತ ಕಡಿಮೆ ಎಸೆತ ಎದುರಿಸಿ ಅತ್ಯಧಿಕ ಬಾರಿ ಐಪಿಎಲ್​ ಅರ್ಧಶತಕ ಬಾರಿಸಿದ ದಾಖಲೆ ತಮ್ಮದಾಗಿಸಿಕೊಂಡರು.

ರಾಜಸ್ಥಾನ್​ ರಾಯಲ್ಸ್​ ಎದುರಿನ ಪಂದ್ಯದಲ್ಲಿ ಮ್ಯಾಕ್‌ಗುರ್ಕ್ ಕೇವಲ 19 ಎಸೆತಗಳಿಂದ ಅರ್ಧತಕ ಬಾರಿಸುವ ಮೂಲಕ 20 ಎಸೆತಗಳಿಗಿಂತ ಕಡಿಮೆ ಎಸೆದ ಎದುರಿಸಿ ಅತ್ಯಧಿಕ ಐಪಿಎಲ್​ ಅರ್ಧಶತಕ ಬಾರಿಸಿದ ದಾಖಲೆ ಬರೆದರು. 3 ಬಾರಿ ಮ್ಯಾಕ್‌ಗುರ್ಕ್ ಈ ಸಾಧನೆ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್​ 2 ಬಾರಿ ಈ ಸಾಧನೆ ಮಾಡಿದ್ದಾರೆ. ಕಳೆದ ಮುಂಬೈ ಇಂಡಿಯನ್ಸ್​ ಮತ್ತು ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಮ್ಯಾಕ್‌ಗುರ್ಕ್ 15 ಎಸೆತಗಳಿಂದ ಅರ್ಧಶತಕ ಬಾರಿಸಿದ್ದರು.

20 ಎಸೆತಗಳಿಗಿಂತ ಕಡಿಮೆ ಎಸೆತ ಎದುರಿಸಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರರು


ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್- 3

ಯಶಸ್ವಿ ಜೈಸ್ವಾಲ್​-2

ನಿಕೋಲಸ್​ ಪೂರನ್​-2

ಇಶಾನ್​ ಕಿಶನ್​-2

ಸುನೀಲ್​ ನರೈನ್​-2

ಕೈರನ್​ ಪೊಲಾರ್ಡ್​-2

ಟ್ರಾವಿಸ್​ ಹೆಡ್​-2​

ಕೆ.ಎಲ್​ ರಾಹುಲ್​-2

ಅರುಣ್​ ಜೇಟ್ಲಿ ಕ್ರಿಕೆಟ್​​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 221 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್​ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 201 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024: ಅಂಪೈರ್​ ಜತೆ ವಾಗ್ವಾದ; ಸಂಜುಗೆ ಬಿತ್ತು ಭಾರೀ ದಂಡ

ಸಂಜು ಸ್ಯಾಮ್ಸನ್​ ಕ್ರೀಸ್​ನಲ್ಲಿರುವ ತನಕ ಪಂದ್ಯ ರಾಜಸ್ಥಾನ್ ಪರವಾಗಿತ್ತು. ಆದರೆ, ಸಂಜು ವಿಕೆಟ್​ ಪತನದ ಬಳಿಕ ಏಕಾಏಕಿ ಕುಸಿತ ಕಂಡ ರಾಜಸ್ತಾನ್​ ಸೋಲಿಗೆ ಸಿಲುಕಿತು. ಕುಲ್​ದೀಪ್​​ ಯಾದವ್​ 25 ರನ್​ಗಳಗೆ ಪ್ರಮುಖ 2 ವಿಕೆಟ್ ಉರುಳಿಸುವ ಮೂಲಕ ಕೊನೇ ಹಂತದಲ್ಲಿ ಪಂದ್ಯಕ್ಕೆ ತಿರುವು ತಂದುಕೊಟ್ಟರು. ಸಂಜು 46 ಎಸೆತಕ್ಕೆ 86 ರನ್ ಬಾರಿಸಿ ಹೋಪ್​ ಹಿಡಿದ ಸೂಪರ್​ ಕ್ಯಾಚ್​ಗೆ ವಿಕೆಟ್​ ಕೈಚೆಲ್ಲಿದರು.

Continue Reading
Advertisement
Covishield
ದೇಶ2 mins ago

Covishield: ಭಾರತದಲ್ಲಿ ಕೋವಿಶೀಲ್ಡ್‌ ಸೈಡ್‌ ಎಫೆಕ್ಟ್‌ನ ಎಲ್ಲ ಮಾಹಿತಿ ಬಹಿರಂಗ ಎಂದ ಕಂಪನಿ, ಉತ್ಪಾದನೆಯೂ ಸ್ಥಗಿತ!

RCB vs PBKS
ಕ್ರೀಡೆ22 mins ago

RCB vs PBKS: ಪಂಜಾಬ್​-ಆರ್​ಸಿಬಿ ಸೆಣಸಾಟ; ಸೋತವರು ಟೂರ್ನಿಯಿಂದ ಔಟ್​

Prajwal Revanna Case JDS delegation moves Womens Commission to arrest pen drive allottees
ಕ್ರೈಂ37 mins ago

Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

Zomato
ದೇಶ39 mins ago

Zomato: ಜೊಮ್ಯಾಟೊ ಹೊಸ ತಂತ್ರಜ್ಞಾನ; ಮನೆ ಹೊರಗೆ ಕಾಲಿಡುವ ಮುನ್ನ ಇದನ್ನು ನೋಡಲೇಬೇಕು!

Hindu population
ದೇಶ40 mins ago

Hindu Population: ಹಿಂದೂಗಳ ಜನಸಂಖ್ಯೆ ಶೇ.7.8 ಕುಸಿತ; ಮುಸ್ಲಿಮರ ಸಂಖ್ಯೆ ಶೇ.43.15 ಏರಿಕೆ!

Rain News
ಪ್ರಮುಖ ಸುದ್ದಿ43 mins ago

Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

BJP Karnataka State police issues notices to JP Nadda and Amit Malviya and BY Vijayendra
ಕ್ರೈಂ1 hour ago

BJP Karnataka: ಜೆ.ಪಿ. ನಡ್ಡಾ, ಅಮಿತ್‌ ಮಾಳವೀಯಾಗೆ ರಾಜ್ಯ ಪೊಲೀಸರ ನೋಟಿಸ್‌; 7 ದಿನದೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ

Sam Pitroda
ಪ್ರಮುಖ ಸುದ್ದಿ1 hour ago

Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Neeraj Chopra
ಕ್ರೀಡೆ2 hours ago

Neeraj Chopra: 3 ವರ್ಷದ ಬಳಿಕ ದೇಶೀಯ ಕ್ರೀಡಾಕೂಟದಲ್ಲಿ ನೀರಜ್​ ಚೋಪ್ರಾ ಸ್ಪರ್ಧೆ

Cancer Risk
ಆರೋಗ್ಯ2 hours ago

Cancer Risk: ಕ್ಯಾನ್ಸರ್ ಅಪಾಯದಿಂದ ಪಾರಾಗಲು ಯಾವ ಆಹಾರ ಸೇವಿಸಬಾರದು? ಯಾವ ಆಹಾರ ಸೇವಿಸಬೇಕು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ16 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ24 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌