Pro Kabaddi: ರೋಚಕ ಪಂದ್ಯದಲ್ಲಿ ಒಂದು ಅಂಕದ ಅಂತರದಿಂದ ಗೆದ್ದ ಪ್ಯಾಂಥರ್ಸ್ - Vistara News

ಕ್ರೀಡೆ

Pro Kabaddi: ರೋಚಕ ಪಂದ್ಯದಲ್ಲಿ ಒಂದು ಅಂಕದ ಅಂತರದಿಂದ ಗೆದ್ದ ಪ್ಯಾಂಥರ್ಸ್

ಶ್ರೀ ಶಿವ ಛತ್ರಪತಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್​ನಲ್ಲಿ ನಡೆದ ಭಾನುವಾರದ ಪ್ರೊ ಕಬಡ್ಡಿ(Pro Kabaddi) ಲೀಗ್​ನ ಪಂದ್ಯದಲ್ಲಿ ಯು ಮುಂಬಾ ಮತ್ತು ಜೈಪುರ ಪಿಂಕ್​ ಪ್ಯಾಂಥರ್ಸ್​ ಗೆಲುವು ಸಾಧಿಸಿದೆ.

VISTARANEWS.COM


on

Patna Pirates vs Jaipur Pink Panthers, Pro Kabaddi League
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪುಣೆ: ಅತ್ಯಂತ ಜಿದ್ದಾಜಿದ್ದಿನಿಂದ ನಡೆದ ಭಾನುವಾರದ ಮೊದಲ ಪ್ರೊ ಕಬಡ್ಡಿ(Pro Kabaddi) ಲೀಗ್​ನ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಜೈಪುರ ಪಿಂಕ್​ ಪ್ಯಾಂಥರ್ಸ್​ ತಂಡ ಮಾಜಿ ಚಾಂಪಿಯನ್​ ಪಾಟ್ನಾ ಪೈರೆಟ್ಸ್‌ ವಿರುದ್ಧ 1 ಅಂಕಗಳ ರೋಚಕ ಗೆಲುವು ಸಾಧಿಸಿದೆ. ಗೆಲುವಿನ ಅಂತರ 29-28.

ಶ್ರೀ ಶಿವ ಛತ್ರಪತಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್​ನ ವಿ. ಅಜಿತ್​ ರೇಡಿಂಗ್​ ಸುರಿಮಳೆ ಸುರಿಸಿ ಬರೋಬ್ಬರಿ 16 ಅಂಕ ಗಳಿಸಿದರು. ಅವರ ರೇಡಿಂಗ್​ ದಾಳಿಯನ್ನು ತಡೆದು ನಿಲ್ಲಿಸುವಲ್ಲಿ ಎದುರಾಳಿ ಪಾಟ್ನಾ ಡಿಫೆಂಡರ್​ಗಳು ಸಂಪೂರ್ಣವಾಗಿ ವಿಫಲರಾದರು. ಒಟ್ಟು 20 ರೇಡ್​ ಮಾಡಿದರು. ಆದರೆ, ತಂಡದ ಸ್ಟಾರ್​ ಮತ್ತು ಅನುಭವಿ ರೇಡರ್​ ಅರ್ಜುನ್​ ಈ ಪಂದ್ಯದಲ್ಲಿ ತಮ್ಮ ಚಮತ್ಕಾರ ತೋರುವಲ್ಲಿ ಹಿನ್ನಡೆ ಅನುಭವಿಸಿದರು. ಅವರು ಕೇವಲ ಮೂರು ಅಂಕಕ್ಕೆ ಸೀಮಿತರಾದರು. ಡಿಫೆಂಡರ್​ ರೆಜಾ ಮಿರಬಗೇರಿ ಕೂಡ ಮೂರು ಅಂಕ ಕಲೆಹಾಕಿದರು.

ಪಾಟ್ನಾ ಪರ ಪ್ರಮುಖ ರೇಡರ್​ ಸಚಿನ್​ ಮತ್ತು ಸಂದೀಪ್​ ತಲಾ 7 ಅಂಕ ಗಳಿಸಿದರು. ಉಭಯ ಆಟಗಾರರು ಗೆಲುವಿಗಾಗಿ ಶತ ಪ್ರಯತ್ನ ನಡೆಸಿದರೂ ಅಂತಿಮ ಹಂತದಲ್ಲಿ ಒಂದು ಅಂಕದ ಹಿನ್ನಡೆಯಿಂದ ಸೋಲು ಕಂಡರು. ಆದರೂ ತಂಡ ಹೋರಾಟ ಅತ್ಯಂತ ರೋಚಕವಾಗಿತ್ತು. ಸುಧಾಕರ್​ 3, ಕೃಷ್ಣ ಮತ್ತು ಅಂಕಿತ್​ ತಲಾ 2 ಅಂಕ ಗಳಿಸಿದರು.

ಇದನ್ನೂ ಓದಿ Pro Kabaddi: 5ನೇ ಪ್ರಯತ್ನದಲ್ಲಿ ಗೆಲುವಿನ ಖಾತೆ ತೆರೆದ ಬೆಂಗಳೂರು ಬುಲ್ಸ್​

ಮುಂಬಾಗೆ ಗೆಲುವು

ದಿನದ ಮತ್ತೊಂದು ಪಂದ್ಯದಲ್ಲಿ ಯು ಮುಂಬಾ ತಂಡ ತಮಿಳ್​ ತಲೈವಾಸ್​ ವಿರುದ್ಧ 46-33 ಅಂಕಗಳಿಂದ ಗೆದ್ದು ಬೀಗಿತು. ಇದು ಮುಂಬೈಗೆ ಒಳಿದ ಮೂರನೇ ಗೆಲುವು. ಈ ಪಂದ್ಯದಲ್ಲಿ ರೇಡಿಂಗ್​ ಮತ್ತು ಡಿಫೆಂಡಿಂಗ್​ ವಿಭಾಗದಲ್ಲಿ ಮುಂಬಾ ಉತ್ತಮ ಪ್ರದರ್ಶನ ತೋರ್ಪಡಿಸಿತು.

ಮುಂಬೈ ಪರ ಗುಮಾನ್​ ಸಿಂಗ್​(10), ಅಮೀರ್ಮೊಹಮ್ಮದ್ ಜಫರ್ದಾನೇಶ್(10), ವಿಶ್ವಂತ್(5), ಸೋಂಬಿರ್(5) ಮತ್ತು ರಿಂಕು(3) ಅಂಕ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ತಮಿಳ್​ ಪರ ನರೇಂದರ್​(10) ಅಜಿಂಕ್ಯಾ ಪವಾರ್​(7) ಸಾಗರ್​ ಮತ್ತು ನಾಯಕ ಸಾಹಿಲ್ ಗುಲಿಯಾ ತಲಾ 5 ಅಂಕ ಗಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

Womens Asia Cup Final:ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

VISTARANEWS.COM


on

Womens Asia Cup Final
Koo

ದಾಂಬುಲಾ (ಶ್ರೀಲಂಕಾ): ಮಹಿಳಾ ಏಷ್ಯಾಕಪ್​ ಫೈನಲ್​(Womens Asia Cup Final) ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ನಾಳೆ ನಡೆಯುವ ಫೈನಲ್​ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್​ ಭಾರತ ಮತ್ತು ಶ್ರೀಲಂಕಾ(India Women vs Sri Lanka Women Final) ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. 7 ಬಾರಿಯ ಚಾಂಪಿಯನ್​ ಭಾರತವೇ ಈ ಬಾರಿಯೂ ಪ್ರಶಸ್ತಿ ಗೆಲ್ಲುವ ಹಾಟ್‌ ಫೇವರಿಟ್‌ ಆಗಿದೆ. ಅತ್ತ ಆತಿಥೇಯ ಲಂಕಾ ಚೊಚ್ಚಲ ಪ್ರಶಸ್ತಿ ಗೆಲ್ಲುವ ಇದಾರೆಯಲ್ಲಿದೆ. ಇತ್ತಂಡಗಳು ಕೂಡ ಈ ಬಾರಿ ಅಜೇಯ ತಂಡಗಳಾಗಿ ಫೈನಲ್​ಗೆ ಲಗ್ಗೆಯಿಟ್ಟಿದೆ. ಹೀಗಾಗಿ ಈ ಪಂದ್ಯದವನ್ನು ಹೈವೋಲ್ಟೇಜ್​ ಎಂದು ನಿರೀಕ್ಷೆ ಮಾಡಬಹುದು.

ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

6ನೇ ಬಾರಿ ಭಾರತ-ಲಂಕಾ ಫೈನಲ್​ ಮುಖಾಮುಖಿ


ಇದುವರೆಗಿನ ಮಹಿಳಾ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಮತ್ತು ಶ್ರೀಲಂಕಾ 5 ಬಾರಿ ಫೈನಲ್​ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತವೇ ಗೆದ್ದು ಬೀಗಿದೆ. ಈ ಬಾರಿಯದ್ದು 6ನೇ ಮುಖಾಮುಖಿ. 6ನೇ ಪ್ರಯತ್ನದಲ್ಲಾದರೂ ಲಂಕಾ ಪ್ರೋಫಿ ಗೆಲ್ಲಬಹುದೇ ಎಂಬ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ.

ಭಾರತ ಪರ ಬ್ಯಾಟಿಂಗ್​ನಲ್ಲಿ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮ ಮತ್ತು ಸ್ಮೃತಿ ಮಂಧಾನ ಎಲ್ಲ ಪಂದ್ಯಗಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರಿದ್ದಾರೆ. ಶಫಾಲಿ 184 ರನ್​ ಗಳಿಸಿ ಕೂಟದ ಅತ್ಯಧಿಕ ರನ್​ ಗಳಿಸಿದ ಆಟಗಾರ್ತಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ಬೌಲಿಂಗ್ ವಿಭಾಗ ತುಂಬಾನೆ ಘಾತಕವಾಗಿದೆ. ಸ್ಪಿನ್ನ್​ ಮತ್ತು ವೇಗದ ವಿಭಾಗದಲ್ಲಿ ಸಮತೋಲಿತವಾಗಿದೆ. ರಾಧಾ ಯಾದವ್​, ಆಲ್​ರೌಂಡರ್​ ದೀಪ್ತಿ ಶರ್ಮಾ ತಂಡದ ಸ್ಪಿನ್ನರ್​ಗಳಾದರೆ, ವೇಗಿ ರೇಣುಕಾ ಸಿಂಗ್​ ಮತ್ತು ಪೂಜಾ ವಸ್ತ್ರಾಕರ್​ ವೇಗಿಗಳಾಗಿದ್ದಾರೆ.

ಇದನ್ನೂ ಓದಿ Womens Asia Cup T20: ಬಾಂಗ್ಲಾ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ

ಲಂಕಾ ಕೂಡ ಬಲಿಷ್ಠ


ಎದುರಾಳಿ ಶ್ರೀಲಂಕಾ ಕೂಡ ಭಾರತದ ಹಾಗೆ ಬಲಿಷ್ಠವಾಗಿದೆ. ಅದರಲ್ಲೂ ಕೂಟದ ಗರಿಷ್ಠ ಸ್ಕೋರರ್​ ಎನಿಸಿಕೊಂಡಿರುವ ನಾಯಕಿ ಚಾಮರಿ ಅತಪಟ್ಟು ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಒಂದು ಶತಕ ಕೂಡ ಬಾರಿಸಿದ್ದಾರೆ. ಆಡಿದ 4 ಪಂದ್ಯಗಳಿಂದ 243 ರನ್​ ಕಲೆ ಹಾಕಿದ್ದಾರೆ. ಇವರನ್ನು ಹೆಚ್ಚು ಹೊತ್ತು ಕ್ರೀಸ್​ ಆಕ್ರಮಿಸದಂತೆ ಭಾರತೀಯ ಬೌಲರ್​ಗಳು ನೋಡಿಕೊಂಡರೆ ಅರ್ಧ ಪಂದ್ಯ ಗೆದ್ದಂತೆ. ನಿನ್ನೆ ನಡೆದಿದ್ದ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾವನ್ನು ಮಣಿಸಿದರೆ, ಶ್ರೀಲಂಕಾ ಪಾಕಿಸ್ತಾನವನ್ನು ಸೋಲಿಸಿ ಫೈನಲ್​ ಪ್ರವೇಶಿಸಿತ್ತು.

ಸಂಭಾವ್ಯ ತಂಡಗಳು


ಶ್ರೀಲಂಕಾ: ವಿಶ್ಮಿ ಗುಣರತ್ನೆ, ಚಾಮರಿ ಅಟಪಟ್ಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಹಾಸಿನಿ ಪೆರೇರಾ, ಅನುಷ್ಕಾ ಸಂಜೀವನಿ (ವಾಕ್), ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಇನೋಶಿ ಪ್ರಿಯದರ್ಶನಿ, ಉದೇಶಿಕಾ ಪ್ರಬೋಧನಿ, ಸುಗಂದಿಕಾ ಕುಮಾರಿ, ಅಚಿನಿ ಕುಲಸೂರ್ಯ.

ಭಾರತ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಉಮಾ ಚೆಟ್ರಿ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೀ), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ತನುಜಾ ಕನ್ವರ್, ರೇಣುಕಾ ಠಾಕೂರ್ ಸಿಂಗ್.

Continue Reading

ಕ್ರೀಡೆ

Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

Paris Olympic: 10 ಮೀ. ಏರ್​ ರೈಫಲ್​ ಮಿಶ್ರ ಸ್ಪರ್ಧೆಯಲ್ಲಿ ಭಾರತದ ಎರಡೂ ತಂಡಗಳು ಕೂಡ ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಚೀನಾ, ಕೊರಿಯಾ, ಜರ್ಮನಿ ಮತ್ತು ಕಝಾಕಿಸ್ತಾನ್ ಪದಕ ಸುತ್ತಿಗೆ ಪ್ರವೇಶಿಸಿತು.

VISTARANEWS.COM


on

Paris Olympic
Koo

ಪ್ಯಾರಿಸ್​: ಒಲಿಂಪಿಕ್ಸ್​(Paris Olympic) ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ ಮಾಡಿದ್ದ ಭಾರತೀಯ ಕ್ರಿಡಾಭಿಮಾನಿಗಳಿಗೆ ಮೊದಲ ದಿನವೇ ನಿರಾಸೆಯಾಗಿದೆ. ಇಂದು(ಶನಿವಾರ) ನಡೆದ 10 ಮೀ. ಏರ್​ ರೈಫಲ್​ ಮಿಶ್ರ ತಂಡ ವಿಭಾಗದಲ್ಲಿ ಭಾರತ ಸೋಲು ಕಂಡು ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಆದರೆ ರೋಯಿಂಗ್​ನಲ್ಲಿ ಬಾಲರಾಜ್ ಪನ್ವಾರ್(Balraj Panwar) ಹೀಟ್ಸ್​ನಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ರೆಪೆಚೇಜ್ ರೌಂಡ್​ಗೆ ಅರ್ಹತೆ ಪಡೆದಿದ್ದಾರೆ. ಈ ಪಂದ್ಯ ನಾಳೆ(ಭಾನುವಾ) ನಡೆಯಲಿದೆ.

ಸಂದೀಪ್​ ಸಿಂಗ್​-ಇಲವೆನಿಲ್​ ವಲರಿವನ್​ ಜೋಡಿ 12ನೇ ಸ್ಥಾನ ಪಡೆದರೆ, ಅರ್ಜುನ್​ ಬಬುಟ-ರಮಿತಾ ಜಿಂದಾಲ್ ಜೋಡಿ 6ನೇ ಸ್ಥಾನ ಪಡೆಯಿತು. ಈ ಜೋಡಿ ಒಟ್ಟು 628.7 ಅಂಕಗಳಿಸಿದರೆ, ಸಂದೀಪ್​ ಸಿಂಗ್​-ಇಲವೆನಿಲ್ ಜೋಡಿ 626.3 ಅಂಕ ಗಳಿಸಿತು. ಇದರೊಂದಿಗೆ 10 ಮೀ. ಏರ್​ ರೈಫಲ್​ ಮಿಶ್ರ ಸ್ಪರ್ಧೆಯಲ್ಲಿ ಭಾರತದ ಎರಡೂ ತಂಡಗಳು ಕೂಡ ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಚೀನಾ, ಕೊರಿಯಾ, ಜರ್ಮನಿ ಮತ್ತು ಕಝಾಕಿಸ್ತಾನ್ ಪದಕ ಸುತ್ತಿಗೆ ಪ್ರವೇಶಿಸಿತು.

ಪುರುಷರ ಸಿಂಗಲ್ ಸ್ಕಲ್ಸ್ ಹೀಟ್ಸ್​ನಲ್ಲಿ ಕಣಕ್ಕಿಳಿದ್ದ ಬಾಲರಾಜ್ ಪನ್ವಾರ್ ಕೊನೆಯ ಹಂತದ ಸುತ್ತಿನವರೆಗೂ ಮೂರನೇ ಸ್ಥಾನ ಕಾಯ್ದುಕೊಂಡಿದ್ದರು. ಆದರೆ ಫಿನಿಶಿಂಗ್​ ಹಂತದ ವೇಳೆ ಹಿನ್ನಡೆ ಅನುಭವಿಸಿ ಅಂತಿಮವಾಗಿ 07:07.11 ನಿಮಿಷದಲ್ಲಿ ಹೀಟ್ಸ್ ಪೂರ್ಣಗೊಳಿಸಿ ನಾಲ್ಕನೇ ಸ್ಥಾನ ಪಡೆದರು.

 

ಇಂದು ನಡೆಯುವ ಪುರುಷರ ಸಿಂಗಲ್ಸ್‌ ಟೆಬಲ್​ ಟೆನಿಸ್​ನಲ್ಲಿ ಅನುಭವಿ ಆಟಗಾರ, 41 ವರ್ಷದ ಶರತ್ ಕಮಲ್ ಅವರು ತಮ್ಮ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ವಿರುದ್ಧ ಆಡಲಿದ್ದಾರೆ. ಮತ್ತೋರ್ವ ಭಾರತೀಯ ಆಟಗಾರ, ಗುಜರಾತ್‌ನ 31 ವರ್ಷದ ಹರ್ಮಿತ್ ದೇಸಾಯಿ ಜೋರ್ಡಾನ್‌ನ ಝೈದ್ ಅಬೊ ಯಮನ್ ವಿರುದ್ಧ ಸೆಣಸಲಿದ್ದಾರೆ.

ಮಹಿಳೆಯರ ಸಿಂಗಲ್ಸ್‌ನಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತೆ, ಈ ಬಾರಿಯ ಪದಕ ಭರಸೆಯ ಆಟಗಾರ್ತಿಯಾಗಿ ಗುರುತಿಸಿಕೊಂಡಿರುವ ಮಣಿಕಾ ಬಾತ್ರಾ ಅವರು ಗ್ರೇಟ್‌ ಬ್ರಿಟನ್‌ನ ಅನಾ ಹರ್ಸೆ ವಿರುದ್ಧ ಸೆಣಸಾಟ ನಡೆಸಲಿದ್ದಾರೆ. ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಬಾತ್ರ ಕಳೆದ ಬಾರಿಯ ಟೋಕಿಯೊ ಒಲಿಂಪಿಕ್ಸ್​ ತಪ್ಪನ್ನು ಇಲ್ಲಿ ಮರುಕಳಿಸಲ್ಲ ಎಂದು ಹೇಳುವ ಮೂಲಕ ಪದಕ ಗೆಲ್ಲುವು ವಿಶ್ವಾಸ ವ್ಯಕ್ತಪಡಿಸಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ 32ರ ಘಟ್ಟದದ ಪಂದ್ಯದಲ್ಲಿ ಸೋಲು ಕಂಡಿದ್ದರು.

ಪುರುಷರ ತಂಡ ವಿಭಾಗದಲ್ಲಿ ಶರತ್ ಕಮಲ್, ದೇಸಾಯಿ ಮತ್ತು ಮಾನವ್ ಠಕ್ಕರ್ ಕಣಕ್ಕಿಳಿದರೆ, ಮಹಿಳೆಯರ ತಂಡದಲ್ಲಿ ಮಣಿಕಾ, ಶ್ರೀಜಾ ಅಕುಲಾ ಹಾಗೂ ಕರ್ನಾಟಕದ ಅರ್ಚನಾ ಕಾಮತ್ ಸ್ಪರ್ಧಿಸಲಿದ್ದಾರೆ. ಜಿ. ಸತ್ಯನ್, ಐಹಿಕಾ ಮುಖರ್ಜಿ ಮೀಸಲು ಆಟಗಾರರಾಗಿದ್ದಾರೆ. ಶರತ್ ಕಮಲ್ ಅವರಿಗೆ ಇದು ಬಹುತೇಕ ಕೊನಯ ಒಲಿಂಪಿಕ್ಸ್​ ಟೂರ್ನಿಯಾಗಿದೆ. ಹೀಗಾಗಿ ಅವರು ಐತಿಹಾಸಿಕ ಪದಕ ಗೆದ್ದು ತಮ್ಮ ಕ್ರೀಡಾ ವೃತ್ತಿ ಜೀವನನ್ನು ಸ್ಮರಣೀಯಗೊಳಿಸಲಿ ಎನ್ನುವುದು ಭಾರತೀಯರ ಹಾರೈಕೆ.

Continue Reading

ಕ್ರೀಡೆ

Paris Olympics: ಶುಭಾರಂಭದ ನಿರೀಕ್ಷೆಯಲ್ಲಿ ಪುರುಷರ ಹಾಕಿ ತಂಡ; ಕಿವೀಸ್​ ಎದುರಾಳಿ

Paris Olympics: ಈ ಬಾರಿಯ 16 ಸದಸ್ಯರ ತಂಡದಲ್ಲಿ 11 ಮಂದಿ ಆಟಗಾರರು ಟೋಕಿಯೊ ಒಲಿಂಪಿಕ್ಸ್​ ಆಡಿದ ಆಟಗಾರರಾಗಿದ್ದಾರೆ. ಗೋಲ್ ಕೀಪರ್ ಪಿಆರ್ ಶ್ರೀಜೇಶ್ (PR Sreejesh) ಅವರಿಗೆ ಇದು ಕೊನೆಯ ಒಲಿಂಪಿಕ್ಸ್​ ಕೂಟವಾಗಿದೆ. ಈಗಾಗಲೇ ಅವರು ತಮ್ಮ ನಿವೃತ್ತಿಯನ್ನು ಕೂಡ ಘೋಷಿಸಿದ್ದಾರೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಟೋಕಿಯೊ ಒಲಿಂಪಿಕ್ಸ್​(Paris Olympics) ಕಂಚಿನ ಪದಕ ವಿಜೇತ ಭಾರತ ಪುರುಷರ ಹಾಕಿ ತಂಡ(Hockey India) ಇಂದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ತನ್ನ ಅಭಿಯಾನ ಆರಂಭಿಸಲಿದೆ. ಎದುರಾಳಿ ನ್ಯೂಜಿಲ್ಯಾಂಡ್(hockey india vs new zealand)​. ಇತ್ತಂಡಗಳ ಈ ಪಂದ್ಯ ರಾತ್ರಿ 9ಗಂಟೆಗೆ ಆರಂಭವಾಗಲಿದೆ. ಟೋಕಿಯೊದಲ್ಲಿ ಪದಕ ಗೆಲ್ಲುವ ಮೂಲಕ 41 ವರ್ಷಗಳ ಬಳಿಕ ಪದಕದ ಬರ ನೀಗಿಸಿದ್ದ ಭಾರತ ತಂಡ ಈ ಬಾರಿ ಚಿನ್ನಕ್ಕೆ ಕೊರಳೊಡ್ಡುವಂತಾಗಲಿ ಎನ್ನುವುದು ಭಾರತೀಯರ ಹಾರೈಕೆ. ಪುರುಷರ ಹಾಕಿಯಲ್ಲಿ 8 ಬಾರಿ ಸ್ವರ್ಣ ಗೆದ್ದ ಏಕೈಕ ತಂಡವೆಂಬ ಹೆಗ್ಗಳಿಕೆ ಭಾರತ ಉಳಿಸಿಕೊಂಡಿದೆ.

ಭಾರತ ತಂಡ ಹಾಲಿ ಚಾಂಪಿಯನ್‌ ಬೆಲ್ಜಿಯಂ, ಆಸ್ಟ್ರೇಲಿಯಾ, ಅರ್ಜೆಂಟೀನಾ, ನ್ಯೂಜಿಲ್ಯಾಂಡ್​ ಹಾಗೂ ಐರ್ಲೆಂಡ್‌ ಜತೆ ‘ಬಿ’ ಗುಂಪಿನಲ್ಲಿದೆ. ನ್ಯೂಜಿಲ್ಯಾಂಡ್​ ಪಂದ್ಯದ ಬಳಿಕ ಭಾರತ ಜುಲೈ 29ರಂದು ಅರ್ಜೆಂಟೀನಾ, 30ರಂದು ಐರ್ಲೆಂಡ್‌, ಆಗಸ್ಟ್ 1ರಂದು ಬೆಲ್ಜಿಯಂ, ಆಗಸ್ಟ್​ 2ರಂದು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಕ್ವಾರ್ಟರ್‌ಫೈನಲ್ ಪಂದ್ಯಗಳು ಆಗಸ್ಟ್​ 4ರಂದು ಮತ್ತು ಸೆಮಿಫೈನಲ್ ಪಂದ್ಯಗಳು ಆಗಸ್ಟ್​ 6 ರಂದು ನಡೆಯಲಿವೆ. ಕಂಚಿನ ಪದಕದ ಮತ್ತು ಫೈನಲ್ ಪಂದ್ಯ ಆಗಸ್ಟ್​ 8ರಂದು ನಡೆಯಲಿವೆ.

ಈ ಬಾರಿಯ 16 ಸದಸ್ಯರ ತಂಡದಲ್ಲಿ 11 ಮಂದಿ ಆಟಗಾರರು ಟೋಕಿಯೊ ಒಲಿಂಪಿಕ್ಸ್​ ಆಡಿದ ಆಟಗಾರರಾಗಿದ್ದಾರೆ. ಗೋಲ್ ಕೀಪರ್ ಪಿಆರ್ ಶ್ರೀಜೇಶ್ (PR Sreejesh) ಅವರಿಗೆ ಇದು ಕೊನೆಯ ಒಲಿಂಪಿಕ್ಸ್​ ಕೂಟವಾಗಿದೆ. ಈಗಾಗಲೇ ಅವರು ತಮ್ಮ ನಿವೃತ್ತಿಯನ್ನು ಕೂಡ ಘೋಷಿಸಿದ್ದಾರೆ.

ತಂಡ


ಗೋಲ್‌ಕೀಪರ್‌: ಪಿ.ಆರ್‌. ಶ್ರೀಜೇಶ್‌

ಡಿಫೆಂಡರ್‌ಗಳು: ಜರ್ಮನ್‌ಪ್ರೀತ್ ಸಿಂಗ್, ಅಮಿತ್ ರೊಹಿದಾಸ್, ಹರ್ಮನ್‌ಪ್ರೀತ್ ಸಿಂಗ್, ಸುಮಿತ್, ಸಂಜಯ್

ಮಿಡ್‌ಫೀಲ್ಡರ್‌ಗಳು: ರಾಜ್‌ಕುಮಾರ್ ಪಾಲ್, ಶಮ್‌ಶೇರ್‌ ಸಿಂಗ್, ಮನ್‌ಪ್ರೀತ್ ಸಿಂಗ್, ಹಾರ್ದಿಕ್ ಸಿಂಗ್, ವಿವೇಕ್ ಸಾಗರ್ ಪ್ರಸಾದ್.

ಫಾರ್ವರ್ಡ್‌: ಅಭಿಷೇಕ್, ಸುಖಜೀತ್ ಸಿಂಗ್, ಲಲಿತ್ ಕುಮಾರ್ ಉಪಾಧ್ಯಾಯ, ಮನ್‌ದೀಪ್ ಸಿಂಗ್, ಗುರ್ಜಂತ್ ಸಿಂಗ್

ಬದಲಿ ಆಟಗಾರರು: ನೀಲಕಂಠ ಶರ್ಮಾ, ಜುಗರಾಜ್ ಸಿಂಗ್, ಕೃಷ್ಣ ಬಹದ್ದೂರ್ ಪಾಠಕ್.

ಇದನ್ನೂ ಓದಿ Paris Olympics: ಶರತ್ ಕಮಲ್​ಗೆ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ಎದುರಾಳಿ

ಅರ್ಹತೆ ಪಡೆಯದ ಮಹಿಳಾ ತಂಡ

ಟೋಕಿಯೊ ಒಲಿಂಪಿಕ್ಸ್​ನಲ್ಲಿ ನಾಲ್ಕನೇ ಸ್ಥಾನ ಪಡೆದ ಭಾರತೀಯ ಮಹಿಳಾ ಹಾಕಿ ತಂಡವು ಮುಂದಿನ ಪ್ಯಾರಿಸ್ ಒಲಿಂಪಿಕ್ಸ್​​ಗೆ ಅರ್ಹತೆಯನ್ನೇ ಪಡೆಯದಿರುವುದು ವಿಪರ್ಯಾಸ. 2012ರ ಬಳಿಕ ಇದೇ ಮೊದಲ ಬಾರಿಗೆ ಭಾರತ ಮಹಿಳಾ ಹಾಕಿ ತಂಡ ಒಲಿಂಪಿಕ್ಸ್​ನಲ್ಲಿ ಅವಕಾಶ ಪಡೆಯಲು ವಿಫಲಗೊಂಡಿದೆ.

1980ರ ಮಾಸ್ಕೋದಲ್ಲಿ ಮಹಿಳಾ ಹಾಕಿ ಸೇರ್ಪಡೆಯಾದ ಬಳಿಕ ಭಾರತ ಮಹಿಳಾ ತಂಡ ಒಲಿಂಪಿಕ್ಸ್​ನಲ್ಲಿ ಕೇವಲ ಮೂರು ಬಾರಿ ಆಡಿದೆ. ಮೊದಲ ನಾಲ್ಕು ಆವೃತ್ತಿಯಲ್ಲಿ ಅರ್ಹತೆ ಪಡೆಯದ ಭಾರತ ರಿಯೋ 2016ರಲ್ಲಿ ಅವಕಾಶ ಗಿಟ್ಟಿಸಿತು. ಆ ಸಮಯದಲ್ಲಿ 12ನೇ ಸ್ಥಾನ ಪಡೆದುಕೊಂಡಿತ್ತು. ನಂತರ ಟೋಕಿಯೊ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿತ್ತು.

Continue Reading

ಕ್ರೀಡೆ

Paris Olympics: ಶರತ್ ಕಮಲ್​ಗೆ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ಎದುರಾಳಿ

Paris Olympics: ಪುರುಷರ ಸಿಂಗಲ್ಸ್‌ನಲ್ಲಿ ಅನುಭವಿ ಆಟಗಾರ, 41 ವರ್ಷದ ಶರತ್ ಕಮಲ್ ಅವರು ತಮ್ಮ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ವಿರುದ್ಧ ಆಡಲಿದ್ದಾರೆ. ಮತ್ತೋರ್ವ ಭಾರತೀಯ ಆಟಗಾರ, ಗುಜರಾತ್‌ನ 31 ವರ್ಷದ ಹರ್ಮಿತ್ ದೇಸಾಯಿ ಜೋರ್ಡಾನ್‌ನ ಝೈದ್ ಅಬೊ ಯಮನ್ ವಿರುದ್ಧ ಸೆಣಸಲಿದ್ದಾರೆ.

VISTARANEWS.COM


on

PARIS OLYMPICS
Koo

ಪ್ಯಾರಿಸ್​: ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ 7 ಚಿನ್ನದ ಪದಕಗಳನ್ನು ಗೆದ್ದಿರುವ ಶರತ್‌ ಕಮಲ್‌ ನಾಯಕತ್ವದ ಟೇಬಲ್ ಟೆನಿಸ್ ತಂಡವು ಶನಿವಾರ ತನ್ನ ಒಲಿಂಪಿಕ್ಸ್​(Paris Olympics) ಅಭಿಯಾನ ಆರಂಭಿಸಲಿದೆ. ನಿನ್ನೆ(ಶುಕ್ರವಾರ) ನಡೆದಿದ್ದ ಒಲಿಂಪಿಕ್ಸ್​(Paris 2024 Olympics) ಉದ್ಘಾಟನ ಸಮಾರಂಭದಲ್ಲಿ ಶರತ್​ ಕಮಲ್‌(Sharath Kamal) ಭಾರತದ ಧ್ವಜಧಾರಿಯಾಗಿ ಕಾಣಿಸಿಕೊಂಡಿದ್ದರು. ಮರು ದಿನವೇ ಸ್ಪರ್ಧೆಗೆ ಇಳಿಯಲಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ ಅನುಭವಿ ಆಟಗಾರ, 41 ವರ್ಷದ ಶರತ್ ಕಮಲ್ ಅವರು ತಮ್ಮ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ವಿರುದ್ಧ ಆಡಲಿದ್ದಾರೆ. ಮತ್ತೋರ್ವ ಭಾರತೀಯ ಆಟಗಾರ, ಗುಜರಾತ್‌ನ 31 ವರ್ಷದ ಹರ್ಮಿತ್ ದೇಸಾಯಿ ಜೋರ್ಡಾನ್‌ನ ಝೈದ್ ಅಬೊ ಯಮನ್ ವಿರುದ್ಧ ಸೆಣಸಲಿದ್ದಾರೆ.

ಮಹಿಳೆಯರ ಸಿಂಗಲ್ಸ್‌ನಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತೆ, ಈ ಬಾರಿಯ ಪದಕ ಭರಸೆಯ ಆಟಗಾರ್ತಿಯಾಗಿ ಗುರುತಿಸಿಕೊಂಡಿರುವ ಮಣಿಕಾ ಬಾತ್ರಾ ಅವರು ಗ್ರೇಟ್‌ ಬ್ರಿಟನ್‌ನ ಅನಾ ಹರ್ಸೆ ವಿರುದ್ಧ ಸೆಣಸಾಟ ನಡೆಸಲಿದ್ದಾರೆ. ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಬಾತ್ರ ಕಳೆದ ಬಾರಿಯ ಟೋಕಿಯೊ ಒಲಿಂಪಿಕ್ಸ್​ ತಪ್ಪನ್ನು ಇಲ್ಲಿ ಮರುಕಳಿಸಲ್ಲ ಎಂದು ಹೇಳುವ ಮೂಲಕ ಪದಕ ಗೆಲ್ಲುವು ವಿಶ್ವಾಸ ವ್ಯಕ್ತಪಡಿಸಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ 32ರ ಘಟ್ಟದದ ಪಂದ್ಯದಲ್ಲಿ ಸೋಲು ಕಂಡಿದ್ದರು.

ಇದನ್ನೂ ಓದಿ Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

ಟೇಬಲ್ ಟೆನಿಸ್​


ಪುರುಷರ ಸಿಂಗಲ್ಸ್: ಶರತ್ ಕಮಲ್, ಹರ್ಮೀತ್ ದೇಸಾಯಿ

ಮಹಿಳೆಯರ ಸಿಂಗಲ್ಸ್: ಮಾಣಿಕಾ ಬಾತ್ರಾ, ಶ್ರೀಜಾ ಅಕುಲಾ. (ಸಂಜೆ 6:30 ರಿಂದ)

ಪುರುಷರ ತಂಡ ವಿಭಾಗದಲ್ಲಿ ಶರತ್ ಕಮಲ್, ದೇಸಾಯಿ ಮತ್ತು ಮಾನವ್ ಠಕ್ಕರ್ ಕಣಕ್ಕಿಳಿದರೆ, ಮಹಿಳೆಯರ ತಂಡದಲ್ಲಿ ಮಣಿಕಾ, ಶ್ರೀಜಾ ಅಕುಲಾ ಹಾಗೂ ಕರ್ನಾಟಕದ ಅರ್ಚನಾ ಕಾಮತ್ ಸ್ಪರ್ಧಿಸಲಿದ್ದಾರೆ. ಜಿ. ಸತ್ಯನ್, ಐಹಿಕಾ ಮುಖರ್ಜಿ ಮೀಸಲು ಆಟಗಾರರಾಗಿದ್ದಾರೆ. ಶರತ್ ಕಮಲ್ ಅವರಿಗೆ ಇದು ಬಹುತೇಕ ಕೊನಯ ಒಲಿಂಪಿಕ್ಸ್​ ಟೂರ್ನಿಯಾಗಿದೆ. ಹೀಗಾಗಿ ಅವರು ಐತಿಹಾಸಿಕ ಪದಕ ಗೆದ್ದು ತಮ್ಮ ಕ್ರೀಡಾ ವೃತ್ತಿ ಜೀವನನ್ನು ಸ್ಮರಣೀಯಗೊಳಿಸಲಿ ಎನ್ನುವುದು ಭಾರತೀಯರ ಹಾರೈಕೆ.

ಶೂಟಿಂಗ್​ನಲ್ಲಿ ಭಾರತ ಇಂದು ಒಂದು ಪದಕ್ಕೆ ಸ್ಪರ್ಧಿಸಲಿದ್ದು, ಪದಕ ಗೆಲ್ಲುವ ನಿರೀಕ್ಷೆಯೊಂದನ್ನು ಇಡಲಾಗಿದೆ. 10 ಮೀ. ಏರ್​ ರೈಫಲ್​ ಮಿಶ್ರ ತಂಡ ವಿಭಾಗದಲ್ಲಿ ಸಂದೀಪ್​ ಸಿಂಗ್​-ಇಲವೆನಿಲ್​ ವಲರಿವನ್​ ಮತ್ತು ಅರ್ಜುನ್​ ಬಬುಟ-ರಮಿತಾ ಜಿಂದಾಲ್ ಕಣಕ್ಕಿಳಿಯಲಿದ್ದಾರೆ. ಗೆದ್ದರೆ, ಶೂಟಿಂಗ್​ ವಿಭಾಗದಲ್ಲಿ 12 ವರ್ಷಗಳ ಪದಕ ಬರ ನೀಗಲಿದೆ. ಶೂಟಿಂಗ್​ ಸ್ಪರ್ಧೆ ಪ್ಯಾರಿಸ್​ನಿಂದ 272 ಕಿಲೋಮೀಟರ್​ ದೂರದಲ್ಲಿರುವ ಚಟೌರೊಕ್ಸ್​ನಲ್ಲಿ ನಡೆಯಲಿದೆ.

ಶೂಟಿಂಗ್

10 ಮೀ ಏರ್ ರೈಫಲ್ ಮಿಶ್ರ ತಂಡ ಅರ್ಹತೆ: ಸಂದೀಪ್ ಸಿಂಗ್, ಅರ್ಜುನ್ ಬಾಬುತಾ, ಎಲವೆನಿಲ್ ವಲರಿವನ್, ರಮಿತಾ ಜಿಂದಾಲ್. ಮಧ್ಯಾಹ್ನ 12:30

10ಮೀ ಏರ್ ಪಿಸ್ತೂಲ್ ಪುರುಷರ ಅರ್ಹತೆ: ಸರಬ್ಜೋತ್ ಸಿಂಗ್, ಅರ್ಜುನ್ ಚೀಮಾ. (ಮಧ್ಯಾಹ್ನ 2 ಗಂಟೆ)

10ಮೀ ಏರ್ ರೈಫಲ್ ಮಿಶ್ರ ತಂಡ ಪದಕ ಸುತ್ತುಗಳು: (ಅರ್ಹತೆ ಪಡೆದರೆ) ಮಧ್ಯಾಹ್ನ 2 ಗಂಟೆ

10 ಮೀ ಏರ್ ಪಿಸ್ತೂಲ್ ಮಹಿಳೆಯರ ಅರ್ಹತೆ ಸುತ್ತು: ರಿದಮ್ ಸಾಂಗ್ವಾನ್, ಮನು ಭಾಕರ್. (ಸಂಜೆ 4 ಗಂಟೆಯಿಂದ)

Continue Reading
Advertisement
Money Guide
ಮನಿ-ಗೈಡ್17 mins ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Womens Asia Cup Final
ಕ್ರೀಡೆ40 mins ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ44 mins ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ1 hour ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ1 hour ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ1 hour ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ2 hours ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

pramod mutalik dog meat
ಪ್ರಮುಖ ಸುದ್ದಿ2 hours ago

Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Shiva Rajkumar played the dupe for saikumar in film
ಸ್ಯಾಂಡಲ್ ವುಡ್2 hours ago

Shiva Rajkumar: ಸಾಯಿಕುಮಾರ್‌ಗೆ ಶಿವಣ್ಣ ಡ್ಯೂಪ್ ಆಗಿದ್ದ ಸಿನಿಮಾ ಯಾವುದು? ಆ ದೃಶ್ಯಕ್ಕೆ ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ21 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ22 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ23 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌