Pro Kabaddi | ಇಂದು ಪ್ರೊ ಕಬಡ್ಡಿ ಸೆಮಿಫೈನಲ್​; ಪಿಂಕ್​ ಪ್ಯಾಂಥರ್ಸ್​ಗೆ ತಿವಿದೀತೇ ಬೆಂಗಳೂರು ಬುಲ್ಸ್​ - Vistara News

ಕ್ರೀಡೆ

Pro Kabaddi | ಇಂದು ಪ್ರೊ ಕಬಡ್ಡಿ ಸೆಮಿಫೈನಲ್​; ಪಿಂಕ್​ ಪ್ಯಾಂಥರ್ಸ್​ಗೆ ತಿವಿದೀತೇ ಬೆಂಗಳೂರು ಬುಲ್ಸ್​

ಪ್ರೊ ಕಬಡ್ಡಿ 9ನೇ ಆವೃತ್ತಿಯ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಬೆಂಗಳೂರು ಬುಲ್ಸ್​ ತಂಡ ಜೈಪುರ್​ ಪಿಂಕ್​ ಪ್ಯಾಂಥರ್ಸ್​ ವಿರುದ್ಧ ಅದೃಷ್ಟ ಪರೀಕ್ಷೆಗೆ ಇಳಿಯಲಿದೆ.

VISTARANEWS.COM


on

Pro Kabaddi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಬಡ್ಡಿ ಪ್ರೇಮಿಗಳಿಗೆ ಹುಚ್ಚೆಬ್ಬಿಸಿದ್ದ ಪ್ರೊ ಕಬಡ್ಡಿ 9ನೇ ಆವೃತ್ತಿಗೆ ತೆರೆ ಬೀಳುವ ಸಮಯ ಹತ್ತಿರವಾಗಿದೆ. ಗುರುವಾರ ಮೊದಲ ಸೆಮಿಫೈನಲ್‌ನಲ್ಲಿ ಮಾಜಿ ಚಾಂಪಿಯನ್‌ಗಳಾದ ಬೆಂಗಳೂರು ಬುಲ್ಸ್‌ ಹಾಗೂ ಜೈಪುರ ಪಿಂಕ್‌ ಪ್ಯಾಂಥ​ರ್ಸ್ ಮುಖಾಮುಖಿಯಾದರೆ ದ್ವಿತೀಯ ಪಂದ್ಯದಲ್ಲಿ ಪುಣೇರಿ ಪಲ್ಟಾನ್​ ಮತ್ತು ತಮಿಳ್​ ತಲೈವಾಸ್​ ಸೆಣಸಾಡಲಿವೆ.

ಕಳೆದ ಎಲಿಮಿನೇಟರ್​​ ಕಾದಾಟದಲ್ಲಿ ಹಾಲಿ ಚಾಂಪಿಯನ್​ ಡೆಲ್ಲಿ ವಿರುದ್ಧ ಅಮೋಘ ಗೆಲುವು ಸಾಧಿಸಿ ಸೆಮಿಫೈನಲ್​ಗೇರಿದ ಬುಲ್ಸ್​ ಮೇಲೆ ಈ ಪಂದ್ಯದಲ್ಲಿಯೂ ಹೆಚ್ಚಿನ ನಿರೀಕ್ಷೆ ಇರಿಸಲಾಗಿದೆ. ಬುಲ್ಸ್ ಭರತ್‌ ರೈಡಿಂಗ್‌ ಮೇಲೆ ಹೆಚ್ಚು ಅವಲಂಬಿತವಾಗಿದೆ. ಡಿಫೆನ್ಸ್ ನಲ್ಲಿ ಸೌರಭ್‌ ನಂದಲ್‌ ಮತ್ತು ಅಮನ್‌ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಆದರೆ ದುಬಾರಿ ಆಟಗಾರ ವಿಕಾಸ್‌ ಕಂಡೋಲ ತಮ್ಮ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡದೇ ಇರುವುದು ಚಿಂತಿಸಬೇಕಾದ ಸಂಗತಿಯಾಗಿದೆ. ಜತೆಗೆ ಕಪ್ತಾನ ಮಹೇಂದರ್‌ ಸಿಂಗ್‌ ನಾಯಕನ ಆಟವಾಡಬೇಕು. ಇವರೆಲ್ಲರಿಂದಲೂ ಉತ್ತಮ ಪ್ರದರ್ಶನ ಬಂದಲ್ಲಿ ಬೆಂಗಳೂರು ಬುಲ್ಸ್ ಈ ಪಂದ್ಯದಲ್ಲಿ ಗೆದ್ದು ಫೈನಲ್​ ಪ್ರವೇಶಿಸಿವುದರಲ್ಲಿ ಯಾವುದೇ ಅನುಮಾನವಿಲ್ಲ.

ಜೈಪುರ್​ ಸಮರ್ಥ ತಂಡ

ಆರಂಭದಿಂದಲೂ ಸಾಂಘಿಕ ಪ್ರದರ್ಶನ ನೀಡುತ್ತಾ ಬಂದಿರುವ ಜೈಪುರ್‌ ಪಿಂಕ್‌ ಪ್ಯಾಂಥರ್ಸ್ 82 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ನೇರವಾಗಿ ಸೆಮಿಫೈನಲ್​ಗೆ ನೆದಿತ್ತು. ರೈಡಿಂಗ್‌ನಲ್ಲಿ ಅರ್ಜುನ್‌ ದೇಶ್ವಾಲ್‌ (286 ಅಂಕ) ತಂಡದ ಬಲವಾಗಿದ್ದರೆ, ಡಿಫೆನ್ಸ್ ನಲ್ಲಿ ಅಂಕುಶ್‌ ಮತ್ತು ನಾಯಕ ಸುನೀಲ್‌ ಕುಮಾರ್‌ ಉತ್ತಮ ಲಯದಲ್ಲಿರುವುದು ತಂಡಕ್ಕೆ ವರದಾನವಾಗಿದೆ.

ಪುಣೇರಿ VS ತಲೈವಾಸ್​

ಮತ್ತೊಂದೆಡೆ ಗುರುವಾರ 2ನೇ ಸೆಮಿಫೈನಲ್‌ನಲ್ಲಿ ಪುಣೇರಿ ಪಲ್ಟಾನ್‌ ಹಾಗೂ ತಮಿಳ್‌ ತಲೈವಾಸ್‌ ಮುಖಾಮುಖಿಯಾಗಲಿವೆ. ಗುಂಪಿನಲ್ಲಿ 2ನೇ ಸ್ಥಾನಿಯಾಗಿದ್ದ ಪುಣೇರಿ ನೇರವಾಗಿ ಸೆಮೀಸ್‌ಗೇರಿದ್ದರೆ, ತಲೈವಾಸ್‌ 2ನೇ ಎಲಿಮಿನೇಟರ್‌ನಲ್ಲಿ ಯು.ಪಿ.ಯೋಧಾಸ್‌ ವಿರುದ್ಧ ಟೈ ಬ್ರೇಕರ್‌ನಲ್ಲಿ ರೋಚಕವಾಗಿ ಗೆದ್ದು ಅಂತಿಮ 4ರ ಘಟ್ಟ ಪ್ರವೇಶಿಸಿತು.

ಹೈ ಪ್ಲೈಯರ್‌ ಪವನ್‌ ಸೆಹ್ರಾವತ್‌ ಮೊದಲ ಪಂದ್ಯದಲ್ಲಿಯೇ ಗಾಯಾಳಾಗಿ ಕೂಟದಿಂದಲೇ ನಿರ್ಗಮಿಸಿದ ಕಾರಣ ತಮಿಳ್ ತಂಡ​ ಆರಂಭದಲ್ಲಿ ಸೋಲಿನ ಸುಳಿಗೆ ಸಿಲುಕಿತ್ತು. ಆದರೆ ಬಳಿಕ ರೈಡರ್‌ ನರೇಂದರ್‌, ಡಿಫೆಂಡರ್‌ ಸಾಗರ್‌ ಅವರ ಉತ್ತಮ ಪ್ರದರ್ಶನ ಹಾಗೂ ತಂಡದ ಸದಸ್ಯರ ಸಾಂಘಿಕ ಪ್ರದರ್ಶನದ ಮೂಲಕ ಸೆಮಿಫೈನಲ್​ಗೇರಿದ ಸಾಹಸ ಮೆಚ್ಚಲೇ ಬೇಕು ಯುವಕರೇ ತುಂಬಿರುವ ತಂಡದಲ್ಲಿ ಅನುಭವದ ಕೊರತೆಯಿದ್ದರೂ ಸಾಮರ್ಥ್ಯಕ್ಕೆ ಕೊರತೆಯಿಲ್ಲ ಇದೀಗ ಪುಣೆಯನ್ನು ಮಣಿಸಿ ಚೊಚ್ಚಲ ಫೈನಲ್‌ ಮೇಲೆ ಕಣ್ಣಿಟ್ಟಿದೆ.

ಇದನ್ನೂ ಓದಿ | Pro Kabaddi League | ಹಾಲಿ ಚಾಂಪಿಯನ್​ ಡೆಲ್ಲಿ ಮಣಿಸಿ ಉಪಾಂತ್ಯಕ್ಕೆ ಲಗ್ಗೆ ಇಟ್ಟ ಬೆಂಗಳೂರು ಬುಲ್ಸ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಎಲ್ಲ ಅನುಮಾನಗಳಿಗೂ ತೆರೆ; ಆರ್​ಸಿಬಿ ಸೇರಿದ ಇಂಗ್ಲೆಂಡ್​ ಆಲ್​ರೌಂಡರ್​

ಮೊಣಕಾಲಿನ( Knee Injury) ಗಾಯಕ್ಕೆ ತುತ್ತಾಗಿದ್ದ ಟಾಮ್​ ಕರನ್(Tom Curran) ಸಂಪೂರ್ಣ ಚೇತರಿಕೆ ಕಂಡು ಐಪಿಎಲ್​ ಆಡಲು ಆರ್​ಸಿಬಿ ತಂಡ ಸೇರಿದ್ದಾರೆ.

VISTARANEWS.COM


on

Tom Curran
Koo

ಬೆಂಗಳೂರು: ಬಿಗ್ ಬ್ಯಾಷ್ ಲೀಗ್​ನಲ್ಲಿ ಮೊಣಕಾಲಿನ( Knee Injury) ಗಾಯಕ್ಕೆ ತುತ್ತಾಗಿದ್ದ ಟಾಮ್​ ಕರನ್(Tom Curran) ಅವರು ಈ ಬಾರಿಯ ಐಪಿಎಲ್(IPL 2024) ಆಡುವುದು ಅನುಮಾನ ಎನ್ನಲಾಗಿತ್ತು. ಇದರಿಂದ ಆರ್​ಸಿಬಿ(RCB) ತಂಡಕ್ಕೆ ಆತಂಕವೊಂದು ಸೃಷ್ಟಿಯಾಗಿತ್ತು. ಆದರೆ. ಇದೀಗ ಈ ಆತಂಕ ದೂರ ಆಗಿದೆ. ಟಾಮ್​ ಕರನ್ ಅವರು ಫುಲ್​ ಫಿಟ್​ ಆ್ಯಂಡ್​ ಫೈನ್​ ಆಗಿ ತಂಡ ಸೇರಿದ್ದಾರೆ.

ಕಳೆದ ವರ್ಷ ಡಿಸೆಂಬರ್​ನಲ್ಲಿ ದುಬೈನಲ್ಲಿ ನಡೆದಿದ್ದ ಆಟಗಾರರ ಮಿನಿ ಹರಾಜಿನಲ್ಲಿ ಆರ್​ಸಿಬಿ ಫ್ರಾಂಚೈಸಿ ಕರನ್ ಅವರನ್ನು 1.5 ಕೋಟಿ ರೂ. ನೀಡಿ ಖರೀದಿ ಮಾಡಿತ್ತು. ಬಿಗ್ ಬ್ಯಾಷ್ ಲೀಗ್​ನಲ್ಲಿ ಮೊಣಕಾಲಿನ ಗಾಯಕ್ಕೆ ತುತ್ತಾಗಿ ಈ ಟೂರ್ನಿಯಿಂದ ಅವರು ಹೊರಬಿದ್ದಿದ್ದರು. ಈ ವೇಳೆ ಅವರು ಐಪಿಎಲ್​ನಿಂದಲೂ ಹೊರಬೀಳಲಿದ್ದಾರೆ ಎಂದು ವರದಿಯಾಗಿತ್ತು. ಅವರು ಆರ್​ಸಿಬಿ ತಂಡ ಸೇರುವ ಮೂಲಕ ಎಲ್ಲ ಅನುಮಾನಗಳಿಗೂ ತೆರೆ ಬಿದ್ದಿದೆ. ಸೋಮವಾರ ತಡರಾತ್ರಿ ಆರ್​ಸಿಬಿ ತಂಡ ಸೇರಿದ್ದಾರೆ. ಅವರನ್ನು ಫ್ರಾಂಚೈಸಿಯು ಕ್ಯಾಪ್​ ನೀಡಿ ಸ್ವಾಗತಿಸಿದ ಫೋಟೊ ವೈರಲ್​ ಆಗಿದೆ.

ಇದನ್ನೂ ಓದಿ Virat Kohli: ಧೋನಿಯ ಹೇರ್‌ಸ್ಟೈಲ್‌ ಕಾಪಿ ಮಾಡಿದ ವಿರಾಟ್​ ಕೊಹ್ಲಿ

ಹರಾಜಿನಲ್ಲಿ ಆರ್​ಸಿಬಿ ಖರೀದಿಸಿದ ಆಟಗಾರರು

ಅಲ್ಜಾರಿ ಜೋಸೆಫ್ (11.5 ಕೋಟಿ), ಯಶ್ ದಯಾಳ್ (5 ಕೋಟಿ), ಟಾಮ್ ಕರ್ರನ್ (1.5 ಕೋಟಿ), ಲಾಕಿ ಫರ್ಗುಸನ್ (2 ಕೋಟಿ), ಸ್ವಪ್ನಿಲ್ ಸಿಂಗ್ (0.2 ಕೋಟಿ), ಸೌರವ್ ಚೌಹಾಣ್ (0.2 ಕೋಟಿ).

ಆರ್​ಸಿಬಿ ತಂಡ


ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್​ವೆಲ್​, ವಿರಾಟ್ ಕೊಹ್ಲಿ, ಕ್ಯಾಮರಾನ್ ಗ್ರೀನ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಾಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಯಾಂಕ್ ದಾಗರ್, ಮಹಿಪಾಲ್ ಲೊಮ್ರೊರ್, ಕರಣ್ ಶರ್ಮಾ, ಮನೋಜ್ ಭಾಂಡಗೆ, ವೈಶಾಕ್ ವಿಜಯ್ ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟಾಪ್ಲೆ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್.

ಚೆನ್ನೈ ಮೊದಲ ಎದುರಾಳಿ


ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL 2024) 17ನೇ ಆವೃತ್ತಿ ಆರಂಭವಾಗಲು ಇನ್ನು ಕೇವಲ 3 ದಿನ ಮಾತ್ರ ಬಾಕಿ ಉಳಿದಿದೆ. ಮಾರ್ಚ್ 22ರಂದು ಲೀಗ್​ನ ಸಾಂಪ್ರದಾಯಿಕ ಬದ್ದ ಎದುರಾಳಿಗಳಾದ ಆರ್‌ಸಿಬಿ(Royal Challengers Bangalore) ಮತ್ತು ಸಿಎಸ್‌ಕೆ(rcb vs csk) ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಚಾಲನೆ ಸಿಗಲಿದೆ. ಈ ಪಂದ್ಯಕ್ಕೆ ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂ ಅಣಿಯಾಗಿದೆ. ಪಂದ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ಉಭಯ ತಂಡಗಳ ಅಭಿಮಾನಿಗಳು ಕಾದು ಕುಳಿತಿದ್ದಾರೆ.

Continue Reading

ಕ್ರೀಡೆ

Virat Kohli: ಧೋನಿಯ ಹೇರ್‌ಸ್ಟೈಲ್‌ ಕಾಪಿ ಮಾಡಿದ ವಿರಾಟ್​ ಕೊಹ್ಲಿ

17ನೇ ಆವೃತ್ತಿಯ ಐಪಿಎಲ್(IPL 2024)​ ಟೂರ್ನಿಯಲ್ಲಿ ವಿರಾಟ್​ ಕೊಹ್ಲಿ ನೂತನ ಹೇರ್​ ಸ್ಟೈಲ್​ ಮೂಲಕ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ

VISTARANEWS.COM


on

Virat Kohli's new look
Koo

ಬೆಂಗಳೂರು: ಪ್ರತಿ ಬಾರಿಯ ಐಪಿಎಲ್(IPL 2024)​ ಟೂರ್ನಿಯಲ್ಲಿ ಆಟಗಾರರು ಒಂದಲ್ಲ ಒಂದು ವಿಭಿನ್ನ ಶೈಲಿಯ ಗಡ್ಡ, ಹೇರ್​ ಸ್ಟೈಲ್​ಗಳನ್ನು ಮಾಡಿ ಹೊಸ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಾರೆ. ಇದೀಗ 17ನೇ ಆವೃತ್ತಿಯಲ್ಲಿ ವಿರಾಟ್​ ಕೊಹ್ಲಿ ಕೂಡ ನೂತನ ಹೇರ್​ ಸ್ಟೈಲ್​ ಮೂಲಕ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೊಹ್ಲಿಯ ಹೊಸ ಲುಕ್​ಗೆ(Virat Kohli’s new look) ಅಭಿಮಾನಿಗಳು ಫಿದಾ ಆಗಿದ್ದಾರೆ. ಆದರೆ, ನೆಟ್ಟಿಗರು ಮಾತ್ರ ಕೊಹ್ಲಿಯ ಕಾಲೆಳೆದಿದ್ದಾರೆ. ಇದು ಧೋನಿ(ms dhoni hairstyle) ಹಾಗೂ ಇಶಾನ್​ ಕಿಶನ್​ ಅವರ ಕಾಪಿ ಎಂದು ಕಮೆಂಟ್​ ಮಾಡಿದ್ದಾರೆ.

ಧೋನಿ ಶೈಲಿ ಅನುಕರಣೆ ಮಾಡಿದ್ದ ಇಶಾನ್‌


ಐಪಿಎಲ್‌ನಲ್ಲಿ ಮಹೇಂದ್ರ ಸಿಂಗ್‌ ಧೋನಿ ಅವರು ಇದೇ ರೀತಿಯ ಶೈಲಿಯಲ್ಲಿ ಹೇರ್‌ಸ್ಟೈಲ್‌ ಮಾಡಿದ್ದರು. ಧೋನಿ ಅವರ ಶೈಲಿ ಕೊಂಚ ಸಿಂಪಲ್‌ ಆಗಿತ್ತು. ಇದೇ ರೀತಿಯಲ್ಲಿ ಕಳೆದ ವರ್ಷ ಇಶಾನ್‌ ಕಿಶನ್​ ಕೂಡ ಹೇರ್‌ಸ್ಟೈಲ್‌ ಮಾಡಿದ್ದರು. ಇಶಾನ್ದ ಅವರ ಈ ಹೊಸ ಲುಕ್​ ಕಂಡು ಸೂರ್ಯಕುಮಾರ್‌ ಯಾದವ್‌ ಅವರ ಪತ್ನಿ ದೇವಿಶಾ ಶೆಟ್ಟಿ ಇದು ಮುಳ್ಳು ಹಂದಿ ತರ ಕಾಣುತ್ತಿದೆ ಎಂದು ಕಮೆಂಟ್‌ ಮಾಡಿದ್ದರು. ಇದೀಗ ಕೊಹ್ಲಿಯ ಲುಕ್​​ ಕೂಡ ಧೋನಿ ಮತ್ತು ಇಶಾನ್ ಅವರ ಹೇರ್‌ಸ್ಟೈಲ್​ ನಂತೆ ಕಾಣಿಸಿದೆ. ಹಲವು ನೆಟ್ಟಿಗರು ಕಮೆಂಟ್‌ ಮಾಡಿದ್ದು ಇದು ಧೋನಿಯಿಂದ ಪಡೆದ ಪ್ರೇರಣೆಯಾಗಿದೆ ಎಂದಿದ್ದಾರೆ. ಧೋನಿ ಈ ಬಾರಿ ರೆಟ್ರೊ ಶೈಲಿಯ ಉದ್ದನೆಯ ಕೂದಲಿನ ಮೂಲಕ ಕಾಣಿಸಿಕೊಳ್ಳಲಿದ್ದಾರೆ. ಅವರು ಭಾರತ ತಂಡಕ್ಕೆ ಪದಾರ್ಪಣೆ ಮಾಡುವ ಸಂದರ್ಭದಲ್ಲಿ ಇದೇ ಶೈಲಿಯಲ್ಲಿ ಕಾಣಿಸಿಕೊಳಡಿದ್ದರು.

ಇದನ್ನೂ ಓದಿ IPL 2024: ರೋಹಿತ್ ಬ್ಯಾಟಿಂಗ್​​ ಅಭ್ಯಾಸದ ವಿಡಿಯೊ ಹಂಚಿಕೊಂಡ ಮುಂಬೈ ಇಂಡಿಯನ್ಸ್

ಮಾರ್ಚ್ 22ರಂದು ಲೀಗ್​ನ ಸಾಂಪ್ರದಾಯಿಕ ಬದ್ದ ಎದುರಾಳಿಗಳಾದ ಆರ್‌ಸಿಬಿ(Royal Challengers Bangalore) ಮತ್ತು ಸಿಎಸ್‌ಕೆ(rcb vs csk) ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಚಾಲನೆ ಸಿಗಲಿದೆ. ಈ ಪಂದ್ಯಕ್ಕೆ ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂ ಅಣಿಯಾಗಿದೆ. ಪಂದ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ಉಭಯ ತಂಡಗಳ ಅಭಿಮಾನಿಗಳು ದುಬಾರಿ ಬೆಲೆ ನೀಡಿ ಟಿಕೆಟ್​ ಖರೀದಿಸಿದ್ದಾರೆ. 

ವಿರಾಟ್‌ ಕೊಹ್ಲಿ ಸೋಮವಾರ ಬೆಂಗಳೂರಿನಲ್ಲಿ ಆರ್‌ಸಿಬಿ ತಂಡವನ್ನು ಸೇರಿಕೊಂಡು ಅಭ್ಯಾಸ ಆರಂಭಿಸಿದ್ದಾರೆ. ಅಕಾಯ್‌ ಜನನವಾದ ಬಳಿಕ ಭಾನುವಾರವಷ್ಟೇ ಕೊಹ್ಲಿ ಭಾರತಕ್ಕೆ ಮರಳಿದ್ದರು. ವಿರಾಟ್‌ ಕೊಹ್ಲಿ ಕಳೆದ ಐಪಿಎಲ್‌ನಲ್ಲಿ 2 ಶತಕ ಸೇರಿದಂತೆ 639 ರನ್‌ ಪೇರಿಸಿ ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದರು. ಈ ಬಾರಿಯೂ ಶ್ರೇಷ್ಠ ಬ್ಯಾಟಿಂಗ್​ ಪ್ರದರ್ಶನ ತೋರುವ ನಿರೀಕ್ಷೆಯಲ್ಲಿದ್ದಾರೆ. ವಿರಾಟ್ ಕೊಹ್ಲಿ ಇದುವರೆಗೆ 237 ಐಪಿಎಲ್ ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 7 ಶತಕ ಹಾಗೂ 50 ಅರ್ಧಶತಕಗಳೊಂದಿಗೆ ಒಟ್ಟು 7263 ರನ್ ಕಲೆಹಾಕಿದ್ದಾರೆ.

ಆರ್​ಸಿಬಿ ತಂಡ


ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್​ವೆಲ್​, ವಿರಾಟ್ ಕೊಹ್ಲಿ, ಕ್ಯಾಮರಾನ್ ಗ್ರೀನ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಾಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಯಾಂಕ್ ದಾಗರ್, ಮಹಿಪಾಲ್ ಲೊಮ್ರೊರ್, ಕರಣ್ ಶರ್ಮಾ, ಮನೋಜ್ ಭಾಂಡಗೆ, ವೈಶಾಕ್ ವಿಜಯ್ ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟಾಪ್ಲೆ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್.

Continue Reading

ಕ್ರೀಡೆ

Imad Wasim: ಡ್ರೆಸ್ಸಿಂಗ್‌ ರೂಮ್​ನಲ್ಲೇ ರಾಜಾರೋಷವಾಗಿ ಸಿಗರೇಟ್‌ ಸೇದಿದ ಪಾಕ್​ ಆಟಗಾರ

ಇಮಾದ್ ವಾಸಿಂ(Imad Wasim) ಅವರು ಡ್ರೆಸ್ಸಿಂಗ್‌ ರೂಮ್‌ ನಲ್ಲಿ ಸಿಗರೇಟ್‌ ಸೇದುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಅವರ ಈ ವರ್ತನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

viral video
Koo

ಕರಾಚಿ: ಪಾಕಿಸ್ತಾನ್ ಸೂಪರ್ ಲೀಗ್ (PSL) ಫೈನಲ್(PSL Final)​ ಪಂದ್ಯದ ವೇಳೆ ಇಮಾದ್ ವಾಸಿಂ(Imad Wasim) ಅವರು ಡ್ರೆಸ್ಸಿಂಗ್‌ ರೂಮ್‌ ನಲ್ಲಿ ಸಿಗರೇಟ್‌ ಸೇದುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಅವರ ಈ ವರ್ತನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ʼಪಾಕಿಸ್ತಾನ್‌ ಸ್ಮೋಕಿಂಗ್‌ ಲೀಗ್‌ʼ(Pakistan Smoking League) ಎಂದು ಹಲವರು ಕಮೆಂಟ್‌ ಮಾಡಿದ್ದಾರೆ.

ಇಸ್ಲಾಮಾಬಾದ್ ಯುನೈಟೆಡ್ ತಂಡದ ಆಲ್​ರೌಂಡರ್​ ಆಟಗಾರನಾಗಿರುವ ಇಮಾದ್ ವಾಸಿಂ ಅವರು ಫೈನಲ್​ ಪಂದ್ಯದಲ್ಲಿ 4 ಓವರ್​ ಎಸೆದು ಕೇವಲ 23 ರನ್​ ವೆಚ್ಚದಲ್ಲಿ 5 ವಿಕೆಟ್​ ಕಿತ್ತು ತಂಡ ಚಾಂಪಿಯನ್​ ಆಗುವಲ್ಲಿ ಪ್ರಮುಖ ಪಾತ್ರಬಹಿಸಿದ್ದರು. ಗೆಲುವಿನ ಹೀರೊ ಎನಿಸಿದ್ದ ಅವರು ಈ ಒಂದು ಘಟನೆಯಿಂದ ನೆಟ್ಟಗರ ಪಾಲಿಗೆ ವಿಲನ್ ಆಗಿದ್ದಾರೆ. ಡ್ರೆಸಿಂಗ್​ ರೂಮ್​ನಲ್ಲಿ ರಾಜಾರೋಷವಾಗಿ ಸಿಗರೇಟ್​ ಸೇದಿರುವ ಬಗ್ಗೆ ಪಾಕ್​ ತಂಡದ ಹಲವು ಹಾಲಿ ಮತ್ತು ಮಾಜಿ ಆಟಗಾರರು ಕೂಡ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ IPL 2024: ರೋಹಿತ್ ಬ್ಯಾಟಿಂಗ್​​ ಅಭ್ಯಾಸದ ವಿಡಿಯೊ ಹಂಚಿಕೊಂಡ ಮುಂಬೈ ಇಂಡಿಯನ್ಸ್

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಮೊಹಮ್ಮದ್​ ರಿಜ್ವಾನ್‌ ಸಾರಥ್ಯದ ಮುಲ್ತಾನ್ ಸುಲ್ತಾನ್‌ 9 ವಿಕೆಟ್‌ ವಿಕೆಟ್​​ಗೆ 159 ರನ್‌ ಬಾರಿಸಿತು. ಗುರಿ ಬೆನ್ನಟ್ಟಿದ ಇಸ್ಲಾಮಾಬಾದ್ ಯುನೈಟೆಡ್ 8 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು. ಆದರೆ ಈ ಗೆಲುವಿಗಾಗಿ ಅಂತಿಮ ಎಸೆತದ ವರೆಗೂ ಹೋರಾಟ ನಡೆಸಿತು. ತಂಡದ ಪರ ಮಾರ್ಟಿನ್ ಗಪ್ಟಿಲ್(50) ಅರ್ಧಶತಕ ಬಾರಿಸಿ ಮಿಂಚಿದರು. ಅಜಂ ಖಾನ್(30) ಬಾರಿಸಿದರು. ಇಮಾದ್ ವಾಸಿಂ ಅಜೇಯ 19 ರನ್​ ಹೊಡೆದರು.

ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನಲ್ಲೂ ನಡೆದಿತ್ತು


ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು. ಅಫಫ್ಘಾನಿಸ್ತಾನ ತಂಡದ ವಿಕೆಟ್ ಕೀಪರ್ ಬ್ಯಾಟರ್​ ಮೊಹಮ್ಮದ್ ಶಹಜಾದ್​ ಮೈದಾನದಲ್ಲಿ ಸಿಗರೇಟ್​ ಸೇದಿ ಶಿಕ್ಷೆಗೂ ಗುರಿಯಾಗಿದ್ದರು. ಜತೆಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯಿಂದಲೂ ಛೀಮಾರಿಗೊಳಗಾಗಿದ್ದರು.


ಮಳೆಯ ಕಾರಣ ಪಂದ್ಯ ಆರಂಭ ತಡವಾಗಿತ್ತು. ಈ ವೇಳೆ ಮೈದಾನದಕ್ಕೆ ಇತರೆ ಆಟಗಾರರ ಜತೆ ಆಗಮಿಸಿದ್ದ ಶಹಜಾದ್​​ ಸಿಗರೇಟ್​ ಸೇದಿದ್ದರು. ಈ ಫೋಟೋ ಹಲವು ಸಾಮಾಜಿಕ ಜಾಲಾತಾಣದಲ್ಲಿ ಚರ್ಚೆಯಾಗಿತ್ತು. ಮೈದಾನದಲ್ಲಿ ಧೂಮಪಾನ ಮಾಡುವ ಮೂಲಕ ಬಿಸಿಬಿ ನೀತಿ ಸಂಹಿತೆ ಆರ್ಟಿಕಲ್​ 2.20 ಅನ್ನು ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿತ್ತು. ಶಹಜಾದ್​ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು. ಅವರ ಈ ವರ್ತನೆಗೆ ಒಂದು ಡಿಮೆರಿಟ್​ ಅಂಕವನ್ನು ಸೇರಿಸಲಾಗಿತ್ತು.

Continue Reading

ಕ್ರೀಡೆ

IPL 2024: ರೋಹಿತ್ ಬ್ಯಾಟಿಂಗ್​​ ಅಭ್ಯಾಸದ ವಿಡಿಯೊ ಹಂಚಿಕೊಂಡ ಮುಂಬೈ ಇಂಡಿಯನ್ಸ್

ಮುಂಬೈ ಇಂಡಿಯನ್ಸ್‌(Mumbai Indians) ತಂಡದ ಮಾಜಿ ನಾಯಕ ರೋಹಿತ್​ ಶರ್ಮ(Rohit Sharma) 17ನೇ ಆವೃತ್ತಿಯ ಐಪಿಎಲ್​ಗಾಗಿ ಬ್ಯಾಟಿಂಗ್​ ಅಭ್ಯಾಸ ಆರಂಭಿಸಿದ್ದಾರೆ.

VISTARANEWS.COM


on

rohit sharma
Koo

ಮುಂಬಯಿ: ಐದು ಬಾರಿಯ ಐಪಿಎಲ್‌(IPL 2024) ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್‌(Mumbai Indians) ತಂಡದ ಮಾಜಿ ನಾಯಕ ರೋಹಿತ್​ ಶರ್ಮ(Rohit Sharma) 17ನೇ ಆವೃತ್ತಿಯ ಐಪಿಎಲ್​ಗಾಗಿ ಬ್ಯಾಟಿಂಗ್​ ಅಭ್ಯಾಸ ಆರಂಭಿಸಿದ್ದಾರೆ. ನೆಟ್ಸ್​ನಲ್ಲಿ ರೋಹಿತ್​ ಅವರು ತಂಡದ ಜೆರ್ಸಿ ತೊಟ್ಟು ಬ್ಯಾಟಿಂಗ್​ ನಡೆಸುತ್ತಿರುವ ವಿಡಿಯೊವನ್ನು ಮುಂಬೈ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ.

ರೋಹಿತ್​ ಶರ್ಮ ಅವರು ಡಿಫೆನ್ಸ್​ ಮತ್ತು ಸಿಕ್ಸರ್​ ಹೊಡೆತಗಳನ್ನು ಹೊಡೆಯುವ ದೃಶ್ಯವನ್ನು ವಿಡಿಯೊದಲ್ಲಿ ನೋಡಬಹುದಾಗಿದೆ. ಹಲವು ಎಮೊಜಿಗಳನ್ನು ಹಾಕಿ ಫ್ರಾಂಚೈಸಿಯು ಈ ವಿಡಿಯೊವನ್ನು ಹಂಚಿಕೊಂಡಿದೆ.

ಹಾರ್ದಿಕ್ ಪಾಂಡ್ಯ (Hardik Pandya) ಅವರಿಗೆ ನಾಯಕತ್ವ ನೀಡಿದ ಕುರಿತು ಈಗಾಗಲೇ ಪರ-ವಿರೋಧಗಳ ಚರ್ಚೆ ನಡೆದಿದ್ದು, ರೋಹಿತ್​ ಅಭಿಮಾನಿಗಳು ಮಾತ್ರ ಹಾರ್ದಿಕ್​ ಪಾಂಡ್ಯ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಲೇ ಬರುತ್ತಿದ್ದಾರೆ. ಅಲ್ಲದೆ ಮುಂಬೈ ತಂಡದ ಆಟಗಾರರು ಕೂಡ ಪರೋಕ್ಷವಾಗಿ ಪಾಂಡ್ಯ ನಾಯಕತ್ವಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಬಾರಿಯ ಟೂರ್ನಿಯ ವೇಳೆ ಭಿನ್ನಮತ ಸ್ಫೋಟಗೊಳ್ಳುವ ಸಾಧ್ಯತೆಯೂ ಇದೆ.

2 ದಿನಗಳ ಹಿಂದಷ್ಟೇ ನಡೆದಿದ್ದ ಸುದ್ದಿಗೋಷ್ಠಿಯಲ್ಲಿ ರೋಹಿತ್‌ ಶರ್ಮ ಅವರನ್ನು ನಾಯಕತ್ವದಿಂದ ಕೆಳಗಿಳಿಸಿರುವ ವಿವಾದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಲು ಹಾರ್ದಿಕ್‌ ಪಾಂಡ್ಯ ಮತ್ತು ಮುಂಬೈ ಮುಖ್ಯ ಕೋಚ್‌ ಮಾರ್ಕ್‌ ಬೌಷರ್‌ ನಿರಾಕರಿಸಿದ್ದರು. ನಾಯಕತ್ವ ಬದಲಾವಣೆಗೆ ಸಂಬಂಧಿಸಿ ಕೇಳಲಾದ ಯಾವ ಪ್ರಶ್ನೆಗೂ ಪಾಂಡ್ಯ ಮತ್ತು ಬೌಷರ್‌ ಉತ್ತರಿಸದೆ ಮೌನಕ್ಕೆ ಶರಣಾಗಿದ್ದರು.

ಹಾರ್ದಿಕ್‌ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌(Mumbai Indians) ತಂಡ ಟ್ರೇಡಿಂಗ್​ ಮೂಲಕ ಖರೀದಿಸಿ ತಂಡದ ನಾಯಕನನ್ನಾಗಿ ನೇಮಿಸಿದಾಗಿನಿಂದ ರೋಹಿತ್​ ಶರ್ಮ(Rohit Sharma) ಅವರು ಮುಂಬೈ ತಂಡ ತೊರೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ರೋಹಿತ್​ ತಂಡ ತೊರೆಯದೆ ಈ ಬಾರಿಯೂ ಮುಂಬೈ ಪರವೇ ಕಣಕ್ಕಿಳಿಯುತ್ತಿದ್ದಾರೆ. ಆದರೆ, ಮುಂದಿನ ಆವೃತ್ತಿಯಲ್ಲಿ(IPL 2025) ಅವರು ಮುಂಬೈ ತೊರೆದು ಚೆನ್ನೈ ಸೂಪರ್​ ಕಿಂಗ್ಸ್​ ಸೇರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದೆ.

ಇದನ್ನೂ ಓದಿ IPL 2024: ಆರ್​ಸಿಬಿ-ಚೆನ್ನೈ ಪಂದ್ಯದ ಟಿಕೆಟ್​ಗಾಗಿ ಸಹಾಯ ಕೋರಿದ ಸ್ಟಾರ್​ ಆಟಗಾರ ಅಶ್ವಿನ್

“ಭವಿಷ್ಯದಲ್ಲಿ ರೋಹಿತ್​ ಅವರು ಚೆನ್ನೈ ಸೂಪರ್​ ಕಿಂಗ್ಸ್​ ಪರ ಆಡುವುದನ್ನು ನೋಡಲು ಬಯಸುತ್ತೇನೆ. ಅವರು ಮುಂಬೈ ಇಂಡಿಯನ್ಸ್‌ಗಾಗಿ ಇಷ್ಟು ದಿನ ಆಡಿದ್ದಾರೆ. ಮುಂದಿನ ಆವೃತ್ತಿಯಿಂದ ಸಿಎಸ್​ಕೆಗಾಗಿ ಆಡಿದರೆ ಮತ್ತು ಅಲ್ಲಿಯೂ ಅವರ ನಾಯಕತ್ವದಲ್ಲಿ ತಂಡ ಗೆದ್ದರೆ ಒಳ್ಳೆಯದು. ಚೆನ್ನೈ ಪರ ಆಡಬೇಕೆ ಅಥವಾ ಆಡಬಾರದೇ ಎಂಬುವುದು ರೋಹಿತ್​ಗೆ ಬಿಟ್ಟ ನಿರ್ಧಾರ. ಅವರು ಆಡಬೇಕು ಎನ್ನುವುದು ನನ್ನ ಸಲಹೆ” ಎಂದು ಚೆನ್ನೈ ತಂಡದ ಮಾಜಿ ಆಟಗಾರ ರಾಯುಡು ಮನವಿ ಮಾಡಿದ್ದರು.

5 ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡ ಈ ಬಾರಿ ಟೂರ್ನಿಯಲ್ಲಿ ಕಳೆದ ಬಾರಿಯ ರನ್ನರ್‌-ಅಪ್‌ ಗುಜರಾತ್‌ ಟೈಟಾನ್ಸ್‌ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಮಾರ್ಚ್ 24ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ದ್ವಿತೀಯ ಪಂದ್ಯವನ್ನು ಮಾರ್ಚ್​ 27ರಂದು ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಸೆಣಸಾಡಲಿದೆ.

Continue Reading
Advertisement
Self Harming fire
ಚಿತ್ರದುರ್ಗ30 mins ago

Self Harming : ಇಬ್ಬರು ಮಕ್ಕಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾನೂ ಆಹುತಿಯಾದ ತಾಯಿ

BY Vijayendra meets HD Kumaraswamy
Lok Sabha Election 202454 mins ago

Lok Sabha Election 2024: ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರ; ಮೋದಿ ಪ್ರವಾಸದ ಬಗ್ಗೆ ಬಿ.ವೈ. ವಿಜಯೇಂದ್ರ ಹೇಳಿದ್ದೇನು?

Acid Attack Anekal coupleAcid Attack Anekal couple
ಬೆಂಗಳೂರು57 mins ago

Acid Attack : ಕೌಟುಂಬಿಕ ಕಲಹ; ಹೆಂಡತಿ ಮೇಲೆ ಆಸಿಡ್‌ ದಾಳಿ ನಡೆಸಿದ ಧೂರ್ತ ಗಂಡ

nitin gadkari ashiwini vaishnav
ಪ್ರಮುಖ ಸುದ್ದಿ1 hour ago

Lok Sabha Election 2024: ಮೋದಿ ಮತ್ತೆ ಪ್ರಧಾನಿ, ಎನ್‌ಡಿಗೆ 400: ನಿತಿನ್‌ ಗಡ್ಕರಿ; 2026ರಲ್ಲಿ ಬುಲೆಟ್‌ ಟ್ರೇನ್:‌ ಅಶ್ವಿನಿ ವೈಷ್ಣವ್

Tom Curran
ಕ್ರೀಡೆ1 hour ago

IPL 2024: ಎಲ್ಲ ಅನುಮಾನಗಳಿಗೂ ತೆರೆ; ಆರ್​ಸಿಬಿ ಸೇರಿದ ಇಂಗ್ಲೆಂಡ್​ ಆಲ್​ರೌಂಡರ್​

MP Tejaswi surya participate at Nagarthapet protest
ಬೆಂಗಳೂರು1 hour ago

Hanuman Chalisa: ನಗರ್ತಪೇಟೆಯಲ್ಲಿ ಗುಡುಗಿದ ‘ಕೇಸರಿ’; ಕಠಿಣ ಕ್ರಮದ ಭರವಸೆ, ಪ್ರತಿಭಟನೆಗೆ ವಿರಾಮ

SS Rajamouli soft launches Mahesh Babu
ಟಾಲಿವುಡ್1 hour ago

SS Rajamouli: ಮಹೇಶ್‌ ಬಾಬು ಸಿನಿಮಾ ಬಗ್ಗೆ ಜಪಾನ್‌ನಲ್ಲಿ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಜಮೌಳಿ!

Student Death Deeksha
ತುಮಕೂರು1 hour ago

Student death: ದೇವರಿಗೆ ದೀಪ ಹಚ್ಚಲು ಹೋದ ವಿದ್ಯಾರ್ಥಿನಿ ಸಾವು; ಶಿಕ್ಷಕರ ಸಸ್ಪೆಂಡ್

Thalapathy Vijay
ಕಾಲಿವುಡ್2 hours ago

Thalapathy Vijay: 14 ವರ್ಷಗಳ ಬಳಿಕ ದಳಪತಿ ವಿಜಯ್‌ ಕೇರಳಕ್ಕೆ; ಕಾರಿನ ಗ್ಲಾಸ್ ಪೀಸ್ ಪೀಸ್!

Virat Kohli's new look
ಕ್ರೀಡೆ2 hours ago

Virat Kohli: ಧೋನಿಯ ಹೇರ್‌ಸ್ಟೈಲ್‌ ಕಾಪಿ ಮಾಡಿದ ವಿರಾಟ್​ ಕೊಹ್ಲಿ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Nagarthpet protest by BJP
ಬೆಂಗಳೂರು2 hours ago

Hanuman Chalisa: ನಗರ್ತಪೇಟೆ ಉದ್ವಿಗ್ನ; ಜೈಶ್ರೀರಾಮ್‌ ಕೂಗಿದ ಹಿಂದು ಕಾರ್ಯಕರ್ತರು, ಶೋಭಾ ಕರಂದ್ಲಾಜೆ ಪೊಲೀಸ್‌ ವಶಕ್ಕೆ

dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು21 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ1 day ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ3 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ4 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ5 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

ಟ್ರೆಂಡಿಂಗ್‌