Site icon Vistara News

Duleep Trophy: ಟೆಸ್ಟ್ ತಂಡದಿಂದ ಹೊರಬಿದ್ದ ಬೆನ್ನಲ್ಲೇ ದೇಶೀಯ ಕ್ರಿಕೆಟ್​ನತ್ತ ಮುಖಮಾಡಿದ ಪೂಜಾರ

Duleep Trophy

ಬೆಂಗಳೂರು: ಭಾರತ ಟೆಸ್ಟ್​ ತಂಡದ ಉಪನಾಯಕನ ಸ್ಥಾನ ಮತ್ತು ವೆಸ್ಟ್​ ಇಂಡೀಸ್​ ವಿರುದ್ಧದ ಟೆಸ್ಟ್​ ಸರಣಿಯಿಂದ ಹೊರಬಿದ್ದಿರುವ ಹಿರಿಯ ಆಟಗಾರ ಚೇತೇಶ್ವರ್​ ಪೂಜಾರ(Cheteshwar Pujara) ಅವರು ದೇಶೀಯ ಕ್ರಿಕೆಟ್​ನತ್ತ ಮುಖಮಾಡಿದ್ದಾರೆ. ಜೂನ್​ 28ರಿಂದ ಆರಂಭವಾಗಲಿರುವ ದುಲೀಪ್​ ಟ್ರೋಫಿ(Duleep Trophy) ಕ್ರಿಕೆಟ್​ ಟೂರ್ನಿಯಲ್ಲಿ ಆಡಲು ಸಜ್ಜಾಗಿದ್ದಾರೆ. ಪಶ್ಚಿಮ ವಲಯ ತಂಡಕ್ಕೆ ಅವರು ಆಯ್ಕೆಯಾಗಿದ್ದು ಟೂರ್ನಿಯಲ್ಲಿ ಆಡಲು ಒಪ್ಪಿಕೊಂಡಿದ್ದಾರೆ. ಇವರ ಜತೆಗೆ ಸೂರ್ಯಕುಮಾರ್ ಯಾದವ್(Suryakumar Yadav)​ ಕೂಡ ​ಪಶ್ಚಿಮ ವಲಯ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಇದೇ ತಿಂಗಳ ಆರಂಭದಲ್ಲಿ ಲಂಡನ್​ನಲ್ಲಿ ನಡೆದ ದ್ವಿತೀಯು ಆವೃತ್ತಿಯ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು ಕಂಡಿತ್ತು. ಈ ಪಂದ್ಯದಲ್ಲಿ ಪೂಜಾರ ಎರಡೂ ಇನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಅದರಲ್ಲೂ ಮೊದಲ ಇನಿಂಗ್ಸ್​ನಲ್ಲಿ ವಿಕೆಟ್​ಗೆ ಬಂದ ಚೆಂಡನ್ನು ಬ್ಯಾಟ್​ ಎತ್ತಿ ಹಿಡಿದು ಕ್ಲೀನ್​ ಬೌಲ್ಡ್​ ಆಗಿದ್ದರು. ಪೂಜಾರ ಈ ರೀತಿ ವಿಕೆಟ್​ ಒಪ್ಪಿಸಿದ್ದನ್ನು ಕಂಡು ಅನೇಕ ಮಾಜಿ ಕ್ರಿಕೆಟಿಗರು ಟೀಕೆ ವ್ಯಕ್ತಪಡಿಸಿದ್ದರು.

ವಿಶ್ವ ಟೆಸ್ಟ್​ನಲ್ಲಿ ತೋರಿದ ಕಳಪೆ ಪ್ರದರ್ಶನವನ್ನು ಗಂಭೀರವಾಗಿ ಪರಿಗಣಿಸಿದ ಬಿಸಿಸಿಐ(BCCI) ಪೂಜಾರ ಅವರನ್ನು ವಿಂಡೀಸ್​ ಸರಣಿಯಿಂದ ಕೈ ಬಿಟ್ಟಿತ್ತು. ಇದೀಗ ಮತ್ತೆ ತಂಡಕ್ಕೆ ಆಗಮಿಸಬೇಕಿದ್ದರೆ ಪೂಜಾರ ತಮ್ಮ ಬ್ಯಾಟಿಂಗ್​ ಪ್ರದರ್ಶನವನ್ನು ತೋರ್ಪಡಿಸಬೇಕಿದೆ. ಇದೇ ಕಾರಣಕ್ಕೆ ಅವರು ದೇಶಿಯ ಕ್ರಿಕೆಟ್​ನತ್ತ ಮರಳಿದ್ದಾರೆ. ಈ ಹಿಂದೆ ರಾಹುಲ್​ ದ್ರಾವಿಡ್​, ಸಚಿನ್​ ತೆಂಡೂಲ್ಕರ್​ ಸೇರಿ ಅನೇಕ ಕ್ರಿಕೆಟಿಗರು ಫಾರ್ಮ್ ಕಳೆದುಕೊಂಡಾಗ ದೇಶಿ ಕ್ರಿಕೆಟ್​ ಆಡಿ ಮತ್ತೆ ತಮ್ಮ ಬ್ಯಾಟಿಂಗ್​ ಲಯವನ್ನು ಕಂಡುಕೊಂಡ ನಿದರ್ಶನಗಳು ಹಲವು ಇದೆ. ಇದೇ ಸೂತ್ರವನ್ನು ಇದೀಗ ಪೂಜಾರ ಕೂಡ ಕೈಗೆತ್ತಿಕೊಂಡಂತೆ ತೋರುತ್ತಿದೆ.

ಪೂಜಾರ ಮತ್ತು ಉಮೇಶ್​ ಯಾದವ್​ ಅವರನ್ನು ಟೆಸ್ಟ್​ ಸರಣಿಯಿಂದ ಕೈ ಬಿಟ್ಟ ಕಾರಣ ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್ ಮತ್ತು ಋತುರಾಜ್​ ಗಾಯಕ್ವಾಡ್​ ಅವರಿಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಆದರೆ ಅವರಿಗೆ ಪ್ಲೇಯಿಂಗ್​ ಇಲೆವೆನ್​ನಲ್ಲಿ ಅವಕಾಶ ಸಿಗಲಿದೆಯಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ T20 World Cup | ಎರಡು ಬಾರಿಯ ಚಾಂಪಿಯನ್‌ ವೆಸ್ಟ್‌ ಇಂಡೀಸ್‌ ತಂಡ ವಿಶ್ವ ಕಪ್‌ನ ಮೊದಲ ಹಂತದಿಂದಲೇ ಔಟ್‌

ಟೆಸ್ಟ್ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಸ್ ಭರತ್ (ವಿಕೆಟ್​ ಕೀಪರ್​), ಇಶಾನ್ ಕಿಶನ್​, ಆರ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್​ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕತ್, ನವದೀಪ್ ಸೈನಿ.

Exit mobile version