ಬೆಂಗಳೂರಿನಲ್ಲಿ ಮೊಮ್ಮಗ ರಚಿನ್ ರವೀಂದ್ರಗೆ ದೃಷ್ಟಿ ತೆಗೆದ ಅಜ್ಜಿ; ವಿಡಿಯೊ ವೈರಲ್​ - Vistara News

ಕ್ರಿಕೆಟ್

ಬೆಂಗಳೂರಿನಲ್ಲಿ ಮೊಮ್ಮಗ ರಚಿನ್ ರವೀಂದ್ರಗೆ ದೃಷ್ಟಿ ತೆಗೆದ ಅಜ್ಜಿ; ವಿಡಿಯೊ ವೈರಲ್​

ನ್ಯೂಜಿಲ್ಯಾಂಡ್​ ತಂಡದ ಆಟಗಾರ ರಚಿನ್​ ರವೀಂದ್ರ(Rachin Ravindra) ಅವರಿಗೆ ಯಾರ ದೃಷ್ಟಿಯೂ ಬೀಳಬಾರದೆಂದು ಅವರ ಅಜ್ಜಿ ದೃಷ್ಟಿ ತೆಗೆದಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

rachin ravindra grandmother
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಾಲಿ ಆವೃತ್ತಿಯ ವಿಶ್ವಕಪ್​ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ತೋರುತ್ತಿರುವ ಕರ್ನಾಟಕ ಮೂಲದ ನ್ಯೂಜಿಲ್ಯಾಂಡ್​ ತಂಡದ ಆಟಗಾರ ರಚಿನ್​ ರವೀಂದ್ರ(Rachin Ravindra) ಅವರಿಗೆ ಯಾರ ದೃಷ್ಟಿಯೂ ಬೀಳಬಾರದೆಂದು ಅವರ ಅಜ್ಜಿ ದೃಷ್ಟಿ ತೆಗೆದಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಶ್ರೀಲಂಕಾ ಎದುರಿನ ಪಂದ್ಯ ಮುಗಿದ ಬಳಿಕ ರಚಿನ್​ ಅವರು ಬೆಂಗಳೂರಿನಲ್ಲೇ ಇರುವ ತಮ್ಮ ಪ್ರೀತಿಯ ಅಜ್ಜಿ ಮನೆಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಅವರು ತಮ್ಮ ಮೊಮ್ಮಗನಿಗೆ ಯಾರ ದೃಷ್ಟಿಯೂ ಬೀಳಬಾರದು ಎಂದು ದೃಷ್ಟಿ ತೆಗೆದಿದ್ದಾರೆ. ಈ ಮುದ್ದಾದ ವಿಡಿಯೊ ಎಲ್ಲಡೆ ವೈರಲ್​ ಆಗುತ್ತಿದೆ.

ಇದನ್ನೂ ಓದಿ Rachin Ravindra : ಆರ್​ಸಿಬಿ ಸೇರುತ್ತಾರೆ ರಚಿನ್ ರವೀಂದ್ರ; ಸುಳಿವು ಬಿಟ್ಟುಕೊಟ್ಟ ಕಿವೀಸ್ ತಾರೆ

ಚೊಚ್ಚಲ ವಿಶ್ವಕಪ್​ ಆಡುತ್ತಿರುವ ರಚಿನ್​ ಅವರು ಹಾಲಿ ಆವೃತ್ತೊಯಲ್ಲಿ ಒಟ್ಟು ಮೂರು ಶತಕ ಬಾರಿಸಿ ದಿಗ್ಗಜ ಸಚಿನ್​ ತೆಂಡೂಲ್ಕರ್​ ಸೇರಿ ಅನೇಕ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ. ಸದ್ಯ 565 ಬಾರಿಸಿರುವ ಅವರು ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಯಾರು ಈ ರಚಿನ್ ರವೀಂದ್ರ?

ರಚಿನ್ ರವೀಂದ್ರ 1999 ರಲ್ಲಿ ವೆಲ್ಲಿಂಗ್ಟನ್​ ಭಾರತೀಯ ಮೂಲದ ಪೋಷಕರಿಗೆ ಜನಿಸಿದರು. ಬೆಂಗಳೂರಿನವರಾದ ರಚಿನ್ ಅವರ ತಂದೆ ರಾಹುಲ್ ದ್ರಾವಿಡ್ ಮತ್ತು ಸಚಿನ್ ತೆಂಡೂಲ್ಕರ್ ಅವರ ದೊಡ್ಡ ಅಭಿಮಾನಿ. ಇಬ್ಬರು ಕ್ರಿಕೆಟ್ ದಂತಕಥೆಗಳ ಬಗ್ಗೆ ಅವರ ಪ್ರೀತಿ ಎಷ್ಟು ಆಳವಾಗಿತ್ತು ಎಂದರೆ, ಅವರು ಇಬ್ಬರೂ ಆಟಗಾರರ ಹೆಸರಿನ ಅಕ್ಷರಗಳನ್ನು ಸಂಯೋಜಿಸುವ ಮೂಲಕ ತಮ್ಮ ಮಗನಿಗೆ ಹೆಸರಿಟ್ಟಿದ್ದಾರೆ. ರಾಹುಲ್ ಅವರಿಂದ “ರಾ” ಮತ್ತು ಸಚಿನ್ ಅವರಿಂದ “ಚಿನ್​ ” ತೆಗೆದುಕೊಂಡು ಎರಡನ್ನೂ ಸಂಯೋಜಿಸಿ “ರಚಿನ್” ಎಂಬ ಹೆಸರನ್ನು ಪುತ್ರನಿಗೆ ಇಟ್ಟಿದ್ದಾರೆ. ಆತನಿಗೆ ತರಬೇತಿ ಕೊಡಿಸಿ ಕ್ರಿಕೆಟಿಗನನ್ನಾಗಿ ಮಾಡಿದ್ದಾರೆ.

ಬಾರ್​ನಲ್ಲಿ ಕುಳಿತು ಫೈನಲ್​ ವೀಕ್ಷಣೆ

ರಚಿನ್ ಅವರು 2019 ವಿಶ್ವಕಪ್​ ಫೈನಲ್​ ಪಂದ್ಯವನ್ನು ಅಭಿಮಾನಿಯಾಗಿ ಬೆಂಗಳೂರಿನ ಬಾರೊಂದರಲ್ಲಿ ಕುಳಿತು ವೀಕ್ಷಿಸಿದ್ದರಂತೆ, ಈ ವಿಚಾರವನ್ನು ಅವರೇ ಈ ಬಾರಿಯ ವಿಶ್ವಕಪ್​ ಟೂರ್ನಿಯ ವೇಳೆ ತಿಳಿಸಿದ್ದರು. ಇಂಗ್ಲೆಂಡ್ ವಿರುದ್ಧ ನ್ಯೂಜಿಲ್ಯಾಂಡ್​ ಸೋತಾಗ ತುಂಬಾ ಬೇಸರಗೊಂಡಿದ್ದೆ ಎಂದಿದ್ದರು.

ಲಂಕಾ ವಿರುದ್ಧದ ಪಂದ್ಯದಲ್ಲಿ ಹಲವು ದಾಖಲೆ

ಲಂಕಾ ವಿರುದ್ಧದ ಪಂದ್ಯದಲ್ಲಿ 42 ರನ್​ ಬಾರಿಸಿದ ರವೀಂದ್ರ ಹಲವು ದಾಖಲೆಯನ್ನು ತಮ್ಮ ಹಸರಿಗ ಬರೆದರು. 2019ರ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ಪರ ಚೊಚ್ಚಲ ಆವೃತ್ತಿಯಲ್ಲೇ 532 ರನ್ ಗಳಿಸಿದ್ದ ಇಂಗ್ಲೆಂಡ್​​ನ ಜಾನಿ ಬೈರ್​ಸ್ಟೋವ್ ಅವರ ದಾಖಲೆಯನ್ನು ರವೀಂದ್ರ ಮುರಿದರು. ತಮ್ಮ ಇನ್ನಿಂಗ್ಸ್ ಉದ್ದಕ್ಕೂ, ರವೀಂದ್ರ ತಮ್ಮ ಹೆಸರನ್ನು ದಾಖಲೆ ಪುಸ್ತಕಗಳಲ್ಲಿ ಕೆತ್ತಿದ್ದಲ್ಲದೆ, ಪ್ರಸ್ತುತ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದರು. ಪ್ರಸ್ತುತ ಕ್ವಿಂಟನ್ ಡಿ ಕಾಕ್ ಮತ್ತು ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ರವೀಂದ್ರ ಅಗ್ರಸ್ಥಾನಕ್ಕೇರಿದ್ದಾರೆ.

ಸಚಿನ್​ ದಾಖಲೆ ಮುರಿದ ರಚಿನ್​

ರಚಿನ್ ಕಳದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಟೀಮ್​ ಇಂಡಿಯಾದ ಮಾಜಿ ಆಟಗಾರ ಸಚಿನ್​ ತೆಂಡೂಲ್ಕರ್​ ಅವರ ವಿಶ್ವಕಪ್​ನ ದಾಖಲೆಯೊಂದನ್ನು ಮುರಿದ್ದರು. ಅತಿ ಕಿರಿಯ ವಯಸ್ಸಿನಲ್ಲಿ 3 ಶತಕ ಬಾರಿಸಿದ ಆಟಗಾರ ಎನಿಸಿಕೊಂಡಿದ್ದರು. ಸಚಿನ್​ ಅವರು 1996 ವಿಶ್ವಕಪ್​ ಟೂರ್ನಿಯಲ್ಲಿ 2 ಶತಕ ಬಾರಿಸಿದ್ದರು. ಈ ದಾಖಲೆಯನ್ನು ರಚಿನ್​ ಅವರು ಕಳೆದ ಆಸೀಸ್​ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿ ಸರುಗಟ್ಟಿದ್ದರು. ಇದೀಗ ಪಾಕ್​ ವಿರುದ್ಧ ಶತಕ ಬಾರಿಸಿ ಸಚಿನ್​ ಅವರನ್ನು ಹಿಂದಿಕ್ಕಿದ್ದಾರೆ. ಉಭಯ ಆಟಗಾರರು ಈ ದಾಖಲೆಯನ್ನು 23 ವರ್ಷದಲ್ಲಿ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Ricky Ponting : ಡೆಲ್ಲಿ ಕ್ಯಾಪಿಟಲ್ಸ್​ ಕೋಚಿಂಗ್ ಹುದ್ದೆಯಿಂದ ಪಾಂಟಿಂಗ್ ನಿರ್ಗಮಿಸಿದ್ದು ಯಾಕೆ? ಕಾರಣ ಕೊಟ್ಟ ಮಾಲೀಕ ಪಾರ್ಥ್​ ಜಿಂದಾಲ್​

Ricky Ponting :

VISTARANEWS.COM


on

Ricky Ponting
Koo

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್ (Ricky Ponting) ಅವರನ್ನು ಬಿಟ್ಟಾಗ ಫ್ರಾಂಚೈಸಿಯ ಅಭಿಮಾನಿಗಳಿಗೆ ಮತ್ತು ಆಟಗಾರರಿಗೆ ಆಘಾತವನ್ನುಂಟು ಮಾಡಿತ್ತು. ಆದರೆ ಫ್ರಾಂಚೈಸಿಯ ಸಹ ಮಾಲೀಕ ಮತ್ತು ಅಧ್ಯಕ್ಷ ಪಾರ್ಥ್ ಜಿಂದಾಲ್ ಅಂತಿಮವಾಗಿ ಪಾಂಟಿಂಗ್ ಅವರನ್ನು ಆ ಹುದ್ದೆಯಿಂದ ತೆಗೆದುಹಾಕುವ ನಿರ್ಧಾರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಮೂಲಕ ರಿಕಿ ಪಾಂಟಿಂಗ್ ಅವರಿಂದ ಬೇರ್ಪಡುವುದಾಗಿ ಘೋಷಿಸಿತು. ಪಾಂಟಿಂಗ್ ಏಳು ವರ್ಷಗಳ ಕಾಲ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಮುಖ್ಯ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದರು. ಆದರೆ ಅವರ ಅಧಿಕಾರಾವಧಿಯಲ್ಲಿ ತಂಡವು ಒಂದೇ ಒಂದು ಟ್ರೋಫಿಯನ್ನು ಗೆಲ್ಲಲು ವಿಫಲವಾಯಿತು. ಇಷ್ಟು ದೀರ್ಘಾವಧಿಯಲ್ಲಿ ಒಂದೇ ಒಂದು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟ್ರೋಫಿಯನ್ನು ಗೆಲ್ಲಲು ತಂಡದ ಅಸಮರ್ಥತೆಯಿಂದಾಗಿ ಪಾಂಟಿಂಗ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಈ ಹಿಂದೆ ಭಾವಿಸಲಾಗಿತ್ತು. ಆದರೆ ಪಾರ್ಥ್ ಜಿಂದಾಲ್ ಅಂತಹ ದೊಡ್ಡ ನಿರ್ಧಾರದ ಹಿಂದಿನ ನಿಜವಾದ ಕಾರಣ ಬಹಿರಂಗಪಡಿಸಿದ್ದಾರೆ.

ಪಾರ್ಥ್ ಜಿಂದಾಲ್ ಏನಂದರು?

ಪಾರ್ಥ್ ಜಿಂದಾಲ್ ಅವರು 2026 ರ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದ ತಂಡಕ್ಕೆ ಪ್ರಾಯೋಜಕರಾಗಿರುವ ಪ್ರಸಿದ್ಧ ಜೆಎಸ್​ಡಬ್ಲ್ಯೂ ಗ್ರೂಪ್​ನ ಮುಖ್ಯಸ್ಥರಾಗಿದ್ದಾರೆ. ಒಲಿಂಪಿಕ್ಸ್ ಮುನ್ನಾದಿನದಂದು ಸಿಎನ್ಬಿಸಿ-ಟಿವಿ 18 ಜೊತೆಗಿನ ಇತ್ತೀಚಿನ ಚರ್ಚೆಯಲ್ಲಿ ಮಾತನಾಡಿ, ರಿಕಿ ಪಾಂಟಿಂಗ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿಸಿದ ಬಗ್ಗೆ ಮಾತನಾಡಿದ್ದಾರೆ.

ರಿಷಭ್ ಪಂತ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ ಮತ್ತು ಮುಖೇಶ್ ಕುಮಾರ್ ಅವರಂತಹ ಭಾರತೀಯ ಅಂತಾರಾಷ್ಟ್ರೀಯ ಆಟಗಾರರನ್ನು ಒಳಗೊಂಡಿರುವ ತಮ್ಮ ತಂಡದ ಪ್ರಮುಖ ಗುಂಪಿನಲ್ಲಿ ಯುವ ಸಹ ಮಾಲೀಕ ವಿಶ್ವಾಸವನ್ನು ತೋರಿಸಿದರು.

“ಮೆಗಾ ಹರಾಜಿನ ಉಳಿಸುವ ಮತ್ತು ಬಿಡುಗಡೆ ನಿಯಮಗಳ ಬಗ್ಗೆ ನಾವು ಬಿಸಿಸಿಐಗೆ ನಮ್ಮ ಅಭಿಪ್ರಾಯಗಳನ್ನು ನೀಡುತ್ತೇವೆ. ಡೆಲ್ಲಿ ಕ್ಯಾಪಿಟಲ್ಸ್​ನಲ್ಲಿ ನಾವು ಉತ್ತಮ ಆಟಗಾರರನ್ನು ಹೊಂದಿದ್ದೇವೆ. ರಿಷಭ್ ಪಂತ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜೇಕ್ ಫ್ರೇಸರ್-ಮೆಕ್ಗುರ್ಕ್, ಟ್ರಿಸ್ಟಾನ್ ಸ್ಟಬ್ಸ್, ಮುಖೇಶ್ ಕುಮಾರ್, ಖಲೀಲ್ ಅಹ್ಮದ್ ಅವರಂತಹ ಆಟಗಾರರನ್ನು ನೋಡಿದ್ದೇವೆ ಎಂದು ಜಿಂದಾಲ್ ಹೇಳಿದ್ದಾರೆ.

ಪಾಂಟಿಂಗ್ ಅವರನ್ನು ಮುಖ್ಯ ಕೋಚ್ ಹುದ್ದೆಯಿಂದ ತೆಗೆದುಹಾಕುವ ಬಗ್ಗೆ ಕೇಳಿದಾಗ, ಜಿಂದಾಲ್, ಅವರು ಸದಾ ಭಾರತದಲ್ಲಿ ಲಭ್ಯ ಇರಬೇಕು. ಆದರೆ ಅದು ಸಾಧ್ಯವಾಗುತ್ತಿಲ್ಲ ಎಂದ ಹೇಳಿದ್ದಾರೆ.

ಇದನ್ನೂ ಓದಿ: ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

ಕೋಚ್​ ಸಂಪೂರ್ಣ ಸಮಯ ಮೀಸಲಿಡಬೇಕು. ಅವರು ಭಾರತದ ಯಾವುದೇ ನಗರದಲ್ಲಿ ಯಾವುದೇ ಸಮಯದಲ್ಲಿ ಲಭ್ಯವಿರಬೇಕು. ನಾವು ಈ ಬದಲಾವಣೆಯನ್ನು ಮಾಡಲು ಇದೊಂದೇ ಕಾರಣ ಎಂದು ಜಿಂದಾಲ್ ಹೇಳಿದ್ದಾರೆ. ಇದೇ ವೇಳೆ ಈ ಏಳು ವರ್ಷಗಳಲ್ಲಿ ರಿಕಿ ಪಾಂಟಿಂಗ್ ಅವರ ಅಮೂಲ್ಯ ಸೇವೆಗಳಿಗಾಗಿ ಧನ್ಯವಾದಗಳನ್ನೂ ಅರ್ಪಿಸಿದ್ದಾರೆ.

ರಿಕಿ ಪಾಂಟಿಂಗ್ ಕೋಚ್ ಆಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ 2020ರಲ್ಲಿ ಫೈನಲ್ ತಲುಪಿತ್ತು. ದುರದೃಷ್ಟವಶಾತ್, ಫೈನಲ್ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿತ್ತು.

Continue Reading

ಕ್ರಿಕೆಟ್

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Ashwini Puneeth Rajkumar: ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

VISTARANEWS.COM


on

Ashwini Puneeth Rajkumar launched Appu Cup season 2
Koo

ಬೆಂಗಳೂರು: ಅಪ್ಪು ನೆನಪನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಅಪ್ಪು ಕಪ್‌ ಸೀಸನ್‌ 2 ಬ್ಯಾಡ್ಮಿಂಟನ್‌ ಟೂರ್ನಿಗೆ ಇಂದು ನಾಗರಬಾವಿಯ ಕಿಂಗ್ಸ್‌ ಕ್ಲಬ್‌ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸ್ಪರ್ಧಾಳುಗಳಿಗೆ ಶುಭ ಕೋರಿ, ಮೊದಲ ಪಂದ್ಯದ ಆರಂಭಕ್ಕೆ ಟಾಸ್‌ ಹಾಕಿದರು.

PRK ಸಂಸ್ಥೆಯ ಸಹಯೋಗದೊಂದಿಗೆ ಚೇತನ್‌ ಸೂರ್ಯ ಅವರು ಈ ಟೂರ್ನಮೆಂಟ್‌ ಅನ್ನು ಆಯೋಜಿಸಿದ್ದು, ಈ ಪಂದ್ಯಾವಳಿಯು ಮೂರು ದಿನಗಳ ಕಾಲ ನಡೆಯಲಿದೆ. ಅಪ್‌ ಕಪ್‌ ಸೀಸನ್‌ 2ನಲ್ಲಿ ಹತ್ತು ತಂಡಗಳು ಭಾಗವಹಿಸಲಿದ್ದು, ಸಿನಿಮಾ, ಧಾರಾವಾಹಿ ಮತ್ತು ಮಾಧ್ಯಮದವರು ಆಡಲಿದ್ದಾರೆ.

ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ, ಡಿಪಿಐಎಸ್ ಫೌಂಡರ್‌, ಚೇರ್‌ಪರ್ಸನ್ ಸುನಿತಾ ಗೌಡ, ‌ಹಿರಿಯ ನಿರ್ಮಾಕರಾದ ಸಾರಾ ಗೋವಿಂದು ಉಪಸ್ಥಿತರಿದ್ದರು.

Continue Reading

ಕ್ರೀಡೆ

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

Womens Asia Cup Final:ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

VISTARANEWS.COM


on

Womens Asia Cup Final
Koo

ದಾಂಬುಲಾ (ಶ್ರೀಲಂಕಾ): ಮಹಿಳಾ ಏಷ್ಯಾಕಪ್​ ಫೈನಲ್​(Womens Asia Cup Final) ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ನಾಳೆ ನಡೆಯುವ ಫೈನಲ್​ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್​ ಭಾರತ ಮತ್ತು ಶ್ರೀಲಂಕಾ(India Women vs Sri Lanka Women Final) ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. 7 ಬಾರಿಯ ಚಾಂಪಿಯನ್​ ಭಾರತವೇ ಈ ಬಾರಿಯೂ ಪ್ರಶಸ್ತಿ ಗೆಲ್ಲುವ ಹಾಟ್‌ ಫೇವರಿಟ್‌ ಆಗಿದೆ. ಅತ್ತ ಆತಿಥೇಯ ಲಂಕಾ ಚೊಚ್ಚಲ ಪ್ರಶಸ್ತಿ ಗೆಲ್ಲುವ ಇದಾರೆಯಲ್ಲಿದೆ. ಇತ್ತಂಡಗಳು ಕೂಡ ಈ ಬಾರಿ ಅಜೇಯ ತಂಡಗಳಾಗಿ ಫೈನಲ್​ಗೆ ಲಗ್ಗೆಯಿಟ್ಟಿದೆ. ಹೀಗಾಗಿ ಈ ಪಂದ್ಯದವನ್ನು ಹೈವೋಲ್ಟೇಜ್​ ಎಂದು ನಿರೀಕ್ಷೆ ಮಾಡಬಹುದು.

ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

6ನೇ ಬಾರಿ ಭಾರತ-ಲಂಕಾ ಫೈನಲ್​ ಮುಖಾಮುಖಿ


ಇದುವರೆಗಿನ ಮಹಿಳಾ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಮತ್ತು ಶ್ರೀಲಂಕಾ 5 ಬಾರಿ ಫೈನಲ್​ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತವೇ ಗೆದ್ದು ಬೀಗಿದೆ. ಈ ಬಾರಿಯದ್ದು 6ನೇ ಮುಖಾಮುಖಿ. 6ನೇ ಪ್ರಯತ್ನದಲ್ಲಾದರೂ ಲಂಕಾ ಪ್ರೋಫಿ ಗೆಲ್ಲಬಹುದೇ ಎಂಬ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ.

ಭಾರತ ಪರ ಬ್ಯಾಟಿಂಗ್​ನಲ್ಲಿ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮ ಮತ್ತು ಸ್ಮೃತಿ ಮಂಧಾನ ಎಲ್ಲ ಪಂದ್ಯಗಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರಿದ್ದಾರೆ. ಶಫಾಲಿ 184 ರನ್​ ಗಳಿಸಿ ಕೂಟದ ಅತ್ಯಧಿಕ ರನ್​ ಗಳಿಸಿದ ಆಟಗಾರ್ತಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ಬೌಲಿಂಗ್ ವಿಭಾಗ ತುಂಬಾನೆ ಘಾತಕವಾಗಿದೆ. ಸ್ಪಿನ್ನ್​ ಮತ್ತು ವೇಗದ ವಿಭಾಗದಲ್ಲಿ ಸಮತೋಲಿತವಾಗಿದೆ. ರಾಧಾ ಯಾದವ್​, ಆಲ್​ರೌಂಡರ್​ ದೀಪ್ತಿ ಶರ್ಮಾ ತಂಡದ ಸ್ಪಿನ್ನರ್​ಗಳಾದರೆ, ವೇಗಿ ರೇಣುಕಾ ಸಿಂಗ್​ ಮತ್ತು ಪೂಜಾ ವಸ್ತ್ರಾಕರ್​ ವೇಗಿಗಳಾಗಿದ್ದಾರೆ.

ಇದನ್ನೂ ಓದಿ Womens Asia Cup T20: ಬಾಂಗ್ಲಾ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ

ಲಂಕಾ ಕೂಡ ಬಲಿಷ್ಠ


ಎದುರಾಳಿ ಶ್ರೀಲಂಕಾ ಕೂಡ ಭಾರತದ ಹಾಗೆ ಬಲಿಷ್ಠವಾಗಿದೆ. ಅದರಲ್ಲೂ ಕೂಟದ ಗರಿಷ್ಠ ಸ್ಕೋರರ್​ ಎನಿಸಿಕೊಂಡಿರುವ ನಾಯಕಿ ಚಾಮರಿ ಅತಪಟ್ಟು ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಒಂದು ಶತಕ ಕೂಡ ಬಾರಿಸಿದ್ದಾರೆ. ಆಡಿದ 4 ಪಂದ್ಯಗಳಿಂದ 243 ರನ್​ ಕಲೆ ಹಾಕಿದ್ದಾರೆ. ಇವರನ್ನು ಹೆಚ್ಚು ಹೊತ್ತು ಕ್ರೀಸ್​ ಆಕ್ರಮಿಸದಂತೆ ಭಾರತೀಯ ಬೌಲರ್​ಗಳು ನೋಡಿಕೊಂಡರೆ ಅರ್ಧ ಪಂದ್ಯ ಗೆದ್ದಂತೆ. ನಿನ್ನೆ ನಡೆದಿದ್ದ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾವನ್ನು ಮಣಿಸಿದರೆ, ಶ್ರೀಲಂಕಾ ಪಾಕಿಸ್ತಾನವನ್ನು ಸೋಲಿಸಿ ಫೈನಲ್​ ಪ್ರವೇಶಿಸಿತ್ತು.

ಸಂಭಾವ್ಯ ತಂಡಗಳು


ಶ್ರೀಲಂಕಾ: ವಿಶ್ಮಿ ಗುಣರತ್ನೆ, ಚಾಮರಿ ಅಟಪಟ್ಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಹಾಸಿನಿ ಪೆರೇರಾ, ಅನುಷ್ಕಾ ಸಂಜೀವನಿ (ವಾಕ್), ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಇನೋಶಿ ಪ್ರಿಯದರ್ಶನಿ, ಉದೇಶಿಕಾ ಪ್ರಬೋಧನಿ, ಸುಗಂದಿಕಾ ಕುಮಾರಿ, ಅಚಿನಿ ಕುಲಸೂರ್ಯ.

ಭಾರತ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಉಮಾ ಚೆಟ್ರಿ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೀ), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ತನುಜಾ ಕನ್ವರ್, ರೇಣುಕಾ ಠಾಕೂರ್ ಸಿಂಗ್.

Continue Reading

ಕ್ರೀಡೆ

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Champions Trophy 2025: ಕಳೆದ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಪಾಕ್​ಗೆ ಹೋಗಲು ಒಪ್ಪದ ಕಾರಣ ಹೈಬ್ರೀಡ್​ ಮಾದರಿಯಲ್ಲಿ ಪಾಕ್​ ಮತ್ತು ಶ್ರೀಲಂಕಾದಲ್ಲಿ ಆಡಿಸಲಾಗಿತ್ತು. ಭಾರತ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು.

VISTARANEWS.COM


on

Champions Trophy 2025
Koo

ಕರಾಚಿ: ಮುಂದಿನ ವರ್ಷ ನಡೆಯುವ ಚಾಂಪಿಯನ್ಸ್‌ ಟ್ರೋಫಿ(Champions Trophy 2025) ಕ್ರಿಕೆಟ್‌ ಪಂದ್ಯಾವಳಿ ಪಾಕಿಸ್ತಾನದಲ್ಲಿ ನಡೆಯಲಿದೆ. ಆದರೆ, ಭಾರತ ತಂಡ(India to visit Pakistan) ಪಾಕ್​ಗೆ ತೆರಳುವುದು ಅನಿಶ್ಚಿತವಾಗಿದೆ. ಈಗಾಗಲೇ ಬಿಸಿಸಿಐ ಭಾರತದ ಪಂದ್ಯಗಳನ್ನು ತಟಸ್ಥ ತಾಣದಲ್ಲಿ ನಡೆಸಬೇಕೆಂದು ಐಸಿಸಿಗೂ ಮನವಿ ಮಾಡಿದೆ. ಒಂದೊಮ್ಮೆ ಐಸಿಸಿ ಇದಕ್ಕೆ ಸಮ್ಮತಿ ಸೂಚಿಸದಿದ್ದರೆ ಟೂರ್ನಿಯಿಂದ ಭಾರತ ತಂಡ ಹಿಂದೆ ಸರಿಯಲಿದೆ ಎಂದು ದೃಢ ನಿರ್ಧಾರವನ್ನು ಕೂಡ ಪ್ರಕಟಿಸಿದೆ. ಆದರೆ, ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಹೇಗಾದರೂ ಮಾಡಿ ಟೀಮ್​ ಇಂಡಿಯಾವನ್ನು ಪಾಕ್​ಗೆ ಕರೆತರಲು ನಾನಾ ರೀತಿಯ ಕಸರತ್ತು ಮಾಡುತ್ತಿದ್ದಾರೆ. ಈ ಸಾಲಿಗೆ ಇದೀಗ ಶೋಯಿಬ್‌ ಮಲಿಕ್‌(Shoaib Malik) ಕೂಡ ಸೇರ್ಪಡೆಗೊಂಡಿದ್ದಾರೆ.

“ದೇಶಗಳ ನಡುವೆ ಯಾವುದೇ ಮೀಸಲಾತಿ ಇದ್ದರೂ ಅದು ಪ್ರತ್ಯೇಕ ಸಮಸ್ಯೆ ಮತ್ತು ಪ್ರತ್ಯೇಕವಾಗಿ ಪರಿಹರಿಸಬೇಕು. ಕ್ರೀಡೆಯಲ್ಲಿ ರಾಜಕೀಯ ಬರಬಾರದು. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತಕ್ಕೆ ಹೋಗಿತ್ತು, ಮತ್ತು ಈಗ ಭಾರತ ತಂಡಕ್ಕೂ ಪಾಕ್​ಗೆ ಬರುವ ಉತ್ತಮ ಅವಕಾಶವಿದೆ. ಈಗಿನ ಭಾರತ ತಂಡದ ಸ್ಟಾರ್​ ಆಟಗಾರರಿಗೆ ಪಾಕಿಸ್ತಾನದಲ್ಲಿ ಒಮ್ಮೆಯೂ ಆಡುವ ಅವಕಾಶ ಸಿಕ್ಕಿಲ್ಲ. ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ ಅವರಿಗೆ ಪಾಕ್​ನಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಆದ್ದರಿಂದ ಭಾರತ ತಂಡವನ್ನು ಪಾಕ್​ಗೆ ಕಳುಹಿಸಿಕೊಡಿ. ‘ಹಮ್ ಬಹುತ್ ಅಚ್ಚೆ ಲೋಗ್ ಹೈ” (ನಾವು ತುಂಬಾ ಒಳ್ಳೆಯ ಜನರು), ಹಾಗಾಗಿ ಭಾರತೀಯ ತಂಡ ಖಂಡಿತವಾಗಿಯೂ ಇಲ್ಲಿಗೆ ಬರಬೇಕು. ಬಿಸಿಸಿಐ ಇದಕ್ಕೆ ಒಪ್ಪಿಗೆ ನೀಡಬೇಕು” ಎಂದು ಮಲಿಕ್ ಹೇಳಿದ್ದಾರೆ.

​ಇದಕ್ಕೂ ಮುನ್ನ ಪಾಕ್‌ ಕ್ರಿಕೆಟ್‌ ತಂಡದ ಮಾಜಿ ನಾಯಕ ಯೂನಿಸ್‌ ಖಾನ್‌ ಭಾರತದ ಸ್ಟಾರ್​ ಬ್ಯಾಟರ್‌ ವಿರಾಟ್‌ ಕೊಹ್ಲಿ ಪಾಕಿಸ್ತಾನಕ್ಕೆ ಬರಬೇಕು, ಇಲ್ಲಿ ಅವರು ಆಡಬೇಕು, ಇದು ನಮ್ಮ ಆಸೆ ಎಂದು ಹೇಳಿದ್ದರು. ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ ಏಕದಿನ ಪಂದ್ಯಾವಳಿಗಾಗಿ ಭಾರತ ತಂಡವನ್ನು ಪಾಕಿಸ್ಥಾನಕ್ಕೆ ಕಳುಹಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಮೂಲ ಹೇಳಿತ್ತು. ಇದೇ ವಿಚಾರವನ್ನು ಮುಂದಿಟ್ಟಿರುವ ಯೂನಿಸ್‌ ಖಾನ್‌, ಕೊಹ್ಲಿ ಈವರೆಗೆ ಪಾಕಿಸ್ತಾನದಲ್ಲಿ ಆಡಿಲ್ಲ. ಇದಕ್ಕೆ ಬಿಸಿಸಿಐ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 2006ರಲ್ಲಿ ಪಾಕಿಸ್ತಾನಕ್ಕೆ ಪ್ರವಾಸ ಹೋಗಿದ್ದ ಭಾರತ ತಂಡ, ಇಲ್ಲಿ ಕೊನೆಯ ಸಲ ಸರಣಿಯನ್ನಾಡಿತ್ತು.

ಇದನ್ನೂ ಓದಿ ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

ನವೆಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಭಾರತವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಆಡಿಲ್ಲ. ಜೂನ್-ಜುಲೈ 2008 ರಲ್ಲಿ ಏಷ್ಯಾ ಕಪ್ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಿತ್ತು. ಭಾರತದಲ್ಲಿ ಡಿಸೆಂಬರ್ 2012 ರಿಂದ ಜನವರಿ 2013 ರವರೆಗಿನ ದ್ವಿಪಕ್ಷೀಯ ಸರಣಿಯು ಎರಡು ರಾಷ್ಟ್ರಗಳ ನಡುವಿನ ಅಂತಿಮ ದ್ವಿಪಕ್ಷೀಯ ಸರಣಿಯಾಗಿದೆ. ಇದಾದ ಬಳಿಕ ಉಭಯ ತಂಡಗಳು ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಆಡುತ್ತವೆ.

ಕಳೆದ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಪಾಕ್​ಗೆ ಹೋಗಲು ಒಪ್ಪದ ಕಾರಣ ಹೈಬ್ರೀಡ್​ ಮಾದರಿಯಲ್ಲಿ ಪಾಕ್​ ಮತ್ತು ಶ್ರೀಲಂಕಾದಲ್ಲಿ ಆಡಿಸಲಾಗಿತ್ತು. ಭಾರತ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು.

ಭಾರತ ತಂಡ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಿಂದ ಹಿಂದೆ ಸರಿದರೆ, 9ನೇ ಸ್ಥಾನಿಯಾಗಿರುವ ಶ್ರೀಲಂಕಾಗೆ ಅವಕಾಶ ಸಿಗಲಿದೆ. ಯಾವುದೇ ತಂಡವು ಐಸಿಸಿ ಟೂರ್ನಿಯಿಂದ ಹಿಂದೆ ಸರಿದರೆ ಅಂಕಪಟ್ಟಿಯಲ್ಲಿ ನಂತರದ ಸ್ಥಾನ ಪಡೆದಿರುವ ತಂಡ ತಂಡಕ್ಕೆ ಅರ್ಹತೆ ನೀಡಲಾಗುತ್ತದೆ. ಪ್ರಸ್ತುತ ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್​, ಅಫಘಾನಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್​ ಮತ್ತು ಬಾಂಗ್ಲಾದೇಶ ಅರ್ಹತೆ ಪಡೆದ ತಂಡಗಳಾಗಿವೆ.

Continue Reading
Advertisement
Kannada New Movie Nava Digantha latest news
ಸಿನಿಮಾ3 mins ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ23 mins ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್29 mins ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

ದೇಶ30 mins ago

Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

Ricky Ponting
ಕ್ರೀಡೆ33 mins ago

Ricky Ponting : ಡೆಲ್ಲಿ ಕ್ಯಾಪಿಟಲ್ಸ್​ ಕೋಚಿಂಗ್ ಹುದ್ದೆಯಿಂದ ಪಾಂಟಿಂಗ್ ನಿರ್ಗಮಿಸಿದ್ದು ಯಾಕೆ? ಕಾರಣ ಕೊಟ್ಟ ಮಾಲೀಕ ಪಾರ್ಥ್​ ಜಿಂದಾಲ್​

karnataka Rain
ಮಳೆ33 mins ago

Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು

PARIS 2024 OLYMPICS
ಕ್ರೀಡೆ52 mins ago

PARIS 2024 OLYMPICS: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಸೋಲು

Road Accident
ದೇಶ58 mins ago

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Ashwini Puneeth Rajkumar launched Appu Cup season 2
ಕ್ರಿಕೆಟ್1 hour ago

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Money Guide
ಮನಿ-ಗೈಡ್1 hour ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ3 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ4 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ22 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ23 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌