Rajkot Stadium: ರಾಜ್‌ಕೋಟ್‌ ಸ್ಟೇಡಿಯಂಗೆ ನಾಳೆ ಮರುನಾಮಕರಣ - Vistara News

ಕ್ರೀಡೆ

Rajkot Stadium: ರಾಜ್‌ಕೋಟ್‌ ಸ್ಟೇಡಿಯಂಗೆ ನಾಳೆ ಮರುನಾಮಕರಣ

2013ರಲ್ಲಿ ಉದ್ಘಾಟನೆಗೊಂಡಿರುವ(Rajkot Stadium) ಈ ಕ್ರೀಡಾಂಗಣದಲ್ಲಿ ಈ ವರೆಗೂ 2 ಟೆಸ್ಟ್‌, 4 ಏಕದಿನ, 5 ಅಂತಾರಾಷ್ಟ್ರೀಯ ಟಿ20 ಪಂದ್ಯಗಳು ನಡೆದಿವೆ. ಸದ್ಯ ಎಸ್‌ಸಿಎ ಕ್ರೀಡಾಂಗಣ ಎಂಬ ಹೆಸರಿದ್ದು ನಾಳೆಯಿಂದ ನಿರಂಜನ್‌ ಶಾ ಕ್ರಿಕೆಟ್​ ಸ್ಟೇಡಿಯಂ ಎಂದು ಮರುನಾಮಕರಣವಾಗಲಿದೆ.

VISTARANEWS.COM


on

Rajkot Stadium
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜ್​ಕೋಟ್​: ಭಾರತದ ಪ್ರಮುಖ ಕ್ರಿಕೆಟ್‌ ಮೈದಾನಗಳಲ್ಲಿ ಒಂದಾಗಿರುವ ಸೌರಾಷ್ಟ್ರ ಕ್ರಿಕೆಟ್‌ ಸಂಸ್ಥೆ(SCA)ಯ ಕ್ರೀಡಾಂಗಣದ ಹೆಸರು ನಾಳೆ ಮರುನಾಮಕರಣವಾಗಲಿದೆ. ಬಿಸಿಸಿಐನ ಮಾಜಿ ಕಾರ್ಯದರ್ಶಿ, ಹಿರಿಯ ಕ್ರಿಕೆಟ್‌ ಆಡಳಿತಗಾರ ನಿರಂಜನ್‌ ಶಾ(niranjan shah) ಹೆಸರನ್ನು ಇಡಲಾಗುವುದು. ಇದೇ ವೇಳೆ ಭಾರತ ಕ್ರಿಕೆಟ್​ ತಂಡದ ಚೇತೇಶ್ವರ​ ಪೂಜಾರ(Cheteshwar Pujara) ಮತ್ತು ರವೀಂದ್ರ ಜಡೇಜಾ(Ravindra Jadeja) ಅವರನ್ನು ಗೌರವಿಸಲಾಗುವುದು.

2013ರಲ್ಲಿ ಉದ್ಘಾಟನೆಗೊಂಡಿರುವ(Rajkot Stadium) ಕ್ರೀಡಾಂಗಣದಲ್ಲಿ ಈ ವರೆಗೂ 2 ಟೆಸ್ಟ್‌, 4 ಏಕದಿನ, 5 ಅಂತಾರಾಷ್ಟ್ರೀಯ ಟಿ20 ಪಂದ್ಯಗಳು ನಡೆದಿವೆ. ಸದ್ಯ ಎಸ್‌ಸಿಎ ಕ್ರೀಡಾಂಗಣ ಎಂಬ ಹೆಸರಿದ್ದು ನಾಳೆಯಿಂದ ನಿರಂಜನ್‌ ಶಾ ಕ್ರಿಕೆಟ್​ ಸ್ಟೇಡಿಯಂ ಎಂದು ಮರುನಾಮಕರಣವಾಗಲಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಹೊಸ ಹೆಸರನ್ನು ಅನಾವರಣಗೊಳಿಸಲಿದ್ದಾರೆ.

ನಿರಂಜನ್‌ ಶಾ ಕೊಡುಗೆ ಏನು?


ನಿರಂಜನ್‌ ಶಾ ಅವರು ಭಾರತ ತಂಡವನ್ನು ಪ್ರತಿನಿಧಿಸದಿದ್ದರೂ ದೇಶಿಯ ಕ್ರಿಕೆಟ್​ನಲ್ಲಿ ಮತ್ತು ಬಿಸಿಸಿಐನಲ್ಲಿ ಅಪಾರ ಕೊಡುಗೆ ಸಲ್ಲಿಸಿದ್ದಾರೆ. 1965-66 ಮತ್ತು 1975-76ರ ನಡುವೆ ಅವರು ಸೌರಾಷ್ಟ್ರ ತಂಡಕ್ಕಾಗಿ 12 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದರು. ಇದಾದ ಬಳಿಕ ಸುಮಾರು ನಾಲ್ಕು ದಶಕಗಳ ಕಾಲ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಜತೆಗೆ ಬಿಸಿಸಿಐ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ಸೌರಾಷ್ಟ್ರ ಕ್ರಿಕೆಟ್‌ಗೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರ ಹೆಸರನ್ನು ಸ್ಟೇಡಿಯಂಗೆ ಇಡಲು ನಿರ್ಧರಿಸಲಾಗಿದೆ. ನಿರಂಜನ್‌ ಶಾ ಅವರಿಗೆ ಈಗ 79 ವರ್ಷ ವಯಸ್ಸು.

ಇದನ್ನೂ ಓದಿ Ravindra Jadeja : ರವೀಂದ್ರ ಜಡೇಜಾ ಫುಲ್​ ಫಿಟ್​, ಮೂರನೇ ಪಂದ್ಯಕ್ಕೆ ಲಭ್ಯ?

ಸ್ಟೇಡಿಯಂಗಳ ಹೆಸರನ್ನು ಬದಲಾಯಿಸಿದ್ದು ಇದೇ ಮೊದಲೇನಲ್ಲ. 2019ರಲ್ಲಿ ದೆಹಲಿಯ ಫಿರೋಜ್‌ ಶಾ ಕೋಟ್ಲಾ ಕ್ರೀಡಾಂಗಣಕ್ಕೆ ಕೇಂದ್ರ ಮಾಜಿ ಸಚಿವ ಅರುಣ್‌ ಜೇಟ್ಲಿ ಅವರ ಹೆಸರನ್ನು ಇಡಲಾಗಿತ್ತು. ಅರುಣ್ ಜೇಟ್ಲಿ ಅವರಿಗೆ ಗೌರವ ಪೂರ್ವಕವಾಗಿ ಅವರ ಹೆಸರನ್ನು ಮರಣೋತ್ತರವಾಗಿ ದಿಲ್ಲಿ ಕ್ರಿಕೆಟ್ ಅಸೋಸಿಯೇಶನ್ ಅವರ ಹೆಸರನ್ನು ಇಟ್ಟಿತ್ತು. ಈಗ ಈ ಸ್ಟೇಡಿಯಂ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಸ್ಟೇಡಿಯಂ ಎಂದೇ ಕರೆಯಲಾಗುತ್ತದೆ. 1999ರಿಂದ 2003ರವರೆಗೆ ಅರುಣ್ ಜೇಟ್ಲಿ ದೆಹಲಿ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿದ್ದರು. ಇದೇ ವೇಳೆಯಲ್ಲಿ ಈ ಕ್ರೀಡಾಂಗಣದ ನವೀಕರಣ ಕೆಲಸ ನಡೆದಿತ್ತು. ಕ್ರೀಡಾಂಗಣದ ಡ್ರೆಸ್ಸಿಂಗ್ ರೂಮ್ ಅನ್ನು ವಿಶ್ವದರ್ಜೆಗೆ ಏರಿಸಿದ್ದರು.

ಪೂಜಾರ, ಜಡೇಜಾಗೆ ಸನ್ಮಾನ


ಹೊಸ ಹೆಸರನ್ನು ಅನಾವರಣಗೊಳಿಸುವ ಸಮಾರಂಭದಲ್ಲಿ ಜಡೇಜಾ ಮತ್ತು ಪೂಜಾರ ಅವರನ್ನು ಗೌರವಿಸಲಾಗುದು. ಈ ವಿಚಾರವನ್ನು ಎರಡು ದಿನಗಳ ಹಿಂದೆಯೇ ಎಸ್​ಸಿಎ ಅಧ್ಯಕ್ಷ ಜಯದೇವ್ ಶಾ(SCA President Jaydev Shah) ಪ್ರಕಟಿಸಿದ್ದರು. ಪೂಜಾರ ಅವರು ಎಲೈಟ್ 100-ಟೆಸ್ಟ್ ಕ್ಲಬ್‌ಗೆ ಪ್ರವೇಶಿಸಿದ ಕೇವಲ ಹದಿಮೂರನೇ ಭಾರತೀಯ ಆಟಗಾರರಾಗಿದ್ದಾರೆ. ಜಡೇಜಾ ಅವರು ಎಲ್ಲ ಮಾದರಿಯ ಕ್ರಿಕೆಟ್​ನಲ್ಲಿ ಭಾರತದ ಮ್ಯಾಚ್ ವಿನ್ನರ್ ಆಗಿದ್ದಾರೆ. ಮತ್ತು ಪ್ರಸ್ತುತ ಐಸಿಸಿ ಟೆಸ್ಟ್ ಆಲ್-ರೌಂಡರ್ ಶ್ರೇಯಾಂಕದಲ್ಲಿ ನಂ.1 ಸ್ಥಾನದಲ್ಲಿದ್ದಾರೆ.

“ಸ್ಥಳೀಯ ಆಟಗಾರ ಪೂಜಾರ ಮತ್ತು ಜಡೇಜಾ ಇಬ್ಬರೂ ಇಂಗ್ಲೆಂಡ್ ವಿರುದ್ಧ ಮೈದಾನಕ್ಕಿಳಿಯುವುದನ್ನು ನೋಡಲು ವಿಶೇಷವಾಗಿತ್ತು. ಆದರೆ ಇದು ಸಾಧ್ಯವಾಗಲಿಲ್ಲ. ಈ ಬಗ್ಗೆ ಬೇಸರವಿಲ್ಲ ಇದು ಆಟದ ಭಾಗ” ಎಂದು ಜಯದೇವ್ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಧೋನಿ ಡಕ್​ಔಟ್ ಆಗುವಾಗ ಜೋರಾಗಿ ನಕ್ಕ ಪ್ರೀತಿ ಜಿಂಟಾ; ಇಲ್ಲಿದೆ ವಿಡಿಯೊ

IPL 2024: ಪಂದ್ಯದಲ್ಲಿ ಎಂಎಸ್ ಧೋನಿ, ಪಿಬಿಕೆಎಸ್ ವಿರುದ್ಧದ 19 ನೇ ಓವರ್​ನಲ್ಲಿ 9 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಪ್ರವೇಶಿಸಿದರು. ಆದರೆ, ಹರ್ಷಲ್ ಪಟೇಲ್ ಅವರನ್ನು ಗೋಲ್ಡನ್ ಡಕ್​ಗೆ ಔಟ್ ಮಾಡಿದರು. ಹರ್ಷಲ್ ಪಟೇಲ್ ಅವರ ನಿಧಾನಗತಿಯ ಯಾರ್ಕರ್​​ ಎಸೆತಕ್ಕೆ ಧೋನಿ ಮೋಸಹೋದರು. ಅವರಿಗೆ ಪ್ರತಿಕ್ರಿಯಿಸಲು ಸಾಧ್ಯವಾಗಲಿಲ್ಲ. ಚೆಂಡು ಅವನ ಆಫ್-ಸ್ಟಂಪ್ ಗೆ ಅಪ್ಪಳಿಸಿತು.

VISTARANEWS.COM


on

IPL 2024
Koo

ಧರ್ಮಶಾಲಾ: ಇಲ್ಲಿ ಭಾನುವಾರ ನಡೆದ ಐಪಿಎಲ್​ ಪಂದ್ಯದಲ್ಲಿ (IPL 2024) ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) 28 ರನ್​ಗಳ ನಿರ್ಣಾಯಕ ಗೆಲುವು ಸಾಧಿಸಿದೆ. ಚೆಪಾಕ್​​ನಲ್ಲಿ ಸಿಎಸ್​ಕೆ ವಿರುದ್ಧದ ಗೆಲುವು ಸೇರಿದಂತೆ ಸತತ ಎರಡು ಪಂದ್ಯಗಳನ್ನು ಗೆದ್ದರೂ, ಪಿಬಿಕೆಎಸ್ ತನ್ನ ಆವೇಗವನ್ನು ಉಳಿಸಿಕೊಳ್ಳಲು ವಿಫಲವಾಯಿತು ಮತ್ತು 169/9 ಗುರಿಯನ್ನು ಬೆನ್ನಟ್ಟುವಾಗ 139/9 ಕ್ಕೆ ಸೀಮಿತಗೊಂಡಿತು.

ಪಂದ್ಯದಲ್ಲಿ ಎಂಎಸ್ ಧೋನಿ, ಪಿಬಿಕೆಎಸ್ ವಿರುದ್ಧದ 19 ನೇ ಓವರ್​ನಲ್ಲಿ 9 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಪ್ರವೇಶಿಸಿದರು. ಆದರೆ, ಹರ್ಷಲ್ ಪಟೇಲ್ ಅವರನ್ನು ಗೋಲ್ಡನ್ ಡಕ್​ಗೆ ಔಟ್ ಮಾಡಿದರು. ಹರ್ಷಲ್ ಪಟೇಲ್ ಅವರ ನಿಧಾನಗತಿಯ ಯಾರ್ಕರ್​​ ಎಸೆತಕ್ಕೆ ಧೋನಿ ಮೋಸಹೋದರು. ಅವರಿಗೆ ಪ್ರತಿಕ್ರಿಯಿಸಲು ಸಾಧ್ಯವಾಗಲಿಲ್ಲ. ಚೆಂಡು ಅವನ ಆಫ್-ಸ್ಟಂಪ್ ಗೆ ಅಪ್ಪಳಿಸಿತು.

ಎಂ.ಎಸ್.ಧೋನಿ ಗೋಲ್ಡನ್ ಡಕ್ ಔಟ್ ಆದ ನಂತರ, ಧರ್ಮಶಾಲಾದಲ್ಲಿ ಪ್ರೇಕ್ಷಕರು ಮೌನವಾದರು. ಆದಾಗ್ಯೂ, ಪಿಬಿಕೆಎಸ್ ಸಹ ಮಾಲೀಕರಾದ ಪ್ರೀತಿ ಜಿಂಟಾ ಸ್ಟ್ಯಾಂಡ್​ಗಳಲ್ಲಿ ಕುಳಿತು ಸಂಭ್ರಮಿಸುತ್ತಿರುವುದು ಕಂಡುಬಂದಿದೆ. ತನ್ನ ಭಾವನೆಗಳನ್ನು ನಿಯಂತ್ರಿಸಲು ಸಾಧ್ಯವಾಗದೆ, ಅವರು ಮುಗುಳ್ನಕ್ಕು ಹರ್ಷಲ್ ಅವರ ಪ್ರಯತ್ನಗಳಿಗೆ ಚಪ್ಪಾಳೆ ತಟ್ಟಿದರು.

ಧೋನಿಯ ಕ್ಲೀನ್​ ಬೌಲ್ಡ್​ ಕಂಡು ಬೇಸರಗೊಂಡ ಅಭಿಮಾನಿಗಳು; ವಿಡಿಯೊ ವೈರಲ್​

ಧರ್ಮಶಾಲಾ: ಹಿಮಾಲಯದ ತಪ್ಪಲಿನ ರಮಣೀಯ ತಾಣವಾದ ಧರ್ಮಶಾಲಾದಲ್ಲಿ ಭಾನುವಾರ ನಡೆದ ಪಂಜಾಬ್​ ಕಿಂಗ್ಸ್(Punjab Kings)​ ವಿರುದ್ಧದ ಐಪಿಎಲ್(IPL 2024)​ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ 28 ರನ್​ಗಳ ಗೆಲುವು ಸಾಧಿಸಿತು. ಆದರೆ, ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್​ ಧೋನಿ(MS Dhoni) ಮೊದಲ ಎಸೆತದಲ್ಲೇ ಕ್ಲೀನ್​ ಬೌಲ್ಡ್​ ಆಗಿ ಗೋಲ್ಡನ್​ ಡಕ್​(Dhoni golden duck) ಸಂಕಟಕ್ಕೆ ಸಿಲುಕಿದರು. ಇದನ್ನು ಕಂಡು ಅವರ ಅಭಿಮಾನಿಗಳು ಭಾರೀ ನಿರಾಸೆಗೊಂಡರು. ಇದರ ವಿಡಿಯೊ ವೈರಲ್​ ಆಗಿದೆ.

ಇದನ್ನೂ ಓದಿ: Jasprit Bumrah : ಪತ್ನಿ ಸಂಜನಾಗೆ ರೊಮ್ಯಾಂಟಿಕ್​​ ಬರ್ತ್​ಡೇ ವಿಶಸ್​ ಹೇಳಿದ ಜಸ್​ಪ್ರಿತ್​ ಬುಮ್ರಾ

ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ. ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್​ ನೋಡಲು ಅಭಿಮಾನಿಗಳು ಕಾಯುತ್ತಿದ್ದರು. ಆದರೆ ಶೂನ್ಯಕ್ಕೆ ಔಟ್​ ಆಗುವ ಮೂಲಕ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ಧೋನಿ ಔಟಾಗುತ್ತಿದ್ದಂತೆ ಅವರ ಅಭಿಮಾನಿಗಳು ಬೇಸರದಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತರ. ಈ ವಿಡಿಯೊ ವೈರಲ್​ ಆಗುತ್ತಿದೆ.

ಚೆನ್ನೈ ಬ್ಯಾಟಿಂಗ್​ ಇನಿಂಗ್ಸ್​ನ 19ನೇ ಓವರ್​ನಲ್ಲಿ ಧೋನಿ ಅವರು ಹರ್ಷಲ್​ ಪಟೇಲ್​ ಎಸೆದ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಆದರೆ ಕೀಪಿಂಗ್​ನಲ್ಲಿ ಧೋನಿ ಒಂದು ಸೊಗಸಾದ ಕ್ಯಾಚ್​ ಹಿಡಿದು ಮಿಂಚಿದರು. ಜಿತೇಶ್​ ಶರ್ಮ ಅವರ ಕ್ಯಾಚ್​ ಇದಾಗಿತ್ತು.

Continue Reading

ಪ್ರಮುಖ ಸುದ್ದಿ

Jasprit Bumrah : ಪತ್ನಿ ಸಂಜನಾಗೆ ರೊಮ್ಯಾಂಟಿಕ್​​ ಬರ್ತ್​ಡೇ ವಿಶಸ್​ ಹೇಳಿದ ಜಸ್​ಪ್ರಿತ್​ ಬುಮ್ರಾ

Jasprit Bumrah: ನನ್ನವಳಿಗೆ ಜನ್ಮದಿನದ ಶುಭಾಶಯಗಳು, ನನ್ನನ್ನು ಪೂರ್ಣಗೊಳಿಸಿದವರು ನೀವು. ನಿಮ್ಮ ಪಕ್ಕದಲ್ಲಿ ಈ ಜಗತ್ತು ಅದ್ಭುತ ಸ್ಥಳವಾಗಿದೆ. ಅಂಗದ್ ಮತ್ತು ನಾನು ನಮ್ಮಿಂದ ಸಾಕಷ್ಟು ಪ್ರೀತಿ ಮತ್ತು ವಾತ್ಸಲ್ಯವನ್ನು ಪಡೆದಿದ್ದೇವೆ. ನಿಮಗೆ ಜನ್ಮದಿನದ ಶುಭಕಾಮನೆಗಳು ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Jasprit Bumrah
Koo

ಬೆಂಗಳೂರು: ಟೀಮ್ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ತಮ್ಮ ಪತ್ನಿ ಸಂಜನಾ ಗಣೇಶನ್ (Sanjana Ganesan) ಅವರ ಹುಟ್ಟುಹಬ್ಬದ (Happy Birthday) ಪ್ರಯುಕ್ತ ರೊಮ್ಯಾಂಟಿಕ್​​ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಅವರು ತಮ್ಮ ಹೆಂಡತಿಗಾಗಿ ರೊಮ್ಯಾಂಟಿಕ್ ಹುಟ್ಟುಹಬ್ಬದ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್​ ಮಾಡಿದ್ದಾರೆ. ಅದರಲ್ಲಿ ಪತ್ನಿ ಹಾಗೂ ಮಗನ ಕುರಿತು ಹೊಗಳಿಕೆಯ ಮಾತನ್ನು ಆಡಿದ್ದಾರೆ.

ಬೌಲರ್ ಪತ್ನಿಗಾಗಿ ಹಾಕಿರುವ ಹುಟ್ಟುಹಬ್ಬದ ಪೋಸ್ಟ್ ನೆಟ್ಟಿಗರ ಗಮನ ಸೆಳೆದಿದೆ. ಅಭಿಮಾನಿಗಳ ಹೃದಯಕ್ಕೆ ಹತ್ತಿರವಾಗಿತ್ತು. ಪೋಸ್ಟ್​ನಲ್ಲಿ ಬುಮ್ರಾ ಸಂಜನಾಗೆ ತಮ್ಮ ಪ್ರೀತಿ ಮತ್ತು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ನನ್ನವಳಿಗೆ ಜನ್ಮದಿನದ ಶುಭಾಶಯಗಳು, ನನ್ನನ್ನು ಪೂರ್ಣಗೊಳಿಸಿದವರು ನೀವು. ನಿಮ್ಮ ಪಕ್ಕದಲ್ಲಿ ಈ ಜಗತ್ತು ಅದ್ಭುತ ಸ್ಥಳವಾಗಿದೆ. ಅಂಗದ್ ಮತ್ತು ನಾನು ನಮ್ಮಿಂದ ಸಾಕಷ್ಟು ಪ್ರೀತಿ ಮತ್ತು ವಾತ್ಸಲ್ಯವನ್ನು ಪಡೆದಿದ್ದೇವೆ. ನಿಮಗೆ ಜನ್ಮದಿನದ ಶುಭಕಾಮನೆಗಳು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

ಸಂಜನಾ ಗಣೇಶನ್ ಪ್ರಸಿದ್ಧ ಟಿವಿ ನಿರೂಪಕರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಮ್ಮ ಗಮನಾರ್ಹ ಆ್ಯಂಕರಿಂಗ್​ ಕೌಶಲ್ಯದಿಂದ ಖ್ಯಾತಿಯನ್ನು ಮತ್ತು ಹೆಸರನ್ನು ಗಳಿಸಿದ್ದಾರೆ. ಈ ಜೋಡಿ 2013-14ರ ಐಪಿಎಲ್ ಋತುವಿನಲ್ಲಿ ಸಂದರ್ಶನವೊಂದರಲ್ಲಿ ಪರಸ್ಪರ ಭೇಟಿಯಾಗಿದ್ದರು. ಆ ಬಳಿಕದಿಂದ ಪ್ರೀತಿಸಲು ಆರಂಭಿಸಿದ್ದರು.

ಈ ಜೋಡಿ ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿದ್ದರು ಅಂತೆಯೇ ಮಾರ್ಚ್ 15, 2021 ರಂದು ಗೋವಾದಲ್ಲಿ ಭವ್ಯ ಮತ್ತು ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದರು. ದಂಪತಿ ಆಗಸ್ಟ್ 2023 ರಲ್ಲಿ ಮೊದಲ ಮಗುವನ್ನು ಸ್ವಾಗತಿಸಿದೆ.

ಐಪಿಎಲ್ 2024ರಲ್ಲಿ ಜಸ್ಪ್ರೀತ್ ಬುಮ್ರಾ ಪ್ರದರ್ಶನ


ಕ್ರಿಕೆಟ್ ರಂಗದಲ್ಲಿ, ಜಸ್ಪ್ರೀತ್ ಬುಮ್ರಾ ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಉನ್ನತ ಮಟ್ಟದ ಫಾರ್ಮ್​​ನಲ್ಲಿದ್ದಾರೆ. ಅವರು 11 ಪಂದ್ಯಗಳಲ್ಲಿ 6.25 ಎಕಾನಮಿಯಲ್ಲಿ 17 ವಿಕೆಟ್​​ಗಳನ್ನು ಪಡೆದಿದ್ದಾರೆ. ಐಪಿಎಲ್​​ನಲ್ಲಿ ಮುಂಬೈ ಇಂಡಿಯನ್ಸ್ ಆಡಿರುವ 11 ಪಂದ್ಯಗಳಲ್ಲಿ 8ರಲ್ಲಿ ಸೋತಿದೆ. ಆದಾಗ್ಯೂ, ಬುಮ್ರಾ ಅವರ ಪ್ರಸ್ತುತ ಫಾರ್ಮ್ ಟಿ 20 ವಿಶ್ವಕಪ್ 2024 ರಲ್ಲಿ ಮೆನ್ ಇನ್ ಬ್ಲೂಗೆ ಉತ್ತಮ ಸೂಚನೆಯಾಗಿದೆ. ಮುಂಬೈ ಇಂಡಿಯನ್ಸ್ ತನ್ನ ಮುಂದಿನ ಪಂದ್ಯವನ್ನು ಮೇ 6, 2024 ರಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ.

ಟಿ20 ವಿಶ್ವಕಪ್​ಗೆ ಹೊಸ ಜೆರ್ಸಿಯಲ್ಲಿ ಆಡಲಿದೆ ಭಾರತ

ಮುಂಬಯಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ ಭಾರತ ತಂಡ ಈಗಾಗಲೇ ಪ್ರಕಟಗೊಂಡಿದೆ. ಇದೀಗ ಜೆರ್ಸಿಯ(India’s T20 World Cup Jersey) ಫೋಟೊ ವೈರಲ್​ ಆಗಿದೆ. ಹೊಸ ಜೆರ್ಸಿಯ ಫೋಟೊವನ್ನು ಟಾಟಾ ಐಪಿಎಲ್​ ಕಾಮೆಂಟ್ರಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. ಜತೆಗೆ ಇದೇ ಜೆರ್ಸಿಯಲ್ಲಿ ಭಾರತ ಟಿ20 ವಿಶ್ವಕಪ್​ ಆಡಲಿದೆ ಎಂದು ಬರೆದುಕೊಂಡಿದೆ.

ವೈರಲ್​ ಆಗಿರುವ ಟೀಮ್​ ಇಂಡಿಯಾದ ಜೆರ್ಸಿ ನೀಲಿ ಮತ್ತು ಕೇಸರಿ ಬಣ್ಣದ ಮಿಶ್ರಿತ ಕಂಡುಬಂದಿದೆ. ಜತೆಗೆ ಬಿಳಿ ಬಣ್ಣದ ಎರಡು ಗೆರೆಗಳಿವೆ. ಈ ಜೆರ್ಸಿಗಳನ್ನು ಶಾಫ್​ ಒಂದರಲ್ಲಿ ಮಾರಾಟಕ್ಕಿಟ್ಟಂತೆ ಕಾಣುತ್ತದೆ.

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ಸಾಗಲಿದೆ.

Continue Reading

ಕ್ರೀಡೆ

India’s T20 World Cup Jersey: ಟಿ20 ವಿಶ್ವಕಪ್​ಗೆ ಹೊಸ ಜೆರ್ಸಿಯಲ್ಲಿ ಆಡಲಿದೆ ಭಾರತ; ಜೆರ್ಸಿ ಫೋಟೊ ವೈರಲ್​

India’s T20 World Cup Jersey: ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ

VISTARANEWS.COM


on

India's T20 World Cup Jersey
Koo

ಮುಂಬಯಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ ಭಾರತ ತಂಡ ಈಗಾಗಲೇ ಪ್ರಕಟಗೊಂಡಿದೆ. ಇದೀಗ ಜೆರ್ಸಿಯ(India’s T20 World Cup Jersey) ಫೋಟೊ ವೈರಲ್​ ಆಗಿದೆ. ಹೊಸ ಜೆರ್ಸಿಯ ಫೋಟೊವನ್ನು ಟಾಟಾ ಐಪಿಎಲ್​ ಕಾಮೆಂಟ್ರಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. ಜತೆಗೆ ಇದೇ ಜೆರ್ಸಿಯಲ್ಲಿ ಭಾರತ ಟಿ20 ವಿಶ್ವಕಪ್​ ಆಡಲಿದೆ ಎಂದು ಬರೆದುಕೊಂಡಿದೆ.

ವೈರಲ್​ ಆಗಿರುವ ಟೀಮ್​ ಇಂಡಿಯಾದ ಜೆರ್ಸಿ ನೀಲಿ ಮತ್ತು ಕೇಸರಿ ಬಣ್ಣದ ಮಿಶ್ರಿತ ಕಂಡುಬಂದಿದೆ. ಜತೆಗೆ ಬಿಳಿ ಬಣ್ಣದ ಎರಡು ಗೆರೆಗಳಿವೆ. ಈ ಜೆರ್ಸಿಗಳನ್ನು ಶಾಫ್​ ಒಂದರಲ್ಲಿ ಮಾರಾಟಕ್ಕಿಟ್ಟಂತೆ ಕಾಣುತ್ತದೆ.

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ಸಾಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಸ್ವರೂಪ ಬದಲು

ಹಿಂದಿನ ಆವೃತ್ತಿಗಳಿಗಿಂತ ಈ ಬಾರಿ ಟೂರ್ನಿ ವಿಭಿನ್ನ ಸ್ವರೂಪವನ್ನು ಹೊಂದಿದೆ. ಸೂಪರ್ 12 ತಂಡಗಳು ಸೇರಿ 20 ತಂಡಗಳನ್ನು ತಲಾ 5 ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಿಂದ ಅಗ್ರ 2 ತಂಡಗಳು ಸೂಪರ್ 8ಗೆ ಅರ್ಹತೆ ಪಡೆಯುತ್ತವೆ. ಸೂಪರ್ 8 ತಂಡಗನ್ನು ತಲಾ ನಾಲ್ಕರ ಎರಡು ಗುಂಪುಗಳಾಗಿ ವಿಭಜಿಸಲಾಗುತ್ತದೆ. ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿವೆ. ಬಳಿಕ ಫೈನಲ್ ನಡೆಯಲಿದೆ. 2022ರ ಆವೃತ್ತಿಯಲ್ಲಿ 12 ತಂಡಗಳು ಭಾಗಿಯಾಗಿದ್ದವು. ಆದರೆ 2024ರ ಟೂರ್ನಿಯಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ
Continue Reading

ಕ್ರೀಡೆ

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Pakistan Cricket: ಟಿ20 ವಿಶ್ವಕಪ್(ICC T20 World Cup 2024)​ ಟೂರ್ನಿಗೆ ಪಾಕಿಸ್ತಾನ(Pakistan Cricket) ಇದುವರೆಗೂ ತನ್ನ ತಂಡ ಪ್ರಕಟಿಸದಿದ್ದರೂ ಕೂಡ ವಿಶ್ವಕಪ್​ ಗೆದ್ದರೆ ತಂಡದ ಸದಸ್ಯರಿಗೆ ತಲಾ 83 ಲಕ್ಷ ರೂ. ಬಹುಮಾನ ನೀಡುವುದಾಗಿ ಪಿಸಿಬಿ(PCB) ಮುಖ್ಯಸ್ಥ ಮೊಹ್ಸೀನ್‌ ನಖ್ವಿ(Mohsin Naqvi) ಘೋಷಣೆ ಮಾಡಿದ್ದಾರೆ.

VISTARANEWS.COM


on

Pakistan Cricket
Koo

ಕರಾಚಿ: ಬಹುನಿರೀಕ್ಷಿತ ಟಿ20 ವಿಶ್ವಕಪ್(ICC T20 World Cup 2024)​ ಟೂರ್ನಿಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ಟೂರ್ನಿಗಾಗಿ ಬಹುತೇಕ ತಂಡಗಳು ಕಠಿಣ ತಯಾರಿ ನಡೆಸುತ್ತಿವೆ. ಜತೆಗೆ 15 ಸದಸ್ಯರ ಬಲಿಷ್ಠ ಸಂಭಾವ್ಯ ತಂಡಗಳನ್ನು ಕೂಡ ಪ್ರಕಟಿಸಿವೆ. ಆದರೆ ಪಾಕಿಸ್ತಾನ(Pakistan Cricket) ಇದುವರೆಗೂ ತನ್ನ ತಂಡ ಪ್ರಕಟಿಸದಿದ್ದರೂ ಕೂಡ ವಿಶ್ವಕಪ್​ ಗೆದ್ದರೆ ತಂಡದ ಸದಸ್ಯರಿಗೆ ತಲಾ 83 ಲಕ್ಷ ರೂ. ಬಹುಮಾನ ನೀಡುವುದಾಗಿ ಪಿಸಿಬಿ(PCB) ಮುಖ್ಯಸ್ಥ ಮೊಹ್ಸೀನ್‌ ನಖ್ವಿ(Mohsin Naqvi) ಘೋಷಣೆ ಮಾಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಅಧಕಾರಿಗಳೊಂದಿಗೆ 2 ಗಂಟೆಗಳ ಕಾಲ ಸಭೆ ನಡೆಸಿದ ನಖ್ವಿ, ಈ ಬಹುಮಾನ ಮೊತ್ತವನ್ನು ಘೋಷಣೆ ಮಾಡಿದೆ. ಈ ಘೋಷಣೆಯನ್ನು ಕಂಡು ಅನೇಕ ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ. ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಹೈರಾಣವಾಗಿರುವ ಮಧ್ಯೆ ಇದೆಲ್ಲ ಬೇಕಿತ್ತಾ ಎಂದು ಕಾಲೆಳೆದಿದ್ದಾರೆ. ಪಾಕಿಸ್ತಾನ ತಂಡ ಐರ್ಲೆಂಡ್‌ ಮತ್ತು ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿ ಆಡಿದ ಬಳಿಕ ತನ್ನ ವಿಶ್ವಕಪ್​ ತಂಡವನ್ನು ಪ್ರಕಟಿಸಲಿದೆ.

“ಎದುರಾಳಿ ಯಾರೇ ಆಗಿರಲಿ ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ. ಒಂದು ತಂಡವಾಗಿ ಆಟವಾಡಿ” ಎಂದು ನಖ್ವಿ ಪಾಕಿಸ್ತಾನ ತಂಡದ ಆಟಗಾರರನ್ನು ಹುರಿದುಂಬಿಸಿದ್ದಾರೆ. ಇವರ ನೇತೃತ್ವದಲ್ಲೇ ಇತ್ತೀಚೆಗೆ ಪಾಕಿಸ್ತಾನ ಆಟಗಾರರಿಗೆ ಫಿಟ್​ನೆಸ್​ ಕಾಯ್ದುಕೊಳ್ಳುವ ಸಲುವಾಗಿ ಸೈನ್ಯದಲ್ಲಿ ಕಠಿಣ ತರಬೇತಿ ನೀಡಲಾಗಿತ್ತು.

ಭಾರತದ ಮಾಜಿ ಮುಖ್ಯ ಕೋಚ್, 2011ರಲ್ಲಿ ಏಕದಿನ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್(Gary Kirsten) ಮಾರ್ಗದರ್ಶನದಲ್ಲಿ ಪಾಕಿಸ್ತಾನ ಈ ಬಾರಿ ಟಿ20 ವಿಶ್ವಕಪ್​ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್​ 9ರಂದು ನಡೆಯಲಿದೆ.

ಇದನ್ನೂ ಓದಿ Pakistan Cricket: ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್ ಪಾಕ್​ ತಂಡಕ್ಕೆ ನೂತನ ಕೋಚ್​

ನ್ಯೂಯಾರ್ಕ್‌ನಲ್ಲಿ ಪಂದ್ಯ

ಇತ್ತಂಡಗಳ ನಡುವಣ ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಅಣಿಯಾಗಲಿದೆ. ಈ ಪಂದ್ಯಕ್ಕಾಗಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಈ ಪಂದ್ಯವನ್ನು ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ನಡೆಸಲಾಗುತ್ತಿದೆ. ಅಲ್ಲದೆ ಭಾರತದ ಬಹುತೇಕ ಲೀಗ್​ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯಲಿದೆ.

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading
Advertisement
Arvind Kejriwal
ದೇಶ6 mins ago

Arvind Kejriwal: ಖಲಿಸ್ತಾನಿ ಉಗ್ರರಿಂದ ದೇಣಿಗೆ; ಕೇಜ್ರಿವಾಲ್‌ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು!

karnataka weather forecast
ಮಳೆ26 mins ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Female foeticide
ಪ್ರಮುಖ ಸುದ್ದಿ30 mins ago

Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ33 mins ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Summer Holiday Fashion
ಫ್ಯಾಷನ್34 mins ago

Summer Holiday Fashion: ಸೀಸನ್‌ ಟ್ರೆಂಡ್‌ನ ಟಾಪ್‌ ಲಿಸ್ಟ್‌ನಲ್ಲಿ ಸಮ್ಮರ್‌ ಹಾಲಿಡೇ ಫ್ಯಾಷನ್‌

Woman
ಪ್ರಮುಖ ಸುದ್ದಿ38 mins ago

ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

IPL 2024
ಪ್ರಮುಖ ಸುದ್ದಿ39 mins ago

IPL 2024 : ಧೋನಿ ಡಕ್​ಔಟ್ ಆಗುವಾಗ ಜೋರಾಗಿ ನಕ್ಕ ಪ್ರೀತಿ ಜಿಂಟಾ; ಇಲ್ಲಿದೆ ವಿಡಿಯೊ

couple came to Gangavathi from Dubai to vote
ಕರ್ನಾಟಕ42 mins ago

Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

Lok Sabha Election-2024
ದೇಶ46 mins ago

Lok Sabha Election 2024: ಗುಜರಾತ್‌ನಲ್ಲಿ ಶೇ.10ಕ್ಕಿಂತ ಹೆಚ್ಚು ಮುಸ್ಲಿಮರಿದ್ದರೂ ಕಾಂಗ್ರೆಸ್ ಒಬ್ಬ ಮುಸ್ಲಿಮನಿಗೂ ಟಿಕೆಟ್‌ ಕೊಟ್ಟಿಲ್ಲ!

marriage cancel in kodagu
ಕೊಡಗು1 hour ago

Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ33 mins ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ23 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ4 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

ಟ್ರೆಂಡಿಂಗ್‌