INDvsPAK | ಅಧಿಕಾರ ಕಳೆದುಕೊಂಡರೂ ಅಹಂಕಾರ ಬಿಡದ ರಮೀಜ್!​; ಭಾರತವನ್ನು ಪದೇ ಪದ ಸೋಲಿಸಿ ಎಂದ ಪಿಸಿಬಿ ಮಾಜಿ ಅಧ್ಯಕ್ಷ - Vistara News

ಕ್ರಿಕೆಟ್

INDvsPAK | ಅಧಿಕಾರ ಕಳೆದುಕೊಂಡರೂ ಅಹಂಕಾರ ಬಿಡದ ರಮೀಜ್!​; ಭಾರತವನ್ನು ಪದೇ ಪದ ಸೋಲಿಸಿ ಎಂದ ಪಿಸಿಬಿ ಮಾಜಿ ಅಧ್ಯಕ್ಷ

ಭಾರತ ಕ್ರಿಕೆಟ್​ ತಂಡ (INDvsPAK) ಸೂಪರ್ ಪವರ್​ ಅಲ್ಲ ಎಂಬುದನ್ನು ಆಗಾಗ ನಿರೂಪಿಸಬೇಕು ಎಂಬುದಾಗಿ ಪಾಕಿಸ್ತಾನ ಕ್ರಿಕೆಟ್​ ಮಂಡಳಿಯ ಮಾಜಿ ಆಧ್ಯಕ್ಷ ರಮೀಜ್​ ರಾಜಾ ತನ್ನ ದೇಶದ ತಂಡಕ್ಕೆ ಕರೆ ಕೊಟ್ಟಿದ್ದಾರೆ.!

VISTARANEWS.COM


on

INDvsPAK
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಸ್ಲಾಮಾಬಾದ್​ : ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ರಮೀಜ್​ ರಾಜಾ ಅವರು ಇತ್ತೀಚೆಗೆ ಪಿಸಿಬಿ ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದಾರೆ. ಪ್ರಧಾನ ಮಂತ್ರಿ ಶಹಬಾಜ್​ ಶರೀಫ್​ ತಮಗೆ ಆಪ್ತರಾಗಿರುವ ನಜೀಮ್ ಸೇಥ್​ಗೆ ಪಟ್ಟ ಕಟ್ಟಿದ್ದಾರೆ. ಏತನ್ಮಧ್ಯೆ, ಪಿಸಿಬಿಯ ಹುದ್ದೆ ಹೊಂದಿರುವ ಸಂದರ್ಭದಲ್ಲಿ ಭಾರತ ಕ್ರಿಕೆಟ್​ ತಂಡ ಹಾಗೂ ಬಿಸಿಸಿಐ ವಿರುದ್ಧ ಅನಗತ್ಯ ಹೊಟ್ಟೆಕಿಚ್ಚು ಪ್ರದರ್ಶಿಸುತ್ತಿದ್ದ ರಮೀಜ್​, ಸ್ಥಾನ ಕಳೆದುಕೊಂಡ ಬಳಿಕವೂ ಹಳೆ ಚಾಳಿ ಬದಲಿಸಿಕೊಂಡಿಲ್ಲ. ಈಗಲೂ ಭಾರತ ತಂಡವನ್ನು (INDvsPAK) ಸೋಲಿಸುವ ಮತ್ತು ಬಿಸಿಸಿಐ ಆತ್ಮಸ್ಥೈರ್ಯ ಕುಗ್ಗಿಸುವ ಕಾರ್ಯ ಮಾಡುತ್ತಿದ್ದಾರೆ.

ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ಅಭಿಮಾನಿಗಳ ಜತೆ ಮಾತನಾಡಿದ ಅವರು ಭಾರತ ತಂಡವನ್ನು ಪದೇ ಪದೆ ಸೋಲಿಸಬೇಕು ಹಾಗೂ ಅವರ ಆತ್ಮ ವಿಶ್ವಾಸವನ್ನು ಕುಗ್ಗಿಸಬೇಕು ಎಂಬುದಾಗಿ ಬಾಬರ್ ಅಜಮ್​ ಪಡೆಗೆ ಕರೆ ಕೊಟ್ಟಿದ್ದಾರೆ.

“ಭಾರತ ಕ್ರಿಕೆಟ್​ ತಂಡಕ್ಕೆ ತಾನು ವಿಶ್ವದ ಸೂಪರ್​ ಪವರ್​ ಎಂಬ ಭ್ರಮೆ ಇದೆ. ಅದನ್ನು ಹೋಗಲಾಡಿಸಬೇಕಾದರೆ ಅವರನ್ನು ಆಗಾಗ ಸೋಲಿಸುತ್ತಿರಬೇಕು. ಕಳೆದ ಎರಡು ವರ್ಷಗಳಲ್ಲಿ ಭಾರತ ತಂಡವನ್ನು ಎರಡು ಬಾರಿ ಸೋಲಿಸಿದ್ದೇವೆ. ಇದರಿಂದ ಅವರ ಅಹಂಕಾರ ಕಡಿಮೆಯಾಗಿದೆ. ಮುಂದೆಯೂ ಅವಕಾಶ ಸಿಕ್ಕಾಗ ಸೋಲಿಸುತ್ತಿರಬೇಕು,” ಎಂಬದಾಗಿ ರಮೀಜ್​ ಹೇಳಿದ್ದಾರೆ.

”ತಾನು ದೊಡ್ಡವನು ಎಂಬ ಭ್ರಮೆಯಿಂದಲೇ ಬಿಸಿಸಿಐ ತನಗೆ ಬೇಕಾದ ರೀತಿಯಲ್ಲಿ ವರ್ತಿಸುತ್ತಿದೆ. ಏಷ್ಯಾ ಕಪ್​ ಅನ್ನು ಪಾಕಿಸ್ತಾನ ಬಿಟ್ಟು ಬೇರೆ ಕಡೆಯಲ್ಲಿ ನಡೆಸುವುದಾಇ ಹೇಳುತ್ತಿದೆ.ಈ ಮಾದರಿಯ ವರ್ತನೆಗಳನ್ನು ನಿಲ್ಲಿಸಬೇಕಾದರೆ ಭಾರತ ತಂಡವನ್ನು ನಿರಂತರವಾಗಿ ಸೋಲಿಸುತ್ತಿರಬೇಕು,” ಎಂದು ಹೇಳಿದರು.

ಇದೇ ವೇಳೆ ಅವರು ಭಾರತ ತಂಡ ಪಾಕಿಸ್ತಾನಕ್ಕೆ ಏಷ್ಯಾ ಕಪ್​ಗಾಗಿ ಬರವುದರ ಮೇಲೆ ಪಾಕಿಸ್ತಾನ ಭಾರತದಲ್ಲಿ ನಡೆಯುವ ವಿಶ್ವ ಕಪ್​ನಲ್ಲಿ ಪಾಲ್ಗೊಳ್ಳುವ ನಿರ್ಧಾರ ಕೈಗೊಳ್ಳಬೇಕು ಎಂದು ಪುನರುಚ್ಚರಿಸಿದರು.

ಇದನ್ನೂ ಓದಿ | Pakistan Cricket Team | ಪಾಕಿಸ್ತಾನ ಕ್ರಿಕೆಟ್​ ಮಂಡಳಿಯಲ್ಲಿ ಅಫ್ರಿದಿಗೂ ಒಂದು ಸ್ಥಾನ; ಯಾವ ಹುದ್ದೆ ಅವರಿಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

AUS vs NAM: ನಮೀಬಿಯಾ ವಿರುದ್ಧ ಅಭ್ಯಾಸ ಪಂದ್ಯವಾಡಿದ ಆಸೀಸ್​ ತಂಡದ ಕೋಚಿಂಗ್​ ಸಿಬ್ಬಂದಿ

AUS vs NAM: ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ನಮೀಬಿಯಾ ನಿಗದಿತ 20 ಓವರ್​ಳಲ್ಲಿ 9 ವಿಕೆಟ್​ಗೆ 119 ರನ್​ ಬಾರಿಸಿತು. ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 10 ಓವರ್​ಗೆ 3 ವಿಕೆಟ್​ ಕಳೆದುಕೊಂಡು 123 ರನ್​ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು.

VISTARANEWS.COM


on

AUS vs NAM
Koo

ಟ್ರಿನಿಡಾಡ್: ಟಿ20 ವಿಶ್ವಕಪ್​ ಟೂರ್ನಿಯ(t20 world cup 2024) ಅಭ್ಯಾಸ ಪಂದ್ಯಗಳು(T20 WC Warm-Up Game) ಆರಂಭಗೊಂಡಿದೆ. ನಮೀಬಿಯಾ(AUS vs NAM) ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಪರ ಕೋಚ್ ಮತ್ತು ಆಯ್ಕೆಗಾರರ ಮಂಡಳಿ ಮುಖ್ಯಸ್ಥರು(Australian Coaching Staff) ಫೀಲ್ಡಿಂಗ್ ನಡೆಸಿದ ಪ್ರಸಂಗ ನಡೆದಿದೆ. ಈ ವಿಡಿಯೊ ವೈರಲ್​ ಆಗಿದೆ. ಪಂದ್ಯದಲ್ಲಿ ಆಸೀಸ್​ ತಂಡ 7 ವಿಕೆಟ್​ಗಳ ಗೆಲುವು ಸಾಧಿಸಿತು.

ಐಪಿಎಲ್​ ಆಡಿ ಬಂದಿದ್ದ ತಂಡದ ಪ್ರಧಾನ ಆಟಗಾರರಾದ ಗ್ಲೆನ್ ಮ್ಯಾಕ್ಸ್‌ವೆಲ್, ಟ್ರಾವಿಸ್ ಹೆಡ್, ಮಿಚೆಲ್ ಸ್ಟಾರ್ಕ್ ಮತ್ತು ಪ್ಯಾಟ್ ಕಮಿನ್ಸ್ ವಿಶ್ರಾಂತಿ ಸಮಯ ಬಯಸಿದ ಕಾರಣ ಆಸ್ಟ್ರೇಲಿಯಾ ತಂಡದಲ್ಲಿ ಆಟಗಾರರ ಕೊರತೆ ಎದುರಾಯಿತು. ಹೀಗಾಗಿ ಕೋಚ್ ಮತ್ತು ಆಯ್ಕೆಗಾರರ ಮಂಡಳಿ ಮುಖ್ಯಸ್ಥರು ಫೀಲ್ಡಿಂಗ್ ನಡೆಸಿದರು.

ಆಸೀಸ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ- ಮಾಜಿ ನಾಯಕ ಜಾರ್ಜ್ ಬೈಲಿ, ಮುಖ್ಯ ಕೋಚ್ ಆ್ಯಂಡ್ರ್ಯೂ ಮೆಕ್ ಡೊನಾಲ್ಡ್, ಫೀಲ್ಡಿಂಗ್ ಕೋಚ್ ಆಂಡ್ರೆ ಬೊರೊವೆಕ್ ಮತ್ತು ಬ್ಯಾಟಿಂಗ್ ಕೋಚ್ ಬ್ರಾಡ್ ಹಾಡ್ಜ್ ಸಂಪೂರ್ಣ 20 ಓವರ್​ಗಳ ಕಾಲ ಫೀಲ್ಡಿಂಗ್ ಮಾಡಿದ್ದಾರೆ. ಅಭ್ಯಾಸ ಪಂದ್ಯಕ್ಕೆ ಯಾವುದೇ ನಿಯಮ ಇಲ್ಲದ ಕಾರಣ ಇವರೆಲ್ಲ ಫೀಲ್ಡಿಂಗ್​ ಮಾಡಿದ್ದಾರೆ.

ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ನಮೀಬಿಯಾ ನಿಗದಿತ 20 ಓವರ್​ಳಲ್ಲಿ 9 ವಿಕೆಟ್​ಗೆ 119 ರನ್​ ಬಾರಿಸಿತು. ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 10 ಓವರ್​ಗೆ 3 ವಿಕೆಟ್​ ಕಳೆದುಕೊಂಡು 123 ರನ್​ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು. ಡೇವಿಡ್​ ವಾರ್ನರ್​ ಅಜೇಯ 54ರನ್​ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ನಾಯಕ ಮಿಚೆಲ್​ ಮಾರ್ಷ್​ 18 ರನ್​ ಗಳಿಸಿ ವಿಫಲರಾದರು. ಆಸೀಸ್​ ಬೌಲಿಂಗ್​ನಲ್ಲಿ ಸ್ಪಿನ್ನರ್​ ಆ್ಯಡಂ ಜಂಪಾ ಮೂರು ವಿಕೆಟ್​ ಕಿತ್ತರೆ, ಹ್ಯಾಝಲ್​ವುಡ್ 2 ವಿಕೆಟ್​ ಪಡೆದರು.​

ವಿಶ್ವಕಪ್​ ಲೀಗ್​ ಪಂದ್ಯಗಳು ಜೂನ್​ 1ರಿಂದ ಆರಂಭಗೊಳ್ಳಲಿದೆ. ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ ಮತ್ತು ಕೆನಾಡ ಮುಖಾಮುಖಿಯಾಗಲಿವೆ.  ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. 

ಇದನ್ನೂ ಓದಿ T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಟೆಸ್ಟ್​ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್, ಟಿಮ್‌ ಡೇವಿಡ್ ಅವರನ್ನು ಬ್ಯಾಟಿಂಗ್​ ವಿಭಾಗದಲ್ಲಿ ಆಯ್ಕೆ ಮಾಡಲಾಗಿದೆ. ಗ್ಲೆನ್​ ಮ್ಯಾಕ್ಸ್‌ವೆಲ್‌, ಮಾರ್ಕಸ್ ಸ್ಟೊಯಿನಿಸ್, ಕ್ಯಾಮರೂನ್ ಗ್ರೀನ್ ತಂಡದ ಸ್ಟಾರ್​ ಆಲ್​ರೌಂಡರ್​ಗಳಾಗಿದ್ದಾರೆ. ಸ್ಪಿನ್ಸ್‌ ಬೌಲರ್​ಗಳಾಗಿ ಆ್ಯಡಂ ಝಂಪಾ ಮತ್ತು ಆ್ಯಶ್ಟನ್​ ಅಗರ್ ಸ್ಥಾನ ಪಡೆದಿದ್ದಾರೆ. ವೇಗಿಗಳಾಗಿ ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆ್ಯಶ್ಟನ್​ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ. ಪ್ರಯಾಣದ ಮೀಸಲು ಆಟಗಾರರು: ಮ್ಯಾಟ್ ಶಾರ್ಟ್, ಜೇಕ್ ಫ್ರೇಸರ್-ಮೆಕ್‌ಗುರ್ಕ್

Continue Reading

ಕ್ರೀಡೆ

Dinesh Karthik: ಪ್ಯಾರಿಸ್​ನಲ್ಲಿ ನೀರಜ್​ಗೆ ತೀವ್ರ ಪೈಪೋಟಿ ನೀಡಲು ಮುಂದಾದರೇ ದಿನೇಶ್​ ಕಾರ್ತಿಕ್​?; ಜಾವೆಲಿನ್​ ಅಭ್ಯಾಸದ ವಿಡಿಯೊ ವೈರಲ್​

Dinesh Karthik: ಟೋಕಿಯೊ ಒಲಿಂಪಿಕ್ಸ್​​ ಚಿನ್ನದ ವಿಜೇತ ನೀರಜ್​ ಚೋಪ್ರಾ(Neeraj Chopra) ಜತೆ ದಿನೇಶ್​ ಕಾರ್ತಿಕ್(Dinesh Karthik)​ ಅವರು ಜಾವೆಲಿನ್​ ಅಭ್ಯಾಸ ನಡೆಸುತ್ತಿರುವ ವಿಡಿಯೊವೊಂದು ವೈರಲ್​(viral video) ಆಗಿದೆ.

VISTARANEWS.COM


on

Dinesh Karthik
Koo

ಮುಂಬಯಿ: ಇತ್ತೀಚೆಗೆ ಕ್ರಿಕೆಟ್​ಗೆ​ ವಿದಾಯ ಹೇಳಿದ ದಿನೇಶ್​ ಕಾರ್ತಿಕ್(Dinesh Karthik)​ ಅವರು ಇದೀಗ ಪ್ಯಾರಿಸ್​ ಒಲಿಂಪಿಕ್ಸ್(Paris Olympics 2024)​ ಕ್ರಿಡಾಕೂಟಕ್ಕೆ ಸಜ್ಜಾಗುತ್ತಿದ್ದಂತೆ ಕಂಡುಬಂದಿದೆ. ಟೋಕಿಯೊ ಒಲಿಂಪಿಕ್ಸ್​​ ಚಿನ್ನದ ವಿಜೇತ ನೀರಜ್​ ಚೋಪ್ರಾ(Neeraj Chopra) ಜತೆ ಜಾವೆಲಿನ್​ ಅಭ್ಯಾಸ ನಡೆಸುತ್ತಿರುವ ವಿಡಿಯೊವೊಂದು ವೈರಲ್​(viral video) ಆಗಿದೆ.

ಪ್ಯಾರಿಸ್​ ಒಲಿಂಪಿಕ್ಸ್​ಗೆ ಸಿದ್ಧತೆಯಲ್ಲಿರುವ ನೀರಜ್​ ಚೋಪ್ರಾ ಜತೆ ದಿನೇಶ್​​ ಕಾರ್ತಿಕ್​ ಕೂಡ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಬಹು ದೂರ ಜಾವೆಲಿನ್ ಎಸೆದು ಗಮನಸೆಳೆದಿದ್ದಾರೆ. ಇದನ್ನು ಕಂಡ ನೆಟ್ಟಿಗರು ಡಿಕೆ ಅವರು ಈ ಬಾರಿ ಪ್ಯಾರಿಸ್​ನಲ್ಲಿ ನೀರಜ್​ ಚೋಪ್ರಾಗೆ ತೀವ್ರ ಪೈಪೋಟಿ ನೀಡುವ ಸಾಧ್ಯತೆ ಇದೆ ಎಂದು ಕಮೆಂಟ್​ ಮಾಡಿದ್ದಾರೆ. ಅಸಲಿಗೆ ಉಭಯ ಕ್ರೀಡಾಪಟುಗಳು ಜಾಹಿರಾತಿನ ಭಾಗವಾಗಿ ಜತೆಯಾಗಿ ಕಾಣಸಿಕೊಂಡದ್ದು.

ಕಳೆವು ವಾರಗಳ ಹಿಂದೆ ನಡೆದಿದ್ದ ಫೆಡರೇಷನ್ ಕಪ್‌ನಲ್ಲಿ(Federation Cup) ಕಣಕ್ಕಿಳಿದ್ದ ನೀರಜ್ ಚೋಪ್ರಾ(82.27 ಮೀ.), ಕನ್ನಡಿಗ ಡಿಪಿ ಮನು ಅವರಿಂದ ತೀವ್ರ ಪೈಪೋಟಿ ಎದುರಿಸಿ ಚಿನ್ನದ ಪದಕ ಗೆದ್ದಿದ್ದರು. ಈ ಟೂರ್ನಿ ಬಳಿಕ ನೀರಜ್​ ಗಾಯಗೊಂಡಿದ್ದು ಸದ್ಯ ವಿಶ್ರಾಂತಿಯಲ್ಲಿದ್ದಾರೆ.

ನೀರಜ್​ ಚೋಪ್ರಾ ಕಳೆದ ವರ್ಷ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಅಲ್ಲದೆ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಗೆದ್ದಿದ್ದರು. ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ.

ನೀರಜ್​ರ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಅಭ್ಯಾಸದ ವೇಳೆ ಈಗಾಗಲೆ ನೀರಜ್​ ಹಲವು ಬಾರಿ 90 ಮೀ. ಗಡಿ ದಾಟಿದ್ದಾರೆ. ಆದರೆ, ಸ್ಪರ್ಧೆಗಳಲ್ಲಿ ಇದು ಸಾಧ್ಯವಾಗಿರಲಿಲ್ಲ. ಈ ಬಾರಿ ಸ್ಪರ್ಧೆಯಲ್ಲಿಯೂ ಇದನ್ನು ಸಾಧಿಸಲಿದ್ದೇನೆ ಎಂದು ನೀರಜ್​ ಹೇಳಿದ್ದಾರೆ.

ಇದನ್ನೂ ಓದಿ Viral Run Out Video: 11 ಆಟಗಾರರಿಂದ ರನೌಟ್​ ಪ್ರಯತ್ನ; ಕೊನೆಗೂ ನಾಟೌಟ್​ ಆದ ಬ್ಯಾಟರ್​

ದಿನೇಶ್​ ಕಾರ್ತಿಕ್​ ಅವರಿಗೆ ರಾಜಸ್ಥಾನ್​ ರಾಯಲ್ಸ್​ ವಿರುದ್ಧದ ಎಲಿಮಿನೇಟರ್​ ಪಂದ್ಯವೇ ವಿದಾಯ(dinesh karthik retirement) ಪಂದ್ಯ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಪಂದ್ಯ ಮುಕ್ತಾಯದ ಬಳಿಕ ಸಹ ಆಟಗಾರರು ಭಾವುಕರಾಗಿ ಕಾರ್ತಿಕ್​ಗೆ ಮೈದಾನದಲ್ಲಿಯೇ ತಬ್ಬಿಕೊಂಡು ವಿದಾಯ ಹೇಳಿದಂತಿತ್ತು. ಅದರಲ್ಲೂ ವಿರಾಟ್ ಕೊಹ್ಲಿಯೊಂದಿಗೆ(virat kohli) ಭಾವುಕ ಆಲಿಂಗನವನ್ನು ಹಂಚಿಕೊಂಡಿದ್ದರು.

ಐಪಿಎಲ್​ನಲ್ಲಿ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ಆರ್​ಸಿಬಿಗೆ​ ಟ್ರೋಫಿ ಗೆದ್ದು ವಿದಾಯ ಹೇಳುವ ನಿರೀಕ್ಷೆಯಲ್ಲಿದ್ದ ಡಿಕೆ ಕನಸಿಗೆ ರಾಜಸ್ಥಾನ್​ ರಾಯಲ್ಸ್​ ಅಡ್ಡಗಾಲಿಕ್ಕಿತು. ದಿನೇಶ್ ಕಾರ್ತಿಕ್ 257 ಪಂದ್ಯಗಳಲ್ಲಿ 22 ಅರ್ಧಶತಕಗಳನ್ನು ಬಾರಿಸಿ 4,842 ರನ್‌ ಬಾರಿಸಿದ್ದಾರೆ. ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ 15 ಪಂದ್ಯಗಳಲ್ಲಿ 326 ರನ್​ ಬಾರಿಸಿದ್ದಾರೆ.

Continue Reading

ವೈರಲ್ ನ್ಯೂಸ್

Babar Azam: ಫೋಟೋ ತೆಗೆಯಲು ಬಂದ ಅಭಿಮಾನಿಗಳಿಗೆ ಬೈದು ಓಡಿಸಿದ ಬಾಬರ್ ಅಜಂ; ವಿಡಿಯೊ ವೈರಲ್​

Babar Azam: ಪಾಕಿಸ್ತಾನ ತಂಡ ಇಂಗ್ಲೆಂಡ್​ ವಿರುದ್ಧ 4 ಪಂದ್ಯಗಳ ಟಿ20 ಸರಣಿಯನ್ನಾಡಲು ಲಂಡನ್​ನಲ್ಲಿದೆ. ಈಗಾಗಲೇ ಸರಣಿಯಲ್ಲಿ 2 ಪಂದ್ಯಗಳು ಮಳೆಯಿಂದ ರದ್ದುಗೊಂಡರೆ, ಒಂದು ಪಂದ್ಯವನ್ನು ಇಂಗ್ಲೆಂಡ್​ ಗೆದ್ದಿದೆ. ಅಂತಿಮ ಪಂದ್ಯ ನಾಳೆ(ಮೇ 30) ನಡೆಯಲಿದೆ.

VISTARANEWS.COM


on

Babar Azam
Koo

ಲಂಡನ್​: ಪಾಕಿಸ್ತಾನ ತಂಡದ ನಾಯಕ ಬಾಬರ್​ ಅಜಂ(Babar Azam) ಅವರು ಇಂಗ್ಲೆಂಡ್​ ವಿರುದ್ಧದ ನಾಲ್ಕನೇ ಹಾಗೂ ಅಂತಿಮ ಟಿ20 ಪಂದ್ಯವನ್ನಾಡಲು(England vs Pakistan) ಹೋಟೆಲ್​ನಿಂದ ತೆರಳುವ ವೇಳೆ ಅಭಿಮಾನಿಗಳು ಫೋಟೊ ತೆಗೆಸಿಕೊಳ್ಳಲು ಮುಗಿಬಿದ್ದ ವೇಳೆ ತಾಳ್ಮೆ ಕಳೆದುಕೊಂಡು ಭದ್ರತಾ ಸಿಬ್ಬಂದಿಗಳಿಗೆ ಎಲ್ಲರನ್ನೂ ದೂರ ಕಳುಹಿಸುವಂತೆ ಹೇಳಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಪಾಕಿಸ್ತಾನ ತಂಡ ಇಂಗ್ಲೆಂಡ್​ ವಿರುದ್ಧ 4 ಪಂದ್ಯಗಳ ಟಿ20 ಸರಣಿಯನ್ನಾಡಲು ಲಂಡನ್​ನಲ್ಲಿದೆ. ಈಗಾಗಲೇ ಸರಣಿಯಲ್ಲಿ 2 ಪಂದ್ಯಗಳು ಮಳೆಯಿಂದ ರದ್ದುಗೊಂಡರೆ, ಒಂದು ಪಂದ್ಯವನ್ನು ಇಂಗ್ಲೆಂಡ್​ ಗೆದ್ದಿದೆ. ಅಂತಿಮ ಪಂದ್ಯ ನಾಳೆ(ಮೇ 30) ನಡೆಯಲಿದೆ. ಸರಣಿಯನ್ನು 1-1 ಸಮಬಲಗೊಳಿಸಬೇಕಿದ್ದರೆ ಪಾಕಿಸ್ತಾನಕ್ಕೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಇದೇ ಪಂದ್ಯವನ್ನಾಡಲು ತೆರಳುವ ವೇಳೆ ಬಾಬರ್​ ಅವರೊಂದಿಗೆ ಅಭಿಮಾನಿಗಳು ಫೋಟೊ ಮತ್ತು ಆಟೋಗ್ರಾಫ್ ಪಡೆಯಲು ಮುಂದಾಗಿದ್ದಾರೆ. ಇದರಿಂದ ಬಾಬರ್​ಗೆ ಕಿರಿಕಿರಿ ಉಂಟಾಗಿದೆ.

ಅಭಿಮಾನಿಗಳ ದಂಡೇ ಹಿಂಬಾಲಿಸಿ ಬಂದಿದ್ದರಿಂದ ಕೋಪಗೊಂಡ ಬಾಬರ್ ಸ್ವಲ್ಪ ಹೊತ್ತು ನನ್ನನ್ನು ಪ್ರಶಾಂತವಾಗಿರಲು ಬಿಡಿ ಎಂದು ಕೋಪದಿಂದ ನಿಂದಿಸಿದ್ದಾರೆ. ಬಳಿಕ ಪಕ್ಕದಲ್ಲಿದ್ದ ಭದ್ರತಾ ಸಿಬ್ಬಂದಿಗಳಿಗೆ ಎಲ್ಲರನ್ನೂ ದೂರ ಕಳುಹಿಸುವಂತೆ ಹೇಳಿದ್ದಾರೆ. ಒಂದು ಕ್ಷಣ ಕೋಪಗೊಂಡರೂ ಕೂಡ ಕೊನೆಗೆ ಅಭಿಮಾನಿಗಳೊಂದಿಗೆ ಫೋಟೊ ಕ್ಲಿಕ್ಕಿಸಿದ್ದಾರೆ.

ಇದನ್ನೂ ಓದಿ Babar Azam : ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಪಾಕ್​ ನಾಯಕ ಅಜಮ್​

ಕಳೆದ ವರ್ಷ(2023) ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಬಾಬರ್​ ಸಾರಥ್ಯದಲ್ಲಿ ಪಾಕಿಸ್ತಾನ ತಂಡ ನೀರಸ ಪ್ರದರ್ಶನ ತೋರಿತ್ತು. ಆಡಿದ 9 ಪಂದ್ಯಗಳ ಪೈಕಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ ಲೀಗ್​ ಹಂತದಲ್ಲೇ ಹೊರಬಿದ್ದಿತ್ತು. ಹೀಗಾಗಿ ಬಾಬರ್​ ವಿರುದ್ಧ ಪಾಕ್​ ತಂಡದ ಮಾಜಿ ಆಟಗಾರರು ಸೇರಿ ಅಂದಿನ ಪಿಬಿ ಅಧ್ಯಕ್ಷ ಭಾರೀ ಟೀಕೆ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಬಾಬರ್ ಎಲ್ಲಾ ಮೂರು ಸ್ವರೂಪಗಳ ನಾಯಕತ್ವದಿಂದ ಕೆಳಗಿಳಿದಿದ್ದರು. ಬಾಬರ್ ಕೆಳಗಿಳಿದ ಬಳಿಕ ಶಾನ್ ಮಸೂದ್ ಅವರನ್ನು ಟೆಸ್ಟ್ ನಾಯಕರನ್ನಾಗಿ ನೇಮಿಸಿದರೆ, ಶಾಹೀನ್ ಅಫ್ರಿದಿಗೆ ಟಿ20 ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಯಿತು. ಆದರೆ ಇವರ ನಾಯಕತ್ವದಲ್ಲಿ ಪಾಕಿಸ್ತಾನ ಹಿಂದೆಂದು ಕಾಣದ ವೈಫಲ್ಯ ಕಂಡಿತ್ತು. ಆಡಿದ ಹಲವು ಸರಣಿಗಳಲ್ಲಿ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಮತ್ತೆ ಬಾಬರ್​ ಅಜಂ ಅವರನ್ನು ತಂಡದ ನಾಯಕನನ್ನಾಗಿ ಮರು ನೇಮಕ ಮಾಡಲಾಯಿತು.

ಬಾಬರ್​ ನಾಯಕತ್ವದ ಸಾಧನೆ


ಬಾಬರ್ ಅಜಮ್ ಪಾಕಿಸ್ತಾನದ ನಾಯಕನಾಗಿ 133 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 78 ಪಂದ್ಯಗಳು ಗೆದ್ದರೆ, 43 ಪಂದ್ಯಗಳಲ್ಲಿ ಸೋತಿದ್ದಾರೆ. ಒಂದು ಟೈ ಮತ್ತು ನಾಲ್ಕು ಪಂದ್ಯ ಡ್ರಾಗೊಂಡಿದೆ. ಏಕದಿನ ವಿಶ್ವಕಪ್​ ಟೂರ್ನಿ ಹೊರತುಪಡಿಸಿ ಉಳಿದ ಎಲ್ಲ ಸರಣಿಯಲ್ಲೂ ಬಾಬರ್​ ಸಾರಥ್ಯದಲ್ಲಿ ತಂಡ ಉತ್ತಮ ಪ್ರದರ್ಶನ ತೋರಿತ್ತು.

ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ತನ್ನ ಮೊದಲ ಲೀಗ್​ ಪಂದ್ಯದಲ್ಲಿ ಅಮೆರಿಕ ವಿರುದ್ಧ ಜೂನ್​ 6ರಂದು ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿ ಭಾರತ ವಿರುದ್ಧ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ಸೆಣಸಾಡಲಿದೆ. ಈ ಪಂದ್ಯಕ್ಕಾಗಿ ಉಭಯ ದೇಶದ ಕ್ರಿಕೆಟ್​ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ.

Continue Reading

ಕ್ರೀಡೆ

Team India’s T20 WC Jersey: ನೂತನ ಜೆರ್ಸಿಯಲ್ಲಿ ಕಂಗೊಳಿಸಿದ ರಿಷಭ್​ ಪಂತ್​; ಅಭಿಮಾನಿಗಳಿಂದಲೂ ಬೆಂಬಲ

Team India’s T20 WC Jersey: ಟೀಮ್​ ಇಂಡಿಯಾದ ಆಟಗಾರರು ನೂತನ ಜೆರ್ಸಿಯಲ್ಲಿ(Team India’s T20 WC Jersey) ಫೋಟೊ ಶೂಟ್​ ಮಾಡಿಸಿದ್ದಾರೆ. ಇದಕ್ಕೂ ಮುನ್ನ ಬಿಸಿಸಿಐ(BCCI) ಬಿಡುಗಡೆಗೊಳಿಸಿದ ವಿಶೇಷ ಪ್ರೋಮೋದಲ್ಲಿ ರಿಷಭ್​ ಪಂತ್(rishabh pant)​ ಕಣ್ಮನ ಸೆಳೆದಿದ್ದಾರೆ. ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಕೂಡ ನೂತನ ಜೆರ್ಸಿ ತೊಟ್ಟು ತಂಡ ಕಪ್​ ಗೆಲ್ಲಲಿ ಎಂದು ಹಾರೈಸಿದ್ದಾರೆ.

VISTARANEWS.COM


on

Team India's T20 WC Jersey
Koo

ನ್ಯೂಯಾರ್ಕ್​: ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ 3 ದಿನ ಮಾತ್ರ ಬಾಕಿ ಉಳಿದಿವೆ. ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳ ಆಟಗಾರರು ಕಪ್​ ಗೆಲ್ಲಲು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಟೀಮ್​ ಇಂಡಿಯಾದ ಆಟಗಾರರು ನೂತನ ಜೆರ್ಸಿಯಲ್ಲಿ(Team India’s T20 WC Jersey) ಫೋಟೊ ಶೂಟ್​ ಮಾಡಿಸಿದ್ದಾರೆ. ಇದಕ್ಕೂ ಮುನ್ನ ಬಿಸಿಸಿಐ(BCCI) ಬಿಡುಗಡೆಗೊಳಿಸಿದ ವಿಶೇಷ ಪ್ರೋಮೋದಲ್ಲಿ ರಿಷಭ್​ ಪಂತ್(rishabh pant)​ ಕಣ್ಮನ ಸೆಳೆದಿದ್ದಾರೆ. ಈ ವಿಡಿಯೊಗೆ ಬಿಸಿಸಿಐ ‘ಸಿದ್ಧವಾಗಿದೆ. ಸಮರ್ಥ. ನಿರ್ಧರಿಸಲಾಗುತ್ತದೆ’ ಎಂದು ಬರೆದುಕೊಂಡಿದೆ.

‘ಪ್ರತಿಕೂಲತೆಯಿಂದ ವಿಜಯದವರೆಗೆ, ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ರಿಷಭ್​ ಪಂತ್ ಅವರ ಪ್ರಯಾಣವು ಸ್ಥಿತಿಸ್ಥಾಪಕತ್ವ ಮತ್ತು ದೃಢತೆಗೆ ಸಾಕ್ಷಿಯಾಗಿದೆ. ಪಂದ್ಯದ ದಿನಗಳಲ್ಲಿ ರಾತ್ರಿ 7.52 ಕ್ಕೆ ರಾಷ್ಟ್ರದ ಚೈತನ್ಯವನ್ನು ಬೆಳಗಿಸುವಾಗ ಅವರೊಂದಿಗೆ ನಾವೆಲ್ಲರೂ ಕೈ ಜೋಡಿಸೋಣ” ಎಂದು ಬಿಸಿಸಿಐ ಬರೆದುಕೊಂಡಿದೆ.

ರಿಷಭ್​ ಪಂತ್​ ಅವರು ವಿಶೇಷ ಪ್ರೋಮೋದಲ್ಲಿ ಕಾಣಿಸಲು ಕೂಡ ಒಂದು ಕಾರಣವಿದೆ. 2022ರ ಡಿಸೆಂಬರ್​ 30ರಂದು(rishabh pant accident date) ರಿಷಭ್​ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಆದರೆ, ಪಂತ್​ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು.

ರಿಷಭ್​ ಪಂತ್​ ಅವರ ಗಂಭೀರ ಗಾಯವನ್ನು ಕಂಡ ಅನೇಕರು ಪಂತ್​ ಕ್ರಿಕೆಟ್​ ಬಾಳ್ವೆ ಇನ್ನು ಮಂದೆ ಕಷ್ಟ, ಒಂದೊಮ್ಮೆ ಅವರು ಕ್ರಿಕೆಟ್​ಗೆ ಮರಳಬೇಕಾದರೂ ಹಲವು ವರ್ಷ ಬೇಕಾದಿತು ಹೀಗೆ ಹಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ ಪಂತ್​ ತಮ್ಮ ನಂಬಿಕೆ ಮತ್ತು ಕ್ರಿಕೆಟ್​ಗೆ ಮರಳುವ ದೃಢ ಸಂಕಲ್ಪದಿಂದ ಕಠಿಣ ವ್ಯಾಯಾಮ ನಡೆಸಿ ಕೇವಲ 14 ತಿಂಗಳಲ್ಲಿ ಸಂಪೂರ್ಣ ಫಿಟ್​ ಆಗಿ ಕ್ರಿಕೆಟ್​ಗೆ ಮರಳಿದ್ದರು. ಇದೇ ಛಲ ವಿಶ್ವಕಪ್​ ಗೆಲ್ಲುವಲ್ಲಿಯೂ ತಂಡಕ್ಕೆ ಇರಬೇಕು ಎನ್ನುವ ಅರ್ಥದಲ್ಲಿ ಪಂತ್​ ಅವರನ್ನು ಬಿಸಿಸಿಐ ಈ ವಿಡೊಯೊದಲ್ಲಿ ತೋರಿಸಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಟಾಪ್​ 5 ಬೌಲರ್​ಗಳು ಯಾರು?

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಭಾರತೀಯ ಕ್ರಿಕೆಟ್​ ಅಭಿಮಾನಿಗಳು ನೂತನ ಜೆರ್ಸಿ ತೊಟ್ಟು ತಂಡ ಕಪ್​ ಗೆಲ್ಲಲಿ ಎಂದು ಹಾರೈಸಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading
Advertisement
AUS vs NAM
ಕ್ರೀಡೆ12 mins ago

AUS vs NAM: ನಮೀಬಿಯಾ ವಿರುದ್ಧ ಅಭ್ಯಾಸ ಪಂದ್ಯವಾಡಿದ ಆಸೀಸ್​ ತಂಡದ ಕೋಚಿಂಗ್​ ಸಿಬ್ಬಂದಿ

Dream Of Retired Couple
ಪ್ರವಾಸ15 mins ago

Dream Of Retired Couple: ನಿರಂತರ ಮೂರೂವರೆ ವರ್ಷಗಳ ನೌಕಾಯಾನಕ್ಕಾಗಿ ತಮ್ಮದೆಲ್ಲವನ್ನೂ ಮಾರಿದ ದಂಪತಿ!

KSET Results 2024
ಕರ್ನಾಟಕ21 mins ago

KSET Results 2024:‌ ಕೆ-ಸೆಟ್‌ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

MLC Election North East Graduate Constituency Election 2024 total 24 183 graduate voters in the district
ಬಳ್ಳಾರಿ21 mins ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ; ಬಳ್ಳಾರಿ ಜಿಲ್ಲೆಯಲ್ಲಿ 24,183 ಪದವೀಧರ ಮತದಾರರು

Uttara Kannada DC Gangubai Manakar spoke in Vote counting training program at Kumta
ಉತ್ತರ ಕನ್ನಡ23 mins ago

Lok Sabha Election 2024: ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಲು ಡಿಸಿ ಗಂಗೂಬಾಯಿ ಮಾನಕರ್ ಸೂಚನೆ

LinkedIns Tips for Graduates in the Job Search
ಕರ್ನಾಟಕ26 mins ago

LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

Star Fashion
ಫ್ಯಾಷನ್32 mins ago

Star Fashion: ಏನಿದು ನಟಿ ಶ್ರೀ ಲೀಲಾ ಧರಿಸಿ ಮಿಂಚಿದ್ದ ಘರಾರ ಡ್ರೆಸ್?

bitcoin scam
ಪ್ರಮುಖ ಸುದ್ದಿ42 mins ago

Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಮತ್ತೊಬ್ಬ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ ಎಸ್ಐಟಿ

Dinesh Karthik
ಕ್ರೀಡೆ1 hour ago

Dinesh Karthik: ಪ್ಯಾರಿಸ್​ನಲ್ಲಿ ನೀರಜ್​ಗೆ ತೀವ್ರ ಪೈಪೋಟಿ ನೀಡಲು ಮುಂದಾದರೇ ದಿನೇಶ್​ ಕಾರ್ತಿಕ್​?; ಜಾವೆಲಿನ್​ ಅಭ್ಯಾಸದ ವಿಡಿಯೊ ವೈರಲ್​

Prajwal Revanna Case
ಕರ್ನಾಟಕ1 hour ago

Prajwal Revanna Case: ಚೇತನ್‌, ನವೀನ್ ಗೌಡಗೆ ಮೂರು ದಿನ ಎಸ್‌ಐಟಿ ಕಸ್ಟಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ24 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌