Ravindra Jadeja | ಬೌಲಿಂಗ್ ಅಭ್ಯಾಸ ಆರಂಭಿಸಿದ ರವೀಂದ್ರ ಜಡೇಜಾ, ಟೆಸ್ಟ್​​ಗೆ ಮೊದಲು ಫುಲ್​ ಫಿಟ್​? - Vistara News

ಕ್ರಿಕೆಟ್

Ravindra Jadeja | ಬೌಲಿಂಗ್ ಅಭ್ಯಾಸ ಆರಂಭಿಸಿದ ರವೀಂದ್ರ ಜಡೇಜಾ, ಟೆಸ್ಟ್​​ಗೆ ಮೊದಲು ಫುಲ್​ ಫಿಟ್​?

ಭಾರತ ತಂಡದ ಸ್ಟಾರ್​ ಬೌಲರ್​ ರವೀಂದ್ರ ಜಡೇಜಾ (Ravindra Jadeja) ಫಿಟ್ ಎನಿಸಿದ್ದು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

VISTARANEWS.COM


on

Ravindra Jadeja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ : ಭಾರತ ತಂಡದ ಸ್ಟಾರ್​ ಆಲ್​ರೌಂಡರ್​ ರವೀಂದ್ರ ಜಡೇಜಾ (Ravindra Jadeja) ಕಳೆದ ಅಕ್ಟೋಬರ್​ ಬಳಿಕ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಯುಎಇನಲ್ಲಿ ನಡೆದ ಏಷ್ಯಾ ಕಪ್​ ವೇಳೆ ಮಂಡಿಗೆ ಗಾಯಮಾಡಿಕೊಂಡಿದ್ದ ಅವರು ಅರ್ಧದಿಂದ ವಾಪಸಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಟಿ20 ವಿಶ್ವ ಕಪ್​ ಸೇರಿದಂತೆ ಹಲವು ಪ್ರಮುಖ ಪಂದ್ಯಗಳಲ್ಲಿ ಆಡಿರಲಿಲ್ಲ. ಇತ್ತೀಚೆಗೆ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಹೇಳಲಾಗುತ್ತಿತ್ತು. ಅದಕ್ಕೆ ಪೂರಕವಾಗಿ ಅವರೀಗ ನೆಟ್​ನಲ್ಲಿ ಬೌಲಿಂಗ್​ ಅಭ್ಯಾಸ ಆರಂಭಿಸಿದ್ದಾರೆ.

ರವೀಂದ್ರ ಜಡೇಜಾ ಅವರನ್ನು ಫೆಬ್ರವರಿ 9ರಂದು ಆರಂಭವಾಗುವ ಭಾರತ ಹಾಗೂ ಪ್ರವಾಸಿ ಆಸ್ಟ್ರೇಲಿಯಾ ನಡುವಿನ ಬಾರ್ಡರ್​ ಗವಾಸ್ಕರ್​ ಟ್ರೋಫಿಯಲ್ಲಿ ಟೀಮ್​ ಇಂಡಿಯಾಗೆ ಸೇರಿಸಲಾಗಿತ್ತು. ಆದರೆ ಅವರು ಆಡುತ್ತಾರಾ ಎಂಬ ಖಾತರಿ ಇಲ್ಲ. ಅವರು ಫಿಟ್​ ಆದರೆ ಮಾತ್ರ ತಂಡದಲ್ಲಿ ಆಡುತ್ತಾರೆ ಎಂದು ಹೇಳಲಾಗಿದೆ. ಆದರೆ, ಅವರು ಬೌಲಿಂಗ್​ ಅಭ್ಯಾಸ ಮಾಡುವುದನ್ನು ನೋಡಿದರೆ ಟೆಸ್ಟ್​ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ.

ಜನವರಿ 20ರಂದು ರವೀಂದ್ರ ಜಡೇಜಾ ಅವರು ಟ್ವಿಟರ್​ನಲ್ಲಿ ತಾವು ಬೌಲಿಂಗ್​ ಅಭ್ಯಾಸ ಮಾಡುತ್ತಿರುವ ವಿಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಬಲಕಾಲಿನ ಮಂಡಿಗೆ ಯಾವುದೇ ಪಟ್ಟಿಯನ್ನು ಕಟ್ಟಿಕೊಂಡಿಲ್ಲ. ಹೀಗಾಗಿ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಅಂದಾಜಿಸಲಾಗಿದೆ.

34 ವರ್ಷದ ರವೀಂದ್ರ ಜಡೇಜಾ ಅವರು ಜನವರಿ 24ರಂದು ಆರಂಭವಾಗಲಿರುವ ಸೌರಾಷ್ಟ್ರ ಮತ್ತು ತಮಿಳು ನಾಡುವ ನಡುವಿನ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ | Ravindra Jadeja | ಫಿಟ್​ನೆಸ್​ಗಾಗಿ ರಣಜಿ ಆಡಲು ಮುಂದಾದ ಆಲ್​ರೌಂಡರ್​ ರವೀಂದ್ರ ಜಡೇಜಾ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

Shardul Thakur: ಶಾರ್ದೂಲ್‌ ಠಾಕೂರ್‌ಗೆ ಪಾದದ ಶಸ್ತ್ರಚಿಕಿತ್ಸೆ; ಮೂರು ತಿಂಗಳು ಕ್ರಿಕೆಟ್​ನಿಂದ ದೂರ 

Shardul Thakur: 2019ರಲ್ಲೂ ಶಾರ್ದೂಲ್​ ತಮ್ಮ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಂದು ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಪಾದದ ನೋವು ಕಾಣಿಸಿಕೊಂಡಿತ್ತು. ಕಳೆದ ತಿಂಗಳು ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಪರ ಆಡಿದ್ದ ಅವರು 9 ಪಂದ್ಯಗಳಲ್ಲಿ ಕೇವಲ ಐದು ವಿಕೆಟ್‌ಗಳನ್ನಷ್ಟೇ ಪಡೆದಿದ್ದರು.

VISTARANEWS.COM


on

Shardul Thakur
Koo

ಲಂಡನ್‌: ಲಾರ್ಡ್ ಎಂಬ ಹೆಸರಿನಿಂದ ಪ್ರಸಿದ್ಧವಾಗಿರುವ ಭಾರತ ತಂಡದ ಆಲ್‌ರೌಂಡರ್‌ ಶಾರ್ದೂಲ್ ಠಾಕೂರ್(Shardul Thakur) ಅವರ ಪಾದದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ(Shardul Thakur foot surgery) ನಡೆದಿದ್ದು, ಕನಿಷ್ಠ ಮೂರು ತಿಂಗಳುಗಳ ಕಾಲ ಅವರು ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ.

32 ವರ್ಷ ವರ್ಷದ ಶಾರ್ದೂಲ್‌ ಬುಧವಾರ ಲಂಡನ್​ನಲ್ಲಿ ತಮ್ಮ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದ ಫೋಟೊವನ್ನು ಶಾರ್ದೂಲ್​ ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದು ಶೀಘ್ರದಲ್ಲೇ ಗುಣಮುಖರಾಗಿ ಮತ್ತೆ ನಿಮ್ಮ ಮುಂದೆ ಆಡಲಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಕೇಂದ್ರಿಯ ಗುತ್ತಿಗೆಯಲ್ಲಿ ಅವರು ‘ಸಿ’ ಗ್ರೇಡ್‌ ವ್ಯಾಪ್ತಿಯಲ್ಲಿರುವ ಕಾರಣ ಅವರ ಚಿಕಿತ್ಸೆಯ ವೆಚ್ಚವನ್ನು ಬಿಸಿಸಿಐ ಭರಿಸಲಿದೆ.

2019ರಲ್ಲೂ ಶಾರ್ದೂಲ್​ ತಮ್ಮ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಂದು ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಪಾದದ ನೋವು ಕಾಣಿಸಿಕೊಂಡಿತ್ತು. ಕಳೆದ ತಿಂಗಳು ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಪರ ಆಡಿದ್ದ ಅವರು 9 ಪಂದ್ಯಗಳಲ್ಲಿ ಕೇವಲ ಐದು ವಿಕೆಟ್‌ಗಳನ್ನಷ್ಟೇ ಪಡೆದಿದ್ದರು. ಶಾರ್ದೂಲ್​ ಭಾರತ ಪರ 11 ಟೆಸ್ಟ್​, 47 ಏಕದಿನ ಮತ್ತು 25 ಟಿ20 ಪಂದ್ಯಗಳನ್ನಾಡಿ ಒಟ್ಟು 129 ವಿಕೆಟ್​ ಪಡೆದಿದ್ದಾರೆ. ಬ್ಯಾಟಿಂಗ್​ನಲ್ಲಿಯೂ ಉತ್ತಮ ಪ್ರದರ್ಶನ ತೋರಿರುವ ಅವರು ಒಟ್ಟು 729 ರನ್​ ಬಾರಿಸಿದ್ದಾರೆ. ಇದರಲ್ಲಿ 5 ಅರ್ಧಶತಕ ಒಳಗೊಂಡಿದೆ.


ಟೀಮ್​ ಇಂಡಿಯಾದ ಪ್ರಧಾನ ವೇಗಿ ಮೊಹಮ್ಮದ್​ ಶಮಿ ಕೂಡ ಕೆಲ ತಿಂಗಳ ಹಿಂದೆ ಲಂಡನ್​ನಲ್ಲಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿ ಈಗ ವಿಶ್ರಾಂತಿಯಲ್ಲಿದ್ದಾರೆ. ಚೇತರಿಕೆಯ ಹಾದಿಯಲ್ಲಿರುವ ಶಮಿ  ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್​ನಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರಿದ್ದರು.

ಇದನ್ನೂ ಓದಿ IND vs USA: ಭಾರತಕ್ಕೆ 5​ ಪೆನಾಲ್ಟಿ ರನ್ ಲಭಿಸಿದ್ದು ಹೇಗೆ?

ಗಾಯದಿಂದಾಗಿ ಶಮಿ ಅವರು ಈ ಬಾರಿಯ ಐಪಿಎಲ್​ ಸೇರಿ ಟಿ20 ವಿಶ್ವಕಪ್​ ಆಡುವ ಅವಕಾಶ ಕಳೆದುಕೊಂಡರು. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

Continue Reading

ಕ್ರಿಕೆಟ್

T20 World Cup Viral Video: ಪಾಕ್​ ತಂಡದ ವೇಗಿಗೆ ತವರಿನ ಅಭಿಮಾನಿಗಳಿಂದಲೇ ಗೇಲಿ

T20 World Cup Viral Video: ಪಂದ್ಯ ಮುಗಿಸಿ ಡ್ರೆಸಿಂಗ್​ ರೋಮ್​ಗೆ ತೆರಳುವ ವೇಳೆ ಅಮೀರ್​ ಅವರು ಅಭಿಮಾನಿಗಳಿಗೆ ಏನೋ ಕೈ ಸನ್ನೆ ಮಾಡುವ ಮೂಲಕ ಅಹಂಕಾರದ ವರ್ತನೆ ತೋರಿದ್ದಾರೆ. ಈ ವೇಳೆ ಸಿಟ್ಟಿಗೆದ್ದ ಅಭಿಮಾನಿಗಳು ಜೋರಾಗಿ ಫಿಕ್ಸರ್​…ಫಿಕ್ಸರ್​ ಎಂದು ಕರೆದು ಗೇಲಿ ಮಾಡಿದ್ದಾರೆ.

VISTARANEWS.COM


on

T20 World Cup Viral Video
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್(T20 World Cup)​ ಆಡುವ ಸಲುವಾಗಿ ನಿವೃತ್ತಿ ಹಿಂಪಡೆದು ಪಾಕಿಸ್ತಾನ ತಂಡದ ಪರ ಆಡುತ್ತಿರುವ ಅನುಭವಿ ಹಾಗೂ ಹಿರಿಯ ವೇಗಿ ಮೊಹಮ್ಮದ್​ ಅಮೀರ್(Mohammad Amir)​ ಅವರು ನ್ಯೂಯಾರ್ಕ್​ನಲ್ಲಿ ತವರಿನ ಅಭಿಮಾನಿಗಲೇ ಗೇಲಿ ಮಾಡಿದ್ದಾರೆ. ಅಮೀರ್​ ಅವರನ್ನು ಫಿಕ್ಸರ್…ಫಿಕ್ಸರ್​ ಎಂದು ಕರೆದಿದ್ದಾರೆ. ಈ ವಿಡಿಯೊ ವೈರಲ್​(T20 World Cup Viral Video) ಆಗಿದೆ.

ಪಂದ್ಯ ಮುಗಿಸಿ ಡ್ರೆಸಿಂಗ್​ ರೋಮ್​ಗೆ ತೆರಳುವ ವೇಳೆ ಅಮೀರ್​ ಅವರು ಅಭಿಮಾನಿಗಳಿಗೆ ಏನೋ ಕೈ ಸನ್ನೆ ಮಾಡುವ ಮೂಲಕ ಅಹಂಕಾರದ ವರ್ತನೆ ತೋರಿದ್ದಾರೆ. ಈ ವೇಳೆ ಸಿಟ್ಟಿಗೆದ್ದ ಅಭಿಮಾನಿಗಳು ಜೋರಾಗಿ ಫಿಕ್ಸರ್​…ಫಿಕ್ಸರ್​ ಎಂದು ಕರೆದು ಗೇಲಿ ಮಾಡಿದ್ದಾರೆ. ಈ ವೇಳೆ ಅಮೀರ್​ ಕೋಪಗೊಂಡು ಬೈದಿದ್ದಾರೆ. ಇದರಿಂದ ಕೆರಳಿದ ಅಭಿಮಾನಿಗಳು ಮತ್ತೂ ಜೋರಾಗಿ ನೀನೊಬ್ಬ ಫಿಕ್ಸರ್​ ಎನ್ನುವುದನ್ನು ಮರಿಬೇಡ, ಜೈಲು ಶಿಕ್ಷೆಯೂ ಅನುಭವಿಸಿದ್ದೀಯ ಎಂದು ಹೇಳಿದ್ದಾರೆ. ಇದು ಬಾಬರ್​ ಅಜಂ ಅವರ ಅಭಿಮಾನಿಗಳು ಎಂದು ಹೇಳಲಾಗಿದೆ.

2010ರ ಆಗಸ್ಟ್‌ ತಿಂಗಳಲ್ಲಿ ಇಂಗ್ಲೆಂಡ್ ಪ್ರವಾಸದಲ್ಲಿ ಅಮೀರ್​ ಸ್ಪಾಟ್‌ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದರು. ಹೀಗಾಗಿ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಅವರ ಮೇಲೆ ಕ್ರಿಕೆಟ್ ಆಡದಂತೆ ಐದು ವರ್ಷಗಳ ನಿಷೇಧ ವಿಧಿಸಲಾಗಿತ್ತು. ಆಗ ಅವರಿಗೆ 18 ವರ್ಷ ವಯಸ್ಸಾಗಿತ್ತು. 2015ರಲ್ಲಿ ನಿಷೇಧ ಮುಕ್ತರಾಗಿ ಅವರು ದೇಶಿ ಕ್ರಿಕೆಟ್‌ನಲ್ಲಿ ಆಡುವ ಅವಕಾಶ ಪಡೆದು ಬಳಿಕ ರಾಷ್ಟ್ರೀಯ ತಂಡಕ್ಕೆ ಮತ್ತೆ ಪುನರಾಗಮನ ಮಾಡಿದ್ದರು. ಈ ಪ್ರಕರಣದಲ್ಲಿ ಅಮೀರ್​ ಮಾತ್ರವಲ್ಲದೆ ತಂಡದ ನಾಯಕ ಸಲ್ಮಾನ್ ಭಟ್ ಮತ್ತು ಮೊಹಮ್ಮದ್ ಆಸೀಫ್ ಕೂಡ ನಿಷೇಧಕ್ಕೊಳಗಾಗಿದ್ದರು.

ಇದನ್ನೂ ಓದಿ WI vs NZ: ಕಿವೀಸ್​ ಕಿವಿ ಹಿಂಡಿ ಸೂಪರ್​-8ಗೆ ಪ್ರವೇಶಿಸಿದ ವೆಸ್ಟ್​ ಇಂಡೀಸ್​

 2021 ರಲ್ಲಿ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರು. ಆದಾಗ್ಯೂ, ಅವರು ಜಗತ್ತಿನಾದ್ಯಂತ T20 ಲೀಗ್‌ಗಳಲ್ಲಿ ಆಡುವುದನ್ನು ಮುಂದುವರೆಸಿದ್ದರು. ಈ ಬಾರಿಯ ಟಿ20 ವಿಶ್ವಕಪ್​ ಆಡುವ ಸಲುವಾಗಿಯೇ ಅವರು ತಮ್ಮ ನಿವೃತ್ತಿಯನ್ನು ಹಿಂಪಡೆದು ಮತ್ತೆ ತಂಡ ಸೇರಿದ್ದರು. 32 ವರ್ಷದ ಅಮೀರ್ ಇದುವರೆಗೆ 36 ಟೆಸ್ಟ್‌ಗಳು, 61 ಏಕದಿ ಮತ್ತು 61 ಟಿ20 ಪಂದ್ಯಗಳನ್ನು ಆಡಿದ್ದಾರೆ. ಏಕದಿನದಲ್ಲಿ 81, ಟೆಸ್ಟ್​ನಲ್ಲಿ 119 ಮತ್ತು ಟಿ20ಯಲ್ಲಿ 69 ವಿಕೆಟ್​ ಕೆಡವಿದ್ದಾರೆ.

ಪಾಕಿಸ್ತಾನ ತಂಡ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದು ಟೂರ್ನಿಯಿಂದ ಹೊರಬೀಳುವ ಹಂತದಲ್ಲಿದೆ. ಅಮೆರಿಕ ತಂಡ ಮುಂದಿನ ಪಂದ್ಯದಲ್ಲಿ ಐರ್ಲೆಂಡ್​ ವಿರುದ್ಧ ಗೆದ್ದರೆ ಪಾಕ್​ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

ಪಾಕ್​ ಆಟಗಾರನಿಗೆ ‘ನಾಲಾಯಕ್’ ಎಂದ ಹರ್ಭಜನ್​ ಸಿಂಗ್


ಭಾರತ ಮತ್ತು ಪಾಕ್​(IND vs PAK) ಪಂದ್ಯದ ವೇಳೆ ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಜನಾಂಗೀಯ ನಿಂದನೆ ಮಾಡಿ ಬಳಿಕ ಕ್ಷಮೆಯಾಚಿಸಿದ್ದ ಪಾಕಿಸ್ತಾನದ ಮಾಜಿ ಆಟಗಾರ ಕಮ್ರಾನ್​ ಅಕ್ಮಲ್(Kamran Akmal) ವಿರುದ್ಧ ಹರ್ಭಜನ್​ ಸಿಂಗ್(Harbhajan Singh) ಮತ್ತೆ ಕಿಡಿ ಕಾರಿದ್ದಾರೆ. ನಿನೋಬ್ಬ ನಾಲಾಯಕ್(Nalaayak)​ ಎಂದು ಹೇಳಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ. ಎಎನ್​ಐ ಜತೆಗಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಹರ್ಭಜನ್​ ಸಿಂಗ್ ಅವರು ಕಮ್ರಾನ್​ ಅಕ್ಮಲ್​ ಒಬ್ಬ ನಾಲಾಯಕ್​, ಈತನಿಂದ ಮಾತ್ರ ಈ ರೀತಿಯ ಹೇಳಿಕೆ ನೀಡಲು ಸಾಧ್ಯ ಎಂದು ತೀಕ್ಷ್ಣ ಮಾತುಗಳಿಂದ ಜಾಡಿಸಿದ್ದಾರೆ.

Continue Reading

ಕ್ರೀಡೆ

WI vs NZ: ಕಿವೀಸ್​ ಕಿವಿ ಹಿಂಡಿ ಸೂಪರ್​-8ಗೆ ಪ್ರವೇಶಿಸಿದ ವೆಸ್ಟ್​ ಇಂಡೀಸ್​

WI vs NZ: ಚೇಸಿಂಗ್​ ಆರಂಭಿಸಿದ ನ್ಯೂಜಿಲ್ಯಾಂಡ್​ ಆರಂಭದಲ್ಲೇ ಸತತವಾಗಿ ವಿಕೆಟ್​ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತು. ಟಿ20 ಸ್ಪೆಷಲಿಸ್ಟ್​ಗಳನ್ನು ಹೆಚ್ಚಾಗಿ ನೆಚ್ಚಿಕೊಂಡ ಬಲಿಷ್ಠ ತಂಡವಾಗಿದ್ದರೂ ಕೂಡ ಯಾರೋಬ್ಬರು ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಯಶಸ್ಸು ಕಾಣಲೇ ಇಲ್ಲ

VISTARANEWS.COM


on

WI vs NZ
Koo

ಟ್ರಿನಿಡಾಡ್: ಸೂಪರ್​-8 ಆಸೆ ಜೀವಂತವಿರಿಸುವ ಇರಾದೆಯೊಂದಿಗೆ ಆಡಲಿಳಿದ ನ್ಯೂಜಿಲ್ಯಾಂಡ್(WI vs NZ)ಗೆ ಆತಿಥೇಯ ವೆಸ್ಟ್​ ಇಂಡೀಸ್(West Indies) ಆಘಾತವಿಕ್ಕಿದೆ. 13 ರನ್​​ಗಳ ಅಂತರದ ಸೋಲುಣಿಸಿದೆ. ಗೆಲುವು ಸಾಧಿಸಿದ ವಿಂಡೀಸ್​ ‘ಸಿ’ ಗುಂಪಿನಿಂದ ಸೂಪರ್​-8ಗೆ ಪ್ರವೇಶ ಪಡೆಯಿತು. ಸತತ 2 ಸೋಲು ಕಂಡ ನ್ಯೂಜಿಲ್ಯಾಂಡ್​(New Zealand) ಟೂರ್ನಿಯಿಂದ ಬಹುತೇಕ ಹೊರಬೀಳುವ ಸ್ಥಿತಿಗೆ ಬಂದು ನಿಂತಿದೆ. ನಾಳೆ ನಡೆಯುವ ಪಂದ್ಯದಲ್ಲಿ ಅಫಘಾನಿಸ್ತಾನ ತಂಡ ಪಪುವಾ ನ್ಯೂ ಗಿನಿಯಾ ವಿರುದ್ಧ ಗೆದ್ದರೆ ಕಿವೀಸ್​ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ. ಏಕದಿನ ಸೇರಿದಂತೆ ಕಳೆದ ಆರೂ ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ಸೆಮಿಫೈನಲ್‌ ಪ್ರವೇಶಿಸಿರುವ ನ್ಯೂಜಿಲ್ಯಾಂಡ್‌ ಈ ರೀತಿಯ ಶೋಚನೀಯ ಸ್ಥಿತಿ ತಲುಪಿದ್ದು ಇದೇ ಮೊದಲು.

ಇಲ್ಲಿನ ಬ್ರಿಯನ್​ ಲಾರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ವೆಸ್ಟ್​ ಇಂಡೀಸ್​ ಆರಂಭಿಕ ಆಘಾತ ಕಂಡರೂ ಕೂಡ ಶೆರ್ಫೇನ್ ರುದರ್ಫೋರ್ಡ್(68) ಅಜೇಯ ಅರ್ಧಶತಕದ ಬ್ಯಾಟಿಂಗ್​ ಹೋರಾಟದಿಂದ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 149 ರನ್​ ಬಾರಿಸಿತು. ಗುರಿ ಬೆನ್ನತ್ತಿದ ನ್ಯೂಜಿಲ್ಯಾಂಡ್​ ನಾಟಕೀಯ ಕುಸಿತ ಕಂಡು 9 ವಿಕೆಟ್​ಗೆ 136 ರನ್​ ಗಳಿಸಿ ಸೋಲಿಗೆ ತುತ್ತಾಯಿತು. ಕಳೆದ ಪಂದ್ಯದಲ್ಲಿ ಅಫಘಾನಿಸ್ತಾನ ವಿರುದ್ಧವೂ ಕೇವಲ 75 ರನ್​ಗೆ ಕುಸಿದು ಹೀನಾಯ ಸೋಲು ಕಂಡಿತ್ತು.

ಚೇಸಿಂಗ್​ ಆರಂಭಿಸಿದ ನ್ಯೂಜಿಲ್ಯಾಂಡ್​ ಆರಂಭದಲ್ಲೇ ಸತತವಾಗಿ ವಿಕೆಟ್​ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತು. ಟಿ20 ಸ್ಪೆಷಲಿಸ್ಟ್​ಗಳನ್ನು ಹೆಚ್ಚಾಗಿ ನೆಚ್ಚಿಕೊಂಡ ಬಲಿಷ್ಠ ತಂಡವಾಗಿದ್ದರೂ ಕೂಡ ಯಾರೋಬ್ಬರು ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಯಶಸ್ಸು ಕಾಣಲೇ ಇಲ್ಲ. ಡೆವೋನ್​ ಕಾನ್ವೆ(5), ನಾಯಕ ಕೇನ್​ ವಿಲಿಯಮ್ಸನ್​(1), ರಚಿನ್​ ರವೀಂದ್ರ(10), ಡ್ಯಾರಿಲ್​ ಮಿಚೆಲ್​(12), ಜೇಮ್ಸ್​ ನೀಶಮ್​(10) ಅಲ್ಪ ಮೊತ್ತಕ್ಕೆ ವಿಕೆಟ್​ ಕೈಚೆಲ್ಲಿ ಪೆವಿಲಿಯನ್​ ಪರೇಡ್​ ನಡೆಸಿದರು. ತಂಡಕ್ಕೆ ಆಸರೆಯಾದ ಆಟಗಾರನೆಂದರೆ ಗ್ಲೆನ್​ ಫಿಲಿಫ್ಸ್​ ಮಾತ್ರ.

ಇದನ್ನೂ ಓದಿ IND vs USA: ಭಾರತಕ್ಕೆ 5​ ಪೆನಾಲ್ಟಿ ರನ್ ಲಭಿಸಿದ್ದು ಹೇಗೆ?

ಒಂದೆಡೆ ಸಹ ಆಟಗಾರರ ವಿಕೆಟ್​ ಬೀಳುತ್ತಿದ್ದರೂ ಕೂಡ ವಿಂಡೀಸ್​ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸಿ ನಿಂತ ಫಿಲಿಫ್ಸ್​ ತಂಡದ ಗೆಲುವಿಗಾಗಿ ಶಕ್ತಿ ಮೀರಿ ಹೋರಾಟ ನಡೆಸಿದರು. ಆದರೆ 40 ರನ್​ ಗಳಿಸಿದ ವೇಳೆ ಇವರ ವಿಕೆಟ್​ ಕೂಡ ಪತನಗೊಂಡಿತು. ಈ ವಿಕೆಟ್​ ಬೀಳುತ್ತಿದ್ದಂತೆ ನ್ಯೂಜಿಲ್ಯಾಂಡ್​ ಸೋಲು ಕೂಡ ಖಚಿತಗೊಂಡಿತು. ಅಂತಿಮ ಹಂತದಲ್ಲಿ ಮಿಚೆಲ್​ ಸ್ಯಾಂಟ್ನರ್ ಅವರು 12 ಎಸೆತಗಳಿಂದ ಅಜೇಯ 21 ರನ್​ ಬಾರಿಸಿದರೂ ಕೂಡ ಇವರಿಗೆ ತಂಡವವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ವಿಂಡೀಸ್​ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ಅಲ್ಜಾರಿ ಜೋಸೆಫ್​ 19 ರನ್​ಗೆ 4 ವಿಕೆಟ್​ ಕಿತ್ತರೆ, ಗುಡಾಕೇಶ್ ಮೋತಿ 3 ವಿಕೆಟ್​ ಕಿತ್ತು ಮಿಂಚಿದರು.

ಬಿರುಸಿನ ಬ್ಯಾಟಿಂಗ್​ ನಡೆಸಿದ ರುದರ್ಫೋರ್ಡ್

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ವಿಂಡೀಸ್​ 30 ರನ್​ಗೆ 5 ವಿಕೆಟ್​ ಕಳೆದುಕೊಂಡು ಆರಂಭಿಕ ಆಘಾತ ಎದುರಿಸಿತು. ಜಾನ್ಸನ್ ಚಾರ್ಲ್ಸ್ ಮತ್ತು ರೋಸ್ಟನ್ ಚೇಸ್ ಶೂನ್ಯ ಸಂಕಟಕ್ಕೆ ಸಿಲುಕಿದರು. ಅನುಭವಿ ನಿಕೋಲಸ್​ ಪೂರಣ್(17) ಮತ್ತು ಆರಂಭಿಕ ಆಟಗಾರ ಬ್ರೆಂಡನ್​ ಕಿಂಗ್​(9), ನಾಯಕ ರೋವ್ಮನ್ ಪೊವೆಲ್(1) ಸಂಪೂರ್ಣ ಬ್ಯಾಟಿಂಗ್​ ವೈಫಲ್ಯ ಕಂಡರು. ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ವಿಂಡೀಸ್​ಗೆ ಆಸರೆಯಾದದ್ದು 7ನೇ ಕ್ರಮಾಂಕದಲ್ಲಿ ಆಡಲಿಳಿದ ಶೆರ್ಫೇನ್ ರುದರ್ಫೋರ್ಡ್. ಬಿರುಸಿನ ಬ್ಯಾಟಿಂಗ್​ ನಡೆಸಿದ ಶೆರ್ಫೇನ್ ರುದರ್ಫೋರ್ಡ್ 39 ಎಸೆತಗಳಲ್ಲಿ ಬರೋಬ್ಬರಿ 6 ಸಿಕ್ಸರ್​ ಮತ್ತು 2 ಬೌಂಡರಿ ಸಿಡಿಸಿ ಅಜೇಯ 68 ರನ್​ಗಳ ಕೊಡುಗೆ ನೀಡಿದರು. ಇವರು ನಿಂತು ಆಡದೇ ಹೋಗಿದ್ದರೆ ವಿಂಡೀಸ್​ ಅಲ್ಪ ಮೊತ್ತಕ್ಕೆ ಕುಸಿಯುತ್ತಿತ್ತು.

Continue Reading

ಕ್ರೀಡೆ

Anushka Sharma: ಕೊಹ್ಲಿಯಂತೆ ತಾಳ್ಮೆ ಕಳೆದುಕೊಂಡ ಪತ್ನಿ ಅನುಷ್ಕಾ; ವಿಡಿಯೊ ವೈರಲ್​

Anushka Sharma: ಅನೇಕ ಬಾರಿ ಅನುಷ್ಕಾ
ಸ್ಟೇಡಿಯಂನಲ್ಲಿದ್ದು, ಪತಿ ಕೊಹ್ಲಿಗೆ ಚಿಯರ್ ಅಪ್ ಮಾಡಿದ್ದರು. ಕಳೆದ ಬಾರಿ ಏಕದಿನ ವಿಶ್ವಕಪ್ ಟೂರ್ನಿಯ ವೇಳೆಯೂ ಬಹುತೇಖ ಪಂದ್ಯಗಳಲ್ಲಿ ಅನುಷ್ಕಾ ಅವರು ಕೊಹ್ಲಿಗೆ ಹುರಿದುಂಬಿಸಿದ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿತ್ತು.

VISTARANEWS.COM


on

Anushka Sharma
Koo

ನ್ಯೂಯಾರ್ಕ್​: ಕಳೆದ ಭಾನುವಾರ ನಡೆದಿದ್ದ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್(T20 World Cup) ಪಂದ್ಯದ ವೇಳೆ ವಿರಾಟ್​ ಕೊಹ್ಲಿಯ ಪತ್ನಿ ಅನುಷ್ಕಾ ಶರ್ಮಾ(Anushka Sharma) ತಾಳ್ಮೆ ಕಳೆದುಕೊಂಡು(Anushka Sharma Loses Her Cool) ವ್ಯಕ್ತಿಯೊಬ್ಬರಿಗೆ ಬೈದಿರುವ ವಿಡಿಯೊವೊಂದು ವೈರಲ್​ ಆಗಿದೆ. ಗ್ಯಾಲರಿಯಲ್ಲಿ ಪಂದ್ಯ ವೀಕ್ಷಿಸುತ್ತಿದ್ದ ಅನುಷ್ಕಾ ಒಬ್ಬ ವ್ಯಕ್ತಿಯೊಂದಿಗೆ ಕೋಪದಿಂದ ಮಾತನಾಡುತ್ತಿರುವುದು ಈ ವಿಡಿಯೊದಲ್ಲಿ ಕಂಡುಬಂದಿದೆ. ಯಾವ ಕಾರಣಕ್ಕೆ ಅನುಷ್ಕಾ ತಾಳ್ಮೆ ಕಳೆದುಕೊಳ್ಳಲು ಕಾರಣ ಏನೆಂಬುದು ತಿಳಿದಿಲ್ಲ.

ವಿರಾಟ್​ ಕೊಹ್ಲಿಗೆ(Virat Kohli) ಸ್ಫೂರ್ತಿ ನೀಡಲೆಂದೇ ಅನುಷ್ಕಾ ಅವರು ಪ್ರತಿ ಪಂದ್ಯದ ವೇಳೆ ಕಾಣಿಸಿಕೊಳ್ಳುತ್ತಾರೆ. ಕೊಹ್ಲಿ ಶತಕ ಬಾರಿಸಿದಾಗ, ಉತ್ತಮ ಫೀಲ್ಡಿಂಗ್​ ಮಾಡಿದಾಗ ಗ್ಯಾಲರಿಯಲ್ಲಿ ಎದು ನಿಂತು ಚಪ್ಪಾಳೆ ತಟ್ಟುತ್ತಾ ಬೆಂಬಲ ಸೂಚಿಸುತ್ತಿರುತ್ತಾರೆ. ಹಿಂದೆ ಅನೇಕ ಬಾರಿ ಅನುಷ್ಕಾ ಮೈದಾನದಲ್ಲಿದ್ದು, ಪತಿ ಕೊಹ್ಲಿಗೆ ಚಿಯರ್ ಅಪ್ ಮಾಡಿದ್ದರು. ಕಳೆದ ಬಾರಿ ಏಕದಿನ ವಿಶ್ವಕಪ್ ಟೂರ್ನಿಯ ವೇಳೆಯೂ ಬಹುತೇಖ ಪಂದ್ಯಗಳಲ್ಲಿ ಅನುಷ್ಕಾ ಅವರು ಕೊಹ್ಲಿಗೆ ಹುರಿದುಂಬಿಸಿದ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿತ್ತು.

ಕಳೆದ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾದ (Australia) ವಿರುದ್ಧ ಸೋತ ಬೇಸರದಲ್ಲಿ ವಿರಾಟ್ ಕೊಹ್ಲಿ ತಮ್ಮ ಹೆಂಡತಿ ಇರುವ ಸ್ಟ್ಯಾಂಡ್‌ನತ್ತ ಹೋದಾಗ ಅನುಷ್ಕಾ ಶರ್ಮಾ ವಿರಾಟ್‌ ಅವರನ್ನು ತಬ್ಬಿಕೊಂಡು ಸಮಾಧಾನ ಮಾಡಿದ್ದರು. ಈ ಫೋಟೊ ವೈರಲ್​ ಆಗಿತ್ತು.

ಇದನ್ನೂ ಓದಿ Virat Kohli: ಟಿ20 ವಿಶ್ವಕಪ್​ನಲ್ಲಿ ಮೊದಲ ಗೋಲ್ಡನ್​ ಡಕ್ ಸಂಕಟಕ್ಕೆ ಸಿಲುಕಿದ ವಿರಾಟ್​ ಕೊಹ್ಲಿ

ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್​ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.

“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ” ಎಂದು ಕೊಹ್ಲಿ ಪತ್ನಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದ್ದರು.

Continue Reading
Advertisement
Gold Rate Today
ಚಿನ್ನದ ದರ6 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

Karnataka Rain Effect
ಮಳೆ7 mins ago

Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

Lionel Messi Retirement
ಕ್ರೀಡೆ21 mins ago

Lionel Messi Retirement: ನಿವೃತ್ತಿಯ ಸುಳಿವು ನೀಡಿದ ಲಿಯೋನೆಲ್​ ಮೆಸ್ಸಿ

wild elephant attack
ಪ್ರಮುಖ ಸುದ್ದಿ26 mins ago

Wild Elephant Attack : ನಾಡಿಗೆ ಬಂದ ಕಾಡಾನೆಯಿಂದ ರೈತನ ಮೇಲೆ ದಾಳಿ, ಕಾಲು ಮುರಿತ

Pema Khandu
ದೇಶ42 mins ago

Pema Khandu: ಅರುಣಾಚಲ ಪ್ರದೇಶದ ಸಿಎಂ ಆಗಿ ಪೇಮಾ ಖಂಡು ಪ್ರಮಾಣ ವಚನ ಸ್ವೀಕಾರ

Duniya Vijay nagaratna Divorce case verdict to be announced
ಸ್ಯಾಂಡಲ್ ವುಡ್46 mins ago

Duniya Vijay: ಇಂದು ದುನಿಯಾ ವಿಜಯ್‌-ನಾಗರತ್ನ ವಿಚ್ಛೇದನ ತೀರ್ಪು, ಕೀರ್ತಿ ಗೌಡ ಜತೆಗಿನ ದಾಂಪತ್ಯಕ್ಕೆ ಸಿಗುವುದೇ ಅಂಕಿತ?

Priyanka Chopra’s Brother-In-Law Kevin Jonas Diagnosed With Skin Cancer
ಸಿನಿಮಾ1 hour ago

Priyanka Chopra: ಪ್ರಿಯಾಂಕಾ ಚೋಪ್ರಾ ಮೈದುನ, ಗಾಯಕ ಕೆವಿನ್​ ಜೋನಸ್‌ಗೆ ಕ್ಯಾನ್ಸರ್!

Actor Darshan
ಮಂಡ್ಯ1 hour ago

Actor Darshan : ನಟ ದರ್ಶನ್‌ ವಿರುದ್ಧ ಸಿಡಿದೆದ್ದ ಮಂಡ್ಯ ರೈತರು; ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

Sonakshi Sinha Zaheer Iqbal confirm their wedding in leaked audio
ಬಾಲಿವುಡ್1 hour ago

Sonakshi Sinha: ಸೋನಾಕ್ಷಿ ಸಿನ್ಹಾ – ಜಹೀರ್ ಇಕ್ಬಾಲ್ ಮದುವೆಯ ಆಮಂತ್ರಣದ ಆಡಿಯೊ ಕ್ಲಿಪ್‌ ಲೀಕ್‌!

Shardul Thakur
ಕ್ರೀಡೆ1 hour ago

Shardul Thakur: ಶಾರ್ದೂಲ್‌ ಠಾಕೂರ್‌ಗೆ ಪಾದದ ಶಸ್ತ್ರಚಿಕಿತ್ಸೆ; ಮೂರು ತಿಂಗಳು ಕ್ರಿಕೆಟ್​ನಿಂದ ದೂರ 

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌