IPL 2024 : ಹರಾಜಿನಲ್ಲಿ ಬೇಡಿಕೆ ಪಡೆಯಲಿರುವ ಆರ್​ಸಿಬಿಯ ಮೂವರು ಮಾಜಿ ಆಟಗಾರರು ಇವರು - Vistara News

ಕ್ರಿಕೆಟ್

IPL 2024 : ಹರಾಜಿನಲ್ಲಿ ಬೇಡಿಕೆ ಪಡೆಯಲಿರುವ ಆರ್​ಸಿಬಿಯ ಮೂವರು ಮಾಜಿ ಆಟಗಾರರು ಇವರು

IPL 2024 : ಆರ್​​ಸಿಬಿ ಫ್ರಾಂಚೈಸಿ ಈ ಮೂವರು ಆಟಗಾರರನ್ನು ಕೈಬಿಟ್ಟಾಗ ಕ್ರಿಕೆಟ್​ ಅಭಿಮಾನಿಗಳು ಅಚ್ಚರಿಪಟ್ಟಿದ್ದರು.

VISTARANEWS.COM


on

RCB Team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ದೊಡ್ಡ ಅಭಿಮಾನಿ ಬಳಗವನ್ನು ಹೊಂದಿವೆ. ನಗದು ಸಮೃದ್ಧ ಟಿ 20 ಲೀಗ್​ನಲ್ಲಿ ಬೆಂಗಳೂರು ತಂಡ 15 ವರ್ಷಗಳಿಂದ ಗುಣಮಟ್ಟದ ಕ್ರಿಕೆಟ್ ಆಡಿದೆ. ಆದರೆ ಮುಂಬೈ ಚಾಲೆಂಜರ್ಸ್ ಬಳಗ ಇನ್ನೂ ಬಾರಿಗೆ ಟ್ರೋಫಿಯನ್ನು ಎತ್ತಿಲ್ಲ.

2023 ರಲ್ಲಿ ಆರ್​ಸಿಬಿಯಯ ಅಭಿಯಾನವು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೌಂಡ್ ರಾಬಿನ್ ಹಂತದಲ್ಲಿ ಗುಜರಾತ್​ ಜೈಂಟ್ಸ್ ವಿರುದ್ಧದ ಆರು ವಿಕೆಟ್​ಗಳ ಸೋಲಿನೊಂದಿಗೆ ಕೊನೆಗೊಂಡಿತ್ತು. ಆದಾಗ್ಯೂ 2024ರ ಐಪಿಎಲ್ ಹರಾಜಿಗೆ ಮುಂಚಿತವಾಗಿ ಈ ತಂಡ ಮೂವರು ಆಟಗಾರರನ್ನು ಬಿಡುಗಡೆ ಮಾಡಿತ್ತು. ಈ ಆಟಗಾರರು ಡಿಸೆಂಬರ್ 19ರಂದು ಭಾರಿ ಬೆಲೆ ಪಡೆಯಬಹುದು ಎಂದು ನಿರೀಕ್ಷಿಸಲಾಗಿದೆ. ಈ ವರ್ಷ, ಚಾಲೆಂಜರ್ಸ್ ತಮ್ಮ ತಂಡದಿಂದ 11 ಆಟಗಾರರನ್ನು ಬಿಡುಗಡೆ ಮಾಡಿದೆ. ಬಿಡುಗಡೆಯಾದ ಕೆಲವು ಆರ್ಸಿಬಿ ದಿಗ್ಗಜರ ಖ್ಯಾತಿ ಮತ್ತು ಪ್ರದರ್ಶನವನ್ನು ಗಮನಿಸಿದರೆ ಅವರಿಗೆ ಮುಂಬೈ ಇಂಡಿಯನ್ಸ್​ ತಂಡವೇ ಗಾಳ ಹಾಕಬಹುದು ಎನ್ನಲಾಗಿದೆ.

ಮೈಕೆಲ್ ಬ್ರೇಸ್ವೆಲ್

ಮೈಕೆಲ್ ಬ್ರೇಸ್ವೆಲ್ ತಮ್ಮ ಚೊಚ್ಚಲ ಐಪಿಎಲ್ ಋತುವಿನಲ್ಲಿ ಆರ್​ಸಿಬಿಗೆ ತಮ್ಮ ಸೇವೆಗಳನ್ನು ನೀಡಿದ್ದಾರೆ . ಆದರೆ ಆಲ್​ರೌಂಡ ಡರ್ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಆತ್ಮವಿಶ್ವಾಸ ತೋರಿಸಿರಲಿಲ್ಲ. ಇದು ಅವರನ್ನು 2024 ರ ಬೆಂಗಳೂರು ತಂಡದಿಂದ ಹೊರಗಿಡಲು ಕಾರಣವಾಯಿತು. 2023ರ ಆವೃತ್ತಿಯಲ್ಲಿ ಆಡಿದ 5 ಪಂದ್ಯಗಳಲ್ಲಿ ಕೇವಲ 58 ರನ್ ಹಾಗೂ 6 ವಿಕೆಟ್ ಕಬಳಿಸಿದ್ದರು. ಆದರೂ , ಮುಂಬರುವ ಹರಾಜಿನಲ್ಲಿ, ಕಿವೀಸ್ ಆಲ್​ರೌಂಡರ್​ಗೆ ಬೇಡಿಕೆ ಇರಬಹುದು. ಯಾಕೆಂದರೆ ಅವರಿಗೆ ಚೆಂಡಿನ ಜೊತೆಗೆ, ಅವರು ತಮ್ಮ ಬ್ಯಾಟ್​ ಮುಲಕ ಪಂದ್ಯವನ್ನು ಗೆಲ್ಲಿಸುವ ಸಾಮರ್ಥ್ಯ ಇದೆ. ಬ್ರೇಸ್ವೆಲ್ ಅವರ ಬೌಲಿಂಗ್ ದಾಖಲೆಯು ಟಿ 20 ಅಂತರರಾಷ್ಟ್ರೀಯ (ಟಿ 20 ಐ) ನಲ್ಲಿ ಪ್ರಭಾವಶಾಲಿಯಾಗಿದೆ. 16 ಪಂದ್ಯಗಳಲ್ಲಿ 5.36ರ ಸರಾಸರಿಯಲ್ಲಿ 21 ವಿಕೆಟ್ ಕಬಳಿಸಿದ್ದಾರೆ.

ವನಿಂದು ಹಸರಂಗ

ಮುಂಬರುವ ಐಪಿಎಲ್ ಹರಾಜಿಗೆ ದೊಡ್ಡ ಮೊತ್ತವನ್ನು ಹೂಡಿಕೆ ಮಾಡುವ ಸಲುವಾಗಿ ವನಿಂದು ಹಸರಂಗ ಅವರನ್ನು ಆರ್​​ಸಿಬಿ ಉಳಿಸಿಕೊಳ್ಳಲಿಲ್ಲ. 2022 ರ ಐಪಿಎಲ್​​ನಲ್ಲಿ ಶ್ರೀಲಂಕಾದ ಸ್ಪಿನ್ನರ್ ತಮ್ಮ ಬೌಲಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದ್ದರ. 16 ಪಂದ್ಯಗಳಲ್ಲಿ 7.54 ಎಕಾನಮಿಯಲ್ಲಿ 26 ವಿಕೆಟ್​ ಉರುಳಿಸಿದ್ದಾರೆ. ಈ ಸಂಖ್ಯೆಗಳೊಂದಿಗೆ ಅವರು ಆವೃತ್ತಿಯಲ್ಲಿ ಎರಡನೇ ಗರಿಷ್ಠ ವಿಕೆಟ್​ ಗಳಿಕೆದಾರ.

2023ರಲ್ಲಿ, ಅವರು ಚೆಂಡಿನೊಂದಿಗೆ ದೊಡ್ಡ ಸಾಧನೆ ಮಾಡಲು ವಿಫಲರಾದರು. ಆದಾಗ್ಯೂ, ಮುಂಬರುವ ಹರಾಜಿನಲ್ಲಿ ಅವರ ಹೆಸರು ಭಾರಿ ಮೊತ್ತವನ್ನು ಪಡೆಯುವ ನೆಚ್ಚಿನ ಆಟಗಾರರಲ್ಲಿ ಒಬ್ಬರು. ತಮ್ಮ ಸ್ಪಿನ್ ದಾಳಿಯನ್ನು ಬಲಪಡಿಸಲು ಬೇರೆ ತಂಡಗಳು ಅವರಿಗಾಗಿ ಹೂಡಿಕೆ ಮಾಡಬಹುದು.

ಜೋಶ್ ಹೇಜಲ್​ವುಡ್​

ಕಳೆದ ಎರಡು ಋತುಗಳಲ್ಲಿ ತಮ್ಮ ವೇಗದ ಬೌಲಿಂಗ್ ಘಟಕವನ್ನು ಮುನ್ನಡೆಸಿದ್ದ ಜೋಶ್ ಹೇಜಲ್ವುಡ್ ಅವರನ್ನು ಆರ್​​ಸಿ ಬಿ ಬಿಡುಗಡೆ ಮಾಡಿದೆ. ಆಸ್ಟ್ರೇಲಿಯಾದ ವೇಗದ ಬೌಲರ್ ಇತ್ತೀಚೆಗೆ 2023 ರ ವಿಶ್ವಕಪ್​ನಲ್ಲಿ ತಮ್ಮ ರಾಷ್ಟ್ರೀಯ ತಂಡಕ್ಕೆ ಉತ್ತಮ ಕೊಡುಗೆ ಕೊಟ್ಟಿದ್ದಾರೆ. ಮುಂಬರುವ ಹರಾಜಿನಲ್ಲಿ ಲಾಭದಾಯಕ ಮೊತ್ತ ಪಡೆಯುವ ಹೆಚ್ಚಿನ ಸಾಧ್ಯತೆಗಳಿವೆ.

2023 ರ ಐಪಿಎಲ್​ನಲ್ಲಿ ಅವರು ಚಾಲೆಂಜರ್ಸ್ ಪರ ಕೇವಲ ಮೂರು ಪಂದ್ಯಗಳನ್ನು ಆಡಿದ್ದಾರೆ. 8.44 ಎಕಾನಮಿಯಲ್ಲಿ ಕೇವಲ ಮೂರು ವಿಕೆಟ್​್ ಪಡೆದರು. ಶಿಸ್ತುಬದ್ಧ ವೇಗದ ಬೌಲಿಂಗ್​​ಗೆ ಹೆಸರುವಾಸಿಯಾದ ಹೇಜಲ್ವುಡ್ ಮೇಲೆ ಉತ್ತಮ ಹಣವನ್ನು ಖರ್ಚು ಮಾಡಬಹುದು. 32 ವರ್ಷದ ಆಸೀಸ್ ಆಟಗಾರ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 27 ಪಂದ್ಯಗಳಲ್ಲಿ 8.06 ಎಕಾನಮಿಯಲ್ಲಿ 35 ವಿಕೆಟ್​​ ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

RCB vs CSK: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

VISTARANEWS.COM


on

RCB vs CSK
Koo

ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ಆರ್​ಸಿಬಿ(Royal Challengers Bengaluru) ಇಂದು (ಮೇ​ 18) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ವಿರುದ್ಧ ಕಣಕ್ಕಿಳಿಯಲಿದೆ. ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಿಲಾಗಿದ್ದು ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಪೂರ್ಣವಾಗಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಇಲ್ಲಿ ಪಾರ್ಕಿಂಗ್​ ನಿಷೇಧ


ನಗರದ ಕ್ರೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್​ ನಿಷೇಧ ಮಾಡಲಾಗಿದೆ.

ಎಲ್ಲಿ ಪಾರ್ಕಿಂಗ್​ ಮಾಡಬಹುದು?


ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ) ಈ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಮೆಟ್ರೋ ಸೇವೆ

ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಇದನ್ನೂ ಓದಿ IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ ( QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

Continue Reading

ಪ್ರಮುಖ ಸುದ್ದಿ

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

IPL 2024: ಮೊದಲ ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ ನಷ್ಟಕ್ಕೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

ipl 2024
Koo

ಮುಂಬೈ: ಹಾರ್ದಿಕ್​ ಪಾಂಡ್ಯಗೆ ನಾಯಕತ್ವ ನೀಡಿದ್ದ ಮುಂಬೈ ಇಂಡಿಯನ್ಸ್ ತಂಡದ ಯೋಜನೆ ಸಂಪೂರ್ಣವಾಗಿ ಬುಡಮೇಲಾಗಿದೆ. ಹೀಗಾಗಿ ಐಪಿಎಲ್ 17ನೇ ಆವೃತ್ತಿಯ (IPL 2024) 14 ಪಂದ್ಯಗಳಲ್ಲಿ 10 ಸೋಲು ಮತ್ತು ಕೇವಲ 4 ಗೆಲುವಿನೊಂದಿಗೆ 8 ಅಂಕಗಳೊಂದಿಗೆ ಅಭಿಯಾನ ಮುಗಿಸಿದೆ. ತವರಿನಲ್ಲಿ ನಡೆದ ಕೊನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿಯೂ 18 ರನ್​ಗಳ ಸೋಲಿಗೆ ಒಳಗಾಗಿದೆ. ಎರಡೂ ತಂಡಗಳಿಗೆ ಇದು ಕೊನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಗೆದ್ದಿರುವ ಲಕ್ನೊ ಸೂಪರ್ ಜೈಂಟ್ಸ್ ತಂಡ ಒಟ್ಟು 7 ಗೆಲುವಿನೊಂದಿಗೆ 14 ಅಂಕಗಳ ಸಮೇತ ಏಳನೇ ಸ್ಥಾನ ಪಡೆದುಕೊಂಡಿದೆ. ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಬ್ಯಾಟರ್​ಗಳು ಮತ್ತೊಂದು ಬಾರಿ ತಮ್ಮ ಅಸಮರ್ಥತೆಯನ್ನು ಪ್ರದರ್ಶಿಸಿ ಅತ್ಯಂತ ನಿರಾಶಾದಾಯಕ ಸೀಸನ್ ಅನ್ನು ಎದುರಿಸಿದರು.

ಇಲ್ಲಿನ ವಾಖೆಂಡೆ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಚೇಸಿಂಗ್ ಸುಲಭ ಎಂಬ ಯೋಜನೆಯೊಂದಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ ನಷ್ಟಕ್ಕೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಚೇಸಿಂಗ್ ಸುಲಭ ಎಂದುಕೊಂಡಿದ್ದ ಮುಂಬೈ ತಂಡಕ್ಕೆ ಮಧ್ಯದಲ್ಲಿ ಸುರಿದ ಮಳೆ ಅಡಚಣೆ ಮಾಡಿತು. ಏಕಾಏಕಿ ವಾತಾವರಣ ತಂಪುಗೊಂಡ ಕಾರಣ ಇಬ್ಬನಿ ಪರಿಣಾಮವನ್ನು ಅನುಭವಿಸಿ ಸುಲಭವಾಗಿ ಸ್ಕೋರ್ ಬಾರಿಸಿ ಗೆಲ್ಲುವ ಯೋಜನೆ ವಿಫಲಗೊಂಡಿತು.

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಮುಂಬೈ ತಂಡ ಅದ್ಭುತ ಆರಂಭ ಪಡೆಯಿತು. ರೋಹಿತ್ ಶರ್ಮಾ 38 ಎಸೆತಕ್ಕೆ 6 ರನ್ ಬಾರಿಸಿ ಮಿಂಚಿದರು. ಡೀವಾಲ್ಡ್​ ಬ್ರೇವಿಸ್​ 23 ರನ್ ಹೊಡೆದರು. ಈ ಜೋಡಿ 8. 4 ಓವರ್​ಗಳಲ್ಲಿ ಮೊದಲ ವಿಕೆಟ್​ಗೆ 84 ರನ್ ಬಾರಿಸಿ ಗೆಲುವಿನ ನಿರೀಕ್ಷೆ ಹುಟ್ಟಿಸಿತು. ಆದರೆ, ಆ ಬಳಿಕ ಮುಂಬೈ ತಂಡ ಬ್ಯಾಟಿಂಗ್ ವೈಫಲ್ಯ ಪ್ರದರ್ಶನಗೊಂಡಿತು. ಸೂರ್ಯಕುಮಾರ್ ಶೂನ್ಯಕ್ಕೆ ಔಟಾದರೆ ಇಶಾನ್ ಕಿಶನ್ 14 ರನ್ ಬಾರಿಸಿದರು. ಹಾರ್ದಿಕ್ ಪಾಂಡ್ಯ ಕೊಡುಗೆ ಕೇವಲ 16 ರನ್​. ನೆಹಲ್ ವದೇರಾ 1 ರನ್​ಗೆ ಔಟಾಗುವ ಮೂಲಕ ಮುಂಬೈ ಆಸೆ ಕಮರಿತು. ಏತನ್ಮದ್ಯೆ ಮಧ್ಯಮ ಕ್ರಮಾಂಕದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ನಮನ್​ ಧಿರ್ 28 ಎಸೆತಕ್ಎಕ 68 ರನ್ ಬಾರಿಸಿದರು. ಅದರೆ ಅವರಿಗೆ ಗೆಲುವು ತಂದು ಕೊಡಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

ಪೂರನ್ ಅಬ್ಬರ್​

ಅದಕ್ಕಿಂತ ಮೊದಲು ಬ್ಯಾಟ್ ಮಾಡಿದ ಲಕ್ನೊ ಪರ ಆರಂಭಿಕ ಬ್ಯಾಟರ್ ರಾಹುಲ್​ ಕಷ್ಟಪಟ್ಟು 55 ರನ್ ಬಾರಿಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ನಿಕೋಲಸ್​ ಪೂರನ್ 29 ಎಸೆತಗಳಿಗೆ 75 ರನ್​ ಬಾರಿಸಿ ದೊಡ್ಡ ಮೊತ್ತ ಪೇರಿಸಲು ನೆರವಾದರು. ಕನ್ನಡಿಗ ದೇವದತ್​ ಪಡಿಕ್ಕಲ್​ ಮತ್ತೊಂದ ಬಾರಿ ವಿಫಲಗೊಂಡು ಶೂನ್ಯಕ್ಕೆ ಔಟಾದರೆ ಸ್ಟೊಯ್ನಿಸ್ 28 ರನ್ ಚಚ್ಚಿದರು. ದೀಪಕ್​ ಹೂಡ 11 ರನ್ ಹೊಡೆದರೆ ಕೊನೆಯಲ್ಲಿ ಆಯುಷ್ ಬದೊನಿ 22 ರನ್​ ಔಟಾದರೆ. ಕೃಣಾಲ್ ಪಾಂಡ್ಯ 12 ರನ್​ಗೆ ಔಟಾದರು.

Continue Reading

ಕ್ರೀಡೆ

Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

Rohit Sharma: ಹಳೆ ಪರಿಸ್ಥಿತಿಯನ್ನು ತಪ್ಪಿಸಲು, ರೋಹಿತ್ ಶರ್ಮಾ ಕುಲಕರ್ಣಿ ಅವರೊಂದಿಗಿನ ಸಂಭಾಷಣೆಯ ಆಡಿಯೋವನ್ನು ರೆಕಾರ್ಡ್ ಮಾಡದಂತೆ ನೋಡಿಕೊಂಡರು. ಕ್ಯಾಮೆರಾವನ್ನು ನೋಡಿದ ಕೂಡಲೇ ರೋಹಿತ್ ಕ್ಯಾಮೆರಾಮನ್ ತಿರುಗಿ ಕೈಮುಗಿದು “ಆಡಿಯೋ ಬಂದ್​​ ಕರೋ (ಆಡಿಯೊ ಆಫ್ ಮಾಡಿ)” ಎಂದು ಕೋರಿಕೊಂಡಿದ್ದಾರೆ.

VISTARANEWS.COM


on

Rohit Sharma
Koo

ಮುಂಬಯಿ: ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಅವರು ತಮ್ಮ ಮಾಜಿ ರಾಜ್ಯ ತಂಡದ ಸಹ ಆಟಗಾರ ಧವಳ್ ಕುಲಕರ್ಣಿ ಅವರೊಂದಿಗಿನ ಸಂಭಾಷಣೆಯನ್ನು ರೆಕಾರ್ಡ್ ಮಾಡುತ್ತಿರುವ ಕ್ಯಾಮೆರಾಮನ್​ಗೆ ಆಡಿಯೊ ಆಫ್​ ಮಾಡಿ ಎಂದು ಕೋರಿಕೊಂಡ ವಿಡಿಯೊವೊಂದು ವೈರಲ್ ಆಗಿದೆ.

ಅಭಿಷೇಕ್ ನಾಯರ್ ಅವರೊಂದಿಗಿನ ಬ್ಯಾಟಿಂಗ್ ಸೂಪರ್​ಸ್ಟಾರ್​ ಅವರ ಪ್ರಾಮಾಣಿಕ ಸಂಭಾಷಣೆ ವೈರಲ್ ಆದ ಕೆಲವೇ ದಿನಗಳ ನಂತರ ಈ ಪ್ರತಿಕ್ರಿಯೆ ಬಂದಿದೆ. ಈಡನ್ ಗಾರ್ಡನ್ಸ್​​ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಪಂದ್ಯಕ್ಕೂ ಮೊದಲು ರೋಹಿತ್ ಶರ್ಮಾ ನಾಯರ್ ಅವರೊಂದಿಗೆ ಸಂವಾದ ನಡೆಸಿದರು.

ಭಾರತದ ಸ್ಟಾರ್ ಆಟಗಾರ ಯಾವುದೇ ವ್ಯಕ್ತಿ ಅಥವಾ ತಂಡದ ಹೆಸರನ್ನು ಉಲ್ಲೇಖಿಸದಿದ್ದರೂ, ಇತ್ತೀಚಿನ ದಿನಗಳಲ್ಲಿ ಮುಂಬೈ ಇಂಡಿಯನ್ಸ್ ಶಿಬಿರದಲ್ಲಿ ವಿಷಯಗಳು ಅನಾವರಣಗೊಂಡ ಬಗ್ಗೆ ಅವರು ತಮ್ಮ ನಿರಾಶೆಯನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಹಲವರು ನಂಬಿದ್ದರು. ಕೋಲ್ಕತಾ ನೈಟ್ ರೈಡರ್ಸ್ ಈ ವಿಡಿಯೋವನ್ನು ಡಿಲೀಟ್ ಮಾಡುವ ಮೊದಲು ತಮ್ಮ ಸಾಮಾಜಿಕ ಮಾಧ್ಯಮ ಪುಟಗಳಲ್ಲಿ ಪೋಸ್ಟ್ ಮಾಡಿತ್ತು.

ಏಕ್ ಏಕ್ ಚೀಜ್ ಚೇಂಜ್ ಹೋ ರಹಾ ಹೈ… . ವೋಹ್ ಉಂಕೆ ಉಪಾರ್ ಹೈ, ಮೈ ಯೆ ಸಬ್ ಪೆ ಧ್ಯಾನ್ ನಹೀ ಡೇಟಾ… (ಎಲ್ಲವೂ ಒಂದೊಂದಾಗಿ ಬದಲಾಗುತ್ತಿದೆ. ಅದು ಅವರ ಮೇಲೆ ಅವಲಂಬಿತವಾಗಿದೆ, ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ರೋಹಿತ್ ನಾಯರ್​ಗೆ ಹೇಳುತ್ತಿದ್ದರು.

ಇದನ್ನೂ ಓದಿ: Virat kohli : ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ! ಇಲ್ಲಿದೆ ವಿಡಿಯೊ

ಮತ್ತೆ ಇದೇ ರೀತಿಯ ಪರಿಸ್ಥಿತಿಯನ್ನು ತಪ್ಪಿಸಲು, ರೋಹಿತ್ ಶರ್ಮಾ ಕುಲಕರ್ಣಿ ಅವರೊಂದಿಗಿನ ಸಂಭಾಷಣೆಯ ಆಡಿಯೋವನ್ನು ರೆಕಾರ್ಡ್ ಮಾಡದಂತೆ ನೋಡಿಕೊಂಡರು. ಕ್ಯಾಮೆರಾವನ್ನು ನೋಡಿದ ಕೂಡಲೇ ರೋಹಿತ್ ಕ್ಯಾಮೆರಾಮನ್ ತಿರುಗಿ ಕೈಮುಗಿದು “ಆಡಿಯೋ ಬಂದ್​​ ಕರೋ (ಆಡಿಯೊ ಆಫ್ ಮಾಡಿ)” ಎಂದು ಕೋರಿಕೊಂಡಿದ್ದಾರೆ.

ಐಪಿಎಲ್ 2024: ರೋಹಿತ್ ಶರ್ಮಾ

ನಾಯಕತ್ವದ ಕರ್ತವ್ಯಗಳಿಂದ ಮುಕ್ತರಾದ ನಂತರ ರೋಹಿತ್ ಶರ್ಮಾ ದೊಡ್ಡ ಸ್ಕೋರ್ ಮಾಡುತ್ತಾರೆ ಎಂದು ಅನೇಕರು ನಿರೀಕ್ಷಿಸಿದ್ದರೆ, ಸ್ಟಾರ್ ಬ್ಯಾಟ್ಸ್ಮನ್ ಈ ಋತುವಿನಲ್ಲಿ ಮುಂದುವರಿಯಲು ಹೆಣಗಾಡುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಿರುವ 13 ಪಂದ್ಯಗಳಲ್ಲಿ ಕೇವಲ ಒಂದು ಬಾರಿ ಶತಕ ಬಾರಿಸಿ 50 ರನ್ ಗಡಿ ದಾಟಿದ್ದಾರೆ. ರೋಹಿತ್ 13 ಪಂದ್ಯಗಳಲ್ಲಿ 350ಕ್ಕಿಂತ ಕಡಿಮೆ ರನ್ ಗಳಿಸಿದ್ದಾರೆ.

ಐಪಿಎಲ್​​ ವೇದಿಕೆಯಲ್ಲಿ ಮಿಂಚಲು ಸಾಧ್ಯವಾಗದಿದ್ದರೂ, ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ರೋಹಿತ್ ದೊಡ್ಡ ಮೊತ್ತವನ್ನು ಗಳಿಸಲು ಎದುರು ನೋಡುತ್ತಿದ್ದಾರೆ. ಜೂನ್ 1 ರಿಂದ 29 ರವರೆಗೆ ನಡೆಯಲಿರುವ ಮಾರ್ಕ್ಯೂ ಈವೆಂಟ್ನಲ್ಲಿ ಅವರು ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.

Continue Reading

ಕ್ರೀಡೆ

Virat kohli : ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ! ಇಲ್ಲಿದೆ ವಿಡಿಯೊ

Virat Kohli: 2022 ರಲ್ಲಿ ನಾನು ನೇಪಾಳದಲ್ಲಿದ್ದಾಗ, ಮೂಲತಃ ಭಾರತದಿಂದ ಬಂದ ಅಪರಿಚಿತರೊಬ್ಬರು (ರಾಜಕೀಯ ಕಾರಣಗಳಿಂದಾಗಿ ಅವರು ಯಾವುದೇ ತೊಂದರೆಗೆ ಸಿಲುಕದಂತೆ ಅವರ ಹೆಸರನ್ನು ಹೇಳುವುದಿಲ್ಲ) ನನ್ನ ಕೆಲಸವನ್ನು ಶ್ಲಾಘಿಸಿದ್ದರು ಎಂದು ಹೇಳಿದ್ದಾರೆ.

VISTARANEWS.COM


on

Virat Kohli
Koo

ನವದೆಹಲಿ: ಪಾಕಿಸ್ತಾನದ ಪರ್ವತಾರೋಹಿ ಶೆಹ್ರೋಜ್ ಕಾಶಿಫ್ ಅವರೊಂದಿಗೆ ಸಂವಹನ ನಡೆಸಿದ್ದ ವೇಳೆ ಭಾರತ ತಂಡದ ಸ್ಟಾರ್ ಬ್ಯಾಟರ್​ ವಿರಾಟ್​ ಕೊಹ್ಲಿ (Virat kohli) ಭವಿಷ್ಯದಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡುವ ಭರವಸೆಯಿದೆ ಎಂದು ಹೇಳಿರುವ ವಿಡಿಯೊ ವೈರಲ್ ಆಗಿದೆ. ಕಾಶಿಫ್ 2021 ರಲ್ಲಿ ಕೆ 2 ಶಿಖರವನ್ನು ಏರಿದ ವಿಶ್ವದ ಯುವ ಪರ್ವತಾರೋಹಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೇ ವೇಳೆ ಅವರಿಗೆ ಭಾರತೀಯ ಕ್ರಿಕೆಟ್ ಸೂಪರ್​ಸ್ಟಾರ್ ಜತೆ ಅವರೊಂದಿಗೆ ಮಾತನಾಡುವ ಅವಕಾಶ ಅವರಿಗೆ ಸಿಕ್ಕಿತು. ಅವರು 2022 ರಲ್ಲಿ ನೇಪಾಳದಲ್ಲಿದ್ದಾಗ ಭಾರತೀಯ ಕ್ರಿಕೆಟ್ ತಂಡದ ಜತೆ ಮಾತನಾಡಿದ್ದರು. ಈ ವೇಳೆ ಕೊಹ್ಲಿ ಅವರಿಗೆ ಪಾಕ್​ಗೆ ಹೋಗುವ ಭರವಸೆ ನೀಡಿದ್ದರು.

ಕಾಶಿಫ್ ವಿರಾಟ್ ಕೊಹ್ಲಿಯೊಂದಿಗೆ ಸಂಭಾಷಣೆ ನಡೆಸುವ ಬಯಕೆ ವ್ಯಕ್ತಪಡಿಸಿದ್ದರು. ಅಂತೆಯೇ ಪಾಕಿಸ್ತಾನದ ಪರ್ವತಾರೋಹಿ ಭಾರತದ ಮಾಜಿ ನಾಯಕನೊಂದಿಗೆ ಸಂಭಾಷಣೆ ನಡೆಸಿದ್ದರು ಅದರ ಕ್ಲಿಪ್ ಅನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

2022 ರಲ್ಲಿ ನಾನು ನೇಪಾಳದಲ್ಲಿದ್ದಾಗ, ಮೂಲತಃ ಭಾರತದಿಂದ ಬಂದ ಅಪರಿಚಿತರೊಬ್ಬರು (ರಾಜಕೀಯ ಕಾರಣಗಳಿಂದಾಗಿ ಅವರು ಯಾವುದೇ ತೊಂದರೆಗೆ ಸಿಲುಕದಂತೆ ಅವರ ಹೆಸರನ್ನು ಹೇಳುವುದಿಲ್ಲ) ನನ್ನ ಕೆಲಸವನ್ನು ಶ್ಲಾಘಿಸಿದ್ದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: Milind Kumar : ಆರ್​ಸಿಬಿಯ ಮಾಜಿ ಆಟಗಾರ ಕ್ರಿಕೆಟ್​ನಿಂದ ನಿವೃತ್ತಿ

ಅವರು ಕ್ರಿಕೆಟ್ ತಂಡದೊಂದಿಗೆ ಸಂಪರ್ಕ ಹೊಂದಿದ್ದರು. ಆದ್ದರಿಂದ ನಾನು ವಿರಾಟ್ ಕೊಹ್ಲಿಯೊಂದಿಗೆ ಮಾತನಾಡುವ ಬಯಕೆಯನ್ನು ತಮಾಷೆಯಾಗಿ ವ್ಯಕ್ತಪಡಿಸಿದೆ. ನನಗೆ ಆಶ್ಚರ್ಯವಾಗುವಂತೆ ಅವರು ನನ್ನ ಪರವಾಗಿ ಕೊಹ್ಲಿಗೆ ಸಂದೇಶ ಕಳುಹಿಸಿದ್ದರು. ವೀಡಿಯೊ ಕರೆ ಮೂಲಕ ಅವರೊಂದಿಗೆ ಚಾಟ್ ಮಾಡಲು ನನಗೆ ಅವಕಾಶ ಸಿಕ್ಕಿತು. ಒಬ್ಬ ಪಾಕಿಸ್ತಾನಿಯಾಗಿ, ಕೊಹ್ಲಿಯನ್ನು ಈ ಯುಗದ ಶ್ರೇಷ್ಠ ಬ್ಯಾಟ್ಸ್ಮನ್ ಎಂದು ನಾನು ಹೆಮ್ಮೆಯಿಂದ ಒಪ್ಪಿಕೊಳ್ಳುತ್ತೇನೆ ಎಂದು ಅವರು ಹೇಳಿದರು.

ವೀಡಿಯೊದಲ್ಲಿ, ವಿರಾಟ್ ಕೊಹ್ಲಿ ಕಾಶಿಫ್ಗೆ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುವ ಭರವಸೆಯಿದೆ ಎಂದು ಹೇಳಿದ್ದಾರೆ.

ನಿಮ್ಮ ಕುಟುಂಬಕ್ಕೆ ಮತ್ತು ನಿಮ್ಮ ಎಲ್ಲಾ ಸ್ನೇಹಿತರಿಗೆ ನನ್ನ ನಮಸ್ಕಾರಗಳನ್ನು ತಿಳಿಸಿ. ನಾವು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇವೆ ಎಂದು ಆಶಿಸುತ್ತೇನೇ “ಎಂದು ಭಾರತದ ವಿರಾಟ್ ಕೊಹ್ಲಿ ಹೇಳಿದ್ದರು.

ವಿರಾಟ್ ಕೊಹ್ಲಿ ಇನ್ನೂ ಪಾಕಿಸ್ತಾನಕ್ಕೆ ಭೇಟಿ ನೀಡಿಲ್ಲ

ವಿರಾಟ್ ಕೊಹ್ಲಿ ವಿಶ್ವದ ಎಲ್ಲಾ ಪ್ರಮುಖ ಕ್ರಿಕೆಟ್ ರಾಷ್ಟ್ರಗಳಲ್ಲಿ ಆಡಿದ್ದರೂ, ರಾಜಕೀಯ ಕಾರಣಗಳಿಂದಾಗಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಸ್ಥಗಿತಗೊಳಿಸಿರುವುದರಿಂದ ಅವರು ಪಾಕಿಸ್ತಾನದಲ್ಲಿ ಇನ್ನೂ ಒಂದು ಪಂದ್ಯವನ್ನು ಆಡಿಲ್ಲ. 2008ರಲ್ಲಿ ಜೂನ್-ಜುಲೈನಲ್ಲಿ ನಡೆದ ಏಷ್ಯಾಕಪ್​ಗಾಗಿ ಭಾರತ ಕೊನೆಯ ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿತ್ತು.

ಕಾಕತಾಳೀಯವೆಂಬಂತೆ, ವಿರಾಟ್ ಕೊಹ್ಲಿ ಒಂದು ತಿಂಗಳ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು ಮತ್ತು ಭಾರತೀಯ ಆಟಗಾರನಾಗಿ ಇನ್ನೂ ಪಾಕಿಸ್ತಾನಕ್ಕೆ ಭೇಟಿ ನೀಡಿಲ್ಲ. ಆದಾಗ್ಯೂ, ಅವರು ಐಸಿಸಿ ಸ್ಪರ್ಧೆಗಳು ಮತ್ತು ಏಷ್ಯಾ ಕಪ್​ಗಳಲ್ಲಿ ಪಾಕಿಸ್ತಾನವನ್ನು ಹಲವಾರು ಬಾರಿ ಎದುರಿಸಿದ್ದಾರೆ. ಅವರ ವಿರುದ್ಧ ಅದ್ಭುತ ದಾಖಲೆಯನ್ನು ಹೊಂದಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಪಾಕಿಸ್ತಾನ ವಿರುದ್ಧ ಸೆಣಸಲಿದ್ದಾರೆ.

Continue Reading
Advertisement
Crime News
ಕ್ರೈಂ9 mins ago

Crime News: ಪತ್ನಿಯನ್ನು ಕೊಂದು ಶವದ ಫೋಟೊ ಸಂಬಂಧಿಕರಿಗೆ ಕಳುಹಿಸಿ ನೇಣಿಗೆ ಶರಣಾದ ಪತಿ; ಅನಾಥವಾಯ್ತು ಹೆಣ್ಣು ಮಗು

RCB vs CSK
ಕ್ರೀಡೆ13 mins ago

RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

sarjapura boy murder case
ಕ್ರೈಂ44 mins ago

Murder Case: ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

Skin Care Tips
ಆರೋಗ್ಯ60 mins ago

Skin Care Tips: ಬಿಸಿಲಿನಿಂದ ಚರ್ಮ ಕಪ್ಪಾಗಿದೆಯಾ? ಇಲ್ಲಿದೆ ಸರಳ ಮನೆಮದ್ದು

karnataka Weather Forecast
ಮಳೆ1 hour ago

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Food Tips Kannada
ಆರೋಗ್ಯ2 hours ago

Food Tips Kannada: ಶಕ್ತಿವರ್ಧಕಗಳಲ್ಲ, ನಿಮ್ಮ ಶಕ್ತಿಯನ್ನೇ ಬಸಿದು ತೆಗೆಯುವ ಆಹಾರಗಳಿವು!

World Aids Vaccine Day
ದೇಶ3 hours ago

World Aids Vaccine Day: ಇಂದು ವಿಶ್ವ ಏಡ್ಸ್ ಲಸಿಕೆ ದಿನ; ಈ ದಿನದ ಹಿನ್ನೆಲೆ ಏನು?

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರ ಬೆನ್ನ ಹಿಂದೆ ನಡೆಯುತ್ತೆ ಪಿತೂರಿ..ಎಚ್ಚರವಾಗಿರಿ

ipl 2024
ಪ್ರಮುಖ ಸುದ್ದಿ7 hours ago

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

Anjali Murder Case
ಕರ್ನಾಟಕ8 hours ago

Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ12 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌