RCB: ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲಿಗೆ ವಿಜಯ್​ ಮಲ್ಯ ಕಾರಣವಂತೆ! - Vistara News

ಕ್ರೀಡೆ

RCB: ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲಿಗೆ ವಿಜಯ್​ ಮಲ್ಯ ಕಾರಣವಂತೆ!

RCB: ನೆಟ್ಟಿಗರು ಮಲ್ಯ ಶುಭ ಹಾರೈಕೆಯಿಂದಲೇ ಆರ್​ಸಿಬಿ ಸೋಲು ಕಂಡಿದೆ ಎಂದು ಹೇಳಲಾರಂಭಿಸಿದ್ದಾರೆ. ಮಲ್ಯ ಹಾರೈಕೆಗೂ ಮುನ್ನ ಆರ್​​ಸಿಬಿ ಉತ್ತಮವಾಗಿ ಆಡುತ್ತಿತ್ತು. ಮಲ್ಯ ಹಾರೈಕೆಯಿಂದ ಆರ್​ಸಿಬಿ ಆಟಗಾರರಿಗೆ ಹಳೆಯ ಪಾರ್ಟಿಗಳು ನೆನೆಪಿಗೆ ಬಂದಿರಬೇಕು ಇದೇ ಗುಂಗಿನಲ್ಲಿ ಪಂದ್ಯ ಸೋತುರು ಎಂದು ಕಾಲೆಳೆದಿದ್ದಾರೆ.

VISTARANEWS.COM


on

RCB
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬುಧವಾರ ರಾತ್ರಿ ನಡೆದ ಐಪಿಎಲ್​ನ(IPL 2024) ಎಲಿಮಿನೇಟರ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB) ತಂಡ ರಾಜಸ್ಥಾನ್​(Rajasthan Royals) ವಿರುದ್ಧ 4 ವಿಕೆಟ್​ ಅಂತರದ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಈ ಸೋಲಿಗೆ ತಂಡದ ಮಾಜಿ ಮಾಲಿಕ ವಿಜಯ್​ ಮಲ್ಯ(Vijay Mallya) ಎಂದು ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ.

ಹೌದು, ಆರ್​ಸಿಬಿ ತಂಡ ಆರಂಭಿಕ ಹಂತದಲ್ಲಿ ಸತತವಾಗಿ ಸೋಲಿಗೆ ಸಿಲುಕಿ ಇನ್ನೇನು ಟೂರ್ನಿಯಿಂದ ಹೊರಬೀಳುತ್ತದೆ ಎನ್ನುವಷ್ಟರಲ್ಲಿ ಪುಟಿದೆದ್ದು ಸತತವಾಗಿ 6 ಪಂದ್ಯ ಗೆದ್ದು ಅಚ್ಚರಿ ಎಂಬಂತೆ ಪ್ಲೇ ಆಫ್​ ಪ್ರವೇಶಿಸಿತ್ತು. ಇದೇ ಖುಷಿಯಲ್ಲಿ ವಿಜಯ್​ ಮಲ್ಯ ತಂಡಕ್ಕೆ ಶುಭ ಹಾರೈಸಿದ್ದರು.

“ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ ಕೊಟ್ಟಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಂಡಕ್ಕೆ ಹೃದಯ ಪೂರಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸತತ ಸೋಲುಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿರುವುದು ಅದ್ಭುತ. ಟ್ರೋಫಿ ಗೆಲ್ಲುವ ಕಡೆಗೆ ಆರ್​ಸಿಬಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಬೇಕು” ಎಂದು ಮುಂದಿನ ಪಂದ್ಯಗಳಿಗೂ ಶುಭ ಹಾರೈಸಿದ್ದರು.

ಎಲಿಮಿನೇಟರ್​ ಪಂದ್ಯ ಆರಂಭಕ್ಕೂ ಕೂಡ ಮಲ್ಯ ಟ್ವೀಟ್​ ಮೂಲಕ ಶುಭ ಹಾರೈಸಿ, ‘ನಾನು ಆರ್‌ಸಿಬಿ ಫ್ರಾಂಚೈಸಿಗಾಗಿ ಬಿಡ್ ಮಾಡಿದಾಗ, ವಿರಾಟ್‌ ಕೊಹ್ಲಿಗೆ ಬಿಡ್ ಮಾಡಿದಾಗ, ನಾನು ಇದಕ್ಕಿಂತ ಉತ್ತಮ ಆಯ್ಕೆಗಳನ್ನು ಮಾಡಲು ಸಾಧ್ಯವಿಲ್ಲ ಎಂದು ನನ್ನ ಆಂತರಾತ್ಮ ಹೇಳಿತ್ತು. ಈ ಬಾರಿ ಐಪಿಎಲ್ ಟ್ರೋಫಿ ಗೆಲ್ಲಲು ಆರ್‌ಸಿಬಿಗೆ ಉತ್ತಮ ಅವಕಾಶವಿದೆ ಎಂದು ನನ್ನ ಮನಸ್ಸು ಹೇಳುತ್ತಿದೆ. ತಂಡಕ್ಕೆ ಶುಭವಾಗಲಿ’ ಎಂದು ಹಾರೈಸಿದ್ದರು.

ಇದನ್ನೂ ಓದಿ Virat Kohli: ಅಂದು ವಿಶ್ವಕಪ್​ನಲ್ಲಿ, ಇಂದು ಐಪಿಎಲ್​ನಲ್ಲಿ ವಿಕೆಟ್​ ಬೇಲ್ಸ್​ ಹಾರಿಸಿ ಬೇಸರದಿಂದ ಮೈದಾನ ತೊರೆದ ಕೊಹ್ಲಿ

ಇದೀಗ ನೆಟ್ಟಿಗರು ಮಲ್ಯ ಶುಭ ಹಾರೈಕೆಯಿಂದಲೇ ಆರ್​ಸಿಬಿ ಸೋಲು ಕಂಡಿದೆ ಎಂದು ಹೇಳಲಾರಂಭಿಸಿದ್ದಾರೆ. ಮಲ್ಯ ಹಾರೈಕೆಗೂ ಮುನ್ನ ಆರ್​​ಸಿಬಿ ಉತ್ತಮವಾಗಿ ಆಡುತ್ತಿತ್ತು. ಮಲ್ಯ ಹಾರೈಕೆಯಿಂದ ಆರ್​ಸಿಬಿ ಆಟಗಾರರಿಗೆ ಹಳೆಯ ಪಾರ್ಟಿಗಳು ನೆನೆಪಿಗೆ ಬಂದಿರಬೇಕು ಇದೇ ಗುಂಗಿನಲ್ಲಿ ಪಂದ್ಯ ಸೋತುರು ಎಂದು ಕಾಲೆಳೆದಿದ್ದಾರೆ. ಮಲ್ಯ ಅವರು ಆರ್​ಸಿಬಿಯ ಮಾಲಿಕರಾಗಿದ್ದಾಗ ಪಂದ್ಯ ಗೆದ್ದ ಬಳಿಕ ಆಟಗಾರರಿಗೆ ಫುಲ್​ ಪಾರ್ಟಿ ನೀಡುತ್ತಿದ್ದರು. ಶುಭ ಹಾರೈಸದೇ ಇದ್ದಿದ್ದರೆ ಆಟಗಾರರಿಗೆ ಹಳೆಯ ನೆನಪು ಮತ್ತೆ ಮರುಕಳಿಸುತ್ತಿರಲ್ಲಿ. ಜತೆಗೆ ಪಂದ್ಯವನ್ನೂ ಕೂಡ ಗೆಲ್ಲುತ್ತಿದ್ದರು ಎಂದು ಕಮೆಂಟ್​ ಮಾಡಿದ್ದಾರೆ. ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಆಟಗಾರ ತುಷಾರ್‌ ದೇಶ್‌ಪಾಂಡೆ ಕೂಡ ಆರ್‌ಸಿಬಿಯನ್ನು ಟ್ರೋಲ್​ ಮಾಡಿದ್ದಾರೆ.

ಚೆನ್ನೈ ಸೂಪರ್​ ಕಿಂಗ್ಸ್​ನ ಫ್ಯಾನ್ಸ್ ಪೇಜ್‌ವೊಂದು ಬೆಂಗಳೂರು ದಂಡು ರೈಲ್ವೇ ನಿಲ್ದಾಣದ (Bangalore cant) ಫೋಟೋವನ್ನು ಹಂಚಿಕೊಂಡಿದೆ. ಈ ಮೂಲಕ ಬೆಂಗಳೂರು ತಂಡದಿಂದ ಕಪ್‌ ಗೆಲ್ಲಲು ಸಾಧ್ಯವಿಲ್ಲ ಎಂಬರ್ಥದಲ್ಲಿ ಈ ಮೀಮ್ಸ್ ಅನ್ನು ಸಿಎಸ್‌ಕೆ ಫ್ಯಾನ್ ಪೇಜ್‌ ಹಂಚಿಕೊಂಡಿದೆ. ಈ ಮೀಮ್ಸ್‌ ಅನ್ನು ತುಷಾರ್‌ ದೇಶ್‌ಪಾಂಡೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯ ಸ್ಟೋರಿಯನ್ನು ಹಂಚಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

Pakistan Cricket Team: ಪಾಕ್​ ಮಾಧ್ಯಮ ವರದಿಗಳ ಪ್ರಕಾರ ಮಾಜಿ ಆಟಗಾರರು ಹಾಗೂ ಪಿಸಿಬಿ ಸದಸ್ಯರು ಆಟಗಾರರ ಸಂಬಳ ಕಡಿತಗೊಳಿಸಲು ಪಾಕ್​ ಕ್ರಿಕೆಟ್​ ಮಂಡಳಿಯ ಅಧ್ಯಕ್ಷ ಮೊಹ್ಸಿನ್​ ನಖ್ವಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

VISTARANEWS.COM


on

Pakistan Cricket Team
Koo

ಇಸ್ಲಾಮಾಬಾದ್‌: ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ(T20 World Cup 2024) ಕಳಪೆ ಪ್ರದರ್ಶನ ತೋರುವ ಮೂಲಕ ಟೂರ್ನಿಯಿಂದ ಹೊರಬಿದ್ದು ಆಘಾತ ಕಂಡಿರುವ ಪಾಕಿಸ್ತಾನ ತಂಡದ(Pakistan Cricket Team) ಆಟಗಾರರಿಗೆ ಮತ್ತೊಂದು ಶಾಕ್​ ಎದುರಾಗಿದೆ. ಆಟಗಾರರ ವಾರ್ಷಿಕ ಸಂಭಾವನೆಯಲ್ಲಿ ಕಡಿತ ಮಾಡಲು ಪಾಕ್​ ಕ್ರಿಕೆಟ್​ ಮಂಡಳಿ(PCB) ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಮೂರು ಪಂದ್ಯಗಳನ್ನು ಆಡಿರುವ ಪಾಕಿಸ್ತಾನವು ಅಮೆರಿಕ ಹಾಗೂ ಭಾರತದ ವಿರುದ್ಧ ಹೀನಾಯವಾಗಿ ಸೋಲನುಭವಿಸಿದೆ. ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಕಾರಣ 2 ಪಾಯಿಂಟ್‌ಗಳನ್ನು ಪಡೆದಿದೆ. ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವು ಮಳೆಯಿಂದ ರದ್ದಾದ ಕಾರಣ ಅಮೆರಿಕದ ಅಂಕ 5ಕ್ಕೆ ಏರಿಕೆಯಾಯಿತು. ಇದರಿಂದಾಗಿ ಐರ್ಲೆಂಡ್‌ ವಿರುದ್ಧ ಪಾಕ್‌ ಗೆದ್ದರೂ ಯಾವುದೇ ಉಪಯೋಗವಿಲ್ಲದಂತಾಗಿದೆ. ಟೂರ್ನಿಯಿಂದ ಹೊರಬಿದ್ದ ಪಾಕ್​ ತಂಡದ ವಿರುದ್ಧ ಮಾಜಿ ಆಟಗಾರರು ಭಾರೀ ಟೀಕೆ ವ್ಯಕ್ತಪಡಿಸಿದ್ದಾರೆ. ಈ ರೀತಿ ಪ್ರದರ್ಶನ ತೋರುದಕ್ಕಿಂತ ಟೂರ್ನಿಯಲ್ಲಿ ಪಾಲ್ಗೊಳ್ಳದೇ ಇದ್ದಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ.

ಪಾಕ್​ ಮಾಧ್ಯಮ ವರದಿಗಳ ಪ್ರಕಾರ ಮಾಜಿ ಆಟಗಾರರು ಹಾಗೂ ಪಿಸಿಬಿ ಸದಸ್ಯರು ಆಟಗಾರರ ಸಂಬಳ ಕಡಿತಗೊಳಿಸಲು ಪಾಕ್​ ಕ್ರಿಕೆಟ್​ ಮಂಡಳಿಯ ಅಧ್ಯಕ್ಷ ಮೊಹ್ಸಿನ್​ ನಖ್ವಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಪಾಕ್​ ಕ್ರಿಕೆಟ್​ ಮಂಡಳಿ ಕೂಡ ಈ ವಿಚಾರವನ್ನು ಗಂಭಿರವಾಗಿ ಪರಿಗಣಿಸಿದ್ದು ಉನ್ನತ ಮಟ್ಟದ ಸಭೆ ನಡೆಸಿ ಆಟಗಾರರ ಕೇಂದ್ರೀಯ ಗುತ್ತಿಗೆಯನ್ನು ಮರು ಪರಿಶೀಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ Pakistan Cricket Board: ಟಿ20 ವಿಶ್ವಕಪ್​ನಿಂದ ಹೊರಬಿದ್ದ ಬೆನ್ನಲ್ಲೇ ಹೊಸ ನಿಯಮ ಜಾರಿಗೆ ತಂದ ಪಾಕ್​ ಕ್ರಿಕೆಟ್​ ಮಂಡಳಿ

ವೇತನ ಮಾತ್ರವಲ್ಲದೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನಿಯಮವನ್ನು ಜಾರಿಗೆ ತೆರಲಿದೆ ಎಂದು ತಿಳಿದುಬಂದಿದೆ. ಈ ನಿಯಮದ ಪ್ರಕಾರ ದೇಶಿ ಕ್ರಿಕೆಟ್‌ ಹಾಗೂ ಕೇಂದ್ರೀಯ ಗುತ್ತಿಗೆಗೆ ಸಹಿ ಮಾಡಿರುವ ಎಲ್ಲ ಪಾಕ್​ ಆಟಗಾರರು ವರ್ಷವೊಂದರಲ್ಲಿ ಪಾಕಿಸ್ತಾನ ಸೂಪರ್‌ ಲೀಗ್‌ (ಪಿಎಸ್‌ಎಲ್‌) ಹೊರತುಪಡಿಸಿ, ವಿದೇಶಗಳಲ್ಲಿ ನಡೆಯುವ ಎರಡು ಟಿ20 ಲೀಗ್‌ಗಳಲ್ಲಿ ಮಾತ್ರ ಭಾಗವಹಿಸಬಹುದಾಗಿದೆ.

ಪಾಕ್​ ತಂಡದ ವಿರುದ್ಧ ದೇಶದ್ರೋಹದ ಕೇಸ್‌


ನಿರಾಸದಾಯಕ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡದ ವಿರುದ್ಧ ಪಾಕ್‌ನ ಗುಜ್ರಾನ್ವಾಲಾ ನಗರದ ವಕೀಲರೊಬ್ಬರು ದೇಶದ್ರೋಹ ಕೇಸ್‌ ದಾಖಲಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಕೇಸ್‌ನ ಬಗ್ಗೆ ಜೂನ್​ 21ಕ್ಕೆ ಮುನ್ನ ವರದಿ ಸಲ್ಲಿಸುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ ಎಂದು ತಿಳಿದುಬಂದಿದೆ. ಪಾಕ್‌ ತಂಡದ ಕಳಪೆ ಪ್ರದರ್ಶನದಿಂದ ಹಣ ವ್ಯರ್ಥವಾಗುತ್ತಿದೆ ಮತ್ತು ರಾಷ್ಟ್ರದ ನಂಬಿಕೆಗೆ ದ್ರೋಹ ಉಂಟಾಗಿದೆ. ಆಟಗಾರರು ದೇಶದ ಬಗ್ಗೆ ಗೌರವಕ್ಕಿಂತ ಆರ್ಥಿಕ ಲಾಭಕ್ಕೆ ಆದ್ಯತೆ ನೀಡಿದ್ದಾರೆ ಎಂದು ಅರ್ಜಿದಾರ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾಗಿ ವರದಿಯಾಗಿದೆ.

Continue Reading

ಕ್ರೀಡೆ

Grand Prix 2024 Competition: ಬೆಳ್ಳಿ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್

Grand Prix 2024 Competition: 2024ರ ಪ್ಯಾರಿಸ್ ಒಲಿಂಪಿಕ್ಸ್‌ಗಾಗಿ ಬಾಕ್ಸಿಂಗ್‌ನಲ್ಲಿ ಭಾರತ ಆರು ಕೋಟಾಗಳನ್ನು ಪಡೆದಿದ್ದು, ಅಮಿತ್ ಪಂಗಲ್ (51 ಕೆಜಿ), ನಿಶಾಂತ್ ದೇವ್ (71 ಕೆಜಿ), ನಿಖತ್ ಜರೀನ್ (50 ಕೆಜಿ), ಪ್ರೀತಿ ಪವಾರ್ (54 ಕೆಜಿ), ಜೈಸ್ಮಿನ್ ಲಂಬೋರಿಯಾ (57 ಕೆಜಿ), ಲೊವ್ಲಿನಾ ಬೊರ್ಗೊಹೈನ್ (75 ಕೆಜಿ) ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

VISTARANEWS.COM


on

Grand Prix 2024 Competition
Koo

ನವದೆಹಲಿ: ಟೋಕಿಯೊ ಒಲಿಂಪಿಕ್ ಪದಕ ವಿಜೇತೆ ಭಾರತೀಯ ಬಾಕ್ಸರ್(Indian boxer Lovlina Borgohain) ಲವ್ಲಿನಾ ಬೊರ್ಗೊಹೈನ್(Lovlina Borgohain) ಅವರು ಪ್ಯಾರಿಸ್​ ಒಲಿಂಪಿಕ್ಸ್(Paris Olympics 2024)​ ಟೂರ್ನಿಗೂ ಮುನ್ನ ಶ್ರೇಷ್ಠ ಪ್ರದರ್ಶನ ತೋರಿದ್ದಾರೆ. ಜೆಕ್ ಗಣರಾಜ್ಯದಲ್ಲಿ ನಡೆದ ಗ್ರ್ಯಾಂಡ್ ಪ್ರಿಕ್ಸ್ 2024 ಸ್ಪರ್ಧೆಯಲ್ಲಿ(Grand Prix 2024 Competition) ಬೆಳ್ಳಿ ಪದಕವನ್ನು ಜಯಿಸಿದ್ದಾರೆ. ಅವರ ಈ ಪ್ರದರ್ಶನ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಭರವಸೆಯನ್ನು ಹೆಚ್ಚಿಸುವಂತೆ ಮಾಡಿದೆ.

ಮಹಿಳಾ ವಿಭಾಗದ ಫೈನಲ್​ ಪಂದ್ಯದಲ್ಲಿ ಲವ್ಲಿನಾ ಚೀನಾದ ಲಿ ಕಿಯಾನ್ ವಿರುದ್ಧ ತೀವ್ರ ಹೋರಾಟ ನಡೆಸಿದರೂ ಕೂಡ 2-3 ಅಂಕಗಳ ಅಂತರದಿಂದ ಸೋತರು. ಇದಕ್ಕೂ ಮುನ್ನ ನಡೆದ ರೌಂಡ್​ ರಾಬಿನ್​ ಸುತ್ತಿನಲ್ಲಿ ಲವ್ಲಿನಾ ಇಂಗ್ಲೆಂಡ್‌ನ ಚಾಂಟಲ್ ರೀಡ್ ವಿರುದ್ಧ 3-2 ರಿಂದ ತನ್ನ ಮೊದಲ ಪಂದ್ಯವನ್ನು ಗೆದಿದ್ದರು. ಎರಡನೇ ಪಂದ್ಯದಲ್ಲಿ ಸೋಲು ಕಂಡಿದ್ದರು. 2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ವೆಲ್ಟರ್‌ವೇಟ್ ವಿಭಾಗದಲ್ಲಿ ಲವ್ಲಿನಾ ಕಂಚಿನ ಪದಕವನ್ನು ಗೆದ್ದಿದ್ದರು.

2024ರ ಪ್ಯಾರಿಸ್ ಒಲಿಂಪಿಕ್ಸ್‌ಗಾಗಿ ಬಾಕ್ಸಿಂಗ್‌ನಲ್ಲಿ ಭಾರತ ಆರು ಕೋಟಾಗಳನ್ನು ಪಡೆದಿದ್ದು, ಅಮಿತ್ ಪಂಗಲ್ (51 ಕೆಜಿ), ನಿಶಾಂತ್ ದೇವ್ (71 ಕೆಜಿ), ನಿಖತ್ ಜರೀನ್ (50 ಕೆಜಿ), ಪ್ರೀತಿ ಪವಾರ್ (54 ಕೆಜಿ), ಜೈಸ್ಮಿನ್ ಲಂಬೋರಿಯಾ (57 ಕೆಜಿ), ಲೊವ್ಲಿನಾ ಬೊರ್ಗೊಹೈನ್ (75 ಕೆಜಿ) ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

ಟೋಕಿಯೊ 2020 ರ ಕಂಚಿನ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್ (ಮಹಿಳೆಯರ 75 ಕೆಜಿ), ಎರಡು ಬಾರಿಯ ವಿಶ್ವ ಚಾಂಪಿಯನ್ ನಿಖತ್ ಜರೀನ್ (ಮಹಿಳೆಯರ 50 ಕೆಜಿ) ಮತ್ತು ಪ್ರೀತಿ ಪವಾರ್ (ಮಹಿಳೆಯರ 54 ಕೆಜಿ) ಕಳೆದ ವರ್ಷ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ತಮ್ಮ ಒಲಿಂಪಿಕ್ಸ್​ ಕೋಟಾಗಳನ್ನು ಗೆದ್ದಿದ್ದರು.

ಇದನ್ನೂ ಓದಿ Euro 2024: ಕ್ರೊವೇಷಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಸ್ಪೇನ್

ಚಿನ್ನ ಗೆದ್ದ ಬಾಕ್ಸರ್​ಗಳಿಗೆ ಭಾರೀ ನಗದು ಪ್ರಶಸ್ತಿ ಘೋಷಣೆ


ಕೆಲವು ತಿಂಗಳ ಹಿಂದೆ ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡುವುದಾಗಿ ಪ್ರಕಟಿಸಿತ್ತು. ಇದೀಗ ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (International Boxing Association) ಕೂಡ ಮಹತ್ವದ ನಿರ್ಧಾರ ಕೈಗೊಂಡಿದ್ದು, ಚಿನ್ನ ಗೆಲ್ಲುವ ಪ್ರತಿಯೊಬ್ಬ ಬಾಕ್ಸರ್​ಗಳಿಗೆ 41.68 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಜತೆಗೆ ಕೋಚ್‌, ರಾಷ್ಟ್ರೀಯ ತಂಡಗಳಿಗೆ 10 ಲಕ್ಷ ನೀಡುವುದಾಗಿಯೂ ಪ್ರಕಟಿಸಿದೆ. ಆದರೆ, 2020ರ ಟೋಕಿಯೊ ಒಲಿಂಪಿಕ್ಸ್‌ ಬಾಕ್ಸಿಂಗ್ ಸ್ಪರ್ಧೆಗಳನ್ನು ಐಬಿಎ(IBA) ನೆರವಿಲ್ಲದೇ ಐಒಸಿಯೇ ಸಂಘಟಿಸಿತ್ತು. ಕ್ರೀಡಾ ಸಂಸ್ಥೆಗಳು ನೀಡುವ ಬಹುಮಾನ ಹಣಕ್ಕೂ ಐಒಸಿ ಸಮ್ಮತಿ ನೀಡಿಲ್ಲ.

ಪ್ಯಾರಿಸ್​ ಒಲಿಂಪಿಕ್ಸ್​ ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

Continue Reading

ಕ್ರೀಡೆ

David Wiese Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಡೇವಿಡ್ ವೈಸ್

David Wiese Retirement: ಡೇವಿಡ್ ವೈಸ್ ಅವರು ತಮ್ಮ ಕ್ರಿಕೆಟ್​ ವೃತ್ತಿ ಜೀವನ ಆರಂಭಿಸಿದ್ದು ದಕ್ಷಿಣ ಆಫ್ರಿಕಾ ತಂಡದ ಪರ ಆಡುವ ಮೂಲಕ. 2021ರಲ್ಲಿ ನಮೀಬಿಯಾ ತಂಡ ಸೇರಿದ್ದರು. ಒಟ್ಟು 5 ವರ್ಷಗಳ ಕಾಲ ನಮೀಬಿಯಾ ತಂಡವನ್ನು ಪ್ರತಿನಿಧಿಸಿದ್ದಾರೆ. 2021ರ ಟಿ20 ವಿಶ್ವಕಪ್‌ನಲ್ಲಿ ಆಡುವ ಮೂಲಕ ನಮೀಬಿಯಾ ತಂಡದ ಪರ ಪಾದಾರ್ಪಣೆ ಮಾಡಿದ್ದರು.

VISTARANEWS.COM


on

David Wiese Retirement
Koo

ನ್ಯೂಯಾರ್ಕ್​: ನಮೀಬಿಯಾ(Namibia allrounder David Wiese) ತಂಡದ ಅನುಭವಿ ಆಟಗಾರ ಡೇವಿಡ್ ವೈಸ್(David Wiese) ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ(David Wiese Retirement) ಹೇಳಿದ್ದಾರೆ. ಶನಿವಾರ ರಾತ್ರಿ ನಡೆದ ಇಂಗ್ಲೆಂಡ್​ ವಿರುದ್ಧದ ಟಿ20 ವಿಶ್ವಕಪ್​ನ ಅಂತಿಮ ಲೀಗ್​ ಪಂದ್ಯದಲ್ಲಿ ಆಡಿದ ಬಳಿಕ ಡೇವಿಡ್ ವೈಸ್ ತಮ್ಮ ನಿವೃತ್ತಿ ಘೋಷಿಸಿದರು.

ಡೇವಿಡ್ ವೈಸ್ ಅವರು ತಮ್ಮ ಕ್ರಿಕೆಟ್​ ವೃತ್ತಿ ಜೀವನ ಆರಂಭಿಸಿದ್ದು ದಕ್ಷಿಣ ಆಫ್ರಿಕಾ ತಂಡದ ಪರ ಆಡುವ ಮೂಲಕ. 2021ರಲ್ಲಿ ನಮೀಬಿಯಾ ತಂಡ ಸೇರಿದ್ದರು. ಒಟ್ಟು 5 ವರ್ಷಗಳ ಕಾಲ ನಮೀಬಿಯಾ ತಂಡವನ್ನು ಪ್ರತಿನಿಧಿಸಿದ್ದಾರೆ. 2021ರ ಟಿ20 ವಿಶ್ವಕಪ್‌ನಲ್ಲಿ ಆಡುವ ಮೂಲಕ ನಮೀಬಿಯಾ ತಂಡದ ಪರ ಪಾದಾರ್ಪಣೆ ಮಾಡಿದ್ದರು.

ಆಲ್​ರೌಂಡರ್​ ಆಗಿರುವ ವೈಸ್​ ಅವರು ನಮೀಬಿಯಾ ಪರ 34 ಟಿ20 ಪಂದ್ಯಗಳನ್ನು ಆಡಿ 532 ರನ್ ಗಳಿಸಿದ್ದಾರೆ. ಬೌಲಿಂಗ್​ನಲ್ಲಿಯೂ ಉತ್ತಮ ಪ್ರದರ್ಶನ ತೋರಿರುವ ಅವರು 35 ವಿಕೆಟ್​ ಕಿತ್ತಿದ್ದಾರೆ. ಒಂಬತ್ತು ಏಕದಿನ ಪಂದ್ಯಗಳನ್ನು ಆಡಿ 228 ರನ್ ಗಳಿಸಿದ್ದಾರೆ. ಆರು ವಿಕೆಟ್​ ಪಡೆದಿದ್ದಾರೆ. ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾ ತಂಡದ ಪರ ಆಡಿ ಒಟ್ಟಾರೆಯಾಗಿ, ಅವರು 54 ಟಿ20 ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ಇದನ್ನೂ ಓದಿ SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

“ನನಗೆ ಈಗ 39 ವರ್ಷ, ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇನ್ನು ಮುಂದುವರಿಯಲು ಇದು ಸೂಕ್ತ ಸಯಯವಲ್ಲ ಎಂದು ತಿಳಿದಿದೆ. ಹೀಗಾಗಿ ನಾನು ಕ್ರಿಕೆಟ್​ನಿಂದ ನಿವೃತ್ತಿಯಾಗುತ್ತಿದ್ದೇನೆ. 2 ದೇಶಗಳನ್ನು ಪ್ರತಿನಿಧಿಸಲು ನನಗೆ ಅವಕಾಶ ಮಾಡಿಕೊಟ್ಟ ಎಲ್ಲ ಸಿಬ್ಬಂದಿ ಮತ್ತು ಸಹ ಆಟಗಾರರಿಗೆ ಧನ್ಯವಾದಗಳು” ಎಂದು ವೈಸ್ ಹೇಳಿದರು.

ಪಂದ್ಯ ಗೆದ್ದ ಇಂಗ್ಲೆಂಡ್​


ಶನಿವಾರ ರಾತ್ರಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಇಂಗ್ಲೆಂಡ್​ ತಂಡ ನಮೀಬಿಯಾ ವಿರುದ್ಧ ಡಕ್​ವರ್ತ್​ ಲೂಯಿಸ್​ ನಿಯಮದನ್ವಯ 41 ರನ್​ ಅಂತರದಿಂದ ಗೆದ್ದು ಬೀಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 10 ಓವರ್ ಗಳಲ್ಲಿ 122 ರನ್ ಗಳಿಸಿದರೆ, ನಮೀಬಿಯಾ ತಂಡವು 84 ರನ್ ಮಾತ್ರ ಗಳಿಸಿ ಸೋಲು ಕಂಡಿತು. ಇಂದು ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಸ್ಕಾಟ್ಲೆಂಡ್​ ವಿರುದ್ಧ 5 ವಿಕೆಟ್​ ಅಂತರದ ಗೆಲುವು ಸಾಧಿಸಿದ ಪರಿಣಾಮ ಇಂಗ್ಲೆಂಡ್​ ಸೂಪರ್​-8 ಹಂತಕ್ಕೇರಿತು.

Continue Reading

ಕ್ರೀಡೆ

SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

SCO vs AUS: ಆಸ್ಟ್ರೇಲಿಯಾದ ಈ ಗೆಲುವಿನಿಂದಾಗಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡ ಸೂಪರ್​-8ಗೆ ಪ್ರವೇಶ ಪಡೆಯುವಂತಾಯಿತು. ಸ್ಕಾಟ್ಲೆಂಡ್​ ಮತ್ತು ಇಂಗ್ಲೆಂಡ್​ ‘ಬಿ’ ಗುಂಪಿನಲ್ಲಿ ತಲಾ 5 ಅಂಕ ಪಡೆದಿದ್ದರೂ ಕೂಡ ರನ್​ ರೇಟ್​ ಆಧಾರದಲ್ಲಿ ಇಂಗ್ಲೆಂಡ್​ ಮುಂದಿದ್ದ ಕಾರಣ ಈ ಲಾಭ ಜಾಸ್​ ಬಟ್ಲರ್​ ಪಡೆಗೆ ಲಭಿಸಿತು.

VISTARANEWS.COM


on

SCO vs AUS
Koo

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯಾ): ಸೂಪರ್​-8 ಪ್ರವೇಶಕ್ಕೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಸ್ಕಾಟ್ಲೆಂಡ್(SCO vs AUS)​ ತಂಡ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಆಸ್ಟ್ರೇಲಿಯಾದ ಈ ಗೆಲುವಿನಿಂದಾಗಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡ ಸೂಪರ್​-8ಗೆ ಪ್ರವೇಶ ಪಡೆಯುವಂತಾಯಿತು. ಸ್ಕಾಟ್ಲೆಂಡ್​ ಮತ್ತು ಇಂಗ್ಲೆಂಡ್​ ‘ಬಿ’ ಗುಂಪಿನಲ್ಲಿ ತಲಾ 5 ಅಂಕ ಪಡೆದಿದ್ದರೂ ಕೂಡ ರನ್​ ರೇಟ್​ ಆಧಾರದಲ್ಲಿ ಇಂಗ್ಲೆಂಡ್​ ಮುಂದಿದ್ದ ಕಾರಣ ಈ ಲಾಭ ಜಾಸ್​ ಬಟ್ಲರ್​ ಪಡೆಗೆ ಲಭಿಸಿತು.

ಇಲ್ಲಿನ ಸೇಂಟ್‌ ಲೂಸಿಯಾದ ಡ್ಯಾರೆನ್​ ಶಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್​ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 180 ರನ್​ಗಳ ಬೃಹತ್​ ಮೊತ್ತ ಪೇರಿಸಿತು. ಈ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 19.4 ಓವರ್​ಗಳಲ್ಲಿ 5 ವಿಕೆಟ್​ಗೆ 186 ರನ್​ ಬಾರಿಸಿ ಗೆಲುವು ದಾಖಲಿಸಿತು. ಆಸೀಸ್​ ಬ್ಯಾಟಿಂಗ್​ ಸರದಿಯಲ್ಲಿ ಆರಂಭಿಕ ಆಟಗಾರ ಟ್ರಾವಿಸ್​ ಹೆಡ್​(68) ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್​ ಮಾರ್ಕಸ್​ ಸ್ಟೋಯಿನಿಸ್​(59) ಅರ್ಧಶತಕ ಬಾರಿಸಿ ಮಿಂಚಿದರು. ಉಳಿದಂತೆ ಟಿಮ್​ ಡೇವಿಡ್​ ಅಜೇಯ 24 ರನ್​ ಬಾರಿಸಿದರು. ಡೇವಿಡ್​ ವಾರ್ನರ್​(1) ಮತ್ತು ನಾಯಕ ಮಿಚೆಲ್​ ಮಾರ್ಷ್(8) ಮತ್ತೆ ವಿಫಲರಾದರು.​

ಪಂದ್ಯದ ತಿರುವು


17 ಓವರ್​ ತನಕ ಪಂದ್ಯ ಸ್ಕಾಟ್ಲೆಂಡ್ ತಂಡದ ಪರ ಇತ್ತು. ಆದರೆ 18ನೇ ಓವರ್​ನಲ್ಲಿ ಪಂದ್ಯದ ಚಿತ್ರಣವೇ ಬದಲಾಯಿತು. ಬ್ರಾಡ್ ವೀಲ್ ಓವರ್​ನಲ್ಲಿ ಕ್ಯಾಮರೂನ್​ ಗ್ರೀನ್​ ಹ್ಯಾಟ್ರಿಕ್​ ಬೌಂಡರಿ ಬಾರಿಸಿ ಒಟ್ಟು 13 ರನ್​ ಕಸಿದರು. ಇದಕ್ಕೂ ಮುನ್ನ 2 ಓವರ್​ ನಡೆಸಿ ಒಂದು ಮೇಡನ್​ ಸಹಿತ ವಿಕೆಟ್ ಕಿತ್ತಿದ್ದ ಬ್ರಾಡ್ ವೀಲ್ ಈ ಓವರ್​ನಲ್ಲಿ ದುಬಾರಿಯಾದರು. ಇದು ಸ್ಕಾಟ್ಲೆಂಡ್​ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು. ಒಂದೊಮ್ಮೆ ಈ ಓವರ್​ ಕಂಟ್ರೋಲ್​ ಆಗುತ್ತಿದ್ದರೆ ಸ್ಕಾಟ್ಲೆಂಡ್​ಗೆ ಗೆಲುವಿನ ಅವಕಾಶ ಇರುತ್ತಿತ್ತು.

ಇದನ್ನೂ ಓದಿ T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್​ ಬಿರುಸಿನ ಆಟಕ್ಕೆ ಒತ್ತು ನೀಡಿ ದೊಡ್ಡ ಮೊತ್ತವನ್ನು ಕಲೆಹಾಕಿತು. ಆರಂಭಿಕ ಆಟಗಾರ ಜಾರ್ಜ್ ಮುನ್ಸಿ ಆರಂಭದಿಂದಲೇ ಆಸೀಸ್​ ಬೌಲರ್​ಗಳ ಮೇಲೆರಗಿ ಮೂರು ಸಿಕ್ಸರ್ ಮತ್ತು 2 ಸಿಕ್ಸರ್​ ನೆರವಿನಿಂದ 35 ರನ್​ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ವಿಕೆಟ್​ ಪತನದ ಬಳಿಕ ಬಂದ ಬ್ರಾಂಡನ್ ಮೆಕ್‌ಮುಲ್ಲೆನ್ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ ಗಮನಸೆಳೆದರು. ಕೇವಲ 34 ಎಸೆತಗಳಿಂದ 60 ರನ್​ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇವರ ಈ ಸೊಗಸಾದ ಬ್ಯಾಟಿಂಗ್​ ವೇಳೆ ಬರೋಬ್ಬರಿ 6 ಸಿಕ್ಸರ್​ ಮತ್ತು 2 ಬೌಂಡರಿ ಸಿಡಿಯಿತು. ಇವರಿಗೆ ಮತ್ತೊಂದು ತುದಿಯಲ್ಲಿ ನಾಯಕ ರಿಚಿ ಬೆರಿಂಗ್ಟನ್ ಕೂಡ ಉತ್ತಮ ಸಾಥ್​ ನೀಡಿದರು. ಬೆರಿಂಗ್ಟನ್ 31 ಎಸೆತಗಳಿಂದ 42 ರನ್​ ಬಾರಿಸಿ ಅಜೇಯರಾಗಿ ಉಳಿದರು. ಆದರೆ ಪಂದ್ಯ ಸೋತ ಕಾರಣ ಇವರ ಬ್ಯಾಟಿಂಗ್​ ಸಾಹಸ ವ್ಯರ್ಥಗೊಂಡಿತು. ಆಸೀಸ್​ ಪರ ಗ್ಲೆನ್​ ಮ್ಯಾಕ್ಸ್​ವೆಲ್​ 44 ರನ್​ ವೆಚ್ಚದಲ್ಲಿ 2 ವಿಕೆಟ್​ ಕಿತ್ತರು.

Continue Reading
Advertisement
Vijayanagara News
ವಿಜಯನಗರ1 min ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Pakistan Cricket Team
ಕ್ರಿಕೆಟ್7 mins ago

Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

Madrasa
ದೇಶ15 mins ago

Madrasa: ಬಕ್ರೀದ್‌ ಹಿನ್ನೆಲೆ ಮದರಸಾದಲ್ಲೇ ಗೋವುಗಳ ಬಲಿ; ನೂರಾರು ಹಿಂದುಗಳಿಂದ ದಾಳಿ, ಸೆಕ್ಷನ್‌ 144 ಜಾರಿ!

Actor Darshan teacher Addanda Cariappa sad on arrested darshan
ಸಿನಿಮಾ16 mins ago

Actor Darshan: ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Shivraj Chouhan
ವೈರಲ್ ನ್ಯೂಸ್30 mins ago

Shivraj Chouhan: ರೈಲಿನಲ್ಲಿ ಜನ ಸಾಮಾನ್ಯರಂತೆ ಪ್ರಯಾಣಿಸಿ ಸರಳತೆ ಮೆರೆದ ಶಿವರಾಜ್‌ ಸಿಂಗ್‌ ಚೌಹಾಣ್‌; ಸಚಿವರ ನಡೆಗೆ ವ್ಯಾಪಕ ಪ್ರಶಂಸೆ

Electric shock
ಚಿಕ್ಕಮಗಳೂರು43 mins ago

Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

Grand Prix 2024 Competition
ಕ್ರೀಡೆ46 mins ago

Grand Prix 2024 Competition: ಬೆಳ್ಳಿ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್

Actor Darshan case pavithra Gowda manager Arrest
ಸ್ಯಾಂಡಲ್ ವುಡ್1 hour ago

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

Gold Rate Today
ಚಿನ್ನದ ದರ1 hour ago

Gold Rate Today: ವೀಕೆಂಡ್‌ನಲ್ಲಿ ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್;‌ ಇಂದು ಏರಿಕೆಯಾಗದ ಬೆಲೆ

Tata Motors SUV Tata Nexon 7th Anniversary Benefit up to Rs 1 lakh for customers
ವಾಣಿಜ್ಯ1 hour ago

Tata Motors: ಎಸ್‌ಯುವಿ ಟಾಟಾ ನೆಕ್ಸಾನ್‌ನ 7ನೇ ವಾರ್ಷಿಕೋತ್ಸವ; ಗ್ರಾಹಕರಿಗೆ 1 ಲಕ್ಷ ರೂ.ವರೆಗೆ ಉಳಿತಾಯ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ1 min ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ22 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌