RCB vs CSK: ಆರ್​ಸಿಬಿ ಪ್ಲೇ ಆಫ್​ ಹಾದಿಗೆ ಕೊಳ್ಳಿ ಇಡಲಿದೆಯೇ ಮಳೆ; ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು? - Vistara News

ಕ್ರೀಡೆ

RCB vs CSK: ಆರ್​ಸಿಬಿ ಪ್ಲೇ ಆಫ್​ ಹಾದಿಗೆ ಕೊಳ್ಳಿ ಇಡಲಿದೆಯೇ ಮಳೆ; ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

RCB vs CSK: ಒಂದೆಡೆ ಆರ್​ಸಿಬಿ ಅಭಿಮಾನಿಗಳು ಮತ್ತೊಂದೆಡೆ ಚೆನ್ನೈ ಅಭಿಮಾನಿಗಳು ಪಂದ್ಯ ನೋಡುವುದಕ್ಕಾಗಿ ಚಾಕತ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ಆದರೆ ಈ ಪಂದ್ಯ ನಡೆಯುವುದು ಅನುಮಾನ ಎನ್ನುವ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.

VISTARANEWS.COM


on

RCB Vs CSK
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆರಂಭಿಕ ಹಂತದಲ್ಲಿ ಸತತ ಸೋಲಿನ ಸುಳಿಗೆ ಸಿಲುಕಿದ್ದ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB vs CSK) ತಂಡ ಇನ್ನೇನು ಟೂರ್ನಿಯಿಂದ(IPL 2024) ಹೊರಬೀಳಬೇಕು ಎನ್ನುವಷ್ಟರಲ್ಲಿ ಉತ್ಕೃಷ್ಟ ಮಟ್ಟದ ಹೋರಾಟ ನೀಡುವ ಮೂಲಕ ಸತತ 5, ಒಟ್ಟು 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ರೇಸ್​ನಲ್ಲಿ ತಾನು ಕೂಡ ಪ್ರತಿಸ್ಪರ್ಧಿ ಎನ್ನುವಂತೆ ಕಾಣಿಸಿಕೊಂಡಿದೆ.

ಸದ್ಯ ಅಂಕಪಟ್ಟಿಯಲ್ಲಿ 5ನೇ ಸ್ಥಾನಿಯಾಗಿರುವ ಆರ್​ಸಿಬಿ ತನ್ನ ಕೊನೆಯ ಪಂದ್ಯವನ್ನು ತವರಿನಲ್ಲಿ ಮೇ 18ರಂದು ಬದ್ಧ ಎದುರಾಳಿ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಆಡಲಿದೆ. ಉಭಯ ತಂಡಗಳಿಗೂ ಇದು ಕೊನೆಯ ಲೀಗ್​ ಪಂದ್ಯವಾಗಿದೆ. ಜತೆಗೆ ಪ್ಲೇ ಆಪ್​ ಪ್ರವೇಶಿಸಬೇಕಿದ್ದರೆ ಗೆಲ್ಲಲೇ ಬೇಕಾದ ಅನಿವಾರ್ಯತೆ ಇತ್ತಂಡಗಳದ್ದು. ಒಂದೆಡೆ ಆರ್​ಸಿಬಿ ಅಭಿಮಾನಿಗಳು ಮತ್ತೊಂದೆಡೆ ಚೆನ್ನೈ ಅಭಿಮಾನಿಗಳು ಪಂದ್ಯ ನೋಡುವುದಕ್ಕಾಗಿ ಚಾಕತ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ಆದರೆ ಈ ಪಂದ್ಯ ನಡೆಯುವುದು ಅನುಮಾನ ಎನ್ನುವ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.

ಇದನ್ನೂ ಓದಿ IPL 2024 Points Table: ಟೂರ್ನಿಯಿಂದ ಹೊರಬಿದ್ದ ಗುಜರಾತ್​ ಟೈಟಾನ್ಸ್​

ಹೌದು, ಪಂದ್ಯ ನಡೆಯುವ ಮೇ 18 ಶನಿವಾರದಂದು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ(Rain likely to interrupt RCB Vs CSK match) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಸತತವಾಗಿ ಮಳೆಯಾಗುತ್ತಿದೆ. ಜತೆಗೆ ಪಕ್ಕದ ರಾಜ್ಯ ಕೇರಳ, ಮಹಾರಾಷ್ಟದಲ್ಲಿಯೂ ಮಳೆಯಾಗುತ್ತಿದೆ. ಸೋಮವಾರ ಅಹಮದಾಬಾದ್​ನಲ್ಲಿ ಸುರಿದ ಭಾರೀ ಮಳೆಯಿಂದ ಗುಜರಾತ್​ ಮತ್ತು ಕೆಕೆಆರ್​ ನಡುವಣ ಪಂದ್ಯ ಟಾಸ್​ ಕೂಡ ಕಾಣದೆ ರದ್ದುಗೊಂಡಿತ್ತು. ಪಂದ್ಯ ರದ್ದುಗೊಂಡ ಕಾರಣ ಗುಜರಾತ್​ ತಂಡ ಪ್ಲೇ ಆಫ್​ ರೇಸ್​ ಅತ್ಯಂ ಕಂಡು ಟೂರ್ನಿಯಿಂದ ಹೊರಬಿದ್ದ ಸಂಕಟಕ್ಕೆ ಸಿಲುಕಿತು. ಇದೀಗ ಆರ್​ಸಿಬಿ ಪಂದ್ಯಕ್ಕೂ ಮಳೆ ಭೀತಿ ಎದುರಾಗಿರುವುದು ತಂಡ ಸೇರಿ ಅಭಿಮಾನಿಗಳಿಗೂ ಆತಂಕಪಡುವಂತೆ ಮಾಡಿದೆ.

ಆರ್​ಸಿಬಿ ಗೆದ್ದರೂ ಪ್ಲೇ ಆಫ್​ ಟಿಕೆಟ್​ ಖಚಿತವಲ್ಲ!


ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ಉಳಿದ ಕೆಲವು ತಂಡಗಳು ಸೋತರಷ್ಟೇ ಆರ್‌ಸಿಬಿಗೆ ಪ್ಲೇ ಆಫ್ ಸಾಧ್ಯ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಗೆಲ್ಲಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಒಂದೊಮ್ಮೆ ಉಳಿದಿರುವ 2 ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಗೆದ್ದರೆ, ಸನ್​ರೈಸರ್ಸ್ ಹೈದರಾಬಾದ್​ ಒಂದು ಪಂದ್ಯ ಗೆದ್ದರೆ ಆಗ ಆರ್​ಸಿಬಿ ಟೂರ್ನಿಯಿಂದ ಅಧಿಕೃತವಾಗಿ ಹೊರಬೇಳಲಿದೆ. ಏಕೆಂದರೆ ಈ ತಂಡಗಳಿಗೆ 16 ಅಂಕ ಸಿಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rishabh Pant : ಸಂಜು ಸ್ಯಾಮ್ಸನ್​ ಜತೆಗಿನ ಒಳ ಜಗಳದ ಬಗ್ಗೆ ಸ್ಪಷ್ಟನೆ ನೀಡಿದ ರಿಷಭ್ ಪಂತ್​

Rishabh Pant: ಡೆಲ್ಲಿ ಕ್ಯಾಪಿಟಲ್ಸ್ ಪರ ಲೀಗ್​​ನಲ್ಲಿ ಕೆಲವು ಅದ್ಭುತ ಇನ್ನಿಂಗ್ಸ್​ಗಳನ್ನು ಆಡಿದ ರಿಷಭ್ ಪಂತ್ ಅವರು ಆಡಿದ 13 ಪಂದ್ಯಗಳಲ್ಲಿ 40 ಸರಾಸರಿ ಮತ್ತು 155 ಸ್ಟ್ರೈಕ್ ರೇಟ್​ನಲ್ಲಿ 446 ರನ್ ಗಳಿಸಿದ್ದಾರೆ. ಅವರು ಪಂದ್ಯಾವಳಿಯಲ್ಲಿ ತಮ್ಮ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರಾಗಿದ್ದಾರೆ.

VISTARANEWS.COM


on

Rishabh Pant
Koo

ನವದೆಹಲಿ: 2024 ರ ಟಿ 20 ವಿಶ್ವಕಪ್​ನ್ಲಲಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಮುಂಚಿತವಾಗಿ ಭಾರತದ ವಿಕೆಟ್ ಕೀಪರ್ ಬ್ಯಾಟರ್​ ರಿಷಭ್ ಪಂತ್ ಸಂಜು ಸ್ಯಾಮ್ಸನ್ ಅವರೊಂದಿಗಿನ ಸಂಬಂಧದ ಕುರಿತು ಮಾತನಾಡಿದ್ದಾರೆ. ತಮ್ಮ ನಡುವೆ ಯಾವುದೇ ಜಗಳವಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ಸಂಜು ಅವರೊಂದಿಗೆ ಉತ್ತಮ ಸ್ನೇಹ ಹೊಂದಿದ್ದು,ತ ತಾವಿಬ್ಬರೂ ಪರಸ್ಪರ ತುಂಬಾ ಗೌರವಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ 2024 ರ ಟಿ 20 ವಿಶ್ವಕಪ್​​ಗಾಗಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಲ್ಲಿ ಆಯಾ ಫ್ರಾಂಚೈಸಿಗಳಿಗಾಗಿ ಅವರ ಅದ್ವಿತೀಯ ಪ್ರದರ್ಶನದ ಆಧಾರದ ಮೇಲೆ ಇವರಿಬ್ಬರು ತಂಡಕ್ಕೆ ಆಯ್ಕೆಯಾದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಲೀಗ್​​ನಲ್ಲಿ ಕೆಲವು ಅದ್ಭುತ ಇನ್ನಿಂಗ್ಸ್​ಗಳನ್ನು ಆಡಿದ ರಿಷಭ್ ಪಂತ್ ಅವರು ಆಡಿದ 13 ಪಂದ್ಯಗಳಲ್ಲಿ 40 ಸರಾಸರಿ ಮತ್ತು 155 ಸ್ಟ್ರೈಕ್ ರೇಟ್​ನಲ್ಲಿ 446 ರನ್ ಗಳಿಸಿದ್ದರು. ಅವರು ಪಂದ್ಯಾವಳಿಯಲ್ಲಿ ತಮ್ಮ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರಾಗಿದ್ದಾರೆ. ಮತ್ತೊಂದೆಡೆ, ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಸುಮಾರು 153 ಸ್ಟ್ರೈಕ್ ರೇಟ್​ನಲ್ಲಿ 531 ರನ್ ಗಳಿಸಿದ್ದಾರೆ. ಅವರು 5 ಅರ್ಧ ಶತಕಗಳನ್ನು ಸಹ ಬಾರಿಸಿದ್ದಾರೆ. ಅವರು ಪಂದ್ಯಾವಳಿಯನ್ನು 5 ನೇ ಪ್ರಮುಖ ಸ್ಕೋರರ್ ಆಗಿ ಕೊನೆಗೊಳಿಸಿದರು. ಅವರು ತಮ್ಮ ತಂಡವನ್ನು ಪ್ಲೇಆಫ್​ಗೆ ಮುನ್ನಡೆಸಿದ್ದರು.

ಐಪಿಎಲ್ ಸಮಯದಲ್ಲಿ ವಿಶ್ವಕಪ್​ಗಾಗಿ ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ನಡುವೆ ಸ್ಪರ್ಧೆ ಇತ್ತು ಎಂದು ಹೇಳುವುದು ನ್ಯಾಯಯುತವಾಗಿದೆ. ಕೆಎಲ್ ರಾಹುಲ್, ಜಿತೇಶ್ ಶರ್ಮಾ ಮತ್ತು ಇಶಾನ್ ಕಿಶನ್ ಅವರೊಂದಿಗೆ ಸ್ಪರ್ಧೆಯಲ್ಲಿದ್ದರು.

ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಇಬ್ಬರೂ ಇತರರಿಗಿಂತ ಭಿನ್ನವಾಗಿ ಕಾಣುತ್ತಿದ್ದರು. ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಯಿತು. ಭಾರತೀಯ ತಂಡದಲ್ಲಿ ತಮ್ಮ ಸ್ಥಾನದಿಂದಾಗಿ ಇವರಿಬ್ಬರು ಪರಸ್ಪರ ಉತ್ತಮವಾಗಿ ಆಡುತ್ತಿಲ್ಲ ಎಂಬ ಬಗ್ಗೆ ವರ್ಷಗಳಿಂದ ಸಾಕಷ್ಟು ಮಾತುಕತೆಗಳು ನಡೆದಿವೆ.

ಆದರೆ ಇದೀಗ ರಿಷಭ್ ಪಂತ್ ಸ್ಪಷ್ಟನೆ ನೀಡಿದ್ದಾರೆ. ಸಂಜು ಸ್ಯಾಮ್ಸನ್ ಆರಾಮವಾಗಿದ್ದಾರೆ ಮತ್ತು ಅವರು ಉತ್ತಮ ಸಂಬಂಧ ಹಂಚಿಕೊಂಡಿದ್ದಾರೆ ಎಂದು ಕೀಪರ್-ಬ್ಯಾಟರ್​ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಅವರ ಬಗ್ಗೆ ಸಾಕಷ್ಟು ಮಾತುಕತೆಗಳು ನಡೆದಿವೆ ಆದರೆ ಅವರು ಅವುಗಳ ಬಗ್ಗೆ ಗಮನ ಹರಿಸುವುದಿಲ್ಲ ಮತ್ತು ಪರಸ್ಪರ ಮೆಚ್ಚಿಕೊಳ್ಳುತ್ತೇವೆ ಎಂದು ಅವರು ಒಪ್ಪಿಕೊಂಡರು.

ಇದನ್ನೂ ಓದಿ: T20 World Cup : ಪಾಕಿಸ್ತಾನ ತಂಡದ ಅಮೆರಿಕ ವಿರುದ್ಧ ಸೋತಿದ್ದು ಐಎಮ್​ಎಫ್​ ನೀಡುವ 80 ಕೋಟಿ ಸಾಲಕ್ಕಾಗಿ!

ನಾವು ಉತ್ತಮ ಸ್ನೇಹವನ್ನು ಹೊಂದಿದ್ದೇವೆ, ಸಂಜು ಶಾಂತವಾಗಿದ್ದಾರೆ. ಏಕೆಂದರೆ ಸಾಮಾಜಿಕ ಮಾಧ್ಯಮದಲ್ಲಿ ಬಹಳಷ್ಟು ವಿಷಯಗಳು ನಡೆಯುತ್ತವೆ ಎಂದು ನಿಮಗೆ ತಿಳಿದಿದೆ ಆದರೆ ವೈಯಕ್ತಿಕವಾಗಿ ನಾವು ಈ ವಿಷಯಗಳ ಬಗ್ಗೆ ಗಮನ ಹರಿಸುವುದಿಲ್ಲ ಮತ್ತು ನಾವು ತಂಡದ ಸದಸ್ಯರಾಗಿದ್ದೇವೆ. ನಾವು ಒಬ್ಬರನ್ನೊಬ್ಬರು ತುಂಬಾ ಮೆಚ್ಚುತ್ತೇವೆ ಮತ್ತು ಗೌರವಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನ ವಿರುದ್ಧ ಅಗತ್ಯ ಪ್ರಯತ್ನ

ಪ್ರಸ್ತುತ ನಡೆಯುತ್ತಿರುವ ಟಿ 20 ವಿಶ್ವಕಪ್ 2024 ರಲ್ಲಿ ಸಂಜು ಸ್ಯಾಮ್ಸನ್​ಗಿಂತ ರಿಷಭ್ ಪಂತ್​ಗೆ ಭಾರತೀಯ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿದೆ. ಕೀಪರ್-ಬ್ಯಾಟರ್​ಗೆ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಹೇಳಲಾಗಿದೆ. ಅವರು ಪಂದ್ಯಾವಳಿಯಲ್ಲಿ ಇಲ್ಲಿಯವರೆಗೆ ತಂಡಕ್ಕಾಗಿ ಅದ್ಭುತವಾಗಿ ಕಾರ್ಯನಿರ್ವಹಿಸಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ರಿಷಭ್ ಪಂತ್ ಅರ್ಧಶತಕ ಬಾರಿಸುವ ಮೂಲಕ ಪಂದ್ಯಾವಳಿಯನ್ನು ಉತ್ತಮವಾಗಿ ಪ್ರಾರಂಭಿಸಿದ್ದರು. ಮುಂದೆ, ಅವರು ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ತಂಡಕ್ಕಾಗಿ ಉತ್ತಮವಾಗಿ ಆಡಿದ್ದರು. ಪಿಚ್ ಬ್ಯಾಟಿಂಗ್ ಮಾಡಲು ಕಠಿಣವಾಗಿದ್ದರೂ, ಅವರು ಅಜೇಯ 36 ರನ್ ಗಳಿಸಿ ತಮ್ಮ ತಂಡವನ್ನು ಗೆಲ್ಲಿಸಿದ್ದರು.

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ರಿಷಭ್ ಪಂತ್ ಉತ್ತಮ ಫಾರ್ಮ್​ನಲ್ಲಿದ್ದಾರೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅವರು ತಮ್ಮ ತಂಡಕ್ಕೆ ಪ್ರಮುಖ ಪಾತ್ರ ವಹಿಸಲಿದ್ದಾರೆ. ನ್ಯೂಯಾರ್ಕ್​ನ ನಸ್ಸಾವು ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ಜೂನ್ 9 ರಂದು ನಡೆಯಲಿರುವ ಪಂದ್ಯದಲ್ಲಿ ತಂಡ ಅವರ ಮೇಲೆ ಬಹಳಷ್ಟು ಅವಲಂಬಿತವಾಗಿರುತ್ತದೆ.

Continue Reading

ಪ್ರಮುಖ ಸುದ್ದಿ

T20 World Cup : ವಿಶ್ವ ಕಪ್​ ಇತಿಹಾಸದಲ್ಲಿ ಮೊದಲ ಗೆಲುವು ದಾಖಲಿಸಿದ ಕೆನಡಾ; ಐರ್ಲೆಂಡ್​ಗೆ ನಿರಾಸೆ

T20 World Cup : ಮೊದಲು ಬ್ಯಾಟ್ ಮಾಡಿದ ಕೆನಡಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 137 ರನ್‌ ಬಾರಿಸಿತ್ತು. ಪ್ರತಿಯಾಗಿ ಆಡಿದ ಐರ್ಲೆಂಡ್‌ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾ 7 ವಿಕೆಟ್​ ಕಳೆದುಕೊಂಡು 125 ರನ್‌ ಗಳಿಸಿ ಸೋಲೋಪ್ಪಿಕೊಂಡಿತು. ಇದು ಕೂಡ ಟೂರ್ನಿಯ ಜಿದ್ದಾಜಿದ್ದಿನ ಪಂದ್ಯ ಎನಿಸಿಕೊಂಡಿತು.

VISTARANEWS.COM


on

T20 World Cup
Koo

ಬೆಂಗಳೂರು : ಗುರುವಾರವಷ್ಟೇ ಪಾಕಿಸ್ತಾನ ತಂಡವನ್ನು ಸೋಲಿಸಿದ್ದ ಅಮೆರಿಕ ತಂಡ ಟಿ20 ಕ್ರಿಕೆಟ್ ವಿಶ್ವ ಕಪ್​ನಲ್ಲಿ ಐತಿಹಾಸಿಕ ವಿಜಯವೊಂದನ್ನು ದಾಖಲಿಸಿತ್ತು. ಇದೀಗ ಶುಕ್ರವಾರ ನಡೆದ ಪಂದ್ಯದಲ್ಲಿ ಕೆನಡಾ ತಂಡ ಟೂರ್ನಿಯ ಇತಿಹಾಸದಲ್ಲಿ ಮೊಟ್ಟ ಮೊದಲ ಗೆಲುವು ದಾಖಲಿಸಿದೆ. ಈ ತಂಡವು ತನಗಿಂತ ಸ್ವಲ್ಪ ಮಟ್ಟಿಗೆ ಬಲಿಷ್ಠವಾಗಿರುವ ಐರ್ಲೆಂಡ್ ವಿರುದ್ಧ ವಿಜಯ ಸಾಧಿಸಿದೆ.

ನ್ಯೂಯಾರ್ಕ್‌ನ ನಸ್ಸೌ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಜೂನ್‌ 7ರ ಶುಕ್ರವಾರ ನಡೆದ ಪಂದ್ಯದಲ್ಲಿ ಕೆನಡಾ ತಂಡ 12 ರನ್​ಗಳ ವಿಜಯ ತನ್ನದಾಗಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಕೆನಡಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 137 ರನ್‌ ಬಾರಿಸಿತ್ತು. ಪ್ರತಿಯಾಗಿ ಆಡಿದ ಐರ್ಲೆಂಡ್‌ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾ 7 ವಿಕೆಟ್​ ಕಳೆದುಕೊಂಡು 125 ರನ್‌ ಗಳಿಸಿ ಸೋಲೋಪ್ಪಿಕೊಂಡಿತು. ಇದು ಕೂಡ ಟೂರ್ನಿಯ ಜಿದ್ದಾಜಿದ್ದಿನ ಪಂದ್ಯ ಎನಿಸಿಕೊಂಡಿತು.

ಕೆನಡಾ ತಂಡ ಪರ ಅ್ಯರೋನ್​ ಜಾನ್ಸನ್ ಮತ್ತು ನವನೀತ್ ಧಲಿವಾಲ್ ಬ್ಯಾಟಿಂಗ್ ಆರಂಭಿಸಿದರು. ಆದರೆ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. ಮೊದಲ ವಿಕೆಟ್‌ಗೆ ಕೇವಲ 12 ರನ್‌ಗಳನ್ನು ದಾಖಲಾಯಿತು. ಧಲಿವಾಲ್ ಆರು ರನ್ ಗೆ ಔಟಾದರು. ಬಳಿಕ ಪರ್ಗತ್ ಸಿಂಗ್ 18 ರನ್‌ ಗಳಿಸಿ ನಿರ್ಗಮಿಸಿದರು. ಅತ್ತ ಜಾನ್ಸನ್ ಮೂರು ಬೌಂಡರಿಗಳ ನೆರವಿನಿಂದ 14 ರನ್ ಗಳಿ ಪೆವಿಲಿಯನ್​ಗೆ ಮರಳಿದರು. ಜಾನ್ಸನ್ ಔಟಾದ ನಂತರ ಕ್ರೀಸ್​ಗೆ ಇಳಿದ ದಿಲ್‌ಪ್ರೀತ್ ಬಾಜ್ವಾ 7 ರನ್‌ ಔಟಾದರು. ಬಳಿಕ ನಿಕೋಲಸ್ ಕಿರ್ಟನ್ ಮೊವ್ವಾ ಉತ್ತಮ ಜೊತೆಯಾಟವಾಡಿದರು. 15.2 ಓವರ್‌ಗಳಲ್ಲಿ ತಂಡ 100 ರನ್ ಗಳಿಸಿತು. ಏತನ್ಮಧ್ಯೆ ಮೆಕಾರ್ಥಿ ಎಸೆದ 19ನೇ ಓವರ್‌ನಲ್ಲಿ ತಂಡ ಎರಡು ವಿಕೆಟ್ ಕಳೆದುಕೊಂಡಿತು. 35 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌ ಸಹಿತ 49 ರನ್ ಗಳಿಸಿದ್ದ ಕಿರ್ಟನ್‌ 1 ರನ್​ನಿಂದ ಅರ್ಧ ಶತಕದ ಅವಕಾಶ ನಷ್ಟ ಮಾಡಿಕೊಂಡರು. ಆದಾಗ್ಯೂ ತಂಡ ಪರ ಗರಿಷ್ಠ ಮೊತ್ತ ಬಾರಿಸಿದರು. ಮೊವ್ವ 36 ಎಸೆತಗಳಲ್ಲಿ 3 ಬೌಂಡರಿ ಸೇರಿದಂತೆ 37 ರನ್ ಗಳಿಸಿದರು.

ಇದನ್ನೂ ಓದಿ : T20 World Cup : ಪಾಕಿಸ್ತಾನ ತಂಡದ ಅಮೆರಿಕ ವಿರುದ್ಧ ಸೋತಿದ್ದು ಐಎಮ್​ಎಫ್​ ನೀಡುವ 80 ಕೋಟಿ ಸಾಲಕ್ಕಾಗಿ!

ಐರ್ಲೆಂಡ್‌ ಬೌಲಿಂಗ್​ನಲ್ಲಿ ಯಂಗ್ ಮತ್ತು ಮೆಕಾರ್ಥಿ ತಮ್ಮ ನಾಲ್ಕು ಓವರ್‌ಗಳ ಸ್ಪೆಲ್​ನಲ್ಲಿ ಅನುಕ್ರಮವಾಗಿ 32 ಮತ್ತು 24 ರನ್‌ ಬಿಟ್ಟುಕೊಟ್ಟು ತಲಾ ಎರಡು ವಿಕೆಟ್ ಪಡೆದರು. ಅದೈರ್ ಮತ್ತು ಡೆಲಾನಿ ತಲಾ ಒಂದು ವಿಕೆಟ್ ಕಬಳಿಸಿದರು.

ಐರ್ಲೆಂಡ್‌ ಚೇಸಿಂಗ್ ಫೇಲ್​

ಗುರಿ ಬೆನ್ನಟ್ಟಲು ಶುರು ಮಾಡಿದ ಐರ್ಲೆಂಡ್ ಸತತವಾಗಿ ಮೇಲೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು. ನಾಯಕ ಪೌಲ್‌ ಸ್ಟಿರ್ಲಿಂಗ್ ವಿಫಲರಾಗಿ ಕೇವಲ 9 ರನ್‌ ಗಳಿಸಿ ಔಟಾದರು. ಬಾಲ್ಬಿರ್ನಿ ಕೊಡುಗೆ 17 ರನ್‌. ಹ್ಯಾರಿ ಟೆಕ್ಟರ್‌ 7 ರನ್‌ ಗಳಿಸಿದರೆ, ಲೋರ್ಕನ್ ಟಕರ್ 10 ರನ್‌ ಗಳಿಸಿ ನಿರ್ಗಮಿಸಿದರು. ಕರ್ಟಿಸ್ ಕ್ಯಾಂಫರ್ 4 ರನ್‌ಗೆ ಸೀಮಿತಗೊಂಡರು. ದಿಢೀರನೆ ಕುಸಿತ ಕಂಡ ತಂಡಕ್ಕೆ ಡಾಕ್ರೆಲ್‌ ಹಾಗೂ ಮಾರ್ಕ್‌ ಅಡೈರ್‌ ಆಸರೆಯಾದರು. ತಂಡವನ್ನು ಗೆಲುವಿನ ದಡ ಸೇರಿಸುವ ಪ್ರಯತ್ನ ಮಾಡಿದರು.‌ ಆದರೆ, ಕೆನಡಾ ಬೌಲರ್‌ಗಳು ಅದಕ್ಕೆ ಅವಕಾಶ ನೀಡಲಿಲ್ಲ. ಕೊನೇ ಓವರ್​ನಲ್ಲಿ 17 ರನ್ ಗೆಲುವಿಗೆ ಬೇಕಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ.

Continue Reading

ಪ್ರಮುಖ ಸುದ್ದಿ

T20 World Cup : ಪಾಕಿಸ್ತಾನ ತಂಡ ಅಮೆರಿಕ ವಿರುದ್ಧ ಸೋತಿದ್ದು ಐಎಮ್​ಎಫ್​ ನೀಡುವ 80 ಕೋಟಿ ಸಾಲಕ್ಕಾಗಿ!

T20 World Cup: ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ತಂಡ ಸೋಲುತ್ತಿದ್ದಂತೆ ತಂಡದ ಆಟಗಾರರನ್ನು ಲೇವಡಿ ಮಾಡುವ ತಮಾಷೆಯ ವೀಡಿಯೊಗಳನ್ನು ಮಾಡಿದರು. ವಿದೇಶದಲ್ಲಿ ವಾಸಿಸುವ ಪಾಕಿಸ್ತಾನಿಗಳ ಉತ್ಸಾಹದ ಬಗ್ಗೆ ತಂಡವು ಕಾಳಜಿ ವಹಿಸುವುದಿಲ್ಲ. ಅವರು ಉತ್ತಮವಾಗಿ ಆಡುವ ಬದಲು ಮಜಾ ಮಾಡುತ್ತಿದ್ದಾರೆ ಎಂದು ಪಾಕಿಸ್ತಾನದ ಯುವತಿಯೊಬ್ಬಳು ಹೇಳುತ್ತಿರುವ ವೀಡಿಯೊ ಈಗ ವೈರಲ್ ಆಗಿದೆ.

VISTARANEWS.COM


on

T20 World Cup
Koo

ಬೆಂಗಳೂರು: ಗುರುವಾರ ನಡೆದ ಟಿ 20 ವಿಶ್ವಕಪ್ ಪಂದ್ಯದಲ್ಲಿ (T20 World Cup) ಯುಎಸ್ಎ ಕ್ರಿಕೆಟ್ ತಂಡವು ಪಾಕಿಸ್ತಾನವನ್ನು ರೋಮಾಂಚಕ ಸೂಪರ್ ಓವರ್​ನಲ್ಲಿ ಸೋಲಿಸುವ ಮೂಲಕ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಗೆಲುವು ಯುಎಸ್ಎ ತಂಡದ ಪಂದ್ಯಾವಳಿಯಲ್ಲಿ ಅತ್ಯಂತ ಮಹತ್ವದ ಸಾಧನೆಯಾಗಿದೆ. ಸತತ ಎರಡು ಗೆಲುವುಗಳೊಂದಿಗೆ ಎ ಗುಂಪಿನ ಅಗ್ರಸ್ಥಾನಕ್ಕೆ ಏರಿದೆ.

ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ತಂಡ ಸೋಲುತ್ತಿದ್ದಂತೆ ತಂಡದ ಆಟಗಾರರನ್ನು ಲೇವಡಿ ಮಾಡುವ ತಮಾಷೆಯ ವೀಡಿಯೊಗಳನ್ನು ಮಾಡಿದರು. ವಿದೇಶದಲ್ಲಿ ವಾಸಿಸುವ ಪಾಕಿಸ್ತಾನಿಗಳ ಉತ್ಸಾಹದ ಬಗ್ಗೆ ತಂಡವು ಕಾಳಜಿ ವಹಿಸುವುದಿಲ್ಲ. ಅವರು ಉತ್ತಮವಾಗಿ ಆಡುವ ಬದಲು ಮಜಾ ಮಾಡುತ್ತಿದ್ದಾರೆ ಎಂದು ಪಾಕಿಸ್ತಾನದ ಯುವತಿಯೊಬ್ಬಳು ಹೇಳುತ್ತಿರುವ ವೀಡಿಯೊ ಈಗ ವೈರಲ್ ಆಗಿದೆ.

ಎಕ್ಸ್ ಬಳಕೆದಾರರೊಬ್ಬರು ಈ ವೀಡಿಯೊಗೆ ಪ್ರತಿಕ್ರಿಯಿಸಿ, “ಪಾಕಿಸ್ತಾನ ಆಟಗಾರರು ಅವಳನ್ನು ಅಳುವಂತೆ ಮಾಡಿದ್ದಾರೆ. ಅವರಿಗೆ ಸ್ವರ್ಗ ಪ್ರಾಪ್ತಿಯಾಗುವುದಿಲ್ಲ. ಇನ್ನೊಬ್ಬರು ಹೇಳಿದರು, “ಅವಳು ಒಂದು ಹಂತದಲ್ಲಿ ಶರ್ಟ್ ತೆಗೆದು ಎಸೆಯುತ್ತಾಳೆ ಎಂದು ನಾನು ಭಾವಿಸಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Shreyas Iyer : ಬಿಸಿಸಿಐ ಕೇಂದ್ರ ಗುತ್ತಿಗೆ ತಪ್ಪಿದ ಕುರಿತು ಮಾತನಾಡಿದ ಶ್ರೇಯಸ್ ಅಯ್ಯರ್​; ಏನಂದ್ರು ಅವರು?

ಸಾಲಕ್ಕಾಗಿ ಸೋತ ಪಾಕ್​

ಮತ್ತೊಂದು ವೀಡಿಯೊದಲ್ಲಿ, ಪಾಕಿಸ್ತಾನದ ಪ್ರಸಿದ್ಧ ಬರಹಗಾರ, ಕವಿ ಮತ್ತು ಹಾಸ್ಯಗಾರ ಅನ್ವರ್ ಮಕ್ಸೂದ್, ಪಾಕಿಸ್ತಾನವು ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ 8 ಬಿಲಿಯನ್ ಡಾಲರ್ ಸಾಲವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ತಂಡ ಸೋತಿರಬೇಕು ಎಂದು ತಮಾಷೆ ಮಾಡಿದ್ದಾರೆ. ಈ ಸೋಲಿಗೆ ಬೇರೆ ಯಾವುದೇ ಸಮರ್ಥನೀಯ ವಿವರಣೆ ಇಲ್ಲ ಎಂದು ಹೇಳಿದ್ದಾರೆ. ಭಾರತ ವಿರುದ್ಧದ ಪಾಕಿಸ್ತಾನದ ಬಹು ನಿರೀಕ್ಷಿತ ಪಂದ್ಯದ ಬಗ್ಗೆ ಮಾತನಾಡಿದ ಮಕ್ಸೂದ್, ಪಂದ್ಯಕ್ಕೆ ಟಿಕೆಟ್ ಖರೀದಿಸಿದ ಪಾಕಿಸ್ತಾನಿಗಳು ಅದನ್ನು ಅರ್ಧ ಬೆಲೆಗೆ ಮಾರಾಟ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಸೋಲಿನ ಬಗ್ಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ಮೀಮ್ ಗಳಿಂದ ತುಂಬಿ ಕೊಂಡಿದ್ದವು. ಆಟಗಾರರ ಪ್ರದರ್ಶನವನ್ನು ಒಂದೊಂದು ರೀತಿಯಲ್ಲಿ ಲೇವಡಿ ಮಾಡಲಾಗಿದೆ. ಸರಿಯಾಗಿ ಆಡದ ಆಟಗಾರರ ಬಗ್ಗೆ ಕಾಮೆಂಟ್ ಮಾಡಲಾಗಿದೆ.

“ಹಲೋ ಪೊಲೀಸ್, ನಾನು 9/11 ಅನ್ನು ವರದಿ ಮಾಡಲು ಬಯಸುತ್ತೇನೆ” ಎಂದು ಕ್ರಿಕೆಟಿಗರಾದ ಮೊಹಮ್ಮದ್ ರಿಜ್ವಾನ್ ಮತ್ತು ಫಖರ್ ಜಮಾನ್ ಗಳಿಸಿದ ಸ್ಕೋರ್​ಗಳನ್ನು ಗೇಲಿ ಮಾಡುವ ಒಂದು ಮೀಲ್​ ಎಕ್ಸ್​ನಲ್ಲಿ ಹರಿದಾಡುತ್ತಿದೆ. ರಿಜ್ವಾನ್ 8 ಎಸೆತಗಳಲ್ಲಿ 9 ರನ್ ಗಳಿಸಿದರೆ, ಜಮಾನ್ 7 ಎಸೆತಗಳಲ್ಲಿ 11 ರನ್ ಗಳಿಸಿದ್ದರು.

ಅಜಯ್ ದೇವಗನ್ (ಗೋಪಾಲ್), ಶರ್ಮನ್ ಜೋಶಿ (ಲಕ್ಷ್ಮಣ್), ಅರ್ಷದ್ ವಾರ್ಸಿ (ಮಾಧವ್) ಮತ್ತು ತುಷಾರ್ ಕಪೂರ್ (ಲಕ್ಕಿ) ಅವರು ನಟಿಸಿರುವ ಗೋಲ್​ಮಾಲ್​ ವೀಡಿಯೊ ಕ್ಲಿಪ್ ಅನ್ನು ಬಳಕೆದಾರರು ಹಂಚಿಕೊಂಡಿದ್ದಾರೆ. ಈ ದೃಶ್ಯದಲ್ಲಿ, “ಪಾಗಲ್ ಹೋ ಗಯಾ ಹು ಮೈ (ನಾನು ಹುಚ್ಚನಾಗಿದ್ದೇನೆ)” ಎಂದು ಕೂಗುವುದನ್ನು ಕಾಣಬಹುದು.

Continue Reading

ಕ್ರೀಡೆ

Shreyas Iyer : ಬಿಸಿಸಿಐ ಕೇಂದ್ರ ಗುತ್ತಿಗೆ ತಪ್ಪಿದ ಕುರಿತು ಮಾತನಾಡಿದ ಶ್ರೇಯಸ್ ಅಯ್ಯರ್​; ಏನಂದ್ರು ಅವರು?

Shreyas Iyer : ಶ್ರೇಯಸ್ ಅಯ್ಯರ್ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ರಾಷ್ಟ್ರೀಯ ತಂಡದ ಭಾಗವಾಗಿದ್ದರು. ಆದಾಗ್ಯೂ, ಕಳಪೆ ಸ್ಕೋರ್​​ಗಳ ನಂತರ ಅವರನ್ನು ಕೊನೆಯ ಮೂರು ಟೆಸ್ಟ್​​ಗಳಿಗೆ ಕೈಬಿಡಲಾಯಿತು. ನಂತರ ಬೆನ್ನುನೋವಿನಿಂದಾಗಿ ಅವರು ಮುಂಬೈ ಪರ ರಣಜಿ ಟ್ರೋಫಿ ಪಂದ್ಯ ತಪ್ಪಿಸಿಕೊಂಡರು.

VISTARANEWS.COM


on

Shreyas Iyer
Koo

ಬೆಂಗಳೂರು: ಶ್ರೇಯಸ್ ಅಯ್ಯರ್ (Shreyas Iyer) ಈಗ ಐಪಿಎಲ್ ಗೆದ್ದ ಎಲೈಟ್ ನಾಯಕರ ಕ್ಲಬ್​ ಭಾಗವಾಗಿದ್ದಾರೆ. ಐಪಿಎಲ್ 2024ರಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ವೈಭವದತ್ತ ಮುನ್ನಡೆಸಿದ್ದರು. ಅವರು ತಂಡವನ್ನು ಮೂರನೇ ಐಪಿಎಲ್ ಪ್ರಶಸ್ತಿಗೆ ಮುನ್ನಡೆಸಿದ ಖುಷಿಯಲ್ಲಿದ್ದಾರೆ. ಇದು ಬಹುತೇಕ ದೋಷರಹಿತ ಅಭಿಯಾನವಾಗಿತ್ತು. ಆದಾಗ್ಯೂ, ಐಪಿಎಲ್ 2024 ರ ಮೊದಲು, ಶ್ರೇಯಸ್ ಅಯ್ಯರ್ ಕಠಿಣ ಸಮಯ ಹೊಂದಿದ್ದರು. ಅವರನ್ನು ಬಿಸಿಸಿಐ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಕೈಬಿಡಲಾಗಿದೆ. ಅದಕ್ಕೂ ಮೊದಲು ಅವರ ಫಿಟ್ನೆಸ್ ಬಗ್ಗೆ ವರದಿಗಳು ಬಂದವು. ಹೀಗಾಗಿ ಅವರು ರಣಜಿ ಟ್ರೋಫಿಯಿಂದ ತಪ್ಪಿಸಿಕೊಂಡಿದ್ದರು.

ಶ್ರೇಯಸ್ ಅಯ್ಯರ್ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ರಾಷ್ಟ್ರೀಯ ತಂಡದ ಭಾಗವಾಗಿದ್ದರು. ಆದಾಗ್ಯೂ, ಕಳಪೆ ಸ್ಕೋರ್​​ಗಳ ನಂತರ ಅವರನ್ನು ಕೊನೆಯ ಮೂರು ಟೆಸ್ಟ್​​ಗಳಿಗೆ ಕೈಬಿಡಲಾಯಿತು. ನಂತರ ಬೆನ್ನುನೋವಿನಿಂದಾಗಿ ಅವರು ಮುಂಬೈ ಪರ ರಣಜಿ ಟ್ರೋಫಿ ಪಂದ್ಯ ತಪ್ಪಿಸಿಕೊಂಡರು. ಆದಾಗ್ಯೂ, ದಿ ಇಂಡಿಯನ್ ಎಕ್ಸ್​ಪ್ರೆಸ್​ ವರದಿಯ ಪ್ರಕಾರ, ಎನ್​​ಸಿಎ ಅವರ ಬಗ್ಗೆ ವ್ಯತಿರಿಕ್ತ ಫಿಟ್ನೆಸ್ ವರದಿ ನೀಡಿತ್ತು. ಈ ಸಮಯದಲ್ಲಿ, ಶ್ರೇಯಸ್ ಅಯ್ಯರ್ ಕೋಲ್ಕತಾ ನೈಟ್ ರೈಡರ್ಸ್​ ತಂಡದೊಂದಿಗೆ ಐಪಿಎಲ್ ಪೂರ್ವ ಶಿಬಿರದಲ್ಲಿ ಭಾಗವಹಿಸಿದ್ದರು. ಹೀಗಾಗಿ ಅದು ಚರ್ಚೆಯ ವಿಷಯವಾಯಿತು.

ರಾಷ್ಟ್ರೀಯ ತಂಡಕ್ಕಾಗಿ ಆಡಲು ಬಯಸುವ ತಾರೆಗಳಿಗೆ ದೇಶೀಯ ಕ್ರಿಕೆಟ್ ಕಡ್ಡಾಯ ಎಂದು ಬಿಸಿಸಿಐ ಪತ್ರಿಕಾ ಪ್ರಕಟಣೆ ಈ ವೇಳೆ ಹೊರಡಿಸಿತ್ತು. ಇದೀಗ ಶ್ರೇಯಸ್​ ಅಯ್ಯರ್ ವೀಡಿಯೊ ಬಿಡುಗಡೆ ಮಾಡಿದ್ದು ಅಲ್ಲಿ ಅವರು ತಮ್ಮ ವಿರಾಮ, ಸಂವಹನದ ಕೊರತೆ ಬಗ್ಗೆ ಮಾತನಾಡಿದ್ದಾರೆ. ವಿಚಾರಗಳ ಬಗ್ಗೆ ಸ್ಪಷ್ಟವಾಗಿ ಹೇಳದೇ ಹೋದರೂ ಇದು ಬಿಸಿಸಿಐ ಒಪ್ಪಂದದ ತಿರಸ್ಕಾರ ಮತ್ತು ಅದರ ನಂತರ ಅವರು ಎದುರಿಸಿದ ಟೀಕೆಗಳಿಗೆ ಸ್ಪಷ್ಟ ಉತ್ತರವಾಗಿದೆ.

ನಾನು ಏಕ ದಿನ ವಿಶ್ವಕಪ್​ನಲ್ಲಿ ಅದ್ಭುತವಾಗಿ ಆಡಿದ್ದೆ. ಅದರ ನಂತರ ವಿರಾಮ ತೆಗೆದುಕೊಳ್ಳಲು ಬಯಸಿದ್ದೆ. ನನ್ನ ಫಿಟ್ನೆಸ್​ಗಾಗಿ ಕೆಲಸ ಮಾಡಲು ಮತ್ತು ಕೆಲವು ವಿಚಾರಗಳ ಬಗ್ಗೆ ಚೈತನ್ಯ ಪಡೆಯಲು ಬಯಸಿದ್ದೆ. ಸಂವಹನದ ಕೊರತೆಯಿಂದಾಗಿ, ಕೆಲವು ನಿರ್ಧಾರಗಳು ನನ್ನ ಪರವಾಗಿ ಆಗಲಿಲ್ಲ ಎಂದು ಶ್ರೇಯಸ್ ಅಯ್ಯರ್ ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಹೇಳಿದ್ದಾರೆ.

ಕ್ರಿಕೆಟ್​ ಬ್ಯಾಟ್ ನನಗೆ ಸೇರಿದ್ದು. ಉತ್ತಮ ಪ್ರದರ್ಶನ ನೀಡುವುದು ಮತ್ತು ಟ್ರೋಫಿಗಳನ್ನು ಗೆಲ್ಲುವುದು ನನ್ನ ಮೇಲಿನ ಜವಾಬ್ದಾರಿ ಎಂದು ನಾನು ಅರಿತುಕೊಂಡೆ. ನಾನು ರಣಜಿ ಟ್ರೋಫಿ ಮತ್ತು ಐಪಿಎಲ್ ಗೆದ್ದ ನಂತರ ಹಿಂದೆ ನಡೆದಿರುವ ಘಟನೆಗಳಿಗೆ ಸೂಕ್ತ ಉತ್ತರ ಎಂದು ನಾನು ನಿರ್ಧರಿಸಿದೆ. ಅದೃಷ್ಟವಶಾತ್ ಎಲ್ಲವೂ ಪೂರಕವಾಗಿ ನಡೆಯಿತು. ನಡೆದಿರುವ ಎಲ್ಲ ಘಟನೆಗಳಿಗೆ ನಾನು ಅಭಾರಿಯಾಗಿದ್ದೇನೆ ಎಂದು ಶ್ರೇಯಸ್​ ಹೇಳಿದ್ದಾರೆ.

Continue Reading
Advertisement
Gold Rate Today
ಚಿನ್ನದ ದರ13 mins ago

Gold Rate Today: ಆಭರಣ ಖರೀದಿಗೆ ಇದು ಸಕಾಲ; ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

MM Hills
ಚಾಮರಾಜನಗರ18 mins ago

MM Hills : ಮಲೆಮಹದೇಶ್ವರ ಬೆಟ್ಟದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ; ಒಬ್ಬರು ಸಾವು, ಮೂವರು ಗಂಭೀರ

Viral News
ದೇಶ33 mins ago

Viral News: ಅಯ್ಯೋ..ಇದೆಂಥಾ ಹುಚ್ಚಾಟ! ಬಿಜೆಪಿ ಗೆಲ್ಲಲ್ಲಿ ಎಂದು ಬೆರಳನ್ನೇ ಕತ್ತರಿಸಿಕೊಂಡ ಭೂಪ

Chandan Shetty Dhruva Sarja Talk With Niveditha Gowda
ಸ್ಯಾಂಡಲ್ ವುಡ್50 mins ago

Chandan Shetty: ಚಂದನ್-ನಿವೇದಿತಾ ಸಂಬಂಧ ಸರಿ ಮಾಡ್ತಾರಾ ಧ್ರುವ ಸರ್ಜಾ? ಪ್ರಥಮ್ ಕೊಟ್ಟಿದ್ದಾರೆ ಕ್ಲೂ!

Electric shock
ಬೆಂಗಳೂರು51 mins ago

Electric shock : ಫ್ಯಾನ್‌ ಸ್ವಿಚ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌; ವಿದ್ಯುತ್‌ ಕಂಬದಲ್ಲಿ ನೇತಾಡಿದ ಲೈನ್‌ಮ್ಯಾನ್‌ ಡೆಡ್‌ ಬಾಡಿ

Modi 3.0 Cabinet
Lok Sabha Election 202459 mins ago

Modi 3.0 Cabinet: ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಯಾರಿಗೆಲ್ಲ ಸಚಿವ ಸ್ಥಾನ? ಇವರೇ ನೋಡಿ ಸಂಭಾವ್ಯ ಮಿನಿಸ್ಟರ್‌ಗಳು

Kannada New Movie Ramesh Suresh Movie June 21st release
ಸ್ಯಾಂಡಲ್ ವುಡ್1 hour ago

Kannada New Movie: ʻರಮೇಶ್ ಸುರೇಶ್‌ʼ ಸಿನಿಮಾದಲ್ಲಿ ಇಬ್ಬರು ನಿರ್ದೇಶಕರು, ಇಬ್ಬರು ನಾಯಕರು ; ಜೂನ್ 21ರಂದು ತೆರೆಗೆ!

Road Accident in shivamogga
ಕ್ರೈಂ2 hours ago

Road Accident : ಮುಖಾಮುಖಿಯಾಗಿ ಬಂದ ಕಾರುಗಳು ಪೀಸ್‌ ಪೀಸ್‌; ಚಾಲಕ ಸ್ಪಾಟ್‌ ಡೆತ್‌

Rahul Gandhi
ದೇಶ2 hours ago

Rahul Gandhi: ಷೇರುಪೇಟೆಯಲ್ಲಿ ಭಾರಿ ಹಗರಣವಾಗಿದೆ ಎಂದಿದ್ದ ರಾಹುಲ್ ಗಾಂಧಿಗೆ ಐದೇ ದಿನದಲ್ಲಿ 25 ಲಕ್ಷ ರೂ. ಲಾಭ!

Raja Rani Show started Today onwards
ಕಿರುತೆರೆ2 hours ago

Raja Rani Show: ಇಂದಿನಿಂದ ʻರಾಜ ರಾಣಿ ರೀಲೋಡೆಡ್ʼ ರಿಯಾಲಿಟಿ ಶೋ ಶುರು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ18 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ20 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌