RCB vs KKR: ಇಂದಿನ ಪಂದ್ಯಕ್ಕೆ ಆರ್​ಸಿಬಿ ತಂಡದಲ್ಲಿ ಮೂರು ಬದಲಾವಣೆ ಖಚಿತ - Vistara News

ಕ್ರೀಡೆ

RCB vs KKR: ಇಂದಿನ ಪಂದ್ಯಕ್ಕೆ ಆರ್​ಸಿಬಿ ತಂಡದಲ್ಲಿ ಮೂರು ಬದಲಾವಣೆ ಖಚಿತ

IPL 2024: ವಿರಾಟ್​ ಕೊಹ್ಲಿ, ದಿನೇಶ್​ ಕಾರ್ತಿಕ್​ ಮಾತ್ರ ತಂಡದ ನಂಬಿಕಸ್ಥ ಆಟಗಾರರಾಗಿದ್ದಾರೆ. ಆರ್​ಸಿಬಿ ಬ್ಯಾಟಿಂಗ್‌ನಲ್ಲಿ ಯಶಸ್ವಿಯಾದರೆ ಬೌಲಿಂಗ್‌ನಲ್ಲಿ ಎಡವುತ್ತಿದೆ. ಬೌಲಿಂಗ್‌ನಲ್ಲಿ ಯಶಸ್ವಿಯಾದರೆ, ಬ್ಯಾಟಿಂಗ್‌ನಲ್ಲಿ ಪಲ್ಟಿ ಹೊಡೆಯುತ್ತಿದೆ. ಬೌಲಿಂಗ್‌ ಪಡೆಯಂತೂ ಸಂಪೂರ್ಣ ಮೊನಚು ಕಳೆದುಕೊಂಡಿದೆ. ಇದು, ಸಹಜವಾಗಿ ಆರ್‌ಸಿಬಿಯನ್ನು ಸೋಲಿನ ಸುಳಿಗೆ ತಳ್ಳಿದೆ.

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತಾ: ಪ್ಲೇ ಆಪ್​ ರೇಸ್​ನಲ್ಲಿ ಉಳಿಯಬೇಕಿದ್ದರೆ ಗೆಲ್ಲಲೇ ಬೇಕಾದ ಒತ್ತಡದಲ್ಲಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB vs KKR) ತಂಡ ಇಂದು ನಡೆಯುವ ಐಪಿಎಲ್​ನ(IPL 2024) ಹಗಲು ಪಂದ್ಯದಲ್ಲಿ ಬಲಿಷ್ಠ ಕೆಕೆಆರ್​ ವಿರುದ್ಧ ಕಣಕ್ಕಿಳಿಯಲಿದೆ. ಈ ಮಹತ್ವದ ಪಂದ್ಯಕ್ಕೆ ಆರ್​ಸಿಬಿ ತನ್ನ ಆಡುವ ಬಳಗದಲ್ಲಿ ಕನಿಷ್ಠ ಮೂರು ಬದಲಾವಣೆ ಮಾಡುವುದು ಖಚಿತ.

ಕಳೆದ ಪಂದ್ಯದಲ್ಲಿ ಆಡದ ಗ್ಲೆನ್​ ಮ್ಯಾಕ್ಸ್​ವೆಲ್​, ಮೊಹಮ್ಮದ್​ ಸಿರಾಜ್​ ಈ ಪಂದ್ಯದಲ್ಲಿ ಆಡುವುದು ಬಹುತೇಖ ಖಚಿತ. ಇವರಿಗಾಗಿ ಟೋಪ್ಲಿ ಮತ್ತು ವಿಜಯಕುಮಾರ್ ವೈಶಾಕ್ ಜಾಗ ಬಿಡಬೇಕಾದೀತು. ರಜತ್​ ಪಾಟಿದಾರ್​ ಬದಲು ಕನ್ನಡಿಗ ಮನೋಜ್ ಭಾಂಡಗೆ ಅಥವಾ ಅನೂಜ್​ ರಾವುತ್​ ಅವಕಾಶ ಪಡೆಯಬಹುದು. ಇನ್ನೊಂದು ಸಾಧ್ಯತೆ ಎಂದರೆ ಮ್ಯಾಕ್ಸ್​ವೆಲ್​ ಈ ಪಂದ್ಯದಿಂದಲೂ ಹಿಂದೆ ಸರಿದರೆ ಆಗ ಕ್ಯಾಮರೂನ್​ ಗ್ರೀನ್​ ಆಡಬಹುದು. ಒಟ್ಟಿನಲ್ಲಿ ಮೂರು ಬದಲಾವಣೆ ನಿಶ್ಚಿತ.

2017ರಲ್ಲಿ ಕೆಕೆಆರ್​ ವಿರುದ್ಧ ಇಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ಕೇವಲ 49 ರನ್​ಗಳಿಗೆ ಆಲೌಟ್​ ಆಗಿತ್ತು. ಈ ವರೆಗೆ ಆರ್​ಸಿಬಿ ಮತ್ತು ಕೆಕೆಆರ್​ ಐಪಿಎಲ್​ನಲ್ಲಿ 33 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ 14 ಗೆಲುವು ಕೆಕೆಆರ್​ 19 ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಕೆಕೆಆರ್​ ಮುಂದಿದೆ. 

ಪಿಚ್​ ರಿಪೋರ್ಟ್​

ಈಡನ್‌ ಗಾರ್ಡನ್ಸ್‌ನ(Eden Gardens) ಪಿಚ್​ ಸೀಮರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಇಲ್ಲಿ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಿನ ಅವಕಾಶ ಏಕೆಂದರೆ ರಾತ್ರಿಯ ವೇಳೆ ಇಲ್ಲಿ ಇಬ್ಬಿನಿ ಸಮಸ್ಯೆ ಕಾಡಲಿದೆ. ಇದು ಬೌಲರ್​ಗಳಿಗೆ ಕಷ್ಟಕರವಾಗಲಿದೆ. ಕೈಯಲ್ಲಿ ಸರಿಯಾಗಿ ಚೆಂಡು ನಿಲ್ಲದೆ ನಿರ್ದಿಷ್ಟ ಗುರಿಗೆ ಬೌಲಿಂಗ್​ ಮಾಡಲು ಸಾಧ್ಯವಾಗುವುದಿಲ್ಲ. ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡರೆ ಉತ್ತಮ. ವಿರಾಟ್​ ಕೊಹ್ಲಿ 2019ರಲ್ಲಿ ಕೆಕೆಆರ್​ ವಿರುದ್ಧ ಇದೇ ಮೈದಾನದಲ್ಲಿ ಶತಕ ಕೂಡ ಬಾರಿಸಿದ್ದರು. ಈ ಬಾರಿ ಏನು ಮಾಡಲಿದ್ದಾರೆ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ IPL 2024 POINTS TABLE: ಹೈದರಾಬಾದ್​ಗೆ ಭರ್ಜರಿ ಗೆಲುವು; ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ

ತವರಿನಲ್ಲೇ ಸತತ ಸೋಲಿನ ಅವಮಾನ ಕಂಡಿರುವ ಆರ್​ಸಿಬಿ ಹೊರಗಡೆ ಆಡಿದ ಪಂದ್ಯದಲ್ಲಿ ಗೆಲ್ಲಬಹುದೇ ಎನ್ನುವ ಪ್ರಶ್ನೆ ಮೂಡುವುದು ಕೂಡ ಸಹಜ. ತಂಡದದಲ್ಲಿ ಸ್ಟಾರ್​ ಆಟಗಾರರಿದ್ದರೂ ಕೂಡ ಯಾರು ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ವಿರಾಟ್​ ಕೊಹ್ಲಿ, ದಿನೇಶ್​ ಕಾರ್ತಿಕ್​ ಮಾತ್ರ ತಂಡದ ನಂಬಿಕಸ್ಥ ಆಟಗಾರರಾಗಿದ್ದಾರೆ. ಆರ್​ಸಿಬಿ ಬ್ಯಾಟಿಂಗ್‌ನಲ್ಲಿ ಯಶಸ್ವಿಯಾದರೆ ಬೌಲಿಂಗ್‌ನಲ್ಲಿ ಎಡವುತ್ತಿದೆ. ಬೌಲಿಂಗ್‌ನಲ್ಲಿ ಯಶಸ್ವಿಯಾದರೆ, ಬ್ಯಾಟಿಂಗ್‌ನಲ್ಲಿ ಪಲ್ಟಿ ಹೊಡೆಯುತ್ತಿದೆ. ಬೌಲಿಂಗ್‌ ಪಡೆಯಂತೂ ಸಂಪೂರ್ಣ ಮೊನಚು ಕಳೆದುಕೊಂಡಿದೆ. ಇದು, ಸಹಜವಾಗಿ ಆರ್‌ಸಿಬಿಯನ್ನು ಸೋಲಿನ ಸುಳಿಗೆ ತಳ್ಳಿದೆ. ಒಟ್ಟಿನಲ್ಲಿ ಸಂಘಟನಾತ್ಮಕ ಹೋರಾಟವೇ ಬರುತ್ತಿಲ್ಲ. 

ಸಂಭಾಬ್ಯ ಆಡುವ ಬಳಗ


ಆರ್​ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ಮನೋಜ್ ಭಾಂಡಗೆ/ಅನೂಜ್ ರಾವುತ್​, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್ (ವಿಕಿ), ಮಹಿಪಾಲ್ ಲೊಮ್ರೋರ್, ಮೊಹಮ್ಮದ್​ ಸಿರಾಜ್​, ಗ್ಲೆನ್​ ಮ್ಯಾಕ್ಸ್​ವೆಲ್​/ಕ್ಯಾಮರೂನ್​ ಗ್ರೀನ್​, ಲಾಕಿ ಫರ್ಗುಸನ್, ಯಶ್ ದಯಾಲ್.

ಕೆಕೆಆರ್​: ಫಿಲಿಪ್ ಸಾಲ್ಟ್ (ವಿಕಿ), ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್/ ನಿತೇಶ್​ ರಾಣಾ, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

IPL 2024: ಎಂಐ ವಿರುದ್ಧದ ಪಂದ್ಯದ ವೇಳೆ ಮಯಾಂಕ್ ತಂಡಕ್ಕೆ ಮರಳಿದ್ದರು. ಆದರೆ ಗಾಯ ಮತ್ತೆ ಉಲ್ಬಣಗೊಂಡ ಕಾರಣ 3.1 ಓವರ್​ಗಳ ಎಸೆದ ನಂತರ ಮೈದಾನದಿಂದ ಹೊರಗುಳಿಯಬೇಕಾಯಿತು. ಯುವ ಆಟಗಾರನ ಅಭಿಯಾನವು ಮುಗಿದಿದೆ ಎಂದು ಲ್ಯಾಂಗರ್ ಈಗ ಬಹಿರಂಗಪಡಿಸಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಲಕ್ನೊ ಸೂಪರ್​ ಜೈಂಟ್ಸ್​ ವೇಗದ ಬೌಲರ್​​ ಮಯಾಂಕ್ ಯಾದವ್ ಗಾಯದ ಸಮಸ್ಯೆ ಹೆಚ್ಚಾಗಿದ್ದು ಐಪಿಎಲ್​ನ (IPL 2024) ಉಳಿದ ಪಂದ್ಯಗಳಿಂದ ಹೊರಕ್ಕೆ ಉಳಿಯುವಂತಾಗಿದೆ. ಹಿಂದಿನ ಪಂದ್ಯದಲ್ಲಿ ಅರ್ಧದಲ್ಲೇ ಮೈದಾನದಿಂದ ಹೊರಕ್ಕೆ ಹೋಗಿದ್ದ ಅವರು ಐಪಿಎಲ್ 2024 ಋತುವಿನ ಉಳಿದ ಭಾಗವನ್ನು ಕಳೆದುಕೊಳ್ಳಲಿದ್ದಾರೆ ಎಂದು ಎಲ್ಎಸ್​ಜಿ ಕೋಚ್ ಜಸ್ಟಿನ್ ಲ್ಯಾಂಗರ್ ಖಚಿತಪಡಿಸಿದ್ದಾರೆ. ಐಪಿಎಲ್ 2024 ರಲ್ಲಿ ಮಯಾಂಕ್ 2 ಪಂದ್ಯಗಳಲ್ಲಿ 6 ವಿಕೆಟ್ ಪಡೆಯುವ ಮೂಲಕ ತಮ್ಮ ಜೀವನಕ್ಕೆ ಅದ್ಭುತ ಆರಂಭ ನೀಡಿದ್ದರು. ನಂತರ ದೆಹಲಿ ವೇಗಿ ಗಾಯಗೊಂಡು 5 ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

ಎಂಐ ವಿರುದ್ಧದ ಪಂದ್ಯದ ವೇಳೆ ಮಯಾಂಕ್ ತಂಡಕ್ಕೆ ಮರಳಿದ್ದರು. ಆದರೆ ಗಾಯ ಮತ್ತೆ ಉಲ್ಬಣಗೊಂಡ ಕಾರಣ 3.1 ಓವರ್​ಗಳ ಎಸೆದ ನಂತರ ಮೈದಾನದಿಂದ ಹೊರಗುಳಿಯಬೇಕಾಯಿತು. ಯುವ ಆಟಗಾರನ ಅಭಿಯಾನವು ಮುಗಿದಿದೆ ಎಂದು ಲ್ಯಾಂಗರ್ ಈಗ ಬಹಿರಂಗಪಡಿಸಿದ್ದಾರೆ. ಮಯಾಂಕ್ ಅವರಿಗೆ ಸ್ಕ್ಯಾನ್ ಮಾಡಲಾಯಿತು ಮತ್ತು ಅವರು ಮೊದಲ ಗಾಯ ಮಾಡಿಕೊಂಡ ಅದೇ ಪ್ರದೇಶದಲ್ಲಿ ಅವರಿಗೆ ಸಣ್ಣ ಗಾಯವಿದೆ ಎಂದು ಎಲ್ಎಸ್​ಜಿ ಕೋಚ್ ಹೇಳಿದರು.

ಇಲ್ಲ, ಅವರು ಪ್ಲೇ-ಆಫ್​ನಲ್ಲಿ ಆಡಬಹುದೆಂದು ನಮ್ಮ ಆಶಾವಾದ ಇಟ್ಟುಕೊಂಡಿದ್ದೆವು. ಆದರೆ ನಾನು ವಾಸ್ತವವಾದಿಯೂ ಹೌದು. ಪಂದ್ಯಾವಳಿಯ ಕೊನೆ ಹಂತಕ್ಕೆ ಬರುವುದು ಅವರಿಗೆ ಕಷ್ಟಕರವಾಗಿರುತ್ತದೆ ಎಂದು ಹೇಳಿದರು.

“ಅವರು (ಮಯಾಂಕ್) ಸ್ಕ್ಯಾನ್ ಮಾಡಿಸಿಕೊಂಡಿದ್ದಾರೆ. ಅವರ ಕೊನೆಯ ಗಾಯ (ಗಾಯ) ಇದ್ದ ಪ್ರದೇಶಕ್ಕೆ ಹೋಲುವ ಪ್ರದೇಶದಲ್ಲಿ ಅವರಿಗೆ ಸಣ್ಣ ಹರಿತ ಕಂಡು ಬಂದಿದೆ. ಇದು ತುಂಬಾ ದುರದೃಷ್ಟಕರ. ಅವರು ಆಟಕ್ಕೆ ಮರಳಿದಾಗ ಅವರು ಬೀರಿದ ಪರಿಣಾಮವನ್ನು ನಾವು ನೋಡಿದ್ದೇವೆ, “ಎಂದು ಲ್ಯಾಂಗರ್ ಹೇಳಿದರು.

ಪಂದ್ಯದ ನಂತರ ಮಯಾಂಕ್ ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಮಾತನಾಡಿದ್ದಾರೆ. ಅವರು ವೇಗದ ಬೌಲರ್ ಆಗಲು ಹೊರಟರೆ ಅಂತಹ ಗಾಯಗಳನ್ನು ಎದುರಿಸಬೇಕಾಗುತ್ತದೆ ಹೇಳಿದರು ಎಂದು ಲ್ಯಾಂಗರ್ ಹೇಳಿದರು.

“ವೇಗದ ಬೌಲರ್ಗಳ ಬಗ್ಗೆ ಯಾವಾಗಲೂ ಸಾಕಷ್ಟು ಚರ್ಚೆ ಇರುತ್ತದೆ. ಪಂದ್ಯದ ನಂತರ ಅವರು [ಜಸ್ಪ್ರೀತ್] ಬುಮ್ರಾ ಅವರೊಂದಿಗೆ ಮಾತನಾಡಿದ್ದಾರೆ ಎಂದು ನನಗೆ ತಿಳಿದಿದೆ. ವೇಗದ ಬೌಲರ್ ಆಗಲು ಹೊರಟರೆ ಆಗುವ ಗಾಯವನ್ನು ವಿವರಿಸಿದ್ದಾರೆ. ನನ್ನ ಅನುಭವದಲ್ಲಿ, ಪ್ರತಿಯೊಬ್ಬ ಯುವ ವೇಗದ ಬೌಲರ್, ಬಹುಶಃ ಅವರು 25 ಅಥವಾ 26 ವರ್ಷ ವಯಸ್ಸಿನವರೆಗೆ ವಿಭಿನ್ನ ಗಾಯಗಳನ್ನು ಅನುಭವಿಸಲಿದ್ದಾರೆ. ಇದು ಅತ್ಯಂತ ದುರದೃಷ್ಟಕರ. ಆದಾಗ್ಯೂ ಅವರು ಅಪಾರ ಸಾಮರ್ಥ್ಯವನ್ನು ಹೊಂದಿದ್ದಾರೆ, “ಎಂದು ಲ್ಯಾಂಗರ್ ಹೇಳಿದರು.

ಮಯಾಂಕ್ ಅವರ ವಿಚಾರದಲ್ಲಿ ಎಲ್ಎಸ್ಜಿ ತಂಡದ ಗಾಯ ನಿರ್ವಹಣೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಲ್ಯಾಂಗರ್ ಇದಕ್ಕೆ ಪ್ರತಿಕ್ರಿಯಿಸಿದ್ದು, ಅವರ ಪುನಶ್ಚೇತನವು ಉತ್ತಮವಾಗಿ ಸಾಗಿದೆ ಮತ್ತು ವೇಗಿ ನೋವು ಮುಕ್ತರಾಗಿದ್ದಾರೆ ಎಂದು ಹೇಳಿದರು.

ಅವರ ಪುನಶ್ಚೇತನ ಅತ್ಯುತ್ತಮವಾಗಿತ್ತು. ಅವರು [ಎಂಐ ವಿರುದ್ಧ] ಆಟಕ್ಕೆ ಪ್ರವೇಶಿಸಿದರು. ಪಂದ್ಯಕ್ಕೆ ಮೊದಲು ಒಂದೆರಡು ಸಮಸ್ಯೆಗಳನ್ನು ಹೊಂದಿದ್ದರು. ಸಂಪೂರ್ಣವಾಗಿ ನೋವು ಮುಕ್ತರಾಗಿದ್ದರು. ಆದ್ದರಿಂದ, ಇದು ಅವರಿಗೆ ತುಂಬಾ ಬೇಸರದ ವಿಯ. ಅವರು (ಪಂದ್ಯಾವಳಿಯ ಉಳಿದ ಭಾಗ) ಆಡದಿರುವುದು ಎಲ್ಎಸ್ಜಿಗೆ ನಿರಾಶಾದಾಯಕ ಎಂದು ಹೇಳಿದ್ದಾರೆ.

Continue Reading

ಕ್ರೀಡೆ

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

IPL 2024: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​​ಸಿಬಿ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಗುಜರಾತ್ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿದ ಕಾರಣ 19.3 ಓವರ್​ಗಳಲ್ಲಿ 147 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆರ್​ಸಿಬಿ ಇನ್ನೂ 38 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ 152 ರನ್ ಬಾರಿಸಿ ಗೆಲವು ಪಡೆಯಿತು.

VISTARANEWS.COM


on

IPL 2024
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರು ನೆಲದ ತನ್ನ ಅಭಿಮಾನಿಗಳಿಗೆ ಭರ್ಜರಿ ಖುಷಿ ಕೊಟ್ಟಿದೆ. ಗುಜರಾತ್ ಟೈಟನ್ಸ್ ವಿರುದ್ಧದ ಐಪಿಎಲ್​ (IPL 2024) ಪಂದ್ಯದಲ್ಲಿ 4 ವಿಕೆಟ್​ ಗೆಲುವು ದಾಖಲಿಸುವ ಮೂಲಕ ಹ್ಯಾಟ್ರಿಕ್​ ವಿಜಯವನ್ನು ತನ್ನದಾಗಿಸಿಕೊಂಡಿದೆ. ಆದರೆ ಮೊದಲು ಎಲ್ಲರಿಗೂ ಒಂದು ಬಾರಿ ಭಯ ಹುಟ್ಟಿಸಿ ಬಳಿಕ ಗೆಲುವಿನ ನಗೆ ಬೀರಿದೆ. ಈ ಗೆಲುವಿನೊಂದಿಗೆ ಆಡಿರುವ 11 ಪಂದ್ಯಗಳಲ್ಲಿ ನಾಲ್ಕು ಗೆಲುವಿನೊಂದಿಗೆ ಒಟ್ಟಾರೆ 8 ಅಂಕಗಳನ್ನು ಗಳಿಸಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಿಂದ ಮೇಲಕ್ಕೆದ್ದು 7ನೇ ಸ್ಥಾನಕ್ಕೆ ಜಿಗಿದಿದೆ. ಮುಂಬಯಿ ಇಂಡಿಯನ್ಸ್​ ಬಳಗವನ್ನು 10ನೇ ಸ್ಥಾನಕ್ಕೆ ತಳ್ಳಿದ್ದು, ಗುಜರಾತ್​ 9 ಹಾಗೂ ಪಂಜಾಬ್ ಅದಕ್ಕಿಂತ ಮೇಲಿನ ಕ್ರಮಾಂಕದಲ್ಲಿದೆ.

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​​ಸಿಬಿ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಗುಜರಾತ್ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿದ ಕಾರಣ 19.3 ಓವರ್​ಗಳಲ್ಲಿ 147 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆರ್​ಸಿಬಿ ಇನ್ನೂ 38 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ 152 ರನ್ ಬಾರಿಸಿ ಗೆಲವು ಪಡೆಯಿತು.

ಸಾಧಾರಣ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಆರ್​ಸಿಬಿ ಉತ್ತಮ ಆರಂಭವನ್ನೇ ಪಡೆಯಿತು. ಫಾಫ್​ ಡು ಪ್ಲೆಸಿಸ್​ 23 ಎಸೆತಕ್ಕೆ 63 ರನ್ ಬಾರಿಸಿದರು. ಕೇವಲ 3.1 ಓವರ್​ಗಳಲ್ಲಿ 50 ರನ್ ಗಡಿ ದಾಟಿಸಿದ ಕೊಹ್ಲಿ ಮತ್ತು ಫಾಪ್​ ಗೆಲುವು ಸುಲಭ ಎಂದು ಅಂದುಕೊಳ್ಳುವಂತೆ ಮಾಡಿದರು. ಈ ಜೋಡಿ ಮೊದಲ ವಿಕೆಟ್​ಗೆ 5.5 ಓವರ್​ಗಳಲ್ಲಿ 92 ರನ್ ಬಾರಿಸಿತು. ಹೀಗಾಗಿ ಕೆಲವೇ ಓವರ್​ಗಳಲ್ಲಿ ಆರ್​ಸಿಬಿ ಗೆಲ್ಲುತ್ತದೆ ಎಂದು ಅಂದುಕೊಳ್ಳಲಾಯಿತು.

ಒಂದು ಬಾರಿ ಫಾಫ್​ ಡು ಪ್ಲೆಸಿಸ್ ಔಟಾದ ಬಳಿಕ ಆರ್​ಸಿಬಿಯ ರೋದನೆ ಶುರುವಾಯಿತು. ವಿಲ್​ ಜಾಕ್ಸ್​ 1 ರನ್​, ರಜತ್ ಪಾಟೀದಾರ್​ 2 ರನ್​, ಗ್ಲೆನ್​ ಮ್ಯಾಕ್ಸ್​ವೆಲ್​ 4 ರನ್​, ಕ್ಯಾಮೆರೂನ್ ಗ್ರೀನ್​ 1 ರನ್​ಗೆ ಔಟಾದರು. ಸ್ವಲ್ಪ ಹೊತ್ತಿನಲ್ಲಿ ವಿರಾಟ್​ ಕೊಹ್ಲಿಯೂ 42 ರನ್ ಬಾರಿಸಿ ಔಟಾದರು. 117 ರನ್​ಗಳಿಗೆ 6 ವಿಕೆಟ್​ ಕಳೆದುಕೊಂಡ ಆರ್​ಸಿಬಿ ಅಭಿಮಾನಿಗಳಿಗೆ ಆತಂಕ ಉಂಟು ಮಾಡಿದರು. ಅದರೆ, ಕೊನೆಯಲ್ಲಿ ಪಿನಿಶರ್ ದಿನೇಶ್ ಕಾರ್ತಿಕ್​ 21 ರನ್ ಹಾಗೂ ಸ್ವಪ್ನಿಲ್​ ಸಿಂಗ್ 15 ರನ್ ಬಾರಿಸಿ ಗೆಲುವು ತಂದುಕೊಟ್ಟರು.

ಇದನ್ನೂ ಓದಿ: Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

ಗೆಲುವಿನ ಹತ್ತಿರಕ್ಕೆ ಬಂದಿದ್ದ ಆರ್​ಸಿಬಿಗೆ ಗುಜರಾತ್​ ಬೌಲರ್​ಗಳು ಒತ್ತಡ ತಂದರು. ಜೋಶ್ ಲಿಟರ್​ 4 ವಿಕೆಟ್​ ಹಾಗೂ ನೂರ್ ಅಹಮದ್​ 2 ವಿಕೆಟ್ ಪಡೆದು ಗೆಲುವಿಗೆ ಯತ್ನಿಸಿದರು. ಆದರೆ, ಆರ್​ಸಿಬಿ ಪೇಚಾಡಿ ಗೆಲುವು ಕಂಡಿತು.

ಗುಜರಾತ್ ಬ್ಯಾಟಿಂಗ್ ವೈಫಲ್ಯ

ಬ್ಯಾಟಿಂಗ್ ಆರಂಭಿಸಿದ ಗುಜರಾತ್​​ ಸ್ಥಿರವಾಗಿ ಆಡಲಿಲ್ಲ. ವೃದ್ಧಿಮಾನ್​ ಸಾಹ (1 ರನ್​), ಶುಭ್​​ಮನ್​ ಗಿಲ್​ (2 ರನ್​), ಸಾಯಿ ಸುದರ್ಶನ್​ (6 ರನ್ ) ಬೇಗ ಔಟಾದ ಕಾರಣ ಉತ್ತಮ ಆರಂಭ ಸಿಗಲಿಲ್ಲ. 19 ರನ್​ಗೆ 3 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಬಳಿಕ ಶಾರುಖ್​ ಖಾನ್​ (37 ರನ್​), ಡೇವಿಡ್​ ಮಿಲ್ಲರ್​ (30), ರಾಹುಲ್ ತೆವಟಿಯಾ(35), ರಶೀದ್ ಖಾನ್​ (18) ಬಾರಿಸಿ ಸುತ್ತಮ ಮೊತ್ತ ಪೇರಿಸಲು ನೆರವಾದರು. ಆರ್​ಸಿಬಿ ಪರ ಯಶ್​ ದಯಾಳ್​, ಮೊಹಮ್ಮದ್ ಸಿರಾಜ್​, ವಿಜಯ್​​ ಕುಮಾರ್ ವೈಶಾಖ್​ ತಲಾ 2 ವಿಕೆಟ್ ಉರುಳಿಸಿದರು.

Continue Reading

ಕ್ರೀಡೆ

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

VISTARANEWS.COM


on

Virat kohli
Koo

ಬೆಂಗಳೂರು: ವಿರಾಟ್ ಕೊಹ್ಲಿ (Virat kohli ) ಪಂದ್ಯವೊಂದರಲ್ಲಿ ಅತ್ಯುತ್ತಮ ಶಾಟ್ ಆಡಿದಾಗ ಕ್ರಿಕೆಟ್ ಅಭಿಮಾನಿಗಳು ಅದನ್ನು ಮತ್ತೆ ಮತ್ತೆ ನೋಡಲು ಬಯಸುತ್ತಾರೆ. ಅಂತೆಯೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಆರ್​ಸಿಬಿಯ ಐಪಿಎಲ್ 2024 ರ ಪಂದ್ಯದಲ್ಲಿ ಮೋಹಿತ್ ಶರ್ಮಾ ವಿರುದ್ಧ ಅವರು ಇದೇ ರೀತಿಯ ಶಾಟ್ ಆಡಿದರು. ಅಲ್ಲದೆ, ಸಿಕ್ಸರ್​ ಬಾರಿಸಿದ ಅವರು ಕಿಂಗ್ ರೀತಿಯಲ್ಲಿ ಪೋಸ್ ಕೊಟ್ಟರು. ಅವರ ಸಿಕ್ಸರ್ ಪೋಸ್​ ಸಿಕ್ಕಾಪಟ್ಟೆ ವೈರಲ್ ಆಯಿತು.

148 ರನ್​ಗಳ ಗುರಿ ಬೆನ್ನಟ್ಟಿದ್ದ ಆರ್​ಸಿಬಿಗೆ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿಸ್ ಕೇವಲ 3.1 ಓವರ್​ಗಳ 50 ರನ್​ ಬಾರಿಸಿದರು. ಮೋಹಿತ್ ಆಫ್ ಸ್ಟಂಪ್ ಹೊರಗೆ ಫುಲ್ ಲೆಂತ್​ ಎಸೆತ ಎಸೆದಾಗ ಕೊಹ್ಲಿ ಸಿಕ್ಸರ್ ಬಾರಿಸಿದರು. ಪಂದ್ಯದಲ್ಲಿ ವಿರಾಟ್​ ಕೊಹ್ಲಿ 42 ರನ್ ಬಾರಿಸಿ ಮಿಂಚಿದರು.

ಪುತ್ರ ಅಕಾಯ್​ ಹುಟ್ಟಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ

ವಿರಾಟ್​ ಕೊಹ್ಲಿಯ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ತಮ್ಮ ಮಗ ಅಕಾಯ್ ಕೊಹ್ಲಿ (AkaI kohli) ಜನಿಸಿದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್​ (IPL 2024) ಪಂದ್ಯದ ವೇಳೆ ಗ್ಯಾಲರಿಯಲ್ಲಿದ್ದ ಅನುಷ್ಕಾ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯ ನಡೆದಿದ್ದು, ಆರ್​ಸಿಬಿ ಗುಜರಾತ್​ ತಂಡವನ್ನು ಎದುರಿಸಿತು.

ನಟಿ ಸ್ಟ್ಯಾಂಡ್ ಗಳಲ್ಲಿ ಕುಳಿತಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ತನ್ನ ಪತಿ ಆಡುವುದನ್ನು ನೀಡಿ ಅವರು ನಗುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: IPL 2024 : ಭಾರೀ ಭದ್ರತಾ ಲೋಪ; ಎಸ್​ಆರ್​​ಎಚ್​ ವಿದೇಶಿ ಆಟಗಾರನ ಮೇಲೆ ಮುಗಿಬಿದ್ದ ಸಾರ್ವಜನಿಕರು!

ನಟಿ ಇತ್ತೀಚೆಗೆ ತನ್ನ ಹುಟ್ಟುಹಬ್ಬವನ್ನು ವಿರಾಟ್ ಮತ್ತು ಅವರ ಸಹ ಆರ್​​ಸಿಬಿ ಆಟಗಾರರೊಂದಿಗೆ ಆಚರಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಫಾಫ್ ಡು ಪ್ಲೆಸಿಸ್ ಹಂಚಿಕೊಂಡಿರುವ ಫೋಟೋದಲ್ಲಿ ಅನುಷ್ಕಾ ಶರ್ಮಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ನಟಿ ಮೇ 1ರಂದು ಬುಧವಾರ ತನ್ನ 36 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಅನುಷ್ಕಾ ತನ್ನ ಹುಟ್ಟುಹಬ್ಬದಂದು ಬೆಂಗಳೂರಿನಲ್ಲಿದ್ದರು ಮತ್ತು ಆತ್ಮೀಯ ಪಾರ್ಟಿ ಆಯೋಜಿಸಿದ್ದರು ಎಂದು ಕ್ರಿಕೆಟಿಗರು ಬಹಿರಂಗಪಡಿಸಿದ್ದರು.

ಅನುಷ್ಕಾ ಅವರ ಹುಟ್ಟುಹಬ್ಬದಂದು, ವಿರಾಟ್ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್​ನಲ್ಲಿ ತಮ್ಮ ಹೆಂಡತಿಯ ಮುದ್ದಾದ ಫೋಟೋಗಳನ್ನು ಹಂಚಿಕೊಂಡಿದ್ದರು. ಅವರ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಟಿಪ್ಪಣಿಯನ್ನು ಬರೆದಿದ್ದರು. “ನಿನು ನನಗೆ ಸಿಗದಿದ್ದರೆ ನಾನು ಸಂಪೂರ್ಣವಾಗಿ ಕಳೆದುಹೋಗುತ್ತಿದ್ದೆ. ಹುಟ್ಟುಹಬ್ಬದ ಶುಭಾಶಯಗಳು” ಎಂದು ಬರೆದು ಕೆಂಪು ಹೃದಯದ ಎಮೋಜಿಗಳನ್ನು ಹಾಕಿದ್ದರು.

Continue Reading

Latest

IPL 2024 : ಪುತ್ರ ಅಕಾಯ್​ ಹುಟ್ಟಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ

IPL 2024: ನಟಿ ಇತ್ತೀಚೆಗೆ ತನ್ನ ಹುಟ್ಟುಹಬ್ಬವನ್ನು ವಿರಾಟ್ ಮತ್ತು ಅವರ ಸಹ ಆರ್​​ಸಿಬಿ ಆಟಗಾರರೊಂದಿಗೆ ಆಚರಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಫಾಫ್ ಡು ಪ್ಲೆಸಿಸ್ ಹಂಚಿಕೊಂಡಿರುವ ಫೋಟೋದಲ್ಲಿ ಅನುಷ್ಕಾ ಶರ್ಮಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.

VISTARANEWS.COM


on

IPL 2024
Koo

ಬೆಂಗಳೂರು: ವಿರಾಟ್​ ಕೊಹ್ಲಿಯ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ತಮ್ಮ ಮಗ ಅಕಾಯ್ ಕೊಹ್ಲಿ (AkaI kohli) ಜನಿಸಿದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್​ (IPL 2024) ಪಂದ್ಯದ ವೇಳೆ ಗ್ಯಾಲರಿಯಲ್ಲಿದ್ದ ಅನುಷ್ಕಾ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯ ನಡೆದಿದ್ದು, ಆರ್​ಸಿಬಿ ಗುಜರಾತ್​ ತಂಡವನ್ನು ಎದುರಿಸುತ್ತಿದೆ.

ನಟಿ ಸ್ಟ್ಯಾಂಡ್ ಗಳಲ್ಲಿ ಕುಳಿತಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ತನ್ನ ಪತಿ ಆಡುವುದನ್ನು ನೀಡಿ ಅವರು ನಗುತ್ತಿರುವುದನ್ನು ಕಾಣಬಹುದು.

ನಟಿ ಇತ್ತೀಚೆಗೆ ತನ್ನ ಹುಟ್ಟುಹಬ್ಬವನ್ನು ವಿರಾಟ್ ಮತ್ತು ಅವರ ಸಹ ಆರ್​​ಸಿಬಿ ಆಟಗಾರರೊಂದಿಗೆ ಆಚರಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಫಾಫ್ ಡು ಪ್ಲೆಸಿಸ್ ಹಂಚಿಕೊಂಡಿರುವ ಫೋಟೋದಲ್ಲಿ ಅನುಷ್ಕಾ ಶರ್ಮಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ನಟಿ ಮೇ 1ರಂದು ಬುಧವಾರ ತನ್ನ 36 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಅನುಷ್ಕಾ ತನ್ನ ಹುಟ್ಟುಹಬ್ಬದಂದು ಬೆಂಗಳೂರಿನಲ್ಲಿದ್ದರು ಮತ್ತು ಆತ್ಮೀಯ ಪಾರ್ಟಿ ಆಯೋಜಿಸಿದ್ದರು ಎಂದು ಕ್ರಿಕೆಟಿಗರು ಬಹಿರಂಗಪಡಿಸಿದ್ದರು.

ಅನುಷ್ಕಾ ಅವರ ಹುಟ್ಟುಹಬ್ಬದಂದು, ವಿರಾಟ್ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್​ನಲ್ಲಿ ತಮ್ಮ ಹೆಂಡತಿಯ ಮುದ್ದಾದ ಫೋಟೋಗಳನ್ನು ಹಂಚಿಕೊಂಡಿದ್ದರು. ಅವರ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಟಿಪ್ಪಣಿಯನ್ನು ಬರೆದಿದ್ದರು. “ನಿನು ನನಗೆ ಸಿಗದಿದ್ದರೆ ನಾನು ಸಂಪೂರ್ಣವಾಗಿ ಕಳೆದುಹೋಗುತ್ತಿದ್ದೆ. ಹುಟ್ಟುಹಬ್ಬದ ಶುಭಾಶಯಗಳು” ಎಂದು ಬರೆದು ಕೆಂಪು ಹೃದಯದ ಎಮೋಜಿಗಳನ್ನು ಹಾಕಿದ್ದರು.

ಇದನ್ನೂ ಓದಿ: IPL 2024 : ಭಾರೀ ಭದ್ರತಾ ಲೋಪ; ಎಸ್​ಆರ್​​ಎಚ್​ ವಿದೇಶಿ ಆಟಗಾರನ ಮೇಲೆ ಮುಗಿಬಿದ್ದ ಸಾರ್ವಜನಿಕರು!

ವಿರಾಟ್ ಮತ್ತು ಅನುಷ್ಕಾ 2013 ರಲ್ಲಿ ಶಾಂಪೂ ಬ್ರಾಂಡ್​ನ ಜಾಹೀರಾತಿನ ಚಿತ್ರೀಕರಣಕ್ಕಾಗಿ ಮೊದಲ ಬಾರಿಗೆ ಭೇಟಿಯಾಗಿದ್ದರು. ಅವರು 2017 ರಲ್ಲಿ ಇಟಲಿಯ ಟಸ್ಕನಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮದುವೆಯಾಗಿದ್ದರು. 2021 ರಲ್ಲಿ, ಅವರು ತಮ್ಮ ಮೊದಲ ಮಗು ವಮಿಕಾಳನ್ನು ಸ್ವಾಗತಿಸಿದ್ದರು. ಈ ವರ್ಷದ ಆರಂಭದಲ್ಲಿ ಅನುಷ್ಕಾ ಮತ್ತು ವಿರಾಟ್ ತಮ್ಮ ಎರಡನೇ ಮಗು ಅಕಾಯ್​​ ಕೊಹ್ಲಿಯ ಆಗಮನವನ್ನು ಘೋಷಿಸಿದ್ದರು.

ಅನುಷ್ಕಾ ಶರ್ಮಾ ಮುಂದಿನ ಚಿತ್ರ ಚಕ್ಡಾ ಎಕ್ಸ್​ಪ್ರೆಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಕ್ಡಾ ಎಕ್ಸ್​​ಪ್ರೆಸ್​ ಕ್ರಿಕೆಟಿಗ ಜೂಲನ್ ಗೋಸ್ವಾಮಿ ಅವರ ಜೀವನಾಧಾರಿತ ಚಿತ್ರ. ಈ ಚಿತ್ರವು ಸುಮಾರು ೪ ವರ್ಷಗಳ ನಂತರ ಅವರು ಚಲನಚಿತ್ರಕ್ಕೆ ಮರಳಿದ್ದಾರೆ. ಅವರು ಕೊನೆಯ ಬಾರಿಗೆ ಶಾರುಖ್ ಖಾನ್ ಮತ್ತು ಕತ್ರಿನಾ ಕೈಫ್ ಅವರೊಂದಿಗೆ ಝೀರೋ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
IPL 2024
ಕ್ರೀಡೆ35 seconds ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ15 mins ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ16 mins ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ23 mins ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ44 mins ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ1 hour ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ1 hour ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

IPL 2024
Latest1 hour ago

IPL 2024 : ಪುತ್ರ ಅಕಾಯ್​ ಹುಟ್ಟಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ

Jai Shri Ram Slogan
ಕರ್ನಾಟಕ2 hours ago

Jai Shri Ram Slogan: ಜೈ ಶ್ರೀರಾಮ್ ಘೋಷಣೆ ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದಿದ್ದ ಕೈ ಮುಖಂಡ ಅಮಾನತು

Paytm
ಪ್ರಮುಖ ಸುದ್ದಿ2 hours ago

Paytm : ಪೇಟಿಎಂ ಸಿಒಒ ಭವೇಶ್ ಗುಪ್ತಾ ಏಕಾಏಕಿ ರಾಜೀನಾಮೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ19 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌