IPL 2023: ಮುಂಬೈ ವಿರುದ್ಧ ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್‌ ಆಯ್ಕೆ - Vistara News

ಕ್ರಿಕೆಟ್

IPL 2023: ಮುಂಬೈ ವಿರುದ್ಧ ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್‌ ಆಯ್ಕೆ

IPL 2023: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೂರು ವರ್ಷದ ಬಳಿಕ ಐಪಿಎಲ್‌ ಪಂದ್ಯ ನಡೆಯುತ್ತಿರುವ ಕಾರಣ ಅಭಿಮಾನಿಗಳಲ್ಲಿ ಹೆಚ್ಚಿನ ಕುತೂಹಲ ಇದೆ. ಟಿಕೆಟ್‌ಗಳು ಮೊದಲೇ ಸೋಲ್ಡ್‌ ಔಟ್‌ ಆಗಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಭರ್ತಿಯಾಗಿದೆ.

VISTARANEWS.COM


on

RCB
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (Royal Challengers Bangalore) ತಂಡ 16ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ವಿರುದ್ಧ ಟಾಸ್ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದ ನೋಡಲು ಆರ್​ಸಿಬಿ ಅಭಿಮಾನಿಗಳು ಅತ್ಯಧಿಕ ಸಂಖ್ಯೆಯಲ್ಲಿ ಸೇರಿದ್ದಾರೆ. ಕೊರೊನಾದ ಮೂರು ವರ್ಷಗಳ ಬಳಿಕ ಆರ್​ಸಿಬಿ ತಂಡ ತವರಿನಲ್ಲಿ ಪಂದ್ಯವನ್ನಾಡುತ್ತಿದೆ. ಹೀಗಾಗಿ ಈ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆ ಇದೆ.

ಪಿಚ್​ ರಿಪೋರ್ಟ್​

ಚಿನ್ನಸ್ವಾಮಿ ಸ್ಟೇಡಿಯಂನ ಪಿಚ್​ ಬ್ಯಾಟಿಂಗ್​ಗೆ ಹೇಳಿ ಮಾಡಿಸಿದಂತೆ. ಇದು​ ಸಂಪೂರ್ಣ ಬ್ಯಾಟಿಂಗ್​​ ಸ್ನೇಹಿ ಪಿಚ್​ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ಇಲ್ಲಿ ಬೌಂಡರಿ ಗೆರೆ ಕೂಡ ಅತ್ಯಂತ ಸಮೀಪವಿರುವ ಕಾರಣ ಬ್ಯಾಟರ್​ಗಳು ಯಾವುದೇ ಒತ್ತಡವಿಲ್ಲದೆ ಬ್ಯಾಟ್​ ಬೀಸಬಹುದಾಗಿದೆ. ಆದರೆ ಬೌಲರ್​ಗಳು ಮಾತ್ರ ಶಕ್ತಿ ಮೀರಿ ಪ್ರಯತ್ನ ತೋರಬೇಕಿದೆ. ಎಷ್ಟೇ ದೊಡ್ಡ ಮೊತ್ತವನ್ನು ಬಾರಿಸಿದರೂ ಇಲ್ಲಿ ಚೇಸ್​ ಮಾಡಿ ಗೆಲುವು ಸಾಧಿಸಿಬಹುದು.

ಮುಂಬೈ ಮುತ್ತು ಆರ್​ಸಿಬಿ ತಂಡಗಳು ಇದುವರೆಗಿನ ಐಪಿಎಲ್​ ಪಂದ್ಯಗಳಲ್ಲಿ 30 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ 17 ಪಂದ್ಯಗಳಲ್ಲಿ ಮುಂಬೈ ಮೇಲುಗೈ ಸಾಧಿಸಿದರೆ 13 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಮುಂಬೈ ಬಲಿಷ್ಠವಾಗಿದೆ.

ರಾತ್ರಿ 1.30ರವರೆಗೂ ಮೆಟ್ರೋ ಸಂಚಾರ ಸಮಯ ವಿಸ್ತರಣೆ

ಬೆಂಗಳೂರಲ್ಲಿ ನಡೆಯುವ ಐಪಿಎಲ್‌ ಪಂದ್ಯಾವಳಿಯ (IPL 2023) ದಿನದಂದು ಮೆಟ್ರೋ ಸಂಚಾರದ (Metro Timings) ಸಮಯವನ್ನು ಬಿಎಂಆರ್‌ಸಿಎಲ್‌ ವಿಸ್ತರಿಸಿದೆ. ಈ ಮೂಲಕ ಆರ್​ಸಿಬಿ ಅಭಿಮಾನಿಗಳಿಗೆ ತಮ್ಮ ತಂಡವನ್ನು ಬೆಂಗಳಿಸುವ ಸಲುವಾಗಿ ಮೆಟ್ರೋ ಮಹತ್ವದ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: IPL 2023: ಕೇನ್​ ವಿಲಿಯಮ್ಸನ್​ ಐಪಿಎಲ್​ನಿಂದ ಔಟ್; ಶೀಘ್ರದಲ್ಲೇ ಬದಲಿ ಆಟಗಾರನ ಆಯ್ಕೆ ಎಂದ ಫ್ರಾಂಚೈಸಿ

ಬೆಂಗಳೂರಲ್ಲಿ ಏಪ್ರಿಲ್ 2, 10, 17, 23, 26 ಹಾಗೂ ಮೇ 21ರಂದು ಐಪಿಎಲ್‌ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ರಾತ್ರಿ ಕ್ರಿಕೆಟ್‌ ಪಂದ್ಯಾವಳಿ ನಡೆಯುವ ವೇಳೆ ಬೈಯಪ್ಪನಹಳ್ಳಿ – ಕೆಂಗೇರಿ ಮತ್ತು ನಾಗಸಂದ್ರ – ರೇಷ್ಮೆ ಟರ್ಮಿನಲ್‌ನಿಂದ ಕೊನೆಯ ರೈಲು ಸೇವೆಯು ಮಧ್ಯರಾತ್ರಿ 1 ಗಂಟೆ ಹೊರಡಲಿದ್ದು, ಕೆಂಪೇಗೌಡ ನಿಲ್ದಾಣದಿಂದ 1.30ಕ್ಕೆ ಕೊನೇ ರೈಲು ಓಡಾಡಲಿದೆ. ಇತ್ತ ಹೊಸ ರೈಲು ಮಾರ್ಗವಾದ ವೈಟ್‌ ಫೀಲ್ಡ್‌ ಹಾಗೂ ಕೆ.ಆರ್‌. ಪುರ ನಡುವಿನ ರೈಲು ಸೇವೆಯನ್ನು ವಿಸ್ತರಿಸಲಾಗಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

India Head Coach: ರಿಕಿ ಪಾಂಟಿಂಗ್ ಟೀಮ್​ ಇಂಡಿಯಾದ ಮುಂದಿನ ಕೋಚ್​!

India Head Coach: ಮೂಲಗಳ ಪ್ರಕಾರ ರಿಕಿ ಪಾಂಟಿಂಗ್​ ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪಾಂಟಿಂಗ್​ ಅವರು ವಿರಾಟ್​ ಕೊಹ್ಲಿಯನ್ನು ಗುಣಗಾನ ಮಾಡಿದ್ದಾರೆ.

VISTARANEWS.COM


on

India Head Coach
Koo

ಮುಂಬಯಿ: ಟೀಮ್​ ಇಂಡಿಯಾದ(India Head Coach) ಮುಂದಿನ ಕೋಚ್​(team india coach) ಯಾರಾಗಲಿದ್ದಾರೆ ಎಂಬ ಕತೂಹಲದ ಮಧ್ಯೆ ಹಲವು ಮಾಜಿ ಆಟಗಾರ ಹೆಸರುಗಳು ಕೇಳಿ ಬರುತ್ತಿವೆ. ಇದೀಗ ಈ ಪಟ್ಟಿಗೆ ವಿಶ್ವ ಕಂಡ ಶ್ರೇಷ್ಠ ಆಟಗಾರ, ಸತತವಾಗಿ 2 ಏಕದಿನ ವಿಶ್ವಕಪ್​ ಗೆದ್ದ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್(Ricky Ponting)​ ಕೋಚ್​ ಆಗಲಿದ್ದಾರೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ ರಿಕಿ ಪಾಂಟಿಂಗ್​ ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪಾಂಟಿಂಗ್​ ಅವರು ವಿರಾಟ್​ ಕೊಹ್ಲಿಯನ್ನು ಗುಣಗಾನ ಮಾಡಿದ್ದಾರೆ. ಈ ಟ್ವೀಟ್​ ಅನ್ನು ಐಸಿಸಿ ಕೂಡ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. ಇದನೆಲ್ಲ ನೋಡುವಾಗ ಪಾಂಟಿಂಗ್​ ಭಾರತ ತಂಡದ ಕೋಚ್​ ಆಗುವುದು ಬಹುತೇಕ ಖಚಿತ ಎನ್ನುವಂತಿದೆ.

ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಕೋಚ್​, ಪ್ರಸ್ತುತ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಕೋಚ್​ ಆಗಿರುವ ಜಸ್ಟಿನ್ ಲ್ಯಾಂಗರ್(Justin Langer) ಕೂಡ ಭಾರತ ತಂಡದ ಕೋಚಿಂಗ್​ ಬಗ್ಗೆ ಆಸಕ್ತರಾಗಿದ್ದಾರೆ. ಐಪಿಎಲ್​ ವೇಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅವರು, ಭಾರತ ತಂಡ ಕೋಚಿಂಗ್​ ಮಾಡುವುದು ಅಸಾಮಾನ್ಯ ಪಾತ್ರವಾಗಿದೆ. ನನಗೂ ಕೋಚಿಂಗ್​ ಮಾಡಲು ಕುತೂಹಲವಿದೆ. ಇಲ್ಲಿ ಅಪಾರ ಸಂಖ್ಯೆಯ ಕ್ರಿಕೆಟ್ ಪ್ರತಿಭೆಗಳಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ India Head Coach: ಭಾರತ ತಂಡದ ಕೋಚ್​ ಆಗಲು ಫ್ಲೆಮಿಂಗ್​ಗೆ ಮನವೊಲಿಸುವಂತೆ ಧೋನಿಗೆ ಮನವಿ ಮಾಡಿದ ಬಿಸಿಸಿಐ!

ಬಿಸಿಸಿಐ ಕೂಡ ವಿದೇಶಿ ಕೋಚ್​ ಆಯ್ಕೆಯ ಬಗ್ಗೆ ಆಲೋಚನೆ ನಡೆಸುತ್ತಿದೆ ಎನ್ನುವ ಮಾತುಗಳು ಈ ಹಿಂದೆಯೇ ಕೇಳಿ ಬಂದಿತ್ತು. 2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್​ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್​ ಪ್ಲೆಚರ್​ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್​ ದ್ರಾವಿಡ್​ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್​ ಆಡಿದರೂ ಭಾರತ ಕಪ್​ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್​ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಯೋಚಿಸಿದೆ ಎನ್ನಲಾಗಿದೆ.

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

Continue Reading

ಕ್ರೀಡೆ

RCB: ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲಿಗೆ ವಿಜಯ್​ ಮಲ್ಯ ಕಾರಣವಂತೆ!

RCB: ನೆಟ್ಟಿಗರು ಮಲ್ಯ ಶುಭ ಹಾರೈಕೆಯಿಂದಲೇ ಆರ್​ಸಿಬಿ ಸೋಲು ಕಂಡಿದೆ ಎಂದು ಹೇಳಲಾರಂಭಿಸಿದ್ದಾರೆ. ಮಲ್ಯ ಹಾರೈಕೆಗೂ ಮುನ್ನ ಆರ್​​ಸಿಬಿ ಉತ್ತಮವಾಗಿ ಆಡುತ್ತಿತ್ತು. ಮಲ್ಯ ಹಾರೈಕೆಯಿಂದ ಆರ್​ಸಿಬಿ ಆಟಗಾರರಿಗೆ ಹಳೆಯ ಪಾರ್ಟಿಗಳು ನೆನೆಪಿಗೆ ಬಂದಿರಬೇಕು ಇದೇ ಗುಂಗಿನಲ್ಲಿ ಪಂದ್ಯ ಸೋತುರು ಎಂದು ಕಾಲೆಳೆದಿದ್ದಾರೆ.

VISTARANEWS.COM


on

RCB
Koo

ಬೆಂಗಳೂರು: ಬುಧವಾರ ರಾತ್ರಿ ನಡೆದ ಐಪಿಎಲ್​ನ(IPL 2024) ಎಲಿಮಿನೇಟರ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB) ತಂಡ ರಾಜಸ್ಥಾನ್​(Rajasthan Royals) ವಿರುದ್ಧ 4 ವಿಕೆಟ್​ ಅಂತರದ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಈ ಸೋಲಿಗೆ ತಂಡದ ಮಾಜಿ ಮಾಲಿಕ ವಿಜಯ್​ ಮಲ್ಯ(Vijay Mallya) ಎಂದು ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ.

ಹೌದು, ಆರ್​ಸಿಬಿ ತಂಡ ಆರಂಭಿಕ ಹಂತದಲ್ಲಿ ಸತತವಾಗಿ ಸೋಲಿಗೆ ಸಿಲುಕಿ ಇನ್ನೇನು ಟೂರ್ನಿಯಿಂದ ಹೊರಬೀಳುತ್ತದೆ ಎನ್ನುವಷ್ಟರಲ್ಲಿ ಪುಟಿದೆದ್ದು ಸತತವಾಗಿ 6 ಪಂದ್ಯ ಗೆದ್ದು ಅಚ್ಚರಿ ಎಂಬಂತೆ ಪ್ಲೇ ಆಫ್​ ಪ್ರವೇಶಿಸಿತ್ತು. ಇದೇ ಖುಷಿಯಲ್ಲಿ ವಿಜಯ್​ ಮಲ್ಯ ತಂಡಕ್ಕೆ ಶುಭ ಹಾರೈಸಿದ್ದರು.

“ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ ಕೊಟ್ಟಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಂಡಕ್ಕೆ ಹೃದಯ ಪೂರಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸತತ ಸೋಲುಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿರುವುದು ಅದ್ಭುತ. ಟ್ರೋಫಿ ಗೆಲ್ಲುವ ಕಡೆಗೆ ಆರ್​ಸಿಬಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಬೇಕು” ಎಂದು ಮುಂದಿನ ಪಂದ್ಯಗಳಿಗೂ ಶುಭ ಹಾರೈಸಿದ್ದರು.

ಎಲಿಮಿನೇಟರ್​ ಪಂದ್ಯ ಆರಂಭಕ್ಕೂ ಕೂಡ ಮಲ್ಯ ಟ್ವೀಟ್​ ಮೂಲಕ ಶುಭ ಹಾರೈಸಿ, ‘ನಾನು ಆರ್‌ಸಿಬಿ ಫ್ರಾಂಚೈಸಿಗಾಗಿ ಬಿಡ್ ಮಾಡಿದಾಗ, ವಿರಾಟ್‌ ಕೊಹ್ಲಿಗೆ ಬಿಡ್ ಮಾಡಿದಾಗ, ನಾನು ಇದಕ್ಕಿಂತ ಉತ್ತಮ ಆಯ್ಕೆಗಳನ್ನು ಮಾಡಲು ಸಾಧ್ಯವಿಲ್ಲ ಎಂದು ನನ್ನ ಆಂತರಾತ್ಮ ಹೇಳಿತ್ತು. ಈ ಬಾರಿ ಐಪಿಎಲ್ ಟ್ರೋಫಿ ಗೆಲ್ಲಲು ಆರ್‌ಸಿಬಿಗೆ ಉತ್ತಮ ಅವಕಾಶವಿದೆ ಎಂದು ನನ್ನ ಮನಸ್ಸು ಹೇಳುತ್ತಿದೆ. ತಂಡಕ್ಕೆ ಶುಭವಾಗಲಿ’ ಎಂದು ಹಾರೈಸಿದ್ದರು.

ಇದನ್ನೂ ಓದಿ Virat Kohli: ಅಂದು ವಿಶ್ವಕಪ್​ನಲ್ಲಿ, ಇಂದು ಐಪಿಎಲ್​ನಲ್ಲಿ ವಿಕೆಟ್​ ಬೇಲ್ಸ್​ ಹಾರಿಸಿ ಬೇಸರದಿಂದ ಮೈದಾನ ತೊರೆದ ಕೊಹ್ಲಿ

ಇದೀಗ ನೆಟ್ಟಿಗರು ಮಲ್ಯ ಶುಭ ಹಾರೈಕೆಯಿಂದಲೇ ಆರ್​ಸಿಬಿ ಸೋಲು ಕಂಡಿದೆ ಎಂದು ಹೇಳಲಾರಂಭಿಸಿದ್ದಾರೆ. ಮಲ್ಯ ಹಾರೈಕೆಗೂ ಮುನ್ನ ಆರ್​​ಸಿಬಿ ಉತ್ತಮವಾಗಿ ಆಡುತ್ತಿತ್ತು. ಮಲ್ಯ ಹಾರೈಕೆಯಿಂದ ಆರ್​ಸಿಬಿ ಆಟಗಾರರಿಗೆ ಹಳೆಯ ಪಾರ್ಟಿಗಳು ನೆನೆಪಿಗೆ ಬಂದಿರಬೇಕು ಇದೇ ಗುಂಗಿನಲ್ಲಿ ಪಂದ್ಯ ಸೋತುರು ಎಂದು ಕಾಲೆಳೆದಿದ್ದಾರೆ. ಮಲ್ಯ ಅವರು ಆರ್​ಸಿಬಿಯ ಮಾಲಿಕರಾಗಿದ್ದಾಗ ಪಂದ್ಯ ಗೆದ್ದ ಬಳಿಕ ಆಟಗಾರರಿಗೆ ಫುಲ್​ ಪಾರ್ಟಿ ನೀಡುತ್ತಿದ್ದರು. ಶುಭ ಹಾರೈಸದೇ ಇದ್ದಿದ್ದರೆ ಆಟಗಾರರಿಗೆ ಹಳೆಯ ನೆನಪು ಮತ್ತೆ ಮರುಕಳಿಸುತ್ತಿರಲ್ಲಿ. ಜತೆಗೆ ಪಂದ್ಯವನ್ನೂ ಕೂಡ ಗೆಲ್ಲುತ್ತಿದ್ದರು ಎಂದು ಕಮೆಂಟ್​ ಮಾಡಿದ್ದಾರೆ. ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಆಟಗಾರ ತುಷಾರ್‌ ದೇಶ್‌ಪಾಂಡೆ ಕೂಡ ಆರ್‌ಸಿಬಿಯನ್ನು ಟ್ರೋಲ್​ ಮಾಡಿದ್ದಾರೆ.

ಚೆನ್ನೈ ಸೂಪರ್​ ಕಿಂಗ್ಸ್​ನ ಫ್ಯಾನ್ಸ್ ಪೇಜ್‌ವೊಂದು ಬೆಂಗಳೂರು ದಂಡು ರೈಲ್ವೇ ನಿಲ್ದಾಣದ (Bangalore cant) ಫೋಟೋವನ್ನು ಹಂಚಿಕೊಂಡಿದೆ. ಈ ಮೂಲಕ ಬೆಂಗಳೂರು ತಂಡದಿಂದ ಕಪ್‌ ಗೆಲ್ಲಲು ಸಾಧ್ಯವಿಲ್ಲ ಎಂಬರ್ಥದಲ್ಲಿ ಈ ಮೀಮ್ಸ್ ಅನ್ನು ಸಿಎಸ್‌ಕೆ ಫ್ಯಾನ್ ಪೇಜ್‌ ಹಂಚಿಕೊಂಡಿದೆ. ಈ ಮೀಮ್ಸ್‌ ಅನ್ನು ತುಷಾರ್‌ ದೇಶ್‌ಪಾಂಡೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯ ಸ್ಟೋರಿಯನ್ನು ಹಂಚಿಕೊಂಡಿದ್ದಾರೆ.

Continue Reading

ಕ್ರೀಡೆ

Virat Kohli: ಅಂದು ವಿಶ್ವಕಪ್​ನಲ್ಲಿ, ಇಂದು ಐಪಿಎಲ್​ನಲ್ಲಿ ವಿಕೆಟ್​ ಬೇಲ್ಸ್​ ಹಾರಿಸಿ ಬೇಸರದಿಂದ ಮೈದಾನ ತೊರೆದ ಕೊಹ್ಲಿ

Virat Kohli: ವಿಶ್ವಕಪ್​ ಸರಣಿಯಲ್ಲೂ ಕೊಹ್ಲಿ ಟೂರ್ನಿಯ ಅತ್ಯಧಿಕ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. ಈ ಬಾರಿ ಐಪಿಎಲ್​ನಲ್ಲಿಯೂ ಕೊಹ್ಲಿ ಅತ್ಯಧಿಕ ರನ್​ ಬಾರಿಸಿದ ಆಟಗಾರನಾಗಿದ್ದಾರೆ. ಆದರೆ ಕಪ್​ ಗೆಲ್ಲಲು ಮಾತ್ರ ಅವರಿಂದ ಸಾಧ್ಯವಾಗಿಲ್ಲ

VISTARANEWS.COM


on

Virat Kohli
Koo

ಅಹಮದಾಬಾದ್​: ಆರ್​ಸಿಬಿಯ(RCB) ಹೊಸ ಅಧ್ಯಾಯ ಎಲಿಮಿನೇಟರ್​ ಪಂದ್ಯಕ್ಕೆ ಮುಕ್ತಾಯ ಕಂಡಿದೆ. ಬುಧವಾರ ನಡೆದ ರಾಜಸ್ಥಾನ್(Rajasthan Royals)​ ವಿರುದ್ಧದ ಎಲಿಮಿನೇಟರ್​ ಪಂದ್ಯದಲ್ಲಿ 4 ವಿಕೆಟ್​ ಸೋಲು ಕಾಣವ ಮೂಲಕ ಟೂರ್ನಿಯಿಂದ ಹೊರಬಿದ್ದಿತು. ಜತೆಗೆ ಅಭಿಮಾನಿಗಳ ಈ ಸಲ ಕಪ್​ ನಮ್ದೇ ಎನ್ನುವ ಕನಸು ಮತ್ತೆ ಕನಸಾಗಿಯೇ ಉಳಿಯಿತು. ಪಂದ್ಯದ ಸೋಲಿನ ಬಳಿಕ ವಿರಾಟ್​ ಕೊಹ್ಲಿ(Virat Kohli) ಭಾವುಕರಾಗಿ ಕಂಡು ಬಂದರು. ಈ ಫೋಟೊ ವೈರಲ್​ ಆಗಿದೆ.

ಕಳೆದ ವರ್ಷ ಭಾರತದಲ್ಲೇ, ಅದು ಕೂಡ ಅಹಮದಾಬಾದ್​ನಲ್ಲೇ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋಲು ಕಾಣುವ ಮೂಲಕ ಟ್ರೋಫಿ ಗೆಲ್ಲಲು ವಿಫಲವಾಗಿತ್ತು. ಪಂದ್ಯ ಸೋಲುನ ಬಳಿಕ ವಿರಾಟ್​ ಕೊಹ್ಲಿ ಭಾವುಕರಾಗಿ ತಮ್ಮ ಕ್ಯಾಪ್​ನಿಂದ ವಿಕೆಟ್​ ಬೇಲ್ಸ್​ ಹಾರಿಸಿ ಬೇಸರದಿಂದ ಡಗೌಟ್​ ಕಡೆಗೆ ಹೆಜ್ಜೆ ಹಾಕಿದ್ದರು. ಐಪಿಎಲ್​ನಲ್ಲಿಯೂ ಕೊಹ್ಲಿ ಇದೇ ಮೈದಾನದಲ್ಲಿ ಮತ್ತೆ ಸೋಲು ಕಂಡಿದ್ದಾರೆ. ರಾಜಸ್ಥಾನ್​ ವಿರುದ್ಧ ಸೋತ ಹತಾಶೆಯಲ್ಲಿ ಕೊಹ್ಲಿ ಮತ್ತೆ ವಿಕೆಟ್​ ಬೇಲ್ಸ್​ ಹಾರಿಸಿ ಬೇಸರದಿಂದ ಹೆಜ್ಜೆ ಹಾಕಿದರು. ಈ ಫೋಟೊ ಕಂಡು ಕೊಹ್ಲಿಯ ಅಭಿಮಾನಿಗಳು ಭಾವುಕರಾಗಿದ್ದಾರೆ.

ವಿಶ್ವಕಪ್​ ಸರಣಿಯಲ್ಲೂ ಕೊಹ್ಲಿ ಟೂರ್ನಿಯ ಅತ್ಯಧಿಕ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. ಈ ಬಾರಿ ಐಪಿಎಲ್​ನಲ್ಲಿಯೂ ಕೊಹ್ಲಿ ಅತ್ಯಧಿಕ ರನ್​ ಬಾರಿಸಿದ ಆಟಗಾರನಾಗಿದ್ದಾರೆ. ಆದರೆ ಕಪ್​ ಗೆಲ್ಲಲು ಮಾತ್ರ ಅವರಿಂದ ಸಾಧ್ಯವಾಗಿಲ್ಲ. ಕೊಹ್ಲಿ ನಿರ್ಣಾಯ ಪಂದ್ಯಗಳಲ್ಲಿ ಬ್ಯಾಟಿಂಗ್​ ವೈಫಲ್ಯ ಕಾಣುವುದು ನಿಶ್ಚಿತ. ಇದಕ್ಕೆ ಹಲವು ನಿದರ್ಶನ ಕೂಡ ಇದೆ. ಲೀಗ್​ ಹಂತದಲ್ಲಿ ಪ್ರಚಂಡ ಬ್ಯಾಟಿಂಗ್​ ನಡೆಸಿದ್ದರೂ ಕೂಡ ನಿರ್ಣಾಯ ಪಂದ್ಯದಲ್ಲಿ ಅವರು ಯಾವತ್ತೂ ಕೂಡ ವಿಫಲರಾಗುತ್ತಾರೆ. ಈ ಬಾರಿ ಟೂರ್ನಿಯುದ್ದಕ್ಕೂ ಅಮೋಘ ಬ್ಯಾಟಿಂಗ್​ ನಡೆಸಿದ್ದ ಕೊಹ್ಲಿ, ಎಲಿಮಿನೇಟರ್​ ಪಂದ್ಯದಲ್ಲಿ 33 ರನ್​ಗೆ ವಿಕೆಟ್ ಕಳೆದುಕೊಂಡರು.

ಇದನ್ನೂ ಓದಿ IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

ಎಲಿಮಿನೇಟರ್​ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ 8 ವಿಕೆಟಿಗೆ 172 ರನ್‌ ಗಳಿಸಿತು. ರಾಜಸ್ಥಾನ್‌ 19 ಓವರ್‌ಗಳಲ್ಲಿ 6 ವಿಕೆಟಿಗೆ 174 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು. ಚೇಸಿಂಗ್​ ವೇಳೆ ರಾಜಸ್ಥಾನ್‌ ಬಿರುಸಿನ ಆಡವಾಡಿತು. ಜೈಸ್ವಾಲ್‌ (45)-ಕ್ಯಾಡ್‌ಮೋರ್‌ (20) ಮೊದಲ ವಿಕೆಟ್​ಗೆ 46 ರನ್‌ ಜತೆಯಾಟ ನಿಭಾಯಿಸಿದರು. ಆ ಬಳಿಕ ಜೈಸ್ವಾಲ್‌-ಸ್ಯಾಮ್ಸನ್‌ ಜತೆಗೂಡಿ 35 ರನ್‌ ಕಲೆಹಾಕಿದರು. 112ಕ್ಕೆ 4 ವಿಕೆಟ್‌ ಬಿದ್ದಾಗ ಪಂದ್ಯ ಕುತೂಹಲ ಘಟ್ಟ ತಲುಪಿತು. ಆದರೆ ಪರಾಗ್‌-ಹೆಟ್‌ಮೈರ್‌ ಸಿಡಿದು ನಿಂತು 45 ರನ್‌ ಜತೆಯಾಟ ನಿಭಾಯಿಸಿ ಆರ್‌ಸಿಬಿಗೆ ಸೋಲುಣಿಸಿದರು. ಮೂರು ಓವರ್​ ತನಕ ಉತ್ತಮ ಲಯದಲ್ಲಿದ್ದ ಕ್ಯಾಮರೂನ್​ ಗ್ರೀನ್​ ನಾಲ್ಕನೇ ಓವರ್​ನಲ್ಲಿ ದುಬಾರಿಯಾದರು. ಹೆಟ್‌ಮೈರ್‌ ಈ ಓವರ್​ನಲ್ಲಿ ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಬಿಸಿ ಮುಟ್ಟಿಸಿದರು.

Continue Reading

ಕ್ರೀಡೆ

Dinesh Karthik: ಕೊಹ್ಲಿಯೊಂದಿಗೆ ಭಾವುಕ ಆಲಿಂಗನ; ಕ್ರಿಕೆಟ್​ ಜರ್ನಿ ಮುಗಿಸಿದ ದಿನೇಶ್​ ಕಾರ್ತಿಕ್​

Dinesh Karthik: ರಾಜಸ್ಥಾನದದ ರಾಯಲ್ಸ್​ ವಿರುದ್ಧದ ಎಲಿಮಿನೇಟರ್​ ಪಂದ್ಯವೇ ದಿನೇಶ್ ಕಾರ್ತಿಕ್(Dinesh Karthik) ವಿದಾಯ(dinesh karthik retirement) ಪಂದ್ಯ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಪಂದ್ಯ ಮುಕ್ತಾಯದ ಬಳಿಕ ಸಹ ಆಟಗಾರರು ಭಾವುಕರಾಗಿ ಕಾರ್ತಿಕ್​ಗೆ ಮೈದಾನದಲ್ಲಿಯೇ ತಬ್ಬಿಕೊಂಡು ವಿದಾಯ ಹೇಳಿದಂತಿತ್ತು. ಅದರಲ್ಲೂ ವಿರಾಟ್ ಕೊಹ್ಲಿಯೊಂದಿಗೆ(virat kohli) ಭಾವುಕ ಆಲಿಂಗನವನ್ನು ಹಂಚಿಕೊಂಡರು.

VISTARANEWS.COM


on

Dinesh Karthik
Koo

ಬೆಂಗಳೂರು: ಭಾರತ ಕ್ರಿಕೆಟ್​ ತಂಡದ ಹಿರಿಯ ವಿಕೆಟ್‌ ಕೀಪರ್ ಕಮ್​ ಬ್ಯಾಟರ್ ದಿನೇಶ್ ಕಾರ್ತಿಕ್(Dinesh Karthik) ಅವರು ಐಪಿಎಲ್​ಗೆ(IPL 2024) ನಿವೃತ್ತಿ ಹೇಳಿದ್ದಾರೆ ಎಂದು ವರದಿಯಾಗಿದೆ. ಅವರು ಅಧಿಕೃತವಾಗಿ ಕ್ರಿಕೆಟ್​ಗೆ ವಿದಾಯ ಹೇಳದಿದ್ದರೂ ಕೂಡ ನಿನ್ನೆ ನಡೆದ ರಾಜಸ್ಥಾನದದ ರಾಯಲ್ಸ್​ ವಿರುದ್ಧದ ಎಲಿಮಿನೇಟರ್​ ಪಂದ್ಯವೇ ಅವರಿಗೆ ವಿದಾಯ(dinesh karthik retirement) ಪಂದ್ಯ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಪಂದ್ಯ ಮುಕ್ತಾಯದ ಬಳಿಕ ಸಹ ಆಟಗಾರರು ಭಾವುಕರಾಗಿ ಕಾರ್ತಿಕ್​ಗೆ ಮೈದಾನದಲ್ಲಿಯೇ ತಬ್ಬಿಕೊಂಡು ವಿದಾಯ ಹೇಳಿದಂತಿತ್ತು. ಅದರಲ್ಲೂ ವಿರಾಟ್ ಕೊಹ್ಲಿಯೊಂದಿಗೆ(virat kohli) ಭಾವುಕ ಆಲಿಂಗನವನ್ನು ಹಂಚಿಕೊಂಡರು.

ಈ ಬಾರಿಯ ಐಪಿಎಲ್​ ಆರಂಭಕ್ಕೂ ಮುನ್ನವೇ ತಮ್ಮ ನಿವೃತ್ತಿಯ ಬಗ್ಗೆ ದಿನೇಶ್​ ಕಾರ್ತಿಕ್ ತುಟಿಬಿಚ್ಚಿದ್ದರು. 17 ವರ್ಷಗಳ ಐಪಿಎಲ್​ ಜರ್ನಿಯಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಇದಾದ ಬಳಿಕ ಹಲವು ತಂಡಗಳ ಪರ ಆಡಿದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ.

2022ರ ಹರಾಜಿನಲ್ಲಿ ಕಾರ್ತಿಕ್​ ಅವರು ಬರೋಬ್ಬರಿ 5.5 ಕೋಟಿ ರೂ. ಪಡೆದು ಆರ್​ಸಿಬಿ ಕ್ಯಾಂಪ್ ಸೇರಿದ್ದರು. ಆ ಆವೃತ್ತಿಯಲ್ಲಿ ಕಾರ್ತಿಕ್ 14 ಇನ್ನಿಂಗ್ಸ್ ಗಳಲ್ಲಿ 287 ರನ್ ಬಾರಿಸಿದ್ದರು. ಜತೆಗೆ ತಂಡದಲ್ಲಿ ಫಿನಿಶರ್ ಪಾತ್ರವನ್ನು ನಿರ್ವಹಿಸಿದ್ದರು. ಇದೇ ಪ್ರದರ್ಶನ ಕಂಡು ಆಸ್ಟ್ರೇಲಿಯಾದಲ್ಲಿ ನಡೆದ ಕಂಡು ಟಿ20 ವಿಶ್ವಕಪ್​ನಲ್ಲಿ ಭಾರತ ತಂಡದ ಆಡಿಸಲಾಗಿತ್ತು. ಆದರೆ ಇಲ್ಲಿ ಕಾರ್ತಿಕ್​ ನಿರೀಕ್ಷಿತ ಮಟ್ಟದ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದರು. ಜತೆಗೆ ಕಳೆದ ಐಪಿಎಲ್​ ಟೂರ್ನಿಯಲ್ಲಿ ಘೋರ ವೈಫಲ್ಯ ಎದುರಿಸಿದ್ದರು.

ಐಪಿಎಲ್​ನಲ್ಲಿ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ಆರ್​ಸಿಬಿಗೆ​ ಟ್ರೋಫಿ ಗೆದ್ದು ವಿದಾಯ ಹೇಳುವ ನಿರೀಕ್ಷೆಯಲ್ಲಿದ್ದ ಡಿಕೆ ಕನಸಿಗೆ ರಾಜಸ್ಥಾನ್​ ರಾಯಲ್ಸ್​ ಅಡ್ಡಗಾಲಿಕ್ಕಿತು. ದಿನೇಶ್ ಕಾರ್ತಿಕ್ 257 ಪಂದ್ಯಗಳಲ್ಲಿ 22 ಅರ್ಧಶತಕಗಳನ್ನು ಬಾರಿಸಿ 4,842 ರನ್‌ ಬಾರಿಸಿದ್ದಾರೆ. ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ 15 ಪಂದ್ಯಗಳಲ್ಲಿ 326 ರನ್​ ಬಾರಿಸಿದ್ದಾರೆ.

ಇದನ್ನೂ ಓದಿ IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

2004 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪದಾರ್ಪಣೆ ಮಾಡಿದ ಕಾರ್ತಿಕ್​ ಭಾರತ ಪರ 26 ಟೆಸ್ಟ್‌ಗಳನ್ನು ಆಡಿ 1025 ರನ್ ಗಳಿಸಿದ್ದಾರೆ. 57 ಕ್ಯಾಚ್‌ಗಳು ಮತ್ತು 6 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಅವರು ತಮ್ಮ ಕೊನೆಯ ಟೆಸ್ಟ್ ಆಡಿದ್ದು 2018 ರಲ್ಲಿ. ಏಕದಿನದಲ್ಲಿ 94 ಪಂದ್ಯಗಳನ್ನು ಆಡಿ 1752 ರನ್ ಗಳಿಸಿದ್ದಾರೆ. 64 ಕ್ಯಾಚ್‌ಗಳು ಮತ್ತು 7 ಸ್ಟಂಪಿಂಗ್‌ಗಳನ್ನು ನಿರ್ವಹಿಸಿದ್ದಾರೆ. 60 ಟಿ20 ಪಂದ್ಯಗಳಿಂದ 686 ರನ್ ಗಳಿಸಿ, 30 ಕ್ಯಾಚ್‌ಗಳು ಮತ್ತು 8 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ.

Continue Reading
Advertisement
Prajwal Revanna case Siddaramaiah writes to PM narendra Modi
ಕ್ರೈಂ2 mins ago

Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

Physical Abuse
ಕ್ರೈಂ11 mins ago

Physical Abuse: ಹಿಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮುಸ್ಲಿಂ ಯುವಕರಿಗೆ ಜೀವಾವಧಿ ಶಿಕ್ಷೆ

India Head Coach
ಕ್ರೀಡೆ15 mins ago

India Head Coach: ರಿಕಿ ಪಾಂಟಿಂಗ್ ಟೀಮ್​ ಇಂಡಿಯಾದ ಮುಂದಿನ ಕೋಚ್​!

Viral Video
ವೈರಲ್ ನ್ಯೂಸ್18 mins ago

Viral Video: ಸುಡುವ ಮರಳಿನಲ್ಲಿ ಹಪ್ಪಳ ಸುಟ್ಟ ಬಿಎಸ್‌ಎಫ್‌ ಯೋಧ; ಎಲ್ಲೆಡೆ ಇದೇ ವಿಡಿಯೋ ವೈರಲ್‌

Hanuman Chalisa
ಧಾರ್ಮಿಕ38 mins ago

Hanuman Chalisa: ಹನುಮಾನ್ ಚಾಲೀಸಾ ಪಠಿಸುವಾಗ ಈ ತಪ್ಪುಗಳನ್ನು ಮಾಡಬೇಡಿ

RCB
ಕ್ರೀಡೆ43 mins ago

RCB: ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲಿಗೆ ವಿಜಯ್​ ಮಲ್ಯ ಕಾರಣವಂತೆ!

Cyber Crime
ಕ್ರೈಂ1 hour ago

ಎಐ ತಂತ್ರಜ್ಞಾನದಿಂದ ಹಿಂದು ಯುವತಿಯ ಅಶ್ಲೀಲ ವಿಡಿಯೊ ಸೃಷ್ಟಿಸಿ ಇಸ್ಲಾಂಗೆ ಮತಾಂತರಗೊಳಿಸಲು ಯತ್ನ: ಫೈಜಲ್ ವಿರುದ್ಧ ದೂರು

vegetable rates increase
ಪ್ರಮುಖ ಸುದ್ದಿ1 hour ago

Vegetable Rates: ತರಕಾರಿ ಮುಟ್ಟಿದರೆ ಶಾಕ್‌, ಕಿಲೋಗೆ 320 ದಾಟಿದ ಬೀನ್ಸ್!‌

Phalodi satta market
ದೇಶ1 hour ago

Phalodi Satta Bazar: ಚುನಾವಣಾ ಫಲಿತಾಂಶದ ಬಗ್ಗೆ ಸಟ್ಟಾ ಬಜಾರ್‌ನ ಪಕ್ಕಾ ಭವಿಷ್ಯವಾಣಿ; ಈ ಮಾರ್ಕೆಟ್‌ನ ಹಿನ್ನೆಲೆ ಏನು?

Virat Kohli
ಕ್ರೀಡೆ1 hour ago

Virat Kohli: ಅಂದು ವಿಶ್ವಕಪ್​ನಲ್ಲಿ, ಇಂದು ಐಪಿಎಲ್​ನಲ್ಲಿ ವಿಕೆಟ್​ ಬೇಲ್ಸ್​ ಹಾರಿಸಿ ಬೇಸರದಿಂದ ಮೈದಾನ ತೊರೆದ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ6 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌