ಬೆಂಗಳೂರು: ಆರ್ಸಿಬಿ ತಂಡದ ವೇಗದ ಬೌಲರ್ ರೀಸ್ ಟೋಪ್ಲೆ ಐಪಿಎಲ್ 16ನೇ ಆವೃತ್ತಿಯ ಇನ್ನುಳಿದ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಮುಂಬಯಿ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಗಾಯಗೊಂಡಿದ್ದ ಅವರು ಸುಧಾರಿಸಿಕೊಂಡಿಲ್ಲ. ಟೂರ್ನಿಯಲ್ಲಿ ಆಡಲು ಸಾಧ್ಯವಿಲ್ಲ ಎಂದು ಅರಿತ ಅವರು ಇಂಗ್ಲೆಂಡ್ಗೆ ವಾಪಸಾಗಿದ್ದಾರೆ. 1.9 ಕೋಟಿ ರೂಪಾಯಿ ನೀಡಿ ಹರಾಜಿನಲ್ಲಿ ಖರೀದಿ ಮಾಡಿದ್ದ ಆರ್ಸಿಬಿ ತಂಡಕ್ಕೆ ಹಿನ್ನಡೆ ಉಂಟಾಗಿದೆ.
ಆರ್ಸಿಬಿಯ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ ಈ ಮಾಹಿತಿ ತಿಳಿಸಿದ್ದು, ಟೋಪ್ಲೆ ತವರಿಗೆ ಮರಳಿರುವುದಾಗಿ ಹೇಳಿದ್ದಾರೆ. ಇದರೊಂದಿಗೆ ಆರ್ಸಿಬಿ ಗಾಯದ ಸಮಸ್ಯೆ ಮುಂದುವರಿದಿದೆ. ಎರಡು ದಿನದ ಹಿಂದೆಯಷ್ಟೇ ರಜತ್ ಪಾಟೀದಾರ್ ಕೂಡ ಐಪಿಎಲ್ನ ಹಾಲಿ ಆವೃತ್ತಿಯಲ್ಲಿ ಆಡುವುದಿಲ್ಲ ಎಂಬುದು ಸ್ಪಷ್ಟವಾಗಿತ್ತು. ಹೀಗಾಗಿ ಗಾಯದ ಸಮಸ್ಯೆ ಆರ್ಸಿಬಿಯ ಗೆಲುವಿನ ಆಸೆಗೆ ತಣ್ಣೀರು ಎರಚಿದೆ.
ಸಿಎಸ್ಕೆ ವಿರುದ್ಧ ಹೇಜಲ್ವುಡ್
ಗಾಯದ ಸಮಸ್ಯೆಯಿಂದಾಗಿ ಇನ್ನೂ ಆರ್ಸಿಬಿ ತಂಡ ಸೇರಿಕೊಳ್ಳದ ಆಸ್ಟ್ರೇಲಿಯಾದ ವೇಗದ ಬೌಲರ್ ಹೇಜಲ್ವುಡ್ ಏಪ್ರಿಲ್ 14ರಂದು ತಂಡ ಸೇರಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಹಣಾಹಣಿಯಲ್ಲಿ ಆರ್ಸಿಬಿ ಪರ ಆಡಲಿದ್ದಾರೆ ಎಂದು ಹೇಳಲಾಗಿದೆ.
ನನ್ನ ಯೋಜನೆಯ ಪ್ರಕಾರ ಎಲ್ಲವೂ ನಡೆಯುತ್ತಿದೆ. ನಾನು ಏಪ್ರಿಲ್ 14ರಂದು ಆರ್ಸಿಬಿ ತಂಡ ಸೇರಿಕೊಳ್ಳಲಿದ್ದೇನೆ. ಮುಂದಿನ ವಾರ ಈ ಬಗ್ಗೆ ಸ್ಪಷ್ಟ ನಿರ್ಧಾರ ಗೊತ್ತಾಗಲಿದೆ ಎಂಬುದಾಗಿ ದಿ ಏಜ್ ಪತ್ರಿಕೆಗೆ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : IPL 2023 : ಅಬ್ಬರಿಸಿದ ಶಾರ್ದೂಲ್ ಠಾಕೂರ್; ಆರ್ಸಿಬಿ ವಿಜಯಕ್ಕೆ 205 ರನ್ ಗುರಿ
ಹೇಜಲ್ವುಡ್ ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳೆ ಗಾಯಗೊಂಡಿದ್ದರು. ಹೀಗಾಗಿ ಬಾರ್ಡರ್- ಗವಾಸ್ಕರ್ ಟ್ರೋಫಿಯಲ್ಲಿ ಆಡಲು ಭಾರತಕ್ಕೆ ಬಂದಿರಲಿಲ್ಲ. ಐಪಿಎಲ್ನ ಆರಂಭಕ್ಕೆ ಬರುವುದಾಗಿ ಹೇಳಿದ್ದರೂ ಅದು ಸಾಧ್ಯವಾಗಿರಲಿಲ್ಲ. ಇದೀಗ ಏಪ್ರಿಲ್ 14ರಂದು ಬರುವುದಾಗಿ ಹೇಳಿಕೊಂಡಿದ್ದಾರೆ.
ಆರ್ಸಿಬಿ ಈ ಬಾರಿಯೂ ಕಪ್ ಗೆಲ್ಲಲ್ಲ; ಎಬಿಡಿ ವಿಲಿಯರ್ಸ್ ಅಚ್ಚರಿಯ ಹೇಳಿಕೆ
ಬೆಂಗಳೂರು: ಆರ್ಸಿಬಿ(RCB) ತಂಡ ಆಡಿದ ಮೊದಲ ಪಂದ್ಯದಲ್ಲಿಯೇ ಭರ್ಜರಿ ಗೆಲುವು ದಾಖಲಿಸಿ ಮೆರೆದಾಡಿದೆ. ತಂಡದ ಪ್ರದರ್ಶನ ಕಂಡ ಅಭಿಮಾನಿಗಳು ಈ ಸಲ ಕಪ್ ನಿಜವಾಗಿಯೂ ನಮ್ಮದೇ ಎಂದು ಹೇಳಲು ಆರಂಭಿಸಿದ್ದಾರೆ. ಆದರೆ ಆರ್ಸಿಬಿಯ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್(AB de Villiers) ಮಾತ್ರ ಈ ಸಲ ಕಪ್ ನಮ್ಮದಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇದಕ್ಕೆ ಅವರು ಕಾರಣವನ್ನು ತಿಳಿಸಿದ್ದಾರೆ.
ಮಾರ್ಚ್ 26 ರಂದು ಆರ್ಸಿಬಿ ಪ್ರಾಂಚೈಸಿಯು “ಅನ್ಬಾಕ್ಸ್ ಆರ್ಸಿಬಿ” ಎಂಬ ಕಾರ್ಯಕ್ರಮ ನಡೆಸಿತ್ತು. ಈ ಕಾರ್ಯಕ್ರಮದಲ್ಲಿ ಆರ್ಸಿಬಿಯ ಮಾಜಿ ಆಟಗಾರಾದ ವೆಸ್ಟ್ ಇಂಡೀಸ್ ಕ್ರಿಸ್ ಗೇಲ್ ಮತ್ತು ಎಬಿ ಡಿ ವಿಲಿಯರ್ಸ್ಗೆ ಹಾಲ್ ಆಫ್ ಫೇಮ್ ಗೌರವ ಸೂಚಿಸಲಾಗಿತ್ತು. ಉಭಯ ಆಟಗಾರರು ಆರ್ಸಿಬಿ ತಂಡಕ್ಕೆ ನೀಡಿದ ಕೊಡುಗೆಗೆ ಗೌರವವಾಗಿ ಆರ್ಸಿಬಿ ಫ್ರಾಂಚೈಸಿಯು ಡಿ ವಿಲಿಯರ್ಸ್ ಅವರ ಜೆರ್ಸಿ ಸಂಖ್ಯೆ 17 ಮತ್ತು ಕ್ರಿಸ್ ಗೇಲ್ ಅವರ ಜೆರ್ಸಿ ಸಂಖ್ಯೆ 333ರನ್ನು ಹಾಲ್ ಆಫ್ ಫೇಮ್(Hall of Fame) ಸೇರ್ಪಡೆಗೊಳಿಸಿ ನಿವೃತ್ತಿ ಘೋಷಿಸಿತ್ತು.
ಹಾಲ್ ಆಫ್ ಫೇಮ್ ಸೇರ್ಪಡೆಗೊಂಡ ಬಳಿಕ ಆರ್ಸಿಬಿ ಅಭಿಮಾನಿಗಳಿಗಾಗಿ ಎಬಿಡಿ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದರು. “ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಮ್ಮ ಡ್ರೆಸ್ಸಿಂಗ್ ರೂಮಿನ ಬಾಲ್ಕನಿಯತ್ತ ಹೆಜ್ಜೆ ಹಾಕಿದಾಗ ನನ್ನ ಕಣ್ಣಂಚಿನಲ್ಲಿ ನೀರು ಜಿನುಗಿತು. ಪ್ರತಿ ಸಲ ಎಬಿಡಿ, ಎಬಿಡಿ ಎಂಬ ಅಭಿಮಾನಿಗಳ ಕೂಗು ನಮ್ಮನ್ನು ಗೆಲುವಿಗಾಗಿ ಹುರಿದುಂಬಿಸುತ್ತಿತ್ತು. ಆದರೆ ಈ ಬಾರಿಯ ಕೂಗಿನಲ್ಲಿ ಬೇರೆಯದ್ದೇ ಭಾವನೆ ಇತ್ತು. ನನಗೆ ಸಹಕಾರ ನೀಡಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ. ಕಳೆದ 15 ವರ್ಷಗಳ ಕಾಯುವಿಕೆ ಈ ವರ್ಷ ಕೊನೆಗಾಣಲಿದೆ. ಈ ಸಲ ಕಪ್ ನಮ್ದೇ” ಎಂದು ಹೇಳಿದ್ದರು.