Site icon Vistara News

Rishabh Pant: ಕೀಪಿಂಗ್​,ಬ್ಯಾಟಿಂಗ್​ ಅಭ್ಯಾಸ ಆರಂಭಿಸಿದ ರಿಷಭ್​ ಪಂತ್​​; ವಿಶ್ವಕಪ್​ಗೆ ಕಮ್​ಬ್ಯಾಕ್​ ಸಾಧ್ಯತೆ

rishabh pant batting with nca

ಬೆಂಗಳೂರು: ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಿಷಭ್​ ಪಂತ್​ (Rishabh Pant)ಶೀಘ್ರ ಚೇತರಿಕೆ ಕಾಣುವ ಮೂಲಕ ಎಲ್ಲರಿಗೆ ಅಚ್ಚರಿ ಮೂಡಿಸಿದ್ದಾರೆ. ಅವರ ಗಾಯವನ್ನು ಕಂಡ ಅನೇಕರು ಪಂತ್​ ಕ್ರಿಕೆಟ್​ ಬಾಳ್ವೆ ಇನ್ನು ಮಂದೆ ಕಷ್ಟ, ಒಂದೊಮ್ಮೆ ಅವರು ಕ್ರಿಕೆಟ್​ಗೆ ಮರಳಬೇಕಾದರೂ ಹಲವು ವರ್ಷ ಬೇಕಾದಿತು ಹೀಗೆ ಹಲವು ಅಭಿಪ್ರಯಾಗಳನ್ನು ವ್ಯಕ್ತಪಡಿಸಿದ್ದರು. ಆದರೆ ಪಂತ್​ ಮಾತ್ರ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಶಸ್ತ್ರಚಿಕಿತ್ಸೆ ನಡೆದ ಒಂದೆರಡು ದಿನಗಳಿಂದಲೇ ಕಠಿಣ ವ್ಯಾಯಾಮ ನಡೆಸಲು ಆರಂಭಿಸಿದ್ದರು. ಇದೀಗ ಅವರು ಕೀಪಿಂಗ್​ ಮತ್ತು ಬೌಲಿಂಗ್​ ಅಭ್ಯಾಸವನ್ನು ನಡೆಸಿ ಶೀಘ್ರದಲ್ಲೇ ಕ್ರಿಕೆಟ್​ಗೆ ಕಮ್​ಬ್ಯಾಕ್​ ಮಾಡುವ ಸೂಚನೆ ನೀಡಿದ್ದಾರೆ. ಅವರ ಈ ಕ್ಷಿಪ್ರ ಪ್ರಗತಿಯ ಚೇತರಿಕೆ ಕಂಡು ಅನೇಕರು ಅಚ್ಚರಿಗೊಳಗಾಗಿದ್ದಾರೆ.

ಸಾಧಿಸುವ ದೃಢ ಛಲವೊಂದಿದ್ದರೆ ಯಾವುದೇ ಕಷ್ಟವನ್ನು ಎದುರಿಸಿ ಮತ್ತೆ ಎದ್ದು ನಿಲ್ಲಬಹುದು ಎಂಬುದಕ್ಕೆ ಪಂತ್​ ಅವರ ಈ ಚೇತರಿಕೆಯ ಪರಿಶ್ರಮವೇ ಉತ್ತಮ ನಿದರ್ಶನ. ಕಳೆದ ಡಿಸೆಂಬರ್​ 30ರಂದು ರಿಷಭ್​ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಸುಟ್ಟ ಗಾಯಗಳು ಹಾಗೂ ಮಂಡಿಯ ಗಾಯಗೊಂಡಿಗೆ ರಿಷಭ್​ ಪಂತ್​ ಪಾರಾಗಿದ್ದರು. ಡೆಹ್ರಾಡೂನ್​ನಲ್ಲಿ ಆರಂಭದಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

ಶಸ್ತ್ರಚಿಕಿತ್ಸೆ ಬಳಿಕ ಪಂತ್​ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಪುನಶ್ಚೇತನ ಕಾರ್ಯದಲ್ಲಿ ತೊಡಗಿದ್ದರು. ಊರುಗೋಲಿನ ಸಹಾಯದಿಂದ ನಡೆದಾಡುತ್ತಿದ್ದ ಅವರು ಹಂತ ಹಂತವಾಗಿ ಚೇತರಿಕೆ ಕಂಡು ವೇಟ್​ಲಿಫ್ಟಿಂಗ್​ ಮಾಡುವ ತನಕ ಬಂದು ಮುಟ್ಟಿದ್ದರು. ಇದೀಗ ಪ್ಯಾಡ್​ ಮತ್ತು ಗ್ಲೌಸ್​ ತೊಟ್ಟು ಕೀಪಿಂಗ್​ ಮತ್ತು ಬ್ಯಾಟಿಂಗ್​ ಅಭ್ಯಾಸ ನಡೆಸಲು ಆರಂಭಿಸಿದ್ದಾರೆ. ಬಿಸಿಸಿಐ ಅಧಿಕಾರಿಯೊಬ್ಬರು ಪಂತ್​ ಅವರ ಚೇತರಿಕೆ ಕಂಡು ಇಂದು ಅಥವಾ ನಾಳೆಯೇ ಪಂತ್​​ ಕ್ರಿಕೆಟ್​ಗೆ ಮರಳುವಂತೆ ಭಾಸವಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ Rishabh Pant: ರಿಷಭ್​ ಪಂತ್​ ಕಮ್ ​ಬ್ಯಾಕ್​ಗೆ ವೇದಿಕೆ ಸಜ್ಜು; ಬಿಸಿಸಿಐ ಉನ್ನತ ಅಧಿಕಾರಿಯಿಂದ ಮಾಹಿತಿ

“ಹೊರಗಿನಿಂದ ಗಾಯ ಒಣಗಿದಂತೆ ಕಂಡರು ಒಳಗಿರುವ ನೋವು ಮಾಸಲು ಹಲವು ದಿನಗಳು ಬೇಕು. ಒಟ್ಟಾರೆ ಪಂತ್​ ಈ ವರ್ಷದ ಕೊನೆಯಲ್ಲಿ ತಂಡ ಸೇರುವುದಂತು ಪಕ್ಕಾ ಎನ್ನುವಂತಿದೆ. ಹಾಗಂತ, ಯಾವುದನ್ನೂ ಅವಸರದಲ್ಲಿ ಮಾಡಲು ಸಾಧ್ಯವಿಲ್ಲ” ಎಂದು ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.

Exit mobile version