Rishabh Pant: ಕಮ್​ಬ್ಯಾಕ್​ ಪಂದ್ಯದಲ್ಲೇ ದಾಖಲೆ ಬರೆದ ರಿಷಭ್​ ಪಂತ್​ - Vistara News

ಕ್ರೀಡೆ

Rishabh Pant: ಕಮ್​ಬ್ಯಾಕ್​ ಪಂದ್ಯದಲ್ಲೇ ದಾಖಲೆ ಬರೆದ ರಿಷಭ್​ ಪಂತ್​

ರಿಷಭ್‌ ಪಂತ್‌(Rishabh Pant) ಅವರು ತಮ್ಮ ಕಮ್​ಬ್ಯಾಕ್​ ಪಂದ್ಯದಲ್ಲೇ ಮೈಲುಗಲ್ಲೊಂದನ್ನು ನೆಟ್ಟಿದ್ದಾರೆ. ಐಪಿಎಲ್​ ಕ್ರಿಕೆಟ್​ ಟೂರ್ನಿಯಲ್ಲಿ 400 ಬೌಂಡರಿಗಳನ್ನು ಪೂರ್ತಿಗೊಳಿಸಿದ್ದಾರೆ.

VISTARANEWS.COM


on

Rishabh Pant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂಡೀಗಢ: 15 ತಿಂಗಳ ಬಳಿಕ ಐಪಿಎಲ್‌(IPL 2024) ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಾಪಸಾದ ರಿಷಭ್‌ ಪಂತ್‌(Rishabh Pant) ಅವರು ತಮ್ಮ ಕಮ್​ಬ್ಯಾಕ್​ ಪಂದ್ಯದಲ್ಲೇ ಮೈಲುಗಲ್ಲೊಂದನ್ನು ನೆಟ್ಟಿದ್ದಾರೆ. ಐಪಿಎಲ್​ ಕ್ರಿಕೆಟ್​ ಟೂರ್ನಿಯಲ್ಲಿ 400(Rishabh Pant smashes 400th IPL boundary ) ಬೌಂಡರಿಗಳನ್ನು ಪೂರ್ತಿಗೊಳಿಸಿದ್ದಾರೆ.

ಪಂಜಾಬ್‌ನ ಹೊಸ ತವರು ಮುಲ್ಲಾನ್ಪುರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಡೆಲ್ಲಿ ಕ್ಯಾಪಿಟಲ್ಸ್(PBKS v DC)​ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 174 ರನ್​ ಬಾರಿಸಿದೆ. 4ನೇ ವಿಕೆಟ್​ಗೆ ಬ್ಯಾಟಿಂಗ್​ಗೆ ಇಳಿದ ಪಂತ್​ ಅವರು ರಾಹುಲ್ ಚಹರ್ ಓವರ್​ನಲ್ಲಿ ಮಿಡ್ ವಿಕೆಟ್‌ನಲ್ಲಿ ಬಾರಿಸಿದ ಚೆಂಡು ಹರ್ಷಲ್ ಪಟೇಲ್ ಕೈ ಸೇರಿದರೂ ಕೂಡ ಅವರು ಕ್ಯಾಚ್​ ಹಿಡಿಯುವಲ್ಲಿ ವಿಫಲರಾಗಿ ಬೌಂಡರಿ ದಾಖಲಾಯಿತು. ಇದೇ ವೇಳೆ ಪಂತ್​ ಐಪಿಎಲ್​ನಲ್ಲಿ 400 ಬೌಂಡರಿಗಳನ್ನು ಪೂರ್ತಿಗೊಳಿಸಿದ ಸಾಧನೆ ಮಾಡಿದರು.

ಜೀವದಾನ ಪಡೆದರೂ ಕೂಡ ಪಂತ್​ ಈ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು. ಕೇವಲ 2 ಬೌಂಡರಿಗೆ ಸೀಮಿತರಾಗಿ 18 ರನ್​ಗಳಿಸಿ ಕ್ಯಾಚ್​ ಬಿಟ್ಟ ಹರ್ಷಲ್ ಪಟೇಲ್ ಅವರಿಗೆ ವಿಕೆಟ್​ ಒಪ್ಪಿಸಿದರು. ಪಂತ್​ ಮೈದಾನಕ್ಕೆ ಬರುವ ವೇಳೆ ನೆರದಿದ್ದ ಪ್ರೇಕ್ಷಕರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಹುರಿದುಂಬಿಸಿದರು. ಇಂಪ್ಯಾಕ್ಟ್​ ಪ್ಲೇಯರ್​ ಆಗಿ ಕಣಕ್ಕಿಳಿದ ಅಭಿಷೇಕ್ ಪೊರೆಲ್ ಅವರು ಅಂತಿಮ ಹಂತದಲ್ಲಿ ಸಿಡಿದು ನಿಂತು ಕೇವಲ 10 ಎಸೆತಗಳಲ್ಲಿ ಅಜೇಯ 32 ರನ್ ಗಳಿಸುವ ಮೂಲಕ ಡೆಲ್ಲಿ ತಂಡದ ಬೃಹತ್​ ಮೊತ್ತಕ್ಕೆ ನೆರವಾದರು.

ಇದನ್ನೂ ಓದಿ IPL 2024: ಉದ್ಘಾಟನಾ ಪಂದ್ಯದಲ್ಲೇ ದಾಖಲೆ ಬರೆದ ಮಹೇಂದ್ರ ಸಿಂಗ್​ ಧೋನಿ

2022ರ ಡಿಸೆಂಬರ್​ 30ರಂದು(rishabh pant accident date) ರಿಷಭ್​ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಆದರೆ, ಪಂತ್​ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದರು. ಸುಟ್ಟ ಗಾಯಗಳು ಹಾಗೂ ಮಂಡಿಯ ಗಾಯದೊಂದಿಗೆ ರಿಷಭ್​ ಪಂತ್ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು.​ ಡೆಹ್ರಾಡೂನ್​ನಲ್ಲಿ ಆರಂಭದಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನೀಡಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Rahul Dravid: ರೋಹಿತ್​, ಕೊಹ್ಲಿ, ಪಂತ್​ ಸೇರಿ ಎಲ್ಲ ಆಟಗಾರರಿಗೆ ಖಡಕ್​ ಎಚ್ಚರಿಕೆ ನೀಡಿದ ಕೋಚ್​ ದ್ರಾವಿಡ್​

Rahul Dravid: ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ಟೀಮ್​ ಇಂಡಿಯಾ ಮೂರು ಪಂದ್ಯಗಳನ್ನು ಆಡಲಿದೆ. ಈ ಮೈದಾನ ಕ್ರಿಕೆಟ್​ ಆಡಲು ಅಷ್ಟಾಗಿ ಸೂಕ್ತವಿಲ್ಲದ ಕಾರಣ ಕೋಚ್​ ದ್ರಾವಿಡ್ ಅವರು​ ತಂಡದ ಆಟಗಾರರು ಬಹಳ ಎಚ್ಚರಿಕೆಯಿಂದ ಆಡಬೇಕಿದೆ ಎಂದು ಸೂಚನೆ ನೀಡಿದ್ದಾರೆ

VISTARANEWS.COM


on

Rahul Dravid
Koo

ನ್ಯೂಯಾರ್ಕ್​: ಪ್ರಸಕ್ತ ಸಾಗುತ್ತಿರುವ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಜೂನ್​ 5, ಬುಧವಾರ ಐರ್ಲೆಂಡ್​ ವಿರುದ್ಧ ಆಡಲಿದೆ. ಈ ಪಂದ್ಯಕ್ಕೂ ಮುನ್ನವೇ ತಂಡದ ಪ್ರಧಾನ ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಅವರು ವಿರಾಟ್​ ಕೊಹ್ಲಿ(Virat Kohli), ರೋಹಿತ್​ ಶರ್ಮ(Rohit Sharma), ಸೂರ್ಯಕುಮಾರ್​ ಯಾದವ್(Suryakumar)​, ರಿಷಭ್​ ಪಂತ್​ ಸೇರಿ ಎಲ್ಲ ಆಟಗಾರರಿಗೂ ಖಡಕ್​ ಎಚ್ಚರಿಕೆಯೊಂದನ್ನು ನೀಡಿದ್ದಾರೆ.

ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ಟೀಮ್​ ಇಂಡಿಯಾ ಮೂರು ಪಂದ್ಯಗಳನ್ನು ಆಡಲಿದೆ. ಈ ಮೈದಾನ ಕ್ರಿಕೆಟ್​ ಆಡಲು ಅಷ್ಟಾಗಿ ಸೂಕ್ತವಿಲ್ಲದ ಕಾರಣ ದ್ರಾವಿಡ್​ ತಂಡದ ಆಟಗಾರರು ಬಹಳ ಎಚ್ಚರಿಕೆಯಿಂದ ಆಡಬೇಕಿದೆ ಎಂದು ಸೂಚನೆ ನೀಡಿದ್ದಾರೆ. ಈಗಾಗಲೇ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ನಮ್ಮ ಆಟಗಾರರ ಸಂಪೂರ್ಣ ಪ್ರಾಬಲ್ಯ ಮೆರೆದಿದ್ದಾರೆ. ಪಿಚ್ ಹೇಗೆ ಬದಲಾಗುತ್ತದೆ ಎಂಬುದರ ಬಗ್ಗೆ ನಮಗೆ ಅರಿವು ಮೂಡಿದೆ. ಈ ಮೈದಾನದಲ್ಲಿ ಫೀಲ್ಡಿಂಗ್ ಮಾಡುವಾಗ ಆಟಗಾರರು ತುಂಬಾ ಜಾಗರೂಕರಾಗಿರಬೇಕು ಎಂದು ಆಟಗಾರರಿಗೆ ದ್ರಾವಿಡ್ ಎಚ್ಚರಿಕೆ ನೀಡಿದ್ದಾರೆ.


ಮೈದಾನದ ಬಗ್ಗೆ ಅಸಮಾಧಾನ ಹೊರಹಾಕಿದ ದ್ರಾವಿಡ್, ಕ್ರಿಕೆಟ್​ ಆಡುಲು ಈ ಮೈದಾನ ಅಷ್ಟಾಗಿ ಯೋಗ್ಯವಾಗಿಲ್ಲ. ಇಬ್ಬನಿಯ ಸಮಸ್ಯೆಯಿಂದ ಮೈದಾನ ಜಾರುತ್ತಿದೆ. ಖಂಡಿತಾ ಆಟಗಾರರಿಗೆ ಮಾಂಸಖಂಡ, ಸ್ನಾಯುಸೆಳೆತದ ಸಮಸ್ಯೆ ಎದುರಾಗುವುದು ಖಚಿತ. ಹೀಗಾಗಿ ನಾವು ಆಟಗಾರರ ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದೆ ಎಂದಿದ್ದಾರೆ.

ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಈ ನಸ್ಸೌ ಕೌಂಟಿ ಕ್ರೀಡಾಂಗಣವನ್ನು ಕೇವಲ ಮೂರು ತಿಂಗಳಲ್ಲಿ ನಿರ್ಮಾಣ ಮಾಡಲಾಗಿತ್ತು. ಭಾರತ ಮತ್ತು ಪಾಕ್​ ನಡುವಣ ಪಂದ್ಯಕ್ಕಾಗಿಯೇ ಈ ಸ್ಟೇಡಿಯಂ ನಿರ್ಮಾಣ ಮಾಡಿದ್ದಾಗಿ ಹೇಳಲಾಗಿದೆ. 34,000 ಆಸನ ಸಾಮರ್ಥ್ಯವುಳ್ಳ ಈ ಸ್ಟೇಡಿಯಂ ಅನ್ನು ಟಿ20 ವಿಶ್ವಕಪ್​ ಮುಗಿದ ಬಳಿಕ ಕೆಡವಲಾಗುತ್ತದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. 

ಇದನ್ನೂ ಓದಿ T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ಬೇಡಿಕೆ ಕಳೆದುಕೊಂಡ ಭಾರತ-ಪಾಕ್​ ಪಂದ್ಯ?


ಭಾರತ ಮತ್ತು ಪಾಕ್​ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಈ ಬಾರಿ ಪ್ರೇಕ್ಷಕರು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ವಿಚಾರ ಹೊರಬಿದ್ದಿದೆ. ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಇನ್ನೂ ಮಾರಾಟವಾಗಿಲ್ಲ. ಈ ಪಂದ್ಯದ ಟಿಕೆಟ್‌ಗಳು ಇನ್ನೂ ಐಸಿಸಿ ವೆಬ್​ಸೈಟ್​ನಲ್ಲಿ ಲಭ್ಯವಿದ್ದು, ಇನ್ನೂ ಕೂಡ ಮಾರಾಟವಾಗದಿರುವುದು ಹಲವರಲ್ಲಿ ಅಚ್ಚರಿ ಮೂಡಿಸಿದೆ. ಇದಕ್ಕೆ ಕಾರಣ ಟಿಕೆಟ್​ ಬೆಲೆ ದುಬಾರಿಯಾಗಿರುವುದು. ಈ ಪಂದ್ಯಕ್ಕಾಗಿ ಐಸಿಸಿ ಮೂರು ಪ್ಯಾಕೇಜ್‌ಗಳಲ್ಲಿ ಟಿಕೆಟ್‌ಗಳನ್ನು ಇರಿಸಿದೆ. ಇದರಲ್ಲಿ ಡೈಮಂಡ್ ಕ್ಲಬ್, ಪ್ರೀಮಿಯಂ ಕ್ಲಬ್ ಲಾಂಜ್​​ ಮತ್ತು ಕಾರ್ನರ್ ಕ್ಲಬ್​​ಗಳನ್ನು ಒಳಗೊಂಡಿವೆ.

ಡೈಮಂಡ್ ಕ್ಲಬ್ ಟಿಕೆಟ್ ಬೆಲೆ 8.34 ಲಕ್ಷ ರೂ. ಈ ಟಿಕೆಟ್​ ಖರೀದಿಸುವ ಅಭಿಮಾನಿಗಳಿಗೆ ಅತ್ಯುತ್ತಮ ಸೌಲಭ್ಯಗಳು ಸಿಗುತ್ತವೆ. ಪ್ರೀಮಿಯಂ ಕ್ಲಬ್ ಲಾಂಜ್​ ಟಿಕೆಟ್ ಬೆಲೆ 2 ಲಕ್ಷ ರೂ, ಮತ್ತು ಕಾರ್ನರ್ ಕ್ಲಬ್ ಟಿಕೆಟ್ ಬೆಲೆ 2.29 ಲಕ್ಷ ರೂ. ಆಗಿದೆ. ಭಾರತ-ಪಾಕಿಸ್ತಾನ ಪಂದ್ಯದ ದೃಷ್ಟಿಯಿಂದ ಐಸಿಸಿ ಟಿಕೆಟ್ ಬೆಲೆಯನ್ನು ಇಷ್ಟು ದುಬಾರಿ ಇರಿಸಿದೆ. ಇದಲ್ಲದೆ ಪಂದ್ಯಕ್ಕೆ ಉಗ್ರರು ಬಾಂಬ್​ ಬೆದರಿಕೆ ಹಾಕಿದ್ದು ಕೂಡ ಅಭಿಮಾನಿಗಳ ಹಿಂದೇಟಿಗೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಹೆಚ್ಚಿನ ಟಿಕೆಟ್​ಗಳು ಖರೀದಿಯಾಗದಿದ್ದಲ್ಲಿ ಐಸಿಸಿ ಮತ್ತೆ ಪರಿಷ್ಕೃತ ಟಿಕೆಟ್​ ದರ ಹೊರಡಿಡುವ ಸಾಧ್ಯತೆ ಇದೆ.

Continue Reading

ಕ್ರಿಕೆಟ್

Kedar Jadhav Retirement: ಧೋನಿ ಶೈಲಿಯಲ್ಲೇ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕೇದಾರ್​ ಜಾಧವ್

Kedar Jadhav Retirement: 39 ವರ್ಷದ ಕೇದಾರ್ ಜಾಧವ್ 2014 ಮತ್ತು 2020 ರ ನಡುವೆ ಭಾರತಕ್ಕಾಗಿ 73 ಏಕದಿನ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದಾರೆ. ಜಾಧವ್ 2019 ರ ವಿಶ್ವಕಪ್ ಆಡಿದ್ದರು. ಕೇದಾರ್ ಜಾಧವ್ ಭಾರತ ಪರ ಕೊನೆಯ ಕೊನೆಯ ಬಾರಿಗೆ ಆಡಿದ್ದು 2020ರಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧದ ಏಕದಿನ ಸರಣಿಯಲ್ಲಿ.

VISTARANEWS.COM


on

Kedar Jadhav Retirement
Koo

ಮುಂಬಯಿ: ಟೀಮ್​ ಇಂಡಿಯಾದ ಹಿರಿಯ ಆಟಗಾರ, ಮಾಧ್ಯಮ ಕ್ರಮಾಂಕದ ಬ್ಯಾಟರ್​ ಕೇದಾರ್​ ಜಾಧವ್​(Kedar Jadhav ) ಅವರು ಅಂತಾರಾಷ್ಟ್ರೀಯ ಸೇರಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದಾರೆ. ಸೋಮವಾರ ಅವರು ತಮ್ಮ ನಿವೃತ್ತಿಯನ್ನು(Kedar Jadhav Retirement) ಪ್ರಕಟಿಸಿದರು.

“1500 ಗಂಟೆಗಳಿಂದ ನನ್ನ ವೃತ್ತಿಜೀವನದುದ್ದಕ್ಕೂ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ನನ್ನನ್ನು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಎಂದು ಪರಿಗಣಿಸಿ” ಎಂದು ಕೇದಾರ್ ಜಾಧವ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡುವ ಮೂಲಕ ತಮ್ಮ ನಿವೃತ್ತಿಯನ್ನು ಪ್ರಕಟಿಸಿದರು.

ಜಾಧವ್​ ಅವರು ತಮ್ಮ ನಿವೃತ್ತಿ ಘೋಷಣೆಯನ್ನು ಎಂಎಸ್ ಧೋನಿ(Jadhav takes MS Dhoni’s route) ಅವರಂತೆ ಮಾಡಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆದ 2019 ರ ವಿಶ್ವಕಪ್‌ನಲ್ಲಿ ಭಾರತಕ್ಕಾಗಿ ತನ್ನ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದ ಧೋನಿ, ಒಂದು ವರ್ಷದ ನಂತರ, ಆಗಸ್ಟ್ 15, 2020 ರಂದು ತಮ್ಮ ಇನ್​ಸ್ಟಾಗ್ರಾಮ್​ ಪ್ರೊಫೈಲ್‌ನಲ್ಲಿ ಎರಡು ಸಾಲಿನ ಹೇಳಿಕೆಯೊಂದಿಗೆ ನಿವೃತ್ತಿ ಘೋಷಿಸುವ ಮೂಲಕ ತಮ್ಮ ಅಭಿಮಾನಿಗಳಿಗೆ ಆಘಾತ ನೀಡಿದ್ದರು. “ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ತುಂಬಾ ಧನ್ಯವಾದಗಳು. 1929 ಗಂಟೆಗಳಿಂದ ನನ್ನ ವೃತ್ತಿಜೀವನದುದ್ದಕ್ಕೂ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ” ಎಂದು ಬರೆದುಕೊಳ್ಳುವ ಮೂಲಕ ಧೋನಿ ನಿವೃತ್ತಿ ಪ್ರಕಟಿಸಿದ್ದರು. ಇದೇ ಹಾದಿಯನ್ನು ಜಾಧವ್​ ಕೂಡ ಅನುಸರಿಸಿದ್ದಾರೆ.

ಇದನ್ನೂ ಓದಿ T20 World Cup 2024 : ಉಗ್ರರ ಬೆದರಿಕೆ ನಡುವೆಯೂ ನ್ಯೂಯಾರ್ಕ್​ನಲ್ಲಿ ಭಾರತ ತಂಡದ ಆಟಗಾರರ ಬಿಂದಾಸ್​ ತಿರುಗಾಟ!

39 ವರ್ಷದ ಕೇದಾರ್ ಜಾಧವ್ 2014 ಮತ್ತು 2020 ರ ನಡುವೆ ಭಾರತಕ್ಕಾಗಿ 73 ಏಕದಿನ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದಾರೆ. ಜಾಧವ್ 2019 ರ ವಿಶ್ವಕಪ್ ಆಡಿದ್ದರು. ಕೇದಾರ್ ಜಾಧವ್ ಭಾರತ ಪರ ಕೊನೆಯ ಕೊನೆಯ ಬಾರಿಗೆ ಆಡಿದ್ದು 2020ರಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧದ ಏಕದಿನ ಸರಣಿಯಲ್ಲಿ. ಇದಾದ ಬಳಿಕ ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಕೇದಾರ್ ಜಾಧವ್ 73 ಏಕದಿನ ಪಂದ್ಯಗಳಲ್ಲಿ 2 ಶತಕ ಮತ್ತು 6 ಅರ್ಧಶತಕ ಸೇರಿದಂತೆ 1389 ರನ್ ಗಳಿಸಿದ್ದಾರೆ. 9 ಟಿ20 ಪಂದ್ಯಗಳಲ್ಲಿ 122 ರನ್ ಗಳಿಸಿದ್ದಾರೆ.

ಫೆಬ್ರವರಿಯಲ್ಲಿ ಪುಣೆಯಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ವಿದರ್ಭ ವಿರುದ್ಧ ಮಹಾರಾಷ್ಟ್ರದ ಪರವಾಗಿ ಸ್ಪರ್ಧಾತ್ಮಕ ಪಂದ್ಯವನ್ನು ಆಡಿದ್ದರು. ಜಾಧವ್ ಮಹಾರಾಷ್ಟ್ರದ 2023-24 ರ ರಣಜಿ ಟ್ರೋಫಿ ಅಭಿಯಾನದಲ್ಲಿ ಒಂದು ಶತಕ ಮತ್ತು ಅರ್ಧಶತಕ ಸೇರಿದಂತೆ 5 ಪಂದ್ಯಗಳಲ್ಲಿ 379 ರನ್ ಗಳಿಸಿ ಉತ್ತಮ ಫಾರ್ಮ್‌ನಲ್ಲಿದ್ದರು.

ಕೇದಾರ್ ಜಾಧವ್ 93 ಐಪಿಎಲ್ ಪಂದ್ಯಗಳನ್ನು ಆಡಿದ್ದು 1196 ರನ್ ಗಳಿಸಿದ್ದಾರೆ. ಅವರು 2018 ರಲ್ಲಿ ಐಪಿಎಲ್​ ಪ್ರಶಸ್ತಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದರು. ಜಾಧವ್ 2010 ರಲ್ಲಿ ಡೆಲ್ಲಿ ಡೇರ್‌ ಡೆವಿಲ್ಸ್ (ಈಗ ದೆಹಲಿ ಕ್ಯಾಪಿಟಲ್ಸ್), 2011 ರಲ್ಲಿ ಕೊಚ್ಚಿ ಟಸ್ಕರ್ಸ್ ಕೇರಳ ಮತ್ತು 2013 ಮತ್ತು 2015 ರ ನಡುವೆ ಡೆಲ್ಲಿ ಮತ್ತು ಆರ್​ಸಿಬಿ ಪರ ಆಡಿದ್ದಾರೆ.

Continue Reading

ಕ್ರೀಡೆ

Mira Road Tragedy: ಸಿಕ್ಸರ್​ ಬಾರಿಸಿ ಮರು ಕ್ಷಣವೇ ಪ್ರಾಣ ಕಳೆದುಕೊಂಡ ಕ್ರಿಕೆಟಿಗ​; ದುರಂತ ವಿಡಿಯೊ ವೈರಲ್​

Mira Road Tragedy: ಸ್ಥಳೀಯ ಟೂರ್ನಿಯಲ್ಲಿ ಬ್ಯಾಟಿಂಗ್​ ನಡೆಸುತ್ತಿದ್ದ ವೇಳೆ ಈ ಬ್ಯಾಟರ್​ ಚೆಂಡನ್ನು ಸಿಕ್ಸರ್​ಗೆ ಬಡಿದಟ್ಟಿತ ಮರು ಕ್ಷಣವೇ ಪಿಚ್​ನಲ್ಲಿ ಕುಸಿದು ಬಿದ್ದಿದ್ದಾನೆ. ಈ ವೇಳೆ ಸಹ ಆಟಗಾರರು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು ಅದಾಗಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ದುರಂತದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

VISTARANEWS.COM


on

Mira Road Tragedy
Koo

ಮುಂಬಯಿ: ಇಲ್ಲಿನ ಮೀರಾರೋಡ್‌ನಲ್ಲಿ(Mira Road Tragedy) ಕ್ರಿಕೆಟ್​ ಆಡುತ್ತಿದ್ದ ವೇಳೆ ಆಟಗಾರನೊಬ್ಬ ಇದ್ದಕ್ಕಿದ್ದಂತೆ ಕ್ರೀಡಾಂಗಣದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ದುರಂತ ನಡೆದಿದೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾಗಿದ್ದರೂ ಕೂಡ ಬಿಸಿಗಾಳಿಯಿಂದ ಈ ಆಟಗಾರ ಸಾವನ್ನಪ್ಪಿದ್ದಾನೆ ಎಂದು ಊಹಿಸಲಾಗಿದೆ.

ಸ್ಥಳೀಯ ಟೂರ್ನಿಯಲ್ಲಿ ಬ್ಯಾಟಿಂಗ್​ ನಡೆಸುತ್ತಿದ್ದ ವೇಳೆ ಈ ಬ್ಯಾಟರ್​ ಚೆಂಡನ್ನು ಸಿಕ್ಸರ್​ಗೆ ಬಡಿದಟ್ಟಿತ ಮರು ಕ್ಷಣವೇ ಪಿಚ್​ನಲ್ಲಿ ಕುಸಿದು ಬಿದ್ದಿದ್ದಾನೆ. ಈ ವೇಳೆ ಸಹ ಆಟಗಾರರು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು ಅದಾಗಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ದುರಂತದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಖಾಸಗಿ ಭಾಗಕ್ಕೆ ಚೆಂಡು ಬಡಿದು ಬಾಲಕ ದಾರುಣ ಸಾವು


ಕೆಲವು ತಿಂಗಳುಗಳ ಹಿಂದೆ ಸ್ನೇಹಿತರೊಂದಿಗೆ ಕ್ರಿಕೆಟ್ ಅಭ್ಯಾಸ ಮಾಡುತ್ತಿದ್ದ ವೇಳೆ ಚೆಂಡು ತನ್ನ ಖಾಸಗಿ(Ball hit boy’s private part) ಭಾಗಕ್ಕೆ ಬಡಿದು 11 ವರ್ಷದ(11-year-old ) ಬಾಲಕ ಮೃತಪಟ್ಟಿರುವ ದಾರುಣ ಘಟನೆಯೊಂದು ಪುಣೆಯಲ್ಲಿ ನಡೆದಿತ್ತು. ಈ ಘಟನೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಬೌಲಿಂಗ್ ಮಾಡುತ್ತಿದ್ದಾಗ ಬ್ಯಾಟ್ಸ್‌ಮನ್ ಹೊಡೆದ ಚೆಂಡು ನೇರವಾಗಿ ಶೌರ್ಯನ ಖಾಸಗಿ ಭಾಗಕ್ಕೆ ಬಡಿದಿತ್ತು. ನೋವಿನಿಂದ ನರಳಿದ ಆತ ತಕ್ಷಣ ನೆಲದ ಮೇಲೆ ಕುಸಿದು ಬಿದ್ದಿದ್ದ. ತಕ್ಷಣ ಆತನ ಸ್ನೇಹಿತರು ಆರೈಕೆ ಮಾಡಿದರೂ ಕೂಡ ಯಾವುದೇ ಸ್ಪಂದನೆ ನೀಡದ ಕಾರಣ ಶೌರ್ಯನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಆತ ಈ ಮೊದಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದರು. ಚೆಂಡಿನ ಬಲವಾದ ಹೊಡೆತಕ್ಕೆ ಆತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

ಇದಕ್ಕೂ ಮುನ್ನ ಕ್ರಿಕೆಟ್ ಪಂದ್ಯದ ವೇಳೆ ತಲೆಗೆ ಚೆಂಡು ಬಡಿದು 52 ವರ್ಷದ ಕ್ರಿಕೆಟಿಗ ಮೃತಪಟ್ಟ ಘಟನೆ ಮುಂಬೈನಲ್ಲಿ ನಡೆದಿತ್ತು. ಒಂದೇ ಮೈದಾನದಲ್ಲಿ ಎರಡು ಪಂದ್ಯಗಳು ನಡೆಯುತ್ತಿದ್ದ ವೇಳೆ ಮತ್ತೊಂದು ಪಂದ್ಯದ ಕ್ರಿಕೆಟ್ ಚೆಂಡು ತಲೆಗೆ ಬಡಿದು ಕ್ರಿಕೆಟಿಗ ಮೃತಪಟ್ಟಿದ್ದ. ಮುಂಬೈಯಲ್ಲೇ ಇಂತಹ ಘಟನೆಗಳು ಪದೇಪದೆ ಮರುಕಳಿಸುತ್ತಿರುವುದು ನಿಜ್ಜಕೂ ಬೇಸರದ ಸಂಗತಿಯಾಗಿದೆ.

ಇದನ್ನೂ ಓದಿ Fire Accident: ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ; ಮಹಿಳೆಯರು, ಮಕ್ಕಳು ಸೇರಿ 24 ಮಂದಿ ದಾರುಣ ಸಾವು

ಹೃದಯಾಘಾತದಿಂದ ಮೈದಾನದಲ್ಲೇ ಮೃತಪಟ್ಟ ಇಂಜಿನಿಯರ್


ಕ್ರಿಕೆಟ್ ಆಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಸಾಫ್ಟ್ ವೇರ್ ಇಂಜಿನಿಯರ್ ಮೈದಾನದಲ್ಲೇ ಕುಸಿದುಬಿದ್ದು ಮೃತಪಟ್ಟ ಘಟನೆ ಕಳೆದ ಡಿಸೆಂಬರ್​ನಲ್ಲಿ ನೋಯ್ಡಾದಲ್ಲಿ ಸಂಭವಿಸಿತ್ತು. ವಿಕಾಸ್ ಅವರು ಸ್ಟ್ರೈಕ್​ನಲ್ಲಿದ್ದ ಸಹ ಬ್ಯಾಟರ್​ ಜತೆ ಮಾತುಕತೆ ನಡೆಸಿ ಹಿಂದಿರುಗುವ ವೇಳೆ ಹಠಾತ್​ ಆಗಿ ಪಿಚ್​ನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದರು.

Continue Reading

ಕ್ರಿಕೆಟ್

Riyan Parag: ಟಿ20 ವಿಶ್ವಕಪ್​ ನೋಡಲಾರೆ ಎಂದ ‘ಹಾಟ್​ ಫೇವರಿಟ್’ ರಿಯಾನ್​ ಪರಾಗ್

Riyan Parag: ಸಂದರ್ಶಕರೊಬ್ಬರು ಟಿ20 ವಿಶ್ವಕಪ್​ ಬಗ್ಗೆ ಕೇಳಿದ ಪ್ರಶ್ನೆ ಉತ್ತರಿಸಿದ ಪರಾಗ್​, ಪ್ರಾಮಾಣಿಕವಾಗಿ ಹೇಳಬೇಕೆಂದರೆ ನಾನು ವಿಶ್ವಕಪ್ ಪಂದ್ಯಗಳನ್ನು ನೋಡ ಬಯಸುವುದಿಲ್ಲ. ನಾನು ಕೇವಲ ಯಾರು ಗೆಲ್ಲುತ್ತಿದ್ದಾರೆ ಎಂದಷ್ಟೇ ನೋಡಬಯಸುತ್ತೇನೆ. ನಾನು ಯಾವಾಗ ವಿಶ್ವಕಪ್ ಆಡುತ್ತೇನೆಯೋ ಆಗ ಈ ಟೂರ್ನಿಯ ಬಗ್ಗೆ ಯೋಚಿಸುತ್ತೇನೆ” ಎಂದು ಹೇಳಿದ್ದಾರೆ.

VISTARANEWS.COM


on

Riyan Parag
Koo

ಮುಂಬಯಿ: ಕೆಲ ದಿನಗಳ ಹಿಂದೆ ಯೂಟ್ಯೂಬ್ ಖಾತೆಯಲ್ಲಿ ಬಾಲಿವುಡ್ ನಟಿಯರಾದ ಅನನ್ಯಾ ಪಾಂಡೆ(ananya pandey) ಹಾಗೂ ಸಾರಾ ಅಲಿ ಖಾನ್(sara ali khan) ಅವರ ಹಾಟ್ ವಿಡಿಯೋಗಳನ್ನು ಹುಡುಕಾಡಿದ ವಿಚಾರದಲ್ಲಿ ಭಾರೀ ಸುದ್ದಿಯಾಗಿದ್ದ ರಾಜಸ್ಥಾನ್​ ರಾಯಲ್ಸ್​ ತಂಡದ ಬ್ಯಾಟರ್​ ರಿಯಾನ್​ ಪರಾಗ್​(Riyan Parag) ಅವರು ಟಿ20 ವಿಶ್ವಕಪ್​ ಟೂರ್ನಿಯನ್ನು ನೋಡಲಾರೆ ಎಂದು ಹೇಳಿದ್ದಾರೆ.

ಸಂದರ್ಶಕರೊಬ್ಬರು ಟಿ20 ವಿಶ್ವಕಪ್​ ಬಗ್ಗೆ ಕೇಳಿದ ಪ್ರಶ್ನೆ ಉತ್ತರಿಸಿದ ಪರಾಗ್​, ಪ್ರಾಮಾಣಿಕವಾಗಿ ಹೇಳಬೇಕೆಂದರೆ ನಾನು ವಿಶ್ವಕಪ್ ಪಂದ್ಯಗಳನ್ನು ನೋಡ ಬಯಸುವುದಿಲ್ಲ. ನಾನು ಕೇವಲ ಯಾರು ಗೆಲ್ಲುತ್ತಿದ್ದಾರೆ ಎಂದಷ್ಟೇ ನೋಡಬಯಸುತ್ತೇನೆ. ನಾನು ಯಾವಾಗ ವಿಶ್ವಕಪ್ ಆಡುತ್ತೇನೆಯೋ ಆಗ ಈ ಟೂರ್ನಿಯ ಬಗ್ಗೆ ಯೋಚಿಸುತ್ತೇನೆ” ಎಂದು ಹೇಳಿದ್ದಾರೆ.

ಟಿ20 ವಿಶ್ವಕಪ್​ ಟೂರ್ನಿಗೆ ಭಾರತ ತಂಡ ಪ್ರಕಟಗೊಳ್ಳುವ ಮುನ್ನ ಸಂಭಾವನೀಯರ ಪಟ್ಟಿಯಲ್ಲಿ ರಿಯಾನ್ ಪರಾಗ್ ಹೆಸರೂ ಕೇಳಿ ಬಂದಿತ್ತು, ಅಲ್ಲದೆ ಪರಾಗ್​ ಐಪಿಎಲ್​ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದರು. ಹೀಗಾಗಿ 15 ಆಟಗಾರರ ಪಟ್ಟಿಯಲ್ಲಿ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ಸ್ಥಾನ ಸಿಗಲಿಲ್ಲ. ಇದೇ ಬೇಸರದಲ್ಲಿ ಅವರು ತಾನು ವಿಶ್ವಕಪ್​ ನೋಡುವುದಿಲ್ಲ ಎಂದು ಹೇಳಿದಂತಿದೆ.

ಇದನ್ನೂ ಓದಿ T20 World Cup 2024 : ಒಮಾನ್ ವಿರುದ್ಧ ಹೊಸ ದಾಖಲೆ ಬರೆದ ನಮೀಬಿಯಾ ತಂಡದ ರುಬೆನ್ ಟ್ರಂಪೆಲ್ಮನ್

ಕೆಲವು ದಿನಗಳ ಹಿಂದೆ ರಿಯಾನ್​ ಪರಾಗ್​ ಅವರು ಲೈವ್ ಸ್ಟ್ರೀಮಿಂಗ್​ನಲ್ಲಿ ಮಾತನಾಡುತ್ತಿದ್ದ ವೇಳೆ ಅವರ ಯೂಟ್ಯೂಬ್ ಸರ್ಚ್ ಹಿಸ್ಟರಿ ಕೂಡ ಕಾಣಿಸಕೊಂಡಿತ್ತು. ಈ ವೇಳೆ ಅವರು ನಟಿಮಣಿಯರ ಹೆಸರುಗಳೊಂದಿಗೆ ಹಾಟ್ ವಿಡಿಯೊಗಳನ್ನು ಹುಡುಕಾಡಿರುವುದು ಕಂಡು ಬಂದಿತ್ತು. ಅವರ ಸರ್ಚ್ ಹಿಸ್ಟರಿ ಸ್ಕ್ರೀನ್ ಶಾಟ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.

ಈ ಬಾರಿಯ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ರಿಯಾನ್ ಪರಾಗ್ ಅದ್ಭುತ ಪ್ರದರ್ಶನ ನೀಡಿದ್ದರು. 15 ಇನಿಂಗ್ಸ್​ ಆಡಿ 4 ಅರ್ಧಶತಕಗಳೊಂದಿಗೆ ಒಟ್ಟು 573 ರನ್ ಕಲೆಹಾಕಿದ್ದರು.

 ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ.

ಏಕದಿನ ವಿಶ್ವಕಪ್​ ಟೂರ್ನಿಯಂತೆ ಈ ಬಾರಿಯೂ ಟಿ20 ವಿಶ್ವಕಪ್​ ಪಂದ್ಯಾವಳಿಗಳನ್ನು ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಉಚಿತವಾಗಿ ನೋಡಬಹುದಾಗಿದೆ. ​ಡಿಸ್ನಿ + ಹಾಟ್‌ಸ್ಟಾರ್(Disney+ Hotstar) ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರಿಗೆ ಈ ಅವಕಾಶ ಕಲ್ಪಿಸಿದೆ. OTT ಪ್ಲಾಟ್‌ಫಾರ್ಮ್‌ನಲ್ಲಿ ಎಲ್ಲ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ.

Continue Reading
Advertisement
Rave Party
ಕರ್ನಾಟಕ45 seconds ago

Rave Party: ರೇವ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮಾ ಸಿಸಿಬಿ ವಶಕ್ಕೆ

Saree Fashion
ಫ್ಯಾಷನ್4 mins ago

Saree Fashion: ರಫಲ್‌ ಡಿಸೈನ್‌ನಲ್ಲಿ ಬಂದಿದೆ ಜಾರ್ಜೆಟ್ ಲೆಹೆಂಗಾ ಸೀರೆ!

Hornbill bird sighting in Gangavathi
ಕರ್ನಾಟಕ6 mins ago

Hornbill Bird: ಗಂಗಾವತಿಯಲ್ಲಿ ‘ಹಾರ್ನ್‌ಬಿಲ್’ ಪಕ್ಷಿ ಪ್ರತ್ಯಕ್ಷ

Samsung Big TV Days Sale Exciting offer on big TVs
ದೇಶ9 mins ago

Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

Davangere Lok Sabha Constituency
ದಾವಣಗೆರೆ11 mins ago

Davangere Lok Sabha Constituency: ದಾವಣಗೆರೆಯಲ್ಲಿ ನಾರಿಶಕ್ತಿ ಕದನ, ಯಾರು ಗೆದ್ದರೂ ಇತಿಹಾಸ

Rahul Dravid
ಕ್ರಿಕೆಟ್13 mins ago

Rahul Dravid: ರೋಹಿತ್​, ಕೊಹ್ಲಿ, ಪಂತ್​ ಸೇರಿ ಎಲ್ಲ ಆಟಗಾರರಿಗೆ ಖಡಕ್​ ಎಚ್ಚರಿಕೆ ನೀಡಿದ ಕೋಚ್​ ದ್ರಾವಿಡ್​

Kannada New Movie Mandela nari shrinivas
ಸ್ಯಾಂಡಲ್ ವುಡ್13 mins ago

Kannada New Movie: `ಮಂಡೇಲಾ’ ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ!

Election Result 2024
ಪ್ರಮುಖ ಸುದ್ದಿ18 mins ago

Election Result 2024: ಇಂಡಿ ಒಕ್ಕೂಟ ಸಭೆ ಸೇರಿದ್ದ ಸ್ಥಳದಲ್ಲೇ ವಾಸ್ತುದೋಷ, ಅಂದು ಅಮವಾಸ್ಯೆ ಬೇರೆ; ಹಾಗಾಗಿ…

Fact Check
Fact Check30 mins ago

Fact Check: ಸೋಲುವ ಭೀತಿಯಲ್ಲಿ ಬ್ಯಾಂಕಾಕ್‌ಗೆ ಹಾರಲು ಸಿದ್ಧರಾದ್ರಾ ರಾಹುಲ್‌ ಗಾಂಧಿ? ವೈರಲ್‌ ಆಗಿರುವ ಬೋರ್ಡಿಂಗ್‌ ಪಾಸ್‌ನ ಅಸಲಿಯತ್ತೇನು?

Benefits Of Walk After Meal
ಆರೋಗ್ಯ34 mins ago

Benefits Of Walk After Meal: ಊಟದ ಬಳಿಕ ಲಘುವಾದ ವಾಕಿಂಗ್‌ ಮಾಡಿ, ಆರೋಗ್ಯದಲ್ಲಿನ ಬದಲಾವಣೆ ನೋಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌