Site icon Vistara News

Rishabh Pant: ಅಪಘಾತದ ಬಳಿಕ ಮೊದಲ ಬಾರಿ ಕ್ರಿಕೆಟ್​ ಅಂಗಳಕ್ಕಿಳಿದ ಪಂತ್​

IPL 2024:Rishabh Pant

ಚಂಡೀಗಢ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಷಭ್‌ ಪಂತ್‌(Rishabh Pant) 15 ತಿಂಗಳ ಬಳಿಕ ಐಪಿಎಲ್‌(IPL 2024) ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಾಪಸಾಗಿದ್ದಾರೆ. ಶನಿವಾರದ ಡಬಲ್​ ಹೆಡರ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​(Punjab Kings) ವಿರುದ್ಧ ಮೈದಾನಕ್ಕಿಳಿಯುವ ಮೂಲಕ ಪಂತ್​ ಅವರ 2ನೇ ಕ್ರಿಕೆಟ್​ ಜರ್ನಿ ಆರಂಭವಾಗಿದೆ. ಪಂದ್ಯದಲ್ಲಿ ಟಾಸ್​ ಗೆದ್ದ ಶಿಖರ್​ ಧವನ್​ ಸಾರಥ್ಯದ ಪಂಜಾಬ್​ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ. ಪಂತ್​ ತಂಡಕ್ಕೆ ಮರಳಿರುವುದು ಡೆಲ್ಲಿಗೆ(Delhi Capitals) ನೈತಿಕ ಬಲ ಒದಗಿಸಿದೆ. ಡೆಲ್ಲಿ ಫ್ರಾಂಚೈಸಿಯು ಪಂತ್​ ಅವರ ಕಮ್​ಬ್ಯಾಕ್​ನ ಕಿರು ವಿಡಿಯೊವೊಂದನ್ನು ಕೂಡ ಟ್ವೀಟರ್​ ಎಕ್ಸ್​ನಲ್ಲಿ ಹಂಚಿಕಿಕೊಂಡಿದೆ.

ಐಪಿಎಲ್​ ಆರಂಭಕ್ಕೂ ಮುನ್ನ ಪಂತ್​ ಅವರು ನನಗೆ ಮತ್ತೆ ಕ್ರಿಕೆಟ್‌ ಪದಾರ್ಪಣೆ ಮಾಡುತ್ತಿರುವ ಅನುಭವ ಆಗುತ್ತಿದೆ ಎಂದಿದ್ದರು. ದುಬೈನಲ್ಲಿ ಧೋನಿ ಪರಿವಾರದೊಂದಿಗೆ ಕ್ರಿಸ್​ಮಸ್​ ಪಾರ್ಟಿಯಲ್ಲಿ ಪಾಲ್ಗೊಂಡು. ಈ ಪಾರ್ಟಿ ಮುಗಿಸಿ ಮರಳಿ ಭಾರತಕ್ಕೆ ಬಂದು ತಾಯಿಗೆ ಹೊಸ ವರ್ಷದ ಸರ್​ಪ್ರೈಸ್​ ನೀಡಲೆಂದು ದೆಹಲಿಯಿಂದ ಡೆಹ್ರಾಡೂನ್​ಗೆ ತೆರಳುತ್ತಿದ್ದ ವೇಳೆ ಪಂತ್​ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿತ್ತು. 2022ರ ಡಿಸೆಂಬರ್​ 30ರಂದು(rishabh pant accident date) ಈ ಅವಘಡ ಸಂಭವಿಸಿತ್ತು.

ಇದನ್ನೂ ಓದಿ IPL 2024: ಉದ್ಘಾಟನಾ ಪಂದ್ಯದಲ್ಲೇ ದಾಖಲೆ ಬರೆದ ಮಹೇಂದ್ರ ಸಿಂಗ್​ ಧೋನಿ

ಘಟನೆಯಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಸುಟ್ಟ ಗಾಯಗಳು ಹಾಗೂ ಮಂಡಿಯ ಗಾಯದೊಂದಿಗೆ ರಿಷಭ್​ ಪಂತ್ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು.​ ಡೆಹ್ರಾಡೂನ್​ನಲ್ಲಿ ಆರಂಭದಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನೀಡಲಾಗಿತ್ತು.

ಮೊದಲ ಬಾರಿಗೆ ಪಂತ್​ ಅವರು ತಮ್ಮ ಚೇತರಿಕೆ ಅಪ್​ಡೇಟ್​ ನೀಡಿದ್ದು ಊರುಗೋಲಿನ ಸಹಾಯದಿಂದ ನಡೆದಾಡುವ ಫೋಟೊ ಹಂಚಿಕೊಂಡು ಬಳಿಕ ಸ್ವಿಮಿಂಗ್​ ಪೂಲ್​ನಲ್ಲಿ ನಡೆದಾಡಿದ್ದು ಹೀಗೆ ಹಲವು ಚೇತರಿಕೆಯ ಹಂತವನ್ನು ಅವರು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಳ್ಳುತ್ತಾ ಬಂದು ಇದೀಗ ಅಂತಿಮವಾಗಿ ಕ್ರಿಕೆಟ್​ ಅಂಗಳಕ್ಕೆ ಮರಳಿದ್ದಾರೆ.

ದೇವರಿಗೆ ಧನ್ಯವಾದ ತಿಳಿಸಿದ್ದ ಪಂತ್​


ರಿಷಭ್​ ಪಂತ್​ ಅವರ ಗಂಭೀರ ಗಾಯವನ್ನು ಕಂಡ ಅನೇಕರು ಪಂತ್​ ಕ್ರಿಕೆಟ್​ ಬಾಳ್ವೆ ಇನ್ನು ಮಂದೆ ಕಷ್ಟ, ಒಂದೊಮ್ಮೆ ಅವರು ಕ್ರಿಕೆಟ್​ಗೆ ಮರಳಬೇಕಾದರೂ ಹಲವು ವರ್ಷ ಬೇಕಾದಿತು ಹೀಗೆ ಹಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ ಪಂತ್​ ಮಾತ್ರ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಶಸ್ತ್ರಚಿಕಿತ್ಸೆ ನಡೆದ ಒಂದೆರಡು ದಿನಗಳಿಂದಲೇ ಕಠಿಣ ವ್ಯಾಯಾಮ ನಡೆಸಲು ಆರಂಭಿಸಿದ್ದರು. ಇದೀಗ ಅಪಾಯದಿಂದ ಪಾರಾಗಿ ಮತ್ತೆ ಕ್ರಿಕೆಟ್​ ಆಡುವಂತಾಗಿದ್ದಾರೆ. ಇದೇ ಖಷಿಯಲ್ಲಿ ಪಂತ್​ ಅವರು “ನಾನು ಕತ್ತಲೆಯ ಸುರಂಗದಲ್ಲಿ ಮತ್ತೆ ಬೆಳಕನ್ನು ನೋಡಲಾರಂಭಿಸಿದೆ. ಇದನ್ನು ಕರುಣಿಸಿದ ದೇವರಿಗೆ ಧನ್ಯವಾದಗಳು” ಎಂದು ಇತ್ತೀಚೆಗೆ ನಡೆದಿದ್ದ ಸಂದರ್ಶನದಲ್ಲಿ ಹೇಳಿದ್ದರು.

Exit mobile version