Rishabh Pant: Pant met Raina, Sreesanth, Harbhajan Singh Rishabh Pant: ಪಂತ್​ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸುರೇಶ್​ ರೈನಾ, ಶ್ರೀಶಾಂತ್​, ಹರ್ಭಜನ್​ ಸಿಂಗ್​ - Vistara News Rishabh Pant: ಪಂತ್​ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸುರೇಶ್​ ರೈನಾ, ಶ್ರೀಶಾಂತ್​, ಹರ್ಭಜನ್​ ಸಿಂಗ್​

ಕ್ರಿಕೆಟ್

Rishabh Pant: ಪಂತ್​ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸುರೇಶ್​ ರೈನಾ, ಶ್ರೀಶಾಂತ್​, ಹರ್ಭಜನ್​ ಸಿಂಗ್​

ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಕೆ ಕಾಣುತ್ತಿರುವ ಪಂತ್​ ಅವರನ್ನು ಟೀಮ್​ ಇಂಡಿಯಾದ ಮಾಜಿ ಆಟಗಾರರಾದ ಹರ್ಭಜನ್​ ಸಿಂಗ್​,ಸುರೇಶ್​ ರೈನಾ ಮತ್ತು ಎಸ್‌. ಶ್ರೀಶಾಂತ್‌ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

VISTARANEWS.COM


on

Rishabh Pant: Pant met Raina, Sreesanth, Harbhajan Singh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕಳೆದ ಡಿಸೆಂಬರ್​ನಲ್ಲಿ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಟೀಮ್​ ಇಂಡಿಯಾ ಕ್ರಿಕೆಟಿಗ ರಿಷಭ್​ ಪಂತ್​ ಚೇತರಿಕೆಯ ಹಾದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ತಮ್ಮ ಚೇತರಿಕೆಯ ಫೋಟೊವನ್ನು ಪಂತ್​ ಟ್ವಿಟರ್​ ಮೂಲಕ ಹಂಚಿಕೊಂಡಿದ್ದರು. ಸದ್ಯ ಮನೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಪಂತ್​ ಅವರನ್ನು ಟೀಮ್​ ಇಂಡಿಯಾದ ಮಾಜಿ ಆಟಗಾರರಾದ ಹರ್ಭಜನ್​ ಸಿಂಗ್(harbhajan singh)​, ಸುರೇಶ್​ ರೈನಾ(suresh raina) ಮತ್ತು ಎಸ್‌. ಶ್ರೀಶಾಂತ್‌(s sreesanth) ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಈಗಾಗಲೇ ಪಂತ್​ ಅವರನ್ನು ಯುವರಾಜ್​ ಸಿಂಗ್ ಸೇರಿ ಹಲವು ಕ್ರಿಕೆಟಿಗರು ಭೇಟಿ ಮಾಡಿ ಆರೋಗ್ಯ ಯೋಗಕ್ಷೇಮ ವಿಚಾರಿಸಿದ್ದಾರೆ. ಇದೀಗ ಸುರೇಶ್ ರೈನಾ, ಹರ್ಭಜನ್ ಸಿಂಗ್ ಹಾಗೂ ಎಸ್. ಶ್ರೀಶಾಂತ್ ಭೇಟಿ ಮಾಡಿ ಚೇತರಿಕೆಯ ಹಾದಿಯಲ್ಲಿರುವ ಪಂತ್​ಗೆ ಸ್ಫೂರ್ತಿದಾಯಕ ಮಾತುಗಳಿಂದ ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ Urvashi Rautela: ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ ರೌಟೇಲಾ; ವಿಡಿಯೊ ವೈರಲ್​

ರಿಷಭ್​ ಪಂತ್​ ಅವರನ್ನು ಭೇಟಿ ಮಾಡಿದ ಫೋಟೊವನ್ನು ಹಂಚಿಕೊಂಡಿರುವ ಸುರೇಶ್​​ ರೈನಾ, ಸಹೋದರತ್ವದ ಮುಂದೆ ಯಾವ ಸಮಸ್ಯೆಯೂ ಎದುರಾಗದು. ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಶುಭಹಾರೈಸಿದ್ದಾರೆ. ಶ್ರೀಶಾಂತ್ ಅವರು ಪಂತ್‌ಗೆ ನಿಮ್ಮಲ್ಲಿ ನೀವು ವಿಶ್ವಾಸದಿಂದಿರಿ ಹಾಗೂ ದೃತಿಗೆಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

ಸುಧಾರಣೆಯ ಹಾದಿಯಲ್ಲಿ ಪಂತ್​

ಕಳೆದ ಡಿಸೆಂಬರ್​ 30 ರಂದು ಡೆಲ್ಲಿಯಿಂದ ಡೆಹ್ರಾಡೂನ್​ಗೆ ಹೋಗುವ ಹಾದಿಯಲ್ಲಿ ರಿಷಭ್​ ಪಂತ್​ ಚಲಾಯಿಸುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಕಾರು ಬೆಂಕಿ ಹೊತ್ತಿಕೊಂಡು ಸಂಪೂರ್ಣ ಭಸ್ಮವಾಗಿತ್ತು. ಪವಾಡಸದೃಶ ಪಂತ್​ ಪಾರಾಗಿದ್ದರು. ಮೊದಲಿಗೆ ಡೆಹ್ರಾಡೂನ್​ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು ಬಳಿಕ ಮಂಡಿಯ ಗಾಯಕ್ಕಾಗಿ ಮುಂಬಯಿಯ ಕೋಕಿಲಾ ಬೆನ್​ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು.

ಎಡಗೈ ಬ್ಯಾಟರ್​ ಪ್ರಸ್ತುತ ಮನೆಯಲ್ಲಿಯೇ ಪುನಶ್ಚೇತನಕ್ಕೆ ಒಳಗಾಗುತ್ತಿದ್ದಾರೆ. ಕಳೆದ ಕೆಲವೊಂದು ದಿನಗಳಿಂದ ಅವರು ತಾವು ಊರುಗೋಲಿನ ಸಮೇತ ನಡೆದುಕೊಂಡು ಹೋಗುವ ವಿಡಿಯೊವನ್ನು ಶೇರ್​ ಮಾಡಿಕೊಂಡಿದ್ದರು. ಅಲ್ಲದೇ ಗುಣಮುಖರಾಗುವ ವಿಶ್ವಾಸ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ Rishabh Pant: ರಿಷಭ್​ ಪಂತ್​ ಭೇಟಿಯಾದ ಟೀಮ್​ ಇಂಡಿಯಾದ ಮಾಜಿ ಆಟಗಾರ ಯುವರಾಜ್​ ಸಿಂಗ್​

ಪಂತ್​ ಅವರಿಗೆ ವಿಶ್ವಾಸ ತುಂಬ ನಿಟ್ಟಿನಲ್ಲಿ ಈ ಬಾರಿಯ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಆಟಗಾರರು ಧರಿಸುವ ಜೆರ್ಸಿ ಅಥವಾ ಕ್ಯಾಪ್​ನಲ್ಲಿ ರಿಷಭ್​ ಪಂತ್​ ಜೆರ್ಸಿ ಸಂಖ್ಯೆ 17 ಪ್ರಿಂಟ್​ ಮಾಡಲು ಮುಂದಾಗಿದ್ದಾರೆ ಎಂದೂ ಮೂಲಗಳು ತಿಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Virat kohli : ಕೇಕೆ ಹಾಕುತ್ತಿದ್ದ ಸಿಎಸ್​ಕೆ ಅಭಿಮಾನಿಗಳ ಬಾಯ್ಮುಚ್ಚಿಸಿದ ಕೊಹ್ಲಿ; ಇಲ್ಲಿದೆ ವಿಡಿಯೊ

Virat kohli: ಹತ್ತನೇ ಓವರ್​ನ ಮೊದಲ ಎಸೆತದಲ್ಲಿ, ನ್ಯೂಜಿಲೆಂಡ್ ಸ್ಟಾರ್ ಲಾಕಿ, ರಹಾನೆ ಅವರನ್ನು ಹಿಂದಕ್ಕೆ ಕಳುಹಿಸಿದರು ಮತ್ತು ಅಪಾಯಕಾರಿ ಪಾಲುದಾರಿಕೆಯನ್ನು ಕೊನೆಗೊಳಿಸಿದರು. ರಹಾನೆ 33 ರನ್ ಗಳಿಸಿದ ನಂತರ ನಿರ್ಗಮಿಸಿದರು ಮತ್ತು ರವೀಂದ್ರ ಅವರೊಂದಿಗೆ ನಿರ್ಣಾಯಕ 66 ರನ್ ಗಳ ಜೊತೆಯಾಟವನ್ನು ಹಂಚಿಕೊಂಡರು. ರಹಾನೆ ಔಟಾಗುತ್ತಿದ್ದಂತೆ, ಕ್ಯಾಮೆರಾಗಳು ವಿರಾಟ್ ಕೊಹ್ಲಿ ಕಡೆಗೆ ತಿರುಗಿತು, ಅವರು ಆಸಕ್ತಿದಾಯಕ ಸಂಭ್ರಮಾಚರಣೆ ಮಾಡಿದರು.

VISTARANEWS.COM


on

virat kohli
Koo

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್​ ಪಂದ್ಯದಲ್ಲಿ (IPL 2024) ಅಜಿಂಕ್ಯ ರಹಾನೆ ಅವರನ್ನು ಔಟ್ ಮಾಡಿದ ನಂತರ ವಿರಾಟ್ ಕೊಹ್ಲಿ (Virat kohli) ಶನಿವಾರ (ಮೇ 18) ‘ಶ್​​’ ಎಂದು ಬಾಯಿ ಮೇಲೆ ಬೆರಳಿಟ್ಟು ಸಂಭ್ರಮಿಸಿದರು. 219 ರನ್​​ಗಳ ಗುರಿ ಬೆನ್ನಟ್ಟುತ್ತಿದ್ದ ಸಿಎಸ್​ಕೆ ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಗೋಲ್ಡನ್ ಡಕ್​ಗೆ ಔಟಾದರು. ಗ್ಲೆನ್ ಮ್ಯಾಕ್ಸ್​ವೆಲ್​ ಇನ್ನಿಂಗ್ಸ್​ನ ಮೊದಲ ಎಸೆತದಲ್ಲೇ ಗಾಯಕ್ವಾಡ್ ಅವರನ್ನು ಔಟ್ ಮಾಡುವ ಮೂಲಕ ಆರ್​ಸಿಬಿಗೆ ನಿರ್ಣಾಯಕ ಆರಂಭಿಕ ಪ್ರಗತಿಯನ್ನು ನೀಡಿದರು. ಮೂರನೇ ಓವರ್​ನಲ್ಲಿ ಯಶ್ ದಯಾಳ್ ಡ್ಯಾರಿಲ್ ಮಿಚೆಲ್ ಅವರನ್ನು 4 ರನ್​ಗಳಿ ಔಟ್ ಮಾಡಿ ಸಿಎಸ್​​ಕೆ 2 ವಿಕೆಟ್​​ ಕಳೆದುಕೊಳ್ಳುವಂತೆ ಮಾಡಿದರು. ಈ ವೇಳೆ ಆ ತಂಡ 19 ರನ್ ಗಳಿಸಿತ್ತು.

ನಂತರ ರಚಿನ್ ರವೀಂದ್ರ ಮತ್ತು ಅಜಿಂಕ್ಯ ರಹಾನೆ ತಂಡವನ್ನು ಸ್ಥಿರಗೊಳಿಸಿದರು ಮತ್ತು ಇಬ್ಬರೂ ಆರೋಗ್ಯಕರ ಸ್ಟ್ರೈಕ್​ರೇಟ್​ನಲ್ಲಿ ಸ್ಕೋರ್ ಮಾಡಿದರು. ಇವರಿಬ್ಬರು ಸ್ಕೋರ್ ಅನ್ನು 50 ರನ್​ಗಳ ಗಡಿ ದಾಟಿಸಿದರು ಮತ್ತು ಲಾಕಿ ಫರ್ಗುಸನ್ ರಹಾನೆ ಅವರನ್ನು ಔಟ್ ಮಾಡುವ ಮೂಲಕ ಆರ್​ಸಿಬಿಗೆ ಹೆಚ್ಚು ಅಗತ್ಯವಾದ ಪ್ರಗತಿ ನೀಡಿದರು.

ಹತ್ತನೇ ಓವರ್​ನ ಮೊದಲ ಎಸೆತದಲ್ಲಿ, ನ್ಯೂಜಿಲೆಂಡ್ ಸ್ಟಾರ್ ಲಾಕಿ, ರಹಾನೆ ಅವರನ್ನು ಹಿಂದಕ್ಕೆ ಕಳುಹಿಸಿದರು ಮತ್ತು ಅಪಾಯಕಾರಿ ಪಾಲುದಾರಿಕೆಯನ್ನು ಕೊನೆಗೊಳಿಸಿದರು. ರಹಾನೆ 33 ರನ್ ಗಳಿಸಿದ ನಂತರ ನಿರ್ಗಮಿಸಿದರು ಮತ್ತು ರವೀಂದ್ರ ಅವರೊಂದಿಗೆ ನಿರ್ಣಾಯಕ 66 ರನ್ ಗಳ ಜೊತೆಯಾಟವನ್ನು ಹಂಚಿಕೊಂಡರು. ರಹಾನೆ ಔಟಾಗುತ್ತಿದ್ದಂತೆ, ಕ್ಯಾಮೆರಾಗಳು ವಿರಾಟ್ ಕೊಹ್ಲಿ ಕಡೆಗೆ ತಿರುಗಿತು, ಅವರು ಆಸಕ್ತಿದಾಯಕ ಸಂಭ್ರಮಾಚರಣೆ ಮಾಡಿದರು. ಕೊಹ್ಲಿ ಕೆಲವು ಕೆಲವು ಸಲ ಗಾಳಿಯಲ್ಲಿ ಪಂಚ್ ಮಾಡಿದ ನಂತರ, ಸ್ಟ್ಯಾಂಡ್ ಕಡೆಗೆ ತಿರುಗಿ ತುಟಿಗಳ ಮೇಲೆ ಬೆರಳಿಟ್ಟು ಸಿಎಸ್ಕೆ ಅಭಿಮಾನಿಗಳಿಗೆ ಸುಮ್ಮನಿರಲು ಹೇಳಿದರು.

ಚೆನ್ನೈ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್​ ಕೊಹ್ಲಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 18) ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ (IPL 2024) ವಿರಾಟ್ ಕೊಹ್ಲಿ(virat Kohli) ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್​ ಟೂರ್ನಿಯಲ್ಲಿ 3000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ವಿರಾಟ್ ಕೊಹ್ಲಿ 12 ರನ್ ಗಳಿಸಿದ ನಂತರ ಮೈದಾನದಲ್ಲಿ 3000 ರನ್ ಪೂರೈಸಿದರು, ತುಷಾರ್ ದೇಶಪಾಂಡೆ ಅವರ ಬೌಲಿಂಗ್ಗೆ ಸಿಕ್ಸರ್ ಗೆ ಹೊಡೆಯುವ ಮೂಲಕ ಶೈಲಿಯಲ್ಲಿ ದೊಡ್ಡ ಮೈಲಿಗಲ್ಲನ್ನು ಸಾಧಿಸಿದರು.

ಇದರೊಂದಿಗೆ ಕೊಹ್ಲಿ ಐಪಿಎಲ್​ನಲ್ಲಿ ಒಂದೇ ತಾಣದಲ್ಲಿ 3000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐಪಿಎಲ್​ನಲ್ಲಿ ಇದುವರೆಗೆ ಯಾವುದೇ ಆಟಗಾರ ಒಂದು ಸ್ಟೇಡಿಯಮ್​​ನಲ್ಲಿ 2500 ರನ್​ಗಳ ಗಡಿಯನ್ನು ಮುಟ್ಟಲು ಸಾಧ್ಯವಾಗಿಲ್ಲ. ರೋಹಿತ್ ಶರ್ಮಾ 2295 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಹೊರತುಪಡಿಸಿ, ಐಪಿಎಲ್​ನಲ್ಲಿ 2000 ರನ್ ಗಳಿಸಿದ ಏಕೈಕ ಬ್ಯಾಟ್ಸ್ಮನ್ ರೋಹಿತ್. ವಾಂಖೆಡೆ ಸ್ಟೇಡಿಯಂನಲ್ಲಿ ರೋಹಿತ್ 2295 ರನ್ ಗಳಿಸಿದ್ದಾರೆ. ಆರ್​ಸಿಬಿ ಮಾಜಿ ಬ್ಯಾಟರ್​ ಎಬಿ ಡಿವಿಲಿಯರ್ಸ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 1960 ರನ್ ಗಳಿಸಿದ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

Continue Reading

ಕ್ರಿಕೆಟ್

IPL 2024 : ಚೆನ್ನೈ ಮಣಿಸಿ ಪ್ಲೇಆಫ್​ಗೇರುವ ಮುನ್ನವೇ ಸಿಕ್ಸರ್​​ಗಳ ವಿಶೇಷ ದಾಖಲೆ ಬರೆದ ಆರ್​ಸಿಬಿ

IPL 2024: ಈ ಹಿಂದೆ 2018ರ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 145 ಸಿಕ್ಸರ್ ಬಾರಿಸಿತ್ತು. ಈ ಋತುವಿನಲ್ಲಿ ಸನ್ರೈಸರ್ಸ್ ಹೈದರಾಬಾದ್ ಇದುವರೆಗೆ 146 ಸಿಕ್ಸರ್ಗಳನ್ನು ಬಾರಿಸಿದೆ ಮತ್ತು ಅದು ಆರ್​ಸಿಬಿ ನಂತರ ಒಂದು ಋತುವಿನಲ್ಲಿ 150 ಸಿಕ್ಸರ್​ಗಳನ್ನು ಬಾರಿಸಿದ ಎರಡನೇ ತಂಡವಾಗಿದೆ

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೇರಿದಂತೆ ಒಂದೇ ಆವೃತ್ತಿಯ ಟಿ 20 ಟೂರ್ನಿಯೊಂದರಲ್ಲಿ 150 ಸಿಕ್ಸರ್​ಗಳನ್ನು ಬಾರಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶನಿವಾರ (ಮೇ 18) ಪಾತ್ರವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್​ ಪಂದ್ಯದಲ್ಲಿ (IPL 2024) ಬೆಂಗಳೂರು ಮೂಲದ ತಂಡ ಈ ಸಾಧನೆ ಮಾಡಿದೆ.

ಈ ಹಿಂದೆ 2018ರ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 145 ಸಿಕ್ಸರ್ ಬಾರಿಸಿತ್ತು. ಈ ಋತುವಿನಲ್ಲಿ ಸನ್ರೈಸರ್ಸ್ ಹೈದರಾಬಾದ್ ಇದುವರೆಗೆ 146 ಸಿಕ್ಸರ್ಗಳನ್ನು ಬಾರಿಸಿದೆ ಮತ್ತು ಅದು ಆರ್​ಸಿಬಿ ನಂತರ ಒಂದು ಋತುವಿನಲ್ಲಿ 150 ಸಿಕ್ಸರ್​ಗಳನ್ನು ಬಾರಿಸಿದ ಎರಡನೇ ತಂಡವಾಗಿದೆ. ಆರ್​ಸಿಬಿ ಶನಿವಾರ ಸಿಕ್ಸರ್​​ಗಳ ಪಟ್ಟಿಯಲ್ಲಿ ಎಸ್ಆರ್​ಎಚ್​​ ಅನ್ನು ಹಿಂದಿಕ್ಕಿ ಒಂದು ಋತುವಿನಲ್ಲಿ 150 ಸಿಕ್ಸರ್​ಗಳನ್ನು ಬಾರಿಸಿದ ಮೊದಲ ತಂಡ ಎಂಬ ಇತಿಹಾಸವನ್ನು ಸೃಷ್ಟಿಸಿತು.

ಈ ಋತುವಿನ ಮೊದಲ ಪಂದ್ಯದಲ್ಲಿ ಆರ್​ಸಿಬಿ ಸಿಎಸ್​ಕೆ ವಿರುದ್ಧ 6 ಸಿಕ್ಸರ್​ಗಳನ್ನು ಬಾರಿಸಿತು ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ ಇನ್ನೂ ಆರು ಸಿಕ್ಸರ್​ಗಳನ್ನು ಬಾರಿಸಿತು. ಮೂರನೇ ಮತ್ತು ನಾಲ್ಕನೇ ಪಂದ್ಯಗಳಲ್ಲಿ ಅವರು ಕ್ರಮವಾಗಿ 11 ಮತ್ತು 8 ಸಿಕ್ಸರ್ ಗಳನ್ನು ಬಾರಿಸಿದರು. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಐದನೇ ಪಂದ್ಯದಲ್ಲಿ ಬೆಂಗಳೂರು ಮೂಲದ ತಂಡವು ಆರು ಸಿಕ್ಸರ್​ಗಳನ್ನು ಬಾರಿಸಿತು. ಇದಾದ ನಂತರ ಮುಂಬೈ ಇಂಡಿಯನ್ಸ್ ವಿರುದ್ಧ 11 ಸಿಕ್ಸರ್​ಗಳನ್ನು ಬಾರಿಸಿ ಎಸ್ಆರ್​ಎಚ್​​ ವಿರುದ್ಧ 16 ಸಿಕ್ಸರ್​ಗಳನ್ನು ಬಾರಿಸಿತ್ತು.

ಇದನ್ನೂ ಓದಿ: RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಆರ್​ಸಿಬಿ 17 ಸಿಕ್ಸರ್​ಗಳನ್ನು ಬಾರಿಸಿದ್ದು, ಎಸ್ಆರ್​ಚ್​​ ವಿರುದ್ಧ 8 ಸಿಕ್ಸರ್​ಗಳನ್ನು ಬಾರಿಸಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 16 ಮತ್ತು 8 ಸಿಕ್ಸರ್​ಗಳ ಬಾರಿಸಿತ್ತು. ಇದರ ನಂತರ ಪಿಬಿಕೆಎಸ್ ವಿರುದ್ಧ 16 ಸಿಕ್ಸರ್​ಗಳನ್ನು ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 11 ಸಿಕ್ಸರ್ ಸಿಡಿಸಿತು. ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ತಂಡವು ಸಿಎಸ್​​ಕೆ ವಿರುದ್ಧ 16 ಸಿಕ್ಸರ್​ಗಳನ್ನು ಬಾರಿಸಿದೆ. ಒಟ್ಟಾರೆಯಾಗಿ, ಅವರು ಇಲ್ಲಿಯವರೆಗೆ 157 ಸಿಕ್ಸರ್​ಗಳನ್ನು ಬಾರಿಸಿದ್ದಾರೆ.

ಟಿ20 ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ತಂಡಗಳ ಪಟ್ಟಿ ಇಂತಿದೆ

  • ಐಪಿಎಲ್ 2024: ಆರ್​​ಸಿಬಿ 157 ಸಿಕ್ಸರ್
  • ಐಪಿಎಲ್ 2024: ಎಸ್ಆರ್​ಎಚ್ 146 ಸಿಕ್ಸರ್​
  • ಐಪಿಎಲ್ 2018: ಸಿಎಸ್​ಕೆ 145 ಸಿಕ್ಸರ್​
  • 2023ರ ಟಿ20 ಬ್ಲಾಸ್ಟ್​ ಟೂರ್ನಿ: ಸರ್ರೆ ತಂಡದ 144 ಸಿಕ್ಸರ್​
  • ಐಪಿಎಲ್ 2019: ಕೆಕೆಆರ್ 143 ಸಿಕ್ಸರ್​

ಚೆನ್ನೈ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್​ ಕೊಹ್ಲಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 18) ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ (IPL 2024) ವಿರಾಟ್ ಕೊಹ್ಲಿ(virat Kohli) ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್​ ಟೂರ್ನಿಯಲ್ಲಿ 3000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ವಿರಾಟ್ ಕೊಹ್ಲಿ 12 ರನ್ ಗಳಿಸಿದ ನಂತರ ಮೈದಾನದಲ್ಲಿ 3000 ರನ್ ಪೂರೈಸಿದರು, ತುಷಾರ್ ದೇಶಪಾಂಡೆ ಅವರ ಬೌಲಿಂಗ್ಗೆ ಸಿಕ್ಸರ್ ಗೆ ಹೊಡೆಯುವ ಮೂಲಕ ಶೈಲಿಯಲ್ಲಿ ದೊಡ್ಡ ಮೈಲಿಗಲ್ಲನ್ನು ಸಾಧಿಸಿದರು.

ಇದರೊಂದಿಗೆ ಕೊಹ್ಲಿ ಐಪಿಎಲ್​ನಲ್ಲಿ ಒಂದೇ ತಾಣದಲ್ಲಿ 3000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐಪಿಎಲ್​ನಲ್ಲಿ ಇದುವರೆಗೆ ಯಾವುದೇ ಆಟಗಾರ ಒಂದು ಸ್ಟೇಡಿಯಮ್​​ನಲ್ಲಿ 2500 ರನ್​ಗಳ ಗಡಿಯನ್ನು ಮುಟ್ಟಲು ಸಾಧ್ಯವಾಗಿಲ್ಲ. ರೋಹಿತ್ ಶರ್ಮಾ 2295 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಹೊರತುಪಡಿಸಿ, ಐಪಿಎಲ್​ನಲ್ಲಿ 2000 ರನ್ ಗಳಿಸಿದ ಏಕೈಕ ಬ್ಯಾಟ್ಸ್ಮನ್ ರೋಹಿತ್. ವಾಂಖೆಡೆ ಸ್ಟೇಡಿಯಂನಲ್ಲಿ ರೋಹಿತ್ 2295 ರನ್ ಗಳಿಸಿದ್ದಾರೆ. ಆರ್​ಸಿಬಿ ಮಾಜಿ ಬ್ಯಾಟರ್​ ಎಬಿ ಡಿವಿಲಿಯರ್ಸ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 1960 ರನ್ ಗಳಿಸಿದ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

Continue Reading

ಪ್ರಮುಖ ಸುದ್ದಿ

Virat kohli : ಚೆನ್ನೈ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್​ ಕೊಹ್ಲಿ

Virat kohli : ಕೊಹ್ಲಿ ಐಪಿಎಲ್​ನಲ್ಲಿ ಒಂದೇ ತಾಣದಲ್ಲಿ 3000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐಪಿಎಲ್​ನಲ್ಲಿ ಇದುವರೆಗೆ ಯಾವುದೇ ಆಟಗಾರ ಒಂದು ಸ್ಟೇಡಿಯಮ್​​ನಲ್ಲಿ 2500 ರನ್​ಗಳ ಗಡಿಯನ್ನು ಮುಟ್ಟಲು ಸಾಧ್ಯವಾಗಿಲ್ಲ. ರೋಹಿತ್ ಶರ್ಮಾ 2295 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

VISTARANEWS.COM


on

Virat kohli
Koo

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 18) ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ (IPL 2024) ವಿರಾಟ್ ಕೊಹ್ಲಿ(virat Kohli) ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್​ ಟೂರ್ನಿಯಲ್ಲಿ 3000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ವಿರಾಟ್ ಕೊಹ್ಲಿ 12 ರನ್ ಗಳಿಸಿದ ನಂತರ ಮೈದಾನದಲ್ಲಿ 3000 ರನ್ ಪೂರೈಸಿದರು, ತುಷಾರ್ ದೇಶಪಾಂಡೆ ಅವರ ಬೌಲಿಂಗ್ಗೆ ಸಿಕ್ಸರ್ ಗೆ ಹೊಡೆಯುವ ಮೂಲಕ ಶೈಲಿಯಲ್ಲಿ ದೊಡ್ಡ ಮೈಲಿಗಲ್ಲನ್ನು ಸಾಧಿಸಿದರು.

ಇದರೊಂದಿಗೆ ಕೊಹ್ಲಿ ಐಪಿಎಲ್​ನಲ್ಲಿ ಒಂದೇ ತಾಣದಲ್ಲಿ 3000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐಪಿಎಲ್​ನಲ್ಲಿ ಇದುವರೆಗೆ ಯಾವುದೇ ಆಟಗಾರ ಒಂದು ಸ್ಟೇಡಿಯಮ್​​ನಲ್ಲಿ 2500 ರನ್​ಗಳ ಗಡಿಯನ್ನು ಮುಟ್ಟಲು ಸಾಧ್ಯವಾಗಿಲ್ಲ. ರೋಹಿತ್ ಶರ್ಮಾ 2295 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಹೊರತುಪಡಿಸಿ, ಐಪಿಎಲ್​ನಲ್ಲಿ 2000 ರನ್ ಗಳಿಸಿದ ಏಕೈಕ ಬ್ಯಾಟ್ಸ್ಮನ್ ರೋಹಿತ್. ವಾಂಖೆಡೆ ಸ್ಟೇಡಿಯಂನಲ್ಲಿ ರೋಹಿತ್ 2295 ರನ್ ಗಳಿಸಿದ್ದಾರೆ. ಆರ್​ಸಿಬಿ ಮಾಜಿ ಬ್ಯಾಟರ್​ ಎಬಿ ಡಿವಿಲಿಯರ್ಸ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 1960 ರನ್ ಗಳಿಸಿದ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಐಪಿಎಲ್ನಲ್ಲಿ ಒಂದು ಸ್ಥಳದಲ್ಲಿ ಅತಿ ಹೆಚ್ಚು ರನ್

  • 3005* ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿ ಕೊಹ್ಲಿ
  • 2295 ರೋಹಿತ್ ಶರ್ಮಾ (ವಾಂಖೆಡೆ ಸ್ಟೇಡಿಯಂ)
  • 1960: ಎಬಿ ಡಿವಿಲಿಯರ್ಸ್ (ಎಂ ಚಿನ್ನಸ್ವಾಮಿ ಕ್ರೀಡಾಂಗಣ)

ಒಂದೇ ತಂಡದಲ್ಲಿ ಆಡುತ್ತಿರುವ ಕೊಹ್ಲಿ

ಟೂರ್ನಿಯ ಮೊದಲ ಋತುವಿನಿಂದಲೂ ಕೊಹ್ಲಿ ಒಂದೇ ತಂಡದ ಪರ ಆಡುತ್ತಿದ್ದಾರೆ. ಐಪಿಎಲ್​ನಲ್ಲಿ ಯಾವುದೇ ಆಟಗಾರ ಒಂದೇ ತಂಡಕ್ಕಾಗಿ ಇಷ್ಟು ದೀರ್ಘಕಾಲ ಆಡಿಲ್ಲ. ಎಂಎಸ್ ಧೋನಿ 2008 ರಿಂದ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿದ್ದಾರೆ ಆದರೆ ಚೆನ್ನೈ ಮೂಲದ ತಂಡವನ್ನು ಅಮಾನತುಗೊಳಿಸಿದಾಗ ಎರಡು ವರ್ಷಗಳ ಕಾಲ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಪರ ಆಡಬೇಕಾಯಿತು.

ಇದನ್ನೂ ಓದಿ: Hyderabadi Biryani : ಎಸ್​ಆರ್​ಎಚ್​ ಅಭಿಮಾನಿಗಳೊಂದಿಗೆ ಹೈದ್ರಾಬಾದಿ ಬಿರಿಯಾನಿ ಸವಿದ ಹೇಡನ್ ಪುತ್ರಿ ಗ್ರೇಸ್​, ಇಲ್ಲಿದೆ ವಿಡಿಯೊ

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಕೊಹ್ಲಿ ಅದ್ಭುತ ಫಾರ್ಮ್ನಲ್ಲಿದ್ದಾರೆ. ಅವರು ಸ್ಪರ್ಧೆಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರು. ಈ ಪಂದ್ಯಕ್ಕೂ ಮುನ್ನ ಆಡಿರುವ 13 ಪಂದ್ಯಗಳಲ್ಲಿ ಒಂದು ಶತಕ ಹಾಗೂ 5 ಅರ್ಧಶತಕಗಳ ನೆರವಿನಿಂದ 661 ರನ್ ಗಳಿಸಿದ್ದಾರೆ. ಕೊಹ್ಲಿ ಅದ್ಭುತ ಫಾರ್ಮ್​ನಲ್ಲಿದ್ದು ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ತಮ್ಮ ಮಾಜಿ ನಾಯಕ ದೊಡ್ಡ ಮೊತ್ತಕ್ಕೆ ಮಾರ್ಗದರ್ಶನ ನೀಡುತ್ತಾರೆ ಎಂದು ಆರ್ಸಿಬಿ ಆಶಿಸುತ್ತಿದೆ.

Continue Reading

ಕ್ರೀಡೆ

RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

RCB vs CSK: ಒಂದೊಮ್ಮೆ ಚೆನ್ನೈ 201 ರನ್​ ಬಾರಿಸುತ್ತಿದ್ದರೂ ಆರ್​ಸಿಬಿ ಪ್ಲೇ ಆಫ್​ನಿಂದ ಹೊರ ಬೀಳುತ್ತಿತ್ತು. ಆದರೆ ಈ ಮೊತ್ತವನ್ನು ಬಾರಿಸಲು ಅವಕಾಶ ಕೊಡದೆ ಪ್ಲೇ ಆಫ್​ಗೆ ಲಗ್ಗೆಯಿಟ್ಟಿತು.

VISTARANEWS.COM


on

RCB vs CSK
Koo

ಬೆಂಗಳೂರು: ಈ ಬಾರಿ ಹೊಸ ಅಧ್ಯಾಯ ಎಂದು ಹೇಳಿಕೊಂಡು ಆರಂಭಿಕ ಹಂತದಲ್ಲಿ ಸತತ ಸೋಲಿಗೆ ಸಿಲುಕಿ ಇನ್ನೇನು ಟೂರ್ನಿಯಿಯಿಂದ ಹೊರಬೀಳಬೇಕು ಎನ್ನುವಷ್ಟರಲ್ಲಿ ಪುಟಿದೆದ್ದ ಆರ್​ಸಿಬಿ(RCB vs CSK), ಇದೀಗ ಯಾರೂ ಊಹಿಸಿದ, ಪವಾಡ ಸಂಭವಿಸಿದ ರೀತಿಯಲ್ಲಿ 4ನೇ ತಂಡವಾಗಿ ಪ್ಲೇ ಆಫ್​ಗೆ ಅಧಿಕೃತ ಎಂಟ್ರಿ ಕೊಟಿದೆ. ಪ್ಲೇ ಆಫ್​ ಪ್ರವೇಶಕ್ಕೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ 27 ರನ್​ ಗಳ ಗೆಲುವು ಸಾಧಿಸಿ ಈ ಅಭೂತಪೂರ್ವ ಸಾಧನೆ ಮಾಡಿದೆ. ಒಂದೊಮ್ಮೆ ಚೆನ್ನೈ 201 ರನ್​ ಬಾರಿಸುತ್ತಿದ್ದರೂ ಆರ್​ಸಿಬಿ ಪ್ಲೇ ಆಫ್​ನಿಂದ ಹೊರ ಬೀಳುತ್ತಿತ್ತು.

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು.

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಚೆನ್ನೈಗೆ ಆಲ್​ರೌಂಡರ್​ ಗ್ಲೆನ್​ ಮ್ಯಾಕ್ಸ್​ವೆಲ್​ ಮೊದಲ ಎಸೆತದಲ್ಲೇ ಆಘಾತವಿಕ್ಕಿದರು. ನಾಯಕ ಋತುರಾಜ್​ ಗಾಯಕ್ವಾಡ್​​ ಅವರನ್ನು ಶೂನ್ಯಕ್ಕೆ ಔಟ್​ ಮಾಡಿದರು. ಈ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಚೆನ್ನೈ ಡೇಂಜಸರ್​ ಬ್ಯಾಟರ್​ ಡೇರಿಯಲ್​ ಮಿಚೆಲ್(4)​ ಅವರ ವಿಕೆಟ್​ ಕೂಡ ಕಳೆದುಕೊಂಡಿತು. ಆರ್​ಸಿಬಿ ಪಾಳಯದಲ್ಲಿ ಎಲ್ಲಿಲ್ಲದ ಸಂಭ್ರಮ ಮನೆ ಮಾಡಿತು. ಆದರೆ ಈ ಸಂಭ್ರಮ ಹೆಚ್ಚು ಹೊತ್ತು ಸಾಗಲಿಲ್ಲ. ಮೂರನೇ ವಿಕೆಟ್​ಗೆ ರಹಾನೆ ಮತ್ತು ರಚಿನ್ ರವೀಂದ್ರ​ ಸೇರಿಕೊಂಡು ಉತ್ತಮ ಜತೆಯಾಟವೊಂದನ್ನು ಸಂಘಟಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಉಭಯ ಆಟಗಾರರ ಈ ಬ್ಯಾಟಿಂಗ್​ನಿಂದ ತಂಡಕ್ಕೆ 10 ಸರಾಸರಿಯಲ್ಲಿ ರನ್​ ಹರಿದುಬಂತು.

ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯನ್ನು ಫರ್ಗುಸನ್​ ಕೊನೆಗೂ ಬೇರ್ಪಡಿಸಿದರು. 33 ರನ್​ ಗಳಿಸಿದ ವೇಳೆ ರಹಾನೆ ವಿಕೆಟ್​ ಕಳೆದುಕೊಂಡರು. ರಹಾನೆ ಮತ್ತು ರಚಿನ್​ ಸೇರಿಕೊಂಡು ಮೂರನೇ ವಿಕೆಟ್​ಗೆ 66 ರನ್​ ಒಟ್ಟುಗೂಡಿಸಿದರು. ಕರ್ನಾಟಕ ಮೂಲದವರೇ ಆದ ನ್ಯೂಜಿಲ್ಯಾಂಡ್​ ಆಟಗಾರ ರಚಿನ್​ ರವೀಂದ್ರ ಅರ್ಧಶತಕ ಬಾರಿಸುವ ಮೂಲಕ ಕನ್ನಡಿಗರಿಗೇ ಕಂಟಕವಾಗುವ ಸೂಚನೆ ನೀಡಿದರು. ಆದರೆ ಇವರ ಬ್ಯಾಟಿಂಗ್​ ಅಬ್ಬರಕ್ಕೆ ಸ್ವಪ್ನಿಲ್ ಸಿಂಗ್​ ಬ್ರೇಕ್​ ಹಾಕಿದರು. ಮ್ಯಾಕ್ಸ್​ವೆಲ್​ ಓವರ್​ನಲ್ಲಿ ಜೀವದಾನ ಪಡೆದರೂ ಕೂಡ ಇದೇ ಓವರ್​ನಲ್ಲಿ ಇಲ್ಲದ ರನ್​ ಕದಿಯಲು ಹೋಗಿ ರನೌಟ್​ ಬಲೆಗೆ ಬಿದ್ದರು. ರಚಿನ್​ 37 ಎಸೆತಗಳಿಂದ 61 ರನ್(5 ಬೌಂಡರಿ, 3 ಸಿಕ್ಸರ್​) ಬಾರಿಸಿದರು. ಈ ವಿಕೆಟ್​ ಪತನದ ಬಳಿಕ ಶಿವಂ ದುಬೆ(7) ವಿಕೆಟ್​ ಕೂಡ ಬಿತ್ತು.

ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ ಮತ್ತು ಧೋನಿ ಸೇರಿಕೊಂಡು 201 ರನ್​ ಬಾರಿಸಲು ಶಕ್ತಿ ಮೀರಿ ಪ್ರಯತ್ನಪಟ್ಟರೂ ಕೂಡ ಇದು ಸಾಧ್ಯವಾಗಲಿಲ್ಲ. ಧೋನಿ ಕ್ರೀಸ್​ನಲ್ಲಿ ಇರುತ್ತಿದ್ದರೆ ಚೆನ್ನೈಗೆ ಗೆಲುವು ಖಚಿತವಾಗಿರುತ್ತಿತ್ತು. 6 ಎಸೆತಗಳಲ್ಲಿ 17 ರನ್​ ಬೇಕಿದ್ದಾಗ ಧೋನಿ ಯಶ್​ ದಯಾಳ್​ ಅವರ ಮೊದಲ ಎಸೆತವನ್ನೇ ಸ್ಟೇಡಿಯಂನಿಂದ ಹೊರಗೆಡೆ ಬಾರಿಸಿ 6 ರನ್​ ಕಲೆಹಾಕಿದರು. ಈ ಸಿಕ್ಸರ್​ 110 ಮೀಟರ್​ ದೂರಕ್ಕೆ ಸಿಡಿಯಿತು. ಆದರೆ ಮುಂದಿನ ಎಸೆತದಲ್ಲಿಯೂ ಧೋನಿ ಸಿಕ್ಸರ್​ ಬಾರಿಸುವ ಪ್ರಯತ್ನದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಇಲ್ಲಿಗೆ ಚೆನ್ನೈ ಸೋಲು ಕೂಡ ಖಚಿತಗೊಂಡಿತು. ಅಂತಿಮ 2 ಎಸೆತದಲ್ಲಿ 10 ರನ್​ ಗಳಿಸುವ ಯತ್ನದಲ್ಲಿ ಜಡೇಜಾ ವಿಫಲರಾದರು. ಧೋನಿ 13 ಎಸೆತಗಳಿಂದ 25 ರನ್​ ಚಚ್ಚಿದರು.

18ರ ಅದೃಷ್ಟ ಗೆದ್ದ ಆರ್​ಸಿಬಿ


ವಿಶೇಷವೆಂದರೆ ಆರ್​ಸಿಬಿಗೆ ಮೇ 18 ಎನ್ನುವುದು ಬಹಳ ಅದೃಷ್ಟದ ದಿನವಾಗಿತ್ತು. ಹೌದು, ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ ಆರ್​ಸಿಬಿ ಈ ದಿನದಂದು ಆಡಿದ ಎಲ್ಲ ಪಂದ್ಯಗಳನ್ನು ಗೆದ್ದಿತ್ತು. ಹೀಗಾಗಿ ಇಂದು ಕೂಡ ಆರ್​ಸಿಬಿ ಗೆಲುವು ಸಾಧಿಸಬಹುದು ಎನ್ನುವುದು ಅಭಿಮಾನಿಗಳ ಬಲವಾದ ನಂಬಿಕೆಯಾಗಿತ್ತು. ಅದರಂತೆ ಆರ್​ಸಿಬಿ ಗೆಲುವು ಸಾಧಿಸಿ ಅಭಿಮಾನಿಗಳ ನಂಬಿಕೆಯನ್ನು ಉಳಿಸಿಕೊಂಡಿದೆ. ಮೇ 18ರಂದು ಆರ್​ಸಿಬಿ ವಿರುದ್ಧ ಚೆನ್ನೈ 3ನೇ ಸೋಲಿಗೆ ತುತ್ತಾಯಿತು.

ಕೊಹ್ಲಿ-ಡುಪ್ಲೆಸಿಸ್​ ಉತ್ತಮ ಜತೆಯಾಟ


ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ಮೊದಲ ಓವರ್​ನಲ್ಲಿ ಕೇವಲ 2 ರನ್​ ಮಾತ್ರ ಗಳಿಸಿತು. ಆ ಬಳಿಕದ 2 ಓವರ್​ನಲ್ಲಿ ಸಿಡಿದು ನಿಂತ ಕೊಹ್ಲಿ ಮತ್ತು ಡುಪ್ಲೆಸಿಸ್​ 29 ರನ್​ ಬಾಚಿದರು. 3 ಓವರ್​ಗೆ 31 ರನ್​ ಹರಿದು ಬಂತು. ಇದೇ ವೇಳೆ ಮಳೆ ಕೂಡ ಸುರಿಯಿತು. ಕೆಲ ಕಾಲ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತು. ಮಳೆ ನಿಂತ ಮೇಲೆ ಪಿಚ್ ವರ್ತನೆ ಕೊಂಚ ಬದಲಾಯಿತು. ಸ್ಪಿನ್ನರ್​ಗಳು ನಿಯಂತ್ರ ಸಾಧಿಸಿದರು. ಇದರಿಂದ ಆರ್​ಸಿಬಿಯ ರನ್​ ಗಳಿಕೆಯೂ ಕೆಲ ಕಾಲ ನಿಧಾನಗತಿಯಿಂದ ಸಾಗಿತು.

ಪಿಚ್​ ವರ್ತನೆಯನ್ನು ಅರಿತುಕೊಂಡ ಬಳಿಕ ಕೊಹ್ಲಿ ಮತ್ತು ಡು ಪ್ಲೆಸಿಸ್​ ಮತ್ತೆ ಬಿರುಸಿನ ಬ್ಯಾಟಿಂಗ್​ಗೆ ಮುಂದಾದರು. ಅನುಭವಿ ರವೀಂದ್ರ ಜಡೇಜಾಗೆ ಡು ಪ್ಲೆಸಿಸ್​ ಸತತವಾಗಿ 2 ಸಿಕ್ಸರ್​ ಚಚ್ಚಿದರು. ಉತ್ತಮವಾಗಿ ಆಡುತ್ತಿದ್ದ ವಿರಾಟ್​ ಕೊಹ್ಲಿ ಬೌಂಡರಿ ಲೈನ್​ನಲ್ಲಿ ಡ್ಯಾರಿಲ್​ ಮಿಚೆಲ್ ಹಿಡಿದ ಅಸಾಮಾನ್ಯ ಕ್ಯಾಚ್​ಗೆ ಬಲಿಯಾದರು. 47 ರನ್​ ಗಳಿಸಿ ಕೇವಲ 3 ರನ್​ ಅಂತರದಲ್ಲಿ ಅರ್ಧಶತಕ ವಂಚಿತರಾದರು. ಅವರ ಈ ಸೊಗಸಾದ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್​ ದಾಖಲಾಯಿತು. ಕೊಹ್ಲಿ 4 ಸಿಕ್ಸರ್​ ಬಾರಿಸುವ ಮೂಲಕ ಈ ಆವೃತ್ತಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನ ಪಡೆದರು.​ ಕೊಹ್ಲಿ ಒಟ್ಟು 36 ಸಿಕ್ಸರ್​ ಬಾರಿಸಿದ್ದಾರೆ. ಲಕ್ನೋ ತಂಡ ನಿಕೋಲಸ್​​ ಪೂರನ್​ ಕೂಡ 36 ಸಿಕ್ಸರ್​ ಬಾರಿಸಿದ್ದಾರೆ. ಇದು ಮಾತ್ರವಲ್ಲದೆ ಕೊಹ್ಲಿ ಈ ಬಾರಿ 700 ರನ್​ಗಳ ಗಡಿ ದಾಟಿದರು.

ಇದನ್ನೂ ಓದಿ IPL 2024 : ಹಾರ್ದಿಕ್ ಪಾಂಡ್ಯಗೆ ನಿಷೇಧ ಹೇರಿದ ಬಿಸಿಸಿಐ; ಮುಂದಿನ ಪಂದ್ಯದಲ್ಲಿ ಆಡದಂತೆ ತಾಕೀತು

ಕೊಹ್ಲಿ ವಿಕೆಟ್​ ಪತನದ ಬಳಿಕ ಆಡಲಿಳಿದ ರಜತ್​ ಪಾಟೀದಾರ್​ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ಗೆ ಒತ್ತ ನೀಡಿದರು. ಆದರೆ ಸ್ಟ್ರೇಟ್​ ಡ್ರೈ ಮಾಡುವ ಯತ್ನದಲ್ಲಿ ನಾನ್​ ಸ್ಟ್ರೈಕರ್​ನಲ್ಲಿದ್ದ ಡು ಪ್ಲೆಸಿಸ್​ ಅವರನ್ನು ರನೌಟ್​ ಆಗುವಂತೆ ಮಾಡಿದರು. ಪಾಟಿದಾರ್​ ಹೊಡೆದ ಚೆಂಡು ಸ್ಯಾಂಟ್ನರ್​ ಅವರ ಕೈಗೆ ತಗುಲಿ ನೇರವಾಗಿ ವಿಕೆಟ್​ಗೆ ತಗುಲಿತು. ಕ್ರೀಸ್​ ಬಿಟ್ಟು ನಿಂತಿದ್ದ ಡು ಪ್ಲೆಸಿಸ್​ ರನೌಟ್​ ಸಂಕಟಕ್ಕೆ ಸಿಲುಕಿದರು. ಡು ಪ್ಲೆಸಿಸ್​ ತಲಾ ಮೂರು ಸಿಕ್ಸರ್​ ಮತ್ತು ಬೌಂಡರಿ ನೆರವಿನಿಂದ 54 ರನ್​ ಬಾರಿಸಿದರು.

ಜೀವದಾನ ಪಡೆದ ಗ್ರೀನ್​


ಮೂರನೇ ವಿಕೆಟ್​ಗೆ ಜತೆಯಾದ ಕ್ಯಾಮರೂನ್​ ಗ್ರೀನ್​ ಮತ್ತು ಪಾಟಿದಾರ್​ ಕೂಡ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದರು. ಇದೇ ವೇಳೆ ಗ್ರೀನ್​ ಅವರು ನಾಯಕ ಋತುರಾಜ್​ ಗಾಯಕ್ವಾಡ್​ ಅವರಿಂದ ಕ್ಯಾಚ್​ ಕೈ ಚೆಲ್ಲಿ ಜೀವದಾನವೊಂದನ್ನು ಪಡೆದರು. ಈ ವೇಳೆ ಗ್ರೀನ್​ 18 ರನ್​ ಗಳಿಸಿದ್ದರು. ಸಿಕ್ಕ ಈ ಅವಕಾಶವನ್ನು ಎರಡೂ ಕೈಗಳಿಂದ ಬಾಚಿದ ಗ್ರೀನ್​ ಅಜೇಯ 38 ರನ್​ ಬಾರಿಸಿ ಚೆನ್ನೈಗೆ ಕಂಟಕವಾದರು. ಪಾಟಿದಾರ್​ ಮತ್ತು ಗ್ರೀನ್​ 3ನೇ ವಿಕೆಟ್​ಗೆ ಅತ್ಯಮೂಲ್ಯ 71 ರನ್​ಗಳ ಜತೆಯಾಟ ನಿಭಾಯಿಸಿದರು. ಪಾಟಿದಾರ್​ ಕೂಡ ಕೊಹ್ಲಿಯಂತೆ ಮಿಚೆಲ್​ ಕ್ಯಾಚ್​ಗೆ ವಿಕೆಟ್​ ಕಳೆದುಕೊಂಡರು. 23 ಎಸೆತ ಎದುರಿಸಿ 41 ರನ್​ ಬಾರಿಸಿದರು. ಈ ವೇಳೆ 4 ಸಿಕ್ಸರ್​ ಮತ್ತು 3 ಬೌಂಡರಿ ಸಿಡಿಯಿತು. ಬಳಿಕ ಬಂದ ದಿನೇಶ್​ ಕಾರ್ತಿಕ್​(14) ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​(16) ರನ್​ ಬಾರಿಸಿ ವಿಕೆಟ್​ ಕಳೆದುಕೊಂಡರು. ಚೆನ್ನೈ ಪರ ಶಾರ್ದೂಲ್​ ಠಾಕೂರ್​ 2 ವಿಕೆಟ್​ ಪಡೆದರೂ ಕೂಡ 61 ರನ್​ ಬಿಟ್ಟು ಕೊಟ್ಟು ದುಬಾರಿಯಾದರು. ಅನುಭವಿ ರವೀಂದ್ರ ಜಡೇಜಾ ವಿಕೆಟ್​ ಲೆಸ್​ ಎನಿಸಿಕೊಂಡರು.

Continue Reading
Advertisement
virat kohli
ಕ್ರಿಕೆಟ್2 mins ago

Virat kohli : ಕೇಕೆ ಹಾಕುತ್ತಿದ್ದ ಸಿಎಸ್​ಕೆ ಅಭಿಮಾನಿಗಳ ಬಾಯ್ಮುಚ್ಚಿಸಿದ ಕೊಹ್ಲಿ; ಇಲ್ಲಿದೆ ವಿಡಿಯೊ

IPL 2024
ಕ್ರಿಕೆಟ್19 mins ago

IPL 2024 : ಚೆನ್ನೈ ಮಣಿಸಿ ಪ್ಲೇಆಫ್​ಗೇರುವ ಮುನ್ನವೇ ಸಿಕ್ಸರ್​​ಗಳ ವಿಶೇಷ ದಾಖಲೆ ಬರೆದ ಆರ್​ಸಿಬಿ

Karnataka weather Forecast
ಮಳೆ20 mins ago

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

Virat kohli
ಪ್ರಮುಖ ಸುದ್ದಿ40 mins ago

Virat kohli : ಚೆನ್ನೈ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್​ ಕೊಹ್ಲಿ

Health Tips in Kannada
ಆರೋಗ್ಯ43 mins ago

Health Tips in Kannada: ಕಾಮಕಸ್ತೂರಿ ಬೀಜದ ಪಾನಕ ಕುಡಿದರೆ ಆರೋಗ್ಯ ವೃದ್ಧಿ ಪಕ್ಕಾ!

Dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ರಹಸ್ಯ ಕಾರ್ಯಗಳಿಂದಲೂ ಸಿಗುತ್ತೆ ಯಶಸ್ಸು

Karnataka Police
ಸಂಪಾದಕೀಯ6 hours ago

ವಿಸ್ತಾರ ಸಂಪಾದಕೀಯ: ರಾಜ್ಯದಲ್ಲಿ ಕೊಲೆಗಳ‌ ಸರಮಾಲೆ; ಪೊಲೀಸ್ ಇಲಾಖೆ ಯಾಕಿಷ್ಟು‌ ದುರ್ಬಲವಾಗಿದೆ?

Jammu Kashmir
ದೇಶ6 hours ago

Jammu Kashmir: ಕಾಶ್ಮೀರದ 2 ಕಡೆ ಉಗ್ರರ ದಾಳಿ; ಮಾಜಿ ಸರ್ಪಂಚ್‌ ಬಲಿ, ರಾಜಸ್ಥಾನದ ದಂಪತಿಗೆ ಗಾಯ

RCB vs CSK
ಕ್ರೀಡೆ7 hours ago

RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

Anjali Murder Case
ಕರ್ನಾಟಕ7 hours ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಹು-ಧಾ ಐಪಿಎಸ್ ಅಧಿಕಾರಿಯ ತಲೆದಂಡ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌