Rishabh Pant: ಪಂತ್​ 'ನೋ ಲುಕ್​ ಸಿಕ್ಸ್' ಹೊಡೆತಕ್ಕೆ ಮನಸೋತ ಶಾರುಖ್ ಖಾನ್​; ವಿಡಿಯೊ ವೈರಲ್​ - Vistara News

ಕ್ರೀಡೆ

Rishabh Pant: ಪಂತ್​ ‘ನೋ ಲುಕ್​ ಸಿಕ್ಸ್’ ಹೊಡೆತಕ್ಕೆ ಮನಸೋತ ಶಾರುಖ್ ಖಾನ್​; ವಿಡಿಯೊ ವೈರಲ್​

Rishabh Pant: ಆಕ್ರಮಣಕಾರಿ ಶೈಲಿಯಲ್ಲೇ ಬ್ಯಾಟಿಂಗ್​ ನಡೆಸಿದ ಪಂತ್​ ಕೇವಲ 23 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದರು. ಅಂತಿಮವಾಗಿ 5 ಸಿಕ್ಸರ್​ ಮತ್ತು 4 ಬೌಂಡರಿ ನೆರವಿನಿಂ ದ 55 ರನ್​ ಬಾರಿಸಿದರು.

VISTARANEWS.COM


on

Rishabh Pant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶಾಖಪಟ್ಟಣಂ: ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡ ನೀಡಿದ ಬೃಹತ್​ ಮೊತ್ತದ ಗುರಿಯನ್ನು ಬೆನ್ನಟ್ಟುವ ವೇಳೆ ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ತಂಡದ ನಾಯಕ ರಿಷಭ್​ ಪಂತ್​(Rishabh Pant) ಅವರು ಬಾರಿಸಿದ ‘ನೋ ಲುಕ್​ ಸಿಕ್ಸ್'(Pant’s no-look shot) ಹೊಡೆತಕ್ಕೆ ಕೆಕೆಆರ್ ತಂಡದ ಸಹ ಮಾಲೀಕ, ಬಾಲಿವುಡ್​ ನಟ ಶಾರೂಖ್ ಖಾನ್‌(Shah Rukh Khan) ಅವರು ಪ್ರೇಕ್ಷಕರ ಗ್ಯಾಲರಿಂದ ಎದ್ದು ನಿಂತು ತಪ್ಪಾಳೆ ತಟ್ಟಿ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video)​ ಆಗಿದ್ದು ​ಶಾರೂಖ್ ಅವರ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

272 ರನ್ನ್​ಗಳ ಬೇಹತ್​ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿಗೆ ಆಸರೆಯಾದದ್ದು ನಾಯಕ ರಿಷಭ್​ ಪಂತ್. ಮಧ್ಯಮ ಕ್ರಮಾಂಕದಲ್ಲಿ ಆಡಲಿಳಿದ ಅವರು ಕೆಲ ಕಾಲ ಹೊಡಿ-ಬಡಿ ಆಟವಾಡಿ ಅರ್ಧಶತಕ ಬಾರಿಸಿ ತಂಡ ಗೆಲುವಿವಾಗಿ ಶಕ್ತಿ ಮೀರಿ ಪ್ರಯತ್ನಿಸಿದರು. ಆದರೆ ಉಳಿದ ಆಟಗಾರರಿಂದ ಇದೇ ಪ್ರದರ್ಶನ ಕಂಡು ಬಾರದೆ ತಂಡ ಸೋಲು ಕಂಡಿತು. ಕಾರು ಅಪಘಾತದಿಂದ 14 ತಿಂಗಳು ಕ್ರಿಕೆಟ್​ನಿಂದ ದೂರ ಉಳಿದಿದ್ದರೂ ಕೂಡ ಪಂತ್​ ಅವರು ಕಳೆಯ ಶೈಲಿಯ ಬ್ಯಾಟಿಂಗ್​ ಮಾತ್ರ ಹಾಗೇಯೇ ಉಳಿದುಕೊಂಡಿದೆ. ಇದಕ್ಕೆ ಕೆಕೆಆರ್​ ವಿರುದ್ಧದ ಪಂದ್ಯವೇ ಉತ್ತಮ ನಿದರ್ಶನ.

ಆಕ್ರಮಣಕಾರಿ ಶೈಲಿಯಲ್ಲೇ ಬ್ಯಾಟಿಂಗ್​ ನಡೆಸಿದ ಪಂತ್​ ಕೇವಲ 23 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದರು. ಅದರಲ್ಲೂ ವೆಂಕಟೇಶ್​ ಅಯ್ಯರ್​ ಅವರಿಗೆ ಒಂದೇ ಓವರ್​ನಲ್ಲಿ ಎಲ್ಲ ಎಸೆತಗಳನ್ನು ಸಿಕ್ಸರ್​ ಮತ್ತು ಬೌಂಡರಿಗೆ ಬಡಿದಟ್ಟಿ 28 ರನ್​ ಬಾರಿಸಿದರು. ಇದರಲ್ಲೊಂದು ಸಿಕ್ಸರ್​ ‘ನೋ ಲುಕ್​ ಸಿಕ್ಸ್'(ಚೆಂಡನ್ನು ನೋಡದೆಯೇ ಸಿಕ್ಸರ್​ ಬಾರಿಸುವುದು) ಆಗಿತ್ತು. ಈ ಸಿಕ್ಸರ್​ ಕಂಡು ಬಾಲಿವುಡ್​ ನಟ ಶಾರೂಖ್ ಫಿದಾ ಆದರು.

ಇದನ್ನೂ ಓದಿ IPL 2024: ಇಶಾಂತ್​ ಶರ್ಮ ಡೆಡ್ಲಿ ಯಾರ್ಕರ್​ಗೆ ರಸೆಲ್ ಕ್ಲೀನ್​ ಬೌಲ್ಡ್​​; ವಿಡಿಯೊ ವೈರಲ್​

ಪಂದ್ಯ ಮುಕ್ತಾಯದ ಬಳಿಕವೂ ಶಾರೂಖ್ ಅವರು ರಿಷಭ್​ ಪಂತ್​ ಅವರನ್ನು ತಬ್ಬಿಕೊಂಡು ಮೆಚ್ಚುಗೆ ಸೂಚಿಸಿದರು. ಜತೆಗೆ ಉಭಯ ತಂಡದ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಕೆಲ ಆಟಗಾರರು ತಮ್ಮ ನೆಚ್ಚಿನ ನಟನೊಂದಿಗೆ ಫೋಟೊ ಮತ್ತು ಆಟೋಗ್ರಾಫ್​ ತೆಗೆದುಕೊಂಡರು.

ಕೆಕೆಆರ್​ಗೆ ಹ್ಯಾಟ್ರಿಕ್​ ಗೆಲುವು
ಇಲ್ಲಿನ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಕೆಕೆಆರ್​ ಫುಲ್​ ಜೋಶ್​ನಲ್ಲಿ ಬ್ಯಾಟಿಂಗ್​ ನಡೆಸಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​​ಗೆ ಬರೋಬ್ಬರಿ 272 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಕಂಡು ಕಂಗಾಲಾದ ಡೆಲ್ಲಿ ಕ್ಯಾಪಿಟಲ್ಸ್​ 17.2 ಓವರ್​ಗಳಲ್ಲಿ 166 ರನ್​ ಬಾರಿಸಿ ಸರ್ವಪತನ ಕಂಡಿತು. ಕೋಲ್ಕತ್ತಾ ತಂಡ 106ರನ್​ ಗೆಲುವು ಸಾಧಿಸಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

IPL 2024 Points Table: ಹೈದರಾಬಾದ್​ ಗೆಲುವಿನಿಂದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ 1 ಸ್ಥಾನಗಳ ಕುಸಿತ ಕಂಡಿತು. ಇಂದು ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಮತ್ತು ಕೆಕೆಆರ್​ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ ಸೋತರೆ ಟೂರ್ನಿಯಿಂದ ಹೊರಬೀಳಲಿದೆ.

VISTARANEWS.COM


on

IPL 2024 Points Table
Koo

ಹೈದರಾಬಾದ್​: ಅತ್ಯಂತ ರೋಚಕವಾಗಿ ಸಾಗಿದ, ಕ್ರಿಕೆಟ್​ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸುವಂತೆ ಮಾಡಿದ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ರಾಯಲ್ಸ್​ ನಡುವಿನ ಪಂದ್ಯದಲ್ಲಿ ಕೊನೆಗೂ ಹೈದರಾಬಾದ್​ ರೋಚಕ 1 ರನ್​ ಅಂತರದ ಗೆಲುವು ಸಾಧಿಸಿ ಮೆರೆದಾಡಿತು. ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ(IPL 2024 Points Table) 4ನೇ ಸ್ಥಾನಕ್ಕೇರಿತು.

ಹೈದರಾಬಾದ್​ ಗೆಲುವಿನಿಂದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ 1 ಸ್ಥಾನಗಳ ಕುಸಿತ ಕಂಡಿತು. ಇಂದು ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಮತ್ತು ಕೆಕೆಆರ್​ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಕೆಕೆಆರ್​ ಗೆದ್ದರೆ 14 ಅಂಕದೊಂದಿಗೆ 2ನೇ ಸ್ಥಾನದಲ್ಲೇ ಮುಂದುವರಿಯಲಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​96312 (+1.096)
ಲಕ್ನೋ​​106412 (+0.094)
ಹೈದರಾಬಾದ್​106512 (+0.072)
ಚೆನ್ನೈ​105510 (+0.627)
ಡೆಲ್ಲಿ115610 (-0.442)
ಪಂಜಾಬ್​10488 (-0.062)
ಗುಜರಾತ್​10468 (-1.113)
ಮುಂಬೈ10376 (-0.272)
ಆರ್​ಸಿಬಿ10376 (-0.415)

ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

ಇದನ್ನೂ ಓದಿ IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

ಮೊದಲು ಬ್ಯಾಟಿಂಗ್​ ನಡೆಸಿದ ಎಸ್​ಆರ್​​ಎಚ್​ ತಂಡ ಅಭಿಶೇಕ್​ ಶರ್ಮಾ ಅವರನ್ನು 12 ರನ್​ಗೆ ಕಳೆದುಕೊಂಡಿತು. ಈ ವೇಳೆ ತಂಡದ ಮೊತ್ತ 25 ಆಗಿತ್ತು. ನಂತರ ಬಂದ ಅನ್ಮೋಲ್ ಪ್ರೀತ್ ಸಿಂಗ್​ 5 ರನ್​ಗೆ ಔಟಾಗಿ ನಿರಾಸೆ ಮೂಡಿಸಿದರು. ಆ ಬಳಿಕ ಜತೆಯಾದ ನಿತೀಶ್​ ಕುಮಾರ್ ರೆಡ್ಡಿ ಅರಂಭಿಕ ಬ್ಯಾಟರ್​ ಟ್ರಾವಿಸ್​ ಹೆಡ್​ ಜತೆ ಉತ್ತಮವಾಗಿ ಬ್ಯಾಟ್ ಬೀಸಿದರು. ಅವರಿಬ್ಬರೂ ನಾಲ್ಕನೇ ವಿಕೆಟ್​ಗೆ 96 ರನ್ ಜತೆಯಾಟ ನೀಡಿದರು. ಹೆಡ್​ 58 ರನ್ ಬಾರಿಸಿದರೆ ನಿತೀಶ್​ 76 ರನ್ ಬಾರಿಸಿ ಅಜೇಯವಾಗಿ ಉಳಿದರು. ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್​ 19 ಎಸೆತಕ್ಕೆ 42 ರನ್​ ಬಾರಿಸುವ ಮೂಲಕ ತಂಡದ ಮೊತ್ತವನ್ನು 200 ರ ಗಡಿ ದಾಟಿಸಲು ನೆರವಾದರು.

Continue Reading

ಪ್ರಮುಖ ಸುದ್ದಿ

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

IPL 2024: ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ಹೈದರಾಬಾದ್​​: ಕೊನೇ ಓವರ್​ನ ಕೊನೇ ಎಸೆತದ ತನಕವೂ ಕುತೂಹಲ ಮೂಡಿಸಿದ್ದ ರಾಜಸ್ಥಾನ್​ ರಾಯಲ್ಸ್​ ಹಾಗೂ ಸನ್​ ರೈಸರ್ಸ್​ ಹೈದರಾಬಾದ್​ ನಡುವಿನ ಪಂದ್ಯದಲ್ಲಿ ರೋಚಕ ಒಂದು ರನ್ ಗೆಲುವಿನ ಫಲಿತಾಂಶ ಮೂಡಿ ಬಂತು. ಇದರೊಂದಿಗೆ ಐಪಿಎಲ್​ 17ನೇ ಆವೃತ್ತಿಯಲ್ಲಿ (IPL 2024) ಸತತ ಎರಡು ಸೋಲುಗಳ ಮೂಲಕ ನಿರಾಸೆ ಎದುರಿಸಿದ್ದ ಹೈದರಾಬಾದ್ ತಂಡ ಗೆಲುವಿನ ಹಾದಿಗೆ ಮರಳಿತು. ಅತ್ತ ರಾಜಸ್ಥಾನ್​ ​ ತಂಡ ಎರಡನೇ ಸೋಲಿಗೆ ಒಳಗಾಯಿತು. ಕೊನೇ ಎಸೆತದಲ್ಲಿ ರಾಯಲ್ಸ್ ತಂಡದ ಗೆಲುವಿಗೆ ಎರಡು ರನ್​ ಬೇಕಾಗಿದ್ದವು. ಆದರೆ, ಭುವನೇಶ್ವರ್ ಕುಮಾರ್​ ರಾಯಲ್ಸ್​ ಬ್ಯಾಟರ್​ ಪೊವೆಲ್​ ರೊವ್ಮನ್​ ಪೊವೆಲ್​ ಅವರನ್ನು ಎಲ್​ಬಿಡಬ್ಲ್ಯು ಮಾಡಿ ತವರು ತಂಡಕ್ಕೆ ಗೆಲುವು ತಂದುಕೊಟ್ಟರು.

ಇಲ್ಲಿನ ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

ನಿತೀಶ್ ಅರ್ಧ ಶತಕ

ಬ್ಯಾಟಿಂಗ್ ಆರಂಭಿಸಿದ ಎಸ್​ಆರ್​​ಎಚ್​ ತಂಡ ಅಭಿಶೇಕ್​ ಶರ್ಮಾ ಅವರನ್ನು 12 ರನ್​ಗೆ ಕಳೆದುಕೊಂಡಿತು. ಈ ವೇಳೆ ತಂಡದ ಮೊತ್ತ 25 ಆಗಿತ್ತು. ನಂತರ ಬಂದ ಅನ್ಮೋಲ್ ಪ್ರೀತ್ ಸಿಂಗ್​ 5 ರನ್​ಗೆ ಔಟಾಗಿ ನಿರಾಸೆ ಮೂಡಿಸಿದರು. ಆ ಬಳಿಕ ಜತೆಯಾದ ನಿತೀಶ್​ ಕುಮಾರ್ ರೆಡ್ಡಿ ಅರಂಭಿಕ ಬ್ಯಾಟರ್​ ಟ್ರಾವಿಸ್​ ಹೆಡ್​ ಜತೆ ಉತ್ತಮವಾಗಿ ಬ್ಯಾಟ್ ಬೀಸಿದರು. ಅವರಿಬ್ಬರೂ ನಾಲ್ಕನೇ ವಿಕೆಟ್​ಗೆ 96 ರನ್ ಜತೆಯಾಟ ನೀಡಿದರು. ಹೆಡ್​ 58 ರನ್ ಬಾರಿಸಿದರೆ ನಿತೀಶ್​ 76 ರನ್ ಬಾರಿಸಿ ಅಜೇಯವಾಗಿ ಉಳಿದರು. ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್​ 19 ಎಸೆತಕ್ಕೆ 42 ರನ್​ ಬಾರಿಸುವ ಮೂಲಕ ತಂಡದ ಮೊತ್ತವನ್ನು 200 ರ ಗಡಿ ದಾಟಿಸಲು ನೆರವಾದರು.

ಇದನ್ನೂ ಓದಿ: M S Dhoni : ಧೋನಿಯನ್ನು ರನ್​ಔಟ್ ಮಾಡಿದ ಜಿತೇಶ್​ ಶರ್ಮಾ ನಿಂದಿಸಿದ ಅಭಿಮಾನಿಗಳು!

ದೊಡ್ಡ ಗುರಿ ಬೆನ್ನಟ್ಟಲು ಅರಂಭಿಸಿದ ಎಸ್​ಆರ್​​ಎಚ್​ 1 ರನ್​ಗೆ 2 ವಿಕೆಟ್ ಕಳೆದುಕೊಂಡಿತು. ಜೋಸ್ ಬಟ್ಲರ್​ ಹಾಗೂ ನಾಯಕ ಸಂಜು ಸ್ಯಾಮ್ಸನ್​ ಶೂನ್ಯಕ್ಕೆ ಔಟಾಗಿದ್ದರು. ಆದರೆ, ಆರಂಭಿಕ ಬ್ಯಾಟರ್​ ಜೈಸ್ವಾಲ್ 67 ರನ್ ಬಾರಿಸಿ ವಿಕೆಟ್​ ಬೀಳದಂತೆ ನೋಡಿಕೊಂಡರು. ರಿಯಾನ್ ಪರಾಗ್​ 77 ರನ್ ಬಾರಿಸಿ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದರು. ಆದರೆ, ಆ ಬಳಿಕ ಸತತವಾಗಿ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು. ಭುವನೇಶ್ವರ್ ಕುಮಾರ್​ 3 ವಿಕೆಟ್​ ಪಡೆದು ಮಿಂಚಿದರು.

Continue Reading

ಪ್ರಮುಖ ಸುದ್ದಿ

M S Dhoni : ಧೋನಿಯನ್ನು ರನ್​ಔಟ್ ಮಾಡಿದ ಜಿತೇಶ್​ ಶರ್ಮಾ ನಿಂದಿಸಿದ ಅಭಿಮಾನಿಗಳು!

M S Dhoni: ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ (ಮೇ 1) ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 7 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಋತುವಿನಲ್ಲಿ ಪಂಜಾಟ್​​ನ ನಾಲ್ಕನೇ ಗೆಲುವಿನ ವೇಳೆ ಜಿತೇಶ್ ಶರ್ಮಾಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಆದಾಗ್ಯೂ, ಸಿಎಸ್​ಕೆ ಬ್ಯಾಟಿಂಗ್ ಸಮಯದಲ್ಲಿ ಧೋನಿಯನ್ನು ರನ್ ಔಟ್ ಮಾಡಿದ್ದರು. ಇದು ಧೋನಿಯ ಅಭಿಮಾನಿಗಳಿಗೆ ಕೋಪ ತರಿಸಿತ್ತು.

VISTARANEWS.COM


on

M S Dhoni
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದ ನಂತರ ಪಂಜಾಬ್ ಕಿಂಗ್ಸ್ (PBKS) ವಿಕೆಟ್ ಕೀಪರ್ ಬ್ಯಾಟರ್​​ ಜಿತೇಶ್ ಶರ್ಮಾ ಸೋಶಿಯಲ್ ಮೀಡಿಯಾಗಳ ಮೂಲಕ ಬೈಗುಳಗಳನ್ನು ಕೇಳಬೇಕಾಯಿತು. ಅದಕ್ಕೆ ಕಾರಣ ಅವರು ಮಹೇಂದ್ರ ಸಿಂಗ್ ಧೋನಿಯನ್ನು (MS Dhoni) ರನ್​ಔಟ್ ಮಾಡಿರುವುದು. ಜತೇಶ್​ ಅವರ ಇನ್​ಸ್ಟಾಗ್ರಾಮ್​ ಖಾತೆ ಮೂಲಕ ಹಲವಾರು ನಿಂದನಾತ್ಮಕ ಕಾಮೆಂಟ್​ಗಳನ್ನು ಪೋಸ್ಟ್ ಮಾಡಿದ್ದಾರೆ.

ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ (ಮೇ 1) ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 7 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಋತುವಿನಲ್ಲಿ ಪಂಜಾಟ್​​ನ ನಾಲ್ಕನೇ ಗೆಲುವಿನ ವೇಳೆ ಜಿತೇಶ್ ಶರ್ಮಾಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಆದಾಗ್ಯೂ, ಸಿಎಸ್​ಕೆ ಬ್ಯಾಟಿಂಗ್ ಸಮಯದಲ್ಲಿ ಧೋನಿಯನ್ನು ರನ್ ಔಟ್ ಮಾಡಿದ್ದರು. ಇದು ಧೋನಿಯ ಅಭಿಮಾನಿಗಳಿಗೆ ಕೋಪ ತರಿಸಿತ್ತು.

ಜಿತೇಶ್ ಶರ್ಮಾಗೆ ಧೋನಿ ಅಭಿಮಾನಿಗಳಿಂದ ಟಾರ್ಗೆಟ್

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಎಂಎಸ್ ಧೋನಿ ತಮ್ಮ ವಿಕೆಟ್ ಕಳೆದುಕೊಳ್ಳದ ಗಮನಾರ್ಹ ಸಾಧನೆಯನ್ನು ಪಂಜಾಬ್ ವಿರುದ್ಧ ಕಳೆದುಕೊಂಡರು. ಚೆಂಡು ಥರ್ಡ್​ ಮ್ಯಾನ್​​ ಕಡೆಗೆ ಹೋದ ನಂತರ ಧೋನಿ ಅಪಾಯಕಾರಿ ಎರಡನೇ ರನ್ ಗಳಿಸಲು ಪ್ರಯತ್ನಿಸಿದರು. ಹರ್ಷಲ್ ಪಟೇಲ್ ಆರಂಭದಲ್ಲಿ ತಪ್ಪಾಗಿ ಫೀಲ್ಡಿಂಗ್ ಮಾಡಿದರು. ಆದರೆ ಬೇಗನೆ ಚೇತರಿಸಿಕೊಂಡರು ಮತ್ತು ಚೆಂಡನ್ನು ಬ್ಯಾಟ್ಸ್ ಮನ್ ನ ತುದಿಗೆ ಎಸೆದರು. ಚೆನ್ನೈ ವಿಕೆಟ್ ಕೀಪರ್ ಧೋನಿ ಕ್ರೀಸ್​ ತಲುಪುವ ಮೊದಲೇ ಜಿತೇಶ್​ ಬೇಲ್ಸ್ ಎಗರಿಸಿದರು. ಸಿಎಸ್​ಕೆ ಮಾಜಿ ನಾಯಕ 11 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿದಂತೆ 14 ರನ್ ಗಳಿಸಿ ಔಟಾದರು. ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವು 20 ಓವರ್ ಗಳಲ್ಲಿ 162 ರನ್ ಗಳಿಸಲು ಮಾತ್ರ ಯಶಸ್ವಿಯಾಯಿತು.

ಧೋನಿ ರನೌಟ್ ಅವರ ನಿಷ್ಠಾವಂತ ಅಭಿಮಾನಿಗಳಲ್ಲಿ ನಿರಾಶೆಯನ್ನು ಹುಟ್ಟುಹಾಕಿತು. ಕೆಲವರು ಹತಾಶೆಯನ್ನು ವ್ಯಕ್ತಪಡಿಸಿದರೆ, ಇತರರು ಜಿತೇಶ್ ಶರ್ಮಾ ಅವರ ಪಾತ್ರಕ್ಕಾಗಿ ಟ್ರೋಲ್ ಮಾಡಿದರು. ಪಂದ್ಯಾವಳಿಯಲ್ಲಿ ಮೊದಲ ಬಾರಿಗೆ ಧೋನಿಯನ್ನು ಔಟ್ ಮಾಡುವುದನ್ನು ನೋಡಿದ ಅಭಿಮಾನಿಗಳು ನಾನಾ ರೀತಿ ಪ್ರತಿಕ್ರಿಯಿಸಿದರು.

“ನೀವು ವಿಶ್ವಕಪ್​ಗೆ ಆಯ್ಕೆಯಾಗದಿರುವುದು ಒಳ್ಳೆಯದು, ನೀವು ತಲಾ ಅವರನ್ನು ರನ್ ಔಟ್ ಮಾಡಿದ್ದೀರಿ, ಒಂದು ರನ್ ಏನು ವ್ಯತ್ಯಾಸವನ್ನುಂಟು ಮಾಡುತ್ತದೆ?” ಎಂದು ಬಳಕೆದಾರರೊಬ್ಬರು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

“ಗೆಳೆಯ, ಜನರು ಅವನಿಗಾಗಿ ಪಂದ್ಯಗಳನ್ನು ನೋಡುತ್ತಾರೆ ಎಂದು ನೀವು ಅರ್ಥಮಾಡಿಕೊಳ್ಳಬೇಕು. ನಾವು ಎಷ್ಟು ಕೆಟ್ಟದಾಗಿ ಭಾವಿಸಬೇಕು, ನೀವು ಅವನನ್ನು ರನ್ ಔಟ್ ಮಾಡಿದ್ದೀರಿ. ಇದಲ್ಲದೆ, ಅವನ ಕಾಲಿಗೆ ಗಾಯವಾಗಿದೆ. ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ, ಗೆಳೆಯ” ಎಂದು ಮತ್ತೊಬ್ಬ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

163 ರನ್​ಗಳ ಗುರಿ ಬೆನ್ನತ್ತಿದ ಸ್ಯಾಮ್ ಕರ್ರನ್ ಪಡೆ 17.5 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಜಾನಿ ಬೈರ್​ಸ್ಟೋವ್​ 30 ಎಸೆತಗಳಲ್ಲಿ 46 ರನ್ ಗಳಿಸಿದರೆ, ರಿಲೀ ರೊಸ್ಸೌ 23 ಎಸೆತಗಳಲ್ಲಿ 43 ರನ್ ಗಳಿಸಿದರು. ಈ ಗೆಲುವಿನೊಂದಿಗೆ ಪಿಬಿಕೆಎಸ್ ಎಂಟು ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​​ನಲ್ಲಿ ಏಳನೇ ಸ್ಥಾನಕ್ಕೆ ಏರಿದರೆ, ಸಿಎಸ್ಕೆ 10 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ನಾವು ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಾಗಿದೆ: ಸ್ಯಾಮ್ ಕರ್ರನ್


ಪಿಬಿಕೆಎಸ್ ಸ್ಟ್ಯಾಂಡ್-ಇನ್ ನಾಯಕ ಸ್ಯಾಮ್ ಕರ್ರನ್ ಚೆನ್ನೈನ ಗೆಲುವಿನ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಐಪಿಎಲ್ 2024 ರಲ್ಲಿ ಪ್ಲೇಆಫ್ ಸ್ಥಾನ ಪಡೆಯಲು ತಂಡವು ಉಳಿದ ಎಲ್ಲಾ ಪಂದ್ಯಗಳಲ್ಲಿ ಗೆಲುವುಗಳನ್ನು ಪಡೆಯಲು ಬಯಸುತ್ತದೆ ಎಂದು ಅವರು ಒತ್ತಿ ಹೇಳಿದರು.

ತುಂಬಾ ಸಂತೋಷವಾಗಿದೆ. ಪ್ರತಿ ಬಾರಿ ನೀವು ಚೆನ್ನೈಗೆ ಬಂದು ಎರಡು ಗೆಲುವುಗಳನ್ನು ಪಡೆದಾಗ ಯಾವಾಗಲೂ ವಿಶೇಷ ಭಾವನೆ ಬರುತ್ತದೆ. ಕಳೆದ ವರ್ಷದಂತೆ, ನಾವು ನಮ್ಮ ತವರು ಪಂದ್ಯಗಳಲ್ಲಿ ಬಹಳಷ್ಟು ಸೋತಿದ್ದೇವೆ ಮತ್ತು ಆ ಮೇಲೆ ಗೆದ್ದಿದ್ದೇವೆ ಎಂದು ಹೇಳಿದ್ದಾರೆ.

Continue Reading

ಕ್ರೀಡೆ

Virat kohli : ಕೊಹ್ಲಿಯ ಸ್ಟ್ರೈಕ್​ರೇಟ್​ ಕುರಿತ ಪ್ರಶ್ನೆಗೆ ರೋಹಿತ್​, ಅಗರ್ಕರ್​ ಪ್ರತಿಕ್ರಿಯೆ ಹೀಗಿತ್ತು…

Virat kohli: ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ದೊಡ್ಡ ಮಟ್ಟದ ಸ್ಕೋರ್ ಮಾಡುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅವರ ಸ್ಟ್ರೈಕ್ ರೇಟ್​ ಕಾರಣಕ್ಕೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವರದಿಗಳ ಪ್ರಕಾರ ಆಯ್ಕೆದಾರರು ಈ ವರ್ಷದ ಆರಂಭದಲ್ಲಿ ಅವರನ್ನು ಟಿ20 ಐ ತಂಡಕ್ಕೆ ಮರಳಿ ಕರೆಸಿಕೊಳ್ಳುವ ಮೊದಲು ತಂಡದ ಬೇಡಿಕೆಗಳಿಗೆ ಅನುಗುಣವಾಗಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಲು ಹೇಳಲಾಗಿತ್ತು. ಅದೇ ಷರತ್ತಿನ ಮೇರೆಗೆ ಅವರಿಗೆ ಅವಕಾಶ ನೀಡಲಾಗಿದೆ.

VISTARANEWS.COM


on

Virat kohli
Koo

ನವದೆಹಲಿ: ಮುಂಬರುವ ಐಸಿಸಿ ಟಿ20 ವಿಶ್ವಕಪ್ 2024ಗಾಗಿ (T20 World Cup) 15 ಸದಸ್ಯರ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ (Virat kohli) ಸೇರ್ಪಡೆಗೆ ಏನು ಕಾರಣ ಎಂಬುದನ್ನು ಬಿಸಿಸಿಐ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ (Ajit Agarkar) ವಿವರಿಸಿದ್ದಾರೆ. ಯಾಕೆಂದರೆ ಕೊಹ್ಲಿಯ ಸ್ಟ್ರೈಕ್​ರೇಟ್​​ ಬಗ್ಗೆ ಜೋರು ಚರ್ಚೆ ನಡೆಯುತ್ತಿರುವ ಜತೆಗೆ ಅವರ ಆಯ್ಕೆಯನ್ನು ಹಲವರು ಪ್ರಶ್ನಿಸಿದ್ದಾರೆ. ಹೀಗಾಗಿ ಅಗರ್ಕರ್ ಉತ್ತರ ನೀಡಿದ್ದಾರೆ.

ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ದೊಡ್ಡ ಮಟ್ಟದ ಸ್ಕೋರ್ ಮಾಡುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅವರ ಸ್ಟ್ರೈಕ್ ರೇಟ್​ ಕಾರಣಕ್ಕೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವರದಿಗಳ ಪ್ರಕಾರ ಆಯ್ಕೆದಾರರು ಈ ವರ್ಷದ ಆರಂಭದಲ್ಲಿ ಅವರನ್ನು ಟಿ20 ಐ ತಂಡಕ್ಕೆ ಮರಳಿ ಕರೆಸಿಕೊಳ್ಳುವ ಮೊದಲು ತಂಡದ ಬೇಡಿಕೆಗಳಿಗೆ ಅನುಗುಣವಾಗಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಲು ಹೇಳಲಾಗಿತ್ತು. ಅದೇ ಷರತ್ತಿನ ಮೇರೆಗೆ ಅವರಿಗೆ ಅವಕಾಶ ನೀಡಲಾಗಿದೆ.

ಅಂದ ಹಾಗೆ ಈ ಪ್ರಶ್ನೆಯನ್ನು ರೋಹಿತ್​ ಶರ್ಮಾ ಅವರಿಗೂ ಕೇಳಲಾಗಿತ್ತು. ಆದರೆ, ಅವರು ಜೋರಾಗಿ ನಗುವ ಮೂಲಕ ಇದೊಂದು ಚರ್ಚೆಯ ವಿಷಯವೇ ಅಲ್ಲ ಎಂಬುದಾಗಿ ಹೇಳಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ, ಬಲಗೈ ಬ್ಯಾಟರ್​ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಆದರೆ ಸ್ಟ್ರೈಕ್ ರೇಟ್ ಟೀಕೆಗಳು ಅವರ ಬಗ್ಗೆ ಟೀಕೆ ಮಾಡಲು ಅವಕಾಶ ಕೊಟ್ಟಿದೆ. 10 ಪಂದ್ಯಗಳಲ್ಲಿ 1 ಶತಕ ಹಾಗೂ 4 ಅರ್ಧಶತಕಗಳ ನೆರವಿನಿಂದ 500 ರನ್ ಗಳಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಸ್ಪರ್ಧೆಯಲ್ಲಿ ಋತುರಾಜ್ ಗಾಯಕ್ವಾಡ್ ಮಾತ್ರ ಅವರಿಗಿಂತ ಹೆಚ್ಚು ಸ್ಕೋರ್ ಮಾಡಿದವರು.

ಕೊಹ್ಲಿಯನ್ನು ಸಮರ್ಥಿಸಿಕೊಂಡ ಅಜಿತ್ ಅಗರ್ಕರ್

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ತಂಡದಲ್ಲಿದ್ದಾರೆ. ಉತ್ತಮ ಇನ್ನಿಂಗ್ಸ್ ನಿರ್ಮಿಸಲು ಬಯಸುವ ಮತ್ತು ಅನೇಕ ಆಧುನಿಕ ಟಿ 20 ಬ್ಯಾಟರ್​ಗಳಂತೆ ಆರಂಭದಿಂದಲೇ ವೇಗವಾಗಿ ಸ್ಕೋರ್ ಮಾಡಲು ಪ್ರಾರಂಭಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೊಹ್ಲಿಯ ಅಗತ್ಯವಿಲ್ಲ ಎಂದು ಅನೇಕರ ವಾದ ಮಾಡಿದ್ದಾರೆ.

ವಿರಾಟ್ ಕೊಹ್ಲಿ ತಮ್ಮ ಸ್ಟ್ರೈಕ್ ರೇಟ್ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅಜಿತ್ ಅಗರ್ಕರ್, ಇದು ಆಯ್ಕೆದಾರರು ಮತ್ತು ತಂಡದ ಮ್ಯಾನೇಜ್ಮೆಂಟ್ ನಡುವೆ ಚರ್ಚೆಯ ವಿಷಯವೂ ಅಲ್ಲ ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿ ಅವರ ಅನುಭವವು ತಂಡಕ್ಕೆ ದೊಡ್ಡ ಉತ್ತೇಜನ ನೀಡಲಿದೆ ಎಂದು ಭಾರತದ ಮಾಜಿ ವೇಗಿ ಗಮನಸೆಳೆದರು.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

“ನಾವು ಕೊಹ್ಲಿಯ ಸ್ಟ್ರೈಕ್ ರೇಟ್ ಬಗ್ಗೆ ಚರ್ಚಿಸುತ್ತಿಲ್ಲ. ಐಪಿಎಲ್ ಮತ್ತು ಅಂತಾರರಾಷ್ಟ್ರೀಯ ಕ್ರಿಕೆಟ್ ನಡುವೆ ವ್ಯತ್ಯಾಸವಿದೆ. ನಿಮಗೆ ಅನುಭವ ಬೇಕು. ನಾವು ತಂಡದಲ್ಲಿ ಸಾಕಷ್ಟು ಸಮತೋಲನ ಹೊಂದಿದ್ದೇವೆ. ಐಪಿಎಲ್​​ನಲ್ಲಿ ಏನಾಗುತ್ತಿದೆ ಎಂಬುದನ್ನು ನೀವು ನೋಡುತ್ತೀರಿ. ಸಕಾರಾತ್ಮಕತೆಯನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕಾಗುತ್ತದೆ. ವಿಶ್ವಕಪ್ ಪಂದ್ಯದ ಒತ್ತಡವೇ ಬೇರೆ. ಹೀಗಾಗಿ ವಿರಾಟ್ ಕೊಹ್ಲಿ ಅವರ ಸ್ಟ್ರೈಕ್ ರೇಟ್ ಬಗ್ಗೆ ನಡೆದ ಮಾತುಕತೆಗಳನ್ನು ಅಜಿತ್ ಅಗರ್ಕರ್ ತಳ್ಳಿಹಾಕಿದ್ದಾರೆ.

ಕಳೆದ ಆವೃತ್ತಿಯ ಟಿ20 ವಿಶ್ವಕಪ್​​ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅವರು 6 ಪಂದ್ಯಗಳಲ್ಲಿ ನಾಲ್ಕು ಅರ್ಧಶತಕಗಳ ಸಹಾಯದಿಂದ 296 ರನ್ ಗಳಿಸಿದ್ದರು. ಸುಮಾರು 100 ರ ಅದ್ಭುತ ಸರಾಸರಿ ಹೊಂದಿದ್ದರು. ಮುಂಬರುವ ವಿಶ್ವಕಪ್​​ನಲ್ಲಿಯೂ ಸ್ಟಾರ್ ಬ್ಯಾಟರ್​​ ತಮ್ಮ ಪ್ರದರ್ಶನವನ್ನು ಪುನರಾವರ್ತಿಸುತ್ತಾರೆ ಎಂದು ಭಾರತ ತಂಡ ಆಶಿಸುತ್ತಿದೆ.

Continue Reading
Advertisement
Amith Shah
ಅವಿಭಾಗೀಕೃತ1 min ago

Amit Shah: ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ; ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

IPL 2024 Points Table
ಕ್ರೀಡೆ2 mins ago

IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

Lok sabha Election 2024
ದೇಶ4 mins ago

Lok sabha Election 2024: ರಾಯ್‌ಬರೇಲಿಯಲ್ಲಿ ಕಣಕ್ಕಿಳಿದಿರುವ ದಿನೇಶ್‌ ಪ್ರತಾಪ್‌ ಸಿಂಗ್‌ ಹಿನ್ನೆಲೆ ಏನು?

Kaatera  Movie Rockline Venkatesh Gifts Car To Jadesh K Hampi Maasthi And Suraj
ಸ್ಯಾಂಡಲ್ ವುಡ್7 mins ago

Kaatera  Movie:  ಕಾಟೇರ ಗೆಲುವು: ಮೂವರಿಗೆ ಉಡುಗೊರೆಯಾಗಿ ಸಿಕ್ತು ಕಾರುಗಳು!

Lok sabha Election
ದೇಶ29 mins ago

Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

prajwal revanna case arrest
ಪ್ರಮುಖ ಸುದ್ದಿ35 mins ago

Prajwal Revanna Case: ಪ್ರಜ್ವಲ್ ರೇವಣ್ಣ ಮೇಲೆ ಮತ್ತೊಂದು ಟೈಟ್‌ ಎಫ್‌ಐಆರ್‌, ಇದರಲ್ಲಿ ಬಂಧನ ಖಚಿತ!

Kim Jong Un
ವಿದೇಶ48 mins ago

Kim Jong Un: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಸುಖಕ್ಕೆ ಬೇಕು ಪ್ರತಿ ವರ್ಷ 25 ಹುಡುಗಿಯರು! ಏನಿದು ಆಹ್ಲಾದ ತಂಡ?

Hassan Pen Drive case Prajwal Revanna case
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೇಲೆ ಮೈಸೂರಿನಲ್ಲೂ ಒಂದು ಕೇಸ್‌; ತಾಯಿ ಮೇಲೆ ಲೈಂಗಿಕ ಕಿರುಕುಳ, ಅಪಹರಣ ಎಂದು ದೂರು ನೀಡಿದ ಮಗ

Health Tips Kannada
ಆರೋಗ್ಯ2 hours ago

Health Tips Kannada: ಕೊಲೆಸ್ಟ್ರಾಲ್‌ ತಗ್ಗಿಸಲು ಈ ಬೆಳಗಿನ ಪೇಯಗಳಿಂದ ಸಾಧ್ಯ! ಪ್ರಯತ್ನಿಸಿ

Karnataka Weather Forecast
ಮಳೆ2 hours ago

Karnataka Weather : ಭಯಂಕರ ಬಿಸಿಲಿನಲ್ಲೂ ಮಳೆ ಸೂಚನೆ ಕೊಟ್ಟ ಹವಾಮಾನ ತಜ್ಞರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ14 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌