England Tour: ಧೋನಿ ದಾಖಲೆ ಮುರಿದ ರಿಷಭ್‌ ಪಂತ್‌ - Vistara News

ಕ್ರಿಕೆಟ್

England Tour: ಧೋನಿ ದಾಖಲೆ ಮುರಿದ ರಿಷಭ್‌ ಪಂತ್‌

ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ೮೯ ಎಸೆತಗಳಿಗೆ ಶತಕ ಬಾರಿಸಿದ ರಿಷಭ್‌ ಪಂತ್‌ ಭಾರತ ತಂಡದ ಪರ ಹೊಸ ದಾಖಲೆ ಸೃಷ್ಟಿಸಿದ್ದಾರೆ.

VISTARANEWS.COM


on

ರಿಷಭ್‌ ಪಂತ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬರ್ಮಿಂಗ್‌ಹ್ಯಾಮ್‌: ಐಪಿಎಲ್‌ ಸೇರಿದಂತೆ ಕಳೆದ ಹಲವು ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿ ಟೀಕಾಕಾರರ ಟೀಕಾಸ್ತ್ರಗಳಿಗೆ ಗುರಿಯಾಗಿದ್ದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌ ಭಾರತ ತಂಡದ ಪರ ನೂತನ ದಾಖಲೆ ಸೃಷ್ಟಿಸಿದ್ದಾರೆ.

ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಮರು ನಿಗದಿಯಾಗಿರುವ ಐದನೇ ಟೆಸ್ಟ್‌ ಪಂದ್ಯದಲ್ಲಿ ೮೯ ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಮಾಡಿದ್ದ ದಾಖಲೆಯನ್ನು ಮುರಿದರು. ಪಂತ್‌ ಅಂತಿಮವಾಗಿ ೧೧೧ ಎಸೆತಗಳಲ್ಲಿ ೧೪೬ ರನ್‌ ಸಿಡಿಸುವ ಮೂಲಕ ಆರಂಭಿಕ ಕುಸಿತ ಕಂಡಿದ್ದ ಭಾರತ ತಂಡದ ಮರ್ಯಾದೆ ಕಾಪಾಡಿದರು.

ಏನಿದು ದಾಖಲೆ?

ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಭಾರತ ತಂಡದ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌. ಅಂತೆಯೇ ರಿಷಭ್‌ ಪಂತ್‌ ಕೂಡ ಭಾರತ ತಂಡದ ವಿಕೆಟ್‌ ಕೀಪರ್‌ ಹಾಗೂ ಬ್ಯಾಟ್ಸ್‌ಮನ್‌. ಧೋನಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಆಗಿ ೨೦೦೬ರಲ್ಲಿ ಪಾಕಿಸ್ತಾನದ ವಿರುದ್ಧ ೯೩ ಎಸೆತಗಳಲ್ಲಿ ಶತಕ ಬಾರಿಸಿದ್ದರು. ಆದರೆ, ರಿಷಭ್‌ ಪಂತ್‌ ಇಂಗ್ಲೆಂಡ್‌ ವಿರುದ್ಧ ೮೯ ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಧೋನಿ ದಾಖಲೆ ಮುರಿದಿದ್ದಾರೆ.

ಇದನ್ನೂ ಓದಿ : IPL 2022: ಸಿಎಸ್‌ಕೆ ಕ್ಯಾಪ್ಟನ್ ಸ್ಥಾನಕ್ಕೆ ಧೋನಿ ರಾಜೀನಾಮೆ, ಚೆನ್ನೈ ತಂಡದ ನೂತನ ನಾಯಕನಾಗಿ ಜಡೇಜಾ ನೇಮಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

T20 World Cup 2024 : ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡಕ್ಕೆ 7 ರನ್ ಜಯ

T20 World Cup 2024 : ಮೊದಲು ಬ್ಯಾಟ್ ಮಾಡಿದ ಹರಿಣಗಳ ಪಡೆ ನಿಗದಿತ 20 ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ಗೆ 163 ರನ್ ಪೇರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ ನಷ್ಟಕ್ಕೆ 156 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

T20 World Cup 2024
Koo

ಸೇಂಟ್​ ಲೂಸಿಯಾ: ಟಿ20 ವಿಶ್ವ ಕಪ್​ನ 2024ನೇ (T20 World Cup 2024) ಅವೃತ್ತಿಯ ಸೂಪರ್​ 8 ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಇಂಗ್ಲೆಂಡ್ ವಿರುದ್ಧ 7 ವಿಕೆಟ್​ ವಿಜಯ ದಾಖಲಿಸಿದೆ. ಇದು ದಕ್ಷಿಣ ಆಫ್ರಿಕಾ ತಂಡಕ್ಕೆ ಈ ಹಂತದಲ್ಲಿ ಲಭಿಸಿರುವ ಎರಡನೇ ಗೆಲುವಾಗಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ (Point Table) ಅಗ್ರ ಸ್ಥಾನ ಪಡೆದುಕೊಂಡಿದ್ದು ಸೆಮಿಫೈನಲ್ ಹಂತಕ್ಕೇರುವುದು ಬಹುತೇಕ ನಿಶ್ಚಿತವಾಗಿದೆ. ಅತ್ತ ಇಂಗ್ಲೆಂಡ್​ ತಂಡ ಒಂದು ಗೆಲುವಿನೊಂದಿಗೆ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ಹೀಗಾಗಿ ಮುಂದಿನ ಪಂದ್ಯಗಳ ಫಲಿತಾಂಶಗಳ ಬಳಿಕ ಸೆಮಿಫೈನಲ್​ ಪ್ರವೇಶವನ್ನು ಖಚಿತಪಡಿಸಿಕೊಳ್ಳಬೇಕಾಗುತ್ತದೆ.

ಸೇಂಟ್​ಲೂಸಿಯಾದ ಡ್ಯಾರೆನ್​ ಸಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ಶುಕ್ರವಾರ (ಜೂನ್​ 22ರಂದು) ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಇಂಗ್ಲೆಂಡ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಹರಿಣಗಳ ಪಡೆ ನಿಗದಿತ 20 ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ಗೆ 163 ರನ್ ಪೇರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ ನಷ್ಟಕ್ಕೆ 156 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಬ್ರೂಕ್ ಹೋರಾಟ ವಿಫಲ

ವೆಸ್ಟ್​ ಇಂಡೀಸ್​ನ ಪಿಚ್​ನಲ್ಲಿ ಚೇಸ್​ ಮಾಡಲು ಕಷ್ಟಕರವಾಗಿರುವ ಸ್ಕೋರ್​ ಬೆನ್ನಟ್ಟಲು ಹೊರಟ ಇಂಗ್ಲೆಂಡ್ ತಂಡ ಆರಂಭದಲ್ಲಿಯೇ ವಿಕೆಟ್​ಗಳನ್ನು ಕಳೆದಕೊಂಡಿತು. ಆರಂಭಿಕರಾದ ಫಿಲ್​ ಸಾಲ್ಟ್​ (11 ರನ್​), ಜೋಸ್​ ಬಟ್ಲರ್​ (17 ರನ್​) ಬೇಗನೆ ವಿಕೆಟ್​ ಒಪ್ಪಿಸಿದರು. ಜಾನಿ ಬೈರ್​ಸ್ಟೋವ್​ 16 ರನ್​ಗೆ ಔಟಾದರೆ ಮೊಯೀನ್ ಅಲಿ 9 ರನ್ ಬಾರಿಸಿ ನಿರ್ಗಮಿಸಿದರು. 10.2 ಓವರ್​ಗಳಲ್ಲಿ 61 ರನ್​ಗೆ 4 ವಿಕೆಟ್​ ಕಳೆದುಕೊಂಡ ಇಂಗ್ಲೆಂಡ್ ಸಂಕಷ್ಟಕ್ಕೆ ಬಿತ್ತು. ಈ ವೇಳೆ ಬ್ಯಾಟ್ ಮಾಡಿದ ಹ್ಯಾರಿ ಬ್ರೂಕ್​ 37 ಎಸೆತಕ್ಕೆ 53 ರನ್ ಬಾರಿಸಿದರೆ ಲಿಯಾಮ್ ಲಿವಿಂಗ್​ಸ್ಟನ್​ 17 ಎಸೆತಕ್ಕೆ 33 ರನ್ ಬಾರಿಸಿದರು. ಈ ಜೋಡಿ ಐದನೇ ವಿಕೆಟ್​ಗೆ 78 ರನ್ ಬಾರಿಸಿ ತಂಡಕ್ಕೆ ಗೆಲುವಿನ ಆಸೆ ಹುಟ್ಟಿಸಿದರು. ಆದರೆ ಕೊನೇ ಹಂತದಲ್ಲಿ ಬೌಲಿಂಗ್ ಬಿಗುಗೊಳಿಸಿದ ದಕ್ಷಿಣ ಆಫ್ರಿಕಾ ಗೆಲುವು ತನ್ನದಾಗಿಸಿಕೊಂಡಿತು.

ಇದನ್ನೂ ಓದಿ: Suryakumar Yadav : ವಿಶ್ವದ ಬೆಸ್ಟ್​ ಟಿ20 ಆಟಗಾರ ಸೂರ್ಯಕುಮಾರ್​ ಯಾದವ್​ ಎಂದ ಅಂಬಾಟಿ ರಾಯುಡು

ಕ್ವಿಂಟನ್​ ಅಬ್ಬರದ ಆಟ

ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಆರಂಭಿಕ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅವರು 38 ಎಸೆತಕ್ಕೆ 65 ರನ್ ಬಾರಿಸಿ ಅದ್ಭುತ ಆರಂಭಕೊಟ್ಟರು. ರೀಜಾ ಹೆಂಡ್ರಿಕ್ಸ್​ 19 ರನ್ ಬಾರಿಸಿದರು. ಅವರಿಬ್ಬರು ಮೊದಲ ವಿಕೆಟ್​ಗೆ 86 ರನ್ ಬಾರಿಸಿದಾಗ ದೊಡ್ಡ ಮೊತ್ತ ಪೇರಿಸುವ ಸೂಚನೆ ಸಿಕ್ಕಿತು. ಆದರೆ ಹೆನ್ರಿಚ್ ಕ್ಲಾಸೆನ್​ (8 ರನ್​) ಅದ್ಭುತ ರನ್​ಔಟ್​ಗೆ ಬಲಿಯಾದರು. ಆದರೆ, ಡೇವಿಡ್​ ಮಿಲ್ಲರ್​ 43 ರನ್ ಬಾರಿಸಿ ಮತ್ತೆ ಚೈತನ್ಯ ತಂದರು. ಕೊನೆ ಹಂತದಲ್ಲಿ ದಕ್ಷಿಣ ಆಫ್ರಿಕಾ ಸತತವಾಗಿ ವಿಕೆಟ್​ ಕಳೆದುಕೊಂಡಿತು. ಮಾರ್ಕ್ರಮ್​ 1 ರನ್ ಬಾರಿಸಿದರೆ ಟ್ರಿಸ್ಟಾನ್​ ಸ್ಟಬ್ಸ್​ 12 ರನ್​ಗೆ ಸೀಮಿತಗೊಂಡರು.

Continue Reading

ಪ್ರಮುಖ ಸುದ್ದಿ

Suryakumar Yadav : ವಿಶ್ವದ ಬೆಸ್ಟ್​ ಟಿ20 ಆಟಗಾರ ಸೂರ್ಯಕುಮಾರ್​ ಯಾದವ್​ ಎಂದ ಅಂಬಾಟಿ ರಾಯುಡು

Suryakumar Yadav : ಸ್ಪಿನ್ನರ್​ಗಳ ವಿರುದ್ಧ ಸೂರ್ಯ ರಚಿಸಿದ ಯೋಜನೆಗಳು ತುಂಬಾ ಉತ್ತಮವಾಗಿವೆ. ರಾಯುಡು ಪ್ರಕಾರ ಅಂತಹ ಪರಿಸ್ಥಿತಿಗಳಲ್ಲಿ ಹೇಗೆ ಬ್ಯಾಟಿಂಗ್ ಮಾಡಬೇಕೆಂದು ಕಲಿಯಲು ಯುವಕರಿಗೆ ಸೂರ್ಯಕುಮಾರ್​ ಉತ್ತಮ ಉದಾಹರಣೆಯಾಗಿದ್ದಾರೆ. ಹೀಗಾಗಿ ಬಲಗೈ ಬ್ಯಾಟರ್​ ವಿಶ್ವದ ಅತ್ಯುತ್ತಮ ಟಿ 20 ಬ್ಯಾಟ್ಸ್ಮನ್ ಆಗಿದ್ಆರೆ ಎಂದು ಸುರ್ಯಕುಮಾರ್ ಹೇಳಿದ್ದಾರೆ.

VISTARANEWS.COM


on

Suryakumar Yadav
Koo

ನವದೆಹಲಿ: ಟಿ 20 ವಿಶ್ವಕಪ್ 2024 (T20 World Cup 2024) ಸೂಪರ್ 8 ನಲ್ಲಿ ಭಾರತ ತಂಡವು ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಮುಂಚಿತವಾಗಿ ಸಿದ್ದತೆ ನಡೆಸುತ್ತಿದೆ. ಈ ನಡುವೆ ತಂಡದ ಕುರಿತು ಮಾತನಾಡಿದ ಮಾಜಿ ಬ್ಯಾಟರ್ ಅಂಬಾಟಿ ರಾಯುಡು ಸೂರ್ಯಕುಮಾರ್ ಯಾದವ್ (Suryakumar Yadav ) ವಿಶ್ವದ ಅತ್ಯುತ್ತಮ ಟಿ 20 ಬ್ಯಾಟರ್​ ಎಂದು ಹೇಳಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ ನಂತರ ಅಂಬಾಟಿ ರಾಯುಡು ಈ ಹೇಳಿಕೆ ನೀಡಿದ್ದಾರೆ. ಭಾರತ ತಂಡದ ಕೊನೆಯ ಲೀಗ್​ ಪಂದ್ಯದಲ್ಲಿ ಸೂರ್ಯಕುಮಾರ್ 49 ಎಸೆತಗಳಲ್ಲಿ 50 ರನ್ ಗಳಿಸಿದ್ದರು. ಶಿವಂ ದುಬೆ ಅವರೊಂದಿಗೆ 72 ರನ್​ಗಳ ಜೊತೆಯಾಟವಾಡಿದ ಅವರು ಸಹ-ಆತಿಥೇಯ ಯುಎಸ್ಎ ವಿರುದ್ಧ 111 ರನ್​ಗಳ ಚೇಸ್​ಗೆ ನೆರವಾಗಿದ್ದರು.

ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಟಿ 20 ವಿಶ್ವಕಪ್ನಲ್ಲಿ ಸತತ ಎರಡನೇ ಅರ್ಧಶತಕದೊಂದಿಗೆ ಮಿಂಚಿದರು. ಸೂರ್ಯ ಸರಿಯಾದ ಸಮಯದಲ್ಲಿ ಮತ್ತು ಈ ಆವೃತ್ತಿಯ ಕೆಲವು ಪ್ರಮುಖ ಪಂದ್ಯಗಳಿಗೆ ಮುಂಚಿತವಾಗಿ ಫಾರ್ಮ್ ಕಂಡುಕೊಂಡರು. ಭಾರತ ಫೈನಲ್ ತಲುಪಿದರೆ ಅವರು ಆಸ್ಟ್ರೇಲಿಯಾ ವಿರುದ್ಧ, ಸೆಮಿಫೈನಲ್ ಮತ್ತು ಫೈನಲ್​​ನಲ್ಲಿ ಅವರು ಇದೇ ರೀತಿಯ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

ಅಂಬಾಟಿ ರಾಯುಡು ಶ್ಲಾಘನೆ

ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಅಂಬಾಟಿ ರಾಯುಡು, ಅಫ್ಘಾನಿಸ್ತಾನ ವಿರುದ್ಧ ಸೂರ್ಯಕುಮಾರ್ ಯಾದವ್ ತೋರಿದ ಪ್ರದರ್ಶನವನ್ನು ಶ್ಲಾಘಿಸಿದರು. ಹಲವಾರು ಕಾರಣಗಳಿಗಾಗಿ ಸೂರ್ಯಕುಮಾರ್ ಅಫ್ಘಾನಿಸ್ತಾನದ ವಿರುದ್ಧ ಸಂಪೂರ್ಣವಾಗಿ ಮೇಲುಗೈ ಸಾಧಿಸಿದ್ದರು ಎಂದು ಹೇಳಿದ್ದಾರೆ. ಅವರು ಸ್ಪಿನ್ ಬೌಲರ್​ಗಳ ವಿರುದ್ಧ ಉತ್ತಮ ಪಾದದ ಚಲನೆ ತೋರಿಸಿದ್ದರು. ಕ್ರೀಸ್ ಅನ್ನು ಬುದ್ಧಿವಂತಿಕೆಯಿಂದ ಬಳಸಿದ್ದರು. ಅಂಬಾಟಿ ರಾಯುಡು ಅವರು ಸೂರ್ಯಕುಮಾರ್ ಯಾದವ್ ಅವರ ಕ್ರೀಸ್ ಬಳಕೆಯನ್ನು ಬೊಟ್ಟು ಮಾಡಿದರು. ಏಕೆಂದರೆ ಅವರು ಆಗಾಗ್ಗೆ 2 ಮೀಟರ್ ಮುಂದೆ ಹೋಗಿ ಆಡಿದ್ದರು.

ಸ್ಪಿನ್ನರ್​ಗಳ ವಿರುದ್ಧ ಸೂರ್ಯ ರಚಿಸಿದ ಯೋಜನೆಗಳು ತುಂಬಾ ಉತ್ತಮವಾಗಿವೆ. ರಾಯುಡು ಪ್ರಕಾರ ಅಂತಹ ಪರಿಸ್ಥಿತಿಗಳಲ್ಲಿ ಹೇಗೆ ಬ್ಯಾಟಿಂಗ್ ಮಾಡಬೇಕೆಂದು ಕಲಿಯಲು ಯುವಕರಿಗೆ ಸೂರ್ಯಕುಮಾರ್​ ಉತ್ತಮ ಉದಾಹರಣೆಯಾಗಿದ್ದಾರೆ. ಹೀಗಾಗಿ ಬಲಗೈ ಬ್ಯಾಟರ್​ ವಿಶ್ವದ ಅತ್ಯುತ್ತಮ ಟಿ 20 ಬ್ಯಾಟ್ಸ್ಮನ್ ಆಗಿದ್ಆರೆ ಎಂದು ಸುರ್ಯಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: Gautam Gambhir : ಕೋಚ್​ ಹುದ್ದೆ ಅಂತಿಮವಾಗಿಲ್ಲ; ವರದಿಗಳಿಗೆ ವ್ಯತಿರಿಕ್ತ ಹೇಳಿಕೆ ನೀಡಿದ ಗಂಭೀರ್​!

28 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್​ಗಳೊಂದಿಗೆ ಸುಮಾರು 190 ಸ್ಟ್ರೈಕ್ ರೇಟ್​​ನಲ್ಲಿ 53 ರನ್ ಗಳಿಸುವ ಮೂಲಕ ಭಾರತಕ್ಕೆ 181 ರನ್ ಗಳಿಸಲು ಸೂರ್ಯ ನೆರವಾಗಿದ್ದರು.

ಜಸ್ಪ್ರೀತ್ ಬುಮ್ರಾ ಭಾರತ ತಂಡಕ್ಕೆ ದೇವರು ನೀಡಿದ ಉಡುಗೊರೆ


ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಕೇವಲ 7 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಎಲ್ಲಾ ರೀತಿಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ಬುಮ್ರಾ ಅವರ ವಿಶೇಷ ಸಾಮರ್ಥ್ಯವನ್ನು ರಾಯುಡು ಎತ್ತಿ ತೋರಿಸಿದರು. ಅವರನ್ನು ನೋಡುವ ಅವಕಾಶವನ್ನು ಹೊಂದಿರುವ ಎಲ್ಲಾ ಭಾರತೀಯರು ಅದೃಷ್ಟವಂತರು ಎಂದು ಹೇಳಿದರು.

ಜಸ್ಪ್ರೀತ್ ಬುಮ್ರಾ ಅವರಿಗೆ ನೀಡಲಾದ ಪ್ರತಿಯೊಂದು ಪರಿಸ್ಥಿತಿಗೆ ಅವರು ಹೊಂದಿಕೊಳ್ಳುವ ಸಾಮರ್ಥ್ಯವಿದೆ. ಅವರು ಅದ್ಭುತ ಬೌಲರ್ ಮತ್ತು ಅವರು ಈ ಭಾರತೀಯ ತಂಡಕ್ಕೆ ದೇವರು ನೀಡಿದ ಉಡುಗೊರೆ” ಎಂದು ಅಂಬಾಟಿ ರಾಯುಡು ಹೇಳಿದರು.

Continue Reading

ಪ್ರಮುಖ ಸುದ್ದಿ

Gautam Gambhir : ಕೋಚ್​ ಹುದ್ದೆ ಅಂತಿಮವಾಗಿಲ್ಲ; ವರದಿಗಳಿಗೆ ವ್ಯತಿರಿಕ್ತ ಹೇಳಿಕೆ ನೀಡಿದ ಗಂಭೀರ್​!

Gautam Gambhir : ಬಿಸಿಸಿಐ ಕೋಚಿಂಗ್ ಪಾತ್ರಕ್ಕಾಗಿ ಅರ್ಜಿಗಳನ್ನು ಬಿಡುಗಡೆ ಮಾಡಿದಾಗಿನಿಂದ, ಗೌತಮ್ ಗಂಭೀರ್ ಈ ಮಹತ್ವದ ಹುದ್ದೆಯನ್ನು ಪಡೆಯಲು ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಕೋಲ್ಕತಾ ನೈಟ್ ರೈಡರ್ಸ್ ಮೆಂಟರ್​​ ನೇಮಕವನ್ನು ಈಗಾಗಲೇ ಆಡಳಿತ ಮಂಡಳಿ ಅಂತಿಮಗೊಳಿಸಿದೆ ಮತ್ತು ಅವರು ಶೀಘ್ರದಲ್ಲೇ ತಂಡದ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಹಲವಾರು ವರದಿಗಳು ತಿಳಿಸಿವೆ.

VISTARANEWS.COM


on

Gautam Gambhir
Koo

ಬೆಂಗಳೂರು : ಭಾರತ ತಂಡದ ಮುಂದಿನ ಕೋಚ್ ಗೌತಮ್​ ಗಂಭೀರ್ ಎಂಬ ವಿಶ್ವಾಸಾರ್ಹ ವರದಿಗಳ ಮಧ್ಯೆ, ಈ ವಿಚಾರ ಅಂತಿಮಗೊಂಡಿಲ್ಲ ಎಂಬುದಾಗಿ ಅವರು ಹೇಳಿಕೆ ನೀಡಿದ್ದಾರೆ. ಈ ಮೂಲಕ ಕೋಲ್ಕತಾ ನೈಟ್ ರೈಡರ್ಸ್ (KKR) ಮಾರ್ಗದರ್ಶಕ ಸುದ್ದಿಗೆ ಹೊಸ ತಿರುವು ನೀಡಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗನಿಗೆ ಮುಂದಿನ ಕೋಚ್​ ನೀವಾ ಎಂದು ಕೇಳಿದ್ದಕ್ಕೆ, ಈ ಪ್ರಶ್ನೆಗೆ ಉತ್ತರಿಸುವುದು ತುಂಬಾ ಕಷ್ಟ. ಈಗಲೇ ಎಲ್ಲದ್ದಕ್ಕೂ ಉತ್ತರಿಸುವುದು ಅಸಾಧ್ಯ ಎಂಬುದಾಗಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರ ಕೋಚಿಂಗ್​ ಹುದ್ದೆಯ ಆಯ್ಕೆ ಇನ್ನೂ ಗೊಂದಲದಲ್ಲಿದೆ ಎಂದು ಹೇಳಲಾಗಿದೆ.

ರಾಹುಲ್ ದ್ರಾವಿಡ್ ಅವರಿಂದ ತೆರವಾದ ಭಾರತ ತಂಡದ ಮುಖ್ಯ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ಪ್ರಮುಖ ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಮಾರ್ಗದರ್ಶಕರಾಗಿ ಕಪ್ ಗೆದ್ದು ಕೊಟ್ಟಿರು ಅವರಿಗೆ ಬಿಸಿಸಿಐ ಸಂದರ್ಶನ ನಡೆಸಿದೆ. ಅವರು ಸಮರ್ಥರಾಗಿರುವ ಕಾರಣ ಆಯ್ಕೆಯಾಗುವುದು ಖಚಿತ ಎಂದು ಹೇಳಲಾಗಿದೆ. ಆದರೆ ಅವರ ಇತ್ತೀಚಿನ ಹೇಳಿಕೆ ಮತ್ತೆ ಗೊಂದಲಕ್ಕೆ ಕಾರಣವಾಗಿದೆ.

ಬಿಸಿಸಿಐ ಕೋಚಿಂಗ್ ಪಾತ್ರಕ್ಕಾಗಿ ಅರ್ಜಿಗಳನ್ನು ಬಿಡುಗಡೆ ಮಾಡಿದಾಗಿನಿಂದ, ಗೌತಮ್ ಗಂಭೀರ್ ಈ ಮಹತ್ವದ ಹುದ್ದೆಯನ್ನು ಪಡೆಯಲು ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಕೋಲ್ಕತಾ ನೈಟ್ ರೈಡರ್ಸ್ ಮೆಂಟರ್​​ ನೇಮಕವನ್ನು ಈಗಾಗಲೇ ಆಡಳಿತ ಮಂಡಳಿ ಅಂತಿಮಗೊಳಿಸಿದೆ ಮತ್ತು ಅವರು ಶೀಘ್ರದಲ್ಲೇ ತಂಡದ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಹಲವಾರು ವರದಿಗಳು ತಿಳಿಸಿವೆ.

ಆರಂಭದಲ್ಲಿ ಅವರೊಬ್ಬರೇ ಕೋಚಿಂಗ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸಂದರ್ಶನದ ದಿನದಂದು, ಡಬ್ಲ್ಯೂವಿ ರಾಮನ್ ಕೂಡ ಸ್ಪರ್ಧೆಯಲ್ಲಿದ್ದಾರೆ ಎಂದು ತಿಳಿದುಬಂತು. ಮಹಿಳಾ ತಂಡದ ಮಾಜಿ ಮುಖ್ಯ ಕೋಚ್ ಕೂಡ ಸಂದರ್ಶನದಲ್ಲಿದ್ದರು ಎಂದು ಹೇಳಲಾಯಿತು. ಆದರೆ, ಗಂಭೀರ್ ಹೆಚ್ಚು ಸೂಕ್ತ ಆಯ್ಕೆ ಎಂಬುದಾಗಿ ಹೇಳಲಾಗಿತ್ತು.

ಇದನ್ನೂ ಓದಿ: Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

ಗೌತಮ್ ಗಂಭೀರ್ ಮತ್ತು ಡಬ್ಲ್ಯುವಿ ರಾಮನ್ ನಡುವೆ ಆಯ್ಕೆಗಾಗಿ ಬಿಸಿಸಿಐ ಭಿನ್ನ ಅಭಿಪ್ರಾಯ ಹೊಂದಿದೆ ಎಂಬುದಾಗಿಯೂ ಹೇಳಲಾಗಿದೆ. ಈ ಇಬ್ಬರೂ ಮಾಜಿ ಕ್ರಿಕೆಟಿಗರು ತಂಡವನ್ನು ಸೇರುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಗಂಭೀರ್ ಮುಖ್ಯ ಕೋಚ್ ಆಗುವ ಸಾಧ್ಯತೆಯಿದ್ದರೆ, ರಾಮನ್ ಅವರು ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳುವ ಸಾಧ್ಯತೆ ಇದೆ.

ಗೌತಮ್ ಗಂಭೀರ್ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡುವ ಬಗ್ಗೆ ಎಲ್ಲಾ ಊಹಾಪೋಹಗಳೊಂದಿಗೆ, ಕೋಲ್ಕತಾ ನೈಟ್ ರೈಡರ್ಸ್ ಮಾರ್ಗದರ್ಶಕ ಇನ್ನೂ ಯಾವುದೇ ಮಾಹಿತಿ ಇಲ್ಲ ಎಂದು ದೃಢಪಡಿಸಿದ್ದಾರೆ. ಪಿಟಿಐ ಜೊತೆ ಮಾತನಾಡಿದ ಅವರು, “ನಾನು ಅಷ್ಟು ದೀರ್ಘವಾಗಿ ಯೋಚಿಸಿಲ್ಲ. ಈಗ ಉತ್ತರಿಸುವುದು ಕಷ್ಟ” ಎಂದು ಹೇಳಿದ್ದಾರೆ.

ಈ ಹಿಂದೆ ಬಿಸಿಸಿಐ ಮತ್ತು ಗೌತಮ್ ಗಂಭೀರ್ ಇಬ್ಬರೂ ದೇಶಕ್ಕಾಗಿ ಏನಾದರೂ ಮಾಡಲೇಬೇಕು ಎಂಬ ಒಂದೇ ನಂಬಿಕೆಯೊಂದಿಗೆ ಚರ್ಚೆ ನಡೆಸಿತ್ತು. ಅವರು ಕೋಲ್ಕತಾ ನೈಟ್ ರೈಡರ್ಸ್​ ತಂಡಕ್ಕೆ ಮಾರ್ಗದರ್ಶನ ನೀಡಿದ ರೀತಿಯಿಂದ ಬಿಸಿಸಿಐ ಪ್ರಭಾವಿತವಾಗಿತ್ತು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಲ್ಲಿ ಕೆಕೆಆರ್ ತಂಡಕ್ಕೆ ತನ್ನ ಮೂರನೇ ಪ್ರಶಸ್ತಿ ಪಡೆಯಲು ನೆರವಾಗಿದ್ದರು.

Continue Reading

ಪ್ರಮುಖ ಸುದ್ದಿ

Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

Rishabh Pant: 2024ರ ಟಿ20 ವಿಶ್ವಕಪ್​​ನಲ್ಲಿ ರಿಷಭ್ ಪಂತ್ ಅತ್ಯುತ್ತಮ ವಿಕೆಟ್ ಕೀಪರ್ ಆಗಿ ಹೊರಹೊಮ್ಮಿದ್ದಾರೆ. ಪಂದ್ಯಾವಳಿಯಲ್ಲಿ ಭಾರತದ ಯಶಸ್ಸಿನ ಪ್ರಮುಖ ಕಾರಣಗಳಲ್ಲಿ ಕೀಪರ್-ಬ್ಯಾಟ್ಸ್ಮನ್ ಪಂತ್​ ಕೂಡ ಒಬ್ಬರು. ಅವರು ಸ್ಟಂಪ್​ಗಳ ಹಿಂದೆ ಉತ್ತಮ ಫಿಟ್ನೆಸ್ ತೋರಿಸಿದ್ದಾರೆ. ಚೆಂಡು ತಮ್ಮನ್ನು ದಾಟಿ ಹೋಗಲು ಅವರು ಬಿಡುತ್ತಿಲ್ಲ.

VISTARANEWS.COM


on

Rishabh Pant
Koo

ಬೆಂಗಳೂರು: ಭಾರತದ ಪ್ರತಿಭಾವಂತ ವಿಕೆಟ್ ಕೀಪರ್ ಬ್ಯಾಟರ್​​ ರಿಷಭ್ ಪಂತ್ (Rishabh Pant) ಟಿ 20 ವಿಶ್ವಕಪ್ ಇತಿಹಾಸದಲ್ಲಿ ವಿಕೆಟ್ ಕೀಪಿಂಗ್ ವಿಷಯದಲ್ಲಿ ದೊಡ್ಡ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಟಿ 20 ವಿಶ್ವಕಪ್​​ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಬ್ಯಾಟರ್​ಗಳನ್ನು ಔಟ್ ಮಾಡಿದ ಕೀಪರ್ ಎನಿಸಿಕೊಂಡಿದ್ದಾರೆ. ಈ ಸಾಧನೆಯ ಹಾದಿಯಲ್ಲಿ ಅವರು ಆಸ್ಟ್ರೇಲಿಯಾದ ಆ್ಯಡಮ್​ ಗಿಲ್​ಕ್ರಿಸ್ಟ್​​ ಮತ್ತು ಕುಮಾರ ಸಂಗಕ್ಕಾರ ಅವರನ್ನು ಹಿಂದಿಕ್ಕಿದ್ದಾರೆ. 2024ರ ಟಿ20 ವಿಶ್ವಕಪ್​ನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಸೂಪರ್​ 8 ಹಂತದ ಪಂದ್ಯದಲ್ಲಿ ರಿಷಭ್ ಪಂತ್ ಈ ಸಾಧನೆ ಮಾಡಿದ್ದಾರೆ. ಬಾರ್ಬಡೋಸ್​​ನ ಕೆನ್ಸಿಂಗ್ಟನ್ ಓವಲ್​​ನಲ್ಲಿ ಗುರುವಾರ (ಜೂನ್ 20) ತಂಡಗಳ ನಡುವಿನ ಹಣಾಹಣಿಯ ವೇಳೆ ಅವರು ಈ ಸಾಧನೆ ಮಾಡಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ್ ಮೂರು ಕ್ಯಾಚ್​​ಗಳನ್ನು ಪಡೆದುಕೊಂಡಿದ್ದಾರೆ. ರಹಮಾನುಲ್ಲಾ ಗುರ್ಬಾಜ್, ಗುಲ್ಬಾದಿನ್ ನೈಬ್ ಮತ್ತು ನವೀನ್-ಉಲ್-ಹಕ್ ಅವರನ್ನು ಪೆವಿಲಿಯನ್ಗೆ ಕಳುಹಿಸುವಲ್ಲಿ ಅವರ ಪಾತ್ರವಿದೆ. ಅದರೊಂದಿಗೆ ಅವರು ಪ್ರಸ್ತುತ ನಡೆಯುತ್ತಿರುವ ಟಿ 20 ವಿಶ್ವಕಪ್​​ನಲ್ಲಿ 10 ಕ್ಯಾಚ್​ಗಳನ್ನು ಪೂರ್ಣಗೊಳಿಸಿದರು. ಈ ಸಾಧನೆ ಮಾಡುವಾಗ ಆಡಮ್ ಗಿಲ್​ಕ್ರಿಸ್ಟ್​ ಮತ್ತು ಕುಮಾರ ಸಂಗಕ್ಕಾರ ಅವರ 9 ಕ್ಯಾಚ್​ಗಳ ದಾಖಲೆಯನ್ನು ಮೀರಿಸಿದ್ದಾರೆ.

2024ರ ಟಿ20 ವಿಶ್ವಕಪ್​​ನಲ್ಲಿ ರಿಷಭ್ ಪಂತ್ ಅತ್ಯುತ್ತಮ ವಿಕೆಟ್ ಕೀಪರ್ ಆಗಿ ಹೊರಹೊಮ್ಮಿದ್ದಾರೆ. ಪಂದ್ಯಾವಳಿಯಲ್ಲಿ ಭಾರತದ ಯಶಸ್ಸಿನ ಪ್ರಮುಖ ಕಾರಣಗಳಲ್ಲಿ ಕೀಪರ್-ಬ್ಯಾಟ್ಸ್ಮನ್ ಪಂತ್​ ಕೂಡ ಒಬ್ಬರು. ಅವರು ಸ್ಟಂಪ್​ಗಳ ಹಿಂದೆ ಉತ್ತಮ ಫಿಟ್ನೆಸ್ ತೋರಿಸಿದ್ದಾರೆ. ಚೆಂಡು ತಮ್ಮನ್ನು ದಾಟಿ ಹೋಗಲು ಅವರು ಬಿಡುತ್ತಿಲ್ಲ.

2024ರ ಟಿ20 ವಿಶ್ವಕಪ್ ರಿಷಭ್ ಪಂತ್ ಪಾಲ್ಗೊಳ್ಳುತ್ತಿರುವ ಮೂರನೇ ವಿಶ್ವಕಪ್ ಆಗಿದೆ. ಕೀಪರ್-ಬ್ಯಾಟ್ಸ್ಮನ್ ಪಂದ್ಯಾವಳಿಯ 2021 ಆವೃತ್ತಿಯಲ್ಲಿ ಉತ್ತಮ ಕೊಡುಗೆಗಳನ್ನು ನೀಡಿದ್ದರು. 2022 ರಲ್ಲಿ, ದಿನೇಶ್ ಕಾರ್ತಿಕ್ ಅವರಿಗಿಂತ ಆದ್ಯತೆ ನೀಡಿದ್ದರಿಂದ ಅವರಿಗೆ ಆಡಲು ಕೇವಲ ಒಂದು ಪಂದ್ಯ ಸಿಕ್ಕಿತು. ಅಲ್ಲಿ ಅವರು ಸೆಮಿಫೈನಲ್ ಪಂದ್ಯ ಮಾತ್ರ ಆಡಿದ್ದರು.

2024ರ ಟಿ20 ವಿಶ್ವಕಪ್​ನಲ್ಲಿ ರಿಷಭ್ ಪಂತ್ ಬ್ಯಾಟಿಂಗ್​​ನಲ್ಲಿ ಮಿಂಚುತ್ತಿದ್ದಾರೆ. ಕೀಪರ್-ಬ್ಯಾಟರ್ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರು ಪಾತ್ರವನ್ನು ಚೆನ್ನಾಗಿ ನಿರ್ವಹಿಸುತ್ತಿದ್ದಾರೆ. ನಾಲ್ಕು ಇನ್ನಿಂಗ್ಸ್​ಗಳ ಮೂಲಕ 116 ರನ್ ಬಾರಿಸಿದ್ದಾರೆ. ಭಾರತದ ಪ್ರಮುಖ ರನ್ ಸ್ಕೋರರ್ ಆಗಿದ್ದಾರೆ. 38.66 ರ ಪ್ರಭಾವಶಾಲಿ ಸರಾಸರಿ ಮತ್ತು 131.81 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ಇದನ್ನೂ ಓದಿ: Mohammed Shami : ವಿಶ್ವ ಕಪ್​ ಮಧ್ಯದಲ್ಲಿಯೇ ಭಾರತ ತಂಡಕ್ಕೆ ಮೊಹಮ್ಮದ್ ಶಮಿ ಸೇರ್ಪಡೆ?

ಐರ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ 26 ಎಸೆತಗಳಲ್ಲಿ ಅಜೇಯ 36 ರನ್ ಗಳಿಸಿದ್ದ ರಿಷಭ್ ಪಂತ್, ನಂತರ ಪಾಕಿಸ್ತಾನ ವಿರುದ್ಧ 21 ಎಸೆತಗಳಲ್ಲಿ 42 ರನ್ ಗಳಿಸಿದ್ದರು. ಕಳೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ 20 ರನ್ ಗಳಿಸಿದ್ದರು.

ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನ ಸೋಲಿಸಿದ ಭಾರತ

2024ರ ಟಿ20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಭರ್ಜರಿ ಚಾಲನೆ ನೀಡಿದೆ. ಅಫ್ಘಾನಿಸ್ತಾನವನ್ನು 47 ರನ್ ಗಳಿಂದ ಸೋಲಿಸಿತು. ಮೊದಲು ಬ್ಯಾಟ್​ ಮಾಡಿದ ಭಾರತ 181 ರನ್ ಗಳಿಸಿತು. ಸೂರ್ಯಕುಮಾರ್ ಯಾದವ್ 53 ರನ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು. ಹಾರ್ದಿಕ್ ಪಾಂಡ್ಯ (32) ಮತ್ತು ರಿಷಭ್ ಪಂತ್ ಕೂಡ ಪ್ರಮುಖ ಪಾತ್ರ ವಹಿಸಿದರು.

ಭಾರತ ಬೌಲಿಂಗ್​ನಲ್ಲಿ ಮಿಂಚಿತು. ಅಫ್ಘಾನಿಸ್ತಾನದ ಬ್ಯಾಟರ್​ಗಳು ನಿಯಮಿತವಾಗಿ ವಿಕೆಟ್​​ಗಳನ್ನು ಕಳೆದುಕೊಂಡರು. ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು 134 ರನ್​ಗಳಿಗೆ ಕಟ್ಟಿಹಾಕಿದ ಭಾರತ 47 ರನ್​ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಭಾರತದ ಪರ ಜಸ್ಪ್ರೀತ್ ಬುಮ್ರಾ ಕೇವಲ 7 ರನ್ ನೀಡಿ 3 ವಿಕೆಟ್ ಪಡೆದರು. ಭಾರತದ ಪರ ಅರ್ಶ್​​ದೀಪ್​ ಸಿಂಗ್​ ವಿಕೆಟ್ ಕಿತ್ತರೆ, ಕುಲ್ದೀಪ್ ಯಾದವ್ 2 ವಿಕೆಟ್ ಪಡೆದರು.

Continue Reading
Advertisement
Kalki 2898 AD Final Trailer Released
ಕರ್ನಾಟಕ1 hour ago

Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

Sonakshi Sinha
ಬಾಲಿವುಡ್2 hours ago

Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡಕ್ಕೆ 7 ರನ್ ಜಯ

Suryakumar Yadav
ಪ್ರಮುಖ ಸುದ್ದಿ2 hours ago

Suryakumar Yadav : ವಿಶ್ವದ ಬೆಸ್ಟ್​ ಟಿ20 ಆಟಗಾರ ಸೂರ್ಯಕುಮಾರ್​ ಯಾದವ್​ ಎಂದ ಅಂಬಾಟಿ ರಾಯುಡು

Central Government monitoring wheat price stability: Union Minister Pralhad Joshi
ಕರ್ನಾಟಕ2 hours ago

Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

regional Laboratory sanctioned to Kims Hubballi
ಕರ್ನಾಟಕ2 hours ago

Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

Hinduja Family
ವಿದೇಶ2 hours ago

Hinduja Family: ಮನೆಗೆಲಸದವರ ಮೇಲೆ ದೌರ್ಜನ್ಯ; ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

Gautam Gambhir
ಪ್ರಮುಖ ಸುದ್ದಿ3 hours ago

Gautam Gambhir : ಕೋಚ್​ ಹುದ್ದೆ ಅಂತಿಮವಾಗಿಲ್ಲ; ವರದಿಗಳಿಗೆ ವ್ಯತಿರಿಕ್ತ ಹೇಳಿಕೆ ನೀಡಿದ ಗಂಭೀರ್​!

Rishabh Pant
ಪ್ರಮುಖ ಸುದ್ದಿ4 hours ago

Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

Parking Complex
ಬೆಂಗಳೂರು4 hours ago

Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ13 hours ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 day ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌