ಬೇರ್​ಸ್ಟೋ ರನೌಟ್​ಗೆ ಅಸಮಾಧಾನ ವ್ಯಕ್ತಪಡಿಸಿದ ಬ್ರಿಟನ್​ ಪ್ರಧಾನಿ ರಿಷಿ ಸುನಕ್‌ - Vistara News

ಕ್ರಿಕೆಟ್

ಬೇರ್​ಸ್ಟೋ ರನೌಟ್​ಗೆ ಅಸಮಾಧಾನ ವ್ಯಕ್ತಪಡಿಸಿದ ಬ್ರಿಟನ್​ ಪ್ರಧಾನಿ ರಿಷಿ ಸುನಕ್‌

ಜಾನಿ ಬೇರ್​ಸ್ಟೋ(Jonny Bairstow) ಅವರನ್ನು ರನೌಟ್​ ಮಾಡಿದ ವಿಚಾರದಲ್ಲಿ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌(Rishi Sunak) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಕ್ರೀಡಾಸ್ಫೂರ್ತಿಗೆ ವಿರುದ್ಧವಾದ ನಡೆ ಎಂದು ಹೇಳಿದ್ದಾರೆ.

VISTARANEWS.COM


on

UK Prime Minister Rishi Sunak
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್​: ದ್ವಿತೀಯ ಟೆಸ್ಟ್(The Ashes)​ ಪಂದ್ಯದಲ್ಲಿ ಇಂಗ್ಲೆಂಡ್​ ತಂಡದ ಆಟಗಾರರ ಜಾನಿ ಬೇರ್​ಸ್ಟೋ(Jonny Bairstow) ಅವರನ್ನು ರನೌಟ್​ ಮಾಡಿದ ವಿಚಾರದಲ್ಲಿ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌(Rishi Sunak) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಕ್ರೀಡಾಸ್ಫೂರ್ತಿಗೆ ವಿರುದ್ಧವಾದ ನಡೆ ಎಂದು ಹೇಳಿದ್ದಾರೆ. ಆದರೆ ಆಸೀಸ್​ ಆಟಗಾರರನ್ನು ನಿಂದಿಸಿದ ಮೆರಿಲ್​ಬೋನ್​ ಕ್ರಿಕೆಟ್​ ಕ್ಲಬ್​ ಸದಸ್ಯರನ್ನು ಅಮಾನತು ಕ್ರಮವನ್ನು ಅವರು ಒಪ್ಪಿಕೊಂಡಿದ್ದಾರೆ. ಈ ಶಿಕ್ಷೆ ನ್ಯಾಯಯುವಾಗಿದೆ ಎಂದು ಹೇಳಿದ್ದಾರೆ. ಬೇರ್​ಸ್ಟೋ​ ಅವರ ವಿವಾದಾತ್ಮಕ ಔಟ್​ ತೀರ್ಪಿನ ಹಿನ್ನೆಲೆಯಲ್ಲಿ ಕೋಪಗೊಂಡ ಸದಸ್ಯರು, ಆಸೀಸ್​ ಆಟಗಾರರು ಡ್ರೆಸಿಂಗ್​ ರೂಮ್​ಗೆ ತೆರಳುತ್ತಿದ್ದ ವೇಳೆ ನಿಂದಿಸಿದ್ದರು.

ಇಲ್ಲಿನ ಐತಿಹಾಸಿಕ ಲಾರ್ಡ್ಸ್ ಕ್ರಿಕೆಟ್​ ಮೈದಾನದಲ್ಲಿ ಭಾನುವಾರ ಅಂತ್ಯ ಕಂಡ ಪಂದ್ಯದಲ್ಲಿ ಅಂತಿಮ ದಿನ ಬ್ಯಾಟಿಂಗ್​ಗೆ ಇಳಿದ ಬೆನ್​ ಸ್ಟೋಕ್ಸ್​ ಮತ್ತು ಬೆನ್​ ಡೆಕೆಟ್ ಉತ್ತಮ ಇನಿಂಗ್ಸ್​ ಕಟ್ಟಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯತ್ತಿದ್ದರು. ಆದರೆ ಬೆನ್​ ಡೆಕೆಟ್ (83) ರನ್​ ಗಳಿಸಿ ವಿಕೆಟ್​ ಒಪ್ಪಿಸಿದರು. ಆ ಬಳಿಕ ಬಂದ ಅನುಭವಿ ಜಾನಿ ಬೇರ್​ಸ್ಟೋ(Jonny Bairstow) ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದರು. 2 ಬೌಂಡರಿ ಬಾರಿಸಿ ಆಸೀಸ್​ಗೆ ತಲೆನೋವು ತಂದರು. ಇದೇ ವೇಳೆ ಅವರು ಕ್ಯಾಮರೂನ್​ ಗ್ರೀನ್​ ಅವರ ಬೌನ್ಸರ್​ ದಾಳಿಯಿಂದ ತಪ್ಪಿಸಿ ಕ್ರೀಸ್​ ಬಿಟ್ಟು ಮುಂದೆ ಸಾಗಿದರು.

ಜಾನಿ ಬೇರ್​ಸ್ಟೋ ಅವರು ಕ್ರೀಸ್​ ಬಿಟ್ಟದನ್ನು ಕಂಡ ವಿಕೆಟ್​ ಕೀಪರ್​ ಅಲೆಕ್ಸ್ ಕೇರಿ ಕ್ಷಣ ಮಾತ್ರದಲ್ಲಿ ಚೆಂಡನ್ನು ವಿಕೆಟ್​ಗೆ ಎಸೆದರು. ಆಸೀಸ್​ ಆಟಗಾರರು ಔಟ್​ ಎಂದು ಅಂಪೈರ್​ ಬಳಿ ಬಲವಾದ ಮನವಿ ಮಾಡಿದರು. ಆದರೆ ಇಲ್ಲಿ ಏನಾಗುತ್ತಿದೆ?ಯಾಕಾಗಿ ಆಸೀಸ್​ ಆಟಗಾರರು ಔಟ್​ ಮನವಿ ಮಾಡುತ್ತಿದ್ದಾರೆ ಎಂದು ಬೇರ್​ಸ್ಟೋ ಮತ್ತು ಸ್ಟೋಕ್ಸ್​ಗೆ ಅರ್ಥವಾಗದೆ ಆಶ್ಚರ್ಯಚಕಿತರಾಗಿ ನಿಂತರು. ಆಸೀಸ್​ ಮನವಿಯನ್ನು ಮೂರನೇ ಅಂಪೈರ್​ ಪರಿಶೀಲಿಸಿ ಔಟ್​ ಎಂದು ತೀರ್ಪು ಪ್ರಕಟಗೊಂಡಿತು. ಐಸಿಸಿ ನಿಯಮದ ಪ್ರಕಾರ ಬೇರ್​ಸ್ಟೋ ಔಟ್​ ಆಗಿರುವುದರಲ್ಲಿ ಯಾವುದೇ ಲೋಪವಿಲ್ಲ ಅವರು ನಿಯಮದನ್ವಯ ಬಾಲ್​ ಡೆಡ್​ ಆಗುವ ಮುನ್ನವೇ ಕ್ರೀಸ್​ ಬಿಟ್ಟು ಮುಂದೆ ಸಾಗಿದ್ದರು. ಆದರೆ ಇಲ್ಲಿ ಆಸೀಸ್​ ಆಟಗಾರರು ಕ್ರೀಡಾಸ್ಫೂರ್ತಿ ಮರೆದಿಲ್ಲ ಎನ್ನುವುದೇ ಇಲ್ಲಿನ ತರ್ಕವಾಗಿತ್ತು.

ಇದನ್ನೂ ಓದಿ IND vs PAK | ಅಂಪೈರ್‌ ಔಟ್‌ ಕೊಡುವ ಮೊದಲೇ ಕ್ರಿಸ್‌ ತೊರೆದ ಫಖರ್‌ ಜಮಾನ್‌ , ಕ್ರೀಡಾಸ್ಫೂರ್ತಿಗೆ ಮೆಚ್ಚುಗೆ

ಇದೇ ವಿಚಾರವಾಗಿ ಇಂಗ್ಲೆಂಡ್​ ನಾಯಕ ಬೆನ್​ ಸ್ಟೋಕ್ಸ್​ ಪಂದ್ಯದ ಬಳಿಕ ಅಂಪೈರ್​ ತೀರ್ಪಿನಲ್ಲಿ ಯಾವುದೇ ಬೇಸರವಿಲ್ಲ ಆದರೆ ಆಸೀಸ್​ ಆಟಗಾರರು ಗೆಲುವಿಗಾಗಿ ಕ್ರೀಡಾಸ್ಫೂರ್ತಿ ಮರೆತಿರುವುದು ನಿಜಕ್ಕೂ ಬೇಸರ ತಂದಿದೆ. ನಾವು ಈ ರೀತಿಯಲ್ಲಿ ಪಂದ್ಯವನ್ನು ಯಾವುದೇ ಕಾರಣಕ್ಕೂ ಗೆಲ್ಲಲು ಬಯಸುವುದಿಲ್ಲ ಎಂದು ಹೇಳಿದ್ದರು. ಸ್ಟೋಕ್ಸ್​ ಅವರ ಮಾತನ್ನು ಒಪ್ಪಿಕೊಂಡಿರುವ ಪ್ರಧಾನಿ ರಿಷಿ ಸುನಕ್‌, ಆಸೀಸ್​ ಆಟಗಾರರು ನಿಜಕ್ಕೂ ಕ್ರೀಡಾಸ್ಫೂರ್ತಿಗೆ ವಿರುದ್ಧದವಾದ ಆಟವನ್ನು ತೋರ್ಪಡಿಸಿದ್ದಾರೆ ಎಂದು ಹೇಳಿರುವುದಾಗಿ ಲಂಡನ್​ನ ಕ್ರೀಡಾ ಪ್ರತಿಕೆಯೊಂದು ವರದಿ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಮುಂಬೈ ಕಳಪೆ ಪ್ರದರ್ಶನಕ್ಕೆ ಪಾಂಡ್ಯ ಅಲ್ಲ ರೋಹಿತ್​ ಕಾರಣ ಎಂದ ಹರ್ಭಜನ್ ಸಿಂಗ್​

IPL 2024: ಮುಂಬೈ ಇಂಡಿಯನ್ಸ್​ ದೊಡ್ಡ ಬಳಗವನ್ನು ಹೊಂದಿದೆ. ನಾನು ಆ ತಂಡಕ್ಕೆ ಆಡಿದ್ದೇನೆ. ಮ್ಯಾನೇಜ್ಮೆಂಟ್ ಉತ್ತಮವಾಗಿದೆ. ತಂಡವನ್ನು ಉತ್ತಮವಾಗಿ ನಡೆಸುತ್ತದೆ. ಆದರೆ ಈ ನಿರ್ಧಾರವು ಹಿನ್ನಡೆಯನ್ನುಂಟು ಮಾಡಿದೆ. ಬಹುಶಃ ಭವಿಷ್ಯವನ್ನು ಹುಡುಕುವ ಆಲೋಚನೆ ಇತ್ತು. ಅವರು ಒಗ್ಗಟ್ಟಾಗಿ ಕಾಣದ ಕಾರಣ ಅದು ತಂಡದೊಂದಿಗೆ ಸರಿಯಾಗಿ ಕೆಲಸ ಮಾಡಲಿಲ್ಲ ಎಂದು ತೋರುತ್ತದೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರಲ್ಲಿ ಮುಂಬೈ ಇಂಡಿಯನ್ಸ್ ತಂಡ ನೀರಸ ಪ್ರದರ್ಶನ ತೋರಿದೆ. ಆಡಿರುವ 14 ಪಂದ್ಯಗಳಲ್ಲಿ ಕೇವಲ 4ರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದೆ. ಐದು ಬಾರಿಯ ಚಾಂಪಿಯನ್ ತಂಡದ ನಿರಾಶಾದಾಯಕ ಪ್ರದರ್ಶನದ ಬಗ್ಗೆ ಜೋರು ಚರ್ಚೆಗಳು ನಡೆದಿವೆ. ಫ್ರಾಂಚೈಸಿಯ ಅಭಿಮಾನಿಗಳು ಮತ್ತು ಕೆಲವು ಪಂಡಿತರು ಎಂಐ ನಾಯಕ ಹಾರ್ದಿಕ್ ಪಾಂಡ್ಯ ಅವರ ಸಾಮಾನ್ಯ ನಾಯಕತ್ವದ ಕೌಶಲ್ಯಕ್ಕಾಗಿ ಅವರನ್ನು ಟೀಕಿಸಿದ್ದಾರೆ. ಅವರ ಹುಂಬತನದಿಂದಾಗಿ ತಂಡ ಸೋತಿದೆ ಎಂಬುದಾಗಿ ಎಲ್ಲರೂ ಹೇಳಿಕೆ ನೀಡಿದ್ದಾರೆ. ಇದೀಗ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಬೇರೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಾಂಡ್ಯ ಬೆಂಬಲಕ್ಕೆ ನಿಂತ ಅವರು ಸೋಲಿಗೆ ರೋಹಿತ್​ ಶರ್ಮಾ ಕಾರಣ ಎಂದು ಹೇಳಿದ್ದಾರೆ.

ಐಪಿಎಲ್ 2024 ಕ್ಕೆ ಮುಂಚಿತವಾಗಿ ಪಾಂಡ್ಯ ಅವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯಿಂದ ಮುಂಬೈ ಇಂಡಿಯನ್ಸ್ ದಾಖಲೆಯ ಒಪ್ಪಂದಕ್ಕೆ ಖರೀದಿಸಿತ್ತು. ನಂತರ, ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಮುಂಬೈ ನಾಯಕನನ್ನಾಗಿ ಮಾಡಲಾಯಿತು. ಈ ವೇಳೆ ಅಭಿಮಾನಿಗಳಿಂದ ಕೆಟ್ಟ ಪ್ರತಿಕ್ರಿಯೆ ವ್ಯಕ್ತಗೊಂಡಿತು. ಈ ಕುರಿತ ಕೋಲಾಹಲ ಉಂಟಾಯಿತು. ಅದಕ್ಕೆ ತಕ್ಕ ಹಾಗೆ ತಂಡ ಕೆಟ್ಟದಾಗಿ ಸೋತಿತು. ಎಂಐ ಶಿಬಿರದ ಭಾಗವಾಗಿದ್ದ ಹರ್ಭಜನ್ ಸಿಂಗ್ ಈ ಕುರಿತು ಮಾತನಾಡಿದ್ದು, ಮುಂದಿನ ಋತುವಿನಲ್ಲಿ ಬಲವಾಗಿ ಪುಟಿದೇಳಲು ಪಾಂಡ್ಯ ಮತ್ತು ಮ್ಯಾನೇಜ್ಮೆಂಟ್ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದೇ ವೇಳೆ ರೋಹಿತ್ ಶರ್ಮಾ ಗೆಲುವಿನ ಕೆಚ್ಚು ತೋರಿಲ್ಲ ಎಂಬುದಾಗಿ ಹೇಳಿಕೆ ನೀಡಿದ್ದಾರೆ.

ಮುಂಬೈ ಇಂಡಿಯನ್ಸ್​ ದೊಡ್ಡ ಬಳಗವನ್ನು ಹೊಂದಿದೆ. ನಾನು ಆ ತಂಡಕ್ಕೆ ಆಡಿದ್ದೇನೆ. ಮ್ಯಾನೇಜ್ಮೆಂಟ್ ಉತ್ತಮವಾಗಿದೆ. ತಂಡವನ್ನು ಉತ್ತಮವಾಗಿ ನಡೆಸುತ್ತದೆ. ಆದರೆ ಈ ನಿರ್ಧಾರವು ಹಿನ್ನಡೆಯನ್ನುಂಟು ಮಾಡಿದೆ. ಬಹುಶಃ ಭವಿಷ್ಯವನ್ನು ಹುಡುಕುವ ಆಲೋಚನೆ ಇತ್ತು. ಅವರು ಒಗ್ಗಟ್ಟಾಗಿ ಕಾಣದ ಕಾರಣ ಅದು ತಂಡದೊಂದಿಗೆ ಸರಿಯಾಗಿ ಕೆಲಸ ಮಾಡಲಿಲ್ಲ ಎಂದು ತೋರುತ್ತದೆ. ಇಷ್ಟು ದೊಡ್ಡ ತಂಡವಾಗಿದ್ದು ನನ್ನ ಹಳೆಯ ತಂಡವು ಇಂತಹ ಕಳಪೆ ಫಲಿತಾಂಶಗಳನ್ನು ಎದುರಿಸುತ್ತಿರುವುದನ್ನು ನೋಡಿ ನನಗೆ ನೋವಾಗುತ್ತದೆ ಎಂದು ಹರ್ಭಜನ್ ಹೇಳಿದ್ದಾರೆ.

ಇದನ್ನೂ ಓದಿ: Harbhajan Singh : ಭಾರತ ತಂಡದ ಕೋಚ್ ಆಗಲು ಉತ್ಸಾಹ ತೋರಿದ ಹರ್ಭಜನ್​ ಸಿಂಗ್​

ಬಹುಶಃ ನಿರ್ಧಾರದ ಸಮಯ ಸರಿಯಾಗಿರಲಿಲ್ಲ. ಒಂದು ವರ್ಷದ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದ್ದರೆ ಉತ್ತಮವಾಗುತ್ತಿತ್ತು. ಇದು ಹಾರ್ದಿಕ್ ಅವರ ತಪ್ಪಲ್ಲ, ಅವರು ಜಿಟಿಯಲ್ಲಿ ನಿಜವಾಗಿಯೂ ಉತ್ತಮವಾಗಿ ನಾಯಕರಾಗಿದ್ದರು. ನಾಯಕ ಯಾರೇ ಆಗಿರಲಿ ಆಟಗಾರರನ್ನು ಒಗ್ಗಟ್ಟಾಗಿಡುವುದು ಹಿರಿಯ ಆಟಗಾರರ ಕರ್ತವ್ಯ. ಕ್ಯಾಪ್ಟನ್ ಗಳು ಬರುತ್ತಾರೆ ಮತ್ತು ಹೋಗುತ್ತಾರೆ. ಆದರೆ ಅವರು ಒಂದು ತಂಡದಂತೆ ಆಡಲಿಲ್ಲ, “ಎಂದು ಸಿಂಗ್ ಹೇಳಿದರು.

2024ರ ಟಿ20 ವಿಶ್ವಕಪ್ ಕಡೆಗೆ ಗಮನ

ಐಪಿಎಲ್ 2024 ತನ್ನ ಟೂರ್ನಿಯ ಅಂತ್ಯವನ್ನು ತಲುಪಿದ್ದು, ಪ್ಲೇಆಫ್ ಹಂತಗಳು ಸಮೀಪಿಸುತ್ತಿರುವುದರಿಂದ, ಗಮನವು ಶೀಘ್ರದಲ್ಲೇ ಐಸಿಸಿ ಟಿ 20 ವಿಶ್ವಕಪ್ 2024 ರತ್ತ ತಿರುಗುತ್ತದೆ. ಜೂನ್ 2ರಿಂದ ಟೂರ್ನಿ ಆರಂಭವಾಗಲಿದ್ದು, ಭಾರತ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಪಾಂಡ್ಯ ಉಪನಾಯಕರಾಗಿದ್ದಾರೆ. ಶುಬ್ಮನ್ ಗಿಲ್ ಮತ್ತು ರಿಂಕು ಸಿಂಗ್ ಅವರಂತಹ ಆಟಗಾರರು 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರಿಂದ ಕೆಲವೊಂದು ಪ್ರಶ್ನೆಗಳು ಉಳಿದುಕೊಂಡಿವೆ.

Continue Reading

ಕ್ರೀಡೆ

Harbhajan Singh : ಭಾರತ ತಂಡದ ಕೋಚ್ ಆಗಲು ಉತ್ಸಾಹ ತೋರಿದ ಹರ್ಭಜನ್​ ಸಿಂಗ್​

Harbhajan Singh: ಇತ್ತೀಚೆಗೆ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರ ಹೆಸರು ಉನ್ನತ ಹುದ್ದೆಗೆ ಕೇಳಿ ಬಂದಿತ್ತು. ಗಂಭೀರ್ ಈ ಸ್ಥಾನಕ್ಕೆ ಅಗತ್ಯವಿರುವ ಎಲ್ಲಾ ಮಾನದಂಡಗಳನ್ನು ಪೂರೈಸದಿದ್ದರ, ಐಪಿಎಲ್ 2024 ರಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಪ್ರಗತಿಯಲ್ಲಿ ಅವರ ಮಾರ್ಗದರ್ಶನವು ಪ್ರಮುಖ ಪಾತ್ರ ವಹಿಸಿದೆ. ಇದೀಗ ಹರ್ಭಜನ್ ಅವರು ಆಟಗಾರರಿಗೆ ಆಟದ ತಾಂತ್ರಿಕತೆಗಳನ್ನು ಕಲಿಸುವುದಕ್ಕಿಂತ ಹೆಚ್ಚಾಗಿ ಕೆಲಸವು ಕೌಶಲ್ಯ ನಿರ್ವಹಣೆ ಅಗತ್ಯ ಎಂದು ಒತ್ತಿ ಹೇಳಿದ್ದರು.

VISTARANEWS.COM


on

Harbhajan Singh
Koo

ಬೆಂಗಳೂರು: ಟಿ20 ವಿಶ್ವ ಕಪ್​ (T20 world cup 2024) ಬಳಿಕ ನಡೆಯಲಿರುವ ಭಾರತ ಕ್ರಿಕೆಟ್ ತಂಡದ ಮುಂದಿನ ಮುಖ್ಯ ಕೋಚ್ ಆಯ್ಕೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು, ಊಹಾಪೋಹಗಳು ನಡೆಯುತ್ತಿವೆ. ರಾಹುಲ್ ದ್ರಾವಿಡ್ (Rahul Dravid) ಅವರ ಅಧಿಕಾರಾವಧಿ 2024ರ ಟಿ20 ವಿಶ್ವಕಪ್ ಬಳಿಕ ಕೊನೆಗೊಳ್ಳಲಿದೆ. ದ್ರಾವಿಡ್ ಈ ಸ್ಥಾನಕ್ಕೆ ಮರು ಅರ್ಜಿ ಸಲ್ಲಿಸುವಲ್ಲಿ ಕನಿಷ್ಠ ಆಸಕ್ತಿ ತೋರಿಸಿದ್ದಾರೆ. ಹೀಗಾಗಿ ಹೊಸಬರ ನೇಮಕ ಅನಿವಾರ್ಯ. ಏತನ್ಮಧ್ಯೆ ಭಾರತ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ (Harbhajan Singh) ಟೀಮ್ ಇಂಡಿಯಾದ ಕೋಚ್ ಹುದ್ದೆಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರ ಹೆಸರು ಉನ್ನತ ಹುದ್ದೆಗೆ ಕೇಳಿ ಬಂದಿತ್ತು. ಗಂಭೀರ್ ಈ ಸ್ಥಾನಕ್ಕೆ ಅಗತ್ಯವಿರುವ ಎಲ್ಲಾ ಮಾನದಂಡಗಳನ್ನು ಪೂರೈಸದಿದ್ದರ, ಐಪಿಎಲ್ 2024 ರಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಪ್ರಗತಿಯಲ್ಲಿ ಅವರ ಮಾರ್ಗದರ್ಶನವು ಪ್ರಮುಖ ಪಾತ್ರ ವಹಿಸಿದೆ. ಇದೀಗ ಹರ್ಭಜನ್ ಅವರು ಆಟಗಾರರಿಗೆ ಆಟದ ತಾಂತ್ರಿಕತೆಗಳನ್ನು ಕಲಿಸುವುದಕ್ಕಿಂತ ಹೆಚ್ಚಾಗಿ ಕೆಲಸವು ಕೌಶಲ್ಯ ನಿರ್ವಹಣೆ ಅಗತ್ಯ ಎಂದು ಒತ್ತಿ ಹೇಳಿದ್ದರು.

“ನಾನು ಅರ್ಜಿ ಸಲ್ಲಿಸುತ್ತೇನೋ ಇಲ್ಲವೋ ನನಗೆ ಗೊತ್ತಿಲ್ಲ. ಕೋಚಿಂಗ್ ವಿಭಾಗದ ಇಂಡಿಯಾ ಮ್ಯಾನ್ ಮ್ಯಾನೇಜ್ಮೆಂಟ್​ಗೆ ಸಂಬಂಧಿಸಿದೆ, ಆಟಗಾರರಿಗೆ ಹೇಗೆ ಆಡಬೇಕು ಮತ್ತು ಗೆಲುವಿನ ರಥವನ್ನು ಹೇಗೆ ಎಳೆಯಬೇಕೆಂದು ಕಲಿಸುವ ಕೆಲಸ ಅದಲ್ಲ. ಎಲ್ಲರಿಗೂ ಅದು ಚೆನ್ನಾಗಿ ತಿಳಿದಿದೆ. ಅವರಿಗೆ ಕೆಲವು ಮಾರ್ಗದರ್ಶನ ನೀಡಬೇಕಾಗುತ್ತದೆ. ಕ್ರಿಕೆಟ್ ನನಗೆ ತುಂಬಾ ನೀಡಿದೆ ಮತ್ತು ಅದನ್ನು ಹಿಂತಿರುಗಿಸಲು ನನಗೆ ಅವಕಾಶ ಸಿಕ್ಕರೆ, ನಾನು ಹೆಚ್ಚು ಸಂತೋಷಪಡುತ್ತೇನೆಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

ಇದೊಂದು ಅದ್ಭುತ ಅವಕಾಶ: ಜಸ್ಟಿನ್ ಲ್ಯಾಂಗರ್

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ ಹಾಗೂ ಆಸ್ಟ್ರೇಲಿಯಾದ ಮಾಜಿ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಅವರ ಹೆಸರುಗಳು ಕೇಳಿ ಬರುತ್ತಿವೆ. ಲ್ಯಾಂಗರ್ ವಿಶೇಷವಾಗಿ ಭಾರತೀಯ ತಂಡದೊಂದಿಗೆ ಕೆಲಸ ಮಾಡಲು ತಮ್ಮ ಮುಕ್ತತೆಯ ಬಗ್ಗೆ ಮಾತನಾಡಿದ್ದಾರೆ. ಟೀಮ್ ಇಂಡಿಯಾ ಕೋಚ್ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಭಾರತವು ಕ್ರಿಕೆಟ್ ಪ್ರೇಮಿ ರಾಷ್ಟ್ರವಾಗಿರುವುದರಿಂದ ಆ ಕೆಲಸದಲ್ಲಿ ಉಂಟಾಗುವ ಅಪಾರ ಒತ್ತಡವನ್ನು ಎತ್ತಿ ತೋರಿಸಿದರು.

ಇದನ್ನೂ ಓದಿ: IPL 2024 : ಕೊಹ್ಲಿಯನ್ನು ಗಂಭೀರ್ ಅಪ್ಪಿಕೊಂಡಿದ್ದು ಫೇರ್​ಪ್ಲೇ ಅವಾರ್ಡ್​ಗಾಗಿಯಾ? ಅವರ ಮಾತಲ್ಲೇ ಕೇಳಿ

“ಭಾರತೀಯ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರನಾಗಿರುವುದು ಕ್ರಿಕೆಟ್​ನಲ್ಲಿ ಬಹುತೇಕ ದೊಡ್ಡ ಕೆಲಸವಾಗಿದೆ. ಒಂದು, ಕ್ರಿಕೆಟ್​​ನ ದೊಡ್ಡ ಕೆಲಸದಿಂದಾಗಿ ಭಾರಿ ನಿರೀಕ್ಷೆ ಇರುತ್ತದೆ. ಇದು ಒಂದು ದೊಡ್ಡ ಸವಾಲಾಗಿದೆ. ಇದು ತುಂಬಾ ಮೋಜಿನ ಸಂಗತಿಯಾಗಿದೆ ಮತ್ತು ಐಸಿಸಿ ಪ್ರಶಸ್ತಿಗಳನ್ನು ಗೆಲ್ಲಲು ಇದು ಅದ್ಭುತ ಅವಕಾಶವಾಗಿದೆ”ಎಂದು ಲ್ಯಾಂಗರ್ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

IPL 2024 : ಕೊಹ್ಲಿಯನ್ನು ಗಂಭೀರ್ ಅಪ್ಪಿಕೊಂಡಿದ್ದು ಫೇರ್​ಪ್ಲೇ ಅವಾರ್ಡ್​ಗಾಗಿಯಾ? ಅವರ ಮಾತಲ್ಲೇ ಕೇಳಿ

IPL 2024: ಕೆಕೆಆರ್ ಮಾರ್ಗದರ್ಶಕರಾಗಿರುವ ಗಂಭೀರ್​ ಫೇರ್​ಪ್ಲೇ ಪ್ರಶಸ್ತಿಗಾಗಿ ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದ್ದರು. ಆದರೆ ತಂಡವು ಇನ್ನೂ ಈ ರ್ಯಾಂಕ್​ ಪಟ್ಟಿಯಲ್ಲಿ ಕೆಳಗಿದೆ. ಈ ಕುರಿತು ಮಾತನಾಡಿದ ಅವರು ಜನಪ್ರಿಯ ಕ್ರಿಕೆಟಿಗ ಅಥವಾ ತಂಡವಾಗುವ ಬದಲು ಐಪಿಎಲ್ ಟ್ರೋಫಿಯನ್ನು ಗೆಲ್ಲುವುದೇ ಆದ್ಯತೆ ಎಂದು ಹೇಳಿದ್ದಾರೆ.

VISTARANEWS.COM


on

Virat kohli
Koo

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ನಲ್ಲಿ ಉತ್ತಮ ಪ್ರಯತ್ನಗಳ ಹೊರತಾಗಿಯೂ ಕೆಕೆಆರ್ ತಂಡು ಫೇರ್​ಪ್ಲೇ ಪ್ರಶಸ್ತಿ ಗೆಲ್ಲಲು ಸಾಧ್ಯವಿಲ್ಲ ಎಂದು ಭಾರತದ ಮಾಜಿ ಆರಂಭಿಕ ಆಟಗಾರ ಮತ್ತು ಕೋಲ್ಕತಾ ನೈಟ್ ರೈಡರ್ಸ್ (KKR) ಮಾರ್ಗದರ್ಶಕ ಗೌತಮ್ ಗಂಭೀರ್ (Gautam Gambhir) ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ, ಕೋಲ್ಕತಾ ನೈಟ್ ರೈಡರ್ಸ್ ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರ ಲೀಗ್ ಹಂತದಲ್ಲಿ ಫೇರ್​ಪ್ಲೇ ಪ್ರಶಸ್ತಿ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿದೆ.

ಕೆಕೆಆರ್ ಮಾರ್ಗದರ್ಶಕರಾಗಿರುವ ಗಂಭೀರ್​ ಫೇರ್​ಪ್ಲೇ ಪ್ರಶಸ್ತಿಗಾಗಿ ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದ್ದರು. ಆದರೆ ತಂಡವು ಇನ್ನೂ ಈ ರ್ಯಾಂಕ್​ ಪಟ್ಟಿಯಲ್ಲಿ ಕೆಳಗಿದೆ. ಈ ಕುರಿತು ಮಾತನಾಡಿದ ಅವರು ಜನಪ್ರಿಯ ಕ್ರಿಕೆಟಿಗ ಅಥವಾ ತಂಡವಾಗುವ ಬದಲು ಐಪಿಎಲ್ ಟ್ರೋಫಿಯನ್ನು ಗೆಲ್ಲುವುದೇ ಆದ್ಯತೆ ಎಂದು ಹೇಳಿದ್ದಾರೆ. ಈ ಹೇಳಿಕೆಯಿಂದಾಗಿ ಅವರು ಕೊಹ್ಲಿಯನ್ನು ಇತ್ತೀಚೆಗೆ ತಬ್ಬಿಕೊಂಡಿರುವುದು ಫೇರ್​ಪ್ಲೇ ಪ್ರಶಸ್ತಿಗಾಗಿಯೇ ಎಂಬ ಅನುಮಾನಗಳು ಸೃಷ್ಟಿಯಾಗಿವೆ.

ಕೊಹ್ಲಿಯನ್ನು ತಬ್ಬಿದ್ದರೂ ಅಂಕ ಬರಲಿಲ್ಲ ಎಂದ ಗಂಭೀರ್​

ಪರಸ್ಪರ ತಬ್ಬಿಕೊಂಡ ಹೊರತಾಗಿಯೂ ಫೇರ್ ಪ್ಲೇ ಪ್ರಶಸ್ತಿಗಳಲ್ಲಿ ತಮ್ಮ ತಂಡದ ಸ್ಥಾನದ ಬಗ್ಗೆ ಗಂಭೀರ್ ನಿರಾಶೆ ವ್ಯಕ್ತಪಡಿಸಿದ್ದರು. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಘಟನೆಯಿಂದಾಗಿ ನ್ಯಾಯೋಚಿತ ಫೇರ್​ಪ್ಲೇ ಅಂಕಗಳಲ್ಲಿ ಹೆಚ್ಚಿನ ಶ್ರೇಯಾಂಕ ಅವರು ನಿರೀಕ್ಷಿಸಿದ್ದರು. ಆದರೆ ತಂಡಗಳು ನ್ಯಾಯೋಚಿತ (ಫೇರ್​ಪ್ಲೇ) ಆಟದ ಅಂಕಗಳಲ್ಲಿ ಕೊನೆಯ ಸ್ಥಾನದಲ್ಲಿವೆ.

ಇದನ್ನೂ ಓದಿ: IPL 2024 : ಕೊಹ್ಲಿಯನ್ನೂ ಟೀಕಿಸುವುದರ ನಡುವೆಯೂ ಆರ್​​ಸಿಬಿ ಕಪ್​ ಗೆಲ್ಲುತ್ತದೆ ಎಂದ ಗವಾಸ್ಕರ್​

ಪ್ರಾಮಾಣಿಕವಾಗಿ ಹೇಳುವುದಾದರೆ ಚಿನ್ನಸ್ವಾಮಿಯಲ್ಲಿ ನಡೆದ ಘಟನೆಯ ನಂತರ ನಾವು ಫೇರ್​ಪ್ಲೇ ಟೇಬಲ್​​ನಲ್ಲಿ ಅಗ್ರಸ್ಥಾನದಲ್ಲಿರುತ್ತೇವೆ ಎಂದು ನಾನು ಭಾವಿಸಿದ್ದೆ. ನಾನು ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಉತ್ತಮವಾಗಿರಲು ಯತ್ನಿಸಿದ್ದೇವೆ ಎಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಮ್ಮ ಮತ್ತು ವಿರಾಟ್ ಕೊಹ್ಲಿ ನಡುವಿನ ಅಪ್ಪುಗೆಯನ್ನು ಉಲ್ಲೇಖಿಸಿ ಗಂಭೀರ್ ಹೇಳಿದ್ದಾರೆ.

ಫೇರ್ ಪ್ಲೇ ಪ್ರಶಸ್ತಿಯನ್ನು ಗೆಲ್ಲಲು ಕೆಕೆಆರ್ ಸಹ ಮಾಲೀಕ ಶಾರುಖ್ ಖಾನ್ ಒತ್ತಾಯಿಸಿದ್ದರೇ ಎಂದು ಅಶ್ವಿನ್ ಕೇಳಿದ ಪ್ರಶ್ನೆಗೆ, ಕೆಕೆಆರ್ ಮಾರ್ಗದರ್ಶಕ ನೇರ ಉತ್ತರ ನೀಡಲಿಲ್ಲ. ನಾನು ಅವರೊಂದಿಗೆ ಇರುವವರೆಗೂ ಆ ತಂಡ ಪ್ರಶಸ್ತಿ ಗೆಲ್ಲುವುದಿಲ್ಲ ಎಂದು ಒತ್ತಿ ಹೇಳಿದ್ದಾರೆ.

ಫೇರ್​ಪ್ಲೇ ಪ್ರಶಸ್ತಿ ಗೆಲ್ಲಬೇಕಾದರೆ ಡಗ್​ಔಟ್​ನಲ್ಲಿ ಬೇರೆ ಯಾರಾದರೂ ಬೇಕು. ನಾನು ಅಲ್ಲಿರುವವರೆಗೂ ನಿಮಗೆ ಪ್ರಶಸ್ತಿ ಸಿಗುವುದಿಲ್ಲ. ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾದದ್ದನ್ನು ಮಾಡಿದ್ದೇನೆ. ಆದರೂ, ಫೇರ್ ಪ್ಲೇ ಪ್ರಶಸ್ತಿಯಲ್ಲಿ ನಾವು 10 ನೇ ಸ್ಥಾನದಲ್ಲಿದ್ದೇವೆ ಎಂದು ಗಂಭೀರ್ ಹೇಳಿಕೊಂಡಿದ್ದಾರೆ.

Continue Reading

ಕ್ರೀಡೆ

IPL 2024 : ಕೊಹ್ಲಿಯನ್ನೂ ಟೀಕಿಸುವುದರ ನಡುವೆಯೂ ಆರ್​​ಸಿಬಿ ಕಪ್​ ಗೆಲ್ಲುತ್ತದೆ ಎಂದ ಗವಾಸ್ಕರ್​

IPL 2024: ಕೋಲ್ಕತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪ್ಲೇ ಆಫ್ಗೆ ಅರ್ಹತೆ ಪಡೆದಿವೆ. ಅಂಕಪಟ್ಟಿಯಲ್ಲಿ ಕೆಕೆಆರ್ ಅಗ್ರಸ್ಥಾನದಲ್ಲಿದ್ದರೆ, ಎಸ್ಆರ್​ಎಚ್, ಆರ್​ಆರ್​ ಮತ್ತು ಆರ್​ಸಿಬಿ ನಂತರದ ಸ್ಥಾನಗಳಲ್ಲಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ (ಮೇ 21) ನಡೆಯಲಿರುವ ಕ್ವಾಲಿಫೈಯರ್ 1ರಲ್ಲಿ ಕೆಕೆಆರ್ ಮತ್ತು ಎಸ್ಆರ್​ಎಚ್​ ಮುಖಾಮುಖಿಯಾಗಲಿದೆ.

VISTARANEWS.COM


on

IPL 2024
Koo

ನವದೆಹಲಿ: ಭಾರತದ ಮಾಜಿ ನಾಯಕ ಹಾಗೂ ಕ್ರಿಕೆಟ್​ ದಂತಕತೆ ಸುನಿಲ್ ಗವಾಸ್ಕರ್ (Sunil Gavaskar) ಅವರು ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ (IPL 2024) ಗೆಲ್ಲುವ ನೆಚ್ಚಿನ ತಂಡಗಳನ್ನು ಆಯ್ಕೆ ಮಾಡಿದ್ದಾರೆ. ಪಂದ್ಯಾವಳಿಯ 17 ನೇ ಆವೃತ್ತಿಯು ಅಂತಿಮ ಹಂತದಲ್ಲಿದ್ದು ಪ್ಲೇಆಫ್​ ಪಂದ್ಯಗಳು ಆಂಭಗೊಂಡಿವೆ. ಅಂತೆಯೇ ಪ್ರಶಸ್ತಿ ಯಾರು ಗೆಲ್ಲುತ್ತಾರೆ ಎಂಬ ನಿರ್ಧಾರವು ಮುಂಬರುವ ಭಾನುವಾರ (ಮೇ 26) ಆಗಲಿದೆ. ಏತನ್ಮಧ್ಯೆ ಗವಾಸ್ಕರ್​ ಆರ್​ಸಿಬಿಯನ್ನು ಕಪ್ ಗೆಲ್ಲುವ ತಂಡ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಯಾಕೆಂದರೆ ಸದಾ ಕೊಹ್ಲಿಯನ್ನು ಬೈಯುವ ಅವರು ಈ ಬಾರಿ ಅವರ ತಂಡ್ಕೆ ಅದೃಷ್ಟ ಕಾದಿದೆ ಎಂದಿದ್ದಾರೆ.

ಕೋಲ್ಕತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪ್ಲೇ ಆಫ್ಗೆ ಅರ್ಹತೆ ಪಡೆದಿವೆ. ಅಂಕಪಟ್ಟಿಯಲ್ಲಿ ಕೆಕೆಆರ್ ಅಗ್ರಸ್ಥಾನದಲ್ಲಿದ್ದರೆ, ಎಸ್ಆರ್​ಎಚ್, ಆರ್​ಆರ್​ ಮತ್ತು ಆರ್​ಸಿಬಿ ನಂತರದ ಸ್ಥಾನಗಳಲ್ಲಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ (ಮೇ 21) ನಡೆಯಲಿರುವ ಕ್ವಾಲಿಫೈಯರ್ 1ರಲ್ಲಿ ಕೆಕೆಆರ್ ಮತ್ತು ಎಸ್ಆರ್​ಎಚ್​ ಮುಖಾಮುಖಿಯಾಗಲಿದೆ. ಎಲಿಮಿನೇಟರ್​ನಲ್ಲಿ ಆರ್​ಆರ್​​ ಮತ್ತು ಆರ್​ಸಿಬಿ ಪರಸ್ಪರ ಮುಖಾಮುಖಿಯಾಗಲಿವೆ.

ಮೊದಲ ಕ್ವಾಲಿಫೈಯರ್ನಲ್ಲಿ ಗೆದ್ದವರು ಫೈನಲ್​ಗೆ ಅರ್ಹತೆ ಪಡೆಯುತ್ತಾರೆ ಮತ್ತು ಸೋತವರು ಫೈನಲ್​ಗೇರಲು ಮತ್ತೊಂದು ಅವಕಾಶ ಪಡೆಯುತ್ತಾರೆ. ಮತ್ತೊಂದೆಡೆ, ಎಲಿಮಿನೇಟರ್​ನಲ್ಲಿ ಸೋತವರು ಪಂದ್ಯಾವಳಿಯಿಂದ ಹೊರಗುಳಿಯುತ್ತಾರೆ. ವಿಜೇತರು ಫೈನಲ್​ಗಾಗಿ ಸ್ಥಾನಕ್ಕಾಗಿ ಮೊದಲ ಕ್ವಾಲಿಫೈಯರ್ನಲ್ಲಿ ಸೋತವರನ್ನು ಎದುರಿಸುತ್ತಾರೆ.

ಇದನ್ನೂ ಓದಿ: Dwayne Bravo : ಅಫಘಾನಿಸ್ತಾನ ತಂಡದಲ್ಲಿ ದೊಡ್ಡ ಜವಾಬ್ದಾರಿ ವಹಿಸಿಕೊಂಡ ಡ್ವೇನ್ ಬ್ರಾವೊ

ಈ ವರ್ಷ ಯಾವ ತಂಡ ಗೆಲ್ಲುತ್ತದೆ ಎಂಬುದನ್ನು ಮಾತ್ರ ಹೇಳುವಾಗ, ಸುನಿಲ್ ಗವಾಸ್ಕರ್ ಆರ್​ಸಿಬಿಯನ್ನು ಬೆಂಬಲಿಸಿದ್ದಾರೆ. ಮೊದಲ ಕ್ವಾಲಿಫೈಯರ್​ಗೆ ಮುಂಚಿತವಾಗಿ ಸ್ಟಾರ್ ಸ್ಪೋರ್ಟ್ಸ್​ನಲ್ಲಿ ಮಾತನಾಡಿದ ಲೆಜೆಂಡರಿ ಬ್ಯಾಟ್ಸ್ಮನ್, ಬೆಂಗಳೂರು ಮೂಲದ ತಂಡವು ಈ ಋತುವಿನಲ್ಲಿ ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲಲು ಸಜ್ಜಾಗಿದೆ ಎಂದು ಹೇಳಿದರು.

ಐಪಿಎಲ್ 2024 ರಲ್ಲಿ ಆರ್​ಸಿಬಿ ಅದ್ಭುತ ಚೇತರಿಕೆ

ಆರ್​ಸಿಬಿ ತಂಡ ಈ ಋತುವಿನಲ್ಲಿ ಪ್ಲೇಆಫ್ಗೆ ಅರ್ಹತೆ ಪಡೆಯಲು ಎಲ್ಲಾ ಅಡೆತಡೆಗಳನ್ನು ಮೀರಿದೆ. ತಮ್ಮ ಮೊದಲ ಎಂಟು ಪಂದ್ಯಗಳಲ್ಲಿ ಏಳರಲ್ಲಿ ಸೋತ ನಂತರ ಪ್ಲೇಆಫ್​​ಗೆ ಪ್ರವೇಶಿಸುವ ಸಾಧ್ಯತೆಗಳು ಬಹುತೇಕ ಶೂನ್ಯವಾಗಿದ್ದವು. ಪಂದ್ಯಾವಳಿಯ ಅರ್ಧದಷ್ಟು ಹಂತದವರೆಗೆ ಏನೂ ನಡೆಯದ ಕಾರಣ, ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯುವುದು ಬಿಡಿ, ಸ್ಪರ್ಧೆಯನ್ನು ಉತ್ತಮವಾಗಿ ಮುಗಿಸುವುದು ಸಾಧ್ಯವಿರಲಿಲ್ಲ.

ಫಾಫ್ ಡು ಪ್ಲೆಸಿಸ್ ನೇತೃತ್ವದ ತಂಡವು ಗಮನಾರ್ಹ ತಿರುವು ಪಡೆದುಕೊಂಡಿತು. ಸತತ ಆರು ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೆ ಪ್ರವೇಶಿಸಿತು. ಆರು ಪಂದ್ಯಗಳ ಗೆಲುವಿನ ಓಟದಲ್ಲಿ ಅವರು ತಮ್ಮ ಎದುರಾಳಿಗಳ ಮೇಲೆ ಸಂಪೂರ್ಣವಾಗಿ ಪ್ರಾಬಲ್ಯ ಸಾಧಿಸಿದ್ದರು. ಈ ಋತುವಿನಲ್ಲಿ ಎಲ್ಲಾ ರೀತಿಯಲ್ಲೂ ಮುಂದುವರಿಯುವ ಅವಕಾಶಗಳನ್ನು ಕಲ್ಪಿಸಿಕೊಳ್ಳುತ್ತಿದ್ದರು. ಆವೇಗ ಮತ್ತು ಫಾರ್ಮ್ ಆರ್​ಸಿಬಿಯೊಂದಿಗೆ ಇದೆ. ಹೀಗಾಗಿ ಕಪ್ ಗೆಲ್ಲಬಹುದು ಎನ್ನಲಾಗಿದೆ.

Continue Reading
Advertisement
5 foreign coins found in anjanadri temple hundi counting
ಕರ್ನಾಟಕ30 seconds ago

Koppala News: ಅಂಜನಾದ್ರಿ ದೇಗುಲ ಹುಂಡಿ ಎಣಿಕೆ; 5‌ ವಿದೇಶಿ ನಾಣ್ಯಗಳು ಪತ್ತೆ

IPL 2024
ಪ್ರಮುಖ ಸುದ್ದಿ19 mins ago

IPL 2024 : ಮುಂಬೈ ಕಳಪೆ ಪ್ರದರ್ಶನಕ್ಕೆ ಪಾಂಡ್ಯ ಅಲ್ಲ ರೋಹಿತ್​ ಕಾರಣ ಎಂದ ಹರ್ಭಜನ್ ಸಿಂಗ್​

Narendra Modi
ದೇಶ26 mins ago

Narendra Modi: ಡ್ರಮ್‌, ಜಾಗಟೆ ಬಾರಿಸಿ, ಹಾಡು ಹಾಡಿ; ಮತದಾನ ಹೆಚ್ಚಿಸಲು ಸ್ತ್ರೀಯರಿಗೆ ಕರೆ ಕೊಟ್ಟ ಮೋದಿ

Janardhan Reddy
ರಾಜಕೀಯ29 mins ago

Janardhan Reddy: ಮಡದಿಗಾಗಿ ಮರವೇರಿ ಮಾವು ಕಿತ್ತುಕೊಟ್ಟ ರೆಡ್ಡಿ: ವಿಡಿಯೊ ವೈರಲ್

Harbhajan Singh
ಕ್ರೀಡೆ52 mins ago

Harbhajan Singh : ಭಾರತ ತಂಡದ ಕೋಚ್ ಆಗಲು ಉತ್ಸಾಹ ತೋರಿದ ಹರ್ಭಜನ್​ ಸಿಂಗ್​

Tamil Nadu Officers
ದೇಶ1 hour ago

ಐಎಎಸ್‌ ಆಫೀಸರ್‌ ಆಗಿರುವ ಮಾಜಿ ಪತ್ನಿಯಿಂದ ನನ್ನ ಮನೆಗೆ ವಿದ್ಯುತ್‌ ಕಟ್; ಇದು ಐಪಿಎಸ್‌ ಆಫೀಸರ್‌ ಅಳಲು!

Rameshwaram Cafe Blast
ಕರ್ನಾಟಕ1 hour ago

Rameshwaram Cafe Blast: ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

Virat kohli
ಪ್ರಮುಖ ಸುದ್ದಿ2 hours ago

IPL 2024 : ಕೊಹ್ಲಿಯನ್ನು ಗಂಭೀರ್ ಅಪ್ಪಿಕೊಂಡಿದ್ದು ಫೇರ್​ಪ್ಲೇ ಅವಾರ್ಡ್​ಗಾಗಿಯಾ? ಅವರ ಮಾತಲ್ಲೇ ಕೇಳಿ

Phone tapping case and R Ashok demands for CBI investigation
ರಾಜಕೀಯ2 hours ago

Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

Porsche Crash
ದೇಶ2 hours ago

Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು9 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು10 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌