Site icon Vistara News

ಎದ್ದು ನಿಂತು, ಬೆನ್ನು ತಟ್ಟಿ ಕೊಹ್ಲಿಯನ್ನು ಪ್ರಶಂಸಿಸಿದ ರೋಹಿತ್​; ವಿಡಿಯೊ ವೈರಲ್​

Virat And Rohit

ಜೊಹಾನ್ಸ್​ಬರ್ಗ್​: ಭಾರತ ತಂಡ ದಕ್ಷಿಣ ಆಫ್ರಿಕಾ(South Africa vs India, 1st Test) ವಿರುದ್ಧ ಮೊದಲ ಟೆಸ್ಟ್​ ಪಂದ್ಯ ಸೋತರೂ ಕೂಡ ದ್ವಿತೀಯ ಇನಿಂಗ್ಸ್​ನಲ್ಲಿ ಏಕಾಂಗಿಯಾಗಿ ಬ್ಯಾಟಿಂಗ್​ ಹೋರಾಟ ನಡೆಸಿದ ವಿರಾಟ್​ ಕೊಹ್ಲಿಯ(Virat And Rohit) ಸಾಹಸಕ್ಕೆ ತಂಡದ ನಾಯಕ ರೋಹಿತ್​ ಶರ್ಮಾ(rohit sharma) ಮೆಚ್ಚುಗೆ ಸೂಚಿಸಿದ್ದಾರೆ. ಕೊಹ್ಲಿ(virat kohli) 76 ರನ್ ಗಳಿಸಿ ಔಟಾಗಿ ಡ್ರೆಸ್ಸಿಂಗ್​ ರೂಮ್​ಗೆ ಮರಳುವಾಗ ರೋಹಿತ್ ಎದ್ದು ನಿಂತು ಶ್ಲಾಘಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್(viral video) ಆಗಿದೆ.

ಕೊಹ್ಲಿ ಏಕಾಂಗಿ ಹೋರಾಟ

ಒಂದೆಡೆ ವಿಕೆಟ್​ ಬೀಳುತ್ತಿದ್ದರೂ ಕೂಡ ವಿರಾಟ್​ ಕೊಹ್ಲಿ ಕ್ರೀಸ್​ ಕಚ್ಚಿ ನಿಂತು ಎದೆಗುಂದದೆ ರನ್​ ಗಳಿಸುತ್ತಿದ್ದರು. ಆದರೆ ಇವರಿಗೆ ಯಾರೋಬ್ಬರು ಕೂಡ ಸಾಥ್​ ನೀಡಲಿಲ್ಲ. ಕೊಹ್ಲಿಯನ್ನು ಮೈದಾನದಲ್ಲಿ ನೋಡುವಾಗ ಅಸಹಾಯಕರಂತೆ ಕಂಡು ಬಂತು. ಆದರೂ ಛಲ ಬಿಡದ ಕೊಹ್ಲಿ ಇನಿಂಗ್ಸ್​ ಸೋಲನ್ನು ತಪ್ಪಿಸಲು ಪ್ರಯತ್ನಪಟ್ಟರು. ಆದರೆ, ಅಂತಿಮವಾಗಿ ರಬಾಡಗೆ ಕ್ಯಾಚ್​ ನೀಡಿ ವಿಕೆಟ್​ ಒಪ್ಪಿಸಿದರು. ಈ ವಿಕೆಟ್​ ಜಾನ್ಸೆನ್​ ಪಾಲಾಯಿತು. 82 ಎಸೆತ ಎದುರಿಸಿ 12 ಬೌಂಡರಿ ಮತ್ತು ಒಂದು ಸಿಕ್ಸರ್​ ಬಾರಿಸಿದ ಕೊಹ್ಲಿ 76 ರನ್​ ಗಳಿಸಿದರು.

ಪಂದ್ಯ ಸೋತ ನಿರಾಸೆಯಲ್ಲಿ ಬರುತ್ತಿದ್ದ ಕೊಹ್ಲಿಯನ್ನು ರೋಹಿತ್​ ಶರ್ಮಾ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ ಕಾರಣದಿಂದ ಬೆನ್ನು ತಟ್ಟಿ ಪ್ರಶಂಸಿಸಿದ್ದಾರೆ. ಇದನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ. ರೋಹಿತ್​ ಅವರ ಈ ನಡೆಯನ್ನು ನೆಟ್ಟಗರು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ IND vs SA: ದ್ವಿತೀಯ ಪಂದ್ಯಕ್ಕೆ ಜಡೇಜಾ ಲಭ್ಯ; ಆಡುವ ಬಳಗದಲ್ಲಿ ಬದಲಾವಣೆ

ಟೆಸ್ಟ್​ ಸರಣಿ ಮುಗಿದ ಬಳಿಕ ರೋಹಿತ್​-ಕೊಹ್ಲಿ ಟಿ20 ಭವಿಷ್ಯ ನಿರ್ಧಾರ!

2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸೆಮಿಫೈನಲ್​ನಲ್ಲಿ ನಿರ್ಗಮಿಸಿತ್ತು. ಇದಾದ ಬಳಿಕ ರೋಹಿತ್ ಮತ್ತು ಕೊಹ್ಲಿ ಒಂದೇ ಒಂದು ಟಿ20 ಪಂದ್ಯವನ್ನು ಕೂಡ ಇದುವರೆಗೆ ಆಡಿಲ್ಲ. ಅಂದಿನಿಂದಲೂ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಜತೆಗ ಯುವ ಆಟಗಾರರೇ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಮುಂದಿನ ಟಿ20 ವಿಶ್ವಕಪ್​ ಟೂರ್ನಿಯಲ್ಲೂ ಕೊಹ್ಲಿ ಮತ್ತು ರೋಹಿತ್ ಆಡುವುದು ಬಹುತೇಕ ಅನುಮಾನ ಎನ್ನಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿ ಮುಗಿದ ಬಳಿಕ ಉಭಯ ಆಟಗಾರರ ಟಿ20 ಕ್ರಿಕೆಟ್​ ಭವಿಷ್ಯದ ಬಗ್ಗೆ ಸ್ಪಷ್ಟ ಉತ್ತರ ಸಿಗುವ ಸಾಧ್ಯತೆ ಇದೆ. ಟೆಸ್ಟ್​ ಸರಣಿ ಆರಂಭಕ್ಕೂ ಮುನ್ನ ನಡೆದಿದ್ದ ಸುದ್ದಿಗೋಷ್ಠಿಯಲ್ಲಿ ಶೀಘ್ರದಲ್ಲೇ ಇದಕ್ಕೆ ಉತ್ತರ ಸಿಗಲಿದೆ ಎಂದು ರೋಹಿತ್​ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳಿದ್ದರು.

ಇನ್ನೊಂದು ಮೂಲಗಳ ಪ್ರಕಾರ ರೋಹಿತ್​ ಶರ್ಮ ಮತ್ತು ವಿರಾಟ್​ ಕೊಹ್ಲಿ ಟಿ20 ಕ್ರಿಕೆಟ್​ನಿಂದ ಈಗಾಗಲೇ ದೂರ ಉಳಿಯಲು ನಿರ್ಧರಿಸಿದ್ದು ಕೇವಲ ಟೆಸ್ಟ್​ ಮತ್ತು ಏಕದಿನ ಕ್ರಿಕೆಟ್​ಗೆ ಮಾತ್ರ ಗಮನ ನೀಡಲು ನಿರ್ಧರಿಸಿರುವುದಾಗಿ ವರದಿಯೊಂದು ತಿಳಿಸಿದೆ. ಏಕದಿನ ವಿಶ್ವಕಪ್​ ಸೋಲಿನ ಬಳಿಕವೇ ಉಭಯ ಆಟಗಾರರು ಈ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಉಭಯ ಆಟಗಾರರು ಈ ವಿಚಾರವನ್ನು ಅಧಿಕೃತವಾಗಿ ಎಲ್ಲಿಯೂ ಇದುವರೆಗೆ ಹೇಳಿಲ್ಲ.

Exit mobile version