Rohit Sharma: ವಿಮಾನ ನಿಲ್ದಾಣದಿಂದ ಲ್ಯಾಂಬೋರ್ಗಿನಿ ಕಾರು ಚಲಾಯಿಸಿಕೊಂಡು ಹೋದ ರೋಹಿತ್​; ವಿಡಿಯೊ ವೈರಲ್​ - Vistara News

ಕ್ರೀಡೆ

Rohit Sharma: ವಿಮಾನ ನಿಲ್ದಾಣದಿಂದ ಲ್ಯಾಂಬೋರ್ಗಿನಿ ಕಾರು ಚಲಾಯಿಸಿಕೊಂಡು ಹೋದ ರೋಹಿತ್​; ವಿಡಿಯೊ ವೈರಲ್​

Rohit Sharma: ಸದ್ಯ ಭಾರತಕ್ಕೆ ಬಂದಿರುವ ರೋಹಿತ್​ ಮುಂದಿನ ವಾರ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನಾಡಲು ಲಂಕಾಗೆ ಪ್ರಯಾಣಿಸಲಿದ್ದಾರೆ.

VISTARANEWS.COM


on

Rohit Sharma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟಿ20 ವಿಶ್ವಕಪ್​ ಗೆಲುವಿನ ಬಳಿಕ ಕುಟುಂಬ ಸಮೇತರಾಗಿ ವಿದೇಶ ಪ್ರವಾಶ ಕೈಗೊಂಡಿದ್ದ ರೋಹಿತ್​ ಶರ್ಮ(Rohit Sharma), ಇದೀಗ ತವರಿಗೆ ಮರಳಿದ್ದಾರೆ. ಮುಂಬೈಗೆ ಆಗಮಿಸಿದ ರೋಹಿತ್ ವಿಮಾನ ನಿಲ್ದಾಣದಿಂದ​ ತಮ್ಮ ನೆಚ್ಚಿನ ನೀಲಿ ಬಣ್ಣದ ಲ್ಯಾಂಬೋರ್ಗಿನಿ ಕಾರಿನಲ್ಲಿ ಮಗಳು ಮತ್ತು ಪತ್ನಿಯನ್ನು ಕೂರಿಸಿಕೊಂಡು ಮನೆಗೆ ತೆರಳಿದ್ದಾರೆ. ಸ್ವತಃ ರೋಹಿತ್​ ಅವರೇ ಕಾರು ಚಲಾಯಿಸಿಕೊಂಡು ಹೋದ ವಿಡಿಯೊ ವೈರಲ್​(viral video) ಆಗಿದೆ. ಸದ್ಯ ಭಾರತಕ್ಕೆ ಬಂದಿರುವ ರೋಹಿತ್​ ಮುಂದಿನ ವಾರ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನಾಡಲು ಲಂಕಾಗೆ ಪ್ರಯಾಣಿಸಲಿದ್ದಾರೆ.


ಅತಿ ವೇಗದ ಕಾರು ಚಾಲನೆ ಮಾಡಿದ್ದ ರೋಹಿತ್​ ಶರ್ಮಗೆ ಈ ಹಿಂದೆ 3 ಬಾರಿ ಪೊಲೀಸರು ದಂಡ ವಿಧಿಸಿದ್ದರು. ​ಲಂಬೋರ್ಗಿನಿ ಕಾರಿನಲ್ಲಿ ಅವರು ಗಂಟೆಗೆ 200 ಕಿ.ಮೀ ಕಾರು ಚಲಾಯಿಸಿದ್ದರು. ಇದೇ ಕಾರಣಕ್ಕೆ ಅತಿ ವೇಗದ ಚಾಲನೆಯ ಟ್ರಾಫಿಕ್​ ನಿಯಮದ ಅಡಿಯಲ್ಲಿ ಅವರಿಗೆ ಮೂರು ಟ್ರಾಫಿಕ್ ದಂಡದ ಚಲನ್‌ಗಳನ್ನು ನೀಡಲಾಗಿತ್ತು.

ರೋಹಿತ್ ನಾಯಕತ್ವದಲ್ಲಿ, ಜೂನ್​ 29ರಂದು ಬಾರ್ಬಡೋಸ್‌ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳ ಜಯದೊಂದಿಗೆ 11 ವರ್ಷಗಳ ಐಸಿಸಿ ಪ್ರಶಸ್ತಿ ಬರವನ್ನು ಕೊನೆಗೊಳಿಸಿತ್ತು. 2007 ರ ಉದ್ಘಾಟನಾ ಆವೃತ್ತಿಯ ನಂತರ ಇದು ಭಾರತಕ್ಕೆ ಒಲಿದ ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯಾಗಿತ್ತು. ಮೆನ್ ಇನ್ ಬ್ಲೂ ಈ ಹಿಂದೆ ರೋಹಿತ್ ಅವರ ನಾಯಕತ್ವದಲ್ಲಿ ಎರಡು ಫೈನಲ್‌ಗಳನ್ನು ಆಡಿತ್ತು. ಏಕದಿನ ವಿಶ್ವಕಪ್ ಮತ್ತು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್. ಇಲ್ಲಿ ರನ್ನರ್-ಅಪ್ ಸ್ಥಾನ ಗಳಿಸಿತ್ತು.

ಇದನ್ನೂ ಓದಿ Rohit Sharma: ‘ಎಲಾ ಉನ್ನಾರು?’; ತೆಲುಗಿನಲ್ಲಿ ಮಾತನಾಡಿದ ರೋಹಿತ್ ಶರ್ಮ; ವಿಡಿಯೊ ವೈರಲ್​

ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಆರ್​ಸಿಬಿ ಸೇರಲಿದ್ದಾರಾ ರೋಹಿತ್​?


ಮುಂದಿನ ಬಾರಿ ನಡೆಯುವ ಐಪಿಎಲ್​ ಟೂರ್ನಿಯಲ್ಲಿ ರೋಹಿತ್​ ಶರ್ಮ ಆರ್​ಸಿಬಿ ಪರ ಆಡುವ ಸಾಧ್ಯತೆ ಇದೆ ಎಂದು ಸಾಮಾಜಿಕ ಜಾಕಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ರೋಹಿತ್ ಶರ್ಮಗೆ ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್‌ ಪ್ರಾಂಚೈಸಿಯಿಂದ ನಾಯಕತ್ವದ ಆಫರ್‌ಗಳು ಬಂದಿದೆ ಎನ್ನಲಾಗಿದೆ. ಆದರೆ, ರೋಹಿತ್​ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುವ ಆಸಕ್ತಿ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PARIS OLYMPICS 2024 : ಪ್ಯಾರಿಸ್ ಒಲಿಂಪಿಕ್ಸ್​​ ಗ್ರಾಮದಲ್ಲೇ ಮದುವೆ ನಿಶ್ಚಿತಾರ್ಥ ಮಾಡಿಕೊಂಡ ಅಥ್ಲೀಟ್​ಗಳು

PARIS OLYMPICS 2024 : ಈ ಸುದ್ದಿ ಮತ್ತು ಪೋಸ್ಟ್ ಅನ್ನು ಒಲಿಂಪಿಕ್ಸ್​​ ಅಧಿಕೃತ ಎಕ್ಸ್ ಹ್ಯಾಂಡಲ್ ಹಂಚಿಕೊಂಡಿದೆ “ಪ್ಯಾರಿಸ್​ 2024 ಒಲಿಂಪಿಕ್ ಗ್ರಾಮದಲ್ಲಿ ನಡೆದ ಮೊದಲ ಮದುವೆ ಪ್ರಸ್ತಾಪ. ಪಾಬ್ಲೊ ಸಿಮೊನೆಟ್ ಮತ್ತು ಪಿಲಾರ್ ಕ್ಯಾಂಪೊಯ್ ಅರ್ಜೆಂಟೀನಾದ ತಮ್ಮ ಹ್ಯಾಂಡ್​​ಬಾಲ್​ ಮತ್ತು ಹಾಕಿ ತಂಡದ ಸದಸ್ಯರಿಂದ ಅಭಿನಂದನೆಗಳನ್ನು ಪಡೆದುಕೊಂಡರು.

VISTARANEWS.COM


on

PARIS OLYMPICS 2024
Koo

ಪ್ಯಾರಿಸ್ : ಪ್ರೇಮಿಗಳ ನಗರ ಪ್ಯಾರಿಸ್​​ನಲ್ಲಿ 2024ರ (PARIS OLYMPICS 2024) ಒಲಿಂಪಿಕ್ ಕ್ರೀಡಾಕೂಟ ಉದ್ಘಾಟನೆಯಾಗುವ ಮೊದಲೇ ಅಥ್ಲೀಟ್​ಗಳಿಬ್ಬರು ಮದುವೆ ಪ್ರಸ್ತಾಪವನ್ನು ಹಂಚಿಕೊಂಡಿದ್ದಾರೆ. ಅರ್ಜೆಂಟೀನಾ ಪುರುಷರ ಹ್ಯಾಂಡ್​​ಬಾಳ್​ ತಂಡದ ಸ್ಟಾರ್ ಆಟಗಾರ ಪಾಬ್ಲೊ ಸಿಮೊನೆಟ್ ಮತ್ತು ಅರ್ಜೆಂಟೀನಾ ಮಹಿಳಾ ಹಾಕಿ ತಂಡದ ಆಟಗಾರ್ತಿ ಮಾರಿಯಾ ಕ್ಯಾಂಪೊಯ್ ಪ್ರಪೋಸ್ ಮಾಡಿದರು. ಗ್ರೂಪ್ ಫೋಟೋ ಸೆಷನ್ ಸಮಯದಲ್ಲಿ, ಸಿಮೊನೆಟ್ ಬಗ್ಗಿ ನಿಂತು ಮಾರಿಯಾ ಕ್ಯಾಂಪೊಯ್ ಗೆ ಉಂಗುರ ತೊಡಿಸಿ ಪ್ರಪೋಸ್​ ಮಾಡಿದ್ದಾರೆ. ಆಕೆಯ ಕಣ್ಣುಗಳು ಖುಷಿಯಿಂದ ಅರಳುತ್ತಿದ್ದಂತೆ ತಂಡದ ಸದಸ್ಯರು ಹರ್ಷೋದ್ಘಾರ ಮಾಡಿದರು. ಉಳಿದವರು ಈ ಕ್ಷಣವನ್ನು ಸಂಭ್ರಮದಿಂದ ಆಚರಿಸಿದರು.

ಈ ಸುದ್ದಿ ಮತ್ತು ಪೋಸ್ಟ್ ಅನ್ನು ಒಲಿಂಪಿಕ್ಸ್​​ ಅಧಿಕೃತ ಎಕ್ಸ್ ಹ್ಯಾಂಡಲ್ ಹಂಚಿಕೊಂಡಿದೆ “ಪ್ಯಾರಿಸ್​ 2024 ಒಲಿಂಪಿಕ್ ಗ್ರಾಮದಲ್ಲಿ ನಡೆದ ಮೊದಲ ಮದುವೆ ಪ್ರಸ್ತಾಪ. ಪಾಬ್ಲೊ ಸಿಮೊನೆಟ್ ಮತ್ತು ಪಿಲಾರ್ ಕ್ಯಾಂಪೊಯ್ ಅರ್ಜೆಂಟೀನಾದ ತಮ್ಮ ಹ್ಯಾಂಡ್​​ಬಾಲ್​ ಮತ್ತು ಹಾಕಿ ತಂಡದ ಸದಸ್ಯರಿಂದ ಅಭಿನಂದನೆಗಳನ್ನು ಪಡೆದುಕೊಂಡರು.

ಅಧಿಕೃತ ವೆಬ್​ಸೈಟ್​ ವರದಿಯ ಪ್ರಕಾರ, ಪಾಬ್ಲೊ ಸಿಮೊನೆಟ್ ಅವರ ಮದುವೆ ಪ್ರಸಾಪದ ಸಮಯವು ಇದಕ್ಕಿಂತ ಉತ್ತಮವಾಗಿರಲು ಸಾಧ್ಯವಿಲ್ಲ. ಸ್ಯಾಂಟಿಯಾಗೊ 2023 ಪ್ಯಾನ್ ಅಮೆರಿಕನ್ ಕ್ರೀಡಾಕೂಟದಲ್ಲಿ ಪ್ಯಾರಿಸ್ 2024 ರಲ್ಲಿ ತಮ್ಮ ತಂಡಗಳು ತಮ್ಮ ಸ್ಥಾನಗಳನ್ನು ಭದ್ರಪಡಿಸಿದ ಕೆಲವೇ ನಿಮಿಷಗಳಲ್ಲಿ, ಸಿಮೊನೆಟ್ ತನ್ನ ಪ್ರಣಯದ ಕತೆಯನ್ನು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ಗೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್​ನ ರೈಲ್ವೆ ವ್ಯವಸ್ಥೆ ಮೇಲೆ ವಿಧ್ವಂಸಕ ದಾಳಿ

2015ರಿಂದ, ಸಿಮೊನೆಟ್ ಮತ್ತು ಕ್ಯಾಂಪೊಯ್ ತಮ್ಮ ಅಥ್ಲೆಟಿಕ್ ವೃತ್ತಿಜೀವನದ ನಡುವೆಯೂ ಪ್ರೇಮಕಥೆ ಮುಂದುವರಿಸಿದ್ದಾರೆ. ರಿಯೋ 2016ರಲ್ಲಿ ಒಟ್ಟಿಗೆ ಒಲಿಂಪಿಕ್ ಪಯಣ ಆರಂಭಿಸಿದ್ದರು. ಈಗ, ಎಂಟು ವರ್ಷಗಳ ನಂತರ, ಪ್ಯಾರಿಸ್ ಎಂದರೆ ಪ್ರೀತಿಯ ನಗರದಲ್ಲಿ ಅವರ ಪ್ರೇಮ ಬಹಿರಂಗವಾಗಿದೆ.

Continue Reading

ಕ್ರೀಡೆ

Shubman Gill: ಬಾಂಗ್ಲಾ ವಿರುದ್ಧದ ಟೆಸ್ಟ್​ ಸರಣಿಗೆ ಶುಭಮನ್​ ಗಿಲ್​ ಉಪನಾಯಕ!

Shubman Gill: 2027ರ ಏಕದಿನ ವಿಶ್ವಕಪ್‌ ಗಮನದಲ್ಲಿಟ್ಟುಕೊಂಡು ಹೊಸ ನಾಯಕನನ್ನು ಬೆಳೆಸಲು ಪ್ರಧಾನ ಕೋಚ್‌ ಗೌತಮ್‌ ಗಂಭೀರ್‌ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಶುಭಮನ್​ ಗಿಲ್​ಗೆ ಏಕದಿನ ತಂಡದಲ್ಲಿ ಉಪನಾಯಕನ ಸ್ಥಾನ ನೀಡಲಾಗಿದೆ.

VISTARANEWS.COM


on

Shubman Gill
Koo

ಮುಂಬಯಿ: ಭಾರತ ತಂಡದ ಭವಿಷ್ಯದ ನಾಯಕನೆಂದೇ ಪರಿಗಣಿಸಲ್ಪಟ್ಟಿರುವ ಯುವ ಆಟಗಾರ ಶುಭಮನ್​ ಗಿಲ್(Shubman Gill)​ ಅವರನ್ನು ಈಗಾಗಲೇ ಏಕದಿನ ಮತ್ತು ಟಿ20 ತಂಡದ ಉಪನಾಯಕನನ್ನಾಗಿ ಮಾಡಲಾಗಿದೆ. ಇದೀಗ ಟೆಸ್ಟ್​ನಲ್ಲಿಯೂ ಅವರಿಗೆ ಉಪನಾಯಕ ಸ್ಥಾನ ನೀಡಲಾಗುತ್ತದೆ ಎಂದು ವರದಿಯಾಗಿದೆ. ಮುಂದಿನ ಬಾಂಗ್ಲಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಗಿಲ್​ಗೆ ಉಪನಾಯಕ ಪಟ್ಟ ನೀಡಲಾಗುವುದು ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

2027ರ ಏಕದಿನ ವಿಶ್ವಕಪ್‌ ಗಮನದಲ್ಲಿಟ್ಟುಕೊಂಡು ಹೊಸ ನಾಯಕನನ್ನು ಬೆಳೆಸಲು ಪ್ರಧಾನ ಕೋಚ್‌ ಗೌತಮ್‌ ಗಂಭೀರ್‌ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಶುಭಮನ್​ ಗಿಲ್​ಗೆ ಏಕದಿನ ತಂಡದಲ್ಲಿ ಉಪನಾಯಕನ ಸ್ಥಾನ ನೀಡಲಾಗಿದೆ. ಲಂಕಾ ವಿರುದ್ಧದ ದ್ವಿಪಕ್ಷೀಯ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದೇ ಆದರೆ ಗಿಲ್​ ಮುಂದಿನ ದಿನದಲ್ಲಿ ತಂಡದ ನಾಯಕನಾಗುವುದು ಖಚಿತ ಎನ್ನಲಡ್ಡಿಯಿಲ್ಲ. ಕಳೆದ ತಿಂಗಳು ಜಿಂಬಾಬ್ವೆ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಗಿಲ್​ ನಾಯಕತ್ವ ವಹಿಸಿ ಸರಣಿ ಗೆದ್ದಿದ್ದರು.

ಶುಭಮನ್​ ಗಿಲ್​ ಅವರು ಕಳೆದ 11 ಟೆಸ್ಟ್ ಇನಿಂಗ್ಸ್​ನಲ್ಲಿ ಸಂಪೂರ್ಣ ಬ್ಯಾಟಿಂಗ್​ ವೈಫಲ್ಯ ಎದುರಿಸಿದ್ದಾರೆ. 13, 8, 6, 10, 29*, 2, 26, 36, 10, 23, 0. ಗಿಲ್​ ಗಳಿಕೆ. ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಬ್ಯಾಟಿಂಗ್​ ಕ್ರಮಾಂಕದ ಬದಲಾವಣೆಯೂ ಮುಖ್ಯ ಕಾರಣ. ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ವೇಳೆ ಗಿಲ್​ ಆರಂಭಿಕನಾಗಿ ಆಡುತ್ತಿದ್ದರು. ಈ ವೇಳೆ ಉತ್ತಮ ಸಾಧನೆ ಕೂಡ ಮಾಡಿದ್ದರು. ಆದರೆ, ಆ ಬಳಿಕ ಇವರನ್ನು ದ್ವಿತೀಯ ಕ್ರಮಾಂಕದಲ್ಲಿ ಆಡಿಸಲಾಯಿತು. ಯಶಸ್ವಿ ಜೈಸ್ವಾಲ್​ ಆರಂಭಿಕನಾಗಿ ಆಡಲಾರಂಭಿಸಿದರು. ಬಾಂಗ್ಲಾದೇಶದ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್​ ಪಂದ್ಯ ಸೆಪ್ಟೆಂಬರ್​ನಲ್ಲಿ ಆರಂಭಗೊಳ್ಳಲಿದೆ.

ಇದನ್ನೂ ಓದಿ IND vs SL: ಭಾರತ ವಿರುದ್ಧದ ಟಿ20 ಸರಣಿಗೆ ತಂಡ ಪ್ರಕಟಿಸಿದ ಶ್ರೀಲಂಕಾ

ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿ ಚೇತರಿಕೆ ಕಾಣುತ್ತಿರುವ ಶಮಿ  ಕ್ರಿಕೆಟ್​ಗೆ ಮರಳುವು ಸಿದ್ಧತೆಯಲ್ಲಿದ್ದಾರೆ. ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತ್ತು.

ಬಾಂಗ್ಲಾ ಸರಣಿಯ ವೇಳಾಪಟ್ಟಿ


ಸೆಪ್ಟೆಂಬರ್​-19 ಮೊದಲ ಟೆಸ್ಟ್​ ಪಂದ್ಯ. ತಾಣ: ಚೆನ್ನೈ

ಸೆಪ್ಟೆಂಬರ್​​-27 ದ್ವಿತೀಯ ಟೆಸ್ಟ್​. ತಾಣ; ಕಾನ್ಪುರ

ಅಕ್ಟೋಬರ್​-6 ಮೊದಲ ಟಿ20. ತಾಣ: ಧರ್ಮಶಾಲಾ

ಅಕ್ಟೋಬರ್​-9 ದ್ವಿತೀಯ ಟಿ20. ತಾಣ: ದೆಹಲಿ

ಅಕ್ಟೋಬರ್​-12 ಮೂರನೇ ಟಿ20. ತಾಣ: ಹೈದರಾಬಾದ್​

Continue Reading

ಕ್ರೀಡೆ

Womens Asia Cup T20: ಬಾಂಗ್ಲಾ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ

Womens Asia Cup T20: ಗುರಿ ಬೆನ್ನಟ್ಟಿದ ಭಾರತ ಪರ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ(26*) ಮತ್ತು ಉಪನಾಯಕಿ ಸ್ಮೃತಿ ಮಂಧಾನ(55*) ರನ್​ ಬಾರಿಸಿ ಅಜೇಯರಾಗಿ ಉಳಿದರು.

VISTARANEWS.COM


on

Womens Asia Cup T20
Koo

ದಾಂಬುಲಾ: ಮಹಿಳಾ ಏಷ್ಯಾಕಪ್​ ಟಿ20 ಕ್ರಿಕೆಟ್(Womens Asia Cup T20)​ ಟೂರ್ನಿಯಲ್ಲಿ ಹಾಲಿ ಚಾಂಪಿಯನ್​ ಭಾರತ(India Women vs Bangladesh Women) ತಂಡ ಫೈನಲ್​ಗೆ ಲಗ್ಗೆಯಿಟ್ಟಿದೆ. ಇಂದು(ಶುಕ್ರವಾರ) ನಡೆದ ಸೆಮಿಫೈನಲ್​ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 10 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಈ ಸಾಧನೆ ಮಾಡಿತು. ಫೈನಲ್​ನಲ್ಲಿ ಪಾಕಿಸ್ತಾನ ಅಥವಾ ಲಂಕಾ ನಡುವಣ ಪಂದ್ಯದ ವಿಜೇತರನ್ನು ಎದುರಿಸಲಿದೆ.

ಶುಕ್ರವಾರ ಇಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 80 ರನ್​ ಬಾರಿಸಿತು. ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಭಾರತ 11 ಓವರ್​ಗಳಲ್ಲಿ ಯಾವುದೇ ವಿಕೆಟ್​ ನಷ್ಟವಿಲ್ಲದೆ 83 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

ಗುರಿ ಬೆನ್ನಟ್ಟಿದ ಭಾರತ ಪರ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ(26*) ಮತ್ತು ಉಪನಾಯಕಿ ಸ್ಮೃತಿ ಮಂಧಾನ(55*) ರನ್​ ಬಾರಿಸಿ ಅಜೇಯರಾಗಿ ಉಳಿದರು. ಶಫಾಲಿ 25 ರನ್​ ಪೂರ್ತಿಗೊಳಿಸಿದ ವೇಳೆ ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ರನ್​ ಬಾರಿಸಿದ ಲಂಕಾ ನಾಯಕಿ ಚಾಮರಿ ಅತ್ತಪಟ್ಟು(180 ರನ್​) ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೆ ಜಿಗಿದರು. ಶಫಾಲಿ ಸದ್ಯ 184* ರನ್​ ಬಾರಿಸಿದ್ದಾರೆ. ಸ್ಮೃತಿ ಮಂಧಾನ ಅವರ ಅಜೇಯ ಅರ್ಧಶತಕದ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್​ ಸಿಡಿಯಿತು.

ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾಕ್ಕೆ ಮಧ್ಯಮ ವೇಗಿ ರೇಣುಕಾ ಸಿಂಗ್ ಘಾತಕ ದಾಳಿಯ ಮೂಲಕ ಆಘಾತವಿಕ್ಕಿದರು. ಆರಂಭಿಕ ಮೂರು ಆಟಗಾರರ ವಿಕೆಟ್​ಗಳನ್ನು ಕಿತ್ತು ಭಾರತಕ್ಕೆ ಮುನ್ನಡೆ ತಂದುಕೊಟ್ಟರು. ಇವರ ಬೌಲಿಂಗ್​ ದಾಳಿಗೆ ತತ್ತರಿಸಿದ ಬಾಂಗ್ಲಾ 21 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಆರಂಭಿಕ ಆಘಾತ ಎದುರಿಸಿತು. 4 ಓವರ್​ ಬೌಲಿಂಗ್​ ನಡೆಸಿದ ರೇಣುಕಾ ಸಿಂಗ್ 1 ಮೇಡನ್​ ಸಹಿತ ಕೇವಲ 10 ರನ್​ ನೀಡಿ 3 ವಿಕೆಟ್​ ಉರುಳಿಸಿದರು. ಇದೇ ವೇಳೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 50 ವಿಕೆಟ್​ಗಳ ಮೈಲುಗಲ್ಲು ತಲುಪಿದರು.

ಇದನ್ನೂ ಓದಿ Womens Asia Cup: ಶಫಾಲಿ ಬ್ಯಾಟಿಂಗ್​ ಆರ್ಭಟ; ಭಾರತಕ್ಕೆ ಹ್ಯಾಟ್ರಿಕ್​ ಜಯ

ರೇಣುಕಾ ಸಿಂಗ್ ಓವರ್​ ಮುಕ್ತಾಯದ ಬಳಿಕ ಸ್ಪಿನ್ನ್​ ಬೌಲರ್​ ರಾಧಾ ಯಾದವ್​ ತಮ್ಮ ಸ್ಪಿನ್​​ ಕೈಚಳಕ ತೋರಿದರು. ಇವರು ಕೂಡ 4 ಓವರ್​ ಬೌಲಿಂಗ್​ ಮೂಲಕ 14 ರನ್​ ನೀಡಿ 3 ವಿಕೆಟ್​ ಕಬಳಿಸಿದರು. ಒಂದು ಮೇಡನ್​ ಓವರ್​ ಕೂಡ ನಡೆಸಿದರು. ಬಾಂಗ್ಲಾ ತಂಡಕ್ಕೆ ಆಸರೆಯಾದದ್ದು ನಾಯಕಿ ನಿಗರ್ ಸುಲ್ತಾನಾ ಮಾತ್ರ. 4ನೇ ಕ್ರಮಾಂಕದಲ್ಲಿ ಆಡಲಿಳಿದ ಸುಲ್ತಾನಾ 51 ಎಸೆತ ಎದುರಿಸಿ 32 ರನ್​ ಬಾರಿಸಿದರು. ಇವರ ಈ ಸಣ್ಣ ಮಟ್ಟದ ಬ್ಯಾಟಿಂಗ್​ ಹೋರಾಟದ ನೆರವಿನಿಂದ ಬಾಂಗ್ಲಾ 50 ಗಡಿ ದಾಡಿತು. ಅಂತಿಮ ಹಂತದಲ್ಲಿ ಶೋರ್ನಾ ಅಖ್ತರ್​ 19 ರನ್​ ಬಾರಿಸಿ ಅಜೇಯರಾಗು ಉಳಿದರು. ಪೂಜಾ ವಸ್ತ್ರಾಕರ್​ ಮತ್ತು ದೀಪ್ತಿ ಶರ್ಮಾ ತಲಾ ಒಂದು ವಿಕೆಟ್​ ಕಿತ್ತರು.

ರಾತ್ರಿ ನಡೆಯುವ ಮತ್ತೊಂದು ಸೆಮಿಫೈನಲ್​ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಆತಿಥೇಯ ಶ್ರೀಲಂಕಾ ಮುಖಾಮುಖಿಯಾಗಲಿವೆ. ತಂಡದ ಬಲಾಬಲ ನೋಡುವಾಗ ಲಂಕಾ ಹೆಚ್ಚು ಬಲಿಷ್ಠವಾಗಿ ಗೋಚರಿಸಿದೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್​ಗೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್​ನ ರೈಲ್ವೆ ವ್ಯವಸ್ಥೆ ಮೇಲೆ ವಿಧ್ವಂಸಕ ದಾಳಿ

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ 2024 ರ (Paris Olympics 2024) ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್​​ನ ಹೈಸ್ಪೀಡ್ ಟಿಜಿವಿ ರೈಲು ಜಾಲದ ಮೇಲೆ ದುಷ್ಕರ್ಮಿಗಳ ದಾಳಿ ನಡೆದಿದೆ. ಶುಕ್ರವಾರ ರೈಲಿನ ತಾಂತ್ರಿಕ ನಿರ್ವಹಣಾ ಕೇಂದ್ರಗಳಿಗೆ ಬೆಂಕಿ ಹಚ್ಚವಲಾಗಿದೆ. ದುರುದ್ದೇಶದ ಕೃತ್ಯಗಳಿಂದಾಗಿ ರೈಲು ಸಂಪರ್ಕ ಜಾಲಕ್ಕೆ ಹಾನಿಯಾಗಿದೆ. ಇದು ದೇಶದ ಜನನಿಬಿಡ ರೈಲು ಮಾರ್ಗಗಳಿಗೆ ಅಡ್ಡಿಯಾಗಿದ್ದು, ಪ್ರಯಾಣಿಕರು ಅರ್ಧ ದಾರಿಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಕ್ರೀಡಾಕೂಟಕ್ಕೆ ಮುಂಚಿತವಾಗಿ ಪ್ರಯಾಣಕ್ಕೆ ಅಡ್ಡಿಪಡಿಸಲು ಈ ದಾಳಿ ನಡೆಸಲಾಗಿದ್ದು ಇದು ಸಂಘಟಿತ ವಿಧ್ವಂಸಕ ಕೃತ್ಯ ಎಂದು ಹೇಳಲಾಗಿದೆ.

ಪ್ಯಾರಿಸ್ ಅನ್ನು ಪಶ್ಚಿಮ, ಉತ್ತರ ಮತ್ತು ಪೂರ್ವ ಪ್ರದೇಶಗಳೊಂದಿಗೆ ಸಂಪರ್ಕಿಸುವ ಮಾರ್ಗಗಳಲ್ಲಿನ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡು ಬೆಂಕಿ ಹಚ್ಚಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಎಸ್ಎನ್​ಸಿಎಫ್ ತಿಳಿಸಿದೆ. ಇಂಗ್ಲಿಷ್ ಕಾಲುವೆಯ ಕೆಳಗಿರುವ ಲಂಡನ್ ಮತ್ತು ನೆರೆಯ ಬೆಲ್ಜಿಯಂಗೆ ಪ್ರಯಾಣದ ಮೇಲೂ ಇದು ಪರಿಣಾಮ ಬೀರಿದೆ ಎಂದು ವರದಿಗಳು ತಿಳಿಸಿವೆ.

ಅಲ್ಲಿ ರೈಲು ವಿಭಾಗ ಹಲವಾರು ರೈಲುಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕಾಯಿತು ಮತ್ತು ರದ್ದುಗೊಳಿಸಬೇಕಾಯಿತು ಎಂದು ಹೇಳಲಾಗಿದೆ. ದುರಸ್ತಿಯ ಮೇಲ್ವಿಚಾರಣೆಗಾಗಿ ಸುರಕ್ಷತಾ ತಂಡ ಸ್ಥಳದಲ್ಲಿದೆ ಎಂದು ಹೇಳಿದ್ದಾರೆ. ವಾರಾಂತ್ಯದಲ್ಲಿ ಸಂಚಾರದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಅದು ಹೇಳಿದೆ.

“ಅಟ್ಲಾಂಟಿಕ್, ಉತ್ತರ ಮತ್ತು ಪೂರ್ವ ಹೈಸ್ಪೀಡ್ ಮಾರ್ಗಗಳಲ್ಲಿ ಹಲವೆಡೆ ಬೆಂಕಿ ಹಚ್ಚಲಾಗಿದೆ. ನಮ್ಮ ರೈಲ್ವೆ ವ್ಯವಸ್ಥೆಗಳನ್ನು ಹಾನಿಗೊಳಿಸಲು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ ಎಂದು ಸ್ಥಳೀಯ ಆಡಳಿತ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Nissan SUV X-TRAIL : ನಿಸ್ಸಾನ್ ನ ಹೊಚ್ಚ ಹೊಸ 4 ಜನರೇಷನ್ ಪ್ರೀಮಿಯಂ ಅರ್ಬನ್ ಎಸ್‌ಯುವಿ ಎಕ್ಸ್-ಟ್ರಯಲ್ ಬಿಡುಗಡೆ

ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ನಡೆದ ದಾಳಿಗಳನ್ನು ಸರ್ಕಾರಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ, ಈ ಘಟನೆಗಳಿಂದ ಕ್ರೀಡಾಕೂಟಗಳ ತಾಣಕ್ಕೆ ಯಾವುದೇ ಸಂಪರ್ಕ ಕಡಿತಗೊಂಡಿಲ್ಲ.

ಸಾರಿಗೆ ಸಚಿವ ಪ್ಯಾಟ್ರಿಸ್ ವೆರ್ಗ್ರೀಟ್ ಎಕ್ಸ್ ನಲ್ಲಿನ ಪೋಸ್ಟ್ ನಲ್ಲಿ “ಕ್ರಿಮಿನಲ್ ಘಟನೆಗಳನ್ನು ಖಂಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ರೈಲ್ವೆ ಸಂಚಾರವನ್ನು ಪುನಃಸ್ಥಾಪಿಸಲು ಎಸ್ ಎನ್ ಸಿಎಫ್ ಕೆಲಸ ಮಾಡುತ್ತಿದೆ ಎಂದು ಹೇಳಿಕೊಂಡಿದ್ದಾರೆ.ದುರಸ್ತಿ ಕಾರ್ಯಗಳು ನಡೆಯುತ್ತಿದೆ. ರೈಲುಗಳನ್ನು ತಮ್ಮ ನಿರ್ಗಮನ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ಆದಾಗ್ಯೂ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಪ್ರಯಾಣಿಕರಿಗೆ ಕೋಲಾಗಿದೆ.

ಇಷ್ಟು ದೊಡ್ಡ ಪ್ರಮಾಣದ ದಾಳಿಯು “ಟಿಜಿವಿ ನೆಟ್ವರ್ಕ್ ಅನ್ನು ನಿಷ್ಕ್ರಿಯಗೊಳಿಸುವ” ಗುರಿ ಹೊಂದಿತ್ತು ರೈಲ್ವೆ ಕಂಪನಿ ಹೇಳಿದೆ. ಸುಮಾರು 800,000 ಪ್ರಯಾಣಿಕರ ಮೇಲೆ ಪರಿಣಾಮ ಬೀರಿದೆ ಎಂದು ಅದು ಹೇಳಿದೆ.

ವಿಧ್ವಂಸಕ ಕೃತ್ಯದಿಂದ ಲಂಡನ್ ಮತ್ತು ಪ್ಯಾರಿಸ್ ನಡುವಿನ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ.

Continue Reading
Advertisement
Kargil Vijay Diwas 2024
ದೇಶ5 mins ago

Kargil Vijay Diwas 2024: ಕಾರ್ಗಿಲ್ ಯುದ್ಧದಲ್ಲಿ ನಿರ್ಣಾಯಕವಾಗಿದ್ದ ಟೈಗರ್ ಹಿಲ್; 19 ವರ್ಷದ ಯೋಧನ ರೋಚಕ ಸಾಹಸ!

Apple iPhones
ಗ್ಯಾಜೆಟ್ಸ್7 mins ago

Apple iPhones: ಆ್ಯಪಲ್‌ ಬ್ರ್ಯಾಂಡ್‌ ಪ್ರಿಯರಿಗೆ ಗುಡ್‌ನ್ಯೂಸ್;‌ ಐಫೋನ್‌ಗಳ ಬೆಲೆಯಲ್ಲಿ ಗಣನೀಯ ಇಳಿಕೆ

ಕರ್ನಾಟಕ9 mins ago

PU Lecturer Recruitment: ಪ್ರೌಢಶಾಲಾ ಶಿಕ್ಷಕರು ಪಿಯು ಕಾಲೇಜಿಗೆ ಬಡ್ತಿ ಪಡೆಯಲು ಅರ್ಹತಾ ಅಂಕ ಶೇ.50ಕ್ಕೆ ಇಳಿಕೆ

karnataka rain
ಮಳೆ16 mins ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

PARIS OLYMPICS 2024
ಪ್ರಮುಖ ಸುದ್ದಿ26 mins ago

PARIS OLYMPICS 2024 : ಪ್ಯಾರಿಸ್ ಒಲಿಂಪಿಕ್ಸ್​​ ಗ್ರಾಮದಲ್ಲೇ ಮದುವೆ ನಿಶ್ಚಿತಾರ್ಥ ಮಾಡಿಕೊಂಡ ಅಥ್ಲೀಟ್​ಗಳು

Stock Market
ವಾಣಿಜ್ಯ27 mins ago

Stock Market: ಷೇರು ಮಾರುಕಟ್ಟೆಗೆ ಶುಭ ಶುಕ್ರವಾರ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಭರ್ಜರಿ ಲಾಭ!

Shubman Gill
ಕ್ರೀಡೆ42 mins ago

Shubman Gill: ಬಾಂಗ್ಲಾ ವಿರುದ್ಧದ ಟೆಸ್ಟ್​ ಸರಣಿಗೆ ಶುಭಮನ್​ ಗಿಲ್​ ಉಪನಾಯಕ!

Kannada New Movie Parapancha Gama Gama Powder song out
ಸ್ಯಾಂಡಲ್ ವುಡ್57 mins ago

Kannada New Movie: “ಪೌಡರ್” ತಂಡದಿಂದ ಹೊರ ಬಿತ್ತು ಹೊಸ ಹಾಡು; “ಪರಪಂಚವೇ ಘಮ ಘಮ”!

No cases of Nipah virus have been detected in the state says Minister Dinesh Gundurao
ಕರ್ನಾಟಕ1 hour ago

Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

Kampli Gangavathi link bridge inundation fear
ಬಳ್ಳಾರಿ1 hour ago

Ballari News: ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮುಳುಗಡೆ ಭೀತಿ; ಸಂಚಾರಕ್ಕೆ ನಿರ್ಬಂಧ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ16 mins ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 hour ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ1 day ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

ಟ್ರೆಂಡಿಂಗ್‌