Rohit Sharma : ಕೊಹ್ಲಿ, ಸಚಿನ್​ ಮಾಡಿದ ವಿಶೇಷ ಸಾಧನೆ ಮಾಡಿದ ರೋಹಿತ್ ಶರ್ಮಾ - Vistara News

ಕ್ರೀಡೆ

Rohit Sharma : ಕೊಹ್ಲಿ, ಸಚಿನ್​ ಮಾಡಿದ ವಿಶೇಷ ಸಾಧನೆ ಮಾಡಿದ ರೋಹಿತ್ ಶರ್ಮಾ

Rohit Sharma : ರೋಹಿತ್ ಶರ್ಮಾ ಗೆ ಗೌತಮ್ ಗಂಭೀರ್ ದಾಖಲೆ ಮುರಿಯುವ ಎಲ್ಲ ಅವಕಾಶಗಳಿವೆ.

VISTARANEWS.COM


on

Rohit Sharma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಂಚಿ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಹಿರಿಯ ಆರಂಭಿಕ ಆಟಗಾರ ದೀರ್ಘ ಸ್ವರೂಪದ ಕ್ರಿಕೆಟ್​ನಲ್ಲಿ 4000 ರನ್ ಗಳಿಸಿದ್ದಾರೆ. ಈ ಮೂಲಕ ಅವರು ಈ ಸಾಧನೆ ಮಾಡಿದ ಇಂಡಿಯಾದ 17 ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಂದು ರೋಹಿತ್ ಶರ್ಮಾ ಈ ಸಾಧನೆ ಮಾಡಿದ್ದಾರೆ. ತಂಡಗಳ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ರಾಂಚಿಯ ಜಾರ್ಖಂಡ್ ಕ್ರಿಕೆಟ್ ಅಸೋಸಿಯೇಷನ್ ಕಾಂಪ್ಲೆಕ್ಸ್​​ನಲ್ಲಿ ನಡೆಯುತ್ತಿದೆ. ರೋಹಿತ್ ಶರ್ಮಾ ಎರಡನೇ ಇನ್ನಿಂಗ್ಸ್ ನಲ್ಲಿ ಈ ಮೈಲಿಗಲ್ಲನ್ನು ತಲುಪಿದರು. ಭಾರತಕ್ಕೆ 192 ರನ್​ಗಳ ಗುರಿ ನೀಡಲಾಯಿತು. ಪಂದ್ಯದ ಕೊನೆಯ ಅರ್ಧ ಗಂಟೆಯಲ್ಲಿ 40 ರನ್ ಬಾರಿಸಿದೆ.

ರೋಹಿತ್ ಶರ್ಮಾ 3ನೇ ದಿನದಾಟದ ಅಂತ್ಯಕ್ಕೆ 24 ರನ್ ಗಳಿಸಿ ಔಟಾಗದೆ ಉಳಿದಿದ್ದು, 4000 ರನ್ ಗಡಿ ದಾಟಿದ್ದಾರೆ. ಪ್ರಸ್ತುತ 4003 ರನ್ ಗಳಿಸಿರುವ ಭಾರತದ ನಾಯಕ ನಾಲ್ಕನೇ ಟೆಸ್ಟ್​ನಲ್ಲಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲಿದ್ದಾರೆ.

ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿರು ಗೌತಮ್ ಗಂಭೀರ್ ಅವರನ್ನು ಹಿಂದಿಕ್ಕುವ ವಿಶ್ವಾಸವನ್ನು ರೋಹಿತ್ ಶರ್ಮಾ ಹೊಂದಿದ್ದಾರೆ. ಗಂಭೀರ್​ ವೃತ್ತಿಜೀವನದಲ್ಲಿ 58 ಟೆಸ್ಟ್ ಪಂದ್ಯಗಳಲ್ಲಿ 4154 ರನ್ ಗಳಿಸಿದ್ದಾರೆ. ಸರಣಿಗೆ ಇನ್ನೂ ಒಂದು ಪಂದ್ಯ ಬಾಕಿ ಉಳಿದಿದ್ದು, ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ಪಂದ್ಯ ನಡೆಯಲಿದೆ.

ಸಚಿನ್ ತೆಂಡೂಲ್ಕರ್ 15921 ರನ್ ಗಳಿಸುವ ಮೂಲಕ ಟೆಸ್ಟ್ ಕ್ರಿಕೆಟ್​​ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ 13265 ರನ್ ಗಳಿಸಿ ನಂತರದ ಸ್ಥಾನದಲ್ಲಿದ್ದಾರೆ. ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ, ವಿವಿಎಸ್ ಲಕ್ಷ್ಮಣ್, ವೀರೇಂದ್ರ ಸೆಹ್ವಾಗ್, ಸೌರವ್ ಗಂಗೂಲಿ, ಚೇತೇಶ್ವರ ಪೂಜಾರ, ದಿಲೀಪ್ ವೆಂಗ್ಸರ್ಕರ್, ಮೊಹಮ್ಮದ್ ಅಜರುದ್ದೀನ್, ಗುಂಡಪ್ಪ ವಿಶ್ವನಾಥ್, ಕಪಿಲ್ ದೇವ್, ಅಜಿಂಕ್ಯ ರಹಾನೆ, ಎಂಎಸ್ ಧೋನಿ, ಮೊಹಿಂದರ್ ಅಮರನಾಥ್, ಗೌತಮ್ ಗಂಭೀರ್ ಮತ್ತು ರೋಹಿತ್ ಶರ್ಮಾ ನಂತರದ ಸ್ಥಾನಗಳಲ್ಲಿದ್ದಾರೆ.

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ 1000 ರನ್

ಟೆಸ್ಟ್ ಕ್ರಿಕೆಟ್​​ನಲ್ಲಿ 4000 ರನ್ ಪೂರೈಸುವುದರ ಜೊತೆಗೆ ರೋಹಿತ್ ಶರ್ಮಾ ವಿಶೇಷ ಮೈಲಿಗಲ್ಲನ್ನು ಸಹ ಸಾಧಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ 1000 ರನ್ ಬಾರಿಸಿದ ವಿರಾಟ್ ಕೊಹ್ಲಿ, ಸುನಿಲ್ ಗವಾಸ್ಕರ್, ಸಚಿನ್ ತೆಂಡೂಲ್ಕರ್, ಚೇತೇಶ್ವರ ಪೂಜಾರ ಮತ್ತು ರಾಹುಲ್ ದ್ರಾವಿಡ್ ಎಲೈಟ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ : R Ashwin : ನಥಾನ್​ ಲಿಯಾನ್​ ದಾಖಲೆ ಸರಿಗಟ್ಟಿದ ರವಿಚಂದ್ರನ್ ಅಶ್ವಿನ್

ರೋಹಿತ್ ಶರ್ಮಾ ಪ್ರಸ್ತುತ ಇಂಗ್ಲೆಂಡ್​ನಲ್ಲಿ 1013 ರನ್ ಗಳಿಸಿದ್ದಾರೆ. ಇಂಗ್ಲೆಂಡ್​ ವಿರುದ್ಧದ ತಮ್ಮ 13 ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. ರಾಜ್ ಕೋಟ್ ನಲ್ಲಿ ನಡೆದ ಹಿಂದಿನ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿದ್ದರು.

ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ 28 ಟೆಸ್ಟ್ ಪಂದ್ಯಗಳಲ್ಲಿ 1991 ರನ್ ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ಸುನಿಲ್ ಗವಾಸ್ಕರ್ ಅವರು ಥ್ರೀ ಲಯನ್ಸ್ ವಿರುದ್ಧ 2000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ 32 ಟೆಸ್ಟ್ ಪಂದ್ಯಗಳಲ್ಲಿ 2535 ರನ್ ಗಳಿಸಿದ್ದರೆ, ಗವಾಸ್ಕರ್ 38 ಪಂದ್ಯಗಳಲ್ಲಿ 2483 ರನ್ ಗಳಿಸಿದ್ದಾರೆ. ರಾಹುಲ್ ದ್ರಾವಿಡ್ ಮತ್ತು ಚೇತೇಶ್ವರ ಪೂಜಾರ ಕೂಡ ಎಲೈಟ್ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅವರಿಗಿಂತ ಮುಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Sara Tendulkar: ಲಂಡನ್​ ಯೂನಿವರ್ಸಿಟಿಯಿಂದ ಪದವಿ ಪಡೆದ ಸಾರಾ ತೆಂಡೂಲ್ಕರ್​; ಮಗಳ ಸಾಧನೆ ಕೊಂಡಾಡಿದ ಸಚಿನ್​

Sara Tendulkar: ಸಚಿನ್ ತೆಂಡೂಲ್ಕರ್(Sachin Tendulkar) ಅವರ ಮಗಳು ಸಾರಾ ತೆಂಡೂಲ್ಕರ್(Sara Tendulkar) ಲಂಡನ್ ಯೂನಿವರ್ಸಿಟಿ(UCL, London) ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ(Sara Tendulkar completed post-graduation).

VISTARANEWS.COM


on

Sara Tendulkar
Koo

ಲಂಡನ್​: ಭಾರತದ ಕ್ರಿಕೆಟ್​ ತಂಡದ ಮಾಜಿ ಆಟಗಾರ, ದಿಗ್ಗಜ ಸಚಿನ್ ತೆಂಡೂಲ್ಕರ್(Sachin Tendulkar) ಅವರ ಮಗಳು ಸಾರಾ ತೆಂಡೂಲ್ಕರ್(Sara Tendulkar) ಲಂಡನ್ ಯೂನಿವರ್ಸಿಟಿ(UCL, London) ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ(Sara Tendulkar completed post-graduation). ಮಗಳು ಎಲ್ಲಾ ಕಠಿಣ ಪರಿಶ್ರಮವನ್ನು ಹಾಕಿ ದೊಡ್ಡ ಮೈಲಿಗಲ್ಲನ್ನು ಪೂರ್ಣಗೊಳಿಸಿದ್ದಕ್ಕಾಗಿ ಸಚಿನ್ ಭಾವುಕ ಸಂದೇಶದ ಮೂಲಕ ಶ್ಲಾಘಿಸಿದ್ದಾರೆ.

ಟ್ವಿಟರ್​ ಎಕ್ಸ್​ನಲ್ಲಿ ಮಗಳ ಸಾಧನೆ ಬಗ್ಗೆ ಬರೆದುಕೊಂಡಿರುವ ಸಚಿನ್​, “ಇದೊಂದು ಸುಂದರ ದಿನ. ನಮ್ಮ ಮಗಳು ಕ್ಲಿನಿಕಲ್ ಮತ್ತು ಪಬ್ಲಿಕ್ ಹೆಲ್ತ್ ನ್ಯೂಟ್ರಿಷನ್‌ನಲ್ಲಿ ಯುಸಿಎಲ್‌ನ ಮೆಡಿಸಿನ್ ವಿಭಾಗದಿಂದ ಡಿಸ್ಟಿಂಕ್ಷನ್‌ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ದಿನ. ಪೋಷಕರಾಗಿ, ನೀನು ವರ್ಷಗಳಿಂದ ಮಾಡಿದ ಎಲ್ಲಾ ಕೆಲಸಗಳನ್ನು ನೋಡಿದ್ದಕ್ಕಾಗಿ ನಾವು ತುಂಬಾ ಹೆಮ್ಮೆಪಡುತ್ತೇವೆ. ಇಲ್ಲಿಗೆ ಬರುವುದು ಸುಲಭವಲ್ಲ” ಎಂದು ಬರೆದುಕೊಂಡಿದ್ದಾರೆ. ಸಾರಾ ಲಂಡನ್ ಯೂನಿವರ್ಸಿಟಿಯ ಘಟಿಕೋತ್ಸದಲ್ಲಿ ಪದವಿ ಸ್ವೀಕರಿಸಿದ ಫೋಟೊ, ವಿಡಿಯೊ ಮತ್ತು ತಾಯಿಯೊಂದಿಗೆ ಇರುವ ಫೋಟೊವನ್ನು ಸಚಿನ್​ ಹಂಚಿಕೊಂಡಿದ್ದಾರೆ.

ಸಾರಾ ಕೂಡ ತಾನು ಪದವಿ ಪಡೆದ ದಿನದ ತುಣುಕುಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್​ ಸೇರಿ ಸಚಿನ್​ ಅವರ ಆಪ್ತರು ಸಾರಾಗೆ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ Sara Tendulkar: ತಮ್ಮ ಹೆಸರಿನ ಪರೋಡಿ ಖಾತೆ ಮುಚ್ಚಲು ಎಕ್ಸ್‌ಗೆ ಸಾರಾ ತೆಂಡುಲ್ಕರ್ ಆಗ್ರಹ!

ಗಿಲ್​ ಜತೆ ಡೇಟಿಂಗ್​?


ಸಾರಾ ತೆಂಡೂಲ್ಕರ್(Sara Tendulkar) ಅವರು ಟೀಮ್​ ಇಂಡಿಯಾದ ಯುವ ಬ್ಯಾಟರ್​ ಶುಭಮನ್​ ಗಿಲ್(Shubman Gill) ಜತೆ​ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಆಗಾಗ ಮುನ್ನಲೆಗೆ ಬರುತ್ತಲೇ ಇರುತ್ತದೆ. ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ವೇಳೆ ಗಿಲ್​ ಪಂದ್ಯ ವೀಕ್ಷಿಸಲೆಂದೇ ಸಾರಾ ಕೂಡ ಸ್ಟೇಡಿಯಂಗೆ ಬರುತ್ತಿದ್ದರು. ಅಲ್ಲದೆ ಗಿಲ್​ ಸಾಧನೆಗೆ ಗ್ಯಾಲರಿಯಲ್ಲಿ ಎದ್ದು ನಿಂತು ಚಪ್ಪಾಳೆ ತಟ್ಟಿ ಪ್ರಶಂಸಿಸಿದ್ದ ವಿಡಿಯೊ ಮತ್ತು ಫೋಟೊಗಳು ವೈರಲ್​ ಆಗಿತ್ತು. ಸಾರಾ ಮತ್ತು ಗಿಲ್​ ತಂಗಿ ಜತೆಯಾಗಿ ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದ ವಿಡಿಯೊ ಕೂಡ ವೈರಲ್(​Viral Video) ಆಗಿತ್ತು. ಆದರೂ, ಈ ಜೋಡಿ ಡೇಟಿಂಗ್​ ಬಗ್ಗೆ ಎಲ್ಲಿಯೂ ಅಧಿಕೃತವಾಗಿ ತುಟಿ ಬಿಚ್ಚಿಲ್ಲ!

ಸಾರಾ ತೆಂಡೂಲ್ಕರ್ ಮತ್ತು ಗಿಲ್ ಡೇಟಿಂಗ್ ಸುದ್ದಿ ಕಳೆದ ಒಂದು ವರ್ಷದಿಂದ ಜಗತ್ತು ಸುತ್ತುತ್ತಿದೆ. ಆದಾಗ್ಯೂ, ಇಬ್ಬರೂ ವದಂತಿಯನ್ನು ನಿರಾಕರಿಸಿಲ್ಲ ಅಥವಾ ದೃಢಪಡಿಸಿಲ್ಲ. ಪಾಪರಾಜಿಗಳು ಇಬ್ಬರು ಸೆಲೆಬ್ರಿಟಿಗಳನ್ನು ಸಾರ್ವಜನಿಕವಾಗಿ ಸಾಕಷ್ಟು ಬಾರಿ ಪ್ರಶ್ನಿಸಿದ್ದಾರೆ. ಕಾಫಿ ವಿತ್ ಕರಣ್ ಸಂಚಿಕೆಯಲ್ಲಿ, ಸಾರಾ ಅಲಿ ಖಾನ್, ಗಿಲ್ ನನ್ನೊಂದಿಗೆ ಡೇಟಿಂಗ್ ಮಾಡುತ್ತಿಲ್ಲ. ಅವರು ಬೇರೆ ಸಾರಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಹೇಳುವ ಅಭಿಮಾನಿಗಳ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದ್ದರು. ಕ್ರಿಕೆಟ್​ ಅಭಿಮಾನಿಗಳೇ ನೀವು ತಪ್ಪು ಹೇಳುತ್ತಿದ್ದೀರಿ. ಸಾರಾ ಕಾ ಸಾರಾ ದುನಿಯಾ ಗಲಾತ್ ಸಾರಾ ಕೆ ಪೀಚೆ ಪಡಾ ಹೈ (ಇಡೀ ಜಗತ್ತು ತಪ್ಪಾದ ಸಾರಾಳ ಹಿಂದೆ ಬಿದ್ದಿದೆ) ಎಂದು ಸಾರಾ ಅಲಿ ಖಾನ್ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು. ಈ ಮೂಲಕ ಗಿಲ್ ಅವರ ಕ್ರಸ್​ ಸಾರಾ ತೆಂಡೂಲ್ಕರ್​ ಎನ್ನುವ ಸುಳಿವು ನೀಡಿದ್ದರು.

Continue Reading

ಕ್ರೀಡೆ

CSK vs RCB: ಮತ್ತೆ ಆರ್​ಸಿಬಿ, ಕೊಹ್ಲಿಯ ಬಗ್ಗೆ ಕಿಡಿಕಾರಿದ ಚೆನ್ನೈ ತಂಡದ ಮಾಜಿ ಆಟಗಾರ

CSK vs RCB: ರಾಯುಡು ಶುಕ್ರವಾರ ಟ್ವೀಟ್​ ಮಾಡಿ ಆರ್‌ಸಿಬಿ ತಂಡ ಇಷ್ಟು ವರ್ಷ ಟ್ರೋಫಿ ಗೆಲ್ಲದೇ ಇರುವುದಕ್ಕೆ ವಿರಾಟ್‌ ಕೊಹ್ಲಿ ಮತ್ತು ತಂಡದ ಮಾಲೀಕರೇ ಮುಖ್ಯ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

VISTARANEWS.COM


on

CSK vs RC
Koo

ಹೈದರಾಬಾದ್: ಬುಧವಾರ ನಡೆದಿದ್ದ ರಾಜಸ್ತಾನ ವಿರುದ್ಧದ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದ ಅವಮಾನಕ್ಕೆ ಸಿಲುಕಿತ್ತು. ಆರ್​ಸಿಬಿ ಸೋಲು ಕಾಣುತ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು(Ambati Rayudu) ಆರ್​ಸಿಬಿ(CSK vs RCB) ತಂಡವನ್ನು ಟ್ರೋಲ್​ ಮಾಡಿದ್ದರು. ಇದೀಗ ಮತ್ತೆ ನಾಲಿಗೆ ಹರಿಬಿಟ್ಟಿದ್ದು, ವಿರಾಟ್ ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ.

ಪ್ಲೇ ಆಫ್ಸ್‌ ರೇಸ್‌ನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಹೊರದಬ್ಬಿದ ದಿನದಿಂದಲೂ ಸಿಎಸ್‌ಕೆ ಮಾಜಿ ಬ್ಯಾಟರ್‌ ಅಂಬಾಟಿ ರಾಯುಡು ನಾನಾ ರೀತಿಯಲ್ಲಿ ಆರ್‌ಸಿಬಿ ತಂಡವನ್ನು ಟೀಕಿಸುತ್ತಾಲೇ ಬಂದಿದಿದ್ದರು. ಇವರಿಗೆ ಚೆನ್ನೈ ತಂಡದ ಅಭಿಮಾನಿಗಳು, ಹಾಲಿ ಆಟಗಾರರು ಕೂಡ ಉತ್ತಮ ಸಾಥ್​ ನೀಡಿದ್ದರು. ಇದೀಗ ರಾಯುಡು ಶುಕ್ರವಾರ ಟ್ವೀಟ್​ ಮಾಡಿ ಆರ್‌ಸಿಬಿ ತಂಡ ಇಷ್ಟು ವರ್ಷ ಟ್ರೋಫಿ ಗೆಲ್ಲದೇ ಇರುವುದಕ್ಕೆ ವಿರಾಟ್‌ ಕೊಹ್ಲಿ ಮತ್ತು ತಂಡದ ಮಾಲೀಕರೇ ಮುಖ್ಯ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

“ಆರ್‌ಸಿಬಿ ಬೆಂಬಲಿಗರನ್ನು ಕಂಡು ನನ್ನ ಹೃದಯ ಉಕ್ಕುತ್ತಿದೆ. ಹಲವು ವರ್ಷಗಳಿಂದ ಒಂದೇ ಉತ್ಸಾಹ ಮತ್ತು ಪ್ರೀತಿಯಿಂದ ಅವರು ತಮ್ಮ ತಂಡವನ್ನು ಬೆಂಬಲಿಸಿಕೊಂಡು ಬಂದಿದ್ದಾರೆ. ವ್ಯಕ್ತಿ ಪೂಜೆ ಮತ್ತು ವೈಯಕ್ತಿಕ ಮೈಲುಗಲ್ಲುಗಳಿಗಿಂತಲೂ ತಂಡಕ್ಕೆ ಟ್ರೋಫಿ ಗೆದ್ದುಕೊಡಬೇಕು ಎಂಬುದು ತಂಡದ ಉದ್ದೇಶ ಆಗಿದ್ದರೆ, ಈಗಾಗಲೇ ತಂಡ ಟ್ರೋಫಿ ಗೆಲ್ಲುತ್ತಿತ್ತು. ಆರ್‌ಸಿಬಿ ಕಳೆದ 17 ಆವೃತ್ತಿಯಲ್ಲಿ ಎಂತಹ ಅದ್ಭುತ ಆಟಗಾರರನ್ನು ಕೈಬಿಟ್ಟಿದೆ ಎಂಬುದನ್ನು ನೆನಪಿಸಿಕೊಳ್ಳಿ. ತಂಡಕ್ಕೆ ಮೊದಲ ಆದ್ಯತೆ ನೀಡುವ ಆಟಗಾರರನ್ನು ತರುವಂತೆ ಮ್ಯಾನೇಜ್ಮೆಂಟ್‌ ಮೇಲೆ ಒತ್ತಡ ಹಾಕಿ. ಮೆಗಾ ಆಕ್ಷನ್‌ ಮೂಲಕ ತಂಡ ಹೊಸ ಅಧ್ಯಾಯ ಬರೆಯಲಿ” ಎಂದು ರಾಯುಡು ಗೇಲಿ ಮಾಡಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

ರಾಜಸ್ಥಾನ್ ವಿರುದ್ಧ ಆರ್‌ಸಿಬಿ ಎಲಿಮಿನೇಟರ್‌ ಪಂದ್ಯದಲ್ಲಿ ಸೋತ ವೇಳೆ ರಾಯುಡು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೊ ಒಂದನ್ನು ಹಂಚಿಕೊಂಡು ‘5 ಬಾರಿ ಚಾಂಪಿಯನ್ಸ್‌ ಯಾರು ಎಂಬುದನ್ನು ಕೆಲವೊಮ್ಮೆ ನೆನಪಿಸಿಕೊಳ್ಳಬೇಕಾಗಿದೆ’ ಎಂದು ಬರೆದುಕೊಂಡಿದ್ದರು. ಈ ಪೋಸ್ಟ್ ಗೆ ಸಿಎಸ್‌ಕೆ ಆಟಗಾರರಾದ ದೀಪಕ್ ಚಹರ್‌, ಮತೀಶ ಪತಿರಣ ಮತ್ತು ತುಶಾರ್‌ ದೇಶಪಾಂಡೆ ಕಾಮೆಂಟ್‌ ಮಾಡುವ ಮೂಲಕ ಆರ್‌ಸಿಬಿ ತಂಡವನ್ನು ಗೇಲಿ ಮಾಡಿದ್ದರು.

ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ


“ಜೀವನದಲ್ಲಿ ನೀವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವಾಗ ನಿಮ್ಮ ಬಾಯಿ ಮುಚ್ಚಿಕೊಂಡು ಮುಂದುವರಿಯಿರಿ. ನೀವು ಮಾಡುತ್ತಿರುವ ಯಾವುದೇ ಕೆಲಸದ ವೇಳೆ ಗದ್ದಲ ಮಾಡಿದಾಗ ಆ ಕೆಲಸವನ್ನು ಉತ್ತಮವಾಗಿ ಮಾಡಲು ಸಾಧ್ಯವಿಲ್ಲ. ಆರ್​​ಸಿಬಿ ಅಭಿಮಾನಿಗಳು ಅನಗತ್ಯ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದರು. ಅತಿಯಾಗಿ ತೋರಿಸುತ್ತಿದ್ದರು. ಅದಕ್ಕಾಗಿಯೇ ಅಶ್ವಿನ್ ಮುಂದಿನ ಪಂದ್ಯದಲ್ಲಿ ಆರ್​ಸಿಬಿಯ ಅಹಂ ಇಳಿಸಿದರು. ಅದಕ್ಕಾಗಿಯೇ ಕ್ರಿಕೆಟ್​​ನಲ್ಲಿ ನಿಮ್ಮ ಬಾಯಿ ಮುಚ್ಚಿ ಆಡಬೇಕು ಎಂದು ಹೇಳುವುದು ಎಂದು ಶ್ರೀಕಾಂತ್ ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಹೇಳಿದ್ದಾರೆ.

Continue Reading

ಕ್ರೀಡೆ

Sunil Chhetri Farewell: ಫಿಫಾ ವಿಶ್ವಕಪ್ ಅರ್ಹತಾ ಪಂದ್ಯಕ್ಕೆ ಭಾರತ ತಂಡ ಪ್ರಕಟ; ಚೆಟ್ರಿಗೆ ವಿದಾಯ ಪಂದ್ಯ

Sunil Chhetri Farewell: ಕುವೈತ್(Kuwait) ವಿರುದ್ಧ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯಕ್ಕೆ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್‌ 27 ಸದಸ್ಯರ ಫುಟ್ಬಾಲ್ ತಂಡವನ್ನು ಪ್ರಕಟಿಸಿದೆ. ಫಾರ್ವರ್ಡ್ ಆಟಗಾರ ಪಾರ್ಥಿಬ್ ಗೊಗೊಯ್ ಮತ್ತು ಡಿಫೆಂಡರ್ ಮುಹಮ್ಮದ್ ಹಮ್ಮದ್ ಗಾಯಗೊಂಡ ಕಾರಣ ತಂಡದಿಂದ ಹೊರಗುಳಿದಿದ್ದಾರೆ.

VISTARANEWS.COM


on

Sunil Chhetri Farewell
Koo

ಬೆಂಗಳೂರು: ಭಾರತದ ಖ್ಯಾತ ಫುಟ್ಬಾಲ್(Indian football icon)​ ಆಟಗಾರ ಸುನೀಲ್‌ ಚೆಟ್ರಿ(Sunil Chhetri) ಅವರು ಆಡುವ ವಿದಾಯ(Sunil Chhetri Farewell) ಪಂದ್ಯವಾದ ಕುವೈತ್(Kuwait) ವಿರುದ್ಧ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯಕ್ಕೆ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್‌ 27 ಸದಸ್ಯರ ಫುಟ್ಬಾಲ್ ತಂಡವನ್ನು ಪ್ರಕಟಿಸಿದೆ. ಭಾರತ ಮತ್ತು ಕುವೈತ್(India vs Kuwait) ನಡುವಣ ಈ ಪಂದ್ಯ ಜೂನ್​ 6ರಂದು ನಡೆಯಲಿದೆ.

ಫಾರ್ವರ್ಡ್ ಆಟಗಾರ ಪಾರ್ಥಿಬ್ ಗೊಗೊಯ್ ಮತ್ತು ಡಿಫೆಂಡರ್ ಮುಹಮ್ಮದ್ ಹಮ್ಮದ್ ಗಾಯಗೊಂಡ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ತಂಡವನ್ನು ಮುಖ್ಯ ಕೋಚ್ ಇಗೊರ್ ಸ್ಟಿಮಾಕ್ ಪ್ರಕಟಿಸಿದರು. ಭಾರತ ಪ್ರಸ್ತುತ 4 ಪಂದ್ಯಗಳಿಂದ ನಾಲ್ಕು ಅಂಕಗಳೊಂದಿಗೆ ಗುಂಪಿನಲ್ಲಿ 2ನೇ ಸ್ಥಾನದಲ್ಲಿದೆ. ಗುಂಪಿನಲ್ಲಿ ಅಗ್ರ 2 ತಂಡಗಳು ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ 3ನೇ ಸುತ್ತಿಗೆ ಅರ್ಹತೆ ಪಡೆಯುತ್ತವೆ. ಹಾಗೆ 2027ರಲ್ಲಿ ಸೌದಿ ಅರೇಬಿಯಾದಲ್ಲಿ ನಡೆಯುವ ಎಎಫ್​ಸಿ ಏಷ್ಯನ್ ಕಪ್​​ಗೆ ತಮ್ಮ ಸ್ಥಾನ ಕಾಯ್ದಿರಿಸುತ್ತವೆ.

2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ Sunil Chhetri: ಭಾರತದ ಫುಟ್ಬಾಲ್‌ ಮಾಂತ್ರಿಕ ಸುನೀಲ್ ಚೆಟ್ರಿ ಕುರಿತ 8 ಕುತೂಹಲಕರ ಸಂಗತಿಗಳಿವು!

ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಅವರು 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ. ಸುನೀಲ್ ಕಾರಣಕ್ಕೆ ಭಾರತದಲ್ಲಿ ಫುಟ್ಬಾಲ್ ಆಕರ್ಷಣೆ ಹೆಚ್ಚಿತು ಮತ್ತು ಹೆಚ್ಚು ಯುವಜನತೆ ಫುಟ್ಬಾಲ್ ಆಡಲು ಶುರು ಮಾಡಿದರು ಅನ್ನುವ ಮಾತಿನಲ್ಲಿ ಉತ್ಪ್ರೇಕ್ಷೆ ಇಲ್ಲ!

ಭಾರತ ತಂಡ

ಗೋಲ್ ಕೀಪರ್ಸ್: ಗುರ್ಪ್ರೀತ್ ಸಿಂಗ್ ಸಂಧು, ಅಮರಿಂದರ್ ಸಿಂಗ್, ವಿಶಾಲ್ ಕೈತ್.

ಡಿಫೆಂಡರ್ಸ್: ಅಮೆ ರಾನವಾಡೆ, ಅನ್ವರ್ ಅಲಿ, ಜಯ್ ಗುಪ್ತಾ, ಲಾಲ್ಚುಂಗ್ನುಂಗಾ, ಮೆಹತಾಬ್ ಸಿಂಗ್, ನರೇಂದರ್, ನಿಖಿಲ್ ಪೂಜಾರಿ, ರಾಹುಲ್ ಭೆಕೆ, ಸುಭಾಶಿಶ್ ಬೋಸ್.

ಮಿಡ್ ಫೀಲ್ಡರ್ಸ್: ಅನಿರುದ್ಧ್ ಥಾಪಾ, ಬ್ರಾಂಡನ್ ಫರ್ನಾಂಡಿಸ್, ಎಡ್ಮಂಡ್ ಲಾಲ್ರಿಂಡಿಕಾ, ಜೀಕ್ಸನ್ ಸಿಂಗ್ ತೌನೋಜಮ್, ಲಾಲಿಯನ್ಜುವಾಲಾ ಚಾಂಗ್ಟೆ, ಲಿಸ್ಟನ್ ಕೊಲಾಕೊ, ಮಹೇಶ್ ಸಿಂಗ್ ನೌರೆಮ್, ನಂದಕುಮಾರ್ ಶೇಖರ್, ಸಹಲ್ ಅಬ್ದುಲ್ ಸಮದ್, ಸುರೇಶ್ ಸಿಂಗ್ ವಾಂಗ್ಜಾಮ್.

ಫಾರ್ವರ್ಡ್ಸ್: ಡೇವಿಡ್ ಲಾಲ್ಹನ್ಸಂಗ, ಮನ್ವೀರ್ ಸಿಂಗ್, ರಹೀಮ್ ಅಲಿ, ಸುನೀಲ್​ ಚೆಟ್ರಿ, ವಿಕ್ರಮ್ ಪ್ರತಾಪ್ ಸಿಂಗ್.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ ಟೂರ್ನಿಗೆ ಕಾಮೆಂಟರಿ ಬಳಗ ಘೋಷಿಸಿದ ಐಸಿಸಿ; ದಿನೇಶ್​ ಕಾರ್ತಿಕ್​ಗೂ ಸ್ಥಾನ

T20 World Cup 2024: ಬುಧವಾರವಷ್ಟೇ ಕ್ರಿಕೆಟ್​ಗೆ ನಿವೃತ್ತಿ ಹೇಳಿದ್ದ ಆರ್​ಸಿಬಿ ತಂಡದ ದಿನೇಶ್​ ಕಾರ್ತಿಕ್​(Dinesh Karthik) ಅವರು ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ವೀಕ್ಷಕ ವಿವರಣೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ

VISTARANEWS.COM


on

T20 World Cup 2024
Koo

ದುಬೈ: 2 ದಿನಗಳ ಹಿಂದಷ್ಟೇ ಕ್ರಿಕೆಟ್​ಗೆ ನಿವೃತ್ತಿ ಹೇಳಿದ್ದ ಆರ್​ಸಿಬಿ ತಂಡದ ದಿನೇಶ್​ ಕಾರ್ತಿಕ್​(Dinesh Karthik) ಅವರು ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಕರ್ತವ್ಯ ನಿರ್ವಹಿಸಲು ಸಜ್ಜಾಗಿದ್ದಾರೆ. ಇದೇ ಜೂನ್​ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆಯುವ ಮಿನಿ ವಿಶ್ವಕಪ್​ ಸಮರದಲ್ಲಿ ಕಾರ್ತಿಕ್​ ವೀಕ್ಷಕ ವಿವರಣೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಶುಕ್ರವಾರ ಐಸಿಸಿ ವೀಕ್ಷಕ ವಿವರಣೆಗಾರರ ಪಟ್ಟಿಯನ್ನು ಪ್ರಕಟಿಸಿತು. ಈ ಪಟ್ಟಿಯಲ್ಲಿ ದಿನೇಶ್​ ಕಾರ್ತಿಕ್​ ಸೇರಿ ಹಲವು ದೇಶಗಳ ತಾರಾ ಕಾಮೆಂಟೇಟರ್ ಕಾಣಿಸಿಕೊಂಡಿದ್ದಾರೆ.

ರವಿಶಾಸ್ತ್ರಿ, ನಾಸರ್ ಹುಸೇನ್, ಇಯಾನ್ ಸ್ಮಿತ್, ಮೆಲ್ ಜೋನ್ಸ್, ಹರ್ಷಾ ಭೋಗ್ಲೆ ಮತ್ತು ಇಯಾನ್ ಬಿಷಪ್ ಪ್ರಮುಖ ಆಕರ್ಷಣೆಯಾಗಿದ್ದಾರೆ. ಇವರ ಜತೆ ದಿನೇಶ್ ಕಾರ್ತಿಕ್, ಎಬೊನಿ ರೈನ್‌ಫೋರ್ಡ್-ಬ್ರೆನ್, ಸ್ಯಾಮುಯೆಲ್ ಬದ್ರಿ, ಕಾರ್ಲೊಸ್ ಬ್ರಾತ್ ವೇಟ್, ಸ್ಟೀವನ್​ ಸ್ಮಿತ್, ಫಿಂಚ್, ಲಿಸಾ ಸ್ತಾಲೆಕರ್ ಈ ಬಾರಿಯ ಕಾಮೆಂಟರಿ ಪ್ಯಾನೆಲ್​ನಲ್ಲಿ ಇರಲಿದ್ದಾರೆ.

ರಿಕಿ ಪಾಂಟಿಂಗ್, ಸುನಿಲ್ ಗವಾಸ್ಕರ್, ಮ್ಯಾಥ್ಯೂ ಹೇಡನ್, ರಮಿಜ್ ರಾಜಾ, ಇಯಾನ್ ಮಾರ್ಗನ್, ಟಾಮ್ ಮೂಡಿ ಮತ್ತು ವಾಸಿಮ್ ಅಕ್ರಮ್ ಪಂದ್ಯಕ್ಕೂ ಮುನ್ನ ನಡೆಯುವ ವಿಶ್ಲೇಷಣೆಯಲ್ಲಿ ತಂಡಗಳ ಮತ್ತು ಆಟಗಾರರ ಸಾಮರ್ಥದ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಉಳಿದಂತೆ ಡೇಲ್ ಸ್ಟೇನ್​, ಗ್ರೇಮ್ ಸ್ಮಿತ್, ಮೈಕೆಲ್ ಅಥರ್ಟನ್, ವಕಾರ್ ಯೂನಿಸ್, ಸೈಮನ್ ಡೌಲ್, ಶಾನ್ ಪೊಲಾಕ್, ಕೇಟಿ ಮಾರ್ಟಿನ್, ಎಂಪುಮೆಲೆಲೊ ಎಂಬಾಂಗ್ವಾ, ನಟಾಲಿ ಜರ್ಮನೋಸ್, ಡ್ಯಾನಿ ಮಾರಿಸನ್, ಅಲಿಸನ್ ಮಿಚೆಲ್, ಅಲನ್ ವಿಲ್ಕಿನ್ಸ್, ಬ್ರಿಯಾನ್ ಮುರ್ಗಟ್ರಾಯ್ಡ್, ಮೈಕ್ ಹೇಸ್‌ಮನ್, ಇಯಾನ್ ವಾರ್ಡ್, ಅಥರ್ ಅಲಿ ಖಾನ್, ರಸೆಲ್ ಅರ್ನಾಲ್ಡ್, ನಿಯಾಲ್ ಒ’ಬ್ರಿಯಾನ್, ಕಾಸ್ ನೈಡೋ ಮತ್ತು ಡ್ಯಾರೆನ್ ಗಂಗಾ ಕೂಡ ಟಿ20 ವಿಶ್ವಕಪ್ ನಲ್ಲಿ ಕಾಮೆಂಟರಿ ಮಾಡಲಿದ್ದಾರೆ.

ಇದನ್ನೂ ಓದಿ T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

ರಾಜಸ್ಥಾನದದ ರಾಯಲ್ಸ್​ ವಿರುದ್ಧದ ಎಲಿಮಿನೇಟರ್​ ಪಂದ್ಯವೇ ದಿನೇಶ್ ಕಾರ್ತಿಕ್(Dinesh Karthik)ಗೆ ವಿದಾಯ(dinesh karthik retirement) ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಆರ್​ಸಿಬಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತ್ತು. 17 ವರ್ಷಗಳ ಐಪಿಎಲ್​ ಜರ್ನಿಯಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಇದಾದ ಬಳಿಕ ಹಲವು ತಂಡಗಳ ಪರ ಆಡಿದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ.

2004 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪದಾರ್ಪಣೆ ಮಾಡಿದ ಕಾರ್ತಿಕ್​ ಭಾರತ ಪರ 26 ಟೆಸ್ಟ್‌ಗಳನ್ನು ಆಡಿ 1025 ರನ್ ಗಳಿಸಿದ್ದಾರೆ. 57 ಕ್ಯಾಚ್‌ಗಳು ಮತ್ತು 6 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಅವರು ತಮ್ಮ ಕೊನೆಯ ಟೆಸ್ಟ್ ಆಡಿದ್ದು 2018 ರಲ್ಲಿ. ಏಕದಿನದಲ್ಲಿ 94 ಪಂದ್ಯಗಳನ್ನು ಆಡಿ 1752 ರನ್ ಗಳಿಸಿದ್ದಾರೆ. 64 ಕ್ಯಾಚ್‌ಗಳು ಮತ್ತು 7 ಸ್ಟಂಪಿಂಗ್‌ಗಳನ್ನು ನಿರ್ವಹಿಸಿದ್ದಾರೆ. 60 ಟಿ20 ಪಂದ್ಯಗಳಿಂದ 686 ರನ್ ಗಳಿಸಿ, 30 ಕ್ಯಾಚ್‌ಗಳು ಮತ್ತು 8 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ.

Continue Reading
Advertisement
Phalodi Satta Bazar
ದೇಶ15 mins ago

Phalodi Satta Bazar: ಚುನಾವಣೆಯಲ್ಲಿ ಮೋದಿ ಹ್ಯಾಟ್ರಿಕ್ ಖಚಿತ; ಸಟ್ಟಾ ಬಜಾರ್‌ ಸಮೀಕ್ಷಾ ವರದಿ ಇಲ್ಲಿದೆ

Sara Tendulkar
ಕ್ರಿಕೆಟ್22 mins ago

Sara Tendulkar: ಲಂಡನ್​ ಯೂನಿವರ್ಸಿಟಿಯಿಂದ ಪದವಿ ಪಡೆದ ಸಾರಾ ತೆಂಡೂಲ್ಕರ್​; ಮಗಳ ಸಾಧನೆ ಕೊಂಡಾಡಿದ ಸಚಿನ್​

Liquor ban
ಕರ್ನಾಟಕ47 mins ago

Liquor ban: ಜೂ. 1ರಿಂದ ಐದು ದಿನ ಮದ್ಯ ಮಾರಾಟ ನಿಷೇಧ; ಖರೀದಿಗೆ ಮುಗಿಬಿದ್ದ ಎಣ್ಣೆ ಪ್ರಿಯರು!

Narendra Modi
ದೇಶ49 mins ago

Narendra Modi: 2047ರವರೆಗೆ ದೇಶಕ್ಕಾಗಿ ನನ್ನ ಸೇವೆ; ಇದು ದೇವರ ಆದೇಶ ಎಂದ ಮೋದಿ

HD Kumaraswamy slams CM Siddaramaiah about devegowda statement
ರಾಜಕೀಯ55 mins ago

HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

Former DGP Arrested
ಕ್ರೈಂ1 hour ago

Former DGP Arrested: ವಿಚ್ಛೇದಿತ ಪತ್ನಿಯ ದೂರು; ಮಾಜಿ ಡಿಜಿಪಿ ಜೈಲು ಪಾಲು

ಕ್ರೈಂ1 hour ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ 5ನೇ ಆರೋಪಿಗೆ ಲಷ್ಕರ್–ಎ–ತಯ್ಬಾ ಜತೆ ಲಿಂಕ್‌!

CSK vs RC
ಕ್ರೀಡೆ1 hour ago

CSK vs RCB: ಮತ್ತೆ ಆರ್​ಸಿಬಿ, ಕೊಹ್ಲಿಯ ಬಗ್ಗೆ ಕಿಡಿಕಾರಿದ ಚೆನ್ನೈ ತಂಡದ ಮಾಜಿ ಆಟಗಾರ

BSNL network problem in Hosanagara The lawyer decided to climb the tower and protest
ಕರ್ನಾಟಕ1 hour ago

Hosanagara News: ಹೊಸನಗರದಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಮಸ್ಯೆ; ಟವರ್‌ ಏರಿ ಪ್ರತಿಭಟನೆಗೆ ಮುಂದಾದ ವಕೀಲ!

union minister pralhad joshi spoke in North East Graduate Constituency Electoral Convention at ballari
ಕರ್ನಾಟಕ1 hour ago

MLC Election: ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ; ಸಚಿವ ಪ್ರಲ್ಹಾದ್‌ ಜೋಶಿ ವ್ಯಾಖ್ಯಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌