RR vs GT: ರಾಜಸ್ಥಾನ್​ ಬೇಟೆಗೆ ಸಿದ್ಧವಾದ ಗುಜರಾತ್​ ಟೈಟಾನ್ಸ್​ - Vistara News

ಕ್ರೀಡೆ

RR vs GT: ರಾಜಸ್ಥಾನ್​ ಬೇಟೆಗೆ ಸಿದ್ಧವಾದ ಗುಜರಾತ್​ ಟೈಟಾನ್ಸ್​

RR vs GT: ಗುಜರಾತ್​​ ತಂಡ ತವರಿನ ಪಂದ್ಯ ಬಿಟ್ಟು ಹೊರಗಡೆ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಸೋಲು ಕಂಡಿದೆ. ಹೀಗಾಗಿ ಈ ಪಂದ್ಯದಲ್ಲಿಯೂ ತಂಡದ ಮೇಲೆ ಹೆಚ್ಚಿನ ನಿರೀಕ್ಷೆ ಮಾಡುವಂತಿಲ್ಲ. ಬೌಲಿಂಗ್​ ಮತ್ತು ಬ್ಯಾಟಿಂಗ್​ ಸಾಧಾರಣ ಮಟ್ಟದಲ್ಲಿದೆ. ಅನುಭವಿ ಕೇನ್​ ವಿಲಿಯಮ್ಸನ್​ ಆಡಿದ 2 ಪಂದ್ಯಗಳಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದಾರೆ.

VISTARANEWS.COM


on

RR vs GT
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ಆಡಿದ 4 ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿ ಕೂಡ ಅಜೇಯ ತಂಡ ಎನಿಸಿಕೊಂಡಿರುವ ರಾಜಸ್ಥಾನ್​ ರಾಯಲ್ಸ್​(RR vs GT) ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿ ಪಂದ್ಯವನ್ನಾಡಲು ಸಜ್ಜಾಗಿದೆ. ಬುಧವಾರ ನಡೆಯುವ ಐಪಿಎಲ್​ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್​(Gujarat Titans) ತಂಡದ ಸವಾಲು ಎದುರಿಸಲಿದೆ. ಈ ಪಂದ್ಯಕ್ಕೆ ಸವಾಯಿ ಮಾನ್ ಸಿಂಗ್ ಸ್ಟೇಡಿಯಂ ಅಣಿಯಾಗಿದೆ.

ಬಟ್ಲರ್​ ಭರ್ಜರಿ ಬ್ಯಾಟಿಂಗ್​ ಫಾರ್ಮ್​


ಕಳೆದೊಂದು ವರ್ಷದಿಂದ ಬ್ಯಾಟಿಂಗ್​ ಬರಗಾಲ ಕಂಡಿದ್ದ ಜಾಸ್​ ಬಟ್ಲರ್​ ಅವರು ಕಳೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ತಮ್ಮ ಹಳೆಯ ಫಾರ್ಮ್​ಗೆ ಮರಳಿದ್ದು ರಾಜಸ್ಥಾನ್​ ತಂಡಕ್ಕೆ ಆನೆ ಬಲ ಬಂದಂತಾಗಿದೆ. ಜೈಸ್ವಾಲ್​ ಕೂಡ ಫಾರ್ಮ್ ಕಂಡುಕೊಂಡರೆ ತಂಡದ ಎಲ್ಲ ಚಿಂತೆ ದೂರವಾಗಲಿದೆ. ಬೌಲಿಂಗ್​ ವಿಭಾಗದಲ್ಲಿ ಯಾವುದೇ ಕೊರತೆ ಇಲ್ಲ. ಚಹಲ್​, ಅಶ್ವಿನ್​, ಬರ್ಗರ್​, ಅವೇಶ್​ ಖಾನ್​ ಮತ್ತು ಟ್ರೆಂಟ್​ ಬೌಲ್ಟ್​ ತಮ್ಮ ಆಯ್ಕೆಗೆ ತಕ್ಕ ಪ್ರದರ್ಶನ ನೀಡುತ್ತಿದ್ದಾರೆ. ನಾಯಕ ಸಂಜು ಕೂಡ ಉತ್ತಮ ಫಾಮ್​ನಲ್ಲಿದ್ದಾರೆ. ಹೀಗಾಗಿ ತಂಡ ಎಲ್ಲ ವಿಭಾಗದಲ್ಲಿಯೂ ಬಲಿಷ್ಠವಾಗಿದೆ.

ಗುಜರಾತ್​​ ತಂಡ ತವರಿನ ಪಂದ್ಯ ಬಿಟ್ಟು ಹೊರಗಡೆ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಸೋಲು ಕಂಡಿದೆ. ಹೀಗಾಗಿ ಈ ಪಂದ್ಯದಲ್ಲಿಯೂ ತಂಡದ ಮೇಲೆ ಹೆಚ್ಚಿನ ನಿರೀಕ್ಷೆ ಮಾಡುವಂತಿಲ್ಲ. ಬೌಲಿಂಗ್​ ಮತ್ತು ಬ್ಯಾಟಿಂಗ್​ ಸಾಧಾರಣ ಮಟ್ಟದಲ್ಲಿದೆ. ಅನುಭವಿ ಕೇನ್​ ವಿಲಿಯಮ್ಸನ್​ ಆಡಿದ 2 ಪಂದ್ಯಗಳಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಅವರನ್ನು ಕೈ ಬಿಟ್ಟು ಆಸ್ಟ್ರೇಲಿಯಾದ ಮ್ಯಾಥ್ಯೂ ವೇಡ್​ ಅವಕಾಶ ಪಡೆಯಬಹುದು. ಬೌಲಿಂಗ್​ ಕೂಡ ಚೆತರಿಕೆ ಕಾಣದ ಹೊರತು ಗೆಲುವು ದೂರದ ಬೆಟ್ಟವಾಗಿ ಉಳಿಯಲಿದೆ.

ಮುಖಾಮುಖಿ


ಇತ್ತಂಡಗಳ ಮುಖಾಮುಖಿ ನೋಡುವುದಾದರೆ ಈವರೆಗೆ 5 ಪಂದ್ಯಗಳನ್ನಾಡಿವೆ. ಈ ಪೈಕಿ ಗುಜರಾತ್​ ಗರಿಷ್ಠ 4 ಪಂದ್ಯ ಗೆದ್ದು ಬೀಗಿದೆ. ರಾಜಸ್ಥಾನ್​ ಕೇವಲ ಒಂದು ಪಂದ್ಯ ಮಾತ್ರ ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಗುಜರಾತ್​ ಮುಂದಿದ್ದರೂ ಕೂಡ ಅಂದಿನ ತಂಡಕ್ಕೂ ಈಗ ಇರುವ ತಂಡಕ್ಕೂ ಭಾರೀ ವ್ಯತ್ಯಾಸವಿದೆ. ಈಗ ರಾಜಸ್ಥಾನ್​ ಬಲಿಷ್ಠವಾಗಿದೆ.

ಇದನ್ನೂ ಓದಿ IPL 2024: ರಿಂಕು ಸಿಂಗ್​​ ಸಿಕ್ಸರ್‌ ಸುರಿಮಳೆಗೆ 1ನೇ ವರ್ಷದ ಸಂಭ್ರಮ; ಹೇಗಿತ್ತು ಅಂದಿನ ಸಿಕ್ಸರ್​?

ಉಭಯ ತಂಡಗಳು


ರಾಜಸ್ಥಾನ್​ ರಾಯಲ್ಸ್​: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನಾಂದ್ರೆ ಬರ್ಗರ್, ಯುಜ್ವೇಂದ್ರ ಚಹಾಲ್.

ಗುಜರಾತ್​ ಟೈಟಾನ್ಸ್​: ಶುಭಮನ್ ಗಿಲ್ (ನಾಯಕ), ಶರತ್ ಬಿಆರ್ (ವಿಕೆಟ್​ ಕೀಪರ್​), ಸಾಯಿ ಸುದರ್ಶನ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಉಮೇಶ್ ಯಾದವ್, ಸ್ಪೆನ್ಸರ್ ಜಾನ್ಸನ್, ದರ್ಶನ್ ನಲ್ಕಂಡೆ, ಮೋಹಿತ್ ಶರ್ಮಾ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

IND vs BAN: ಪಾಂಡ್ಯ ಬಲಿಷ್ಠ ಹೊಡೆತಕ್ಕೆ ನೆತ್ತರು ಚೆಲ್ಲಿದ ಬಾಂಗ್ಲಾ ಬೌಲರ್; ವಿಡಿಯೊ ವೈರಲ್​

IND vs BAN:ಕಾರು ಅಪಘಾತದ ಬಳಿಕ ಮೊದಲ ಬಾರಿ ಟೀಮ್​ ಇಂಡಿಯಾ ಪರ ಆಡಿದ ರಿಷಭ್​ ಪಂತ್​ ಪ್ರಚಂಡ ಬ್ಯಾಟಿಂಗ್​ ನಡೆಸುವ ಮೂಲಕ ಗಮನಸೆಳೆದರು. ಮೂರನೇ ಕ್ರಮಾಂಕದಲ್ಲಿ ಆಡಿದ ಪಂತ್​ ಬರೋಬ್ಬರಿ 4 ಬೌಂಡರಿ ಮತ್ತು 4 ಸಿಕ್ಸರ್​ ಬಾರಿಸಿ 53 ರನ್​ ಗಳಿಸಿದರು.

VISTARANEWS.COM


on

IND vs BAN
Koo

ನ್ಯೂಯಾರ್ಕ್: ಶನಿವಾರ ರಾತ್ರಿ ನಡೆದ ಬಾಂಗ್ಲಾದೇಶ(IND vs BAN) ವಿರುದ್ಧದ ಟಿ20 ವಿಶ್ವಕಪ್​ ಟೂರ್ನಿಯ(ICC Mens T20 World Cup) ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ 60 ರನ್​ಗಳ ಭರ್ಜರಿ ಗೆಲುವು ಸಾಧಿಸಿತು. ಐಪಿಎಲ್​ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದ ಹಾರ್ದಿಕ್​ ಪಾಂಡ್ಯ(Hardik Pandya) ಈ ಪಂದ್ಯದಲ್ಲಿ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಉತ್ತಮ ಪ್ರದರ್ಶನ ತೋರಿದರು. ಇದೇ ವೇಳೆ ಪಾಂಡ್ಯ ಬಾರಿಸಿದ ಪವರ್​ ಫುಲ್​ ಹೊಡೆತವೊಂದು​ ಶೋರಿಫುಲ್ ಇಸ್ಲಾಂ(Shoriful Islam) ಅವರ ಕೈಗೆ ತಾಗಿ ಗಾಯಗೊಂಡ ಘಟನೆಯೂ ಸಂಭವಿಸಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ರಿಷಭ್​ ಪಂತ್​ ಅವರ ಅರ್ಧಶತಕ ಮತ್ತು ಪಾಂಡ್ಯ ಅವರ ಅಜೇಯ 40 ರನ್​ಗಳ ನೆರವಿನಿಂದ 5 ವಿಕೆಟಿಗೆ 182 ರನ್‌ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾ 8 ವಿಕೆಟ್ ಕಳೆದುಕೊಂಡು 121 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು. ಬಾಂಗ್ಲಾ ತಂಡ ಇದಕ್ಕೂ ಮುನ್ನ ಆಡಿದ ಅಭ್ಯಾಸ ಪಂದ್ಯದಲ್ಲಿ ಅಮೆರಿಕ ವಿರುದ್ಧವೂ ಸೋಲು ಕಂಡಿತ್ತು.

ಇದನ್ನೂ ಓದಿ T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ಭಾರತದ ಬ್ಯಾಟಿಂಗ್​ ಇನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಹಾರ್ದಿಕ್ ಪಾಂಡ್ಯ ಸ್ಟ್ರೈಕ್​ನಲ್ಲಿದ್ದರು. ಬೌಲಿಂಗ್ ನಡೆಸುತ್ತಿದ್ದ ಶೋರಿಫುಲ್ ಇಸ್ಲಾಂ ಐದನೇ ಎಸೆತವನ್ನು ಯಾರ್ಕರ್ ಎಸೆದರು. ಈ ಎಸೆತವನ್ನು ಪಾಂಡ್ಯ ಬಲವಾಗಿ ಬೀಸಿದರು. ನೇರವಾಗಿ ಬಂದ ಚೆಂಡನ್ನು ತಡೆಯುವ ಯತ್ನದಲ್ಲಿ ಶೋರಿಫುಲ್ ಇಸ್ಲಾಂ ಅಂಗೈಗೆ ಗಾಯ ಮಾಡಿಕೊಂಡರು. ಚೆಂಡು ರಬಸವಾಗಿ ಬಂದಿದ್ದರಿಂದ ಶೋರಿಫುಲ್ ಎಡಗೈಗೆ ಗಾಯವಾಯಿತು. ಬಳಿಕ ರಕ್ತ ಸುರಿಯಲಾರಂಭಿಸಿತು. ಬೌಲರ್ ಮೈದಾನದಲ್ಲಿ ನರಳುತ್ತಿರುವುದನ್ನು ನೋಡಿದ ಫಿಸಿಯೋ ತಕ್ಷಣವೇ ಮೈದಾನಕ್ಕೆ ಬಂದು ಶೋರಿಫುಲ್ ಅವರನ್ನು ಅಲ್ಲಿಂದ ಕರೆದೊಯ್ದರು. ಮೈದಾನ ತೊರೆದ ಕಾರಣ ಕೊನೆಯ ಎಸೆತವನ್ನು ತಂಜಿಮ್ ಹಸನ್ ಬೌಲ್ ಮಾಡಿ ಓವರ್​ ಪೂರ್ತಿಗೊಳಿಸಿದರು. ಗಾಯವನ್ನು ನೋಡುವಾಗ ಶೋರಿಫುಲ್ ಲೀಗ್​ ಹಂತದ ಪಂದ್ಯವನ್ನಾಡುವುದು ಕೂಡ ಅನುಮಾನ ಎನ್ನುವಂತಿದೆ.

ಐಪಿಎಲ್​ನಲ್ಲಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡರಲ್ಲೂ ವಿಫಲವಾಗಿದ್ದ ಹಾರ್ದಿಕ್​ ಪಾಂಡ್ಯ ಅವರನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಿದಾಗ ಹಲವರು ಆಯ್ಕೆ ಸಮಿತಿಯ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಆದರೆ ಪಾಂಡ್ಯ ಅಭ್ಯಾಸ ಪಂದ್ಯದಲ್ಲಿ ಆಲ್​ರೌಂಡರ್​ ಪ್ರದರ್ಶನ ತೋರುವ ಮೂಲಕ ಆಯ್ಕೆ ಸಮಿತಿ ಮತ್ತು ತಂಡದ ವಿಶ್ವಾಸ ಹೆಚ್ಚಿಸುವಂತೆ ಮಾಡಿದ್ದಾರೆ. ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆದಿದ ಪಾಂಡ್ಯ ಬಿರುಸಿನ ಬ್ಯಾಟಿಂಗ್​ ಮೂಲಕ ಕೇವಲ 23 ಎಸೆತಗಳಿಂದ 2 ಬೌಂಡರಿ ಮತ್ತು 4 ಸಿಕ್ಸರ್‌ ಸಹಿತ ಅಜೇಯ 40 ರನ್ ಚಚ್ಚಿದರು. ಒಂದು ವಿಕೆಟ್​ ಕೂಡ ಕಿತ್ತರು.

ಕಾರು ಅಪಘಾತದ ಬಳಿಕ ಮೊದಲ ಬಾರಿ ಟೀಮ್​ ಇಂಡಿಯಾ ಪರ ಆಡಿದ ರಿಷಭ್​ ಪಂತ್​ ಪ್ರಚಂಡ ಬ್ಯಾಟಿಂಗ್​ ನಡೆಸುವ ಮೂಲಕ ಗಮನಸೆಳೆದರು. ತಮ್ಮ ನೆಚ್ಚಿನ ಒನ್​ ಹ್ಯಾಂಡ್​ ಸಿಕ್ಸರ್​ ಕೂಡ ಬಾರಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಿದ ಪಂತ್​ ಬರೋಬ್ಬರಿ 4 ಬೌಂಡರಿ ಮತ್ತು 4 ಸಿಕ್ಸರ್​ ಬಾರಿಸಿ 53 ರನ್​ ಗಳಿಸಿದರು.

Continue Reading

ಕ್ರೀಡೆ

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

T20 World Cup : ಇಲ್ಲಿನ ನಸ್ಸಾವು ಕೌಂಟಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ನಿಗದಿತ 20 ಓವರ್​​ಗಳಲ್ಲಿ 5 ವಿಕೆಟ್​ಗೆ 182 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಬಾಂಗ್ಲಾದೇಶ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್​ಗೆ 120 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

T 20 world cup
Koo

ನ್ಯೂಯಾರ್ಕ್​​: ಟಿ20 ವಿಶ್ವ ಕಪ್​ ಅಭಿಯಾನದ (T20 World Cup) ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡಿದೆ. ತನ್ನ ನೆರೆಯ ದೇಶ ಬಾಂಗ್ಲಾ ವಿರುದ್ಧದ ಹಣಾಹಣಿಯಲ್ಲಿ 60 ರನ್​ಗಳ ಭರ್ಜರಿ ವಿಜಯ ತನ್ನದಾಗಿಸಿಕೊಂಡಿದೆ. ವಿಕೆಟ್​ ಕೀಪರ್​ ಬ್ಯಾಟರ್ ರಿಷಭ್​ ಪಂತ್(53 ರನ್​, 32 ಎಸೆತ)​ ಹಾಗೂ ಹಾರ್ದಿಕ್ ಪಾಂಡ್ಯ (23 ಎಸೆತಕ್ಕೆ 43 ರನ್​) ಭಾರತ ಪರ ಬ್ಯಾಟಿಂಗ್​ನಲ್ಲಿ ಮಿಂಚಿದರೆ ಬೌಲಿಂಗ್​ನಲ್ಲಿ ಅರ್ಶ್​ದೀಪ್​ ಸಿಂಗ್​ (2 ವಿಕೆಟ್) ಪಡೆದರು. ಈ ಗೆಲುವಿನೊಂದಿಗೆ ಭಾರತ ತಂಡ ತನ್ನ ವಿಶ್ವಾಸ ಪ್ರದರ್ಶಿಸಿತು.

ಇಲ್ಲಿನ ನಸ್ಸಾವು ಕೌಂಟಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ನಿಗದಿತ 20 ಓವರ್​​ಗಳಲ್ಲಿ 5 ವಿಕೆಟ್​ಗೆ 182 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಬಾಂಗ್ಲಾದೇಶ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್​ಗೆ 120 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಮೊದಲು ಬ್ಯಾಟ್ ಮಾಡಿದ ಭಾರತ ಪರ ಇನಿಂಗ್ಸ್ ಆರಂಭಿಸಲು ಅವಕಾಶ ಪಡೆದ ಸಂಜು ಸ್ಯಾಮ್ಸನ್​ ಬ್ಯಾಟಿಂಗ್​ನಲ್ಲಿ ವೈಫಲ್ಯ ಕಂಡರು. ಅವರು 1 ರನ್​ಗೆ ಔಟಾದರು. ರೋಹಿತ್ ಶರ್ಮಾ ಕೂಡ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ಇರದೇ 23 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. 59 ರನ್​ಗಳಿಗೆ 2 ವಿಕೆಟ್​ ನಷ್ಟ ಮಾಡಿಕೊಂಡ ಭಾರತ ಉತ್ತಮ ಆರಂಭ ಪಡೆಯಲಿಲ್ಲ. ಆದರೆ ಬಳಿಕ ರಿಷಭ್​ ಪಂತ್​ ಹಾಗೂ ಸೂರ್ಯಕುಮಾರ್ ಯಾದವ್​ ಇನಿಂಗ್ಸ್​ ಕಟ್ಟಿದರು. ಪಂತ್ 32 ಎಸೆತಗಳಿಗೆ 4 ಸಿಕ್ಸರ್​ ಹಾಗೂ ಅಷ್ಟೇ ಸಂಖ್ಯೆಯ ಫೋರ್​ನೊಂದಿಗೆ 53 ರನ್ ಬಾರಿಸಿದರೆ ಸೂರ್ಯಕುಮಾರ್ ಯಾದವ್​​ 18 ಎಸೆತಕ್ಕೆ 4 ಫೋರ್​ ಸಮೇತ 31 ರನ್ ಕೊಡುಗೆ ಕೊಟ್ಟರು. ಹೀಗಾಗಿ ಭಾರತದ ರನ್​ 3 ವಿಕೆಟ್​ 103 ತಲುಪಿತು.

ಇದನ್ನೂ ಓದಿ: Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

ಶಿವಂ ದುಬೆ 14 ಎಸೆತಕ್ಕೆ 13 ರನ್ ಬಾರಿಸಿ ಔಟಾದರೆ ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ 24 ಎಸೆತಕ್ಕೆ 2 ಫೋರ್ ಹಾಗೂ 4 ಸಿಕ್ಸರ್ ಸಮೇತ 4 ರನ್ ಬಾರಿಸಿದರು. ಜಡೇಜ ಕೊಡುಗೆ 4 ರನ್​.

ಬಾಂಗ್ಲಾ ಬ್ಯಾಟಿಂಗ್ ವೈಫಲ್ಯ

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಬಾಂಗ್ಲಾ ದೇಶದ ಆರಂಭಿಕರು ಲಗುಬಗನೆ ವಿಕೆಟ್​ ಕಳೆದುಕೊಂಡರು. ತಂಜಿದ್​ ಹಸನ್​ 17 ರನ್ ಬಾರಿಸಿದರೆ ಸೌಮ್ಯ ಸರ್ಕಾರ್​ ಶೂನ್ಯಕ್ಕೆ ಔಟಾದರು. ಲಿಟನ್​ ದಾಸ್ 7 ರನ್ ಬಾರಿಸಿದರೆ ನಜ್ಮುಲ್ ಹೊಸೈನ್ ಕೂಡ ಸೊನ್ನೆ ಸುತ್ತಿದರು. 39 ರನ್​ಗೆ 4 ವಿಕೆಟ್ ಕಳೆದುಕೊಂಡು ಬಾಂಗ್ಲಾ ಗೆಲುವಿನ ಆಸೆ ಕೈಬಿಟ್ಟಿತು. ಬಳಿಕ ಶಕಿಬ್ ಅಲ್ ಹಸನ್​ 28 ರನ್ ಹಾಗೂ ಮಹಮ್ಮದುಲ್ಲಾ 40 ರನ್ ಬಾರಿಸುವ ಮೂಲಕ ತಂಡದ ಮರ್ಯಾದೆ ಕಾಪಾಡಿದರು. ಭಾರತ ಪರ ಬೌಲಿಂಗ್​ನಲ್ಲಿ ಅರ್ಶ್​ದೀಪ್ ಸಿಂಗ್​ ಮತ್ತು ಶಿವಂ ದುಬೆ ತಲಾ ಎರಡು ವಿಕೆಟ್ ಕಬಳಿಸಿದರು.

Continue Reading

ಪ್ರಮುಖ ಸುದ್ದಿ

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Dinesh Karthik: ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಡಿಕೆ ಆಗಿದ್ದ, ಐಪಿಎಲ್‌ನಲ್ಲಿ ಬೆಸ್ಟ್‌ ಫಿನೀಶರ್‌ ಎಂಬ ಖ್ಯಾತಿ ಗಳಿಸಿದ್ದ, ಭಾರತ ಕ್ರಿಕೆಟ್‌ ತಂಡಕ್ಕೂ ಅಮೂಲ್ಯ ಕೊಡುಗೆ ನೀಡಿದ ದಿನೇಶ್‌ ಕಾರ್ತಿಕ್‌ ಅವರು ಶನಿವಾರ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್‌ ಹಾಗೂ ವಿಡಿಯೊ ಹಂಚಿಕೊಂಡಿದ್ದಾರೆ.

VISTARANEWS.COM


on

Dinesh Karthik
Koo

ಚೆನ್ನೈ: ವೃತ್ತಿ ಹಾಗೂ ವೈಯಕ್ತಿಕ ಜೀವನದಲ್ಲಿ ಹಿನ್ನಡೆಗಳನ್ನು ಅನುಭವಿಸಿದರೂ, ಅವುಗಳನ್ನು ಮೆಟ್ಟಿ ನಿಂತು, ಕೊನೆಗೊಂದು ಗೆಲುವಿನ ನಗೆ ಬೀರುತ್ತಿದ್ದ, ವೃತ್ತಿಜೀವನದಲ್ಲಂತೂ ಫೀನಿಕ್ಸ್‌ನಂತೆ ಎದ್ದು ಬಂದಿದ್ದ, ಫಿನೀಶರ್‌ ಎಂದೇ ಖ್ಯಾತಿಯಾಗಿದ್ದ ಭಾರತ ಕ್ರಿಕೆಟ್‌ ತಂಡದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್ ದಿನೇಶ್‌ ಕಾರ್ತಿಕ್‌ (Dinesh Karthik) ಎಲ್ಲ ಮಾದರಿಯ ಕ್ರಿಕೆಟ್‌ಗೆ ಶನಿವಾರ (ಜೂನ್‌ 1) ವಿದಾಯ ಹೇಳಿದ್ದಾರೆ. ಜನ್ಮದಿನದಂದೇ (Birthday) ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್‌ ಹಾಗೂ ವಿಡಿಯೊ ಮೂಲಕ ಆರ್‌ಸಿಬಿ (RCB) ಅಭಿಮಾನಿಗಳ ಪಾಲಿನ ನೆಚ್ಚಿನ ಡಿಕೆ ನಿವೃತ್ತಿ ಘೋಷಿಸಿದ್ದಾರೆ.

“ಕೆಲವು ದಿನಗಳಿಂದ ನಾನು ಯೋಚಿಸುತ್ತಿದ್ದ ಕುರಿತು ಈಗ ಅಂತಿಮ ತೀರ್ಮಾನ ತೆಗೆದುಕೊಂಡಿದ್ದೇನೆ. ನಾನು ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಪಡೆದು, ಮುಂಬರುವ ಸವಾಲುಗಳನ್ನು ಎದುರಿಸಲು ನಾನು ಮುಂದಡಿ ಇಡುತ್ತಿದ್ದೇನೆ. ನನ್ನ ವೃತ್ತಿ ಜೀವನ ಪಯಣಕ್ಕೆ ಸಹಕಾರ ನೀಡಿದ ನನ್ನೆಲ್ಲ ತರಬೇತುದಾರರು, ನಾಯಕರು, ಆಯ್ಕೆದಾರರು, ತಂಡದ ಸದಸ್ಯರು, ಸಿಬ್ಬಂದಿಗೆ ಧನ್ಯವಾದಗಳು. ನಾನು ನನ್ನ ದೇಶವನ್ನು ಪ್ರತಿನಿಧಿಸಿದ್ದಕ್ಕೆ ಅದೃಷ್ಟವಂತ ಎಂದೇ ಭಾವಿಸುತ್ತೇನೆ” ಎಂಬುದಾಗಿ ಅವರು ಭಾವುಕ ಪೋಸ್ಟ್‌ ಮಾಡಿದ್ದಾರೆ.

19ನೇ ವಯಸ್ಸಿನಲ್ಲೇ ಪದಾರ್ಪಣೆ

19ನೇ ವಯಸ್ಸಿನಲ್ಲಿ ಅಂದರೆ 2004ರಲ್ಲಿ ಇಂಗ್ಲೆಂಡ್‌ ವಿರುದ್ಧದ ಏಕದಿನ ಪಂದ್ಯದಲ್ಲಿ ಅವರು ಪದಾರ್ಪಣೆ ಮಾಡಿದರು. 94 ಏಕದಿನ ಪಂದ್ಯಗಳನ್ನಾಡಿದ ಅವರು 9 ಅರ್ಧಶತಕಗಳೊಂದಿಗೆ 1,792 ರನ್‌ ಗಳಿಸಿದ್ದಾರೆ. ಟೆಸ್ಟ್‌ನಲ್ಲಿ 42 ಇನ್ನಿಂಗ್ಸ್‌ ಆಡಿ ಅವರು ಒಂದು ಶತಕದೊಂದಿಗೆ 1,025 ರನ್‌ ಗಳಿಸಿದ್ದಾರೆ. ಇನ್ನು 60 ಟಿ-20 ಪಂದ್ಯಗಳನ್ನು ಆಡಿ 686 ರನ್‌ ಗಳಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲೂ ಅವರು ಛಾಪು ಮೂಡಿಸಿದ್ದಾರೆ. ಸೈಯದ್‌ ಮುಷ್ತಾಕ್‌ ಅಲಿ, ರಣಜಿಯಲ್ಲೂ ಅವರು ಆಡಿದ್ದಾರೆ. ಅವರ ನಾಯಕತ್ವದಲ್ಲಿಯೇ ತಮಿಳುನಾಡು ತಂಡವು ಎರಡು ಬಾರಿ ಮುಷ್ತಾಕ್‌ ಅಲಿ ಟ್ರೋಫಿ ಗೆದ್ದಿದೆ.

ಐಪಿಎಲ್‌ನಲ್ಲಿ ಮೈಲುಗಲ್ಲು

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲೂ ದಿನೇಶ್‌ ಕಾರ್ತಿಕ್‌ ಮೈಲುಗಲ್ಲು ನೆಟ್ಟಿದ್ದಾರೆ. ಐಪಿಎಲ್‌ನಲ್ಲಿ 257 ಪಂದ್ಯಗಳನ್ನು ಆಡಿದ ದಿನೇಶ್‌ ಕಾರ್ತಿಕ್‌ 4,842 ರನ್‌ ಬಾರಿಸಿದ್ದಾರೆ. ಕೋಲ್ಕೊತಾ ನೈಟ್‌ ರೈಡರ್ಸ್‌, ಮುಂಬೈ ಇಂಡಿಯನ್ಸ್‌, ಡೆಲ್ಲಿ ಡೇರ್‌ ಡೆವಿಲ್ಸ್‌ ಪಂಜಾಬ್‌ ಕಿಂಗ್ಸ್‌ ಹಾಗೂ ಆರ್‌ಸಿಬಿ ಪರವಾಗಿ ಅವರು ಆಡಿದ್ದರು. ಅದರಲ್ಲೂ, ಆರ್‌ಸಿಬಿಯಲ್ಲಿ ಡಿ.ಕೆ. ಬೆಸ್ಟ್‌ ಫಿನೀಶರ್‌ ಎನಿಸಿದ್ದರು. ಆರ್‌ಸಿಬಿ ಅಭಿಮಾನಿಗಳು ಅವರನ್ನು ಪ್ರೀತಿಯಿಂದ ಕಾಣುತ್ತಿದ್ದರು. ಈ ಕುರಿತು ಹಲವು ಬಾರಿ ದಿನೇಶ್‌ ಕಾರ್ತಿಕ್‌ ಹೇಳಿದ್ದಾರೆ.

ದಿನೇಶ್‌ ಕಾರ್ತಿಕ್‌ ಅವರ ವೃತ್ತಿ ಬದುಕು ಇನ್ನೇನು ಮುಗಿಯಿತು ಎಂಬಷ್ಟರಲ್ಲಿಯೇ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ ಅವರು 2022ರ ಟಿ-20 ವಿಶ್ವಕಪ್‌ಗೂ ಆಯ್ಕೆಯಾಗಿದ್ದರು. ಪ್ರಸಕ್ತ ಐಪಿಎಲ್‌ ಟೂರ್ನಿಯಲ್ಲೂ ಡಿ.ಕೆ ಉತ್ತಮ ಆಟ ಆಡಿದ್ದರು. ಆರ್‌ಸಿಬಿ ಪರ 15 ಮ್ಯಾಚ್‌ಗಳಲ್ಲಿ ಅವರು 326 ರನ್‌ ಬಾರಿಸಿದ್ದರು. ಇನ್ನು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಸಿಕ್ಸರ್‌ ಬಾರಿಸಿ ಗೆಲುವು ತಂದುಕೊಟ್ಟಿದ್ದು ಮರೆಯಲಾಗದ ಇನ್ನಿಂಗ್ಸ್‌ ಆಗಿದೆ. ಅಷ್ಟೇ ಅಲ್ಲ, ಮೊದಲ ಪತ್ನಿ ಮಾಡಿದ ಮೋಸ, ಬಳಿಕ ವಿಚ್ಛೇದನ, ಅದರಿಂದಾದ ಮಾನಸಿಕ ಖಿನ್ನತೆಯಿಂದ ಎದ್ದುಬಂದ ದಿನೇಶ್‌ ಕಾರ್ತಿಕ್‌, ದೀಪಿಕಾ ಪಳ್ಳಿಕಲ್‌ ಅವರನ್ನು ಮದುವೆಯಾಗಿ, ಈಗ ಇಬ್ಬರು ಮಕ್ಕಳ ತಂದೆಯಾಗಿದ್ದಾರೆ. ಆ ಮೂಲಕ ಅವರು ವೈಯಕ್ತಿಕ ಜೀವನದಲ್ಲೂ ದೊಡ್ಡ ಹೋರಾಟಗಾರ ಎಂಬುದನ್ನು ಪ್ರೂವ್‌ ಮಾಡಿದ್ದಾರೆ. ಅಲ್‌ ದಿ ಬೆಸ್ಟ್‌ ಡಿ.ಕೆ.

ಇದನ್ನೂ ಓದಿ: Dinesh Karthik: ಪ್ಯಾರಿಸ್​ನಲ್ಲಿ ನೀರಜ್​ಗೆ ತೀವ್ರ ಪೈಪೋಟಿ ನೀಡಲು ಮುಂದಾದರೇ ದಿನೇಶ್​ ಕಾರ್ತಿಕ್​?; ಜಾವೆಲಿನ್​ ಅಭ್ಯಾಸದ ವಿಡಿಯೊ ವೈರಲ್​

Continue Reading

ಕ್ರೀಡೆ

IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

IPL 2025 Mega Auction: ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಹಲವು ಅನುಭವಿ ಆಟಗಾರರಿಂದ ಇಂಪ್ಯಾಕ್ಟ್​ ನಿಯಮದ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಬಿಸಿಸಿಐ ಕೂಡ ಮುಂದಿನ ಬಾರಿ ಈ ನಿಯಮದ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿತ್ತು. ಹೀಗಾಗಿ ಮುಂದಿನ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ನಿಯಮ ಕೈ ಬಿಟ್ಟರೂ ಅಚ್ಚರಿಯಿಲ್ಲ

VISTARANEWS.COM


on

IPL 2025 Mega Auction
Koo

ನವದೆಹಲಿ: ಮುಂದಿನ ವರ್ಷ ನಡೆಯುವ 18ನೇ ಆವೃತ್ತಿಯ ಐಪಿಎಲ್​ ಟೂರ್ನಿಗೆ(IPL 2025 Mega Auction) ಇದೇ ವರ್ಷಾಂತ್ಯದಲ್ಲಿ ಆಟಗಾರರ ಮಿನಿ ಹರಾಜು ನಡೆಯಲಿದೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಎಲ್ಲ 10 ತಂಡಗಳಿಗೆ ಗರಿಷ್ಠ 3 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ಕಲ್ಪಿಸಲಿದೆ ಎಂದು ವರದಿಯಾಗಿದೆ. ಜತೆಗೆ ಹರಾಜಿನಲ್ಲಿ ಒಂದು ರೈಟ್​ ಟು ಮ್ಯಾಚ್​ (ಆರ್​ಟಿಎಂ) ಕಾರ್ಡ್​ ಬಳಸಲು ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ.

ಈ ಆವೃತ್ತಿಯ ಐಪಿಎಲ್(IPL)​ ಟೂರ್ನಿ ನಡೆಯುತ್ತಿದ್ದ ವೇಳೆ ಐಪಿಎಲ್​ ಮುಖ್ಯಸ್ಥ ಅರುಣ್​ ಧುಮಾಲ್​ 3 ರಿಂದ 4 ಆಟಗಾರರನ್ನು ಮಾತ್ರ ರಿಟೇನ್​ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದರು. ಆದರೆ ಕೆಲ ಫ್ರಾಂಚೈಸಿಗಳು 6-8 ಆಟಗಾರರನ್ನೂ ರಿಟೇನ್​ ಮಾಡಿಕೊಳ್ಳಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿತ್ತು. ಇನ್ನು ಕೆಲ ಫ್ರಾಂಚೈಸಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಹೆಚ್ಚಿನ ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದರೆ ಇದು ನಿರುಪಯುಕ್ತ ಎನಿಸಲಿದೆ ಎಂದು ಫ್ರಾಂಚೈಸಿ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದರು. ಸದ್ಯ ಮಾಹಿತಿ ಪ್ರಕಾರ ಬಿಸಿಸಿಐ ಗರಿಷ್ಠ 3 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಮತ್ತು ಒಂದು ರೈಟ್​ ಟು ಮ್ಯಾಚ್​ (ಆರ್​ಟಿಎಂ) ಕಾರ್ಡ್​ ಬಳಸುವ ಅವಕಾಶ ಮಾತ್ರ ನೀಡಲಿದೆ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ಏನಿದು ಆರ್​ಟಿಎಂ ಕಾರ್ಡ್​?


ಆರ್​ಟಿಎಂ ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೆ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಧಿಕಾರಿಗಳ ಅಭಿಪ್ರಾಯ. ಐಪಿಎಲ್​ನಲ್ಲಿ ಇದುವರೆಗೆ ವಿರಾಟ್​ ಕೊಹ್ಲಿ (ಆರ್​ಸಿಬಿ), ಜಸ್​ಪ್ರೀತ್​ ಬುಮ್ರಾ(ಮುಂಬೈ) ಮಾತ್ರ ಒಂದೇ ತಂಡದ ಪರ ಆಡಿದ್ದಾರೆ. ಉಳಿದ ಆಟಗಾರರು ಬೇರೆ ಬೇರೆ ಫ್ರಾಂಚೈಸಿ ಪರ ಕನಿಷ್ಠ ಒಂದೆರಡು ವರ್ಷಗಳ ಕಾಲ ಆಡಿದ್ದಾರೆ.

ಇಂಪ್ಯಾಕ್ಟ್​ ನಿಯಮ ಕೈಬಿಡುವ ಸಾಧ್ಯತೆ!


ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಹಲವು ಅನುಭವಿ ಆಟಗಾರರಿಂದ ಇಂಪ್ಯಾಕ್ಟ್​ ನಿಯಮದ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಬಿಸಿಸಿಐ ಕೂಡ ಮುಂದಿನ ಬಾರಿ ಈ ನಿಯಮದ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿತ್ತು. ಹೀಗಾಗಿ ಮುಂದಿನ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ನಿಯಮ ಕೈ ಬಿಟ್ಟರೂ ಅಚ್ಚರಿಯಿಲ್ಲ. ಧೋನಿ ಅವರು ಇಂಪ್ಯಾಕ್ಟ್​ ನಿಯಮ ಇಲ್ಲವಾದರೆ ಮುಂದಿನ ಆವೃತ್ತಿ ಆಡುವುದು ಅನುಮಾನ ಎಂದು ಫ್ರಾಂಚೈಸಿ ಅಧಿಕಾರಿಯೊಬ್ಬರು ಹೇಳಿದ್ದರು. ಒಂದೊಮ್ಮೆ ಈ ನಿಯಮ ಕೈಬಿಟ್ಟರೆ ಆಗ ಧೋನಿ ಆಡುತ್ತಾರಾ ಎನ್ನುವ ಪ್ರಶ್ನೆಯೊಂದು ಮೂಡುವುದು ಸಹಜ.

Continue Reading
Advertisement
Prajwal Revanna Case
ಕರ್ನಾಟಕ7 mins ago

Hassan MP Prajwal Revanna case: ಮೊಂಡಾಟ ಬಿಡದ ಪ್ರಜ್ವಲ್‌; ಇಂದೇ ಸ್ಥಳ ಮಹಜರಿಗೆ SIT ಪ್ಲ್ಯಾನ್‌

Actor Suriya visits temple ahead of Suriya 44
ಕಾಲಿವುಡ್16 mins ago

Actor Suriya: ಹೊಸ ಸಿನಿಮಾ ಶೂಟಿಂಗ್‌ ಶುರು ಮಾಡಿದ ನಟ ಸೂರ್ಯ!

IND vs BAN
ಕ್ರೀಡೆ20 mins ago

IND vs BAN: ಪಾಂಡ್ಯ ಬಲಿಷ್ಠ ಹೊಡೆತಕ್ಕೆ ನೆತ್ತರು ಚೆಲ್ಲಿದ ಬಾಂಗ್ಲಾ ಬೌಲರ್; ವಿಡಿಯೊ ವೈರಲ್​

Assembly Election Results 2024:
ದೇಶ35 mins ago

Assembly Election Results 2024: ಇಂದು ಅರುಣಾಚಲ ಪ್ರದೇಶ & ಸಿಕ್ಕಿಂ ರಿಸಲ್ಟ್‌; 10 ಅಭ್ಯರ್ಥಿಗಳು ಅವಿರೋಧ ಆಯ್ಕೆ

Weather Updates
ಮಳೆ1 hour ago

Weather Updates:ಇಡೀ ರಾತ್ರಿ ಭಾರೀ ಮಳೆ; ಮುಂಗಾರು ಆರಂಭದಲ್ಲೇ ಬೆಂಗಳೂರು ಅಸ್ತವ್ಯಸ್ತ

cyber attack ನನ್ನ ದೇಶ ನನ್ನ ದನಿ
ಅಂಕಣ2 hours ago

ಸೈಬರ್‌ ಸೇಫ್ಟಿ ಅಂಕಣ: 2024ರ ಸೈಬರ್‌ ಸೆಕ್ಯುರಿಟಿ ಟ್ರೆಂಡ್‌ಗಳು

ನನ್ನ ದೇಶ ನನ್ನ ದನಿ baman das basu
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಬ್ರಿಟಿಷರು ಬರುವ ಮೊದಲು ರಸ್ತೆಗಳೇ ಇರಲಿಲ್ಲವಾದರೆ, ಕೃಷ್ಣದೇವರಾಯನ ಭಾರಿ ಸೈನ್ಯ ಆಕಾಶದಲ್ಲಿ ಹಾರಾಡುತ್ತಿತ್ತೇ?

Karnataka weather Forecast
ಮಳೆ2 hours ago

Karnataka Weather : ಮೇಲ್ಮೈ ಸುಳಿಗಾಳಿ ಎಫೆಕ್ಟ್‌; ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

Heatwave Effect
ಆರೋಗ್ಯ3 hours ago

Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

Dina Bhavishya
ಭವಿಷ್ಯ4 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು16 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌