Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್​ Vistara News

ಕ್ರಿಕೆಟ್

Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್​

ಏಷ್ಯಾ ಕಪ್​ಗೆ ಭಾರತದ ಎರಡನೇ ಹಂತದ ತಂಡವನ್ನು ಕಳುಹಿಸಲಾಗಿದೆ. ಆ ತಂಡವನ್ನು ಋತುರಾಜ್ ಗಾಯಕ್ವಾಡ್​ (Ruturaj Gaikwad)ಮುನ್ನಡೆಸಲಿದ್ದಾರೆ.

VISTARANEWS.COM


on

Ruturaj Gaikwad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪುಣೆ: ಮಹಾರಾಷ್ಟ್ರ ಮೂಲದ ಬ್ಯಾಟರ್​ ಋತುರಾಜ್​ ಗಾಯಕ್ವಾಡ್​ (Ruturaj Gaikwad) ಏಷ್ಯನ್​ ಗೇಮ್ಸ್​ನಲ್ಲಿ ಭಾರತ ಕ್ರಿಕೆಟ್​ ತಂಡದ ನೇತೃತ್ವ ವಹಿಸಿದ್ದಾರೆ. ಆದರೆ, ವಿವಿಎಸ್​ ಲಕ್ಷ್ಮಣ್​ ನೇತೃತ್ವದ ಕೋಚಿಂಗ್​ ಸಿಬ್ಬಂದಿ ಜತೆಗೆ ಆಟಗಾರರೆಲ್ಲರೂ ಚೀನಾ ತಲುಪಿದ್ದಾರೆ. ಆದರೆ, ಋತುರಾಜ್​ ತಡವಾಗಿ ಹೊರಟಿದ್ದಾರೆ. ಮಂಗಳವಾರ ಅವರು ಚೀನಾದ ಫ್ಲೈಟ್ ಹತ್ತಿದ್ದಾರೆ. ಪ್ರವಾಸ ಆರಂಭಿಸುವ ಮೊದಲು ಅವರು ಪುಣೆಯ ವಿಶ್ವಪ್ರಸಿದ್ಧ ಶ್ರೀಮಂತ ದಗಡೂಶೇಠ್​ ಹಲ್ವಾಯಿ ಗಣಪತಿ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ದಗಡೂಶೇಟ್​ ಗಣಪತಿ ಮಂದಿರ ಪುಣೆ ನಗರದ ಮಧ್ಯದಲ್ಲಿದ್ದು ವರ್ಷಕ್ಕೆ ಲಕ್ಷಾಂತರ ಮಂದಿ ಇಲ್ಲಿಗೆ ಭೇಟಿ ನೀಡುತ್ತಾರೆ. ವಿಘ್ನ ನಿವಾರಕನಾದ ಗಣಪ ಇಲ್ಲಿಗೆ ಬರುವ ಭಕ್ತರ ಅಭಿಲಾಷೆಗಳನ್ನು ಈಡೇರಿಸುತ್ತಾನೆ ಎಂಬ ನಂಬಿಕೆ ಎಲ್ಲರದು. ಅಂತೆಯೇ ಏಷ್ಯನ್​ ಗೇಮ್ಸ್​ಗೆ ಹೊರಟಿರುವ ಋತುರಾಜ್​ ಗಾಯಕ್ವಾಡ್​ ತಮ್ಮ ಪ್ರಾರ್ಥನೆ ಸಲ್ಲಿಸಲು ಗಣಪತಿ ದೇವಳಕ್ಕೆ ಹೋಗಿದ್ದಾರೆ.

ಋತುರಾಜ್​ ಗಾಯಕ್ವಾಡ್ ಅವರೊಂದಿಗೆ ಪತ್ನಿ ಉತ್ಕರ್ಷ ಪವಾರ್​ ಕೂಡ ಇದ್ದರು. ಋತುರಾಜ್ ಮತ್ತು ಉತ್ಕರ್ಷ ಅವರು ಐಪಿಎಲ್ ಮುಕ್ತಾಯಗೊಂಡ ತಕ್ಷಣ ವಿವಾಹವಾಗಿದ್ದರು. ಅವರಿಬ್ಬರ ವಿವಾಹ ಆಯೋಜನೆಗೊಂಡಿದ್ದ ಕಾರಣ ವಿಶ್ವ ಟೆಸ್ಟ್​ ಚಾಂಪಿಯನ್​ಷಿನ್​ನ ಫೈನಲ್​ ಪಂದ್ಯದಲ್ಲಿ ಬ್ಯಾಕ್​ ಅಪ್​ ಆಟಗಾರನಾಗಿ ಆಯ್ಕೆಗೊಂಡಿದ್ದ ಋತುರಾಜ್​ ಇಂಗ್ಲೆಂಡ್​ಗೆ ಪ್ರವಾಸ ಮಾಡಿರಲಿಲ್ಲ.

ಋತುರಾಜ್ ಗಾಯಕ್ವಾಡ್​ಗೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಆಡುವ ಅವಕಾಶ ಸಿಕ್ಕಿತ್ತು. ಮೊದಲ ಪಂದ್ಯದಲ್ಲಿ ಅವರು ಅರ್ಧ ಶತಕ ಬಾರಿಸುವ ಮೂಲಕ ಮಿಂಚಿದ್ದರು. ಅಲ್ಲದೆ, ಏಷ್ಯಾ ಕಪ್​ಗೆ ಮೊದಲು ಅವರಿಗೆ ಫುಲ್ ಅಭ್ಯಾಸ ದೊರಕಿದಂತಾಗಿದೆ.

ಎರಡನೇ ಹಂತದ ಹಂತ

ಅಕ್ಟೊಬರ್ 5ರಂದು ಭಾರತದ ಆತಿಥ್ಯದಲ್ಲಿ ವಿಶ್ವ ಕಪ್ ಆರಂಭವಾಗಲಿದೆ. ಹೀಗಾಗಿ ಏಷ್ಯನ್ ಗೇಮ್ಸ್​ಗೆ ಎರಡನೇ ಹಂತದ ತಂಡವನ್ನು ಕಳುಹಿಸಲಾಗಿದೆ. ಆರಂಭಿಕ ತಂಡವನ್ನು ಜುಲೈನಲ್ಲಿ ಹೆಸರಿಸಲಾಯಿತು. ಬಳಿಕ ಒಂದು ಬದಲಾವಣೆ ಮಾಡಲಾಯಿತು ಆರಂಭಿಕ ತಂಡದಲ್ಲಿದ್ದ ಶಿವಂ ಮಾವಿ ಬದಲಿಗೆ ಆಕಾಶ್ ದೀಪ್ ಅವರನ್ನು ಏಷ್ಯನ್ ಗೇಮ್ಸ್ 2023 ಗಾಗಿ ಭಾರತೀಯ ಪುರುಷರ ಕ್ರಿಕೆಟ್ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಮಾವಿ ಬೆನ್ನುನೋವಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಹ್ಯಾಂಗ್ಝೌಗೆ ಪ್ರಯಾಣಿಸುವುದಿಲ್ಲ.

ಇದನ್ನೂ ಓದಿ : Asia Cup 2023 : ಏಷ್ಯಾಕಪ್ ಗೆದ್ದ ರೋಹಿತ್ ಶರ್ಮಾ ಬಳಗಕ್ಕೆ ಪ್ರಧಾನಿ ಮೋದಿ ಅಭಿನಂದನೆ, ಏನಂದ್ರು ಅವರು?

ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 8 ರವರೆಗೆ ನಡೆಯಲಿರುವ ಏಷ್ಯನ್ ಗೇಮ್ಸ್ 2023 ರ ಪುರುಷರ ಕ್ರಿಕೆಟ್ ಈವೆಂಟ್ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 8 ರವರೆಗೆ ನಡೆಯಲಿದೆ. ಎಲ್ಲಾ ಪಂದ್ಯಗಳು ಪಿಂಗ್ಫೆಂಗ್ ಕ್ರಿಕೆಟ್ ಫೀಲ್ಡ್ಸ್​​ನ ಝೆಜಿಯಾಂಗ್ ಯುನಿವರ್ಸಿಟಿ ಆಫ್ ಟೆಕ್ನಾಲಜಿಯಲ್ಲಿ ನಡೆಯಲಿವೆ.

ಅಕ್ಟೋಬರ್ 5 ರಿಂದ ಭಾರತದಲ್ಲಿ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಪ್ರಾರಂಭವಾಗಲಿದ್ದು, ಭಾರತವು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಇತರರಂತಹ ಮೊದಲ ತಂಡದ ನಿಯಮಿತ ಆಟಗಾರರಿಲ್ಲದೆ ಹ್ಯಾಂಗ್ಝೌ ಕ್ರೀಡಾಕೂಟದಲ್ಲಿ ಹೆಚ್ಚಾಗಿ ಎರಡನೇ ಸ್ಟ್ರಿಂಗ್ ತಂಡವನ್ನು ಕಣಕ್ಕಿಳಿಸಲಿದೆ.

ಏಷ್ಯನ್​ ಗೇಮ್ಸ್​ಗೆ ಭಾರತ ತಂಡ

ಋತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಷ್ದೀಪ್ ಸಿಂಗ್, ಮುಖೇಶ್ ಕುಮಾರ್, ಶಿವಂ ದುಬೆ, ಪ್ರಭ್ಸಿಮ್ರನ್ ಸಿಂಗ್ (ವಿಕೆಟ್ ಕೀಪರ್), ಆಕಾಶ್ ದೀಪ್.

ಮೀಸಲು ಆಟಗಾರರು: ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಸಾಯಿ ಸುದರ್ಶನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Danish Kaneria: ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ; ಕಾರಣವೇನು?

Danish Kaneria: ರಾಹುಲ್‌ ಗಾಂಧಿ ವಿರುದ್ಧ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಅವರೇನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

danish
Koo

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ (ICC Cricket World Cup 2023)ಗೆ ಅದ್ಧೂರಿಯಾಗಿ ತೆರೆ ಎಳೆಯಲಾಗಿದೆ. ನವೆಂಬರ್​ 19ರಂದು ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡವನ್ನು ಸೋಲಿಸಿ ಆಸ್ಟ್ರೇಲಿಯಾ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಫೈನಲ್‌ ಪಂದ್ಯ ವೀಕ್ಷಣೆಗೆ ಪ್ರಧಾನಮಂತ್ರಿ ನರೆಂದ್ರ ಮೋದಿ (Narendra Modi) ಸ್ಟೇಡಿಯಮ್‌ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದರು. ಮೋದಿ ʼಪನೌತಿʼ (ದುರದೃಷ್ಟದ ವ್ಯಕ್ತಿ). ಇದರಿಂದಲೇ ಭಾರತ ಸೋಲು ಕಂಡಿತ್ತು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಲೇವಡಿ ಮಾಡಿದ್ದರು. ಇದೀಗ ಈ ಚರ್ಚೆಗೆ ಪಾಕಿಸ್ತಾನದ ಮಾಜಿ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ (Danish Kaneria) ಎಂಟ್ರಿ ಕೊಟ್ಟಿದ್ದು, ಹೆಸರು ಹೇಳದೆ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದಾನಿಶ್ ಕನೇರಿಯಾ ಹೇಳಿದ್ದೇನು?

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ದಾನಿಶ್ ಕನೇರಿಯಾ “ಪನೌತಿ ಕೌನ್?” (ಈಗ ಯಾರು ದುರದೃಷ್ಟವಂತರು?) ಎಂದು ಪ್ರಶ್ನಿಸಿದ್ದಾರೆ. ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋತಿದ್ದು, ಇದನ್ನೇ ಮುಂದಿಟ್ಟುಕೊಂಡು ಅವರು ರಾಹುಲ್‌ ಗಾಂಧಿಯ ಕಾಲೆಳೆದಿದ್ದಾರೆ. ಈ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ.

ಮಾಜಿ ಕ್ರಿಕೆಟಿಗ ತಮ್ಮ ಪೋಸ್ಟ್‌ನಲ್ಲಿ ಯಾರ ಹೆಸರನ್ನೂ ಉಲ್ಲೇಖಿಸಿಲ್ಲ. ಆದರೂ ಬಹುತೇಕರು ಇದು ರಾಹುಲ್‌ ಗಾಂಧಿ ಅವರನ್ನು ಉದ್ದೇಶಿಸಿಯೇ ಹೇಳಿದ್ದು ಎಂದು ಊಹಿಸಿದ್ದಾರೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ. ಈ ಮಧ್ಯೆ ತೆಲಂಗಾಣದಲ್ಲಿ ಗದ್ದುಗೆಗೆ ಏರಿದ್ದೊಂದೇ ಕೈ ಪಡೆಗೆ ಸ್ವಲ್ಪ ಮಟ್ಟಿನ ಸಮಾಧಾನ ತಂದಕೊಟ್ಟ ಯಶಸ್ಸು.

ರಾಹುಲ್‌ ಗಾಂಧಿ ಹೇಳಿದ್ದೇನು?

ರಾಜಸ್ಥಾನದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ಭಾರತ ತಂಡ ಸೋತಿದ್ದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ʼಪನೌತಿʼ (ದುರದೃಷ್ಟದ ವ್ಯಕ್ತಿ) ಎಂದು ಕರೆದಿದ್ದರು. ಮೋದಿ ಕ್ರೀಡಾಂಗಣಕ್ಕೆ ಪ್ರವೇಶಿಸಿದ್ದರಿಂದ ಪಂದ್ಯವನ್ನು ಭಾರತ ತಂಡ ಸೋತಿತು ಎಂದು ಆರೋಪಿಸಿದ್ದರು. 

ಈ ಮಧ್ಯೆ ಬಿಜೆಪಿ ನಾಯಕ ಸಿ.ಟಿ.ರವಿ ಕೂಡ ರಾಹುಲ್ ಗಾಂಧಿ ಹೇಳಿಕೆಗೆತಿರುಗೇಟು ನೀಡಿದ್ದಾರೆ. ‘ಅತಿ ದೊಡ್ಡ ಪನೌತಿ ಯಾರು?’ ಎಂದು ಪ್ರಶ್ನಿಸಿದ್ದಾರೆ. ಅವರು ಒಂದು ಹೆಜ್ಜು ಮುಂದೆ ಹೋಗಿ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರನ್ನು ಟ್ಯಾಗ್ ಮಾಡಿದ್ದರು. ಸದ್ಯ ದಾನಿಶ್ ಕನೇರಿಯಾ ಪೋಸ್ಟ್‌ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ.

ಇದನ್ನೂ ಓದಿ: ಇಲ್ಲ, ಆಕೆ ನನ್ನನ್ನು ಪಿಎಂ ಮಾಡಲ್ಲ! ಪ್ರಣಬ್ ಮುಖರ್ಜಿ ಹಾಗೇಕೆ ಹೇಳಿದ್ದು?

ಯಾರು ಈ ದಾನಿಶ್ ಕನೇರಿಯಾ?

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ 2000 ಮತ್ತು 2010ರ ನಡುವೆ ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಪರವಾಗಿ ಆಡಿದ್ದಾರೆ. ಗೂಗ್ಲಿ ಬೌಲಿಂಗ್ ಮಾಡಬಲ್ಲ ಬಲಗೈ ಲೆಗ್ ಸ್ಪಿನ್ನರ್ ಆಗಿದ್ದ ಕನೇರಿಯಾ ಪಾಕಿಸ್ತಾನ ಪರ 61 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 34.79 ಸರಾಸರಿಯಲ್ಲಿ 261 ವಿಕೆಟ್‌ ಪಡೆದುಕೊಂಡಿದ್ದಾರೆ. ಜತೆಗೆ 18 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಅವರು ತಮ್ಮ ಸೋದರ ಸಂಬಂಧಿ ಅನಿಲ್ ದಳಪತ್ ನಂತರ ಪಾಕಿಸ್ತಾನ ತಂಡವನ್ನು ಪ್ರತಿನಿಧಿಸಿದ ಎರಡನೇ ಹಿಂದೂ ಮತ್ತು ಒಟ್ಟಾರೆಯಾಗಿ ಏಳನೇ ಮುಸ್ಲಿಮೇತರ ಆಟಗಾರರಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading

ಕ್ರಿಕೆಟ್

IPL 2024 : ಐಪಿಎಲ್ ಹರಾಜಿನಲ್ಲಿ ಬೇಡಿಕೆ ಪಡೆಯಲಿರುವ ಆಲ್​​ರೌಂಡರ್​ಗಳು ಇವರು

IPL 2024 : ಫ್ರಾಂಚೈಸಿಗಳು ತಮ್ಮಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿಗಾಗಿ ಆಲ್​ರೌಂಡರ್​ಗಳನ್ನು ನೆಚ್ಚಿಕೊಳ್ಳಲಿದ್ದಾರೆ ಎನ್ನಲಾಗಿದೆ.

VISTARANEWS.COM


on

IPL Auction 1
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೆಚ್ಚು ಯಶಸ್ಸು ಪಡೆಯುವುದು ಆಲ್​ರೌಂಡರ್​ಗಳು. ಹೀಗಾಗಿ ಅವರಿಗೆ ಹರಾಜಿನಲ್ಲಿ ಹಚ್ಚು ಬೇಡಿಕೆ ಇರುತ್ತದೆ. ಚಾಂಪಿಯನ್ ತಂಡಗಳಂತೂ ಆಲ್​ರೌಂಡರ್​ಗಳ ದೊಡ್ಡ ಬಣವನ್ನೇ ಹೊಂದಿತ್ತು. ಗುಜರಾತ್ ಟೈಟಾನ್ಸ್ ತಂಡವನ್ನು ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ ಮುನ್ನಡೆಸಿದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿನಲ್ಲಿ ರವೀಂದ್ರ ಜಡೇಜಾ ಅವರ ಪಾತ್ರ ದೊಡ್ಡದಾಗಿದೆ. ಹೀಗಾಗಿ ಐಪಿಎಲ್ 2024 ಹರಾಜಿಗೆ ಕೇವಲ ಎರಡು ವಾರಗಳು ಬಾಕಿ ಇರುವಾಗ, ಹರಾಜಿನಲ್ಲಿ ಬೇಡಿಕೆ ಪಡೆಯಲಿರುವ ಆಲ್​ರೌಂಡರ್​ಗಳ ಕುರಿತು ನೋಡೋಣ.

ಪ್ರಮುಖ ಆಲ್​ರೌಂಡರ್​ಗಳ ವಿವರ ಇಂತಿದೆ

  • ಶಾರ್ದೂಲ್ ಠಾಕೂರ್: ಭಾರತದ ಬೌಲಿಂಗ್ ಆಲ್ರೌಂಡರ್
  • ಶಾರುಖ್ ಖಾನ್ ಭಾರತದ ಬ್ಯಾಟಿಂಗ್ ಆಲ್ರೌಂಡರ್
  • ಅಜ್ಮತುಲ್ಲಾ ಒಮರ್ಜೈ ಅಫ್ಘಾನಿಸ್ತಾನ ಬ್ಯಾಟಿಂಗ್ ಆಲ್​​ರೌಂಡರ್​
  • ಪ್ಯಾಟ್ ಕಮಿನ್ಸ್ ಆಸ್ಟ್ರೇಲಿಯಾ ಬೌಲಿಂಗ್ ಆಲ್ರೌಂಡರ್
  • ಡೇವಿಡ್ ವಿಲ್ಲಿ, ಇಂಗ್ಲೆಂಡ್ ಬೌಲಿಂಗ್ ಆಲ್ರೌಂಡರ್
  • ಕೈಲ್ ಜೇಮಿಸನ್, ನ್ಯೂಜಿಲೆಂಡ್ ಬೌಲಿಂಗ್ ಆಲ್ರೌಂಡರ್
  • ಶಕೀಬ್ ಅಲ್ ಹಸನ್ ಬಾಂಗ್ಲಾದೇಶದ ಬ್ಯಾಟಿಂಗ್ ಆಲ್ರೌಂಡರ್
  • ವನಿಂದು ಹಸರಂಗ ಶ್ರೀಲಂಕಾದ ಬೌಲಿಂಗ್ ಆಲ್ರೌಂಡರ್
  • ಮೈಕಲ್ ಬ್ರೇಸ್ವೆಲ್, ನ್ಯೂಜಿಲೆಂಡ್ ಬ್ಯಾಟಿಂಗ್ ಆಲ್ರೌಂಡರ್
  • ಒಡಿಯನ್ ಸ್ಮಿತ್ ವೆಸ್ಟ್ ಇಂಡೀಸ್ ಬೌಲಿಂಗ್ ಆಲ್ರೌಂಡರ್

ಬೌಲಿಂಗ್ ಆಲ್ ರೌಂಡರ್ ಗಳು

ಶಾರ್ದೂಲ್ ಠಾಕೂರ್, ಪ್ಯಾಟ್ ಕಮಿನ್ಸ್, ಡೇವಿಡ್ ವಿಲ್ಲಿ, ಕೈಲ್ ಜೇಮಿಸನ್, ವನಿಂದು ಹಸರಂಗ ಮತ್ತು ಒಡಿಯನ್ ಸ್ಮಿತ್ ಈ ವರ್ಗಕ್ಕೆ ಸೇರುತ್ತಾರೆ. ಸಾಮಾನ್ಯವಾಗಿ ಈ ಕ್ರಿಕೆಟಿಗರು ತಮ್ಮ ಬೌಲಿಂಗ್ ಸಾಮರ್ಥ್ಯದ ಮೂಲಕ ಯಾವುದೇ ಇಲೆವೆನ್​ಗೆ ಸೇರುವ ಅವಕಾಶನವನ್ನು ಹೊಂದಿರುತ್ತಾರೆ.

ಪ್ಯಾಟ್ ಕಮಿನ್ಸ್ ಬೌಲಿಂಗ್ ಆಲ್ರೌಂಡರ್​​ಗೆ ಉತ್ತಮ ಉದಾಹರಣೆ. ಟೂರ್ನಿಯ 6 ಆವೃತ್ತಿಗಳಲ್ಲಿ ಆಡಿರುವ ಅವರು 42 ಪಂದ್ಯಗಳಲ್ಲಿ 45 ವಿಕೆಟ್ ಪಡೆದಿದ್ದಾರೆ. ಐಪಿಎಲ್​​ನಲ್ಲಿ ಅವರ ಬ್ಯಾಟಿಂಗ್ ಅಷ್ಟೊಂದು ಬಲವಾಗಿ ಇರದ ಹೊರತಾಗಿಯೂ ಒಮ್ಮೊಮ್ಮೆ ಅಚ್ಚರಿ ಮೂಡಿಸಿದ್ದೂ ಇದೆ. ವೇಗದ ಬೌಲಿಂಗ್ ಆಲ್ರೌಂಡರ್ 152.21 ಸರಾಸರಿಯಲ್ಲಿ ಬ್ಯಾಟ್​ ಮಾಡಿದ್ದಾರೆ. ಐಪಿಎಲ್​​ನಲ್ಲಿ 3 ನೇ ಅತಿವೇಗ ವೇಗದ ಅರ್ಧ ಶತಕ ಬಾರಿಸಿದ್ದಾರೆ.

ಬ್ಯಾಟಿಂಗ್ ಆಲ್ರೌಂಡರ್​ಗಳು

ಮೈಕೆಲ್ ಬ್ರೇಸ್ವೆಲ್, ಶಾರುಖ್ ಖಾನ್, ಅಜ್ಮತುಲ್ಲಾ ಒಮರ್ಜೈ ಮತ್ತು ಶಕೀಬ್ ಅಲ್ ಹಸನ್ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಬೌಲಿಂಗ್ ಆಲ್ರೌಂಡರ್​ಗಳಿಗಿಂತ ಭಿನ್ನವಾಗಿ ಈ ಆಟಗಾರರು ಯಾವಾಗಲೂ ಅಗ್ರ ಕ್ರಮಾಂಕದ ಬ್ಯಾಟ್ಸ್​​ಮನ್​ಗಳಾಗಿರುವುದಿಲ್ಲ. ಅಜ್ಮತುಲ್ಲಾ ಮತ್ತು ಶಕೀಬ್ ತಮ್ಮ ರಕ್ಷಣಾತ್ಮಕ ಮತ್ತು ಆಕ್ರಮಣಕಾರಿ ಸಾಮರ್ಥ್ಯಗಳ ಆಧಾರದ ಮೇಲೆ ತಂಡವನ್ನು ರಚಿಸಬಹುದಾದರೂ ಬ್ರೇಸ್ವೆಲ್ ಮತ್ತು ಶಾರುಖ್ ಕೆಳ ಕ್ರಮಾಂಕದ ಬ್ಯಾಟರ್​ಗಳಾಗಿ ಮಾತ್ರ ಕರ್ತವ್ಯ ನಿರ್ವಹಿಸಬಲ್ಲರು.

ಇದನ್ನೂ ಓದಿ : Rahul Dravid : ರಿಚ್ಮಂಡ್​ ಸರ್ಕಲ್ ಫ್ಲೈಓವರ್​ ಕೆಳಗಡೆ ಕ್ರಿಕೆಟ್​ ಅಡಿದ ದ್ರಾವಿಡ್​, ಕುಂಬ್ಳೆ, ಶ್ರೀನಾಥ್​…

ಅಜ್ಮತುಲ್ಲಾ ಒಮರ್ಜೈ ಅಗ್ರ ಕ್ರಮಾಂಕಕ್ಕೆ ಸಂಪೂರ್ಣವಾಗಿ ಸರಿಹೊಂದುತ್ತಾರೆ. 2023 ರ ಏಕ ದಿನ ವಿಶ್ವ ಕಪ್​ನಲ್ಲಿ ಅವರು 9 ಪಂದ್ಯಗಳಲ್ಲಿ 350 ಕ್ಕೂ ಹೆಚ್ಚು ರನ್ ಮತ್ತು 7 ವಿಕೆಟ್​​ಗಳನ್ನು ಪಡೆಯುವ ಮೂಲಕ ತಂಡದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. ನೂರ್ ಅಹ್ಮದ್ ಮತ್ತು ಫಜಲ್ಹಕ್ ಫಾರೂಕಿ ಅವರಿಗಿಂತ ನಂತರದಲ್ಲಿ 23 ವರ್ಷದ ವೇಗಿ ಪಂದ್ಯಾವಳಿಯಲ್ಲಿ ತಮ್ಮ ದೇಶದ ಎರಡನೇ ಅತಿ ಹೆಚ್ಚು ರನ್ ಸ್ಕೋರರ್ ಮತ್ತು ಐದನೇ ಅತಿ ಹೆಚ್ಚು ವಿಕೆಟ್ ಪಡೆದವರಾಗಿದ್ದಾರೆ. ಟಿ 20 ಯಲ್ಲಿ ಅವರ ದಾಖಲೆಯೂ ತುಂಬಾ ಕಳಪೆಯಾಗಿಲ್ಲ. ಆಡಿದ 62 ಪಂದ್ಯಗಳಲ್ಲಿ, ಅವರು ಬ್ಯಾಟ್​ನಿಂದ 129.51 ಸರಾಸರಿಯಲ್ಲಿ ರನ್​ ಮಾಡಿದ್ದಾರೆ. 59 ವಿಕೆಟ್​​ಗಳನ್ನು ಪಡೆದಿದ್ದಾರೆ.

Continue Reading

ಕ್ರಿಕೆಟ್

IPL 2024 : ಐಪಿಎಲ್​ ಹರಾಜಿನಲ್ಲಿ ಆರ್​ಸಿಬಿ ಆಯ್ಕೆಮಾಡಿದ ಅತ್ಯುತ್ತಮ ಆಟಗಾರರ ವಿವರ ಇಲ್ಲಿದೆ

IPL 2024 : ಆರ್​ಸಿಬಿಯ ಅತ್ಯುತ್ತಮ ಆಯ್ಕೆಗಳಲ್ಲಿ ನಾಲ್ಕು ಬ್ಯಾಟರ್​ಗಳಲ್ಲಿ ಒಬ್ಬರು ಬೌಲರ್ ಇದ್ದಾರೆ. ಅವರು ಎಲ್ಲ ಕಾಲಕ್ಕೂ ಮಿಂಚಿದ್ದಾರೆ.

VISTARANEWS.COM


on

RCB Team
Koo

ಬೆಂಗಳೂರು: ಈ ಹಿಂದಿನ ಐಪಿಎಲ್ ಹರಾಜುಗಳಲ್ಲಿ (IPL 2024) ರಾಯಲ್ ಚಾಲೆಂಜರ್ಸ್ (RCB) ಗೆ ಅದ್ಭುತಗಳನ್ನು ಮಾಡಿದ ಆಟಗಾರರನ್ನು ಆಯ್ಕೆ ಮಾಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್​​ನ ಕಳೆದ 16 ಆವೃತ್ತಿಗಳಲ್ಲಿ, ಹಲವಾರು ಆಟಗಾರರು ಈ ತಂಡಕ್ಕೆ ತಮ್ಮ ಮೌಲ್ಯಕ್ಕಿಂತ ಹೆಚ್ಚಿನ ಮೌಲ್ಯವನ್ನು ನೀಡಿದ್ದಾರೆ. ಈ ಆಟಗಾರರು ತಮಗೆ ನೀಡಲಾದ ಬೆಲೆಯನ್ನು ಸಮರ್ಥಿಸಿಕೊಂಡಿದ್ದಾರೆ. ವಿಶ್ವದ ಶ್ರೀಮಂತ ಕ್ರಿಕೆಟ್​ ಲೀಗ್​ನ ಅತ್ಯಂತ ಜನಪ್ರಿಯ ಫ್ರಾಂಚೈಸಿಗಳಲ್ಲಿ ಆರ್​ಸಿಬಿ ಒಂದಾಗಲು ಅವರೆಲ್ಲರೂ ಸಹಾಯ ಮಾಡಿದ್ದಾರೆ. ಆದ್ದರಿಂದ, ಐಪಿಎಲ್ ಹರಾಜು ಇತಿಹಾಸದಲ್ಲಿ ಆರ್​ಸಿಬಿಯ ಅತ್ಯುತ್ತಮ ಆಯ್ಕೆಗಳು ಯಾವುದೆಂದು ನೋಡೋಣ.

  • ವಿರಾಟ್ ಕೊಹ್ಲಿ 2008 $30,000
  • ಎಬಿ ಡಿವಿಲಿಯರ್ಸ್ 2011 – 5.6 ಕೋಟಿ ರೂ.
  • ಕ್ರಿಸ್ ಗೇಲ್ 2011 – 2.9 ಕೋಟಿ ರೂ.
  • ಯಜುವೇಂದ್ರ ಚಾಹಲ್ 2014 – 10 ಲಕ್ಷ ರೂ.
  • ಗ್ಲೆನ್ ಮ್ಯಾಕ್ಸ್ವೆಲ್ 2021 – 14.25 ಕೋಟಿ ರೂ.

ಯಾವ ವರ್ಷ ಯಾವ ಆಟಗಾರ

ವಿರಾಟ್ ಕೊಹ್ಲಿ: ಕೇವಲ 30 ಸಾವಿರ ಡಾಲರ್​​ಗೆ ಆಯ್ಕೆಯಾದ ಕೊಹ್ಲಿ ಈಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶ್ರೇಷ್ಠ ಆಟಗಾರ ಹಾಗೂ ಅವಿಭಾಗ್ಯ ಅಂಗ. ಆರ್​ಸಿಬಿ ಎಂದರೆ ಕೊಹ್ಲಿ, ಕೊಹ್ಲಿ ಎಂದರೆ ಆರ್​​ಸಿಬಿ ಎನ್ನುವಷ್ಟು ಮಟ್ಟಕ್ಕಿದೆ. ಅವರು ತಂಡಕ್ಕೆ ಕೊಟ್ಟ ಹಣವನ್ನು ಬಡ್ಡಿಯೊಂದಿಗೆ ಮರುಪಾವತಿ ಮಾಡಿದ್ದಾರೆ ಎನ್ನಬಹುದು. ಲೀಗ್​ನ 16 ಆವೃತ್ತಿಗಳಲ್ಲಿ ಆಡಿರುವ ಕೊಹ್ಲಿ ಈ ಬಾರಿಯೂ ಅದೇ ಫ್ರಾಂಚೈಸಿಯನ್ನು ಪ್ರತಿನಿಧಿಸುತ್ತಿದ್ದಾರೆ. 237 ಪಂದ್ಯಗಳನ್ನಾಡಿರುವ ಕೊಹ್ಲಿ 6, 624 ರನ್ ಬಾರಿಸಿದ್ದಾರೆ. ಇದರಲ್ಲಿ ಐದು ಶತಕಗಳು ಹಾಗೂ 44 ಫೋರ್​ಗಳು ಸೇರಿಕೊಂಡಿವೆ.

ಎಬಿ ಡಿವಿಲಿಯರ್ಸ್: ಸಾರ್ವಕಾಲಿಕ ಅತ್ಯುತ್ತಮ ಟಿ 20 ಬ್ಯಾಟರ್​​ ಎಂದು ಪರಿಗಣಿಸಲ್ಪಟ್ಟ ಎಬಿ ಡಿವಿಲಿಯರ್ಸ್ 2011 ರಿಂದ 2021 ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 157 ಪಂದ್ಯಗಳನ್ನು ಆಡಿದ್ದಾರೆ. 360 ಡಿಗ್ರಿ ಬ್ಯಾಟ್ಸ್ಮನ್ ತಮ್ಮ ಐಪಿಎಲ್ ವೃತ್ತಿಜೀವನವನ್ನು ಈ ಫ್ರಾಂಚೈಸಿಯಲ್ಲಿಯೇ ಕೊನೆಗೊಳಿಸಿದ್ದಾರೆ. 158.33 ಸ್ಟ್ರೈಕ್ ರೇಟ್​ನಲ್ಲಿ ಅವರು 4522 ರನ್ ಗಳಿಸಿದ್ದಾರೆ.

ಕ್ರಿಸ್ ಗೇಲ್: ಯೂನಿವರ್ಸಲ್ ಬಾಸ್ ಟಿ 20 ಕ್ರಿಕೆಟ್​​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ಗೇಲ್ 2011 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡರು ಮತ್ತು ಮುಂದಿನ 7 ಋತುಗಳಲ್ಲಿ ಎಲ್ಲ ತಂಡಗಳ ಬೌಲರ್​ಗಳ ಮೇಲೆ ಪ್ರಾಬಲ್ಯ ಸಾಧಿಸಿದರು. 43.29ರ ಸರಾಸರಿಯಲ್ಲಿ 154.40ರ ಸ್ಟ್ರೈಕ್ ರೇಟ್​ನಲ್ಲಿ ಅವರು 3420 ರನ್ ಗಳಿಸಿದ್ದಾರೆ. ಅವರು ಕೊನೆಯಲ್ಲಿ ಪಂಜಾಬ್​ ಕಿಂಗ್ಸ್​ ಸೇರಿಕೊಂಡರು. ಅಲ್ಲಿಂದ ಅವರು ನಿವೃತ್ತಿ ಪಡೆದುಕೊಂಡರು.

ಯಜುವೇಂದ್ರ ಚಹಲ್: 2011 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯುಜ್ವೇಂದ್ರ ಚಹಲ್ ಅವರನ್ನು ಖರೀದಿಸಿತು. ಆ ವೇಳೆ ಅವರು ಕೇವಲ 10 ಲಕ್ಷ ರೂಪಾಯಿ ಪಡೆದುಕೊಂಡಿದ್ದರು. ಲೆಗ್ ಸ್ಪಿನ್ನರ್​ ಫ್ರಾಂಚೈಸಿಯ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 100ಕ್ಕೂ ಹೆಚ್ಚು ಪಂದ್ಯಗಳನ್ನಾಡಿ 100ಕ್ಕೂ ಹೆಚ್ಚು ವಿಕೆಟ್ ಪಡೆದ ಆರ್​ಸಿಬಿ ಬೌಲರ್ ಎಂಬ ಹೆಗ್ಗಳಿಕೆಗೆ ಚಹಲ್ ಪಾತ್ರರಾಗಿದ್ದಾರೆ. ಆದರೆ, ಅವರು ಬಳಿಕ ಕೈಬಿಡಲಾಯಿತು. ಅವರು ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡು ಮಿಂಚುತ್ತಿದ್ದಾರೆ. ಅವರನ್ನು ತಂಡ ಕೈಬಿಟ್ಟಿರುವುದು ದೊಡ್ಡ ಮಟ್ಟದ ಅಚ್ಚರಿಕೆ ಕಾರಣವಾಗಿತ್ತು. ಹಿರಿಯ ಆಟಗಾರನಾದ ವಿರಾಟ್​ ಕೊಹ್ಲಿ ಅಸಮಾಧಾನಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ : IPL 2024 : ರೋಹಿತ್​, ಪಾಂಡ್ಯ ಅಲ್ಲ; ಮುಂಬಯಿ ಇಂಡಿಯನ್ಸ್​ ತಂಡಕ್ಕೆ ಈ ಬಾರಿ ಹೊಸ ನಾಯಕ?

ಗ್ಲೆನ್ ಮ್ಯಾಕ್ಸ್ವೆಲ್: ಆಕ್ರಮಣಕಾರಿ ಮಧ್ಯಮ ಕ್ರಮಾಂಕದ ಬ್ಯಾಟರ್​​ 2021 ರಲ್ಲಿ ಫ್ರಾಂಚೈಸಿಗೆ ಸೇರಿದರು. ಕೇವಲ 42 ಪಂದ್ಯಗಳನ್ನು ಆಡಿರುವ ಮ್ಯಾಕ್ಸ್​ವೆಲ್ ಈಗಾಗಲೇ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಅವರ 1214 ರನ್​ಗಳ ದಾಖಲೆಯ 161.43 ಸ್ಟ್ರೈಕ್ ರೇಟ್​ನ ಬ್ಯಾಟಿಂಗ್​ನಲ್ಲಿ ಬಂದಿವೆ. ಇದು ಆರ್​ಸಿಬಿ ತಂಡದ ಇತಿಹಾಸಲ್ಲಿಯೇ ಅತಿ ಹೆಚ್ಚು.

Continue Reading

ಕ್ರಿಕೆಟ್

Rahul Dravid : ರಿಚ್ಮಂಡ್​ ಸರ್ಕಲ್ ಫ್ಲೈಓವರ್​ ಕೆಳಗಡೆ ಕ್ರಿಕೆಟ್​ ಅಡಿದ ದ್ರಾವಿಡ್​, ಕುಂಬ್ಳೆ, ಶ್ರೀನಾಥ್​…

Rahul Dravid: ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಸೇರಿದಂತೆ ಹಲವರ ಚಿತ್ರಗಳನ್ನು ಫೈಓವರ್​ಗಳ ಪಿಲ್ಲರ್​ಗಳಲ್ಲಿ ಬಿಡಿಸಿ ಅಭಿಮಾನಿಗಳಿಗೆ ಖುಷಿ ಕೊಡಲಾಗಿದೆ.

VISTARANEWS.COM


on

Rahul Dravid
Koo

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ರಿಕೆಟ್​ ಸಂಸ್ಕೃತಿ ವ್ಯಾಪಕವಾಗಿದೆ. ಈ ನಗರದಲ್ಲಿ ಕ್ರಿಕೆಟ್ ಆಟವನ್ನು ಆಟವನ್ನು ಹಾಗೂ ಆಟಗಾರರನ್ನು ಆರಾಧಿಸುತ್ತಾರೆ. ಹೀಗಾಗಿ ಬೆಂಗಳೂರು ಕೇಂದ್ರಿದವಾಗಿ ಕರ್ನಾಟಕದಿಂದ ಹಲವಾರು ಅಂತಾರಾಷ್ಟ್ರಿಯ ಕ್ರಿಕೆಟಿಗರು ಮೂಡಿ ಬಂದಿದ್ದಾರೆ. ಅವರೆಲ್ಲರೂ ಕ್ರಿಕೆಟ್​ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದವರು. ಗುಂಡಪ್ಪ ವಿಶ್ವನಾಥ್​, ಜಾವಗಲ್​ ಶ್ರೀನಾಥ್​, ವೆಂಕಟೇಶ್ ಪ್ರಸಾದ್, ರಾಹುಲ್ ದ್ರಾವಿಡ್, ಅನಿಲ್​ ಕುಂಬ್ಳೆ ಈ ಪಟ್ಟಿಯ ಅಗ್ರಗಣ್ಯರು. ಇವರೆಲ್ಲರೂ ಸೇರಿಕೊಂಡು ಈಗ ಬೆಂಗಳೂರಿನ ಹೃದಯ ಭಾಗದಲ್ಲಿರುವ ರಿಚ್ಮಂಡ್​ ಸರ್ಕಲ್​ ಬಳಿ ಇರುವ ಫ್ಳೈಓವರ್​ ಕೆಳಗೆ ಆಡಿದರೆ ಹೇಗಿರುತ್ತದೆ. ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಅದು ಖಂಡಿತವಾಗಿಯೂ ಹಬ್ಬ. ಹಾಗಾದರೆ ಖಂಡಿತ ಬಂದು ನೋಡಿ. ಅವರೆಲ್ಲರೂ ಇಲ್ಲಿ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ.

ಅಂದ ಹಾಗೆ ಅವರು ನಿಜವಾಗಿಯೂ ಕ್ರಿಕೆಟ್​​ ಆಡುತ್ತಿಲ್ಲ. ಅವರ ಚಿತ್ರವನ್ನು ಅಲ್ಲಿನ ಪಿಲ್ಲರ್​ಗಳಲ್ಲಿ ಬಿಡಿಸಲಾಗಿದೆ. ಹಾಗೆಂದು ನಿರಾಸೆಯಾಗುವುದು ಬೇಡ. ಆ ಚಿತ್ರಗಳನ್ನು ನೋಡುವುದು ಕೂಡ ಖುಷಿಯ ವಿಚಾರವೇ ಸರಿ. ಫ್ಲೈಓವರ್ ಗಳ ಕೆಳಗಿರುವ ಜಾಗವನ್ನು ಹೆಚ್ಚಿಸುವ ಉದ್ದೇಶದಿಂದ ‘ಬ್ರಾಂಡ್ ಬೆಂಗಳೂರು’ ಉಪಕ್ರಮದ ಭಾಗವಾಗಿ ಬೆಂಗಳೂರಿನ ಫ್ಲೈಓವರ್ ನ ಕಂಬಗಳ ಮೇಲೆ ರಾಜ್ಯದ ಕ್ರಿಕೆಟ್ ಐಕಾನ್ ಗಳನ್ನು ಭಿತ್ತಿಚಿತ್ರಗಳನ್ನು ಬರೆಯಲಾಗಿದೆ. ರೋಜರ್ ಬಿನ್ನಿ, ಸೈಯದ್ ಕಿರ್ಮಾನಿ, ವಿ ಸುಬ್ರಮಣ್ಯ, ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಮತ್ತು ಜಾವಗಲ್ ಶ್ರೀನಾಥ್ ಅವರಂತಹ ಪೂಜ್ಯ ಆಟಗಾರರಿಗೆ ಈ ಭಿತ್ತಿಚಿತ್ರಗಳ ಮೂಲಕ ಗೌರವ ಸಲ್ಲಿಸಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಹೊರತುಪಡಿಸಿ ಸಾರ್ವಜನಿಕ ಸ್ಥಳದಲ್ಲಿ ಇಂತಹ ಉಪಕ್ರಮ ಕೈಗೊಂಡಿರುವುದು ಇದೇ ಮೊದಲು. ಹೀಗಾಗಿ ಬೆಂಗಳೂರಿನ ಕ್ರಿಕೆಟ್​ ಪ್ರೇಮಿಗಳಿಗೆ ಇದು ಖುಷಿಯ ವಿಚಾರವಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಯೋಗದೊಂದಿಗೆ ಲಾಭರಹಿತ ಸಂಸ್ಥೆಯಾದ ಇಂಡಿಯಾ ರೈಸಿಂಗ್ ಟ್ರಸ್ಟ್ (ಐಆರ್​ಟಿ) ಈ ಭಿತ್ತಿಚಿತ್ರಗಳನ್ನು ಬಿಡಿಸಿದೆ. ಕರ್ನಾಟಕದ ಪ್ರಸಿದ್ಧ ಕ್ರಿಕೆಟಿಗರ ಅಸಾಧಾರಣ ಕೌಶಲ್ಯ ಮತ್ತು ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ಈ ಚಿತ್ರಗಳನ್ನು ಮಾಡಲಾಗಿದೆ.

ಜಿ.ಆರ್.ವಿಶ್ವನಾಥ್ ಅವರ ಸೊಗಸಾದ ಸ್ಕ್ವೇರ್​ ಜಟ್, ಬಿ.ಎಸ್.ಚಂದ್ರಶೇಖರ್ ಅವರ ಅಸಾಮಾನ್ಯ ಲೆಗ್ ಸ್ಪಿನ್, ಶಾಂತಾ ರಂಗಸ್ವಾಮಿ ಅವರ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿ ಮತ್ತು ಇಎಎಸ್ ಪ್ರಸನ್ನ ಅವರ ಅಪರೂಪದ ಸ್ಪಿನ್ ಬೌಲಿಂಗ್​ ಕೌಶಲವನ್ನು ಚಿತ್ರಗಳ ಮೂಲಕ ವಿವರಿಸಲಾಗಿದೆ.

ಇದನ್ನೂ ಓದಿ : Chetan Sakariya : ಹರಾಜಿಗೆ ಮೊದಲೇ ಎಂಗೇಜ್ಮೆಂಟ್​ ಮಾಡಿಕೊಂಡ ಐಪಿಎಲ್​ನ ಸ್ಟಾರ್​ ಬೌಲರ್​

ಡಬಲ್ ರೋಡ್ (ಕೆಎಚ್ ರಸ್ತೆ) ಫ್ಲೈಓವರ್ ಮೂಲಕ ಹಾದುಹೋಗುವಾಗ, ಜನರು ಕರ್ನಾಟಕದ ಈ ಪ್ರಸಿದ್ಧ ಕ್ರಿಕೆಟಿಗರ ಪ್ರಯಾಣವನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಹೆಚ್ಚುವರಿಯಾಗಿ. ಈ ಹಿಂದೆ ಡಬಲ್ ರೋಡ್ ಜಂಕ್ಷನ್ ಎಂದು ಕರೆಯಲ್ಪಡುತ್ತಿದ್ದ ರಿಚ್ಮಂಡ್ ಸರ್ಕಲ್ ಫ್ಲೈಓವರ್ ಕೆಳಗಿರುವ ಜಾಗವನ್ನು ‘ಕ್ರೀಡಾ ಜಂಕ್ಷನ್’ ಎಂದು ಮರುನಾಮಕರಣ ಮಾಡಲಾಗಿದೆ.

ಈ ಸ್ಥಳ ಏಕೆ?

ಚಿನ್ನಸ್ವಾಮಿ ಕ್ರೀಡಾಂಗಣ (ಕೆಎಸ್ ಸಿಎ), ಕಂಠೀರವ ಕ್ರೀಡಾಂಗಣ, ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ (ಕೆಎಸ್ ಎಚ್ ಎ), ಬೆಂಗಳೂರು ಫುಟ್ಬಾಲ್ ಕ್ರೀಡಾಂಗಣ ಮತ್ತು ಕಬ್ಬನ್ ಪಾರ್ಕ್ ನಲ್ಲಿರುವ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಷನ್ (ಕೆಎಸ್ ಎಲ್ ಟಿಎ) ನಗರದ ಐದು ಪ್ರಮುಖ ಕ್ರೀಡಾ ಸ್ಥಳಗಳು ಫ್ಲೈಓವರ್ ನ ಒಂದು ಮೈಲಿ ವ್ಯಾಪ್ತಿಯಲ್ಲಿವೆ. ಕ್ರೀಡಾ ಜಂಕ್ಷನ್ ಎಂಬ ಹೆಸರು ಅದಕ್ಕೆ ಸೂಕ್ತವಾಗಿದೆ. ಇಲ್ಲಿಂದ ಹಾದು ಹೋಗುವ ಎಲ್ಲ ರಸ್ತೆಗಳು ನಾನಾ ಕ್ರೀಡಾಂಗಣಗಳಿಗೆ ಹೋಗುತ್ತವೆ. ಬಲವಾದ ಕ್ರೀಡಾ ಸಂಸ್ಕೃತಿ ಹೊಂದಿರುವ ಹಲವಾರು ಶಾಲೆಗಳು (ಪ್ರತಿಷ್ಠಿತ ಅಂತರ-ಶಾಲಾ ಪಂದ್ಯಾವಳಿಗಳನ್ನು ಆಯೋಜಿಸುತ್ತವೆ), ಮತ್ತು ರಾಜ್ಯದ ಅನೇಕ ಐಕಾನ್​​ ಓದಿರುವ ಶಾಲೆಗಳು ಜಂಕ್ಷನ್​ನ ಹತ್ತಿರದಲ್ಲಿವೆ. ಸೇಂಟ್ ಜೋಸೆಫ್ಸ್ ಬಾಯ್ಸ್ & ಇಂಡಿಯನ್ ಹೈಸ್ಕೂಲ್ಸ್, ಬಿಷಪ್ ಕಾಟನ್, ಬಾಯ್ಸ್ & ಗರ್ಲ್ಸ್, ಬಾಲ್ಡ್ವಿನ್ ಹುಡುಗರು ಮತ್ತು ಹುಡುಗಿಯರು, ಕ್ಯಾಥೆಡ್ರಲ್, ಸೇಕ್ರೆಡ್ ಹಾರ್ಟ್ ಗರ್ಲ್ಸ್​​ ಈ ಪಟ್ಟಿಯಲ್ಲಿದೆ.

Continue Reading
Advertisement
cleaning
ದೇಶ29 mins ago

ಒಳ ಚರಂಡಿ ಸ್ವಚ್ಛಗೊಳಿಸುವಾಗ 5 ವರ್ಷಗಳಲ್ಲಿ 443 ಕಾರ್ಮಿಕರ ಸಾವು!

Ajitabh Bachchan, Younger Brother Of Amitabh At The Archies Film Screening
ಬಾಲಿವುಡ್31 mins ago

The Archies Film: ನಿಮಗೆ ಅಮಿತಾಭ್‌ ತಮ್ಮ ಅಜಿತಾಭ್‌ ಗೊತ್ತಾ? ಅವರೇ ಇವರು!

MLA Basanagouda Patil Yatnal and CM Siddaramaiah
ಕರ್ನಾಟಕ33 mins ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ46 mins ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Khalistani Terrorist Pannun
ದೇಶ1 hour ago

ಸಂಸತ್ತಿನ ಮೇಲೆ ಡಿ.13ರಂದು ಉಗ್ರ ದಾಳಿ: ಬೆದರಿಕೆ ವಿಡಿಯೋ ಹರಿಬಿಟ್ಟ ಖಲಿಸ್ತಾನಿ ಉಗ್ರ ಪನ್ನುನ್‌

lidkar ambassador dolly dhananjay Officially
South Cinema1 hour ago

Dolly Dhananjay: ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

Government Job Vistara Exclusive and CM Siddaramaiah
ಉದ್ಯೋಗ1 hour ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

kim
ವಿದೇಶ2 hours ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ2 hours ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್2 hours ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

MLA Basanagouda Patil Yatnal and CM Siddaramaiah
ಕರ್ನಾಟಕ33 mins ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ46 mins ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 hour ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ2 hours ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ9 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ18 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ18 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ18 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

ಟ್ರೆಂಡಿಂಗ್‌